Hindu-Lingayat Row: ಹಿಂದೂ ಧರ್ಮ ಎಲ್ಲ ಅನಿಷ್ಟ, ಅನಾಚಾರಗಳಿಂದ ಕೂಡಿದ್ದು: ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ - Vistara News

ಪ್ರಮುಖ ಸುದ್ದಿ

Hindu-Lingayat Row: ಹಿಂದೂ ಧರ್ಮ ಎಲ್ಲ ಅನಿಷ್ಟ, ಅನಾಚಾರಗಳಿಂದ ಕೂಡಿದ್ದು: ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ

Hindu-Lingayat Row: ಆದರೆ ವೈದಿಕ ಪರಂಪರೆಯ ಬೇರುಗಳು ನಮ್ಮ ತಲೆಯಲ್ಲಿ ಬಲವಾಗಿ ತುಂಬಿಕೊಂಡಿವೆ. ಲಿಂಗಾಯತ ಒಂದು ಸ್ವತಂತ್ರ ಧರ್ಮ, ಹಿಂದೂ ಧರ್ಮದ ಭಾಗ ಅಲ್ಲ ಎಂಬುದನ್ನು ಎಲ್ಲರೂ ಮಾನ್ಯ ಮಾಡಬೇಕು ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

VISTARANEWS.COM


on

sanehalli panditaradhya sree hindu lingayat row
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಹಿಂದೂ ಧರ್ಮ (Hindu Religion) ಎಂಬುದು ಎಲ್ಲ ಅನಿಷ್ಟ, ಅನಾಚಾರಗಳಿಂದ ಕೂಡಿದ್ದು. ಲಿಂಗಾಯತರು (Lingayat) ಆ ಧರ್ಮದ ಭಾಗವಲ್ಲ. ಲಿಂಗಾಯತವೇ ಬೇರೆ ಧರ್ಮ ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ (Sanehalli Panditharadhya swamiji) ಹೇಳಿದ್ದಾರೆ. ಆ ಮೂಲಕ ಹಿಂದೂ- ಲಿಂಗಾಯತ ಧರ್ಮ ಚರ್ಚೆಗೆ (Hindu-Lingayat Row) ಇನ್ನಷ್ಟು ಬಿಸಿ ಏರಿಸಿದ್ದಾರೆ.

ಹೊಳಲ್ಕೆರೆಯಲ್ಲಿ ನಡೆದ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿಯವರ 30ನೇ ಸ್ಮರಣಾರ್ಥ ಕಾರ್ಯಕ್ರಮದ ಸಭೆಯಲ್ಲಿ ಮಾತನಾಡುತ್ತಿದ್ದ ಅವರು ವೇದಿಕೆಯಿಂದ ಈ ಹೇಳಿಕೆ ನೀಡಿದರು. ಲಿಂಗಾಯತ ಧರ್ಮವನ್ನು ಹೊಗಳುವ ಭರದಲ್ಲಿ ಹಿಂದೂ ಧರ್ಮದ ಬಗ್ಗೆ ಈ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

ಲಿಂಗಾಯತ ಧರ್ಮ, ಹಿಂದೂ ಧರ್ಮದ ಒಂದು ಭಾಗ ಅಲ್ಲ. ಹಿಂದೂ ಧರ್ಮ ಅಂದ್ರೆ ಎಲ್ಲ ರೀತಿಯ ಅನಿಷ್ಟ ಅನಾಚಾರ ಒಳಗೊಂಡಿರುವಂಥದ್ದು. ಹಿಂದೂ ಒಂದರ್ಥದಲ್ಲಿ ಧರ್ಮವೇ ಅಲ್ಲ. ಸಿಂಧೂ ನದಿ ದಡದಿಂದ‌ ಈಚೆಗಿನವರು ಧೂ ದೇಶದವರು ಎಂಬ ಅರ್ಥದಲ್ಲಿ ಹಿಂದೂ ಅನ್ನೋದಾದ್ರೆ, ಹಿಂದೂ ಒಂದು ಧರ್ಮ ಎಂದಾದ್ರೆ ನಾವು ಹಿಂದೂ ಧರ್ಮದವರಲ್ಲ. ನಾವು ಸ್ವತಂತ್ರ ಲಿಂಗಾಯತ ಧರ್ಮದವರು ಎಂದು ಅವರು ನುಡಿದರು.

ಆದರೆ ವೈದಿಕ ಪರಂಪರೆಯ ಬೇರುಗಳು ನಮ್ಮ ತಲೆಯಲ್ಲಿ ಬಲವಾಗಿ ತುಂಬಿಕೊಂಡಿವೆ. ಲಿಂಗಾಯತ ಒಂದು ಸ್ವತಂತ್ರ ಧರ್ಮ, ಹಿಂದೂ ಧರ್ಮದ ಭಾಗ ಅಲ್ಲ ಎಂಬುದನ್ನು ಎಲ್ಲರೂ ಮಾನ್ಯ ಮಾಡಬೇಕು ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

ಪ್ರತ್ಯುತ್ತರ ನೀಡಿದ ವಚನಾನಂದ ಶ್ರೀಗಳು

ಈ ಮಾತುಗಳಿಗೆ ಸಭೆಯ ವೇದಿಕೆ ಮೇಲಿನಿಂದಲೇ ಪ್ರತಿಕ್ರಿಯಿಸಿದ ಪಂಚಮಸಾಲಿ ಪೀಠದ ಶ್ವಾಸಗುರು ವಚನಾನಂದ ಶ್ರೀಗಳು (Vachanananda Swamiji), ನಾವೆಲ್ಲ ಒಗ್ಗಟ್ಟಾಗಿ ಹೋದಾಗ ಮಾತ್ರ ಸಮಾಜಕ್ಕೆ ಭವಿಷ್ಯವಿದೆ ಎಂದು ನುಡಿದರು. ಭಕ್ತರಲ್ಲಿ ಹಲವರು ವಿರೋಧ ವ್ಯಕ್ತಪಡಿಸಿದರೂ ವಚನಾನಂದ ಶ್ರೀ ಪ್ರತಿಕ್ರಿಯೆ ಮುಂದುವರಿಸಿ ಭಾಷಣ ಮಾಡಿದರು.

ಹಿಂದೂ ಎಂಬುದು ಅತ್ಯಂತ ಸತ್ಯ ಸನಾತನವಾದುದು, ಯಾರು ಏನು ಬೇಕಾದ್ರೂ ಹೇಳಬಹುದು. ಹಿಂದೂ ಎನ್ನುವುದು ಒಂದು ವಿಶಾಲ ಮಹಾ ಸಾಗರ. ಅದರಲ್ಲಿ ಕೇವಲ ವೈದಿಕರಿರಲಿಲ್ಲ. ಅದು ಕೇವಲ ದ್ವೈತ, ಅದ್ವೈತ ಅಲ್ಲ. ಅದು ಶಕ್ತಿ, ವಿಶಿಷ್ಟಾಧ್ವೈತ ಎಲ್ಲವನ್ನು ಒಳಗೊಂಡಂಥದ್ದು. ಎಲ್ಲಾ ಮೂಲ ಪುರುಷರು ಇದ್ದದ್ದು ಹಿಂದೂ ಧರ್ಮದಲ್ಲಿ ಎಂದರು.

ವೀರಶೈವ, ಲಿಂಗಾಯತ ತತ್ವಗಳು ಬೇರೆ ಬೇರೆ ಇರಬಹುದು. ಆದರೆ ನಾವೆಲ್ಲ ಒಗ್ಗಟ್ಟಾಗಿ ಹೋದಾಗ ಮಾತ್ರ ಸಮಾಜಕ್ಕೆ ಭವಿಷ್ಯವಿದೆ. ನಿಮ್ಮ ಮಠ, ಪೀಠ ತತ್ವಗಳು ಏನೇ ಇರಬಹುದು. ಸಾಮಾಜಿಕ, ರಾಜಕೀಯ, ಬೌದ್ಧಿಕವಾಗಿ ನಾವೆಲ್ಲ ಒಂದಾಗಿರಬೇಕು. ಮಲ್ಲಿಕಾರ್ಜುನ ಸ್ವಾಮೀಜಿಯವರಲ್ಲಿ ಈ ರೀತಿಯ ಬೇಧ ಭಾವ ಇರಲಿಲ್ಲ ಎಂದು ಅವರು ನುಡಿದರು.

ಇದನ್ನೂ ಓದಿ: Reservation: ಮೊದಲ ಹಂತದ ಹೋರಾಟ ಯಶಸ್ವಿ, 2ನೇ ಹಂತದ ಹೋರಾಟಕ್ಕೆ ಅಣಿ: ಶ್ರೀ ವಚನಾನಂದ ಸ್ವಾಮೀಜಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Cattle Smuggling: ಗಡಿಯಲ್ಲಿ ಬಿಎಸ್‌ಎಫ್‌ ಮಹಿಳಾ ಪೇದೆ ಶೌರ್ಯ; ಗೋವುಗಳ ಸಾಗಣೆ ತಡೆದ ದಿಟ್ಟೆ

Cattle Smuggling: ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗೋವುಗಳ ಅಕ್ರಮ ಸಾಗಣೆಯನ್ನು ಮಹಿಳಾ ಪೇದೆಯು ತಡೆದಿದ್ದಾರೆ. ಮಾಲ್ಡಾ ಜಿಲ್ಲೆಯ ಕೇದಾರಿಪರ ಬಳಿಯ ಗಡಿಯಲ್ಲಿ ಸುಮಾರು ಆರೇಳು ಅಕ್ರಮ ಸಾಗಣೆದಾರರನ್ನು ಬಿಎಸ್‌ಎಫ್‌ ಮಹಿಳಾ ಪೇದೆಯು ತಡೆದಿದ್ದಾರೆ. ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಮಹಿಳಾ ಪೇದೆಯು ಕಾರ್ಯಾಚರಣೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Cattle Smuggling
Koo

ಕೋಲ್ಕೊತಾ: ಭಾರತದ ಗಡಿಯಲ್ಲಿ ಪುರುಷರು ಮಾತ್ರವಲ್ಲ ಮಹಿಳಾ ಯೋಧರು ಕೂಡ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಾರೆ. ಉಗ್ರರು, ಅಕ್ರಮ ಒಳನುಸುಳುಕೋರರನ್ನು ನಿಗ್ರಹಿಸುವ ಜತೆಗೆ ಗಡಿಯಲ್ಲಿ ಅಕ್ರಮ ಚಟುವಟಿಕೆಗಳನ್ನೂ ದಕ್ಷತೆಯಿಂದ ತಡೆಯುತ್ತಾರೆ. ಇದಕ್ಕೆ ನಿದರ್ಶನ ಎಂಬಂತೆ, ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಬಿಎಸ್‌ಎಫ್‌ ಮಹಿಳಾ ಪೇದೆಯೊಬ್ಬರು (BSF Woman Constable) ಚಾಣಾಕ್ಷತನದಿಂದ ಗೋವುಗಳ ಅಕ್ರಮ ಸಾಗಣೆಯನ್ನು (Cattle Smuggling) ತಡೆಯುವ ಮೂಲಕ ಶೌರ್ಯ ಮೆರೆದಿದ್ದಾರೆ.

ಹೌದು, ಪಶ್ಚಿಮ ಬಂಗಾಳದ ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಗೋವುಗಳ ಅಕ್ರಮ ಸಾಗಣೆಯನ್ನು ಮಹಿಳಾ ಪೇದೆಯು ತಡೆದಿದ್ದಾರೆ. ಮಾಲ್ಡಾ ಜಿಲ್ಲೆಯ ಕೇದಾರಿಪರ ಬಳಿಯ ಗಡಿಯಲ್ಲಿ ಸುಮಾರು ಆರೇಳು ಅಕ್ರಮ ಸಾಗಣೆದಾರರನ್ನು ಬಿಎಸ್‌ಎಫ್‌ ಮಹಿಳಾ ಪೇದೆಯು ತಡೆದಿದ್ದಾರೆ. ಗುಪ್ತಚರ ಇಲಾಖೆ ಮಾಹಿತಿ ಮೇರೆಗೆ ಮಹಿಳಾ ಪೇದೆಯು ಕಾರ್ಯಾಚರಣೆ ಕೈಗೊಳ್ಳುವ ಜತೆಗೆ ಅಪಾಯದ ಮುನ್ನೆಚ್ಚರಿಕೆ ಅರಿತು ಸಿಬ್ಬಂದಿಗೆ ಸಂದೇಶ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಬಿಎಸ್‌ಎಫ್‌ ಮಹಿಳಾ ಪೇದೆಯು ಗೋವುಗಳ ಸಾಗಣೆದಾರರನ್ನು ತಡೆದ ಬಳಿಕ ದುಷ್ಕರ್ಮಿಗಳು ಮಹಿಳಾ ಪೇದೆ ಮೇಲೆ ದಾಳಿ ಆರಂಭಿಸಿದ್ದಾರೆ. ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಆಗಲೂ ಜಗ್ಗದ ಪೇದೆಯು ಅವರ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಇದರಿಂದ ಬೆಚ್ಚಿದ ದುಷ್ಕರ್ಮಿಗಲೂ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಗೋವುಗಳನ್ನು ಅಲ್ಲಿಯೇ ಬಿಟ್ಟು ಅವರು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದಾದ ಬಳಿಕ ಬಿಎಸ್‌ಎಫ್‌ ಯೋಧರ ತಂಡವು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದೆ. ಕತ್ತಲಿದ್ದ ಕಾರಣ ಸ್ವಯಂ ರಕ್ಷಣೆಗಾಗಿ ಮಹಿಳಾ ಪೇದೆಯು ಗುಂಡಿನ ದಾಳಿ ನಡೆಸಿದ್ದಾರೆ. ಕತ್ತಲಲ್ಲಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಬಳಿಕ ಬಿಎಸ್‌ಎಫ್‌ ಯೋಧರು ಆರು ಎಮ್ಮೆಗಳು ಹಾಗೂ ಗೋವುಗಳನ್ನು ರಕ್ಷಣೆ ಮಾಡಿದ್ದಾರೆ ಎಂದು ಬಿಎಸ್‌ಎಫ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: BSF Chief: ಬಿಎಸ್‌ಎಫ್‌ ನೂತನ ಮುಖ್ಯಸ್ಥರಾಗಿ ದಲ್ಜಿತ್‌ ಸಿಂಗ್‌ ಚೌಧರಿ ನೇಮಕ

Continue Reading

ಪ್ರಮುಖ ಸುದ್ದಿ

Paris Olympics 2024 : ರೇಸಿಂಗ್​ ಟ್ರ್ಯಾಕ್​ ಬಳಿಯೇ ಯುವಕನೊಬ್ಬನಿಗೆ ಪ್ರಪೋಸ್ ಮಾಡಿದ ಫ್ರಾನ್ಸ್​ನ ಮಹಿಳಾ ಅಥ್ಲೀಟ್​, ವಿಡಿಯೊ ಇದೆ

Paris Olympics 2024 : ಪ್ಯಾರಿಸ್ ಹೇಳಿ ಕೇಳಿ ಪ್ರಣಯದ ನಗರ. ಟ್ರ್ಯಾಕ್​ನಲ್ಲೇ ಪ್ರೀತಿಯ ಹುಡುಗನಿಗೆ ಪ್ರಪೋಸ್ ಮಾಡಿರುವುದು ವಿಶೇಷ ಎನಿಸಿತು. ಪ್ಯಾರಿಸ್​​ನಲ್ಲಿ ಕೇವಲ ಸ್ಪರ್ಧಾತ್ಮಕ ಮನೋಭಾವ ಮಾತ್ರವಲ್ಲ, ಪ್ರೀತಿಯೂ ಹೆಚ್ಚಿದೆ. ರೇಸ್ ಮುಗಿದ ನಂತರ ಸ್ಟ್ಯಾಂಡ್ ಗಳ ಕಡೆಗೆ ನಡೆದು ಫಿನೋಟ್ ಹೋಗುತ್ತಿದ್ದ ವೀಡಿಯೊ ಶೀಘ್ರದಲ್ಲೇ ವೈರಲ್ ಆಯಿತು. ಗೆಳೆಯನಿಗೆ ಪ್ರಪೋಸ್ ಮಾಡಲು ಒಂದು ಮೊಣಕಾಲಿನ ಮೇಲೆ ಮಂಡಿಯೂರಿ ಕುಳಿತಾಗ ಸುತ್ತಲೂ ಇದ್ದವರು ಚಪ್ಪಾಳೆ ತಟ್ಟಿದರು.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್ 2024 (Paris Olympics 2024) ಹಲವಾರು ವಿವಾದಗಳು ಘಟಿಸಿದೆ. ಇದೇ ವೇಳೆ ಕೆಲವು ಹೃದಯಸ್ಪರ್ಶಿ ಘಟನೆಗಳೂ ನಡೆದಿವೆ. ಅಂತೆಯೇ ಫ್ರೆಂಚ್ ಅಥ್ಲೀಟ್ ಆಲಿಸ್ ಫಿನಾಟ್ 3000 ಮೀಟರ್ ಸ್ಟೀಪಲ್ ಚೇಸ್ ಸ್ಪರ್ಧೆಯ ಫೈನಲ್ ನಲ್ಲಿ ಭಾಗವಹಿಸಿದ್ದರು. ಅವರು ಓಟದಲ್ಲಿ ಯಾವುದೇ ಪದಕವನ್ನು ಗೆದ್ದಿಲ್ಲ. ಆದರೆ ಅವರು ಈವೆಂಟ್​​ನಲ್ಲಿ ಯುರೋಪಿಯನ್ ದಾಖಲೆ ಮುರಿಯುವಲ್ಲಿ ಯಶಸ್ವಿಯಾದರು. ತನ್ನ ದಾಖಲೆ ಮುರಿಯುವ ಪ್ರದರ್ಶನದ ನಂತರ ಟ್ರ್ಯಾಕ್​ ಬದಿಯಲ್ಲೇ ತನ್ನ ಬಾಯ್​ ಫ್ರೆಂಡ್​ಗೆ ಪ್ರಪೋಸ್ ಮಾಡಿದರು. ಈ ವಿಡಿಯೊ ಸೋಶಿಯಲ್ಲ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ಪ್ಯಾರಿಸ್ ಹೇಳಿ ಕೇಳಿ ಪ್ರಣಯದ ನಗರ. ಹೀಗಾಗಿ ಅಥ್ಲೀಟ್​ ಟ್ರ್ಯಾಕ್​ನಲ್ಲೇ ಪ್ರೀತಿಯ ಹುಡುಗನಿಗೆ ಪ್ರಪೋಸ್ ಮಾಡಿರುವುದು ವಿಶೇಷ ಎನಿಸಿತು. ಪ್ಯಾರಿಸ್​​ನಲ್ಲಿ ಕೇವಲ ಸ್ಪರ್ಧಾತ್ಮಕ ಮನೋಭಾವ ಮಾತ್ರವಲ್ಲ, ಪ್ರೀತಿಯೂ ಹೆಚ್ಚಿದೆ. ರೇಸ್ ಮುಗಿದ ನಂತರ ಸ್ಟ್ಯಾಂಡ್ ಗಳ ಕಡೆಗೆ ನಡೆದು ಫಿನಾಟ್​​ ಹೋಗುತ್ತಿದ್ದ ವೀಡಿಯೊ ಶೀಘ್ರದಲ್ಲೇ ವೈರಲ್ ಆಯಿತು. ಗೆಳೆಯನಿಗೆ ಪ್ರಪೋಸ್ ಮಾಡಲು ಒಂದು ಮೊಣಕಾಲಿನ ಮೇಲೆ ಮಂಡಿಯೂರಿ ಕುಳಿತಾಗ ಸುತ್ತಲೂ ಇದ್ದವರು ಚಪ್ಪಾಳೆ ತಟ್ಟಿದರು. ಅವರಿಗೆ ರಿಂಗ್ ಕೊಟ್ಟು ಮದುವೆಯಾಗುವಂತೆ ಕೋರಿದರು.

ಇದನ್ನೂ ಓದಿ: Neeraj Chopra : ನೀರಜ್​ ಚೋಪ್ರಾನನ್ನ ಅರ್ಷದ್​ ನದೀಮ್ ಸೋಲಿಸಿ ಬಂಗಾರ ಗೆಲ್ತಾರೆ; ಪಾಕ್​ನ ಕ್ರಿಕೆಟಿಗರ ಶುಭಾಶಯ

ಫಿನೋಟ್ ಮತ್ತು ಸ್ಪೇನ್ ನ ಟ್ರಯಥ್ಲೆಟ್ ಆಗಿರುವ ಬ್ರೂನೋ ಮಾರ್ಟಿನೆಜ್ ಒಂಬತ್ತು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದಾರೆ. “ಒಂಬತ್ತು ನಿಮಿಷಗಳಿಗಿಂತ ಕಡಿಮೆ ಸಮಯದಲ್ಲಿ ಓಡಿದೆ. ಒಂಬತ್ತು ನನ್ನ ಅದೃಷ್ಟದ ಸಂಖ್ಯೆ ಮತ್ತು ನಾವು ಒಂಬತ್ತು ವರ್ಷಗಳಿಂದ ಒಟ್ಟಿಗೆ ಇದ್ದೇವೆ. ನಾನು ಪ್ರಪೋಸ್ ಮಾಡುತ್ತೇನೆ ಎಂದು ನನಗೆ ನಾನೇ ಹೇಳಿಕೊಂಡೆ ಎಂದು ಫಿನೋಟ್ ನಂತರ ಸುದ್ದಿಗಾರರಿಗೆ ತಿಳಿಸಿದರು.

“ನನ್ನ ಬಾಯ್​ಫ್ರೆಂಡ್​​ ಇನ್ನೂ ಇನ್ನೂ ಪ್ರಪೋಸ್ ಮಾಡದ ಕಾರಣ, ಬಹುಶಃ ಅದು ನನಗೆ ಬಿಟ್ಟದ್ದು ಎಂದು ನಾನು ಭಾವಿಸಿದೆ.” ಎಂದು ಫಿನೋಟ್ ಹೇಳಿದ್ದಾರೆ.

ಬ್ಯಾಡ್ಮಿಂಟನ್​​ ಮಿಶ್ರ ಡಬಲ್ಸ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ನಂತರ ಚೀನಾದ ಬ್ಯಾಡ್ಮಿಂಟನ್ ತಂಡದ ಲಿ ಯುಚೆನ್ ಅವರು ಮದುವೆ ಪ್ರಸ್ತಾಪ ಮಾಡಿದ್ದರು. ಅವರ ಸಹ ಆಟಗಾರ್ತಿ ಹುವಾಂಗ್ ಯಾ ಕಿಯಾಂಗ್​ ತಕ್ಷಣವೇ ಆಯಿತು ಎಂದು ಒಪ್ಪಿಕೊಂಡಿದ್ದರು. ಹೀಗಾಗಿ ಕ್ರೀಡಾಕೂಟದ ಸಮಯದಲ್ಲಿ ನಿಶ್ಚಿತಾರ್ಥ ಮಾಡಿಕೊಂಡ ಏಕೈಕ ಕ್ರೀಡಾಪಟು ಫಿನೋಟ್ ಅಲ್ಲ ಎಂದು ಹೇಳಬಹುದು.

Continue Reading

ಕ್ರೀಡೆ

Aman Sehrawat: ಕುಸ್ತಿಯಲ್ಲಿ ಪದಕ ಭರವಸೆ ಮೂಡಿಸಿದ ಅಮನ್ ಸೆಹ್ರಾವತ್; ಸೆಮಿಗೆ ಲಗ್ಗೆ

Aman Sehrawat: ಎದುರಾಳಿಗೆ ಒಂದೇ ಒಂದು ಅಂಕ ಬಿಟ್ಟು ಕೊಡದೆ ಸೆಮಿಫೈನಲ್​ ಪ್ರವೇಶಿಸಿರುವ ಅಮನ್ ಸೆಹ್ರಾವತ್ ಭಾರತಕ್ಕೆ ಅನಿರೀಕ್ಷಿತ ಪದಕೊಂದನ್ನು ಗೆಲ್ಲುವ ತವಕದಲ್ಲಿದ್ದಾರೆ

VISTARANEWS.COM


on

Aman Sehrawat
Koo

ಪ್ಯಾರಿಸ್​: ವಿನೇಶ್ ಫೋಗಟ್​ ಅವರು ಅನರ್ಹಗೊಂಡು ಪದಕವೊಂದನ್ನು ಕಳೆದುಕೊಂಡ ಆಘಾತದಲ್ಲಿರುವಾಗಲೇ ಭಾರತಕ್ಕೆ ಪ್ಯಾರಿಸ್​ ಪಲಿಂಪಿಕ್ಸ್​(Paris Olympics) ಕುಸ್ತಿಯಲ್ಲಿ ಪದಕವೊಂದು ದೊರೆಯುವ ಆಸೆ ಚಿಗುರೊಡೆದಿದೆ. ಯಾರು ನಿರೀಕ್ಷೆಯೂ ಮಾಡದ ಪುರುಷರ ಕುಸ್ತಿ ಸ್ಪರ್ಧೆಯ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ 21 ವರ್ಷದ ಭಾರತದ ಅಮನ್ ಸೆಹ್ರಾವತ್(Aman Sehrawat) ಸೆಮಿ ಫೈನಲ್‌ಗೆ ಪ್ರವೇಶಿಸಿ ಪದಕ ಗೆಲ್ಲುವ ಭರವಸೆ ಮೂಡಿಸಿದ್ದಾರೆ. ಇಂದು ರಾತ್ರಿ 9.45ಕ್ಕೆ ನಡೆಯುವ ಸೆಮಿಫೈನಲ್​ ಪಂದ್ಯದಲ್ಲಿ ಅಮನ್​ ಜಪಾನ್​ ರೇ ಹಿಗುಚಿ ಸವಾಲು ಎದುರಿಸಲಿದ್ದಾರೆ.

ಎದುರಾಳಿಗೆ ಒಂದೇ ಒಂದು ಅಂಕ ಬಿಟ್ಟು ಕೊಡದೆ ಸೆಮಿಫೈನಲ್​ ಪ್ರವೇಶಿಸಿರುವ ಅಮನ್ ಸೆಹ್ರಾವತ್ ಭಾರತಕ್ಕೆ ಅನಿರೀಕ್ಷಿತ ಪದಕೊಂದನ್ನು ಗೆಲ್ಲುವ ತವಕದಲ್ಲಿದ್ದಾರೆ. ಸೆಮಿ ಒಂದು ಗೆದ್ದರೆ ಕನಿಷ್ಠ ಬೆನ್ಳ್ಳಿನು ಖಚಿತಪಡಿಸಿಕೊಳ್ಳಲಿದ್ದಾರೆ. ಅವರ ಆಟವನ್ನು ನೋಡುವಾಗ ಚಿನ್ನಕ್ಕೆ ಕೊರಳೊಡ್ಡುವ ಸಾಧ್ಯತೆ ಕಂಡು ಬಂದಿದೆ.

ಗುರುವಾರ ನಡೆದ ಕ್ವಾರ್ಟರ್​ ಫೈನಲ್​ ಪಂದ್ಯದಲ್ಲಿ ಅಮನ್​ ಅಲ್ಬೆನಿಯಾದ ಝೆಲಿಮ್ಖಾನ್ ಅಬಕರೋವ್ ವಿರುದ್ಧ 12-0 ಅಂತರದ ಭರ್ಜರಿ ಗೆಲುವು ಸಾಧಿಸಿ ಸೆಮಿಫೈನಲ್​ ಪ್ರವೇಶಿಸಿದರು. ಇದಕ್ಕೂ ಮುನ್ನ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ನಾರ್ತ್ ಮ್ಯಾಸೆಡೋನಿಯಾದ ವ್ಲಾಡಿಮಿರ್ ಎಗೊರೊವ್ ವಿರುದ್ಧ 10-0 ಅಂತರದ ಮಣಿಸಿ ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟಿದ್ದರು. ಅಮನ್​ ಅವರಿಗೆ ಇದು ಚೊಚ್ಚಲ ಒಲಿಂಪಿಕ್ಸ್​ ಟೂರ್ನಿಯಾಗಿದೆ. ಮೊದಲ ಪ್ರಯತ್ನದಲ್ಲೇ ಅವರು ಪದಕ ಗೆಲ್ಲುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ವರ್ಷ ನಡೆದಿದ್ದ ಏಷ್ಯನ್​ ಚಾಂಪಿಯನ್​ಶಿಪ್​ನಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಅಮನ್​ ಅವರದ್ದಾಗಿದೆ.

ಇದನ್ನೂ ಓದಿ Paris Olympics: ಭರ್ಜರಿ ಗೆಲುವಿನೊಂದಿಗೆ ಕ್ವಾರ್ಟರ್​ ಫೈನಲ್​ ಪ್ರವೇಶಿಸಿದ ಅಮನ್ ಸೆಹ್ರಾವತ್

ನೀರಜ್​ ಮೇಲೆ ಚಿನ್ನ ನಿರೀಕ್ಷೆ

ಚಿನ್ನದ ಪದಕ ಭರವಸೆಯಾಗಿ ಉಳಿದಿರುವ ಜಾವೆಲಿನ್​ ಎಸೆತಗಾರ ನೀರಜ್​ ಚೋಪ್ರಾ(Neeraj Chopra) ಅವರು ಇಂದು ಫೈನಲ್​ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ. ಕಳೆದ ಟೋಕಿಯೊ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದು ಭಾರತಕ್ಕೆ ಟ್ರ್ಯಾಕ್​ ಆ್ಯಂಡ್​ ಫೀಲ್ಡ್​ನಲ್ಲಿ ಐತಿಹಾಸಿಕ ಪದಕ ಗೆದ್ದ ನೀರಜ್​ ಈ ಬಾರಿಯೂ ಚಿನ್ನಕ್ಕೆ ಗುರಿ ಇರಿಸಲಿ ಎನ್ನುವುದು ದೇಶವಾಸಿಗಳ ಹಾರೈಕೆ. ಫೈನಲ್​ ಪಂದ್ಯ ರಾತ್ರಿ 11:55ಕ್ಕೆ ಅರಂಭವಾಗಲಿದೆ.

ಮಂಗಳವಾರ ನಡೆದಿದ್ದ ಅರ್ಹತಾ ಸುತ್ತಿನ ಪಂದ್ಯದಲ್ಲಿ ತಮ್ಮ ಮೊದಲ ಪ್ರಯತ್ನದಲ್ಲೇ 89.34 ಮೀ. ದೂರ ಜಾವೆಲಿನ್​ ಎಸೆದು ನೇರವಾಗಿ ಫೈನಲ್​ ಪ್ರವೇಶಿಸಿದ್ದರು. ನೀರಜ್​ ಅವರೇ ಅರ್ಹತಾ ಸುತ್ತಿನಲ್ಲಿ ಅಗ್ರಸ್ಥಾನ ಪಡೆದಿದ್ದರು. ಹೀಗಾಗಿ ಫೈನಲ್​ನಲ್ಲಿಯೂ ಅವರ ಮೇಲೆ ನಿರೀಕ್ಷೆ ಇರಿಸಲಾಗಿದೆ. ಜರ್ಮನಿಯ ಜೂಲಿಯನ್ ವೆಬ್ಬರ್, ಪಾಕಿಸ್ತಾನದ ಅರ್ಷದ್ ನದೀಮ್, ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ ತೀವ್ರ ಪೈಪೋಟಿ ಎದುರಾಗುವ ಸಾಧ್ಯತೆ ಇದೆ.

Continue Reading

ವಿದೇಶ

Sunita Williams: 2025ರವರೆಗೂ ಬಾಹ್ಯಾಕಾಶದಲ್ಲೇ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌; ನಾಸಾ ಘೋಷಣೆ

Sunita Williams: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ, ತಾಂತ್ರಿಕ ದೋಷದಿಂದ ಅವರು ಬಾಹ್ಯಾಕಾಶದಲ್ಲಿಯೇ ಉಳಿದಿದ್ದು, 2025ರ ಫೆಬ್ರವರಿವರೆಗೂ ಅವರು ಅಲ್ಲಿಯೇ ಇರಲಿದ್ದಾರೆ ಎಂಬುದಾಗಿ ನಾಸಾ ಮಾಹಿತಿ ನೀಡಿದೆ.

VISTARANEWS.COM


on

Sunita Williams
Koo

ವಾಷಿಂಗ್ಟನ್: ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ, ಸುನೀತಾ ವಿಲಿಯಮ್ಸ್‌ ಹಾಗೂ ಮತ್ತೊಬ್ಬ ಗಗನಯಾತ್ರಿ ಬುಚ್ ವಿಲ್ಮೋರ್ (Butch Wilmore) ಅವರು ಬಾಹ್ಯಾಕಾಶದಲ್ಲಿಯೇ ಸಿಲುಕಿದ್ದು, ಇವರು 2025ರ ಫೆಬ್ರವರಿಯಲ್ಲಿ ವಾಪಸಾಗಲಿದ್ದಾರೆ ಎಂದು ಅಮೆರಿಕ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಾಸಾ (NASA) ತಿಳಿಸಿದೆ.

ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವನ್ನು ಜೂನ್‌ 5ರಂದು ಆರಂಭಿಸಿದ್ದರು. ಜೂನ್‌ 6ರಂದು ಅಂತಾರಾಷ್ಟ್ರೀಯ ಬಾಹ್ಯಾಕಾಶ ಸ್ಟೇಷನ್‌ ತಲುಪಿದ್ದ ಅವರು ಒಂದು ವಾರ ಸಂಶೋಧನೆ ನಡೆಸಿ ವಾಪಸಾಗಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದ ಅವರು ಅಲ್ಲಿಯೇ ಸಿಲುಕಿದ್ದಾರೆ. ಇವರು ಯಾವಾಗ ಬರುತ್ತಾರೆ ಎಂಬುದರ ಕುರಿತು ನಾಸಾ ಈಗ ಮಾಹಿತಿ ನೀಡಿದೆ.

“ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿರುವ ಸುನೀತಾ ವಿಲಿಯಮ್ಸ್‌ ಅವರು 2025ರ ಫೆಬ್ರವರಿಯಲ್ಲಿ ವಾಪಸಾಗಲಿದ್ದಾರೆ. ಇವರು ಬೋಯಿಂಗ್‌ ಸ್ಟಾರ್‌ಲೈನರ್‌ ಬದಲು ಸ್ಪೇಸ್‌ಎಕ್ಸ್‌ನ ಕ್ರ್ಯೂ ಡ್ರ್ಯಾಗನ್‌ನಲ್ಲಿ ವಾಪಸಾಗಲಿದ್ದಾರೆ. ಸ್ಟಾರ್‌ಲೈನರ್‌ನಲ್ಲಿ ಹಲವು ತಾಂತ್ರಿಕ ದೋಷಗಳು ಉಂಟಾಗಿರುವ ಕಾರಣ ಕ್ರ್ಯೂ ಡ್ರ್ಯಾಗನ್‌ನಲ್ಲಿ ಕರೆದುಕೊಂಡು ಬರಲು ತೀರ್ಮಾನಿಸಲಾಗಿದೆ” ಎಂಬುದಾಗಿ ನಾಸಾ ತಿಳಿಸಿದೆ.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

ಇದನ್ನೂ ಓದಿ: 2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Continue Reading
Advertisement
karnataka Weather Forecast
ಮಳೆ4 mins ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Manu Bhaker
ಕ್ರೀಡೆ5 mins ago

Manu Bhaker : ಮನು ಭಾಕರ್​ಗೆ ಕ್ರೀಡಾ ಇಲಾಖೆಯಿಂದ ವಿಶೇಷ ಸನ್ಮಾನ; 30 ಲಕ್ಷ ರೂಪಾಯಿ ವಿತರಣೆ

Lalbagh Flower Show
ಬೆಂಗಳೂರು6 mins ago

Lalbagh Flower Show: ಎಲ್ಲ ವರ್ಗದ ಜನರಿಗೂ ಸಮಾನ ಅವಕಾಶ ದೊರೆಯಬೇಕು; ಸಿದ್ದರಾಮಯ್ಯ

Cattle Smuggling
ದೇಶ18 mins ago

Cattle Smuggling: ಗಡಿಯಲ್ಲಿ ಬಿಎಸ್‌ಎಫ್‌ ಮಹಿಳಾ ಪೇದೆ ಶೌರ್ಯ; ಗೋವುಗಳ ಸಾಗಣೆ ತಡೆದ ದಿಟ್ಟೆ

Paris Olympics 2024
ಪ್ರಮುಖ ಸುದ್ದಿ52 mins ago

Paris Olympics 2024 : ರೇಸಿಂಗ್​ ಟ್ರ್ಯಾಕ್​ ಬಳಿಯೇ ಯುವಕನೊಬ್ಬನಿಗೆ ಪ್ರಪೋಸ್ ಮಾಡಿದ ಫ್ರಾನ್ಸ್​ನ ಮಹಿಳಾ ಅಥ್ಲೀಟ್​, ವಿಡಿಯೊ ಇದೆ

Naga Chaitanya deleated ex samantha
ಸಿನಿಮಾ53 mins ago

Naga Chaitanya: ನಿಶ್ಚಿತಾರ್ಥದ ಮೊದಲು ಮಾಜಿ ಪತ್ನಿಯ ಪೋಟೊ ಡಿಲಿಟ್‌ ಮಾಡಿದ ನಾಗ ಚೈತನ್ಯ!

Road Accident
ಉಡುಪಿ1 hour ago

Road Accident : ಚಲಿಸುತ್ತಿದ್ದ ಸ್ಕೂಟರ್‌ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ; ಸವಾರನ ಕುತ್ತಿಗೆಗೆ ತಂತಿ ಸಿಲುಕಿ ಗಂಭೀರ

Aman Sehrawat
ಕ್ರೀಡೆ1 hour ago

Aman Sehrawat: ಕುಸ್ತಿಯಲ್ಲಿ ಪದಕ ಭರವಸೆ ಮೂಡಿಸಿದ ಅಮನ್ ಸೆಹ್ರಾವತ್; ಸೆಮಿಗೆ ಲಗ್ಗೆ

Sunita Williams
ವಿದೇಶ1 hour ago

Sunita Williams: 2025ರವರೆಗೂ ಬಾಹ್ಯಾಕಾಶದಲ್ಲೇ ಇರಲಿದ್ದಾರೆ ಸುನೀತಾ ವಿಲಿಯಮ್ಸ್‌; ನಾಸಾ ಘೋಷಣೆ

Neeraj Chopra
ಕ್ರೀಡೆ1 hour ago

Neeraj Chopra : ನೀರಜ್​ ಚೋಪ್ರಾನನ್ನ ಅರ್ಷದ್​ ನದೀಮ್ ಸೋಲಿಸಿ ಬಂಗಾರ ಗೆಲ್ತಾರೆ; ಪಾಕ್​ನ ಕ್ರಿಕೆಟಿಗರ ಶುಭಾಶಯ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ4 mins ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 hours ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 hours ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ4 days ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ5 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ1 week ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ1 week ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ1 week ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌