Jindal Land Deal: ಅಂದು ಜಿಂದಾಲ್‌ಗೆ ಜಮೀನು ಕೊಡುವುದನ್ನು ವಿರೋಧಿಸಿದ್ದ ಕಾಂಗ್ರೆಸ್‌ ಈಗ 3677 ಎಕರೆ ಬರೆದು ಕೊಟ್ಟದ್ದೇಕೆ? - Vistara News

ಪ್ರಮುಖ ಸುದ್ದಿ

Jindal Land Deal: ಅಂದು ಜಿಂದಾಲ್‌ಗೆ ಜಮೀನು ಕೊಡುವುದನ್ನು ವಿರೋಧಿಸಿದ್ದ ಕಾಂಗ್ರೆಸ್‌ ಈಗ 3677 ಎಕರೆ ಬರೆದು ಕೊಟ್ಟದ್ದೇಕೆ?

Jindal Land Deal: ಜಿಂದಾಲ್‌ಗೆ 3677 ಎಕರೆ ಜಮೀನು ಕರಾರು ಪತ್ರ ನೀಡಲು ಸಿದ್ದರಾಮಯ್ಯ ಸಂಪುಟ ಒಪ್ಪಿಗೆ ನೀಡಿದೆ. ವಿಪಕ್ಷದಲ್ಲಿ ಇದ್ದಾಗ ಅವರೇ ವಿರೋಧಿಸಿದ್ದರು. 2021ರಲ್ಲಿ ಜಮೀನಿನ ಕರಾರು ಪತ್ರ ಕೊಡಲು ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಆಡಳಿತಕ್ಕೆ ಬಂದು ಒಂದು ವರ್ಷ ಕಳೆದ ಬೆನ್ನಲ್ಲೇ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ.

VISTARANEWS.COM


on

jindal land deal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಈ ಹಿಂದೆ ವಿರೋಧ ಪಕ್ಷದಲ್ಲಿದ್ದಾಗ ಜಿಂದಾಲ್‌ ಗ್ರೂಪ್‌ನೊಂದಿಗೆ (Jindal Group) ರಾಜ್ಯ ಬಿಜೆಪಿ ಸರ್ಕಾರ (BJP Govt) ಮಾಡಿಕೊಂಡಿದ್ದ 3677 ಎಕರೆ ಜಮೀನು ಪರಭಾರೆ ಒಪ್ಪಂದವನ್ನು (Jindal Land Deal) ಕಾಂಗ್ರೆಸ್‌ (Congress) ವಿರೋಧಿಸಿತ್ತು. ಇದೀಗ ಸಿಂ ಸಿದ್ದರಾಮಯ್ಯ (CM Siddaramaiah) ಸರಕಾರ ಅದಕ್ಕೆ ಒಪ್ಪಿಗೆ ನೀಡಿದೆ. ಈ ಒಪ್ಪಿಗೆ ನೀಡಿದ್ದರ ಕುರಿತು ಸಂಪುಟದ ಹಲವು ಸಚಿವರು ಸಮರ್ಥನೆ ನೀಡಿದ್ದಾರೆ.

ಜಿಂದಾಲ್‌ಗೆ 3677 ಎಕರೆ ಜಮೀನು ಕರಾರು ಪತ್ರ ನೀಡಲು ಸಿದ್ದರಾಮಯ್ಯ ಸಂಪುಟ ಒಪ್ಪಿಗೆ ನೀಡಿದೆ. ವಿಪಕ್ಷದಲ್ಲಿ ಇದ್ದಾಗ ಅವರೇ ವಿರೋಧಿಸಿದ್ದರು. 2021ರಲ್ಲಿ ಜಮೀನಿನ ಕರಾರು ಪತ್ರ ಕೊಡಲು ಆಕ್ಷೇಪ ವ್ಯಕ್ತಪಡಿಸಿದ್ದರು. ಆಗಿನ ಸಿಎಂ ಯಡಿಯೂರಪ್ಪ ನಿರ್ಧಾರಕ್ಕೆ ಶಾಸಕ ಬೆಲ್ಲದ್ ಸ್ವತಃ ಆಕ್ಷೇಪ ವ್ಯಕ್ತಪಡಿಸಿದ್ದರು. ಅಂದು ಸ್ವಪಕ್ಷ ವಿಪಕ್ಷ ಶಾಸಕರ ಒತ್ತಡಕ್ಕೆ ಮಣಿದು ಕ್ಯಾಬಿನೆಟ್ ನಿರ್ಧಾರವನ್ನು ಯಡಿಯೂರಪ್ಪ ವಾಪಸು ಪಡೆದಿದ್ದರು. ಇದೀಗ ಆಡಳಿತಕ್ಕೆ ಬಂದು ಒಂದು ವರ್ಷ ಕಳೆದ ಬೆನ್ನಲ್ಲೇ ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಅಂದು ಆಕ್ಷೇಪ ವ್ಯಕ್ತಪಡಿಸಿದ್ದ ಎಚ್. ಕೆ ಪಾಟೀಲ್ ಅವರಿಂದಲೇ ಇದರ ಪ್ರಸ್ತಾಪ ಬಂದಿದೆ. ಸರ್ಕಾರದ ನಿರ್ಧಾರದ ಹಿಂದೆ ಕಿಕ್‌ಬ್ಯಾಕ್‌ ವಾಸನೆ ಇದೆ ಎಂದು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ಸ್ಪಷ್ಟನೆ ದೊರೆತಿದೆ: ಪರಮೇಶ್ವರ್

ಜಿಂದಾಲ್‌ಗೆ ಜಾಗ ಕೊಡುವ ವಿಚಾರದಲ್ಲಿ ಹಿಂದೆ ನಾವು ವಿರೋ಼ಧ ಮಾಡಿದ್ದು ನಿಜ. ಕೆಲವು ಪ್ರಶ್ನೆಗಳನ್ನ ನಾವು ಕೇಳಿದ್ದೆವು. ಅದಕ್ಕೆ ಕ್ಲಾರಿಫಿಕೇಷನ್ ಕೂಡ ಸಿಕ್ಕಿದೆ. ಕೋರ್ಟ್ ಕೂಡ ಆದೇಶ ಮಾಡಿದೆ. ಬೆಲೆಯಲ್ಲೂ ಕೂಡ ಒಂದಿಷ್ಟು ಕ್ಲಾರಿಟಿ ಸಿಕ್ಕಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ.

ನಾವು ಗ್ಲೋಬಲ್ ಇನ್ವೆಸ್ಟರ್ ಮೀಟ್‌ ಮಾಡ್ತೀವಿ. ಪ್ರಪಂಚದಾದ್ಯಂತ ಇದರಲ್ಲಿ ಭಾಗಿಯಾಗ್ತಾರೆ. ಒಂದಿಷ್ಟು ವಿನಾಯಿತಿಗಳನ್ನ ಅವರಿಗೆ ಕೊಡ್ತೀವಿ. ನೀರು, ಜಾಗ, ವಿದ್ಯುತ್ ಹೀಗೆ ಒಂದಿಷ್ಟು ವಿನಾಯಿತಿ ಇರುತ್ತದೆ. ಇರೋವ್ರನ್ನ ಉಳಿಸಿಕೊಂಡು ಹೊಸಬರನ್ನೂ ತರಬೇಕಾಗಿದೆ. ನಾವು ಒಂದಿಷ್ಟು ಬೆಂಬಲ ನೀಡಬೇಕು. ಇಲ್ಲದಿದ್ದರೆ ರಾಜ್ಯ ಬಿಟ್ಟು ಹೋಗ್ತಾರೆ. ತಮಿಳುನಾಡು ಆಂಧ್ರದಲ್ಲಿ ಉಚಿತ ಭೂಮಿ ಕೊಡ್ತಾರೆ. ನಾವು ಕೊಟ್ಟಿಲ್ಲ ಅಂದ್ರೆ ಅವ್ರು ಕರೀತಾರೆ. ಹಿಂದೆ ಒಂದಿಷ್ಟು ಘಟನೆ ನಡೆದಾಗ ಕಂಪನಿಗಳು ಬಿಟ್ಟು ಹೋಗ್ತೀವಿ ಅಂದ್ರು. ಹಾಗಾಗಿ ಎನ್ಕರೇಜ್ ಮಾಡ್ತಾ ಇದ್ದೀವಿ ಎಂದು ಪರಮೇಶ್ವರ ತಿಳಿಸಿದ್ದಾರೆ.

ಬಿಜೆಪಿಯವರಂತೆಯೇ ನೀಡಿದ್ದೇವೆ: ಡಿಕೆಶಿ

ರಾಜ್ಯದಲ್ಲಿ ಕೈಗಾರಿಕೆಗಳು ಬರಬೇಕು. ಕೈಗಾರಿಕೋದ್ಯಮಿಗಳಿಗೆ ಉತ್ತೇಜನ ಕೊಡಬೇಕು. ಪಾಲಿಸಿ ಪ್ರಕಾರ ನಾವು ಮಾಡಿದ್ದೇವೆ. ಹೊಸದಾಗಿ ನಾವು ಏನೂ ಕೊಟ್ಟಿಲ್ಲ. ಹಳೆಯ ಪದ್ಧತಿ ಪ್ರಕಾರವೇ ಬಿಜೆಪಿಯವರ ರೀತಿಯಲ್ಲಿಯೇ ನಾವು ಮಾಡಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಅತಿ ಹೆಚ್ಚು ಬಂಡವಾಳ: ಎಂಬಿ ಪಾಟೀಲ್

ರಾಜ್ಯದಲ್ಲಿ ಯಾವುದೇ ಇಂಡಸ್ಟ್ರಿಗೆ ಭೂಮಿ ಕೊಡಬೇಕಾದ್ರೆ ಸದ್ಯದ ಮಾರ್ಕೆಟ್ ವ್ಯಾಲ್ಯೂ ಫಿಕ್ಸ್ ಮಾಡುತ್ತೇವೆ. 1995ರಲ್ಲಿ ಧರ್ಮಸಿಂಗ್ ಸಿಎಂ ಆಗಿದ್ದಾಗ ಕ್ಯಾಬಿನೆಟ್‌ನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಅತಿಹೆಚ್ಚು ಜಿಂದಾಲ್ ಇನ್ವೆಸ್ಟ್ ಮಾಡಿದೆ. 50 ಸಾವಿರಕ್ಕೂ ಹೆಚ್ಚು ಉದ್ಯೋಗ ನೀಡಿದೆ. ನಮ್ಮ ಇಂಡಸ್ಟ್ರಿಯಲ್ ಪಾಲಿಸಿ ಪ್ರಕಾರ ಜಿಂದಾಲ್ ಅಷ್ಟೇ ಅಲ್ಲ, ಒಂದು ಲಕ್ಷ ಇಂಡಸ್ಟ್ರಿ ಇದ್ದಾವೆ. ಅವೆಲ್ಲಕ್ಕೂ ಭೂಮಿ ನೀಡಲು ನಿಯಮಾವಳಿ ಇದೆ. ಅದೇ ರೀತಿ ಅವತ್ತಿನ ಮಾರ್ಕೆಟ್ ದರದಲ್ಲಿ ಭೂಮಿ ನೀಡಲಾಗಿದೆ ಎಂದು ಎಂಬಿ ಪಾಟೀಲ್‌ ಹೇಳಿದ್ದಾರೆ.

ಭೂಮಿಗೆ ನೀಡಿರುವ ದರದಲ್ಲಿ ವ್ಯತ್ಯಾಸ ಆದರೆ ಅದನ್ನು ಅವರೇ ಭರಸಬೇಕಾಗುತ್ತದೆ. ಆ ಕಂಡಿಷನ್‌ನಂತೆ ಜಿಂದಾಲ್ ಹಣ ಕಟ್ಟಬೇಕಿತ್ತು. ಅದರ ಬಗ್ಗೆ ಹಲವು ಕ್ಯಾಬಿನೆಟ್ ಮೀಟಿಂಗ್‌ನಲ್ಲಿ ಚರ್ಚೆ ಆಗಿದೆ. ಎಲ್ಲರೊಂದಿಗೆ ಏನು ತೀರ್ಮಾನ ಮಾಡಬೇಕಿದೆಯೋ ಅದನ್ನು ಮಾಡಿದ್ದೇವೆ. ಹಳೆಯ ಮಾರ್ಕೆಟ್ ದರ ಕೊಡಲು ಆಗುವುದಿಲ್ಲ. ಅವರಿಗೆ ಯಾವುದೇ ರಿಯಾಯತಿ ಕೊಟ್ಟಿಲ್ಲ. ಹೈಕೋರ್ಟ್ ನಿರ್ದೇಶನ ನೀಡಿದೆ. ಕ್ಯಾಬಿನೆಟ್ ನಿರ್ಧಾರದಂತೆ ತಾರ್ಕಿಕ ಅಂತ್ಯಗೊಳಿಸಿದ್ದೇವೆ. ಇಂಡಸ್ಟ್ರೀಸ್ ಪಾಲಿಸಿ ಮೂಲಕ ನಾವು ಆದೇಶ ಮಾಡಿದ್ದೇವೆ ಎಂದಿದ್ದಾರೆ.

ಜಿಂದಾಲ್‌ಗೆ ನಾವು ವಿರೋಧ ಮಾಡಿದ್ದು ಬೇರೆ ವಿಷಯ. ಇದರಲ್ಲಿ ಮೈನಿಂಗ್ ಬರುವುದಿಲ್ಲ. ಪ್ರತಿಭಟನೆ ಮಾಡಿದ್ದು ಜನಾರ್ದನ ರೆಡ್ಡಿ ವಿರುದ್ಧ. ಇದರ ವಿರುದ್ಧ ಪ್ರತಿಭಟನೆ ಮಾಡಿಲ್ಲ. ಒಂಬತ್ತು ವರ್ಷದ ಸಮಸ್ಯೆ ಇತ್ತು, ಎಷ್ಟೋ ರಾಜ್ಯಗಳು ಫ್ರೀ ಲ್ಯಾಂಡ್ ಕೊಡುತ್ತಿವೆ. ಆ ರಾಜ್ಯಗಳ ಜೊತೆಗೆ ನಾವು ಪೈಪೋಟಿ ಮಾಡುತ್ತಿದ್ದೇವೆ. ಹೀಗಾಗಿ ಈ ತೀರ್ಮಾನ ಮಾಡಿದ್ದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಇದನ್ನೂ ಓದಿ: DK Shivakumar: ಡಿಕೆ ಶಿವಕುಮಾರ್‌ಗೆ ಇಂದು ವಿಚಾರಣೆಗೆ ಹಾಜರಾಗಲು ಲೋಕಾಯುಕ್ತ ನೋಟೀಸ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Sexual assault: ಶಾಲೆಗಳಲ್ಲಿ ಫೇಕ್‌ NCC ಕ್ಯಾಂಪ್‌ ಆಯೋಜಿಸಿ ಅತ್ಯಾಚಾರ; ಪ್ರಮುಖ ಆರೋಪಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

Sexual assault: ಸ್ಥಳೀಯ ರಾಜಕೀಯ ಪಕ್ಷವಾಗಿರುವ ನಾಮ್‌ ತಮಿಳರ್‌ ಕಚ್ಚಿಯ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಶಿವರಾಮನ್‌ ವಿರುದ್ಧ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ದಾಖಲಾಗಿತ್ತು. ದೂರಿನಾಧಾರದಲ್ಲಿ ಆತನನ್ನು ಅರೆಸ್ಟ್‌ ಮಾಡಲು ಮುಂದಾಗಿದ್ದರು. ಈವೇಳೆ ಆತ ತಪ್ಪಿಸಿಕೊಂಡು ಹೋಗಲೂ ಯತ್ನಿಸಿದ್ದ. ಆದರೆ ಆ.19ರಂದು ಪೊಲೀಸರು ಅರೆಸ್ಟ್‌ ಮಾಡಿದ್ದರು. ಆದರೆ ಅದಕ್ಕೂ ಮುನ್ನ ಆತ ಇಲಿ ಪಾಷಾಣ ಸೇವಿಸಿದ್ದ. ಹೀಗಾಗಿ ಅತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಇಂದು ಆತ ಕೊನೆಯುಸಿರೆಳೆದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 11ಜನರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

VISTARANEWS.COM


on

Sexual assault
Koo

ಚೆನ್ನೈ: ತಮಿಳುನಾಡಿನಲ್ಲಿ ನಕಲಿ ಎನ್‌ಸಿಸಿ ಕ್ಯಾಂಪ್‌(Fake NCC camp) ಆಯೋಜಿಸಿ ಬಾಲಕಿ ಮೇಲೆ ಅತ್ಯಾಚಾರ(Sexual assault) ಮತ್ತು ಇತರ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ಎಸಗುತ್ತಿದ್ದ ಪ್ರಕರಣದ ಪ್ರಮುಖ ಆರೋಪಿಯೊಬ್ಬ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ತಮಿಳುನಾಡಿನ ಬಾರ್ಗರ್‌ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಶಿವರಾಮನ್‌ ಎಂಬಾತ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇನ್ನು ಸ್ಥಳೀಯ ರಾಜಕೀಯ ಪಕ್ಷವಾಗಿರುವ ನಾಮ್‌ ತಮಿಳರ್‌ ಕಚ್ಚಿಯ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಶಿವರಾಮನ್‌ ವಿರುದ್ಧ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ದಾಖಲಾಗಿತ್ತು. ದೂರಿನಾಧಾರದಲ್ಲಿ ಆತನನ್ನು ಅರೆಸ್ಟ್‌ ಮಾಡಲು ಮುಂದಾಗಿದ್ದರು. ಈವೇಳೆ ಆತ ತಪ್ಪಿಸಿಕೊಂಡು ಹೋಗಲೂ ಯತ್ನಿಸಿದ್ದ. ಆದರೆ ಆ.19ರಂದು ಪೊಲೀಸರು ಅರೆಸ್ಟ್‌ ಮಾಡಿದ್ದರು. ಆದರೆ ಅದಕ್ಕೂ ಮುನ್ನ ಆತ ಇಲಿ ಪಾಷಾಣ ಸೇವಿಸಿದ್ದ. ಹೀಗಾಗಿ ಅತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡಿರಲಿಲ್ಲ. ಇಂದು ಆತ ಕೊನೆಯುಸಿರೆಳೆದಿದ್ದಾನೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ 11ಜನರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ.

ಏನಿದು ಘಟನೆ?

ಕೃಷ್ಣಗಿರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯ ರಾಜಕೀಯ ಪಕ್ಷವಾಗಿರುವ ನಾಮ್‌ ತಮಿಳರ್‌ ಕಚ್ಚಿಯ ಜಿಲ್ಲಾ ಕಾರ್ಯದರ್ಶಿ ಶಿವರಾಮನ್‌ ಖಾಸಗಿ ಶಾಲೆಯೊಂದಕ್ಕೆ ಭೇಟಿ ಕೊಟ್ಟು ಎನ್‌ಸಿಸಿ ಕ್ಯಾಂಪ್‌ ಆಯೋಜಿಸುವ ಬಗ್ಗೆ ಚರ್ಚೆ ನಡೆಸಿದ್ದಾನೆ. ಆತನೇ ಸ್ವಯಂ ಆಸಕ್ತಿಯಿಂದ ಎನ್‌ಸಿಸಿ ಕ್ಯಾಂಪ್‌ ಆಯೋಜಿಸಿದ್ದ. ಆತನ ಜೊತೆಗಿದ್ದ ತಂಡವನ್ನು ಮತ್ತು ಆತನ ಹಿನ್ನೆಲೆ ಬಗ್ಗೆ ಸರಿಯಾಗಿ ಪರಿಶೀಲನೆ ನಡೆಸದೇ ಶಾಲಾ ಪ್ರಾಂಶುಪಾಲರು ಇದಕ್ಕೆ ಒಪ್ಪಿದರು.

ಶಿಬಿರವು ಆಗಸ್ಟ್ 5 ರಿಂದ ಆಗಸ್ಟ್ 9 ರವರೆಗೆ ನಡೆದಿದ್ದು, 17 ಹುಡುಗಿಯರು ಸೇರಿದಂತೆ 41 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಶಿಬಿರದ ಸಮಯದಲ್ಲಿ, ಹುಡುಗರನ್ನು ನೆಲ ಮಹಡಿಯಲ್ಲಿ ಮತ್ತು ಹುಡುಗಿಯರನ್ನು ಮೇಲಿನ ಮಹಡಿಯಲ್ಲಿ ಇರಿಸಲಾಗಿತ್ತು. ಅಲ್ಲಿ ಮಿಲಿಟರಿ ತರಹದ ತರಬೇತಿ ನೀಡಲಾಗಿತ್ತು. ಅಲ್ಲದೇ ರಾತ್ರಿಯಲ್ಲಿ ನಾಲ್ಕು ಗಂಟೆಗಳ ಪಾಳಿಗಳವರೆಗೆ ಶಾಲೆಯ ಕಾಂಪೌಂಡ್ ಅನ್ನು ಕಾವಲು ಕಾಯಲು ವಿದ್ಯಾರ್ಥಿಗಳನ್ನು ಗುಂಪುಗಳಲ್ಲಿ ನಿಯೋಜಿಸಲಾಯಿತು. ಈ ರಾತ್ರಿ ಪಾಳಿಯಲ್ಲಿ ಶಿವರಾಮನ್ 13 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಸಂತ್ರಸ್ತೆ ಶಾಲೆಯ ಪ್ರಾಂಶುಪಾಲರಾದ ಸತೀಶ್ ಕುಮಾರ್ ಅವರಿಗೆ ಈ ಹೀನ ಕೃತ್ಯದ ಬಗ್ಗೆ ದೂರು ನೀಡಿದ್ದಳು. ಆದರೆ ಕ್ರಮ ತೆಗೆದುಕೊಳ್ಳುವ ಬದಲು, ಪ್ರಾಂಶುಪಾಲರು, ಶಾಲೆಯ ಇಬ್ಬರು ಶಿಕ್ಷಕರೊಂದಿಗೆ ಸೇರಿ ಈ ಕೃತ್ಯವನ್ನು ಮುಚ್ಚಿಡಲು ನಿರ್ಧರಿಸಿದರು. ಹುಡುಗಿ ಅಂತಿಮವಾಗಿ ತನ್ನ ತಾಯಿಗೆ ತಿಳಿಸಿದಳು, ಆಕೆಯ ತಂದೆ ಶುಕ್ರವಾರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರ ಪ್ರಕಾರ, ಲೈಂಗಿಕ ದೌರ್ಜನ್ಯಕ್ಕೊಳಗಾದ ಹುಡುಗಿಯನ್ನು ಹೊರತುಪಡಿಸಿ, ಕನಿಷ್ಠ ನಾಲ್ವರು ವಿದ್ಯಾರ್ಥಿನಿಯರಿಗೆ ಶಿವರಾಮನ್ ಮತ್ತು ಅವರ ಸಹಚರರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಶಿವರಾಮನ್ ಮತ್ತು ಆತನ ಸಹಚರರು ಕೃಷ್ಣಗಿರಿಯ ಇತರ ಮೂರು ಶಾಲೆಗಳಲ್ಲಿ ಇದೇ ರೀತಿಯ ಅನಧಿಕೃತ ಎನ್‌ಸಿಸಿ ಕ್ಯಾಂಪ್‌ ನಡೆಸಿದೆ ಎನ್ನಲಾಗಿದೆ. ಅವರು ಈ ಹಿಂದಿನ ಅವಧಿಗಳ ಫೋಟೋಗಳು ಮತ್ತು ವೀಡಿಯೊಗಳನ್ನು ತೋರಿಸುವ ಮೂಲಕ ಪ್ರಸ್ತುತ ಶಾಲೆಯ ಆಡಳಿತವನ್ನು ಮನವೊಲಿಸಿದರು.

ಇದನ್ನೂ ಓದಿ: Sexual Abuse: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಜನನಾಂಗದೊಳಗೆ ಗನ್ ತೂರಿಸಿದ ತೃಣಮೂಲ ಕಾರ್ಯಕರ್ತ!

Continue Reading

ವಿದೇಶ

PM Modi Ukraine Visit: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ- ಝೆಲೆನ್ಸ್ಕಿಗೆ ಆತ್ಮೀಯ ಅಪ್ಪುಗೆ

PM Modi Ukraine Visit: ಶುಕ್ರವಾರ ಕೈವ್‌ನಲ್ಲಿ ಭೇಟಿಯಾದ ಉಭಯ ನಾಯಕರು ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. 30 ವರ್ಷಗಳ ಹಿಂದೆ ಭಾರತ ಮತ್ತು ಉಕ್ರೇನ್ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ದೇಶಕ್ಕೆ ಕಾಲಿಟ್ಟ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ಮೋದಿ ಅವರ ಉಕ್ರೇನ್ ಭೇಟಿ ಐತಿಹಾಸಿಕವಾಗಿದೆ.

VISTARANEWS.COM


on

PM Modi Ukraine Visit
Koo

ನವದೆಹಲಿ: ಪೋಲೆಂಡ್‌ ಪ್ರವಾಸ(PM Modi Poland Visit)ದ ಬಳಿಕ ಇದೀಗ ಉಕ್ರೇನ್‌ನ ಕೈವ್‌ಗೆ ಬಂದಿಳಿದಿರುವ ಪ್ರಧಾನಿ ನರೇಂದ್ರ ಮೋದಿ(Narendra Modi) ಇಂದು ಅಧ್ಯಕ್ಷ ವ್ಲಾಡಮಿರ್‌ ಝೆಲೆನ್ಸ್ಕಿ(Volodymyr Zelensky) ಅವರನ್ನು ಭೇಟಿ(PM Modi Ukraine Visit)ಯಾದರು. ಕೈವ್‌ನಲ್ಲಿ ಭೇಟಿಯಾದ ಉಭಯ ನಾಯಕರು ಪರಸ್ಪರ ಕೈಕುಲುಕಿ ಅಪ್ಪಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದೆ.

ಶುಕ್ರವಾರ ಕೈವ್‌ನಲ್ಲಿ ಭೇಟಿಯಾದ ಉಭಯ ನಾಯಕರು ದ್ವಿಪಕ್ಷೀಯ ಸಭೆ ನಡೆಸಿದ್ದಾರೆ. 30 ವರ್ಷಗಳ ಹಿಂದೆ ಭಾರತ ಮತ್ತು ಉಕ್ರೇನ್ ನಡುವೆ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ ದೇಶಕ್ಕೆ ಕಾಲಿಟ್ಟ ಮೊದಲ ಭಾರತೀಯ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪ್ರಧಾನಿ ಮೋದಿ ಅವರ ಉಕ್ರೇನ್ ಭೇಟಿ ಐತಿಹಾಸಿಕವಾಗಿದೆ. ಉಕ್ರೇನ್ ಮತ್ತು ರಷ್ಯಾ ನಡುವಿನ ನಡೆಯುತ್ತಿರುವ ಸಂಘರ್ಷದ ನಡುವೆ ಪ್ರಧಾನಿ ಮೋದಿ ಮತ್ತು ಝೆಲೆನ್ಸ್ಕಿ ಭೇಟಿ ಬಹಳ ಮಹತ್ವವನ್ನು ಪಡೆದುಕೊಂಡಿದೆ. ಈ ವೇಳೆ ರಾಜತಾಂತ್ರಿಕ ಪರಿಹಾರಕ್ಕಾಗಿ ಮೋದಿ ಸಲಹೆ ನೀಡುತ್ತಾರೆ ಎಂದು ನಿರೀಕ್ಷಿಸಲಾಗಿದೆ.

ಪೋಲೆಂಡ್‌ ಪ್ರವಾಸ(PM Modi Poland Visit)ದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಪ್ರಸ್ತುತ ನಡೆಯುತ್ತಿರುವ ರಷ್ಯಾ-ಉಕ್ರೇನ್‌(Russia-Ukraine War) ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ್ದು, ಯುದ್ಧ ಭೂಮಿಯಲ್ಲಿ ಯಾವುದೇ ಸಮಸ್ಯೆ ಬಗೆಹರಿಯಲು ಸಾಧ್ಯವೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ. ಇದೇ ವೇಳೆ ಅವರು 2022ರಲ್ಲಿ ಉಕ್ರೇನ್‌-ರಷ್ಯಾ ಯುದ್ಧದ ಸಂದರ್ಭದಲ್ಲಿ ಅಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳ ರಕ್ಷಣೆಗೆ ಸಹಾಯ ಮಾಡಿದ ಪೋಲೆಂಡ್‌ಗೆ ಕೃತಜ್ಞತೆ ಸಲ್ಲಿಸಿದ್ದಾರೆ.

2022 ರಲ್ಲಿ ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ರಕ್ಷಿಸಲು ನೀವು ನೀಡಿದ ಸಹಾಯವನ್ನು ಭಾರತದ ಜನರು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇದಕ್ಕಾಗಿ ನಾನು ಸರ್ಕಾರ ಮತ್ತು ಪೋಲೆಂಡ್ ಜನರಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದರು. ಇದೇ ವೇಳೆ ಪೋಲೆಂಡ್‌ ಪ್ರಧಾನಿ ಡೊನಾಲ್ಡ್ ಟಸ್ಕ್ ಅವರಿಗೆ ಆತ್ಮೀಯ ಸ್ವಾಗತಕ್ಕಾಗಿ ಧನ್ಯವಾದಗಳನ್ನು ಅರ್ಪಿಸಿದರು.

ಸುಂದರವಾದ ನಗರವಾದ ವಾರ್ಸಾದಲ್ಲಿ ನನಗೆ ಆತ್ಮೀಯ ಸ್ವಾಗತ ನೀಡಿದ ಪಿಎಂ ಟಸ್ಕ್ ಅವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನೀವು ದೀರ್ಘಕಾಲದವರೆಗೆ ಭಾರತದ ಸ್ನೇಹಿತರಾಗಿದ್ದೀರಿ ಮತ್ತು ಭಾರತ ಮತ್ತು ಪೋಲೆಂಡ್ ನಡುವಿನ ಸಂಬಂಧವನ್ನು ಹೆಚ್ಚಿಸಲು ನೀವು ದೊಡ್ಡ ಕೊಡುಗೆ ನೀಡಿದ್ದೀರಿ ಎಂದು ಅವರು ಹೇಳಿದರು.

ಇದನ್ನೂ ಓದಿ: PM Modi Ukraine Visit: ಜಗತ್ತಿಗೆ ಶಾಂತಿ ಸಂದೇಶ ಸಾರಲು ಭಾರತ ಬದ್ಧ; ಉಕ್ರೇನ್‌ ಭೇಟಿ ಮೂಲಕ ನಿಲುವು ಸ್ಪಷ್ಟಪಡಿಸಿದ ಮೋದಿ

Continue Reading

ಪ್ರಮುಖ ಸುದ್ದಿ

Consolidated Fund Misuse: 1,494 ಕೋಟಿ ಸಂಚಿತ ನಿಧಿ ದುರ್ಬಳಕೆ; ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು!

Consolidated Fund Misuse: ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಹಣ ದುರ್ಬಳಕೆ ಸಂಬಂಧ ಎಂಎಲ್‌ಸಿ ಡಿ.ಎಸ್‌.ಅರುಣ್‌ ಅವರು ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಕರ್ನಾಟಕ ಸರ್ಕಾರವು ಸಂವಿಧಾನದ ನಿಬಂಧನೆಗಳನ್ನು ಉಲ್ಲಂಘಿಸಿರುವ ಕಾರಣ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ವಜಾಗೊಳಿಸಲು ಕೋರಿದ್ದಾರೆ.

VISTARANEWS.COM


on

Consolidated Fund Misuse
Koo

ಬೆಂಗಳೂರು: ವಾಲ್ಮೀಕಿ ನಿಗಮ ಅಕ್ರಮ, ಮುಡಾ ನಿವೇಶನ ಹಗರಣದ ಬೆನ್ನಲ್ಲೇ ರಾಜ್ಯ ಸರ್ಕಾರದಲ್ಲಿ ಮತ್ತೊಂದು ಭಾರಿ ಹಗರಣ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದೆ. 2022-23ನೇ ಸಾಲಿನಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತಿಗಳಲ್ಲಿ ಬಳಕೆಯಾಗದೆ ಉಳಿದಿರುವ 1,494 ಕೋಟಿ ರೂ.ಗಳ ಬಗ್ಗೆ ಪತ್ರ ಬರೆದಿದ್ದರೂ ರಾಜ್ಯ ಸರ್ಕಾರ ಯಾವುದೇ ಮಾಹಿತಿ ನೀಡಿಲ್ಲ. ರಾಜ್ಯ ಸಂಚಿತ ನಿಧಿಗೆ ಸೇರಬೇಕಾದ ಸಾವಿರಾರು ಕೋಟಿ ರೂ.ಗಳು ದುರ್ಬಳಕೆಯಾಗಿದ್ದು (Consolidated Fund Misuse), ಈ ಬಗ್ಗೆ ತನಿಖೆಗೆ ಕ್ರಮ ಕೈಗೊಂಡು ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ವಜಾ ಮಾಡಬೇಕು ಎಂದು ರಾಜ್ಯಪಾಲರಿಗೆ ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ದೂರು ನೀಡಿದ್ದಾರೆ.

2023ರ ಬೆಳಗಾವಿ ಅಧಿವೇಶನದಲ್ಲಿ ರಾಜ್ಯದ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿಗಳ ನಿಧಿ-IIರಲ್ಲಿ ಖರ್ಚು ಮಾಡದೆ ಬಾಕಿ ಇರುವ ಹಣಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಲಾಗಿತ್ತು. ಅದಕ್ಕೆ ಸಿಎಂ ಸಿದ್ದರಾಮಯ್ಯ ಅವರು, ಬಳಕೆಯಾಗದ ಜಿಲ್ಲಾ ಪಂಚಾಯಿತಿಗಳ 459 ಕೋಟಿ ಹಾಗೂ ತಾಲೂಕು ಪಂಚಾಯಿತಿಗಳ 1,494 ಕೋಟಿ ರೂ.ಗಳನ್ನು ಸಂಚಿತ ನಿಧಿಗೆ ಜಮಾ ಮಾಡಲಾಗಿದೆ ಎಂದು ಲಿಖಿತ ಉತ್ತರ ನೀಡಿದ್ದರು. ಆದರೆ, ಇದನ್ನು ಪರಿಶೀಲಿಸಿದ ಬಳಿಕ ಮುಖ್ಯಮಂತ್ರಿಯವರು ನೀಡಿದ ಉತ್ತರ ಸುಳ್ಳು ಎಂದು ಸಾಬೀತಾಗಿದೆ.

MUDA Scam: ಮುಡಾದಲ್ಲಿ ಇನ್ನೊಂದು ಗೋಲ್‌ಮಾಲ್, ಇಲ್ಲದ ವ್ಯಕ್ತಿ ಸೃಷ್ಟಿಸಿ ನಿವೇಶನ ಪಡೆದ ಅಧಿಕಾರಿಗಳು!

ರಾಜ್ಯದ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳ ನಿಧಿ-IIನ ಖರ್ಚು ಮಾಡದ 1494 ಕೋಟಿಗಳನ್ನು ಖಜಾನೆಗೆ ಜಮಾ ಮಾಡಿಲ್ಲ ಎಂದು ಏ.20ರಂದು ಕರ್ನಾಟಕ ಖಜಾನೆ ಇಲಾಖೆ ಸ್ಪಷ್ಟಪಡಿಸಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಅವರು ವಿಧಾನ ಪರಿಷತ್ತಿನ ಮುಂದೆ ಉದ್ದೇಶಪೂರ್ವಕವಾಗಿ ಸುಳ್ಳು ಅಥವಾ ದಾರಿತಪ್ಪಿಸುವ ಹೇಳಿಕೆಗಳನ್ನು ನೀಡಿ ಸತ್ಯವನ್ನು ಮರೆಮಾಚುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿರುವ ಡಿ.ಎಸ್.ಅರುಣ್‌, ಕರ್ನಾಟಕ ಸರ್ಕಾರವು ಸಂವಿಧಾನದ 202, 205 ಮತ್ತು 206 ವಿಧಿಯಡಿಯ ನಿಬಂಧನೆಗಳನ್ನು ಉಲ್ಲಂಘಿಸಿದೆ. ಸಾವಿರಾರು ಕೋಟಿ ರೂ. ಅವ್ಯವಹಾರ ನಡೆದಿರುವ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸಿ, ಸಿಎಂ ಸಿದ್ದರಾಮಯ್ಯ ಅವರನ್ನು ವಜಾ ಮಾಡಬೇಕು ಎಂದು ಪತ್ರದಲ್ಲಿ ಕೋರಿದ್ದಾರೆ.

    Continue Reading

    ಪ್ರಮುಖ ಸುದ್ದಿ

    MB Patil: ಸಿಎಂ ಆಯ್ತು, ಈಗ ಸಚಿವ ಎಂಬಿ ಪಾಟೀಲ್‌ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು

    ಕೆಐಎಡಿಬಿ ನಿವೇಶನ ಹಂಚಿಕೆಯಲ್ಲಿ (KIADB site allotment) ಅಕ್ರಮ ಎಸಗಿದ ಆರೋಪದಲ್ಲಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil) ವಿರುದ್ಧ ಪ್ರಾಸಿಕ್ಯೂ‌ಶನ್‌ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ‌ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಮನವಿ ಮಾಡಿದ್ದಾರೆ.

    VISTARANEWS.COM


    on

    Minister MB Patil statement in janandolana programme by congress party at ramanagara
    Koo

    ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಅವರಿಗೆ ಪ್ರಾಸಿಕ್ಯೂಶನ್‌ (Prosecution) ಅನುಮತಿ ಕಂಟಕದ ಬಳಿಕ ಇದೀಗ ಸಚಿವ ಎಂ.ಬಿ ಪಾಟೀಲ್‌ (MB Patil) ಅವರಿಗೆ ಸಂಕಷ್ಟ ತಗುಲಿಕೊಂಡಿದೆ. ಎಂಬಿ ಪಾಟೀಲ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ (Governor Thawar Chand Gehlot) ದೂರು ಸಲ್ಲಿಸಲಾಗಿದೆ.

    ಕೆಐಎಡಿಬಿ ನಿವೇಶನ ಹಂಚಿಕೆಯಲ್ಲಿ (KIADB site allotment) ಅಕ್ರಮ ಎಸಗಿದ ಆರೋಪದಲ್ಲಿ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ವಿರುದ್ಧ ಪ್ರಾಸಿಕ್ಯೂ‌ಶನ್‌ಗೆ ಅನುಮತಿ ನೀಡಬೇಕು ಎಂದು ಸಾಮಾಜಿಕ‌ ಕಾರ್ಯಕರ್ತ ದಿನೇಶ್‌ ಕಲ್ಲಹಳ್ಳಿ ಮನವಿ ಮಾಡಿದ್ದಾರೆ. ಬಿಡದಿ, ವಸಂತನರಸಾಪುರ, ಕೋಲಾರ ನರಸಾಪುರ, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಗಳಲ್ಲಿ ನಿವೇಶನ‌ ಹಂಚಿಕೆಯಲ್ಲಿ ಅಕ್ರಮ‌ ಎಸಗಲಾಗಿದೆ. ಕಾನೂನು ಬಾಹಿರವಾಗಿ ನಿಯಮಗಳನ್ನು ಗಾಳಿಗೆ ತೂರಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ದಿನೇಶ್‌ ಕಲ್ಲಹಳ್ಳಿ ಇಂದು ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಿದ್ದಾರೆ.

    ಇತ್ತೀಚೆಗೆ ಮುಡಾ ಹಗರಣಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಎಂಬವರು ಮನವಿ ಮಾಡಿದ್ದರು. ಅವರಿಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಇದೀಗ ಈ ಕೇಸು ಹೈಕೋರ್ಟ್‌ನಲ್ಲಿದೆ.

    ಸಿದ್ದರಾಮಯ್ಯ ತಡೆಯಾಜ್ಞೆ ಕೋರಿದ ಅರ್ಜಿ ವಿಚಾರಣೆ 29ಕ್ಕೆ

    ಮುಡಾ ಹಗರಣದಲ್ಲಿ (Muda Scam) ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಸೋಮವಾರ ನಡೆದಿದೆ. ಸುದೀರ್ಘ ಒಂದೂವರೆ ಗಂಟೆ ಕಾಲ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಮೂರ್ತಿ ನಾಗಪ್ರಸನ್ನ ಅವರು ವಿಚಾರಣೆಯನ್ನು ಆ.29ರ ಮಧ್ಯಾಹ್ನ 2.30ಕ್ಕೆ ಮುಂದೂಡಿದರು.

    ಅರ್ಜಿ ವಿಚಾರಣೆ ವೇಳೆ ವಾದ-ಪ್ರತಿವಾದ ಆಲಿಸಿದ ಬಳಿಕ ಮಾತನಾಡಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ದೂರುದಾರರು ಹಾಗೂ ಸಿಎಂ ಪರ ವಕೀಲರು ವಾದ ಮಂಡಿಸಿದ್ದಾರೆ. ಪಿಸಿ ಆಕ್ಟ್ 17ಎ ಅಡಿ ಅನುಮತಿ ಪ್ರಶ್ನಿಸಲಾಗಿದ್ದು, ರಿಟ್ ಅರ್ಜಿಯೊಂದಿಗೆ ದಾಖಲೆಗಳನ್ನು ಉಲ್ಲೇಖಿಸಿದ್ದಾರೆ. ರಾಜ್ಯಪಾಲರು ವಿವೇಚನಾರಹಿತವಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ ಎಂದು ಸಿಎಂ ಪರ ವಕೀಲರು ವಾದ ಮಂಡಿಸಿದ್ದಾರೆ. ಇನ್ನು ರಾಜ್ಯಪಾಲರ ಆದೇಶಕ್ಕೆ ತಡೆ ನೀಡಬಾರದು ಎಂದು ಪ್ರಭುಲಿಂಗ ನಾವದಗಿ ವಾದಿಸಿದ್ದಾರೆ. ಎಲ್ಲಾ ವಾದವನ್ನು ಕೋರ್ಟ್‌ ಆಲಿಸಿದ್ದು,
    ಹೈಕೋರ್ಟ್ ಮುಂದಿನ ಆದೇಶ ನೀಡುವವರೆಗೂ ಅಂದರೆ ಆಗಸ್ಟ್ 29ರವರೆಗೆ ವಿಚಾರಣೆ ಮುಂದೂಡಬೇಕು ಎಂದು ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚನೆ ನೀಡಿದರು.

    ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ವಾದ ಮಂಡಿಸಿದರು. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಾದ ಮಂಡಿಸಲು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಾಗಿದ್ದರು. ಸಿಎಂ ಸಿದ್ದರಾಮಯ್ಯ ಪರ ವಕೀಲ ಮನು ಸಿಂಘ್ವಿ ವಾದ ಮಂಡಿಸಿ, ಪ್ರಕರಣದಲ್ಲಿ ಸಂವಿಧಾನಾತ್ಮಕ ಮತ್ತು ಆಡಳಿತಾತ್ಮಕ ವಿಚಾರಗಳಿವೆ. ನಾಳೆ ಜನಪ್ರತಿನಿಧಿಗಳ ಕೋರ್ಟ್ ಆದೇಶ ಬಾಕಿ ಇದೆ. ಗವರ್ನರ್ ಆದೇಶ ನೀಡುವ ಮುನ್ನ ಕ್ಯಾಬಿನೆಟ್ ತೀರ್ಮಾನ ಮಾಡಿದೆ. ಆದರೆ, ಗವರ್ನರ್ ಯಾವ ಆಧಾರ ಇಲ್ಲದೆಯೂ ಅನುಮತಿ ನೀಡಿದ್ದಾರೆ ಎಂದು ಹೇಳಿದರು.

    ಇದನ್ನೂ ಓದಿ | CM Siddaramaiah: ನಾನು ಡಲ್‌ ಆಗಿಲ್ಲ, ನನ್ನ ಹೋರಾಟದ ಜೋಶ್‌ ಹೆಚ್ಚಾಗಿದೆ: ಸಿಎಂ ಸಿದ್ದರಾಮಯ್ಯ

    Continue Reading
    Advertisement
    Sexual assault
    ಪ್ರಮುಖ ಸುದ್ದಿ15 mins ago

    Sexual assault: ಶಾಲೆಗಳಲ್ಲಿ ಫೇಕ್‌ NCC ಕ್ಯಾಂಪ್‌ ಆಯೋಜಿಸಿ ಅತ್ಯಾಚಾರ; ಪ್ರಮುಖ ಆರೋಪಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ

    Health Tips
    ಆರೋಗ್ಯ32 mins ago

    Health Tips: ನಿಂತು ಊಟ ಮಾಡುವುದಕ್ಕಿಂತ ಕೂತು ಊಟ‌ ಮಾಡಿದರೆ ಏನೇನು ಲಾಭಗಳಿವೆ ನೋಡಿ!

    Nirmal Benny
    ಸಿನಿಮಾ34 mins ago

    Nirmal Benny: ಹೃದಯಾಘಾತದಿಂದ ಮಾಲಿವುಡ್‌ನ ಖ್ಯಾತ ನಟ ನಿರ್ಮಲ್ ಬೆನ್ನಿ ನಿಧನ

    Self Harming
    ಮೈಸೂರು42 mins ago

    Self Harming : ಪ್ರೇಮ ವೈಫಲ್ಯಕ್ಕೆ ಯುವಕ ಆತ್ಮಹತ್ಯೆ; ಅಪ್ಪನ ಸಾಲಕ್ಕೆ ನೇಣು ಬಿಗಿದುಕೊಂಡ ಮಗ!

    Shakib Al Hasan
    ಕ್ರೀಡೆ44 mins ago

    Shakib Al Hasan: ಬಾಂಗ್ಲಾ ತಂಡದ ನಾಯಕ ಶಕಿಬ್​ ವಿರುದ್ಧ ಕೊಲೆ ಪ್ರಕರಣ ದಾಖಲು

    Fashion Trend
    ಫ್ಯಾಷನ್47 mins ago

    Fashion Trend: ಜೆನ್‌ ಜಿ ಫ್ಯಾಷನ್‌‌‌ಗೆ ಎಂಟ್ರಿ ಕೊಟ್ಟ ವೈಬ್ರೆಂಟ್‌ ಕ್ವಿರ್ಕಿ ಲೆಗ್ಗಿಂಗ್ಸ್!

    PM Modi Ukraine Visit
    ವಿದೇಶ55 mins ago

    PM Modi Ukraine Visit: ಉಕ್ರೇನ್‌ಗೆ ಬಂದಿಳಿದ ಪ್ರಧಾನಿ ಮೋದಿ- ಝೆಲೆನ್ಸ್ಕಿಗೆ ಆತ್ಮೀಯ ಅಪ್ಪುಗೆ

    Consolidated Fund Misuse
    ಪ್ರಮುಖ ಸುದ್ದಿ57 mins ago

    Consolidated Fund Misuse: 1,494 ಕೋಟಿ ಸಂಚಿತ ನಿಧಿ ದುರ್ಬಳಕೆ; ಸಿಎಂ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು!

    Physical abuse
    ಕ್ರೈಂ1 hour ago

    Physical Abuse : 10 ವರ್ಷದ ಅಪ್ರಾಪ್ತೆ ಮೇಲೆ ಎರಗಿದ ಕಾಮುಕ; ಅತ್ಯಾಚಾರದ ವೇಳೆ ಕಿರುಚಾಡಿದ್ದಕ್ಕೆ ಕೊಲೆಗೈದ ಹಂತಕ

    Minister MB Patil statement in janandolana programme by congress party at ramanagara
    ಪ್ರಮುಖ ಸುದ್ದಿ1 hour ago

    MB Patil: ಸಿಎಂ ಆಯ್ತು, ಈಗ ಸಚಿವ ಎಂಬಿ ಪಾಟೀಲ್‌ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು

    Kannada Serials
    ಕಿರುತೆರೆ11 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Sharmitha Gowda in bikini
    ಕಿರುತೆರೆ11 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Bigg Boss- Saregamapa 20 average TRP
    ಕಿರುತೆರೆ10 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    Kannada Serials
    ಕಿರುತೆರೆ11 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    galipata neetu
    ಕಿರುತೆರೆ9 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ10 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ8 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    Kannada Serials
    ಕಿರುತೆರೆ11 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    varun
    ಕಿರುತೆರೆ9 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    karnataka Weather Forecast
    ಮಳೆ2 weeks ago

    Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

    Bellary news
    ಬಳ್ಳಾರಿ2 weeks ago

    Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

    Maravoor bridge in danger Vehicular traffic suspended
    ದಕ್ಷಿಣ ಕನ್ನಡ2 weeks ago

    Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

    Wild Animals Attack
    ಚಿಕ್ಕಮಗಳೂರು2 weeks ago

    Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

    Karnataka Weather Forecast
    ಮಳೆ2 weeks ago

    Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

    assault case
    ಬೆಳಗಾವಿ3 weeks ago

    Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

    karnataka rain
    ಮಳೆ3 weeks ago

    Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

    karnataka Rain
    ಮಳೆ3 weeks ago

    Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

    Karnataka Rain
    ಮಳೆ3 weeks ago

    Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

    karnataka Rain
    ಮಳೆ3 weeks ago

    Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

    ಟ್ರೆಂಡಿಂಗ್‌