Liquor Policy Case : ಆಪ್​ ನಾಯಕರಿಗೆ ಕವಿತಾ 100 ಕೋಟಿ ಲಂಚ ಕೊಟ್ಟಿದ್ದು ಹೌದು; ಇಡಿ ಮಾಹಿತಿ - Vistara News

ಪ್ರಮುಖ ಸುದ್ದಿ

Liquor Policy Case : ಆಪ್​ ನಾಯಕರಿಗೆ ಕವಿತಾ 100 ಕೋಟಿ ಲಂಚ ಕೊಟ್ಟಿದ್ದು ಹೌದು; ಇಡಿ ಮಾಹಿತಿ

Liquor Policy Case : ಕವಿತಾ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

VISTARANEWS.COM


on

K Kavitha
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತ್ ರಾಷ್ಟ್ರ ಸಮಿತಿ (BRS ) ಮುಖಂಡ ಮತ್ತು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿ ಕೆ.ಕವಿತಾ (K Kavitha) ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Aravind Kejriwal) ಮತ್ತು ಮನೀಶ್ ಸಿಸೋಡಿಯಾ ಸೇರಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಉನ್ನತ ನಾಯಕರೊಂದಿಗೆ ಮದ್ಯ ನೀತಿಯಲ್ಲಿ (Liquor Policy Case) ಅನುಕೂಲ ಪಡೆಯಲು ಪಿತೂರಿ ನಡೆಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ತನ್ನ ತನಿಖೆಯಲ್ಲಿ ಹೇಳಿದೆ. ಈ ಅನುಕೂಲಗಳಿಗೆ ಪ್ರತಿಯಾಗಿ ಕವಿತಾ ಅವರು ಎಎಪಿ ನಾಯಕರಿಗೆ 100 ಕೋಟಿ ರೂ.ಗಳನ್ನು ಪಾವತಿಸಿದ್ದಾರೆ ಎಂದು ತನಿಖಾ ಸಂಸ್ಥೆ ತಿಳಿಸಿದೆ. ಸಗಟು ವ್ಯಾಪಾರಿಗಳಿಂದ ಕಿಕ್​ಬ್ಯಾಕ್​​ ರೂಪದಲ್ಲಿ ಅಕ್ರಮ ಹಣವನ್ನು ಎಎಪಿಗೆ ಸಲ್ಲಿಸಸಲಾಗಿದೆ ಎಂದು ಇಡಿ ಆರೋಪಿಸಿದೆ.

ಹೆಚ್ಚಿನ ಲಾಭ ಪಡೆಯುವ ಉದ್ದೇಶದಿಂದ ಕೆ ಕವಿತಾ ಮತ್ತು ಅವರ ಸಹಚರರು ಎಎಪಿಗೆ ಮುಂಚಿತವಾಗಿ 100 ಕೋಟಿ ಪಾವತಿಸಿದ್ದಾರೆ ಎಂದು ಇಡಿ ಹೇಳಿದೆ.

45 ವರ್ಷದ ಬಿಆರ್​ಎಸ್​​ ನಾಯಕಿಯನ್ನು ಮಾರ್ಚ್ 16 ರ ಶನಿವಾರ ಹೈದರಾಬಾದ್​ನಲ್ಲಿ ಇಡಿ ಬಂಧಿಸಿತ್ತು. ಮರುದಿನ ಅವರನ್ನು ವಿಶೇಷ ಪಿಎಂಎಲ್ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಕೋರ್ಟ್​ ಅವರನ್ನು ಮಾರ್ಚ್ 23 ರವರೆಗೆ ಇಡಿ ಕಸ್ಟಡಿಗೆ ಕಳುಹಿಸಿದೆ. ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ದೆಹಲಿ, ಹೈದರಾಬಾದ್, ಚೆನ್ನೈ, ಮುಂಬೈ ಮತ್ತು ಇತರ ಸ್ಥಳಗಳು ಸೇರಿದಂತೆ ದೇಶಾದ್ಯಂತ 245 ಸ್ಥಳಗಳಲ್ಲಿ ಇಡಿ ಶೋಧ ನಡೆಸಿದೆ.

ಇದನ್ನೂ ಓದಿ : Lok Sabha Election : ಚುನಾವಣಾ ಆಯೋಗದಿಂದ ಸಸ್ಪೆಂಡ್ ಆಗಿದ್ದ ವಿವೇಕ್ ಸಹಾಯ್ ಪ. ಬಂಗಾಳದ ಡಿಜಿಪಿ!

ಈ ಪ್ರಕರಣದಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ, ಸಂಜಯ್ ಸಿಂಗ್ ಮತ್ತು ವಿಜಯ್ ನಾಯರ್ ಸೇರಿದಂತೆ ಹದಿನೈದು ಜನರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಒಂದು ಪ್ರಾಸಿಕ್ಯೂಷನ್ ದೂರು ಮತ್ತು 5 ಪೂರಕ ದೂರುಗಳನ್ನು ದಾಖಲಿಸಿದೆ. ಈ ಪ್ರಕರಣದಲ್ಲಿ ಸೃಷ್ಟಿಯಾದ ಅಪರಾಧಗಳಲ್ಲಿ ಇದುವರೆಗೆ 128.79 ಕೋಟಿ ರೂ.ಗಳ ಆಸ್ತಿ ಪತ್ತೆಹಚ್ಚಲಾಗಿದೆ ಎಂದು ತನಿಖಾ ಸಂಸ್ಥೆ ಸೋಮವಾರ ತಿಳಿಸಿದೆ.

ಏನಿದು ಪ್ರಕರಣ?

ದೆಹಲಿ ಸರ್ಕಾರವು 2021ರ ನವೆಂಬರ್ 17ರಂದು ಅಬಕಾರಿ ನೀತಿಯನ್ನು ಜಾರಿಗೆ ತಂದಿತ್ತು. ಆದರೆ ಭ್ರಷ್ಟಾಚಾರದ ಆರೋಪದ ನಡುವೆ 2022ರ ಸೆಪ್ಟೆಂಬರ್ ಕೊನೆಯಲ್ಲಿ ಅದನ್ನು ರದ್ದುಗೊಳಿಸಲಾಗಿತ್ತು. ತನಿಖಾ ಸಂಸ್ಥೆಗಳ ಪ್ರಕಾರ ಹೊಸ ನೀತಿಯ ಅಡಿಯಲ್ಲಿ ಸಗಟು ವ್ಯಾಪಾರಿಗಳ ಲಾಭಾಂಶವನ್ನು ಶೇ.5ರಿಂದ 12ಕ್ಕೆ ಹೆಚ್ಚಿಸಲಾಗಿದೆ. ಅಬಕಾರಿ ನೀತಿ ಜಾರಿ ವೇಳೆ ನೂರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಇದರಲ್ಲಿ ಕೆ. ಕವಿತಾ ಅವರ ಪಾಲೂ ಇದೆ ಎಂಬ ಆರೋಪ ಕೇಳಿಬಂದಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇ.ಡಿ ಹಾಗೂ ಸಿಬಿಐ ಅಧಿಕಾರಿಗಳು ಕೆ. ಕವಿತಾ ಅವರನ್ನು ವಿಚಾರಣೆ ನಡೆಸಿದೆ.

ಸೌತ್‌ ಗ್ರೂಪ್‌ ಎಂಬ ಕಂಪನಿಯನ್ನು ಕೆ. ಕವಿತಾ ಸೇರಿ ಹಲವರನ್ನು ಮುನ್ನಡೆಸುತ್ತಿದ್ದು, ದೆಹಲಿಯಲ್ಲಿ ಅಬಕಾರಿ ನೀತಿ ಜಾರಿ ಬಳಿಕ ಇದೇ ಕಂಪನಿಗೆ ಗುತ್ತಿಗೆ ಪಡೆಯಲು ಆಮ್‌ ಆದ್ಮಿ ಪಕ್ಷದ ನೇತೃತ್ವದ ಸರ್ಕಾರಕ್ಕೆ ಲಂಚ ನೀಡಿದೆ ಎಂಬ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕಾಗಿ ಇ.ಡಿ ಹಾಗೂ ಸಿಬಿಐ ಕೂಲಂಕಷ ತನಿಖೆ ನಡೆಸುತ್ತಿದೆ. ಇನ್ನು. ಕೆ. ಕವಿತಾ ಅವರನ್ನು ಬಂಧಿಸುತ್ತಲೇ, ಬಿಆರ್‌ಎಸ್‌ ನಾಯಕರು ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಹಾಗೂ ತೆಲಂಗಾಣದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Murder case: ಕೋರ್ಟ್‌ ಇಂಜಂಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

Murder case: ಕಳೆದ ಹಲವಾರು ವರ್ಷಗಳಿಂದ ಈ ಜಮೀನು ವಿವಾದದಲ್ಲಿತ್ತು. ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಇಂಜಂಕ್ಷನ್‌ ಆದೇಶವನ್ನು ತರಲಾಗಿತ್ತು. ಆದರೆ, ಸೋಮವಾರ ಬೆಳಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್‌ ಹಾಗೂ ಕೆಲವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದಿದೆ. ತೀವ್ರ ವಾಗ್ವಾದಗಳು ನಡೆದಿದ್ದು, ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ. ಈ ವೇಳೆ ಕುಡುಗೋಲಿನಿಂದ ಹಲ್ಲೆಯಾಗಿದ್ದು. ಸತೀಶ್‌ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Murder case Hacked to death with sickle for stepping into a field with an injection order
ಮೃತ ಸತೀಶ್‌ ಹಾಗೂ ಆರೋಪಿ ಅಖಿಲೇಶ್
Koo

ಶಿವಮೊಗ್ಗ: ತಾಲೂಕಿನ ದುಮ್ಮಳ್ಳಿ ಗ್ರಾಮದ ಒಂದು ಜಮೀನು (Land dispute) ಹಲವು ವರ್ಷಗಳಿಂದ ವಿವಾದದಲ್ಲಿತ್ತು. ಈ ಹಿನ್ನೆಲೆಯಲ್ಲಿ ಇಂಜಂಕ್ಷನ್‌ ಆರ್ಡರ್‌ (Injenction Order) ಅನ್ನು ಸಹ ತರಲಾಗಿತ್ತು. ಇಷ್ಟಾದರೂ ಈ ಜಮೀನಿಗೆ ಪ್ರವೇಶ ಮಾಡಿದ್ದಾನೆ ಎಂಬ ಕಾರಣಕ್ಕೆ ಇನ್ನೊಂದು ಕಡೆಯ ಗುಂಪಿನವರು ದಾಳಿ ನಡೆಸಿ ಕುಡುಗೋಲು ಬೀಸಿ ಕೊಂದು (Murder case) ಹಾಕಿದ್ದಾರೆ.

ಜಮೀನು ವಿವಾದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಹಾಡಹಗಲೇ ಕೊಲೆ ನಡೆದಿದೆ. ಇಂಜಂಕ್ಷನ್‌ ಆರ್ಡರ್ ಇದ್ದ ಜಮೀನಿಗೆ ತೆರಳಿದ್ದ ಸತೀಶ್ ನಾಯ್ಕ (28) ಕೊಲೆಯಾದ ದುರ್ದೈವಿ. ದೂರದ ಸಂಬಂಧಿ ಅಖಿಲೇಶ್ (27) ಸೇರಿದಂತೆ ಹಲವರ ಗುಂಪಿನಿಂದ ಮಾರಣಾಂತಿಕ ಹಲ್ಲೆ ನಡೆದಿದೆ.

ಕಳೆದ ಹಲವಾರು ವರ್ಷಗಳಿಂದ ಈ ಜಮೀನು ವಿವಾದದಲ್ಲಿತ್ತು. ಯಾರೂ ಕೂಡ ಜಮೀ‌ನಿನೊಳಗೆ ತೆರಳದಂತೆ ಇಂಜಂಕ್ಷನ್‌ ಆದೇಶವನ್ನು ತರಲಾಗಿತ್ತು. ಆದರೆ, ಸೋಮವಾರ ಬೆಳಗ್ಗೆ ಸತೀಶ್ ನಾಯ್ಕ ಜಮೀನಿಗೆ ತೆರಳಿದ್ದರು. ಈ ವೇಳೆ ಅಖಿಲೇಶ್‌ ಹಾಗೂ ಕೆಲವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಆಗ ಪರಸ್ಪರ ಮಾತಿಗೆ ಮಾತು ಬೆಳೆದಿದೆ. ತೀವ್ರ ವಾಗ್ವಾದಗಳು ನಡೆದಿದ್ದು, ಪರಸ್ಪರ ಹೊಡೆದಾಡಿಕೊಳ್ಳುವ ಮಟ್ಟಕ್ಕೆ ಹೋಗಿದೆ.

ಗಲಾಟೆ ಜೋರಾಗುತ್ತಿದ್ದಂತೆ ತಾಳ್ಮೆ ಕಳೆದುಕೊಂಡ ಅಖಿಲೇಶ್‌ ಗುಂಪಿನವರಲ್ಲೊಬ್ಬರು ಸ್ಥಳದಲ್ಲಿದ್ದ ಕುಡುಗೋಲಿನಿಂದ ಹಲ್ಲೆ ನಡೆಸಿದ್ದಾರೆ. ಮತ್ತೆ ಕೆಲವರು ಕೈಯಿಂದಲೇ ಗುದ್ದಿದ್ದಾರೆ. ಬಹಳಷ್ಟು ಜನ ಏಕಾಏಕಿ ದಾಳಿ ನಡೆಸಿದ್ದರಿಂದ ತೀವ್ರವಾಗಿ ಗಾಯಗೊಂಡ ಸತೀಶ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ಹುಬ್ಬಳ್ಳಿ: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಕೊಲೆಯಾಗಿ (Murder case) ಹೋಗಿದ್ದಾನೆ. ದುಷ್ಕರ್ಮಿಗಳು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಹುಬ್ಬಳ್ಳಿ (Hubballi News) ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ.

ಶರೀಫ್‌ಸಾಬ್ ಕಮಡೊಳ್ಳಿ ಎಂಬಾತ ಹತ್ಯೆಯಾದವನು. ಹಳ್ಯಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೊಸ ಕೊಠಡಿಯಲ್ಲೇ ಶರೀಪ್‌ಸಾಬ್‌ನ ಕೊಲೆಯಾಗಿದೆ. ಶಶಿಧರ ಚೆನ್ನೋಜಿ ಕೊಲೆ ಆರೋಪಿ ಎಂದು ಶಂಕಿಸಲಾಗಿದೆ.

ಸದ್ಯ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ರಕ್ತಸಿಕ್ತವಾಗಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಪೊಲೀಸರು ಹುಡುಕಾಟವನ್ನು ನಡೆಸುತ್ತಿದ್ದಾರೆ.

ಮೂರು ಮಂದಿಯನ್ನು ಕೊಂದು ಅಬ್ಬರಿಸಿದ ರೌಡಿ ಶೀಟರ್‌ ಕಾಲಿಗೆ ಗುಂಡೇಟು, ಬಂಧನ

ಶಿವಮೊಗ್ಗ: ಶಿವಮೊಗ್ಗದಲ್ಲಿ ನಡೆದಿದ್ದ ಗ್ಯಾಂಗ್ ವಾರ್ (Shimogga Gang War) ಪ್ರಕರಣದಲ್ಲಿ ಮೂವರನ್ನು ನಡುಬೀದಿಯಲ್ಲಿ ಕೊಚ್ಚಿ ಕೊಲೆ (Triple Murder Case) ಮಾಡಿದ್ದ ಆರೋಪಿಗಳಲ್ಲಿ ಒಬ್ಬ ರೌಡಿ ಶೀಟರ್‌ (Rowdy Sheeter) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Shoot out) ಬಂಧಿಸಿದ್ದಾರೆ.

ತ್ರಿಬಲ್ ಮರ್ಡರ್ ಪ್ರಕರಣದ ಆರೋಪಿ, ರೌಡಿ ಶೀಟರ್ ಶೋಹಿಬ್ ಕಾಲಿಗೆ ಪೊಲೀಸರು ಶೂಟ್‌ ಮಾಡಿದ್ದಾರೆ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಬೀರನಕೆರೆ ಬಳಿ ರೌಡಿ ಶೀಟರ್ ಶೋಹಿಬ್‌ನನ್ನು ಬಂಧಿಸಲು ಹೋದಾಗ ಆತ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ. ಪಿಎಸ್ಐ ಕುಮಾರ್ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಣ್ಣಪ್ಪ ಮೇಲೆ ಹಲ್ಲೆಗೆ ಯತ್ನಿಸಿದ್ದ ಶೋಹಿಬ್‌ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

ಇದನ್ನೂ ಓದಿ: Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಗ್ಯಾಂಗ್‌ ವಾರ್‌ ನಡೆದಿತ್ತು. ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್‌ಗಳನ್ನು ಕೊಚ್ಚಿ ಕೊಲೆ (Murder Case) ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಭೀಕರವಾಗಿ ದುಷ್ಕರ್ಮಿಗಳು ಕೊಲೆ ಮಾಡಿದ್ದರು. ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಯೆಬ್ ಅಲಿಯಾಸ್ ಸೇಬು‌, ದೊಡ್ಡಪೇಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಗೌಸ್ ಹತ್ಯೆಯಾಗಿತ್ತು. ಚಾಕುವಿನಿಂದ ತಿವಿತಕ್ಕೊಳಗಾಗಿ ತೀವ್ರವಾಗಿ ಗಾಯಗೊಂಡಿದ್ದ ಯಾಸೀನ್‌ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.

ಮೊದಲಿಗೆ ಮೃತ ಯುವಕರ ಕಡೆಯ ಗುಂಪು ರೌಡಿ ಶೀಟರ್ ಯಾಸೀನ್ ಕುರೇಶಿ ಎಂಬಾತನ ಮೇಲೆ ದಾಳಿ ಮಾಡಿದೆ. ಹೀಗಾಗಿ ಯಾಸೀನ್ ಕುರೇಶಿ ಗ್ಯಾಂಗ್ ಪ್ರತಿದಾಳಿ ನಡೆಸಿ, ಹಲ್ಲೆ ಮಾಡಲು ಬಂದಿದ್ದ ಶೋಯೆಬ್, ಗೌಸ್‌ನನ್ನು ಕೊಲೆ ಮಾಡಿದ್ದಾರೆ. ಬ್ಯಾಟ್, ಲಾಂಗುಗಳಿಂದ ಹೊಡೆದು, ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಘಟನಾ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Continue Reading

ಪ್ರಮುಖ ಸುದ್ದಿ

CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

CBSE 12th Results 2024: ಮಂಡಳಿಯು ಎರಡೂ ತರಗತಿಗಳ ಫಲಿತಾಂಶಗಳನ್ನು ಏಕಕಾಲದಲ್ಲಿ ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ CBSE ತರಗತಿ 12 ಫಲಿತಾಂಶ 2024 ಅನ್ನು cbse.gov.in ನಲ್ಲಿ ಅಧಿಕೃತ CBSE ವೆಬ್‌ಸೈಟ್ ಮೂಲಕ ಪ್ರವೇಶಿಸಬಹುದು. ಹೆಚ್ಚುವರಿಯಾಗಿ, cbse.nic.in, cbseresults.nic.in ಮತ್ತು results.cbse.nic.in ನಲ್ಲಿ ಫಲಿತಾಂಶಗಳನ್ನು ಪರಿಶೀಲಿಸಬಹುದು.

VISTARANEWS.COM


on

CBSE 12th results 2024
Koo

ಹೊಸದಿಲ್ಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ (CBSE 12th Results 2024) ಇಂದು ಪ್ರಕಟವಾಗಿದೆ. ಈ ವರ್ಷದ ತೇರ್ಗಡೆ (Pass) ಪ್ರಮಾಣ ಶೇ.87.98ರಷ್ಟಿದೆ. 16,33,730 ಮಂದಿ ನೋಂದಾಯಿಸಿಕೊಂಡಿದ್ದು, ಅದರಲ್ಲಿ 16,21,224 ಮಂದಿ ಪರೀಕ್ಷೆ ಬರೆದು, 14,26,420 ಮಂದಿ ಪಾಸ್‌ ಆಗಿದ್ದಾರೆ. ಬೆಂಗಳೂರಿನಲ್ಲಿ (Bangalore CBSE 12th Results 2024) ಫಲಿತಾಂಶದ ಪ್ರಮಾಣ ಶೇ.96.95ರಷ್ಟಿದೆ.

ಮಂಡಳಿಯು ಎರಡೂ ತರಗತಿಗಳ ಫಲಿತಾಂಶಗಳನ್ನು ಏಕಕಾಲದಲ್ಲಿ ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ CBSE ತರಗತಿ 12 ಫಲಿತಾಂಶ 2024 ಅನ್ನು cbse.gov.in ನಲ್ಲಿ ಅಧಿಕೃತ CBSE ವೆಬ್‌ಸೈಟ್ ಮೂಲಕ ಪ್ರವೇಶಿಸಬಹುದು. ಹೆಚ್ಚುವರಿಯಾಗಿ, cbse.nic.in, cbseresults.nic.in ಮತ್ತು results.cbse.nic.in ನಲ್ಲಿ ಫಲಿತಾಂಶಗಳನ್ನು ಪರಿಶೀಲಿಸಬಹುದು. ಇದಲ್ಲದೆ, ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು digilocker.gov.in ಮತ್ತು results.gov.in ಮೂಲಕ ತ್ವರಿತವಾಗಿ ಪರಿಶೀಲಿಸಬಹುದು. ಆನ್‌ಲೈನ್‌ನಲ್ಲಿ ಫಲಿತಾಂಶಗಳನ್ನು ಪ್ರವೇಶಿಸಲು, ವಿದ್ಯಾರ್ಥಿಗಳಿಗೆ ಅವರ ರೋಲ್ ಸಂಖ್ಯೆ, ಶಾಲಾ ಸಂಖ್ಯೆ ಮತ್ತು ಪ್ರವೇಶ ಕಾರ್ಡ್ ಐಡಿ ಅಗತ್ಯವಿರುತ್ತದೆ.

CBSE 10ನೇ ತರಗತಿ ಮತ್ತು 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಟಾಪರ್‌ಗಳ ಹೆಸರನ್ನು ಬಹಿರಂಗಪಡಿಸುವುದಿಲ್ಲ. ಆದರೆ ಮಂಡಳಿಯು ಪ್ರತಿ ತರಗತಿಯಲ್ಲಿನ ಅಭ್ಯರ್ಥಿಗಳ ಸಂಖ್ಯೆ, ಉತ್ತೀರ್ಣ ಶೇಕಡಾವಾರು, ಲಿಂಗವಾರು ಫಲಿತಾಂಶಗಳು ಮತ್ತು ಇತರ ಸಂಬಂಧಿತ ವಿವರಗಳನ್ನು ತನ್ನ ಅಧಿಸೂಚನೆಯಲ್ಲಿ ಬಿಡುಗಡೆ ಮಾಡುತ್ತದೆ.

CBSE ಬೋರ್ಡ್ ಫಲಿತಾಂಶ 2024 ಅನ್ನು ಹೇಗೆ ಪರಿಶೀಲಿಸುವುದು?

ನಿಮ್ಮ CBSE ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪರಿಶೀಲಿಸಲು, ಈ ಹಂತಗಳನ್ನು ಅನುಸರಿಸಿ:
ಅಧಿಕೃತ ವೆಬ್‌ಸೈಟ್‌ಗಳಿಗೆ ಭೇಟಿ ನೀಡಿ: cbse.gov.in ನಲ್ಲಿ ಅಧಿಕೃತ CBSE ವೆಬ್‌ಸೈಟ್‌ಗೆ ಹೋಗಿ ಅಥವಾ ಕೆಳಗಿನ ಯಾವುದೇ ವೆಬ್‌ಸೈಟ್‌ಗಳಿಗೆ ಹೋಗಿ: cbse.nic.in, cbseresults.nic.in, ಅಥವಾ results.cbse.nic.in.
ಪ್ರವೇಶ ಫಲಿತಾಂಶಗಳ ವಿಭಾಗ: ವೆಬ್‌ಸೈಟ್‌ನ ಮುಖಪುಟದಲ್ಲಿ “ಫಲಿತಾಂಶಗಳು” ಅಥವಾ “ಫಲಿತಾಂಶ” ವಿಭಾಗವನ್ನು ನೋಡಿ.
ವರ್ಗ ಮತ್ತು ವರ್ಷವನ್ನು ಆಯ್ಕೆಮಾಡಿ: ನಿಮ್ಮ ತರಗತಿಗೆ ಸೂಕ್ತವಾದ ಆಯ್ಕೆಯನ್ನು ಆರಿಸಿ.
ವಿವರಗಳನ್ನು ನಮೂದಿಸಿ: ನಿಮ್ಮ ರೋಲ್ ಸಂಖ್ಯೆ, ಶಾಲಾ ಸಂಖ್ಯೆ ಮತ್ತು ಪ್ರವೇಶ ಕಾರ್ಡ್ ಐಡಿಯನ್ನು ನಮೂದಿಸಲು ನಿಮ್ಮನ್ನು ಕೇಳಲಾಗುತ್ತದೆ. ಈ ವಿವರಗಳನ್ನು ನಿಖರವಾಗಿ ಭರ್ತಿ ಮಾಡಿ.
ಫಲಿತಾಂಶಗಳನ್ನು ಸಲ್ಲಿಸಿ ಮತ್ತು ವೀಕ್ಷಿಸಿ: ನಿಮ್ಮ ವಿವರಗಳನ್ನು ನಮೂದಿಸಿದ ನಂತರ, ಫಾರ್ಮ್ ಅನ್ನು ಸಲ್ಲಿಸಿ. ಆಯ್ಕೆಮಾಡಿದ ವರ್ಗ ಮತ್ತು ವರ್ಷಕ್ಕೆ ನಿಮ್ಮ CBSE ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.
ಉಳಿಸಿ ಅಥವಾ ಮುದ್ರಿಸಿ: ನಿಮ್ಮ ಫಲಿತಾಂಶಗಳನ್ನು ಪ್ರದರ್ಶಿಸಿದ ನಂತರ, ನೀವು ಡಿಜಿಟಲ್ ನಕಲನ್ನು ಉಳಿಸಬಹುದು ಅಥವಾ ಭವಿಷ್ಯದ ಉಲ್ಲೇಖಕ್ಕಾಗಿ ಅದನ್ನು ಮುದ್ರಿಸಬಹುದು.

CBSE ಬೋರ್ಡ್ ಫಲಿತಾಂಶ 2024 ಅನ್ನು ಪರಿಶೀಲಿಸಲು ನೇರ ಲಿಂಕ್

ಹೆಚ್ಚುವರಿಯಾಗಿ, ವಿದ್ಯಾರ್ಥಿಗಳು ನಿಮ್ಮ ಫಲಿತಾಂಶಗಳನ್ನು ಡಿಜಿಲಾಕರ್ (digilocker.gov.in) ಮತ್ತು results.gov.in ಮೂಲಕ ಅದೇ ರೋಲ್ ಸಂಖ್ಯೆ, ಶಾಲೆಯ ಸಂಖ್ಯೆ ಮತ್ತು ಪ್ರವೇಶ ಕಾರ್ಡ್ ಐಡಿಯನ್ನು ಬಳಸಿಕೊಂಡು ಪರಿಶೀಲಿಸಬಹುದು.

ನಿಮ್ಮ ಫಲಿತಾಂಶಗಳನ್ನು ಸರಾಗವಾಗಿ ಪಡೆಯಲು, ನಿಮ್ಮ ಡಾಕ್ಯುಮೆಂಟ್‌ಗಳನ್ನು ಕೈಯಲ್ಲಿ ಇರಿಸಿಕೊಳ್ಳಲು ಮತ್ತು ಅವುಗಳನ್ನು ಸರಿಯಾಗಿ ನಮೂದಿಸಲು ಮರೆಯದಿರಿ. ನೀವು ಯಾವುದೇ ಸಮಸ್ಯೆ ಎದುರಿಸಿದರೆ ಸಹಾಯಕ್ಕಾಗಿ CBSE ಸಹಾಯವಾಣಿ ಅಥವಾ ನಿಮ್ಮ ಶಾಲಾ ಅಧಿಕಾರಿಗಳನ್ನು ಸಂಪರ್ಕಿಸಬಹುದು.

10ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು CBSEಯಿಂದ ಫೆಬ್ರವರಿ 15ರಿಂದ ಮಾರ್ಚ್ 13, 2024 ರವರೆಗೆ ನಡೆಸಲಾಯಿತು. 12ನೇ ತರಗತಿ ಪರೀಕ್ಷೆಗಳನ್ನು ಫೆಬ್ರವರಿ 15ರಿಂದ ಏಪ್ರಿಲ್ 2, 2024ರವರೆಗೆ ರಾಷ್ಟ್ರವ್ಯಾಪಿ ನಡೆಸಲಾಯಿತು. ಎರಡೂ ತರಗತಿಗಳಿಗೆ ಪರೀಕ್ಷೆಗಳನ್ನು ಒಂದೇ ಪಾಳಿಯಲ್ಲಿ 10:30ರಿಂದ ನಡೆಸಲಾಯಿತು. ಈ ವರ್ಷ, ಸರಿಸುಮಾರು 39 ಲಕ್ಷ ಅಭ್ಯರ್ಥಿಗಳು ಎರಡೂ ತರಗತಿಗಳಿಗೆ CBSE ಬೋರ್ಡ್ ಪರೀಕ್ಷೆಗಳಿಗೆ ನೋಂದಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ: Public Exam: ಇನ್ನು ಮುಂದೆ ವರ್ಷಕ್ಕೆರಡು ಬಾರಿ ಬೋರ್ಡ್‌ ಪರೀಕ್ಷೆ ? ಪರಿಶೀಲನೆಗೆ ಸಿಬಿಎಸ್‌ಇಗೆ ಸೂಚನೆ

Continue Reading

ಪ್ರಮುಖ ಸುದ್ದಿ

Prajwal Revanna Case: ಎಸ್‌ಐಟಿಗೆ ಸವಾಲೆಸೆದ ನವೀನ್‌ ಗೌಡ; ದೇವರಾಜೇಗೌಡ, ಪ್ರೀತಂಗೌಡ ಆಪ್ತರು ಎಸ್‌ಐಟಿ ಕಸ್ಟಡಿಗೆ?

Prajwal Revanna Case: ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ನವೀನ್ ಗೌಡ ಎ೧ ಆರೋಪಿಯಾಗಿದ್ದು, ಎಸ್‌ಐಟಿ ಈತನ ಹುಡುಕಾಟದಲ್ಲಿದೆ. ಎಸ್ಐಟಿ ತಲಾಶ್ ಮಾಡುತ್ತಿರುವಾಗಲೇ ಫೇಸ್‌ಬುಕ್ ಪೋಸ್ಟ್ ಹಾಕಿ ಈತ ಒಂದು ರೀತಿಯಲ್ಲಿ ಚಾಲೆಂಜ್ ಮಾಡಿದಂತಾಗಿದೆ. ಈಗಾಗಲೆ ಪೆನ್ ಡ್ರೈವ್ ಹಂಚಿಕೆ ಕೇಸಲ್ಲಿ ಇಬ್ಬರನ್ನು ಎಸ್ಐಟಿ ಆರೆಸ್ಟ್ ಮಾಡಿದ್ದು, ನವೀನ್ ಗೌಡ ತಲಾಶೆಯಲ್ಲಿದೆ.

VISTARANEWS.COM


on

prajwal revanna case
ಲಿಖಿತ್‌ ಗೌಡ, ಚೇತನ್‌, ದೇವರಾಜೇಗೌಡ
Koo

ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ್ದು (Prajwal Revanna Case) ಎನ್ನಲಾದ ಅಶ್ಲೀಲ ದೃಶ್ಯವುಳ್ಳ ಪೆನ್‌ ಡ್ರೈವ್ ಹಂಚಿಕೆ (Pen drive case) ಮಾಡಿದ ಪ್ರಕರಣದಲ್ಲಿ, ಆರೋಪಿಯಾಗಿ ಇನ್ನೂ ಸೆರೆಸಿಗದ ನವೀನ್‌ಗೌಡ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿದ್ದು, ಎಸ್‌ಐಟಿಗೆ (SIT) ಪರೋಕ್ಷವಾಗಿ ಸವಾಲು ಹಾಕಿದ್ದಾನೆ.

“ಪೆನ್ ಡ್ರೈವ್‌ನ ನಾನು ಅರಕಲಗೂಡು ಶಾಸಕ ಎ. ಮಂಜುಗೆ ಕೊಟ್ಟಿದ್ದೆ. ಎಚ್‌ಡಿ ಕುಮಾರಸ್ವಾಮಿ (HD Kumaraswamy) ಹೇಳಿದಂತೆ ಪೆನ್ ಡ್ರೈವ್ ಹಂಚಿಕೆ ಹಿಂದೆ ಮಹಾನಾಯಕನ ಕೈವಾಡ ಇದೆ. ಆ ಮಹಾನಾಯಕ ಅರಕಲಗೂಡು ಎಂಎಲ್ಎ ಮಂಜುನಾ?” ಎಂದು ನವೀನ್ ಗೌಡ ಪೋಸ್ಟ್ ಹಾಕಿದ್ದಾನೆ.

ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ನವೀನ್ ಗೌಡ ಎ೧ ಆರೋಪಿಯಾಗಿದ್ದು, ಎಸ್‌ಐಟಿ ಈತನ ಹುಡುಕಾಟದಲ್ಲಿದೆ. ಎಸ್ಐಟಿ ತಲಾಶ್ ಮಾಡುತ್ತಿರುವಾಗಲೇ ಫೇಸ್‌ಬುಕ್ ಪೋಸ್ಟ್ ಹಾಕಿ ಈತ ಒಂದು ರೀತಿಯಲ್ಲಿ ಚಾಲೆಂಜ್ ಮಾಡಿದಂತಾಗಿದೆ. ಈಗಾಗಲೆ ಪೆನ್ ಡ್ರೈವ್ ಹಂಚಿಕೆ ಕೇಸಲ್ಲಿ ಇಬ್ಬರನ್ನು ಎಸ್ಐಟಿ ಆರೆಸ್ಟ್ ಮಾಡಿದ್ದು, ನವೀನ್ ಗೌಡ ತಲಾಶೆಯಲ್ಲಿದೆ.

ದೇವರಾಜೇಗೌಡ ಮೇಲೆ ಫೋಕಸ್

ಹೊಳೆನರಸೀಪುರ ಪೊಲೀಸರಿಂದ ಬಂಧನ ಆಗಿರುವ ವಕೀಲ ದೇವರಾಜೇಗೌಡರನ್ನು ತಮ್ಮ ಕಸ್ಟಡಿಗೆ ನೀಡಬೇಕು ಎಂದು ಎಸ್ಐಟಿ ಕೇಳುವ ಸಾಧ್ಯತೆ ಇದೆ. ಆರೆಸ್ಟ್‌ಗೂ ಮುನ್ನ ದೇವರಾಜೇಗೌಡಗೆ ಮತ್ತೊಂದು ನೊಟೀಸ್ ಅನ್ನು ಎಸ್ಐಟಿ ನೀಡಿದ್ದು, ಕೇಸ್ ಸಂಬಂಧ ಹೆಚ್ಚಿನ ವಿಚಾರಣೆಗೆ ಹಾಜರಾಗುವಂತೆ ಹೇಳಿತ್ತು.

ವಿಚಾರಣೆಗೆ ಹಾಜರಾಗದೆ ಕರ್ನಾಟಕ ಬಿಟ್ಟು ಹೊರಟಿದ್ದ ದೇವರಾಜೇಗೌಡರನ್ನು ಲೈಂಗಿಕ ದೌರ್ಜನ್ಯ ಕೇಸಿನಲ್ಲಿ ಹೊಳೆನರಸೀಪುರ ಪೊಲೀಸರು ಆರೆಸ್ಟ್ ಮಾಡಿದ್ದರು. ನಂತರ ಜಿಲ್ಲಾ ನ್ಯಾಯಾಲಯ ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಈಗ ಪ್ರಜ್ವಲ್ ಕೇಸ್ ಸಂಬಂಧ ತನಿಖೆಗೆ ಬಾಡಿ ವಾರೆಂಟ್ ಮೇಲೆ ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ.

ಈಗಾಗಲೇ ದೇವರಾಜೇಗೌಡ ಪ್ರಕರಣ ತನಿಖೆ ನಡೆಸುತ್ತಿರುವ ಹೊಳೆನರಸೀಪುರ ಪೊಲೀಸರು ಕೂಡ ಆರೋಪಿಯ ಕಸ್ಟಡಿಗೆ ಮನವಿ ಮಾಡಲಿದ್ದಾರೆ. ತನಿಖೆ ವೇಳೆ ಒಂದು ಮೊಬೈಲ್, ದಾಖಲೆಗಳು ಸಿಕ್ಕಿರುವ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಆರೋಪಿಯ ವಿಚಾರಣೆ ಅಗತ್ಯವಿದೆ. ಹೀಗಾಗಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಕಸ್ಟಡಿಗೆ ಕೇಳಬಹುದು. ದೇವರಾಜೇಗೌಡ ಕೇಸ್ ಸಂಬಂಧ ಹೊಳೆನರಸೀಪುರ ಪೊಲೀಸರ ಸಂಪರ್ಕದಲ್ಲಿ ಎಸ್ಐಟಿ ಇದೆ.

ಪ್ರೀತಂಗೌಡ ಆಪ್ತರೂ ಕಸ್ಟಡಿಗೆ?

ಪ್ರಕರಣದಲ್ಲಿ ಬಿಜೆಪಿ ಮುಖಂಡ ಪ್ರೀತಂಗೌಡ ಗೌಡ ಆಪ್ತರ ಬಂಧನದ ಬಳಿಕ ಕುತೂಹಲ ಹೆಚ್ಚಿದ್ದು, ಇಂದು ತೆರೆದ ಕೋರ್ಟ್‌ನಲ್ಲಿ ಇಬ್ಬರು ಆರೋಪಿಗಳನ್ನು ಎಸ್ಐಟಿ ಕಸ್ಟಡಿಗೆ ಕೇಳಲು ತಯಾರಿ ನಡೆದಿದೆ. ಏಪ್ರಿಲ್ 21ರಂದೇ ಪ್ರೀತಂಗೌಡ ಆಪ್ತ ಶರತ್ ಆಲಿಯಾಸ್ ಕ್ವಾಲಿಟಿ ಬಾರ್ ಶರತ್ ವಿರುದ್ಧ ಜೆಡಿಎಸ್‌ ದೂರು ನೀಡಿತ್ತು. ಪ್ರಕರಣದ ಬೆನ್ನು ಹತ್ತಿದ್ದ ಎಸ್ಐಟಿಯಿಂದ ಆರಂಭಿಕವಾಗಿಯೇ ಪ್ರೀತಂಗೌಡ ಆಪ್ತರ ಆರೆಸ್ಟ್ ಆಗಿದೆ.

ನಿನ್ನೆ ಲಿಖಿತ್ ಗೌಡ ಹಾಗು ಚೇತನ್‌ರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಪೊಲೀಸ್ ವಿಚಾರಣೆ ಬಳಿಕ ಮತ್ತಷ್ಟು ಜನರ ಬಂಧನ ಸಾಧ್ಯತೆ ಇದೆ. ವೀಡಿಯೋ ಹಾಗು ಪೆನ್ ಡ್ರೈವ್ ಹಂಚಿದ ಬಗ್ಗೆ ಎಸ್‌ಐಟಿ ಇಂಚಿಂಚೂ ಮಾಹಿತಿ ಕಲೆ ಹಾಕಿದ್ದು, ವೀಡಿಯೋ ವೈರಲ್ ದಾರಿಯನ್ನು ಎಳೆ ಎಳೆಯಾಗಿ ಭೇದಿಸಲು ಪ್ಲಾನ್ ಮಾಡಿದೆ. ವೀಡಿಯೋ ವೈರಲ್ ಕೇಸ್ ಭೇದಿಸಲೆಂದೇ ಪ್ರತ್ಯೇಕ ಟೀಂ ರಚನೆ ಮಾಡಲಾಗಿದೆ. ಹಾಸನದಲ್ಲೇ ಒಂದು ತಂಡ ಬೀಡು ಬಿಟ್ಟಿದ್ದು, ಹಾಸನದ ಎಎಸ್ಪಿ ತಮ್ಮಯ್ಯ ನೇತೃತ್ವದ ತಂಡದಿಂದ ವಿಚಾರಣೆ ಮುಂದುವರಿದಿದೆ.

14 ದಿನ ನ್ಯಾಯಾಂಗ ಬಂಧನ

ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ (Prajwal Revanna Case) ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಹರಿಬಿಟ್ಟ ಆರೋಪದಲ್ಲಿ ಬಂಧನವಾಗಿರುವ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ನಗರದ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಇಬ್ಬರು ಆರೋಪಿಗಳಿಗೆ ಮೇ 25 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ​ ವಿಡಿಯೊಗಳನ್ನು ವೈರಲ್ ಮಾಡಲಾಗುತ್ತಿದೆ ಎಂದು ಏಪ್ರಿಲ್ 23ರಂದು ಹಾಸನ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪ್ರಕರಣ ಎಸ್ಐಟಿಗೆ ವರ್ಗಾವಣೆಯಾಗಿತ್ತು. ಸದ್ಯ ಅಶ್ಲೀಲ ವಿಡಿಯೊ ಹರಿಬಿಟ್ಟವರನ್ನು ವಶಕ್ಕೆ ಪಡೆಯುತ್ತಿರುವ ಎಸ್‌ಐಟಿ ಅಧಿಕಾರಿಗಳ ತಂಡ, ಆರೋಪಿಗಳಾದ ಚೇತನ್​ ಹಾಗೂ ಲಿಖಿತ್​ನನ್ನು ಬಂಧಿಸಿದ್ದು, ನವೀನ್ ಗೌಡ ಮತ್ತು ಪುಟ್ಟರಾಜುಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಆರೋಪಿಗಳಾದ ಲಿಖಿತ್​ ಗೌಡ ಮತ್ತು ಚೇತನ್, ಬಿಜೆಪಿ ಮಾಜಿ ಶಾಸಕ ಪ್ರೀತಂಗೌಡ ಅವರ ಆಪ್ತರಾಗಿದ್ದಾರೆ. ಮೊದಲಿಗೆ ಪೆನ್‌ಡ್ರೈವ್ ವೈರಲ್ ಸಂಬಂಧ ದಾಖಲಾಗಿದ್ದ ಕೇಸ್‌ನಲ್ಲಿ ಈ ಇಬ್ಬರ ಹೆಸರು ಇರಲಿಲ್ಲ. ನಂತರ ಈ ಇಬ್ಬರ ಮೇಲೆ ವಿಡಿಯೊ ಹಂಚಿಕೆ ಆರೋಪದಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿತ್ತು. ಹೀಗಾಗಿ ಈ ಪ್ರಕರಣವು ದಿನಕ್ಕೊಂದು ತಿರುವನ್ನು ಪಡೆದುಕೊಳ್ಳುತ್ತಿದೆ.

ಇದನ್ನೂ ಓದಿ: Prajwal Revanna Case: ಅಶ್ಲೀಲ ವಿಡಿಯೊ ಕೇಸ್; ಚೇತನ್, ಲಿಖಿತ್‌ಗೆ 14 ದಿನ ನ್ಯಾಯಾಂಗ ಬಂಧನ‌

Continue Reading

Lok Sabha Election 2024

PM Nanrendra Modi: ನಾಳೆ ವಾರಾಣಸಿಯಲ್ಲಿ ಮೋದಿ 3ನೇ ಬಾರಿ ನಾಮಪತ್ರ ಸಲ್ಲಿಕೆ, ಇಂದು ವೈಭವದ ರೋಡ್‌ ಶೋ

PM Nanrendra Modi: ನಾಳೆ ನಾಳೆ ಬೆಳಿಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಕಾಶಿಯ ಕಾಲ ಭೈರವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದ್ದು, ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ.

VISTARANEWS.COM


on

pm narendra Modi Varanasi road show
Koo

ವಾರಾಣಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Nanrendra Modi) ನಾಳೆ ಬೆಳಿಗ್ಗೆ ವಾರಾಣಸಿಯಲ್ಲಿ (Varanasi) ಲೋಕಸಭೆ ಚುನಾವಣೆ (Lok Sabha Election 2024) ಬಿಜೆಪಿ (BJP) ಸ್ಪರ್ಧಿಯಾಗಿ ನಾಮಪತ್ರ (nomination) ಸಲ್ಲಿಸಲಿದ್ದಾರೆ. ಇದಕ್ಕೆ ಒಂದು ದಿನ ಮೊದಲು, ಅಂದರೆ ಇಂದು ಸಂಜೆ ಭವ್ಯವಾದ ರೋಡ್‌ ಶೋ ನಡೆಯಲಿದೆ.

ರೋಡ್ ಶೋ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ಗೇಟ್‌ನಿಂದ ಸಂಜೆ 4 ಗಂಟೆಗೆ ಪ್ರಾರಂಭವಾಗಲಿದ್ದು, ಅಲ್ಲಿ ಮೋದಿ ಅವರು ಬಿಎಚ್‌ಯು ಸಂಸ್ಥಾಪಕ ಮಹಾಮಾನ ಪಂ. ಮದನ್ ಮೋಹನ್ ಮಾಳವೀಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಕಾಶಿ ವಿಶ್ವನಾಥ ಧಾಮದ ಗೇಟ್ ಸಂಖ್ಯೆ 4ರಲ್ಲಿ ರೋಡ್‌ ಶೋ ಮುಕ್ತಾಯಗೊಳ್ಳಲಿದೆ. ಮೋದಿ ರೋಡ್ ಶೋನಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಧಾನಿ ಜೊತೆಗೆ ಸಾಥ್ ನೀಡಲಿದ್ದಾರೆ. ವಾರಣಾಸಿ ಲೋಕಸಭಾ ಕ್ಷೇತ್ರದ ಲಕ್ಷಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು, ಕಾಶಿ ನಿವಾಸಿಗಳು, ಕ್ರೀಡಾಪಟುಗಳು, ಕಲಾವಿದರು ಮತ್ತು ಸ್ಥಳೀಯರಲ್ಲದೆ ಇತರ ಪ್ರಮುಖರು ಭಾಗವಹಿಸಲಿದ್ದಾರೆ.

ಮರಾಠಿ, ಗುಜರಾತಿ, ಬೆಂಗಾಲಿ, ಮಾಹೇಶ್ವರಿ, ಮಾರ್ವಾಡಿ, ತಮಿಳು ಮತ್ತು ಪಂಜಾಬಿ ಸಮುದಾಯಗಳ ಗುಂಪುಗಳು ಪ್ರಧಾನಿ ಮೋದಿಯನ್ನು ತಮ್ಮ ಸಾಂಪ್ರದಾಯಿಕ ಉಡುಗೆಯಲ್ಲಿ ಸ್ವಾಗತಿಸಲಿವೆ. ಐದು ಕಿಲೋಮೀಟರ್ ಉದ್ದದ ರೋಡ್ ಶೋ ಮಿನಿ ಇಂಡಿಯಾ ಮತ್ತು ಉತ್ತರ ಪ್ರದೇಶದ ಸಂಸ್ಕೃತಿಗಳ ಒಂದು ನೋಟವನ್ನು ನೀಡಲಿದೆ.

ಭಾರತ ರತ್ನ, ಶಹನಾಯ್‌ ವಾದಕ ಉಸ್ತಾದ್ ಬಿಸ್ಮಿಲ್ಲಾ ಖಾನ್ ಅವರ ಕುಟುಂಬ ಸದಸ್ಯರು ಮದನಪುರ ಬಳಿ ಶೆಹನಾಯಿ ಬಾರಿಸುವ ಮೂಲಕ ಮೋದಿ ಅವರನ್ನು ಸ್ವಾಗತಿಸಲಿದ್ದಾರೆ. ರೋಡ್ ಶೋನಲ್ಲಿ 5,000ಕ್ಕೂ ಹೆಚ್ಚು ಬಿಜೆಪಿ ಮಹಿಳಾ ಘಟಕದ ಕಾರ್ಯಕರ್ತರು ಭಾಗಿಯಾಗಲಿದ್ದು, 100 ಕಡೆ ಪುಷ್ಪವೃಷ್ಟಿ ಮಾಡಲಾಗುವುದು. ಇದರೊಂದಿಗೆ ವಿವಿಧ ಸ್ಥಳಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ವಾರಣಾಸಿಯ ಕಲಾವಿದರು ಮೋದಿಯನ್ನು ಸ್ವಾಗತಿಸಲು ಜಾನಪದ ನೃತ್ಯ ಮತ್ತು ಹಾಡುಗಳನ್ನು ಪ್ರಸ್ತುತಪಡಿಸಲಿದ್ದಾರೆ.

ಮುಸ್ಲಿಂ ಸಮುದಾಯದವರೂ ಸ್ವಾಗತಕ್ಕೆ ಮುಂದೆ ಬಂದಿದ್ದು, ಮದನಪುರದಲ್ಲಿಯೇ ಮಾಜಿ ಸಂಸದ ರಾಜೇಶ್ ಮಿಶ್ರಾ ನೇತೃತ್ವದಲ್ಲಿ ಮುಸ್ಲಿಮರು ಪುಷ್ಪಾರ್ಚನೆ ಮಾಡಲಿದ್ದಾರೆ. ಪ್ರಧಾನಿ ತಮ್ಮ ತಾಯಿಯ ಪಾದಗಳನ್ನು ಸ್ಪರ್ಶಿಸುವ ಚಿತ್ರವೂ ರೋಡ್ ಶೋನಲ್ಲಿ ಇರುತ್ತದೆ. ಕಾರ್ಯಕ್ರಮ ಮುಕ್ತಾಯವಾದ ಬಳಿಕ ಮೋದಿ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

ನಾಳೆ ನಾಳೆ ಬೆಳಿಗ್ಗೆ 11:40ಕ್ಕೆ ಪ್ರಧಾನಿ ನಾಮಪತ್ರ ಸಲ್ಲಿಸಲಿದ್ದು, ಅದಕ್ಕೂ ಮುನ್ನ ಕಾಶಿಯ ಕಾಲ ಭೈರವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಯ ಮುಹೂರ್ತವು ಹಿಂದೂ ಪಂಚಾಂಗದ ಪ್ರಕಾರ ʼಅಭಿಜಿತ್ ಮಹೂರ್ತ’ವಾಗಿದ್ದು, ʼಆನಂದ ಯೋಗ’ದ ಅಡಿಯಲ್ಲಿ ಬರುತ್ತಿದ್ದು ಅತ್ಯಂತ ಮಂಗಳಕರ ಅವಧಿ ಎನ್ನಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಅಜಯ್ ರೈ ಕಣದಲ್ಲಿದ್ದಾರೆ. ಅಜಯ್ ರೈ ಉತ್ತರ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದು, ಕಳೆದ ಎರಡು ಬಾರಿಯೂ ಮೋದಿ ವಿರುದ್ಧ ಸ್ಪರ್ಧಿಸಿ ಸೋತಿದ್ದರು. ಈ ಬಾರಿ ಪ್ರಧಾನಿ ಮೋದಿಯವರ ಗೆಲುವಿನ ಅಂತರವನ್ನು 7 ಲಕ್ಷಕ್ಕೂ ಮೀರಿ ಹೆಚ್ಚಿಸುವ ಗುರಿಯನ್ನು ಬಿಜೆಪಿ ಹೊಂದಿದೆ. 2019ರಲ್ಲಿ 64% ಮತ ಹಂಚಿಕೆಯೊಂದಿಗೆ ಮೋದಿಯವರು 4.8 ಲಕ್ಷ ಅಂತದಲ್ಲಿ ಗೆಲುವು ಸಾಧಿಸಿದ್ದರು. 2014ರಲ್ಲಿ ಅವರು 3.7 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು.

ಇದನ್ನೂ ಓದಿ: Lok Sabha Election: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಮತದಾನ ಆರಂಭ; ʻಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿʼ ಎಂದ ಮೋದಿ

Continue Reading
Advertisement
Vijay Surya changes his name on mothers day
ಕಿರುತೆರೆ6 seconds ago

Vijay Surya: ತಾಯಂದಿರ ದಿನ ತನ್ನ ಹೆಸರನ್ನೇ ಬದಲಿಸಿಕೊಂಡ ʻಅಗ್ನಿಸಾಕ್ಷಿ’ ನಟ! ಹೊಸ ಹೆಸರೇನು?

gold rate today 34
ಚಿನ್ನದ ದರ21 mins ago

Gold Rate Today: ಬಂಗಾರದ ಬೆಲೆಯಲ್ಲಿ ಇಳಿಕೆ; ರಾಜ್ಯ ಮಾರುಕಟ್ಟೆಯಲ್ಲಿ ಚಿನ್ನ- ಬೆಳ್ಳಿ ದರಗಳು ಹೀಗಿವೆ

Shilpa Shetty sister Shamita visit Kedarnath with their mother
ಬಾಲಿವುಡ್25 mins ago

Shilpa Shetty: ಅಮ್ಮ , ಸಹೋದರಿ ಜತೆ ಕೇದಾರನಾಥಕ್ಕೆ ಭೇಟಿ ನೀಡಿದ ಶಿಲ್ಪಾ ಶೆಟ್ಟಿ

Drowned in water
ಮೈಸೂರು33 mins ago

Drowned in Water : ತಲಕಾಡು ಪ್ರವಾಸಕ್ಕೆ ಹೋದ ಯುವತಿ ‌ನೀರಿನಲ್ಲಿ ಮುಳುಗಿ ಸಾವು

Murder case Hacked to death with sickle for stepping into a field with an injection order
ಕರ್ನಾಟಕ35 mins ago

Murder case: ಕೋರ್ಟ್‌ ಇಂಜಂಕ್ಷನ್‌ ಇರುವ ಜಮೀನಿಗೆ ಕಾಲಿಟ್ಟಿದ್ದಕ್ಕೆ ಕುಡುಗೋಲಿನಿಂದ ಕಡಿದು ಕೊಂದರು!

Narendra Modi
ದೇಶ41 mins ago

Narendra Modi: ಗುರುದ್ವಾರದಲ್ಲಿ ಅಡುಗೆ ಮಾಡಿ ಭಕ್ತರಿಗೆ ಬಡಿಸಿದ ಪ್ರಧಾನಿ; ವಿಡಿಯೋ ವೈರಲ್‌

CBSE 12th results 2024
ಪ್ರಮುಖ ಸುದ್ದಿ1 hour ago

CBSE 12th Results 2024: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ, 87.98% ಪಾಸ್‌

ವಿದೇಶ1 hour ago

Gold Heist Case: ಬಹುಕೋಟಿ ಚಿನ್ನ, ವಿದೇಶಿ ಕರೆನ್ಸಿ ದರೋಡೆ; ಭಾರತೀಯ ಮೂಲದ ವ್ಯಕ್ತಿ ಲಾಕ್‌!

Murder Case in hubballi
ಹುಬ್ಬಳ್ಳಿ2 hours ago

Murder case : ಸರ್ಕಾರಿ ಶಾಲೆಯಲ್ಲಿ ಹರಿದ ನೆತ್ತರು; ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

Kareena Kapoor Saif Ali Khan share a kiss in front of paparazzi
ಬಾಲಿವುಡ್2 hours ago

Kareena Kapoor: ರೊಮ್ಯಾಂಟಿಕ್‌ ಮೂಡ್‌ನಲ್ಲಿ ಸೈಫ್-ಕರೀನಾ: ಫೋಟೊಗ್ರಾಫರ್‌ಗಳ ಮುಂದೆಯೇ ಕಿಸ್ಸಿಂಗ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ2 hours ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

karnataka weather forecast karnataka rains
ಮಳೆ7 hours ago

Karnataka Weather : ವಾಯುಭಾರ ಕುಸಿತ; ಕರಾವಳಿ, ಮಲೆನಾಡು ಸೇರಿ ಹಲವೆಡೆ ಭಾರಿ ಮಳೆ ಎಚ್ಚರಿಕೆ

Dina Bhavishya
ಭವಿಷ್ಯ8 hours ago

Dina Bhavishya : ಇಂದು ಹೂಡಿಕೆ ಮಾಡಿದರೆ ಗಳಿಸುವಿರಿ ಭಾರಿ ಲಾಭ; ಅನಿರೀಕ್ಷಿತ ಸುದ್ದಿಯಿಂದ ಸಂತಸ

Prajwal Revanna Case I was never kidnapped and son has made a false complaint Video of victim goes viral
ಕ್ರೈಂ19 hours ago

Prajwal Revanna Case: ರೇವಣ್ಣ ಕೇಸ್‌ಗೆ ಟ್ವಿಸ್ಟ್‌! ನನ್ನ ಕಿಡ್ನ್ಯಾಪ್‌ ಮಾಡಿಯೇ ಇಲ್ಲ; ಮಗ ತಪ್ಪು ದೂರು ಕೊಟ್ಟಿದ್ದಾನೆ; ಸಂತ್ರಸ್ತೆಯ ವಿಡಿಯೊ ವೈರಲ್

Karnataka Weather Forecast Heavy rain in chikkmagalur
ಮಳೆ19 hours ago

Karnataka Weather : ಚಿಕ್ಕಮಗಳೂರಲ್ಲಿ ಅಬ್ಬರಿಸುತ್ತಿರುವ ಮಳೆ; ಬೃಹತ್‌ ಮರ ಬಿದ್ದು ಮಹಿಳೆ ಸ್ಥಳದಲ್ಲೇ ಸಾವು

Prajwal Revanna Case Naveen Gowda post against MLA A Manju
ರಾಜಕೀಯ20 hours ago

Prajwal Revanna Case: ಪ್ರಜ್ವಲ್‌ ಪೆನ್‌ಡ್ರೈವ್‌ ವಿಡಿಯೊ ವೈರಲ್‌ಗೆ ಟ್ವಿಸ್ಟ್‌; ಶಾಸಕ ಎ. ಮಂಜು ವಿರುದ್ಧ ನವೀನ್‌ ಗೌಡ ಪೋಸ್ಟ್‌!

Prajwal Revanna Case: Beware of making a statement Parameshwara warns to HD Kumaraswamy
ಕ್ರೈಂ23 hours ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸ್‌; ನಿಮ್ಮನ್ನೂ ವಿಚಾರಣೆಗೆ ಕರೆಯಬೇಕಾಗುತ್ತದೆ: ಎಚ್‌ಡಿಕೆಗೆ ಪರಮೇಶ್ವರ್‌ ವಾರ್ನಿಂಗ್‌!

Prajwal Revanna Case Two people of pen drive allottees arrested
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಕೇಸ್‌; ಇಬ್ಬರು ಪೆನ್‌ಡ್ರೈವ್‌ ಹಂಚಿಕೆದಾರರ ಅರೆಸ್ಟ್‌

Dina Bhavishya
ಭವಿಷ್ಯ1 day ago

Dina Bhavishya: ಹತಾಶೆಯಲ್ಲಿ ಈ ತೀರ್ಮಾನ ಮಾಡಲೇಬೇಡಿ; ಈ ರಾಶಿಯವರು ಜೀವನ ಪೂರ್ತಿ ಕೊರಗಬೇಕಾಗುತ್ತೆ!

Bengaluru News
ಬೆಂಗಳೂರು2 days ago

Bengaluru News : ಕೆಎಎಸ್‌ ಅಧಿಕಾರಿ ಪತ್ನಿ ಅನುಮಾನಾಸ್ಪದ‌ ಸಾವು; ಹೈಕೋರ್ಟ್‌ ವಕೀಲೆಗೆ ಕಾಡಿದ್ದೇನು?

ಟ್ರೆಂಡಿಂಗ್‌