ಮುರುಘಾಶ್ರೀ ಪ್ರಕರಣ | ಎರಡನೇ ಪೋಕ್ಸೊ ಕೇಸ್‌, ಇಂದು ಶ್ರೀಗಳು ಮತ್ತೆ ಪೊಲೀಸ್‌ ವಶಕ್ಕೆ ಸಂಭವ - Vistara News

ಪ್ರಮುಖ ಸುದ್ದಿ

ಮುರುಘಾಶ್ರೀ ಪ್ರಕರಣ | ಎರಡನೇ ಪೋಕ್ಸೊ ಕೇಸ್‌, ಇಂದು ಶ್ರೀಗಳು ಮತ್ತೆ ಪೊಲೀಸ್‌ ವಶಕ್ಕೆ ಸಂಭವ

ಮುರುಘಾಶ್ರೀ ವಿರುದ್ಧದ ಎರಡನೇ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಂದು ಶ್ರೀಗಳನ್ನು ಮತ್ತೆ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುವ ನಿರೀಕಷೆ ಇದೆ.

VISTARANEWS.COM


on

muruga seer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಮುರುಘಾಶ್ರೀ ವಿರುದ್ಧದ ಎರಡನೇ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಇಂದು ಮುರುಘಾಶ್ರೀಗಳನ್ನು ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

2ನೇ ಅಪರ & ಜಿಲ್ಲಾ ನ್ಯಾಯಾಲಯಕ್ಕೆ ಪೊಲೀಸರು ಈ ಎರಡನೇ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿ ಶ್ರೀಗಳ ವಿಚಾರಣೆ ನಡೆಸಲು ಮನವಿ ಸಲ್ಲಿಸಿದ್ದಾರೆ.

ಗ್ರಾಮಾಂತರ ಠಾಣೆ ಸಿಪಿಐ ಬಾಲ ಚಂದ್ರ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ನಡೆಯುವ ಸಾಧ್ಯತೆ ಇದೆ. ಇಂದು ಕೋರ್ಟ್ ಸೂಚಿಸಿದರೆ ಮುರುಘಾಶ್ರೀ ಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

PM Narendra Modi: ವಾರಾಣಸಿಯಲ್ಲಿ ನರೇಂದ್ರ ಮೋದಿ ನಾಮಪತ್ರ ಅನುಮೋದಿಸುವ ನಾಲ್ವರು ಯಾರು?

PM Narendra Modi: ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರಿಗೆ ನಾಲ್ಕು ಪ್ರತಿಪಾದಕರು (proposers) ಬೇಕು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ದಿನಗಳಿಂದಲೂ ಮೋದಿಯವರಿಗೆ ಆಪ್ತರಾದವರು ಎನ್ನಲಾಗಿದೆ.

VISTARANEWS.COM


on

pm narendra modi nomination varanasi
Koo

ವಾರಾಣಸಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇಂದು ವಾರಣಾಸಿಯಿಂದ ಲೋಕಸಭೆ ಚುನಾವಣೆಗೆ (Lok Sabha Election 2024) ನಾಮಪತ್ರ ಸಲ್ಲಿಸುತ್ತಿದ್ದಾರೆ. ರಾಜನಾಥ್ ಸಿಂಗ್, ಅಮಿತ್ ಶಾ ಸೇರಿದಂತೆ ಕೇಂದ್ರ ಸಚಿವರು, 12 ರಾಜ್ಯಗಳ ಸಿಎಂಗಳು ಮತ್ತು ಎನ್‌ಡಿಎ ಮೈತ್ರಿಕೂಟದ ನಾಯಕರು ಅವರೊಂದಿಗೆ ಭಾಗವಹಿಸುತ್ತಿದ್ದಾರೆ.

ಪ್ರಧಾನಿ ಮೋದಿಯವರು ವಾರಣಾಸಿಯಿಂದ ನಾಮಪತ್ರ ಸಲ್ಲಿಸುವಾಗ ಅವರಿಗೆ ನಾಲ್ಕು ಪ್ರತಿಪಾದಕರು (proposers) ಬೇಕು. ಆ ನಾಲ್ವರು ಯಾರು? ಅವರು ಹೆಸರುಗಳು ಇಲ್ಲಿವೆ. ಈ ನಾಲ್ವರೂ ಆರೆಸ್ಸೆಸ್‌ ದಿನಗಳಿಂದಲೂ ಮೋದಿಯವರಿಗೆ ಆಪ್ತರಾದವರು ಎನ್ನಲಾಗಿದೆ.

ಪಂಡಿತ್ ಗಣೇಶ್ವರ ಶಾಸ್ತ್ರಿ: ಬ್ರಾಹ್ಮಣ ಸಮುದಾಯದ ಸದಸ್ಯ. ಅಯೋಧ್ಯೆಯಲ್ಲಿ ರಾಮಮಂದಿರದ ಪ್ರತಿಷ್ಠಾಪನೆಗೆ ಮಂಗಳಕರ ಸಮಯವನ್ನು ನಿರ್ಧರಿಸಿದವರು.

ಬೈಜನಾಥ್ ಪಟೇಲ್: ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು.

ಲಾಲ್‌ಚಂದ್ ಕುಶ್ವಾಹಾ: ಲಾಲ್‌ಚಂದ್ ಕುಶ್ವಾಹಾ ಕೂಡ ಒಬಿಸಿ ಸಮುದಾಯದವರು.

ಸಂಜಯ್ ಸೋಂಕರ್: ಇವರು ದಲಿತ ಸಮುದಾಯದಿಂದ ಬಂದ ಹಿರಿಯ ನಾಯಕ.

ನಾಮಪತ್ರ ಸಲ್ಲಿಕೆಯ ಸಮಯ ನಿಗದಿ ಹೇಗೆ?

ಪ್ರಧಾನಿ ಮೋದಿ ನಾಮಪತ್ರವನ್ನು ಬೆಳಗ್ಗೆ 11:40 ರಿಂದ ಮಧ್ಯಾಹ್ನ 12:00 ರ ಅವಧಿಯಲ್ಲಿ ಸಲ್ಲಿಸುತ್ತಿದ್ದಾರೆ. ಈ ಸಮಯವು ಮಂಗಳಕರವಾದ ಪುಷ್ಯ ನಕ್ಷತ್ರ ಮತ್ತು ಗಂಗಾ ಸಪ್ತಮಿಯೊಂದಿಗೆ ಹೊಂದಿಕೆಯಾಗುತ್ತದೆ. ಜ್ಯೋತಿಷಿ ಪಂ. ರಿಷಿ ದ್ವಿವೇದಿ ಅವರ ಪ್ರಕಾರ, ಈ ತಾರಾ ಜೋಡಣೆಯು ಶುಭ ಮತ್ತು ಇಷ್ಟಾರ್ಥಗಳ ನೆರವೇರಿಕೆಯನ್ನು ಸೂಚಿಸುತ್ತದೆ. ಪುಷ್ಯ ನಕ್ಷತ್ರದ ಸಮಯದಲ್ಲಿ ಚಟುವಟಿಕೆಗಳನ್ನು ಕೈಗೊಳ್ಳುವುದು ಅವುಗಳ ಯಶಸ್ವಿ ಪೂರ್ಣಗೊಳಿಸುವಿಕೆಯನ್ನು ಖಚಿತಪಡಿಸುತ್ತದೆ ಎಂದು ನಂಬಲಾಗಿದೆ.

ನಾಮಪತ್ರ ಸಲ್ಲಿಕೆಗೂ ಮುನ್ನ ವಾರಾಣಸಿಯಲ್ಲಿರುವ ದಶಾಶ್ವಮೇಧ ಘಾಟ್‌ಗೆ ಭೇಟಿ ಕೊಟ್ಟ ಮೋದಿ ಗಂಗಾ ನದಿಗೆ ಪೂಜೆ ಸಲ್ಲಿಸಿದರು. ಐದು ಅರ್ಚಕರ ನೇತೃತ್ವದಲ್ಲಿ ಪೂಜೆ ನಡೆದಿದ್ದು, ಗಂಗಾ ನದಿ(Ganga River)ಗೆ ಪ್ರಧಾನಿ ಆರತಿ ಬೆಳಗಿದರು.

ಇನ್ನು ಇದಕ್ಕೂ ಮುನ್ನ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಗಂಗಾ ನದಿಯ ಜೊತೆಗಿನ 10 ವರ್ಷಗಳ ನಂಟಿಗೆ ಸಂಬಂಧಿಸಿದ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಅಲ್ಲದೇ ಗಂಗಾ ಮಾತೆ ನನ್ನನ್ನು ದತ್ತು ಪಡೆದಿದ್ದಾಳೆ. ಈ ಹತ್ತು ವರ್ಷಗಲ್ಲಿ ನನ್ನ ಮತ್ತು ಗಂಗಾಮಾತೆಯ ಜೊತೆಗಿನ ನಂಟು ಮತ್ತಷ್ಟು ಬಲಿಷ್ಠವಾಗಿದೆ ಎಂದು ಬರೆದಿಕೊಂಡಿದ್ದಾರೆ. ದಶಾಶ್ವಮೇಧ ಘಾಟ್‌ ಭೇಟಿ ಬಳಿಕ ಪ್ರಧಾನಿ ವಾರಾಣಸಿಯಲ್ಲಿರುವ ಕಾಲಭೈರವೇಶ್ವರ ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಮಪತ್ರ ಸಲ್ಲಿಕೆಗೂ ಮುನ್ನ ದಿನ ಅಂದರೆ ಸೋಮವಾರ ಇಲ್ಲಿನ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದ್ವಾರದಿಂದ ಅದ್ಧೂರಿ ರೋಡ್‌ ಶೋ ನಡೆಸಿದರು. ಸರಿಸುಮಾರು 5 ಕಿಮೀ ವರೆಗೆ ರೋಡ್ ಶೋನಲ್ಲಿ ವಾರಣಾಸಿ ಲೋಕಸಭಾ ಕ್ಷೇತ್ರದ 1 ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೇ ಇತರ ಪ್ರಮುಖರು ಭಾಗವಹಿಸಲಿದ್ದರು. ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸದರು. 5,000 ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಿದ್ದು, 100 ಪಾಯಿಂಟ್‌ಗಳಲ್ಲಿ ಪುಷ್ಪವೃಷ್ಟಿ ಮಾಡಲಾಯಿತು. ಮುಸ್ಲಿಂ ಸಮುದಾಯದವರೂ ಮೋದಿಗೆ ವಿಶೇಷ ಸ್ವಾಗತ ಕೋರಿದ್ದರು. ರೋಡ್‌ ಶೋ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟದ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Narendra Modi: ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾರತಿ ಮಾಡಿದ ಮೋದಿ-ಇಲ್ಲಿದೆ ಲೈವ್‌

Continue Reading

ಉದ್ಯೋಗ

Job Alert: ಎಚ್ಎ‌ಎಲ್‌ನಿಂದ 200 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Job Alert: ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 200 ತರಬೇತುದಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ವಿಭಾಗಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಮೇ 20ರಿಂದ 22ರ ತನಕ ಆಯೋಜಿಸಿರುವ ನೇರ ಸಂದರ್ಶದಲ್ಲಿ ಪಾಲ್ಗೊಳ್ಳಬಹುದು. ಸಂದರ್ಶನ ಹೈದರಾಬಾದ್‌ನಲ್ಲಿ ನಡೆಯಲಿದೆ. ವೇಳಾಪಟ್ಟಿ ಸೇರಿದಂತೆ ವಿವಿಧ ಮಾಹಿತಿ ಇಲ್ಲಿದೆ.

VISTARANEWS.COM


on

Job Alert
Koo

ಬೆಂಗಳೂರು: ಉದ್ಯೋಗದ ಹುಡುಕಾಟದಲ್ಲಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (Hindustan Aeronautics Limited)ನಲ್ಲಿ ಖಾಲಿ ಇರುವ 200 ತರಬೇತುದಾರ ಹುದ್ದೆಗಳ (Apprentice posts) ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (HAL Recruitment 2024). ವಿವಿಧ ವಿಭಾಗಗಳಲ್ಲಿ ಐಟಿಐ ತೇರ್ಗಡೆ ಹೊಂದಿದವರು ಮೇ 20ರಿಂದ 22ರ ತನಕ ಆಯೋಜಿಸಿರುವ ನೇರ ಸಂದರ್ಶದಲ್ಲಿ ಪಾಲ್ಗೊಳ್ಳಬಹುದು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಎಲೆಕ್ಟ್ರಾನಿಕ್ ಮೆಕ್ಯಾನಿಕ್ – 55, ಫಿಟ್ಟರ್ – 35, ಎಲೆಕ್ಟ್ರಿಷಿಯನ್ – 25, ಮೆಷಿನಿಸ್ಟ್‌ – 8, ಟರ್ನರ್ – 6, ವೆಲ್ಡರ್ – 3, ರೆಫ್ರಿಜರೇಟರ್ & ಎಸಿ – 2, ಕೋಪಾ – 55, ಪ್ಲಂಬರ್ – 2, ಪೈಂಟರ್‌ – 5, ಡೀಸೆಲ್ ಮೆಕ್ಯಾನಿಕ್ – 1, ಮೋಟಾರು ವಾಹನ – 1, ಡ್ರಾಫ್ಟ್‌ಮ್ಯಾನ್‌ – ಸಿವಿಲ್ – 1, ಡ್ರಾಫ್ಟ್‌ಮ್ಯಾನ್‌ – ಮೆಕ್ಯಾನಿಕಲ್ – 1 ಹುದ್ದೆಗಳಿವೆ. ಅಂಗೀಕೃತ ಬೋರ್ಡ್‌ನಿಂದ ಹತ್ತನೇ ತರಗತಿ ತೇರ್ಡೆಯಾದ ಮತ್ತು ಸಂಬಂದಿಸಿದ ಟ್ರೇಟ್‌ನಲ್ಲಿ ಐಟಿಐ ಮುಗಿಸಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅಭ್ಯರ್ಥಿಗಳಿಗೆ ಕನಿಷ್ಠ 16 ವರ್ಷ ತುಂಬಿರಬೇಕು ಮತ್ತು ಗರಿಷ್ಠ ವಯಸ್ಸು 23 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 3 ವರ್ಷ, ವಿಶೇಷ ಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ನೇರ ಸಂದರ್ಶನ ಎಲ್ಲಿ ಯಾವಾಗ?

ಮೇ 20ರಂದು ಬೆಳಗ್ಗೆ 9 ಗಂಟೆಗೆ ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಡೀಸೆಲ್ ಮೆಕ್ಯಾನಿಕ್ ಮತ್ತು ಮಧ್ಯಾಹ್ನ 1 ಗಂಟೆಗೆ ಫಿಟ್ಟರ್‌, ಪ್ಲಂಬರ್‌, ಪೈಂಟರ್‌ ಹುದ್ದೆಗಳ ಆಕಾಂಕ್ಷಿಗಳು ಹಾಜರಾಗಬೇಕು. ಮೇ 21ರ ಬೆಳಗ್ಗೆ 9 ಗಂಟೆಗೆ ಕೋಪಾ, ಮೋಟಾರು ವಾಹನ ಮೆಕ್ಯಾನಿಕ್‌ ಮತ್ತು ಮಧ್ಯಾಹ್ನ 1 ಗಂಟೆಗೆ ಎಲೆಕ್ಟ್ರೀಷಿಯನ್‌, ಡ್ರಾಫ್ಟ್‌ಮ್ಯಾನ್‌-ಮೆಕ್ಯಾನಿಕಲ್‌ ಹುದ್ದೆಗಳ ಸಂದರ್ಶನ ನಡೆಯಲಿದೆ. ಮೇ 22ರಂದು ಬೆಳಗ್ಗೆ 9 ಗಂಟೆಗೆ ಮೆಷಿನಿಸ್ಟ್‌, ರೆಫ್ರಿಜರೇಷನ್‌ & ಎಸಿ, ಟರ್ನರ್‌ ಹುದ್ದೆಗೆ ಮತ್ತು ಮಧ್ಯಾಹ್ನ 1 ಗಂಟೆಗೆ ಡ್ರಾಫ್ಟ್‌ಮ್ಯಾನ್‌ -ಸಿವಿಲ್‌, ವೆಲ್ಡರ್‌ಗಳ ಸಂದರ್ಶನ ಆಯೋಜಿಸಲಾಗಿದೆ. ಆಯ್ಕೆಯಾದವರಿಗೆ 1 ವರ್ಷಗಳ ತರಬೇತಿ ನೀಡಲಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ:

Auditorium, Behaind Department of Trainning & Development,
Hindustan Aeronautics Limited, Avionics Division, Balanagar, Hyderabad-500042.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಸಂದರ್ಶನಕ್ಕೆ ಹಾಜರಾಗುವ ವೇಳೆ ಬೇಕಾದ ದಾಖಲೆಗಳು

  • ಆಧಾರ್‌ ಕಾರ್ಡ್‌.
  • ಎಸ್ಸೆಸ್ಸೆಲ್ಸಿ ಮತ್ತು ಐಟಿಐಯ ಎಲ್ಲ ಸೆಮಿಸ್ಟರ್‌ನ ಸರ್ಟಿಫಿಕೆಟ್‌.
  • ಮೀಸಲಾತಿಯ ಸರ್ಟಿಫಿಕೆಟ್‌.
  • ಹೆಸರು ನೋಂದಣಿಯ ಮಾಡಿಕೊಂಡಿರುವ ಅಪ್ಲಿಕೇಷನ್‌ ಫಾರಂ.
  • ಎರಡು ಪಾಸ್‌ಪೋರ್ಟ್‌ ಅಳತೆಯ ಫೋಟೊ.

ಹೆಸರು ನೋಂದಾಯಿಸಲು ಇಲ್ಲಿ ಕ್ಲಿಕ್‌ ಮಾಡಿ.

ಹೆಚ್ಚಿನ ಮಾಹಿತಿಗೆ ಎಚ್‌ಎಎಲ್‌ನ ಅಧಿಕೃತ ವೆಬ್‌ಸೈಟ್‌ ವಿಳಾಸ https://www.hal-india.co.in/ಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಇಂಡಿಯಾ ಪೋಸ್ಟ್‌ ಪೇಮೆಂಟ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಪ್ರಮುಖ ಸುದ್ದಿ

‌Prajwal Revanna Case: ಜೀವನದಲ್ಲಿ ಮೊದಲ ಬಾರಿಗೆ ಗಡ್ಡ ಬಿಟ್ಟ ದೇವೇಗೌಡರು; ವೈರಿನಾಶಕ್ಕೆ ಶಪಥ!

‌Prajwal Revanna Case: ದೇವೇಗೌಡರ ಐವತ್ತು ವರ್ಷಗಳ ಕಾಲದ ಘನತೆಯ ರಾಜಕೀಯ ಜೀವನಕ್ಕೆ ಪೆನ್‌ ಡ್ರೈವ್‌ ಪ್ರಕರಣದಿಂದ ಭಾರಿ ಪೆಟ್ಟು ಬಿದ್ದಿದೆ. ಕುಟುಂಬಕ್ಕೆ ಮುಜುಗರ ಸೃಷ್ಟಿಯಾಗಿದೆ. ಅವಮಾನಿತರಾದ ದೇವೇಗೌಡರು ರೇವಣ್ಣ ಜೈಲಿಗೆ ಹೋದ ಬಳಿಕ, ಎಂದೂ ಗಡ್ಡ ಬಿಡದವರು ಮೊದಲ ಬಾರಿಗೆ ದಾಡಿ ಬಿಟ್ಟಿದ್ದರು. ಡಿಕೆಶಿ ಹಾಗೂ ಸಿದ್ದರಾಮಯ್ಯ ತಮಗೆ ಸೃಷ್ಟಿಸಿರುವ ಅವಮಾನಕ್ಕೆ ಪ್ರತೀಕಾರ ಮಾಡಲು ಎಚ್‌ಡಿಡಿ ಕುಟುಂಬ ಕುದಿಯುತ್ತಿದೆ.

VISTARANEWS.COM


on

HD Deve gowda prajwal revanna case
Koo

ಬೆಂಗಳೂರು: ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Jailed) ಅವರು ಇಂದು ಜಾಮೀನಿನಲ್ಲಿ ಬಿಡುಗಡೆ ಆಗುತ್ತಿದ್ದು, ಪ್ರಜ್ವಲ್‌ ರೇವಣ್ಣ ಪ್ರಕರಣದಲ್ಲಿ (Prajwal Revanna Case) ಕುಟುಂಬಕ್ಕೆ ಆಗಿರುವ ಅವಮಾನದ ಸೇಡು ತೀರಿಸಿಕೊಳ್ಳಲು ರಾಜಕೀಯ ಭೀಷ್ಮ, ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು (HD Deve Gowda) ಸಜ್ಜಾಗಿದ್ದಾರೆ. ಸದಾ ನೀಟ್‌ ಶೇವ್‌ ಮಾಡಿಕೊಳ್ಳುವ ದೇವೇಗೌಡರು ಮಗ ಜೈಲುಪಾಲಾದ ಬಳಿಕ ಮೊದಲ ಬಾರಿಗೆ ಗಡ್ಡ ಬಿಟ್ಟಿದ್ದು, ಇದೀಗ ಎದುರಾಳಿಗಳನ್ನು ಎದುರಿಸಲು ಎದ್ದು ಕೂತಿದ್ದಾರೆ.

ಇಂದು ರೇವಣ್ಣ ಮನೆಗೆ

ಹನ್ನೊಂದು ದಿನಗಳ ಹಿಂದೆ ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲೇ ಆರೆಸ್ಟ್ ಆಗಿದ್ದ ಎಚ್‌.ಡಿ ರೇವಣ್ಣ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಜೈಲರ್‌ಗೆ ಬಿಡುಗಡೆ ಆದೇಶ ಪ್ರತಿ ಸಿಗುವವರೆಗೂ ಬಿಡುಗಡೆ ದೊರೆಯುವುದಿಲ್ಲ. ಬೆಳಿಗ್ಗೆ ಹತ್ತುವರೆಗೆ ಕೋರ್ಟ್ ಕಲಾಪ ಆರಂಭವಾಗಲಿದ್ದು, ಹತ್ತುವರೆಗೆ ಪರಪ್ಪನ ಅಗ್ರಹಾರ ಜೈಲಿಗೆ ಜೈಲರ್‌ ಬರಲಿದ್ದಾರೆ. ರೇವಣ್ಣ ಪರ ವಕೀಲರಿಂದ ಜೈಲರ್‌ಗೆ ಬಿಡುಗಡೆ ಆದೇಶ ಪ್ರತಿ ನೀಡಿ ಹನ್ನೊಂದು ಗಂಟೆ ಬಳಿಕ ಬಿಡುಗಡೆ ಸಾಧ್ಯತೆ ಇದೆ. ಬಹುತೇಕ ಅಭಿಜಿನ್ ಮುಹೂರ್ತ 11.40ರ ಸಮಯದಲ್ಲಿ ಬಿಡುಗಡೆ ಸಾಧ್ಯತೆ ಇದೆ.

ರೇವಣ್ಣ ಬಿಡುಗಡೆ ಬಳಿಕ ನೇರವಾಗಿ ಪದ್ಮನಾಭ ನಗರಕ್ಕೆ ಆಗಮಿಸುವ ಸಾಧ್ಯತೆ ಇದೆ. ರೇವಣ್ಣ ಬಿಡುಗಡೆಯಿಂದ ಗೌಡರ ಕುಟುಂಬದಲ್ಲಿ ಸಂತೋಷ ಮೂಡಿದ್ದು, ಬಿಡುಗಡೆ ‌ಬಳಿಕ ತಂದೆ ದೇವೇಗೌಡರು, ಹೆಚ್‌ಡಿಕೆ ಸೇರಿ ಕುಟುಂಬ ಸದಸ್ಯರ ಜೊತೆಗೆ ರೇವಣ್ಣ ಚರ್ಚೆ ನಡೆಸುವ ಸಾಧ್ಯತೆ ಇದೆ. ಮಾಜಿ ಪಿಎಂ ಎಚ್.ಡಿ ದೇವೇಗೌಡರ ಆಶೀರ್ವಾದ ಪಡೆದು ಬಳಿಕ ಮುಂದಿನ ಕೆಲಸಗಳಿಗಾಗಿ ಹಾಸನ ಕಡೆ ಹೊರಡಲಿದ್ದಾರೆ.

ಹನ್ನೊಂದು ದಿನಗಳ ಸಂಕಷ್ಟದ ಮೂಡ್‌ನಿಂದ ಇಂದು ಹೊರಬಂದಿರುವ ದೇವೇಗೌಡರು, ನಿನ್ನೆ ರಾತ್ರಿ ಒಂದು ಗಂಟೆವರೆಗೂ ತಮ್ಮ ಮಕ್ಕಳೊಂದಿಗೆ ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದಾರೆ. ಮಾಜಿ ಸಿಎಂ ಎಚ್‌ಡಿಕೆ ಸೇರಿದಂತೆ ದೇವೇಗೌಡರ ಪುತ್ರಿಯರು ಸಹ ಇದರಲ್ಲಿ ಭಾಗಿಯಾಗಿದ್ದರು. ಇಂದು ಮನೆಯಲ್ಲಿ ಹಬ್ಬದ ವಾತಾವರಣವಿದ್ದು, ನಿನ್ನೆ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು.

“ಪೆನ್ ಡ್ರೈವ್ ಪ್ರಕರಣದಿಂದ ಈಗಾಗಲೇ ನಮ್ಮ ಕುಟುಂಬದ ಮಾನ ಬೀದಿಗೆ ಬಂದಿದೆ. ಲೋಕಸಭೆ ‌ಚುನಾವಣೆ ಹೊತ್ತಿನಲ್ಲಿ ಇಕ್ಕಟ್ಟಿಗೆ ಸಿಲುಕಿದ್ದೇವೆ. ಈ ಹೊತ್ತಲ್ಲಿ ರಾಜಕೀಯ ಹೇಳಿಕೆ ಸೇರಿದಂತೆ ಯಾವುದಕ್ಕೂ ಹೇಳಿಕೆ ನೀಡಬೇಡಿ. ಹೆಚ್ಚು ಮಾತನಾಡಬೇಡಿ” ಎಂದು ದೇವೇಗೌಡರು ಮಕ್ಕಳಿಗೆ ಸೂಚನೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಬಹಳ ಎಚ್ಚರಿಕೆಯಿಂದ ಹೆಜ್ಜೆ ಇಡುವಂತೆ ಎಚ್ಚರಿಸಿದ್ದಾರೆ.

ಸರ್ಕಾರದ ವಿರುದ್ಧ ಯಾವ ಅಸ್ತ್ರ?

ದೇವೇಗೌಡರ ಐವತ್ತು ವರ್ಷಗಳ ಕಾಲದ ಘನತೆಯ ರಾಜಕೀಯ ಜೀವನಕ್ಕೆ ಪೆನ್‌ ಡ್ರೈವ್‌ ಪ್ರಕರಣದಿಂದ ಭಾರಿ ಪೆಟ್ಟು ಬಿದ್ದಿದೆ. ಕುಟುಂಬಕ್ಕೆ ಮುಜುಗರ ಸೃಷ್ಟಿಯಾಗಿದೆ. ಅವಮಾನಿತರಾದ ದೇವೇಗೌಡರು ರೇವಣ್ಣ ಜೈಲಿಗೆ ಹೋದ ಬಳಿಕ, ಎಂದೂ ಗಡ್ಡ ಬಿಡದವರು ಮೊದಲ ಬಾರಿಗೆ ದಾಡಿ ಬಿಟ್ಟಿದ್ದರು. ಡಿಕೆಶಿ ಹಾಗೂ ಸಿದ್ದರಾಮಯ್ಯ ತಮಗೆ ಸೃಷ್ಟಿಸಿರುವ ಅವಮಾನಕ್ಕೆ ಪ್ರತೀಕಾರ ಮಾಡಲು ಎಚ್‌ಡಿಡಿ ಕುಟುಂಬ ಕುದಿಯುತ್ತಿದೆ.

ಈ ನಿಟ್ಟಿನಲ್ಲಿ ತಂತ್ರ ರೆಡಿಯಾಗುತ್ತಿದ್ದು, ರಾಜಕೀಯ, ಸಾಮಾಜಿಕ ಎಲ್ಲ ನೆಲೆಗಳಲ್ಲೂ ಎದುರಾಳಿಗಳಿಗೆ ಕೌಂಟರ್‌ ಕೊಡಲು ಸಜ್ಜಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಮೂರು ಅಸ್ತ್ರಗಳು ತಯಾರಾಗುತ್ತಿವೆ ಎನ್ನಲಾಗಿದೆ.

ಅಸ್ತ್ರ – 1: ಡಿಕೆಶಿ ಸಿದ್ದರಾಮಯ್ಯ ವಿರುದ್ಧ ಪ್ರಯೋಗ

ಒಕ್ಕಲಿಗ ಸಮುದಾಯದ ಮುಂದೆ ಡಿಕೆಶಿಯನ್ನು ವಿಲನ್ ಮಾಡುವುದು, ದೇವೇಗೌಡರ ಫ್ಯಾಮಿಲಿಯನ್ನು ಜೈಲಿಗೆ ಕಳುಹಿಸಿದ್ದೇ ಡಿಕೆಶಿ ಹಾಗೂ ಸಿದ್ದರಾಮಯ್ಯ ಅಂತ ಬಿಂಬಿಸುವುದು ಈ ಅಸ್ತ್ರ. ಡಿಕೆಶಿಗೆ ದೇವೇಗೌಡರ ಕುಟುಂಬ ನೋಡಿದರೆ ಆಗಲ್ಲ. ಹೀಗಾಗಿ ಪೆನ್ ಡ್ರೈವ್ ಕೇಸ್‌ನಲ್ಲಿ ನಮ್ಮನ್ನು ಸಿಕ್ಕಿ ಹಾಕಿಸಿದ್ದಾರೆ. ಸಿದ್ದರಾಮಯ್ಯಗೆ ಒಕ್ಕಲಿಗ ಸಮುದಾಯ ಕಂಡರೆ ಆಗಲ್ಲ ಅಂತ ಬಿಂಬಿಸುವುದು, ರಾಜ್ಯಾದ್ಯಂತ ಸರ್ಕಾರದ ನಡೆ ವಿರುದ್ಧ ಮೈತ್ರಿ ಪಕ್ಷದ ಜತೆ ಜನಾಭಿಪ್ರಾಯ ಸಂಗ್ರಹಿಸುವುದು, ಇವರ ತಪ್ಪು ಮರೆ ಮಾಚಲು ಪೆನ್ ಡ್ರೈವ್ ಪ್ರಕರಣ ತಂದರು ಅಂತ ಪ್ರಚಾರ ಮಾಡುವುದು ಇತ್ಯಾದಿಗಳ ಮೂಲಕ ಮುಗಿಬೀಳುವುದು.

ಅಸ್ತ್ರ – 2: ಭ್ರಷ್ಟಾಚಾರದ ಪ್ರಸ್ತಾಪ

ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿಚಾರಗಳನ್ನು ಪ್ರಸ್ತಾಪ ಮಾಡಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವುದು, ಈ ಹಿಂದೆ ಸರ್ಕಾರದ ಸಚಿವರ ವರ್ಗಾವಣೆ ದಂಧೆ ಸಂಬಂಧ ಇದೆ ಎನ್ನಲಾದ ಪೆನ್ ಡ್ರೈವ್ ಅಸ್ತ್ರ ಪ್ರಯೋಗ ಮಾಡುವುದು ಪ್ಲಾನ್‌ನಲ್ಲಿದೆ.

ಅಸ್ತ್ರ – 3: ಕಾನೂನು ಅಸ್ತ್ರಗಳು

ಡಿಕೆಶಿ ವಿರುದ್ಧ ಇರುವ, ಕೇಂದ್ರ ತನಿಖಾ ಏಜೆನ್ಸಿಗಳ ಮುಂದೆ ದಾಖಲಾಗಿರುವ ಪ್ರಕರಣಗಳಿಗೆ ಮರುಜೀವ ಕೊಡಿಸುವುದು, ಡಿಕೆಶಿಗೆ ಐಟಿ, ಇಡಿ, ಸಿಬಿಐ ಸಂಕಷ್ಟ ಎದುರಾಗುವಂತೆ ನೋಡಿಕೊಳ್ಳುವುದು, ಈ ಬಗ್ಗೆ ಕೇಂದ್ರದ ಮುಂದೆ ಇನ್ನಷ್ಟು ದಾಖಲೆ ನೀಡಿ ಮೈತ್ರಿ ಪಕ್ಷದ ಬೆಂಬಲ ಪಡೆಯುವುದು ಈ ಪ್ಲಾನ್‌ನಲ್ಲಿದೆ.

ಇದನ್ನೂ ಓದಿ: HD Revanna Bail: ನಿನ್ನೆ ಜಾಮೀನು ಸಿಕ್ಕರೂ ಇಂದು ಸಂಜೆಯವರೆಗೆ ರೇವಣ್ಣ ಜೈಲಿನಲ್ಲಿರಬೇಕು!

Continue Reading

ಪ್ರಮುಖ ಸುದ್ದಿ

HD Revanna Bail: ನಿನ್ನೆ ಜಾಮೀನು ಸಿಕ್ಕರೂ ಇಂದು ಸಂಜೆಯವರೆಗೆ ರೇವಣ್ಣ ಜೈಲಿನಲ್ಲಿರಬೇಕು!

HD Revanna Bail: ಇಂದು ರೇವಣ್ಣ ಅವರು ಪರಪ್ಪನ ಅಗ್ರಹರ ‌ಜೈಲಿನಿಂದ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ, ಜೆಡಿಎಸ್ ಕಾರ್ಯಕರ್ತರು ಪರಪ್ಪನ ಅಗ್ರಹಾರ ಜೈಲು ಬಳಿ ಸೇರುವ‌ ಸಾಧ್ಯತೆ ಇದೆ. ಹೀಗಾಗಿ ಜೈಲಿನ ರಸ್ತೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ.

VISTARANEWS.COM


on

HD Revanna Bail
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಹಾಗೂ ಅಪಹರಣ (Kidnap case) ಪ್ರಕರಣದಲ್ಲಿ ಆರು ದಿನಗಳಿಂದ ಪರಪ್ಪನ ಅಗ್ರಹಾರ ಜೈಲುವಾಸಿಯಾಗಿರುವ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna jailed) ಅವರಿಗೆ ನಿನ್ನೆ ಜಾಮೀನು (HD Revanna Bail) ದೊರೆತಿದೆ. ಆದರೆ ಇಂದು ಸಂಜೆಯವರೆಗೂ ಅವರು ಜೈಲಿನಲ್ಲಿರಬೇಕಾಗಿದೆ.

ಕಿಡ್ನಾಪ್ ಕೇಸ್‌ನಲ್ಲಿ ಜೈಲು ಸೇರಿದ್ದ ಎಚ್.ಡಿ.ರೇವಣ್ಣನವರಿಗೆ ಇಂದು ಸೆರೆವಾಸ ಅಂತ್ಯವಾಗಲಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಅವರು ಬಿಡುಗಡೆಯಾಗಲಿದ್ದಾರೆ. ಆದರೆ ಮೊದಲಿಗೆ ಜಾಮೀನಿನ ಶೂರಿಟಿ ಪ್ರಕ್ರಿಯೆಯನ್ನು ಕೋರ್ಟಿನಲ್ಲಿ ಮುಗಿಸಬೇಕು. ಬೇಲ್ ಕಾಪಿ ಜೈಲಿನ ಅಧಿಕಾರಿಗಳಿಗೆ ಮುಖತಃ ಬರಬೇಕು. ಬೇಲ್ ಕಾಪಿ ಬಂದ ಬಳಿಕ ಸಂಜೆ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ನಿನ್ನೆ ಸಂಜೆ ಜಾಮೀನು ಸಿಕ್ಕ ಖುಷಿಯಲ್ಲಿದ್ದ ರೇವಣ್ಣ ರಾತ್ರಿ 12 ಗಂಟೆ ಸುಮಾರಿಗೆ ನಿದ್ರೆಗೆ ಜಾರಿದ್ದರು. ಇಂದು ಬೆಳಿಗ್ಗೆ 4 ಗಂಟೆಗೆ ಎದ್ದು ಕೆಲ ಹೊತ್ತು ಬ್ಯಾರಕ್‌ನಲ್ಲಿ ವಾಕಿಂಗ್ ಮಾಡಿದ್ದಾರೆ. ಕೊಠಡಿಯಲ್ಲಿದ್ದ ದೇವರ ಪೋಟೋಗೆ ಪೂಜೆ ಮಾಡಿದ್ದಾರೆ. ಜೈಲು ಸಿಬ್ಬಂದಿ ನೀಡಿದ ಚಹಾವನ್ನು ಕುಡಿದು ರಿಲ್ಯಾಕ್ಸ್ ಆಗಿದ್ದು, ದಿನಪತ್ರಿಕೆ ಓದಿ ವಿದ್ಯಮಾನಗಳ ಕಡೆ ಕಣ್ಣಾಡಿಸಿದ್ದಾರೆ.

ಜೈಲಿಗೆ ಬಂದ ದಿನದಿಂದ ಮೌನಕ್ಕೆ ಜಾರಿದ್ದ ರೇವಣ್ಣ, ಆಪ್ತರ ಭೇಟಿ ವೇಳೆ ಕಣ್ಣೀರು ಹಾಕಿ ನೋವನ್ನು ಹೇಳಿಕೊಳ್ಳುತ್ತಿದ್ದರು. ಆರು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸೆರೆವಾಸ ಅನುಭವಿಸಿರುವ ಅವರಿಗೆ ನ್ಯಾಯಾಲಯ ಕೊನೆಗೂ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಇಂದು ರೇವಣ್ಣ ಅವರು ಪರಪ್ಪನ ಅಗ್ರಹರ ‌ಜೈಲಿನಿಂದ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ, ಜೆಡಿಎಸ್ ಕಾರ್ಯಕರ್ತರು ಪರಪ್ಪನ ಅಗ್ರಹಾರ ಜೈಲು ಬಳಿ ಸೇರುವ‌ ಸಾಧ್ಯತೆ ಇದೆ. ಹೀಗಾಗಿ ಜೈಲಿನ ರಸ್ತೆಯಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಇಬ್ಬರು ಎಸಿಪಿ, 6 ಜನ ಇನ್ಸ್ಪೆಕ್ಟರ್, 15 ಜನ‌ ಸಬ್ ಇನ್ಸ್ಪೆಕ್ಟರ್ ಸೇರಿ 200 ಸಿಬ್ಬಂದಿಯಿಂದ‌ ಭದ್ರತೆ ಒದಗಿಸಲಾಗಿದೆ. 12 ಗಂಟೆ ಒಳಗೆ ಕೋರ್ಟ್ ‌ಜಾಮೀನು ಪ್ರಕ್ರಿಯೆ ಮುಗಿಸಿ ರೇವಣ್ಣ ಪರ ವಕೀಲರು ಜಾಮೀನು ‌ಪ್ರತಿ ಪಡೆಯಲಿದ್ದು, 1‌ ಗಂಟೆಯೊಳಗೆ ಜಾಮೀನು ‌ಪ್ರತಿಯನ್ನು ಜೈಲು ತಲುಪಿಸುವ ಸಾಧ್ಯತೆ ಇದೆಯೆಂದು ತಿಳಿದುಬಂದಿದೆ.

ಎಚ್.ಡಿ. ರೇವಣ್ಣಗೆ ಜಾಮೀನು ಸಿಗುವುದಕ್ಕೆ ಕಾರಣಗಳೇನು?

  • ರೇವಣ್ಣ ಅವರೇ ಕಿಡ್ನ್ಯಾಪ್ ಮಾಡಿಸಿದ್ದು ಎನ್ನುವುದಕ್ಕೆ ಸಾಕ್ಷಿ ಇಲ್ಲ.
  • ಸಿಆರ್‌ಪಿಸಿ ಅಡಿ ಸಂತ್ರಸ್ತೆ ನೀಡಿದ್ದ ಹೇಳಿಕೆಯಲ್ಲೂ ಪ್ರಸ್ತಾಪ ಇಲ್ಲ.
  • ರಿಮ್ಯಾಂಡ್ ಅಪ್ಲಿಕೇಶನ್‌ನಲ್ಲಿ ಸಾಕ್ಷಿ ಒದಗಿಸಲು ಎಸ್‌ಐಟಿ ವಿಫಲವಾಗಿದೆ.
  • ಎಚ್‌.ಡಿ. ರೇವಣ್ಣ ಸೂಚನೆ ಮೇರೆಗೆ ಸಂತ್ರಸ್ತೆ ಕಿಡ್ನ್ಯಾಪ್ ಅನ್ನಲು ಸಾಕ್ಷಿ ಇಲ್ಲ.

ರೇವಣ್ಣ ಅವರಿಗೆ ಏಕೆ ಜಾಮೀನು ಕೊಡಲಾಗುತ್ತಿದೆ ಎಂಬುದಾಗಿ ಈ ಮೇಲಿನ ಕಾರಣಗಳನ್ನು ಉಲ್ಲೇಖಿಸಿ, ನ್ಯಾಯಾಧೀಶರು ಸ್ಪಷ್ಟವಾಗಿ ಆದೇಶಿಸಿದ್ದಾರೆ. ಆದರೆ, ಕೆಲವು ಷರತ್ತುಗಳನ್ನು ನ್ಯಾಯಾಲಯವು ವಿಧಿಸಿದೆ.

8 ಷರತ್ತುಗಳನ್ನು ವಿಧಿಸಿ ಬೇಲ್ ಕೊಟ್ಟ ಕೋರ್ಟ್!

  1. 5 ಲಕ್ಷ ರೂಪಾಯಿ ಮೌಲ್ಯದ ಬಾಂಡ್‌ ಕೊಡಬೇಕು
  2. ಇಬ್ಬರ ಶ್ಯೂರಿಟಿಯನ್ನು ಒದಗಿಸಿಕೊಡಬೇಕು
  3. ಯಾವ ಕಾರಣಕ್ಕೂ ದೇಶ ಬಿಟ್ಟು ಹೋಗಬಾರದು
  4. ಕೇಸ್ ಆಗಿರುವ ಕೆ.ಆರ್.ನಗರಕ್ಕೆ ಹೋಗಬಾರದು
  5. ಎಸ್‌ಐಟಿ ತನಿಖೆಗೆ ಸೂಕ್ತ ಸಹಕಾರ ನೀಡಲೇಬೇಕು
  6. ಯಾವುದೇ ರೀತಿಯ ಸಾಕ್ಷ್ಯ ನಾಶ ಮಾಡಬಾರದು
  7. ಪಾಸ್ ಪೋರ್ಟ್ ಅನ್ನು ಕೋರ್ಟ್‌ಗೆ ಸಲ್ಲಿಸಬೇಕು.
  8. ನ್ಯಾಯಾಲಯದ ಅನುಮತಿ ಇಲ್ಲದೇ ರಾಜ್ಯದಿಂದ ಹೊರಹೋಗುವಂತಿಲ್ಲ.

ಸಂತ್ರಸ್ತೆ ಹೇಳಿಕೆಯ ವಿಡಿಯೊ ಪ್ರಸ್ತಾಪ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸತತ ನಾಲ್ಕು ಗಂಟೆಗಳ ಕಾಲ ವಾದ – ಪ್ರತಿವಾದಗಳು ನಡೆದಿವೆ. ಕಲಾಪ ಆರಂಭವಾಗುತ್ತಿದ್ದಂತೆ ವಾದ ಮಂಡಿಸಿದ ಎಸ್‌ಐಟಿ ಪರ ಎಸ್‌ಪಿಪಿ ಜಯ್ನಾ ಕೊಠಾರಿ, 2 ವಿಚಾರಗಳಿಗೆ ಸಂಬಂಧಿಸಿ ಆರೋಪಿಗೆ ಜಾಮೀನು ಕೊಡಬೇಡಿ. ಒಂದು ಪ್ರಕರಣದ ಗಂಭೀರತೆಯನ್ನು ನೋಡಬೇಕಿದ್ದು, ಇದರಲ್ಲಿ ಶಿಕ್ಷೆ ಪ್ರಮಾಣ ಹೆಚ್ಚಿದೆ. ಕಿಡ್ನ್ಯಾಪ್ ಕೇಸಲ್ಲೂ ಈಗಾಗಲೇ 2ನೇ ಆರೋಪಿ ಹೇಳಿಕೆಯನ್ನು ಪಡೆಯಲಾಗಿದೆ. ಈ ನಡುವೆ ಸಂತ್ರಸ್ತೆಯ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಸಂತ್ರಸ್ತೆ ಸ್ಪಷ್ಟನೆ ನೀಡಿದ್ದಾರೆ ಎಂಬುದಾಗಿ ವಿಡಿಯೋ ವೈರಲ್ ಬಗ್ಗೆ ಕೋರ್ಟ್‌ಗೆ ಮಾಹಿತಿಯನ್ನು ನೀಡಿದರು.

ಮೊದಲು ತನಿಖಾ ವರದಿ ಕೊಡಿ ಎಂದ ನ್ಯಾಯಾಧೀಶರು

ಈ ವೇಳೆ ಮಧ್ಯಪ್ರವೇಶ ಮಾಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಡ್ಜ್ ಸಂತೋಷ್ ಗಜಾನನ ಭಟ್, ತನಿಖಾಧಿಕಾರಿಯ ಇನ್‌ವೆಸ್ಟಿಗೇಷನ್‌ ರಿಪೋರ್ಟ್ ಅನ್ನು ಮೊದಲು ಸಲ್ಲಿಸಿ. ಕಿಡ್ನ್ಯಾಪ್ ಕೇಸ್‌ ಸಂಬಂಧ ಏನೇನು ವಿಚಾರಗಳು ನಡೆದಿವೆ ಎಂಬುದನ್ನು ತಿಳಿಯಬೇಕು ಎಂದು ಎಸ್‌ಪಿಪಿಗೆ ಸೂಚಿಸಿದರು. ಆಗ ರೇವಣ್ಣ ಪರ ವಕೀಲ ಸಿ.ವಿ. ನಾಗೇಶ್‌, ತನಿಖಾ ವರದಿಯನ್ನು ನಮಗೂ ಕೊಟ್ಟಿಲ್ಲ ಎಂದು ಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ಮುಚ್ಚಿದ ಲಕೋಟೆಯಲ್ಲಿ ಇನ್‌ವೆಸ್ಟಿಗೇಷನ್ ರಿಪೋರ್ಟ್‌ ಅನ್ನು ಸಲ್ಲಿಸಲಾಯಿತು. ಇದಕ್ಕೆ ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್‌ರಿಂದ ಆಕ್ಷೇಪ ವ್ಯಕ್ತವಾಯಿತು. ಬಳಿಕ ತಮಗೂ ಒಂದು ಕಾಪಿ ನೀಡಲು ಕೇಳಿದ್ದು, ಅವರಿಗೂ ಒಂದು ಪ್ರತಿಯನ್ನು ನೀಡಲಾಯಿತು.

ಸಿ.ವಿ.ನಾಗೇಶ್ ವಾದ

ಇಬ್ಬರೂ ಎಸ್‌ಪಿಪಿಗಳ ವಾದ ಮಂಡನೆ ನಂತರ ಸಿ.ವಿ. ನಾಗೇಶ್ ವಾದವನ್ನು ಆರಂಭಿಸಿದರು. ಏಪ್ರಿಲ್ 29ಕ್ಕೆ ಕಿಡ್ನ್ಯಾಪ್ ಮಾಡಿದರೆ, ದೂರು ಕೊಡಲು ತಡ ಯಾಕೆ ಮಾಡಿದರು? ಸಂತ್ರಸ್ತ ಮಹಿಳೆ ಎಚ್.ಡಿ.ರೇವಣ್ಣ ಅವರ ಸಂಬಂಧಿಯಾಗಿದ್ದಾರೆ. ಸುಮಾರು ವರ್ಷ ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಕೆಲಸ ಮಾಡಿದ್ದವರನ್ನು ಯಾಕೆ ಕಿಡ್ನ್ಯಾಪ್ ಮಾಡಬೇಕು? ಮನೆ ಕೆಲಸ ಮಾಡುತ್ತಿದ್ದರಲ್ಲ, ಕರೆದುಕೊಂಡು ಬನ್ನಿ ಅಂದಿರಬಹುದು. ಇಲ್ಲಿ ಸಂತ್ರಸ್ತ ಮಹಿಳೆಯನ್ನು ಕಿಡ್ನ್ಯಾಪ್ ಮಾಡಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ರೇವಣ್ಣ ಅರೆಸ್ಟ್ ಆದ ದಿನವೇ ಸಂತ್ರಸ್ತೆ ಮಹಿಳೆ ಹುಣಸೂರಿನಲ್ಲಿ ಪತ್ತೆಯಾಗಿದ್ದಾರೆ. ಮೈಸೂರಿನ ಹುಣಸೂರು ಠಾಣಾ ವ್ಯಾಪ್ತಿಯಲ್ಲಿ ಮಹಿಳೆ ಪತ್ತೆ ಆಗಿದ್ದರು. ಸಂತ್ರಸ್ತ ಮಹಿಳೆ ಪ್ರಜ್ವಲ್ ರೇವಣ್ಣ ವಿರುದ್ಧ ಮಾತ್ರ ಆರೋಪಿಸಿದ್ದಾರೆ. ರೇವಣ್ಣ ವಿರುದ್ಧ ಸಂತ್ರಸ್ತೆ ಮಹಿಳೆ ಯಾವುದೇ ಆರೋಪವನ್ನು ಮಾಡಿಲ್ಲ ಎಂದು ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದರು.

ಸಂತ್ರಸ್ತ ಮಹಿಳೆಯಿಂದ ಪ್ರಜ್ವಲ್ ರೇವಣ್ಣ ವಿರುದ್ಧ ರೇಪ್ ಆರೋಪದ ಬಗ್ಗೆ ವಾದ ಮಂಡಿಸಿದ ಸಿ.ವಿ. ನಾಗೇಶ್‌, ಸಂತ್ರಸ್ತೆಯು ಸಿಆರ್‌ಪಿಸಿ 161 ಅಡಿಯಲ್ಲಿ ಹೇಳಿಕೆ ನೀಡುವಾಗ, ಕೇವಲ ಪ್ರಜ್ವಲ್‌ ವಿರುದ್ಧ ಅತ್ಯಾಚಾರ ಅಂತಾ ಆರೋಪ ಮಾಡಿದ್ದಾಳೆ. ಇದೇ ವೇಳೆ ಪ್ರಕರಣಕ್ಕೆ ಸಂಬಂಧಿಸಿ ಎರಡು ರಿಮ್ಯಾಂಡ್‌ ಅರ್ಜಿ ಸಲ್ಲಿಕೆಯಾಗಿದೆ. ಕಿಡ್ನ್ಯಾಪ್ ಮಾಡಿದ್ದಾರೆ ಅಂತಾ ಮಹಿಳೆಯ ಮಗನಿಗೆ ಹೇಗೆ ಗೊತ್ತಾಯ್ತು? ಅದು ಊಹೆಯಷ್ಟೇ. ಸಂತ್ರಸ್ತೆಯ ಮಗನಿಗೆ ಯಾರೂ ಕಾಲ್ ಮಾಡಿ ಡಿಮ್ಯಾಂಡ್ ಮಾಡಿಲ್ಲ. ಇನ್ನು ಸಂತ್ರಸ್ತ ಮಹಿಳೆಯನ್ನು ಅಂದು ಹುಣಸೂರಿನ ಬಳಿ ರಕ್ಷಣೆ ಮಾಡಲಾಗಿದೆ. ಆಪ್ತ ಸಮಾಲೋಚನೆ ಮಾಡಿ, ಆಕೆಯನ್ನು ಸುರಕ್ಷಿತ ಕೊಠಡಿಯಲ್ಲಿಡಲಾಗಿದೆ. ಈ ಪ್ರಕರಣ ಸಂಬಂಧ ಹೇಳಿಕೆ ದಾಖಲಿಸಿಲ್ಲ ಏಕೆ? ಇಲ್ಲಿಯ ತನಕ ರೇವಣ್ಣ ವಿರುದ್ಧ ಯಾವುದೇ ಸಾಕ್ಷಿಯನ್ನೂ ಸಂಗ್ರಹಿಸಿಲ್ಲ, ಸಂತ್ರಸ್ತೆಯನ್ನು ಕರೆದೊಯ್ದು ಸ್ಥಳ ಮಹಜರು ಮಾಡಿಸಿಲ್ಲ. ಸಂತ್ರಸ್ತ ಮಹಿಳೆಯನ್ನು ಕೇವಲ ಆಪ್ತ ಸಮಾಲೋಚನೆಯಲ್ಲಿ ಇರಿಸಿದ್ದಾರೆ ಎಂದು ರೇವಣ್ಣ ಪರ ವಕೀಲ ಸಿ.ವಿ.ನಾಗೇಶ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.

ಸಂತ್ರಸ್ತ ಮಹಿಳೆಯನ್ನು ಹುಣಸೂರಿನ ತೋಟದಿಂದ ರಕ್ಷಣೆ ಮಾಡಿದರಾ? ಎಸ್‌ಐಟಿ ಎಲ್ಲಿಂದ ಮಹಿಳೆಯನ್ನು ಕರೆತಂದರು? ಅವರ ಸಂಬಂಧಿಕರ ಮನೆಯಿಂದ ಸಂತ್ರಸ್ತೆಯನ್ನು ಕರೆ ತಂದಿದ್ದಾರೆ. ಅದಕ್ಕೆ ಸಾಕ್ಷಿಯಾಗಿ ಎರಡು ಕಡೆ ರೆಕಾರ್ಡ್ ಆಗಿದೆ. ಒಂದು ಕಡೆ ಫೋಟೋ ಶಾಪ್‌ವೊಂದರ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನೊಂದು ಕಡೆ ತರಕಾರಿ ಅಂಗಡಿ ಸಿಸಿ ಕ್ಯಾಮರಾದಲ್ಲಿ ಇದು ಸೆರೆಯಾಗಿದೆ. ಅನುಮತಿ ನೀಡಿದರೆ ಸೆರೆಯಾಗಿರುವ ದೃಶ್ಯವನ್ನು ತೋರಿಸಲು ನಾವು ಸಿದ್ಧ. ಈಗ ನ್ಯಾಯಾಲಯದಲ್ಲಿಯೇ ಪ್ಲೇ ಮಾಡುತ್ತೇವೆ. ಸ್ಪೆಷಲ್ ಇನ್‌ವೆಸ್ಟಿಗೇಷನ್ ಟೀಮ್ ವಿರುದ್ಧವೇ ಸಿ.ವಿ. ನಾಗೇಶ್ ಆರೋಪಿಸಿದರು.

ಕಿಡ್ನ್ಯಾಪ್ ಪ್ರಕರಣದಲ್ಲಿ ಎಸ್‌ಐಟಿಯವರೇ ಟ್ಯಾಂಪರಿಂಗ್ ಮಾಡುತ್ತಿದ್ದಾರೆ. ಆದರೆ, ಎಸ್‌ಪಿಪಿಯವರು ಸಂತ್ರಸ್ತೆ ಹೇಳಿಕೆಯನ್ನು ಟ್ಯಾಂಪರಿಂಗ್ ಆಗಿದೆ ಎಂದು ಹೇಳಿದ್ದಾರೆ. ವೈರಲ್ ಆದ ಸ್ಪಷ್ಟನೆ ವಿಡಿಯೊದಲ್ಲಿ ಸಂತ್ರಸ್ತೆಯೇ ಹೇಳಿಕೊಂಡಿದ್ದಾರೆ. ನನ್ನನ್ನು ಯಾರೂ ಕಿಡ್ನ್ಯಾಪ್ ಮಾಡಿಲ್ಲವೆಂದಿದ್ದಾರೆ. ನಮ್ಮ ಕುಟುಂಬಕ್ಕೆ ತೊಂದರೆಯಾದರೆ ಅವರೇ ಹೊಣೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಸಂಬಂಧಿಕರ ಮನೆಯಲ್ಲಿದ್ದೇನೆ. ಬೇಗ ಬರುತ್ತೇನೆ ಎಂದೂ ಹೇಳಿದ್ದಾರೆ. ಯಾರೂ ಬೆದರಿಕೆ ಹಾಕಿಲ್ಲ, ಬಲವಂತವಾಗಿಯೂ ಕರೆದೊಯ್ದಿಲ್ಲ ಎಂದು ಹೇಳಿಕೊಂಡಿದ್ದಾರೆ. ಹೀಗೆಲ್ಲಾ ಸಂತ್ರಸ್ತೆಯೇ ವಿಡಿಯೊ ಮೂಲಕ ಹೇಳಿದ್ದಾರೆ. ಹಾಗಾಗಿ ಕಿಡ್ನ್ಯಾಪ್ ಹೇಗೆ ಆಗುತ್ತದೆ. ಈ ಕಾರಣಕ್ಕಾಗಿ ರೇವಣ್ಣ ಅವರಿಗೆ ಜಾಮೀನು ನೀಡಬೇಕು ಎಂದು ಸಿ.ವಿ. ನಾಗೇಶ್‌ ಕೋರಿದರು.

ಕಿಡ್ನ್ಯಾಪ್ ಪ್ರಕರಣದಲ್ಲಿ ಚುನಾವಣಾ ತಕರಾರು ಅರ್ಜಿ ತರುವುದು ಬೇಡ. ಎಸ್‌ಪಿಪಿ ವಾದದ ಅಂಶಗಳನ್ನು ಆಕ್ಷೇಪಿಸಿ ರೇವಣ್ಣ ಪರ ವಕೀಲರು ವಾದ ಮಂಡಿಸಿದರು. ಎಚ್.ಡಿ.ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪಗಳು ಸಾಬೀತಾಗಿಲ್ಲ. ಹಿಂದಿನ ಕೇಸ್‌ಗಳು ಸಾಬೀತಾಗಿದ್ದರೆ ಯಾಕೆ ಎಲ್ಲವೂ ಬಿ ರಿಪೋರ್ಟ್ ಆಗುತ್ತಿತ್ತು? ಎಂದು ಪ್ರಶ್ನೆ ಮಾಡಿದರು.

ರಿಮ್ಯಾಂಡ್‌ ಅಪ್ಲಿಕೇಷನ್‌ನಲ್ಲಿ ಎಸ್‌ಐಟಿ ಲೋಪವೆಸಗಿದೆ. ಅದರಲ್ಲಿ ಸಂತ್ರಸ್ತೆಯ ಹೇಳಿಕೆ ಒಂದು ಪ್ಯಾರಾ ಇದೆ. ಅದು ಬಿಟ್ಟು ರಿಮ್ಯಾಂಡ್‌ ಅಪ್ಲಿಕೇಷನ್‌ನಲ್ಲಿ ಆರೋಪಿ ಹೇಳಿಕೆಯೇ ಇದೆ. ಸಂತ್ರಸ್ತ ಮಹಿಳೆಯ ಹೇಳಿಕೆ ಒಂದು ಪ್ಯಾರಾ ಬಿಟ್ಟರೆ ಬೇರೆ ಇಲ್ಲವೇ ಇಲ್ಲ. ಯಾವಾಗಲೂ ಹೇಳಿಕೆ ದಾಖಲು ಮಾಡಿಕೊಳ್ಳುವುದೇ ಎಸ್‌ಐಟಿ ಕೆಲಸನಾ? ಸಂತ್ರಸ್ತೆ ಏನು ಹೇಳ್ತಾರೆ? ಏನು ಹೇಳಲ್ಲ ಅಂತಾ ಹೇಳಿಕೆ ದಾಖಲಾಗಬೇಕು. ಆಕೆ ಎಸ್‌ಐಟಿ ಸುಪರ್ದಿಯಲ್ಲಿರುವಾಗ ಏನನ್ನೂ ಮಾಡಿಲ್ಲ. ರಿಮ್ಯಾಂಡ್ ಅಪ್ಲಿಕೇಷನ್‌ನಲ್ಲಿರುವಂತೆ ಯಾವುದೇ ಸಾಕ್ಷಿ ಸಂಗ್ರಹಿಸಿಲ್ಲ. ಆದರೆ, ನ್ಯಾಯಾಲಯಕ್ಕೆ ಎಸ್ಐಟಿ ರಿಮ್ಯಾಂಡ್ ಅಪ್ಲಿಕೇಷನ್ ಸಲ್ಲಿಸಿದ್ದಾರೆ ಎಂದು ನಾಗೇಶ್ ಹೇಳಿದರು.

ಇದನ್ನೂ ಓದಿ: Prajwal Revanna Case: ರೇವಣ್ಣಗೆ ಜಾಮೀನು ಹಿನ್ನೆಲೆ ವಿದೇಶದಿಂದ ಪ್ರಜ್ವಲ್‌ ವಾಪಸ್?‌; ಕೋರ್ಟ್‌ಗೆ ಶರಣಾಗುವ ಸಾಧ್ಯತೆ

Continue Reading
Advertisement
T20 World Cup 2024
ಕ್ರಿಕೆಟ್4 mins ago

T20 World Cup 2024: ನೆದರ್ಲೆಂಡ್ಸ್‌ ಟಿ20 ವಿಶ್ವಕಪ್ ತಂಡದಲ್ಲಿ ಮೂವರು ಭಾರತೀಯ ಆಟಗಾರರಿಗೆ ಸ್ಥಾನ

Davanagere News Marriage at an early age
ದಾವಣಗೆರೆ4 mins ago

Davanagere News : ಇಳಿ ವಯಸ್ಸಿನಲ್ಲಿ ಕೂಡಿ ಬಂದ ಕಂಕಣ ಭಾಗ್ಯ; ದೂರಾಯಿತು ಒಂಟಿತನ

Ramayana Movie
ಸಿನಿಮಾ5 mins ago

Ramayana Movie: ದೇಶದ ಅತ್ಯಂತ ದುಬಾರಿ ಚಿತ್ರ ಎನಿಸಿಕೊಳ್ಳಲಿದೆ ʼರಾಮಾಯಣʼ; ಬಜೆಟ್‌ ನಿಮ್ಮ ಊಹೆಗೂ ನಿಲುಕದ್ದು

gold rate today
ಚಿನ್ನದ ದರ14 mins ago

Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

pm narendra modi nomination varanasi
ಪ್ರಮುಖ ಸುದ್ದಿ53 mins ago

PM Narendra Modi: ವಾರಾಣಸಿಯಲ್ಲಿ ನರೇಂದ್ರ ಮೋದಿ ನಾಮಪತ್ರ ಅನುಮೋದಿಸುವ ನಾಲ್ವರು ಯಾರು?

karnataka Rain Effected
ಬೆಂಗಳೂರು1 hour ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Viral Video
ವೈರಲ್ ನ್ಯೂಸ್1 hour ago

Viral Video: ಛೇ..ಇವನೆಂಥಾ ಪಾಪಿ..! ನಾಯಿ ಮೇಲೆ ಪದೇ ಪದೇ ಹಲ್ಲೆ ನಡೆಸಿ ವಿಕೃತಿ

Salman Khan
ಬಾಲಿವುಡ್1 hour ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

RCB Vs CSK
ಕ್ರೀಡೆ1 hour ago

RCB vs CSK: ಆರ್​ಸಿಬಿ ಪ್ಲೇ ಆಫ್​ ಹಾದಿಗೆ ಕೊಳ್ಳಿ ಇಡಲಿದೆಯೇ ಮಳೆ; ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

Narendra Modi
ದೇಶ2 hours ago

Narendra Modi Live: ವಾರಾಣಸಿಯಲ್ಲಿ ನಮೋ ನಾಮಿನೇಶನ್‌; ಹ್ಯಾಟ್ರಿಕ್‌ ಗೆಲುವಿನ ಹುಮ್ಮಸ್ಸಿನಲ್ಲಿ ಮೋದಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain Effected
ಬೆಂಗಳೂರು1 hour ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ8 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ18 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ18 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ18 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ19 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ19 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ1 day ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ1 day ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

ಟ್ರೆಂಡಿಂಗ್‌