ವಿಸ್ತಾರ ಸಂಪಾದಕೀಯ: ನನೆಗುದಿಗೆ ಬಿದ್ದ ಪಬ್ಲಿಕ್‌ ಪರೀಕ್ಷೆಗೆ ಮೋಕ್ಷ ಕೊಡಿ, ವಿದ್ಯಾರ್ಥಿಗಳ ಸಂಕಟ ತಪ್ಪಿಸಿ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ನನೆಗುದಿಗೆ ಬಿದ್ದ ಪಬ್ಲಿಕ್‌ ಪರೀಕ್ಷೆಗೆ ಮೋಕ್ಷ ಕೊಡಿ, ವಿದ್ಯಾರ್ಥಿಗಳ ಸಂಕಟ ತಪ್ಪಿಸಿ

ಕ್ಷಣಕ್ಕೊಂದು ನಿರ್ಧಾರದಿಂದ ಗೊಂದಲ ಮೂಡಿದೆ. ಇದು ಮಕ್ಕಳ ಮನಸ್ಸಿನ ಮೇಲೆ ಮಾಡಬಹುದಾದ ದುಷ್ಪರಿಣಾಮ ಊಹಾತೀತ. ಈ ವಿಚಾರದಲ್ಲಿ ಶೀಘ್ರ ಯಾವುದಾದರೊಂದು ತೀರ್ಮಾನ ತೆಗೆದುಕೊಂಡು, ಒಟ್ಟಾರೆ ಶಿಕ್ಷಣ ವ್ಯವಸ್ಥೆಯಲ್ಲಿ ಮೂಡಿರುವ ಅವ್ಯವಸ್ಥೆಯನ್ನು ನಿವಾರಿಸಬೇಕಿದೆ.

VISTARANEWS.COM


on

exam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಾಜ್ಯದಲ್ಲಿ‌ ಮಾರ್ಚ್‌ 11ರಂದು ಆರಂಭವಾಗಿದ್ದು ಮಧ್ಯದಲ್ಲೇ ತಡೆಹಿಡಿಯಲ್ಪಟ್ಟ 5, 8 ಮತ್ತು 9ನೇ ತರಗತಿ ಪಬ್ಲಿಕ್‌ ಪರೀಕ್ಷೆ (Public Exam) ಕುರಿತ ವಿವಾದ ಮತ್ತೆ ನನೆಗುದಿಗೆ ಬಿದ್ದಿದೆ. ಮಾರ್ಚ್‌ 13ರಂದು ಸುಪ್ರೀಂ ಕೋರ್ಟ್‌ (Supreme Court) ಈ ಪರೀಕ್ಷೆಗೆ ತಡೆಯಾಜ್ಞೆ ನೀಡಿ, ಹೈಕೋರ್ಟ್‌ನಲ್ಲಿ (Karnataka High Court) ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿ ತೀರ್ಪು ನೀಡುವಂತೆ ಸೂಚಿಸಿತ್ತು. ಆದರೆ, ಹೈಕೋರ್ಟ್‌ನಲ್ಲಿ ಇನ್ನೂ ವಿವಾದ ಇತ್ಯರ್ಥವಾಗಿಲ್ಲ. ಮೂರು ದಿನಗಳ ಕಾಲ ವಿಚಾರಣೆ ನಡೆಸಿದ ಹೈಕೋರ್ಟ್‌ ಈಗ ತೀರ್ಪನ್ನು ಕಾಯ್ದಿರಿಸಿದೆ. ಹೀಗಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಇನ್ನೂ ಗೊಂದಲದಲ್ಲೇ ಇರುವಂತಾಗಿದೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (Education Department) ನಡೆಸುತ್ತಿರುವ ಈ ಪರೀಕ್ಷೆ ಮಾರ್ಚ್‌ 11ರಂದು ಆರಂಭಗೊಂಡು ಮಾರ್ಚ್‌ 18ಕ್ಕೆ ಮುಗಿಯಬೇಕಾಗಿತ್ತು.

ಹೈಕೋರ್ಟ್‌ನಲ್ಲಿ ಕಳೆದ ಕೆಲವು ದಿನಗಳಿಂದ ವಿಚಾರಣೆ ನಡೆಯುತ್ತಿದೆ. ಶಿಕ್ಷಣ ಇಲಾಖೆಗೆ ಪಬ್ಲಿಕ್‌ ಪರೀಕ್ಷೆ ನಡೆಸುವ ಅಧಿಕಾರವಿಲ್ಲ ಮತ್ತು ಅದು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವುದಿಲ್ಲ ಎಂಬ ವಾದವನ್ನು ಖಾಸಗಿ ಶಾಲೆಗಳ ಸಂಘಟನೆ ರುಪ್ಸಾ ವಾದ ಮಂಡಿಸುತ್ತಿದೆ. ರಾಜ್ಯ ಶಿಕ್ಷಣ ಇಲಾಖೆ 5, 8, 9 ಮತ್ತು 11ನೇ ತರಗತಿಗೆ ಈ ಬಾರಿ ಪಬ್ಲಿಕ್‌ ಪರೀಕ್ಷೆ ನಡೆಸಲು 2023ರ ಡಿಸೆಂಬರ್‌ನಲ್ಲೇ ಸುತ್ತೋಲೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಸಂಘಟನೆ ಕೋರ್ಟ್ ಮೆಟ್ಟಲೇರಿತ್ತು. ಹೈಕೋರ್ಟ್‌ನ ಏಕಸದಸ್ಯ ಪೀಠ ಮಾರ್ಚ್‌ 5ರಂದು ಸರ್ಕಾರದ ಸುತ್ತೋಲೆ ರದ್ದುಗೊಳಿಸಿತ್ತು. ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಸರ್ಕಾರ ಮೇಲ್ಮನವಿ ಸಲ್ಲಿಸಿದ ಬಳಿಕ, ಮಾರ್ಚ್‌ 7ರಂದು ವಿಭಾಗೀಯ ಪೀಠವು ತಡೆಯಾಜ್ಞೆಯನ್ನು ತೆರವುಗೊಳಿಸಿತು. ಹೀಗೆ 11ನೇ ತರಗತಿ ಪರೀಕ್ಷೆಗಳು ಆಗಲೇ ನಡೆದು ಮುಕ್ತಾಯವಾಗಿವೆ. 5, 8, 9ನೇ ತರಗತಿ ಪರೀಕ್ಷೆಗಳು ಮಾರ್ಚ್‌ 11ರಂದು ಆರಂಭವಾಗಿದ್ದವು. ನಂತರ ಖಾಸಗಿ ಶಿಕ್ಷಣ ಸಂಸ್ಥೆಗಳು ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಿಂದ ತಡೆಯಾಜ್ಞೆ ತಂದವು. ಹೀಗೆ ನಡೆಯುತ್ತಾ, ಪಬ್ಲಿಕ್‌ ಪರೀಕ್ಷೆಗಳು ನಡೆಯುತ್ತವೆ, ನಡೆಯುವುದಿಲ್ಲ ಎಂಬ ಕಣ್ಣಾಮುಚ್ಚಾಲೆ ಆಟವನ್ನು, ಗೊಂದಲವನ್ನು ಸೃಷ್ಟಿಸಲಾಗಿದೆ.

ಇದು ನಿಜವಾಗಿಯೂ ಮಕ್ಕಳು, ಶಿಕ್ಷಕರು ಹಾಗೂ ಪೋಷಕರ ಮನಸ್ಥಿತಿಯ ಮೇಲೆ ಮಾಡಬಹುದಾದ ಗೊಂದಲ ಅಷ್ಟಿಷ್ಟಲ್ಲ. ಪಬ್ಲಿಕ್‌ ಪರೀಕ್ಷೆ ಎಂದರೆ ಮಕ್ಕಳು ಹೆಚ್ಚಿನ ಎಚ್ಚರದಿಂದ ಅಧ್ಯಯನ ನಡೆಸುತ್ತಾರೆ. ಹೆಚ್ಚಿನ ಮಟ್ಟದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಾರೆ. ಪಬ್ಲಿಕ್‌ ಪರೀಕ್ಷೆಗೆ ಸಿದ್ಧವಾಗುವ ಅವರ ಮಾನಸಿಕ ಸ್ಥಿತಿಯೂ ಬೇರೆಯೇ ಇರುತ್ತದೆ. ಅಂಥ ಒತ್ತಡವನ್ನು ಶಿಕ್ಷಕರು, ಹೆತ್ತವರು ಹಾಗೂ ಸಮಾಜ ಸೃಷ್ಟಿಸುತ್ತದೆ. ಇದ್ದಕ್ಕಿದ್ದಂತೆ ಈ ಪರೀಕ್ಷೆ ಇಲ್ಲವೆಂದಾದರೆ, ಅದು ಉಂಟುಮಾಡುವ ಗೊಂದಲ ಬೇರೆಯೇ ತೆರನಾದುದು. ಇದು ಕೆಲವರಲ್ಲಿ ನಿರಾಳತೆಯನ್ನು ತರಬಹುದಾದರೂ, ಅನಪೇಕ್ಷಿತ ಒತ್ತಡ ಸೃಷ್ಟಿಸಿಕೊಂಡೆವಲ್ಲ ಎಂಬ ಭಾವನೆ ಹಲವರಲ್ಲಿ ಮೂಡಬಹುದು. ನಂತರ ಅದೂ ಬದಲಾಗಿ, ಪಬ್ಲಿಕ್‌ ಪರೀಕ್ಷೆಯಿಲ್ಲ ಎಂದು ನಿರಾಳವಾಗಿದ್ದವರಿಗೆ, ಇದ್ದಕ್ಕಿದ್ದಂತೆ ಪಬ್ಲಿಕ್‌ ಪರೀಕ್ಷೆ ಖಚಿತ ಎಂದಾಗುವಾಗ ಮೂಡಬಹುದಾದ ದಿಡೀರ್‌ ಒತ್ತಡ ಹೇಗಿರಬಹುದು? ಅದು ಸೃಷ್ಟಿಸುವ ಆತಂಕವೇ ವಿದ್ಯಾರ್ಥಿಗಳನ್ನು ಹತಾಶರಾಗಿಸಬಹುದು.

ಇದನ್ನೂ ಓದಿ: UPSC Prelims: ಚುನಾವಣೆ ಹಿನ್ನೆಲೆ ಯುಪಿಎಸ್‌ಸಿ ಪರೀಕ್ಷೆ ಮುಂದೂಡಿಕೆ; ಇಲ್ಲಿದೆ ಹೊಸ ದಿನಾಂಕ

ಪಬ್ಲಿಕ್‌ ಪರೀಕ್ಷೆ ಬೇಕೋ ಬೇಡವೋ ಎಂಬ ಬಗ್ಗೆಯೇ ಗಂಭೀರ ಚರ್ಚೆ ನಡೆಸುವುದು ಸಾಧ್ಯ. 5ನೇ ತರಗತಿಯಲ್ಲಿ ಪಬ್ಲಿಕ್‌ ಪರೀಕ್ಷೆಯ ಅಗತ್ಯವಿಲ್ಲ ಎಂದು ಶಿಕ್ಷಣ ತಜ್ಞರಲ್ಲದವರೂ ಹೇಳಬಹುದು. ಆದರೆ ಮೇಲಿನ ಹಂತಗಳಲ್ಲಿ, ಪಬ್ಲಿಕ್‌ ಪರೀಕ್ಷೆಗಳು ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಒರೆಗೆ ಹಚ್ಚಲು ಹಾಗೂ ಹೆಚ್ಚಿನ ಬೋಧನಾ ಕೌಶಲಗಳನ್ನು ಅಳವಡಿಸಲು ಇಲಾಖೆಗೆ ನೆರವಾಗುತ್ತವೆ ಎನ್ನಲಾಗುತ್ತದೆ. ವಿದ್ಯಾರ್ಥಿಗಳ ಕಲಿಕೆಯ ಗುಣಮಟ್ಟವನ್ನು ಪರಿಶೀಲಿಸಿ ಉತ್ತೀರ್ಣತೆ- ಅನುತ್ತೀರ್ಣತೆಯನ್ನೂ ಘೋಷಿಸಲಾಗುತ್ತದೆ. ಇದು ಕಲಿಕೆಯಲ್ಲಿ ಹೆಚ್ಚಿನ ಗಂಭೀರತೆಯನ್ನು ತರಬಹುದಾಗಿದೆ. ಇದುವರೆಗೆ 9ನೇ ತರಗತಿಯವರೆಗೂ ಯಾವುದೇ ಅನುತ್ತೀರ್ಣತೆಯ ಸಾಧ್ಯತೆ ಇಲ್ಲವಾಗಿದ್ದರಿಂದ, ಕಲಿಕೆಯ ಗಂಭೀರತೆಯನ್ನು ಪರಿಶೀಲಿಸುವ ಸಾಧ್ಯತೆಯೇ ಇರಲಿಲ್ಲ. ಶಿಕ್ಷಣ ಎಂದರೆ ಒಂದು ಮಟ್ಟದ ಮೌಲ್ಯಮಾಪನ ಇರುವುದು ಅಗತ್ಯವೇ ಎಂದು ಒಪ್ಪುವವರು ಹೆಚ್ಚು ಇದ್ದಾರೆ. ನೂತನ ಶಿಕ್ಷಣ ನೀತಿಯೂ ಮಹತ್ವಾಕಾಂಕ್ಷೆಯದ್ದು, ಅದೇ ರೀತಿ ಪಬ್ಲಿಕ್‌ ಪರೀಕ್ಷೆಗಳೂ ಮಹತ್ವಾಕಾಂಕ್ಷೆಯದ್ದು. ಅದೆಲ್ಲ ಸರಿ, ಆದರೆ ಕ್ಷಣಕ್ಕೊಂದು ನಿರ್ಧಾರದಿಂದ ಗೊಂದಲ ಮಾತ್ರ ಶತಸ್ಸಿದ್ಧ. ಇದು ಮಕ್ಕಳ ಮನಸ್ಸಿನ ಮೇಲೆ ಮಾಡಬಹುದಾದ ದುಷ್ಪರಿಣಾಮ ಊಹಾತೀತ. ಶೈಕ್ಷಣಿಕ ವರ್ಷ ಇದೀಗ ಮುಗಿದಿದೆ. ಎಲ್ಲರೂ ಈ ವಿಚಾರದಲ್ಲಿ ಶೀಘ್ರ ಯಾವುದಾದರೊಂದು ತೀರ್ಮಾನ ತೆಗೆದುಕೊಂಡು, ಒಟ್ಟಾರೆ ಶಿಕ್ಷಣ ವ್ಯವಸ್ಥೆಯಲ್ಲಿ ಮೂಡಿರುವ ಅವ್ಯವಸ್ಥೆಯನ್ನು ನಿವಾರಿಸಬೇಕಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಸಿನಿಮಾ

Niveditha Gowda : ಬೇಡ ನಾವು ಜತೆಯಾಗಿ ಇರಲ್ಲ; ಸಂಧಾನಕ್ಕೆ ಒಪ್ಪದ ಚಂದನ್​- ನಿವೇದಿತಾ

Chandan Shetty, Niveditha Gowda : ಇವೆಲ್ಲದರ ನಡುವೆ ಅವರಿಬ್ಬರೂ ಪ್ರತ್ಯೇಕವಾಗಲು ಅರ್ಜಿ ಸಲ್ಲಿಸಿದ್ದು ನಿಜ ಎಂಬ ಮಾಹಿತಿ ಬಂದಿದೆ. ಅಲ್ಲದೆ ನ್ಯಾಯಾಲಯದ ಪ್ರಕ್ರಿಯೆ ವೇಳೆ ತಾವಿಬ್ಬರೂ ಮುಂದೆ ಜತೆಯಾಗಿ ಬಾಳುವುದಕ್ಕೆ ಸಾಧ್ಯವೇ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

VISTARANEWS.COM


on

Chandan Shetty, Niveditha Gowda
Koo

ಬೆಂಗಳೂರು: ಕ್ಯೂಟ್​ ಕಪಲ್ ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ (Niveditha Gowda) ಬೆಂಗಳೂರಿನ ಶಾಂತಿನಗರದ ಫ್ಯಾಮಿಲಿ ಕೋರ್ಟ್​ನಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ ಎಂಬುದಾಗಿ ವರದಿಯಾಗಿದೆ. ಈ ಬಗ್ಗೆ ಯಾವುದೇ ಸುಳಿವು ಇರದ ಕಾರಣ ಅಭಿಮಾನಿಗಳಿಗೆ ಅಚ್ಚರಿಯಾಗಿದೆ. ಸೋಶಿಯಲ್ ಮೀಡಿಯಾಗಳಲ್ಲಿ ಇವರಿಬ್ಬರ ದಾಂಪತ್ಯದ ಬಿರುಕಿನ ಸುದ್ದಿಯೇ ಹರಿದಾಡಲು ಆರಂಭಿಸಿದೆ. ಈ ಬಗ್ಗೆ ಚಂದನ್​ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ಕುಟುಂಬದವರು ಹೇಳಿಕೆ ನೀಡಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಸ್ಪಷ್ಟನೆ ಕೊಟ್ಟರೆ ನಮಗೂ ಸತ್ಯ ತಿಳಿಯುತ್ತದೆ ಎಂಬುದೇ ಅವರ ಒತ್ತಾಸೆಯಾಗಿದೆ.

ಇವೆಲ್ಲದರ ನಡುವೆ ಅವರಿಬ್ಬರೂ ಪ್ರತ್ಯೇಕವಾಗಲು ಅರ್ಜಿ ಸಲ್ಲಿಸಿದ್ದು ನಿಜ ಎಂಬ ಮಾಹಿತಿ ಬಂದಿದೆ. ಅಲ್ಲದೆ ನ್ಯಾಯಾಲಯದ ಪ್ರಕ್ರಿಯೆ ವೇಳೆ ತಾವಿಬ್ಬರೂ ಮುಂದೆ ಜತೆಯಾಗಿ ಬಾಳುವುದಕ್ಕೆ ಸಾಧ್ಯವೇ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಚಂದನ್​ ಹಾಗೂ ನಿವೇದಿತಾ ವಿಚ್ಛೇದನ ಅರ್ಜಿ (ಕೇಸ್ ನಂಬರ್-Mc 3388-/2024) ಕೋರ್ಟ್​ ಮುಂದಕ್ಕೆ ಬಂದಿತ್ತು.ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್ ಜ್ಯೋತಿ ಶ್ರೀ ಅವರು ಬೆಂಚ್​ ಮುಂದೆ ಈ ಪ್ರಕರಣ ಬಂದಿತ್ತು. ಅರ್ಜಿಯನ್ನು ವಿಚಾರಣೆ ಮಾಡುವ ಮೊದಲು ಕಾನೂನು ಪ್ರಕ್ರಿಯೆಯಂತೆ ಮಿಡಿಯೇಷನ್ ಪ್ರಕ್ರಿಯೆ ಒಳಪಡಬೇಕಾಯಿತು.

ಚಂದನ್ ಹಾಗೂ ನಿವೇದಿತಾ ಅವರಿಗೆ ಕೌಟುಂಬಿಕ ಕೋರ್ಟ್‌ನ ಮಿಡಿಯೇಷನ್​ ಸೆಂಟರ್​ನಲ್ಲಿ ಮಾತುಕತೆ ನಡೆಸಲಾಯಿತು. ವಿಚ್ಛೇದನ ಪ್ರಕ್ರಿಯೆ ಮೊದಲು ಈ ಸಂಧಾನ ನಡೆಯಲೇಬೇಕು. ಅಂತೆಯೇ ಸಂಧಾನಕಾರರು ಮಾತುಕತೆ ನಡೆಸಿದಾಗ ಅವರಿಬ್ಬರು ತಮ್ಮ ನಿರ್ಧಾರದಿಂದ ವಾಪಸ್ ಬರುವುದಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Chandan Shetty: ತಂಗಿ ತಂಗಿ ಎಂದೇ ಮದುವೆಯಾಗಿದ್ದ ಚಂದನ್‌! ಇವರ ಬಾಳಲ್ಲಿ ವಿಲನ್‌ ಆಗಿದ್ದು ಯಾರು?

ಮೀಡಿಯೇಷನ್ ಸೆಂಟರ್​ನಲ್ಲಿ ವಿಚ್ಛೇದನ ನೀಡದಂತೆ ಸಲಹೆ ಕೊಡುತ್ತಾರೆ. ಪರಸ್ಪರ ಒಂದಾಗಿ ಬಾಳಿ ಎಂದು ಸಲಹೆ ನೀಡುತ್ತಾರೆ. ಇಬ್ಬರು ಒಪ್ಪದೇ ಇದ್ದರೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸುತ್ತಾರೆ. ಬಳಿಕ ನ್ಯಾಯಾಧೀಶರು ನಿರ್ಧಾರದ ಬಗ್ಗೆ ಕೇಳುತ್ತಾರೆ. ಬಳಿಕ ವಿಚ್ಛೇಧನಕ್ಕೆ ಒಪ್ಪಿಗೆ ಕೊಡುತ್ತಾರೆ.

ದಸರಾ ವೇದಿಕೆ ಮೇಲೆ ಪ್ರಪೋಸ್‌ ಮಾಡಿದ್ದೇ ವಿಚ್ಛೇದನಕ್ಕೆ ಕಾರಣವೇ?

ಬೆಂಗಳೂರು: ಬಿಗ್‌ ಬಾಸ್‌ ಜೋಡಿ, ಕ್ಯೂಟ್‌ ಕಪಲ್‌ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ (Niveditha Gowda) ದಂಪತಿ ವಿಚ್ಛೇದನ ಪಡೆದುಕೊಂಡಿದೆ. ಯುವ ದಸರಾ ವೇದಿಕೆಯಲ್ಲಿ ಚಂದನ್ ಶೆಟ್ಟಿ ನಿವೇದಿತಾಗೆ ಲವ್ ಪ್ರೊಪೋಸಲ್ ಮಾಡಿ ಸುದ್ದಿಯಾಗಿದ್ದರು. ಚಂದನ್ ವರ್ತನೆಗೆ ಪರ ಹಾಗೂ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಇದೇ ವರ್ಷ ಮೇ 12 ರಂದು ನಿವೇದಿತಾ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದರು ಚಂದನ್‌. ಆರು ದಿನಗಳ ಹಿಂದೆಯಷ್ಟೇ ʻಕೋಟಿʼ ಸಿನಿಮಾ ಪ್ರಚಾರಕ್ಕೂ ಒಟ್ಟಿಗೆ ಕಾಣಿಸಿಕೊಂಡಿದ್ದರು. ಇದೀಗ ಇಬ್ಬರೂ ಬೇರೆಯಾಗಿದ್ದಾರೆ. ಇದೀಗ ಜೋಡಿಯ ಫ್ಯಾನ್ಸ್‌ ಕಮೆಂಟ್‌ ಮೂಲಕ ಬೇಸರ ಹೊರ ಹಾಕಿದ್ದಾರೆ.

ಯುವ ದಸರಾ ಕಾರ್ಯಕ್ರಮದಲ್ಲಿ ಪ್ರಪೋಸ್‌ ಮಾಡಿದ್ದ ಚಂದನ್‌

ಚಂದನ್‌ ಶೆಟ್ಟಿ ಮತ್ತು ನಿವೇದಿತಾ ಕನ್ನಡದ ‘ಬಿಗ್‌ ಬಾಸ್-5’ರ ಸ್ಪರ್ಧಿಗಳು. ಈ ಕಾರ್ಯಕ್ರಮದಲ್ಲಿ ಜೊತೆಯಾದ ಇಬ್ಬರ ಪರಿಚಯ ನಂತರ ಸ್ನೇಹ ಹಾಗೂ ಪ್ರೀತಿಯಾಗಿ ಬದಲಾಗಿತ್ತು. ಯುವ ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಚಂದನ್ ಶೆಟ್ಟಿ, ಅದೇ ವೇದಿಕೆ ಮೇಲೆ ನಿವೇದಿತಾ ಗೌಡ ಅವರಿಗೆ ಪ್ರಪೋಸ್ ಮಾಡಿದ್ದರು. ನಿವೇದಿತಾ ಗೌಡ ಅವರಿಗೆ ಪ್ರಪೋಸ್‌ ಮಾಡಲು ಮುಂದಾಗಿದ್ದ ಚಂದನ್, ಮೊದಲು ಫಾರಿನ್ ಲೊಕೇಷನ್‌ ಆರಿಸಿಕೊಂಡಿದ್ರಂತೆ. ಆದರೆ ಆ ನಂತರ ದೇವಿ ಚಾಮುಂಡೇಶ್ವರಿ ಆಶೀರ್ವಾದದೊಂದಿಗೆ ಮೈಸೂರು ಯುವ ದಸರಾ ವೇದಿಕೆ ಮೇಲೆ ಪ್ರೇಮ ನಿವೇದನೆ ಮಾಡಲು ಮುಂದಾಗಿದ್ದರು ಎಂದು ವರದಿಯಾಗಿತ್ತು.

Continue Reading

ವಾಣಿಜ್ಯ

Stock Market: ಫಲಿತಾಂಶದ ಬಳಿಕ ಷೇರು ಪೇಟೆ ನೆಗೆತ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಲಾಭ

Stock Market: ಬಿಎಸ್‌ಇ ಸೆನ್ಸೆಕ್ಸ್‌ 1,618 ಪಾಯಿಂಟ್‌ಗಳ ಏರಿಕೆಯೊಂದಿಗೆ ದಿನದ ವಹಿವಾಟಿನ ಅಂತ್ಯಕ್ಕೆ 76693 ಪಾಯಿಂಟ್ಸ್‌ಗೆ ಏರಿಕೆಯಾಯಿತು. ಇನ್ನು ಎನ್‌ಎಸ್‌ಇ ನಿಫ್ಟಿಯು 468 ಪಾಯಿಂಟ್‌ಗಳ ಏರಿಕೆಯೊಂದಿಗೆ ಕಳೆದ ಒಂದು ವರ್ಷದಲ್ಲಿಯೇ ದಾಖಲೆಯ 23,290 ಪಾಯಿಂಟ್‌ಗಳನ್ನು ತಲುಪಿತು. ಇದರಿಂದಾಗಿ, ಹೂಡಿಕೆದಾರರು ಸುಮಾರು 7.5 ಲಕ್ಷ ಕೋಟಿ ರೂ. ಲಾಭ ಗಳಿಸಿದರು ಎಂದು ತಿಳಿದುಬಂದಿದೆ.

VISTARANEWS.COM


on

Stock Market
Koo

ಮುಂಬೈ: ಲೋಕಸಭೆ ಚುನಾವಣೆ ಫಲಿತಾಂಶದ ದಿನ (ಜೂನ್‌ 4) (Lok Sabha Election Result 2024) ಷೇರು ಮಾರುಕಟ್ಟೆಯಲ್ಲಿ (Stock Market) ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿ, ಹೂಡಿಕೆದಾರರಿಗೆ 31 ಲಕ್ಷ ಕೋಟಿ ರೂ. ನಷ್ಟವಾದ ಬೆನ್ನಲ್ಲೇ ಷೇರುಪೇಟೆಯು ಲಯಕ್ಕೆ ಮರಳಿದೆ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಶುಕ್ರವಾರ ಶುಭ ಶುಕ್ರವಾರ ಆಗಿದೆ. ಬಿಎಸ್‌ಇ ಸೆನ್ಸೆಕ್ಸ್‌ ಹಾಗೂ ಎನ್‌ಎಸ್‌ಇ ನಿಫ್ಟಿ ದಾಖಲೆಯ ಏರಿಕೆಯಿಂದಾಗಿ ಶುಕ್ರವಾರ ಹೂಡಿಕೆದಾರರು ಸುಮಾರು 7.5 ಲಕ್ಷ ಕೋಟಿ ರೂ. ಲಾಭ ಗಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಹೂಡಿಕೆದಾರರಿಗೆ ಸುಮಾರು 21 ಲಕ್ಷ ಕೋಟಿ ರೂ. ಲಾಭವಾಗಿದೆ ಎಂದು ತಿಳಿದುಬಂದಿದೆ.

ಬಿಎಸ್‌ಇ ಸೆನ್ಸೆಕ್ಸ್‌ 1,618 ಪಾಯಿಂಟ್‌ಗಳ ಏರಿಕೆಯೊಂದಿಗೆ ದಿನದ ವಹಿವಾಟಿನ ಅಂತ್ಯಕ್ಕೆ 76693 ಪಾಯಿಂಟ್ಸ್‌ಗೆ ಏರಿಕೆಯಾಯಿತು. ಇನ್ನು ಎನ್‌ಎಸ್‌ಇ ನಿಫ್ಟಿಯು 468 ಪಾಯಿಂಟ್‌ಗಳ ಏರಿಕೆಯೊಂದಿಗೆ ಕಳೆದ ಒಂದು ವರ್ಷದಲ್ಲಿಯೇ ದಾಖಲೆಯ 23,290 ಪಾಯಿಂಟ್‌ಗಳನ್ನು ತಲುಪಿತು. ಇದರಿಂದಾಗಿ, ಹೂಡಿಕೆದಾರರು ಸುಮಾರು 7.5 ಲಕ್ಷ ಕೋಟಿ ರೂ. ಲಾಭ ಗಳಿಸಿದರು ಎಂದು ತಿಳಿದುಬಂದಿದೆ. ಇದರೊಂದಿಗೆ ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಷೇರು ಮಾರುಕಟ್ಟೆಯು ಮತ್ತೆ ಲಯಕ್ಕೆ ಮರಳಿದಂತಾಗಿದೆ.

ಬಿಎಸ್‌ಇ ಸೆನ್ಸೆಕ್ಸ್‌ ಪಾಯಿಂಟ್‌ಗಳ ಏರಿಕೆಯಾದ ಕಾರಣ ಮಾರುಕಟ್ಟೆಯ ಬಂಡವಾಳವು 415 ಲಕ್ಷ ಕೋಟಿ ರೂಪಾಯಿಯಿಂದ 423 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. ಇದು ಹೂಡಿಕೆದಾರರಿಗೆ ವರದಾನವಾಗಿ ಪರಿಣಮಿಸಿದೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ರಚನೆಯಾಗುವುದು ಖಚಿತವಾದ ಕಾರಣ ಷೇರು ಮಾರುಕಟ್ಟೆಯಲ್ಲಿ ಸ್ಥಿರತೆ ಮುಂದುವರಿದಿದೆ ಎಂದು ಷೇರು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಮುಂದಿನ ದಿನಗಳಲ್ಲೂ ಲಯದ ಭರವಸೆ ಇದೆ ಎನ್ನಲಾಗಿದೆ.

ನಿಫ್ಟಿ ಐಟಿಯ ಷೇರುಗಳ ಮೌಲ್ಯವು ಶೇ.3.5ರಷ್ಟು ಏರಿಕೆಯಾದ ಕಾರಣ ಇನ್ಫೋಸಿಸ್‌, ಟೆಕ್‌ ಮಹೀಂದ್ರಾ ಹಾಗೂ ಟಿಸಿಎಸ್‌ ಸೇರಿ ಹಲವು ಕಂಪನಿಗಳು ಉತ್ತಮ ಲಾಭ ಗಳಿಸಿವೆ. ಶೋಭಾ ಲಿಮಿಟೆಡ್‌, ಬ್ರಿಗೇಡ್‌ ಎಂಟರ್‌ಪ್ರೈಸಸ್‌ ಲಿಮಿಟೆಡ್‌, ಟಿವಿಎಸ್‌ ಮೋಟರ್‌ ಲಿಮಿಟೆಡ್‌, ರಿಲಯನ್ಸ್‌, ಟಾಟಾ ಸ್ಟೀಲ್‌, ಟಾಟಾ ಮೋಟರ್ಸ್‌ ಸೇರಿ ಹಲವು ಕಂಪನಿಗಳು ಭಾರಿ ಪ್ರಮಾಣದಲ್ಲಿ ಲಾಭ ಗಳಿಸಿವೆ.

ಇದನ್ನೂ ಓದಿ: Stock market Crash : ಜೂ. 4ರ ಷೇರುಪೇಟೆ ಕುಸಿತ ಮೋದಿ, ಅಮಿತ್​ ಶಾ ನಡೆಸಿದ ಮಹಾ ಹಗರಣ; ರಾಹುಲ್ ಗಾಂಧಿ ಆರೋಪ

Continue Reading

ಪ್ರಮುಖ ಸುದ್ದಿ

Babar Azam : ಭಾರತ ಪಾಕ್​ ಪಂದ್ಯಕ್ಕೆ ಮೊದಲೇ ವಿರಾಟ್ ಕೊಹ್ಲಿಯ ದಾಖಲೆ ಮುರಿದ ಬಾಬರ್​ ಅಜಂ

Babar Azam: ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಸ್ಟೇಡಿಯಂನಲ್ಲಿ ಗುರುವಾರ ನಡೆದ ಅಮೆರಿಕ ವಿರುದ್ಧದ ಪಾಕಿಸ್ತಾನದ ಆರಂಭಿಕ ಪಂದ್ಯದಲ್ಲಿ ಬಾಬರ್ ಈ ಮೈಲಿಗಲ್ಲನ್ನು ತಲುಪಿದರು. ಅವರು 43 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್ ಸೇರಿದಂತೆ 44 ರನ್ ಗಳಿಸಿದರು

VISTARANEWS.COM


on

Babar Azam
Koo

ನವದೆಹಲಿ: 2024 ರ ಟಿ 20 ವಿಶ್ವಕಪ್​ನಲ್ಲಿ ಯುಎಸ್ಎ ವಿರುದ್ಧ ಆಶ್ಚರ್ಯಕರ ಸೋಲು ಅನುಭವಿಸಿದ ಹೊರತಾಗಿಯೂ ಪಾಕಿಸ್ತಾನದ ನಾಯಕ ಬಾಬರ್ ಅಜಮ್ (Babar Azam) ಭಾರತದ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಟಿ 20 ಐ ಕ್ರಿಕೆಟ್​​ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಡಲ್ಲಾಸ್​ನ ಗ್ರ್ಯಾಂಡ್ ಪ್ರೈರಿ ಸ್ಟೇಡಿಯಂನಲ್ಲಿ ಗುರುವಾರ ನಡೆದ ಅಮೆರಿಕ ವಿರುದ್ಧದ ಪಾಕಿಸ್ತಾನದ ಆರಂಭಿಕ ಪಂದ್ಯದಲ್ಲಿ ಬಾಬರ್ ಈ ಮೈಲಿಗಲ್ಲನ್ನು ತಲುಪಿದರು. ಅವರು 43 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಎರಡು ಸಿಕ್ಸರ್ ಸೇರಿದಂತೆ 44 ರನ್ ಗಳಿಸಿದರು. ಅವರ ರನ್ ನೆರವಿನಿಂದ 20 ಓವರ್​​ಗಳಲ್ಲಿ 7 ವಿಕೆಟ್​ಗೆ 159 ರನ್​ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಲು ಪಾಕಿಸ್ತಾನ ಶಕ್ತಗೊಂಡಿತು.

ಬ್ಯಾಟರ್​ಗಳ ಪಟ್ಟಿಯಲ್ಲಿ ಬಾಬರ್ ಅಜಮ್ ಅಗ್ರಸ್ಥಾನ

ಬಾಬರ್ ಈಗ 120 ಪಂದ್ಯಗಳಲ್ಲಿ 4,067 ರನ್​​ಗಳೊಂದಿಗೆ ಟಿ 20 ಐ ರನ್ ಸ್ಕೋರಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಕೊಹ್ಲಿ 118 ಪಂದ್ಯಗಳಲ್ಲಿ 4,038 ರನ್​ಗಳೊಂದಿಗೆ ಎರಡನೇ ಸ್ಥಾನಕ್ಕೆ ಕುಸಿದಿದ್ದಾರೆ. ಜೂನ್ 9 ರಂದು ನ್ಯೂಯಾರ್ಕ್​​ನಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸುವಾಗ ಇಬ್ಬರೂ ಆಟಗಾರರಿಗೆ ಮತ್ತೆ ಅಗ್ರಸ್ಥಾನಕ್ಕಾಗಿ ಸ್ಪರ್ಧಿಸುವ ಅವಕಾಶವಿದೆ.

ಇದನ್ನೂ ಓದಿ: T20 World Cup: ಪಾಕಿಸ್ತಾನಕ್ಕೆ ಮುಖಭಂಗ ಮಾಡಿದ ಅಮೆರಿಕ ಕ್ರಿಕೆಟ್‌ ತಂಡದ ಸೌರಭ್ ನೇತ್ರವಾಲ್ಕರ್ ಹಿನ್ನೆಲೆ ಏನು?

ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ಪಂದ್ಯವು ನಸ್ಸೌ ಕೌಂಟಿ ಇಂಟರ್​​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ, ಇದು ಸವಾಲಿನ ಪಿಚ್ ಮತ್ತು ಔಟ್​ಫೀಲ್ಡ್​ಗೆ ಹೆಸರುವಾಸಿಯಾಗಿದೆ. ಕ್ರೀಡಾಂಗಣದ ಮೇಲ್ಮೈ ಅನಿರೀಕ್ಷಿತ ಬೌನ್ಸ್ ಗೆ ಕಾರಣವಾಗುತ್ತದೆ. ನಿಧಾನಗತಿಯ ಔಟ್ ಫೀಲ್ಡ್ ಬ್ಯಾಟರ್​​ಗಳ ಕಷ್ಟ ಹೆಚ್ಚಿಸುತ್ತದೆ. ಈ ಸ್ಥಳವು ಡ್ರಾಪ್-ಇನ್ ಪಿಚ್ ಬಳಸಲಾಗಿಎ. ಇದು ಇಲ್ಲಿಯವರೆಗೆ ನಡೆದ ಮೊದಲ ಎರಡು ಪಂದ್ಯಗಳಲ್ಲಿ ಅಸ್ಥಿರವಾಗಿ ಕಂಡಿದೆ.

ಭಾರತವು ತನ್ನ ಆರಂಭಿಕ ಪಂದ್ಯವನ್ನು ಈ ಸ್ಥಳದಲ್ಲಿ ಆಡಿತು, ಅಲ್ಲಿ ಪಿಚ್​​ನಿಂದಾಗಿ ಹಲವಾರು ಬ್ಯಾಟರ್​ಗಳು ಗಾಯಗೊಂಡಿದ್ದರು. ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಜೋಶ್ ಲಿಟಲ್ ಎಸೆತದಿಂದ ಗಾಯಗೊಂಡಿದ್ದ ರೋಹಿತ್ ಶರ್ಮಾ ನಿವೃತ್ತಿ ಘೋಷಿಸಿದ್ದರು.

ಅಮೆರಿಕದ ವಿರುದ್ಧದ ಪಂದ್ಯದಲ್ಲಿ ಬಾಲ್​ ವಿರೂಪಗೊಳಿಸಿದ ಪಾಕ್​ ಬೌಲರ್​; ಆರೋಪ

ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ಮತ್ತೆ ತಮ್ಮ ಕೃತ್ರಿಮ ಬುದ್ಧಿಯನ್ನು ತೋರಿಸಿದ್ದಾರೆ. ಟಿ 20 ವಿಶ್ವಕಪ್ 2024 ರ (T20 World Cup) ಯುಎಸ್ಎ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ 11 ನೇ ಪಂದ್ಯದ ಸಮಯದಲ್ಲಿ ಪಾಕಿಸ್ತಾನದ ವೇಗದ ಬೌಲರ್ ಹ್ಯಾರಿಸ್ ರೌಫ್ ‘ಬಾಲ್ ವಿರೂಪ ‘ ಮಾಡಿದ್ದಾರೆ ಎಂದು ಯುಎಸ್ಎ ಕ್ರಿಕೆಟಿಗ ರಸ್ಟಿ ಥೆರಾನ್ ಆರೋಪಿಸಿದ್ದಾರೆ. ವಿಶೇಷವೆಂದರೆ, ಯುಎಸ್ಎ ಇನ್ನಿಂಗ್ಸ್​ನ 12 ಓವರ್​ನಲ್ಲಿ 94 ರನ್ ಬಾರಿಸಿದ್ದಾಗ ಪಾಕಿಸ್ತಾನ ತಂಡ ಚೆಂಡು ಬದಲಾವಣೆಗೆ ಮನವಿ ಮಾಡಿತ್ತು.

ಬದಲಾವಣೆಯ ಒಂದು ಓವರ್ ನಂತರ, ಆಂಡ್ರೀಸ್ ಗೌಸ್ (26 ಎಸೆತಗಳಲ್ಲಿ 35 ರನ್) ಮತ್ತು ಮೊನಾಂಕ್ ಪಟೇಲ್ (38 ಎಸೆತಗಳಲ್ಲಿ 50 ರನ್) ನಡುವಿನ ಜತೆಯಾಟ ಮುರಿದು ಹೋಯಿತು. ಔಟ್ ಆದ ತಕ್ಷಣ, ಥೆರಾನ್ ಈ ವಿಷಯವನ್ನು ಪರಿಶೀಲಿಸುವಂತೆ ಐಸಿಸಿಯನ್ನು ಕೇಳಿಕೊಂಡಿತು. ರವೂಫ್ ಚೆಂಡಿನ ಮೇಲೆ ತನ್ನ ಹೆಬ್ಬೆರಳಿನ ಉಗುರಿನ ಮೂಲಕ ಗೆರೆ ಎಳೆಯುತ್ತಿರುವುದು ಕಂಡಿದೆ ಎಂದು 38 ವರ್ಷದ ಆಟಗಾರ ಆರೋಪಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Narendra Modi: ಕರ್ನಾಟಕದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ನರೇಂದ್ರ ಮೋದಿ ಹೇಳಿದ್ದೇನು?

Narendra Modi: ದಕ್ಷಿಣ ಭಾರತದಲ್ಲಿ ಎನ್‌ಡಿಎ ಬುನಾದಿ ಭದ್ರವಾಗಿದ್ದು, ಹೊಸ ರಾಜಕೀಯಕ್ಕೆ ಇದು ನಾಂದಿಯಾಗಿದೆ. ಕರ್ನಾಟಕ ಹಾಗೂ ತೆಲಂಗಾಣವನ್ನೇ ತೆಗೆದುಕೊಳ್ಳಿ, ಇತ್ತೀಚೆಗೆ ಬೇರೆ ಪಕ್ಷಗಳ ಸರ್ಕಾರಗಳು ಅಲ್ಲಿ ಆಡಳಿತಕ್ಕೆ ಬಂದಿವೆ. ಆದರೆ, ಜನರು ಭ್ರಮೆಯಿಂದ ಹೊರಬಂದು ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ ಸಂಸದೀಯ ಮಂಡಳಿ ಸಭೆಯಲ್ಲಿ ನರೇಂದ್ರ ಮೋದಿ ಹೇಳಿದರು.

VISTARANEWS.COM


on

Narendra Modi
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಎನ್‌ಡಿಎ ಸಂಸದೀಯ ಮಂಡಳಿ ಸಭೆಯಲ್ಲಿ ಮೋದಿ ಅವರು ಆಯ್ಕೆಯಾಗಿದ್ದು, ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ, ಎನ್‌ಡಿಎ ನಾಯಕರು, ಸಂಸದರು, ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕರ್ನಾಟಕ (Karnataka) ಸೇರಿ ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರದರ್ಶನದ ಕುರಿತು ಮಾತನಾಡಿದರು.

“ದಕ್ಷಿಣ ಭಾರತದಲ್ಲಿ ಎನ್‌ಡಿಎ ಬುನಾದಿ ಭದ್ರವಾಗಿದ್ದು, ಹೊಸ ರಾಜಕೀಯಕ್ಕೆ ಇದು ನಾಂದಿಯಾಗಿದೆ. ಕರ್ನಾಟಕ ಹಾಗೂ ತೆಲಂಗಾಣವನ್ನೇ ತೆಗೆದುಕೊಳ್ಳಿ, ಇತ್ತೀಚೆಗೆ ಬೇರೆ ಪಕ್ಷಗಳ ಸರ್ಕಾರಗಳು ಅಲ್ಲಿ ಆಡಳಿತಕ್ಕೆ ಬಂದಿವೆ. ಆದರೆ, ಜನರು ಭ್ರಮೆಯಿಂದ ಹೊರಬಂದು ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಜನ ಎನ್‌ಡಿಎ ಮೈತ್ರಿಕೂಟವನ್ನು ಸ್ವೀಕರಿಸಿದ್ದಾರೆ. ಇದು ಎನ್‌ಡಿಎ ಮೇಲೆ ಜನ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದರು.

“ಕರ್ನಾಟಕ, ತೆಲಂಗಾಣದ ಜತೆಗೆ ತಮಿಳುನಾಡಿನ ತಂಡಕ್ಕೂ ನಾನು ಅಭಿನಂದನೆ ತಿಳಿಸುತ್ತೇನೆ. ನಾವು ಒಗ್ಗೂಡಿ ಹೋರಾಡಿದರೂ ಒಂದು ಸೀಟು ಕೂಡ ಗೆಲ್ಲಲು ಆಗಲಿಲ್ಲ. ಆದರೆ, ಎನ್‌ಡಿಎ ಮತಗಳಿಕೆಯ ಪ್ರಮಾಣವು ಜಾಸ್ತಿಯಾಗಿದೆ. ಇದರಿಂದ ಸ್ಪಷ್ಟ ಸಂದೇಶ ರವಾನೆಯಾದಂತಾಗಿದೆ. ಮುಂದಿನ ದಿನಗಳಲ್ಲಿ ತಮಿಳುನಾಡಿನಲ್ಲಿ ಎನ್‌ಡಿಎಗೆ ಜನಬೆಂಬಲ ಸಿಗುತ್ತದೆ ಎಂಬುದಕ್ಕೆ ಇದು ಸಂಕೇತವಾಗಿದೆ. ಕೇರಳದಲ್ಲಿ ನಮ್ಮ ನೂರಾರು ಕಾರ್ಯಕರ್ತರು ತ್ಯಾಗ, ಬಲಿದಾನ ಮಾಡಿದರು. ಇದೇ ಮೊದಲ ಬಾರಿಗೆ ಕೇರಳದಲ್ಲಿ ಎನ್‌ಡಿಎ ಖಾತೆ ತೆರೆದಿದೆ” ಎಂದು ಹೇಳಿದರು.

ನೂರು ದಾಟದ ಕಾಂಗ್ರೆಸ್‌

ಹತ್ತು ವರ್ಷಗಳ ಬಳಿಕವೂ ಕಾಂಗ್ರೆಸ್‌ಗೆ 100 ಸೀಟುಗಳನ್ನು ದಾಟಲೂ ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ನ ಭ್ರಷ್ಟಾಚಾರ ಮತ್ತು ಜನ ವಿರೋಧಿ ನೀತಿಯನ್ನು ಮತದಾರರು ಮರೆತಿಲ್ಲ. ಯುಪಿಎ ಹೆಸರನ್ನು ಇಂಡಿ ಒಕ್ಕೂಟ ಎಂದು ಬದಲಾಯಿಸಿಕೊಂಡರೂ ಜನ ಇವರ ಹಗರಣಗಳನ್ನು ಮರೆತಿಲ್ಲ. ಹಾಗಾಗಿ ಮೂರನೇ ಬಾರಿ ದೇಶದ ಜನ ಎನ್‌ಡಿಎ ಒಕ್ಕೂಟವನ್ನು ಬೆಂಬಲಿಸಿದ್ದಾರೆ ಎಂದು ಮೋದಿ ಹೇಳಿದರು.

ಪ್ರತಿಪಕ್ಷಗಳು ಅಭಿವೃದ್ಧಿಯ ವಿರೋಧಿ

ಚುನಾವಣೆಯುದ್ದಕ್ಕೂ ಪ್ರತಿಪಕ್ಷಗಳು ಎಲೆಕ್ಟ್ರಾನಿಕ್‌ ಮತ ಯಂತ್ರಗಳನ್ನು ದೂಷಿಸುತ್ತ ಬಂದವು. ಆದರೆ ಮತ ಎಣಿಕೆ ಮುಗಿದ ಬಳಿಕ ಮೌನವಾಗಿವೆ. ಕಾಂಗ್ರೆಸ್‌ ಮತ್ತಿತರ ಪಕ್ಷಗಳು ಮತಯಂತ್ರಗಳಿಗೆ ಕಳಂಕ ಹೊರಿಸುವ ಮೂಲಕ ಪ್ರಜಾಪ್ರಭುತ್ವವನ್ನೂ ಅವಮಾನಿಸಿದವು. ಈ ಪಕ್ಷಗಳಿಗೆ ಹಳೆಯ ಪಾಳೇಗಾರಿಕೆಯಲ್ಲೇ ನಂಬಿಕೆ ಇದೆ. ಇವರು ಆಧುನಿಕತೆಯನ್ನು ಬೆಂಬಲಿಸುವುದಿಲ್ಲ. ಇವರು ಡಿಜಿಟಲ್‌ ಪಾವತಿಯನ್ನು ವಿರೋಧಿಸುತ್ತಾರೆ. ಇವರು ಆಧಾರ್‌ ವ್ಯವಸ್ಥೆಗೆ ಅಡ್ಡಿಪಡಿಸುತ್ತಾರೆ. ದೇಶಕ್ಕೆ ಉತ್ತಮ ಕೊಡುಗೆಯಾದ ಆಧಾರ್‌ ವ್ಯವಸ್ಥೆಯನ್ನು ಹಾಳುಗೆಡವಲು ಇವರು ಎಷ್ಟೆಲ್ಲ ಪ್ರಯತ್ನಪಟ್ಟರು. ಇವರು ಅಭಿವೃದ್ಧಿ ವಿರೋಧಿಗಳು ಎಂದು ಟೀಕಿಸಿದರು.

ಇದನ್ನೂ ಓದಿ: Narendra Modi: ಪ್ರಮಾಣವಚನಕ್ಕೂ ಮೊದಲು ಅಡ್ವಾಣಿಯ ಆಶೀರ್ವಾದ ಪಡೆದ ನರೇಂದ್ರ ಮೋದಿ!

Continue Reading
Advertisement
Pawan Kalyan
ರಾಜಕೀಯ2 mins ago

Pawan Kalyan: ಪವನ್ ಕಲ್ಯಾಣ್ ಗಾಳಿಯಲ್ಲ ಬಿರುಗಾಳಿ ಎಂದ ಮೋದಿ! ಮೋದಿ ಇರುವವರೆಗೆ ದೇಶ ತಲೆಬಾಗುವುದಿಲ್ಲ ಎಂದ ಪವನ್‌!

Sigandur launch
ಶಿವಮೊಗ್ಗ14 mins ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Money Guide
ಮನಿ ಗೈಡ್19 mins ago

Money Guide: ಪಿಎಫ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

Rahul Gandhi
ದೇಶ20 mins ago

Rahul Gandhi: ರಾಯ್‌ ಬರೇಲಿ V/S ವಯನಾಡ್‌-ರಾಹುಲ್‌ ಆಯ್ಕೆ ಯಾವುದು?

Viral Video
ವೈರಲ್ ನ್ಯೂಸ್22 mins ago

Viral Video: ಸಣ್ಣ ಕಾರಿಗೆ ಡಿಕ್ಕಿ ಹೊಡೆದು ಗಿರಗಿರ ಪಲ್ಟಿ ಹೊಡೆದ ಎಸ್‌ಯವಿ!

Chandan Shetty, Niveditha Gowda
ಸಿನಿಮಾ24 mins ago

Niveditha Gowda : ಬೇಡ ನಾವು ಜತೆಯಾಗಿ ಇರಲ್ಲ; ಸಂಧಾನಕ್ಕೆ ಒಪ್ಪದ ಚಂದನ್​- ನಿವೇದಿತಾ

Stock Market
ವಾಣಿಜ್ಯ27 mins ago

Stock Market: ಫಲಿತಾಂಶದ ಬಳಿಕ ಷೇರು ಪೇಟೆ ನೆಗೆತ; ಹೂಡಿಕೆದಾರರಿಗೆ 7 ಲಕ್ಷ ಕೋಟಿ ರೂ. ಲಾಭ

Chandan Shetty divorce main reason social nedia craze
ಸ್ಯಾಂಡಲ್ ವುಡ್36 mins ago

Chandan Shetty: ತಂಗಿ ತಂಗಿ ಎಂದೇ ಮದುವೆಯಾಗಿದ್ದ ಚಂದನ್‌! ಇವರ ಬಾಳಲ್ಲಿ ವಿಲನ್‌ ಆಗಿದ್ದು ಯಾರು?

Babar Azam
ಪ್ರಮುಖ ಸುದ್ದಿ57 mins ago

Babar Azam : ಭಾರತ ಪಾಕ್​ ಪಂದ್ಯಕ್ಕೆ ಮೊದಲೇ ವಿರಾಟ್ ಕೊಹ್ಲಿಯ ದಾಖಲೆ ಮುರಿದ ಬಾಬರ್​ ಅಜಂ

Niveditha Gowda chandan divorce whats the reason
ಕಿರುತೆರೆ1 hour ago

Niveditha Gowda: ದಸರಾ ವೇದಿಕೆ ಮೇಲೆ ಪ್ರಪೋಸ್‌ ಮಾಡಿದ್ದೇ ವಿಚ್ಛೇದನಕ್ಕೆ ಕಾರಣವೇ? ʻಕ್ಯೂಟ್‌ ಕಪಲ್‌ʼ ಬಾಳಲ್ಲಿ ಬಿರುಗಾಳಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌