Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ - Vistara News

ಪ್ರಮುಖ ಸುದ್ದಿ

Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

Jobs Alert: ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

VISTARANEWS.COM


on

teacher jobs alert
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ (Teacher) ಹುದ್ದೆಗಳನ್ನು ಭರ್ತಿ ಮಾಡಲು (Jobs Alert) ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಶಿಕ್ಷಕ, ಉಪನ್ಯಾಸಕ ಹುದ್ದೆಗಳ ಶೋಧದಲ್ಲಿರುವವರಿಗೆ ಇದು ಗುಡ್ ನ್ಯೂಸ್ (Good news) ಆಗಿದೆ.

ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. 1987ರಿಂದ 1994-95ರ ಶೈಕ್ಷಣಿಕ ಅವಧಿಯಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ದಿನಾಂಕ:01-01-2016ರಿಂದ ದಿನಾಂಕ:31-12-2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

ಷರತ್ತುಗಳು:

ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 384 ವೆಚ್ಚ-8/2013, ದಿನಾಂಕ:09-04- 2013ರಲ್ಲಿನ ಚೆಕ್‌ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದು. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳುವುದು.

ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. 2016-2017 ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಖಚಿತಪಡಿಸಿಕೊಳ್ಳುವುದು. ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಛಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ಮೂಲಕ ವಿವರಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು. ಈ ತಂತ್ರಾಂಶದ ಮೂಲಕ ಪ್ರಸ್ತಾವನೆಗಳನ್ನು ವ್ಯವಹರಿಸುವುದು. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅನುಮೋದಿಸಲು ಪ್ರತ್ಯಾಯೋಜಿಸಲಾದ ಆದೇಶ ಸಂಖ್ಯೆ: ಇಡಿ 16 ಟಿಪಿಯು 2011. ದಿನಾಂಕ:30-09-2011 ಅನ್ನು ಹಿಂಪಡೆದು, ಹುದ್ದೆಗಳ ಅನುಮೋದನೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.

ಕನ್ನಡಿಗರಿಗೆ ಉದ್ಯೋಗ ಕಡ್ಡಾಯಕ್ಕೆ ಕಾನೂನು ಸಮಸ್ಯೆ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಖಾಸಗಿ ಉದ್ಯಮಗಳಲ್ಲಿ ಮೀಸಲು (Karnataka Jobs Reservation) ಕಡ್ಡಾಯ ಮಾಡುವ ಕುರಿತು ರಾಜ್ಯ ಸರ್ಕಾರದ (Karnataka Government) ನಿಲುವಿನಿಂದಾಗಿ ಸೃಷ್ಟಿಯಾದ ಗೊಂದಲದ ನಡುವೆ, ನಾಲ್ವರು ಸಚಿವರು ಇಂದು ವಿಧಾನಸಭೆಯಲ್ಲಿ (Vidhan sabha) ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದರು. ಈ ವಿಚಾರದಲ್ಲಿ ಕಾನೂನಾತ್ಮಕ ಸಮಸ್ಯೆ ಇದ್ದು, ಇದರ ಬಗ್ಗೆ ಇನ್ನಷ್ಟು ಚರ್ಚೆ ನಡೆಯಬೇಕಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ಹೇಳಿದ್ದಾರೆ.

ಖಾಸಗಿ ಕ್ಷೇತ್ರದ ಕಂಪನಿಗಳ ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಮಸೂದೆಗೆ ಕರ್ನಾಟಕ ಸಚಿವ ಸಂಪುಟ ಮಂಗಳವಾರ (ಜು.16) ಅನುಮೋದನೆ ನೀಡಿತ್ತು. ಇದಕ್ಕೆ ಉದ್ಯಮಿ ಕಿರಣ್‌ ಮಜುಂದಾರ್‌ ಶಾ, ಮೋಹನ್​ ದಾಸ್​ ಪೈ ಸೇರಿದಂತೆ ಇನ್ನೂ ಅನೇಕ ಉದ್ಯಮಿಗಳು ವಿರೋಧ ವ್ಯಕ್ತಪಡಿಸಿದ್ದರು. ಮಸೂದೆಗೆ ಉದ್ಯಮಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಮುಜುಗರಕ್ಕೆ ಒಳಗಾದ ಸರಕಾರ, ವಿಧೇಯಕ ಜಾರಿಗೆ ಹಿಂದೇಟು ಹಾಕಿದೆ. ಈ ಹಿನ್ನೆಲೆಯಲ್ಲಿ ಇಂದು (ಜು.18) ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ನಾಲ್ವರು ಸಚಿವರು ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸಚಿವರಾದ ದಿನೇಶ್‌ ಗುಂಡೂರಾವ್​, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್‌ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡರು.

ಇದನ್ನೂ ಓದಿ: Karnataka Jobs Reservation: ಉದ್ಯೋಗ ವಿಚಾರದಲ್ಲಿ ಕನ್ನಡಿಗರೊಂದಿಗೆ ಸರ್ಕಾರ ಚೆಲ್ಲಾಟ: ವಿಜಯೇಂದ್ರ ಆಕ್ರೋಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Rameshwaram Cafe Blast: ಬಾಂಬ್‌ ಇರಿಸಿದ ಉಗ್ರನನ್ನು ರಾಮೇಶ್ವರಂ ಕೆಫೆಗೆ ಕರೆತಂದು ಸೀನ್‌ ರಿಕ್ರಿಯೇಟ್‌ ಮಾಡಿದ ಎನ್‌ಐಎ

Rameshwaram Cafe Blast: ರಾಮೇಶ್ವರಂ ಕೆಫೆಯ ಸುತ್ತಮುತ್ತಲಿನ ಪ್ರದೇಶವನ್ನು ಇಂದು ಸಾರ್ವಜನಿಕರಿಗೆ ಬಂದ್‌ ಮಾಡಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಿ ಬ್ಲಾಸ್ಟ್‌ ಸೀನ್ ರೀಕ್ರಿಯೇಟ್ ಮಾಡಿಸಲಾಯಿತು. ಆರೋಪಿ ಮುಜಾವೀರ್ ಹುಸೇನ್ ಶಾಜಿಬ್ ಕೃತ್ಯದ ದಿನ ಎಲ್ಲಿಂದ, ಹೇಗೆ ನಡೆದುಕೊಂಡು ಬಂದ, ಕೆಫೆಯ ಒಳಗಡೆ ಎಲ್ಲೆಲ್ಲಿ ಸುತ್ತಾಡಿದ್ದ, ಎಲ್ಲಿ ಬ್ಯಾಗ್‌ ಇಟ್ಟಿದ್ದ, ನಂತರ ತೆರಳಿದ್ದು ಹೇಗೆ, ಇದೆಲ್ಲವನ್ನೂ ಉಗ್ರನಿಂದಲೇ ರೀಕ್ರಿಯೆಟ್ ಮಾಡಿಸಿ ವಿಡಿಯೋ ಮಾಡಿಕೊಳ್ಳಲಾಯಿತು.

VISTARANEWS.COM


on

rameshwaram cafe blast scene
Koo

ಬೆಂಗಳೂರು: ಬೆಂಗಳೂರಿನ (Bangalore Bomb Blast) ವೈಟ್‌ಫೀಲ್ಡ್‌ನಲ್ಲಿರುವ (Whitfield) ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟಿಸಿ (Rameshwaram Cafe Blast) ಬೆಚ್ಚಿ ಬೀಳಿಸಿದ್ದ ಪ್ರಕರಣದಲ್ಲಿ, ಬಾಂಬ್‌ ಇರಿಸಿದ ಉಗ್ರನನ್ನು (Terrorist) ಕರೆತಂದು ಇಡೀ ಘಟನೆಯನ್ನು ರಿಕ್ರಿಯೇಟ್‌ ಮಾಡಿ ದಾಖಲಿಸಿಕೊಳ್ಳಲಾಗುತ್ತಿದೆ. ಇಂದು ಬೆಳಗ್ಗೆ ಎನ್‌ಐಎ (NIA) ಟೀಮ್‌ ಬಂಧಿತ ಉಗ್ರನನ್ನು ಸ್ಥಳಕ್ಕೆ ಕರೆತಂದು ಹಲವು ಬಾರಿ ಈ ಡ್ರಿಲ್‌ ನಡೆಸಿತು.

ರಾಮೇಶ್ವರಂ ಕೆಫೆ ಸ್ಫೋಟ ಕೇಸ್‌ ತನಿಖೆ ಭರದಿಂದ ಸಾಗಿದ್ದು, ಇಂದು ಮುಂಜಾನೆ ರಾಮೇಶ್ವರಂ ಕೆಫೆಗೆ ಎನ್ಐಎ ಅಧಿಕಾರಿಗಳು ಭೇಟಿ ನೀಡಿದರು. ಜೊತೆಗೆ ಬಾಂಬ್‌ ಇರಿಸಿದ ಭಯೋತ್ಪಾದಕ ಮುಜಾವೀರ್ ಹುಸೇನ್ ಶಾಜಿಬ್‌ನನ್ನೂ ಕರೆತರಲಾಗಿದೆ. ಕಳೆದ ಮಾರ್ಚ್ 1ರಂದು ನಡೆದಿದ್ದ ಬಾಂಬ್ ಬ್ಲಾಸ್ಟ್‌ಗೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಎನ್ಐಎ, ಪ್ರಮುಖ ಶಂಕಿತ ಉಗ್ರರನ್ನು ಈಗಾಗಲೇ ಬಂಧಿಸಿದೆ.

ರಾಮೇಶ್ವರಂ ಕೆಫೆಯ ಸುತ್ತಮುತ್ತಲಿನ ಪ್ರದೇಶವನ್ನು ಇಂದು ಸಾರ್ವಜನಿಕರಿಗೆ ಬಂದ್‌ ಮಾಡಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಿ ಬ್ಲಾಸ್ಟ್‌ ಸೀನ್ ರೀಕ್ರಿಯೇಟ್ ಮಾಡಿಸಲಾಯಿತು. ಆರೋಪಿ ಮುಜಾವೀರ್ ಹುಸೇನ್ ಶಾಜಿಬ್ ಕೃತ್ಯದ ದಿನ ಎಲ್ಲಿಂದ, ಹೇಗೆ ನಡೆದುಕೊಂಡು ಬಂದ, ಕೆಫೆಯ ಒಳಗಡೆ ಎಲ್ಲೆಲ್ಲಿ ಸುತ್ತಾಡಿದ್ದ, ಎಲ್ಲಿ ಬ್ಯಾಗ್‌ ಇಟ್ಟಿದ್ದ, ನಂತರ ತೆರಳಿದ್ದು ಹೇಗೆ, ಇದೆಲ್ಲವನ್ನೂ ಉಗ್ರನಿಂದಲೇ ರೀಕ್ರಿಯೆಟ್ ಮಾಡಿಸಿ ವಿಡಿಯೋ ಮಾಡಿಕೊಳ್ಳಲಾಯಿತು.

ಕೃತ್ಯ ನಡೆಸಿದ ಸಂದರ್ಭದಲ್ಲಿ ಆತ ಧರಿಸಿದ್ದ ಬಟ್ಟೆ ಹಾಗೂ ಕ್ಯಾಪ್ ಅನ್ನು ಆತನಿಗೆ ತೊಡಿಸಲಾಗಿದೆ. ಅವತ್ತಿನ ರೀತಿ ಬ್ಲಾಕ್ ಬ್ಯಾಗ್ ಹೆಗಲಿಗೆ ಹಾಕಿಕೊಂಡು ವಿಡಿಯೋ ಮರುಸೃಷ್ಟಿ ಮಾಡಿಸಲಾಗಿದೆ. ಎಲ್ಲವನ್ನೂ ಎನ್ಐಎ ಅಧಿಕಾರಿಗಳು ವಿಡಿಯೋ ರೆಕಾರ್ಡ್ ಮಾಡಿಕೊಂಡರು. ಹಲವು ಬಾರಿ ಈ ದೃಶ್ಯವನ್ನು ಚಿತ್ರೀಕರಿಸಿಕೊಳ್ಳಲಾಯಿತು. ಕೆಫೆಗೆ ಸಮೀಪದ ಬಸ್‌ ನಿಲ್ದಾಣದಲ್ಲಿಯೂ ಈ ಚಿತ್ರಣವನ್ನು ಚಿತ್ರೀಕರಿಸಲಾಗಿದೆ. ಬಸ್ಸಿಗಾಗಿ ಎಷ್ಟು ಹೊತ್ತು, ಎಲ್ಲಿ ಕುಳಿತು ಕಾದಿದ್ದ ಎಂಬುದನ್ನು ವಿಡಿಯೋ ಮಾಡಿಕೊಳ್ಳಲಾಗಿದೆ.

ಮಾರ್ಚ್ 1, 2024ರ ಮಧ್ಯಾಹ್ನ 12:56ಕ್ಕೆ ಬಾಂಬ್ ಸ್ಫೋಟಿಸಲಾಗಿತ್ತು. ಮೂವರು ಹೋಟೆಲ್ ಸಿಬ್ಬಂದಿ ಸೇರಿ ಹತ್ತು ಜನರಿಗೆ ಗಾಯವಾಗಿತ್ತು. ಆರಂಭದಲ್ಲಿ ಬೆಂಗಳೂರು ಸಿಸಿಬಿ ಪೊಲೀಸರಿಂದ‌ ತನಿಖೆ ನಡೆದಿದ್ದು, ಮಾರ್ಚ್ 3ರಂದು ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿತ್ತು. ಮಾರ್ಚ್ 5ರಂದು ಎನ್‌ಐಎನಿಂದ ಶಂಕಿತ ಆರೋಪಿಗಳ ಸುಳಿವು ನೀಡಿದರೆ 10 ಲಕ್ಷ ರೂ. ಬಹುಮಾನ ಘೋಷಣೆಯಾಗಿತ್ತು.

ಮಾರ್ಚ್ 15ರಂದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜ್ ಮುನೀರ್ ಆಹಮ್ಮದ್‌ನನ್ನು, ಮಾರ್ಚ್ 28ರಂದು ಚಿಕ್ಕಮಗಳೂರಿನಲ್ಲಿ ಮುಜಾಮಿಲ್ ಷರೀಪ್ ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿತ್ತು. ಮಾರ್ಚ್ 29ರಂದು ಪ್ರಮುಖ ಆರೋಪಿಗಳಾದ ಮುಸಾವೀರ್ ಹಾಗೂ ಅಬ್ದುಲ್ ಮತೀನ್ ತಾಹ ಇಬ್ಬರ ಫೋಟೋ ಬಿಡುಗಡೆ ಮಾಡಲಾಗಿತ್ತು. ಏಪ್ರಿಲ್ 12ರಂದು ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮತೀನ್ ತಾಹರನ್ನು ಪಶ್ಚಿಮ ಬಂಗಾಳದಲ್ಲಿ ಎನ್‌ಐಎ ಬಂಧಿಸಿತ್ತು.

ಮೇ 21ರಂದು ಈ ಪ್ರಕರಣದ ಸಂಬಂಧಿಸಿ ದೇಶದ 11 ಕಡೆ ಎನ್ಐಎ ದಾಳಿ ನಡೆಸಿತ್ತು. ಮೇ 24ರಂದು ಪ್ರಕರಣದಲ್ಲಿ ಐದನೆ ಆರೋಪಿಯಾಗಿ ಶೋಯೆಬ್ ಅಹಮ್ಮದ್ ಮಿರ್ಜಾ ಎಂಬವನನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: Rameshwaram Cafe: ಗ್ರಾಹಕರ ಕ್ಷಮೆ ಕೋರಿದರೂ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾದ ರಾಮೇಶ್ವರಂ ಕೆಫೆ ಮಾಲೀಕ; ಕಾರಣ ಇದು

Continue Reading

ಪ್ರಮುಖ ಸುದ್ದಿ

Court Verdict: 31 ವರ್ಷ ಲೈಂಗಿಕ ಸಂಬಂಧ, ನಂತರ ಪುರುಷನ ಮೇಲೆ ರೇಪ್ ಕೇಸ್! ನ್ಯಾಯಾಲಯ ಹೇಳಿದ್ದೇನು ನೋಡಿ

Court Verdict: 31 ವರ್ಷಗಳಿಂದ ಪುರುಷನೊಂದಿಗೆ ಒಪ್ಪಿತ ದೈಹಿಕ ಸಂಬಂಧದಲ್ಲಿದ್ದು, ನಂತರ ಆತನ ಮೇಲೆ ಅತ್ಯಾಚಾರ ಪ್ರಕರಣ ದಾಖಲಿಸಿದ ಮಹಿಳೆಯ ದೂರನ್ನು ಬಾಂಬೇ ಹೈಕೋರ್ಟ್‌ ರದ್ದುಗೊಳಿಸಿದೆ.

VISTARANEWS.COM


on

court verdict
Koo

ಮುಂಬಯಿ: 31 ವರ್ಷಗಳಿಂದ ಪುರುಷನೊಂದಿಗೆ ಲೈಂಗಿಕ ಸಂಬಂಧ (Physical relationship) ಹೊಂದಿದ್ದು ನಂತರ ಆತನ ವಿರುದ್ಧ ರೇಪ್‌ ಕೇಸ್‌ (Physical abuse) ದಾಖಲಿಸಿದ ಮಹಿಳೆಯ ದೂರನ್ನು ಬಾಂಬೆ ಹೈಕೋರ್ಟ್ (Bombay High Court Verdict) ರದ್ದುಗೊಳಿಸಿದೆ. 73 ವರ್ಷದ ಪುರುಷನ ಈಕೆ ದೂರು ದಾಖಲಿಸಿದ್ದು, 1987ರಿಂದ 2017ರವರೆಗೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿದ್ದಳು.

ಮಹಿಳೆ 2018ರವರೆಗೆ ಯಾವುದೇ ಪ್ರಕರಣವನ್ನು ಪುರುಷನ ವಿರುದ್ಧ ದಾಖಲಿಸಿಲ್ಲ. ಆದ್ದರಿಂದ ಇದು ಒಪ್ಪಿತ ಸಂಬಂಧವಾಗಿದ್ದು, ಇಬ್ಬರ ನಡುವಿನ ಸಂಬಂಧ ಹಳಸಿದಾಗ ದೂರು ದಾಖಲಿಸುವಂತಹ ಪ್ರಕರಣ ಇದಾಗಿದೆ ಎಂದು ನ್ಯಾಯಾಲಯ ಹೇಳಿದೆ. ವರದಿಗಳ ಪ್ರಕಾರ ಮಹಿಳೆ 1987ರಿಂದ ಪುರುಷನ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಳು. ಆ ಸಮಯದಲ್ಲಿ, ಪುರುಷನು ಬಲವಂತವಾಗಿ ಲೈಂಗಿಕ ಸಂಬಂಧ ಹೊಂದುವುದಾಗಿ ಮಹಿಳೆಗೆ ಒತ್ತಡ ಹಾಕಿದ್ದ ಎನ್ನಲಾಗಿದೆ.

ಎಫ್‌ಐಆರ್‌ನ ಪ್ರಕಾರ, 1987ರಿಂದ 2017 ರವರೆಗೆ ಕಲ್ಯಾಣ್, ಭಿವಂಡಿ ಮತ್ತು ಇತರ ಸ್ಥಳಗಳ ವಿವಿಧ ಹೋಟೆಲ್‌ಗಳಲ್ಲಿ 31 ವರ್ಷಗಳ ಕಾಲ ಪುರುಷ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಈಗಾಗಲೇ ಮದುವೆಯಾಗಿದ್ದ ಪುರುಷ, ಮಹಿಳೆಯನ್ನು ತನ್ನ ಎರಡನೇ ಹೆಂಡತಿ ಎಂದು ಘೋಷಣೆ ಮಾಡಿ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿದ್ದನಂತೆ. 1993 ರಲ್ಲಿ ಅವಳ ಕುತ್ತಿಗೆಗೆ ಮಂಗಳಸೂತ್ರ ಕಟ್ಟಿದ್ದನಂತೆ. ಈ ಭರವಸೆಗಳೊಂದಿಗೆ ಆತ ಮಹಿಳೆಯನ್ನು ಬೇರೆಯವರೊಂದಿಗೆ ಮದುವೆಯಾಗದಂತೆ ತಡೆದಿದ್ದನಂತೆ.

1996 ರಲ್ಲಿ ಪುರುಷನಿಗೆ ಹೃದಯಾಘಾತವಾದ ನಂತರ ಮಹಿಳೆ ಆತನ ಕಂಪನಿಯನ್ನು ನೋಡಿಕೊಳ್ಳಲು ಪ್ರಾರಂಭಿಸಿದಳು. ಆದರೆ ನಂತರ ಸೆಪ್ಟೆಂಬರ್ 2017 ರಲ್ಲಿ ಮಹಿಳೆಯ ತಾಯಿಗೆ ಕ್ಯಾನ್ಸರ್ ಪತ್ತೆಯಾಗಿದ್ದರಿಂದ ಮಹಿಳೆ ತನ್ನ ಕೆಲಸಕ್ಕೆ ರಜೆ ಹಾಕಿದಳು. ಕಂಪನಿಗೆ ವಾಪಸ್ ಬಂದಾಗ ಕಂಪನಿ ಸೇರಿದಂತೆ ಕಚೇರಿ ಬಂದ್ ಆಗಿದ್ದನ್ನ ತಿಳಿದುಕೊಂಡಳಂತೆ. ಈ ವೇಳೆ ಆಕೆ ಕಂಪನಿ ಮಾಲೀಕನನ್ನು ಸಂಪರ್ಕಿಸಿದಾಗ ಆತ ಅವಳನ್ನು ಮದುವೆಯಾಗಲು ಮತ್ತು ಭೇಟಿಯಾಗಲು ನಿರಾಕರಿಸಿದನಂತೆ. ಜೊತೆಗೆ ಬ್ಯಾಂಕಿಂಗ್, ಆದಾಯ ತೆರಿಗೆ, ಕಂಪನಿಗೆ ಸಂಬಂಧಿಸಿದ ಒಪ್ಪಂದ ಮತ್ತು ಚಿನ್ನದ ಮಂಗಳಸೂತ್ರಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳಲು ನಿರಾಕರಿಸಿದನಂತೆ.

ಮಹಿಳೆಯ ಆರೋಪಗಳನ್ನು ಕೇಳಿದ ನ್ಯಾಯಮೂರ್ತಿಗಳಾದ ಎ ಎಸ್ ಗಡ್ಕರಿ ಮತ್ತು ನೀಲಾ ಗೋಖಲೆ ನೇತೃತ್ವದ ನ್ಯಾಯಾಲಯವು ವ್ಯಕ್ತಿಯನ್ನು ಅಪರಾಧಿ ಎಂದು ಪರಿಗಣಿಸಲು ನಿರಾಕರಿಸಿತು. ಪ್ರಕರಣವು ಒಮ್ಮತದ ಸಂಬಂಧವನ್ನು ಸ್ಪಷ್ಟವಾಗಿ ಸೂಚಿಸುತ್ತದೆ. ಕಕ್ಷಿದಾರರು 31 ವರ್ಷಗಳಿಂದ ಲೈಂಗಿಕ ಸಂಬಂಧದಲ್ಲಿ ತೊಡಗಿದ್ದರು. ಆದರೂ 31 ವರ್ಷದ ನಡುವೆ ಈ ಸಂಬಂಧಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿರುವ ಬಗ್ಗೆ ಒಂದು ಮಾತನ್ನೂ ಹೇಳಲಿಲ್ಲ. ಇದೀಗ ಕಕ್ಷಿದಾರರ ನಡುವಿನ ಸಂಬಂಧವು ಹಳಸಿದ್ದು ಇದೇ ಕಾರಣದಿಂದ ಪೊಲೀಸ್ ದೂರು ದಾಖಲಿಸಿರುವಂತಹ ಪ್ರಕರಣ ಇದಾಗಿದೆ ಎಂದು ಹೇಳಿದರು.

ಮಹಿಳೆ ವಿದ್ಯಾವಂತಳಾಗಿದ್ದು, ಮೊದಲ ಪತ್ನಿಗೆ ವಿಚ್ಛೇದನ ನೀಡದೇ ಎರಡನೇ ಮದುವೆ ಕಾನೂನುಬಾಹಿರವಾಗಿದ್ದರೂ ಎರಡನೇ ಮದುವೆಯ ಪ್ರಸ್ತಾಪವನ್ನು ಒಪ್ಪಿಕೊಂಡಿದ್ದಾರೆ. ವಿಚ್ಛೇದನ ಅಂಗೀಕಾರವಾಗುವವರೆಗೆ ಎರಡನೇ ಮದುವೆಗೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿದಿದ್ದರೂ ಮಹಿಳೆ ಎರಡನೇ ಮದುವೆಯ ಭರವಸೆಯನ್ನು ಒಪ್ಪಿಕೊಂಡಿದ್ದಾಳೆ ಎಂದು ಎಫ್‌ಐಆರ್ ಸೂಚಿಸುತ್ತದೆ ಎಂದು ನ್ಯಾಯಾಧೀಶರು ಹೇಳಿದರು.

ಅಲ್ಲದೇ ಪುರುಷ ತನ್ನ ಮೊದಲ ಪತ್ನಿಗೆ ವಿಚ್ಛೇದನ ನೀಡಿ ನಿನ್ನನ್ನು ಮದುವೆಯಾಗುತ್ತೇನೆಂದು ಮಹಿಳೆಗೆ ಭರವಸೆ ನೀಡಿದ್ದನೆಂಬ ಬಗ್ಗೆಯೂ ದೂರಿನಲ್ಲಿ ಉಲ್ಲೇಖವಾಗಿಲ್ಲ. 31 ವರ್ಷದಲ್ಲಿ ಮಹಿಳೆ ಪುರುಷನ ಸಂಬಂಧದಿಂದ ಹಿಂದೆ ಸರಿಯುವ ಅಥವಾ ದೂರು ನೀಡುವ ಅವಕಾಶವಿದ್ದರೂ ಆಕೆ ಅಂತಹ ಕೆಲಸ ಮಾಡಿಲ್ಲ ಎಂದು ಹೇಳಿದ ನ್ಯಾಯಾಲಯವು ಪ್ರಕರಣವನ್ನು ರದ್ದುಗೊಳಿಸಿತು.

ಇದನ್ನೂ ಓದಿ: ಕೋರ್ಟ್‌ನಲ್ಲೇ ಅಳಿಯನನ್ನು ಗುಂಡಿಕ್ಕಿ ಕೊಂದ ಮಾಜಿ ಪೊಲೀಸ್‌ ಅಧಿಕಾರಿ; ಕೃತ್ಯಕ್ಕೆ ಕಾರಣವೇನು?

Continue Reading

ಅಂಕಣ

ರಾಜಮಾರ್ಗ ಅಂಕಣ: ಕೃತಜ್ಞತೆ ಎಂಬ ಮಹಾನ್ ಪ್ರವಾಹ

ರಾಜಮಾರ್ಗ ಅಂಕಣ: ನೀವು ಯಾರಿಗಾದರೂ ಬೆನ್ನು ತಟ್ಟಲು ಬಾಕಿ ಇದ್ದರೆ ಈಗಲೇ ತಟ್ಟಿ ಬಿಡಿ. ಯಾಕೆಂದರೆ ಮುಂದೆ ಒಂದು ದಿನ ಅವರಿಗೆ ನಿಮ್ಮ ಮೆಚ್ಚುಗೆಯು ಬೇಡವಾಗಿ ಹೋಗಬಹುದು!

VISTARANEWS.COM


on

gratitude ರಾಜಮಾರ್ಗ ಅಂಕಣ
Koo
Rajendra-Bhat-Raja-Marga-Main-logo

ರಾಜಮಾರ್ಗ ಅಂಕಣ: ನೀವು ಯಾರಿಗಾದರೂ ಧನ್ಯವಾದ (Thanks) ಹೇಳಲು ಬಾಕಿ ಇದ್ದರೆ ಇವತ್ತೇ ಹೇಳಿಬಿಡಿ. ಯಾರಿಗೆ ಗೊತ್ತು ನಾಳೆ ಅವರು ಮಾಡಿದ ಒಳ್ಳೆಯ ಕೆಲಸವು ಅವರಿಗೇ ಮರೆತು ಹೋಗಿರಬಹುದು!

ನೀವು ಯಾರ ಮನಸ್ಸನ್ನಾದರೂ ನೋಯಿಸಿದ್ದರೆ ಇಂದೇ ಕ್ಷಮೆ ಕೇಳಿಬಿಡಿ. ಏಕೆಂದರೆ ಅವರು ನಿಮ್ಮ ಹಾಗೆ ಕಣ್ಣೀರು ಸುರಿಸುತ್ತಾ ದೂರದಲ್ಲಿ ಕುಳಿತಿರಬಹುದು!

ನೀವು ಯಾರಿಗಾದರೂ ಬೆನ್ನು ತಟ್ಟಲು ಬಾಕಿ ಇದ್ದರೆ ಈಗಲೇ ತಟ್ಟಿ ಬಿಡಿ. ಯಾಕೆಂದರೆ ಮುಂದೆ ಒಂದು ದಿನ ಅವರಿಗೆ ನಿಮ್ಮ ಮೆಚ್ಚುಗೆಯು ಬೇಡವಾಗಿ ಹೋಗಬಹುದು!

ನೀವು ಯಾರಿಗಾದರೂ ‘ ಆಲ್ ದ ಬೆಸ್ಟ್’ (All the Best) ಹೇಳಲು ಬಾಕಿ ಇದ್ದರೆ ಈಗಲೇ ಹೇಳಿಬಿಡಿ. ಯಾಕೆಂದರೆ ಅವರು ಗೆದ್ದ ಮೇಲೆ ಅವರಿಗೆ ಸಾವಿರ ಜನ ಶಾಭಾಷ್ ಹೇಳಲು ಕಾಯುತ್ತಿರಬಹುದು!

ನೀವು ಯಾರಿಗಾದರೂ ನಿಮ್ಮ ಪ್ರೀತಿಪಾತ್ರರಿಗೆ ಗುಟ್ಟುಗಳನ್ನು ಶೇರ್ ಮಾಡಲು ಬಾಕಿ ಇದ್ದರೆ ಈಗಲೇ ಹೇಳಿಬಿಡಿ. ಯಾಕೆಂದ್ರೆ ಮುಂದೆ ಅದು ಬೇರೆಯವರ ಮೂಲಕ ಗೊತ್ತಾದರೆ ಅವರಿಗೆ ತುಂಬ ನೋವಾಗಬಹುದು!

ನಿಮ್ಮ ತಲೆಯಲ್ಲಿ ಏನಾದರೂ ಹೊಸ ಐಡಿಯಾ ಫ್ಲಾಶ್ ಆದರೆ ಅದನ್ನು ಬರೆದಿಡಿ ಮತ್ತು ತಕ್ಷಣ ಅನುಷ್ಟಾನಿಸಿ. ಏಕೆಂದರೆ ನಿಮ್ಮ ಐಡಿಯಾಗಳಿಗೆ ಕಾಪಿ ರೈಟ್ ಇರುವುದಿಲ್ಲ!

ನಿಮಗೆ ಯಾರಿಗಾದರೂ ಸಾರಿ ಹೇಳಲು ಬಾಕಿ ಇದ್ದರೆ ಇಂದೆ ಹೇಳಿಬಿಡಿ, ಯಾಕೆಂದರೆ ಆ ನಾಳೆ ಬಾರದೆ ಹೋಗಬಹುದು. ಬಂದರೂ ಅವರು ನಿಮಗೆ ಸಿಗದೇ ಹೋಗಬಹುದು!

ನಿಮಗೆ ಯಾರ ಬಗ್ಗೆಯಾದರೂ ಪ್ರಾರ್ಥನೆ ಮಾಡಲು ಬಾಕಿ ಇದ್ದರೆ ಈಗಲೇ ಮಾಡಿಬಿಡಿ. ಏಕೆಂದರೆ ನಾಳೆ ನಿಮ್ಮ ಪ್ರಾರ್ಥನೆಯನ್ನು ಸ್ವೀಕಾರ ಮಾಡಲು ದೇವರಿಗೆ ಸಮಯ ದೊರೆಯದೆ ಹೋಗಬಹುದು!

ನೀವು ಯಾರಿಗಾದರೂ ಏನನ್ನಾದರೂ ಕೊಡಲು ಯೋಚನೆ ಮಾಡಿದರೆ ಈಗಲೇ ಕೊಟ್ಟುಬಿಡಿ. ಯಾಕೆಂದ್ರೆ ಭೂಮಿ ಗುಂಡಗೆ ಇದ್ದರೂ ಅವರು ನಿಮಗೆ ಮುಂದೆ ಸಿಗದೇ ಹೋಗಬಹುದು!

ನೀವು ಯಾರಿಗಾದರೂ ಕಣ್ಣೀರು ಒರೆಸಲು ಬಾಕಿ ಇದ್ದರೆ ಇಂದೆ ಒರೆಸಿಬಿಡಿ. ಏಕೆಂದರೆ ಮುಂದೆ ಅವರ ಕಣ್ಣೀರು ಒರೆಸಲು ಬಹಳ ಕೈಗಳು ದೊರೆಯಬಹುದು!

ನಿಮಗೆ ಯಾವುದೇ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಆಸೆ ಇದ್ದರೆ ಈಗಲೇ ಕೊಟ್ಟುಬಿಡಿ. ಏಕೆಂದರೆ ಆ ವಸ್ತುವಿನ ಮೇಲೆ ನಿಮಗೆ ನಾಳೆ ಮೋಹ ಹೆಚ್ಚಾಗಬಹುದು!

ಯಾರದಾದರೂ ಆಳುವ ಕಣ್ಣೀರಿಗೆ ನಿಮ್ಮ ಹೆಗಲು ಕೊಡಲು ಆಸೆ ಇದ್ದರೆ ಈಗಲೇ ಕೊಟ್ಟುಬಿಡಿ. ಯಾಕೆಂದರೆ ಮುಂದೆ ನಿಮ್ಮ ಕಣ್ಣೀರಿಗೆ ಯಾವುದೇ ಹೆಗಲು ದೊರೆಯದೆ ಹೋಗಬಹುದು!

ನೀವು ಯಾರಿಗಾದರೂ ಬೆಸ್ಟ್ ಫ್ರೆಂಡಗೆ ಸಾಲ ಕೊಡುವ ಪ್ರಸಂಗ ಬಂದರೆ ಸಾಲ ಎಂದು ಕೊಡಬೇಡಿ. ಹಾಗೆ ಕೊಟ್ಟುಬಿಡಿ. ಯಾಕೆಂದರೆ ಆ ದುಡ್ಡು ಹೇಗೂ ಹಿಂದೆ ಬರುವುದಿಲ್ಲ!

ನೀವು ಯಾರದೇ ತಪ್ಪನ್ನು ನೇರವಾಗಿ ಹೇಳುವ ಮೊದಲು ನೂರು ಬಾರಿ ಯೋಚನೆ ಮಾಡಿ. ಏಕೆಂದರೆ ಅದರಲ್ಲಿ ನಿಮ್ಮ ತಪ್ಪಿನ ಪಾಲು ಕೂಡ ಇರಬಹುದು!

ನೀವು ಯಾವುದೇ ಹುಡುಗಿಗೆ ಪ್ರೊಪೋಸ್ ಮಾಡುವ ಅವಕಾಶ ದೊರೆತಾಗ ತಕ್ಷಣ ಪ್ರೊಪೋಸ್ ಮಾಡಿಬಿಡಿ. ಏಕೆಂದರೆ ಅದೇ ಹುಡುಗಿಯು ಮುಂದೆ ಬೇರೆ ಯಾರನ್ನಾದರೂ ಮದುವೆಯಾಗಿ ನಿಮ್ಮ ನೆರೆಮನೆಗೆ ಬಾಡಿಗೆಗೆ ಬಂದು ‘ನೀನು ಯಾಕೋ ಪ್ರೊಪೋಸ್ ಮಾಡಿಲ್ಲ, ನಾನು ಕಾಯ್ತಾ ಇದ್ದೆ ಕಣೋ’ ಎಂದು ಹೇಳಬಹುದು!

ಇದನ್ನೂ ಓದಿ: ರಾಜಮಾರ್ಗ ಅಂಕಣ: ಬಾಲ್ಯದಲ್ಲಿ ಎರಡೂ ಕಾಲು ಪೋಲಿಯೋ ಪೀಡಿತಳಾದ ಹುಡುಗಿ ಮಹೋನ್ನತ ಕ್ರೀಡಾಪಟು ಆದ ಕಥೆ!

Continue Reading

ಕರ್ನಾಟಕ

Shravan 2024: ಇಂದಿನಿಂದ ಶ್ರಾವಣ ಶುಭಾರಂಭ; ಈ ತಿಂಗಳ ವಿಶೇಷ ಏನು?

Shravan 2024: ಶ್ರಾವಣ ಮಾಸ ಧಾರ್ಮಿಕ ಕಾರ್ಯಗಳಿಗೆ ಬಹಳ ಉತ್ತಮವಾದ ಮಾಸವಾಗಿದೆ. ಈ ಮಾಸವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಜಪ-ತಪ, ವ್ರತ-ನಿಯಮ, ಪೂಜೆ-ಪುರಾಣಶಾಸ್ತ್ರ, ಪ್ರವಚನ, ಭಜನೆ, ಕೀರ್ತನೆ, ಸತ್ಸಾಂಗ, ಪುಣ್ಯ ಕ್ಷೇತ್ರಗಳ ದರ್ಶನ, ಯಜ್ಞ-ಯಾಗ, ಹೋಮ-ಹವನ ಮುಂತಾದವುಗಳನ್ನು ಈ ಮಾಸದಲ್ಲಿಯೇ ಹೆಚ್ಚು ಮಾಡುತ್ತಾರೆ. ಅಲ್ಲದೇ ಯಾವುದೇ ಶುಭ ಕಾರ್ಯಗಳನ್ನು ಮಾಡಲು ಹಾಗೂ ಹೊಸ ಕೆಲಸಗಳನ್ನು ಆರಂಭಿಸಲು ಈ ಮಾಸ ಬಹಳ ಪ್ರಶಸ್ತವಾಗಿದೆ. ಈ ಕುರಿತ ವಿವರ ಇಲ್ಲಿದೆ.

VISTARANEWS.COM


on

Shravan 2024
Koo

ಬೆಂಗಳೂರು: ಹಿಂದೂ ಪಂಚಾಂಗದಲ್ಲಿ ಬರುವ 12 ಮಾಸಗಳಲ್ಲಿ ಶ್ರಾವಣ ಮಾಸ (Shravan 2024) ಐದನೇ ಮಾಸವಾಗಿದೆ. ಎಲ್ಲಾ ಮಾಸಗಳು ಹುಣ್ಣಿಮೆಯ ದಿನ ಪ್ರಾರಂಭವಾಗುತ್ತದೆ ಮತ್ತು ಆ ದಿನ ಬರುವ ನಕ್ಷತ್ರದ ಹೆಸರಿನಿಂದ ಆ ಮಾಸವನ್ನು ಕರೆಯಲಾಗುತ್ತದೆ. ಅದರಂತೆ ಈ ಮಾಸ ಪ್ರಾರಂಭವಾಗುವ ಹುಣ್ಣಿಮೆಯ ದಿನ ಶ್ರವಣ ನಕ್ಷತ್ರ ಬಂದ ಕಾರಣ ಈ ಮಾಸಕ್ಕೆ ಶ್ರಾವಣ ಮಾಸ ಎಂದು ಕರೆಯುತ್ತಾರೆ. ಈ ಮಾಸ ಹಿಂದೂಗಳಿಗೆ ಬಹಳ ಶ್ರೇಷ್ಠವಾದ ಹಾಗೂ ವಿಶೇಷವಾದ ಮಾಸವಾಗಿದೆ. ಯಾಕೆಂದರೆ ಈ ಮಾಸದಲ್ಲಿ ಹಬ್ಬಗಳು ಸಾಲು ಸಾಲಾಗಿ ಬರುತ್ತಿರುತ್ತದೆ. ಹಾಗಾಗಿ ಈ ಮಾಸದಲ್ಲಿ ಶಿವ, ಪಾರ್ವತಿ, ಲಕ್ಷ್ಮಿ, ವಿಷ್ಣು ಸೇರಿದಂತೆ ಅನೇಕ ದೇವಾನುದೇವತೆಗಳ ಪೂಜೆ ಮಾಡುತ್ತಾರೆ. ಹಾಗೇ ಮದುವೆ, ಮುಂಜಿಯಂತಹ ಶುಭ ಕಾರ್ಯಗಳನ್ನು ಈ ಮಾಸದಲ್ಲಿ ಮಾಡಲಾಗುತ್ತದೆ. ಹಿಂದೂ ಕ್ಯಾಲೆಂಡರ್‌ನಲ್ಲಿ 2024ರಲ್ಲಿ ಶ್ರಾವಣ ಮಾಸ ಆಗಸ್ಟ್ 5ರ ಸೋಮವಾರದಂದು ಪ್ರಾರಂಭವಾಗಿ ಸೆಪ್ಟೆಂಬರ್ 3, 2024 ಮಂಗಳವಾರದ ಅಮಾವಾಸ್ಯೆಯ ತಿಥಿಯಂದು ಕೊನೆಗೊಳ್ಳುತ್ತದೆ. ಹಾಗಾಗಿ ಈ ಮಾಸದ ವಿಶೇಷತೆ ಏನು ಮತ್ತು ಶುಭ ಕಾರ್ಯಗಳನ್ನು ಮಾಡಲು ಈ ಮಾಸ ಸೂಕ್ತ ಏಕೆ ಎಂಬುದನ್ನು ತಿಳಿಯೋಣ.

Shravanmasa 2024
Shravanmasa 2024

ಶ್ರಾವಣ ಮಾಸದ ವಿಶೇಷತೆ:

ಶ್ರಾವಣ ಮಾಸ ಧಾರ್ಮಿಕ ಕಾರ್ಯಗಳಿಗೆ ಬಹಳ ಉತ್ತಮವಾದ ಮಾಸವಾಗಿದೆ. ಈ ಮಾಸವನ್ನು ಬಹಳ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಹಾಗಾಗಿ ಜಪ-ತಪ, ವ್ರತ-ನಿಯಮ, ಪೂಜೆ-ಪುರಾಣಶಾಸ್ತ್ರ, ಪ್ರವಚನ, ಭಜನೆ, ಕೀರ್ತನೆ, ಸತ್ಸಾಂಗ, ಪುಣ್ಯ ಕ್ಷೇತ್ರಗಳ ದರ್ಶನ, ಯಜ್ಞ-ಯಾಗ, ಹೋಮ-ಹವನ ಮುಂತಾದವುಗಳನ್ನು ಈ ಮಾಸದಲ್ಲಿಯೇ ಹೆಚ್ಚು ಮಾಡುತ್ತಾರೆ. ಅಲ್ಲದೇ ಯಾವುದೇ ಶುಭ ಕಾರ್ಯಗಳನ್ನು ಮಾಡಲು ಹಾಗೂ ಹೊಸ ಕೆಲಸಗಳನ್ನು ಆರಂಭಿಸಲು ಈ ಮಾಸ ಬಹಳ ಪ್ರಶಸ್ತವಾಗಿದೆ.

ಶ್ರಾವಣ ಮಾಸದಲ್ಲಿ ಹಬ್ಬ ಹರಿದಿನಗಳು ಒಂದರ ನಂತರ ಒಂದು ಸಾಲು ಸಾಲಾಗಿ ಬರುತ್ತದೆ. ಶ್ರಾವಣ ಮಾಸದ ಪ್ರತಿದಿನವೂ ಹಬ್ಬವೇ ಇರುತ್ತದೆ. ಹಾಗಾಗಿ ಶ್ರಾವಣ ಮಾಸದ ಎಲ್ಲಾ ದಿನಗಳು ಬಹಳ ಶುಭವೇ ಆಗಿರುತ್ತದೆ. ಆದಕಾರಣ ಈ ಶುಭ ದಿನಗಳಲ್ಲಿ ಶುಭ ಕಾರ್ಯ ಮಾಡಿದರೆ ಅದಕ್ಕೆ ಬಹಳ ಉತ್ತಮವಾದ ಫಲ ಶೀಘ್ರದಲ್ಲಿಯೇ ಸಿಗುತ್ತದೆ ಎಂಬ ನಂಬಿಕೆ ಇದೆ.

ಅಲ್ಲದೇ ಈ ಮಾಸದಲ್ಲಿ ಪ್ರಕೃತಿಯಲ್ಲಿನ ಗಿಡಮರಗಳು ಚಿಗುರೊಡೆದು ಹಚ್ಚಹಸಿರಾಗಿ, ಹೂಗಳನ್ನು ಬಿಟ್ಟು ಬಣ್ಣಗಳಿಂದ ಕಂಗೊಳಿಸುತ್ತಾ ಸಂತಸದಿಂದ ಇರುತ್ತದೆಯಂತೆ. ಹಾಗೇ ಪ್ರಾಣಿ ಪಕ್ಷಿಗಳು ಕೂಡ ಉಲ್ಲಾಸದಿಂದ ಇರುತ್ತದೆಯಂತೆ. ಇದನ್ನು ಕಂಡು ದೈವಾನುದೇವತೆಗಳು ಕೂಡ ಸಂಭ್ರಮ ಪಡುತ್ತಾರಂತೆ. ಹಾಗಾಗಿ ಈ ಸಮಯದಲ್ಲಿ ಯಾವುದೇ ಶುಭ ಕಾರ್ಯ ಮಾಡಿದರೂ ದೇವರು ಬಹಳ ಬೇಗನೇ ಪ್ರಸನ್ನರಾಗಿ ಅನುಗ್ರಹ ನೀಡುತ್ತಾರೆ ಎನ್ನಲಾಗುತ್ತದೆ.

Shravanmasa 2024
Shravanmasa 2024

ಶ್ರಾವಣ ಮಾಸದಲ್ಲಿ ಬರುವ ಹಬ್ಬಗಳು :

  • ಉಪಕರ್ಮ:
  • ಶ್ರಾವಣ ಮಾಸ ಹುಣ್ಣಿಮೆ ಜ್ಞಾನಕ್ಕೆ ಕಾರಣವಾಗಿದ್ದರಿಂದ ಈ ದಿನ ಜನೀವಾರ ಹಬ್ಬ ಅಥವಾ ಉಪಕರ್ಮ ಅಥವಾ ನೂಲು ಹುಣ್ಣಿಮೆಯನ್ನು ಆಚರಿಸುತ್ತಾರೆ.
  • ರಕ್ಷಾಬಂಧನ :
  • ಶ್ರಾವಣ ಹುಣ್ಣಿಮೆಯಂದು ಸಹೋದರ ಪ್ರೇಮಕ್ಕೆ ಹೆಚ್ಚು ಮಹತ್ವವಿರುವುದರಿಂದ ರಕ್ಷಾಬಂಧನವನ್ನು ಆಚರಿಸುವ ಮೂಲಕ ಸಹೋದರಿ ಸಹೋದರನಿಗೆ ರಾಖಿ ಕಟ್ಟುತ್ತಾರೆ.
  • ಹಯಗ್ರೀವ ಜಯಂತಿ :
  • ಮಕ್ಕಳಿಗೆ ವಿದ್ಯೆ ಬುದ್ಧಿ ಕರುಣಿಸಲಿ ಎಂದು ವಿದ್ಯೆಯನ್ನು ಅನುಗ್ರಹಿಸುವ ಹಯಗ್ರೀವನನ್ನು ಪೂಜಿಸಿ ಪ್ರಾರ್ಥಿಸುತ್ತಾರೆ.
  • ಸಂಕಷ್ಟ ಚತುರ್ಥಿ :
  • ಅಪಘಾತ, ಆರೋಗ್ಯ ಸಮಸ್ಯೆ, ಸಂಕಷ್ಟಗಳು ಜೀವನದಲ್ಲಿ ಬರಬಾರದೆಂದು ಸಂಕಷ್ಟಹರ ಚತುರ್ಥಿಯನ್ನು ಮಾಡುತ್ತಾರೆ.
  • ಕೃಷ್ಣಾಷ್ಟಮಿ :
  • ದುಷ್ಟ ಸಂಹಾರಕ್ಕಾಗಿ ಶ್ರಾವಣ ಮಾಸದ ಕೃಷ್ಣ ಪಕ್ಷದ ಅಷ್ಟಮಿಯ ದಿನ ಶ್ರೀಕೃಷ್ಣ ಜನ್ಮ ತಾಳಿದ ಕಾರಣ ಈ ಮಾಸದಲ್ಲಿ ಕೃಷ್ಣಾಷ್ಟಮಿಯನ್ನು ಆಚರಿಸುವ ಮೂಲಕ ಕೃಷ್ಣನನ್ನು ಪೂಜಿಸುತ್ತಾರೆ.
  • ಶ್ರಾವಣ ಸೋಮವಾರ:
  • ಶ್ರಾವಣ ಮಾಸದಲ್ಲಿ ಬರುವ ಪ್ರತಿ ಸೋಮವಾರದಂದು ಶಿವನ ಆರಾಧನೆ ಮಾಡಲಾಗುತ್ತದೆ. ಇದರಿಂದ ಶಿವನು ಬೇಗನೆ ಪ್ರಸನ್ನನಾಗಿ ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸುತ್ತಾನೆ.
  • ಕಾಮನ ಏಕಾದಶಿ:
  • ನಿಮ್ಮ ಕೋರಿಕೆಗಳು ಈಡೇರಲು ಶ್ರಾವಣ ಮಾಸದಲ್ಲಿ ಕಾಮನ ಏಕಾದಶಿಯನ್ನು ಆಚರಿಸುವ ಮೂಲಕ ವಿಷ್ಣುವಿನ ಪೂಜೆ ಮಾಡಲಾಗುತ್ತದೆ.
  • ಪುತ್ರ ಏಕಾದಶಿ :
  • ಸಂತಾನ ಭಾಗ್ಯ ಬಯಸುವವರು ಶ್ರಾವಣ ಮಾಸದಲ್ಲಿ ಬರುವ ಪುತ್ರ ಏಕಾದಶಿಯನ್ನು ಆಚರಿಸುತ್ತಾರೆ.
  • ಶ್ರಾವಣ ಮಂಗಳವಾರ :
  • ಶ್ರಾವಣ ಮಾಸದಲ್ಲಿ ಬರುವ ಪ್ರತಿ ಮಂಗಳವಾರದಂದು ಮಂಗಳಗೌರಿ ವ್ರತವನ್ನು ಮಾಡಲಾಗುತ್ತದೆ. ಇದು ಮದುವೆಯಾದ ಹೆಣ್ಣುಮಕ್ಕಳು ಮಾಡಿದರೆ ಅವರ ವೈವಾಹಿಕ ಜೀವನ ಸುಖಕರವಾಗಿರುತ್ತದೆಯಂತೆ.
  • ವರಮಹಾಲಕ್ಷ್ಮಿ ವ್ರತ:
  • ಈ ದಿನ ಮಹಿಳೆಯರು ಲಕ್ಷ್ಮಿದೇವಿಯನ್ನು ಕಳಸದ ಮೇಲೆ ಪ್ರತಿಷ್ಠಾಪನೆ ಮಾಡಿ ಜರಿ ಸೀರೆ ಉಡಿಸಿ, ಧನ, ಚಿನ್ನದ ಆಭರಣಗಳಿಂದ ದೇವಿಯನ್ನು ಅಲಂಕರಿಸಿ ಪೂಜೆ ಮಾಡಿ ವರವನ್ನು ಬೇಡಿಕೊಳ್ಳುತ್ತಾರೆ.
  • ಶ್ರಾವಣ ಶುಕ್ರವಾರ :
  • ಶ್ರಾವಣ ಮಾಸದಲ್ಲಿ ಬರುವ ಪ್ರತಿ ಶುಕ್ರವಾರದಂದು ಸಂಪತ್ತಿನ ಅಧಿದೇವತೆಯಾದ ಲಕ್ಷ್ಮಿದೇವಿಯನ್ನು ಪೂಜಿಸುವ ಮೂಲಕ ಸಂಪತ್ ಗೌರಿ ವ್ರತವನ್ನು ಆಚರಿಸುತ್ತಾರೆ.
  • ನಾಗರಪಂಚಮಿ :
  • ಶ್ರಾವಣ ಮಾಸದ ಪ್ರಾರಂಭವಾದ 5ನೇ ದಿನದಂದು ಬರುವ ನಾಗರ ಪಂಚಮಿ ಹಬ್ಬದಂದು ಮಹಿಳೆಯರು ನಾಗ ದೇವರಿಗೆ ಪೂಜೆ ಸಲ್ಲಿಸುತ್ತಾರೆ.
  • ದೂರ್ವಾ ಗಣಪತಿ ವ್ರತ :
  • ಶ್ರಾವಣ ಮಾಸದಲ್ಲಿ ಬರುವ ಈ ವ್ರತದಂದು ಗಣಪತಿಗೆ ಪ್ರಿಯವಾದ ದೂರ್ವಾ ಅಥವಾ ಗರಿಕೆಯನ್ನು ಅರ್ಪಿಸಿ ಪೂಜಿಸಲಾಗುತ್ತದೆ.
  • ಶ್ರಾವಣ ಶನಿವಾರ:
  • ಶ್ರಾವಣ ಮಾಸದ ಪ್ರತಿ ಶನಿವಾರ ಶ್ರಾವಣ ಶನಿವಾರವೆಂದು ಕರೆಯುತ್ತಾರೆ. ಈ ದಿನ ಲಕ್ಷ್ಮಿ ಮತ್ತು ವೆಂಕಟೇಶ್ವರನನ್ನು ಆರಾಧಿಸುತ್ತಾರೆ. ಹಾಗೇ ಕೆಲವರು ಶ್ರಾವಣ ಶನಿವಾರದಂದು ಉಪವಾಸ ವ್ರತವನ್ನು ಆಚರಿಸುತ್ತಾರೆ. ಹಾಗೇ ಈ ದಿನ ಆಂಜನೇಯ ಸ್ವಾಮಿಯ ಪೂಜೆ ಹಾಗೂ ಶನಿ ಶಾಂತಿ ಪೂಜೆಗೆ ಬಹಳ ಉತ್ತಮ ಎನ್ನಲಾಗಿದೆ.

ಇದನ್ನೂ ಓದಿ:ವಯನಾಡ್ ಭೂಕುಸಿತ; ಜೀವ ಉಳಿಸಿಕೊಳ್ಳಲು ಪರದಾಡುತ್ತಿದ್ದ ಕುಟುಂಬಕ್ಕೆ ಕಣ್ಣೀರು ಸುರಿಸುತ್ತ ಆಶ್ರಯ ನೀಡಿದ ಆನೆ!
ಒಟ್ಟಾರೆ ಈ ಎಲ್ಲಾ ಶುಭ ದಿನಗಳು ಮತ್ತು ಹಬ್ಬಗಳಿಂದ ಶ್ರಾವಣ ಮಾಸ ತುಂಬಾ ವಿಶೇಷವಾದ ಹಾಗೂ ಪವಿತ್ರವಾದ ಮಾಸವಾಗಿದೆ. ಹಾಗಾಗಿ ಇಂತಹ ಶುಭಕರವಾದ ಶ್ರಾವಣ ಮಾಸವನ್ನು ಎಲ್ಲರೂ ಸಂತೋಷದಿಂದ ಸ್ವಾಗತಿಸಿ. ಹಾಗೇ ಈ ಮಾಸದಲ್ಲಿ ಎಲ್ಲರೂ ಶ್ರದ್ಧೆ, ಭಕ್ತಿಯಿಂದ ದೇವರ ಆರಾಧನೆ ಮಾಡಿ ನಿಮ್ಮ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಿ.

ಇದನ್ನೂ ಓದಿ: Shravan 2024: ಶ್ರಾವಣ ಮಾಸದಲ್ಲಿ ಯಾವ ಹಬ್ಬ, ಯಾವ ದಿನ?

Continue Reading
Advertisement
rameshwaram cafe blast scene
ಕ್ರೈಂ10 mins ago

Rameshwaram Cafe Blast: ಬಾಂಬ್‌ ಇರಿಸಿದ ಉಗ್ರನನ್ನು ರಾಮೇಶ್ವರಂ ಕೆಫೆಗೆ ಕರೆತಂದು ಸೀನ್‌ ರಿಕ್ರಿಯೇಟ್‌ ಮಾಡಿದ ಎನ್‌ಐಎ

Electrocution
ದೇಶ23 mins ago

Electrocution: ಡಿಜೆ ವಾಹನಕ್ಕೆ ಹೈಟೆನ್ಷನ್‌ ವಿದ್ಯುತ್‌ ತಂತಿ ತಗುಲಿ ಆಘಾತ; 8 ಮಂದಿ ಭಕ್ತರ ಸಾವು

Vishwa Kundapura Kannada Dina 2024 in banglore celebrate
ಬೆಂಗಳೂರು30 mins ago

Vishwa Kundapura Kannada Dina: ಬೆಂಗಳೂರಲ್ಲಿ ವಿಶ್ವ ಕುಂದಾಪುರ ಕನ್ನಡ ದಿನಾಚರಣೆ ಗಮ್ಮತ್ತು ಹೀಗಿತ್ತು!

court verdict
ಪ್ರಮುಖ ಸುದ್ದಿ45 mins ago

Court Verdict: 31 ವರ್ಷ ಲೈಂಗಿಕ ಸಂಬಂಧ, ನಂತರ ಪುರುಷನ ಮೇಲೆ ರೇಪ್ ಕೇಸ್! ನ್ಯಾಯಾಲಯ ಹೇಳಿದ್ದೇನು ನೋಡಿ

Actor Darshan Fans troll ACP Chandan kumar
ಸ್ಯಾಂಡಲ್ ವುಡ್48 mins ago

Actor Darshan: ಹುಲಿ ಅಂತೆ ಹುಲಿ, ʻಡಿಬಾಸ್ʼ ರಿಲೀಸ್‌ ಆಗುವಾಗ ಇವನೇ ಸೆಕ್ಯೂರಿಟಿ ಎಂದು ಎಸಿಪಿ ಚಂದನ್‌ರನ್ನು ಟ್ರೋಲ್‌ ಮಾಡಿದ ಫ್ಯಾನ್ಸ್‌!

drink water
ಫ್ಯಾಷನ್52 mins ago

Water For Health: ಆರೋಗ್ಯವಾಗಿರಬೇಕೆಂದರೆ ನಾವು ದಿನಕ್ಕೆಷ್ಟು ನೀರು ಕುಡಿಯಬೇಕು?

Bangladesh Protests
ವಿದೇಶ1 hour ago

Bangladesh Protests: ಬಾಂಗ್ಲಾದೇಶದಲ್ಲಿ ಭುಗಿಲೆದ್ದ ಹಿಂಸಾಚಾರ; ಮೃತರ ಸಂಖ್ಯೆ 98ಕ್ಕೆ ಏರಿಕೆ: ಭಾರತೀಯರಿಗೆ ಮುನ್ನೆಚ್ಚರಿಕೆ

Arjun Rampal Says He Knows A Lot Of People Who Need Another Woman
ಬಾಲಿವುಡ್1 hour ago

Arjun Rampal: ಅಕ್ರಮ ಸಂಬಂಧ ಕೆಲವರಿಗೆ ಚಟ, ಮಹಿಳೆಗಾಗಿ ಹಪಹಪಿಸುವುದನ್ನು ನಾನು ನೋಡಿದ್ದೇನೆ ಎಂದ ಖ್ಯಾತ ಬಾಲಿವುಡ್‌ ನಟ!

Independence Day 2024
ಕ್ರೀಡೆ2 hours ago

Independence Day 2024: ಸ್ವಾತಂತ್ರ್ಯಪೂರ್ವದಲ್ಲಿ ಭಾರತದ ಎದುರು ಸೋಲುವ ಭಯ; ಹಾಕಿ ತಂಡವನ್ನೇ ಒಲಿಂಪಿಕ್ಸ್‌ಗೆ ಕಳುಹಿಸಿರಲಿಲ್ಲ ಗ್ರೇಟ್‌ ಬ್ರಿಟನ್‌!

bagalakote soldier death
ಬಾಗಲಕೋಟೆ2 hours ago

Soldier Death: ಉಸಿರಾಟದ ತೊಂದರೆಯಿಂದ ಯೋಧ ಸಾವು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ20 hours ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ7 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ7 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌