Karnataka Assembly Live: ವಿಧಾನಸಭೆ ಕಲಾಪಕ್ಕೆ ಹಾಜರಾಗಿ ಸೇಫ್‌ ಆದ ಬಸವನಗೌಡ ದದ್ದಲ್‌! ವಿಧಾನ ಮಂಡಲ ಕಲಾಪ ಲೈವ್‌ ಇಲ್ಲಿದೆ - Vistara News

ಪ್ರಮುಖ ಸುದ್ದಿ

Karnataka Assembly Live: ವಿಧಾನಸಭೆ ಕಲಾಪಕ್ಕೆ ಹಾಜರಾಗಿ ಸೇಫ್‌ ಆದ ಬಸವನಗೌಡ ದದ್ದಲ್‌! ವಿಧಾನ ಮಂಡಲ ಕಲಾಪ ಲೈವ್‌ ಇಲ್ಲಿದೆ

Karnataka Assembly Live: ದದ್ದಲ್‌ ಅವರು ವಾಲ್ಮೀಕಿ ನಿಗಮದ ಅಧ್ಯಕ್ಷರೂ ಆಗಿದ್ದಾರೆ. ವಾಲ್ಮೀಕಿ ಹಗರಣದಲ್ಲಿ ಅವರ ಹೆಸರೂ ಕೇಳಿಬಂದಿದೆ. ದದ್ದಲ್‌ ಅವರ ಪಿಎ ಸಾಕಷ್ಟು ಹಣದ ಡೀಲಿಂಗ್‌ ನಡೆಸಿರುವುದು ಪತ್ತೆಯಾಗಿದ್ದು, ಇದರಿಂದ ಆರೋಪದ ತೂಗುಗತ್ತಿ ದದ್ದಲ್‌ ಅವರ ಮೇಲೂ ತೂಗುತ್ತಿದೆ.

VISTARANEWS.COM


on

karnataka assembly Live basanagouda daddal
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಅವ್ಯವಹಾರ (Valmiki Corporation Scam) ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ತನಿಖೆಗಾಗಿ ಬೇಕಾಗಿರುವ ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌, ಇಂದು ವಿಧಾನಸಭೆ ಕಲಾಪಕ್ಕೆ (Karnataka Session Live) ಹಾಜರಾಗಿದ್ದಾರೆ. ‌ಆ ಮೂಲಕ, ಅಧಿವೇಶನ (Assembly Session) ಮುಗಿಯುವ ಹತ್ತು ದಿನಗಳ ಕಾಲ ಅವರು ಇಡಿ ಬಂಧನದಿಂದ ಸೇಫ್‌ ಆಗಿದ್ದಾರೆ.

ವಿಧಾನ ಮಂಡಲ ಕಲಾಪ ಆರಂಭ

ವಿಧಾನ ಮಂಡಲದ ಉಭಯ ಸದನಗಳ ಕಲಾಪ (Assembly Session) ಸೋಮವಾರ (ಜುಲೈ 15) ಆರಂಭವಾಗಿದ್ದು, ಒಂಬತ್ತು ದಿನ ನಡೆಯಲಿದೆ. ಆಡಳಿತ ಪಕ್ಷದ ವಿರುದ್ಧ ಸಮರ ಸಾರಲು ಪ್ರತಿಪಕ್ಷಗಳು ಸಜ್ಜಾಗಿವೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ಮುಡಾ ಹಗರಣ (MUDA Scam), ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ (Valmiki Corporation Scam), ಬೆಲೆ ಏರಿಕೆ (Price Hike) ಸೇರಿದಂತೆ ವಿವಿಧ ವಿಚಾರಗಳನ್ನು ಪ್ರಸ್ತಾವಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿದೆ. ಸಿದ್ದರಾಮಯ್ಯ (CM Siddaramaiah) ಸರ್ಕಾರ ಕೂಡ ನಿನ್ನೆ ಅಧಿಕಾರಿಗಳ ಸಭೆ ನಡೆಸಿ ಪ್ರತ್ಯುತ್ತರ ನೀಡಲು ಸೂಕ್ತ ಸಿದ್ಧತೆ ಮಾಡಿಕೊಂಡಿದೆ. ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಕಲಾಪಗಳ ಲೈವ್‌ (Karnataka Assembly Live) ವರದಿ ಇಲ್ಲಿದೆ.

ಪ್ರತ್ಯಕ್ಷವಾದ ಬಸವನಗೌಡ ದದ್ದಲ್

ಕಳೆದ ಮೂರು ದಿನಗಳಿಂದ ಬಸವನಗೌಡ ದದ್ದಲ್‌ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ನಾಲ್ಕು ದಿನಗಳ ಹಿಂದೆ ಇಡಿ ಅಧಿಕಾರಿಗಳು ಮಾಜಿ ಸಚಿವ ನಾಗೇಂದ್ರ ಹಾಗೂ ಶಾಸಕ ದದ್ದಲ್‌ ನಿವಾಸ ಹಾಗೂ ಕಚೇರಿಗಳಿಗೆ ದಾಳಿ ಮಾಡಿದ್ದರು. ನಾಗೇಂದ್ರ ಅವರನ್ನು ಪ್ರಶ್ನಿಸಿಮ ಬಳಿಕ ವಶಕ್ಕೆ ಪಡೆದು ಕೊಂಡೊಯ್ದಿದ್ದರು. ಇದರೊಂದಿಗೆ ದದ್ದಲ್‌ ಅವರಿಗೂ ಬಂಧನ ಭೀತಿ ಶುರುವಾಗಿತ್ತು. ಇಡಿ ಅಧಿಕಾರಿಗಳು ಹುಡುಕಾಡುತ್ತಿದ್ದಂತೆ ದದ್ದಲ್‌ ನಾಪತ್ತೆಯಾಗಿದ್ದರು.

ದದ್ದಲ್‌ ಅವರು ವಾಲ್ಮೀಕಿ ನಿಗಮದ ಅಧ್ಯಕ್ಷರೂ ಆಗಿದ್ದಾರೆ. ವಾಲ್ಮೀಕಿ ಹಗರಣದಲ್ಲಿ ಅವರ ಹೆಸರೂ ಕೇಳಿಬಂದಿದೆ. ದದ್ದಲ್‌ ಅವರ ಪಿಎ ಸಾಕಷ್ಟು ಹಣದ ಡೀಲಿಂಗ್‌ ನಡೆಸಿರುವುದು ಪತ್ತೆಯಾಗಿದ್ದು, ಇದರಿಂದ ಆರೋಪದ ತೂಗುಗತ್ತಿ ದದ್ದಲ್‌ ಅವರ ಮೇಲೂ ತೂಗುತ್ತಿದೆ. ಮೊನ್ನೆ ಇಡಿ ಬಂಧನದಿಂದ ಪಾರಾಗಲು ದದ್ದಲ್‌ ಅವರು ಎಸ್‌ಐಟಿ ಮುಂದೆ ಹಾಜರಾಗಿ ಇಡೀ ದಿನ ಅಲ್ಲಿ ಕುಳಿತಿದ್ದರು. ಸಂಜೆ ಬಳಿಕ ಕಣ್ಮರೆಯಾಗಿದ್ದರು.

ಸದ್ಯ ವಿಧಾನಸಭೆ ಕಲಾಪಕ್ಕೆ ಆಗಮಿಸುವ ಮೂಲಕ ಅವರು ಬಂಧನದಿಂದ ಬಚಾವ್ ಆಗಿದ್ದಾರೆ. ಇನ್ನೂ ಹತ್ತು ದಿನ ಶಾಸಕ ದದ್ದಲ್ ಬಂಧನ ಸಾಧ್ಯತೆ ಕಡಿಮೆ. ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದೆ. ಒಂದು ವೇಳೆ ಅಧಿವೇಶನ ಸಂದರ್ಭದಲ್ಲೆ ಶಾಸಕರ ತನಿಖೆ ನಡೆಸಬೇಕು, ಬಂಧನ ಮಾಡಬೇಕು ಎಂದರೆ ಸ್ಪೀಕರ್ ಅನುಮತಿ ಪಡೆಯುವುದು ಕಡ್ಡಾಯವಾಗಲಿದೆ. ಅತ್ತ ಇಡಿ ಅಥವಾ ಎಸ್ಐಟಿ ನೊಟೀಸ್ ನೀಡಿದರೂ ಸದನಕ್ಕೆ ಹಾಜರಾಗಬೇಕು ಎಂದು ಸಬೂಬು ನೀಡಬಹುದು. ಹೀಗಾಗಿ ಅಧಿವೇಶನ ಮುಗಿಯುವವರೆಗೂ ದದ್ದಲ್ ಬಂಧನ ಸಾಧ್ಯತೆ ಇಲ್ಲದಾಗಿದೆ.

ಪ್ರವೇಶದ್ವಾರ ಉದ್ಘಾಟನೆ

ವಿಧಾನಸಭಾ ಸಭಾಂಗಣದ ಪ್ರವೇಶದ್ವಾರಕ್ಕೆ ಹೊಸದಾಗಿ ವಿನ್ಯಾಸಗೊಳಿಸಿರುವ ದ್ವಾರವನ್ನು ಉದ್ಘಾಟನೆ ಮಾಡಲಾಯಿತು. ಬೀಟೆ ಮರದಲ್ಲಿ (rose wood) ಕಲಾತ್ಮಕವಾಗಿ ಕೆತ್ತನೆಯಿಂದ ವಿನ್ಯಾಸಗೊಳಿಸಿರುವ ದ್ವಾರವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ಸ್ಪೀಕರ್‌ ಯು.ಟಿ ಖಾದರ್‌, ಸಚಿವರು ಹಾಗೂ ಕಾಂಗ್ರೆಸ್‌ ಶಾಸಕರು ಈ ಸಂದರ್ಭದಲ್ಲಿ ಹಾಜರಿದ್ದರು.

ಸಂವಿಧಾನದ ಪೀಠಿಕೆ ಬೋಧನೆ, ಸಂತಾಪ

ಕಲಾಪದ ಮೊದಲು ಸಂವಿಧಾನದ ಪೀಠಿಕೆಯನ್ನು ಸಭಾಪತಿ ಎಲ್ಲರಿಗೂ ಬೋಧಿಸಿದರು. ನಂತರ, ಈ ಹಿಂದಿನ ಅವಧಿಯಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಸಲ್ಲಿಸಲಾಯಿತು. ಸಾಹಿತಿ ಕಮಲಾ ಹಂಪನಾ, ನಟ ದ್ವಾರಕೀಶ್, ಅಪರ್ಣಾ, ಸರೋದ್‌ ವಾದಕ ರಾಜೀವ್‌ ತಾರಾನಾಥ್‌ ಸೇರಿದಂತೆ ಅಗಲಿದ ಗಣ್ಯರಿಗೆ ಸಂತಾಪ ಸಲ್ಲಿಸಲಾಯಿತು. ಮಾಜಿ ಸಚಿವೆ ನಾಗಮ್ಮ ಕೇಶವ ಮೂರ್ತಿ, ಮಾಜಿ‌ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್, ಮಾಜಿ ಸಂಸದ ಮೂಡಲಗಿರಿಯಪ್ಪ, ಮಾಜಿ ಸಚಿವ ಎಂ ಪಿ ಕೇಶವ ಮೂರ್ತಿ, ಮಾಜಿ ಶಾಸಕರಾದ ವಸಂತ ಬಂಗೇರಾ, ಬಸನಗೌಡ ಗುರನಗೌಡ ಪಾಟೀಲ್, ನಾಗರೆಡ್ಡಿ ಪಾಟೀಲ್, ರಮೇಶ್ ಕುಮಾರ ಪಾಂಡೆ, ಟಿ ಎಚ್ ಶಿವಶಂಕರಪ್ಪ, ವಾಸು, ಖ್ಯಾತ ಧರ್ಮಗುರು ಖಾಝಿ ಅಸ್ಸೈಯದ್ ಫಜಲ್ ಕೋಯಮಗಮ ತಂಙಳ್ ಅಲ್ ಬುಖಾರಿ ಅವರಿಗೂ ಸಂತಾಪ ಸಲ್ಲಿಸಲಾಯಿತು.

ಇದನ್ನೂ ಓದಿ: Assembly Session: ಸೋಮವಾರದಿಂದ ಮಳೆಗಾಲದ ಅಧಿವೇಶನ, ವಿಧಾನಸಭೆಗೆ ಹೊಸ ‌ʼಖದರ್ʼ ತಂದ ಸ್ಪೀಕರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಪ್ರಮುಖ ಸುದ್ದಿ

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

VISTARANEWS.COM


on

ಚೆನ್ನೈ: ತಮಿಳು ನಟ ವಿಜಯ್‌ ಮುಖ್ಯಮಂತ್ರಿ ಆಗಿರುವುದಕ್ಕೆ ನನಗೆ ಯಾವುದೇ ಅಸೂಯೆ ಇಲ್ಲ ಎಂದು ತಮಿಳು ನಟ, ಸೂಪರ್‌ ಸ್ಟಾರ್‌ ರಜನೀಕಾಂತ್‌ ಸ್ಪಷ್ಟಪಡಿಸಿದ್ದಾರೆ.

ಚೆನ್ನೈನಲ್ಲಿ ಮಾತನಾಡಿದ ಅವರು, ಪ್ರಬಲ ಮೈತ್ರಿಕೂಟಗಳನ್ನು ಸೋಲಿಸಿ ವಿಜಯ್‌ ಸಿಎಂ ಆಗಿದ್ದಾರೆ. ಇದರಿಂದ ನನಗೆ ಯಾವುದೇ ಅಸೂಯೆ ಇಲ್ಲ. ನನಗೆ ತುಂಬಾ ಸಂತೋಷವಾಗಿದೆ ಎಂದಿದ್ದಾರೆ.

ನಾನು ರಾಜಕೀಯ ಪ್ರವೇಶಿಸಿದ್ದರೆ ಶೇ.100 ರಷ್ಟು ಯಶಸ್ಸು ಸಾಧಿಸುತ್ತಿದ್ದೆ. ಆದರೆ ನಾನು ರಾಜಕೀಯದಿಂದ ದೂರ ಸರಿದು ಬಹಳ ದಿನಗಳಾಗಿವೆ ಎಂದು ಹೇಳಿದ್ದಾರೆ.

ವಿಜಯ್‌ ಮತ್ತು ನನ್ನ ನಡುವೆ ಒಂದು ಜನರೇಶನ್‌ ಗ್ಯಾಪ್‌ ಇದೆ. ನಮ್ಮಿಬ್ಬರ ನಡುವೆ ಸುಮಾರು 25 ವರ್ಷದ ಅಂತರವಿದೆ. ಅವರ ಬಗ್ಗೆಯಾಗಲಿ, ಅವರ ಸಿಎಂ ಆಗಿರುವುದಕ್ಕಾಗಲಿ ನನಗೆ ಯಾವುದೇ ಅಸೂಯೆ ಇಲ್ಲ ಎಂದು ಸ್ಪಷ್ಟಪಡಿಸಿದರು. ವಿಜಯ್‌ ಸಿಎಂ ಆದ ತಕ್ಷಣವೇ ನಾನು ಅವರಿಗೆ ಅಭಿನಂದನೆ ಸಲ್ಲಿಸಿದ್ದೇನೆ ಎಂದು ರಜನೀಕಾಂತ್‌ ತಿಳಿಸಿದರು.

ಚುನಾವಣೆ ಬಳಿಕ ತಮ್ಮ ವಿರುದ್ಧ ಕೇಳಿಬರುತ್ತಿರುವ ಟೀಕೆಗಳ ಕುರಿತೂ ರಜನೀಕಾಂತ್‌ ಪ್ರತಿಕ್ರಿಯೆ ನೀಡಿದರು. ಚುನಾವಣೆ ನಂತರ ನನ್ನ ವಿರುದ್ಧ ಅನೇಕ ಟೀಕೆಗಳು ಬರುತ್ತಿವೆ. ನಾನು ಅವಕ್ಕೆ ಪ್ರತಿಕ್ರಿಯಿಸದಿದ್ದರೆ ಅವು ಸತ್ಯ ಎಂದು ಭಾವಿಸುವ ಸಾಧ್ಯತೆ ಇದೆ ಎಂದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿ ಮಾಡಿದ ವಿಚಾರಕ್ಕೂ ಸ್ಪಷ್ಟನೆ ನೀಡಿದ ರಜನೀಕಾಂತ್‌, ಸ್ಟಾಲಿನ್‌ ಮತ್ತು ನನ್ನ ಸ್ನೇಹ ರಾಜಕೀಯವನ್ನೂ ಮೀರಿದ್ದು, ನಮ್ಮ ಸ್ನೇಹಕ್ಕೆ ಸುಮಾರು 35 ವರ್ಷಗಳ ಇತಿಹಾಸ ಇದೆ ಎಂದು ಹೇಳಿದರು.

“ಕೊಳತ್ತೂರಿನಲ್ಲಿ ಸ್ಟಾಲಿನ್‌ ಸೋತಿದ್ದಕ್ಕೆ ನನಗೆ ಬೇಸರವಾಯಿತು. ಸ್ನೇಹಿತನಾಗಿ ಅವರನ್ನು ಭೇಟಿಯಾಗಿ ಸಮಾಧಾನ ಮಾಡಿದ್ದೇನೆ. ಆದರೆ ಆ ವಿಚಾರದಲ್ಲೂ ಕೆಲವರು ನನ್ನನ್ನು ಟೀಕಿಸುತ್ತಿದ್ದಾರೆ, ಅದಕ್ಕೆ ಈ ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ರಜನೀಕಾಂತ್‌ ಹೇಳಿದ್ದಾರೆ.

Continue Reading

Latest

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

VISTARANEWS.COM


on

ಅಬುಧಾಬಿ: ಆರು ದಿನಗಳ ವಿದೇಶ ಪ್ರವಾಸದಲ್ಲಿ ಪ್ರಧಾನಿ ಮೊದಲು ಯುಎಇಗೆ ಭೇಟಿ ನೀಡಿದ್ದಾರೆ. ಯುರೋಪ್ ಭೇಟಿಗೂ ಮುನ್ನ ಅಬುಧಾಬಿಗೆ ಭೇಟಿ ನೀಡಿದ್ದು, ಭಾರತ-ಯುಎಇ ನಡುವಿನ ನಿಕಟ ಸಂಬಂಧಕ್ಕೆ ಸಾಕ್ಷಿ ಎನ್ನಲಾಗುತ್ತಿದೆ.
ಅಬುಧಾಬಿಯಲ್ಲಿ ಪ್ರಧಾನಿ ಮೋದಿ ಮತ್ತು ಯುಎಇ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ರಕ್ಷಣೆ, ವ್ಯಾಪಾರ, ಹೂಡಿಕೆ, ಇಂಧನ ಭದ್ರತೆ ಕುರಿತು ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಎಲ್ಲಾ ಅಗತ್ಯ ನೆರವು ನೀಡುವ ಭರವಸೆ ನೀಡಿದರು. ಇದೇ ವೇಳೆ ಅವರು, ಯುಎಇ ಮೇಲಿನ ಇರಾನ್ ದಾಳಿಯನ್ನು ಖಂಡಿಸಿದರು.
ಪ್ರಧಾನಿ ಮೋದಿಯವರ ಭೇಟಿಯನ್ನು ಯುಎಇ ಮುಕ್ತಕಂಠದಿಂದ ಹೊಗಳಿದೆ. ‘ಭಾರತದ ಪ್ರಧಾನಿ ನಮ್ಮ ನಿಜವಾದ ಆಸ್ತಿ’ ಎಂದು ಯುಎಇ ಅಂತಾರಾಷ್ಟ್ರೀಯ ಸಹಕಾರ ಸಚಿವೆ ರೀಮ್ ಅಲ್ ಹಶಿಮಿ ಬಣ್ಣಿಸಿದ್ದಾರೆ.
ಪ್ರಧಾನಿ ಮೋದಿ ಯುಎಇಗೆ ಆಗಮಿಸುತ್ತಿದ್ದಂತೆಯೇ ಭವ್ಯ ಸ್ವಾಗತ ನೀಡಲಾಯಿತು. ಮೋದಿ ಅವರಿದ್ದ ವಿಶೇಷ ವಿಮಾನಕ್ಕೆ ಗಗನಮಾರ್ಗದಲ್ಲೇ ಯುಎಇಯ ಎಫ್‌-16 ಯುದ್ಧ ವಿಮಾನಗಳು ಗೌರವ ರಕ್ಷೆ ನೀಡಿದ್ದವು.
ಯುಎಇ ಬಳಿಕ ಮೋದಿ ನೆದರ್‌ಲ್ಯಾಂಡ್‌, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ.

Continue Reading

Latest

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

VISTARANEWS.COM


on

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ದೀದಿ ಭದ್ರಕೋಟೆಯನ್ನು ಧೂಳೀಪಟಗೈದು ಅಧಿಕಾರಕ್ಕೇರಿದ ಸುವೇಂದು ಅಧಿಕಾರಿ ಮುಖ್ಯಮಂತ್ರಿ ಪಟ್ಟಕ್ಕೇರುತ್ತಿದ್ದಂತೆ ಮಹತ್ವದ ಆದೇಶ ಹೊರಡಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಆರೋಗ್ಯವಂತ ಜಾನುವಾರುಗಳ ಹತ್ಯೆ ಮಾಡಿದರೆ ಶಿಕ್ಷೆ ನೀಡಲಾಗುವುದು ಎಂದು ಆದೇಶ ಹೊರಡಿಸಿದ್ದಾರೆ.
ಸರ್ಕಾರಿ ಪಶುವೈದ್ಯರು ನೀಡುವ ಫಿಟ್‌ನೆಸ್‌‍ ಪ್ರಮಾಣಪತ್ರವಿಲ್ಲದೆ ಹಸು, ಹೋರಿ, ಎಮ್ಮೆ ಮತ್ತು ಕರು ಸೇರಿ ಯಾವುದೇ ಪ್ರಾಣಿಯನ್ನು ಹತ್ಯೆ ಮಾಡುವಂತಿಲ್ಲ ಎಂದು ಪಶ್ಚಿಮ ಬಂಗಾಳದ ಬಿಜೆಪಿ ಸರ್ಕಾರವು ಅಧಿಸೂಚನೆ ಹೊರಡಿಸಿದೆ.
ಹಸು 14 ವರ್ಷ ಮೇಲ್ಪಟ್ಟಿದ್ದು, ಕೆಲಸ ಮಾಡಲು ಅಥವಾ ಸಂತಾನೋತ್ಪತ್ತಿ ಮಾಡಲು ಯೋಗ್ಯವಿಲ್ಲದಿದ್ದರೆ ಅಥವಾ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿದ್ದು, ಶಾಶ್ವತವಾಗಿ ಗುಣಪಡಿಸಲು ಸಾಧ್ಯವಾಗದಿದ್ದರೆ ಮಾತ್ರ ಸ್ಥಳೀಯ ನಾಗರಿಕ ಅಧಿಕಾರಿಗಳು ಅಥವಾ ಪಶುವೈದ್ಯರು ಜಂಟಿಯಾಗಿ ಪ್ರಮಾಣ ಪತ್ರವನ್ನು ನೀಡಬಹುದಾಗಿದೆ.
ನಿಯಮಗಳನ್ನು ಜಾರಿಗೊಳಿಸಲು ಅಧಿಕಾರಿಗಳು ನಡೆಸುವ ಯಾವುದೇ ಪರಿಶೀಲನೆಯನ್ನು ವ್ಯಕ್ತಿಗಳು ತಡೆಯುವಂತಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಯಾವುದೇ ರೀತಿಯ ಕಾನೂನು ಉಲ್ಲಂಘನೆಗಳಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ 1 ಸಾವಿರ ರೂಪಾಯಿವರೆಗೆ ದಂಡ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Continue Reading

ಪ್ರಮುಖ ಸುದ್ದಿ

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

VISTARANEWS.COM


on


ಕೇಂದ್ರ ಚುನಾವಣಾ ಆಯೋಗ 3 ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್‌ಐಆರ್‌) ಘೋಷಣೆ ಮಾಡಿದೆ. ಇದರಲ್ಲಿ ಕರ್ನಾಟಕ ಸೇರಿದಂತೆ 16 ರಾಜ್ಯಗಳು ಮತ್ತು 3 ಕೇಂದ್ರಾಡಳಿತ ಪ್ರದೇಶಗಳು ಸೇರಿದ್ದು, ಮೇ 30ರಿಂದ ಎಸ್‌ಐಆರ್‌ ನಡೆಯಲಿದೆ.
ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ದೆಹಲಿ, ಹರಿಯಾಣ, ಪಂಜಾಬ್‌, ಚಂಡೀಗಢ, ಒಡಿಶಾ, ಮಿಜೋರಾಂ, ಸಿಕ್ಕಿಂ, ಮಣಿಪುರ, ಉತ್ತರಾಖಂಡ, ಅರುಣಾಚಲ ಪ್ರದೇಶ, ಮೇಘಾಲಯ, ಜಾರ್ಜಂಡ್‌, ನಾಗಾಲ್ಯಾಂಡ್‌, ತ್ರಿಪುರ, ದಾದರ್‌ ಮತ್ತು ನಗರ ಹವೇಲಿ, ದಮನ್‌ ಮತ್ತು ದಿಯುಗಳಲ್ಲಿ 3 ನೇ ಹಂತದಲ್ಲಿ ಎಸ್‌ಐಆರ್‌ ನಡೆಯಲಿದೆ.
3ನೇ ಹಂತದ ಎಸ್‌ಐಆರ್‌ನಲ್ಲಿ 3.94 ಲಕ್ಷಕ್ಕೂ ಅಧಿಕ ಬೂತ್‌ ಮಟ್ಟದ ಅಧಿಕಾರಿಗಳು 36.73ಕೋಟಿ ಮತದಾರರ ಮನೆಗಳಿಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಈಗಾಗಲೇ ದೇಶದ 10 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ ನಡೆಸಲಾಗಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸಗಢ, ಕೇರಳಂ, ಪುದುಚೇರಿ, ಅಂಡಮಾನ್‌ ಮತ್ತು ನಿಕೋಬಾರ್‌, ಲಕ್ಷದ್ವೀಪ, ಗುಜರಾತ್‌, ಮಧ್ಯಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ ಈಗಾಗಲೇ ಎಸ್‌ಐಆರ್‌ ಕಾರ್ಯ ಮುಗಿದಿದೆ.
ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ ಹಾಗೂ ಲಡಾಖ್‌ನಲ್ಲಿ ಎಸ್‌ಐಆರ್‌ ಬಾಕಿ ಇದ್ದು, ಸ್ಥಳೀಯ ಹವಾಮಾನ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ವೇಳಾಪಟ್ಟಿ ಘೋಷಿಸುವುದಾಗಿ ಚುನಾವಣಾ ಆಯೋಗ ತಿಳಿಸಿದೆ.

Continue Reading
Advertisement
ಪ್ರಮುಖ ಸುದ್ದಿ15 hours ago

ವಿಜಯ್‌ ಸಿಎಂ ಆಗಿದ್ದಕ್ಕೆ ನನಗೆ ಅಸೂಯೆ ಇಲ್ಲ – ರಜನೀಕಾಂತ್‌

Latest15 hours ago

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿ.ಡಿ. ಸತೀಶನ್ ಪ್ರಮಾಣವಚನ

Latest2 days ago

ಅಬುಧಾಬಿಯಲ್ಲಿ ಮೋದಿ: ಯುಎಇ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

Latest3 days ago

ವಾಹನ ಸವಾರರಿಗೆ ಶಾಕ್! ಪೆಟ್ರೋಲ್, ಡೀಸೆಲ್ ತಲಾ ₹3 ಏರಿಕೆ.

Latest3 days ago

ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್ ಶಾಕ್‌, ಜಾಮೀನು ಅರ್ಜಿ ವಜಾ

Latest3 days ago

ಚೀನಾದಲ್ಲಿ ಟ್ರಂಪ್‌, ಶಿ ಜಿನ್‌‌ಪಿಂಗ್‌ ಹೈವೋಲ್ಟೇಜ್‌ ಮೀಟಿಂಗ್‌‌

Latest3 days ago

ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿ; ನಿಯಮ ಉಲ್ಲಂಘಿಸಿದ್ರೆ ಜೈಲು ಶಿಕ್ಷೆ, ದಂಡ

ಪ್ರಮುಖ ಸುದ್ದಿ3 days ago

ಕರ್ನಾಟಕ ಸೇರಿ 16 ರಾಜ್ಯ, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌

Latest3 days ago

ಹಿಜಾಬ್‌ ಓಕೆ, ಕೇಸರಿ ಶಾಲುಗೆ ನೋ: ಪರ- ವಿರೋಧ ಚರ್ಚೆ ಶುರು

Latest4 days ago

ವಿ.ಡಿ. ಸತೀಶನ್‌ ಸಿಎಂ ಆಗಿ ಆಯ್ಕೆ ಹಿಂದಿನ ರಿಯಲ್ ಸ್ಟೋರಿ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌