Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ಕಂಪ್ಲೀಟ್‌ ಡಿಟೇಲ್ಸ್‌! - Vistara News

ಪ್ರಮುಖ ಸುದ್ದಿ

Virat kohli : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಕೊಹ್ಲಿ, ರೋಹಿತ್ ದಾಖಲೆಗಳ ಕಂಪ್ಲೀಟ್‌ ಡಿಟೇಲ್ಸ್‌!

Virat kohli: ಈ ಇಬ್ಬರು ಶ್ರೇಷ್ಠ ಕ್ರಿಕೆಟ್​ ಆಟಗಾರರ ನಿವೃತ್ತಿಯ ಹಿನ್ನೆಲೆಯಲ್ಲಿ ಅವರು ಟಿ20 ಕ್ರಿಕೆಟ್​ನಲ್ಲಿ ಮಾಡಿರುವ ಸಾಧನೆಗಳ ಕುರಿತ ಸಮಗ್ರ ವಿವರ ಇಲ್ಲಿ ಕೊಡಲಾಗಿದೆ. ಅವರಿಬ್ಬರು ಚುಟುಕು ಮಾದರಿಯಲ್ಲಿ ಮಾಡಿರುವ ರನ್​ಗಳು, ರೆಕಾರ್ಡ್​ಗಳು ಹಾಗೂ ಸೃಷ್ಟಿಸಿರುವ ಹೊಸ ಮಾದರಿಗಳ ಬಗ್ಗೆ ಗಮನ ಹರಿಸೋಣ.

VISTARANEWS.COM


on

Virat kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವೆಸ್ಟ್​​ ಇಂಡೀಸ್​​​ನ ಬಾರ್ಬಡೋಸ್​​ನಲ್ಲಿರುವ ಕೆನ್ಸಿಂಗ್ಟನ್ ಓವಲ್​​ನಲ್ಲಿ ಜೂನ್ 29 ರಂದು ನಡೆದ ಟಿ 20 ವಿಶ್ವಕಪ್ 2024 ರ ಫೈನಲ್​​ನಲ್ಲಿ(T20 World Cup Final ) ಭಾರತವು ದಕ್ಷಿಣ ಆಫ್ರಿಕಾವನ್ನು 7 ರನ್​ಗಳಿಂದ ಸೋಲಿಸಿ ವಿಶ್ವ ಕಪ್​ ಗೆದ್ದಿತು. ಈ ಸಂಭ್ರಮದ ನಡುವೆ ವಿರಾಟ್ ಕೊಹ್ಲಿ ಟಿ 20 ಅಂತಾರಾಷ್ಟ್ರೀಯ ಪಂದ್ಯಗಳಿಂದ ನಿವೃತ್ತಿ ಪಡೆದರು. ಸ್ವಲ್ಪ ಹೊತ್ತಿನಲ್ಲಿ ನಾಯಕ ರೋಹಿತ್ ಶರ್ಮಾ ಕೂಡ ಈ ಮಾದರಿಯಲ್ಲಿ ತಮಗಿದು ಕೊನೇ ಪಂದ್ಯ ಎಂದು ಘೋಷಿಸಿದರು. ವಿರಾಟ್​ ಕೊಹ್ಲಿ (Virat Kohli) ಟೂರ್ನಿಯಲ್ಲಿ ಪ್ರದರ್ಶನ ನೀಡಿದ್ದರು. ಆದರೆ, ನಿರ್ಣಾಯಕ ಫೈನಲ್​ನಲ್ಲಿ ಅರ್ಧಶತಕ ಬಾರಿಸಿ ಗೆಲುವಿಗೆ ಕೊಡುಗೆ ಕೊಟ್ಟರು. ಕೊಹ್ಲಿ 59 ಎಸೆತಗಳಲ್ಲಿ 76 ರನ್ ಗಳಿಸಿ ಭಾರತ ಒಟ್ಟು 176 ರನ್ ಗಳಿಸಲು ನೆರವಾದರು. ಇದೇ ವೇಳೆ ರೋಹಿತ್ ಶರ್ಮಾ ಸೂಪರ್​ 8 ಹಾಗೂ ಸೆಮಿ ಫೈನಲ್ ಪಂದ್ಯದಲ್ಲಿ ಮಿಂಚಿದ್ದರು. ಈ ಇಬ್ಬರು ದಿಗ್ಗಜರ ನಿವೃತ್ತಿ ಭಾರತ ತಂಡದ ಬಲ ಕುಗ್ಗಿಸಲಿದೆ. ಆದಾಗ್ಯೂ ಹೊಸ ಪೀಳಿಗೆಗೆ ಅವಕಾಶ ಕೊಡುವುದು ಅನಿವಾರ್ಯ.

ಈ ಇಬ್ಬರು ಶ್ರೇಷ್ಠ ಕ್ರಿಕೆಟ್​ ಆಟಗಾರರ ನಿವೃತ್ತಿಯ ಹಿನ್ನೆಲೆಯಲ್ಲಿ ಅವರು ಟಿ20 ಕ್ರಿಕೆಟ್​ನಲ್ಲಿ ಮಾಡಿರುವ ಸಾಧನೆಗಳ ಕುರಿತ ಸಮಗ್ರ ವಿವರ ಇಲ್ಲಿ ಕೊಡಲಾಗಿದೆ. ಅವರಿಬ್ಬರು ಚುಟುಕು ಮಾದರಿಯಲ್ಲಿ ಮಾಡಿರುವ ರನ್​ಗಳು, ರೆಕಾರ್ಡ್​ಗಳು ಹಾಗೂ ಸೃಷ್ಟಿಸಿರುವ ಹೊಸ ಮಾದರಿಗಳ ಬಗ್ಗೆ ಗಮನ ಹರಿಸೋಣ.

ವಿರಾಟ್ ಕೊಹ್ಲಿ

4188 ರನ್: ಕೊಹ್ಲಿ ಟಿ 20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 4188 ರನ್ ಗಳಿಸಿದ್ದಾರೆ. ಇದು ರೋಹಿತ್ ಶರ್ಮಾ ಅವರ 4231 ರನ್​ಗಳ ನಂತರ ಎರಡನೇ ಅತಿ ಹೆಚ್ಚು ಸ್ಕೋರ್​. ವಿಶೇಷವೆಂದರೆ, ಕೊಹ್ಲಿ ರೋಹಿತ್​ಗಿಂತ 34 ಕಡಿಮೆ ಇನ್ನಿಂಗ್ಸ್​​ಗಳಲ್ಲಿ ಇಷ್ಟು ಸ್ಕೋರ್ ಮಾಡಿದ್ದಾರೆ. ಕೊಹ್ಲಿ ಮತ್ತು ರೋಹಿತ್ ಇಬ್ಬರೂ ಎಲ್ಲಾ ಮೂರು ಅಂತರರಾಷ್ಟ್ರೀಯ ಕ್ರಿಕೆಟ್​ ಸ್ವರೂಪಗಳಲ್ಲಿ 4000ಕ್ಕಿಂತ ಹೆಚ್ಚು ರನ್ ಗಳಿಸಿದ ಆಟಗಾರ.

48.69 ಸರಾಸರಿ: ಟಿ20ಐನಲ್ಲಿ ಕೊಹ್ಲಿಯ ಸರಾಸರಿ 48.69 ಆಗಿದ್ದು, ಪಾಕಿಸ್ತಾನದ ಮೊಹಮ್ಮದ್ ರಿಜ್ವಾನ್ (48.72ಸರಾಸರಿ) ಅವರ ನಂತರದ ಸ್ಥಾನದಲ್ಲಿದ್ದಾರೆ.

ಪಂದ್ಯಶ್ರೇಷ್ಠ ಪ್ರಶಸ್ತಿ: ಕೊಹ್ಲಿ ಟಿ20ಐ ಮಾದರಿಯಲ್ಲಿ 16 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಇದು ಸೂರ್ಯಕುಮಾರ್ ಯಾದವ್ ಅವರಿಗಿಂತ ಒಂದು ಪ್ರಶಸ್ತಿ ಮುಂದಿದೆ. 2014, 2016ರ ಟಿ20 ವಿಶ್ವಕಪ್ ಸೇರಿದಂತೆ ಆರು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: Jasprit Bumrah : ಮಗನ ಮುಂದೆ ವಿಶ್ವ ಕಪ್​ ಗೆದ್ದಿದ್ದು ದೊಡ್ಡ ಖುಷಿ ಎಂದ ಜಸ್​ಪ್ರಿತ್​ ಬುಮ್ರಾ

ವಿಶ್ವ ಕಪ್​ ರನ್​ಗಳು: ಟಿ 20 ವಿಶ್ವಕಪ್ ಇತಿಹಾಸದಲ್ಲಿ ಕೊಹ್ಲಿ 1292 ರನ್ ಗಳಿಸಿದ್ದಾರೆ. ಇದು ಗರಿಷ್ಠ ರನ್. 2014ರ ಆವೃತ್ತಿಯಲ್ಲಿ 319 ರನ್ ಗಳಿಸುವ ಮೂಲಕ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದರು. 2022ರ ಆವೃತ್ತಿಯಲ್ಲಿ ಅವರು 296 ರನ್​ಗಳ ಸಮೇತ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರು.

ಗರಿಷ್ಠ ಸರಾಸರಿ: ಟಿ 20 ವಿಶ್ವಕಪ್​​ನಲ್ಲಿ ಕೊಹ್ಲಿಯ ಸರಾಸರಿ 58.72. ಪಂದ್ಯಾವಳಿಯಲ್ಲಿ 500ಕ್ಕಿಂತಲೂ ಹೆಚ್ಚು ರನ್ ಗಳಿಸಿದ 34 ಆಟಗಾರರಲ್ಲಿ ಇವರು ಅಗ್ರರು. ಅವರು 33 ಇನ್ನಿಂಗ್ಸ್​​ಗಳಲ್ಲಿ 15 ಬಾರಿ 50+ ರನ್ ಬಾರಿಸಿದ್ದಾರೆ. ರೋಹಿತ್​ 13 ಬಾರಿ 50ಕ್ಕಿಂತ ಹೆಚ್ಚು ಸ್ಕೋರ್​ ಮಾಡಿದ್ದಾರೆ.

ಪಂದ್ಯಶ್ರೇಷ್ಠ ಪ್ರಶಸ್ತಿಗಳು: ಟಿ 20 ವಿಶ್ವಕಪ್ ಇತಿಹಾಸದಲ್ಲಿ ಕೊಹ್ಲಿ 8 ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ ಕೊಹ್ಲಿ. ಮಹೇಲಾ ಜಯವರ್ಧನೆ, ಕ್ರಿಸ್ ಗೇಲ್, ಶೇನ್ ವ್ಯಾಟ್ಸನ್ ಮತ್ತು ಆಡಮ್ ಜಂಪಾ ಈ ಪಟ್ಟಿಯಲ್ಲಿ ಐದು ಪ್ರಶಸ್ತಿ ಗೆದ್ದಿದ್ದಾರೆ.

ಎರಡು ವಿಶ್ವ ಕಪ್​ನ ಉತ್ತಮ ಆಟಗಾರ : ಕೊಹ್ಲಿ ಟಿ20 ವಿಶ್ವ ಕಪ್​ನಲ್ಲಿ ಎರಡು ಬಾರಿ ಟೂರ್ನಿಯ ಉತ್ತಮ ಆಟಗಾರ ಪ್ರಶಸ್ತಿ ಪಡೆದಿದ್ದಾರೆ. ಈ ಸಾಧನೆ ಮಾಡಿದ ಏಕೈಕ ಆಟಗಾರ.

67.10 ಸರಾಸರಿ: ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಪಂದ್ಯದ ರನ್ ಚೇಸಿಂಗ್​​ನಲ್ಲಿ 67.10 ಸರಾಸರಿ ಹೊಂದಿದ್ದಾರೆ. ಟಿ 20 ಮಾದರಿಯಲ್ಲಿ ಚೇಸಿಂಗ್ ಮಾಡುವಾಗ ಕನಿಷ್ಠ 500 ರನ್ ಗಳಿಸಿದ ಆಟಗಾರರಲ್ಲಿ ಇದು ಗರಿಷ್ಠ. ಸೂರ್ಯಕುಮಾರ್ ಯಾದವ್ ಮಾತ್ರ ರನ್ ಚೇಸಿಂಗ್​​ನಲ್ಲಿ 50+ ಸರಾಸರಿ ಹೊಂದಿದ್ದಾರೆ.

42 ಗೆಲುವು: ಕೊಹ್ಲಿ ಆಡಿದ 52 ಟಿ 20 ಪಂದ್ಯಗಳಲ್ಲಿ ಭಾರತವು 42 ಬಾರಿ ಯಶಸ್ವಿಯಾಗಿ ರನ್​ ಚೇಸ್ ಮಾಡಿದೆ. ಕೊಹ್ಲಿ 18 ಬಾರಿ ರನ್ ಚೇಸಿಂಗ್​ನಲ್ಲಿ ಅಜೇಯರಾಗಿ ಉಳಿದಿದ್ದಾರೆ. ಭಾರತವು ಆ ಎಲ್ಲ ಪಂದ್ಯಗಳನ್ನು ಗೆದ್ದಿದೆ. ಅವರು 48 ಇನ್ನಿಂಗ್ಸ್​ಗಳಲ್ಲಿ 20 ಬಾರಿ ರನ್ ಚೇಸಿಂಗ್​​ನಲ್ಲಿ 50ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

ನಾಯಕತ್ವದ ಸಾಧನೆ: ತಂಡದ ನಾಯಕನಾಗಿ ಬ್ಯಾಟಿಂಗ್​ನಲ್ಲಿ 47.57 ಸರಾಸರಿ ಹೊಂದಿದ್ದ ಕೊಹ್ಲಿ ಸರಾಸರಿ ಕನಿಷ್ಠ 1000 ರನ್ ಗಳಿಸಿದ ಯಾವುದೇ ನಾಯಕನಿಗಿಂತ ಗರಿಷ್ಠ ಸಾಧನೆಯಾಗಿದೆ.

ಅಂಡರ್-19 ವಿಶ್ವಕಪ್ (2008), ಏಕದಿನ ವಿಶ್ವಕಪ್ (2011), ಚಾಂಪಿಯನ್ಸ್ ಟ್ರೋಫಿ (2013) ಮತ್ತು ಟಿ 20 ವಿಶ್ವಕಪ್ (2024) ಸೇರಿದಂತೆ ಎಲ್ಲಾ ನಾಲ್ಕು ಪ್ರಮುಖ ಐಸಿಸಿ ವೈಟ್ ಬಾಲ್ ಕ್ರಿಕೆಟ್​​ನ ಎಲ್ಲ ಮಾದರಿಯ ಫೈನಲ್​ ಆಡಿದ ಏಕೈಕ ಆಟಗಾರ.

ರೋಹಿತ್ ಶರ್ಮಾ

ಅತಿ ಹೆಚ್ಚು ಪಂದ್ಯಗಳು: ರೋಹಿತ್ ಶರ್ಮಾ 159 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದು ಪಟ್ಟಿಯ ಅಗ್ರಸ್ಥಾನಿ. ಐರ್ಲೆಂಡ್​ನ ಪಾಲ್ ಸ್ಟಿರ್ಲಿಂಗ್ (145) ಮತ್ತು ಜಾರ್ಜ್ ಡಾಕ್ರೆಲ್ (139) ನಂತರದಲ್ಲಿದ್ದಾರೆ. ಭಾರತದ ಮಹಿಳಾ ಟಿ20 ತಂಡದ ನಾಯಕಿ ಹರ್ಮನ್​ಪ್ರೀತ್​ ಕೌರ್ (166) ರೋಹಿತ್​ಗಿಂತ ಮುಂದಿದ್ದಾರೆ.

ಟಿ20ಐನಲ್ಲಿ 111 ಗೆಲುವುಗಳು: ರೋಹಿತ್ ಶರ್ಮಾ ಟಿ20ಐನಲ್ಲಿ 111 ಗೆಲುವುಗಳೊಂದಿಗೆ ಅತಿ ಹೆಚ್ಚು ಗೆಲುವು ಸಾಧಿಸಿದ ದಾಖಲೆ ಹೊಂದಿದ್ದಾರೆ. ಶೋಯೆಬ್ ಮಲಿಕ್ 87 ನಂತರದ ಸ್ಥಾನ ಹೊಂದಿದ್ದಾರೆ.

4231 ರನ್: ರೋಹಿತ್​ ಟಿ20 ಅಂತಾರಾಷ್ಟ್ರೀಯ ಮಾದರಿಯಲ್ಲಿ 4231 ರನ್ ಬಾರಿಸಿದ್ದಾರೆ. ಅವರು ವಿರಾಟ್ ಕೊಹ್ಲಿ (4188) ಅವರಿಗಿಂತ ಸ್ವಲ್ಪ ಮುಂದಿದ್ದಾರೆ.

ಅತಿ ಹೆಚ್ಚು ಶತಕಗಳು: ಟಿ20ಐನಲ್ಲಿ ಅತಿ ಹೆಚ್ಚು ಶತಕಗಳನ್ನು ಬಾರಿಸಿದ ಗ್ಲೆನ್ ಮ್ಯಾಕ್ಸ್ವೆಲ್ (5) ಅವರೊಂದಿಗೆ ಸ್ಥಾನ ಹಂಚಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ (4) ನಂತರದ ಸ್ಥಾನದಲ್ಲಿದ್ದಾರೆ. ಕೊಹ್ಲಿ ಮತ್ತು ಬಾಬರ್ ಅಜಮ್ (ತಲಾ 39) ನಂತರ ರೋಹಿತ್​​ 37 ಅರ್ಧಶತಕಗಳನ್ನು ಗಳಿಸಿದ್ದಾರೆ.

ಅತಿ ಹೆಚ್ಚು ಸಿಕ್ಸರ್: ರೋಹಿತ್ ಶರ್ಮಾ ಟಿ20ಐನಲ್ಲಿ 205 ಸಿಕ್ಸರ್​ಗಳನ್ನು ಬಾರಿಸಿದ್ದು, ಮಾರ್ಟಿನ್ ಗಪ್ಟಿಲ್ (173) ಅವರಿಗಿಂತ ಮುಂದಿದ್ದಾರೆ.

ದಾಖಲೆಯ ಜೊತೆಯಾಟ: 2024 ರ ಜನವರಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ ನಡೆದ ಭಾರತ ಮತ್ತು ಅಫಘಾನಿಸ್ಥಾನ ನಡುವಿನ 3ನೇ ಟಿ 20 ಪಂದ್ಯದಲ್ಲಿ ರೋಹಿತ್ ಮತ್ತು ರಿಂಕು ಸಿಂಗ್ ಐದನೇ ವಿಕೆಟ್​ಗೆ 190 ರನ್​ಗಳ ಜೊತೆಯಾಟ ಆಡಿದ್ದರು.

ನಾಯಕನಾಗಿ 50 ಗೆಲುವುಗಳು: ಟಿ 20 ಪಂದ್ಯಗಳಲ್ಲಿ 50 ಗೆಲುವುಗಳನ್ನು ಸಾಧಿಸಿದ ಮೊದಲ ನಾಯಕ ರೋಹಿತ್, (50 ಗೆಲುವು ಮತ್ತು 12 ಸೋಲು) ಪ್ರಭಾವಶಾಲಿ ಗೆಲುವು-ಸೋಲಿನ ಅನುಪಾತ ಹೊಂದಿದ್ದಾರೆ ಅವರು.

ಅತಿ ಹೆಚ್ಚು ಪಂದ್ಯಗಳು: ಟಿ 20 ವಿಶ್ವಕಪ್​​ನಲ್ಲಿ ಅತಿ ಹೆಚ್ಚು ಪಂದ್ಯಗಳನ್ನು (47) ಆಡಿದ ದಾಖಲೆಯನ್ನು ರೋಹಿತ್ ಹೊಂದಿದ್ದಾರೆ. ಶಕೀಬ್ ಅಲ್ ಹಸನ್ (43) ಅವರನ್ನು ಹಿಂದಿಕ್ಕಿದ್ದಾರೆ.

ಹಿರಿಯ ನಾಯಕ: ಹಾಲಿ ವಿಶ್ವ ಕಪ್​ನ ಕೊನೇ ಪಂದ್ಯಕ್ಕೆ 37 ವರ್ಷ 60 ದಿನಗಳಾಗಿದ್ದ ರೋಹಿತ್​, ​, ಆಸ್ಟ್ರೇಲಿಯಾದ ಆ್ಯರೋನ್ ಫಿಂಚ್ ಅವರನ್ನು ಹಿಂದಿಕ್ಕಿ ವಿಶ್ವ ಕಪ್​ನಲ್ಲಿ ತಂಡವನ್ನು ಮುನ್ನಡೆಸಿದ ಹಿರಿಯ ಆಟಗಾರ ಎನಿಸಿಕೊಂಡಿದ್ದಾರೆ.

ಎರಡು ಬಾರಿ ಟಿ20 ವಿಶ್ವಕಪ್ ಗೆದ್ದ ಏಕೈಕ ಭಾರತೀಯ: ರೋಹಿತ್ ಶರ್ಮಾ ಎರಡು ಬಾರಿ ಟಿ 20 ವಿಶ್ವಕಪ್ ಗೆದ್ದ ಏಕೈಕ ಭಾರತೀಯ ಆಟಗಾರ. 2007ರಲ್ಲೂ ಅವರು ಭಾರತ ತಂಡದಲ್ಲಿ ಆಡಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Narendra Modi: ಅಂಬೇಡ್ಕರ್‌ರನ್ನು ಷಡ್ಯಂತ್ರದಿಂದ ಸೋಲಿಸಿದ ನೆಹರೂ; ಕಾಂಗ್ರೆಸ್‌ನಿಂದ ದಲಿತರ ಶೋಷಣೆ ಎಂದ ಮೋದಿ

Narendra Modi: ಕಾಂಗ್ರೆಸ್‌ ಎಂದಿಗೂ ರಾಜಕೀಯ ಸ್ವಾರ್ಥಕ್ಕಾಗಿ ಷಡ್ಯಂತ್ರ, ಕೀಳು ರಾಜಕೀಯ ಮಾಡಿದೆ. ಇದೇ ಕಾರಣದಿಂದಾಗಿ ಸೀತಾರಾಮ್‌ ಕೇಸರಿ ಅವರಿಗೆ ಕಾಂಗ್ರೆಸ್‌ ಮೋಸ ಮಾಡಿತು. ಇತಿಹಾಸದುದ್ದಕ್ಕೂ ಕಾಂಗ್ರೆಸ್‌ ತನ್ನ ಲಾಭಕ್ಕೋಸ್ಕರ ಕೆಲಸ ಮಾಡಿತೇ ಹೊರತು, ದೇಶದ ಏಳಿಗೆಗೆ ದುಡಿಯಲಿಲ್ಲ ಎಂದು ಸಂಸತ್‌ನಲ್ಲಿ ಕಾಂಗ್ರೆಸ್‌ ವಿರುದ್ಧ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

VISTARANEWS.COM


on

Narendra Modi
Koo

ನವದೆಹಲಿ: ಸಂಸತ್ತಿನ ಕೆಳಮನೆಯಾದ ಲೋಕಸಭೆಯಲ್ಲಿ (Lok Sabha) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಷ್ಟ್ರಪತಿ ಅವರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದರು. ದೇಶದ ಅಭಿವೃದ್ಧಿ, ವಿಕಸಿತ ಭಾರತದ ಕಲ್ಪನೆಯ ಜತೆಗೆ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು. “ದೇಶದ ಮಹಾನ್‌ ವ್ಯಕ್ತಿಗಳಿಗೆ ಕಾಂಗ್ರೆಸ್‌ ಅವಮಾನ ಮಾಡಿದೆ. ಅದರಲ್ಲೂ, ಸ್ವಾತಂತ್ರ್ಯದ ಬಳಿಕ ಡಾ.ಬಿ.ಆರ್.ಅಂಬೇಡ್ಕರ್‌ ಅವರನ್ನು ಜವಾಹರ ಲಾಲ್‌ ನೆಹರು (Jawaharlal Nehru) ಅವರು ಷಡ್ಯಂತ್ರದಿಂದ ಸೋಲಿಸಿದರು” ಎಂದು ದೂರಿದರು.

“ದೇಶದ ಮಹಾನ್‌ ವ್ಯಕ್ತಿಗಳಿಗೆ, ಗಣ್ಯರಿಗೆ, ಧೀಮಂತ ನಾಯಕರಿಗೆ ಕಾಂಗ್ರೆಸ್‌ ಅವಮಾನ, ಮೋಸ ಮಾಡಿದೆ. ಅಂಬೇಡ್ಕರ್‌ ಅವರನ್ನು ಕಾಂಗ್ರೆಸ್‌ ಷಡ್ಯಂತ್ರದಿಂದ ಸೋಲಿಸಿತು. ಅಷ್ಟೇ ಅಲ್ಲ, ಜಗಜೀವನ್‌ ರಾಮ್‌ ಅವರು ಪ್ರಧಾನಿಯಾಗುವುದನ್ನು ಇಂದಿರಾ ಗಾಂಧಿ ಅವರು ತಪ್ಪಿಸಿದರು. ಜಗಜೀವನ್‌ ರಾಮ್‌ ಅವರು ಪ್ರಧಾನಿಯಾಗಬಾರದು ಎಂಬುದಾಗಿ ಇಂದಿರಾ ಗಾಂಧಿ ಅವರು ಬರೆದ ಪತ್ರದ ಬಗ್ಗೆ ಪುಸ್ತಕವೊಂದರಲ್ಲಿ ಉಲ್ಲೇಖಿಸಲಾಗಿದೆ” ಎಂದು ಮೋದಿ ತಿಳಿಸಿದರು.

“ಕಾಂಗ್ರೆಸ್‌ ಎಂದಿಗೂ ರಾಜಕೀಯ ಸ್ವಾರ್ಥಕ್ಕಾಗಿ ಷಡ್ಯಂತ್ರ, ಕೀಳು ರಾಜಕೀಯ ಮಾಡಿದೆ. ಇದೇ ಕಾರಣದಿಂದಾಗಿ ಸೀತಾರಾಮ್‌ ಕೇಸರಿ ಅವರಿಗೆ ಕಾಂಗ್ರೆಸ್‌ ಮೋಸ ಮಾಡಿತು. ಇತಿಹಾಸದುದ್ದಕ್ಕೂ ಕಾಂಗ್ರೆಸ್‌ ತನ್ನ ಲಾಭಕ್ಕೋಸ್ಕರ ಕೆಲಸ ಮಾಡಿತೇ ಹೊರತು, ದೇಶದ ಏಳಿಗೆಗೆ ದುಡಿಯಲಿಲ್ಲ. ಇದೇ ಕಾರಣಕ್ಕಾಗಿ ಕಾಂಗ್ರೆಸ್‌ ಸೈನಿಕರ ಬಗ್ಗೆಯೂ ಅನುಮಾನದಿಂದ ಮಾತನಾಡುವ ಮೂಲಕ ಯೋಧರಿಗೆ ಅವಮಾನ ಮಾಡಿದೆ” ಎಂದು ಟೀಕಿಸಿದರು.

“ದೇಶದ ಜನರು ಕಾಂಗ್ರೆಸ್‌ಗೆ ಒಂದು ಜನಾದೇಶ ನೀಡಿದ್ದಾರೆ. ನೀವು ಪ್ರತಿಪಕ್ಷದಲ್ಲಿಯೇ ಕುಳಿತುಕೊಳ್ಳಿ, ಹೀಗೆಯೇ ಗಲಾಟೆ ಮಾಡಿ, ಕಿರುಚುತ್ತಲೇ ಇರಿ ಎಂಬುದು ಜನರ ಆದೇಶವಾಗಿದೆ. ಕಾಂಗ್ರೆಸ್‌ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸತತ ಮೂರನೇ ಅವಧಿಗೆ ಕಾಂಗ್ರೆಸ್‌ 100 ಸೀಟುಗಳನ್ನು ಕೂಡ ಗೆಲ್ಲುವಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ನ ಇತಿಹಾಸದಲ್ಲಿಯೇ ಇದು ಮೂರನೇ ಅತಿ ದೊಡ್ಡ ಸೋಲಾಗಿದೆ. ಮೂರನೇ ಕಳಪೆ ಪ್ರದರ್ಶನವಾಗಿದೆ” ಎಂದು ಮೋದಿ ಗುಡುಗಿದರು.

ನೂತನ ಸಂಸದರಿಗೆ ಅಭಿನಂದನೆ

ನೂತನ ಸಂಸದರಿಗೆ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು. ಸಂಸತ್‌ಗೆ ಮೊದಲ ಬಾರಿ ಆಯ್ಕೆಯಾಗಿರುವ ನೂತನ ಸಂಸದರಿಗೆ ಅಭಿನಂದನೆಗಳು. ನೂತನ ಸಂಸದರು ಸದನದ ನಿಯಮಗಳನ್ನು, ಶಿಷ್ಟಾಚಾರಗಳನ್ನು ಅಚ್ಚುಕಟ್ಟಾಗಿ ಪಾಲಿಸುವ ಮೂಲಕ ಅನುಭವಿ ಸಂಸದರಂತೆ ವರ್ತಿಸಿರುವುದು ಉತ್ತಮ ಬೆಳವಣಿಗೆಯಾಗಿದೆ. ನೂತನ ಸಂಸದರು ಅಧಿವೇಶನದ ಚರ್ಚೆಯಲ್ಲಿ ಪಾಲ್ಗೊಂಡಿರುವುದು ಕೂಡ ಸಕಾರಾತ್ಮಕ ಸಂಗತಿಯಾಗಿದೆ.

ಇದನ್ನೂ ಓದಿ: Narendra Modi: ರಾಹುಲ್‌ ಗಾಂಧಿಯನ್ನು ‘ಬಾಲ ಬುದ್ಧಿಯವನು’‌ ಎಂದ ಮೋದಿ; ಅವರು ಹೇಳಿದ ‘ಸೈಕಲ್‌ ಕತೆ’ಯೂ ಇಲ್ಲಿದೆ!

Continue Reading

ಕರ್ನಾಟಕ

Pourakarmikas: ಪೌರ ಕಾರ್ಮಿಕರಿಗೆ ಗುಡ್‌ ನ್ಯೂಸ್; ವಾರಕ್ಕೆ ಒಂದು ದಿನ ರಜೆ ನೀಡಿದ ಸರ್ಕಾರ

Pourakarmikas: ವಾರದ ಒಂದು ದಿನ ಸಂಪೂರ್ಣ ರಜೆ ನೀಡಬೇಕು ಎಂದು ಪೌರ ಕಾರ್ಮಿಕರು ಒತ್ತಾಯಿಸುತ್ತಿದ್ದರು. ಈ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ವಾರದಲ್ಲಿ ಒಂದು ದಿನ ಸಂಪೂರ್ಣ ರಜೆಯನ್ನು ನೀಡಿ ಆದೇಶ ಹೊರಡಿಸಿದೆ.

VISTARANEWS.COM


on

Pourakarmikas
Koo

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ (Pourakarmikas) ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ.

ಈವರೆಗೆ ಪೌರಕಾರ್ಮಿಕರಿಗೆ ವಾರದಲ್ಲಿ ಎರಡು ಬಾರಿ ಅರ್ಧ ದಿನದ ರಜೆ ನೀಡಲಾಗುತ್ತಿತ್ತು. ಈಗ ನಿತ್ಯದ ಕೆಲಸಕ್ಕೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಿಕೊಂಡು ಇಡೀ ದಿನದ ರಜೆ ನೀಡಲು ಆದೇಶಿಸಲಾಗಿದೆ.

ವಾರದ ಒಂದು ದಿನ ಸಂಪೂರ್ಣ ರಜೆ ನೀಡಬೇಕು ಎಂದು ಪೌರ ಕಾರ್ಮಿಕರು ಒತ್ತಾಯಿಸುತ್ತಿದ್ದರು. ಈ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ವಾರದಲ್ಲಿ ಒಂದು ದಿನ ಸಂಪೂರ್ಣ ರಜೆಯನ್ನು ನೀಡಿ ಆದೇಶ ಹೊರಡಿಸಿದೆ.

ಇದನ್ನೂ ಓದಿ | Pawan Kalyan: ವೇತನವೇ ಬೇಡ ಎಂದ ಪವನ್‌ ಕಲ್ಯಾಣ್‌- ಮತ್ತೊಮ್ಮೆ ಗಮನ ಸೆಳೆದ ಆಂಧ್ರ ಡಿಸಿಎಂ

ಷರತ್ತುಗಳೇನು?

  • ದಿನನಿತ್ಯದ ಸ್ವಚ್ಛತಾ ಕೆಲಸ, ಕಾರ್ಯಗಳಿಗೆ ತೊಂದರೆಯಾಗದಂತೆ ಶೇ.85 ಹಾಜರಾತಿ ಖಚಿತಪಡಿಸಿಕೊಂಡು ಒಂದು ರಜೆ ನೀಡುವುದು.
  • ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಸ್ವಚ್ಛತಾ ಕಾರ್ಯಕ್ಕೆ ಈಗಾಗಲೇ ನೇಮಿಸಿರುವ ಸಿಬ್ಬಂದಿಗೆ ವಾರದ ರಜೆ ನೀಡುವ ಸಂದರ್ಭದಲ್ಲಿ ಬೇರೊಬ್ಬ ನೌಕರರನ್ನು ಆ ಕಾರ್ಯಕ್ಕೆ ನಿಯೋಜಿಸುವ ಮೇರೆಗೆ ರಜೆಯ ಅವಶ್ಯಕತೆಯಿರುವ ಪೌರಕಾರ್ಮಿಕರಿಗೆ ವಾರದಲ್ಲಿ ಒಂದು ದಿನ ರಜೆ ನೀಡಲು ಅವಕಾಶ ಕಲ್ಪಿಸಬಹುದು.
  • ವಾರದ ರಜೆಯನ್ನು ನೌಕರರು, ಪೌರ ಕಾರ್ಮಿಕರ ಹಕ್ಕು ಎಂದು ಪರಿಗಣಿಸತಕ್ಕದ್ದಲ್ಲ ಹಾಗೂ ಒಂದು ವಾರದ ಒಂದು ರಜೆಯನ್ನು ಮುಂದಿನ ವಾರಕ್ಕೆ ಹಿಂಬಾಕಿ ಎಂದು ಪರಿಗಣಿಸಿ ಸತತವಾಗಿ ರಜೆ ಪಡೆಯಲು ಅವಕಾಶವಿರುವುದಿಲ್ಲ.
  • ಪ್ರಕೃತಿ ವಿಕೋಪ, ಸ್ಥಳೀಯ ಜಾತ್ರೆ, ಸಭೆ ಸಮಾರಂಭಗಳ ವಿಶೇಷ ಸಂದರ್ಭಗಳಲ್ಲಿ ವಾರದ ರಜೆಯನ್ನು ಕಡ್ಡಾಯವಾಗಿ ನೀಡಬೇಕೆಂದು ಒತ್ತಾಯಿಸುವಂತಿಲ್ಲ ಹಾಗೂ ಈ ಸಂದರ್ಭದಲ್ಲಿ ವಾರದ ರಜೆ ನೀಡುವ ಅಧಿಕಾರ ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರ ವಿವೇಚನೆಗೆ ಒಳಪಟ್ಟಿರುತ್ತದೆ.
  • ರಜೆಯ ಮೇಲೆ ತೆರಳಿದ ನೌಕರ, ಪೌರ ಕಾರ್ಮಿಕರ ವ್ಯಾಪ್ತಿಗೆ ಸೇರಿದ ಪ್ರದೇಶದ ಸ್ವಚ್ಛತಾ ಕಾರ್ಯವನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕೆಲಸಕ್ಕೆ ಹಾಜರಾಗಿರುವ ಇತರೆ ಸಿಬ್ಬಂದಿ ಸ್ವಚ್ಛಗೊಳಿಸಬೇಕು.
  • ಪ್ರಸ್ತುತ ಪೌರ ಕಾರ್ಮಿಕರಿಗೆ ವಾರಕ್ಕೆ ಎರಡು ಬಾರಿ ಅರ್ಧ ದಿನ ರಜೆ ನೀಡಲಾಗುತ್ತಿತ್ತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಬುಧವಾರ, ಭಾನುವಾರ 11 ಗಂಟೆವರೆಗೂ ಕೆಲಸ ಆಮೇಲೆ ರಜೆ ನೀಡಲಾಗುತ್ತಿತ್ತು, ಇದೀಗ ವಾರದಲ್ಲಿ ಒಂದು ದಿನ ಪೂರ್ತಿ ರಜೆ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.
Continue Reading

ಪ್ರಮುಖ ಸುದ್ದಿ

Super Computers : ಜಾಗತಿಕ ನಾಯಕತ್ವಕ್ಕಾಗಿ ಭಾರತದಲ್ಲೇ ತಯಾರಾಗುತ್ತಿದೆ ಸೂಪರ್ ಕಂಪ್ಯೂಟರ್​

Super Computers : ಇದು ಚಿಪ್ ವಿನ್ಯಾಸದಲ್ಲಿ ಭಾರತದದ ಮಹತ್ವದ ಸಾಧನೆಯಾಗಿದೆ. ಇದು ಉನ್ನತ ಕಾರ್ಯಕ್ಷಮತೆಯ ಕಂಪ್ಯೂಟಿಂಗ್ ಕ್ಷೇತ್ರದಲ್ಲಿ ದೇಶೀಯ ಮಟ್ಟದ ಅಭಿವೃದ್ಧಿಯಲ್ಲಿ ಭಾರತದ ಸಾಮರ್ಥ್ಯ ಪ್ರದರ್ಶಿಸುತ್ತದೆ. ಉದ್ಯಮದ ಸಹಭಾಗಿತ್ವದಲ್ಲಿ ಕನ್ಸೋರ್ಟಿಯಾ ಮೋಡ್​​ನಲ್ಲಿ ಈ ಉದ್ಯಮಗಳು ಪ್ರಸ್ತುತ ಅಗತ್ಯ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವೈಜ್ಞಾನಿಕ ವಿಭಾಗಗಳ (ಎಚ್ಒಡಿ) ಮುಖ್ಯಸ್ಥ ಮುಖ್ಯಸ್ಥ ಡಾ.ಪ್ರವೀಣ್ ಕುಮಾರ್ ಎಸ್ ಅಭಿಪ್ರಾಯಪಟ್ಟಿದ್ದಾರೆ.

VISTARANEWS.COM


on

Super Computers
Koo

ಹೊಸದಿಲ್ಲಿ: ಮೇಕ್ ಇನ್ ಇಂಡಿಯಾದ ಭಾಗವಾಗಿ ಎಯುಎಂ ಎಂದು ಕರೆಯಲ್ಪಡುವ ದೇಶೀಯ ಹೈ-ಪರ್ಫಾರ್ಮೆನ್ಸ್ ಕಂಪ್ಯೂಟಿಂಗ್ (ಎಚ್​​ಪಿಸಿ) ಪ್ರೊಸೆಸರ್ ಅನ್ನು ಅಭಿವೃದ್ಧಿಪಡಿಸಲ ಕೇಂದ್ರ ಸರ್ಕಾರ ಮುಂದಾಗಿದೆ. ಈ ಮೂಲಕ ಸೂಪರ್ ಕಂಪ್ಯೂಟಿಂಗ್​ನಲ್ಲಿ (Super Computers) ಜಾಗತಿಕ ನಾಯಕನಾಗುವ ಗುರಿ ಹೊಂದಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಸ್.ಕೃಷ್ಣನ್ ಹೇಳಿದ್ದಾರೆ. ದೇಶೀಯವಾಗಿ ನಿರ್ಮಿಸಲಾಗುವ ಎಚ್​ಪಿಸಿ ಚಿಪ್​​ನ ವಿನ್ಯಾಸ ಮತ್ತು ಅಭಿವೃದ್ಧಿಗಾಗಿ ಸೆಂಟರ್ ಫಾರ್ ಡೆವಲಪ್​ಮೆಂಟ್​ ಆಫ್ ಅಡ್ವಾನ್ಸ್​ಡ್​ ಕಂಪ್ಯೂಟಿಂಗ್ (ಸಿ-ಡ್ಯಾಕ್) ಮಾಸ್ಚಿಪ್ ಟೆಕ್ನಾಲಜೀಸ್ ಮತ್ತು ಸೋಷಿಯೋನೆಕ್ಸ್ಟ್ ಇಂಕ್​ ಜತೆ ಪಾಲುದಾರಿಕೆಗಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಈ ಮಾಹಿತಿಯನ್ನು ನೀಡಿದ್ದಾರೆ.

ಎಚ್​​ಪಿಸಿ ಪ್ರೊಸೆಸರ್ ಆರ್ಮ್ ಆರ್ಕಿಟೆಕ್ಚರ್ ಅನ್ನು ಆಧರಿಸಿದೆ ಮತ್ತು ಟಿಎಸ್ ಎಂಸಿಯ (ತೈವಾನ್ ಸೆಮಿಕಂಡಕ್ಟರ್ ಮ್ಯಾನುಫ್ಯಾಕ್ಚರಿಂಗ್ ಕಂಪನಿ) 5 ಎನ್ಎಂ ತಂತ್ರಜ್ಞಾನದಂತೆ ರಚಿಸಲಾಗಿದೆ.

ಇದು ಚಿಪ್ ವಿನ್ಯಾಸದಲ್ಲಿ ಭಾರತದದ ಮಹತ್ವದ ಸಾಧನೆಯಾಗಿದೆ. ಇದು ಉನ್ನತ ಕಾರ್ಯಕ್ಷಮತೆಯ ಕಂಪ್ಯೂಟಿಂಗ್ ಕ್ಷೇತ್ರದಲ್ಲಿ ದೇಶೀಯ ಮಟ್ಟದ ಅಭಿವೃದ್ಧಿಯಲ್ಲಿ ಭಾರತದ ಸಾಮರ್ಥ್ಯ ಪ್ರದರ್ಶಿಸುತ್ತದೆ. ಉದ್ಯಮದ ಸಹಭಾಗಿತ್ವದಲ್ಲಿ ಕನ್ಸೋರ್ಟಿಯಾ ಮೋಡ್​​ನಲ್ಲಿ ಈ ಉದ್ಯಮಗಳು ಪ್ರಸ್ತುತ ಅಗತ್ಯ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವೈಜ್ಞಾನಿಕ ವಿಭಾಗಗಳ (ಎಚ್ಒಡಿ) ಮುಖ್ಯಸ್ಥ ಮುಖ್ಯಸ್ಥ ಡಾ.ಪ್ರವೀಣ್ ಕುಮಾರ್ ಎಸ್ ಅಭಿಪ್ರಾಯಪಟ್ಟಿದ್ದಾರೆ.

ಸಿ-ಡ್ಯಾಕ್ ಎಯುಎಂ ಎಂಬ ಸ್ಥಳೀಯ ಎಚ್​ಪಿಡಿ ಪ್ರೊಸೆಸರ್ ಅನ್ನು ವಿನ್ಯಾಸಗೊಳಿಸುತ್ತಿದೆ. ಭಾರತೀಯ ಸ್ಟಾರ್ಟ್ಅಪ್ ಕೀನ್ಹೆಡ್ಸ್ ಟೆಕ್ನಾಲಜೀಸ್ ಈ ಯೋಜನೆಯ ನಿರ್ವಹಣಾ ಸಲಹೆಗಾರರಾಗಿ (ಪಿಎಂಸಿ) ತೊಡಗಿಸಿಕೊಂಡಿದೆ.

ಇದನ್ನೂ ಓದಿ: Narendra Modi: ದೇಶದ ಜನ ನಮ್ಮನ್ನು ಮೂರನೇ ಬಾರಿ ಗೆಲ್ಲಿಸಿದ್ದಾರೆ, ಕಾಂಗ್ರೆಸ್‌ಗೆ ನೂರು ಸ್ಥಾನ ಗೆಲ್ಲುವ ಯೋಗ್ಯತೆಯೂ ಇಲ್ಲ; ರಾಹುಲ್‌ಗೆ ಮೋದಿ ಗೇಲಿ

.”ಸರ್ವರ್ ನೋಡ್​ಗಳು , ಇಂಟರ್​ಕನೆಕ್ಟ್​ಗಳು ಮತ್ತು ಸಿಸ್ಟಮ್ ಸಾಫ್ಟ್​ವೇರ್​ ಸ್ಟ್ಯಾಕ್​​ನೊಂದಿಗೆ ನಮ್ಮ ಸ್ವದೇಶಿಕರಣ ಪ್ರಯತ್ನಗಳು ಶೇಕಡಾ 50 ಕ್ಕಿಂತ ಸಾಗಿದೆ. ಈಗ ಸಂಪೂರ್ಣ ಸ್ವದೇಶೀಕರಣಕ್ಕಾಗಿ, ನಾವು ದೇಶೀಯ ಎಚ್​​ಪಿಸಿ ಪ್ರೊಸೆಸರ್ ಎಯುಎಂ ಅನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇವೆ” ಎಂದು ಕೃಷ್ಣನ್ ಹೇಳಿದ್ದಾರೆ.

Continue Reading

ದೇಶ

Narendra Modi: ರಾಹುಲ್‌ ಗಾಂಧಿಯನ್ನು ‘ಬಾಲ ಬುದ್ಧಿಯವನು’‌ ಎಂದ ಮೋದಿ; ಅವರು ಹೇಳಿದ ‘ಸೈಕಲ್‌ ಕತೆ’ಯೂ ಇಲ್ಲಿದೆ!

Narendra Modi: ಲೋಕಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಹಲವು ವಿಷಯಗಳನ್ನು ಪ್ರಸ್ತಾಪಿಸಿದರು. ಸಂಸತ್ತಿನ ಕೆಳಮನೆಯಲ್ಲಿ ನರೇಂದ್ರ ಮೋದಿ ಅವರ ಭಾಷಣ ಹೇಗಿತ್ತು? ಉಲ್ಲೇಖಿಸಿದ ಪ್ರಮುಖ ಅಂಶಗಳು ಯಾವವು ಎಂಬುದರ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

Narendra Modi
Koo

ನವದೆಹಲಿ: ಲೋಕಸಭೆಯಲ್ಲಿ (Lok Sabha) ನರೇಂದ್ರ ಮೋದಿ (Narendra Modi) ಅವರು ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದರು. ಇದೇ ವೇಳೆ ಅವರು ಕಾಂಗ್ರೆಸ್‌, ರಾಹುಲ್‌ ಗಾಂಧಿ ವಿರುದ್ಧ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದರು. ಅಷ್ಟೇ ಅಲ್ಲ ಸೈಕಲ್‌ ಕಲಿಯಲು ಹೋದ ಬಾಲಕನು ಬಿದ್ದಾಗ ಆತನಿಗೆ ಬೇರೊಬ್ಬರು ಸಮಾಧಾನ ಮಾಡಿದ ರೀತಿಯನ್ನು ರಾಹುಲ್‌ ಗಾಂಧಿ ಅವರ ಪಕ್ಷದ ಸೋಲಿಗೆ ಹೋಲಿಸಿದರು. ಇನ್ನೂ ಹಲವು ನಿದರ್ಶನಗಳ ಮೂಲಕ ಮೋದಿ ಅವರು ರಾಹುಲ್‌ ಗಾಂಧಿ, ಕಾಂಗ್ರೆಸ್‌ಗೆ ಕುಟುಕಿದರು.

ಸೈಕಲ್‌ ಕಲಿಯುವ ಬಾಲಕನ ಕತೆ ಹೀಗಿದೆ…

“ಬಾಲಕನೊಬ್ಬನು ಸೈಕಲ್‌ ಕಲಿಯಲು ರಸ್ತೆ ಇಳಿಯುತ್ತಾನೆ. ಆತ ಸೈಕಲ್‌ ತುಳಿಯುತ್ತಲೇ ಸ್ವಲ್ಪ ದೂರ ಮುಂದೆ ಹೋಗಿ ಬೀಳುತ್ತಾನೆ. ಸೈಕಲ್‌ನಿಂದ ಬಿದ್ದ ಆತನು ಜೋರಾಗಿ ಅಳಲು ಮುಂದಾಗುತ್ತಾನೆ. ಆಗ ವ್ಯಕ್ತಿಯೊಬ್ಬರು ಅಲ್ಲಿಗೆ ಬಂದು ಬಾಲಕನಿಗೆ ಹಲವು ಸುಳ್ಳುಗಳನ್ನು ಹೇಳುವ ಮೂಲಕ ಆತನನ್ನು ಸಮಾಧಾನಪಡಿಸುತ್ತಾರೆ. ಆಗ ಬಾಲಕನು ಸುಳ್ಳುಗಳನ್ನು ನಂಬಿ ಸುಮ್ಮನಾಗುತ್ತಾನೆ” ಎಂಬುದಾಗಿ ರಾಹುಲ್‌ ಗಾಂಧಿ ಅವರನ್ನು ಪರೋಕ್ಷವಾಗಿ ಛೇಡಿಸಿದರು.

ಮತ್ತೊಬ್ಬ ಬಾಲಕನ 99 ಅಂಕದ ಕತೆ

ಮತ್ತೊಬ್ಬ ಬಾಲಕನ ಕತೆಯ ಮೂಲಕ ರಾಹುಲ್‌ ಗಾಂಧಿ ಅವರಿಗೆ ಮೋದಿ ಕುಟುಕಿದರು. “ಬಾಲಕನೊಬ್ಬ ಪರೀಕ್ಷೆಯಲ್ಲಿ 99 ಅಂಕ ಪಡೆದಿರುತ್ತಾನೆ. ನಾನು 99 ಅಂಕ ಪಡೆದಿದ್ದೇನೆ ಎಂದು ಎಲ್ಲರಿಗೂ ಹೇಳುತ್ತಾನೆ. ಇದನ್ನು ಕೇಳಿದ ಜನ ಖುಷಿಪಡುತ್ತಾರೆ. ಆದರೆ, ಟೀಚರ್‌ ಬಂದು ನೀನೇಕೆ ಸ್ವೀಟ್‌ ಹಂಚುತ್ತಿದ್ದೀಯಾ? ಎಂದು ಕೇಳುತ್ತಾರೆ. ಏಕೆಂದರೆ, ಆ ಬಾಲಕನು 100ಕ್ಕೆ 99 ಅಂಕ ಪಡೆದಿರುವುದಿಲ್ಲ. ಆತನು 543 ಅಂಕಗಳ ಪೈಕಿ 99 ಅಂಕ ಪಡೆದಿರುತ್ತಾನೆ. ಈಗ ಹೇಳಿ ಯಾರ ವೈಫಲ್ಯವು ಇದಕ್ಕೆ ಮ್ಯಾಚ್‌ ಆಗುತ್ತದೆ” ಎಂದು ಕಾಂಗ್ರೆಸ್‌ ಹಾಗೂ ರಾಹುಲ್‌ ಗಾಂಧಿ ಅವರ ಸ್ಥಿತಿಯನ್ನು ಪರೋಕ್ಷವಾಗಿ ಹೇಳಿದರು.

ಇನ್ನೊಬ್ಬ ಬಾಲಕನಿಗೆ ಹೊಡೆದ ಕತೆ

ಒಬ್ಬ ಬಾಲಕ ಶಾಲೆಯಿಂದ ಮನೆಗೆ ಬಂದು ಜೋರಾಗಿ ಅಳತೊಡಗಿದೆ. ಈತನ ಸ್ಥಿತಿ ನೋಡಿ ಅಮ್ಮನೂ ಹೆದರಿದಳು. ಏಕೆ ಎಂದು ಅಮ್ಮ ಕೇಳಿದಾಗ ಬಾಲಕನು, “ಅಮ್ಮ ನನಗೆ ಶಾಲೆಯಲ್ಲಿ ಹೊಡೆದರು. ನನಗೆ ತುಂಬ ಥಳಿಸಿದರು. ನನಗೆ ಹೊಡೆದರು, ನನಗೆ ಹೊಡೆದರು” ಎಂದು ಇನ್ನಷ್ಟು ಅಳತೊಡಗಿದ. ಆಗ ಅಪ್ಪ, “ಏನಾಯಿತು” ಎಂದು ಕೇಳಿದ. ಬೇರೊಬ್ಬ ಬಾಲಕನ ತಾಯಿಗೆ ಬೈದಿರುವ ಕುರಿತು, ಬೇರೊಬ್ಬ ಬಾಲಕನನ್ನು ಕಳ್ಳ ಎಂದು ಕರೆದಿರುವುದು, ಬೇರೊಬ್ಬನ ಟಿಫಿನ್‌ ಬಾಕ್ಸ್‌ ಕದ್ದು, ಊಟ ಮಾಡಿರುವುದು ಸೇರಿ ಹಲವು ವಿಷಯಗಳನ್ನು ಆ ಬಾಲಕನು ತಂದೆ-ತಾಯಿಗೆ ಹೇಳಲೇ ಇಲ್ಲ ಎಂದು ರಾಹುಲ್‌ ಗಾಂಧಿ ಅವರಿಗೆ ಮೋದಿ ತಿರುಗೇಟು ನೀಡಿದರು.

“ನಿನ್ನೆ ಸಂಸತ್ತಿನಲ್ಲಿ ಒಬ್ಬರು ನನಗೆ ಅವರು ಹೊಡೆದರು, ಇವರು ಹೊಡೆದರು ಎಂಬುದಾಗಿ ಬಾಲಕ ಬುದ್ಧಿಯ ವ್ಯಕ್ತಿಯೊಬ್ಬರು ಕಿರುಚಾಡಿದರು. ಇದು ಜನರ ಸಿಂಪತಿ ಗಳಿಸಲು ಮಾಡಿರುವ ತಂತ್ರವಾಗಿದೆಯೇ ಹೊರತು, ಇದರಲ್ಲಿ ಯಾವುದೇ ಕಾಳಜಿ ಇಲ್ಲ” ಎಂದು ಹೇಳಿದರು.

ಕಾಂಗ್ರೆಸ್‌ ಪಕ್ಷವು ಈಗ ಬೇರೆ ಪಕ್ಷಗಳ ಬೆಂಬಲದ ಆಧಾರದ ಮೇಲೆ ನಿಂತಿದೆ. ಏಕಾಂಗಿಯಾಗಿ ನಿಂತ ಕಡೆಗಳೆಲ್ಲ ಇವರು ಹೀನಾಯವಾಗಿ ಸೋತಿದ್ದಾರೆ. 13 ರಾಜ್ಯಗಳಲ್ಲಿ ಕಾಂಗ್ರೆಸ್‌ ಜೀರೊ ಆಗಿದೆ. ಆದರೂ ಇವರು ಹೀರೊ ಆಗಿದ್ದಾರೆ. ದೇಶದ ಲೋಕಸಭೆ ಚುನಾವಣೆ ಇತಿಹಾಸದಲ್ಲಿ ಕಾಂಗ್ರೆಸ್ ಮೂರನೇ ಬಾರಿ ಹೀನಾಯವಾಗಿ ಸೋತಿದೆ. ಸಹಯೋಗಿ ಪಕ್ಷಗಳ ಹೆಗಲ ಕೂರಿಸಿಕೊಂಡು ಕಾಂಗ್ರೆಸ್ ಮೀಸೆ ತಿರುವುತ್ತಿದೆ. ಬೇರೆ ಪಕ್ಷಗಳ ಚುಂಗು ಹಿಡಿದುಕೊಂಡು ಕಾಂಗ್ರೆಸ್ ಕುಪ್ಪಳಿಸುತ್ತಿದೆ. ಪರಜೀವಿ ಪಕ್ಷವಾಗಿರುವ ಇದು ಈಗ ಅದು ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಮೋದಿ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್‌ನಿಂದ ಸುಳ್ಳುಗಳ ಸರಣಿ…

ಕಾಂಗ್ರೆಸ್‌ ದೇಶದ ಜನರಿಗೆ ಸುಳ್ಳು ಹೇಳುವ ಮೂಲಕ ಬೇಳೆ ಬೇಯಿಸಿಕೊಳ್ಳಲು ಯತ್ನಿಸುತ್ತಿದೆ. “ದೇಶದ ಬಡವರಿಗೆ ಮಾಸಿಕ 8,500 ರೂ. ಜಮೆ ಮಾಡುತ್ತೇವೆ ಎಂದು ಸುಳ್ಳು ಹೇಳಿದರು. ಅಷ್ಟೇ ಅಲ್ಲ, ರಫೇಲ್‌ ಯುದ್ಧವಿಮಾನ, ಎಲ್‌ಐಸಿ, ಎಚ್‌ಎಎಲ್‌, ಚುನಾವಣೆ ಮತಯಂತ್ರ ಸೇರಿ ನೂರಾರು ಸುಳ್ಳುಗಳನ್ನು ಹೇಳಿದರು. ಸುಳ್ಳುಗಳನ್ನು ಹೇಳಿದ್ದಕಕಾಗಿಯೇ ಕಾಂಗ್ರೆಸ್‌ ಪ್ರತಿಪಕ್ಷದಲ್ಲಿ ಕುಳಿತಿದೆ” ಎಂದು ಹೇಳಿದರು.

“ದೇಶದ ಜನರು ಕಾಂಗ್ರೆಸ್‌ಗೆ ಒಂದು ಜನಾದೇಶ ನೀಡಿದ್ದಾರೆ. ನೀವು ಪ್ರತಿಪಕ್ಷದಲ್ಲಿಯೇ ಕುಳಿತುಕೊಳ್ಳಿ, ಹೀಗೆಯೇ ಗಲಾಟೆ ಮಾಡಿ, ಕಿರುಚುತ್ತಲೇ ಇರಿ ಎಂಬುದು ಜನರ ಆದೇಶವಾಗಿದೆ. ಕಾಂಗ್ರೆಸ್‌ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸತತ ಮೂರನೇ ಅವಧಿಗೆ ಕಾಂಗ್ರೆಸ್‌ 100 ಸೀಟುಗಳನ್ನು ಕೂಡ ಗೆಲ್ಲುವಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ನ ಇತಿಹಾಸದಲ್ಲಿಯೇ ಇದು ಮೂರನೇ ಅತಿ ದೊಡ್ಡ ಸೋಲಾಗಿದೆ. ಮೂರನೇ ಕಳಪೆ ಪ್ರದರ್ಶನವಾಗಿದೆ” ಎಂದು ವಾಗ್ಬಾಣ ಬಿಟ್ಟರು.

ಇದನ್ನೂ ಓದಿ: Narendra Modi: ರಾಹುಲ್‌ ಗಾಂಧಿ ಥರ ಆಡ್ಬೇಡಿ; ಗಂಭೀರವಾಗಿರಿ: ಎನ್‌ಡಿಎ ಸಂಸದರಿಗೆ ಮೋದಿ ಕಿವಿಮಾತು

Continue Reading
Advertisement
Narendra Modi
ದೇಶ5 mins ago

Narendra Modi: ಅಂಬೇಡ್ಕರ್‌ರನ್ನು ಷಡ್ಯಂತ್ರದಿಂದ ಸೋಲಿಸಿದ ನೆಹರೂ; ಕಾಂಗ್ರೆಸ್‌ನಿಂದ ದಲಿತರ ಶೋಷಣೆ ಎಂದ ಮೋದಿ

Pourakarmikas
ಕರ್ನಾಟಕ8 mins ago

Pourakarmikas: ಪೌರ ಕಾರ್ಮಿಕರಿಗೆ ಗುಡ್‌ ನ್ಯೂಸ್; ವಾರಕ್ಕೆ ಒಂದು ದಿನ ರಜೆ ನೀಡಿದ ಸರ್ಕಾರ

Super Computers
ಪ್ರಮುಖ ಸುದ್ದಿ10 mins ago

Super Computers : ಜಾಗತಿಕ ನಾಯಕತ್ವಕ್ಕಾಗಿ ಭಾರತದಲ್ಲೇ ತಯಾರಾಗುತ್ತಿದೆ ಸೂಪರ್ ಕಂಪ್ಯೂಟರ್​

sandalwood theft
ಕ್ರೈಂ12 mins ago

Sandalwood theft : ಶ್ರೀಗಂಧ ಕದಿಯಲು ಬಂದನಿಗೆ ಗುಂಡೇಟು;‌ ಮತ್ತೊಬ್ಬ ಗಾಯಾಳು ಸೇರಿ ಹಲವರು ಪರಾರಿ

Narendra Modi
ದೇಶ21 mins ago

Narendra Modi: ರಾಹುಲ್‌ ಗಾಂಧಿಯನ್ನು ‘ಬಾಲ ಬುದ್ಧಿಯವನು’‌ ಎಂದ ಮೋದಿ; ಅವರು ಹೇಳಿದ ‘ಸೈಕಲ್‌ ಕತೆ’ಯೂ ಇಲ್ಲಿದೆ!

Gold Smuggling
Latest33 mins ago

Gold Smuggling: ಏರ್‌ಪೋರ್ಟ್‌ನಲ್ಲಿ 267 ಕೆಜಿ ಚಿನ್ನ ಸಾಗಣೆ; ಯೂಟ್ಯೂಬರ್‌ ಸೇರಿ ಹಲವರ ಸೆರೆ

Narendra Modi
ದೇಶ48 mins ago

Narendra Modi: ದೇಶದ ಜನ ನಮ್ಮನ್ನು ಮೂರನೇ ಬಾರಿ ಗೆಲ್ಲಿಸಿದ್ದಾರೆ, ಕಾಂಗ್ರೆಸ್‌ಗೆ ನೂರು ಸ್ಥಾನ ಗೆಲ್ಲುವ ಯೋಗ್ಯತೆಯೂ ಇಲ್ಲ; ರಾಹುಲ್‌ಗೆ ಮೋದಿ ಗೇಲಿ

Uttar Pradesh stampede
ದೇಶ1 hour ago

Uttar Pradesh stampede : ಉತ್ತರ ಪ್ರದೇಶದ ಹತ್ರಾಸ್​​ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ; 27 ಕ್ಕೂ ಹೆಚ್ಚು ಸಾವು

Drowned in water
ದೇಶ1 hour ago

Drowned In water : ರಭಸವಾಗಿ ಹರಿಯುತ್ತಿದ್ದ ನೀರಲ್ಲಿ ಈಜಲು ಹೋಗಿ ಕೊಚ್ಚಿ ಹೋದ ಮಾಜಿ ಸೈನಿಕ

Rahul Dravid
ಕ್ರೀಡೆ1 hour ago

Rahul Dravid: ನಾನು ನಿರುದ್ಯೋಗಿ, ಎಲ್ಲಾದರೂ ಕೆಲಸ ಇದ್ದರೆ ಹೇಳಿ ಎಂದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ24 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ3 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು5 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌