Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ - Vistara News

ಪ್ರಮುಖ ಸುದ್ದಿ

Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

Karave Protest: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಕರವೇ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

VISTARANEWS.COM


on

Karave Protest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಲು (Jobs For Kannadigas) ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಬೆಂಗಳೂರು ಸೇರಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವೇದಿಕೆಯಿಂದ (Karave Protest) ಸೋಮವಾರ ಬೆಳಗ್ಗೆ ಪ್ರತಿಭಟನೆಗಳು ಆರಂಭವಾಗಿವೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಕರವೇ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್‌ ಬಳಿ ಕುವೆಂಪು ಪುತ್ಥಳಿಗೆ ಟಿ.ಎ. ನಾರಾಯಣ ಗೌಡರು ಮಾಲಾರ್ಪಣೆ ಮಾಡುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿದರು. ಗಾಂಧಿನಗರದ ಕರವೇ ಕೇಂದ್ರ ಕಚೇರಿಯಿಂದ ಸಾವಿರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲಕ ಫ್ರೀಡಂ ಪಾರ್ಕ್‌ ಸೇರಿದರು. ನಂತರ ಅಲ್ಲಿ ಹೋರಾಟ ಆರಂಭಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು ಎಂದು ಪೊಲೀಸ್ ಬಿಗಿ ಭದ್ರತೆ ಏರ್ಪಡಿಸಲಾಗಿದ್ದು, ಮೆಟ್ರೋ ಸ್ಟೇಷನ್‌, ಬಸ್‌ ನಿಲ್ದಾಣ, ಮಾಲ್‌ಗಳ ಬಳಿ ಕೂಡ ಬಂದೋಬಸ್ತ್‌ ಮಾಡಲಾಗಿದೆ.

ಪೋಲಿಸರು ಪ್ರತಿಭಟನೆ ಹತ್ತಿಕ್ಕುವ ಕೆಲಸ ಮಾಡಿದರೆ ಪ್ರತಿಭಟನೆ ಉಗ್ರ ಸ್ವರೂಪ ಪಡೆಯುವ ಸಾಧ್ಯತೆ ಇದೆ. ಈಗಾಗಲೇ ಈ ಬಗ್ಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಅವರು ಎಚ್ಚರಿಕೆ ಕೊಟ್ಟಿದ್ದಾರೆ. ನಾವು ಫ್ರೀಡಂ ಪಾರ್ಕಿನಲ್ಲಿ ಧರಣಿ ಬಿಟ್ಟು ಬೇರೆ ಯೋಜನೆ ಮಾಡಿಲ್ಲ. ಹೋರಾಟಗಳಲ್ಲಿ ಎರಡು ವಿಧ, ಒಂದು ಶಾಂತಿ, ಮತ್ತೊಂದು ಕ್ರಾಂತಿ. ಇಂದು ನಾವು ಶಾಂತಿಯುತವಾಗಿ ಹೋರಾಟ ಮಾಡಲು ಕರೆ ಕೊಟ್ಟಿದ್ದೇವೆ. ಒಂದು ತಿಂಗಳೊಳಗೆ ಸರೋಜಿನಿ ಮಹಿಷಿ ವರದಿ ಅನುಷ್ಠಾನ ಮಾಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಯಲಿದೆ. ಈ ಸಂಬಂಧ ಸಿಎಂ ಭೇಟಿಗೆ ಮನವಿ ಮಾಡಿದ್ದೇವೆ. ರ‍್ಯಾಲಿ, ಮೆರವಣಿಗೆ ಮಾಡಬಾರದು ಎಂತಲೂ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.

ಇನ್ನು ಕರವೇ ಪ್ರತಿಭಟನೆಗೆ ಸ್ಯಾಂಡಲ್‌ವುಡ್ ಸಾಥ್ ನೀಡಿದೆ. ಸ್ಯಾಂಡಲ್‌ವುಡ್ ನಟ ಪ್ರೇಮ್, ನಟಿ ಪೂಜಾಗಾಂಧಿ ಮತ್ತಿತರರು ಬೆಂಬಲ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಹಲವು ಸಂಘಟನೆಗಳು ಬೆಂಬಲ ಸೂಚಿಸಿವೆ.

ಎಲ್ಲ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇ.100 ರಷ್ಟು ಹುದ್ದೆಗಳು ಕನ್ನಡಿಗರಿಗೆ ಮೀಸಲಿಡಬೇಕು. ಇತರ ಹುದ್ದೆಗಳಲ್ಲಿ ಶೇ. 80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು. ಹಾಗೆಯೇ ರಾಜ್ಯ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ವಲಯದ ಘಟಕಗಳಲ್ಲಿ ಕನ್ನಡಿಗರಿಗೆ 100 ಪ್ರತಿಶತ ಮೀಸಲಾತಿ ನೀಡಬೇಕು ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.

ಇದನ್ನೂ ಓದಿ | Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಬೆಳಗಾವಿಯಲ್ಲಿ ಸರ್ಕಾರದ ವಿರುದ್ಧ ಕರವೇ ರಣಕಹಳೆ

ಬೆಳಗಾವಿ: ಬೆಳಗಾವಿಯಲ್ಲೂ ಸರ್ಕಾರದ ವಿರುದ್ಧ ಕರವೇ ರಣಕಹಳೆ ಮೊಳಗಿದೆ. ಚನ್ನಮ್ಮ ವೃತ್ತದಿಂದ ಡಿಸಿ ಕಚೇರಿಯವರೆಗೆ ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ಮೂಲ ತೆರಳಿ ಹೋರಾಟ ನಡೆಸಿದರು.

ಡಾ, ಸರೋಜನಿ ಮಹಿಷಿ ವರದಿ ಜಾರಿ ಮಾಡುವಂತೆ ಸರ್ಕಾರವನ್ನು ಆಗ್ರಹಿಸಿದ ಕಾರ್ಯಕರ್ತರು, ಡಿಸಿ ಮುಖೇನ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪರರಾಜ್ಯದವರ ಹಾವಳಿ ತಡೆಯುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕನ್ನಡಿಗರಿಗೆ ಮಾತ್ರ ಶೇ.100 ಉದ್ಯೋಗ ನೀಡುವಂತೆ ಒತ್ತಾಯಿಸಲಾಗಿದೆ.

ಕೋಟೆ ನಾಡಿನಲ್ಲಿ ಸಿಡಿದೆದ್ದ ಕರವೇ

ಚಿತ್ರದುರ್ಗ: ಸರ್ಕಾರದ ವಿರುದ್ಧ ಕೋಟೆ ನಾಡಿನಲ್ಲಿ ಕರವೇ ಕಾರ್ಯಕರ್ತರು ಸಿಡಿದೆದ್ದಿದ್ದಾರೆ. ನಗರದ ಡಿಸಿ ವೃತ್ತದಲ್ಲಿ ನಾರಾಯಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕಾರ್ಪೊರೇಟ್ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಕ್ಕೆ ಆಗ್ರಹಿಸಿದರು. ರಾಜ್ಯದ ನಿರುದ್ಯೋಗಿ ಯುವಕರಿಗೆ ಕಂಪನಿಗಳಲ್ಲಿ ಉದ್ಯೋಗ ನೀಡಬೇಕು, ನಮಗೆ ಉದ್ಯೋಗಿ ಕೊಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ ಎಂದು ಘೋಷಣೆ ಕೂಗಿದರು.

ಹಾವೇರಿಯಲ್ಲಿ ಕರವೇ ಪ್ರತಿಭಟನೆ

ಹಾವೇರಿ: ಹಾವೇರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರವೇಯಿಂದ ಪ್ರತಿಭಟನೆ ನಡೆಯಿತು. ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಆಗ್ರಹಿಸಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕನ್ನಡಿಗರಿಗೆ ಉದ್ಯೋಗ ನೀಡುವ ಕಾಯ್ದೆ ರೂಪಿಸಲು ಒತ್ತಾಯಿಸಿ, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದರು.

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಿ

ಯಾದಗಿರಿ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಕರವೇಯಿಂದ ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

ಕರವೇ ಜಿಲ್ಲಾಧ್ಯಕ್ಷ ಟಿ.ಎನ್.ಭೀಮುನಾಯಕ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸಲು ಡಾ.ಸರೋಜಿನಿ ಮಹಿಷಿ ವರದಿ ಜಾರಿ ಮಾಡಬೇಕು ಎಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಇದನ್ನೂ ಓದಿ : Dengue Fever: ರಾಜಧಾನಿಯಲ್ಲಿ ಡೆಂಗ್ಯು ಜ್ವರಕ್ಕೆ ಒಂದು ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ

ಧಾರವಾಡ: ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಧಾರವಾಡದ ಡಿಸಿ ಕಚೇರಿ ಎದುರು ಕರವೇ ಬಣದಿಂದ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರ ಈ ಕೂಡಲೇ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading

Latest

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

VISTARANEWS.COM


on

ಕೇರಳಂ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಇಂದು ಈ ಕುರಿತು ಅಧಿಕೃತ ಘೋಷಣೆ ಮಾಡಿದೆ. ವಿ.ಡಿ. ಸತೀಶನ್‌ ಜೊತೆಗೆ ಕೆ.ಸಿ.ವೇಣುಗೋಪಾಲ್‌, ರಮೇಶ್‌ ಚೆನ್ನಿತಲ ಅವರು ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿದ್ದರು.
ಮೇ 4 ರಂದು ಕೇರಳಂ ವಿಧಾನಸಭಾ ಚುನಾವಣಾ ಫಲಿತಾಂಶ ಘೋಷಣೆಯಾದ್ರೂ ಸಿಎಂ ಸ್ಥಾನಕ್ಕೆ ಭಾರಿ ಪೈಪೋಟಿ ಇದ್ದ ಕಾರಣ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿತ್ತು.
ಇದೀಗ ಕೇರಳ ನೂತನ ಮುಖ್ಯಮಂತ್ರಿಯಾಗಿ ವಿ.ಡಿ.ಸತೀಶನ್‌ ಅವರ ಹೆಸರು ಘೋಷಣೆಯಾಗ್ತಿದ್ದಂತೆ ಅವರ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ವಿ.ಡಿ.ಸತೀಶನ್‌ ಪರವೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಇದೇ ಪರವೂರು ವಿಧಾನಸಭಾ ಕ್ಷೇತ್ರದಿಂದ ಸತೀಶನ್‌ 6 ಬಾರಿ ಗೆಲುವು ಸಾಧಿಸಿದ್ದಾರೆ. 2021 ರಲ್ಲಿ ಕೇರಳ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಕೇರಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿಯೂ ಅವರು ಸೇವೆ ಸಲ್ಲಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

VISTARANEWS.COM


on

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್​ ವಿಧಾನಸಭೆಯಲ್ಲಿ ವಿಶ್ವಾಸ ಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಮಿಳುನಾಡು ಅಸೆಂಬ್ಲಿಯಲ್ಲಿ ವಿಜಯ್​ ನೇತೃತ್ವದ ಟಿವಿಕೆಗೆ 144 ಸದಸ್ಯರ ಬೆಂಬಲ ಸಿಕ್ಕಿದೆ. 22 ಶಾಸಕರು ವಿಶ್ವಾಸ ಮತದ ವಿರುದ್ಧ ಮತ ಚಲಾಯಿಸಿದ್ದರು. ಐವರು ಶಾಸಕರು ಮತದಾನದಿಂದ ದೂರ ಉಳಿದಿದ್ದರು. ಎಐಡಿಎಂಕೆಯ ಒಂದು ಬಣ ಅಸೆಂಬ್ಲಿಯಲ್ಲಿ ಟಿವಿಕೆ ಪರ ಮತ ಚಲಾಯಿಸಿದೆ. ವಿರೋಧಪಕ್ಷ ಡಿಎಂಕೆ ಸಭಾತ್ಯಾಗ ಮಾಡಿತ್ತು. 108 ಸ್ಥಾನಗಳನ್ನು ಗೆಲ್ಲುವ ಮೂಲಕ ವಿಜಯ್ ನೇತೃತ್ವದ ಟಿವಿಕೆ ತಮಿಳುನಾಡಿನಲ್ಲಿ ಅತಿದೊಡ್ಡ ಪಕ್ಷವಾಗಿ ಹೊಮ್ಮಿತ್ತು. ವಿಜಯ್ ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಿದ್ದರು.


ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ, 30 ಶಾಸಕರಿಂದ ಟಿವಿಕೆಗೆ ಮತ
ವಿಜಯ್ ವಿಶ್ವಾಸ ಮತ ಯಾಚನೆ ವೇಳೆ 30 ಎಐಎಡಿಎಂಕೆ ಶಾಸಕರು ಟಿವಿಕೆ ಪರ ಮತಚಲಾಯಿಸಿದ್ದು, ತಮಿಳುನಾಡಿನಲ್ಲಿ ಸಂಚಲನ ಮೂಡಿಸಿದೆ. ಇದರೊಂದಿಗೆ ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಡಿಎಂಕೆಯಲ್ಲಿ ಈಗ ಅತಿ ದೊಡ್ಡ ಆಂತರಿಕ ಸಂಘರ್ಷ ಏರ್ಪಟ್ಟಿದೆ. ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆ 47 ಶಾಸಕರನ್ನು ಹೊಂದಿದೆ. ಇದರಲ್ಲಿ 30 ಶಾಸಕರು ಟಿವಿಕೆ ಪರ ಮತ ಚಲಾಯಿಸಿದ್ದಾರೆ ಎನ್ನಲಾಗಿದೆ. ಪಕ್ಷದ ವಿಪ್​​ ಹೊರತಾಗಿಯೂ, ಈ ಶಾಸಕರು ವಿಜಯ್​​ಗೆ ಜೈ ಎಂದಿದ್ದಾರೆ. ವಿಜಯ್​ ಪರ ಮತ ಚಲಾಯಿಸಿದ ಎಐಎಡಿಎಂಕೆ ಶಾಸಕರು ಪಕ್ಷಾಂತರ ನಿಷೇಧ ಕಾಯಿದೆ ತೂಗು ಕತ್ತಿಯಿಂದ ಪಾರಾಗ್ತಾರಾ ಅನ್ನೋದು ಸದ್ಯದ ಕುತೂಹಲವಾಗಿದೆ.

Continue Reading
Advertisement
Latest17 hours ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest17 hours ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ17 hours ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest18 hours ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest20 hours ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

Latest22 hours ago

ಕೇರಳಂ ನೂತನ ಸಿಎಂ ಆಗಿ ವಿ.ಡಿ. ಸತೀಶನ್‌ ಆಯ್ಕೆ

Latest2 days ago

ಮನಸೆಳೆದ ಎಸ್‌ಜೆಬಿಐಟಿ ವಿದ್ಯಾರ್ಥಿಗಳ ʼವರ್ಚಸ್ವ ಫ್ಲ್ಯಾಶ್ ಮಾಬ್ʼ

ಅವಿಭಾಗೀಕೃತ2 days ago

ಬೆಂಗಳೂರಿಗೆ ʼಆರನೇ ಗ್ಯಾರಂಟಿʼ – ʼನನ್ನ ಖಾತೆ ನನ್ನ ಹಕ್ಕುʼ

ಪ್ರಮುಖ ಸುದ್ದಿ2 days ago

ಅಗ್ನಿ ಪರೀಕ್ಷೆ ಗೆದ್ದ ‘ವಿಜಯ್‌‌‌’, ಎಐಎಡಿಎಂಕೆಯಲ್ಲಿ ಭಿನ್ನಮತ ಸ್ಫೋಟ

ಸಿನಿಮಾ2 days ago

ನಟ, ನಿರ್ಮಾಪಕ ದಿಲೀಪ್‌ ರಾಜ್‌ ಇನ್ನಿಲ್ಲ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌