8 ವರ್ಷದ ಮುದ್ದು ಮಗಳ ಕತ್ತು ಸೀಳಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ವಿಜ್ಞಾನಿ; ಏನಾಗಿತ್ತು? - Vistara News

ಪ್ರಮುಖ ಸುದ್ದಿ

8 ವರ್ಷದ ಮುದ್ದು ಮಗಳ ಕತ್ತು ಸೀಳಿ ಕೊಂದ ಬಳಿಕ ಆತ್ಮಹತ್ಯೆ ಮಾಡಿಕೊಂಡ ವಿಜ್ಞಾನಿ; ಏನಾಗಿತ್ತು?

ಹರಿಯಾಣದಲ್ಲಿ ವಿಜ್ಞಾನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅತ್ಮಹತ್ಯೆ ಮಾಡಿಕೊಳ್ಳುವ ಮೊದಲು ತಮ್ಮ 8 ವರ್ಷದ ಮಗಳನ್ನು ಕೊಂದಿದ್ದಾರೆ.

VISTARANEWS.COM


on

Haryana Scientist Family
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಂಡೀಗಢ: ಹರಿಯಾಣದಲ್ಲಿ ವಿಜ್ಞಾನಿಯೊಬ್ಬರು (Haryana Scientist) ತಮ್ಮ 8 ವರ್ಷದ ಮಗಳ ಕತ್ತು ಸೀಳಿ ಕೊಂದ ಬಳಿಕ ತಾವೂ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಹರಿಯಾಣದ ಹಿಸಾರ್‌ನಲ್ಲಿರುವ ವಿಶ್ವವಿದ್ಯಾಲಯದ ಕ್ಯಾಪಸ್‌ನಲ್ಲಿನ ಕಚೇರಿಯಲ್ಲಿ ವಿಜ್ಞಾನಿ ಸಂದೀಪ್‌ ಗೋಯಲ್‌ (Sandeep Goyal) (35) ಹಾಗೂ ಅವರ 8 ವರ್ಷದ ಪುತ್ರಿಯ ಶವ ಪತ್ತೆಯಾಗಿದೆ. ಖಿನ್ನತೆಯಿಂದ (Depression) ಬಳಲುತ್ತಿದ್ದ ಅವರು ಮಗಳ ಕತ್ತು ಸೀಳಿ ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಹರಿಯಾಣದ ಲಾಲಾ ಲಜಪತ್‌ ರಾಯ್‌ ವಿಶ್ವವಿದ್ಯಾಲಯದ ಪಶು ವೈದ್ಯಕೀಯ ಹಾಗೂ ಪ್ರಾಣಿ ವಿಜ್ಞಾನ ವಿಭಾಗದಲ್ಲಿ ಅವರು ಪ್ರೊಫೆಸರ್‌ ಆಗಿದ್ದರು. ಯುವ ವಿಜ್ಞಾನಿಯೂ ಆಗಿರುವ ಇವರು ಕಳೆದ ಕೆಲ ತಿಂಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು. ಅವರು ಮಾನಸಿಕ ತಜ್ಞರಿಂದಲೂ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಭಾನುವಾರ (ಮಾರ್ಚ್‌ 10) ಅವರು ಅತಿಯಾದ ಮಾನಸಿಕ ಒತ್ತಡಕ್ಕೊಳಗಾಗಿ, ಮಗಳನ್ನು ಕೊಂದು, ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

“ಸಂದೀಪ್‌ ಗೋಯಲ್‌ ಹಾಗೂ ಅವರ ಪುತ್ರಿಯ ಶವಗಳು ವಿವಿ ಕ್ಯಾಂಪಸ್‌ನಲ್ಲಿ ಪತ್ತೆಯಾಗಿವೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುವ ಜತೆಗೆ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರನ್ನೂ ಕರೆಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಸಂದೀಪ್‌ ಗೋಯಲ್‌ ಅವರ ಕುಟುಂಬಸ್ಥರು, ಸಹೋದ್ಯೋಗಿಗಳು ಸೇರಿ ಎಲ್ಲರ ಬಳಿಯೂ ಮಾಹಿತಿ ಪಡೆದಿದ್ದೇವೆ. ಸಂದೀಪ್‌ ಗೋಯಲ್‌ ಅವರು ಮಾನಸಿಕ ಖಿನ್ನತೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂಬುದಾಗಿ ಅವರ ಸಹೋದ್ಯೋಗಿಗಳು ತಿಳಿಸಿದ್ದಾರೆ” ಎಂದು ಹಿಸಾರ್‌ ಎಎಸ್‌ಪಿ ರಾಜೇಶ್‌ ಮೋಹನ್‌ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Self Harming : ನೇಣು ಬಿಗಿದುಕೊಂಡು ಬಾರ್‌ ಕ್ಯಾಶಿಯರ್‌ ಆತ್ಮಹತ್ಯೆ

ಸಂದೀಪ್‌ ಗೋಯಲ್‌ ಅವರ ಪತ್ನಿಯನ್ನು ಕೂಡ ಪೊಲೀಸರು ಸಂಪರ್ಕಿಸಿದ್ದಾರೆ ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆ ವರದಿ ಹಾಗೂ ಪ್ರಕರಣದ ಕುರಿತು ಹೆಚ್ಚಿನ ತನಿಖೆಯ ಬಳಿಕವೇ ಇನ್ನಷ್ಟು ಮಾಹಿತಿ ಲಭ್ಯವಾಗಲಿದೆ ಎಂದು ಹೇಳಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

International Firefighters Day 2024: ಇಂದು ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ; ಜೀವ ರಕ್ಷಕರಿಗೊಂದು ಸಲಾಂ

ಜನ ಸಮುದಾಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಅಗ್ನಿ ಶಾಮಕದಳದ ವೀರರನ್ನು ಗೌರವಿಸಲು ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು (International Firefighters Day 2024) ಆಚರಿಸಲಾಗುತ್ತಿದೆ. ಈ ದಿನದ ಹಿನ್ನೆಲೆಯ ವಿವರ ಇಲ್ಲಿದೆ.

VISTARANEWS.COM


on

By

International Firefighters Day 2024
Koo

ಪ್ರಾಕೃತಿಕ ವಿಕೋಪವಾಗಿರಬಹುದು (Natural disaster) ಅಥವಾ ಯಾವುದಾದರೂ ದುರಂತ (Tragedy) ಉಂಟಾಗಿರಬಹುದು ಇಂತಹ ವಿವಿಧ ಸಂದರ್ಭದಲ್ಲಿ ಕಷ್ಟಕ್ಕೆ ಸಿಲುಕಿರುವ ಜನ ಸಾಮಾನ್ಯರನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಪಣಕ್ಕೆ ಇಡುವವರು ಅಗ್ನಿ ಶಾಮಕದಳದ ಸಿಬ್ಬಂದಿ. ಇವರನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಮೇ 4ರಂದು ಅಂತಾರಾಷ್ಟ್ರೀಯ ಅಗ್ನಿ ಶಾಮಕ ದಿನವನ್ನು (International Firefighters Day 2024) ಆಚರಿಸಲಾಗುತ್ತದೆ.

Firefighters

ಜನ ಸಮುದಾಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಪಣಕ್ಕಿಡುವ ಅಗ್ನಿ ಶಾಮಕದಳದ ವೀರರನ್ನು ಗೌರವಿಸಲು ಇಂದು ವಿಶ್ವದಾದ್ಯಂತ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು ಆಚರಿಸಲಾಗುತ್ತಿದೆ. ಇವರು ಜನ ಸಮುದಾಯಗಳನ್ನು ರಕ್ಷಿಸುವ ಜೊತೆಗೆ ವಿವಿಧ ಪರಿಸ್ಥಿತಿಗಳಲ್ಲಿ ಅಪಾಯಕ್ಕೆ ಸಿಲುಕಿರುವವರ ಜೀವಗಳನ್ನು ಉಳಿಸುವ ಕೆಲಸವನ್ನೂ ನಿರ್ವಹಿಸುತ್ತಾರೆ. ಅಗ್ನಿಶಾಮಕ ದಳದವರ ತ್ಯಾಗವನ್ನು ಗುರುತಿಸಲು ಮತ್ತು ಪ್ರಶಂಸಿಸಲು ಈ ಒಂದು ದಿನ ಖಂಡಿತ ಸಾಕಾಗಲಾರದು. ಆದರೂ ಅವರ ತ್ಯಾಗ, ಪರಿಶ್ರಮವನ್ನು ನೆನಪಿಸುವ ಈ ಒಂದು ದಿನ ಅತ್ಯಂತ ಮಹತ್ವದ್ದು ಎಂದರೆ ತಪ್ಪಾಗಲಾರದು. ಅಂತಾರಾಷ್ಟ್ರೀಯ ಅಗ್ನಿಶಾಮಕ ದಳದ ದಿನವು (International Firefighters Day) ಇತರರನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಕಳೆದುಕೊಂಡ ಅಗ್ನಿಶಾಮಕರನ್ನು ನೆನಪಿನ ದಿನವಾಗಿಯೂ ಆಚರಿಸಲಾಗುತ್ತದೆ.

Firefighters extinguishing an industrial fire

ಯಾವಾಗ ?

ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನವನ್ನು ಮೇ 4 (international firefighters day may 4)ರಂದು ಪ್ರತಿ ವರ್ಷ ಆಚರಿಸಲಾಗುತ್ತದೆ. ಈ ದಿನವನ್ನು ಅಗ್ನಿಶಾಮಕ ದಳದ ಪೋಷಕ ಸಂತ ಸೇಂಟ್ ಫ್ಲೋರಿಯನ್ ಅವರ ಸ್ಮರಣಾರ್ಥ ಆಚರಿಸಲಾಗುತ್ತಿದೆ. ಸೇಂಟ್ ಫ್ಲೋರಿಯನ್ ಅನ್ನು ರೋಮನ್ ಸಾಮ್ರಾಜ್ಯದಲ್ಲಿ ಅಗ್ನಿಶಾಮಕ ದಳದ ಮೊದಲ ಕಮಾಂಡರ್ ಎಂದು ಪರಿಗಣಿಸಲಾಗಿದೆ. ಅವರು ಪ್ರಾಚೀನ ರೋಮನ್ ನಗರವಾದ ನೊರಿಕಮ್ ನಲ್ಲಿ ಅಗ್ನಿಶಾಮಕ ಘಟಕದ ನಾಯಕರಾಗಿದ್ದರು.

Two firefighters go through the fire

ದಿನದ ಇತಿಹಾಸ

ಆಸ್ಟ್ರೇಲಿಯಾದಲ್ಲಿ ನಡೆದ ದುರಂತ ಘಟನೆಯ ಬಳಿಕ ಅಗ್ನಿ ಶಾಮಕ ದಿನವನ್ನು ಆಚರಿಸಲಾಯಿತು. 1998ರ ಡಿಸೆಂಬರ್ 2ರಂದು ವಿಕ್ಟೋರಿಯಾದ ಲಿಂಟನ್‌ನಲ್ಲಿ ಭೀಕರ ಕಾಡ್ಗಿಚ್ಚು ಉಂಟಾಗಿತ್ತು. ಈ ಸಂದರ್ಭದಲ್ಲಿ ಐವರು ಅಗ್ನಿಶಾಮಕ ದಳದವರು ಪ್ರಾಣ ಕಳೆದುಕೊಂಡರು. ಗೀಲಾಂಗ್ ಪಶ್ಚಿಮ ಅಗ್ನಿಶಾಮಕ ದಳದ ಸದಸ್ಯರಾಗಿದ್ದ ಗ್ಯಾರಿ ವ್ರೆಡೆವೆಲ್ಡ್ಟ್, ಕ್ರಿಸ್ಟೋಫರ್ ಇವಾನ್ಸ್, ಸ್ಟುವರ್ಟ್ ಡೇವಿಡ್ಸನ್, ಜೇಸನ್ ಥಾಮಸ್ ಮತ್ತು ಮ್ಯಾಥ್ಯೂ ಆರ್ಮ್ ಸ್ಟ್ರಾಂಗ್ ಅವರು ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದರು. ಬಳಿಕ ಘಟನೆಯ ಮಹತ್ವವನ್ನು ತಿಳಿಸಲು ಅಂತಿಮವಾಗಿ ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನದ ಆಚರಣೆಯ ಪ್ರಸ್ತಾಪಕ್ಕೆ ಕಾರಣವಾಯಿತು. ಆಸ್ಟ್ರೇಲಿಯನ್ ಅಗ್ನಿಶಾಮಕ ದಳದ ಜೆಜೆ ಎಡ್ಮಂಡ್ಸನ್ ಅವರು ಅಗ್ನಿಶಾಮಕ ದಳದವರಿಗೆ ಮೀಸಲಾದ ದಿನವನ್ನು ಸ್ಥಾಪಿಸುವ ಉಪಕ್ರಮದ ನೇತೃತ್ವ ವಹಿಸಿದ್ದರು. ಎಡ್ಮಂಡ್ಸನ್ 1999 ರ ಹೊಸ ವರ್ಷದ ನಿರ್ಣಯದಂತೆ “ಎಲ್ಲಾ ಅಗ್ನಿಶಾಮಕ ದಳದವರಿಗೆ ಬೆಂಬಲ ಮತ್ತು ಗೌರವದ ಅಂತಾರಾಷ್ಟ್ರೀಯವಾಗಿ ಗುರುತಿಸಲ್ಪಟ್ಟ ದಿನವನ್ನು ಆಯೋಜಿಸಲು ಮತ್ತು ಇದನ್ನು ವಿಶ್ವಾದ್ಯಂತ ಸಂಘಟಿಸಬಹುದಾದ ದಿನಾಂಕವನ್ನು ಆಯೋಜಿಸಲು ನಿರ್ಧರಿಸಿದರು.

ಇದನ್ನೂ ಓದಿ: Sunita Williams: ಸುನೀತಾ ವಿಲಿಯಮ್ಸ್‌ 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸಜ್ಜು

ಕೆಂಪು ಮತ್ತು ನೀಲಿ ರಿಬ್ಬನ್

ಕೆಂಪು ಮತ್ತು ನೀಲಿ ರಿಬ್ಬನ್ ಸಾಮಾನ್ಯವಾಗಿ ಅಗ್ನಿಶಾಮಕ ದಳದವರನ್ನು ಗೌರವಿಸುವ ಸಂಕೇತವಾಗಿದೆ. IFFD ಯೊಂದಿಗೆ ಸಂಬಂಧ ಹೊಂದಿರುವ ಈ ರಿಬ್ಬನ್ ಅನ್ನು ಸಾಮಾನ್ಯವಾಗಿ ಸೇವೆ ಮತ್ತು ರಕ್ಷಿಸುವ ಅಗ್ನಿಶಾಮಕರಿಗೆ ಬೆಂಬಲ ಮತ್ತು ಮೆಚ್ಚುಗೆಯ ಸಂಕೇತವಾಗಿ ಧರಿಸಲು ನೀಡಲಾಗುತ್ತದೆ.
ಅಗ್ನಿಶಾಮಕ ದಳದವರು ಹೆಚ್ಚಾಗಿ ಎದುರಿಸುವ ಎರಡು ಅಂಶಗಳನ್ನು ಬಣ್ಣಗಳು ಸಂಕೇತಿಸುತ್ತವೆ. ಬೆಂಕಿಗೆ ಕೆಂಪು ಮತ್ತು ನೀರಿಗೆ ನೀಲಿ.

Continue Reading

ಪ್ರಮುಖ ಸುದ್ದಿ

Prajwal Revanna Case: ಕಾಣದಂತೆ ಮಾಯವಾದ ಎಚ್‌ಡಿ ರೇವಣ್ಣ ! ಇಂದು ಜಾಮೀನು ಸಿಗದೇ ಹೋದರೆ….

Prajwal Revanna Case: ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

VISTARANEWS.COM


on

hd revanna prajwal revanna case
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna Case) ಲೈಂಗಿಕ ಹಗರಣದಲ್ಲಿ (Physical Abuse) ಎಸ್‌ಐಟಿ (SIT) ಮುಂದೆ ವಿಚಾರಣೆಗೆ ಬೇಕಾಗಿರುವ ಮಾಜಿ ಸಚಿವ, ಜೆಡಿಎಸ್‌ ನಾಯಕ ಎಚ್‌.ಡಿ ರೇವಣ್ಣ (HD Revanna) ಅವರು ವಿಶೇಷ ತನಿಖಾ ತಂಡ ಹಾಗು ಪೊಲೀಸರ ಯಾವ ನೋಟಕ್ಕೂ ಸಿಗದೇ ಗುಪ್ತ ಸ್ಥಳಕ್ಕೆ ತೆರಳಿದ್ದು, ಎರಡು ದಿನಗಳಿಂದ ಎಲ್ಲೂ ಕಾಣಿಸಿಕೊಂಡಿಲ್ಲ. ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಲ್ಲಿ ಅವರ ಜಾಮೀನು ಅರ್ಜಿ (Bail plea) ವಿಚಾರಣೆಗೆ ಬರಲಿದೆ.

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ (Pen Drive Case) ಪ್ರಕರಣದಲ್ಲಿ ರೇವಣ್ಣಗೆ ಎಸ್ಐಟಿ ಮೂರನೇ ನೋಟೀಸ್ ಹಾಗೂ ಕೊನೆಗೆ ಲುಕೌಟ್ ನೋಟೀಸ್ (Lookout notice) ಜಾರಿಯಿಂದಾಗಿ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೇವಣ್ಣ ಅವru ವಿದೇಶಕ್ಕೆ ಹಾರಬಹುದು ಎಂಬ ಮುಂದಾಲೋಚನೆಯಿಂದ ಲುಕೌಟ್‌ ನೋಟೀಸ್‌ ಜಾರಿ ಮಾಡಲಾಗಿದ್ದು, ಈಗ ಅವರು ಯಾವುದೇ ಏರ್‌ಪೋರ್ಟ್‌ ಮೂಲಕ ಹಾದು ಹೋಗಲು ಸಾಧ್ಯವಿಲ್ಲದಾಗಿದೆ.

ವಿದೇಶದಲ್ಲಿದ್ದುಕೊಂಡು ಲೈಂಗಿಕ ಹಗರಣ (Pen drive case) ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ರೆಡ್ ಕಾರ್ನರ್ ನೊಟೀಸ್ (Red Corner Notice) ಜಾರಿ ಮಾಡಲು ಎಸ್‌ಐಟಿ (SIT) ಸಿದ್ಧತೆ ನಡೆಸಿದೆ ಎನ್ನಲಾಗಿದ್ದು, ಇನ್ನೊಂದೆಡೆ ಭವಾನಿ ರೇವಣ್ಣ ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್‌ ಮಾಡಿದೆ.

ಸದ್ಯ ರೇವಣ್ಣ ವಿರುದ್ಧ ತನಿಖೆಗೆ ಒಳಗಾಗಬೇಕಾದ ಗಂಭೀರ ಆರೋಪವಿದೆ. ಮೈಸೂರಿನಲ್ಲಿ ಸಂತ್ರಸ್ತೆಯ ಪುತ್ರ ರೇವಣ್ಣ ವಿರುದ್ಧ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದಾರೆ. ಹೀಗಾಗಿ ರೇವಣ್ಣಗೆ ಎಸ್ಐಟಿ ಮುಂದೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಆದರೆ ಕಳೆದ ಎರಡು ದಿನಗಳಿಂದ ರೇವಣ್ಣ ನಾಪತ್ತೆಯಾಗಿದ್ದಾರೆ. ಅವರು ಅತ್ತ ಎಚ್.ಡಿ ದೇವೇಗೌಡರ ನಿವಾಸದಲ್ಲಿಯಾಗಲೀ, ಈತ್ತ ಬಸವನಗುಡಿಯ ತಮ್ಮ ನಿವಾಸದಲ್ಲಿಯಾಗಲೀ, ಹಾಸನದ ಎರಡು ನಿವಾಸಗಳಲ್ಲಾಗಲೀ ಇಲ್ಲ.

ಹೀಗಾಗಿ ಅವರು ಬಂಧನದ ಭೀತಿಯಿಂದ ಅಜ್ಞಾತ ಸ್ಥಳಕ್ಕೆ ಎಸ್ಕೇಪ್ ಆಗಿರಬಹುದು ಎಂದು ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಸದ್ಯ ರೇವಣ್ಣ ಅವರಿಗೆ ಬಂಧನದ ಭಯ ಕಾಡುತ್ತಿದೆ. ಕಿಡ್ನಾಪ್ ಪ್ರಕರಣದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ತೀರ್ಪು ನೋಡಿಕೊಂಡು ನಿರ್ಧಾರ ಮಾಡಲಿದ್ದಾರೆ. ಜಾಮೀನು ಸಿಕ್ಕರೆ ಎಸ್ಐಟಿ ಮುಂದೆ ಬರುವುದು, ಇಲ್ಲವೇ ಮೇಲಿನ ಕೋರ್ಟ್ ಮೊರೆ ಹೋಗೋಣ ಎಂದು ರೇವಣ್ಣ ಪರ ವಕೀಲರು ಹೇಳಿದ್ದಾರೆ.

ಇಂದು ಜಾಮೀನು ಅರ್ಜಿ ವಿಚಾರಣೆ

ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದು (ಶನಿವಾರ) ನಡೆಸಲಿದೆ. ಇದೇ ವೇಳೆ ರೇವಣ್ಣ ಶನಿವಾರ ಎಸ್‌ಐಟಿ ಮುಂದೆ ಹಾಜರಾಗಲು ಸಿದ್ಧರಿದ್ದಾರೆ ಎಂದು ಅವರ ಪರ ವಕೀಲರು ಕೋರ್ಟ್‌ಗೆ ತಿಳಿಸಿದ್ದಾರೆ. ಎರಡನೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ನೋಟಿಸ್‌ ನೀಡಿದೆ. ಬಳಿಕ ವಿಚಾರಣೆಯನ್ನು ಶನಿವಾರಕ್ಕೆ (ಮೇ 4) ಮುಂದೂಡಿದೆ.

ಈ ವೇಳೆ ಎಚ್.ಡಿ. ರೇವಣ್ಣ ಪರ ವಕೀಲರಾದ ಮೂರ್ತಿ ಡಿ ನಾಯ್ಕ್ ವಾದ ಮಂಡಿಸಿದ್ದು, ಕೆ.ಆರ್. ನಗರ ಠಾಣೆಯ ಎಫ್ಐಆರ್‌ನಲ್ಲಿ ಜಾಮೀನು ರಹಿತ ಸೆಕ್ಷನ್‌ಗಳಿವೆ. 364 A, ಅಪಹರಣ, 364 ಅಕ್ರಮ ಬಂಧನದಡಿ ಕೇಸ್‌ ದಾಖಲು ಮಾಡಲಾಗಿದೆ. ಇವುಗಳು ಜಾಮೀನು ರಹಿತವಾಗಿವೆ ಎಂದು ದೂರಿನ ಸಾರಾಂಶವನ್ನು ಓದಿ ತಿಳಿಸಿದರು. ಅಲ್ಲದೆ, ಈ ದೂರಿನಲ್ಲಿ ಮಹಿಳೆಯ ಹೆಸರನ್ನೇ ಉಲ್ಲೇಖಿಸಿಲ್ಲ. ಇನ್ನು ನಾಳೆ ಎಸ್ಐಟಿ ಮುಂದೆ ಎಚ್.ಡಿ. ರೇವಣ್ಣ ಹಾಜರಾಗಲು ಸಿದ್ಧರಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು. ವಾದ ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್, ಶನಿವಾರ ಬೆಳಗ್ಗೆ 11 ಗಂಟೆಗೆ ವಿಚಾರಣೆಯನ್ನು ಮುಂದೂಡಿದ್ದು, ಎಸ್ಐಟಿ ಪರ ಎಸ್‌ಪಿಪಿಗೆ ಕೋರ್ಟ್ ನೋಟಿಸ್ ನೀಡಿದ್ದಾರೆ.

ಇದನ್ನೂ ಓದಿ: Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

Continue Reading

ಕೃಷಿ

Cocoa Price: ಅಡಿಕೆ ಮರದೆತ್ತರಕ್ಕೆ ಕೋಕೋ ಬೆಳೆಯ ಧಾರಣೆ! 800% ಏರಿಕೆ!

Cocoa Price: ಹತ್ತಾರು ವರ್ಷಗಳಿಂದ ಒಂದೇ ಬೆಲೆಯಲ್ಲಿ ಸ್ಥಿರವಾಗಿದ್ದ ಕೋಕೋ ಬೆಲೆ ದಾಖಲೆಯ ಮಟ್ಟಕ್ಕೆ ಏರುತ್ತಿದೆ. 2022ರ ವರೆಗೆ ಹಸಿ ಕೋಕೋ (ಕೊಕ್ಕೋ) ಧಾರಣೆ 40 ರೂ. ಆಸುಪಾಸಿನಲ್ಲಿತ್ತು. ಅಲ್ಲಿಂದ ಹಿಂದಕ್ಕೆ 10-12 ವರ್ಷಗಳಲ್ಲಿ ಈ ಕೋಕೋ ಬೆಲೆ 30-40 ರೂ.ಯಲ್ಲೇ ಸ್ಥಿರವಾಗಿ ನಿಂತಿತ್ತು. ಎಲ್ಲ ಉಪ ಬೆಳೆಗಳ ದರ ಏರು ಮುಖ ಕಂಡಿದ್ದರೂ, ಕೋಕೋ ಧಾರಣೆ ಮಾತ್ರ 40 ರೂ. ಆಚೆ ಈಚೆ ಸುತ್ತುತ್ತಿತ್ತು. ಇದೀಗ ಬೆಲೆ ಬರೋಬರಿ 320 ರೂ. ಅಂದರೆ 800% ಹೆಚ್ಚಳವಾಗಿದೆ. ಇನ್ನೂ ಏರಿಕೆ ಸಾಧ್ಯತೆ ಇದೆ ಎಂದು ಅಂದಾಜಿಸಲಾಗುತ್ತಿದೆ.

VISTARANEWS.COM


on

Cocoa Price
Koo

-ಅರವಿಂದ ಸಿಗದಾಳ್, ಮೇಲುಕೊಪ್ಪ
ಹತ್ತಾರು ವರ್ಷಗಳಿಂದ ಒಂದೇ ಬೆಲೆಯಲ್ಲಿ ಸ್ಥಿರವಾಗಿದ್ದ ಕೋಕೋ ಬೆಲೆ (Cocoa Prices) ಸಾರ್ವಕಾಲಿಕ ದಾಖಲೆಯ ಮಟ್ಟಕ್ಕೆ ಏರುತ್ತಿದೆ. ಪರಣಾಮ, ಅಡಿಕೆ ಬೆಳೆಯ ಜತೆ ಉಪ ಬೆಳೆಯಾಗಿ ಬೆಳೆಯುತ್ತಿದ್ದ ಕೋಕೋದಿಂದ ಒಂದಿಷ್ಟು ರೈತರಿಗೆ ಅನಿರೀಕ್ಷಿತವಾಗಿ ದೊಡ್ಡ ಬೋನಸ್ ದೊರೆತಂತಾಗಿದೆ.

2022ರ ವರೆಗೆ ಹಸಿ ಕೋಕೋ (ಕೊಕ್ಕೋ) ಧಾರಣೆ 40 ರೂ. ಆಸುಪಾಸಿನಲ್ಲಿತ್ತು. ಅಲ್ಲಿಂದ ಹಿಂದಕ್ಕೆ 10-12 ವರ್ಷಗಳಲ್ಲಿ ಈ ಕೋಕೋ ಬೆಲೆ 30-40 ರೂ.ಯಲ್ಲೇ ಸ್ಥಿರವಾಗಿ ನಿಂತಿತ್ತು. ಎಲ್ಲ ಉಪ ಬೆಳೆಗಳ ದರ ಏರು ಮುಖ ಕಂಡಿದ್ದರೂ, ಕೋಕೋ ಧಾರಣೆ ಮಾತ್ರ 40 ರೂ. ಆಚೆ ಈಚೆ ಸುತ್ತುತ್ತಿತ್ತು.

ಕೊಕೋ ಧಾರಣೆ ತೀರಾ ಕುಸಿತ ಕಂಡಾಗ, ಕೊಕೋ ಕೃಷಿಯ ಬಗ್ಗೆ ಮಲೆನಾಡು ಕರಾವಳಿ ಭಾಗದ ಕೃಷಿಕರು ಕೋಕೋವನ್ನು ನಿರ್ಲಕ್ಷಿಸಿದ್ದರು. ಮೂರ್ನಾಲ್ಕು ವರ್ಷಗಳ ಹಿಂದೆ ʼಎಂದೂ ಧಾರಣೆ ಏರದ ಇದು ಲಾಭದಾಯಕವಲ್ಲದ ಬೆಳೆ’ ಎಂಬ ಹಣೆ ಪಟ್ಟಿಯೂ ಕೋಕೋ ಬೆಳೆಗೆ ಅಂಟಿಕೊಂಡಿತ್ತು. ಬೆಲೆ ಇಲ್ಲದ ಕೋಕೋ ಗಿಡಗಳು ಅಡಿಕೆ ತೋಟದಲ್ಲಿ ಇರುವುದೇ ಒಂದು ಸಮಸ್ಯೆ ಅನ್ನುವಂತಾಗಿತ್ತು!

ಜತೆಗೆ ಕೋಕೋ ಹಣ್ಣುಗಳನ್ನು ತಿನ್ನಲು ದಾಂಗುಡಿ ಇಡುತ್ತಿದ್ದ ಮಂಗ, ಅಳಿಲು, ಕೆಲವು ಪಕ್ಷಿಗಳು ಬರಿ ಕೋಕೋ ಹಣ್ಣುಗಳನ್ನು ಹಾಳು ಮಾಡುವುದಲ್ಲದೆ, ಅಡಿಕೆ ಬೆಳೆಯನ್ನೂ ನಾಶ ಮಾಡುತ್ತಿದ್ದವು. ಬೆಲೆಯೂ ಇಲ್ಲದ, ತೊಂದರೆಯೂ ಜಾಸ್ತಿ ಇದ್ದ ಕೋಕೋ ಮರಗಳನ್ನು ಮಲೆನಾಡು ಕರಾವಳಿಯ ನೂರಾರು ಅಡಿಕೆ ಬೆಳೆಗಾರರು ಕಡಿದು, ಅಡಿಕೆ ಮರಗಳಿಗೆ ಮಲ್ಚಿಂಗ್ ಮಾಡಿ ಕೈ ತೊಳೆದುಕೊಂಡಿದ್ದು ಇತಿಹಾಸ. ಈಗ ಅದೇ ರೈತರು ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ಕೋಕೋ ಬೆಳೆಯ ಧಾರಣೆ ಅಡಿಕೆ ಮರದ ಎತ್ತರಕ್ಕೆ ಏರುತ್ತಿರುವುದು ಕಂಡು ಅನೇಕ ರೈತರು ಸಂಕಟ ಅನುಭವಿಸುವಂತಾಗಿರುವುದೂ ಸತ್ಯ.

ಕಳೆದ ದಶಕದಲ್ಲಿ ಹಸಿ ಕೋಕೋ 40 ರೂ. ಇದ್ದಿದ್ದು, ಇವತ್ತು ಬರೋಬರಿ 320 ರೂ.ಗೆ ತಲುಪಿದೆ. ಅಂದರೆ 800% ಹೆಚ್ಚಳ! ಇನ್ನೂ ಏರಿಕೆ ಸಾಧ್ಯತೆ ಇದೆ ಎಂದು ಅಂದಾಜಿಸಲಾಗುತ್ತಿದೆ.

ಧಾರಣೆ ಏರಿಕೆಗೆ ಕಾರಣ ಏನು?

ಕೋಕೋವನ್ನು ಐಸ್‌ಕ್ರೀಮ್, ಚಾಕೊಲೇಟ್, ಮಿಠಾಯಿ, ಬೇಕಿಂಗ್ ಮತ್ತು ಸೌಂದರ್ಯವರ್ಧಕ ಉದ್ಯಮಗಳಲ್ಲಿ ಬಳಸಲಾಗುತ್ತದೆ. ಈ ಉದ್ಯಮಗಳಲ್ಲಿ ಹೆಚ್ಚಿನ ಬೇಡಿಕೆ ಇದ್ದರೂ, ಬರ ಮತ್ತು ನೀರಿನ ಕೊರತೆಯಿಂದ ವಿಶ್ವದಾದ್ಯಂತ ಕೋಕೋ ಬೆಳೆ ಗಣನೀಯವಾಗಿ ಇಳಿಮುಖವಾಗಿರುವುದು ಇವತ್ತಿನ ಕೋಕೋ ಧಾರಣೆ ಏರಿಕೆ ಆಗುತ್ತಿರುವುದಕ್ಕೆ ಮುಖ್ಯ ಕಾರಣ ಎನ್ನಲಾಗುತ್ತಿದೆ.

ಜಾಗತಿಕ ಪೂರೈಕೆಯ 70%ರಷ್ಟಿರುವ ಆಫ್ರಿಕಾದ ಕೋಕೋ ಉತ್ಪಾದನೆಯು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದಾಗಿ ಜಾಗತಿಕ ಬೇಡಿಕೆಗೆ ಅನುಗುಣವಾಗಿ ಪೂರೈಸಲಾಗದೆ ಬೆಳೆ ನೆಲ ಕಚ್ಚಿರುವುದು ಭಾರತವೂ ಸೇರಿದಂತೆ ವಿಶ್ವ ಮಾರುಕಟ್ಟೆಯಲ್ಲಿ ಕೋಕೋ ಧಾರಣೆ ಏರಿಕೆ ಆಗುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಭಾರತದಲ್ಲೂ ಹವಾಮಾನ ವ್ಯತ್ಯಾಸದಿಂದ ಕೋಕೋ ಬೆಳೆ ಇಳಿಮುಖವಾಗಿದೆ.

ಕ್ವಿಂಟಾಲ್ ಡ್ರೈ ಕೋಕೋಗೆ ಈಗ ಲಕ್ಷ ಬೆಲೆ

ಹಸಿ ಕೋಕೋ ದರ 320 ರೂ. ಗಡಿ ದಾಟುತ್ತಿರುವಾಗಲೇ, ಒಣಗಿದ ಡ್ರೈ ಕೋಕೋ ಧಾರಣೆಯೂ ಅದೇ ಪ್ರಮಾಣದಲ್ಲಿ ಏರುತ್ತಿದ್ದು ಗರಿಷ್ಠ ಒಣ ಕೋಕೋ ದರ ಈಗ ಕೆ.ಜಿ.ಗೆ 960 ರೂ. ಅನ್ನು ತಲುಪಿದೆ. ದರ ಏರಿಕೆ ಹೀಗೆ ಮುಂದುವರಿದರೆ ಮೂರ್ನಾಲ್ಕು ದಿನಗಳಲ್ಲಿ ಅದು ನಾಲ್ಕಂಕೆಯನ್ನು ಮುಟ್ಟಿ, ಕ್ವಿಂಟಾಲ್ ಡ್ರೈ ಕೋಕೋ ಬೆಲೆ ದಾಖಲೆಯ 1,00,000 ರೂ. ತಲುಪುವ ಸಾಧ್ಯತೆ ಇದೆ.

ಕೋಕೋ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳುವುದೂ ಈಗ ದುಸ್ತರ

ಕೋಕೋ ಧಾರಣೆ ಮಿಂಚಿ‌ ವೇಗದಲ್ಲಿ ಏರುತ್ತಿರುವಾಗ ಫಸಲಿಗೆ ಬರುತ್ತಿರುವ ಬೆಳೆಯನ್ನು ರಕ್ಷಣೆ ಮಾಡಿಕೊಳ್ಳುವುದೂ ಸಣ್ಣ ರೈತರಿಗೆ ತಲೆನೋವಾಗಿ ಪರಿಣಮಿಸುತ್ತಿದೆ. ಮಂಗ, ಅಳಿಲು, ಕೆಂಜಳಿಲು, ಕಬ್ಬೆಕ್ಕು, ಪಕ್ಷಿಗಳಿಂದ ಬೆಳೆಯನ್ನು ರಕ್ಷಣೆ ಮಾಡಿಕೊಂಡು ಹಣ್ಣಾದಾಗ ಕಟಾವು ಮಾಡಬೇಕು. ಆದರೆ ಕಟಾವು ಮಾಡುವ ಮೊದಲೇ ಪ್ರಾಣಿಗಳಿಂದ ರಕ್ಷಣೆ ಮಾಡಿಕೊಳ್ಳುವುದು ರೈತರಿಗೆ ದೊಡ್ಡ ಸವಾಲಾಗಿದೆ. ಇದಲ್ಲದೆ ಕೋಕೋ ಹಣ್ಣುಗಳನ್ನು ತೋಟದಿಂದಲೇ ಕದಿಯುತ್ತಿರುವ ವರದಿಗಳೂ ಹರಿದಾಡುತ್ತಿವೆ.

ಇದನ್ನೂ ಓದಿ: Areca Price: ಅಡಿಕೆ ದರ ಗಗನಮುಖಿ; ಚುನಾವಣೆ ಬಳಿಕ ಮತ್ತಷ್ಟು ಏರಿಕೆ?

ಒಟ್ಟಿನಲ್ಲಿ ಒಂದು ಕಾಲದಲ್ಲಿ ಐಸ್‌ಕ್ರೀಮ್, ಚಾಕಲೇಟ್‌ಗಳಲ್ಲಿ ಬಳಸುತ್ತಿದ್ದ ವೆನಿಲಾ ಬೆಳೆಯ ದರ ಏರಿಕೆಯಿಂದ ಆಗುತ್ತಿದ್ದ ಪರಿಣಾಮಗಳು ಈಗ ಕೋಕೋಗೆ ರಾಜ ಮರ್ಯಾದೆಯ ದರ ಬರುತ್ತಿದೆ. ಜಾಗತಿಕ ಮಟ್ಟದಲ್ಲಿ ಕೋಕೋ ಬೇಡಿಕೆ ಹೆಚ್ಚಿದ್ದು, ಪೂರೈಕೆ ಕಡಿಮೆ ಇರುವ ಕಾರಣ ಸಧ್ಯಕ್ಕಂತು ಅದರ ದರ ಇಳಿಯುವ ಸಾಧ್ಯತೆ ಕಡಿಮೆ ಎಂದು ಚರ್ಚೆ ನೆಡೆಯುತ್ತಿದೆ.

Continue Reading

ಕ್ರೈಂ

Prajwal Revanna Case: ಹಾಸನ ಸಂಸದರ ನಿವಾಸದ ಗೇಟಿಗೆ ಬೀಗ; ನಿವಾಸದ ಕೀ ನಾಪತ್ತೆ! ಎಚ್‌ಡಿ ರೇವಣ್ಣ ಕೂಡ ಗಾಯಬ್!‌

Prajwal Revanna Case: ಸಂಸದರ ನಿವಾಸಕ್ಕೂ ಬೀಗ ಬಿದ್ದಿದ್ದು, ಬೀಗದ ಕೀ ಯಾರ ಬಳಿ ಇದೆ ಎಂಬುದು ನಿಗೂಢವಾಗಿದೆ. ಇಂದು ಸಂತ್ರಸ್ತೆ ಜೊತೆ SIT ತಂಡ ಸ್ಥಳ ಮಹಜರು ಮಾಡುವ ಸಾಧ್ಯತೆ ಇದೆ. ಆದರೆ ಕಳೆದೊಂದು ವಾರದಿಂದ ಸಂಸದರ ನಿವಾಸಕ್ಕೆ ಬೀಗ ಬಿದ್ದಿದ್ದು, ಮೇಟಿ ಕುಟುಂಬವೂ ಕಣ್ಮರೆಯಾಗಿದೆ. ಸ್ಥಳ ಮಹಜರಿಗೆ ಸಂಸದರ ಕಚೇರಿ ಬೀಗದ ಕೀ ಯಾರ ಬಳಿ ಇದೆ ಎಂಬುದು ಗೊತ್ತಾಗಿಲ್ಲ.

VISTARANEWS.COM


on

prajwal revanna case hassan MP home
Koo

ಹಾಸನ: ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna Case) ನಿವಾಸದಲ್ಲೇ ನಿವಾಸದಲ್ಲೇ ಅತ್ಯಾಚಾರ (Physical abuse) ನಡೆದಿರುವ ಬಗ್ಗೆ ದೂರು ನೀಡಲಾಗಿರುವ ಹಿನ್ನೆಲೆಯಲ್ಲಿ, ಸಂಸದರ ನಿವಾಸದ ಗೇಟ್‌ಗೆ ನಿನ್ನೆ ಬೀಗ ಜಡಿಯಲಾಗಿದೆ. ಇನ್ನೊಂದು ಕಡೆ ಲುಕೌಟ್‌ ನೋಟೀಸ್‌ (Lokkout notice) ಹೊರಡಿಸಿದರೂ ಪ್ರಕರಣ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಮಾಜಿ ಸಚಿವ ಎಚ್‌ಡಿ ರೇವಣ್ಣ (HD Revanna) ತಲೆ ಮರೆಸಿಕೊಂಡಿದ್ದಾರೆ. ಭವಾನಿ ರೇವಣ್ಣ (Bhavani Revanna) ಅವರಿಗೂ ವಿಚಾರಣೆಗೆ ಎಸ್‌ಐಟಿ ಬುಲಾವ್‌ ಮಾಡಿದೆ.

ಸಂಸದರ ನಿವಾಸದ ರೂಮ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಪ್ರಜ್ವಲ್ ರೇವಣ್ಣ‌ ವಿರುದ್ಧ ಅತ್ಯಾಚಾರದ ದೂರು ನೀಡಿದ್ದ ಮಹಿಳೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. CID ಪೊಲೀಸರ ಮುಂದೆ, ಸಂಸದರ ನಿವಾಸದಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ದೂರು ನೀಡಲಾಗಿದೆ. ಹೀಗಾಗಿ ಸಾಕ್ಷಿ ನಾಶದ ಆತಂಕದ ಹಿನ್ನೆಲೆಯಲ್ಲಿ ಸಂಸದರ ನಿವಾಸದ ಆವರಣಕ್ಕೆ ಪ್ರವೇಶ ನಿರ್ಬಂಧಿಸಿ ಗೇಟಿಗೆ ಬೀಗ ಹಾಕಲಾಗಿದೆ. SIT ತಂಡ ತನಿಖೆಗೆ ಆಗಮಿಸುವ ಹಿನ್ನೆಲೆಯಲ್ಲಿ ಪೊಲೀಸರು ಬೀಗ ಹಾಕಿದ್ದಾರೆ.

ಸಂಸದರ ನಿವಾಸಕ್ಕೂ ಬೀಗ ಬಿದ್ದಿದ್ದು, ಬೀಗದ ಕೀ ಯಾರ ಬಳಿ ಇದೆ ಎಂಬುದು ನಿಗೂಢವಾಗಿದೆ. ಇಂದು ಸಂತ್ರಸ್ತೆ ಜೊತೆ SIT ತಂಡ ಸ್ಥಳ ಮಹಜರು ಮಾಡುವ ಸಾಧ್ಯತೆ ಇದೆ. ಆದರೆ ಕಳೆದೊಂದು ವಾರದಿಂದ ಸಂಸದರ ನಿವಾಸಕ್ಕೆ ಬೀಗ ಬಿದ್ದಿದ್ದು, ಮೇಟಿ ಕುಟುಂಬವೂ ಕಣ್ಮರೆಯಾಗಿದೆ. ಸ್ಥಳ ಮಹಜರಿಗೆ ಸಂಸದರ ಕಚೇರಿ ಬೀಗದ ಕೀ ಯಾರ ಬಳಿ ಇದೆ ಎಂಬುದು ಗೊತ್ತಾಗಿಲ್ಲ.

ರೇವಣ್ಣಗೂ ಲುಕ್‌ಔಟ್‌ ನೋಟೀಸ್‌

ಪ್ರಕರಣದ ಪ್ರಮುಖ ಆರೋಪಿ, ಮಾಜಿ ಸಚಿವ ಎಚ್.ಡಿ. ರೇವಣ್ಣ ವಿರುದ್ಧವೂ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ದಾಖಲಾಗಿದೆ. ಕಳೆದ ಎರಡು ದಿನಗಳಿಂದ ಎಚ್.ಡಿ. ರೇವಣ್ಣ ಕಾಣಿಸಿಕೊಂಡಿಲ್ಲ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್‌ ಅನ್ನು ಜಾರಿ ಮಾಡಿದ್ದಾರೆ.

ಕೆ. ಆರ್. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಡಿ ಲುಕ್ ಔಟ್ ನೋಟಿಸ್‌ ಅನ್ನು ಜಾರಿ ಮಾಡಲಾಗಿದೆ. ಈಗ ಎಚ್.ಡಿ. ರೇವಣ್ಣ ಸಹ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದ್ದು, ದೇಶ ಬಿಟ್ಟು ಹೋಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ದೇಶ ಬಿಟ್ಟು ಹೋದರೆ ರಾಜ್ಯ ಸರ್ಕಾರಕ್ಕೆ ತೀವ್ರ ಮುಖಭಂಗವಾಗಲಿದೆ. ಇದೊಂದು ಹೈಪ್ರೊಫೈಲ್‌ ಕೇಸ್‌ ಆಗಿದ್ದು, ಸೂಕ್ಷ್ಮವಾಗಿ ತನಿಖೆ ನಡೆಸಬೇಕಿದೆ. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಎಲ್ಲ ಆಯಾಮಗಳಲ್ಲಿಯೂ ತನಿಖೆ ಮಾಡುತ್ತಿದ್ದಾರೆ.

ಇದರ ಜತೆಗೆ ರೇವಣ್ಣ ಅವರಿಗೆ ಈಗಾಗಲೇ ವಿಚಾರಣೆಗೆ ಹಾಜರಾಗುವಂತೆ ಹಲವು ಬಾರಿ ನೋಟಿಸ್‌ ನೀಡುತ್ತಲೇ ಬರಲಾಗಿದೆ. ಇಷ್ಟಾದರೂ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿಗೊಳಿಸಿದೆ.

ಭವಾನಿಗೂ ಬುಲಾವ್‌

ಅಪ್ಪ ಮಗನ ಬಳಿಕ ಭವಾನಿ ರೇವಣ್ಣಗೂ ಎಸ್ಐಟಿ‌ ನೊಟೀಸ್ ಕಳಿಸಿದೆ. ಕೆಆರ್ ನಗರ ಠಾಣೆಯಲ್ಲಿ ದಾಖಲಾದ ಕಿಡ್ನಾಪ್ ಪ್ರಕರಣ ಸಂಬಂಧ ಭವಾನಿ ರೇವಣ್ಣಗೆ ಎಸ್ಐಟಿ ನೊಟೀಸ್ ಕಳಿಸಿದ್ದು, ಇಂದು ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ‌ರೇವಣ್ಣ ಸಂಬಂಧಿ ಸತೀಶ್ ಬಾಬು ಎಂಬಾತನ ಬಂಧನ ಆಗಿದೆ.

ಪ್ರಮುಖ ಆರೋಪಿ ಎಚ್‌.ಡಿ. ರೇವಣ್ಣ (HD Revanna) ವಿರುದ್ಧವೂ ಈಗ ಎಸ್‌ಐಟಿ ಲುಕ್‌ಔಟ್‌ ನೋಟಿಸ್‌ ಜಾರಿ ಮಾಡಿದೆ. ದೇಶ ಬಿಟ್ಟು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಲುಕ್‌ಔಟ್ ನೋಟಿಸ್ (Lookout Notice) ಜಾರಿ ಮಾಡಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna Case: ವಿದೇಶದಿಂದ ಪ್ರಜ್ವಲ್‌ ರೇವಣ್ಣ ಎಳೆತರಲು ರೆಡ್‌ ಕಾರ್ನರ್‌ ನೋಟಿಸ್?‌ ಭವಾನಿ ರೇವಣ್ಣಗೂ ವಿಚಾರಣೆಗೆ ಬುಲಾವ್

Continue Reading
Advertisement
International Firefighters Day 2024
ಪ್ರಮುಖ ಸುದ್ದಿ7 mins ago

International Firefighters Day 2024: ಇಂದು ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ; ಜೀವ ರಕ್ಷಕರಿಗೊಂದು ಸಲಾಂ

Nijjar Killling
ವಿದೇಶ9 mins ago

Nijjar Killing: ನಿಜ್ಜರ್‌ ಹಂತಕರ ಫೊಟೋ ರಿಲೀಸ್‌; ಭಾರತದತ್ತ ಮತ್ತೆ ಬೊಟ್ಟು ಮಾಡಿದ ಕೆನಡಾ

Vettaiyan Movie Rajinikanth And Amitabh Bachchan Poses Together
ಸಿನಿಮಾ11 mins ago

Vettaiyan Movie: ಸೂಟು ಬೂಟು ಹಾಕಿಕೊಂಡು ಸ್ಟೈಲಿಶ್‌ ಆಗಿ ಪೋಸ್‌ ಕೊಟ್ಟ ರಜನಿ!

Accident news
ಮಳೆ16 mins ago

Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

cm siddaramaiah
ಕ್ರೈಂ29 mins ago

CM Siddaramaiah: ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್:‌ ಮಹೇಶ್‌ ವಿಕ್ರಂ ಹೆಗ್ಡೆ, ವಸಂತ್‌ ಗಿಳಿಯಾರ್ ಬಂಧನವಿಲ್ಲ

Urfi Javed magical butterflies dress Samantha reacts
ಬಾಲಿವುಡ್31 mins ago

Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

IPL 2024
ಕ್ರೀಡೆ41 mins ago

IPL 2024: ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಗೆಲುವು ಸಾಧಿಸಿದ ಕೆಕೆಆರ್​

Drama Artist
ಕರ್ನಾಟಕ41 mins ago

Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

Amith Shah
ದೇಶ52 mins ago

Amit Shah: ತೆಲಂಗಾಣದಲ್ಲಿ ಗೃಹಸಚಿವ ಅಮಿತ್ ಶಾ ವಿರುದ್ಧ FIR ದಾಖಲು

Porbandar Tour
ಪ್ರವಾಸ57 mins ago

Porbandar Tour: ಪೋರ್ ಬಂದರಿನಲ್ಲಿ ನೋಡಲೇಬೇಕಾದ ಅದ್ಭುತ ಸ್ಥಳಗಳಿವು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ19 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌