IPL 2024 : ಚೆನ್ನೈಗೆ ಮಣಿದ ಗುಜರಾತ್ ಟೈಟಾನ್ಸ್​, ಚಾಂಪಿಯನ್ನರಿಗೆ ಸತತ ಎರಡನೇ ಜಯ - Vistara News

ಪ್ರಮುಖ ಸುದ್ದಿ

IPL 2024 : ಚೆನ್ನೈಗೆ ಮಣಿದ ಗುಜರಾತ್ ಟೈಟಾನ್ಸ್​, ಚಾಂಪಿಯನ್ನರಿಗೆ ಸತತ ಎರಡನೇ ಜಯ

IPL 2024 : ಚೆನ್ನೈ ತಂಡಕ್ಕೆ ಹಾಲಿ ಆವೃತ್ತಿಯಲ್ಲಿ ಸತತ ಎರಡನೇ ಜಯವಾಗಿದೆ. ಇದರೊಂದಿಗೆ ಉತ್ತಮ ಆರಂಭವನ್ನು ಪಡೆದುಕೊಂಡಿದೆ.

VISTARANEWS.COM


on

Chennai Super Kings
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚೆನ್ನೈ: ಬೌಲಿಂಗ್, ಬ್ಯಾಟಿಂಗ್ ಹಾಗೂ ಫೀಲ್ಡಿಂಗ್​ನಲ್ಲಿ ಅಸಾಮಾನ್ಯ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್​ (Chennai Super Kings) ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 7ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (Gujarat Titans ) ವಿರುದ್ಧ 63 ರನ್​​ಗಳ ಬೃಹತ್ ಜಯ ದಾಖಲಿಸಿದೆ. ಈ ಮೂಲಕ ಹಾಲಿ ಚಾಂಪಿಯನ್ನರು ಸತತವಾಗಿ ಎರಡನೇ ವಿಜಯವನ್ನು ತನ್ನದಾಗಿಸಿಕೊಂಡಿದ್ದಾರೆ. ಶಿವಂ ದುಬೆ (23 ಎಸೆಕ್ಕೆ 52 ರನ್​) ಅರ್ಧ ಶತಕದೊಂದಿಗೆ ಮಿಂಚಿದರು ಹಾಗೂ ಗೆಲುವಿನಲ್ಲಿ ದೊಡ್ಡ ಪಾತ್ರ ವಹಿಸಿದರು.

ಇಲ್ಲಿನ ಚೆಪಾಕ್ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ಟಾಸ್ ಗೆದ್ದ ಗುಜರಾತ್​ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಚೆನ್ನೈ ತಂಡ ಭರ್ಜರಿಯಾಗಿ ಬ್ಯಾಟ್ ಬೀಸಿ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 206 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಗುಜರಾತ್ ತಂಡ ತನ್ನೆಲ್ಲಾ ಓವರ್​ಗಳು ಮುಕ್ತಾಯಗೊಂಡಾಗ 8 ವಿಕೆಟ್​ಗೆ 143 ರನ್ ಬಾರಿಸಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ: Shubman Gill : ರೋಹಿತ್ ರೀತಿಯಲ್ಲೇ ಟಾಸ್​ ವೇಳೆ ತಪ್ಪು ಮಾಡಿದ ಶುಬ್ಮನ್​ ಗಿಲ್​

ದೊಡ್ಡ ಮೊತ್ತವನ್ನು ಪೇರಿಸಲು ಹೊರಟ ಗುಜರಾತ್​ ತಂಡ ಹೆಚ್ಚು ದಿಟ್ಟತನ ತೋರಲಿಲ್ಲ. ಚೆನ್ನೈನ ಸಂಘಟಿತ ಬೌಲಿಂಗ್ ಸಾಮರ್ಥ್ಯಕ್ಕೆ ಬೆದರಿ ನಿಯಮಿತವಾಗಿ ವಿಕೆಟ್​ ಕಳೆದುಕೊಂಡಿತು. ವೃದ್ಧಿಮಾನ್ ಸಾಹ 21 ರನ್ ಬಾರಿಸಿದರೆ, ಶುಬ್ಮನ್​ ಗಿಲ್​ ಮತ್ತೊಮ್ಮೆ ವೈಫಲ್ ಎದುರಿಸಿ 8 ರನ್​ಗೆ ಔಟಾದರು. ಸಾಯಿ ಸುದರ್ಶನ್ 37 ರನ್ ಬಾರಿಸಿದರು. ವಿಜಯ ಶಂಕರ್ 12 ರನ್ ಬಾರಿಸಿ ಧೋನಿ ಹಿಡಿದ ಅದ್ಬುತ ಕ್ಯಾಚ್​ಗೆ ಬಲಿಯಾದರು. ಒಮರ್ಜೈ ಕೊಡುಗೆ 11 ರನ್.

ಭರ್ಜರಿ ಬ್ಯಾಟಿಂಗ್ ಮಾಡಿದ ಚೆನ್ನೈ

ಟಾಸ್ ಸೋತು ಮೊದಲು ಮೊದಲು ಬ್ಯಾಟ್ ಮಾಡಿದ ಚೆನ್ನೈಉತ್ತಮ ಆರಂಭವನ್ನೇ ಪಡೆಯಿತು. ನ್ಯೂಜಿಲ್ಯಾಂಡ್ ಎಡಗೈ ಆಟಗಾರ ರಚಿನ್ ರವೀಂದ್ರ 20 ಎಸೆತಗಳಲ್ಲಿ 47 ರನ್ ಬಾರಿಸಿ ಚೆನ್ನೈ ಅಭಿಮಾನಿಗಳ ಮನ ಸೆಳೆದರು. ಮತ್ತೊಬ್ಬ ಆರಂಭಿಕ ಆಟಗಾರ ಹಾಗೂ ನಾಯಕ ಋತುರಾಜ್​ ಕೂಡ 46 ರನ್ ಬಾರಿಸಿದರು. ಮೊದಲ ವಿಕೆಟ್​ಗೆ 62 ರನ್ ಬಾರಿಸಿ ಚೆನ್ನೈ ಅಜಿಂಕ್ಯ ರಹಾನೆ ಅವರನ್ನು 12 ರನ್​ಗಳಿಗೆ ಕಳೆದುಕೊಳ್ಳುವ ಮೂಲಕ ಬೇಸರಕ್ಕೆ ಒಳಗಾಯಿತು.

ದುಬೆ ಅರ್ಧ ಶತಕ

ಮುಂಬಡ್ತಿ ಪಡೆದು ಬ್ಯಾಟ್ ಮಾಡಲು ಬಂದ ಎಡಗೈ ಬ್ಯಾಟರ್ ಶಿವಂ ದುಬೆ ಮತ್ತೊಮ್ಮೆ ಮಿಂಚಿದರು. ಚೆನ್ನೈ ಸ್ಟೇಡಿಯಮ್​ನ ಎಲ್ಲ ಕಡೆಗೆ ಬೌಂಡರಿ ಸಿಕ್ಸರ್​ಗಳನ್ನು ಬಾರಿಸುವ ಮೂಲಕ ಗಮನ ಸೆಳದರು. ಅವರು ಔಟಾಗುವ ಮೊದಲು 23 ಎಸೆತಗಳಿಗೆ 51 ರನ್ ಬಾರಿಸಿದರು. ಅವರ ಅಬ್ಬರದಿಂದಾಗಿ ಚೆನ್ನೈ ಸ್ಕೋರ್ ಬೋರ್ಡ್​ ಬೆಳೆಯಿತು. ಇದು ಹಾಲಿ ಆವೃತ್ತಿಯ ದುಬೆ ಪಾಲಿನ ಸತತ ಎರಡು ಅರ್ಧ ಶತಕ. ಈ ಮೂಲಕ ಅವರು ಮುಂಬರುವ ಟಿ20 ವಿಶ್ವ ಕಪ್​​ ತಂಡದ ಬಾಗಿಲು ಬಡಿದರು.

ಡ್ಯಾರಿಲ್ ಮಿಚೆಲ್​ 20 ಎಸೆತಕ್ಕೆ 24 ರನ್ ಬಾರಿಸಿದರೆ, ಯುವ ಬ್ಯಾಟರ್ ಸಮೀರ್ ರಿಜ್ವಿ 6 ಎಸೆತಕ್ಕೆ 14 ರನ್ ಬಾರಿಸಿ ಗಮನ ಸೆಳೆದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

IPL 2024 : ಗುರಿ ಬಿಟ್ಟು ಬೇರೆ ಕಡೆಗೆ ಪ್ರಯಾಣಿಸಿದ ಕೆಕೆಆರ್​ ಆಟಗಾರರಿದ್ದ ವಿಮಾನ!

IPL 2024: ಕೋಲ್ಕತಾ ನೈಟ್ ರೈಡರ್ಸ್ ವಿಮಾನವು ರಾತ್ರಿ 8:50ಕ್ಕೆ ಕೋಲ್ಕೊತಾದ ಬದಲಿಗೆ ಗುವಾಹಟಿಯಲ್ಲಿ ಇಳಿಯುತ್ತಿದ್ದಂತೆ, ತಂಡದ ಮೂಲದಿಂದ ಮಾಹಿತಿ ಹೊರಗೆ ಬಂತು. ಲಕ್ನೋದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಕೆಕೆಆರ್​​ನ ಚಾರ್ಟರ್ ವಿಮಾನವನ್ನು ಪ್ರತಿಕೂಲ ಹವಾಮಾನದಿಂದಾಗಿ ಗುವಾಹಟಿಗೆ ತಿರುಗಿಸಲಾಗಿದೆ. ವಿಮಾನವು ಪ್ರಸ್ತುತ ಗುವಾಹಟಿ ವಿಮಾನ ನಿಲ್ದಾಣದಲ್ಲಿ ನಿಂತಿದೆ” ಎಂದು ಫ್ರ್ಯಾಂಚೈಸ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

VISTARANEWS.COM


on

IPL 2024: KKR's Flight to Kolkata Unexpectedly Diverted Mid-Air
Koo

ಬೆಂಗಳೂರು: ಲಕ್ನೊ ಸೂಪರ್​ ಜೈಂಟ್ಸ್​ ತಂಡದ ವಿರುದ್ಧದ ಐಪಿಎಲ್​ ಪಂದ್ಯದ (IPL 2024) ಬಳಿಕ ಕೋಲ್ಕತಾ ನೈಟ್ ರೈಡರ್ಸ್ (Kolkata Knight Riders) ತಂಡದ ಆಟಗಾರರು ಲಕ್ನೋದಿಂದ ಕೋಲ್ಕತ್ತಾಗೆ ಪ್ರಯಾಣಿಸುತ್ತಿದ್ದ ಪ್ರಯಾಣವು ಅನಿರೀಕ್ಷಿತವಾಗಿ ಬೇರೆ ಕಡೆಗೆ ಸಾಗಿದ ಪ್ರಸಂಗ ನಡೆದಿದೆ. ಪ್ರತಿಕೂಲ ಹವಾಮಾನದಿಂದಾಗಿ ಅವರು ಸಾಗುತ್ತಿದ್ದ ಚಾರ್ಟರ್ ವಿಮಾನವನ್ನು ಕೋಲ್ಕೊತಾದಲ್ಲಿ ಇಳಿಸಲು ಸಾಧ್ಯವಾಗದ ಕಾರಣ ಗುವಾಹಟಿಗೆ ತಿರುಗಿಸಲಾಗಿತ್ತು. ಈ ವಿಷಯವನ್ನು ಕೋಲ್ಕೊತಾ ನೈಟ್​ ರೈಡರ್ಸ್​ ತಂಡ ಹೇಳಿಕೊಂಡಿದೆ

ಯೋಜನೆಗಳ ಹಠಾತ್ ಬದಲಾವಣೆಯನ್ನು ತಂಡವು ಸೋಮವಾರ ಸಂಜೆ ಇನ್ಸ್ಟಾಗ್ರಾಮ್​ನಲ್ಲಿ ವಿವರಿಸಿತು. ಇದು ಅವರ ಮುಂದಿನ ಪಂದ್ಯಕ್ಕಾಗಿ ಕುತೂಹಲದಿಂದ ಕಾಯುತ್ತಿರುವ ಅಭಿಮಾನಿಗಳಲ್ಲಿ ಹಲವಾರು ಕೌತುಕಗಳನ್ನು ಹುಟ್ಟಿಕೊಳ್ಳುವಂತೆ ಮಾಡಿತು.

ಗುವಾಹಟಿಗೆ ತೆರಳಿದ ಕೆಕೆಆರ್ ಚಾರ್ಟರ್ ವಿಮಾನ

ಕೋಲ್ಕತಾ ನೈಟ್ ರೈಡರ್ಸ್ ವಿಮಾನವು ರಾತ್ರಿ 8:50ಕ್ಕೆ ಕೋಲ್ಕೊತಾದ ಬದಲಿಗೆ ಗುವಾಹಟಿಯಲ್ಲಿ ಇಳಿಯುತ್ತಿದ್ದಂತೆ, ತಂಡದ ಮೂಲದಿಂದ ಮಾಹಿತಿ ಹೊರಗೆ ಬಂತು. ಲಕ್ನೋದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಕೆಕೆಆರ್​​ನ ಚಾರ್ಟರ್ ವಿಮಾನವನ್ನು ಪ್ರತಿಕೂಲ ಹವಾಮಾನದಿಂದಾಗಿ ಗುವಾಹಟಿಗೆ ತಿರುಗಿಸಲಾಗಿದೆ. ವಿಮಾನವು ಪ್ರಸ್ತುತ ಗುವಾಹಟಿ ವಿಮಾನ ನಿಲ್ದಾಣದಲ್ಲಿ ನಿಂತಿದೆ” ಎಂದು ಫ್ರ್ಯಾಂಚೈಸ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಸ್ವಲ್ಪ ಸಮಯದ ನಂತರ, ಕೋಲ್ಕತ್ತಾಗೆ ಮರಳಲು ಎಲ್ಲ ಅವಕಾಶಗಳು ಸಿಕ್ಕಿತು. ಬಳಿಕ ಅವರ ವಿಮಾನ ರಾತ್ರಿ 11:00 ಕ್ಕೆ ಕೋಲ್ಕೊತಾಗೆ ಮರಳಿತಿಉ.

ಎಲ್​ಎಸ್​ಜಿ ವಿರುದ್ಧ ಭರ್ಜರಿ ವಿಜಯ

ಲಕ್ನೋದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಕೆಕೆಆರ್ ತಂಡವು ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ತಂಡವನ್ನು 98 ರನ್ಗಳಿಂದ ಸೋಲಿಸಿತ್ತು. ಈ ಗೆಲುವಿನೊಂದಿಗೆ ಕೆಕೆಆರ್ 11 ಪಂದ್ಯಗಳಿಂದ 16 ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು ಮತ್ತು ಪ್ಲೇಆಪ್​​ನಲ್ಲಿ ಬಹುತೇಕ ಖಚಿತ ಸ್ಥಾನ ಭದ್ರಪಡಿಸಿತು.

ಗೌತಮ್ ಗಂಭೀರ್ ನಾಯಕತ್ವದಲ್ಲಿ 2014ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಕೆಕೆಆರ್, ಈ ಋತುವಿನಲ್ಲಿ ಎಂಟು ಗೆಲುವುಗಳನ್ನು ಪಡೆದಿದೆ. ಲೀಗ್ ಹಂತದ ಅಗ್ರ ಎರಡು ಸ್ಥಾನಗಳನ್ನು ತಲುಪಲು ಕೇವಲ ಮೂರು ಪಂದ್ಯಗಳು ಬಾಕಿ ಉಳಿದಿವೆ.

ಇದನ್ನೂ ಓದಿ: T20 World Cup : ಕೊಹ್ಲಿಯನ್ನು ಎದುರಿಸಲು ಪ್ಲ್ಯಾನ್​ ರೆಡಿ ಇದೆ ಎಂದ ಬಾಬರ್ ಅಜಮ್​

ಮೇ 11 ರಂದು ಈಡನ್ ಗಾರ್ಡನ್ಸ್​ನಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಮುಂದಿನ ಪಂದ್ಯದ ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಇದು ಋತುವಿನ ಕೊನೆಯ ತವರು ಪಂದ್ಯವಾಗಿದೆ. ಅಲ್ಲಿ ಅವರು ತಮ್ಮ ಏಳು ತವರು ಪಂದ್ಯಗಳಲ್ಲಿ ಐದರಲ್ಲಿ ಗೆದ್ದ ನಂತರ ತಮ್ಮ ಪ್ರಾಬಲ್ಯ ಗಟ್ಟಿಗೊಳಿಸುವ ಗುರಿಯನ್ನು ಹೊಂದಿದ್ದಾರೆ.

ಕಳೆದ ತಿಂಗಳು ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ ಸೋಲುಗಳು ಈಡನ್ ಗಾರ್ಡನ್ಸ್ನಲ್ಲಿ ಅವರ ದಾಖಲೆಯಲ್ಲಿ ಏಕೈಕ ಕಳಂಕವಾಗಿದೆ.

ಮುಂಬೈ ನಂತರ, ನೈಟ್ ರೈಡರ್ಸ್ ಅಹಮದಾಬಾದ್ಗೆ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ, ನಂತರ ಗುವಾಹಟಿಯ ಬರ್ಸಪಾರಾ ಕ್ರೀಡಾಂಗಣದಲ್ಲಿ ರಾಜಸ್ಥಾನ ವಿರುದ್ಧ ಲೀಗ್ ಹಂತದ ಫೈನಲ್ ಪಂದ್ಯ ನಡೆಯಲಿದೆ.

Continue Reading

ದೇಶ

Kulgam: ಪೂಂಚ್‌ ದಾಳಿಗೆ ಸೇನೆ ಸೇಡು; ಒಬ್ಬ ಲಷ್ಕರ್‌ ಕಮಾಂಡರ್‌ ಸೇರಿ ಮೂವರು ಉಗ್ರರ ಖತಂ

Kulgam: ಹತ ಮೂವರು ಉಗ್ರರಲ್ಲಿ ಬಸಿತ್‌ ದರ್‌ ಎಂಬಾತನ ಹತ್ಯೆಯು ಪ್ರಾಮುಖ್ಯತೆ ಪಡೆದಿದೆ. ಈತನು ಲಷ್ಕರೆ ತಯ್ಬಾದ ದಿ ರೆಸಿಸ್ಟನ್ಸ್‌ ಫ್ರಂಟ್‌ (TRF) ಕಮಾಂಡರ್‌ ಆಗಿದ್ದು, ಸೈನಿಕರ ಪಟ್ಟಿಯಲ್ಲಿ ಎ ಗ್ರೇಡ್‌ ಉಗ್ರನಾಗಿದ್ದಾನೆ. ಈತನ ಕುರಿತು ಮಾಹಿತಿ ನೀಡಿದರೆ 10 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಪೊಲೀಸರು ಘೋಷಿಸಿದ್ದರು.

VISTARANEWS.COM


on

Kulgam
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಕೆಲ ದಿನಗಳ ಹಿಂದಷ್ಟೇ ಭಾರತೀಯ ವಾಯುಪಡೆಯ ಬೆಂಗಾವಲು ವಾಹನಗಳ ಮೇಲೆ ನಡೆಸಿದ ದಾಳಿಗೆ ಭಾರತೀಯ ಸೇನೆಯು (Indian Army) ಸೇಡು ತೀರಿಸಿಕೊಂಡಿದೆ. ಕುಲ್ಗಾಮ್‌ನಲ್ಲಿ (Kulgam) ಲಷ್ಕರೆ ತಯ್ಬಾ ಉಗ್ರ ಸಂಘಟನೆಯ ಕಮಾಂಡರ್‌, ಮೋಸ್ಟ್‌ ವಾಂಟೆಡ್‌ ಉಗ್ರ ಸೇರಿ ಒಟ್ಟು ಮೂವರು ಉಗ್ರರನ್ನು ಭದ್ರತಾ ಸಿಬ್ಬಂದಿಯು ಹೊಡೆದುರುಳಿಸಿದ್ದಾರೆ. ಇದರೊಂದಿಗೆ ಉಗ್ರರ ವಿರುದ್ಧ ಸೇನೆ ಕೈಗೊಂಡ ಕಾರ್ಯಾಚರಣೆಯಲ್ಲಿ ಮಹತ್ವದ ಮುನ್ನಡೆ ಸಿಕ್ಕಂತಾಗಿದೆ.

ಸೋಮವಾರ (ಮೇ 6) ತಡರಾತ್ರಿಯೇ ಕುಲ್ಗಾಮ್‌ನ ರೆಡ್ವಾಣಿ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಭದ್ರತಾ ಸಿಬ್ಬಂದಿಗೆ ಗುಪ್ತಚರ ಮಾಹಿತಿ ದೊರೆತಿತ್ತು. ಇದರ ಅನ್ವಯ ರಾತ್ರೋರಾತ್ರಿ ಸೈನಿಕರು ಕಾರ್ಯಾಚರಣೆ ಕೈಗೊಂಡು ಮೂವರನ್ನು ಹತ್ಯೆಗೈದಿದ್ದಾರೆ. ಭಾರತದ ಸೈನಿಕರು ಕಾರ್ಯಾಚರಣೆ ಕೈಗೊಳ್ಳುತ್ತಲೇ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದಾರೆ. ಆದರೆ, ಕಾರ್ಯಾಚರಣೆ ವೇಳೆ ಭಾರಿ ಮುನ್ನಡೆ ಸಾಧಿಸಿದ ಯೋಧರು ಒಬ್ಬ ಕಮಾಂಡರ್‌ ಸೇರಿ ಮೂವರು ಉಗ್ರರನ್ನು ಹತ್ಯೆಗೈದಿದ್ದಾರೆ.

ಹತ ಬಸಿತ್‌ ದರ್.

ಬಸಿತ್‌ ದರ್‌ ಮೋಸ್ಟ್‌ ವಾಂಟೆಡ್‌

ಹತ ಮೂವರು ಉಗ್ರರಲ್ಲಿ ಬಸಿತ್‌ ದರ್‌ ಎಂಬಾತನ ಹತ್ಯೆಯು ಪ್ರಾಮುಖ್ಯತೆ ಪಡೆದಿದೆ. ಈತನು ಲಷ್ಕರೆ ತಯ್ಬಾದ ದಿ ರೆಸಿಸ್ಟನ್ಸ್‌ ಫ್ರಂಟ್‌ (TRF) ಕಮಾಂಡರ್‌ ಆಗಿದ್ದು, ಸೈನಿಕರ ಪಟ್ಟಿಯಲ್ಲಿ ಎ ಗ್ರೇಡ್‌ ಉಗ್ರನಾಗಿದ್ದಾನೆ. ಈತನ ಕುರಿತು ಮಾಹಿತಿ ನೀಡಿದರೆ 10 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಪೊಲೀಸರು ಘೋಷಿಸಿದ್ದರು. ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ, ಪೊಲೀಸರು ಹಾಗೂ ನಾಗರಿಕರ ಹತ್ಯೆ ಸೇರಿ ಈತನ ವಿರುದ್ಧ 18 ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದಷ್ಟೇ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಸೂರನ್ಕೋಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆ(IAF)ಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ಭಯೋತ್ಪಾದಕರು ನಡೆಸಿದ ಭಾರಿ ಗುಂಡಿನ ದಾಳಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, ಐವರು ಗಂಭೀರವಾಗಿ ಗಾಯಗೊಂಡಿದ್ದರು. ಪೂಂಚ್‌ನಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಓಡಾಡುತ್ತಿರುವ ಬಗ್ಗೆ ಮೊದಲೇ ಸೇನೆಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ನಿಟ್ಟಿನಲ್ಲಿ ಅರೆ ಸೈನಿಕ ಪಡೆ ಮತ್ತು ಪೊಲೀಸರು ಅವರ ಪತ್ತೆಗೆ ಕಾರ್ಯಾಚರಣೆ ಕೈಗೆತ್ತಿಕೊಂಡಿತ್ತು. ಅಷ್ಟರಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಇನ್ನು ಈ ಆಪರೇಷನ್‌ನಲ್ಲಿ ಇದುವರೆಗೆ ಯಾರೂ ಅರೆಸ್ಟ್‌ ಆಗಿಲ್ಲ ಎಂದು ಅಧಿಕೃತ ಮೂಲಗಳು ತಿಳಿಸಿವೆ. 

ಇದನ್ನೂ ಓದಿ: ಹಿಂದೂ ಸಂಘಟನೆಯ ನಾಯಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ಮೌಲ್ವಿಯ ಬಂಧನ

Continue Reading

ಕ್ರೀಡೆ

T20 World Cup : ಕೊಹ್ಲಿಯನ್ನು ಎದುರಿಸಲು ಪ್ಲ್ಯಾನ್​ ರೆಡಿ ಇದೆ ಎಂದ ಬಾಬರ್ ಅಜಮ್​

T20 World Cup: ಪಾಕಿಸ್ತಾನ ವಿರುದ್ಧ 16 ಏಕದಿನ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 52.15ರ ಸರಾಸರಿಯಲ್ಲಿ 678 ರನ್ ಗಳಿಸಿದ್ದಾರೆ. ಟಿ20ಐನಲ್ಲಿ ಪಾಕಿಸ್ತಾನ ವಿರುದ್ಧ ಕೊಹ್ಲಿಯ ಪ್ರಾಬಲ್ಯವು ಪರಿಣಾಮಕಾರಿಯಾಗಿದೆ. ಅವರು 10 ಪಂದ್ಯಗಳಲ್ಲಿ 81.33 ಸರಾಸರಿಯಲ್ಲಿ 488 ರನ್ ಗಳಿಸಿದ್ದಾರೆ ಮತ್ತು ಐದು ಅರ್ಧಶತಕಗಳೊಂದಿಗೆ 123.85 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

VISTARANEWS.COM


on

t20 world cup
Koo

ಬೆಂಗಳೂರು: ಆಧುನಿಕ ಯುಗದ ಶ್ರೇಷ್ಠ ಬ್ಯಾಟರ್​ಗಳಲ್ಲಿ ಒಬ್ಬರಾಗಿರುವ ವಿರಾಟ್ ಕೊಹ್ಲಿ ಯಾವಾಗಲೂ ಪಾಕಿಸ್ತಾನ ವಿರುದ್ಧ ಅದ್ಭುತ ಪ್ರದರ್ಶನ ನೀಡುತ್ತಾರೆ. ಹೀಗಾಗಿ ಅವರಿಗಾಗಿ ವಿಶೇಷ ರಣ ತಂತ್ರ ರೂಪಿಸುತ್ತಿದ್ದಾರೆ. ಕೊಹ್ಲಿ ಸಾಂಪ್ರದಾಯಿಕ ಎದುರಾಳಿಗಳ ವಿರುದ್ಧ ಇನ್ನೂ ಟೆಸ್ಟ್ ಪಂದ್ಯಗಳನ್ನು ಆಡಿಲ್ಲ. ಆದರೆ, ವೈಟ್-ಬಾಲ್ ಸ್ವರೂಪಗಳಲ್ಲಿ ಅದ್ಭುತ ದಾಖಲೆ ಹೊಂದಿದ್ದಾರೆ. ಹಾಗೆಯೇ ಮುಂದಿನ ಟಿ20 ವಿಶ್ವ ಕಪ್​ನಲ್ಲಿಯೂ (T20 World Cup) ಪಾರಮ್ಯ ಸಾಧಿಸುವ ಯೋಜನೆ ಹೊಂದಿದ್ದಾರೆ.

ಪಾಕಿಸ್ತಾನ ವಿರುದ್ಧ 16 ಏಕದಿನ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 52.15ರ ಸರಾಸರಿಯಲ್ಲಿ 678 ರನ್ ಗಳಿಸಿದ್ದಾರೆ. ಟಿ20ಐನಲ್ಲಿ ಪಾಕಿಸ್ತಾನ ವಿರುದ್ಧ ಕೊಹ್ಲಿಯ ಪ್ರಾಬಲ್ಯವು ಪರಿಣಾಮಕಾರಿಯಾಗಿದೆ. ಅವರು 10 ಪಂದ್ಯಗಳಲ್ಲಿ 81.33 ಸರಾಸರಿಯಲ್ಲಿ 488 ರನ್ ಗಳಿಸಿದ್ದಾರೆ ಮತ್ತು ಐದು ಅರ್ಧಶತಕಗಳೊಂದಿಗೆ 123.85 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ಜೂನ್ 9 ರಂದು ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ 20 ವಿಶ್ವಕಪ್ 2024 ರಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಲಿದ್ದು, ಮತ್ತೊಮ್ಮೆ ತಂಡಕ್ಕಾಗಿ ಪ್ರದರ್ಶನ ನೀಡುವ ಜವಾಬ್ದಾರಿ ಕೊಹ್ಲಿ ಹೆಗಲ ಮೇಲಿದೆ. ಇದು ಪಾಕಿಸ್ತಾನ ತಂಡದ ಚಿಂತೆಯನ್ನು ಹೆಚ್ಚಳ ಮಾಡಿದೆ. ಆದರೆ, ವಿರಾಟ್​ ತಮಗೆ ಏನೂ ಆಗಿಲ್ಲ ಎಂಬುದಾಗಿ ಹೇಳಿದ್ದಾರೆ. ಜತೆಗೆ ಕೊಹ್ಲಿಗಾಗಿ ರಣ ತಂತ್ರ ರೆಡಿಯಾಗಿದೆ ಎಂಬುದಾಗಿಯೂ ನುಡಿದಿದ್ದಾರೆ.

ಎಲ್ಲರಿಗೂ ಇದೆ ಯೋಜನೆ

ಒಂದು ತಂಡವಾಗಿ ನೀವು ಯಾವಾಗಲೂ ವಿಭಿನ್ನ ತಂಡಗಳ ವಿರುದ್ಧ ಮತ್ತು ಅವರ ಸಾಮರ್ಥ್ಯಕ್ಕೆ ಅನುಗುಣವಾಗಿ ಯೋಜಿಸುತ್ತೀರಿ. ನಾವು ಕೇವಲ ಒಬ್ಬ ಆಟಗಾರನ ವಿರುದ್ಧ ಏನನ್ನೂ ಯೋಜಿಸುವುದಿಲ್ಲ. ನಾವು ಎಲ್ಲಾ 11 ಆಟಗಾರರಿಗಾಗಿ ಯೋಜಿಸಿದ್ದೇವೆ. ನ್ಯೂಯಾರ್ಕ್​​ನ ಪರಿಸ್ಥಿತಿಗಳ ಬಗ್ಗೆ ನಮಗೆ ಹೆಚ್ಚು ತಿಳಿದಿಲ್ಲ ನಾವು ಅದಕ್ಕೆ ಅನುಗುಣವಾಗಿ ಯೋಜಿಸುತ್ತೇವೆ. ವಿರಾಟ್ ಕೊಹ್ಲಿ ಅತ್ಯುತ್ತಮ ಆಟಗಾರರಲ್ಲಿ ಒಬ್ಬರು. ನಾವು ಅವರ ವಿರುದ್ಧವೂ ಯೋಜನೆಗಳನ್ನು ಇಟ್ಟುಕೊಂಡಿದ್ದೇವೆ ಎಂದು ಐರ್ಲೆಂಡ್ ಪ್ರವಾಸಕ್ಕೆ ಮುಂಚಿತವಾಗಿ ಪತ್ರಿಕಾಗೋಷ್ಠಿಯಲ್ಲಿ ಬಾಬರ್ ಹೇಳಿದರು.

ಇದನ್ನೂ ಓದಿ: T20 World Cup : ಬುಮ್ರಾಗೆ ವಿಶ್ರಾಂತಿ ನೀಡಲು ನಿರಾಕರಿಸಿದ ಮುಂಬೈ ಇಂಡಿಯನ್ಸ್​; ವಿಶ್ವ ಕಪ್​ ಆಡಲು ಸಮಸ್ಯೆ

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆದ 2022 ರ ಆವೃತ್ತಿಯ ಟಿ 20 ವಿಶ್ವಕಪ್​ನ್ಲಲಿ ಪಾಕಿಸ್ತಾನ ವಿರುದ್ಧ ಭಾರತದ ಗೆಲುವಿನಲ್ಲಿ ವಿರಾಟ್ ಕೊಹ್ಲಿ ಮುಂಚೂಣಿ ಪಾತ್ರ ವಹಿಸಿದ್ದರು. 160 ರನ್​ಗಳ ಗುರಿ ಬೆನ್ನತ್ತಿದ ಮೆನ್ ಇನ್ ಬ್ಲೂ ತಂಡ 6.1 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 31 ರನ್ ಗಳಿಸಿತು. ಒತ್ತಡದ ಪರಿಸ್ಥಿತಿಯ ನಡುವೆ, ಕೊಹ್ಲಿ 53 ಎಸೆತಗಳಲ್ಲಿ 82* ರನ್ ಗಳಿಸಿದ್ದರು. ಮತ್ತು ಹಾರ್ದಿಕ್ ಪಾಂಡ್ಯ (37 ಎಸೆತಗಳಲ್ಲಿ 40 ರನ್) ಅವರೊಂದಿಗೆ 113 ರನ್​ಗಳ ಜೊತೆಯಾಟವನ್ನು ಹಂಚಿಕೊಂಡಿದ್ದರು.

Continue Reading

ಪ್ರಮುಖ ಸುದ್ದಿ

Lok Sabha Election 2024: ಸಂಜೆ 5ಗಂಟೆವರೆಗೆ ಶೇ.66.05 ವೋಟಿಂಗ್‌; ಚಿಕ್ಕೋಡಿಯಲ್ಲಿ ಅತಿ ಹೆಚ್ಚು

Lok Sabha Election 2024: ರಾಜ್ಯದ 14 ಕ್ಷೇತ್ರಗಳ ಪೈಕಿ ಚಿಕ್ಕೋಡಿ ಕ್ಷೇತ್ರದಲ್ಲಿ ಗರಿಷ್ಠ ಶೇ.72.75 ಮತದಾನವಾಗಿದ್ದು, ಕಲಬುರಗಿಯಲ್ಲಿ ಕನಿಷ್ಠ ಶೇ.57.20 ವೋಟಿಂಗ್‌ ಆಗಿದೆ.

VISTARANEWS.COM


on

Lok Sabha Election 2024
ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಹಳ್ಳಿ ಜೀವನದ ವಿಷಯಾಧಾರಿತ ಮತಗಟ್ಟೆ ಆಕರ್ಷಕವಾಗಿ ನಿರ್ಮಾಣಗೊಂಡಿದ್ದು, ಮತದಾರರ ಗಮನ ಸೆಳೆಯಿತು.
Koo

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ (lok sabha election 2024) ಮಂಗಳವಾರ ನಡೆದಿದ್ದು, ಮತದಾರರು ಉತ್ಸಾಹದಿಂದ ಹಕ್ಕು ಚಲಾವಣೆ ಮಾಡಿದ್ದಾರೆ. ಸಂಜೆ 5ಗಂಟೆವರೆಗೆ ಶೇ.66.05 ಮತದಾನ (Voter Turnout) ನಡೆದಿದೆ.

14 ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆಗೆ ಆರಂಭವಾಗಿದ್ದ ಮತದಾನ ಸಂಜೆ 6ಗಂಟೆವರೆಗೆ ನಡೆಯಲಿದೆ. ಬೆಳಗ್ಗೆ ಮೊದಲ ಎರಡು ಗಂಟೆಗಳಲ್ಲಿ ಅಂದರೆ 9 ಗಂಟೆವರೆಗೆ ಶೇ.9.45% ಮತದಾನ ದಾಖಲಾಗಿತ್ತು. ಬಳಿಕ 11 ಗಂಟೆಗೆ ಶೇ.24.48 ಹಾಗೂ 1 ಗಂಟೆವರೆಗೆ ಶೇ.41.59 ಮತದಾನ ವರದಿಯಾಗಿತ್ತು. ಅದೇ ರೀತಿ ಮಧ್ಯಾಹ್ನ 3ಗಂಟೆವರೆಗೆ ಶೇ.54.20 ವೋಟಿಂಗ್‌ ನಡೆದಿದೆ. ಇನ್ನು ಸಂಜೆ 5 ಗಂಟೆ ವೇಳೆಗೆ ಶೇ. 66.05 ವೋಟಿಂಗ್‌ ದಾಖಲಾಗಿದೆ. ಚಿಕ್ಕೋಡಿ ಕ್ಷೇತ್ರದಲ್ಲಿ ಗರಿಷ್ಠ ಶೇ.72.75 ಮತದಾನವಾಗಿದ್ದು, ಕಲಬುರಗಿಯಲ್ಲಿ ಕನಿಷ್ಠ ಶೇ.57.20 ವೋಟಿಂಗ್‌ ಆಗಿದೆ.

ಕ್ಷೇತ್ರವಾರು ಮತದಾನ ಮಾಹಿತಿ

ಚಿಕ್ಕೋಡಿ-ಶೇ. 72.75
ಬೆಳಗಾವಿ- ಶೇ.65.67
ಬಾಗಲಕೋಟೆ- ಶೇ.65.55
ವಿಜಯಪುರ-ಶೇ.60.95
ಕಲಬುರಗಿ- ಶೇ. 57.20
ರಾಯಚೂರು-ಶೇ.59.48
ಬೀದರ್‌- ಶೇ.60.17
ಕೊಪ್ಪಳ- ಶೇ.66.05
ಬಳ್ಳಾರಿ-ಶೇ.68.94
ಹಾವೇರಿ-ಶೇ.71.90
ಧಾರವಾಡ-ಶೇ.67.15
ಉತ್ತರ ಕನ್ನಡ – 69.57
ದಾವಣಗೆರೆ-ಶೇ.70.90
ಶಿವಮೊಗ್ಗ-72.07

ಇದನ್ನೂ ಓದಿ Lok Sabha Election 2024: ರಾಜ್ಯದಲ್ಲಿ ಮಧ್ಯಾಹ್ನ 3 ಗಂಟೆ ವೇಳೆಗೆ ಶೇ. 54.20 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು?

Continue Reading
Advertisement
Lok Sabha Election 2024
Lok Sabha Election 202453 seconds ago

Lok Sabha Election 2024: ಕೈಗಳಿಲ್ಲದಿದ್ದರೂ ಮತದಾನ ಮಾಡಿ ಮಾದರಿಯಾದ ಅಂಕಿತ್ ಸೋನಿ

Met Gala 2024
ಫ್ಯಾಷನ್6 mins ago

Met Gala 2024: ಮೆಟ್ ಗಾಲಾದಲ್ಲಿ 200 ಕ್ಯಾರಟ್ ವಜ್ರ ಧರಿಸಿ ಗಮನ ಸೆಳೆದ ಸುಧಾ ರೆಡ್ಡಿ! ಯಾರಿವರು?

IPL 2024: KKR's Flight to Kolkata Unexpectedly Diverted Mid-Air
ಪ್ರಮುಖ ಸುದ್ದಿ12 mins ago

IPL 2024 : ಗುರಿ ಬಿಟ್ಟು ಬೇರೆ ಕಡೆಗೆ ಪ್ರಯಾಣಿಸಿದ ಕೆಕೆಆರ್​ ಆಟಗಾರರಿದ್ದ ವಿಮಾನ!

Akshaya Tritiya 2024
ಧಾರ್ಮಿಕ13 mins ago

Akshaya Tritiya 2024: ಅಕ್ಷಯ ತೃತೀಯದಂದು ಚಿನ್ನ ಖರೀದಿಗೆ ಶುಭ ಮುಹೂರ್ತ ಯಾವುದು?

Kulgam
ದೇಶ23 mins ago

Kulgam: ಪೂಂಚ್‌ ದಾಳಿಗೆ ಸೇನೆ ಸೇಡು; ಒಬ್ಬ ಲಷ್ಕರ್‌ ಕಮಾಂಡರ್‌ ಸೇರಿ ಮೂವರು ಉಗ್ರರ ಖತಂ

Lok Sabha Election
Latest39 mins ago

Lok Sabha Election : ರಾಜಕೀಯಕ್ಕಾಗಿ ದ್ವೇಷ ಸೃಷ್ಟಿ; ಬಿಜೆಪಿ ವಿರುದ್ಧ ವಿಡಿಯೊ ಮೂಲಕ ಟೀಕೆ ಮಾಡಿದ ಸೋನಿಯಾ ಗಾಂಧಿ

guava leaves benefits
ಆರೋಗ್ಯ50 mins ago

Guava Leaves Benefits: ಕೇವಲ ಸೀಬೆ ಹಣ್ಣಲ್ಲ, ಎಲೆಯಿಂದಲೂ ಎಷ್ಟೊಂದು ಪ್ರಯೋಜನಗಳು!

t20 world cup
ಕ್ರೀಡೆ1 hour ago

T20 World Cup : ಕೊಹ್ಲಿಯನ್ನು ಎದುರಿಸಲು ಪ್ಲ್ಯಾನ್​ ರೆಡಿ ಇದೆ ಎಂದ ಬಾಬರ್ ಅಜಮ್​

Lok Sabha Election 2024
ಪ್ರಮುಖ ಸುದ್ದಿ1 hour ago

Lok Sabha Election 2024: ಸಂಜೆ 5ಗಂಟೆವರೆಗೆ ಶೇ.66.05 ವೋಟಿಂಗ್‌; ಚಿಕ್ಕೋಡಿಯಲ್ಲಿ ಅತಿ ಹೆಚ್ಚು

School Jobs
ಪ್ರಮುಖ ಸುದ್ದಿ1 hour ago

School Jobs: 25 ಸಾವಿರ ಶಿಕ್ಷಕರ ವಜಾ ಆದೇಶಕ್ಕೆ ಸುಪ್ರೀಂ ತಡೆ; ಮಮತಾ ಸರ್ಕಾರಕ್ಕೆ ಚಾಟಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ1 hour ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ3 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

ಟ್ರೆಂಡಿಂಗ್‌