Site icon Vistara News

Lok Sabha Election : ಕಾಂಗ್ರೆಸ್​​ಗೆ ಹಿನ್ನಡೆಯಾದರೆ ಸಿದ್ದರಾಮಯ್ಯ ಸ್ಥಾನಕ್ಕೆಕಂಟಕ​​​; ಚರ್ಚೆ ಹುಟ್ಟು ಹಾಕಿದ ಬೈರತಿ ಸುರೇಶ್​ ಹೇಳಿಕೆ

lok Sabha Election

ಕೋಲಾರ : ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ (Lok Sabha Election) ಕಾಂಗ್ರೆಸ್​ ಅಭ್ಯರ್ಥಿಗಳು ಸೋತರೆ ಸಿದ್ದರಾಮಯ್ಯ ಅವರ ಸಿಎಂ ಸ್ಥಾನಕ್ಕೆ ಕುತ್ತು ಬರುತ್ತದೆ ಎಂದು ಸಚಿವ ಬೈರತಿ ಸುರೇಶ್​ ನೀಡಿರುವ ಹೇಳಿಕೆ ಚರ್ಚೆ ಹುಟ್ಟು ಹಾಕಿದೆ. ಕೋಲಾರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಕೋಲಾರ ನಗರದ ಹಾಲಿಸ್ಟರ್ ಭವನದಲ್ಲಿ ನಡೆದ ಕುರುಬ ಸಮುದಾಯದ ಮುಖಂಡ ಸಭೆಯಲ್ಲಿ ಮಾತನಾಡುವಾಗ ಒಂದು ವೇಳೆ ಕಾಂಗ್ರೆಸ್ ಅಭ್ಯರ್ಥಿಗಳು ಸೋಲು ಕಂಡರೆ ಸಿದ್ದರಾಮಯ್ಯ ಅವರು ಸ್ಥಾನ ಕಳೆದುಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ಕುರುಬ ಸಮುದಾಯ ಸಿದ್ದರಾಮಯ್ಯನವರ ಕೈ ಬಲಪಡಿಸಬೇಕು. ಅವರು ಸಿಎಂ ಕುರ್ಚಿಯಲ್ಲಿ ಇರಬೇಕು ಎಂದು ಸುರೇಶ್ ಅವರು ಹೇಳಿದ್ದಾರೆ. ನಿಮ್ಮ ಬೆಂಬಲ ಕಾಂಗ್ರೆಸ್​ ಪಕ್ಷದ ಮೇಲಿರಬೇಕು. ಸಿದ್ದರಾಮಯ್ಯ ನವರ ಮೇಲಿರಬೇಕು. ಅದಕ್ಕಾಗಿ ಅಭ್ಯರ್ಥಿ ಗೌತಮ್​ ಅವರನ್ನು ಗೆಲ್ಲಿಸಬೇಕು ಎಂದು ಸುರೇಶ್ ಅವರು ಹೇಳಿದ್ದಾರೆ.

ಇದನ್ನೂ ಓದಿ: Yadgiri News: ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ; ಬಿಜೆಪಿ ಅಭ್ಯರ್ಥಿ ರಾಜುಗೌಡ ನಾಮಪತ್ರ ಸಲ್ಲಿಕೆ

ಸಮುದಾದಯ ಜನರು ಬೇರೆ ಮನಸ್ಸು ಮಾಡಿ ಬೇರೆಯವನ್ನು ಗೆಲ್ಲಿಸಿದರೆ ಸಿದ್ದರಾಮಯ್ಯನವರ ಸೀಟಿಗೆ ಕಂಟಕವಾಗಲಿದೆ ಎಂದು ಸಚಿವ ಬಿ.ಎಸ್​.ಸುರೇಶ್​ ಹೇಳಿಕೆ ನೀಡಿದ್ದಾರೆ.

ಬಿಜೆಪಿ ಕೈಗೊಂಬೆ ಐಟಿ ಅಧಿಕಾರಿಗಳಿಂದ ಕಾರ್ಯಕರ್ತರ ಮೇಲೆ ದೌರ್ಜನ್ಯ: ಡಿ.ಕೆ. ಸುರೇಶ್

ಆನೇಕಲ್: ಬಿಜೆಪಿ (BJP) ಹಾಗೂ ಮಾಜಿ ಪ್ರಧಾನಿಗಳ ಕೈಗೊಂಬೆಯಾಗಿರುವ ಐಟಿ ಅಧಿಕಾರಿಗಳು ನಮ್ಮ ಕಾರ್ಯಕರ್ತರ ಮನೆಯಲ್ಲಿ ಯುವಕರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್ (Lok Sabha Election 2024) ಆರೋಪಿಸಿದ್ದಾರೆ.

ಆನೇಕಲ್‌ನಲ್ಲಿ ಗುರುವಾರ ಚುನಾವಣಾ ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸೋಲಿನ ಭೀತಿಯಿಂದ ಐಟಿ, ಇಡಿ ಮೂಲಕ ನಮ್ಮ ಕಾರ್ಯಕರ್ತರನ್ನು ಬೆದರಿಸುವ ಪ್ರಯತ್ನ ನಡೆಯುತ್ತಿದೆ. ನಿನ್ನೆ ಕೆಲವು ಅಧಿಕಾರಿಗಳು ಬಂದು ನಮ್ಮ ಕಾರ್ಯಕರ್ತರನ್ನು, ಅವರ ಕುಟುಂಬದ ಹೆಣ್ಣುಮಕ್ಕಳನ್ನು ಬೆದರಿಸಿದ್ದಾರೆ ಎಂದು ಆರೋಪಿಸಿದ ಅವರು, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಬರೆಯುತ್ತಿದ್ದು, ಐಟಿ ಇಲಾಖೆ ಮುಖ್ಯಸ್ಥರ ಗಮನಕ್ಕೆ ತರುತ್ತೇನೆ. ಅವರ ಕೆಲಸ ಕೇವಲ ಪರಿಶೀಲನೆ ಮಾಡುವುದು ಮಾತ್ರ. ಅದನ್ನು ಬಿಟ್ಟು ಬಿಜೆಪಿ ಪರ ಪ್ರಚಾರ ಮಾಡುವುದು ಸರಿಯಲ್ಲ. ಇದು ಅಕ್ಷಮ್ಯ ಅಪರಾಧ. ಹೀಗೆ ಮುಂದುವರಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ನನ್ನ ಚಾಲಕರ ಮನೆಯಲ್ಲಿ ಅವರ ಕುಟುಂಬದವರನ್ನು ಎಳೆದಾಡಿದ್ದಾರೆ. ಮಹಿಳೆಯರನ್ನು ತೀಕ್ಷ್ಣವಾಗಿ ಕಂಡು, ಯುವಕರನ್ನು ಒಂಟಿ ಕಾಲಲ್ಲಿ ನಿಲ್ಲಿಸಿದ್ದಾರೆ. ಮಾಜಿ ಪ್ರಧಾನಮಂತ್ರಿಗಳು ಹಾಗೂ ಬಿಜೆಪಿಯವರ ಕೈಗೊಂಬೆಯಾಗಿ ಐಟಿ ಅಧಿಕಾರಿಗಳ ದೌರ್ಜನ್ಯ, ದಬ್ಬಾಳಿಕೆ ಹೆಚ್ಚಾಗಿದೆ. ಅವರು ಚುನಾವಣೆಯಲ್ಲಿ ಜನರ ಮುಂದೆ ಹೋಗಿ ಹೋರಾಟ ಮಾಡಬೇಕು. ಅದನ್ನು ಬಿಟ್ಟು ಈ ರೀತಿ ಅಧಿಕಾರಿಗಳ ದುರ್ಬಳಕೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಚುನಾವಣೆ ನಿಷ್ಪಕ್ಷಪಾತ ಚುನಾವಣೆ ಮಾಡಬೇಕು. ನಾನು ನನ್ನ ಕೆಲಸದ ಆಧಾರದ ಮೇಲೆ ಮತ ಕೇಳುತ್ತಿದ್ದೇನೆ ಹೊರತು, ನನಗೆ ಯಾರನ್ನು ಬೆದರಿಸುವ ಅಗತ್ಯವಿಲ್ಲ ಎಂದು ಸಂಸದ ಡಿ.ಕೆ ಸುರೇಶ್‌ ತಿಳಿಸಿದ್ದಾರೆ.

ಜನತಾದಳ ಹಾಗೂ ಜೆಡಿಎಸ್‌ನವರು ಕ್ಷುಲ್ಲಕ ರಾಜಕಾರಣ ಮಾಡುವುದರಲ್ಲಿ ಹೆಸರುವಾಸಿ. ಅವರು ಹಿರಿಯರಿದ್ದು, ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಅವರು ಮಾಡಿರುವ ಆರೋಪಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ ಎಂದ ಅವರು, ನಾನು ಹಾಗೂ ಶಿವಕುಮಾರ್ ಅವರಿಗೆ ಕಲ್ಲು ಹೊಡೆದಿದ್ದಾರೆ ಎಂದು ಹೇಳುತ್ತಾರಲ್ಲ, ಅವರ ಕುಟುಂಬದಲ್ಲಿ ಯಾರೆಲ್ಲಾ ಎಲ್ಲಿ ಕಲ್ಲು ಹೊಡೆದಿದ್ದಾರೆ ಎಂದು ನಾನು ತೋರಿಸುತ್ತೇನೆ. ಅವರು ಯಾರ ಜಮಿನುಗಳನ್ನು ಯಾರ ಹೆಸರಲ್ಲಿ ಹಾಕಿಕೊಂಡಿದ್ದಾರೆ ಎಂಬುದನ್ನು ತೋರಿಸಬಹುದು. ಆದರೆ ಅದರ ಅಗತ್ಯ ನಮಗಿಲ್ಲ ಎಂದು ತಿಳಿಸಿದ್ದಾರೆ.

Exit mobile version