ಕನ್ನಡ ಸಾಹಿತ್ಯ ಸಮ್ಮೇಳನ | ಅಖಂಡ ಭಾರತದ ಕಲ್ಪನೆ ಮರೆತ ನೆರೆನಾಡು: ಎಚ್‌ಎಸ್‌ವಿ - Vistara News

ಕ ಸಾ ಪ

ಕನ್ನಡ ಸಾಹಿತ್ಯ ಸಮ್ಮೇಳನ | ಅಖಂಡ ಭಾರತದ ಕಲ್ಪನೆ ಮರೆತ ನೆರೆನಾಡು: ಎಚ್‌ಎಸ್‌ವಿ

ಪ್ರಭುಶಕ್ತಿ ಹಾಗೂ ಪ್ರಜಾಶಕ್ತಿಗಳೆರಡೂ ಸೇರಿರುವ ಈ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ನಾಡು ಎದುರಿಸುತ್ತಿರುವ ಹಲವು ಬಿಕ್ಕಟ್ಟುಗಳನ್ನು ಚರ್ಚೆ ಮಾಡಬೇಕು ಎಂದು ಕವಿ, ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಎಚ್‌ ಎಸ್‌ ವೆಂಕಟೇಶಮೂರ್ತಿ ನುಡಿದರು.

VISTARANEWS.COM


on

hsv haveri
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾವೇರಿ: ನಮ್ಮ ರಾಜ್ಯದ ಪಕ್ಕದ ಪ್ರಾಂತ್ಯದವರು ಅಖಂಡ ಭಾರತದ ಕಲ್ಪನೆಯನ್ನೇ ಮರೆತವರಂತೆ ವರ್ತಿಸುತ್ತಿದ್ದಾರೆ. ಇದು ನಾಡಿಗೆ ಸಂಬಂಧಿಸಿದಂತೆ ನಾವು ಎದುರಿಸುತ್ತಿರುವ ಅತ್ಯಂತ ಮುಖ್ಯವಾದ ಮೊದಲ ಬಿಕ್ಕಟ್ಟು ಎಂದು ನಿಕಟಪೂರ್ವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷ, ಕವಿ ಎಚ್‌.ಎಸ್‌ ವೆಂಕಟೇಶಮೂರ್ತಿ ಹೇಳಿದರು.

ಇದನ್ನು ಇಲ್ಲಿ ಸೇರಿರುವ ಪ್ರಭುಶಕ್ತಿ ಮತ್ತು ಪ್ರಜಾಶಕ್ತಿಯ ಗಮನಕ್ಕೆ ತರಲು ಬಯಸುತ್ತೇನೆ. ಎರಡನೆಯ ಸಮಸ್ಯೆಯಾಗಿ ಕನ್ನಡ ಮಾಧ್ಯಮ ಶಾಲೆಗಳ ಸಂಖ್ಯೆ ದಿನೇ ದಿನೆ ಕಡಿಮೆಯಾಗುತ್ತಿದೆ. ಇದು ಕನ್ನಡಕ್ಕೆ ಬಹು ದೊಡ್ಡ ಕುತ್ತು. ಇದನ್ನು ಸರಿಪಡಿಸಿಕೊಳ್ಳಬೇಕು. ಈ ಮಹಾಸಭೆಯಲ್ಲಿ ರಾಜಕಾರಣದ ಕ್ಷಾತ್ರಶಕ್ತಿಯಿದೆ. ಸಾಹಿತ್ಯದ ಚಿಂತನದ್ರವ್ಯವಿದೆ. ಕನ್ನಡದ ಅಭಿಮಾನದ ಅಸ್ಮಿತೆಯಿದೆ. ಎರಡು ವರ್ಷ ಹಿಂದೆ ನಾಡು ನುಡಿಗೆ ಸಂಬಂಧಿಸಿದ ಅನೇಕ ಬಿಕ್ಕಟ್ಟುಗಳನ್ನು ಚರ್ಚೆ ಮಾಡಲಾಯಿತು. ಈ ಸಮ್ಮೇಳನದಲ್ಲೂ ಅದು ಮುಂದುವರಿಯುತ್ತಿದೆ ಎಂದು ಎಚ್‌ಎಸ್‌ವಿ ನುಡಿದರು.

ಇದನ್ನೂ ಓದಿ | ಕನ್ನಡ ಸಾಹಿತ್ಯ ಸಮ್ಮೇಳನ | ಶೀಘ್ರದಲ್ಲೇ ಕನ್ನಡ ಸಮಗ್ರ ಭಾಷಾ ಕಾಯ್ದೆ ಅನುಷ್ಠಾನ: ಸಿಎಂ ಬಸವರಾಜ ಬೊಮ್ಮಾಯಿ

ಕನ್ನಡದಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಶ್ರೇಷ್ಠವಾದ ಸಾಹಿತ್ಯ ಸೃಷ್ಟಿಯಾಗಿದೆ. ಹಿಂದೆ ಸಾಹಿತ್ಯ ಎಂದರೆ ಮಾಸ್ತಿ ಬೇಂದ್ರೆ ಕುವೆಂಪು ಕಾರಂತ ಎನ್ನುತ್ತಿದ್ದೆವು. ಈಗ ಅಂಥ ಅನೇಕ ಘನವಾದ ಲೇಖಕರು ಇದ್ದಾರೆ. ಅನೇಕ ಅಪರೂಪದ ಕೃತಿಗಳು ಇಂಗ್ಲಿಷ್‌ಗೆ ಅನುವಾದಗೊಂಡು ಜಗತ್ತಿನಾದ್ಯಂತ ಕನ್ನಡದ ಬಗೆಗೆ ಗಮನ ಸೆಳೆದಿವೆ. ಪೆಂಗ್ವಿನ್‌ನಂಥ ಶ್ರೇಷ್ಠ ಸಂಸ್ಥೆ ಕೂಡ ಕನ್ನಡ ಪುಸ್ತಕಗಳನ್ನು ಪ್ರಕಟಿಸಲು ಇಷ್ಟಪಡುತ್ತಿದೆ. ಇತ್ತೀಚೆಗೆ ಬಂದ ಒಂದು ಕನ್ನಡದ ಸಿನಿಮಾ ಜಗತ್ತಿನ ಗಮನ ಸೆಳೆದು ಅಲ್ಲೋಲಕಲ್ಲೋಲ ಉಂಟುಮಾಡಿತು. ಇದನ್ನೆಲ್ಲ ನಾವು ಇಲ್ಲಿ ಅಭಿಮಾನದಿಂದ ಸ್ಮರಿಸಬೇಕು. ಇಲ್ಲಿ ಅಂಥ ಅಪೂರ್ವವಾದ ಕೃತಿಗಳ ಸಂಗಮ, ಅವುಗಳ ಬಗ್ಗೆ ಚರ್ಚೆಯಾಗಬೇಕು ಎಂದು ಎಚ್‌ಎಸ್‌ವಿ ಹೇಳಿದರು.

ಕಳೆದ ಎರಡು ವರ್ಷಗಳ ಕಾಲ ಕೊರೊನಾದಿಂದಾಗಿ ಹೊರಗೆ ಓಡಾಡಿ ಕನ್ನಡದ ಕೆಲಸ ಮಾಡಲಾಗಲಿಲ್ಲ. ಆದರೆ ಮನೆಯಲ್ಲೇ ಕುಳಿತು ʼಬುದ್ಧಚರಣʼ ಮಹಾಕಾವ್ಯವನ್ನು ಬರೆದಿದ್ದೇನೆ. ಅದನ್ನು ಇಂದು ಕನ್ನಡ ಓದುಗರಿಗೆ ಸಮರ್ಪಿಸುತ್ತಿದ್ದೇನೆ ಎಂದರು.

ವೇದಿಕೆಯಲ್ಲಿ 86ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಾ.ದೊಡ್ಡರಂಗೇಗೌಡ, ಮುಖ್ಯಮಂತ್ರಿ ಮಹೇಶ ಜೋಶಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಮುಂತಾದವರಿದ್ದರು.

ಇದನ್ನೂ ಓದಿ | ಕನ್ನಡ ಸಾಹಿತ್ಯ ಸಮ್ಮೇಳನ | ಸಾಂವಿಧಾನಿಕ ಚೌಕಟ್ಟಿನಲ್ಲೇ ಕನ್ನಡ ನಾಡು, ನೆಲದ ರಕ್ಷಣೆ: ಬಿ.ಎಸ್‌. ಯಡಿಯೂರಪ್ಪ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ ಸಾ ಪ

ಕನ್ನಡಿಗರು ಯುದ್ಧ ಟ್ಯಾಂಕರ್ ಇದ್ದಂಗೆ, ಎದುರಿಗೆ ಬಂದ್ರೆ ಅಪ್ಪಚ್ಚಿ: ಟಿ.ಎ. ನಾರಾಯಣ ಗೌಡ

ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕರವೇ ಸಂಸ್ಥಾಪಕ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣ ಗೌಡರಿಗೆ ಮಂಗಳವಾರ ಸಂಜೆ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

VISTARANEWS.COM


on

Kuvempu Sirigannada Endowment Award to TA Narayana Gowda
Koo

ಬೆಂಗಳೂರು: ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರಿಗೆ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ಮಂಗಳವಾರ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ ಮಾಡಲಾಯಿತು.

ಈ ವೇಳೆ ಮಾತನಾಡಿದ ಕರವೇ ಸಂಸ್ಥಾಪಕ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಅವರು, ನಾನು ಹೋರಾಟದ ಹಾದಿಯಲ್ಲಿ ಬರಲು ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ ಹಾಗೂ ಡಾ. ರಾಜಕುಮಾರ್‌ ಅವರ ಚಿತ್ರಗಳು ಕಾರಣ. ಕುವೆಂಪು ಅವರು ಕರ್ನಾಟಕ ರಕ್ಷಣಾ ವೇದಿಕೆಯ ಬಹುದೊಡ್ಡ ಆದರ್ಶವಾಗಿದ್ದಾರೆ. ಅವರ ಸಾಹಿತ್ಯ, ವಿಚಾರಧಾರೆಗಳನ್ನು ನಮ್ಮ ಕಾರ್ಯಕರ್ತರೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ತಿಳಿಸಿದರು.

ಕನ್ನಡದ ಶತ್ರುಗಳಿಗೆ ಒಂದು ಮಾತು ಹೇಳುತ್ತಿರುತ್ತೇನೆ. ಕನ್ನಡದ ನಾಡು, ನುಡಿ ವಿಚಾರದಲ್ಲಿ ನಾನು ಯುದ್ಧ ಟ್ಯಾಂಕರ್‌ ಇದ್ದ ಹಾಗೆ, ಅಡ್ಡಿ ಬರಬೇಡಿ ಅಪ್ಪಚ್ಚಿ ಆಗಿಬಿಡುತ್ತೀರಾ ಎಂದು ಕುವೆಂಪು ಅವರು ಹೇಳುತ್ತಿದ್ದರು. ಕುವೆಂಪು ಪದ್ಯ ʼಮನುಜ ಮತ ವಿಶ್ವಪಥʼ ನನ್ನ ಅಚ್ಚುಮೆಚ್ಚಿನದ್ದಾಗಿದೆ. ಸಿಲುಕದಿರಿ ಮತವೆಂಬ ಮೋಹದಜ್ಞಾನಕ್ಕೆ, ಮತಿಯಿಂದ ದುಡಿಯಿರೈ ಲೋಕಹಿತಕೆ, ಆ ಮತದ ಈ ಮತದ ಹಳೆ ಮತದ ಸಹವಾಸ ಸಾಕಿನ್ನು ಸೇರಿರೈ ಮನುಜ ಮತಕೆ; ಓ ಬನ್ನಿ ಸೋದರರೇ ವಿಶ್ವಪಥಕ್ಕೆ! ಎಂಬ ಅವರ ಪದ್ಯದ ನುಡಿಗಳು ನನಗೆ ಬಹಳ ಇಷ್ಟ. ಇಂತಹ ರೋಮಾಂಚನಕಾರಿ ಪದ್ಯಗಳ ನುಡಿಗಳು ನನ್ನಂತಹವರಿಗೆ ಹೋರಾಟದ ಕಿಚ್ಚು ತುಂಬಿವೆ ಎಂದು ಹೇಳಿದರು.

ದಲಿತ, ರೈತ, ಕಮ್ಯುನಿಸ್ಟ್‌ ಸೇರಿ ಎಲ್ಲ ಚಳವಳಿಗೆ ಆದರ್ಶ ಎಂದು ಯಾರಾದರೂ ಇದ್ದರೆ ಅದು ಕುವೆಂಪು ಅವರು ಮಾತ್ರ. ಅವರು ಎಲ್ಲ ಹೋರಾಟಗಾರರಿಗೆ ಸ್ಫೂರ್ತಿ. ಕನ್ನಡಕ್ಕೆ ಪ್ರಥಮ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟ ಅಂತಹ ಮಹಾಕವಿಯ ಹೆಸರಿನ ಪ್ರಶಸ್ತಿಯನ್ನು ನಾನು ಸ್ವೀಕರಿಸಿರುವುದು ನನ್ನ ಜೀವನದಲ್ಲಿ ಎಂದಿಗೂ ಮರೆಯಲಾರಂದತಹ, ಸುವರ್ಣ ಅಕ್ಷರಗಳಲ್ಲಿ ಬರೆದಿಡುವ ಗಳಿಗೆಯಾಗಿದೆ. ಈ ಪ್ರಶಸ್ತಿಯನ್ನು ನನಗೆ ಜನ್ಮ ಕೊಟ್ಟ ತಂದೆ-ತಾಯಿ ಅರ್ಪಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ | ಮಾನವೀಯ ಮೌಲ್ಯದ ಮೇರು ಸಂತ ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ

ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ: ಕೋಡಿಮಠ ಶ್ರೀ

ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮಾತನಾಡಿ, ನಮ್ಮ ಕನ್ನಡನಾಡಿನಲ್ಲಿ ಅನೇಕ ಸಾಹಿತಿಗಳು, ವೀರರು, ಶೂರರು, ಹೋರಾಟಗಾರರು, ಧೀರರು ಆಗಿ ಹೋಗಿದ್ದಾರೆ. ಅಂತಹವರಲ್ಲಿ ನಮ್ಮ ನಾರಾಯಣ ಗೌಡರು ಕೂಡ ಒಬ್ಬರು. ಅವರ ತಂದೆಯವರು ಕೂಡ ಬಹಳ ವಿನಯವಂತರು. ಅದೇ ಗುಣ ನಮ್ಮ ನಾರಾಯಣ ಗೌಡರಲ್ಲಿದೆ. ಆದರೆ, ಸ್ವಲ್ಪ ವ್ಯತ್ಯಾಸವಾದರೆ ಆತ ಹುಲಿಯಾಗುತ್ತಾನೆ. ನಮ್ಮ ದೃಷ್ಟಿಯಲ್ಲಿ ವಾರಿಧಿ ವಾರಿಧಿಯೇ, ಆಕಾಶ, ಆಕಾಶವೇ. ಸಮುದ್ರ ಮತ್ತು ಆಕಾಶವನ್ನು ಹೋಲಿಕೆ ಮಾಡಲು ಆಗಲ್ಲ. ಹೀಗಾಗಿ ನಾರಾಯಣ ಗೌಡ ಅವರಿಗೆ ಅವರೇ ಹೋಲಿಕೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕನ್ನಡ ನೆಲ, ಜಲಕ್ಕಾಗಿ ಹೋರಾಟ ಮಾಡಿದ ಡಾ. ರಾಜಕುಮಾರ್‌ ಅವರನ್ನು ಬಿಟ್ಟರೆ ನಮ್ಮ ನಾರಾಯಣಗೌಡರೇ ಅಂತಹ ಸ್ಥಾನ ಪಡೆದಿದ್ದಾರೆ. ಇನ್ನು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ತಾವು ಮಾಡಿದ ಒಳ್ಳೆ ಕೆಲಸಗಳನ್ನು ಮುಂದುವರಿಸಲು ನಾರಾಯಣಗೌಡರ ರೂಪದಲ್ಲಿ ಕೆಂಪೇಗೌಡರೇ ಬಂದಿದ್ದಾರೆ. ನಾಡು, ನುಡಿ, ಜಲದ ರಕ್ಷಣೆಗೆ ನಾರಾಯಣ ಗೌಡರು ಕಟಿಬದ್ಧರಾಗಿದ್ದು, ಅವರಿಗೆ ಎಲ್ಲ ದೈವಗಳ ಆಶೀರ್ವಾದ ಇರುತ್ತದೆ ತಿಳಿಸಿದರು.

ಕಸಾಪ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹುಕ್ಕೇರಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕಾರ್ಯಕ್ರಮದಲ್ಲಿ ಹಿರಿಯ ವಿದ್ವಾಂಸರಾದ ಪಂಪ ನಾಗರಾಜಯ್ಯ, ನ್ಯಾಯಮೂರ್ತಿ ಅರಳಿ ನಾಗರಾಜ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಟಿ.ಎ. ನಾರಾಯಣ ಗೌಡರು ಸ್ವೀಕರಿಸಿದ ಮೊಟ್ಟ ಮೊದಲ ಪ್ರಶಸ್ತಿ

ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

Continue Reading

ಕ ಸಾ ಪ

ಡಿ. 26ರಂದು ಟಿ.ಎ. ನಾರಾಯಣ ಗೌಡರಿಗೆ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼ ಪ್ರದಾನ

ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಡಿ.26 ರಂದು ಸಂಜೆ 5.30ಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ ಅವರಿಗೆ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

VISTARANEWS.COM


on

TA Narayana Gowda
Koo

ಬೆಂಗಳೂರು: ನಾಡಿನ ಅಪರೂಪದ ಕನ್ನಡ ಸೇನಾನಿ, ಕನ್ನಡಕ್ಕೆ ಸದಾ ಮಿಡಿವ ಚೈತನ್ಯದ ಚಿಲುಮೆ, ಕರ್ನಾಟಕ ರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಟಿ.ಎ. ನಾರಾಯಣ ಗೌಡ (TA Narayana Gowda) ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ʼಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿʼಗೆ ಆಯ್ಕೆಯಾಗಿದ್ದಾರೆ. ಇವರಿಗೆ ಡಿಸೆಂಬರ್ 26 ರಂದು ಸಂಜೆ 5.30ಕ್ಕೆ ನಗರದ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ’ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

ಕನ್ನಡ ನೆಲ, ಜಲ, ಕನ್ನಡಿಗರ ನೆಮ್ಮದಿಯ ಬದುಕಿಗಾಗಿ ಕಳೆದ 35 ವರ್ಷಗಳಿಂದ ಹೋರಾಟ ನಡೆಸುತ್ತಿರುವ ಟಿ.ಎ. ನಾರಾಯಣ ಗೌಡರು ಇದುವರೆಗೂ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಯಾವುದೇ ಪುರಸ್ಕಾರವನ್ನೂ ಸ್ವೀಕರಿಸಿಲ್ಲ. ಆದರೆ, ಕನ್ನಡ ಸಾಹಿತ್ಯ ಪರಿಷತ್ತಿನ ಮೇಲಿನ ಅಭಿಮಾನ ಮತ್ತು ಕುವೆಂಪು ಅವರ ಸಾಹಿತ್ಯ, ವರನಟ ರಾಜಕುಮಾರ್ ಅವರ ಸಿನಿಮಾಗಳ ಪ್ರೇರಣೆಯಿಂದ ಹೋರಾಟಕ್ಕೆ ಬಂದ ಹಿನ್ನೆಲೆಯಿಂದ ತಮ್ಮ ಜೀವನದ ಮೊಟ್ಟ ಮೊದಲ ಪ್ರಶಸ್ತಿಯಾಗಿ ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಯನ್ನು ಸ್ವೀಕರಿಸುತ್ತಿದ್ದಾರೆ.

ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ವಹಿಸಲಿದ್ದು, ಡಾ.ಹಂಪನಾಗರಾಜಯ್ಯನವರು ಉದ್ಘಾಟಿಸಲಿದ್ದಾರೆ. ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿಗಳಾದ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದು, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡರು ಅಭಿನಂದನಾ ನುಡಿಗಳನ್ನು ಆಡಲಿದ್ದಾರೆ. ಕೋಡಿ ಮಠದ ಶ್ರೀಗಳಾದ ಶ್ರೀ ಶಿವಾನಂದ ಶಿವಯೋಗಿ ಸ್ವಾಮೀಜಿ ಮತ್ತು ಹುಕ್ಕೇರಿಯ ಶ್ರೀ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಕರ್ನಾಟಕ ಜನಪದ ಸೇವಾಟ್ರಸ್ಟ್‌ ಸಹಕಾರದೊಂದಿಗೆ ಈ ಕಾರ್ಯಕ್ರಮವನ್ನು ಕಸಾಪ ಹಮ್ಮಿಕೊಂಡಿದೆ.

ಇದನ್ನೂ ಓದಿ | Raja Marga Column : ಸಾವಿರದ ಹಾಡುಗಳ ಅಮರ ಕವಿ ಶೈಲೇಂದ್ರ; ಎಲ್ಲ 900 ಹಾಡು ಸೂಪರ್‌ಹಿಟ್

ಕಾರ್ಯಕ್ರಮಕ್ಕೂ ಮುನ್ನಾ ಸಂಜೆ 4:30ಕ್ಕೆ ಖ್ಯಾತ ಗಾಯಕರಾದ ಡಾ.ಶಮಿತಾ ಮಲ್ನಾಡ್ ಮತ್ತು ಆನಂದ ಮಾದಲಗೆರೆಯವರ ತಂಡದಿಂದ ಗೀತ ಗಾಯನ ಕಾರ್ಯಕ್ರಮವಿದ್ದು, ದಿವ್ಯಾ ಆಲೂರು ಜೊತೆಯಲ್ಲಿ ಟಿ. ತಿಮ್ಮೇಶ್ ಈ ಕಾರ್ಯಕ್ರಮದ ನಿರೂಪಣೆಯನ್ನು ಮಾಡಲಿದ್ದಾರೆ. ಕಸಾಪ ಗೌರವ ಕಾರ್ಯದರ್ಶಿಗಳಾದ ನೇ ಭ ರಾಮಲಿಂಗಶೆಟ್ಟಿ ಮತ್ತು ಡಾ ಪದ್ಮಿನಿ ನಾಗರಾಜು ಹಾಗೂ ಕೋಶಾಧ್ಯಕ್ಷರಾದ ಬಿ. ಎಂ. ಪಟೇಲ್ ಪಾಂಡು ಮತ್ತಿತರರು ಉಪಸ್ಥಿತರಿರಲಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ ಸಾ ಪ

HD Deve Gowda: ಎಚ್.ಡಿ. ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

HD Deve Gowda: ಬೆಂಗಳೂರಿನ ನಿವಾಸದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರಿಗೆ ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ ಮಾಡಲಾಯಿತು.

VISTARANEWS.COM


on

Ex PM HD Devegowda
Koo

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ (HD Deve Gowda) ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯನ್ನು ಸೋಮವಾರ ಪ್ರದಾನ ಮಾಡಲಾಯಿತು. ಮಾಜಿ ಪ್ರಧಾನಿಗಳ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಎಂ.ಎನ್. ವೆಂಕಟಾಚಲಯ್ಯ ಹಾಗೂ ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ವೇಳೆ ಮಾತನಾಡಿದ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅವರು, ನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ದೇಶದ ಮೊದಲ ಕನ್ನಡಿಗ ಪ್ರಧಾನಮಂತ್ರಿ, ರಾಜಕೀಯ ಮುತ್ಸದ್ಧಿ ಮತ್ತು ದೂರದೃಷ್ಟಿಯ ಆಡಳಿತಗಾರ ದೇವೇಗೌಡರಿಗೆ ಸಂದಿರುವುದು ನನಗೆ ಬಹಳ ಸಂತಸ ಉಂಟು ಮಾಡಿದೆ. ಅತ್ಯುನ್ನತ ಸಾಧಕರಿಗೆ ಪ್ರಶಸ್ತಿ ಸಂದಿದೆ ಎಂದು ಹೇಳಿದರು.

ನಾಡೋಜ ಮಹೇಶ್ ಜೋಶಿ ಅವರು ಮಾತನಾಡಿ, ರಾಜ್ಯ, ದೇಶಕ್ಕೆ ಮಹಾನ್ ಕೊಡುಗೆ ನೀಡಿದ ದೇವೇಗೌಡರಿಗೆ ನಾಲ್ವಡಿ ಪ್ರಶಸ್ತಿ ನೀಡುತ್ತಿರುವುದು ಆ ಪ್ರಶಸ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿಯ ಹರಿಕಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಜರಾಮರರಾದರೆ, ದೇವೇಗೌಡರು ಸ್ವಾತಂತ್ರೋತ್ತರ ಭಾರತದಲ್ಲಿ ಆರು ದಶಕಗಳ ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ನಾಡು, ದೇಶದ ಅಭಿವೃದ್ಧಿಗೆ ಆವಿಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದರು.

ಮಾಜಿ ಪ್ರಧಾನಿ ಸಂತಸ

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ ನ್ಯಾ. ಎಂ.ಎನ್. ವೆಂಕಟಾಚಲಯ್ಯ, ನಾಡೋಜ ಮಹೇಶ್ ಜೋಶಿ ಅವರು ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಇವರಿಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ಇದನ್ನೂ ಓದಿ | CM Siddaramaiah : ಪ್ರಧಾನಿ ರಾಜಕೀಯ ಭಾಷಣ ಸುಳ್ಳಿನ ಕಂತೆ; ಇಂದು ದೇಶವೇ ದಿವಾಳಿಯಾಗಿದೆ ಎಂದ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು, ಕನ್ನಡದ ಕಟ್ಟಾಳುಗಳು ಹಾಜರಿದ್ದು, ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು.

Continue Reading

ಕ ಸಾ ಪ

ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ನಾ. ಡಿಸೋಜ ಹಾಗೂ ದು. ಸರಸ್ವತಿ ಆಯ್ಕೆ

Kannada sahitya parishat: ಸಂಚಲನ ಬಳಗದವರು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಫಾದರ್‌ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

VISTARANEWS.COM


on

By

DSouza and Du Saraswati
ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಮತ್ತು ಹಿರಿಯ ಸಾಹಿತಿ ನಾ. ಡಿಸೋಜ
Koo

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು‌ (Kannada Sahitya Parishat) 2023ನೇ ಸಾಲಿನ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಸಾಹಿತಿ ನಾ. ಡಿಸೋಜ ಹಾಗೂ ಸಾಮಾಜಿಕ ಹೋರಾಟಗಾರ್ತಿ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಬಂಧ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ (Dr. Nadoja Mahesh Joshi) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಬಾರಿ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ, ಪರಿಷತ್ತಿನ ಪಂಪ ಸಭಾಭವನದಲ್ಲಿ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ಅವರ ನೇತೃತ್ವದಲ್ಲಿ ಆಯ್ಕೆ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ದತ್ತಿ ದಾನಿಗಳ ಆಶಯದಂತೆ ಪ್ರತಿ ವರ್ಷ ಇಬ್ಬರು ಸಾಧಕರಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಒಬ್ಬರು ಕನ್ನಡ ಕ್ರೈಸ್ತ ಸಾಧಕರಿಗೆ ಮತ್ತು ಇನ್ನೊಬ್ಬರು ಕನ್ನಡ ಜನಪರ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿದವರನ್ನು ಆಯ್ಕೆ ಮಾಡಲಾಗುತ್ತದೆ.

ಅದರಂತೆ ಈ ಬಾರಿಯ ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಗಾಗಿ ಹಿರಿಯ ಕಥೆಗಾರ, ಸಾಹಿತಿಗಳಾಗಿರುವ ಕ್ರೈಸ್ತ ಧರ್ಮಕ್ಕೆ ಸೇರಿದ ಶಿವಮೊಗ್ಗದ ಸಾಗರದ ನಾ. ಡಿಸೋಜ ಹಾಗೂ ಕನ್ನಡ ಪರ ಹೋರಾಟಗಾರ್ತಿ, ರಂಗಕರ್ಮಿ ಬೆಂಗಳೂರಿನ ದು. ಸರಸ್ವತಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಯು ತಲಾ ಹತ್ತು ಸಾವಿರ ರೂ.ನಗದು, ಫಲ ತಾಂಬೂಲ ಹಾಗೂ ಸ್ಮರಣಿಕೆಯನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ಅವರು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರಶಸ್ತಿಯನ್ನು ಸಂಚಲನ ಬಳಗದವರು 2017ರಲ್ಲಿ ಈ ದತ್ತಿ ನಿಧಿ ಸ್ಥಾಪಿಸಿದ್ದರು. ಇದುವರೆಗೆ 12 ಜನರಿಗೆ ಕನ್ನಡ ಸಾಹಿತ್ಯ ಪರಿಷತ್ತು ಫಾದರ್ ಚಸರಾ ಕನ್ನಡ ಸಂಸ್ಕೃತಿ ದತ್ತಿ ಪ್ರದಾನ ಮಾಡಲಾಗಿದೆ. ಪ್ರಸ್ತುತ ದತ್ತಿ ಪ್ರಶಸ್ತಿಯನ್ನು ದತ್ತಿ ದಾನಿಗಳು ಆಶಯದಂತೆ ಒಬ್ಬ ಕನ್ನಡ ಕ್ರೈಸ್ತ ಸಾಧಕರಿಗೆ ಹಾಗೂ ಇನ್ನೊಬ್ಬರು ಕನ್ನಡ ಪರ ಹೋರಾಟಗಾರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದೆ.

ಇದನ್ನೂ ಓದಿ: ಕನ್ನಡ ಚಳುವಳಿ ವೀರಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಜಿ.ಕೆ. ಸತ್ಯ ಆಯ್ಕೆ

ನಿತ್ಯ ಬದುಕಿನಲ್ಲಿ ಕನ್ನಡ ನಾಡು- ನುಡಿಯ ಕುರಿತು ಅಪಾರ ಗೌರವ ಹೊಂದಿರುವ ಹಿರಿಯ ಸಾಧಕರಿಗೆ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸುತ್ತದೆ. ಪ್ರಶಸ್ತಿ ಪುರಸ್ಕಾರ ಪಡೆದ ಇಬ್ಬರೂ ತಮ್ಮ ಕ್ಷೇತ್ರದಲ್ಲಿ ನಿರಂತರ ಸೇವೆ ಮಾಡುತ್ತಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು ಪ್ರಶಸ್ತಿ ಪುರಸ್ಕೃತರಿಂದ, ಕನ್ನಡ ನಾಡಿನ ನೆಲಮೂಲ ಸಂಸ್ಕೃತಿಯನ್ನು ಉಳಿಸಿ- ಬೆಳೆಸುವಲ್ಲಿ ನಿರಂತರ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದರು.

ಈ ಆಯ್ಕೆ ಸಮಿತಿಯಲ್ಲಿ ದತ್ತಿ ದಾನಿಗಳಾದ ಸಂಚಲನ ಬಳಗದವರ ಪರವಾಗಿ ರೀಟಾ ರೀನಿ ಹಾಗೂ ರಫಾಯಲ್ ರಾಜ್ ಸೇರಿ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷರಾದ ಡಾ. ಬಿ.ಎಂ.ಪಟೇಲ್ ಪಾಂಡು ಅವರು ಉಪಸ್ಥಿತರಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Continue Reading
Advertisement
viral news
ಕ್ರಿಕೆಟ್1 min ago

Viral News: ಖಾಸಗಿ ಭಾಗಕ್ಕೆ ಚೆಂಡು ಬಡಿದು ಬಾಲಕ ಸಾವು

Sunita Williams
ವಿದೇಶ17 mins ago

Sunita Williams: 3ನೇ ಬಾರಿಗೆ ಬಾಹ್ಯಾಕಾಶಕ್ಕೆ ತೆರಳಲು ಸುನೀತಾ ವಿಲಿಯಮ್ಸ್‌ ಸಜ್ಜು

Namma Metro
ಬೆಂಗಳೂರು31 mins ago

Namma Metro : ದೆಹಲಿ ನಂತರ ನಮ್ಮ ಮೆಟ್ರೋದಲ್ಲೂ ಯುವಕ-ಯುವತಿಯ ಡಿಂಗ್‌ ಡಾಂಗ್‌!

Prajwal Revanna Case Who leaked the pen drive Devaraje Gowda gives evidence to SIT
ಕ್ರೈಂ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್‌ ತಡೆಯಾಜ್ಞೆ

ICSE Results 202
ಶಿಕ್ಷಣ1 hour ago

CISCE Results 2024: ಸಿಐಎಸ್‌ಸಿಇಯ 10 & 12ನೇ ತರಗತಿಯ ಫಲಿತಾಂಶ ಪ್ರಕಟ; ಹೀಗೆ ಪರಿಶೀಲಿಸಿ

MS Dhoni
ಕ್ರಿಕೆಟ್1 hour ago

MS Dhoni: ಧೋನಿಯ ಕ್ಲೀನ್​ ಬೌಲ್ಡ್​ ಕಂಡು ಬೇಸರಗೊಂಡ ಅಭಿಮಾನಿಗಳು; ವಿಡಿಯೊ ವೈರಲ್​

Viral News
ವೈರಲ್ ನ್ಯೂಸ್1 hour ago

Viral News: ಅವಳಿ-ತ್ರಿವಳಿ ಅಲ್ಲ.. ಏಕಕಾಲದಲ್ಲಿ ಐದು ಮಕ್ಕಳಿಗೆ ಜನ್ಮಕೊಟ್ಟ ಮಹಾತಾಯಿ

Kanyakumari Tour
ಪ್ರವಾಸ1 hour ago

Kanyakumari Tour: ತುಂಬಾ ದುಬಾರಿ ಏನಿಲ್ಲ, ನೀವೂ ಮಾಡಬಹುದು ಕನ್ಯಾಕುಮಾರಿ ಪ್ರವಾಸ

Cauvery Theatre bengaluru another single screen close
ಸಿನಿಮಾ2 hours ago

Cauvery Theatre: ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ʻಕಾವೇರಿʼ ಥಿಯೇಟರ್! ಮುಂದೇನು?

Bomb Threat
ದೇಶ2 hours ago

Bomb Threat: ದೆಹಲಿ ಬಳಿಕ ಇದೀಗ ಅಹಮದಾಬಾದ್​ನ ಶಾಲೆಗಳಿಗೂ ಬಾಂಬ್​ ಬೆದರಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina bhavishya
ಭವಿಷ್ಯ9 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ19 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ20 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ20 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ4 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

ಟ್ರೆಂಡಿಂಗ್‌