Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ? - Vistara News

ಪ್ರಮುಖ ಸುದ್ದಿ

Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

Karnataka Jobs Reservation: ಮುಂಜಾನೆ ಸಿಎಂ ಮಾಡಿದ್ದ ಎಕ್ಸ್‌ ಪೋಸ್ಟ್‌ ಬಗ್ಗೆ ಖಾಸಗಿ ಉದ್ಯಮ ವಲಯದಲ್ಲಿ ಕೋಲಾಹಲವೇ ಎದ್ದಿತ್ತು. ಕಿರಣ್‌ ಮಜುಂದಾರ್‌ ಶಾ, ಮೋಹನದಾಸ ಪೈ ಮುಂತಾದವರು ಈ ವಿಧೇಯಕವನ್ನು ಆಕ್ಷೇಪಿಸಿದ್ದರು. ಇದಾದ ಬಳಿಕ ಪೋಸ್ಟ್‌ ಅಳಿಸಿದ್ದ ಸಿಎಂ, ಇದೀಗ ಹೊಸ ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

CM Siddaramaiah karnataka jobs reservation
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಖಾಸಗಿ ಕೈಗಾರಿಕೆಗಳು (Private industry) ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ (Kannadiga employees) ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ (karnataka jobs reservation) ನಿಗದಿಪಡಿಸುವ ವಿಧೇಯಕಕ್ಕೆ (private jobs quota for locals bill) ಸೋಮವಾರ ನಡೆದ ಸಚಿವ ಸಂಪುಟ ಸಭೆಯು (karnataka Cabinet meeting) ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramiah) ತಿಳಿಸಿದ್ದಾರೆ.

ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ. ಇಂದು ಮುಂಜಾನೆ ಹಾಕಿದ್ದ ಪೋಸ್ಟ್‌ ಅನ್ನು ಅಳಿಸಿ ಬೇರೊಂದು ಪೋಸ್ಟ್‌ ಹಾಕಿದ್ದು, ಅದರಲ್ಲಿ ಈ ವಿಚಾರ ತಿಳಿಸಿದ್ದಾರೆ. ಪೋಸ್ಟ್‌ನಲ್ಲಿ ಹೀಗಿದೆ:

“ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ.”

ಮುಂಜಾನೆ ಅವರು ಮಾಡಿದ್ದ ಪೋಸ್ಟ್‌ನಲ್ಲಿ, “ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ʼಸಿʼ ಮತ್ತು ʼಡಿʼ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ” ಎಂದು ಬರೆದಿದ್ದರು. ಈ ಬಗ್ಗೆ ಖಾಸಗಿ ಉದ್ಯಮ ವಲಯದಲ್ಲಿ ಕೋಲಾಹಲವೇ ಎದ್ದಿತ್ತು. ಕಿರಣ್‌ ಮಜುಂದಾರ್‌ ಶಾ, ಮೋಹನದಾಸ ಪೈ ಮುಂತಾದವರು ಈ ವಿಧೇಯಕವನ್ನು ಆಕ್ಷೇಪಿಸಿದ್ದರು. ಇದಾದ ಬಳಿಕ ಪೋಸ್ಟ್‌ ಅಳಿಸಿದ್ದ ಸಿಎಂ, ಇದೀಗ ಹೊಸ ಪೋಸ್ಟ್‌ ಮಾಡಿದ್ದಾರೆ.

ಎಚ್ಚರದಿಂದ ಕಾನೂನು ರೂಪಿಸುತ್ತೇವೆ: ಪೊನ್ನಣ್ಣ

“ಖಾಸಗಿ ಕಂಪನಿಗಳು ಹಾಗೂ ಖಾಸಗಿ ವ್ಯಕ್ತಿಗಳ‌ ಮೇಲೆ ಕಾನೂನು ತರಬೇಕಾದರೆ ಸಂವಿಧಾನದ ಆಶಯಗಳಡಿಯ ಹಕ್ಕುಗಳ ಉಲ್ಲಂಘನೆಯಾಗದಂತೆ ಕಾನೂನು ಜಾರಿ ಮಾಡಬೇಕುʼ ಎಂದು ಸಿಎಂ ಕಾನೂನು ಸಲಹೆಗಾರರು ಪೊನ್ನಣ್ಣ ಹೇಳಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರದಲ್ಲಿ ಮಾತನಾಡಿರುವ ಅವರು, ʼಈ ಕಾನೂನುಗಳನ್ನ ನಾನು ಓದಿಲ್ಲ. ಓದಿದ ಮೇಲೆ‌ ಮಾತನಾಡಬಹುದು. ಗಂಭೀರವಾಗಿ ಅಧ್ಯಯನ ಮಾಡಿ ಅದನ್ನು ಜಾರಿಮಾಡುವ ಕೆಲಸವಾಗುತ್ತೆʼ ಎಂದಿದ್ದಾರೆ.

ʼಖಾಸಗಿ ಕಂಪನಿಗಳಿಗೆ ಹಾಗೂ ವ್ಯಕ್ತಿಗಳಿಗೆ ರಾಜ್ಯಾಂಗ, ರಾಜ್ಯದ ಸಂಸ್ಥೆಗಳಿಗಿಂತ ಹೆಚ್ಚಿನ ಮೂಲಭೂತ ಹಕ್ಕುಗಳಿರುತ್ತವೆ. ಸರ್ಕಾರ ಅದರಲ್ಲಿ ಹಸ್ತಕ್ಷೇಪ ಮಾಡುವ ಅವಕಾಶ ಕಡಿಮೆ. ಕನ್ನಡಿಗರಿಗೆ ಮೀಸಲಾತಿ ಕೋಡುವುದರಲ್ಲಿ ಸಂಶಯವಿಲ್ಲ. ಅದರಲ್ಲಿ ಶಾಲೆಗಳು, ಸರ್ಕಾರದ ಅನುದಾನ ಪಡೆಯುವಂತಹ ಸಂಸ್ಥೆಗಳಲ್ಲಿ ಮೀಸಲಾತಿ ಕೊಡಬಹುದು. ಸಂಪೂರ್ಣ ಖಾಸಗಿ ಸಂಸ್ಥೆಗಳಿಗೆ ಮೀಸಲಾತಿ ಕೋಡುವ ವೇಳೆ ಅದನ್ನು ಸಂಪೂರ್ಣ ಪರಿಶೀಲನೆ ಮಾಡಿ ಕೊಡಬೇಕಾಗುತ್ತದೆ. ಕೋರ್ಟ್‌ಗಳಲ್ಲಿ ನಾಳೆ ಪ್ರಶ್ನೆ ಮಾಡಿದರೆ ಅದರಲ್ಲೂ ಯಶಸ್ವಿಯಾಗಬೇಕು. ಕ್ಯಾಬಿನೆಟ್‌ನಲ್ಲಿ ಮಾಡಿರುತ್ತಾರೆ ಅಂದ್ರೆ ಸಂಪೂರ್ಣ ಅಧ್ಯಯನ ಮಾಡಿರುತ್ತಾರೆ. ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರ ಏಳ್ಗೆಗೆ ಬದ್ಧವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: CM Siddaramaiah : ಅಸಮಾನತೆ ತೊಲಗಿದಾಗ ಮಾತ್ರ ಸ್ವಾತಂತ್ರ್ಯಕ್ಕೆ ಬೆಲೆ ಎಂದ ಸಿಎಂ ಸಿದ್ದರಾಮಯ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

Olympic Games History: ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಯಾವುದೇ ದೇಶ ಆತಿಥ್ಯ ವಹಿಸಿದರೂ ಕೂಡ ಒಲಿಂಪಿಕ್ಸ್ ಕ್ರೀಡಾಜ್ಯೋತಿಯನ್ನು ಪುರಾತನ ಗೇಮ್ಸ್ ಆಯೋಜಿಸಿದ್ದ ಗ್ರೀಸ್‌ನಿಂದ ತರಲಾಗುತ್ತದೆ. ಅಲ್ಲಿ ಬೆಳಗಲ್ಪಟ್ಟ ಜ್ಯೋತಿ ಮೊದಲು ಗ್ರೀಸ್‌ ನಗರದಲ್ಲಿ ಸಂಚರಿಸಿದ ನಂತರ ಕೂಟ ನಡೆಯುವ ದೇಶಕ್ಕೆ ಬರುತ್ತದೆ.

VISTARANEWS.COM


on

Olympic Games History
Koo

ಬೆಂಗಳೂರು: ಇಂದು ಜಗತ್ತಿನ ಪ್ರಮುಖ ಅಂತಾರಾಷ್ಟ್ರೀಯ ಕ್ರೀಡಾಕೂಟ ಎನಿಸಿಕೊಂಡಿರುವ ಒಲಿಂಪಿಕ್ಸ್​ಗೆ ಸಾವಿರಾರು(Olympic Games History) ವರ್ಷಗಳ ಇತಿಹಾಸವಿದೆ. ಈ ಒಲಿಂಪಿಕ್‌ ಕ್ರೀಡಾಕೂಟದ ಹಿನ್ನೆಲೆ, ಇತಿಹಾಸ ಮತ್ತು ಗ್ರೀಸ್​ ದೇಶಕ್ಕೆ ನೀಡುವ ವಿಶೇಷ ಮಾನ್ಯತೆಯ ಕುರಿತ ಮಾಹಿತಿ ಇಲ್ಲಿದೆ.

ಗ್ರೀಸ್​ಗೆ ವಿಶೇಷ ಸ್ಥಾನಮಾನ


ಚೊಚ್ಚಲ ಒಲಿಂಪಿಕ್​ ಸಂಘಟಿಸಿದ ಹೆಗ್ಗಳಿಕೆ ಗ್ರೀಸ್​ ದೇಶಕ್ಕೆ ಸಲ್ಲುತ್ತದೆ. ಸುಮಾರು ಕ್ರಿ.ಪೂ. 776ರಲ್ಲಿ ಗ್ರೀಸ್‌ನ ಒಲಿಂಪಿಯಾದಲ್ಲಿ ಮೊದಲ ಬಾರಿಗೆ ಒಲಿಂಪಿಕ್‌ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಮೂರ್ನಾಲ್ಕು ಶತಮಾನದವರೆಗೆ ಈ ಕೂಟವನ್ನು ಆಯೋಜಿಸಲಾಗುತ್ತಿತ್ತು. ಬಳಿಕ ಕ್ರಮೇಣ ನಿಂತುಹೋದ ಒಲಿಂಪಿಕ್‌ಗೆ ಚಾಲನೆ ಸಿಕ್ಕಿದ್ದು 1859ರಲ್ಲಿ. ಇವಾಂಜೆಲಾಸ್‌ ಝಪ್ಪಾಸ್‌ ಎಂಬಾತ ಪ್ರಪ್ರಥಮ ಅಂತಾರಾಷ್ಟ್ರೀಯ ಒಲಿಂಪಿಕ್‌ ಕ್ರೀಡಾಕೂಟವನ್ನು ಪ್ರಾಯೋಜಿಸಿದನು. ಬಳಿಕ 1894ರಲ್ಲಿ ಫ್ರಾನ್ಸ್‌ನ ಪಿಯರೆ ಡಿ ಕ್ಯುಬರ್ತಿನ್‌ ಎಂಬುವವನು ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯನ್ನು ಹುಟ್ಟುಹಾಕಿ, 1896ರಲ್ಲಿ ಪ್ರಥಮ ಬಾರಿಗೆ ಗ್ರೀಸ್‌ನ ಈಗಿನ ರಾಜಧಾನಿ ಅಥೆನ್ಸ್‌ ನಗರದಲ್ಲಿ ಬೇಸಿಗೆ ಒಲಿಂಪಿಕ್‌ ಕ್ರೀಡಾಕೂಟ ಆಯೋಜಿಸಲಾಯಿತು. ಇದು ಮೊದಲ ಆಧುನಿಕ ಒಲಿಂಪಿಕ್‌ ಕ್ರೀಡಾಕೂಟ.


ಮೊದಲ ಒಲಿಂಪಿಕ್​ ಸಂಘಟಿಸಿದ ಕಾರಣ ಪ್ರತಿ ಬಾರಿಯ ಉದ್ಘಾಟನ ಸಮಾರಂಭದಲ್ಲಿ ಕ್ರೀಡಾಪಟುಗಳ ಪಥಸಂಚಲನ ನಡೆಯುವಾಗ ಗ್ರೀಸ್​ ತಂಡವೇ ಮುಂಚೂಣಿಯಲ್ಲಿರುತ್ತದೆ. ಬಳಿಕ ಆತಿಥೇಯ ದೇಶದ ಭಾಷೆಯ ಅಲ್ಪಾಬೆಟಿಕ್‌ ಅಕ್ಷರಮಾಲೆಯನ್ನು ಅನುಸರಿಸಿ ತಂಡಗಳು ಪಥಸಂಚಲನದಲ್ಲಿ ಪಾಲ್ಗೊಳ್ಳುತ್ತವೆ. ಆತಿಥೇಯ ತಂಡ ಯಾವಾಗಲೂ ಕೊನೆಯ ಸ್ಥಾನದಲ್ಲಿರುತ್ತದೆ.

ಇದನ್ನೂ ಓದಿ The Olympic Games: 72ರ ಇಳಿ ವಯಸ್ಸಿನಲ್ಲೂ ಒಲಿಂಪಿಕ್ಸ್​ ಪದಕ ಗೆದ್ದಿದ್ದ ಶೂಟರ್‌; ಯಾರಿವರು?

ಒಲಿಂಪಿಕ್​ ಟಾರ್ಚ್​ ರಿಲೇ


ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಯಾವುದೇ ದೇಶ ಆತಿಥ್ಯ ವಹಿಸಿದರೂ ಕೂಡ ಒಲಿಂಪಿಕ್ಸ್ ಕ್ರೀಡಾಜ್ಯೋತಿಯನ್ನು ಪುರಾತನ ಗೇಮ್ಸ್ ಆಯೋಜಿಸಿದ್ದ ಗ್ರೀಸ್‌ನಿಂದ ತರಲಾಗುತ್ತದೆ. ಅಲ್ಲಿ ಬೆಳಗಲ್ಪಟ್ಟ ಜ್ಯೋತಿ ಮೊದಲು ಗ್ರೀಸ್‌ ನಗರದಲ್ಲಿ ಸಂಚರಿಸಿದ ನಂತರ ಕೂಟ ನಡೆಯುವ ದೇಶಕ್ಕೆ ಬರುತ್ತದೆ. ಗ್ರೀಸ್​ನ​ ಜಿಮ್ನಾಸ್ಟ್ ಎಲೆಟ್‌ಥಿಯೋರಿಸ್ ಪೆಟ್ರೌನಿಯಾಸ್, ರಿಯೋ ಒಲಿಂಪಿಕ್ಸ್ ಕ್ರೀಡಾಜ್ಯೋತಿ ಹಿಡಿದ ಮೊದಲ ಅಥ್ಲೀಟ್.


4 ವರ್ಷಗಳಿಗೊಮ್ಮೆ ನಡೆಯುವ ಟೂರ್ನಿ


ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಒಲಿಂಪಿಕ್‌ ಕ್ರೀಡಾಕೂಟ ನಡೆಯುತ್ತದೆ. ಇದೊಂದು ಅಂತಾರಾಷ್ಟ್ರೀಯ ಕ್ರೀಡಾಕೂಟವಾಗಿದೆ. ಈ ಕ್ರೀಡಾಕೂಟವನ್ನು ಬೇಸಿಗೆ ಮತ್ತು ಚಳಿಗಾಲದ ಒಲಿಂಪಿಕ್‌ ಕ್ರೀಡಾಕೂಟವೆಂದು ವಿಂಗಡಿಸಲಾಗಿದೆ. 1992ರ ತನಕ ಈ ಎರಡೂ ಕ್ರೀಡಾಕೂಟಗಳು ಒಂದೇ ವರ್ಷದಲ್ಲಿ ನಡೆಯುತ್ತಿದ್ದವು. ಈಗ ಈ ಎರಡು ಕ್ರೀಡಾಕೂಟಗಳ ನಡುವೆ 2 ವರ್ಷಗಳ ಅಂತರ ಇರುತ್ತದೆ.

ಇದನ್ನೂ ಓದಿ Olympics On Television: ಒಲಿಂಪಿಕ್ಸ್​ ಕ್ರೀಡಾಕೂಟ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಂಡಿದ್ದು ಯಾವಾಗ?

ಈ ಬಾರಿಯ ವಿಶೇಷತೆ

ಈ ಬಾರಿಯ ಒಲಿಂಪಿಕ್ಸ್​ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ಒಲಿಂಪಿಕ್ಸ್​ ಇತಿಹಾಸದಲ್ಲೇ ವಿಶೇಷ ಮಹತ್ವ ಪಡೆದಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗಡೆ ನಡೆಯುವ ಉದ್ಘಾಟನಾ ಸಮಾರಂಭ ಇದಾಗಿದೆ. 10,500ಕ್ಕೂ ಹೆಚ್ಚು ಅಥ್ಲೀಟ್‌ಗಳು ಪ್ಯಾರಿಸ್‌ನಿಂದ ಸುಮಾರು 6 ಕಿಲೋಮೀಟರ್‌ ವರೆಗೆ ಬೋಟ್‌ಗಳಲ್ಲೇ ಪರೇಡ್‌ ನಡೆಸಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.

Continue Reading

ಪ್ರಮುಖ ಸುದ್ದಿ

Viral News : ಕುವೈಟ್​ನಲ್ಲಿ ಈ ಚಪ್ಪಲಿಗೆ 1 ಲಕ್ಷ ರೂಪಾಯಿಯಂತೆ; ನಮ್ಮಲ್ಲಿ ಇದು ಬಾತ್​ರೂಮ್​ಗೆ ಹೋಗುವ ಚಪ್ಪಲಿ ಎಂದ ನೆಟ್ಟಿಗರು!

Viral News ಕೆಲವರು ಉಡುಪಿಗೆ ತಕ್ಕ ಹಾಗೇ ಚಪ್ಪಲಿ ಹಾಕುತ್ತಾರೆ. ಇನ್ನು ಕೆಲವರು ತಮ್ಮ ಇಡೀ ಜೀವಮಾನವನ್ನು ಹರಿದ ಚಪ್ಪಲಿಯಲ್ಲಿಯೇ ಕಳೆಯುತ್ತಾರೆ.ಆದರೆ ಕುವೈಟ್‌ನ ಸ್ಟೋರ್‌ ಒಂದರಲ್ಲಿ ಸುಮಾರು 4,500 ರಿಯಾಲ್ (1 ಲಕ್ಷ ರೂ.) ಗೆ ಚಪ್ಪಲಿಗಳನ್ನು ಮಾರಾಟ ಮಾಡುತ್ತಿರುವ ಸುದ್ದಿಯೊಂದು ವೈರಲ್ ಆಗಿದೆ.”4500 ರಿಯಾಲ್ ಬೆಲೆಗೆ ಇತ್ತೀಚಿನ ಫ್ಯಾಷನ್ ಜನೌಬಾ” ಎಂದು ಶೀರ್ಷಿಕೆ ನೀಡಲಾಗಿದೆ. ಜನರು ಸೋಶಿಯಲ್ ಮೀಡಿಯಾದಲ್ಲಿ ಇದರ ಬೆಲೆಯ ಬಗ್ಗೆ ಟೀಕಿಸಿದ್ದಾರೆ.

VISTARANEWS.COM


on

Viral News
Koo

ಕುವೈಟ್ : ದಿನ ಬಳಕೆಯ ವಸ್ತುಗಳ ಬೆಲೆ ಸಿಕ್ಕಾಪಟ್ಟೆ ಏರಿಕೆಯಾಗಿದೆ. ಇದರಿಂದ ಇಂದಿನ ಕಾಲದಲ್ಲಿ ಬಡವರು ಮತ್ತು ಮಧ್ಯಮ ವರ್ಗದವರಿಗೆ ಜೀವನ ನಡೆಸುವುದೇ ಒಂದು ಸವಾಲಿನ ಕೆಲಸವಾಗಿದೆ. ಕೆಲವರು ವರ್ಷಗಳ ಹಿಂದೆ 100 ರೂಪಾಯಿ ಇದ್ದ ಸಾಮಾನ್ಯವಾಗಿ ಚಪ್ಪಲೆಯ ಬೆಲೆಯೂ 300ರಿಂದ400 ಇರುತ್ತದೆ. ಇನ್ನು ಫಂಕ್ಷನ್‌ಗಳಿಗೆ ಬಳಸುವಂತಹ ಚಪ್ಪಲಿಗಳ ಬೆಲೆ ಕೇಳುವ ಹಾಗಿಲ್ಲ. ಅದೇನೇ ಇದ್ದರೂ ಒಂದು ಚಪ್ಪಲಿಯ ಬೆಲೆ ಒಂದು ಲಕ್ಷ ರೂಪಾಯಿ ಇರಲು ಸಾಧ್ಯವೇ. ಅದೂ ದಶಕಗಳ ಹಿಂದೆ ಜನರು ಧರಿಸುತ್ತಿದ್ದ ಹವಾಯಿ ರೀತಿಯ ಚಪ್ಪಲಿಗೆ ಒಂದು ಲಕ್ಷ ರೂಪಾಯಿ ಇರಬಹುದೇ? ಖಂಡಿತಾ ಇದೆ. ಆದರೆ ಅದು ನಮ್ಮ ದೇಶದಲ್ಲಿ ಅಲ್ಲ. ಕುವೈಟ್‌ನಲ್ಲಿ. ಆದರೆ, ಚಪ್ಪಲಿಯ ಬೆಲೆ ವೈರಲ್ (Viral News) ಆಗುತ್ತಿದ್ದಂತೆ ಅದರ ಕುರಿತು ಬಗೆಬಗೆಯ ಕಾಮೆಂಟ್​ಗಳೂ ಶೇರ್ ಆಗುತ್ತಿವೆ. ಬಾತ್​ರೂಮ್​ಗೆ ಹಾಕುವಂಥ ಚಪ್ಪಲಿಗೆ ಇಷ್ಟೊಂದು ರೇಟಾ ಎಂಬುದೇ ಜನರ ಮೊದಲ ಪ್ರಶ್ನೆ.

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಪೋಸ್ಟ್‌ನಲ್ಲಿ ಕುವೈಟ್‌ನ ಸ್ಟೋರ್ ಒಂದರಲ್ಲಿ ಸುಮಾರು 4,500 ರಿಯಾಲ್ (1 ಲಕ್ಷ ರೂ.) ಗೆ ಚಪ್ಪಲಿಗಳನ್ನು ಮಾರಾಟಕ್ಕೆ ಇಡಲಾಗಿದೆ. ಹಾಗೇ ಇದಕ್ಕೆ “4500 ರಿಯಾಲ್ ಬೆಲೆಗೆ ಇತ್ತೀಚಿನ ಫ್ಯಾಷನ್ ಜನೌಬಾ” ಎಂದು ಶೀರ್ಷಿಕೆ ನೀಡಲಾಗಿದೆ. ಇದು ಎಲ್ಲರಿಗೂ ಆಶ್ಚರ್ಯವನ್ನುಂಟುಮಾಡಿದೆ. ಹಾಗಾಗಿ ಜನರು ಸೋಶಿಯಲ್‌ ಮೀಡಿಯಾದಲ್ಲಿ ಇದರ ಬೆಲೆಯ ಬಗ್ಗೆ ಬಗೆಬಗೆಯ ಕಾಮೆಂಟ್​ಗಳನ್ನು ಹಾಕಿದ್ದಾರೆ.

ಒಬ್ಬರು ಇದು ಶ್ರೀಮಂತರಿಗಾಗಿ ಮಾತ್ರ ಮಾರಾಟ ಮಾಡಲಾಗುತ್ತಿದೆ ಎಂದು ಹೇಳಿದರೆ, ಇನ್ನೊಬ್ಬರು “4500 ರಿಯಾಲ್ ಚಪ್ಪಲಿಗಳನ್ನು ಒಮ್ಮೆ ಖರೀದಿಸಿದರೆ ಇಡೀ ಜೀವನದುದ್ದಕ್ಕೂ ಶೌಚಾಲಯಕ್ಕೆ ಹೋಗಲು ಅದನ್ನೇ ಬಳಸಬೇಕಾಗುತ್ತದೆ ಎಂದು ಬರೆದಿದ್ದಾರೆ. ಹಾಗೇ ಮತ್ತೊಬ್ಬರು “ಇದು ನಮ್ಮ ಕುಟುಂಬದಲ್ಲಿ ಬಾತ್‍ರೂಮ್‍ಗೆ ಹೋಗಲು ಬಳಸುವ ಚಪ್ಪಲಿಗಳು” ಎಂದು ಬರೆದಿದ್ದಾರೆ. ಭಾರತದಲ್ಲಿ ನಿಮಗೆ ಈ ಚಪ್ಪಲಿಗಳು 60 ರೂಪಾಯಿಗೆ ಸಿಗುತ್ತದೆ ” ಎಂದು ನಾಲ್ಕನೇ ಬಳಕೆದಾರರು ತಿಳಿಸಿದ್ದಾರೆ.

ಇದನ್ನೂ ಓದಿ: ಚಾಕೋಲೇಟ್ ತಿನ್ನುವ ಆಸೆಯಾಗಿ ಅಂಗಡಿಗೆ ಹೋಗಿದ್ದ ಬಾಲಕ ಶವವಾಗಿ ಮನೆಗೆ ಬಂದ; ಆಗಿದ್ದೇನು? ವಿಡಿಯೊ ನೋಡಿ

ಇನ್ನೊಬ್ಬರು “ಭಾರತದಲ್ಲಿ ನಾವು ಇದನ್ನು ಹೆಚ್ಚಾಗಿ ಶೌಚಾಲಯಕ್ಕೆ ಹೋಗಲು ಬಳಸುತ್ತೇವೆ” ಎಂದು ಬರೆದಿದ್ದಾರೆ. ಮತ್ತೊಬ್ಬ ವ್ಯಕ್ತಿ “ಇದು ನಿಜವಾಗಿಯೂ ತಾಯಂದಿರ ದಿನದ ಅತ್ಯುತ್ತಮ ಉಡುಗೊರೆಯಾಗಿದೆ. ಯಾಕೆಂದರೆ ಎಲ್ಲಾ ತಾಯಂದಿರಿಗೆ ಚಪ್ಪಲಿ ಅತ್ಯುತ್ತಮ ಆಯುಧ” ಎಂದ ಬರೆದುಕೊಂಡಿದ್ದಾರೆ “ಭಾರತದ ಕೆಲವು ಸ್ಥಳಗಳಲ್ಲಿ ಈ ಚಪ್ಪಲಿಗಳು ಕೇವಲ ₹ 30 ಕ್ಕೆ ಪಡೆಯಬಹುದು” ಎಂದು ಒಬ್ಬರು ಹೇಳಿದರೆ, ಈ ಚಪ್ಪಲಿಗಳಿಗೆ ಹವಾಯಿ ಚಪ್ಪಲಿಗಳೆಂದು ಕರೆಯುತ್ತಾರೆ ಎಂದು ಮತ್ತೊಬ್ಬ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ ವಿರುದ್ಧ ಸಚಿವರು ಗರಂ; ʼಪಂಚೆ ಧರಿಸಿಯೇ ಸಿದ್ದರಾಮಯ್ಯ 7 ವರ್ಷ ರಾಜ್ಯ ಆಳ್ಲಿಲ್ವಾ?ʼ

GT World Mall: ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಈ ಕುರಿತು ಗರಂ ಆಗಿದ್ದು, ʼಪಂಚೆ ಧರಿಸಿಕೊಂಡೇ ಏಳು ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯ ರಾಜ್ಯದ ಆಡಳಿತ ಮಾಡುತ್ತಿದ್ದಾರೆ. ಇದರಿಂದ ಅವರು ಪಾಠ ಕಲಿಯಬೇಕುʼ ಎಂದು ಟೀಕಿಸಿದ್ದಾರೆ.

VISTARANEWS.COM


on

gt world mall 3
Koo

ಬೆಂಗಳೂರು: ಪಂಚೆ ಧರಿಸಿದ್ದಾರೆ ಎಂಬ ಕಾರಣದಿಂದ ಮಾಲ್‌ ಒಳಗೆ ಬಿಡದೆ ಕಾಯಿಸಿ ಹಾವೇರಿಯ ರೈತರನ್ನು (Haveri Farmer) ಅವಮಾನ ಮಾಡಿದ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್‌ನ (GT World Mall) ಸಿಬ್ಬಂದಿಯ ವರ್ತನೆಗೆ ರಾಜ್ಯದ ಸಚಿವರುಗಳು (State ministers) ಗರಂ ಆಗಿದ್ದಾರೆ. ಈ ಬಗ್ಗೆ ಪೊಲೀಸ್‌ ನೋಟೀಸ್‌ ನೀಡುವ ಸೂಚನೆ ನೀಡಿದ್ದಾರೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಈ ಕುರಿತು ಗರಂ ಆಗಿದ್ದು, ʼಪಂಚೆ ಧರಿಸಿಕೊಂಡೇ ಏಳು ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯ ರಾಜ್ಯದ ಆಡಳಿತ ಮಾಡುತ್ತಿದ್ದಾರೆ. ಇದರಿಂದ ಅವರು ಪಾಠ ಕಲಿಯಬೇಕುʼ ಎಂದು ಟೀಕಿಸಿದ್ದಾರೆ. ʼಆ ಮಾಲ್ ನಡೆಸುತ್ತಿರುವವರಿಗೆ ಬುದ್ಧಿ ಕಡಿಮೆ ಇರಬೇಕು. ನಮ್ಮ ಇಲಾಖೆ ಇಲ್ಲವೇ ಪೊಲೀಸ್ ಇಲಾಖೆಯಿಂದ ಈ ಬಗ್ಗೆ ಪತ್ರ ಬರೆಯುತ್ತೇವೆʼ ಎಂದು ಅವರು ಹೇಳಿದ್ದಾರೆ.‌

ಸರ್ಕಾರದಿಂದ ನಿಯಮ ತರುತ್ತೇವೆ: ಚಲುವರಾಯ ಸ್ವಾಮಿ

ರೈತರಿಗೆ ಪ್ರವೇಶ ನಿರಾಕರಣೆ ಮಾಡಿದ ಜಿ‌ಟಿ ಮಾಲ್ ಕ್ರಮವನ್ನು ಕೃಷಿ ಸಚಿವ ಚೆಲುವರಾಯಸ್ವಾಮಿ ಖಂಡಿಸಿದ್ದು, ಈ ವಿಚಾರದಲ್ಲಿ ಸೂಕ್ತ ನಿಯಮ ರೂಪಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಹೇಳಿದ್ದಾರೆ. ʼನಾವು ಇದನ್ನ ಖಂಡಿಸುತ್ತೇವೆ. ಕೆಲ ವರ್ಷಗಳ ಹಿಂದೆ ಪಂಚೆ ಕಟ್ಟಿಕೊಂಡು ಹೋದರೆ ಕ್ಲಬ್‌ಗಳಲ್ಲಿ ಬಿಡುತ್ತಿರಲಿಲ್ಲ. ಶೂ ಇಲ್ಲದೇ ಪಂಚೆ ಹಾಕಿಕೊಂಡು ಕ್ಲಬ್‌ಗೆ ಹೋಗಬಹುದು ಅಂತ ನಮ್ಮ ಸರ್ಕಾರ ನಿರ್ಧಾರ ಮಾಡಿತ್ತು. ಇದನ್ನು ನಾವು ಅಂದು ಅಧಿವೇಶನದಲ್ಲಿ ಚರ್ಚೆ ಮಾಡಿದ್ದೆವು. ಈಗಲೂ ಇದಕ್ಕೆ ಸರ್ಕಾರ ನಿಯಮ ತರಬೇಕುʼ ಎಂದು ಅವರು ಹೇಳಿದ್ದಾರೆ.

ʼಸರ್ಕಾರದಿಂದ ನಿಯಮ ತರುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡ್ತೀನಿ. ಸೂಕ್ತ ಆದೇಶ ಹೊರಡಿಸಲು ಹೇಳುತ್ತೇವೆ. ರೈತರಿಗೆ ಅಪಮಾನ ಆಗಬಾರದು. ಮಾಲ್‌ಗಳಿಗೆ ಸೂಕ್ತವಾದ ಸೂಚನೆಯನ್ನು ನೀಡುತ್ತೇವೆ. ಕ್ಲಬ್, ಇಂಟರ್‌ನ್ಯಾಶನಲ್ ಫೆಸ್ಟಿವಲ್‌ನಲ್ಲಿ ಸ್ವಲ್ಪ ಡ್ರೆಸ್ ಕೋಡ್ ಇರುತ್ತದೆ. ಮಾಲ್‌ಗಳಲ್ಲಿ ಪ್ಯಾಂಟ್ ಹಾಕಿದ್ರೇನೇ ಬಿಡೋದು ಅಂತ ಹೇಳೋದು ತಪ್ಪಾಗುತ್ತೆ. ಮೆಟ್ರೋದಲ್ಲೂ ಕೂಡ ಹಿಂದೆ ಹೀಗೇ ಆಗಿತ್ತು. ರೈತರಿಗೆ ಹೀಗೆ ಅವಮಾನ ಆಗಬಾರದು, ಯಾರೂ ಅವಮಾನ ಮಾಡಬಾರದು. ಸಾರ್ವಜನಿಕರು, ರೈತರ ಜೊತೆ ಮಾಲ್ ಸಿಬ್ಬಂದಿ ಗೌರವಯುತವಾಗಿ ನಡೆದುಕೊಳ್ಳಬೇಕು ಎಂಬ ಸೂಚನೆ ಸರ್ಕಾರದಿಂದ ನೀಡಲಾಗುತ್ತದೆ. ಪಂಚೆ ಅಂದ್ರೆ ಯಾಕೆ ತಿರಸ್ಕಾರ ಮನೋಭಾವ ಅನ್ನೋದನ್ನು ಅವರನ್ನೇ ಕೇಳಬೇಕು” ಎಂದು ಚಲುವರಾಯ ಸ್ವಾಮಿ ಹೇಳಿದರು.

ಹಾವೇರಿ ಮೂಲದ ರೈತರನ್ನು ಪಂಚೆ ಉಟ್ಟಿದ್ದಾರೆ (Haveri Farmer wearing Dhoti) ಎಂಬ ಕಾರಣಕ್ಕಾಗಿ ಮಾಲ್‌ ಒಳಗೆ ಬಿಡದೆ ಅವಮಾನ ಮಾಡಿದ ಜಿಟಿ ವರ್ಲ್ಡ್‌ ಮಾಲ್‌ (GT World Mall) ಮುಂದೆ ಇಂದು ರೈತ ಸಂಘಟನೆಗಳ ಹಾಗೂ ಕನ್ನಡ ಸಂಘಟನೆಗಳ ಸದಸ್ಯರು ಪಂಚೆ ಉಟ್ಟು ಪ್ರತಿಭಟನೆ ನಡೆಸಿದ್ದಾರೆ. ರೈತರಿಗೆ ನ್ಯಾಯ ಸಲ್ಲಿಸಲು ಹೋರಾಟ ನಡೆಸಿದ ವಿಸ್ತಾರ ನ್ಯೂಸ್‌ ಹಾಗೂ ಸಾರ್ವಜನಿಕರ ಮುಂದೆ ಮಾಲ್‌ ಮಾಲಿಕರು ಕ್ಷಮೆ ಯಾಚಿಸಿದರು. ಮಾಲ್‌ ಆಡಳಿತದ ವರ್ತನೆಯ ಬಗ್ಗೆ ಸ್ಪಷ್ಟನೆ ಕೇಳಿ ನೋಟೀಸ್‌ ನೀಡಲು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (Karnataka state human rights commission) ಮುಂದಾಗಿದೆ.

ಘಟನೆಯನ್ನು ವಿರೋಧಿಸಿದ ಕನ್ನಡ ಸಂಘಟನೆಯ ಕಾರ್ಯಕರ್ತರು ರೈತರ ಗೆಟಪ್‌ನಲ್ಲಿ ಬೆಳಗ್ಗೆ ಮಾಲ್‌ ಮುಂದೆ ಜಮಾಯಿಸಿದರು. ಕನ್ನಡ ಸಂಘಟನೆಯ ರೂಪೇಶ್ ರಾಜಣ್ಣ ಆ್ಯಂಡ್ ಟೀಂ ಪಂಚೆ ಧರಿಸಿ ಮಾಲ್‌ ಮುಂದೆ ಸೇರಿದ್ದು, ಪ್ರತಿಭಟನೆಗೆ ಮುಂದಾದರು. ಇಂದು ಪ್ರತಿಭಟನೆ ಹಿನ್ನೆಲೆಯಲ್ಲಿ ಮಾಲ್‌ನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

Continue Reading

Latest

Sexual Harassment Case: ಜನಜಂಗುಳಿಯ ಮಧ್ಯೆ ಮಹಿಳೆಯ ಖಾಸಗಿ ಭಾಗಕ್ಕೆ ಕೈ ಹಾಕಿದ ಬಸ್‍ ಕಂಡಕ್ಟರ್‌!

Sexual Harassment Case: ಹೈದರಾಬಾದ್‌ನ ಮಹಿಳೆಯೊಬ್ಬರು ಬಸ್‌ನಲ್ಲಿ ತನಗಾದ ಕೆಟ್ಟ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ. ಮಹಿಳೆಯೊಬ್ಬಳು ಮಣಿಕೊಂಡದಿಂದ ಹಿಮಾಯತ್ ನಗರಕ್ಕೆ ಹಿಂದಿರುಗಲು ಟಿಎಸ್ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಳು. ಆ ವೇಳೆ ಬಸ್‌ನಲ್ಲಿ ಪ್ರಯಾಣಿಕರು ತುಂಬಿದ್ದರು. ಆಗ ಬಸ್ಸಿನ ಕಂಡಕ್ಟರ್ ಕಿಕ್ಕಿರಿದ ಬಸ್ಸಿನ ಅವಕಾಶವನ್ನು ತೆಗೆದುಕೊಂಡು ಆಕೆಯ ಎದೆ ಭಾಗ ಹಾಗೂ ಸೊಂಟದ ಕೆಳಗಿನ ಖಾಸಗಿ ಭಾಗವನ್ನು ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ.

VISTARANEWS.COM


on

Sexual Harassment Case
Koo


ಹೈದರಾಬಾದ್: ಕೆಟ್ಟ ಕಾಮುಕರೇ ತುಂಬಿರುವಂತಹ ಈ ಪ್ರಪಂಚದಲ್ಲಿ ಮಹಿಳೆಯರು ಪ್ರತಿದಿನ ಒಂದಲ್ಲ ಒಂದು ರೀತಿಯಲ್ಲಿ ಲೈಂಗಿಕ ಕಿರುಕುಳ(Sexual Harassment Case )ವನ್ನು ಅನುಭವಿಸುತ್ತಿದ್ದಾರೆ. ಕೆಲವು ಮಹಿಳೆಯರು ಮರ್ಯಾದೆಗೆ ಅಂಜಿ ಅದನ್ನು ಮುಚ್ಚಿದ್ದರೆ ಕೆಲವರು ಅದನ್ನು ಎದುರಿಸಿ ನಿಲ್ಲುತ್ತಾರೆ. ಅಂತಹದೊಂದು ಘಟನೆ ಹೈದರಾಬಾದ್‍ನ ಟಿಎಸ್ಆರ್‌ಟಿಸಿ ಬಸ್‍ನಲ್ಲಿ ನಡೆದಿದ್ದು, ಇದಕ್ಕೆ ಮಹಿಳೆ ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

ಹೈದರಾಬಾದ್‍ನ ಮಹಿಳೆಯೊಬ್ಬಳು ಹಿಮಾಯತ್ ನಗರಕ್ಕೆ ಹಿಂದಿರುಗುವಾಗ ಟಿಎಸ್ಆರ್‌ಟಿಸಿ ಬಸ್‍ನಲ್ಲಿ ತನಗಾದ ಕೆಟ್ಟ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ. ಸರ್ಕಾರಿ ಬಸ್ ಕಂಡಕ್ಟರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬರೆದು ಆರೋಪ ಮಾಡಿದ್ದಾಳೆ. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹೈದರಾಬಾದ್‌ನ 21 ವರ್ಷದ ಮಹಿಳೆಯೊಬ್ಬಳು ಮಣಿಕೊಂಡದಿಂದ ಹಿಮಾಯತ್ ನಗರಕ್ಕೆ ಹಿಂದಿರುಗಲು 65 ಮೀ / 123 ಟಿಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಳು. ಆ ವೇಳೆ ಬಸ್‍ನಲ್ಲಿ ಪ್ರಯಾಣಿಕರು ತುಂಬಿದ್ದರು. ಆಗ ಬಸ್ಸಿನ ಕಂಡಕ್ಟರ್ ಕಿಕ್ಕಿರಿದ ಬಸ್ಸಿನ ಅವಕಾಶವನ್ನು ತೆಗೆದುಕೊಂಡು ಆತ ಆಕೆಯ ಎದೆ ಭಾಗವನ್ನು ಸ್ಪರ್ಶಿಸಲು ಪ್ರಾರಂಭಿಸಿದ. ನಂತರ ಅವನು ಆಕೆಯ ಸೊಂಟದ ಕೆಳಗಿನ ಖಾಸಗಿ ಭಾಗವನ್ನು ಸ್ಪರ್ಶಿಸಿದನಂತೆ. ಹಾಗಾಗಿ ತಾನು ಜೋರಾಗಿ ಕೂಗಿ ಕೊಂಡಿರುವುದಾಗಿ ಪೋಸ್ಟ್‌ನಲ್ಲಿ ತಿಳಿಸಿದ್ದಾಳೆ. ಅಲ್ಲದೇ ಎಷ್ಟು ಜನ ಹದಿಹರೆಯದ ಹುಡುಗಿಯರು ಮೌನವಾಗಿ ಇದನ್ನು ಸಹಿಸಿಕೊಳ್ಳುತ್ತಾರೆ ಎಂಬುದು ತನಗೆ ತಿಳಿದಿಲ್ಲ. ಆದರೆ ಸರ್ಕಾರ ಇದಕ್ಕೆ ಪ್ರತಿಕ್ರಿಯಿಸಬೇಕೆಂದು ತಾನು ಬಯಸುವುದಾಗಿ ತಿಳಿಸಿದ್ದಾಳೆ. ಅದನ್ನು ಆಕೆ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ, ಬಿಆರ್ ಎಸ್ ನಾಯಕ ಕೆ.ಟಿ.ರಾಮರಾವ್, ಹೈದರಾಬಾದ್ ಪೊಲೀಸರು ಮತ್ತು ಮಹಿಳಾ ಸಂಘಗಳಿಗೆ ಟ್ಯಾಗ್ ಮಾಡಿದ್ದಾಳೆ.

ಇದನ್ನೂ ಓದಿ: ಬಾಸ್‌ ಜತೆ ಚಕ್ಕಂದವಾಡುತ್ತಿದ್ದ ಕಿಲಾಡಿ ಪತ್ನಿ; ಡ್ರೋನ್‌ ಬಳಸಿ ಪತ್ತೆ ಹಚ್ಚಿದ ಚಾಲಾಕಿ ಗಂಡ!

ಇದಕ್ಕೆ ಪ್ರತಿಕ್ರಿಯಿಸಿದ ಟಿಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಉಪಾಧ್ಯಕ್ಷ ವಿ.ಸಿ.ಸಜ್ಜನರ್, ಬಸ್ಸಿನ ಕಂಡಕ್ಟರ್ ವಿರುದ್ಧ ರಾಯದುರ್ಗಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿಸಿದ್ದಾರೆ. ಇಂತಹ ಘಟನೆಗಳನ್ನು ಮತ್ತೆ ನಡೆಯದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಹಾಗೇ ಸಂತ್ರಸ್ತೆ ಸೈಬರಾಬಾದ್ ಕಮಿಷನರೇಟ್‍ನ ರಾಯದುರ್ಗಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಟಿಎಸ್ಆರ್‌ಟಿಸಿ ಎಂಡಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಮಹಿಳಾ ಸಂಘಗಳು ಈ ಘಟನೆಯನ್ನು ತಮ್ಮ ಗಮನಕ್ಕೆ ತಂದಿದ್ದಕ್ಕಾಗಿ ಧನ್ಯವಾದ ತಿಳಿಸಿ, ಸಂತ್ರಸ್ತೆಯ ಸಹಾಯಕ್ಕೆ ನಿಲ್ಲುವುದಾಗಿ, ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂಬುದಾಗಿ ತಿಳಿದುಬಂದಿದೆ.

Continue Reading
Advertisement
Viral Video
ವೈರಲ್ ನ್ಯೂಸ್11 mins ago

Viral Video: ಸಫಾರಿಯಲ್ಲಿ ಪ್ರವಾಸಿಗರ ಎದುರೇ ಸಿಂಹಗಳ ಕಾಮಕೇಳಿ!

Olympic Games History
ಕ್ರೀಡೆ12 mins ago

Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

Amitabh Bachchan holds umbrella for Jaya Bachchan
ಬಾಲಿವುಡ್23 mins ago

Amitabh Bachchan: ಅಮಿತಾಭ್ ರೊಮ್ಯಾಂಟಿಕ್ ಮೂಡ್‌ನಲ್ಲಿದ್ದರೂ ಮುಖ ಊದಿಸಿಕೊಂಡೇ ಇದ್ದ ಜಯಾ ಬಚ್ಚನ್!

Viral Video
ವೈರಲ್ ನ್ಯೂಸ್1 hour ago

Viral Video: ನೋಡ ನೋಡ್ತಿದ್ದಂತೆ ಮೂರನೇ ಮಹಡಿಯಿಂದ ಬಿದ್ದ ಮಹಿಳೆ; ಶಾಕಿಂಗ್‌ ವಿಡಿಯೋ ವೈರಲ್‌

Tauba Tauba
Latest1 hour ago

Tauba Tauba : ಲಂಡನ್‌ ಬೀದಿಯಲ್ಲಿ ‘ತೌಬಾ ತೌಬಾ’ ಹಾಡಿಗೆ ಸಖತ್‌ ಆಗಿ ಸ್ಟೆಪ್ಸ್‌ ಹಾಕಿದ ಬೆಡಗಿಯರು; ವಿಡಿಯೊ ವೈರಲ್

CM Siddaramaiah karnataka jobs reservation
ಪ್ರಮುಖ ಸುದ್ದಿ1 hour ago

Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

Kannada New Movie Baila Baila Video Song Hiranya out
ಸ್ಯಾಂಡಲ್ ವುಡ್1 hour ago

Kannada New Movie: ರಾಜವರ್ಧನ್ ‘ಹಿರಣ್ಯ’ ಸಿನಿಮಾದಲ್ಲಿ ಮೈ ಚಳಿ ಬಿಟ್ಟು ಡ್ಯಾನ್ಸ್‌ ಮಾಡಿದ ದಿವ್ಯಾ ಸುರೇಶ್!

Usha Chilukuri Vance
ವಿದೇಶ1 hour ago

Usha Chilukuri Vance: ಟ್ರಂಪ್ ಅವರ ಉಪಾಧ್ಯಕ್ಷ ಅಭ್ಯರ್ಥಿಯ ಪತ್ನಿ ಭಾರತೀಯ ಸಂಸ್ಕೃತಿಯ ಪ್ರತಿಪಾದಕಿ!

Viral News
ಪ್ರಮುಖ ಸುದ್ದಿ1 hour ago

Viral News : ಕುವೈಟ್​ನಲ್ಲಿ ಈ ಚಪ್ಪಲಿಗೆ 1 ಲಕ್ಷ ರೂಪಾಯಿಯಂತೆ; ನಮ್ಮಲ್ಲಿ ಇದು ಬಾತ್​ರೂಮ್​ಗೆ ಹೋಗುವ ಚಪ್ಪಲಿ ಎಂದ ನೆಟ್ಟಿಗರು!

Food Poisoning
ದೇಶ2 hours ago

Food Poisoning: ಮೊಹರಂ ಮೆರವಣಿಗೆ ವೇಳೆ ಷರಬತ್ತು ಸೇವಿಸಿ 400 ಮಂದಿ ಅಸ್ವಸ್ಥ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌