Heat Wave: ಈ ಸಲ ಏಪ್ರಿಲ್‌, ಮೇ ಧಗಧಗ; ಕರ್ನಾಟಕದಲ್ಲೂ ಬೀಸಲಿದೆ ತೀವ್ರ ಶಾಖದ ಅಲೆ - Vistara News

ಪ್ರಮುಖ ಸುದ್ದಿ

Heat Wave: ಈ ಸಲ ಏಪ್ರಿಲ್‌, ಮೇ ಧಗಧಗ; ಕರ್ನಾಟಕದಲ್ಲೂ ಬೀಸಲಿದೆ ತೀವ್ರ ಶಾಖದ ಅಲೆ

Heat Wave: ಗುಜರಾತ್, ಮಧ್ಯ ಮಹಾರಾಷ್ಟ್ರ, ಉತ್ತರ ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ಉತ್ತರ ಛತ್ತೀಸ್‌ಗಢ ಮತ್ತು ಆಂಧ್ರಪ್ರದೇಶಗಳು ಶಾಖದ ಅಲೆಗಳ ಕೆಟ್ಟ ಪರಿಣಾಮವನ್ನು ಅನುಭವಿಸುವ ಸಾಧ್ಯತೆಯಿದೆ.

VISTARANEWS.COM


on

heat wave in india
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಈ ಬೇಸಿಗೆಯಲ್ಲಿ ಕರ್ನಾಟಕ (Karnataka) ಸೇರಿದಂತೆ ದೇಶದ ಹಲವು ರಾಜ್ಯಗಳು ತೀವ್ರ ಶಾಖದ ಅಲೆಗಳಿಗೆ (Heat Wave) ಸಾಕ್ಷಿಯಾಗಲಿವೆ. ಮಧ್ಯ, ಉತ್ತರ ಬಯಲು ಪ್ರದೇಶಗಳು ಮತ್ತು ದಕ್ಷಿಣ ಭಾರತದ ಹಲವು ಪ್ರದೇಶಗಳಲ್ಲಿ ಹೆಚ್ಚಿನ ಸಂಖ್ಯೆಯ ಶಾಖದ ಅಲೆಗಳ ದಿನಗಳು (Extreme weather) ಕಾಣಿಸಿಕೊಳ್ಳಲಿವೆ ಎಂದು ಭಾರತೀಯ ಹವಾಮಾನ ಇಲಾಖೆ (Indian meteorological department) ಸೋಮವಾರ ಮುನ್ಸೂಚನೆ ನೀಡಿದೆ.

ಏಪ್ರಿಲ್‌ನಿಂದ ಜೂನ್ ತಿಂಗಳುಗಳಲ್ಲಿ ದೇಶವು ತೀವ್ರತರವಾದ ಶಾಖವನ್ನು ಅನುಭವಿಸಲಿದೆ. ಮಧ್ಯ ಮತ್ತು ಪಶ್ಚಿಮ ಪರ್ಯಾಯ ದ್ವೀಪ ಭಾಗಗಳು ಕೆಟ್ಟ ಪರಿಣಾಮವನ್ನು ಎದುರಿಸುವ ನಿರೀಕ್ಷೆಯಿದೆ. ದೇಶದ ವಿವಿಧ ಭಾಗಗಳಲ್ಲಿ ಸಾಮಾನ್ಯವಾಗಿರುವ ನಾಲ್ಕರಿಂದ ಎಂಟು ದಿನಗಳ ಶಾಖದ ಅಲೆಗಳ ಬದಲು 10-20 ದಿನಗಳ ಶಾಖದ ಅಲೆಯನ್ನು ನಿರೀಕ್ಷಿಸಲಾಗಿದೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು ಹೇಳಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆ ಇರುವುದರಿಂದ ಬಿಸಿಗಾಳಿಯ ಬಗ್ಗೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಕೇಂದ್ರ ಭೂ ವಿಜ್ಞಾನ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. “ನಾವು ಸಿದ್ಧತೆಗಳ ಬಗ್ಗೆ ರಾಜ್ಯ ಸರ್ಕಾರಗಳೊಂದಿಗೆ ಎರಡು ದಿನಗಳ ಸಭೆ ನಡೆಸಿದ್ದೇವೆ ಮತ್ತು ಸಲಹೆಗಳನ್ನು ನೀಡಿದ್ದೇವೆ” ಎಂದು ಅವರು ಹೇಳಿದರು.

ಚಾಲ್ತಿಯಲ್ಲಿರುವ ಶಾಖದ ಪರಿಸ್ಥಿತಿಯ ಬಗ್ಗೆ ಅವರು, “ನಮ್ಮ ಅಂದಾಜು ಪ್ರಕಾರ, ಕರ್ನಾಟಕ, ಪಶ್ಚಿಮ ಬಂಗಾಳ, ಒಡಿಶಾ, ಆಂಧ್ರಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶದಂತಹ ರಾಜ್ಯಗಳು ಸೇರಿದಂತೆ ದೇಶದ ಬೃಹತ್ ಪ್ರದೇಶವು ಶಾಖದ ಅಲೆಯಿಂದ ಪ್ರಭಾವಿತವಾಗಿರುತ್ತದೆ,” ಎಂದಿದ್ದಾರೆ.

ಗುಜರಾತ್, ಮಧ್ಯ ಮಹಾರಾಷ್ಟ್ರ, ಉತ್ತರ ಕರ್ನಾಟಕ, ರಾಜಸ್ಥಾನ, ಮಧ್ಯಪ್ರದೇಶ, ಒಡಿಶಾ, ಉತ್ತರ ಛತ್ತೀಸ್‌ಗಢ ಮತ್ತು ಆಂಧ್ರಪ್ರದೇಶಗಳು ಶಾಖದ ಅಲೆಗಳ ಕೆಟ್ಟ ಪರಿಣಾಮವನ್ನು ಅನುಭವಿಸುವ ಸಾಧ್ಯತೆಯಿದೆ ಎಂದು ಮೊಹಾಪಾತ್ರ ಹೇಳಿದರು. ಎಪ್ರಿಲ್‌ನಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನದ ಸಾಧ್ಯತೆಯಿದೆ. ಮಧ್ಯ ದಕ್ಷಿಣ ಭಾರತದಲ್ಲಿ ಹೆಚ್ಚಿನ ಸಂಭವನೀಯತೆ ಇರುತ್ತದೆ.

ಏಪ್ರಿಲ್‌ನಲ್ಲಿ ಪಶ್ಚಿಮ ಹಿಮಾಲಯ ಪ್ರದೇಶ ಮತ್ತು ಈಶಾನ್ಯ ರಾಜ್ಯಗಳ ಕೆಲವು ಭಾಗಗಳಲ್ಲಿ ಸಾಮಾನ್ಯದಿಂದ ಕಡಿಮೆ ಗರಿಷ್ಠ ತಾಪಮಾನದ ಸಾಧ್ಯತೆಯಿದೆ ಎಂದು IMD ತಿಳಿಸಿದೆ. ಏಪ್ರಿಲ್‌ನಲ್ಲಿ ಮಧ್ಯ ಭಾರತ, ಉತ್ತರ ಬಯಲು ಪ್ರದೇಶ ಮತ್ತು ದಕ್ಷಿಣ ಭಾರತದ ಅಕ್ಕಪಕ್ಕದ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಶಾಖದ ದಿನಗಳು ಸಂಭವಿಸಬಹುದು ಎಂದು ಹವಾಮಾನ ಕಚೇರಿ ತಿಳಿಸಿದೆ.

ಮೊಹಾಪಾತ್ರ ಪ್ರಕಾರ, ಈ ಪ್ರದೇಶಗಳಲ್ಲಿ ಸಾಮಾನ್ಯ ಒಂದರಿಂದ ಮೂರು ದಿನಗಳ ಬದಲು ಎರಡರಿಂದ ಎಂಟು ದಿನಗಳ ಶಾಖದ ಅಲೆಯನ್ನು ನಿರೀಕ್ಷಿಸಲಾಗಿದೆ. ಗುಜರಾತ್, ಮಹಾರಾಷ್ಟ್ರ, ಉತ್ತರ ಕರ್ನಾಟಕ, ಒಡಿಶಾ, ಪಶ್ಚಿಮ ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶಗಳು ಏಪ್ರಿಲ್‌ನಲ್ಲಿ ಶಾಖದ ಅಲೆಗಳ ಕೆಟ್ಟ ಪರಿಣಾಮವನ್ನು ಅನುಭವಿಸುವ ಮುನ್ಸೂಚನೆಗಳಿವೆ. ಭಾರತದಲ್ಲಿ ಲೋಕಸಭೆ ಚುನಾವಣೆಯು ಏಪ್ರಿಲ್ 19 ಮತ್ತು ಜೂನ್ 1 ರ ನಡುವೆ ಏಳು ಹಂತಗಳಲ್ಲಿ ನಡೆಯಲಿದೆ.

ಬೆಂಗಳೂರಿನಲ್ಲಿ ಈಗಾಗಲೇ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ ತಲುಪಿದೆ. ಇದು ಇನ್ನೂ 1 – 2 ಡಿಗ್ರಿ ಸೆಲ್ಸಿಯಸ್‌ ಹೆಚ್ಚಾಗುವ ಸಂಭವವಿದೆ. ಕರಾವಳಿ ಜಿಲ್ಲೆಗಳಲ್ಲಿ ಸಹ ಉಷ್ಣಾಂಶವು ಹೆಚ್ಚಾಗಿಯೇ ಇರಲಿದೆ. ಮಂಗಳೂರಿನಲ್ಲಿ ಇನ್ನೊಂದು ವಾರದಲ್ಲಿ 34 – 35 ಡಿಗ್ರಿ ಸೆಲ್ಸಿಯಸ್‌ ಇರಲಿದ್ದರೆ, ಕಾರವಾರದಲ್ಲಿ 35-36 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಅಂದಾಜಿಸಲಾಗಿದೆ. ಮಲೆನಾಡಿನ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಾಗಲಿದೆ.

ಇದನ್ನೂ ಓದಿ: Karnataka Weather: 34 ಡಿಗ್ರಿ ಸೆಲ್ಸಿಯಸ್‌ ತಲುಪಿದ ಬೆಂಗಳೂರು; ಹೇಗಿದೆ ಕರ್ನಾಟಕದ ಹವಾಮಾನ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Nitish Reddy : ಐಪಿಎಲ್​ನಲ್ಲಿ ಮಿಂಚಿದ ಈ ಆಟಗಾರನಿಗೆ ಎಪಿಎಲ್​ನಲ್ಲಿ ಸಿಕ್ಕಿತು ಭರ್ಜರಿ ದುಡ್ಡು

Nitish Reddy : ಯುವ ಆಟಗಾರನ ಪ್ರತಿಕ್ರಿಯೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ನಿತೀಶ್ ಕುಮಾರ್ ರೆಡ್ಡಿ ಅವರನ್ನು ಎಸ್​ಆರ್​ಎಚ್​ 20 ಲಕ್ಷ ರೂ.ಗೆ ಖರೀದಿಸಿತ್ತು. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಆರು ತಂಡಗಳ ಪಂದ್ಯಾವಳಿಯಾದ ಆಂಧ್ರ ಪ್ರೀಮಿಯರ್ ಲೀಗ್​​ನಲ್ಲಿ ದಾಖಲೆಯ ಬಿಡ್​ನೊಂದಿಗೆ ಅವರು ಹೆಚ್ಚುಕಡಿಮೆ ಅಷ್ಟೇ ಮೊತ್ತ ಗಳಿಸಿದ್ದಾರೆ.

VISTARANEWS.COM


on

Nitish Kumar Reddy
Koo

ನವದೆಹಲಿ: ಆಂಧ್ರ ಪ್ರೀಮಿಯರ್ ಲೀಗ್ (APL) ನಲ್ಲಿ ಸನ್​ರೈಸರ್ಸ್​ ಹೈದರಬಾದ್​ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ನಿತೀಶ್ ಕುಮಾರ್ ರೆಡ್ಡಿ (Nitish Reddy) ಭರ್ಜರಿ ಮೊತ್ತವನ್ನು ಪಡೆದಿದ್ದಾರೆ. ಈ ಬಗ್ಗೆ ಅವರು ಖುಷಿ ವ್ಯಕ್ತಪಡಿಸಿದ್ದಾರೆ. ಯಾಕೆಂದರೆ ನಿತೀಶ್​ ಈಗ ಈ ಟಿ20 ಲೀಗ್​ನ ಹರಾಜಿನ ಮೂರು ಆವೃತ್ತಿಗಳ ಅತ್ಯಂತ ದುಬಾರಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅಂದ ಹಾಗೆ 20 ವರ್ಷದ ಆಟಗಾರನನ್ನು ಗೋದಾವರಿ ಟೈಟಾನ್ಸ್ ತಂಡ 15.6 ಲಕ್ಷ ರೂ.ಗೆ ಖರೀದಿಸಿದೆ. ಹೈದರಾಬಾದ್​​ನ ಹೋಟೆಲ್ ಕೊಠಡಿಯಿಂದ ಎಪಿಎಲ್ 2024 ಹರಾಜನ್ನು ವೀಕ್ಷಿಸುತ್ತಿದ್ದ ನಿತೀಶ್​​ ತನ್ನ ಉತ್ಸಾಹವನ್ನು ವ್ಯಕ್ತಪಡಿಸಿದ್ದಾರೆ. ಐಪಿಎಲ್​ನಲ್ಲಿ (IPL 2024) ಅವರು ಎಸ್​ಆರ್​ಎಚ್ ತಂಡದ ಆಟಗಾರ.

ನಿತೀಶ್ ಕುಮಾರ್ ರೆಡ್ಡಿ ಅವರು ಹೋಟೆಲ್ ಕೋಣೆಯಲ್ಲಿ ಸಂಭ್ರಮಿಸುತ್ತಿರುವುದನ್ನು ಅವರ ಸಹ ಆಟಗಾರರೊಬ್ಬರು ಚಿತ್ರೀಕರಿಸಿದ್ದಾರೆ. ಯುವ ಆಟಗಾರನ ಪ್ರತಿಕ್ರಿಯೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ನಿತೀಶ್ ಕುಮಾರ್ ರೆಡ್ಡಿ ಅವರನ್ನು ಎಸ್​ಆರ್​ಎಚ್​ 20 ಲಕ್ಷ ರೂ.ಗೆ ಖರೀದಿಸಿತ್ತು. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಆರು ತಂಡಗಳ ಪಂದ್ಯಾವಳಿಯಾದ ಆಂಧ್ರ ಪ್ರೀಮಿಯರ್ ಲೀಗ್​​ನಲ್ಲಿ ದಾಖಲೆಯ ಬಿಡ್​ನೊಂದಿಗೆ ಅವರು ಹೆಚ್ಚುಕಡಿಮೆ ಅಷ್ಟೇ ಮೊತ್ತ ಗಳಿಸಿದ್ದಾರೆ.

ಐಪಿಎಲ್ 2024 ರಲ್ಲಿ ಸನ್​ರೈಸರ್ಸ್​ ಜೊತೆಗಿನ ನಿತೀಶ್ ಅವರ ಯಶಸ್ಸು ಗುರುವಾರ ನಡೆದ ಆಂಧ್ರ ಟಿ 20 ಲೀಗ್ ಹರಾಜಿನಲ್ಲಿ ಪ್ರತಿಫಲನಗೊಂಡಿತು. ಗೋದಾವರಿ ಟೈಟಾನ್ಸ್ ತಂಡದ ಖಜಾನೆ ಒಡೆದ ಅವರು ಗರಿಷ್ಠ ಮೊತ್ತವನ್ನು ಪಡೆದರು.

ಸನ್ರೈಸರ್ಸ್​ ಪರ ಅದ್ಭುತ ಪ್ರದರ್ಶನ ನೀಡುತ್ತಿರುವ ನಿತೀಶ್ 239 ರನ್ ಗಳಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಅವರರನ್ನು ತಂಡ ಆಧಾರಸ್ತಂಭವೆಂದು ಹೇಳಲಾಗಿದೆ. ಮಯಾಂಕ್ ಅಗರ್ವಾಲ್ ಗಾಯದ ನಂತರ ಅವಕಾಶ ಪಡೆದ ನಿತೀಶ್, 150 ಕ್ಕೂ ಹೆಚ್ಚು ರನ್ ಗಳಿಸುವ ಜತೆಗೆ 3 ವಿಕೆಟ್ ಪಡೆದು ಮಿಂಚಿದರು.

ಇದನ್ನೂ ಓದಿ: Sunil Chhetri: ಭಾರತದ ಫುಟ್ಬಾಲ್‌ ಮಾಂತ್ರಿಕ ಸುನೀಲ್ ಚೆಟ್ರಿ ಕುರಿತ 8 ಕುತೂಹಲಕರ ಸಂಗತಿಗಳಿವು!

19 ವರ್ಷದೊಳಗಿನವರ ಮಟ್ಟದಲ್ಲಿ ಭಾರತ ಬಿ ಪರ ಆಡಿದ ನಿತೀಶ್ ಕುಮಾರ್ ರೆಡ್ಡಿ 17 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 566 ರನ್ ಮತ್ತು 22 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದು, 36.63 ಸರಾಸರಿಯಲ್ಲಿ 403 ರನ್ ಗಳಿಸಿದ್ದಾರೆ.

ರಣಜಿ ಟ್ರೋಫಿಯಲ್ಲಿ ಅವರ ಪ್ರದರ್ಶನವು ನಿತೀಶ್ ಅವರ ಅತ್ಯಂತ ಗಮನಾರ್ಹ ಸಾಧನೆಗಳಲ್ಲಿ ಒಂದಾಗಿದೆ. ಅಲ್ಲಿ ಅವರು ಪ್ರಾಥಮಿಕವಾಗಿ ಬೌಲಿಂಗ್ ಆಲ್ರೌಂಡರ್ ಆಗಿ ಆಡಿದರು ಮತ್ತು ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ಗಮನಾರ್ಹ ಕೊಡುಗೆ ನೀಡಿದರು. 2023 ರ ಋತುವಿನಲ್ಲಿ, ನಿತೀಶ್ 18.76 ಸರಾಸರಿಯಲ್ಲಿ 25 ವಿಕೆಟ್​​ಗಳನ್ನು ಪಡೆದರು ಮತ್ತು 36.60 ಸರಾಸರಿಯಲ್ಲಿ 366 ರನ್ ಗಳಿಸಿದ್ದಾರೆ.

Continue Reading

ದೇಶ

Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

Medicine Price: ರಕ್ತದ ಗ್ಲುಕೋಸ್‌ ಕಡಿಮೆಯಾದಾಗ ಬಳಿಸುವ Dapagliflozin Metformin Hydrochlorideಗೆ ಮೊದಲು 30 ರೂ. ಇತ್ತು. ಈಗ ಅದಕ್ಕೆ 16 ರೂ. ನಿಗದಿಪಡಿಸಲಾಗಿದೆ. ಅಸ್ತಮಾ ಹಾಗೂ ಶ್ವಾಸಕೋಶದ ಸಮಸ್ಯೆ ಇದ್ದವರು ತೆಗೆದುಕೊಳ್ಳವ ಬ್ಯೂಡ್‌ಸೊನೈಡ್‌ ಹಾಗೂ ಫಾರ್ಮೊಟೆರೋಲ್‌ನ ಒಂದು ಡೋಸ್‌ ಬೆಲೆಯನ್ನು 6.62 ರೂ.ಗೆ ಇಳಿಕೆ ಮಾಡಲಾಗಿದೆ.

VISTARANEWS.COM


on

Medicine Price
Koo

ನವದೆಹಲಿ: ದೇಶದಲ್ಲಿ ಅಗತ್ಯ ಔಷಧಗಳ ಬೆಲೆ ಏರಿಕೆ ಕುರಿತು ವದಂತಿಗಳು ಹರಡಿದ ಬೆನ್ನಲ್ಲೇ ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ ಬೆಲೆಯನ್ನು ಕೇಂದ್ರ ಸರ್ಕಾರ (Central Government) ಇಳಿಸಿದೆ. ಔಷಧಗಳ ಬೆಲೆ ಇಳಿಕೆ (Medicine Price) ಮಾಡಿ ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು (NPPA) ಆದೇಶ ಹೊರಡಿಸಿದೆ. ಇದರಿಂದ ದೇಶಾದ್ಯಂತ ಕೋಟ್ಯಂತರ ಜನರು ಕಡಿಮೆ ಬೆಲೆಗೆ ಔಷಧಗಳನ್ನು ಖರೀದಿಸಬಹುದಾಗಿದೆ.

ಯಾವ ಕಾಯಿಲೆಗಳ ಔಷಧ ಬೆಲೆ ಇಳಿಕೆ?

ಮಧುಮೇಹ, ಹೃದ್ರೋಗ, ಯಕೃತ್ತಿನ ಸಮಸ್ಯೆ, ಆ್ಯಂಟಿಬಯೋಟಿಕ್ಸ್‌, ಮಲ್ಟಿ ವಿಟಮಿನ್‌ ಸೇರಿ ಹಲವು ಔಷಧಗಳ ಬೆಲೆಯನ್ನು ಎನ್‌ಪಿಪಿಎ ಇಳಿಕೆ ಮಾಡಿದೆ. ಭಾರತದಲ್ಲಿ 10 ಕೋಟಿಗೂ ಅಧಿಕ ಮಂದಿ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜಗತ್ತಿನಲ್ಲೇ ಅತಿ ಹೆಚ್ಚು ಮಧುಮೇಹಿಗಳು ಇರುವ ದೇಶಗಳಲ್ಲಿ ಭಾರತವೂ ಸೇರಿದೆ. ಹಾಗಾಗಿ, ಸಕ್ಕರೆ ಕಾಯಿಲೆಗೆ ಬಳಸುವ ಮಾತ್ರೆಗಳು ಹಾಗೂ ಇನ್ಸುಲಿನ್‌ಗಳ ಬೆಲೆಯನ್ನು ಇಳಿಕೆ ಮಾಡಿರುವುದು ಕೋಟ್ಯಂತರ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

medicines

“ಸಾರ್ವಜನಿಕರಿಗೆ ಅನುಕೂಲವಾಗುವ ಔಷಧಗಳ ಬೆಲೆಯನ್ನು ಇಳಿಕೆ ಮಾಡಲಾಗಿದೆ. ಬೆಲೆ ಇಳಿಕೆಯು ಒಂದು ನಿಯಮಿತ ಪ್ರಕ್ರಿಯೆಯಾಗಿದ್ದು, ಪ್ರಾಧಿಕಾರವು ಅದನ್ನು ಅನುಸರಿಸಿದೆ” ಎಂದು ಎನ್‌ಪಿಪಿಎ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ರಕ್ತದ ಗ್ಲುಕೋಸ್‌ ಕಡಿಮೆಯಾದಾಗ ಬಳಿಸುವ Dapagliflozin Metformin Hydrochlorideಗೆ ಮೊದಲು 30 ರೂ. ಇತ್ತು. ಈಗ ಅದಕ್ಕೆ 16 ರೂ. ನಿಗದಿಪಡಿಸಲಾಗಿದೆ. ಅಸ್ತಮಾ ಹಾಗೂ ಶ್ವಾಸಕೋಶದ ಸಮಸ್ಯೆ ಇದ್ದವರು ತೆಗೆದುಕೊಳ್ಳವ ಬ್ಯೂಡ್‌ಸೊನೈಡ್‌ ಹಾಗೂ ಫಾರ್ಮೊಟೆರೋಲ್‌ನ ಒಂದು ಡೋಸ್‌ ಬೆಲೆಯನ್ನು 6.62 ರೂ.ಗೆ ಇಳಿಕೆ ಮಾಡಲಾಗಿದೆ.

ಕೆಲ ತಿಂಗಳ ಹಿಂದಷ್ಟೇ, ಔಷಧಗಳ ಬೆಲೆಯೇರಿಕೆ ಕುರಿತು ವದಂತಿಗಳು ಹರಡಿದ್ದವು. ಆದರೆ, ಕೇಂದ್ರ ಸರ್ಕಾರವು ಇದನ್ನು ಅಲ್ಲಗಳೆದಿತ್ತು. “ಏಪ್ರಿಲ್‌ 1ರಿಂದ 500ಕ್ಕೂ ಅಧಿಕ ಔಷಧಗಳ ಬೆಲೆಯಲ್ಲಿ ಶೇ.12ರಷ್ಟು ಬೆಲೆ ಏರಿಕೆಯಾಗಿದೆ ಎಂಬ ವದಂತಿಗಳು, ವರದಿಗಳು ಸತ್ಯಕ್ಕೆ ದೂರವಾಗಿವೆ. ಜನರ ಹಾದಿ ತಪ್ಪಿಸಲು ಇಂತಹ ವರದಿಗಳನ್ನು ಪಸರಿಸಲಾಗಿದೆ. ರಾಷ್ಟ್ರೀಯ ಔಷಧ ಬೆಲೆ ಪ್ರಾಧಿಕಾರವು ಸಗಟು ಬೆಲೆ ಸೂಚ್ಯಂಕದ ಆಧಾರದ ಬೆಲೆ ಏರಿಕೆ ಮಾಡುತ್ತದೆ. ಆದರೆ, 782 ಔಷಧಗಳ ಬೆಲೆಯಲ್ಲಿ ಯಾವುದೇ ಏರಿಕೆಯಾಗಿಲ್ಲ. ಇನ್ನು ಸುಮಾರು 54 ಔಷಧಗಳ ಬೆಲೆಯು ಒಂದು ಪೈಸೆ ಮಾತ್ರ ಏರಿಕೆಯಾಗಿದೆ” ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿತ್ತು. ಇದರ ಬೆನ್ನಲ್ಲೇ, ಅಗತ್ಯ ಔಷಧಗಳ ಬೆಲೆಯನ್ನು ಕೇಂದ್ರ ಸರ್ಕಾರ ಇಳಿಕೆ ಮಾಡಿದೆ.

ಇದನ್ನೂ ಓದಿ: Jan Aushadhi: ಪ್ರಯಾಣಿಕರಿಗೆ ಗುಡ್‌ ನ್ಯೂಸ್; ರೈಲು ನಿಲ್ದಾಣಗಳಲ್ಲೂ ಸಿಗಲಿವೆ ಕಡಿಮೆ ಬೆಲೆಗೆ ಔಷಧ!

Continue Reading

ಕ್ರೈಂ

Belagavi News: ರೈಲಲ್ಲಿ ಟಿಕೆಟ್‌ ತೋರಿಸು ಎಂದಿದ್ದಕ್ಕೆ ಟಿಸಿ ಸೇರಿ ನಾಲ್ವರಿಗೆ ಚಾಕು ಇರಿದ ಮುಸುಕುಧಾರಿ; ಒಬ್ಬ ಸಾವು, ನಾಲ್ವರು ಗಂಭೀರ

Belagavi News: ಖಾನಾಪುರ ತಾಲೂಕಿನ ಲೋಂಡಾಕ್ಕೆ ರೈಲು ಬರುತ್ತಿದ್ದಂತೆ ಟಿಸಿ ಎಲ್ಲರ ಬಳಿ ಟಿಕೆಟ್‌ ಚೆಕ್‌ ಮಾಡುತ್ತಿದ್ದರು. ಅದರಂತೆ ಈ ದುಷ್ಕರ್ಮಿಯ ಬಳಿಯೂ ಟಿಕೆಟ್‌ ಕೇಳಿದ್ದಾರೆ. ಆದರೆ, ಆತ ಸರಿಯಾಗಿ ಸ್ಪಂದಿಸಲಿಲ್ಲ. ಬಳಿಕ ಜೋರಾಗಿ ಕೇಳಿದಾಗ ಆತ ಚೂರಿಯಿಂದ ಇರಿದು, ಹಲ್ಲೆ ನಡೆಸಲು ಮುಂದಾಗಿದ್ದಾನೆ. ಆಗ ಟಿಸಿ ಜೋರಾಗಿ ಕೂಗಿಕೊಂಡಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ದೇವ ಋಷಿ ವರ್ಮಾ ಹಾಗೂ ಸಹ ಪ್ರಯಾಣಿಕರು ರಕ್ಷಣೆಗೆಂದು ದಾವಿಸಿದ್ದಾರೆ. ಆಗ ಅವರ ಮೇಲೆಯೂ ಮುಸುಕುಧಾರಿ ದುಷ್ಕರ್ಮಿ ದಾಳಿ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ.

VISTARANEWS.COM


on

Belagavi News Masked man stabs TC and four others for asking them to show tickets on train
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಲಬದಿ ಮೃತ ದೇವ ಋಷಿ ವರ್ಮಾ.
Koo

ಬೆಳಗಾವಿ (Belagavi News): ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಲೋಂಡಾಕ್ಕೆ ಚಾಲುಕ್ಯ ಎಕ್ಸ್‌ಪ್ರೆಸ್‌ ರೈಲು (Chalukya Express Train) ಬಂದಿದ್ದ ವೇಳೆ ಟಿಕೆಟ್‌ ತೋರಿಸಿ ಎಂದು ಟಿಸಿ ಕೇಳಿದರು ಎಂಬ ಕಾರಣಕ್ಕಾಗಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿ ವ್ಯಕ್ತಿಯೊಬ್ಬ ಚಾಕುವಿನಿಂದ ಮಾರಣಾಂತಿಕವಾಗಿ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ಕಾರ್ಮಿಕರೊಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಟಿಕೆಟ್ ಕಲೆಕ್ಟರ್‌ ಅಶ್ರಫ್‌ ಅಲಿ ಕಿತ್ತೂರು ಸೇರಿ ನಾಲ್ವರ ಮೇಲೆ ಹಲ್ಲೆ ನಡೆಸಲಾಗಿದೆ. ರೈಲು ಸಂಖ್ಯೆ 11006 ಚಾಲುಕ್ಯ ಎಕ್ಸ್‌ಪ್ರೆಸ್‌ನಲ್ಲಿ ಘಟನೆ ನಡೆಸಿದ್ದು, ಹಲ್ಲೆಗೊಳಗಾಗಿದ್ದ ಉತ್ತರ ಭಾರತ ಮೂಲದ ದೇವ ಋಷಿ ವರ್ಮಾ (23) ಮೃತಪಟ್ಟಿದ್ದಾರೆ. ಇವರು ಟ್ರೈನ್‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದರು. ಟಿಕೆಟ್‌ ಕಲೆಕ್ಟರ್‌ ಮೇಲೆ ನಡೆಯುತ್ತಿದ್ದ ಹಲ್ಲೆಯನ್ನು ತಡೆಯಲು ಹೋದ ಸಂದರ್ಭದಲ್ಲಿ ದುಷ್ಕರ್ಮಿಯು ಚಾಕುವಿನಿಂದ ಇರಿದಿದ್ದಾನೆ. ಪಾಂಡಿಚೇರಿ – ಮುಂಬೈ ಮಾರ್ಗದ ಚಾಲುಕ್ಯ ಎಕ್ಸ್‌ಪ್ರೆಸ್‌ನ ಎಸ್ 8 ಬೋಗಿಯಲ್ಲಿ ಈ ಘಟನೆ ನಡೆದಿದೆ.

ಆರೋಪಿ ಪರಾರಿ

ಖಾನಾಪುರ ತಾಲೂಕಿನ ಲೋಂಡಾಕ್ಕೆ ರೈಲು ಬರುತ್ತಿದ್ದಂತೆ ಟಿಸಿ ಎಲ್ಲರ ಬಳಿ ಟಿಕೆಟ್‌ ಚೆಕ್‌ ಮಾಡುತ್ತಿದ್ದರು. ಅದರಂತೆ ಈ ದುಷ್ಕರ್ಮಿಯ ಬಳಿಯೂ ಟಿಕೆಟ್‌ ಕೇಳಿದ್ದಾರೆ. ಆದರೆ, ಆತ ಸರಿಯಾಗಿ ಸ್ಪಂದಿಸಲಿಲ್ಲ. ಬಳಿಕ ಜೋರಾಗಿ ಕೇಳಿದಾಗ ಆತ ಚೂರಿಯಿಂದ ಇರಿದು, ಹಲ್ಲೆ ನಡೆಸಲು ಮುಂದಾಗಿದ್ದಾನೆ. ಆಗ ಟಿಸಿ ಜೋರಾಗಿ ಕೂಗಿಕೊಂಡಿದ್ದಾರೆ. ಈ ವೇಳೆ ಅಲ್ಲಿಯೇ ಇದ್ದ ದೇವ ಋಷಿ ವರ್ಮಾ ಹಾಗೂ ಸಹ ಪ್ರಯಾಣಿಕರು ರಕ್ಷಣೆಗೆಂದು ದಾವಿಸಿದ್ದಾರೆ. ಆಗ ಅವರ ಮೇಲೆಯೂ ಮುಸುಕುಧಾರಿ ದುಷ್ಕರ್ಮಿ ದಾಳಿ ಮಾಡಿ ಅಲ್ಲಿಂದ ಪರಾರಿಯಾಗಿದ್ದಾನೆ.

ಹಲ್ಲೆಗೊಳಗಾದವರಲ್ಲಿ ದೇವ ಋಷಿ ವರ್ಮಾ ಮೃತಪಟ್ಟರೆ, ಟಿಸಿ ಸೇರಿ ಉಳಿದ ಮೂವರು ಸಹ ಪ್ರಯಾಣಿಕರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಸದ್ಯ ನಾಲ್ವರು ಗಾಯಾಳುಗಳಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ತೀವ್ರ ನಿಗಾ ಘಟಕದಲ್ಲಿ (ICU) ಇರಿಸಲಾಗಿದೆ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಮಧ್ಯಂತರ ಜಾಮೀನು (Bail) ನೀಡಲಾಗಿದ್ದು, ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿದೆ. ಹೀಗಾಗಿ ರೇವಣ್ಣ ಅವರು ಇನ್ನೂ ನಿಟ್ಟುಸಿರು ಬಿಡುವಂತೆ ಇಲ್ಲ. ನಾಳೆ ಕೋರ್ಟ್‌ ಯಾವ ನಿರ್ಧಾರವನ್ನು ಪ್ರಕಟಿಸಲಿದೆ ಎಂಬುದರ ಮೇಲೆ ಜೈಲಾ? ಎಸ್‌ಐಟಿ ವಶವೇ? ಅಥವಾ ಜಾಮೀನಾ ಎಂಬುದು ನಿರ್ಧಾರ ಆಗಲಿದೆ.

ಎಚ್‌.ಡಿ. ರೇವಣ್ಣ ಅವರು ಇಂದು ಬೆಳಗ್ಗಿನಿಂದ ಟೆಂಪಲ್ ರನ್‌ ನಡೆಸಿದರು. ಬಳಿಕ ಇನ್ನೊಂದು ಪ್ರಕರಣದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರಾದರು. ಈಗಾಗಲೇ ಮೈಸೂರಿನ ಸಂತ್ರಸ್ತೆಯ ಕಿಡ್ನ್ಯಾಪ್‌ (kidnap case) ಪ್ರಕರಣದಲ್ಲಿ ಅವರು ಜಾಮೀನು ಪಡೆದಿದ್ದಾರೆ. ಈಗ ಹೊಳೆನರಸೀಪುರದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕಿದ್ದು, ಶುಕ್ರವಾರದ ಆದೇಶದ ಮೇಲೆ ಎಲ್ಲವೂ ನಿಂತಿದೆ. ಈಗ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ಕೋರ್ಟ್‌ ಸೂಚನೆ ನೀಡಿದೆ.

ವಾದ – ಪ್ರತಿವಾದ

ಗುರುವಾರ (ಮೇ 16) ಬೆಳಗ್ಗೆ 42ನೇ ಎಸಿಎಂಎಂ ಕೋರ್ಟ್‌ನಲ್ಲಿ ಜಾಮೀನು ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಾಲಯವು ಎಚ್.ಡಿ. ರೇವಣ್ಣ ಪರ ವಕೀಲರ ವಾದವನ್ನು ಆಲಿಸಿದರು. ಬಳಿಕ ಎಸ್ಐಟಿ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸಲು‌ ಸೂಚಿಸಿದ ನ್ಯಾಯಾಧೀಶೆ ಪ್ರೀತ್ ಜೆ. ವಿಚಾರಣೆಯನ್ನು ಕೆಲ ಕಾಲ ಮುಂದೂಡಿದ್ದರು.

ಜಾಮೀನು ನೀಡದಂತೆ ಜಯ್ನಾ ಕೊಠಾರಿ ಮನವಿ

ಈ ವೇಳೆ ಎಸ್‌ಐಟಿ ಪರ ವಾದ ಮಂಡಿಸಿದ ಎಸ್‌ಪಿಪಿ ಜಯ್ನಾ ಕೊಠಾರಿ, ಎಚ್.‌ ಡಿ. ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದು ಎಂದು ಮನವಿ ಮಾಡಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರೇವಣ್ಣ ಪರ ವಕೀಲ, ಈ ಕೇಸ್‌ನಲ್ಲಿ ನಾನ್ ಬೇಲಬಲ್‌ ಸೆಕ್ಷನ್ ಇಲ್ಲ. ಹೀಗಾಗಿ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು.

ಆಗ ಮಧ್ಯಪ್ರವೇಶ ಮಾಡಿದ ಜಡ್ಜ್‌, ಎಸ್ಐಟಿ ವಾದಕ್ಕೂ ಅವಕಾಶ ನೀಡೋಣ ಎಂದು ಹೇಳಿ ಆಕ್ಷೇಪಣೆ ಸಲ್ಲಿಸಲು ಎಸ್‌ಐಟಿ ಪರ ವಕೀಲರಿಗೆ ಸೂಚಿಸಿದರು.

ಮಧ್ಯಾಹ್ನದ ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ, ಎಸ್‌ಪಿಪಿ ಜಯ್ನಾ ಕೊಠಾರಿ ವಾದ ಮಂಡನೆ ಆರಂಭಿಸಿದರು. ಈ ವೇಲೆ ಎಚ್.ಡಿ. ರೇವಣ್ಣ ಪರ ವಕೀಲರು ಮಧ್ಯ ಪ್ರವೇಶ ಮಾಡಿ, ಸೀನಿಯರ್ ವಕೀಲರು ಬರ್ತಾರೆ. ಹೀಗಾಗಿ ನಾಳೆಯವರೆಗೂ (ಮೇ 17) ಸಮಯ ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಜಯ್ನಾ ಕೊಠಾರಿ ಆಕ್ಷೇಪ ವ್ಯಕ್ತಪಡಿಸಿ, ಹೊಳೆನರಸೀಪುರ ಕೇಸಲ್ಲಿ ವಿಚಾರಣೆಗೆ ಬರುವುದಾಗಿ ಹೇಳಿದ್ದಾರೆ. ಇನ್ನೂ ವಿಚಾರಣೆಗೆ ಬಂದಿಲ್ಲ. ಈಗಲೇ ವಿಚಾರಣೆ ನಡೆಯಲಿ. ಅಥವಾ ಆರೋಪಿ ರೇವಣ್ಣ ಅವರನ್ನು ಪೊಲೀಸರ ವಶಕ್ಕೆ ನೀಡಬೇಕು. ಇದೇ ಪ್ರಕರಣ ಆರೋಪಿ ವಿಚಾರಣೆಗೆ ಹಾಜರಾಗಿಲ್ಲ. ಮತ್ತೊಬ್ಬ ಆರೋಪಿ ದೇಶ ಬಿಟ್ಟು ಹೋಗಿದ್ದಾರೆ. ಹೀಗಾಗಿ ಸಮಯ ನೀಡಬಾರದು. ಇಂದೇ ವಿಚಾರಣೆ ನಡೆಸಿ ಆದೇಶ ನೀಡಿ ಅಥವಾ ಪೊಲೀಸರ ವಶಕ್ಕೆ ನೀಡಬೇಕು ಎಂದು ವಾದಿಸಿದರು.

ಇದಕ್ಕೆ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್, ಎಚ್.ಡಿ. ರೇವಣ್ಣ ವಿರುದ್ಧ ಯಾವುದೇ ನಾನ್ ಬೇಲೆಬಲ್ ಸೆಕ್ಷನ್ ಇಲ್ಲ. ಜಾಮೀನು ನೀಡುವಂತಹ ಸೆಕ್ಷನ್‌ಗಳು ಇವೆ ಎಂದು ಹೇಳಿದರು. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್‌ಪಿಪಿ ಜಯ್ನಾ ಕೋಠಾರಿ, ಆರೋಪಿಯು ಪೊಲೀಸರ ಮುಂದೆ ಶರಣಾಗಲಿ ಅಥವಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿ. ಆರೋಪಿ ತುಂಬಾ ಪ್ರಭಾವಿ ಆಗಿದ್ದಾರೆ. ಹೀಗಾಗಿ ಆರೋಪಿಯೇ ಸ್ವ – ಇಚ್ಛೆಯಿಂದ ಬಂದು ಶರಣಾಗಲಿ ಎಂದು ವಾದಿಸಿದರು.

ಆಗ ಪ್ರತಿವಾದ ಮಂಡಿಸಿದ ರೇವಣ್ಣ ಪರ ವಕೀಲ ಅರುಣ್‌, ನಾನ್ ಬೇಲೆಬಲ್ ಸೆಕ್ಷನ್ ಪ್ರಕರಣದಲ್ಲಿ ಸರ್ಕಾರದ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರವೇ ಇಲ್ಲ. ಎಸ್‌ಪಿಪಿಗೆ ಆಕ್ಷೇಪಣೆ ಸಲ್ಲಿಸುವ ಅಧಿಕಾರ ಇದೆಯೇ ಎಂಬುದು ಮೊದಲು ನಿರ್ಧಾರ ಆಗಲಿ. ಇನ್ನು ಈಗಾಗಲೇ ಎಚ್.ಡಿ. ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಆಗಲೇ ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಬಹುದಿತ್ತು. ಈಗ ಎಸ್ಐಟಿ ಕಸ್ಟಡಿಗೆ ಕೇಳುತ್ತಿರುವುದು ಸರಿಯಲ್ಲ ಎಂದು ಹೇಳಿದರು.

ಇದನ್ನೂ ಓದಿ: Prajwal Revanna Case: ಹಾಸನ, ಬೆಂಗಳೂರು ದಾಳಿ ವೇಳೆ ಸಿಕ್ಕ ಪೆನ್‌ಡ್ರೈವ್‌, ಹಾರ್ಡ್‌ ಡಿಸ್ಕ್‌ ಎಷ್ಟು? ಎಫ್‌ಎಸ್‌ಎಲ್‌ಗೆ ರವಾನೆ

ರೇವಣ್ಣ ಹಾಜರಾಗಲು ಜಡ್ಜ್‌ ಸೂಚನೆ

ಪುನಃ ವಾದ ಮಂಡಿಸಿದ ಜಯ್ನಾ ಕೊಠಾರಿ, ಆರೋಪಿ ಬೆಳಗ್ಗೆ ಶರಣಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈಗ ಕೋರ್ಟ್‌ಗೆ ಶರಣಾಗಲು ಸಿದ್ಧರಿಲ್ಲ. ಸದ್ಯ ಇಲ್ಲೇ ಎಲ್ಲಿಯೋ ಕಾರಿನಲ್ಲಿ ಕುಳಿತಿರಬಹುದು ಎಂದು ಹೇಳಿದರು. ಈ ವೇಳೆ ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದರು. ಬಳಿಕ ವಿಚಾರಣೆ ಆರಂಭವಾಗುತ್ತಿದ್ದಂತೆ ಎಚ್‌.ಡಿ. ರೇವಣ್ಣ ನ್ಯಾಯಾಲಯಕ್ಕೆ ಹಾಜರಾಗಿದ್ದರು.

Continue Reading

ಪ್ರಮುಖ ಸುದ್ದಿ

Car Care Tips : ನಿಮ್ಮ ಕಾರಿನ ಈ ಬಿಡಿಭಾಗಗಳಿಗೂ ಇವೆ ಎಕ್ಸ್​ಪೈರಿ ಡೇಟ್​​; ಅವುಗಳು ಯಾವವು ಎಂಬುದು ತಿಳಿದಿರಲಿ

Car Care Tips: ಕಾರು ಅಥವಾ ಇನ್ಯಾವುದೇ ವಾಹನವನ್ನು ಸರಿಯಾಗಿ ಮೆಂಟೇನ್​ ಅದು ಕೆಲಸ ಮಾಡುತ್ತಲೇ ಇರುತ್ತದೆ ಎಂಬುದು ಒಂದು ನಂಬಿಕೆ. ಆದರೆ ಅವಧಿ ಮುಗಿದ ಬಿಡಿಭಾಗಗಳನ್ನು ಹೊಂದಿರುವ ಕಾರನ್ನು ಓಡಿಸುವುದು ಖಂಡಿತವಾಗಿಯೂ ಅಪಾಯಕಾರಿ. ಹೀಗಾಗಿ ಬಿಡಿಭಾಗಗಳು ಏನೂ ಆಗಿಲ್ಲ. ಸರಿಪಡಿಸಬೇಡ ಎಂಬ ಮನಸ್ಥಿತಿಯಿಂದ ಹೊರಕ್ಕೆ ಬರಲೇಬೇಕು.

VISTARANEWS.COM


on

Car Care tips
Koo

ಬೆಂಗಳೂರು: ಕೆಲವರಿಗೆ ಈ ಅಭ್ಯಾಸ ಇಲ್ಲ ಹಾಗೂ ಇನ್ನೂ ಕೆಲವರು ಈ ವಿಷಯದ ಬಗ್ಗೆ ನಿಧಾನವಾಗಿ ಜಾಗೃತರಾಗುತ್ತಿದ್ದಾರೆ. ಅದೇನೆಂದರೆ ವಸ್ತುಗಳ ಎಕ್ಸ್​ಪೈರಿ ಡೇಟ್​ (Expiry Date) ಪರಿಶೀಲನೆ ಮಾಡುವುದು. ಅಂದರೆ ತಾವು ಖರೀದಿಸುವ ಯಾವುದೇ ವಸ್ತುವಿನ ಉತ್ಪಾದನಾ ಮತ್ತು ಮುಕ್ತಾಯ ದಿನಾಂಕವನ್ನು ಪರಿಶೀಲಿಸುವುದು. ಸಾಕಷ್ಟು ಮಂದಿ ಮನೆಗೆ ತರುವ ದೀನಸಿ ವಸ್ತುಗಳಿಗೆ ಮಾತ್ರ ಇದು ಸೀಮಿತ ಎಂದು ನಂಬಿ ದ್ದಾರೆ. ಆದರೆ, ಉತ್ಪಾದನಾ ಘಟಕವೊಂದರಲ್ಲಿ ತಯಾರಾಗುವ ಎಲ್ಲ ವಸ್ತುಗಳಿಗೂ ಎಕ್ಸ್​ಪೈರಿ ಡೇಟ್​ ಇರುತ್ತದೆ. ಹೀಗಾಗಿ ಈ ಸಲಹೆಯು ಕಾರಿನ ಬಿಡಿ ಭಾಗಗಳು ಮತ್ತು ಪರಿಕರಗಳಿಗೂ ಅನ್ವಯಿಸುತ್ತದೆ ಎಂದು ಮತ್ತೊಮ್ಮೆ ಹೇಳಬೇಕಾಗಿಲ್ಲ. ಆದರೆ, ಬಹುತೇಕ ಕಾರು ಮಾಲೀಕರು ಈ ಬಗ್ಗೆ ಜಾಗೃತವಾಗಿಲ್ಲ. ಕೆಟ್ಟು ಕಳಚಿ ಬಿದ್ದ ಮೇಲೆ ಮಾತ್ರ ಸರಿಪಡಿಸುತ್ತಾರೆ. (Car Care Tips) ಇದು ಸರಿಯಾದ ಅಭ್ಯಾಸವಲ್ಲ ಎಂಬುದು ಸತ್ಯ.

ಕಾರು ಅಥವಾ ಇನ್ಯಾವುದೇ ವಾಹನವನ್ನು ಸರಿಯಾಗಿ ಮೆಂಟೇನ್​ ಆದರೆ ಅದು ಕೆಲಸ ಮಾಡುತ್ತಲೇ ಇರುತ್ತದೆ ಎಂಬುದು ಒಂದು ನಂಬಿಕೆ. ಆದರೆ ಅವಧಿ ಮುಗಿದ ಬಿಡಿಭಾಗಗಳನ್ನು ಹೊಂದಿರುವ ಕಾರನ್ನು ಓಡಿಸುವುದು ಖಂಡಿತವಾಗಿಯೂ ಅಪಾಯಕಾರಿ. ಹೀಗಾಗಿ ‘ಬಿಡಿಭಾಗಗಳು ಏನೂ ಆಗಿಲ್ಲ. ಸರಿಪಡಿಸಬೇಡ’ ಎಂಬ ಮನಸ್ಥಿತಿಯಿಂದ ಹೊರಕ್ಕೆ ಬರಲೇಬೇಕು. ಯಾಕೆಂದರೆ ಒಂದು ಭಾಗಕ್ಕೆ ಆಗಿರುವ ಹಾನಿಯು ವಾಹನದ ಸಂಪೂರ್ಣ ದಕ್ಷತೆಯನ್ನು ಹಾಳು ಮಾಡುವ ಜತೆಗೆ ಪ್ರಯಾಣವನ್ನು ಅಪಾಯಕ್ಕೆ ತಳ್ಳಬಹುದು. ಹೀಗಾಗಿ ನಿಮ್ಮ ಕಾರಿನಲ್ಲಿ ಯಾವೆಲ್ಲ ವಸ್ತುಗಳನ್ನು ಅವಧಿ ಮುಗಿದ ತಕ್ಷಣ ಬದಲಾಯಿಸಬೇಕು ಎಂಬುದನ್ನು ಈ ಕೆಳಗೆ ತಿಳಿಸಿಕೊಡಲಾಗಿದೆ.

ಎಂಜಿನ್ ಆಯಿಲ್​

ಎಂಜಿನ್ ಆಯಿಲ್ ಎಂಜಿನ್​ ಒಳಗಿನ ಘರ್ಷಣೆಯನ್ನು ನಿಯಂತ್ರಿಸುವ ಬಹುಮುಖ್ಯ ದ್ರಾವಣ. 12ರಿಂದ 18 ತಿಂಗಳ ಒಳಗೆ ಎಂಜಿನ್ ಆಯಿಲ್ ಬದಲಾಯಿಸಬೇಕು ಹಾಗೂ ಬಳಸಲು ಶುರು ಮಾಡಿದ ಮೇಲೆ ಅದರ ಅವಧಿ ಮುಕ್ತಾಯಗೊಳ್ಳುತ್ತದೆ. ಅಥವಾ 10,000 ಕಿ.ಮೀ.ಗೆ ಬದಲಾವಣೆ ಮಾಡಲೇಬೇಕು. ಕೆಲವರು ಇದನ್ನು ನಿರ್ಲಕ್ಷ್ಯ ಮಾಡುತ್ತಾರೆ. ಸರ್ವಿಸ್​ ಮಾಡಿದಾಗ ಮಾಡಿದರಾಯ್ತು ಎಂದು ಅಂದುಕೊಳ್ಳುತ್ತಾರೆ. ಇದು ಎಂಜಿನ್​ ಒಳಗಿನ ಭಾಗಗಳ ಸವೆತ ಹಾಗೂ ಮುರಿತಕ್ಕೆ ಕಾರಣವಾಗುತ್ತದೆ.

ಬ್ರೇಕ್ ಆಯಿಲ್

ಕಾರಿನಲ್ಲಿ ಸುರಕ್ಷತೆ ಎಂದರೆ ಮೊದಲು ಬರುವುದು ಸೂಕ್ತವಾಗಿ ಕಾರ್ಯನಿರ್ವಹಿಸುವ ಬ್ರೇಕಿಂಗ್ ಸಿಸ್ಟಮ್​. ಬ್ರೇಕ್​ ವ್ಯವಸ್ಥೆಯಲ್ಲಿ ಬ್ರೇಕ್​ ಆಯಿಲ್​ ಕೆಲಸ ದೊಡ್ಡದು.. ಪ್ರತಿ 10,000 ಕಿ.ಮೀಗೆ ಬ್ರೇಕ್ ಆಯಿಲ್ ಬಾಳಿಕೆ ಮುಗಿಯುತ್ತದೆ. ಹೀಗಾಗಿ ಪ್ರತಿ ಮೂರು ವರ್ಷಗಳಿಗೊಮ್ಮೆ ಬ್ರೇಕ್ ಆಯಿಲ್ ಅನ್ನು ಸಂಪೂರ್ಣವಾಗಿ ಬದಲಾಯಿಸಬೇಕು. ಆಯಿಲ್ ದಪ್ಪವಾದರೆ ಬ್ರೇಕಿಂಗ್ ದಕ್ಷತೆ ಇಳಿಯುತ್ತದೆ.

ಎಸಿ ರೆಫ್ರಿಜರೇಟರ್ ರೀಫಿಲ್​

ಎಸಿ ರೆಫ್ರಿಜರೇಟರ್ ಗ್ಯಾಸ್​ ರಿಫಿಲ್ ಮಾಡುವ ಕೆಲಸವನ್ನು ಕಾಲಕಾಲಕ್ಕೆ ಮಾಡಬೇಕು. ಎಸಿ ವೆಂಟ್ ಗಳಿಂದ ಹೊರಬರುವ ಗಾಳಿಯು ಸಾಕಷ್ಟು ತಂಪಾಗಿಲ್ಲದಿದ್ದರೆ ವಾಹನದಲ್ಲಿನ ಹವಾನಿಯಂತ್ರಣ ವ್ಯವಸ್ಥೆ ಸರಿಯಿಲ್ಲ ಎಂದು ಅರ್ಥ. ಫಿಲ್ಟರ್ ಜತೆಗೆ ಎಸಿ ಗ್ಯಾಸ್​ ನ ಬಾಳಿಕೆಯೂ ಮುಗಿದಿದೆ ಎಂದರ್ಥ. ಹೀಗಾಗಿ ಅದನ್ನು ಅವಧಿ ಮುಗಿದಾಗ ಬದಲಾಯಿಸಬೇಕು.

ಟೈರ್ ಗಳು

ಕಾರನ್ನು ಓಡಿಸಿಲ್ಲ ಮತ್ತು ಸವೆದಿಲ್ಲ ಎಂದ ತಕ್ಷಣ ಕಾರಿನ ಟೈರಿನ ಬಾಳಿಕೆ ಮುಗಿದಿಲ್ಲ ಎಂದರ್ಥವಲ್ಲ. ಯಾಕೆಂದರೆ ಅದಕ್ಕೂ ಒಂದು ಎಕ್ಸ್​ಪಯರೀ ಡೇಟ್​ ಇದೆ. ಮೊದಲಾಗಿ 3 ಎಂಎಂಗಿಂತ ಕಡಿಮೆ ಥ್ರೆಡ್​ ಇದ್ದರೆ ಸವೆದಿದೆ ಎಂದರ್ಥ. ಆದರೆ, ಟೈರ್​ನ ಮೇಲೆ ಬರೆದಿರುವ ಎಕ್ಸ್​ಪಯರೀ ಡೇಟ್​ ಪರಿಶೀಲನೆ ಮಾಡಲೇಬೇಕು. ಹೊರ ಅಂಚಿ ಉತ್ಪಾದನಾ ವಾರ ಮತ್ತು ಉತ್ಪಾದನೆಯ ವರ್ಷವನ್ನು ಬರೆದಿರಲಾಗುತ್ತದೆ. ಉದಾಹರಣೆಗೆ ಡಾಟ್ ಸಂಖ್ಯೆ 5011 ಇದ್ದರೆ ಟೈರ್ ಅನ್ನು 2011 ರ 50 ನೇ ವಾರದಲ್ಲಿ ತಯಾರಿಸಲಾಗಿದೆ ಎಂದರ್ಥ.

ಕ್ಯಾಬಿನ್ ಏರ್ ಫಿಲ್ಟರ್

ಕ್ಯಾಬಿನ್ ಏರ್ ಫಿಲ್ಟರ್ ಕ್ಯಾಬಿನ್ ಏರ್ ಫಿಲ್ಟರ್ ಬಾಳಿಕೆ ಕಾರು ಚಾಲನೆ ಮಾಡುವ ಪ್ರದೇಶದ ಗಾಳಿಯ ಗುಣಮಟ್ಟ ಅವಲಂಬಿಸಿರುತ್ತದೆ. ಆದರೆ, ಕಾರನ್ನು 25,000 ಕಿ.ಮೀ ನಿಂದ 30,000 ಕಿ.ಮೀ ಓಡಿಸಿದ ನಂತರ ಅದನ್ನು ಬದಲಾಯಿಸಲೇಬೇಕು. ನೀವು ಡಿಫ್ರಾಸ್ಟ್ ಆನ್ ಮಾಡಿದಾಗ ಆದರೆ ಕ್ಯಾಬಿನ್ ನಲ್ಲಿ ಗಾಳಿಯ ಹರಿವು ತುಂಬಾ ದುರ್ಬಲವಾಗಿದ್ದರೆ ಬ್ಲೋವರ್ ಸ್ವಿಚ್ ಮೂಲಕ ಶಬ್ದ ಹೆಚ್ಚಾಗಿದ್ದರೆ ಫಿಲ್ಟರ್ ಬಾಳಿಕೆ ಮುಗಿದಿದೆ ಎಂದರ್ಥ.

ಏರ್ ಬ್ಯಾಗ್ ಗಳು

ಏರ್ ಬ್ಯಾಗ್ ಗಳು ಮತ್ತು ಸೀಟ್ ಟೈಟರ್ ಗಳ ಬಾಳಿಕ 10 ವರ್ಷಕ್ಕೆ ಮುಗಿಯುತ್ತದೆ. ಅದಕ್ಕಿಂತ ಹೆಚ್ಚಾಗಿ ಬೆಲ್ಟ್ ಹರಿದಿದ್ದರೆ ತಕ್ಷಣ ಬದಲಾಯಿಸಬೇಕಾಗುತ್ತದೆ.

ಪ್ರಥಮ ಚಿಕಿತ್ಸಾ ಕಿಟ್

ಪ್ರಥಮ ಚಿಕಿತ್ಸಾ ಕಿಟ್ ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಕಾರುಗಳಲ್ಲಿ ಇರುತ್ತವೆ. ಅದರು ಅಗತ್ಯ ಕೂಡ. ಆದರೆ, ಅದರಲ್ಲಿರುವ ಕೆಲವು ಮುಲಾಮುಗಳು ಮತ್ತು ಅನೇಕ ರೀತಿಯ ಡ್ರೆಸ್ಸಿಂಗ್ ವಸ್ತುಗಳು ಮುಕ್ತಾಯ ದಿನಾಂಕಗಳನ್ನು ಹೊಂದಿರುತ್ತವೆ. ಆದರೆ ಹೆಚ್ಚಿನ ಕಿಟ್​ಗಳು ಉತ್ಪಾದನೆಯ ದಿನಾಂಕದಿಂದ 3 ರಿಂದ 5 ವರ್ಷಗಳ ಜೀವಿತಾವಧಿ ಹೊಂದಿರುತ್ತವೆ.

ಇದನ್ನೂ ಓದಿ: Mahindra XUV 3XO : ಮಹೀಂದ್ರಾದ ವಿಶೇಷ ದಾಖಲೆ; 60 ನಿಮಿಷದಲ್ಲಿ 50 ಸಾವಿರ ಕಾರು ಬುಕಿಂಗ್​!

ಟೈಮಿಂಗ್ ಬೆಲ್ಟ್

ಇದು ಎಂಜಿನ್ ಒಳಗಿನ ಸಾಧನ. ಟೈಮಿಂಗ್ ಬೆಲ್ಟ್ ಬದಲಾಯಿಸುವ ಅವಧಿಯ ಅಂತರವು ಕಂಪನಿ ಮತ್ತು ಕಾರು ಮಾದರಿಯಿಂದ ಬದಲಾಗುತ್ತದೆ. ಸಾಮಾನ್ಯವಾಗಿ ಇದನ್ನು 60,000 ಮತ್ತು 80,000 ಕಿಲೋಮೀಟರ್ ನಡುವೆ ಬದಲಾಯಿಸಬೇಕು. ಕಂಪನಿ ಜತೆ ಈ ಬಗ್ಗೆ ಚರ್ಚೆ ನಡೆಸಬೇಕು. ದೋಷಯುಕ್ತ ಬೆಲ್ಟ್ ಅನ್ನು ಬಳಸಿದರೆ ಅದು ಕಾಲಾನಂತರದಲ್ಲಿ ಎಂಜಿನ್ ಹಾಳಾಗಲು ಕಾರಣವಾಗಬಹುದು.

Continue Reading
Advertisement
Pay attention to childrens safety during holidays Minister Lakshmi Hebbalkar appeals to parents
ಬೆಳಗಾವಿ1 min ago

Lakshmi Hebbalkar: ರಜೆಯಲ್ಲಿ ಮಕ್ಕಳ ಸುರಕ್ಷತೆಗೆ ಗಮನ ನೀಡಿ; ಪಾಲಕರಿಗೆ ಹೆಬ್ಬಾಳ್ಕರ್ ಮನವಿ

Four Digit PIN
ತಂತ್ರಜ್ಞಾನ13 mins ago

Four Digit PIN: ಇಂಥ ಪಿನ್ ನಂಬರ್ ಕೊಡ್ತಾ ಇದ್ದೀರಾ? ನಿಮ್ಮ ದುಡ್ಡಿಗೆ ಕಾದಿದೆ ಅಪಾಯ!

Nitish Kumar Reddy
Latest16 mins ago

Nitish Reddy : ಐಪಿಎಲ್​ನಲ್ಲಿ ಮಿಂಚಿದ ಈ ಆಟಗಾರನಿಗೆ ಎಪಿಎಲ್​ನಲ್ಲಿ ಸಿಕ್ಕಿತು ಭರ್ಜರಿ ದುಡ್ಡು

Medicine Price
ದೇಶ24 mins ago

Medicine Price: ಗುಡ್‌ ನ್ಯೂಸ್;‌ ಶುಗರ್‌, ಹೃದ್ರೋಗ ಸೇರಿ 41 ಔಷಧಗಳ ಬೆಲೆ ಇಳಿಸಿದ ಮೋದಿ ಸರ್ಕಾರ

Belagavi News Masked man stabs TC and four others for asking them to show tickets on train
ಕ್ರೈಂ27 mins ago

Belagavi News: ರೈಲಲ್ಲಿ ಟಿಕೆಟ್‌ ತೋರಿಸು ಎಂದಿದ್ದಕ್ಕೆ ಟಿಸಿ ಸೇರಿ ನಾಲ್ವರಿಗೆ ಚಾಕು ಇರಿದ ಮುಸುಕುಧಾರಿ; ಒಬ್ಬ ಸಾವು, ನಾಲ್ವರು ಗಂಭೀರ

Skin Care Tips in Kannada
ಆರೋಗ್ಯ42 mins ago

Skin Care Tips in Kannada: ಈ ಕಾರಣಕ್ಕಾಗಿ ನೀವು ಸನ್‌ಸ್ಕ್ರೀನ್‌ ಹಚ್ಚಿಕೊಳ್ಳಲೇಬೇಕು!

Car Care tips
ಪ್ರಮುಖ ಸುದ್ದಿ60 mins ago

Car Care Tips : ನಿಮ್ಮ ಕಾರಿನ ಈ ಬಿಡಿಭಾಗಗಳಿಗೂ ಇವೆ ಎಕ್ಸ್​ಪೈರಿ ಡೇಟ್​​; ಅವುಗಳು ಯಾವವು ಎಂಬುದು ತಿಳಿದಿರಲಿ

ASOS brand products are available at Reliance Retail
ದೇಶ1 hour ago

Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

OTT Release
ಒಟಿಟಿ1 hour ago

OTT Release: ಒಟಿಟಿಯಲ್ಲಿ ಈ ವಾರ ಬ್ರಿಡ್ಜರ್‌ಟನ್‌, ಬಾಹುಬಲಿ ಸರಣಿ; ಇನ್ನೂ ಏನೇನಿವೆ?

Yogendra Yadav
Lok Sabha Election 20241 hour ago

Yogendra Yadav: ಈ ಬಾರಿ ಬಿಜೆಪಿಗೆ ಬಹುಮತ ಬರಲ್ಲವೆಂದ ಯೋಗೇಂದ್ರ ಯಾದವ್; ಇವರ ಹಿಂದಿನ ಭವಿಷ್ಯ ನಿಜವಾಗಿತ್ತಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ4 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ6 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು9 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ2 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20242 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ2 days ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು2 days ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

ಟ್ರೆಂಡಿಂಗ್‌