Karave Meeting: ಹೊಸ ಪ್ರಾದೇಶಿಕ ಪಕ್ಷದ ಸುಳಿವು ನೀಡಿದ ಕರವೇ ನಾರಾಯಣಗೌಡ - Vistara News

ಪ್ರಮುಖ ಸುದ್ದಿ

Karave Meeting: ಹೊಸ ಪ್ರಾದೇಶಿಕ ಪಕ್ಷದ ಸುಳಿವು ನೀಡಿದ ಕರವೇ ನಾರಾಯಣಗೌಡ

Karave Meeting: ಬೀದರ್‌ನ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಕರವೇ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರ ಸಭೆ ನಡೆಯಿತು. ಈ ವೇಳೆ ಸಂಘಟನೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಅವರು ಮಾತನಾಡಿದ್ದು, ರಾಜ್ಯದಲ್ಲಿ ಅಪ್ಪಟ ಕನ್ನಡಿಗರ ಪಕ್ಷ ಇಲ್ಲ, ನಮಗೆ ಒಂದು ಪಕ್ಷ ಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Karave Meeting
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೀದರ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿವೆ. ಭಾಲ್ಕಿಯಲ್ಲಿ ಮರಾಠಿಗರ ಬೃಹತ್‌ ಸಮಾವೇಶ ನಡೆದ ಬೆನ್ನಲ್ಲೇ ಆ್ಯಕ್ಟೀವ್ ಆಗಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಅವರು, ಬೀದರ್‌ನ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಕರವೇ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರ ಸಭೆ ನಡೆಸಿದ್ದಾರೆ. ಈ ವೇಳೆ ಎಂಇಎಸ್‌ ವಿರುದ್ಧ ಕಿಡಿ ಕಾರಿರುವ ಅವರು, ಕನ್ನಡ ನಾಡು, ನುಡಿ, ಜಲ ರಕ್ಷಣೆಗಾಗಿ ಹೊಸ ಪ್ರಾದೇಶಿಕ ಪಕ್ಷ ಕಟ್ಟುವ ಸುಳಿವು ನೀಡಿದ್ದಾರೆ.

ಗಡಿ ಭಾಗದಲ್ಲಿ ಕನ್ನಡ ವಿರೋಧಿಗಳ ಸದ್ದಡಗಿಸಲು ಟಿ.ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರವೇ ಸದಸ್ಯತ್ವ ಅಭಿಯಾನ ಕೂಡ ಕೈಗೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ನಾರಾಯಣಗೌಡರು, ಬೀದರ್‌ನಲ್ಲಿ ನಮ್ಮ ಕಾರ್ಯಕರ್ತರಿಗೆ ಕೊರತೆಯಿಲ್ಲ. ಬೀದರ್‌ನಿಂದ ಚಾಮರಾಜನಗರವರೆಗೆ ನಮ್ಮ ಕಾರ್ಯಕರ್ತರು ಗಟ್ಟಿಯಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಪ್ಪಟ ಕನ್ನಡಿಗರ ಪಕ್ಷ ಇಲ್ಲ, ನಮಗೆ ಒಂದು ಪಕ್ಷ ಬೇಕು. ಅಪ್ಪಟ ಕನ್ನಡಿಗರ ಪಕ್ಷ ಕಟ್ಟುವುದು ಕರವೇಯಿಂದ ಮಾತ್ರ ಸಾಧ್ಯ ಎಂದು ಹೇಳುವ ಮೂಲಕ ಹೊಸ ಪ್ರಾದೇಶಿಕ ಪಕ್ಷದ ಸ್ಥಾಪನೆ ಸುಳಿವು ನೀಡಿದರು.

ಇದನ್ನೂ ಓದಿ | ಮೈಸೂರಲ್ಲಿ ಸಿದ್ದುಗೆ ಟಕ್ಕರ್‌, ಕರಾವಳಿಯಲ್ಲಿ ಅಲೆ; ನಾಳೆ ಕರ್ನಾಟಕದಲ್ಲಿ ಮೋದಿ ಹವಾ, ಇಲ್ಲಿದೆ ವಿವರ

ಎಂಇಎಸ್ ಕಥೆ ಮುಗಿದು ಹೋಯಿತು, ಅವರ ಕಥೆ ಮುಗಿಸಿಬಿಟ್ಟಿದ್ದೇವೆ. ಮೊದಲು 7 ಶಾಸಕರು ಇದ್ದರು, ಇವಾಗ ಅವರ ಕೈಯಲ್ಲಿ ಏನೂ ಇಲ್ಲ. ರಾಜ್ಯದ ಯಾವುದೇ ಭಾಗದಲ್ಲಿ ಅವರಿಗೆ ತಲೆ ಎತ್ತಲು ಬಿಡಲ್ಲ ಎಂದು ಹೇಳಿದರು.

‘ಭಾರತ್‌ ಮಾತಾ ಕಿ ಜೈ’ ಬಿಜೆಪಿ ಅಪ್ಪನ ಮನೆ ಆಸ್ತಿನಾ? ಲಕ್ಷ್ಮಣ ಸವದಿ ಆಕ್ರೋಶ

Laxman Savadi
Lok Sabha Election 2024: Is Bharat Mata Ki Jai Property Of BJP; Laxman Savadi Taunts In Kalaburagi

ಕಲಬುರಗಿ: ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ಅವರು ಭಾರತ್‌ ಮಾತಾ ಕಿ ಜೈ (Bharat Mata Ki Jai) ಎಂಬುದಾಗಿ ಕೂಗುವ ಮೊದಲು “ಖರ್ಗೆಯವರು ತಪ್ಪು ತಿಳಿದುಕೊಳ್ಳಬಾರದು” ಎಂದು ಹೇಳಿರುವುದು ಈಗ ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. “ಕಾಂಗ್ರೆಸ್‌ನಲ್ಲಿ (Congress) ಭಾರತ್‌ ಮಾತಾ ಕಿ ಜೈ ಎಂದು ಕೂಗಲು ಕೂಡ ಅನುಮತಿ ಪಡೆಯಬೇಕಾದ ದುಸ್ಥಿತಿ ಇದೆ” ಎಂದು ಬಿಜೆಪಿ ಟೀಕಿಸಿದ ಬೆನ್ನಲ್ಲೇ ಲಕ್ಷ್ಮಣ ಸವದಿ (Laxman Savadi) ತಿರುಗೇಟು ನೀಡಿದ್ದಾರೆ. “ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆಯು ಬಿಜೆಪಿ (BJP) ಮನೆ ಆಸ್ತಿನಾ” ಎಂದು ಪ್ರಶ್ನಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಲಕ್ಷ್ಮಣ ಸವದಿ, “ವಿನಾಶಕಾಲೆ ವಿಪರೀತ ಬುದ್ಧಿ ಎಂಬಂತಹ ಸ್ಥಿತಿ ಬಿಜೆಪಿಗೆ ಬಂದಿದೆ. ಭಾರತ್‌ ಮಾತಾ ಕಿ ಜೈ ಅನ್ನೋದು ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು, ಅಭಿಮಾನ ಹಾಗೂ ದೇಶಭಕ್ತಿಯಾಗಿದೆ. ಕಾಂಗ್ರೆಸ್‌ನಲ್ಲಿ ಕೂಡ ಭಾರತ್‌ ಮಾತಾ ಕಿ ಜೈ ಎನ್ನುತ್ತೇವೆ. ದೇಶಭಕ್ತಿ, ಘೋಷಣೆಗಳು ಬಿಜೆಪಿಯವರಿಗೆ ಗುತ್ತಿಗೆ ಕೊಡಲಾಗಿದೆಯೇ? ವಂದೇ ಮಾತರಂ ಅನ್ನುತ್ತೇವೆ, ಜೈ ಹಿಂದು ಕೂಡ ಎನ್ನುತ್ತೇವೆ. ನಮ್ಮಲ್ಲಿ ಇವರಿಗಿಂತ ದೇಶಭಕ್ತಿ ಹೆಚ್ಚಿದೆ” ಎಂದು ತಿರುಗೇಟು ನೀಡಿದರು.

“ಬಿಜೆಪಿಯವರ ದೇಶಭಕ್ತಿಯು ತೋರಿಕೆಗೆ ಸೀಮಿತವಾಗಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇ ಕಾಂಗ್ರೆಸ್.‌ 400ಕ್ಕೂ ಅಧಿಕ ಸೀಟು ಗೆದ್ದರೆ ಸಂವಿಧಾನ ಬದಲಾಯಿಸುತ್ತೇವೆ ಎಂಬುದಾಗಿ ಹೇಳುತ್ತಾರೆ. ಹಾಗಾಗಿ, ಬಿಜೆಪಿಯವರೇ ನಿಜವಾದ ದೇಶದ್ರೋಹಿಗಳು. ಸಂವಿಧಾನವನ್ನು ವಿರೋಧಿಸುತ್ತಾರೆ, ಜಾತಿ ವಿರೋಧ ಮಾಡುತ್ತಾರೆ. ಇವರ ಮನಸ್ಥಿತಿಯಿಂದಾಗಿ ದೇಶಕ್ಕೆ ಹಾನಿಯಾಗುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ‘ನನಗೆ ಒಳ್ಳೇ ದಿನಗಳು ಬರುತ್ತವೆ’ಎಂದ ಲಕ್ಷ್ಮಣ್​ ಸವದಿ; ಸಿದ್ದರಾಮಯ್ಯ ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿಯಾ?

ನನ್ನ ಹೆಸರೇ ಲಕ್ಷ್ಮಣ, ಜೈ ಶ್ರೀರಾಮ್‌ ಎನ್ನುವೆ

“ದೇಶದಲ್ಲಿ ಘೋಷಣೆ ಕೂಗಲು ಬಿಜೆಪಿಯವರ ಪರ್ಮಿಷನ್‌ ತೆಗೆದುಕೊಳ್ಳಬೇಕಾ? ಅದೇ ಅವರ ಅಪ್ಪನ ಮನೆ ಆಸ್ತಿಯೇ? ನನ್ನ ಹೆಸರೇ ಲಕ್ಷ್ಮಣ. ರಾಮನ ತಮ್ಮನ ಹೆಸರು ಲಕ್ಷ್ಮಣ. ಜೈ ಶ್ರೀರಾಮ್‌ ಎಂದು ಘೋಷಣೆ ಕೂಗುತ್ತೇವೆ. ಭಾರತ್‌ ಮಾತಾ ಕಿ ಜೈ ಎನ್ನುತ್ತೇವೆ. ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ” ಎಂದರು. ರಾಮೇಶ್ವರಂ ಕೆಫೆ ಸ್ಫೋಟದ ಕುರಿತು ಮಾತನಾಡಿದ ಲಕ್ಷ್ಮಣ ಸವದಿ, “ಪ್ರತಿಯೊಂದು ವಿಷಯದಲ್ಲೂ ರಾಜಕೀಯ ಮಾಡುವುದು ಬಿಜೆಪಿಯವರ ಕೆಲಸ. ಇಂತ ಕೀಳು ರಾಜಕೀಯದಿಂದಾಗಿಯೇ ಅವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರಲ್ಲ” ಎಂದು ವಾಗ್ದಾಳಿ ನಡೆಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Stock Market: ಷೇರು ಪೇಟೆ ತಲ್ಲಣ; ಏಕಾಏಕಿ 700 ಅಂಕ ಕುಸಿದ ನಿಫ್ಟಿ, ಸಾವಿರಾರು ಕೋಟಿ ರೂ. ನಷ್ಟ

Stock Market: ಎನ್‌ಎಸ್‌ಇ ನಿಫ್ಟಿ 50 ದಿನದ ವಹಿವಾಟನ್ನು 22,456.65 ಪಾಯಿಂಟ್‌ಗಳಿಗೆ ಅಂತ್ಯಗೊಳಿಸಿತು. ಇನ್ನು ಬಿಎಸ್‌ಇ ಸೆನ್ಸೆಕ್ಸ್‌ 73,846 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಳಿಸಿತು. ಇದರಿಂದ ಹೂಡಿಕೆದಾರರು ಸಾವಿರಾರು ಕೋಟಿ ರೂ. ನಷ್ಟ ಅನುಭವಿಸಿದರು ಎಂದು ತಿಳಿದುಬಂದಿದೆ. ಕಳೆದ ಕೆಲ ದಿನಗಳಿಂದ ಷೇರು ಮಾರುಕಟ್ಟೆ ವಹಿವಾಟು ಉತ್ತಮವಾಗಿತ್ತು. ಆದರೆ, ಶುಕ್ರವಾರ ದಿಢೀರನೆ ಕುಸಿತ ಕಂಡಿತು.

VISTARANEWS.COM


on

Stock Market
Koo

ಮುಂಬೈ: ಷೇರು ಮಾರುಕಟ್ಟೆಯಲ್ಲಿ (Stock Market) ಶುಕ್ರವಾರ (ಮೇ 3) ತಲ್ಲಣ ಸೃಷ್ಟಿಯಾಗಿದ್ದು, ಎನ್‌ಎಸ್‌ಇ ನಿಫ್ಟಿ (NSE Nifty) ಹಾಗೂ ಬಿಎಸ್‌ಇ ಸೆನ್ಸೆಕ್ಸ್‌ ಭಾರಿ ಕುಸಿತ ಕಂಡ ಕಾರಣ ಹೂಡಿಕೆದಾರರಿಗೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ. ದಿನದ ವಹಿವಾಟಿನ ಅಂತ್ಯಕ್ಕೆ ಎನ್‌ಎಸ್‌ಇ ನಿಫ್ಟಿ 50 ಸುಮಾರು 172.35 ಪಾಯಿಂಟ್‌ಗಳ ಕುಸಿತ ಕಂಡರೆ, ಬಿಎಸ್‌ಇ ಸೆನ್ಸೆಕ್ಸ್‌ (BSE Sensex) 733 ಪಾಯಿಂಟ್‌ಗಳ ಕುಸಿತ ಕಂಡಿದೆ. ಆರಂಭದಲ್ಲಿ ಲಾಭ ಕಂಡ ಹೂಡಿಕೆದಾರರು ದಿನದ ಅಂತ್ಯಕ್ಕೆ ನಷ್ಟ ಅನುಭವಿಸಿದರು.

ಎನ್‌ಎಸ್‌ಇ ನಿಫ್ಟಿ 50 ದಿನದ ವಹಿವಾಟನ್ನು 22,456.65 ಪಾಯಿಂಟ್‌ಗಳಿಗೆ ಅಂತ್ಯಗೊಳಿಸಿತು. ಇನ್ನು ಬಿಎಸ್‌ಇ ಸೆನ್ಸೆಕ್ಸ್‌ 73,846 ಅಂಕಗಳೊಂದಿಗೆ ವಹಿವಾಟು ಅಂತ್ಯಗೊಳಿಸಿತು. ಷೇರು ಮಾರುಕಟ್ಟೆಯಲ್ಲಿ ತಲ್ಲಣ ಉಂಟಾದರೂ ಎಲ್‌&ಟಿ. ಮಾರುತಿ ಸುಜುಕಿ, ರಿಲಯನ್ಸ್‌ ಇಂಡಸ್ಟ್ರೀಸ್‌, ನೆಸ್ಲೆ ಇಂಡಿಯಾ, ಭಾರ್ತಿ ಏರ್‌ಟೆಲ್‌ ಸೇರಿ ಹಲವು ಕಂಪನಿಗಳು ಲಾಭ ಗಳಿಸಿವೆ. ಕೋಲ್‌ ಇಂಡಿಯಾ, ಗ್ರಾಸಿಂ ಇಂಡಸ್ಟ್ರೀಸ್‌, ಒಎನ್‌ಜಿಸಿ, ಡಾ.ರೆಡ್ಡೀಸ್‌ ಲ್ಯಾಬೊರೇಟರೀಸ್‌ ಹಾಗೂ ಹಿಂಡಾಲ್ಕೋ ಇಂಡಸ್ಟ್ರೀಸ್‌ ಸೇರಿ ಹಲವು ಕಂಪನಿಗಳು ನಷ್ಟ ಅನುಭವಿಸಿವೆ.

ಶುಕ್ರವಾರ ಬೆಳಗ್ಗೆ ಷೇರು ಮಾರುಕಟ್ಟೆ ವಹಿವಾಟು ಆರಂಭವಾಗುತ್ತಲೇ ಸುಮಾರು 50 ಪಾಯಿಂಟ್‌ಗಳ ಏರಿಕೆಯಾಯಿತು. ಇದರಿಂದ ಹೂಡಿಕೆದಾರರಿಗೆ ಖುಷಿಯಾಯಿತು. ಆದರೆ, ಇದಾದ ಕೆಲವೇ ಗಂಟೆಗಳಲ್ಲಿ ಪಾಯಿಂಟ್‌ಗಳ ಕುಸಿತ ಜಾಸ್ತಿಯಾಗುತ್ತಲೇ ಹೋಯಿತು. ಇದರಿಂದ ಹೂಡಿಕೆದಾರರು ಸಾವಿರಾರು ಕೋಟಿ ರೂ. ನಷ್ಟ ಅನುಭವಿಸಿದರು ಎಂದು ತಿಳಿದುಬಂದಿದೆ. ಕಳೆದ ಕೆಲ ದಿನಗಳಿಂದ ಷೇರು ಮಾರುಕಟ್ಟೆ ವಹಿವಾಟು ಉತ್ತಮವಾಗಿತ್ತು. ಆದರೆ, ಶುಕ್ರವಾರ ದಿಢೀರನೆ ಕುಸಿತ ಕಂಡಿತು.

ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅವರು ಕೆಲ ದಿನಗಳ ಹಿಂದಷ್ಟೇ ತಮ್ಮ ನಾಲ್ಕು ತಿಂಗಳ ಮೊಮ್ಮಗ ಏಕಾಗ್ರಹ್‌ ರೋಹನ್ ಮೂರ್ತಿಗೆ 240 ಕೋಟಿ ರೂಪಾಯಿ ಮೌಲ್ಯದ ಷೇರುಗಳನ್ನು ಉಡುಗೊರೆಯಾಗಿ ನೀಡಿದ್ದರು. ಈ ಮೂಲಕ ಏಕಾಗ್ರಹ್‌ ಇನ್ಫೋಸಿಸ್‌ನ 15 ಲಕ್ಷ ಷೇರುಗಳನ್ನು ಅಂದರೆ ಕಂಪನಿಯಲ್ಲಿ ಶೇಕಡಾ 0.04ರಷ್ಟು ಪಾಲನ್ನು ಹೊಂದಿದಂತಾಗಿದೆ ಎಂದು ಎಕ್ಸ್‌ಚೇಂಜ್‌ ಫೈಲಿಂಗ್ ಬಹಿರಂಗಪಡಿಸಿದೆ. ಈ ವ್ಯವಹಾರವನ್ನು ʼಆಫ್-ಮಾರ್ಕೆಟ್ʼನಲ್ಲಿ ನಡೆಸಲಾಯಿತು ಎಂದು ಫೈಲಿಂಗ್ ತಿಳಿಸಿದೆ.

ನಾರಾಯಣಮೂರ್ತಿ ಅವರು ಈಗ ಇನ್ಫೋಸಿಸ್‌ನ ಆಡಳಿತ ನಿರ್ವಹಣೆಯಲ್ಲಿ ಯಾವುದೇ ಪಾತ್ರ ಹೊಂದಿಲ್ಲ. ಅದರ ಪ್ರಮುಖ ಷೇರುಪಾಲುದಾರರಲ್ಲಿ ಒಬ್ಬರು ಎನಿಸಿಕೊಂಡಿದ್ದಾರೆ. ಇನ್ಫೋಸಿಸ್​ನಲ್ಲಿ ಮೂರ್ತಿ ಅವರ ಬಳಿ 1.51 ಕೋಟಿ ಷೇರುಗಳಿದ್ದವು. ಈಗ ಮೊಮ್ಮಗನಿಗೆ 15 ಲಕ್ಷ ಷೇರುಗಳನ್ನು ಕೊಟ್ಟ ಬಳಿಕ ಅವರ ಬಳಿ ಉಳಿರುವ ಷೇರುಗಳ ಸಂಖ್ಯೆ 1.36 ಕೋಟಿ. ಈ ಮೂಲಕ ಇನ್ಫೋಸಿಸ್​ನಲ್ಲಿ ಅವರು ಹೊಂದಿದ್ದ ಶೇ. 0.40ರಷ್ಟು ಷೇರುಪಾಲು ಶೇ. 0.36ಕ್ಕೆ ಇಳಿದಿದೆ.

ಇದನ್ನೂ ಓದಿ: Kotak Bank: ಆರ್‌ಬಿಐ ನಿರ್ಬಂಧದ ಬೆನ್ನಲ್ಲೇ ಕೊಟಕ್‌ ಬ್ಯಾಂಕ್‌ ಷೇರು ಭಾರಿ ಕುಸಿತ; ಹೂಡಿಕೆದಾರರಿಗೆ ನಷ್ಟ!

Continue Reading

ಕ್ರೈಂ

Prajwal Revanna Case: ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು? ಎಸ್‌ಐಟಿಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

Prajwal Revanna Case: ಹಾಸನದಲ್ಲಿ ಒಕ್ಕಲಿಗ ನಾಯಕತ್ವಕ್ಕೆ ಇಷ್ಟೆಲ್ಲ ಆಗುತ್ತಲಿದೆ. ಮುಂದಿನ ಒಂದು ವಾರದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಆಗ ಎಲ್ಲವನ್ನೂ ಪ್ರಕಟಿಸುವವರಿದ್ದಾರೆ. ಯಾರು ವಿಡಿಯೊಗಳನ್ನು ಬಿಡುಗಡೆ ಮಾಡಿದ್ದಾರೋ ಆ ಎಲ್ಲವೂ ಒಂದು ವಾರದಲ್ಲಿ ಹೊರಗೆ ಬರತ್ತದೆ. ನನ್ನ ಬಳಿ ಇದ್ದ ಎಲ್ಲ ಸಾಕ್ಷಿಗಳನ್ನು ನೀಡಿದ್ದೇನೆ. ನಿನ್ನೆ ನನ್ನನ್ನು ಸಾಕ್ಷಿಯಾಗಿ ಮಾಡಿಕೊಂಡಿದ್ದಾರೆ. ಸರ್ಕಾರ ಮತ್ತು ಎಸ್‌ಐಟಿ ಅಧಿಕಾರಿಗಳು ತೀವ್ರ ಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ದೇವರಾಜೇಗೌಡ ಹೇಳಿದ್ದಾರೆ.

VISTARANEWS.COM


on

Prajwal Revanna Case Who leaked the pen drive Devaraje Gowda gives evidence to SIT
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಎಸ್‌ಐಟಿ ಮುಂದೆ ಹಾಜರಾಗಿ ಕೆಲವು ಮಹತ್ವದ ದಾಖಲೆಗಳನ್ನು ನೀಡಿದ್ದಾರೆ ಎನ್ನಲಾಗಿದೆ. ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು ಎಂಬ ಬಗ್ಗೆಯೂ ಹೇಳಿಕೆ ನೀಡಿದ್ದೇನೆ. ಇದನ್ನು ಇಲ್ಲಿ ಹೇಳಲಾಗುವುದಿಲ್ಲ. ಆದರೆ, ಇನ್ನೊಂದು ವಾರದಲ್ಲಿ ಎಲ್ಲವೂ ಹೊರಗೆ ಬರಲಿದೆ ಎಂದು ಹೇಳಿದ್ದಾರೆ.

ಎಸ್‌ಐಟಿ ವಿಚಾರಣೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ವಕೀಲ ದೇವರಾಜೇಗೌಡ, ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ಅಧಿಕಾರಿಗಳು ಗುರುವಾರ ನೋಟಿಸ್‌ ನೀಡಿದ್ದರು. ಅದರಂತೆ ಇಂದು ಹಾಜರಾಗಿ ನಾನು ಎಲ್ಲ ಸಂಗತಿಗಳನ್ನು ಹೇಳಿದ್ದೇನೆ. ಈ ವಿಡಿಯೊಗಳನ್ನು ವೈರಲ್ ಮಾಡಿದವರು ಯಾರು ಎನ್ನುವ ಮಾಹಿತಿ ನನಗೆ ಗೊತ್ತಿದೆ. ಅದನ್ನು ಎಸ್‌ಐಟಿ ಅಧಿಕಾರಿಗಳಿಗೆ ಹೇಳಿದ್ದೇನೆ. ಯಾರು ಎಂಬುದನ್ನು ನಾನು ಇಲ್ಲಿ ಹೇಳಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಎಚ್‌ಡಿಕೆಯಿಂದ ಮಹತ್ವದ ನಿರ್ಧಾರ

ಹಾಸನದಲ್ಲಿ ಒಕ್ಕಲಿಗ ನಾಯಕತ್ವಕ್ಕೆ ಇಷ್ಟೆಲ್ಲ ಆಗುತ್ತಲಿದೆ. ಮುಂದಿನ ಒಂದು ವಾರದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಆಗ ಎಲ್ಲವನ್ನೂ ಪ್ರಕಟಿಸುವವರಿದ್ದಾರೆ. ಯಾರು ವಿಡಿಯೊಗಳನ್ನು ಬಿಡುಗಡೆ ಮಾಡಿದ್ದಾರೋ ಆ ಎಲ್ಲವೂ ಒಂದು ವಾರದಲ್ಲಿ ಹೊರಗೆ ಬರತ್ತದೆ ಎಂದು ದೇವರಾಜೇಗೌಡ ತಿಳಿಸಿದರು.

ನನ್ನ ಬಳಿ ಇದ್ದ ಎಲ್ಲ ಸಾಕ್ಷಿಗಳನ್ನು ನೀಡಿದ್ದೇನೆ. ನಿನ್ನೆ ನನ್ನನ್ನು ಸಾಕ್ಷಿಯಾಗಿ ಮಾಡಿಕೊಂಡಿದ್ದಾರೆ. ಸರ್ಕಾರ ಮತ್ತು ಎಸ್‌ಐಟಿ ಅಧಿಕಾರಿಗಳು ತೀವ್ರ ಗತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ದೇವರಾಜೇಗೌಡ ಹೇಳಿದರು.

ರಾಜಕೀಯಕ್ಕಾಗಿಯೇ ಇದೆಲ್ಲ ನಡೆಯುತ್ತಿದೆ

ಈ ಎಲ್ಲ ಬೆಳವಣಿಗೆಗಳು ರಾಜಕೀಯ ಕುತಂತ್ರದಿಂದ ನಡೆದಿದೆಯಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ದೇವರಾಜೇಗೌಡ, ಇದೆಲ್ಲ ನಡೆಯುತ್ತಿರುವುದೇ ರಾಜಕೀಯವಾಗಿ. ಎಲ್ಲ ದಿಕ್ಕಿನಲ್ಲಿಯೂ ತನಿಖೆ ನಡೆಸುತ್ತಿರುವುದು ಖುಷಿಯನ್ನು ತಂದಿದೆ. ಯಾರೂ ಈ ತನಿಖೆಯಿಂದ ತಪ್ಪಿಸಿಕೊಳ್ಳುತ್ತಾರೆ ಎಂದು ಅನ್ನಿಸುತ್ತಿಲ್ಲ ಎಂದು ಹೇಳಿದರು.

ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌?

ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ರೇಪ್ ಕೇಸ್‌ಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣ ನೇರವಾಗಿ ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ಕೊಟ್ಟ ದೂರಿನಲ್ಲಿ ಭಯಾನಕ ಸತ್ಯಗಳು ಹೊರಬಂದಿದ್ದು, ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆಯೇ ಪ್ರಜ್ವಲ್ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಈಗ ಕೇಳಿಬಂದಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ಈಗ ಜೆಡಿಎಸ್‌ ನಾಯಕಿ, ಸಂತ್ರಸ್ತೆ ದೂರಿನಲ್ಲಿ ತನಗಾದ ಅನ್ಯಾಯವನ್ನು ಹಾಗೂ ಅತ್ಯಾಚಾರದ ಸಂಗತಿಯನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದು, ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ.

2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಮಾತಿಗೆ ಹೋದಾಗ ರೇಪ್‌?

ಜೆಡಿಎಸ್‌ ನಾಯಕಿ ತಮ್ಮ ಮೇಲೆ ಯಾವಾಗ ಅತ್ಯಾಚಾರ ನಡೆದಿದೆ ಎಂಬ ಸಂಗತಿಯನ್ನೂ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. 2021ರಲ್ಲಿ ಬಿಸಿಎಂ ಹಾಸ್ಟೆಲ್ ವಿಚಾರದ ಬಗ್ಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಳಿ ಮಾತನಾಡಲು ಹೋದಾಗ ತಮ್ಮ ಮೇಲೆರಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ವೇಳೆ ತಾವು ನಿರಾಕರಣೆ ಮಾಡಿದಾಗ ಗನ್‌ ಹಿಡಿದು ಹೆದರಿಸಿ ಬಲಾತ್ಕಾರ ಮಾಡಿದ್ದಾರೆ ಎಂದು ಮಹಿಳೆ ಆರೋಪ ಮಾಡಿದ್ದಾರೆ. ಹಾಸನದಲ್ಲಿರುವ ಸಂಸದರ ಬಂಗಲೆಯ ಮಹಡಿ ರೂಮ್‌ನಲ್ಲೇ ರೇಪ್ ಮಾಡಲಾಗಿದೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಗಂಡನ ಬಗ್ಗೆ ಬೆದರಿಸಿ ಬಲಾತ್ಕಾರ

ದೈಹಿಕ ಸಂಪರ್ಕ ಬೆಳೆಸಲು ಪ್ರಜ್ವಲ್‌ ಮುಂದಾಗುತ್ತಿದ್ದಂತೆ ನಾನು ನಿರಾಕರಣೆ ಮಾಡಿದೆ. ಆಗ “ನಿನ್ನ ಗಂಡನನ್ನು ನಾನು ಬಿಡಲ್ಲ” ಎಂದು ಹೆದರಿಸಿ ದೌರ್ಜನ್ಯ ನಡೆಸಿದರು ಎಂದು ಎಸ್‌ಐಟಿಗೆ ಸಂತ್ರಸ್ತೆ ನೀಡಿದ್ದ ದೂರು ಆಧಾರದಲ್ಲಿ ಸಿಐಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಐಪಿಸಿ ಸೆಕ್ಷನ್‌ 376 (2) (ಎನ್‌) ಹಾಗೂ ಐಟಿ ಆ್ಯಕ್ಟ್‌ನಲ್ಲಿ ಎಫ್ಐಆರ್ ಅನ್ನು ದಾಖಲು ಮಾಡಲಾಗಿದೆ. ಹೇಗೆಲ್ಲ ದೌರ್ಜನ್ಯ, ದಬ್ಬಾಳಿಕೆ, ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

ರೇಪ್‌ ಮತ್ತು ಚಿತ್ರೀಕರಣ ಆರೋಪ

ತಮ್ಮ ಮೇಲೆ ಬಲಾತ್ಕಾರ ಮಾಡಿದ್ದಲ್ಲದೆ, ಅದನ್ನು ಚಿತ್ರೀಕರಣ ಮಾಡಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಬಾಯಿ ಬಿಟ್ಟರೆ ಸೋಷಿಯಲ್‌ ಮೀಡಿಯಾದಲ್ಲಿ ನಿನ್ನ ವಿಡಿಯೊವನ್ನು ಬಿಡುತ್ತೇನೆ ಎಂಧು ಬೆದರಿಕೆ ಒಡ್ಡಿದ್ದಾರೆ. ನಾನು ಕರೆದಾಗೆಲ್ಲ ನೀನು ಬರಬೇಕು. ಇಲ್ಲದಿದ್ದರೆ ನನ್ನ ಬಳಿ ಇರುವ ವಿಡಿಯೊವನ್ನು ಹರಿಬಿಡುತ್ತೇನೆ ಎಂದು ಬೆದರಿಸಿ ಕಳುಹಿಸಿದ್ದಾರೆ. ಇಷ್ಟೇ ಅಲ್ಲದೆ, ಪದೇ ಪದೆ ವಿಡಿಯೊ ಕಾಲ್‌ ಮಾಡಿ ಬೆತ್ತಲೆಯಾಗು ತಾನು ನೋಡಬೇಕು ಎಂದು ಕಿರುಕುಳ ಕೊಟ್ಟು ನಗ್ನತೆಯನ್ನು ನೋಡುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ‌ಅಲ್ಲದೆ, ಪದೇ ಪದೆ ತಮಗೆ ಬ್ಲ್ಯಾಕ್‌ಮೇಲ್‌ ಮಾಡಿ ಬಲಾತ್ಕಾರ ಮಾಡುತ್ತಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Continue Reading

ಕ್ರೀಡೆ

RCB vs GT: ಮಳೆ ಭೀತಿಯ ಮಧ್ಯೆ ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

RCB vS GT: ವಿರಾಟ್​ ಕೊಹ್ಲಿ ಈ ಮೈದಾನದಲ್ಲಿ ಇದುವರೆಗೆ 2924 ರನ್​ ಬಾರಿಸಿದ್ದಾರೆ. ಜತೆಗೆ ಈ ಬಾರಿಯ ಐಪಿಎಲ್​ನಲ್ಲಿಯೂ ಕೊಹ್ಲಿ ಉತ್ತಮವಾಗಿ ರನ್​ ಗಳಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ.

VISTARANEWS.COM


on

RCB vS GT:
Koo

ಬೆಂಗಳೂರು: ಹಲವು ಸೋಲಿನ ಬಳಿಕ ಸತತ 2 ಗೆಲುವು ಸಾಧಿಸಿ ಸಂತಸದ ಅಲೆಯಲ್ಲಿ ತೇಲುತ್ತಿರುವ ಆರ್​ಸಿಬಿ(RCB vS GT) ಹ್ಯಾಟ್ರಿಕ್​ ಗೆಲುವಿನಿ ನಿರೀಕ್ಷೆಯೊಂದಿಗೆ ನಾಳೆ(ಶನಿವಾರ) ನಡೆಯುವ ಐಪಿಎಲ್(IPL 2024)​ ಪಂದ್ಯದಲ್ಲಿ ಗುಜರಾತ್​ ಟೈಟಾನ್ಸ್​ ವಿರುದ್ಧ ಕಣಕ್ಕಿಳಿಯಲಿದೆ. ಆದರೆ, ಈ ಪಂದ್ಯಕ್ಕೆ ಮಳೆಯ ಭೀತಿಯೂ ಎದುರಾಗಿದೆ.

ಬೆಂಗಳೂರಿನಲ್ಲಿ ಸತತ 2 ದಿನಗಳಿಂದ ಮಳೆಯಾಗುತ್ತಿದ್ದು ಮುಂದಿನ ನಾಲ್ಕು ದಿನ ಕೂಡ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ನಾಳೆ ನಡೆಯುವ ಪಂದ್ಯಕ್ಕೆ ಮಳೆಯ ಭೀತಿ ಇದ್ದೇ ಇದೆ. ಪ್ಲೇ ಆಫ್​ಗೆ ಕ್ಷೀಣ ಅವಕಾಶ ಹೊಂದಿರುವ ಆರ್​ಸಿಬಿ ಮತ್ತು ಗುಜರಾತ್​ಗೆ ನಾಳೆ ನಡೆಯುವ ಪಂದ್ಯ ಮಹತ್ವದ್ದಾಗಿದೆ. ಮಳೆಯಿಂದ ಪಂದ್ಯ ರದ್ದಾದರೆ ಉಭಯ ತಂಡಗಳ ಪ್ಲೇ ಆಫ್​ ಮಳೆಯಲ್ಲಿ ಕೊಚ್ಚಿಹೋಗಲಿದೆ.

ಪಿಚ್​ ರಿಪೋರ್ಟ್​


ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣ ಯಾವಾಗಲೂ ಬ್ಯಾಟಿಂಗ್ ಸ್ನೇಹಿ ಸ್ಥಳವಾಗಿದೆ. ಇದುವರೆಗೆ ಇಲ್ಲಿ ನಡೆದ ಬಹುತೇಕ ಪಂದ್ಯಗಳು ಕೂಡ ಚೇಸಿಂಗ್​ ನಡೆಸಿದ ತಂಡವೇ ಹೆಚ್ಚು ಬಾರಿ ಗೆದ್ದಿದೆ. ಇದುವರೆಗೆ ಇಲ್ಲಿ 92 ಐಪಿಎಲ್​ ಪಂದ್ಯಗಳು ನಡೆದಿದ್ದು, 49 ಬಾರಿ ಚೇಸಿಂಗ್​ ನಡೆಸಿದ ತಂಡ ಜಯಶಾಲಿಯಾಗಿದೆ. 39 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ. ಆದರೆ ಕಳೆದ 10 ಪಂದ್ಯಗಳ ಫಲಿತಾಂಶ ನೋಡುವುದಾದರೆ 6 ಬಾರಿ ಮೊದಲು ಬ್ಯಾಟಿಂಗ್​ ನಡೆಸಿದ ತಂಡ ಗೆದ್ದಿದೆ.

ವಿರಾಟ್​ ಕೊಹ್ಲಿ ಈ ಮೈದಾನದಲ್ಲಿ ಇದುವರೆಗೆ 2924 ರನ್​ ಬಾರಿಸಿದ್ದಾರೆ. ಜತೆಗೆ ಈ ಬಾರಿಯ ಐಪಿಎಲ್​ನಲ್ಲಿಯೂ ಕೊಹ್ಲಿ ಉತ್ತಮವಾಗಿ ರನ್​ ಗಳಿಸಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿಯೂ ಇವರ ಬ್ಯಾಟಿಂಗ್​ ಮೇಲೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇರಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ ಆರ್​ಸಿಬಿಗೆ ಪ್ಲೇ ಆಫ್​ಗೆ ಹೋಗಬೇಕಿದ್ದರೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಗುಜರಾತ್​ ಅಡಗಾಲಿಕ್ಕಿತ್ತು. ಶುಭಮನ್​ ಗಿಲ್​ ಶತಕ ಬಾರಿಸಿ ಆರ್​ಸಿಬಿಗೆ ಸೋಲಿನ ರುಚಿ ತೋರಿಸಿದ್ದರು.

ಗುಜರಾತ್​ ಆಡಿದ 10 ಪಂದ್ಯಗಳಲ್ಲಿ 4 ಪಂದ್ಯ ಗೆದ್ದು 8 ಅಂಕ ಗಳಿಸಿ 8ನೇ ಸ್ಥಾನದಲ್ಲಿದೆ. ಪ್ಲೇ ಆಫ್​ ಪ್ರವೇಶಿಸಬೇಕಿದ್ದರೆ ಉಳಿದ 4 ಪಂದ್ಯಗಳನ್ನು ಕೂಡ ಗೆಲ್ಲಬೇಕಿದೆ. ಹೀಗಾಗಿ ಆರ್​ಸಿಬಿ ವಿರುದ್ಧದ ಪಂದ್ಯ ಗೆಲ್ಲಲೇ ಬೇಕಾದ ಒತ್ತಡ ಶುಭಮನ್​ ಗಿಲ್​ ಪಡೆಯ ಮೇಲಿದೆ.

ಇದನ್ನೂ ಓದಿ IPL 2024 : ರಾಜಸ್ಥಾನ್ ವಿರುದ್ಧ ಎಸ್​​ಆರ್​ಎಚ್​​ ತಂಡಕ್ಕೆ ರೋಚಕ 1 ರನ್ ಗೆಲುವು

ಉಭಯ ತಂಡಗಳು


ಆರ್​ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್​ ಕೀಪರ್​), ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್.

ಗುಜರಾತ್​: ವೃದ್ಧಿಮಾನ್ ಸಹಾ (ವಿಕೆಟ್​ ಕೀಪರ್​), ಶುಭಮನ್​ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಅಜ್ಮತುಲ್ಲಾ ಒಮರ್ಜಾಯ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಮೋಹಿತ್ ಶರ್ಮಾ.

Continue Reading

ದೇಶ

Gratuity: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್;‌ ಗ್ರಾಚ್ಯುಟಿ, ಶಿಕ್ಷಣ ಭತ್ಯೆ ಶೀಘ್ರವೇ 25% ಹೆಚ್ಚಳ!

Gratuity: ಎರಡು ತಿಂಗಳ ಹಿಂದಷ್ಟೇ ನೌಕರರ ತುಟ್ಟಿ ಭತ್ಯೆಯನ್ನು ಶೇ.4ರಷ್ಟು ಏರಿಕೆ ಮಾಡಿದ್ದ ಕೇಂದ್ರ ಸರ್ಕಾರವೀಗ ನೌಕರರ ಗ್ರಾಚ್ಯುಟಿ, ಮಕ್ಕಳ ಶಿಕ್ಷಣ ಭತ್ಯೆಯನ್ನೂ ಶೇ.25ರಷ್ಟು ಏರಿಕೆ ಮಾಡಲು ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಇದರಿಂದ ಲಕ್ಷಾಂತರ ಸರ್ಕಾರಿ ನೌಕರರಿಗೆ ಅನುಕೂಲವಾಗಲಿದೆ ಎಂದು ತಿಳಿದುಬಂದಿದೆ.

VISTARANEWS.COM


on

Gratuity
Koo

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರವು (Central Government) ಮತ್ತೊಂದು ಗುಡ್‌ ನ್ಯೂಸ್‌ ನೀಡಲು ಸಜ್ಜಾಗಿದೆ. ಕಳೆದ ಜನವರಿಯಲ್ಲಿಯೇ ನೌಕರರ ತುಟ್ಟಿಭತ್ಯೆಯನ್ನು ಶೇ.4ರಷ್ಟು ಹೆಚ್ಚಿಸಿದ್ದ ಕೇಂದ್ರ ಸರ್ಕಾರವು ಶೀಘ್ರದಲ್ಲಿಯೇ ನೌಕರರ ಮಕ್ಕಳ ಶಿಕ್ಷಣ ಭತ್ಯೆ, ಹಾಸ್ಟೆಲ್‌ ಸಬ್ಸಿಸಿ, ನಿವೃತ್ತಿ ಗ್ರಾಚ್ಯುಟಿ (Gratuity) ಹಾಗೂ ಸಾವಿನ ಗ್ರಾಚ್ಯುಟಿಯನ್ನು ಶೇ.25ರಷ್ಟು ಏರಿಕೆ ಮಾಡಲಿದೆ ಎಂದು ತಿಳಿದುಬಂದಿದೆ. ಇದರಿಂದ ಲಕ್ಷಾಂತರ ನೌಕರರು (Government Employees) ಸೌಲಭ್ಯಗಳನ್ನು ಪಡೆಯಲಿದ್ದಾರೆ. ಏಳನೇ ವೇತನ ಆಯೋಗದ ಶಿಫಾರಸಿನ ಅನ್ವಯ ಏರಿಕೆ ಮಾಡಲಿದೆ ಎಂದು ತಿಳಿದುಬಂದಿದೆ.

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳವಾಗುತ್ತಲೇ ಅವರ ಮಕ್ಕಳ ಶಿಕ್ಷಣ ಭತ್ಯೆ ಹಾಗೂ ಹಾಸ್ಟೆಲ್‌ ಸಬ್ಸಿಡಿ ಕೂಡ ಜಾಸ್ತಿಯಾಗುತ್ತದೆ. ಅದರಂತೆ, ಕೇಂದ್ರ ಸರ್ಕಾರವು ಶೀಘ್ರದಲ್ಲೇ ಈ ಕುರಿತು ಆದೇಶ ಹೊರಡಿಸಲಿದೆ ಎಂದು ತಿಳಿದುಬಂದಿದೆ. ಹೊಸ ಆದೇಶದ ಬಳಿಕ ರಿಟೈರ್‌ಮೆಂಟ್‌ ಗ್ರಾಚ್ಯುಟಿ ಮೊತ್ತವು ಶೇ.25ರಷ್ಟು ಅಂದರೆ, 20 ಲಕ್ಷ ರೂ.ನಿಂದ 25 ಲಕ್ಷ ರೂ.ಗೆ ಏರಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.

Cash

ಕೇಂದ್ರ ಸರ್ಕಾರಿ ನೌಕರರಿಗೆ ಕೆಲ ತಿಂಗಳ ಹಿಂದಷ್ಟೇ ಕೇಂದ್ರ ಸರ್ಕಾರವು ಬಂಪರ್‌ ಕೊಡುಗೆ ನೀಡಿತ್ತು. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.4ರಷ್ಟು ಏರಿಕೆ ಮಾಡಿತ್ತು. ಇದರೊಂದಿಗೆ ನೌಕರರಿಗೆ ನೀಡುತ್ತಿರುವ ತುಟ್ಟಿಭತ್ಯೆಯು ಶೇ.50ರಷ್ಟು ಆಗಿದೆ. ತುಟ್ಟಿ ಭತ್ಯೆಯ ಜತೆಗೆ ಕೇಂದ್ರ ಸರ್ಕಾರವು ಮನೆ ಬಾಡಿಗೆ ಅಲೋವನ್ಸ್‌ (HRA) ಕೂಡ ಏರಿಕೆ ಮಾಡಿತ್ತು. ಇದರೊಂದಿಗೆ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 12,868 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಖರ್ಚುವಾಗಲಿದೆ. 2024ರ ಜನವರಿ 1ರಿಂದಲೇ ತುಟ್ಟಿಭತ್ಯೆ ಹೆಚ್ಚಳವು ಅನ್ವಯವಾಗಿದೆ.

ಏರುತ್ತಿರುವ ಬೆಲೆಗಳನ್ನು ಸರಿದೂಗಿಸಲು ಸರ್ಕಾರವು ತನ್ನ ಉದ್ಯೋಗಿಗಳಿಗೆ ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ ನೀಡುತ್ತದೆ. ಇತ್ತೀಚಿನ ಗ್ರಾಹಕ ಬೆಲೆ ಸೂಚ್ಯಂಕವನ್ನು ಆಧರಿಸಿ ಇದನ್ನು ಲೆಕ್ಕಹಾಕಲಾಗುತ್ತದೆ. ಇದು ಸುಮಾರು 47.58 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 69.76 ಲಕ್ಷ ಪಿಂಚಣಿದಾರರಿಗೆ ಪ್ರಯೋಜನ ನೀಡುತ್ತದೆ. ಈ ಹೆಚ್ಚಳವು 7ನೇ ಕೇಂದ್ರ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಅಂಗೀಕೃತ ಸೂತ್ರಕ್ಕೆ ಅನುಗುಣವಾಗಿದೆ ಎಂದು ತಿಳಿದುಬಂದಿತ್ತು.

2023ರ ಮಾರ್ಚ್‌ನಲ್ಲೂ ಕೇಂದ್ರ ಸರ್ಕಾರವು ನೌಕರರು ಹಾಗೂ ಪಿಂಚಣಿದಾರರಿಗೆ ನೀಡುವ ತುಟ್ಟಿಭತ್ಯೆಯನ್ನು ಶೇ.4ರಷ್ಟು ಹೆಚ್ಚಿಸಿತ್ತು. ಇದರಿಂದ ನೌಕರರಿಗೆ ಸಿಗುವ ತುಟ್ಟಿಭತ್ಯೆಯು ಶೇ.38ರಿಂದ ಶೇ.42ಕ್ಕೆ ಏರಿಕೆಯಾಗಿತ್ತು. ಅಲ್ಲದೆ, ಕಳೆದ ವರ್ಷದ ಜುಲೈನಲ್ಲಿ ನೌಕರರು ಹಾಗೂ ಪಿಂಚಣಿದಾರರಿಗೆ ನೀಡುವ ತುಟ್ಟಿಭತ್ಯೆಯನ್ನು ಶೇ.42ರಿಂದ ಶೇ.46ಕ್ಕೆ ಏರಿಕೆ ಮಾಡಲಾಗಿತ್ತು.

ಇದನ್ನೂ ಓದಿ: LPG Price Cut: ತಿಂಗಳ ಆರಂಭದಲ್ಲೇ ಗುಡ್‌ನ್ಯೂಸ್‌; ಎಲ್‌ಪಿಜಿ ಬೆಲೆ 19 ರೂ. ಇಳಿಕೆ

Continue Reading
Advertisement
RCB vs GT
ಕ್ರೀಡೆ3 mins ago

RCB vs GT: ಬೆಂಗಳೂರಿನಲ್ಲಿ ನಾಳೆ ಐಪಿಎಲ್‌ ಹಬ್ಬ: ತಡರಾತ್ರಿಯೂ ಇದೆ ಮೆಟ್ರೋ ಸೇವೆ, ಪಾರ್ಕಿಂಗ್‌ ಎಲ್ಲೆಲ್ಲಿ?

Kidnap case in Bengaluru
ಬೆಂಗಳೂರು5 mins ago

Kidnap Case : ಗಾಂಜಾ ಮತ್ತಲ್ಲಿ ಆರ್ಮಿ ಆಫೀಸರ್ ಮಗನನ್ನೇ ಕಿಡ್ನ್ಯಾಪ್ ಮಾಡಿದ ಗೆಳೆಯರು

Costly wedding gift
ವಾಣಿಜ್ಯ13 mins ago

Costly wedding gift: ಮಗನಿಗೆ ಬಂಗಲೆ, ಸೊಸೆಗೆ ನೆಕ್ಲೇಸ್ ಗಿಫ್ಟ್‌ ಕೊಟ್ಟ ಅಂಬಾನಿ; ಬೆಲೆ ಕೇಳಿದರೆ ಅಚ್ಚರಿ!

kareena kapoor out from yash starrer toxic
ಬಾಲಿವುಡ್23 mins ago

Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್?

Shrirasthu Shubhamasthu serial will be end
ಕಿರುತೆರೆ23 mins ago

Shrirasthu Shubhamasthu: ಅಂತ್ಯ ಹಾಡಲಿದೆಯಾ ‘ಶ್ರೀರಸ್ತು ಶುಭಮಸ್ತು’? ಶಾರ್ವರಿ ರಹಸ್ಯ ಬಯಲಾಗೇ ಬಿಡ್ತಾ?

Stock Market
ದೇಶ27 mins ago

Stock Market: ಷೇರು ಪೇಟೆ ತಲ್ಲಣ; ಏಕಾಏಕಿ 700 ಅಂಕ ಕುಸಿದ ನಿಫ್ಟಿ, ಸಾವಿರಾರು ಕೋಟಿ ರೂ. ನಷ್ಟ

Bengaluru Rains
ಮಳೆ35 mins ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Smrithi Irani
ರಾಜಕೀಯ38 mins ago

Smirthi Irani: ಅಮೇಥಿಯಲ್ಲಿ ಕಾಂಗ್ರೆಸ್‌ ಸೋಲನ್ನು ಒಪ್ಪಿಕೊಂಡಿದೆ; ಸ್ಮೃತಿ ಇರಾನಿ ವ್ಯಂಗ್ಯ

Prajwal Revanna Case Who leaked the pen drive Devaraje Gowda gives evidence to SIT
ಕ್ರೈಂ40 mins ago

Prajwal Revanna Case: ಪೆನ್‌ಡ್ರೈವ್‌ ಲೀಕ್‌ ಮಾಡಿದ್ದು ಯಾರು? ಎಸ್‌ಐಟಿಗೆ ಸಾಕ್ಷಿ ಕೊಟ್ಟ ದೇವರಾಜೇಗೌಡ!

RCB vS GT:
ಕ್ರೀಡೆ44 mins ago

RCB vs GT: ಮಳೆ ಭೀತಿಯ ಮಧ್ಯೆ ಹ್ಯಾಟ್ರಿಕ್​ ಗೆಲುವಿನ ನಿರೀಕ್ಷೆಯಲ್ಲಿ ಆರ್​ಸಿಬಿ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ35 mins ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ12 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ22 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌