Karnataka Budget 2024 : ಜಿಎಸ್​​ಟಿ ಸಂಗ್ರಹದಲ್ಲಿ ಶೇ. 14ರಷ್ಟು ಪ್ರಗತಿ; ಸಂಗ್ರಹವಾದ ಮೊತ್ತ ಎಷ್ಟು ಗೊತ್ತೇ? - Vistara News

ಪ್ರಮುಖ ಸುದ್ದಿ

Karnataka Budget 2024 : ಜಿಎಸ್​​ಟಿ ಸಂಗ್ರಹದಲ್ಲಿ ಶೇ. 14ರಷ್ಟು ಪ್ರಗತಿ; ಸಂಗ್ರಹವಾದ ಮೊತ್ತ ಎಷ್ಟು ಗೊತ್ತೇ?

Karnataka Budget 2024 : ಹಿಂದಿನ ವರ್ಷಗಳಿಗೆ ಹೋಲಿಸಿದರೆ ತೆರಿಗೆ ಸಂಗ್ರಹದಲ್ಲಿ ಅಭಿವೃದ್ದಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಘೋಷಿಸಿದ್ದಾರೆ.

VISTARANEWS.COM


on

Tax Collection Karnaraka
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : 2023-24ರಲ್ಲಿ ದೇಶದ ಇತರೆ ರಾಜ್ಯಗಳಿಗೆ ಹೋಲಿಸಿದರೆ ಒಟ್ಟು ಜಿ.ಎಸ್.ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯವು 2ನೇ ಸ್ಥಾನದಲ್ಲಿದೆ. ಜನವರಿ ತಿಂಗಳ ಅಂತ್ಯದವರೆಗೂ 58,180 ಕೋಟಿ ರೂ.ಗಳ SGST ತೆರಿಗೆ ಸ್ವೀಕೃತವಾಗಿದ್ದು, ಕಳೆದ ಸಾಲಿಗೆ ಹೋಲಿಸಿದರೆ ಶೇ.14 ರಷ್ಟು ಬೆಳವಣಿಗೆಯಾಗಿರುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅವರ 2024-25ನೇ ವರ್ಷದ ರಾಜ್ಯ ಬಜೆಟ್​ನಲ್ಲಿ (Karnataka Budget 2024) ಘೋಷಿಸಿದ್ದಾರೆ.

ಪ್ರಸಕ್ತ ವರ್ಷದಲ್ಲಿ ಜಿ.ಎಸ್.ಟಿ ಮೇಲ್ಮನವಿ ನ್ಯಾಯಮಂಡಳಿಯ ಎರಡು ರಾಜ್ಯ ಪೀಠಗಳನ್ನು ರಚಿಸಲಾಗುವುದು ಮತ್ತು ಕಾರ್ಯಗತಗೊಳಿಸಲಾಗುವುದು. ಇದು ತೆರಿಗೆ ವಿವಾದಗಳನ್ನು ಸ್ಥಳೀಯವಾಗಿ ಬಗೆಹರಿಸಲು ಸಹಾಯವಾಗುತ್ತದೆ ಎಂದು ಸಿಎಂ ಬಜೆಟ್​ನಲ್ಲಿ ಮಂಡಿಸಿದರು.

ಇಲಾಖೆಯು, ಗ್ರಾಹಕ ಸಂವೇದಿ ಜಿ.ಎಸ್.ಟಿ ಡೇಟಾಬೇಸ್ ಮ್ಯಾನೇಜ್ಮೆಂಟ್ ಮತ್ತು ಕೃತಕ ಬುದ್ಧಿಮತ್ತೆ ಚಾಲಿತ (ಎಐ) ವಿಶ್ಲೇಷಣಾತ್ಮಕ ವ್ಯವಸ್ಥೆ ಅಭಿವೃದ್ಧಿಪಡಿಸುತ್ತಿದೆ. ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳಿಗೆ ತೆರಿಗೆ ಕಾನೂನು ಮತ್ತು ತಾಂತ್ರಿಕ ಪರಿಣಿತಿ ಹೊಂದಲು ಹಾಗೂ ಅವರಲ್ಲಿ ವಿಶ್ಲೇಷಣಾತ್ಮಕ ದೃಷ್ಟಿಕೋನ ಅಭಿವೃದ್ಧಿಪಡಿಸಲು ಇ-ತರಬೇತಿ ನೀಡಲಿದೆ ಎಂದು ಬಜೆಟ್​ನಲ್ಲಿ ಮಂಡಿಸಿದ್ದಾರೆ.

2024-25ನೇ ಸಾಲಿಗೆ ವಾಣಿಜ್ಯ ತೆರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆ ಗುರಿಯನ್ನು 1,10,000 ಕೋಟಿ ರೂ.ಗಳಿಗೆ ನಿಗದಿಪಡಿಸಲಾಗಿದೆ ಎಂದು ಹೇಳಿದ್ದಾರೆ.

ನೋಂದಣಿ ಮತ್ತು ಮುದ್ರಾಂಕ

ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ನಮ್ಮ ಸರ್ಕಾರವು 2023-24ರಲ್ಲಿ ಪರಿಷ್ಕರಣೆ ಮಾಡಿದ್ದು, ಪ್ರಸಕ್ತ ಆರ್ಥಿಕ ವರ್ಷದ ಜನವರಿ ತಿಂಗಳ ಅಂತ್ಯದವರೆಗೆ 15,692 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆಯಾಗಿದ್ದು, ಶೇ.10ರಷ್ಟು ಬೆಳವಣಿಗೆ ಹೊಂದಿದೆ ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ.

2024-25ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 26,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಬಜೆಟ್​ನಲ್ಲಿ ಪ್ರಕಟಿಸಲಾಗಿದೆ.

ಬಿಯರ್​ ರೇಟ್​​ ಸ್ಲ್ಯಾಬ್​ಗಳ ಪರಿಷ್ಕರಣೆ

ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML ಹಾಗೂ ಬಿಯರ್​ನ ಸ್ಲಾಬ್ಗಳನ್ನು ಪರಿಷ್ಕರಿಸಲಾಗುವುದು. ಅಬಕಾರಿ ಇಲಾಖೆಯ ಎಲ್ಲಾ ಸೇವೆಗಳನ್ನು ಡಿಜಿಟಲೀಕರಣಗೊಳಿಸಲಾಗುವುದು. ಇಲಾಖೆಯು ಒದಗಿಸುವ ವಿವಿಧ ಸೇವೆಗಳಿಗೆ ಸಮಯದ ಮಿತಿಯನ್ನು ನಿಗದಿಪಡಿಸಲಾಗುವುದು ಹಾಗೂ ಸ್ವಯಂಚಾಲಿತ ಅನುಮೋದನೆಗೂ ಅವಕಾಶ ಕಲ್ಪಿಸಲಾಗುವುದು ಎಂದು ಬಜೆಟ್​ನಲ್ಲಿ ಹೇಳಲಾಗಿದೆ.

ಇದನ್ನೂ ಓದಿ : Karnataka Budget Session 2024: ಮಹಾನಗರಗಳಲ್ಲಿ ರಾತ್ರಿ ವ್ಯಾಪಾರಕ್ಕೆ ಸಿಎಂ ಉತ್ತೇಜನ!

2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿ ನಿಗದಿಪಡಿಸಲಾಗಿದೆ.

ಸಾರಿಗೆ

ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆಯಡಿ ಜನವರಿ ತಿಂಗಳವರೆಗೆ 9,333 ಕೋಟಿ ರೂ.ಗಳು ಸ್ವೀಕೃತವಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ ಶೇ.19ರಷ್ಟು ಬೆಳವಣಿಗೆಯಾಗಿದೆ ಎಂದು ಬಜೆಟ್​ನಲ್ಲಿ ಘೋಷಿಸಲಾಗಿದೆ. 2024-25ನೇ ಸಾಲಿಗೆ ಸಾರಿಗೆ ಇಲಾಖೆಗೆ ಒಟ್ಟು 13,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಸಿಎಂ ಪ್ರಕಟಿಸಿದ್ದಾರೆ.

ಗಣಿ ಮತ್ತು ಭೂ-ವಿಜ್ಞಾನ

2023-24 ನೇ ಆರ್ಥಿಕ ವರ್ಷದಲ್ಲಿ ಜನವರಿ ತಿಂಗಳ ಅಂತ್ಯದವರೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ 5,658 ಕೋಟಿ ರೂ.ಗಳು ಸಂಗ್ರಹವಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ, ಗಣಿಗಾರಿಕೆಯಿಂದ ಸ್ವೀಕೃತವಾದ ರಾಜಸ್ವದಲ್ಲಿ ಶೇ.22ರಷ್ಟು ಏರಿಕೆಯಾಗಿದೆ. 2024-25ನೇ ಸಾಲಿಗೆ, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ 9,000 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಬಜೆಟ್​ನಲ್ಲಿ ಪ್ರಕಟಿಸಲಾಗಿದೆ.

      ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
      ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
      Continue Reading
      Click to comment

      Leave a Reply

      Your email address will not be published. Required fields are marked *

      ದೇಶ

      ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

      ಹಾಸ್ಟೆಲ್‌ ವಿದ್ಯಾರ್ಥಿನಿಯರ ಪ್ರಕಾರ, ಮತ್ತೊಬ್ಬ ವಿದ್ಯಾರ್ಥನಿಯು ಪ್ರತಿದಿನ ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಯುವತಿಯರು ಸ್ನಾನ ಮಾಡು ಫೋಟೊಗಳನ್ನು ತೆಗೆದು, ವಿಡಿಯೊಗಳನ್ನು ಮಾಡಿ, ತನ್ನ ಬಾಯ್‌ಫ್ರೆಂಡ್‌ಗೆ ಕಳುಹಿಸುತ್ತಿದ್ದಳು ಎಂದು ತಿಳಿದುಬಂದಿದೆ. ಇದಾದ ಬಳಿಕ ವಿದ್ಯಾರ್ಥಿನಿಯರು ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ.

      VISTARANEWS.COM


      on

      Pune
      Koo

      ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು ಆತಂಕಕ್ಕೀಡಾಗುವಂತಾಗಿದೆ. ವಿದ್ಯಾರ್ಥಿನಿಯೊಬ್ಬಳು ವಿವಿ ಹಾಸ್ಟೆಲ್‌ನ ಬಾತ್‌ರೂಮ್‌ನಲ್ಲಿ ವಿದ್ಯಾರ್ಥಿನಿಯರ ನೂರಾರು ಬೆತ್ತಲೆ ಫೋಟೊಗಳನ್ನು (Photos) ತೆಗೆದು, ವಿಡಿಯೊಗಳನ್ನು (videos) ರೆಕಾರ್ಡ್‌ ಮಾಡಿ, ಅವುಗಳನ್ನು ತನ್ನ ಬಾಯ್‌ಫ್ರೆಂಡ್‌ಗೆ ಶೇರ್‌ ಮಾಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವತಿಯ ವಿರುದ್ಧ ಕೇಸ್‌ ದಾಖಲಿಸಿದ್ದಾರೆ.

      ಮೇ 5ರಂದು ಈ ಕುರಿತು ವಿದ್ಯಾರ್ಥಿಯೊಬ್ಬ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಬಳಿಕ ಪ್ರಕರಣ ಬಯಲಾಗಿದೆ. “ಪ್ರತಿಷ್ಠಿತ ಸಿಒಇಪಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ನೂರಾರು ವಿದ್ಯಾರ್ಥಿನಿಯರು ಬಾತ್‌ರೂಮ್‌ನಲ್ಲಿ ಸ್ನಾನ ಮಾಡುವಾಗ ಅವರ ಫೋಟೊಗಳನ್ನು ತೆಗೆದು, ವಿಡಿಯೊ ರೆಕಾರ್ಡ್‌ ಮಾಡಿದ್ದಾಳೆ ಎಂಬ ಭಯಾನಕ ಸಂಗತಿ ಬಯಲಾಗಿದೆ. ಇಷ್ಟಾದರೂ ವಿಶ್ವವಿದ್ಯಾಲಯವು ಪೊಲೀಸರಿಗೆ ದೂರು ನೀಡಿಲ್ಲ. ಇದರಿಂದಾಗಿ, ಗರ್ಲ್ಸ್‌ ಹಾಸ್ಟೆಲ್‌ನ ನೂರಾರು ವಿದ್ಯಾರ್ಥಿನಿಯರಿಗೆ ಆತಂಕ ಎದುರಾಗಿದೆ. ಅವರು ಹಾಸ್ಟೆಲ್‌ನಲ್ಲಿ ಇರಲು ಕೂಡ ಭಯಪಡುವಂತಾಗಿದೆ” ಎಂದು ವಿಡಿಯೊ ಪೋಸ್ಟ್ ಮಾಡಿದ್ದ. ಇದಾದ ಬಳಿಕ ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ.

      ಯಾವಾಗ ವಿದ್ಯಾರ್ಥಿನಿಯೊಬ್ಬಳು ಪ್ರಕರಣದ ಕುರಿತು ಪೋಸ್ಟ್‌ ಮಾಡಿದಳೋ, ಅದಾದ ಬಳಿಕ ಜನರಿಂದ ಭಾರಿ ಟೀಕೆಗಳು ವ್ಯಕ್ತವಾದವು. ಕೊನೆಗೆ ಎಚ್ಚೆತ್ತ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಪೊಲೀಸರಿಗೆ ದೂರು ನೀಡಿದೆ. ಹಾಗೆಯೇ, ಪ್ರಕರಣದ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿದೆ. ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರ ಪೋಷಕರು ಕೂಡ ಪ್ರಕರಣದ ಕುರಿತು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

      ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

      ಹಾಸ್ಟೆಲ್‌ ವಿದ್ಯಾರ್ಥಿನಿಯರ ಪ್ರಕಾರ, ಮತ್ತೊಬ್ಬ ವಿದ್ಯಾರ್ಥನಿಯು ಪ್ರತಿದಿನ ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಯುವತಿಯರು ಸ್ನಾನ ಮಾಡು ಫೋಟೊಗಳನ್ನು ತೆಗೆದು, ವಿಡಿಯೊಗಳನ್ನು ಮಾಡಿ, ತನ್ನ ಬಾಯ್‌ಫ್ರೆಂಡ್‌ಗೆ ಕಳುಹಿಸುತ್ತಿದ್ದಳು ಎಂದು ತಿಳಿದುಬಂದಿದೆ. ಮೇ 1ರಂದು ವಿದ್ಯಾರ್ಥಿನಿಯು ಬಾತ್‌ರೂಮ್‌ನಲ್ಲಿ ವಿಡಿಯೊ ರೆಕಾರ್ಡ್‌ ಮಾಡುವ ಕುರಿತು ಕೆಲ ವಿದ್ಯಾರ್ಥಿನಿಯರಿಗೆ ಸುಳಿವು ಸಿಕ್ಕಿದೆ. ಕೂಡಲೇ ವಿಷಯವು ಎಲ್ಲೆಡೆ ಹರಡಿದೆ. ಇದಾದ ಬಳಿಕ ಅವರು ವಿವಿ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

      ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

      Continue Reading

      ದೇಶ

      Kulgam: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಮತ್ತೊಬ್ಬ ಉಗ್ರನ ಎನ್‌ಕೌಂಟರ್‌, 2 ದಿನದಲ್ಲಿ 3ನೇ ಬಲಿ

      Kulgam: ಬುಧವಾರ (ಮೇ 8) ಕುಲ್ಗಾಮ್‌ನಲ್ಲಿ ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿಯೇ ಕುಲ್ಗಾಮ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದಂತಾಗಿದೆ. ಮಂಗಳವಾರ ಹತರಾದ ಇಬ್ಬರು ಉಗ್ರರಲ್ಲಿ ಬಸಿತ್‌ ದರ್‌ ಎಂಬಾತನ ಹತ್ಯೆಯು ಪ್ರಾಮುಖ್ಯತೆ ಪಡೆದಿದೆ. ಈತನು ಲಷ್ಕರೆ ತಯ್ಬಾದ ದಿ ರೆಸಿಸ್ಟನ್ಸ್‌ ಫ್ರಂಟ್‌ (TRF) ಕಮಾಂಡರ್‌ ಆಗಿದ್ದು, ಸೈನಿಕರ ಪಟ್ಟಿಯಲ್ಲಿ ಎ ಗ್ರೇಡ್‌ ಉಗ್ರನಾಗಿದ್ದ.

      VISTARANEWS.COM


      on

      Kulgam
      Koo

      ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಭಾರತೀಯ ಸೇನೆಯು ಉಗ್ರರನ್ನು ಮಟ್ಟಹಾಕುವ ದಿಸೆಯಲ್ಲಿ ಸತತವಾಗಿ ಕಾರ್ಯಾಚರಣೆ ಕೈಗೊಳ್ಳುತ್ತಿದೆ. ಅದರಲ್ಲೂ, ಮೇ 4ರಂದು ಪೂಂಚ್‌ನಲ್ಲಿ (Poonch Terror Attack) ವಾಯುಪಡೆಯ ಬೆಂಗಾವಲು ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ ಬಳಿಕ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಬುಧವಾರ (ಮೇ 8) ಕುಲ್ಗಾಮ್‌ನಲ್ಲಿ (Kulgam) ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿಯೇ ಕುಲ್ಗಾಮ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದಂತಾಗಿದೆ.

      ಸೋಮವಾರ (ಮೇ 6) ತಡರಾತ್ರಿಯೇ ಕುಲ್ಗಾಮ್‌ನ ರೆಡ್ವಾಣಿ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಭದ್ರತಾ ಸಿಬ್ಬಂದಿಗೆ ಗುಪ್ತಚರ ಮಾಹಿತಿ ದೊರೆತಿತ್ತು. ಇದರ ಅನ್ವಯ ರಾತ್ರೋರಾತ್ರಿ ಸೈನಿಕರು ಕಾರ್ಯಾಚರಣೆ ಕೈಗೊಂಡು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದರು. ಭಾರತದ ಸೈನಿಕರು ಕಾರ್ಯಾಚರಣೆ ಕೈಗೊಳ್ಳುತ್ತಲೇ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದರು. ಆದರೆ, ಕಾರ್ಯಾಚರಣೆ ವೇಳೆ ಭಾರಿ ಮುನ್ನಡೆ ಸಾಧಿಸಿದ ಯೋಧರು ಒಬ್ಬ ಕಮಾಂಡರ್‌ ಸೇರಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದರು. ಈಗ ರೆಡ್ವಾಣಿ ಪ್ರದೇಶದಲ್ಲಿಯೇ ಮೂರನೇ ಉಗ್ರನನ್ನೂ ಹತ್ಯೆಗೈದಿದ್ದಾರೆ.

      ಮಂಗಳವಾರ ಹತರಾದ ಇಬ್ಬರು ಉಗ್ರರಲ್ಲಿ ಬಸಿತ್‌ ದರ್‌ ಎಂಬಾತನ ಹತ್ಯೆಯು ಪ್ರಾಮುಖ್ಯತೆ ಪಡೆದಿದೆ. ಈತನು ಲಷ್ಕರೆ ತಯ್ಬಾದ ದಿ ರೆಸಿಸ್ಟನ್ಸ್‌ ಫ್ರಂಟ್‌ (TRF) ಕಮಾಂಡರ್‌ ಆಗಿದ್ದು, ಸೈನಿಕರ ಪಟ್ಟಿಯಲ್ಲಿ ಎ ಗ್ರೇಡ್‌ ಉಗ್ರನಾಗಿದ್ದ. ಈತನ ಕುರಿತು ಮಾಹಿತಿ ನೀಡಿದರೆ 10 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಪೊಲೀಸರು ಘೋಷಿಸಿದ್ದರು. ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ, ಪೊಲೀಸರು ಹಾಗೂ ನಾಗರಿಕರ ಹತ್ಯೆ ಸೇರಿ ಈತನ ವಿರುದ್ಧ 18 ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.

      ಉಗ್ರರ ಫೋಟೊ ಬಿಡುಗಡೆ

      ಜಮ್ಮು-ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಮೇ 4ರಂದು ಭಾರತೀಯ ವಾಯುಪಡೆಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ದಾಳಿ ನಡೆಸಿದ ಉಗ್ರರ ಫೋಟೊಗಳು, ಅವರ ಹೆಸರು ಬಹಿರಂಗವಾಗಿದೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಉಗ್ರರ ಫೋಟೊಗಳನ್ನು ಬಿಡುಗಡೆ ಮಾಡಲಾಗಿದ್ದು, ಭಾರತೀಯ ಸೇನೆಯು ಇವರನ್ನು ಹೊಡೆದುರುಳಿಸಲು ಪ್ಲಾನ್‌ ರೂಪಿಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

      ವಾಯುಪಡೆ ವಾಹನಗಳ ಮೇಲೆ ದಾಳಿ ಮಾಡಿದ ಮೂವರನ್ನು ಇಲಿಯಾಸ್‌ (ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ), ಲಷ್ಕರೆ ತಯ್ಬಾ ಕಮಾಂಡರ್‌ ಅಬು ಹಮ್ಜಾ ಹಾಗೂ ಹದೂನ್‌ ಎಂಬುದಾಗಿ ಗುರುತಿಸಲಾಗಿದೆ. ಇಲಿಯಾಸ್‌ನ ಕೋಡ್‌ ನೇಮ್‌ (ಗೌಪ್ಯ ಹೆಸರು) ಫೌಜಿ ಎಂಬುದಾಗಿದೆ ಎಂದು ಕೂಡ ತಿಳಿದುಬಂದಿದೆ. ಜೈಶೆ ಮೊಹಮ್ಮದ್‌ ಉಗ್ರ ಸಂಘಟನೆಯ ಪೀಪಲ್ಸ್‌ ಆ್ಯಂಟಿ-ಫ್ಯಾಸಿಸ್ಟ್‌ ಫ್ರಂಟ್‌ ಎಂಬ ಅಂಗಸಂಸ್ಥೆಯ ಪರವಾಗಿ ಉಗ್ರರು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

      ಇದನ್ನೂ ಓದಿ: Poonch Terrorists: ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

      Continue Reading

      ಕರ್ನಾಟಕ

      ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

      Vistara Gramadani: ಹಾಗೆ ನೋಡಿದರೆ, ಹೆಚ್ಚು ಓದಿದದವರು ನಾಗರಿಕತೆಯಲ್ಲಿ ಮುಂದಿದ್ದೇವೆ ಅಂತ ಭ್ರಮಿಸುವ ನಗರವಾಸಿಗಳು ಮತದಾನದಂತಹ ಕರ್ತವ್ಯದಲ್ಲಿ ಗ್ರಾಮೀಣ ಪ್ರದೇಶದವರಿಗಿಂತ ಪರ್ಸಂಟೇಜಿನಲ್ಲಿ ಮುಂದಿರಬೇಕಿತ್ತು. ಆದರೆ, ವಾಸ್ತವವಾಗಿ ಮತದಾನ ಇರಲಿ, PUC ಪಲಿತಾಂಶ ಇರಲಿ, ಒಟ್ಟಾರೆ ಆರೋಗ್ಯ ನೆಮ್ಮದಿಗಳ ವಿಚಾರವೇ ಇರಲಿ… ಗ್ರಾಮೀಣ ಪ್ರದೇಶದಲ್ಲೇ ಪರ್ಸಂಟೇಜ್ ಜಾಸ್ತಿ.

      VISTARANEWS.COM


      on

      ವಿಸ್ತಾರ ಗ್ರಾಮದನಿ Vistara Gramadaani
      ವಿಜಯಪುರ ಲೋಕಸಭಾ ಕ್ಷೇತ್ರದ ನಿಡಗುಂದಿ ತಾಲೂಕಿನ ಹೆಬ್ಬಾಳ, ಯಲಗೂರ, ಬೀರಲದಿನ್ನಿ ಹಾಗೂ ಬಳಬಟ್ಟಿ ಗ್ರಾಮದಲ್ಲಿ ಮಂಗಳವಾರ ನರೇಗಾ ಯೋಜನೆಯಡಿ ನೋಂದಾಯಿತ 256 ಕೂಲಿಕಾರರು ತಮ್ಮ ಹಕ್ಕು ಚಲಾಯಿಸಿ, ನರೇಗಾ ಕೆಲಸಕ್ಕೆ ಹಾಜರಾಗಿ ಇತರರಿಗೆ ಮಾದರಿ ಆಗಿದ್ದಾರೆ.
      Koo
      Aravind Sigadal

      | ಅರವಿಂದ ಸಿಗದಾಳ್, ಮೇಲುಕೊಪ್ಪ
      ಪ್ರತೀ ವರ್ಷ ಬಹುತೇಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದಾಗ ಮರುದಿನ ಪತ್ರಿಕೆಗಳಲ್ಲಿ ಕಾಣುವ ಸಾಮಾನ್ಯ ಹೆಡ್ಡಿಂಗ್‌: ‘ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ’ ಅಥವಾ ‘ಕನ್ನಡ ಮಾಧ್ಯಮದ ವಿದ್ಯಾರ್ಥಿಗಳೇ ಮುಂದೆ’ ಅಥವಾ ‘ಹೆಣ್ಮಕ್ಳೇ ಸ್ಟ್ರಾಂಗು ಗುರು’ ಇತ್ಯಾದಿ. ಅದರಲ್ಲೂ ‘ಗ್ರಾಮೀಣ ವಿದ್ಯಾರ್ಥಿಗಳ ಮೇಲುಗೈ’ ಎಂಬುದು ಒಂದು ವಿಶೇಷವಾದ ವಿಚಾರ. ಹಾಗೆಯೇ ಮತದಾನ ಸಂದರ್ಭಗಳಲ್ಲೂ ಇದೇ ವಿಶೇಷ ಕಾಣುತ್ತೇವೆ. ಗ್ರಾಮೀಣ ಪ್ರದೇಶಗಳಲ್ಲಿ ಯಾವಾಗಲೂ ಅತಿ ಹೆಚ್ಚು ಮತದಾನ ನಡೆಯುತ್ತದೆ. ಸ್ವೀಪ್ (SVEEP Systematic Voters’ Education and Electoral Participation) ಜಾಗೃತಿ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದವರನ್ನು (Vistara Gramadani) ತಲುಪದೇ ಇದ್ದರೂ ಮತದಾನ ಮಾತ್ರ ನಗರ ಪ್ರದೇಶಗಳಿಗಿಂತ ಹಳ್ಳಿಗಳಲ್ಲಿ ಹೆಚ್ಚು.

      ನಗರಗಳಿಗಿಂತ ಹಳ್ಳಿ, ಪಟ್ಟಣಗಳಲ್ಲಿ ಶೇಕಡಾವಾರು ಓಟ್ ಜಾಸ್ತಿ ಕಾರಣವೇನು?

      ಹೌದು, ಹಳ್ಳಿ ಪಟ್ಟಣಗಳಲ್ಲಿ ಮತದಾನ ಹೆಚ್ಚು. ಹಳ್ಳಿ ಪಟ್ಟಣಗಳ ಕೆಲವು ಬೂತ್‌ಗಳಲ್ಲಿ 100% ಮತದಾನ ಆಗಿದ್ದೂ ಇದೆ. ಸಾಮಾನ್ಯವಾಗಿ ಹಳ್ಳಿಗಳ ಬೂತ್‌ಗಳಲ್ಲಿ 80-90% ಮತದಾನ ‘ಗ್ಯಾರಂಟಿ’. ಗ್ರಾಮೀಣ ಪ್ರದೇಶಗಳಲ್ಲಿ ಮತದಾನ ಹೆಚ್ಚಾಗಲು ಹಲವರು ಕಾರಣಗಳಿವೆ.

      1. ಹಳ್ಳಿಗಳಲ್ಲಿ ಹೆಚ್ಚಿನ ಮತದಾರರು ಕೇವಲ ಮತದಾರರಾಗಿ ಇರುವುದಿಲ್ಲ. ಯಾವುದೋ ಪಕ್ಷಗಳ ವ್ಯಕ್ತಿಗಳ ಬೆಂಬಲಿತ ವ್ಯಕ್ತಿಗಳಾಗಿರುತ್ತಾರೆ.
      2. ಪಕ್ಷಗಳ ಬೂತ್ ಕಾರ್ಯಕರ್ತರೊಂದಿಗೆ ಎಲ್ಲಾ ಮತದಾರರ ಸಂಪರ್ಕ ಇರುತ್ತದೆ. ಮತ ಹಾಕಿಲ್ಲ ಅಂದರೆ, ಮತ ಹಾಕದಿರುವ ವಿಚಾರ ಇಡೀ ಹಳ್ಳಿಗೆ ಗೊತ್ತಾಗುತ್ತದೆ. ‘ಮತ ಹಾಕದೆ ಸುದ್ದಿ ಆಗುವುದು ಬೇಡ’ ಎಂಬ ಕಾರಣಕ್ಕೆ ಹಳ್ಳಿಗಳಲ್ಲಿ ಮತದಾನ ಮಾಡುವವರೂ ಇದ್ದಾರೆ.
      3. ಹಳ್ಳಿ ಪಟ್ಟಣಗಳಲ್ಲಿ ಮತದಾರರಿಗೆ ರಾಜಕೀಯದಾಟದಲ್ಲಿ ಆಸಕ್ತಿ ಜಾಸ್ತಿ. ದೊಡ್ಡ ನಗರಗಳಲ್ಲಿ ಹೆಚ್ಚಿನ ಜನರಿಗೆ, ಅದರಲ್ಲೂ ದೊಡ್ಡ ಸಂಬಳದ ದೊಡ್ಡ ಹುದ್ದೆಯಲ್ಲಿ ಇರುವವರಿಗೆ ರಾಜಕೀಯ ಆಸಕ್ತಿ ವಿಷಯ ಆಗಿರುವುದಿಲ್ಲ. ಒಂದು ರೀತಿಯಲ್ಲಿ ನಗರವಾಸಿಗಳಿಗೆ ರಾಜಕೀಯ ಒಂದು ಜಿಗುಪ್ಸೆ.
      4. ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಜನರು ಸರ್ಕಾರಿ ಇಲಾಖೆಗಳಿಂದ ಫಲಾನುಭವಿ ಆಗಿರುತ್ತಾರೆ ಅಥವಾ ಯಾವುದಾದರೂ ಕೆಲಸಗಳು ಇಲಾಖೆಗಳಿಂದ ಬಾಕಿ ಉಳಿದಿರುತ್ತವೆ. ಆಗಿರುವ ಕೆಲಸ ಅಥವಾ ಆಗಬೇಕಿರುವ ಕೆಲಸದ ಹಿಂದೆ ಓಡಾಡುವವರು ಪಕ್ಷ ಪ್ರತಿನಿಧಿಗಳಾಗಿರುತ್ತಾರೆ ಮತ್ತು ಆ ಪ್ರತಿನಿಧಿಗಳು ಮತದಾನ ಸಂದರ್ಭದಲ್ಲಿ ಮತದಾರರನ್ನು ಮತದಾರ ಪ್ರಕ್ರಿಯೆಗೆ ತೊಡಗುವಂತೆ ಪ್ರಭಾವ ಬೀರಿರುತ್ತಾರೆ.
      5. ಜಾತ್ರೆ, ಊರಿನ ಹಬ್ಬಗಳಂತೆ ಎಲೆಕ್ಷನ್ ಕೂಡ ಹಳ್ಳಿಗಳಲ್ಲಿ, ಪಟ್ಟಣಗಳಲ್ಲಿ ಒಂದು ಉತ್ಸವ ಇದ್ದಂತೆ, ಹೆಚ್ಚಿನವರು ಉತ್ಸಾಹದಿಂದಲೇ ಭಾಗವಹಿಸುತ್ತಾರೆ. ಹಳ್ಳಿಯ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳು ನಡೆಯುವಾಗ, ಭೇಟಿಯಾದ ಸಂದರ್ಭಗಳಲ್ಲಿ ರಾಜಕೀಯ ವಿಚಾರಗಳು ಚರ್ಚೆಯ ಒಂದು ಸಬ್ಜೆಕ್ಟ್ ಆಗಿರುತ್ತದೆ. ಇದರ ಪ್ರಭಾವ, ಮತದಾನ ಹೆಚ್ಚಲು ಪರೋಕ್ವ ಕಾರಣಗಳಲ್ಲಿ ಒಂದಾಗಿರುತ್ತದೆ.
      6. ದೊಡ್ಡ ನಗರಗಳಲ್ಲಿ ವೃತ್ತಿಯಲ್ಲಿ ಇರುವವರು, ಚುನಾವಣೆಯ ರಜೆಯಲ್ಲಿ ಊರಿಗೆ ಬಂದಿರುವುದರಿಂದ ಮತ್ತು ಕುಟುಂಬದವರು ಮತದಾನ ಮಾಡುವಾಗ ಸಹಜವಾಗಿ ಪ್ರೇರಿತಗೊಂಡು ಮತದಾನಕ್ಕೆ ಮುಂದಾಗುತ್ತಾರೆ. ನಗರದಲ್ಲೇ ಹುಟ್ಟಿ ಬೆಳೆದವರು ರಜೆ ಸಿಕ್ಕಿದರೆ ಗಿರಿಧಾಮದ ತುದಿಗೆ ಜಾಲಿ ಪಿಕ್‌ನಿಕ್ ಹೋಗುವವರೇ ಹೆಚ್ಚು!
      7. ದೊಡ್ಡ ನಗರದ ಜನರು ಹಣ, ವೃತ್ತಿ, ಐಷಾರಾಮಿ ಜೀವನಕ್ಕೆ ಕೊಟ್ಟ ಪ್ರಾಧಾನ್ಯತೆಯನ್ನು ಜೀವನದ ಅಗತ್ಯದ ಪ್ರಮುಖ ವಿಚಾರಗಳಲ್ಲಿ ಕೊಡುವುದಿಲ್ಲ. ಅದು ಅಡುಗೆ ಮನೆಯ ಕೆಲಸವಿರಬಹುದು, ಸಾಮಾಜಿಕ ಚಟುವಟಿಕೆಗಳಿರಬಹುದು, ರಾಜಕೀಯವಿರಬಹುದು. ಹಳ್ಳಿಗಳಲ್ಲಿ ಆ ರೀತಿ ವಾತಾವರಣ ಇರುವುದಿಲ್ಲ.
      8. ಹಳ್ಳಿಗಳ ಜನಗಳ ಮಧ್ಯೆ ಒಂದು ಸ್ನೇಹ ಸಂಬಂಧ ಅಥವಾ ಬಾಂಧವ್ಯದ ಸಂಬಂಧ ಗಟ್ಟಿ ಇರುತ್ತದೆ. ಅದರ ಪರಿಣಾಮ, ಎಲ್ಲಾ ವಿಚಾರಗಳಂತೆ ರಾಜಕೀಯ ಸಂವಹನವೂ ನಡೆಯುತ್ತಿರುತ್ತದೆ. ಮತದಾನಕ್ಕೆ ಆ ಸಂವಹನ ಪ್ರೇರಣೆಯೂ ಆಗಿರುತ್ತದೆ.
      9. ಹಳ್ಳಿಗಳ ಜನರಲ್ಲಿ ರಾಜಕೀಯದ ಆಗುಹೋಗುಗಳ ಅರಿವು, ತಿಳಿವಳಿಕೆ ಹೆಚ್ಚು. ರಾಜಕಾರಣಿಗಳು/ಪಕ್ಷಗಳು ಮಾಡಿದ ಸಾಧನೆಗಳು ಅಥವಾ ನಿಷ್ಕ್ರಿಯತೆ ಬಗ್ಗೆ ಹಳ್ಳಿಯ ಸಾಮಾನ್ಯ ಪ್ರಜೆಗೆ ಇರುವ ಜ್ಞಾನ, ಪರಿಚಯ ದೊಡ್ಡ ನಗರವಾಸಿಗಳಿಗೆ ಇರುವುದಿಲ್ಲ. ನಗರ ನಿವಾಸಿಗಳಲ್ಲಿ ಅನೇಕರಿಗೆ ತಮ್ಮ MLA ಯಾರು? ಕಾರ್ಪೋರೇಟರ್ ಯಾರು ಅಂತಾನೇ ಗೊತ್ತಿರುವುದಿಲ್ಲ. ಹಳ್ಳಿಯ ಸಾಮಾನ್ಯರಿಗೂ MLA ಯಾರು ಅಂತ ಕೇಳಿದರೆ, ಕಳೆದ ಮೂರು ಬಾರಿಯ MLA ಗಳ ಪೂರ್ಣ ವಿವರ ಕೊಡುವಷ್ಟು ಮಾಹಿತಿ ಅವರ ಬಳಿ ಇರುತ್ತದೆ. ಇಂತಹ ಅರಿವು ಹಳ್ಳಿಗಳಲ್ಲಿ ಜನರನ್ನು ಮತಗಟ್ಟೆಗೆ ಬರುವಂತೆ ಮಾಡುತ್ತವೆ.
      10. ಹಳ್ಳಿಯ ಮತದಾರರು ನಗರದ ನಿವಾಸಿಗಳಷ್ಟು ಸೋಮಾರಿಗಳಲ್ಲ! ನಿರಾಶಾವಾದಿಗಳಲ್ಲ! ಸಾಮಾನ್ಯವಾಗಿ, ನಗರದವರಿಗಿಂತ ಹಳ್ಳಿಗರು ಹೆಚ್ಚು ಶ್ರಮಿಕರಾಗಿರುವುದರಿಂದ, ಮಾನಸಿಕ ಮತ್ತು ದೈಹಿಕ ಆರೋಗ್ಯದ ವಿಚಾರದಲ್ಲಿ, ಗಟ್ಟಿತನದಲ್ಲಿ ಹಳ್ಳಿಗರು ಒಂದು ಹೆಜ್ಜೆ ಮುಂದೆ ಇರ್ತಾರೆ. ಸರದಿಯಲ್ಲಿ ಅರ್ಧ ಗಂಟೆ ಮತದಾನಕ್ಕೆ ನಿಲ್ಲಬೇಕಾದರೆ, ಅದನ್ನೂ ಕೂಡ ಸಂಭ್ರಮಿಸುತ್ತಾರೆ. ನಗರದವರಂತೆ ಅಸಹನೆ, ಚಡಪಡಿಕೆ ಹಳ್ಳಿಗರಲ್ಲಿ ಕಡಿಮೆ.

      ಹಾಗೆ ನೋಡಿದರೆ, ಹೆಚ್ಚು ಓದಿದದವರು ನಾಗರಿಕತೆಯಲ್ಲಿ ಮುಂದಿದ್ದೇವೆ ಅಂತ ಭ್ರಮಿಸುವ ನಗರವಾಸಿಗಳು ಮತದಾನದಂತಹ ಕರ್ತವ್ಯದಲ್ಲಿ ಗ್ರಾಮೀಣ ಪ್ರದೇಶದವರಿಗಿಂತ ಪರ್ಸಂಟೇಜಿನಲ್ಲಿ ಮುಂದಿರಬೇಕಿತ್ತು. ಆದರೆ, ವಾಸ್ತವವಾಗಿ ಮತದಾನ ಇರಲಿ, ಪಿಯುಸಿ ಪರೀಕ್ಷೆ ಫಲಿತಾಂಶ ಇರಲಿ, ಒಟ್ಟಾರೆ ಆರೋಗ್ಯ ನೆಮ್ಮದಿಗಳ ವಿಚಾರವೇ ಇರಲಿ… ಗ್ರಾಮೀಣ ಪ್ರದೇಶದಲ್ಲೇ ಪರ್ಸಂಟೇಜ್ ಜಾಸ್ತಿ.

      ಇದನ್ನೂ ಓದಿ | Lok Sabha Election 2024: 2ನೇ ಹಂತದಲ್ಲಿ ಶೇ.70.41 ಮತದಾನ; ಕಳೆದ ಬಾರಿಗಿಂತ ಹೆಚ್ಚು, ಚಿಕ್ಕೋಡಿಯಲ್ಲಿ ಗರಿಷ್ಠ

      ನಗರದಲ್ಲಿ ಯಾವುದೇ ಕಾರಣವಿಲ್ಲದೆ ಮತದಾನದಿಂದ ತಪ್ಪಿಸಿಕೊಳ್ಳುವ, ವಿವೇಕ ರಹಿತರಾಗಿ ಮತದಾನ ಕರ್ತವ್ಯ ಮಾಡದ ನಾಗರಿಕರಿಗೆ ಧಿಕ್ಕಾರ ಹೇಳುವಾಗಲೇ, ಮತದಾನ ಪೂಜೆಯನ್ನು ಶ್ರದ್ಧೆಯಿಂದ ಮಾಡಿದ ಗ್ರಾಮೀಣವಾಸಿ ದೇಶ ಪ್ರೇಮಿಗಳಿಗೆ ಒಂದು ಜೈಕಾರ ಹೇಳೋಣ.

      Continue Reading

      ಕ್ರೀಡೆ

      LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

      LSG vs SRH: ಚೇಸಿಂಗ್​ ವೇಳೆ ಸಿಡಿಲಬ್ಬರದ ಬ್ಯಾಟಿಂಗ್​ ನಡೆಸಿದ ಹೆಡ್​ ಮತ್ತು ಅಭಿಷೇಕ್ ಲಕ್ನೋ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದರು. ಹೆಡ್​ 16 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರೆ, ಅಭಿಷೇಕ್​ ಶರ್ಮ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.

      VISTARANEWS.COM


      on

      LSG vs SRH
      Koo

      ಹೈದರಾಬಾದ್​: ಟ್ರಾವಿಸ್​ ಹೆಡ್(89*)​ ಮತ್ತು ಅಭಿಷೇಕ್​ ಶರ್ಮ(75*) ಅವರ ಸುಂಟರಗಾಳಿ ಬ್ಯಾಟಿಂಗ್​ಗೆ ತತ್ತರಿಸಿದ ಲಕ್ನೋ ಸೂಪರ್​ ಜೈಂಟ್ಸ್​(LSG vs SRH) 10 ವಿಕೆಟ್​ಗಳ ಅಂತರದ ಹೀನಾಯ ಸೋಲಿಗೆ ತುತ್ತಾಗಿದೆ. ಈ ಸೋಲಿನಿಂದ ರಾಹುಲ್​ ಪಡೆಯ ಪ್ಲೇ ಆಫ್​ ಹಾದಿ ದುರ್ಗಮವಾಗಿದೆ.

      ಇಲ್ಲಿನ ರಾಜೀವ್​ ಗಾಂಧಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಆಮೆ ಗತಿಯ ಬ್ಯಾಟಿಂಗ್​ ನಡೆಸಿದ ಲಕ್ನೋ ಸೂಪರ್​ ಜೈಂಟ್ಸ್​ ನಿಗದಿತ 20 ಓವರ್​ಗಳಲ್ಲಿ 4 ವಿಕೆಟ್​ಗೆ 165 ರನ್​ ಬಾರಿಸಿತು. ಈ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ ಯಾವುದೇ ವಿಕೆಟ್​ ನಷ್ಟವಿಲ್ಲದೆ ಕೇವಲ 9.4 ಓವರ್​ಗಳಲ್ಲಿ 167 ರನ್​ ಬಾರಿಸಿ ಭರ್ಜರಿ 10 ವಿಕೆಟ್​ ಅಂತರದ ಗೆಲುವು ಸಾಧಿಸಿತು.

      ಚೇಸಿಂಗ್​ ವೇಳೆ ಸಿಡಿಲಬ್ಬರದ ಬ್ಯಾಟಿಂಗ್​ ನಡೆಸಿದ ಹೆಡ್​ ಮತ್ತು ಅಭಿಷೇಕ್ ಲಕ್ನೋ ಬೌಲರ್​ಗಳನ್ನು ನಿರ್ದಾಕ್ಷಿಣ್ಯವಾಗಿ ಮನಬಂದಂತೆ ದಂಡಿಸಿದರು. ಹೆಡ್​ 16 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ಇದು ಈ ಆವೃತ್ತಿಯಲ್ಲಿ ಹೆಡ್​ 16 ಎಸೆತಗಳಿಂದ ಬಾರಿಸಿದ ಮೂರನೇ ಅರ್ಧಶತಕವಾಗಿದೆ. ಅಭಿಷೇಕ್​ ಶರ್ಮ 19 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಅದರಲ್ಲೂ ಹೆಡ್​ ಕನ್ನಡಿಗ ಕೃಷ್ಣಪ್ಪ ಗೌತಮ್​ ಅವರಿಗೆ ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಚಳಿ ಬಿಡಿಸಿದರು. 2 ಓವರ್​ಗೆ 29 ರನ್​ ಬಿಟ್ಟುಕೊಟ್ಟರು. 30 ಎಸೆತ ಎದುರಿಸಿದ ಹೆಡ್​ ತಲಾ 8 ಸಿಕ್ಸರ್​ ಮತ್ತು ಬೌಂಡರಿ ಸಿಡಿಸಿ ಅಜೇಯ 89 ರನ್​ ಬಾರಿಸಿದರು. ಅಭಿಷೇಕ್​ ಶರ್ಮ 8 ಬೌಂಡರಿ ಮತ್ತು 6 ಸಿಕ್ಸರ್​ ನೆರವಿನಿಂದ ಅಜೇಯ 75 ರನ್​ ಬಾರಿಸಿ ತಂಡದ ಜಯ ಸಾರಿದರು.

      ಟಾಸ್​ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಲಕ್ನೋ ತಂಡದ ಪವರ್​ ಪ್ಲೇ ವೈಫಲ್ಯ ಈ ಪಂದ್ಯದಲ್ಲಿಯೂ ಮುಂದುವರಿಯಿತು. ರನ್​ ಗಳಿಸಲು ಪರದಾಡಿದ ಕ್ವಿಂಟನ್​ ಡಿ ಕಾಕ್(2) ರನ್​ಗೆ ವಿಕೆಟ್​ ಕಳೆದುಕೊಂಡರೆ, ಇದರ ಬೆನ್ನಲ್ಲೇ ಮಾರ್ಕಸ್​ ಸ್ಟೋಯಿನಿಸ್​ 3 ರನ್​ ಗಳಿಸಿ ಪೆವಿಲಿಯನ್​ ಕಡೆಗೆ ನಡೆದರು. 21 ರನ್​ಗೆ 2 ವಿಕೆಟ್​ ಕಳೆದುಕೊಂಡು ತಂಡ ಸಂಕಷ್ಟಕ್ಕೆ ಸಿಲುಕಿತು. ಪವರ್​ ಪ್ಲೇಯಲ್ಲಿ ದಾಖಲಾದದ್ದು ಕೇವಲ 27 ರನ್​ ಮಾತ್ರ. ಇದು ತಂಡದ ಬೃಹತ್​ ಮೊತ್ತಕ್ಕೆ ಹಿನ್ನಡೆಯಾಯಿತು.

      ನಾಯಕ ರಾಹುಲ್​ ಕೂಡ ಅತ್ಯಂತ ರಕ್ಷಣಾತ್ಮಕ ಆಟಕ್ಕೆ ಒತ್ತು ಕೊಟ್ಟು 33 ಎಸೆತಗಳಿಂದ 29 ರನ್​ ಬಾರಿಸಿದರು. ಬಾರಿಸಿದ್ದು ತಲಾ ಒಂದು ಸಿಕ್ಸರ್​ ಮತ್ತು ಬೌಂಡರಿ ಮಾತ್ರ. 4ನೇ ವಿಕೆಟ್​ಗೆ ಆಡಲು ಬಂದ ಕೃಣಾಲ್​ ಪಾಂಡ್ಯ ಮಧ್ಯಮ ಕ್ರಮಾಂದಲ್ಲಿ ಸಣ್ಣ ಮಟ್ಟದ ಹೋರಾಟ ಸಂಘಟಿಸಿ 2 ಸಿಕ್ಸರ್​ ಸಿಡಿಸಿ 24 ರನ್​ ಗಳಿಸಿ ಪ್ಯಾಟ್​ ಕಮಿನ್ಸ್​ ಅವರ ನೇರ ಥ್ರೋಗೆ ರನೌಟ್​ ಆದರು. ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ತಂಡಕ್ಕೆ ಆಸರೆಯಾದದ್ದು ಆಯುಷ್​ ಬದೋನಿ ಮತ್ತು ನಿಕೋಲಸ್​ ಪೂರನ್​. ಉಭಯ ಆಟಗಾರರು ಹೈದರಾಬಾದ್​ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸಿ ನಿಂತು 5ನೇ ವಿಕೆಟ್​ಗೆ ಮುರಿಯದ 99 ರನ್​ಗಳ ಅತ್ಯಮೂಲ್ಯ ಜತೆಯಾಟ ನಡೆಸಿದರು. ಹೀಗಾಗಿ ತಂಡ 150ರ ಗಡಿ ದಾಡಿತು.

      ಬದೋನಿ 30 ಎಸೆತ ಎದುರಿಸಿ 55 ರನ್​ ಬಾರಿಸುವ ಮೂಲಕ ಅರ್ಧಶತಕ ಪೂರ್ತಿಗೊಳಿಸಿದರು. ನಿಕೋಲಸ್​ ಪೂರನ್​ 26 ಎಸೆತಗಳಿಂದ 48 ರನ್​ ಗಳಿಸಿದರು. ಹೈದರಾಬಾದ್​ ಪರ ಅನುಭವಿ ಭುವನೇಶ್ವರ್ ಕುಮಾರ್​ 2 ವಿಕೆಟ್​ ಪಡೆದರೆ, ಕಮಿನ್ಸ್​ 1 ವಿಕೆಟ್​ ಕಿತ್ತರು. ಹುಟ್ಟುಹಬ್ಬದ ದಿನವೇ ಕಮಿನ್ಸ್​ಗೆ ಭರ್ಜರಿ ಗೆಲುವಿನ ಉಡುಗೊರೆ ದೊರೆತಿದೆ.​

      Continue Reading
      Advertisement
      Pune
      ದೇಶ2 hours ago

      ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

      ಉತ್ತರ ಕನ್ನಡ2 hours ago

      Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

      Kulgam
      ದೇಶ3 hours ago

      Kulgam: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಮತ್ತೊಬ್ಬ ಉಗ್ರನ ಎನ್‌ಕೌಂಟರ್‌, 2 ದಿನದಲ್ಲಿ 3ನೇ ಬಲಿ

      ವಿಸ್ತಾರ ಗ್ರಾಮದನಿ Vistara Gramadaani
      ಕರ್ನಾಟಕ3 hours ago

      ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

      LSG vs SRH
      ಕ್ರೀಡೆ3 hours ago

      LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

      Hindu Girl
      ದೇಶ4 hours ago

      Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

      Monty Panesar
      ಕ್ರಿಕೆಟ್4 hours ago

      Monty Panesar: ರಾಜಕೀಯಕ್ಕೆ ಎಂಟ್ರಿ ಕೊಟ್ಟು ಒಂದೇ ವಾರದಲ್ಲಿ ಗುಡ್​ ಬೈ ಹೇಳಿದ ಇಂಗ್ಲೆಂಡ್​ ಸ್ಪಿನ್ನರ್

      Murder Case
      ಕರ್ನಾಟಕ4 hours ago

      Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

      Virat Kohli
      ಕ್ರೀಡೆ5 hours ago

      Virat Kohli: ಪಂಜಾಬಿ ಮಾತನಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

      Poonch Terrorists
      ದೇಶ5 hours ago

      Poonch Terrorists: ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

      Sharmitha Gowda in bikini
      ಕಿರುತೆರೆ7 months ago

      Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

      Kannada Serials
      ಕಿರುತೆರೆ7 months ago

      Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

      Bigg Boss- Saregamapa 20 average TRP
      ಕಿರುತೆರೆ7 months ago

      Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

      galipata neetu
      ಕಿರುತೆರೆ5 months ago

      Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

      Kannada Serials
      ಕಿರುತೆರೆ7 months ago

      Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

      Kannada Serials
      ಕಿರುತೆರೆ7 months ago

      Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

      Bigg Boss' dominates TRP; Sita Rama fell to the sixth position
      ಕಿರುತೆರೆ6 months ago

      Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

      geetha serial Dhanush gowda engagement
      ಕಿರುತೆರೆ5 months ago

      Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

      varun
      ಕಿರುತೆರೆ6 months ago

      Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

      Kannada Serials
      ಕಿರುತೆರೆ8 months ago

      Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

      Dina Bhavishya
      ಭವಿಷ್ಯ21 hours ago

      Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

      Prajwal Revanna Case HD Revanna has severe chest pain Admission in Victoria
      ರಾಜಕೀಯ1 day ago

      Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

      Karnataka Weather Forecast
      ಮಳೆ1 day ago

      Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

      Prajwal Revanna Case Government work against Revanna HD Kumaraswamy gives details of the case
      ರಾಜಕೀಯ1 day ago

      Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

      Prajwal Revanna Case 2nd accused in KR Nagar victim abduction case sent to SIT custody Trouble for Revanna
      ಕ್ರೈಂ2 days ago

      Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

      karnataka weather forecast
      ಮಳೆ2 days ago

      Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

      Prajwal Revanna Case DK Shivakumar behind Prajwal video leak Devaraje Gowda demands CBI probe
      ಕ್ರೈಂ2 days ago

      Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

      Dina bhavishya
      ಭವಿಷ್ಯ3 days ago

      Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

      Prajwal Revanna Case HD Revanna sent to judicial custody Shift to Parappana Agrahara
      ಕ್ರೈಂ3 days ago

      Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

      Prajwal Revanna Case No evidence against me its a conspiracy says HD Revanna
      ಕರ್ನಾಟಕ3 days ago

      Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

      ಟ್ರೆಂಡಿಂಗ್‌