ವಿಸ್ತಾರ ಸಂಪಾದಕೀಯ: ಭ್ರಷ್ಟಾಚಾರದ ಕ್ಯಾನ್ಸರ್‌ಗೆ ದುರಾಸೆಯೇ ಮೂಲ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಭ್ರಷ್ಟಾಚಾರದ ಕ್ಯಾನ್ಸರ್‌ಗೆ ದುರಾಸೆಯೇ ಮೂಲ

ಭ್ರಷ್ಟಾಚಾರವನ್ನು ನಿಯಂತ್ರಿಸಬೇಕಾದ ಶಾಸಕಾಂಗ ಮತ್ತು ಕಾರ್ಯಾಂಗಗಳೆರಡೂ ಭ್ರಷ್ಟಾಚಾರದಲ್ಲೇ ಮುಳುಗಿವೆ. ಹಾಗಾಗಿ, ನ್ಯಾಯಾಂಗವೊಂದೇ ಈಗ ಆಶಾ ಕಿರಣವಾಗಿದೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

”ಅಧಿಕ ಆಸ್ತಿ ಗಳಿಸುವ ದುರಾಸೆಯೇ ಭ್ರಷ್ಟಾಚಾರಕ್ಕೆ (corruption) ಕಾರಣ. ಕ್ಯಾನ್ಸರ್ ದೇಹದ ಎಲ್ಲ ಭಾಗಗಳಿಗೆ ತೀವ್ರವಾಗಿ ವ್ಯಾಪಿಸುವಂತೆ ಭ್ರಷ್ಟಾಚಾರ ಇಂದು ಸಮಾಜದ ಎಲ್ಲ ಸ್ತರಗಳಲ್ಲೂ ಹರಡಿಕೊಂಡಿದೆ. ಹಾಗಾಗಿ, ಕೋರ್ಟುಗಳ ಭ್ರಷ್ಟಾಚಾರ ವಿರುದ್ಧ ಶೂನ್ಯ ಸಹಿಷ್ಣುತೆಯನ್ನು ಪ್ರದರ್ಶಿಸಬೇಕು ಮತ್ತು ಭ್ರಷ್ಟಾಚಾರಿಗಳನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು,” ಎಂದು ದೇಶದ ಅತ್ಯುನ್ನತ ನ್ಯಾಯಾಲಯವಾಗಿರುವ ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. ಭ್ರಷ್ಟಾಚಾರದ ವಿರುದ್ಧ ನ್ಯಾಯಾಲಯವು ಉಗ್ರವಾಗಿ ಪ್ರತಿಕ್ರಿಯಿಸುವ ಹೊತ್ತಿನಲ್ಲೇ ಕರ್ನಾಟಕದಲ್ಲಿ ಬೃಹತ್ ಭ್ರಷ್ಟಾಚಾರ ಪ್ರಕರಣವನ್ನು ಲೋಕಾಯಕ್ತವು ಭೇದಿಸಿರುವುದು ಭ್ರಷ್ಟಾಚಾರ ಎಂಬ ಕಾನ್ಸರ್‌ಗೆ ಸಾಕ್ಷ್ಯವನ್ನು ಒದಗಿಸಿದೆ!

ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಛತ್ತೀಸ್‌ಗಢದ ಮಾಜಿ ಪ್ರಧಾನ ಕಾರ್ಯದರ್ಶಿ ಅಮನ್ ಸಿಂಗ್ ಮತ್ತು ಅವರ ಪತ್ನಿ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಛತ್ತೀಸ್‌ಗಢ ಹೈಕೋರ್ಟ್ ರದ್ದುಗೊಳಿಸಿತ್ತು. ಈ ಕುರಿತು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಎಸ್ ರವೀಂದ್ರ ಭಟ್ ಮತ್ತು ದೀಪಂಕರ್ ದತ್ತಾ ಅವರಿದ್ದ ಪೀಠವು, ಹೈಕೋರ್ಟ್‌ನ ಆದೇಶವನ್ನು ರದ್ದುಪಡಿಸಿ, ಸಮಾನ ಆಸ್ತಿ ಹಂಚಿಕೆಯ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸುವ ಸಂವಿಧಾನದ ಆಶಯಕ್ಕೆ ಭ್ರಷ್ಟಾಚಾರವು ಅಡ್ಡಿಯಾಗಿದೆ ಎಂದು ಅಭಿಪ್ರಾಯಟ್ಟಿದೆ.

ಭ್ರಷ್ಟಾಚಾರದ ಅಪಾಯ ಹಾಗೂ ಅದನ್ನು ನಿರ್ಮೂಲನೆ ಮಾಡುವ ಸಂಬಂಧ ಈ ಹಿಂದೆಯೂ ಸುಪ್ರೀಂ ಕೋರ್ಟ್‌, ಹಲವು ಹೈಕೋರ್ಟ್‌ಗಳು ಕಠಿಣ ಅಭಿಪ್ರಾಯಗಳನ್ನು ವ್ಯಕ್ತಪಡಿಸಿವೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸೂಕ್ತ ಸಲಹೆಗಳನ್ನು ನೀಡಿವೆ. ಆದರೂ, ದೇಶದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಬಿದ್ದಿಲ್ಲ. ಸಂವಿಧಾನ ಬದ್ಧ ಸೃಷ್ಟಿಯಾಗಿರುವ ಲೋಕಾಯಕ್ತ, ಸಿವಿಸಿ, ಎಸಿಬಿ ಸೇರಿ ಹಲವು ಸಂಸ್ಥೆಗಳು ಈ ನಿಟ್ಟಿನಲ್ಲಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸುತ್ತಿವೆ. ಆದರೂ ಭ್ರಷ್ಟಾಚಾರಕ್ಕೆ ಮುಕ್ತಿ ಹಾಡಲು ಸಾಧ್ಯವಾಗಿಲ್ಲ. ಇದು ನಮ್ಮ ವ್ಯವಸ್ಥೆಯ ವೈಫಲ್ಯ. ಜತೆಗೆ, ಭ್ರಷ್ಟಾಚಾರವು ಸಾಂಸ್ಥಿಕ ರೂಪವನ್ನು ಪಡೆದುಕೊಂಡಿರುವುದೂ ಈ ವೈಫಲ್ಯಕ್ಕೆ ಕಾರಣವಾಗಿರಬಹುದು.

ಭ್ರಷ್ಟಾಚಾರ ಸಹಿಸದ ಮನಸ್ಥಿತಿಯನ್ನು ಜನರಲ್ಲಿ ರೂಪಿಸುವ ಜವಾಬ್ದಾರಿಯನ್ನು ಕೋರ್ಟುಗಳು ಹೊಂದಬೇಕು ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್, ಭ್ರಷ್ಟಾಚಾರ ವಿರುದ್ಧದ ಹೋರಾಟದಲ್ಲಿ ನ್ಯಾಯಾಲಯಗಳನ್ನು ಸಕ್ರಿಯ ಪಾಲುದಾರರನ್ನಾಗಿ ಮಾಡುವ ಆಶಯವನ್ನು ವ್ಯಕ್ತಪಡಿಸಿದ್ದು ಸೂಕ್ತವಾಗಿದೆ. ನ್ಯಾಯಾಲಯ, ಲೋಕಾಯುಕ್ತ, ಲೋಕಪಾಲ್‌ನಂಥ ಸಂಸ್ಥೆಗಳು ಬಲಗೊಂಡರೆ ಮತ್ತು ಇವು ತಮ್ಮ ಸಂಪೂರ್ಣ ಶಕ್ತಿ ಬಳಸಿದರೆ ಮಾತ್ರ ಭ್ರಷ್ಟಾಚಾರಕ್ಕೆ ಅಂಕುಶ ಹಾಕಲು ಸಾಧ್ಯ.

ಎರಡು ದಿನಗಳ ಹಿಂದೆಯಷ್ಟೇ ಶಾಸಕ ಮಾಡಾಳು ವಿರೂಪಾಕ್ಷ ಮತ್ತು ಅವರ ಮಗನ ಲಂಚಾವತಾರವನ್ನು ಲೋಕಾಯುಕ್ತ ಬಯಲಿಗೆಳೆದಿದೆ. ಈ ಹಿಂದೆಯೂ ಇಂಥ ಅನೇಕ ‘ಮಹತ್ವದ ಪ್ರಕರಣ’ಗಳನ್ನು ಲೋಕಾಯುಕ್ತ ಬಯಲು ಮಾಡಿತ್ತು. ಆದರೆ, ಆ ಪ್ರಕರಣಗಳಲ್ಲಿ ಎಷ್ಟು ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದು ನೋಡಿದರೆ, ನಿರಾಸೆ ಎದ್ದು ಕಾಣುತ್ತದೆ. ದಾಳಿಗೊಳಗಾದ ಅಧಿಕಾರಿಗಳು ಒಂದಿಷ್ಟು ದಿನ ಬಿಟ್ಟು ಮತ್ತೆ ಅದೇ ಸ್ಥಾನಗಳಿಗೆ ಬಂದು ಕೂರುತ್ತಾರೆ. ಇಂಥ ಪ್ರಕರಣಗಳಲ್ಲಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾದರೆ ಮಾತ್ರ ಲಂಚದ ಹಾದಿ ತುಳಿಯಲು ಹಿಂಜರಿಯುತ್ತಾರೆ. ಇಲ್ಲದೇ ಹೋದರೆ ಹತ್ತರಲ್ಲಿ ಹನ್ನೊಂದನೇ ಪ್ರಕರಣ ಆಗುತ್ತದೆ ಅಷ್ಟೆ. ಈ ಕಾರಣಕ್ಕಾಗಿಯೇ ಭ್ರಷ್ಟಾಚಾರವು ಯಾರ ಅಂಕೆಗೂ ಸಿಗದೇ ದಾಂಗುಡಿ ಇಡುತ್ತಿದೆ.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಚುನಾವಣೆ ಆಯುಕ್ತರ ನೇಮಕ: ಸುಪ್ರೀಂ ಕೋರ್ಟ್ ಆದೇಶ ಸ್ವಾಗತಾರ್ಹ

ಭ್ರಷ್ಟಾಚಾರ ಸಮಸ್ಯೆಯನ್ನು ಹೋಗಲಾಡಿಸಬೇಕಾದ ಶಾಸಕಾಂಗ ಮತ್ತು ಕಾರ್ಯಾಂಗಗಳೆರಡರಲ್ಲೂ ಭ್ರಷ್ಟಾಚಾರ ಹಾಸುಹೊಕ್ಕಾಗಿದೆ. ಈ ವಿಷಯದಲ್ಲಿ ಅವುಗಳಿಂದ ಹೆಚ್ಚಿನದ್ದನ್ನು ಏನೂ ನಿರೀಕ್ಷಿಸಲು ಸಾಧ್ಯವಿಲ್ಲ. ಲಂಚವೆಂಬ ಈ ಕ್ಯಾನ್ಸರ್‌ಗೆ ಕಿಮೊಥೆರಪಿ ಕೊಡುವ ಕಾರ್ಯ ಈಗ ನ್ಯಾಯಾಂಗದಿಂದ ಮಾತ್ರ ಸಾಧ್ಯ. ತಡವಾದರೂ ಕೆಲವು ಭ್ರಷ್ಟಾಚಾರ ಪ್ರಕರಣಗಳಲ್ಲಿ ನ್ಯಾಯಾಲಯಗಳು ತಮ್ಮ ಸಾಂವಿಧಾನಿಕ ಜವಾಬ್ದಾರಿಯನ್ನು ನಿರ್ವಹಿಸಿ, ಆರೋಪಿಗಳನ್ನು ಶಿಕ್ಷೆಗೆ ಗುರಿಪಡಿಸುವಲ್ಲಿ ಯಶಸ್ವಿಯಾಗಿವೆ. ಆ ಮೂಲಕ ಜನರಲ್ಲಿ ವಿಶ್ವಾಸ ಮೂಡಿಸಿವೆ. ಹಾಗಾಗಿ, ಈಗ ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಆಶಯ ಸಾಕಾರಗೊಳ್ಳಲಿ. ಮತ್ತಷ್ಟು ಲಂಚಕೋರರು ಬಲೆಗೆ ಬಿದ್ದು, ಕಠಿಣ ಶಿಕ್ಷೆ ಅನುಭವಿಸುವಂತಾಗಲಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ನೀರಿನ ಸಮಸ್ಯೆಗೆ ಜನರೇ ಉತ್ತರ ಕಂಡುಕೊಳ್ಳಬೇಕು

ಜನ ಸ್ವಯಂಪ್ರೇರಿತರಾಗಿ ನೀರನ್ನು ಉಳಿಸಲು, ಹಿತಮಿತವಾಗಿ ಬಳಸಲು ಮುಂದಾಗುವುದೇ ನೀರಿನ ಕೊರತೆಗೆ ಸರಿಯಾದ ಪರಿಹಾರ. ವಾಹನ ತೊಳೆಯಲು ಕುಡಿಯುವ ನೀರನ್ನು ಬಳಸದಿರುವುದು, ಪಾತ್ರೆ ತೊಳೆದ ನೀರನ್ನು ಗಾರ್ಡನ್‌ಗೆ ಬಳಸುವುದು, ಮನೆ ಮತ್ತು ಕಚೇರಿಯಲ್ಲಿ ನೀರನ್ನು ದಕ್ಷವಾಗಿ ಬಳಸುವ ಸಲಕರಣೆಗಳ ಬಳಕೆ, ತ್ಯಾಜ್ಯ ನೀರಿನ ಮರುಬಳಕೆ ಹೀಗೆ ಹಲವು ಕ್ರಮಗಳ ಮೂಲಕ ಜನರೇ ಅಮೂಲ್ಯ ನೀರನ್ನು ಉಳಿಸಬೇಕಿದೆ.

VISTARANEWS.COM


on

Water Crisis
Koo

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ (Water Crisis) ಜೋರಾಗುತ್ತಿದೆ. ಇದೀಗ ಬೇಸಿಗೆಯ ಮೊದಮೊದಲ ತಿಂಗಳು ಎನ್ನಬಹುದು. ಬೇಸಿಗೆಯಲ್ಲಿ ಇನ್ನೂ ಎರಡು ತಿಂಗಳುಗಳು ಬಾಕಿ ಇವೆ, ಈಗಲೇ ಜನತೆ ಕುಡಿಯುವ ನೀರಿನ ಕೊರತೆಯಿಂದ ತತ್ತರಿಸುತ್ತಿದ್ದಾರೆ. ನಗರದಲ್ಲಿ ಕೆಲವೆಡೆ 6000 ಲೀ. ಟ್ಯಾಂಕರ್‌ನೀರನ್ನು 2500 ಕೊಟ್ಟು ಖರೀದಿಸುವ ಅನಿವಾರ್ಯತೆ ಸೃಷ್ಟಿಯಾಗಿದೆ. ಬೆಂಗಳೂರಿಗೆ ಕಾವೇರಿ ನೀರು ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ ಎಂದು ಜಲಮಂಡಳಿ ಹೇಳುತ್ತಿದ್ದರೂ, ನೀರಿನ ಪೂರೈಕೆ ಸಾಕಷ್ಟು ಕಡಿಮೆಯಾಗಿದೆ ಎಂದು ನಗರವಾಸಿಗಳು ಆರೋಪಿಸುತ್ತಿದ್ದಾರೆ. ಇದರಿಂದಲೇ ಖಾಸಗಿ ಟ್ಯಾಂಕರ್‌ಗಳ ಮಾಫಿಯಾ ಶುರುವಾಗಿದೆ. ಬೆಂಗಳೂರಿನ ಆರ್‌.ಆರ್‌.ನಗರದಲ್ಲಿ 6000 ಲೀ. ಟ್ಯಾಂಕರ್‌ 2500 ರೂ., ಕೆ.ಆರ್‌.ಪುರದಲ್ಲಿ 1500 ರೂ., ನಾರಾಯಣಪುರದಲ್ಲಿ 1500 ರೂ., ಹಾಗೂ ವರ್ತೂರಿನಲ್ಲಿ 4000 ಲೀ.ಟ್ಯಾಂಕರ್ 800 ರೂ. ಇದೆ. ಟ್ಯಾಂಕರ್‌ಗಳ ನೋಂದಣಿಯನ್ನು ಜಲಮಂಡಳಿ ಕಡ್ಡಾಯ ಮಾಡಿದ್ದರೂ ಅರ್ಧದಷ್ಟೂ ನೋಂದಣಿಯಾಗಿಲ್ಲ. ಬೆಂಗಳೂರಿನ ಒಳಭಾಗಕ್ಕೇ ಹೆಚ್ಚಿನ ಕಾವೇರಿ ನೀರು ಬೇಕಾಗುವುದರಿಂದ ಹೊರಭಾಗಗಳಿಗೆ ಕಾವೇರಿ ನೀರು ಪೂರೈಸಲು ಸಾಧ್ಯವಿಲ್ಲ ಎಂದು ಜಲಮಂಡಳಿ ಹೇಳಿದೆ. ಕೆಆರ್‌ಎಸ್‍ನಲ್ಲಿ ಸಂಗ್ರಹವಾಗುವ ನೀರಿನಲ್ಲಿ ಬೆಂಗಳೂರು ನಗರ ಒಂದಕ್ಕೆ ಪ್ರತಿ ತಿಂಗಳು 1.6 ಟಿಎಂಸಿ ನೀರು ಬೇಕು. ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರಗಳಿಗೆ ಕಾವೇರಿ ನೀರೇ ಬೇಕು.

ನೀರಿನ ಪೋಲು ತಡೆಗಟ್ಟಲು ಜಲಮಂಡಳಿ ಸಾಕಷ್ಟು ಕಠಿಣ ಕ್ರಮಗಳನ್ನು ಕೈಗೊಂಡಿದೆ. ಸ್ವಿಮ್ಮಿಂಗ್‌ ಪೂಲ್‌ಗಳಿಗೆ ಕುಡಿಯುವ ನೀರಿನ ಬಳಕೆಗೆ ಕಡಿವಾಣ, ಬೇಕಾಬಿಟ್ಟಿ ಹೋಳಿ ಆಚರಣೆಗೆ ನಿರ್ಬಂಧ, ಐಷಾರಾಮಿ ರೆಸಾರ್ಟ್‌ಗಳಲ್ಲಿ ರೈನ್‌ ಡ್ಯಾನ್ಸ್‌ಗಳಿಗೆ ನಿಷೇಧ, ಸಾರ್ವಜನಿಕ ಪ್ರದೇಶಗಳಲ್ಲಿ ಸ್ವಚ್ಛತೆಗಾಗಿ ಬಳಸುವ ನಲ್ಲಿಗಳಲ್ಲಿ ಕಡ್ಡಾಯವಾಗಿ ಫ್ಲೋ ರಿಸ್ಟ್ರಿಕ್ಟರ್‌ ಅಳವಡಿಕೆ, ಬೃಹತ್‌ ಸಂಸ್ಥೆಗಳಿಗೆ ನೀರಿನ ಪೂರೈಕೆಯಲ್ಲಿ ಶೇ.20 ಕಡಿತ ಮುಂತಾದ ಕ್ರಮಗಳನ್ನು ಕೈಗೊಂಡಿದೆ. ವಾಹನಗಳ ಸ್ವಚ್ಛತೆಗೆ, ಕೈದೋಟಕ್ಕೆ, ಕಟ್ಟಡ ನಿರ್ಮಾಣಕ್ಕೆ, ಮನೋರಂಜನೆಗಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ, ಸಿನಿಮಾ ಮಂದಿರ ಮತ್ತು ಮಾಲುಗಳಲ್ಲಿನ ಕುಡಿಯುವ ನೀರಿನ ಹೊರತು ಇನ್ನಿತರೆ ಬಳಕೆಗೆ, ರಸ್ತೆ ನಿರ್ಮಾಣ ಮತ್ತು ಸ್ವಚ್ಚತೆಗೆ ಕುಡಿಯುವ ನೀರು ಬಳಸಿದರೆ ಭಾರಿ ದಂಡ ವಿಧಿಸಲಾಗುತ್ತಿದೆ. ಈಗಾಗಲೇ ಹೀಗೆ 1 ಲಕ್ಷ ರೂಪಾಯಿಗೂ ಅಧಿಕ ದಂಡವನ್ನು ಜಲಮಂಡಳಿ ವಸೂಲಿ ಮಾಡಿದೆ. ನೀರಿನ ಸಮಸ್ಯೆ ಆಲಿಸಲು ಕಂಟ್ರೋಲ್ ರೂಮ್‌ಗಳ ಸಂಖ್ಯೆ ಹೆಚ್ಚಿಸುವ ಮೂಲಕ ದೂರು‌ಗಳು ಬಂದ ತಕ್ಷಣ ಸ್ಪಂದಿಸಿ, ನೀರು ಸರಬರಾಜು ಮಾಡಲು ಸೂಚಿಸಲಾಗಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಭಾರತದ ನ್ಯಾಯಪ್ರಕ್ರಿಯೆಯಲ್ಲಿ ಅಮೆರಿಕದ ಹಸ್ತಕ್ಷೇಪ ಅಧಿಕ ಪ್ರಸಂಗತನ

ಇವೆಲ್ಲವೂ ಸರ್ಕಾರದ ಕಡೆಯಿಂದ ಆಗಿರುವ ಕ್ರಮಗಳು. ಆದರೆ ಇದು ಸಾಲದು ಜನ ಸ್ವಯಂಪ್ರೇರಿತರಾಗಿ ನೀರನ್ನು ಉಳಿಸಲು, ಹಿತಮಿತವಾಗಿ ಬಳಸಲು ಮುಂದಾಗುವುದೇ ನೀರಿನ ಕೊರತೆಗೆ ಸರಿಯಾದ ಪರಿಹಾರ. ವಾಹನ ತೊಳೆಯಲು ಕುಡಿಯುವ ನೀರನ್ನು ಬಳಸದಿರುವುದು, ಪಾತ್ರೆ ತೊಳೆದ ನೀರನ್ನು ಗಾರ್ಡನ್‌ಗೆ ಬಳಸುವುದು, ಮನೆ ಮತ್ತು ಕಚೇರಿಯಲ್ಲಿ ನೀರನ್ನು ದಕ್ಷವಾಗಿ ಬಳಸುವ ಸಲಕರಣೆಗಳ ಬಳಕೆ, ತ್ಯಾಜ್ಯ ನೀರಿನ ಮರುಬಳಕೆ, ಪಾತ್ರೆಗಳನ್ನು ತೊಳೆಯುವಾಗ ನಲ್ಲಿ ನೀರು ಆಫ್‌ ಮಾಡುವುದು, ಕಡಿಮೆ ಅವಧಿಯಲ್ಲಿ ಸ್ನಾನ ಮುಗಿಸುವುದು, ಬಳಕೆ ಮಾಡದಿದ್ದಾಗ ನಲ್ಲಿ ಆಫ್‌ ಮಾಡುವುದು, ಕಡಿಮೆ ಫ್ಲಶ್ ಮಾಡುವ ಟಾಯ್ಲೆಟ್‌ಗಳನ್ನು ಬಳಸುವುದು, ಫುಲ್‌ ಲೋಡ್‌ಗಳಿಗೆ ಮಾತ್ರ ಅಟೊಮ್ಯಾಟಿಕ್ ವಾಶಿಂಗ್ ಮಶಿನ್ ಬಳಸುವುದು, ಕೈತೋಟದಲ್ಲಿ ಕಡಿಮೆ ನೀರನ್ನು ಬಳಸುವ ಸಸ್ಯಗಳನ್ನು ಬೆಳೆಸುವುದು, ಮಳೆಕೊಯ್ಲು ವಿಧಾನಗಳನ್ನು ಮನೆಯಲ್ಲಿ ಅಳವಡಿಸಿಕೊಳ್ಳುವುದು- ಇನ್ನೂ ಮುಂತಾದ ಜಾಣ್ಮೆಯ ಕ್ರಮಗಳ ಮೂಲಕ ನೀರನ್ನು ಉಳಿಸಿಕೊಳ್ಳಬೇಕು.

ಇಂದು ಪ್ರತಿಯೊಬ್ಬರೂ ನೀರಿನ ಮಿತ ಬಳಕೆಯ ಬಗ್ಗೆ ಕೆಲಸ ಮಾಡಲೇಬೇಕಾದ ಕಾಲ ಬಂದಿದೆ. ಕಾಲ ಮಿಂಚಿ ಹೋದ ಮೇಲೆ ಚಿಂತಿಸಿ ಫಲವಿಲ್ಲ. ಈಗಲೇ ಎಚ್ಚೆತ್ತುಕೊಂಡರೆ ಬೆಂಗಳೂರಿನ ಭವಿಷ್ಯದ ದಿನಗಳು ಸುಖಕರವಾದಾವು. ಇಲ್ಲವಾದರೆ ನಮ್ಮ ಮುಂದಿನ ತಲೆಮಾರು ನೀರಿಲ್ಲದೆ ನರಳುವುದನ್ನು ಕಾಣುವ ದುರ್ಭರ ಸ್ಥಿತಿ ನಮ್ಮದಾಗಲಿದೆ.

Continue Reading

ಪ್ರಮುಖ ಸುದ್ದಿ

IPL 2024 : ರಾಯಲ್ಸ್​ಗೆ 2ನೇ ವಿಜಯ , ಡೆಲ್ಲಿಗೆ ಸತತ ಎರಡನೇ ಸೋಲು

IPL 2024 : ರಿಯಾನ್ ಪರಾಗ್​ ಬಾರಿಸಿದ ಅಮೋಘ ಅರ್ಧ ಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ತನ್ನದಾಗಿಸಿಕೊಂಡಿತು.

VISTARANEWS.COM


on

IPL 2024- Riyan Parag
Koo

ಜೈಪುರ: ರಿಯಾನ್ ಪರಾಗ್​ (84 ರನ್​, 45 ಎಸೆತ, 7 ಫೋರ್, 6 ಸಿಕ್ಸರ್​) ಅವರ ಸ್ಫೋಟಕ ಅರ್ಧ ಶತಕ ಹಾಗೂ ಬೌಲರ್​ಗಳ ಸಂಘಟಿತ ಬೌಲಿಂಗ್ ದಾಳಿಯ ಮೂಲಕ ಮಿಂಚಿದ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡ ಡೆಲ್ಲಿ ಕ್ಯಾಪಿಟಲ್ಸ್ (Delhi Capital) ವಿರುದ್ಧ 12 ರನ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ಪ್ರಸಕ್ತ ಐಪಿಎಲ್​ನಲ್ಲಿ (IPL 2024) ಸತತವಾಗಿ ಎರಡನೇ ಜಯ ತನ್ನದಾಗಿಸಿಕೊಂಡಿದೆ. ಮೊದಲ ಪಂದ್ಯದಲ್ಲಿ ಲಕ್ನೊ ಸೂಪರ್ ಜೈಂಟ್ಸ್ ವಿರುದ್ಧ 20 ರನ್​ಗಳ ಗೆಲುವು ಸಾಧಿಸಿತ್ತು ಸಂಜು ಸ್ಯಾಮ್ಸನ್​ ಪಡೆ. ಇದೇ ವೇಳೆ ರಿಷಭ್ ಪಂತ್ ನೇತೃತ್ವದ ಡೆಲ್ಲಿ ತಂಡ ಮತ್ತೊಂದು ಸೋಲಿಗೆ ಒಳಗಾಗಿದೆ. ತನ್ನ ಮೊದಲ ಪಂದ್ಯದಲ್ಲಿ ಅದು ಪಂಜಾಬ್ ಕಿಂಗ್ಸ್​ಗೆ ಮಣಿದಿತ್ತು.

ಇಲ್ಲಿನ ಸವಾಯ್​ ಮಾನ್​ಸಿಂಗ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಟಾಸ್​ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ಗೆ 185 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ತನ್ನ ಪಾಲಿನ ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 175 ರನ್​ ಬಾರಿಸಿ ಸೋಲೊಪ್ಪಿಕೊಂಡಿತು. ಕೊನೇ ಹಂತದಲ್ಲಿ ಡೆಲ್ಲಿ ತಂಡದ ಟ್ರಿಸ್ಟಾನ್​ ಸ್ಟಬ್ಸ್ 23 ಎಸೆತಕ್ಕೆ 44 ರನ್ ಬಾರಿಸಿದರೂ ಜಯ ತಂದುಕೊಡಲು ಸಾಧ್ಯವಾಗಲಿಲ್ಲ.

ದೊಡ್ಡ ಗುರಿ ಬೆನ್ನಟ್ಟಲು ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಉತ್ತಮ ಆರಂಭವನ್ನೇ ಪಡೆಯಿತು. ಡೇವಿಡ್​ ವಾರ್ನರ್ ಅಬ್ಬರದ ಬ್ಯಾಟಿಂಗ್ ಮೂಲಕ 34 ಎಸೆತಗಳಲ್ಲಿ 49 ರನ್ ಬಾರಿಸಿದರು. ಮಿಚೆ್ಲ್ ಮಾರ್ಷ್​ ಕೂಡ 12 ಎಸೆತಗಳಲ್ಲಿ 23 ರನ್​ ಬಾರಿಸಿ ಮಿಂಚಿದರು. ಈ ಜೋಡಿ ಮೊದಲ ವಿಕೆಟ್​ಗೆ 30 ರನ್ ಬಾರಿಸಿತು. ಆದರೆ, ಆ ಬಳಿಕ ಆಡಲು ಬಂದ ರಿಕಿ ಭುಯಿ ಶೂನ್ಯಕ್ಕೆ ಔಟಾದರು.

ಬಳಿಕ ನಾಯಕ ರಿಷಭ್ ಪಂತ್​ 28 ರನ್​ಗಳ ಕೊಡುಗೆ ಕೊಟ್ಟರು. ಕೊನೆಯಲ್ಲಿ ಟ್ರಿಸ್ಟಾನ್ ಸ್ಟಬ್ಸ್​ 44 ಹಾಗೂ ಅಕ್ಷರ್ ಪಟೇಲ್​ 15 ರನ್ ಬಾರಿಸಿದರು.

ರಾಜಸ್ಥಾನ್​ ಕೆಟ್ಟ ಆರಂಭ

ಅದಕ್ಕಿಂತ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್​ ತಂಡದ ಆರಂಭ ಚೆನ್ನಾಗಿರಲಿಲ್ಲ. ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್​ 5 ರನ್​ಗೆ ಔಟಾದರೆ ಮತ್ತೊಬ್ಬ ಆರಂಭಿಕ ಆಟಗಾರ ಜೋಸ್ ಬಟ್ಲರ್​ 11 ರನ್​ಗೆ ವಿಕೆಟ್​ ಒಪ್ಪಿಸಿದರು. ನಾಯಕ ಸಂಜ ಸ್ಯಾಮ್ಸನ್ ಕೊಡುಗೆಯೂ 15 ರನ್. 36 ರನ್​ಗೆ 3 ವಿಕೆಟ್​ ಕಳೆದುಕೊಂಡ ರಾಜಸ್ಥಾನ್​ ಪೇಚಿಗೆ ಸಿಲುಕಿತು.

ರಿಯಾನ್​ ಅಬ್ಬರದ ಆಟ

ನಾಲ್ಕನೇ ಕ್ರಮಾಂಕದಲ್ಲಿ ಆಡಲು ಬಂದ ರಿಯಾನ್ ಪರಾಗ್​ ಅಮೋಘ ಇನಿಂಗ್ಸ್ ಆಡಿದರು. ಆರಂಭದಲ್ಲಿ ನಿಧಾನಗತಿಯಲ್ಲಿ ಆಡಿದ ಅವರು ಕೊನೇ ಹಂತದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದರು. ತಂಡದ ವಿಕೆಟ್​ಗಳು ಸತತವಾಗಿ ಬೀಳುತ್ತಿದ್ದ ಕಾರಣ ಅತಿ ವೇಗದಲ್ಲಿ ರನ್ ಗಳಿಸಲು ಆರಂಭದಲ್ಲಿ ತಿಣುಕಾಡಿದ ಅವರು ಕೊಣೇ ಹಂತದಲ್ಲಿ ಸ್ಪರ್ಧಾತ್ಮಕ ಮೊತ್ತ ಪೇರಿಸಲು ನೆರವಾದರು. ಅವರು 45 ಎಸೆತದಲ್ಲಿ 7 ಫೋರ್​ ಹಾಗೂ 6 ಸಿಕ್ಸರ್​ ಸಮೇತ 84 ರನ್ ಬಾರಿಸಿದರು.

ಇದನ್ನೂ ಓದಿ : IPL 2024 : ಬದಲಿ ಆಟಗಾರರನ್ನು ಘೋಷಿಸಿದ ರಾಜಸ್ಥಾನ್​ ರಾಯಲ್ಸ್​, ಕೆಕೆಆರ್​​

ರವಿಚಂದ್ರನ್ ಅಶ್ವಿನ್​ ಸ್ಫೋಟಕ 29 ರನ್ ಬಾರಿಸಿದರೆ ದ್ರುವ್ ಜುರೆಲ್ 20 ರನ್ ಕೊಡುಗೆ ಕೊಟ್ಟರು. ಶಿಮ್ರೋನ್ ಹೆಟ್ಮಾಯರ್ ಅಂತಿಮವಾಗಿ ಅಜೇಯ 14 ರನ್ ಬಾರಿಸಿದರು.

Continue Reading

ಪ್ರಮುಖ ಸುದ್ದಿ

Mukhtar Ansari : ಗ್ಯಾಂಗ್​ಸ್ಟರ್​ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ

Mukhtar Ansari : 14 ಗಂಟೆಗಳ ಕಾಲ ಆಸ್ಪತ್ರೆಯಲ್ಲಿದ್ದು ಬಿಡುಗಡೆಗೊಂಡ ಬಳಿಕ ಮುಖ್ತಾರ್ ಅನ್ಸಾರಿಗೆ ಹೃದಯಾಘಾತ ಉಂಟಾಗಿತ್ತು.

VISTARANEWS.COM


on

Mukthar Ansari
Koo

ನವದೆಹಲಿ: ಕ್ರಿಮಿನಲ್ ಪ್ರಕರಣಗಳಲ್ಲಿ ಜೈಲು ಸೇರಿದ್ದ ಗ್ಯಾಂಗ್​ಸ್ಟರ್​ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ (Mukhtar Ansari ) ಗುರುವಾರ ಹೃದಯಾಘಾತದಿಂದ ನಿಧನ ಹೊಂದಿದ್ದಾನೆ. ಬಾಂಡಾ ಜೈಲಿನಲ್ಲಿದ್ದ ಅನ್ಸಾರಿಗೆ ಹೃದಯಾಘಾತವಾಗಿ ಬ್ಯಾರಕ್ ನಲ್ಲಿ ಬಿದ್ದಿದ್ದ ಎಂದು ಮೂಲಗಳು ತಿಳಿಸಿವೆ. ಆತನನ್ನು ಅಲ್ಲಿಂದ ಬಾಂಡಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ ಚಿಕಿತ್ಸೆ ಫಲಕಾರಿಯಾದೇ ಮೃತಪಟ್ಟಿದ್ದಾನೆ. ಸಾವಿನ ಹಿನ್ನೆಯಲ್ಲಿ ಲಖನೌ ಮತ್ತು ಮೌ ಸದರ್​ ಮತ್ತು ಗಾಜಿಪುರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಎರಡು ದಿನಗಳಲ್ಲಿ ಎರಡನೇ ಬಾರಿಗೆ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಅನ್ಸಾರಿಯನ್ನು ಮಂಗಳವಾರ ಬಾಂಡಾದಲ್ಲಿ ಸುಮಾರು 14 ಗಂಟೆಗಳ ಕಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಆತನನ್ನು ಬಿಡುಗಡೆ ಮಾಡಲಾಗಿತ್ತು. ಏತನ್ಮಧ್ಯೆ. ತನ್ನ ಸಹೋದರನಿಗೆ ಜೈಲಿನಲ್ಲಿ ವಿಷಪ್ರಾಷನ ಮಾಡಲಾಗುತ್ತಿದೆ ಎಂದು ಮುಖ್ತಾರ್ ಸಹೋದರ ಅಫ್ಜಲ್ ಅನ್ಸಾರಿ ಅರೋಪಿಸಿದ್ದಾರೆ.

60 ಹೆಚ್ಚು ಪ್ರಕರಣಗಳ ಆರೋಪಿ, ಎಂಟರಲ್ಲಿ ಅಪರಾಧಿ

ಮೌ ಸದರ್ ಕ್ಷೇತ್ರದಿಂದ ಐದು ಬಾರಿ ಶಾಸಕನಾಗಿದ್ದ ಮುಖ್ತಾರ್ ಅನ್ಸಾರಿ 2005ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್ ನಲ್ಲಿ ಜೈಲಿನಲ್ಲಿದ್ದ. ಆತನ ವಿರುದ್ಧ 60ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಸೆಪ್ಟೆಂಬರ್ 2022 ರಿಂದ ಯುಪಿಯ ವಿವಿಧ ನ್ಯಾಯಾಲಯಗಳು ಎಂಟು ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಿದ್ದು, ಅವರನ್ನು ಬಾಂಡಾ ಜೈಲಿನಲ್ಲಿರಿಸಲಾಗಿತ್ತು.

ಕಳೆದ ವರ್ಷ ಉತ್ತರ ಪ್ರದೇಶ ಪೊಲೀಸರು ಬಿಡುಗಡೆ ಮಾಡಿದ 66 ದರೋಡೆಕೋರರ ಪಟ್ಟಿಯಲ್ಲಿ ಅನ್ಸಾರಿ ಹೆಸರು ಇತ್ತು. ಮುಖ್ತಾರ್ ಅನ್ಸಾರಿಯನ್ನು ನಕಲಿ ಎನ್​ಕೌಂಟರ್ ಮೂಲಕ ಕೊಲ್ಲಬಹುದು ಎಂದು ಅವರ ಕುಟುಂಬ ಸದಸ್ಯರು ಈ ಹಿಂದೆ ಆತಂಕ ವ್ಯಕ್ತಪಡಿಸಿದ್ದರು.

ಎರಡನೇ ಬಾರಿ ಅನಾರೋಗ್ಯ

ಅಫ್ಜಲ್ ಅನ್ಸಾರಿ ಮಂಗಳವಾರ ಹೇಳಿಕೊಂಡಿದ್ದು, “ಜೈಲಿನಲ್ಲಿ ಆಹಾರದಲ್ಲಿ ವಿಷಕಾರಿ ವಸ್ತುವನ್ನು ನೀಡಲಾಗಿದೆ ಎಂದು ಮುಖ್ತಾರ್ ಹೇಳಿದ್ದಾರೆ. ಇದು ಎರಡನೇ ಬಾರಿಗೆ ಸಂಭವಿಸಿದೆ. ಸುಮಾರು 40 ದಿನಗಳ ಹಿಂದೆಯೂ ಅವರಿಗೆ ವಿಷ ನೀಡಲಾಯಿತು. ಮಾರ್ಚ್ 19 ರಂದು ಮಾರ್ಚ್ 22 ರಂದು, ಅವರಿಗೆ ಮತ್ತೆ ಈ (ವಿಷ) ನೀಡಲಾಗಿತ್ತು ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ :Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

ಮಾರ್ಚ್ 21 ರಂದು ಬಾರಾಬಂಕಿ ನ್ಯಾಯಾಲಯದಲ್ಲಿ ನಡೆದ ಪ್ರಕರಣದ ವರ್ಚುವಲ್ ವಿಚಾರಣೆಯ ಸಮಯದಲ್ಲಿ, ಮುಖ್ತಾರ್​ನ ವಕೀಲರು ತಮ್ಮ ಕಕ್ಷಿದಾರರಿಗೆ ಜೈಲಿನಲ್ಲಿ “ನಿಧಾನ ವಿಷ” ನೀಡಲಾಗುತ್ತಿದೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

1963 ರಲ್ಲಿ ಜನಿಸಿದ ಅನ್ಸಾರಿ ಅವರು ಮೌ ಕ್ಷೇತ್ರದಿಂದ ಐದು ಬಾರಿ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದರು. ಕೊನೆಯ ಬಾರಿಗೆ ೨೦೧೭ ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ.

Continue Reading

ಪ್ರಮುಖ ಸುದ್ದಿ

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Women Slapped : ಉಪಮುಖ್ಯಮಂತ್ರಿ ಡಿಕೆ. ಶಿವಕುಮಾರ್ ಅವರ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Women Slapped
Koo

ಬೆಂಗಳೂರು: ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾದ (PTI) ಮಹಿಳಾ ವರದಿಗಾರರ (Female Journalist) ಮೇಲೆ ಮತ್ತೊಂದು ಸುದ್ದಿ ಸಂಸ್ಥೆ ಎಎನ್ಐನಲ್ಲಿ (ANI) ಕೆಲಸ ಮಾಡುತ್ತಿರುವ ಪತ್ರಕರ್ತನೊಬ್ಬ (Male Journalist) ದೈಹಿಕವಾಗಿ ಹಲ್ಲೆ ನಡೆಸಿದ ಘಟನೆ ಗುರುವಾರ ನಡೆದಿದೆ. ಉಪ ಮುಖ್ಯಮಂತ್ರಿ ಡಿ . ಕೆ. ಶಿವಕುಮಾರ್ ಅವರು ನಡೆಸಿದ ಪತ್ರಿಕಾಗೋಷ್ಠಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಇಬ್ಬರೂ ವರದಿಗಾರರು ತೀವ್ರ ವಾಗ್ವಾದ ನಡೆಸಿದ್ದು, ಅಂತಿಮವಾಗಿ ಎಎನ್ಐ ವರದಿಗಾರ ಪಿಟಿಐ ವರದಿಗಾರ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಇತರ ಸುದ್ದಿ ಸಂಸ್ಥೆಗೆ ಸೇರಿದವರು ಎಎನ್ಐ ವರದಿಗಾರನನ್ನು ದೂರ ತಳ್ಳಿ ಇನ್ನಷ್ಟು ಗಲಾಟೆಯಾಗದಂತೆ ನೋಡಿಕೊಂಡಿದ್ದಾರೆ. ಇವೆಲ್ಲವು ವಿಡಿಯೊದಲ್ಲಿ ದಾಖಲಾಗಿದೆ.

“ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಿಟಿಐ ಯುವ ವರದಿಗಾರ್ತಿಯೊಬ್ಬರ ಮೇಲೆ ದೈಹಿಕ ಹಲ್ಲೆ ಮತ್ತು ಅವಾಚ್ಯ ಶಬ್ದಗಳಿಂದ ನಿಂದಿಸಿ, ಲೈಂಗಿಕ ಕಿರುಕುಳ ನೀಡಲಾಗಿದೆ. ಇದು ಎಎನ್ಐ ವರದಿಗಾರನ ಅಸಹ್ಯಕರ ವರ್ತನೆ. ಎಎನ್ಐ ತನ್ನ ಸಿಬ್ಬಂದಿಯ ಇಂತಹ ನಡವಳಿಕೆಯನ್ನು ಖಂಡಿಸುತ್ತದೆಯೇ? ಎಂದು ಪಿಟಿಐ ವಿಡಿಯೊ ಸಮೇತ ಟ್ವೀಟ್ ಮಾಡಿದೆ.

ಪಿಟಿಐ ಈ ಘಟನೆಯನ್ನು ಖಂಡಿಸಿದೆ ಮತ್ತು ವೀಡಿಯೊದಲ್ಲಿ ಕಾಣಿಸಿಕೊಂಡ ತಮ್ಮ ಉದ್ಯೋಗಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಎನ್ಐ ಆಡಳಿತ ಮಂಡಳಿಗೆ ಮನವಿ ಮಾಡಿದೆ. ಎಫ್ಐಆರ್ ಕೂಡ ದಾಖಲಾಗಿದ್ದು, ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡುವುದಾಗಿ ಸುದ್ದಿ ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ : Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

“ನಮ್ಮ ಆಡಳಿತ ಮಂಡಳಿ ಮತ್ತು ಪತ್ರಕರ್ತೆಯ ಸಹೋದ್ಯೋಗಿಗಳು ಆಕ್ರೋಶಗೊಂಡಿದ್ದಾರೆ ಮತ್ತು ಈ ಅಪ್ರಚೋದಿತ ಹಲ್ಲೆಯನ್ನು ಬಲವಾಗಿ ಖಂಡಿಸಿದ್ದಾರೆ. ಪಿಟಿಐ ತನ್ನ ಉದ್ಯೋಗಿಗಳನ್ನು ರಕ್ಷಿಸಲು ಬದ್ಧವಾಗಿದೆ. ಆಘಾತಕಾರಿ ಘಟನೆಯ ಬಗ್ಗೆ ಎಫ್ಐಆರ್ ದಾಖಲಿಸಲಾಗಿದೆ. ಪಿಟಿಐ ರಾಷ್ಟ್ರೀಯ ಮಹಿಳಾ ಆಯೋಗಕ್ಕೂ ದೂರು ಸಲ್ಲಿಸಿದ್ದೇವೆ” ಎಂದು ಪಿಟಿಐ ಹೇಳಿಕೆ ಬಿಡುಗಡೆ ಮಾಡಿದೆ.

ಘಟನೆಯ ಬಗ್ಗೆ ಅನೇಕ ನಾಯಕರು ಕಳವಳ ವ್ಯಕ್ತಪಡಿಸಿದರು ಮತ್ತು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟಿ ಮತ್ತು ಬಿಜೆಪಿ ನಾಯಕಿ ಖುಷ್ಬೂ ಸುಂದರ್, “ಇಂದು ಬೆಂಗಳೂರಿನಲ್ಲಿ ಪಿಟಿಐ ಪತ್ರಕರ್ತೆಯನ್ನು ದೈಹಿಕವಾಗಿ ಮತ್ತು ಮೌಖಿಕವಾಗಿ ನಿಂದಿಸಿದ ಪುರುಷ ಪತ್ರಕರ್ತನ ನಡವಳಿಕೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬಯಸುತ್ತೇನೆ ಎಂದು ಬರೆದಿದ್ದಾರೆ.

ಏತನ್ಮಧ್ಯೆ, ಎಎನ್ಐ ವರದಿಗಾರ ತನ್ನ ಮೇಲೆ ಮೊದಲು ಮಹಿಳಾ ಪತ್ರಕರ್ತೆ ಹಲ್ಲೆ ನಡೆಸಿದ್ದರು ಎಂದು ಪ್ರತಿ ಎಫ್ಐಆರ್ ದಾಖಲಿಸಲಿದ್ದಾರೆ. ಅದಕ್ಕೆ ಪೂರಕವಾಗಿ ಪರಚಿದ ಮುಖದ ಚಿತ್ರ ಹಾಕಿದ್ದಾರೆ. ಆದಾಗ್ಯೂ, ಎಎನ್ಐ ಪತ್ರಕರ್ತ ನವೀನ್ ಕಪೂರ್ ನೀಡಿದ ಸ್ಪಷ್ಟೀಕರಣದ ಪ್ರಕಾರ, ಉದ್ಯೋಗದಾತರು ಅವರನ್ನು ತಾತ್ಕಾಲಿಕವಾಗಿ ಕರ್ತವ್ಯದಿಂದ ಅಮಾನತುಗೊಳಿಸಿದ್ದಾರೆ.

Continue Reading
Advertisement
Water Crisis
ಪ್ರಮುಖ ಸುದ್ದಿ2 mins ago

ವಿಸ್ತಾರ ಸಂಪಾದಕೀಯ: ನೀರಿನ ಸಮಸ್ಯೆಗೆ ಜನರೇ ಉತ್ತರ ಕಂಡುಕೊಳ್ಳಬೇಕು

IPL 2024- Riyan Parag
ಪ್ರಮುಖ ಸುದ್ದಿ17 mins ago

IPL 2024 : ರಾಯಲ್ಸ್​ಗೆ 2ನೇ ವಿಜಯ , ಡೆಲ್ಲಿಗೆ ಸತತ ಎರಡನೇ ಸೋಲು

Dolly Chaiwala
ವೈರಲ್ ನ್ಯೂಸ್49 mins ago

Dolly Chaiwala: ಅಬ್ಬಬ್ಬಾ ಲಾಟರಿ: ಬಿಲ್ ಗೇಟ್ಸ್ ಭೇಟಿ ಆಯ್ತು; ಈಗ ಮಾಲ್ಡೀವ್ಸ್‌ನಲ್ಲಿ ಡಾಲಿ ಚಾಯ್‌ವಾಲಾ ಮಿಂಚು

Mukthar Ansari
ಪ್ರಮುಖ ಸುದ್ದಿ1 hour ago

Mukhtar Ansari : ಗ್ಯಾಂಗ್​ಸ್ಟರ್​ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ

Former DCM Govinda Karajola pressmeet
ಬೆಂಗಳೂರು1 hour ago

Bengaluru News: ದೇಶದ ಸರ್ವಾಂಗೀಣ ಅಭಿವೃದ್ಧಿ ಆಗಿದ್ದೇ ಮೋದಿಯಿಂದ: ಗೋವಿಂದ ಕಾರಜೋಳ

crime news
ಕ್ರೈಂ1 hour ago

5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ಪಾಪಿ; ಸಿನಿಮೀಯ ರೀತಿಯಲ್ಲಿ ಬಂಧಿಸಿದ ಪೊಲೀಸರು

Women Slapped
ಪ್ರಮುಖ ಸುದ್ದಿ2 hours ago

Women Slapped : ಪಿಟಿಐ ಪತ್ರಕರ್ತೆಯ ಕಪಾಳಕ್ಕೆ ಬಾರಿಸಿದ ಎಎನ್​ಐ ವರದಿಗಾರ; ಇಲ್ಲಿದೆ ಆತಂಕಕಾರಿ ವಿಡಿಯೊ

Tata Ace vehicle overturned Two persons dead five seriously injured
ಕರ್ನಾಟಕ2 hours ago

Road Accident: ಟಾಟಾ ಏಸ್ ವಾಹನ ಪಲ್ಟಿ; ಇಬ್ಬರ ಸಾವು, ಐವರಿಗೆ ಗಂಭೀರ ಗಾಯ

Xiaomi Car in China
ಪ್ರಮುಖ ಸುದ್ದಿ2 hours ago

Xiaomi Car: ಎಲೆಕ್ಟ್ರಿಕ್​ ಕಾರು ಮಾರುಕಟ್ಟೆಗೆ ಇಳಿಸಿದ ಮೊಬೈಲ್ ಕಂಪನಿ ರೆಡ್​ಮಿ

viral video
ವೈರಲ್ ನ್ಯೂಸ್3 hours ago

Viral Video: ಶಾಲೆಗೆ ಕುಡಿದು ಬಂದ ಶಿಕ್ಷಕನಿಗೆ ʼಪಾಠʼ ಕಲಿಸಿದ ವಿದ್ಯಾರ್ಥಿಗಳು; ಹೇಗೆಂದು ನೀವೇ ನೋಡಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 202410 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 202411 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ19 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ2 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ3 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌