IPL 2024 : ಆಟಗಾರರಿಗೆ ಇಂಗ್ಲಿಷ್ ಗೊತ್ತಿಲ್ಲದ್ದು ಆರ್​ಸಿಬಿ ಸೋಲಿಗೆ ಕಾರಣ; ಮಾಜಿ ಆಟಗಾರನ ವಿಭಿನ್ನ ವಿಶ್ಲೇಷಣೆ - Vistara News

ಪ್ರಮುಖ ಸುದ್ದಿ

IPL 2024 : ಆಟಗಾರರಿಗೆ ಇಂಗ್ಲಿಷ್ ಗೊತ್ತಿಲ್ಲದ್ದು ಆರ್​ಸಿಬಿ ಸೋಲಿಗೆ ಕಾರಣ; ಮಾಜಿ ಆಟಗಾರನ ವಿಭಿನ್ನ ವಿಶ್ಲೇಷಣೆ

IPL 2024: ಕೆಲವರು ಮಾತ್ರ ಅಂತರರಾಷ್ಟ್ರೀಯ ಆಟಗಾರರು. ಉಳಿದವರೆಲ್ಲರೂ ಭಾರತೀಯರು ಮತ್ತು ಅವರಲ್ಲಿ ಅರ್ಧದಷ್ಟು ಜನರಿಗೆ ಇಂಗ್ಲಿಷ್ ಸರಿಯಾಗಿ ಅರ್ಥವಾಗುವುದಿಲ್ಲ. ನೀವು ಅವರನ್ನು ಹೇಗೆ ಪ್ರೇರೇಪಿಸುವಿರಿ? ಅವರೊಂದಿಗೆ ಸಮಯ ಕಳೆಯುವವರು ಯಾರು? ಅವರೊಂದಿಗೆ ಯಾರು ಮಾತನಾಡುತ್ತಾರೆ? ಆ ತಂಡದಲ್ಲಿ ಒಬ್ಬನೇ ಒಬ್ಬ ಭಾರತೀಯ ಸಿಬ್ಬಂದಿ ಇಲ್ಲ. . ಕನಿಷ್ಠ ಆಟಗಾರರು ನಂಬಬಹುದಾದ ಯಾರಾದರೂ ಇರಬೇಕು,” ಎಂದು ಸೆಹ್ವಾಗ್ ಆರ್​ಸಿಬಿ ಮ್ಯಾನೇಜ್ಮೆಂಟ್ ಅನ್ನು ಪ್ರಶ್ನಿಸಿದ್ದಾರೆ.

VISTARANEWS.COM


on

IPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತೊಂದು ನಿರಾಶಾದಾಯಕ ಸೋಲಿಗೆ ಒಳಗಾಗಿದೆ. ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧ ಇಂಡಿಯನ್ ಪ್ರೀಮಿಯರ್ ಲೀಗ್ (IPL 2024) 17ನೇ ಆವೃತ್ತಿಯಲ್ಲಿ ಆಘಾತಕಾರಿ ಫಲಿತಾಂಶ ಎದುರಿಸಿದೆ. ಪ್ರತಿ ಋತುವಿನಲ್ಲಿ, ಫ್ರಾಂಚೈಸಿ ತಮ್ಮ ಅಭಿಮಾನಿಗಳ ಹೃದಯದಲ್ಲಿ ಭರವಸೆಗಳನ್ನು ಮೂಡಿಸುತ್ತದೆ/ ನಂತರ ಕಳಪೆ ಪ್ರದರ್ಶನದಿಂದ ಅವರಿಗೆ ಬೇಸರ ಮೂಡಿಸುತ್ತದೆ. 2024 ರ ಅಭಿಯಾನವು ಅದಕ್ಕಿಂತ ಭಿನ್ನವಾಗಿಲ್ಲ. ಆರ್​ಸಿಬಿ 7 ಪಂದ್ಯಗಳಲ್ಲಿ 6 ಸೋಲುಗಳನ್ನು ಅನುಭವಿಸಿ 10 ತಂಡಗಳ ಪಾಯಿಂಟ್ಸ್​​ ಟೇಬಲ್​ನಲ್ಲಿ ಕೊನೆಯ ಸ್ಥಾನದಲ್ಲಿದೆ. ಪಂಡಿತರು ಆರ್​​ಸಿಬಿಯ ಸೋಲಿಗೆ ಕಾರಣಗಳನ್ನು ಹುಡುಕುತ್ತಲೇ ಇದ್ದಾರೆ. ಅಂತೆಯೇ ಮಾಜಿ ಸ್ಫೋಟಕ ಬ್ಯಾಟರ್​​ ವಿರೇಂದ್ರ ಸೆಹ್ವಾಗ್ ಈ ತಮ್ಮದೇ ಅಭಿಪ್ರಾಯಗಳನ್ನು ನೀಡಿದ್ದಾರೆ. ಅವರ ಪ್ರಕಾರ ಆರ್​ಸಿಬಿಯ ದೊಡ್ಡ ಸಮಸ್ಯೆಯೆಂದರೆ ಭಾರತೀಯ ಸಹಾಯಕ ಸಿಬ್ಬಂದಿಯ ಕೊರತೆ.

ನಿಮ್ಮ ಬಳಿ 12ರಿಂದ 15 ಭಾರತೀಯ ಆಟಗಾರರು ಇದ್ದಾರೆ. ಕೇವಲ 10 ವಿದೇಶಿ ಆಟಗಾರರನ್ನು ಹೊಂದಿದ್ದೀರಿ. ನಿಮ್ಮ ಇಡೀ ಸಹಾಯಕ ಸಿಬ್ಬಂದಿ ವರ್ಗ ವಿದೇಶಿಯರಾಗಿದ್ದರೆ. ಅದುವೇ ಸಮಸ್ಯೆಯಾಗಿದೆ. ಅವರಲ್ಲಿ ಕೆಲವರು ಮಾತ್ರ ಅಂತರರಾಷ್ಟ್ರೀಯ ಆಟಗಾರರು. ಉಳಿದವರೆಲ್ಲರೂ ಭಾರತೀಯರು ಮತ್ತು ಅವರಲ್ಲಿ ಅರ್ಧದಷ್ಟು ಜನರಿಗೆ ಇಂಗ್ಲಿಷ್ ಸರಿಯಾಗಿ ಅರ್ಥವಾಗುವುದಿಲ್ಲ. ನೀವು ಅವರನ್ನು ಹೇಗೆ ಪ್ರೇರೇಪಿಸುವಿರಿ? ಅವರೊಂದಿಗೆ ಸಮಯ ಕಳೆಯುವವರು ಯಾರು? ಅವರೊಂದಿಗೆ ಯಾರು ಮಾತನಾಡುತ್ತಾರೆ? ಆ ತಂಡದಲ್ಲಿ ಒಬ್ಬನೇ ಒಬ್ಬ ಭಾರತೀಯ ಸಿಬ್ಬಂದಿ ಇಲ್ಲ. . ಕನಿಷ್ಠ ಆಟಗಾರರು ನಂಬಬಹುದಾದ ಯಾರಾದರೂ ಇರಬೇಕು,” ಎಂದು ಸೆಹ್ವಾಗ್ ಆರ್​ಸಿಬಿ ಮ್ಯಾನೇಜ್ಮೆಂಟ್ ಅನ್ನು ಪ್ರಶ್ನಿಸಿದ್ದಾರೆ.

ಆಟಗಾರರಿಗೆ ಆರಾಮದಾಯಕ ಪರಿಸ್ಥಿತಿ ಸಿಗಬೇಕು. ನಾಯಕ ಫಾಫ್ ಡು ಪ್ಲೆಸಿಸ್ ಅವರ ಮುಂದೆ ನಿಲ್ಲುವುದೇ ಇಲ್ಲ. ಯಾಕೆಂದರೆ ಅವರಿಗೆ ಭಾಷೆ ಬರುವುದಿಲ್ಲ. ಅವರು ಏನನ್ನಾದರೂ ಕೇಳಿದರೆ, ಅವರು ಉತ್ತರಿಸಬೇಕಾಗುತ್ತದೆ. ನಾಯಕ ಭಾರತೀಯನಾಗಿದ್ದರೆ, ಆಟಗಾರನ ಮನಸ್ಸಿನಲ್ಲಿ ಏನಾಗುತ್ತಿದೆ ಹಂಚಿಕೊಳ್ಳಬಹುದು. ವಿದೇಶಿ ಆಟಗಾರರಿಗೆ ಇದೇ ಪರಿಸ್ಥಿತಿ ಎದುರಾಗಿದ್ದರೆ ಏನು ಮಾಡಬೇಕಾಗಿತ್ತು. ಹೀಗಾಗಿ ಆರ್​ಸಿಬಿಗೆ ಕನಿಷ್ಠ 2-3 ಭಾರತೀಯ ಸಹಾಯಕ ಸಿಬ್ಬಂದಿಯ ಅಗತ್ಯವಿದೆ ಎಂದು ಸೆಹ್ವಾಗ್ ವಿಶ್ಲೇಷಣೆ ಮಾಡಿದ್ದಾರೆ.

ಆಯ್ಕೆಯೇ ಸರಿಲ್ಲಿ

ಭಾರತ ಮತ್ತು ಕೋಲ್ಕತಾ ನೈಟ್ ರೈಡರ್ಸ್​ ತಂಡ ಮಾಜಿ ಬ್ಯಾಟರ್​ ಮನೋಜ್ ತಿವಾರಿ, ಆರ್​ಸಿಬಿಯ ಸಮಸ್ಯೆಗಳು ಭೀಕರವಾಗಿದೆ ಎಂದಿದ್ದಾರೆ. ಹರಾಜು ಟೇಬಲ್​ನಲ್ಲಿಯೇ ಕಳಪೆ ನೇಮಕ ನಡೆಯುತ್ತಿದೆ. ಅದುವೇ ಅವರ ತೊಂದರೆಗಳ ಹಿಂದಿನ ದೊಡ್ಡ ಕಾರಣ ಎಂದ ಹೇಳಿದ್ದಾರೆ.

ಇದನ್ನೂ ಓದಿ: Hardik Pandya : ಹಾರ್ದಿಕ್ ಪಾಂಡ್ಯ ಸಹೋದರನ ಪೊಲೀಸ್​ ಕಸ್ಟಡಿ ವಿಸ್ತರಣೆ; ಏನಿದು ಕೇಸ್​?

“ಸಮಸ್ಯೆ ಎಲ್ಲಿದೆ ಎಂದು ನನಗೆ ತಿಳಿದಿದೆ. ಹರಾಜು ಟೇಬಲ್ ನಿಂದ ನಿರ್ವಹಣೆಯವರೆಗೆ ಎಲ್ಲ ಕಡೆಯೂ ಇದೆ. ಈ ಫ್ರಾಂಚೈಸಿಯ ಎಲ್ಲಾ ಉತ್ತಮ ಆಟಗಾರರು ಇತರ ತಂಡಗಳಿಗಾಗಿ ಹೋಗಿ ಅತ್ಯುತ್ತಮವಾಗಿ ಆಡುತ್ತಾರೆ. ಆ ತಂಡದಲ್ಲಿ ಪ್ರಮುಖ ವಿಕೆಟ್ ಟೇಕಿಂಗ್​ ಬೌಲರ್ (ಯಜುವೇಂದ್ರ ಚಾಹಲ್) ಅವರನ್ನು ಕೈಬಿಡಲಾಗಿದೆ. ಇದೇ ವೇಳೆ ವಿರಾಟ್ ಕೊಹ್ಲಿ ನಾಯಕತ್ವವನ್ನು ಮುಂದುವರಿಸುವುದಿಲ್ಲ. ಅವರು ಅವರನ್ನು 2016ರರ ಫೈನಲ್ ಗೆ ಮುನ್ನಡೆಸಿದವರು. 40 ಕೋಟಿ ರೂ.ಗಿಂತ ಹೆಚ್ಚಿನ ಒಟ್ಟು ಹಣ ಪಡೆದಿರುವ ಫ್ರಾಂಚೈಸಿಯ 4 ದುಬಾರಿ ಆಟಗಾರರು ಬೆಂಚ್ ಕಾಯುತ್ತಿದ್ದಾಋಎ. ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮೆರಾನ್ ಗ್ರೀನ್, ಅಲ್ಜಾರಿ ಜೋಸೆಫ್. ಸಿರಾಜ್​​ಗೆ ವಿಶ್ರಾಂತಿ ನೀಡಲಾಗಿದೆ. ತುಂಬಾ ಹಣವನ್ನು ಖರ್ಚು ಮಾಡಿ ಅವರನ್ನು ಹೊರಗೆ ಕೂರಿಸಲಾಗುತ್ತದೆ. ಇವೆಲ್ಲವೂ ಸಮಸ್ಯೆಯೇ ಎಂದು “ಎಂದು ತಿವಾರಿ ಹೇಳಿದ್ದಾರೆ.

ಬ್ಯಾಟಿಂಗ್ ಅಲ್ಲಿ ಸಮಸ್ಯೆಯಲ್ಲ. ಆ ತಂಡದ ಸಮಸ್ಯೆ ಯಾವಾಗಲೂ ಬೌಲಿಂಗ್ ಆಗಿತ್ತು. ಅವರಲ್ಲಿ ಸ್ಪೆಷಲಿಸ್ಟ್ ಸ್ಪಿನ್ನರ್ ಇಲ್ಲ. ನೀವು ವಿಲ್ ಜಾಕ್ಸ್ ಅವರಿಗೆ ಮೊದಲ ಓವರ್​ ಕೊಡಲಾಗುತ್ತದೆ. ಕೆಲವೊಮ್ಮೆ ಮಹಿಪಾಲ್ ಲೊಮ್ರೊಗೂ ಬೌಲಿಂಗ್​. ಮೈದಾನದಲ್ಲಿನ ಕೆಲವು ನಾಯಕತ್ವದ ನಿರ್ಧಾರಗಳು ಭಯಾನಕವಾಗಿವೆ. ಪ್ರತಿಯೊಂದು ಮೂಲೆಯಿಂದಲೂ ತಪ್ಪಾಗಿದೆ. ಅವರು ಸಂಪೂರ್ಣವಾಗಿ ಮರುಸಂಘಟನೆಗೊಳ್ಳಬೇಕು ಮತ್ತು ದೀರ್ಘಕಾಲೀನ ಯೋಜನೆಯನ್ನು ರೂಪಿಸಬೇಕು ಎಂದು ಹೇಳಿದರು.

ಬೆಂಗಳೂರು ತಂಡಕ್ಕೆ ಇದು ಇನ್ನೂ ಮುಗಿದ ಅಧ್ಯಾಯವಲ್ಲ. ಫಾಫ್ ಡು ಪ್ಲೆಸಿಸ್ ಪಡೆ ಪ್ಲೇಆಫ್ಗೆ ಪ್ರವೇಶಿಸಲು ದೈತ್ಯ ಪ್ರಯತ್ನದ ಅಗತ್ಯವಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

KKR vs DC: ಚೇಸಿಂಗ್​ ವೇಳೆ ಫಿಲ್​ ಸಾಲ್ಟ್​ 17 ರನ್​ ಗಳಿಸಿದ್ದ ವೇಳೆ ಖಲೀಲ್​ ಅಹ್ಮದ್​ ಎಸೆದ ಮೊದಲ ಓವರ್​ನ ಮೊದಲ ಎಸೆತದಲ್ಲಿ ಲಿಜಾಡ್ ವಿಲಿಯಮ್ಸ್ ಅವರಿಂದ ಕ್ಯಾಚ್​ ಕೈಚೆಲ್ಲಿ ಜೀವದಾನ ಪಡೆದರು. ಇದರ ಸಂಪೂರ್ಣ ಲಾಭವೆತ್ತಿದ ಸಾಲ್ಟ್​ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ವಿಲಿಯಮ್ಸ್ ಕಳಪೆ ಫೀಲ್ಡಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಸರಿಯಾಗಿ ದಂಡಿಸಿಕೊಂಡರು.

VISTARANEWS.COM


on

KKR vs DC
Koo

ಕೋಲ್ಕತ್ತಾ: ಫಿಲ್​ ಸಾಲ್ಟ್​(68) ಅವರ ಅರ್ಧಶತಕ ಮತ್ತು ವರುಣ್​ ಚಕ್ರವರ್ತಿಯ( 16 ರನ್​ಗೆ 3 ವಿಕೆಟ್) ಸ್ಪಿನ್​ ಮೋಡಿಗೆ ಬೆದರಿದ ಡೆಲ್ಲಿ ಕ್ಯಾಪಿಟಲ್ಸ್(Delhi Capitals)​ ತಂಡ ಕೋಲ್ಕತ್ತಾ ನೈಟ್​ ರೈಡರ್ಸ್(KKR vs DC)​ ವಿರುದ್ಧ 7 ವಿಕೆಟ್​ ಅಂತರದ ಸೋಲಿಗೆ ತುತ್ತಾಗಿದೆ. ಸೋಲಿನಿಂದ ಪಂತ್​ ಪಡೆಯ ಪ್ಲೇ ಆಫ್​ ಪಯಣ ಕೂಡ ದುರ್ಗಮಗೊಂಡಿದೆ. ಇನ್ನುಳಿದ 3 ಪಂದ್ಯಗಳನ್ನು ಕೂಡ ಗೆಲ್ಲಬೇಕಾದ ಒತ್ತಡಕ್ಕೆ ಸಿಲುಕಿದೆ. ಜತೆಗೆ ಉಳಿದ ತಂಡಗಳ ಪ್ರದರ್ಶನವೂ ಡೆಲ್ಲಿ ಪ್ಲೇ ಆಫ್ ಹಾದಿಯ ಮೇಲೆ ಪರಿಣಾಮ ಬೀರಲಿದೆ.

ಐತಿಹಾಸಿಕ ಕ್ರಿಕೆಟ್​ ಸ್ಟೇಡಿಯಂ ಈಡನ್​ ಗಾರ್ಡನ್ಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಬ್ಯಾಟಿಂಗ್​ ಆಯ್ದುಕೊಂಡ ಡೆಲ್ಲಿ​ ನಾಟಕೀಯ ಕುಸಿತ ಕಂಡು ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್​ ನಷ್ಟಕ್ಕೆ 153 ರನ್​ ಬಾರಿಸಿತು. ಸಾಧಾರಣ ಗುರಿಯನ್ನು ಬೆನ್ನಟ್ಟಿದ ಕೋಲ್ಕತ್ತಾ ನೈಟ್​ ರೈಡರ್ಸ್(Kolkata Knight Riders) 16.3​ ಓವರ್​ಗಳಲ್ಲಿ 3 ವಿಕೆಟ್​ ಕಳೆದುಕೊಂಡು 157 ರನ್​ ಬಾರಿಸಿ ಗೆಲುವಿನ ನಗೆ ಬೀರಿತು. ಇದು ಕೆಕೆಆರ್​ಗೆ 9ನೇ ಪಂದ್ಯದಲ್ಲಿ ಒಲಿದ 6ನೇ ಗೆಲುವಾಗಿದೆ. ಸದ್ಯ 12 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 2ನೇ ಸ್ಥಾನಿಯಾಗಿ ಕಾಣಿಸಿಕೊಂಡಿದೆ.

ಜೀವದಾನ ಪಡೆದು ಅರ್ಧಶತಕ ಬಾರಿಸಿದ ಸಾಲ್ಟ್​


ಚೇಸಿಂಗ್​ ವೇಳೆ ಫಿಲ್​ ಸಾಲ್ಟ್​ 17 ರನ್​ ಗಳಿಸಿದ್ದ ವೇಳೆ ಖಲೀಲ್​ ಅಹ್ಮದ್​ ಎಸೆದ ಮೊದಲ ಓವರ್​ನ ಮೊದಲ ಎಸೆತದಲ್ಲಿ ಲಿಜಾಡ್ ವಿಲಿಯಮ್ಸ್ ಅವರಿಂದ ಕ್ಯಾಚ್​ ಕೈಚೆಲ್ಲಿ ಜೀವದಾನ ಪಡೆದರು. ಇದರ ಸಂಪೂರ್ಣ ಲಾಭವೆತ್ತಿದ ಸಾಲ್ಟ್​ ಆಕ್ರಮಣಕಾರಿ ಬ್ಯಾಟಿಂಗ್​ ಮೂಲಕ ಕೇವಲ 26 ಎಸೆತಗಳಲ್ಲಿ ಅರ್ಧಶತಕ ಪೂರ್ತಿಗೊಳಿಸಿದರು. ವಿಲಿಯಮ್ಸ್ ಕಳಪೆ ಫೀಲ್ಡಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಸರಿಯಾಗಿ ದಂಡಿಸಿಕೊಂಡರು. ಮೂರು ಓವರ್​ಗೆ 38 ರನ್​ ಹೊಡೆಸಿಕೊಂಡರು.

ಬಿರುಸಿನ ಬ್ಯಾಟಿಂಗ್​ ಮೂಲಕ ರನ್​ ಕಲೆಹಾಕುವ ಸುನೀಲ್​ ನರೈನ್​ ಈ ಪಂದ್ಯದಲ್ಲಿ ವಿಫಲರಾದರು. 10 ಎಸೆತಗಳಿಂದ 15 ರನ್​ಗೆ ಸೀಮಿತರಾಗಿ ಅಕ್ಷರ್​ ಪಟೇಲ್​ಗೆ ವಿಕೆಟ್​ ಒಪ್ಪಿಸಿದರು. ಬ್ಯಾಟಿಂಗ್​ ಭಡ್ತಿ ಪಡೆದು ಬಂದ ರಿಂಕು ಸಿಂಗ್​ 11 ಎಸೆತಗಳಿಂದ 11 ರನ್​ ಗಳಿಸಿ ನಿರಾಸೆ ಮೂಡಿಸಿದರು. ಈ ವಿಕೆಟ್​ ಪತನಗೊಂಡು 4 ರನ್​ ಆಗುವಷ್ಟರಲ್ಲಿ ಫಿಲ್​ ಸಾಲ್ಟ್​​ ವಿಕೆಟ್​ ಕೂಡ ಬಿತ್ತು. ಸಾಲ್ಟ್​ 33 ಎಸೆತಗಳಿಂದ 68 ರನ್​ ಚಚ್ಚಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 5 ಸೊಗಸಾದ ಸಿಕ್ಸರ್​ ಮತ್ತು 7 ಬೌಂಡರಿ ಸಿಡಿಯಿತು. ಅಂತಿಮವಾಗಿ ನಾಯಕ ಶ್ರೇಯಸ್​ ಅಯ್ಯರ್(33*)​ ಮತ್ತು ವೆಂಕಟೇಶ್​ ಅಯ್ಯರ್​(26*) ರನ್​ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಜೋಡಿ ನಾಲ್ಕನೇ ವಿಕೆಟ್​ಗೆ ಮುರಿಯದ 57 ರನ್​ಗಳ ಜತೆಯಾಟ ಕೂಡ ನಡೆಸಿತು. ಇದೇ ವೇಳೆ ಶ್ರೇಯಸ್ ಅಯ್ಯರ್​ ಐಪಿಎಲ್​ನಲ್ಲಿ 3 ಸಾವಿರ ರನ್​ ಪೂರ್ತಿಗೊಳಿಸಿದ ಮೈಲಿಗಲ್ಲು ನೆಟ್ಟರು. ಡೆಲ್ಲಿ ಪರ ಅಕ್ಷರ್​ ಪಟೇಲ್​ 2 ವಿಕೆಟ್​ ಪಡೆದರು.

ಇದನ್ನೂ ಓದಿ LSG vs MI: ಲಕ್ನೋ ಸವಾಲಿಗೆ ಮುಂಬೈ ಸಜ್ಜು; ಸೋತರೆ ಪಾಂಡ್ಯ ಪಡೆಯ ಪ್ಲೇ ಆಫ್​ ಹಾದಿ ಕಠಿಣ

ಮಾನ ಉಳಿಸಿದ ಕುಲ್​ದೀಪ್​


ಮೊದಲು ಬ್ಯಾಟಿಂಗ್​ ನಡೆಸಿದ ಡೆಲ್ಲಿ ತಂಡ ನಾಟಕೀಯ ಕುಸಿತ ಕಂಡು ಇನ್ನೇನು 100ರ ಒಳಗಡೆ ಗಂಟು-ಮೂಟೆ ಕಟ್ಟುತ್ತದೆ ಎನ್ನುವಷ್ಟರಲ್ಲಿ 9ನೇ ಕ್ರಮಾಂಕದಲ್ಲಿ ಆಡಲಿಳಿದ ಕುಲ್​ದೀಪ್​ ಯಾದವ್​ ಕೆಕೆಆರ್​ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸಿ ನಿಂತು ಅಜೇಯ 35 ರನ್​ ಬಾರಿಸಿದರು. ತಂಡದ ಒರ ಇವರದ್ದೇ ಗರಿಷ್ಠ ಮೊತ್ತದ ಗಳಿಕೆ. ಕುಲ್​ದೀಪ್​ ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಿಂದ ಡೆಲ್ಲಿ 150ರ ಗಡಿ ದಾಟಿ ಮಾನ ಉಳಿಸಿಕೊಂಡಿತು.

ಪೃಥ್ವಿ ಶಾ ಎಂದಿನಂತೆ ಒಂದೆಡರು ಬೌಂಡರಿಗೆ ಸೀಮಿತರಾಗಿ 13 ರನ್​ಗೆ ವಿಕೆಟ್​ ಒಪ್ಪಿಸಿದರು. ಇದರ ಬೆನ್ನಲೇ ಅಪಾಯಕಾರಿ ಜೇಕ್ ಫ್ರೇಸರ್-ಮ್ಯಾಕ್‌ಗುರ್ಕ್(12), ಶಾಯ್​ ಹೋಪ್​(6), ಅಭಿಷೇಕ್​ ಪೋರೆಲ್​(18), ಅಕ್ಷರ್​ ಪಟೇಲ್​(15) ಮತ್ತು ಟ್ರಿಸ್ಟಾನ್ ಸ್ಟಬ್ಸ್(4) ರನ್​ ಗಳಿಸಿ ಪೆವಿಲಿಯನ್​ ಪರೇಡ್ ನಡೆಸಿದರು. ನಾಯಕ ಪಂತ್​ 2 ಬೌಂಡರಿ ಮತ್ತು 1 ಸಿಕ್ಸರ್​ ಸಿಡಿಸಿ 27 ರನ್​ ಬಾರಿಸಿದರು.

ಕೆಕೆಆರ್​ ಪರ ಸ್ಪಿನ್ನರ್ ವರುಣ್ ಚಕ್ರವರ್ತಿ ತಮ್ಮ ಸ್ಪಿನ್​ ಜಾದು ಮೂಲಕ ಕೇವಲ 16 ರನ್​ಗೆ 3 ವಿಕೆಟ್​ ಕಿತ್ತು ಡೆಲ್ಲಿಗೆ ಆಘಾತವಿಕ್ಕಿದರು. ಉಳಿದಂತೆ ಹರ್ಷಿತ್​ ರಾಣಾ ಮತ್ತು ವೈಭವ್ ಅರೋರಾ ತಲಾ 2 ವಿಕೆಟ್​ ಉರುಳಿಸಿದರು. ಸುನೀಲ್​ ನರೈನ್​ ಮತ್ತು ಸ್ಟಾರ್ಕ್​ ತಲಾ 1 ವಿಕೆಟ್​ ಪಡೆದರು.

Continue Reading

ದೇಶ

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Patanjali: ಪತಂಜಲಿ ಆಯುರ್ವೇದ ಸಂಸ್ಥೆಯ ಉತ್ಪನ್ನಗಳ ದಕ್ಷತೆ ಹಾಗೂ ಅವುಗಳ ದಕ್ಷತೆ ಕುರಿತು ನೀಡಿರುವ ಜಾಹೀರಾತಿಗೂ ತಾಳೆಯಾಗದ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರವು 14 ಉತ್ಪನ್ನಗಳ ಪರವಾನಗಿಯನ್ನು ರದ್ದುಗೊಳಿಸಿದೆ ಎಂದು ತಿಳಿದುಬಂದಿದೆ. ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂಧನೆ ಭೀತಿ ಎದುರಿಸುತ್ತಿರುವ ಬಾಬಾ ರಾಮದೇವ್‌ ಅವರಿಗೆ ಇದರಿಂದ ಮತ್ತೊಂದು ಹಿನ್ನಡೆಯಾದಂತಾಗಿದೆ.

VISTARANEWS.COM


on

Patanjali
Koo

ಡೆಹ್ರಾಡೂನ್:‌ ಜನರ ದಾರಿತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಪತಂಜಲಿ ಆಯುರ್ವೇದ ಸಂಸ್ಥೆ (Patanjali Ayurved) ಮುಖ್ಯಸ್ಥ ಬಾಬಾ ರಾಮದೇವ್‌ (Baba Ramdev) ಹಾಗೂ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ (Acharya Balkrishna) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಪತಂಜಲಿ (Patanjali) ಸಂಸ್ಥೆಯ 14 ಉತ್ಪನ್ನಗಳ ಪರವಾನಗಿಯನ್ನು ಉತ್ತರಾಖಂಡ ಸರ್ಕಾರವು (Uttarakhand Government) ರದ್ದುಗೊಳಿಸಿದೆ.

ಪತಂಜಲಿ ಉತ್ಪನ್ನಗಳ ಪರವಾನಗಿ ರದ್ದುಗೊಳಿಸುವ ಜತೆಗೆ ಡ್ರಗ್ಸ್‌ ಆ್ಯಂಡ್‌ ಮ್ಯಾಜಿ ರೆಮೆಡೀಸ್‌ ಆ್ಯಕ್ಟ್‌ನ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಅವರ ವಿರುದ್ಧ ಕ್ರಿಮಿನಲ್‌ ಕೇಸ್‌ ಕೂಡ ದಾಖಲಿಸಲಾಗಿದೆ. ಜನರ ದಾರಿ ತಪ್ಪಿಸುವ ರೀತಿಯ ಜಾಹೀರಾತು ಪ್ರಕರಣದಲ್ಲಿ ನ್ಯಾಯಾಂಗ ನಿಂದನೆ ಭೀತಿ ಎದುರಿಸುತ್ತಿರುವ ಕೇಸ್‌ ಕುರಿತು ಕೂಡ ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಇದರ ಮಧ್ಯೆಯೇ ಪತಂಜಲಿ ಉತ್ಪನ್ನಗಳ ಪರವಾನಗಿ ರದ್ದುಗೊಳಿಸಿರುವುದು ಬಾಬಾ ರಾಮದೇವ್‌ ಅವರಿಗೆ ಭಾರಿ ಹಿನ್ನಡೆಯಾದಂತಾಗಿದೆ.

ಪತಂಜಲಿ ಆಯುರ್ವೇದ ಸಂಸ್ಥೆಯ ಉತ್ಪನ್ನಗಳ ದಕ್ಷತೆ ಹಾಗೂ ಅವುಗಳ ದಕ್ಷತೆ ಕುರಿತು ನೀಡಿರುವ ಜಾಹೀರಾತಿಗೂ ತಾಳೆಯಾಗದ ಹಿನ್ನೆಲೆಯಲ್ಲಿ ಉತ್ತರಾಖಂಡ ಸರ್ಕಾರವು ಉತ್ಪನ್ನಗಳ ಪರವಾನಗಿಯನ್ನು ರದ್ದುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಪರವಾನಗಿ ರದ್ದು ಕುರಿತು ಇದುವರೆಗೆ ಉತ್ತರಾಖಂಡ ಸರ್ಕಾರದಿಂದ ಅಧಿಕೃತ ಆದೇಶ ಹೊರಬಿದ್ದಿಲ್ಲ.

ಪತಂಜಲಿ ಸಂಸ್ಥೆ ವಿರುದ್ಧ ಭಾರತೀಯ ವೈದ್ಯಕೀಯ ಸಂಘವು (IMA) ಅರ್ಜಿ ಸಲ್ಲಿಸಿದೆ. ಪತಂಜಲಿ ಸಂಸ್ಥೆಯು ಕೊರೊನಾ ನಿರೋಧಕ ಲಸಿಕೆ ಹಾಗೂ ಆಧುನಿಕ ಔಷಧ ಪದ್ಧತಿ ಬಗ್ಗೆ ಸುಳ್ಳು ಅಭಿಯಾನ ಆರಂಭಿಸಿದೆ. ಅಷ್ಟೇ ಅಲ್ಲ, ಅಲೋಪಥಿ ಸೇರಿ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಜನರ ದಾರಿ ತಪ್ಪಿಸುವ ರೀತಿ ಪತಂಜಲಿ ಸಂಸ್ಥೆಯು ಜಾಹೀರಾತುಗಳನ್ನು ನೀಡುತ್ತಿದೆ. ಇದು ಡ್ರಗ್ಸ್‌ ಆ್ಯಂಡ್‌ ಮ್ಯಾಜಿಕ್‌ ರೆಮೆಡೀಸ್‌ (ಆಕ್ಷೇಪಾರ್ಹ ಜಾಹೀರಾತುಗಳು) ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಐಎಂಎ ಅರ್ಜಿ ಸಲ್ಲಿಸಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ವಿಚಾರಣೆ ನಡೆಸುವಾಗ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಅಹ್ಸಾನುದ್ದೀನ್‌ ಅಮಾನುಲ್ಲಾ ಅವರು ಬಾಬಾ ರಾಮದೇವ್‌ ಹಾಗೂ ಆಚಾರ್ಯ ಬಾಲಕೃಷ್ಣ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇಬ್ಬರೂ ಸುಪ್ರೀಂ ಕೋರ್ಟ್‌ಗೆ ತೆರಳಿ ಕ್ಷಮೆಯಾಚಿಸಿದರೂ ಕೇಳಿರಲಿಲ್ಲ. ಕೊನೆಗೆ ಪತ್ರಿಕೆಯಲ್ಲಿ ಜಾಹೀರಾತು ಹೊರಡಿಸಿ ಇಬ್ಬರೂ ಕ್ಷಮೆ ಕೇಳುವಂತೆ ಮಾಡಿದ್ದರು.

ಇದನ್ನೂ ಓದಿ: Baba Ramdev: ನೀವೇನು ಅಮಾಯಕರಲ್ಲ, ಕ್ಷಮಿಸಲ್ಲ; ಬಾಬಾ ರಾಮದೇವ್‌ಗೆ ಸುಪ್ರೀಂ ಚಾಟಿ!

Continue Reading

ಕೊಪ್ಪಳ

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

Lok Sabha Election 2024: ಹಿಂದಿನ ಬಿಜೆಪಿ ಸರ್ಕಾರದ 40 % ಕಮಿಷನ್ ಬಗ್ಗೆ ತನಿಖೆ ನಡೆಯುತ್ತಿದ್ದು, ಒಂದು ವೇಳೆ ಕಮಿಷನ್ ಪಡೆದ ಆರೋಪ ಸಾಬೀತಾದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

CM Siddaramaiah inaugurated by prajadhwani lok sabha election campaign meeting at kushtagi
Koo

ಕೊಪ್ಪಳ: ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಗಳಿಗೆ ಮತ್ತು ನಾಯಕರಿಗೆ ಕೊರತೆಯಿಲ್ಲ. ಬಿಜೆಪಿಯಲ್ಲಿ ಮೋದಿ ಬಿಟ್ಟರೆ ಪ್ರಧಾನಿ ಯಾರಾಗ್ತಾರೇ? ನಿಜವಾಗಿಯೂ ನಾಯಕತ್ವ ಕೊರತೆ ಬಿಜೆಪಿಗಿದೆ ಎಂದು ಸಿಎಂ ಸಿದ್ದರಾಮಯ್ಯ (Lok Sabha Election 2024) ಹೇಳಿದ್ದಾರೆ.

ಜಿಲ್ಲೆಯ ಕುಷ್ಟಗಿ ಪಟ್ಟಣದಲ್ಲಿ ನಡೆದ ಪ್ರಜಾಧ್ವನಿ ಲೋಕಸಭಾ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂಡಿಯಾ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಗಳಿಗೆ ಮತ್ತು ನಾಯಕರಿಗೆ ಕೊರತೆಯಿಲ್ಲ. ಬಿಜೆಪಿಯಲ್ಲಿ ಮೋದಿ ಬಿಟ್ಟರೇ ಪ್ರಧಾನಿ ಯಾರಾಗ್ತಾರೇ, ನಿಜವಾಗಿಯೂ ನಾಯಕತ್ವ ಕೊರತೆ ಬಿಜೆಪಿಗಿದೆ. ಹೀಗಾಗಿ ಸೋಲಿನ ಹತಾಶೆಯಿಂದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಟೀಕಿಸಿದರು.

ಹಿಂದಿನ ಬಿಜೆಪಿ ಸರ್ಕಾರದ 40% ಕಮಿಷನ್ ಬಗ್ಗೆ ತನಿಖೆ ನಡೆಯುತ್ತಿದ್ದು, ಒಂದು ವೇಳೆ ಕಮಿಷನ್ ಪಡೆದ ಆರೋಪ ಸಾಬೀತಾದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

ಮೋದಿ ಕಳೆದ ಹತ್ತು ವರ್ಷದಲ್ಲಿ ಪ್ರಮಾಣಿಕ ಆಡಳಿತ ನಡೆಸಲಿಲ್ಲ. ರೈತರಿಗೆ ಜನಪರ ಕಾರ್ಯಕ್ರಮ ಜಾರಿ ಮಾಡಲಿಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಶ್ವಾಸನೆ ನೀಡಿದ ಐದು ಗ್ಯಾರಂಟಿ ಜಾರಿಗೊಳಿಸಿದ್ದೇವೆ. ಈವರೆಗೂ ಶಕ್ತಿ ಯೋಜನೆಯಡಿ 200 ಕೋಟಿ ಜನ ಸೌಲಭ್ಯ ಪಡೆದಿದ್ದಾರೆ. ಬಡವರೆಲ್ಲಾ ಕಾಂಗ್ರೆಸ್ ಪರ ಆಗ್ತಾರೆ ಅಂತ ಮೋದಿಯವರು ಅಕ್ಕಿ ನೀಡದೇ ರಾಜ್ಯದ ಜನತೆಗೆ ದ್ರೋಹ ಮಾಡಿದ್ರು. ಹೀಗಾಗಿ ಅಕ್ಕಿ ಬದಲಾಗಿ ಐದು ಕೆಜಿ ಅಕ್ಕಿಯ ಹಣ ಫಲಾನುಭವಿ ಅಕೌಂಟ್‌ಗೆ ಹಾಕುತ್ತಿದ್ದೇವೆ ಎಂದರು.

ದೇಶದಲ್ಲಿ ಹಿಂದುಳಿದ, ದಲಿತ, ಎಸ್‌ಟಿ, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದು ಕಾಂಗ್ರೆಸ್. ಆದರೆ, ಮೋದಿಯವರು ಮೀಸಲಾತಿ ವಿರುದ್ಧ ಇದ್ದಾರೆ. ಜಾತಿ ಜಾತಿಗಳ ವಿರುದ್ಧ ಎತ್ತಿಕಟ್ಟುವ ಮೋದಿ ಸ್ಕೆಚ್ ವಿಫಲಗೊಳಿಸಿ. ಸುಳ್ಳು ಹೇಳಿ ಜನರನ್ನು ದಾರಿತಪ್ಪಿಸುವ ಬಿಜೆಪಿಗರಿಗೆ ಈ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿ ಎಂದರು.

ಕಾಂಗ್ರೆಸ್‌ನ ಮನಮೋಹನ್ ಸಿಂಗ್ ಪ್ರಧಾನಮಂತ್ರಿಯಾಗಿದ್ದಾಗ ಇಡೀ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಆದರೆ ಮೋದಿ ಅಂಬಾನಿ, ಅದಾನಿಯಂತಹ ಬಂಡವಾಳಶಾಹಿ ಶ್ರೀಮಂತರ 16 ಲಕ್ಷ ಕೋಟಿ ರೂಪಾಯಿ ಸಾಲ ಮನ್ನಾ ಮಾಡಿದರು. ರೈತರ ಸಾಲ ಮನ್ನಾ ಮಾಡಲು ಒಪ್ಪದ ಮೋದಿ ಯಾರ ಪರ ಎನ್ನುವುದನ್ನು ದೇಶದ ಜನರಿಗೆ ಮನವರಿಕೆಯಾಗಿದೆ‌ ಎಂದು ಆರೋಪಿಸಿದರು‌‌.

ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿ, ಪ್ರಧಾನಿ ಮೋದಿ ಹತ್ತು ವರ್ಷದ ಅವಧಿಯಲ್ಲಿ ರಾಜ್ಯಕ್ಕೆ ಎಷ್ಟು ಅನುದಾನ ನೀಡಿದ್ದಾರೆ ? ಎಷ್ಟು ಅಭಿವೃದ್ಧಿ ಮಾಡಿದರು? ರೈತರ ಬದುಕಿನಲ್ಲಿ ಬದಲಾವಣೆ ಆಯ್ತಾ? ಅಚ್ಛೇದಿನ ಬಂತಾ? ನಿಮ್ಮ ಖಾತೆಗೆ 15 ಲಕ್ಷ ಬಂತಾ? ಬಿಜೆಪಿ ನುಡಿದಂತೆ ನಡೆದಿದ್ದಾರಾ? ಎಂದು ಆಲೋಚಿಸಿ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲ ಗ್ಯಾರಂಟಿ ಅನುಷ್ಠಾನಗೊಳಿಸಿ, ರಾಜ್ಯದ ಬಡವರ ಹಿತ ಕಾಪಾಡಿದ್ದೇವೆ ಎಂದರು.

ಇಲ್ಲಿನ ತುಂಗಭದ್ರಾ ಜಲಾಶಯದಲ್ಲಿ ಹೂಳು ತುಂಬಿದ್ದರಿಂದ ನವಲಿಯಲ್ಲಿ ಅಣೆಕಟ್ಟು ಕಟ್ಟಲು ನಾವು ಮುಂದಾಗಿದ್ದೇವೆ. ಇದಕ್ಕಾಗಿ ನಮ್ಮ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಅನುದಾನ ಮೀಸಲಿಟ್ಟಿದ್ದು, ಚುನಾವಣೆ ನಂತರ ಆಂಧ್ರ ಪ್ರದೇಶ ಹಾಗೂ ತೆಲಂಗಾಣದ ಜತೆ ಚರ್ಚೆ ಮಾಡಿ, ರೈತರ ಬದುಕು ರಕ್ಷಿಸುತ್ತೇವೆ ಎಂದರು.

ಇದನ್ನೂ ಓದಿ: Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

ಬಡವರಿಗಾಗಿ ಕಾರ್ಯಕ್ರಮ ರೂಪಿಸಿದ್ದರೆ ಅದು ಕಾಂಗ್ರೆಸ್ ಪಕ್ಷ. ಮೋದಿ ಗ್ಯಾರಂಟಿ ಎಂದು ಪ್ರಚಾರ ಮಾಡುತ್ತಿದ್ದಾರೆ. ಮೋದಿ ಗ್ಯಾರಂಟಿಯಿಂದ ನಿಮ್ಮ ಹೊಟ್ಟೆ ತುಂಬುತ್ತಿದೆಯೇ? ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನವೇ ನಮ್ಮ ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಅನುಮೋದನೆ ನೀಡಿದೆವು ಎಂದು ತಿಳಿಸಿದರು.

ಸಚಿವರಾದ ಶಿವರಾಜ ತಂಗಡಗಿ, ಭೈರತಿ ಸುರೇಶ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಶಾಸಕ ಅಮರೇಗೌಡ ಪಾಟೀಲ್ ಬಯ್ಯಾಪುರ ಮತ್ತು ಕಾಡಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಮಾತನಾಡಿದರು.

ಇದನ್ನೂ ಓದಿ: Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

ಈ ಸಂದರ್ಭದಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಮಸ್ಕಿ ಶಾಸಕ ಬಸವನಗೌಡ ತುರವಿಹಾಳ, ಮಾಜಿ ವಿಪ ಸಭಾಪತಿ ವಿ.ಆರ್.ಸುದರ್ಶನ, ವೆಂಕಟರಾಮಯ್ಯ, ವಿಪ ಸದಸ್ಯ ಶರಣೇಗೌಡ ಪಾಟೀಲ್ ಬಯ್ಯಾಪುರ, ಎಎಪಿ ಜಿಲ್ಲಾಧ್ಯಕ್ಷ ಕನಕಪ್ಪ, ರಾಜ್ಯ ಕಾರ್ಯದರ್ಶಿ ಸಿದ್ದನಗೌಡ, ಮಹಿಳಾ ಜಿಲ್ಲಾಧ್ಯಕ್ಷೆ ಮಾಲತಿ ನಾಯಕ, ಮುಖಂಡರಾದ ಬಸವರಾಜಸ್ವಾಮಿ ಮಳೇಮಠ, ಅಮರೇಶ ಕರಡಿ, ಕೃಷ್ಣ ಎಂ. ಇಟ್ಟಂಗಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Continue Reading

ಪ್ರಮುಖ ಸುದ್ದಿ

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

DK Shivakumar: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ವಿಚಾರದಲ್ಲಿ ನಾವು ಜೆಡಿಎಸ್ ಪಕ್ಷದವರನ್ನು ಪ್ರಶ್ನೆ ಮಾಡುವುದಿಲ್ಲ. ಬಿಜೆಪಿ ಹಾಗೂ ಈ ವಿಚಾರದಲ್ಲಿ ಎನ್‌ಡಿಎ ನಿಲುವೇನು ಎಂದು ತಿಳಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

DCM D K Shivakumar Latest statement in Belagavi
Koo

ಬೆಳಗಾವಿ/ಕೂಡ್ಲಿಗಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣ ವಿಚಾರದಲ್ಲಿ ನಾವು ಜೆಡಿಎಸ್ ಪಕ್ಷದವರನ್ನು ಪ್ರಶ್ನೆ ಮಾಡುವುದಿಲ್ಲ. ಬಿಜೆಪಿ ಹಾಗೂ ಈ ವಿಚಾರದಲ್ಲಿ ಎನ್‌ಡಿಎ ನಿಲುವೇನು ಎಂದು ತಿಳಿಸಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದ್ದಾರೆ.

ಬೆಳಗಾವಿಯಲ್ಲಿ ಮತ್ತು ಕೂಡ್ಲಿಗಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ಪ್ರಜ್ವಲ್ ಅವರನ್ನು ಜೆಡಿಎಸ್‌ನಿಂದ ಉಚ್ಛಾಟನೆ ಮಾಡಿರುವುದು ಅವರ ಪಕ್ಷ ಹಾಗೂ ಕುಟುಂಬದ ವಿಚಾರ. ಆದರೆ ಈ ಹಗರಣದ ಹಿನ್ನೆಲೆಯಲ್ಲಿ ಮೈತ್ರಿ ಬಗ್ಗೆ ತಮ್ಮ ನಿಲುವೇನು ಎಂಬುದರ ಬಗ್ಗೆ ಬಿಜೆಪಿ ಹಾಗೂ ಎನ್‌ಡಿಎ ನಾಯಕರು ಉತ್ತರ ನೀಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Labour Day 2024: ಮೇ 1ರ ಕಾರ್ಮಿಕ ದಿನಾಚರಣೆಯ ಹಿನ್ನೆಲೆ ಏನು? ಏನಿದರ ಸಂದೇಶ?

ಪೆನ್‌ಡ್ರೈವ್ ವಿಚಾರವಾಗಿ ತನಿಖೆಯಾಗಲಿ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ವಿಚಾರ ನಮ್ಮ ನಿಯಂತ್ರಣದಲ್ಲಿ ಇಲ್ಲ. ಏನೇ ಇದ್ದರು ತನಿಖಾಧಿಕಾರಿಗಳು ತೀರ್ಮಾನ ಮಾಡುತ್ತಾರೆ. ಈ ವಿಚಾರದಲ್ಲಿ ಬಿಜೆಪಿ ನಾಯಕರಾದ ಆರ್. ಅಶೋಕ್, ವಿಜಯೇಂದ್ರ ನುಣುಚಿಕೊಳ್ಳಬಾರದು. ಕುಮಾರಸ್ವಾಮಿ, ಅವರ ಕುಟುಂಬ ಹಾಗೂ ಅವರ ಪಕ್ಷದವರು ಏನಾದರೂ ಮಾಡಿಕೊಳ್ಳಲಿ” ಎಂದರು.

ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯುತ್ತಮವಾಗಿದೆ

ಬೆಳಗಾವಿಯಲ್ಲಿ ಭಾನುವಾರ ಮಾತನಾಡಿದ್ದ ಪ್ರಧಾನಮಂತ್ರಿಗಳು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಾಶವಾಗಿದೆ ಎಂದು ಆರೋಪಿಸಿದ್ದ ಬಗ್ಗೆ ಕೇಳಿದಾಗ, ಪ್ರಧಾನಮಂತ್ರಿಗಳು ಯಾವ ರೀತಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದನ್ನು ಸ್ಪಷ್ಟಪಡಿಸಬೇಕು. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದ ಕಾನೂನು ಸುವ್ಯವಸ್ಥೆ ಅತ್ಯುತ್ತಮವಾಗಿದೆ. ಈ ಕಾರಣಕ್ಕೆ ನಮ್ಮ ರಾಜ್ಯಕ್ಕೆ ಜನ ಬಹಳ ಉತ್ಸುಕತೆಯಿಂದ ಬರುತ್ತಿದ್ದಾರೆ. ಈ ಕಾರಣಕ್ಕೆ ವಾಜಪೇಯಿ ಅವರು ವಿಶ್ವದ ನಾಯಕರು ಮೊದಲು ಬೆಂಗಳೂರಿಗೆ ಬಂದು ನಂತರ ಭಾರತದ ಇತರೆ ನಗರಗಳಿಗೆ ಹೋಗುತ್ತಿದ್ದಾರೆ ಎಂದಿದ್ದರು. ನಿಮಗೆ ಮತ ಸಿಗಲಿಲ್ಲ ಎಂದು ಕರ್ನಾಟಕ ರಾಜ್ಯದ ಬಗ್ಗೆ ಸುಳ್ಳು ಮಾತನಾಡಿದರೆ ಅದು ಭಾರತಕ್ಕೆ ಮಾಡುವ ಅಪಮಾನ. ವಿದೇಶಿಗರು ಕರ್ನಾಟಕದ ಮೂಲಕ ಭಾರತವನ್ನು ನೋಡುತ್ತಿದ್ದಾರೆ. ದೇಶದಲ್ಲೇ ಅತ್ಯುತ್ತಮ ಆಡಳಿತ ಹಾಗೂ ಪೊಲೀಸ್ ವ್ಯವಸ್ಥೆ ಇರುವ ರಾಜ್ಯ ಕರ್ನಾಟಕ ಎಂದು ತಿಳಿಸಿದರು.

ಇದನ್ನೂ ಓದಿ: Toyota Kirloskar Motor: ಕಾರ್‌ ಕೇರ್‌ಗೆ ʼಟಿಗ್ಲೊಸ್ʼ ಆರಂಭಿಸಿದ ಟೊಯೊಟಾ ಕಿರ್ಲೋಸ್ಕರ್ ಮೋಟಾರ್

ಭರ್ಜರಿ ಜಯ ಸಾಧಿಸಲಿದೆ

ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರಿಂದ ಯಾವ ರೀತಿ ಪ್ರತಿಕ್ರಿಯೆ ಬರುತ್ತಿದೆ ಎಂದು ಕೇಳಿದಾಗ, ಕಾಂಗ್ರೆಸ್ ಪಕ್ಷ ದಕ್ಷಿಣ ಭಾಗದ ಕ್ಷೇತ್ರಗಳಲ್ಲಿ ಹೆಚ್ಚಿನ ಸ್ಥಾನ ಗೆಲ್ಲಲಿದ್ದು, ಉತ್ತರ ಭಾಗದ ಕ್ಷೇತ್ರಗಳಲ್ಲೂ ಭರ್ಜರಿ ಜಯ ಸಾಧಿಸಲಿದೆ. ಉತ್ತರ ಕ್ಷೇತ್ರಗಳಲ್ಲಿ ಜನ ನಮಗೆ ಹೆಚ್ಚಿನ ಬೆಂಬಲ ನೀಡುತ್ತಿದ್ದಾರೆ. ಸಂಸತ್ ಸ್ಥಾನಗಳಲ್ಲಿ ನಾವು ಈ ಹಿಂದಿನ ದಾಖಲೆ ಮುರಿಯುತ್ತೇವೆ ಎಂದರು.

Continue Reading
Advertisement
KKR vs DC
ಕ್ರೀಡೆ8 mins ago

KKR vs DC: ಡೆಲ್ಲಿಗೆ ನೀರು ಕುಡಿಸಿದ ಸಾಲ್ಟ್​; ಪಂತ್​ ಪಡೆಯ ಪ್ಲೇ ಆಫ್ ಹಾದಿ ದುರ್ಗಮ

Patanjali
ದೇಶ17 mins ago

Patanjali: ಪತಂಜಲಿಯ 14 ಉತ್ಪನ್ನಗಳ ಲೈಸೆನ್ಸ್‌ ರದ್ದು, ಬಾಬಾ ರಾಮದೇವ್‌ ವಿರುದ್ಧ ಬಿತ್ತು ಕೇಸ್

Murder Case
ಕರ್ನಾಟಕ24 mins ago

Murder Case: ಹೆಂಡ್ತಿ ಬಿಟ್ಟು ಹೋಗುತ್ತಾಳೆಂದು ಕತ್ತು ಸೀಳಿ ಕೊಂದ ಪತಿರಾಯ!

CM Siddaramaiah inaugurated by prajadhwani lok sabha election campaign meeting at kushtagi
ಕೊಪ್ಪಳ44 mins ago

Lok Sabha Election 2024: ನಾಯಕತ್ವ ಕೊರತೆ ಇರುವುದು ಬಿಜೆಪಿಗೆ ಎಂದ ಸಿದ್ದರಾಮಯ್ಯ

DCM D K Shivakumar Latest statement in Belagavi
ಪ್ರಮುಖ ಸುದ್ದಿ46 mins ago

DK Shivakumar: ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಬಿಜೆಪಿ ನಿಲುವೇನು; ಶಿವಕುಮಾರ್ ಪ್ರಶ್ನೆ

Murder Case
ಕರ್ನಾಟಕ56 mins ago

Murder Case: ದ್ವಿತೀಯ ಪಿಯುಸಿಯಲ್ಲಿ ಮಾರ್ಕ್ಸ್‌ ಕಡಿಮೆ ಬಂದಿದ್ದಕ್ಕೆ ಚಾಕು ಇರಿದು ಮಗಳನ್ನೇ ಕೊಂದ ತಾಯಿ!

Chandrayaan 3
ದೇಶ1 hour ago

Chandrayaan 3: ಚಂದ್ರಯಾನ 3 ಆಗುತ್ತಿತ್ತು ಛಿದ್ರ; ಆ 4 ಸೆಕೆಂಡ್‌ಗಳಲ್ಲೇ ಮಿಷನ್‌ ಬಚಾವ್‌ ಆಗಿದ್ದು ಹೇಗೆ?

Champions Trophy 2025
ಕ್ರೀಡೆ1 hour ago

Champions Trophy 2025: ಚಾಂಪಿಯನ್ಸ್ ಟ್ರೋಫಿಗೆ ಸ್ಥಳ ನಿಗದಿಪಡಿಸಿದ ಪಾಕಿಸ್ತಾನ

Karnataka Weather
ಕರ್ನಾಟಕ2 hours ago

Karnataka Weather: ರಾಯಚೂರಿನಲ್ಲಿ ರಾಜ್ಯದಲ್ಲೇ ಗರಿಷ್ಠ ಉಷ್ಣಾಂಶ ದಾಖಲು; ಇನ್ನೂ 4 ದಿನ ಶಾಖದ ಅಲೆ ಎಚ್ಚರಿಕೆ

Lok Sabha Election
ದೇಶ2 hours ago

3ನೇ ಹಂತದಲ್ಲಿ ಕಣಕ್ಕಿಳಿದ 1,352 ಅಭ್ಯರ್ಥಿಗಳ ಪೈಕಿ 244 ಜನರ ವಿರುದ್ಧ ಕ್ರಿಮಿನಲ್‌ ಕೇಸ್!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 202410 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202411 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌