Site icon Vistara News

Karave Meeting: ಹೊಸ ಪ್ರಾದೇಶಿಕ ಪಕ್ಷದ ಸುಳಿವು ನೀಡಿದ ಕರವೇ ನಾರಾಯಣಗೌಡ

Karave Meeting

ಬೀದರ್: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿವೆ. ಭಾಲ್ಕಿಯಲ್ಲಿ ಮರಾಠಿಗರ ಬೃಹತ್‌ ಸಮಾವೇಶ ನಡೆದ ಬೆನ್ನಲ್ಲೇ ಆ್ಯಕ್ಟೀವ್ ಆಗಿರುವ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ.ನಾರಾಯಣ ಗೌಡ ಅವರು, ಬೀದರ್‌ನ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಕರವೇ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರ ಸಭೆ ನಡೆಸಿದ್ದಾರೆ. ಈ ವೇಳೆ ಎಂಇಎಸ್‌ ವಿರುದ್ಧ ಕಿಡಿ ಕಾರಿರುವ ಅವರು, ಕನ್ನಡ ನಾಡು, ನುಡಿ, ಜಲ ರಕ್ಷಣೆಗಾಗಿ ಹೊಸ ಪ್ರಾದೇಶಿಕ ಪಕ್ಷ ಕಟ್ಟುವ ಸುಳಿವು ನೀಡಿದ್ದಾರೆ.

ಗಡಿ ಭಾಗದಲ್ಲಿ ಕನ್ನಡ ವಿರೋಧಿಗಳ ಸದ್ದಡಗಿಸಲು ಟಿ.ಎ. ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕರವೇ ಸದಸ್ಯತ್ವ ಅಭಿಯಾನ ಕೂಡ ಕೈಗೊಳ್ಳಲಾಗಿತ್ತು. ಈ ವೇಳೆ ಮಾತನಾಡಿದ ನಾರಾಯಣಗೌಡರು, ಬೀದರ್‌ನಲ್ಲಿ ನಮ್ಮ ಕಾರ್ಯಕರ್ತರಿಗೆ ಕೊರತೆಯಿಲ್ಲ. ಬೀದರ್‌ನಿಂದ ಚಾಮರಾಜನಗರವರೆಗೆ ನಮ್ಮ ಕಾರ್ಯಕರ್ತರು ಗಟ್ಟಿಯಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಅಪ್ಪಟ ಕನ್ನಡಿಗರ ಪಕ್ಷ ಇಲ್ಲ, ನಮಗೆ ಒಂದು ಪಕ್ಷ ಬೇಕು. ಅಪ್ಪಟ ಕನ್ನಡಿಗರ ಪಕ್ಷ ಕಟ್ಟುವುದು ಕರವೇಯಿಂದ ಮಾತ್ರ ಸಾಧ್ಯ ಎಂದು ಹೇಳುವ ಮೂಲಕ ಹೊಸ ಪ್ರಾದೇಶಿಕ ಪಕ್ಷದ ಸ್ಥಾಪನೆ ಸುಳಿವು ನೀಡಿದರು.

ಇದನ್ನೂ ಓದಿ | ಮೈಸೂರಲ್ಲಿ ಸಿದ್ದುಗೆ ಟಕ್ಕರ್‌, ಕರಾವಳಿಯಲ್ಲಿ ಅಲೆ; ನಾಳೆ ಕರ್ನಾಟಕದಲ್ಲಿ ಮೋದಿ ಹವಾ, ಇಲ್ಲಿದೆ ವಿವರ

ಎಂಇಎಸ್ ಕಥೆ ಮುಗಿದು ಹೋಯಿತು, ಅವರ ಕಥೆ ಮುಗಿಸಿಬಿಟ್ಟಿದ್ದೇವೆ. ಮೊದಲು 7 ಶಾಸಕರು ಇದ್ದರು, ಇವಾಗ ಅವರ ಕೈಯಲ್ಲಿ ಏನೂ ಇಲ್ಲ. ರಾಜ್ಯದ ಯಾವುದೇ ಭಾಗದಲ್ಲಿ ಅವರಿಗೆ ತಲೆ ಎತ್ತಲು ಬಿಡಲ್ಲ ಎಂದು ಹೇಳಿದರು.

‘ಭಾರತ್‌ ಮಾತಾ ಕಿ ಜೈ’ ಬಿಜೆಪಿ ಅಪ್ಪನ ಮನೆ ಆಸ್ತಿನಾ? ಲಕ್ಷ್ಮಣ ಸವದಿ ಆಕ್ರೋಶ

Lok Sabha Election 2024: Is Bharat Mata Ki Jai Property Of BJP; Laxman Savadi Taunts In Kalaburagi

ಕಲಬುರಗಿ: ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ ಅವರು ಭಾರತ್‌ ಮಾತಾ ಕಿ ಜೈ (Bharat Mata Ki Jai) ಎಂಬುದಾಗಿ ಕೂಗುವ ಮೊದಲು “ಖರ್ಗೆಯವರು ತಪ್ಪು ತಿಳಿದುಕೊಳ್ಳಬಾರದು” ಎಂದು ಹೇಳಿರುವುದು ಈಗ ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. “ಕಾಂಗ್ರೆಸ್‌ನಲ್ಲಿ (Congress) ಭಾರತ್‌ ಮಾತಾ ಕಿ ಜೈ ಎಂದು ಕೂಗಲು ಕೂಡ ಅನುಮತಿ ಪಡೆಯಬೇಕಾದ ದುಸ್ಥಿತಿ ಇದೆ” ಎಂದು ಬಿಜೆಪಿ ಟೀಕಿಸಿದ ಬೆನ್ನಲ್ಲೇ ಲಕ್ಷ್ಮಣ ಸವದಿ (Laxman Savadi) ತಿರುಗೇಟು ನೀಡಿದ್ದಾರೆ. “ಭಾರತ್‌ ಮಾತಾ ಕಿ ಜೈ ಎಂಬ ಘೋಷಣೆಯು ಬಿಜೆಪಿ (BJP) ಮನೆ ಆಸ್ತಿನಾ” ಎಂದು ಪ್ರಶ್ನಿಸಿದ್ದಾರೆ.

ಕಲಬುರಗಿಯಲ್ಲಿ ಮಾತನಾಡಿದ ಲಕ್ಷ್ಮಣ ಸವದಿ, “ವಿನಾಶಕಾಲೆ ವಿಪರೀತ ಬುದ್ಧಿ ಎಂಬಂತಹ ಸ್ಥಿತಿ ಬಿಜೆಪಿಗೆ ಬಂದಿದೆ. ಭಾರತ್‌ ಮಾತಾ ಕಿ ಜೈ ಅನ್ನೋದು ದೇಶದ ಪ್ರತಿಯೊಬ್ಬ ಪ್ರಜೆಯ ಹಕ್ಕು, ಅಭಿಮಾನ ಹಾಗೂ ದೇಶಭಕ್ತಿಯಾಗಿದೆ. ಕಾಂಗ್ರೆಸ್‌ನಲ್ಲಿ ಕೂಡ ಭಾರತ್‌ ಮಾತಾ ಕಿ ಜೈ ಎನ್ನುತ್ತೇವೆ. ದೇಶಭಕ್ತಿ, ಘೋಷಣೆಗಳು ಬಿಜೆಪಿಯವರಿಗೆ ಗುತ್ತಿಗೆ ಕೊಡಲಾಗಿದೆಯೇ? ವಂದೇ ಮಾತರಂ ಅನ್ನುತ್ತೇವೆ, ಜೈ ಹಿಂದು ಕೂಡ ಎನ್ನುತ್ತೇವೆ. ನಮ್ಮಲ್ಲಿ ಇವರಿಗಿಂತ ದೇಶಭಕ್ತಿ ಹೆಚ್ಚಿದೆ” ಎಂದು ತಿರುಗೇಟು ನೀಡಿದರು.

“ಬಿಜೆಪಿಯವರ ದೇಶಭಕ್ತಿಯು ತೋರಿಕೆಗೆ ಸೀಮಿತವಾಗಿದೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇ ಕಾಂಗ್ರೆಸ್.‌ 400ಕ್ಕೂ ಅಧಿಕ ಸೀಟು ಗೆದ್ದರೆ ಸಂವಿಧಾನ ಬದಲಾಯಿಸುತ್ತೇವೆ ಎಂಬುದಾಗಿ ಹೇಳುತ್ತಾರೆ. ಹಾಗಾಗಿ, ಬಿಜೆಪಿಯವರೇ ನಿಜವಾದ ದೇಶದ್ರೋಹಿಗಳು. ಸಂವಿಧಾನವನ್ನು ವಿರೋಧಿಸುತ್ತಾರೆ, ಜಾತಿ ವಿರೋಧ ಮಾಡುತ್ತಾರೆ. ಇವರ ಮನಸ್ಥಿತಿಯಿಂದಾಗಿ ದೇಶಕ್ಕೆ ಹಾನಿಯಾಗುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ‘ನನಗೆ ಒಳ್ಳೇ ದಿನಗಳು ಬರುತ್ತವೆ’ಎಂದ ಲಕ್ಷ್ಮಣ್​ ಸವದಿ; ಸಿದ್ದರಾಮಯ್ಯ ಎರಡೂವರೆ ವರ್ಷಕ್ಕೆ ಮುಖ್ಯಮಂತ್ರಿಯಾ?

ನನ್ನ ಹೆಸರೇ ಲಕ್ಷ್ಮಣ, ಜೈ ಶ್ರೀರಾಮ್‌ ಎನ್ನುವೆ

“ದೇಶದಲ್ಲಿ ಘೋಷಣೆ ಕೂಗಲು ಬಿಜೆಪಿಯವರ ಪರ್ಮಿಷನ್‌ ತೆಗೆದುಕೊಳ್ಳಬೇಕಾ? ಅದೇ ಅವರ ಅಪ್ಪನ ಮನೆ ಆಸ್ತಿಯೇ? ನನ್ನ ಹೆಸರೇ ಲಕ್ಷ್ಮಣ. ರಾಮನ ತಮ್ಮನ ಹೆಸರು ಲಕ್ಷ್ಮಣ. ಜೈ ಶ್ರೀರಾಮ್‌ ಎಂದು ಘೋಷಣೆ ಕೂಗುತ್ತೇವೆ. ಭಾರತ್‌ ಮಾತಾ ಕಿ ಜೈ ಎನ್ನುತ್ತೇವೆ. ದೇಶಭಕ್ತಿಯ ಪಾಠವನ್ನು ಬಿಜೆಪಿಯವರಿಂದ ಕಲಿಯಬೇಕಿಲ್ಲ” ಎಂದರು. ರಾಮೇಶ್ವರಂ ಕೆಫೆ ಸ್ಫೋಟದ ಕುರಿತು ಮಾತನಾಡಿದ ಲಕ್ಷ್ಮಣ ಸವದಿ, “ಪ್ರತಿಯೊಂದು ವಿಷಯದಲ್ಲೂ ರಾಜಕೀಯ ಮಾಡುವುದು ಬಿಜೆಪಿಯವರ ಕೆಲಸ. ಇಂತ ಕೀಳು ರಾಜಕೀಯದಿಂದಾಗಿಯೇ ಅವರು ಕೇಂದ್ರದಲ್ಲಿ ಅಧಿಕಾರಕ್ಕೆ ಬರಲ್ಲ” ಎಂದು ವಾಗ್ದಾಳಿ ನಡೆಸಿದರು.

Exit mobile version