Site icon Vistara News

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಗೆ ವಿಸ್ತಾರ ಟಿವಿ ಚಾನೆಲ್ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ

Pralhad Joshi With HPK

ಹೊಸದಿಲ್ಲಿ: ಕೇಂದ್ರ ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು, ಗಣಿ ಖಾತೆ ಸಚಿವರಾದ ಪ್ರಲ್ಹಾದ್ ಜೋಶಿ ಅವರನ್ನು ಹೊಸದಿಲ್ಲಿಯಲ್ಲಿ ಬುಧವಾರ ಭೇಟಿ ಮಾಡಿದ ವಿಸ್ತಾರ ನ್ಯೂಸ್ ಸಿಇಒ, ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಅವರು, ವಿಸ್ತಾರ ನ್ಯೂಸ್ ಟಿವಿ ಚಾನೆಲ್ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಿದರು.

ವಿಸ್ತಾರ ಮೀಡಿಯಾ ಸಂಸ್ಥೆಯ ಹಲವು ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಪ್ರಲ್ಹಾದ್ ಜೋಶಿ ಅವರು, ಟಿವಿ ಚಾನೆಲ್ ಆರಂಭದ ಸಿದ್ಧತೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಸ್ತಾರ ನ್ಯೂಸ್ ಟಿವಿ ಚಾನೆಲ್‌ಗೆ ಜೋಶಿ ಅವರು ಶುಭ ಹಾರೈಸಿದರು.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನ.6ರಂದು ಆಯೋಜಿಸಲಾಗಿರುವ ವಿಸ್ತಾರ ನ್ಯೂಸ್ ಟಿವಿ ಚಾನೆಲ್ ಉದ್ಘಾಟನೆ ಸಮಾರಂಭದಲ್ಲಿ ಪ್ರಲ್ಹಾದ್ ಜೋಶಿ ಅವರು ಭಾಗವಹಿಸಲಿದ್ದಾರೆ.

ಇದನ್ನೂ ಓದಿ | ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಎಲ್‌. ಮುರುಗನ್‌ಗೆ ವಿಸ್ತಾರ ನ್ಯೂಸ್‌ ಚಾನೆಲ್‌ ಉದ್ಘಾಟನೆ ಆಹ್ವಾನಪತ್ರ

ಇದನ್ನೂ ಓದಿ | ವಾರ್ತಾ ಮತ್ತು ಪ್ರಸಾರ ಇಲಾಖೆ ನಿರ್ದೇಶಕಿ ವೃಂದಾ ಅವರಿಗೆ ವಿಸ್ತಾರ ನ್ಯೂಸ್‌ ಚಾನೆಲ್ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನ

Exit mobile version