Karnataka Police: ಪತ್ರಕರ್ತನ ಬಂಧಿಸಲು ಹೋಗಿ ಉತ್ತರಪ್ರದೇಶದಲ್ಲಿ ಪೇಚಿಗೆ ಸಿಲುಕಿದ ಕರ್ನಾಟಕದ ಪೊಲೀಸರು, ಏನಿದು ಘಟನೆ? - Vistara News

ಪ್ರಮುಖ ಸುದ್ದಿ

Karnataka Police: ಪತ್ರಕರ್ತನ ಬಂಧಿಸಲು ಹೋಗಿ ಉತ್ತರಪ್ರದೇಶದಲ್ಲಿ ಪೇಚಿಗೆ ಸಿಲುಕಿದ ಕರ್ನಾಟಕದ ಪೊಲೀಸರು, ಏನಿದು ಘಟನೆ?

Karnataka Police: ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ನೋಯ್ಡಾದಲ್ಲಿರುವ ಪತ್ರಕರ್ತ ಮತ್ತು ಯೂಟ್ಯೂಬರ್‌ ಅಜೀತ್‌ ಭಾರ್ತಿ ವಿರುದ್ಧ ರಾಜ್ಯ ಪೊಲೀಸರು ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಅವರನ್ನು ಬಂಧಿಸಲು ಬೆಂಗಳೂರು ಪೊಲೀಸರು ಅಲ್ಲಿಗೆ ತೆರಳಿದ್ದರು.

VISTARANEWS.COM


on

karnataka police ajeet bharti
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕಾಂಗ್ರೆಸ್‌ (Congress) ಹಾಗೂ ರಾಹುಲ್‌ ಗಾಂಧಿ (Rahul Gandhi) ಅವರನ್ನು ಟೀಕಿಸಿದ್ದ ಉತ್ತರ ಪ್ರದೇಶದ (Uttar Pradesh) ಪತ್ರಕರ್ತ ಅಜಿತ್ ಭಾರ್ತಿ (Ajeet Bharti) ಬಂಧನಕ್ಕೆ ತೆರಳಿದ್ದ ಕರ್ನಾಟಕದ ಪೊಲೀಸರು (Karnataka Police) ನೋಯ್ಡಾದಲ್ಲಿ (Noida) ಅಲ್ಲಿನ ಪೊಲೀಸರಿಂದ ಲಾಕ್‌ ಆಗಿದ್ದಾರೆ. ʼನಮ್ಮವರು ತಪ್ಪು ಮಾಡಿಲ್ಲ” ಎಂದು ಗೃಹ ಸಚಿವ ಪರಮೇಶ್ವರ್‌ (G Parameshwara) ಹೇಳಿದ್ದರೆ, ಬಿಜೆಪಿ ಈ ವಿಚಾರದಲ್ಲಿ ಕಿಡಿ ಕಾರಿದೆ.

ಕಾಂಗ್ರೆಸ್‌‍ ನಾಯಕ ರಾಹುಲ್‌ ಗಾಂಧಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ನೋಯ್ಡಾದಲ್ಲಿರುವ ಪತ್ರಕರ್ತ ಮತ್ತು ಯೂಟ್ಯೂಬರ್‌ ಅಜೀತ್‌ ಭಾರ್ತಿ ವಿರುದ್ಧ ರಾಜ್ಯ ಪೊಲೀಸರು ಇತ್ತೀಚೆಗೆ ಬೆಂಗಳೂರಿನಲ್ಲಿ ಪ್ರಕರಣ ದಾಖಲಿಸಿದ್ದರು. ನಂತರ ಅವರನ್ನು ಬಂಧಿಸಲು ಬೆಂಗಳೂರು ಪೊಲೀಸರು ಅಲ್ಲಿಗೆ ತೆರಳಿದ್ದರು. ಆದರೆ ಮನೆಯಿಂದ ಹೊರಗೆ ಬರದ ಭಾರ್ತಿ, ಕೂಡಲೇ ಅಲ್ಲಿನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಯೂಟ್ಯೂಬರ್‌ನ ಮನೆಯ ಹೊರಗೆ ಕರ್ನಾಟಕ ಪೊಲೀಸರು ಮತ್ತು ನೋಯ್ಡಾ ಪೊಲೀಸರ ನಡುವೆ ಮುಖಾಮುಖಿಯಾಗಿದೆ.

ಕರ್ನಾಟಕ ಪೊಲೀಸರನ್ನು ನನ್ನ ಮನೆಗೆ ಪ್ರವೇಶಿಸಲು ನಾನು ಅನುಮತಿಸಲಿಲ್ಲ. ನೋಯ್ಡಾ ಪೊಲೀಸರು ಸಮಯಕ್ಕೆ ಮಧ್ಯಪ್ರವೇಶಿಸಿ ಕ್ರಮ ಕೈಗೊಂಡರು ಎಂದು ಭಾರ್ತಿ ಹೇಳಿದ್ದಾರೆ. ಅದೇ ವೇಳೆ ಪತ್ರಕರ್ತ, ಫ್ಯಾಕ್ಟ್‌ ಚೆಕರ್‌ ಮೊಹಮ್ಮದ್‌ ಜುಬೇರ್‌ ವಿರುದ್ಧ ಪ್ರಕರಣ ದಾಖಲಿಸುವುದಾಗಿಯೂ ಯೂಟ್ಯೂಬರ್‌ ತನ್ನ ಕಾಮೆಂಟ್‌‍ನಲ್ಲಿ ಹೇಳಿದ್ದಾರೆ. ತನ್ನ ನಿವಾಸಕ್ಕೆ ಬಂದ ಕರ್ನಾಟಕ ಪೊಲೀಸರನ್ನು ನೋಯ್ಡಾ ಪೊಲೀಸರು ತಮ್ಮ ಜತೆ ಕರೆದೊಯ್ದಿದ್ದಾರೆ ಎಂದು ಹೇಳಿದ್ದಾನೆ.

ಪ್ರಕರಣದ ಕುರಿತು ರಾಜ್ಯ ಗೃಹ ಸಚಿವ ಪರಮೇಶ್ವರ್‌ ಹೇಳಿಕೆ ನೀಡಿದ್ದಾರೆ. “ಅಜಿತ್ ಭಾರತಿ ಯುಟ್ಯೂಬರ್ ಅವನನ್ನು ಆರೆಸ್ಟ್ ಮಾಡಲು ಹೋಗಿದ್ದರು ನಮ್ಮ ಪೊಲೀಸ್ ಮಫ್ತಿಯಲ್ಲಿ ಹೋಗಿದ್ದಾರೆ. ಅಲ್ಲಿಯ ಪೊಲೀಸರಿಗೆ ತಿಳಸಬೇಕಿತ್ತು. ತಿಳಿಸದೇ ಹೋಗಿದ್ದಾರೆ. ಅಲ್ಲಿನ ಪೊಲೀಸ್ ಮೊದಲು ನೋಟಿಸ್ ಕೊಡಿ ನಂತರ ನೋಡೋಣ ಎಂದಿದ್ದಾರೆ. ನೋಟೀಸ್ ಕೊಟ್ಟ ಮೇಲೆ ಆ ಯೂಟ್ಯೂಬರ್ ಬರದೇ ಹೋದ್ರೆ ವಾರೆಂಟ್ ತೆಗೆದುಕೊಂಡು ಆರೆಸ್ಟ್ ಮಾಡ್ತಾರೆ. ಕೆಲವೊಮ್ಮೆ ಇಂಥ ಕನ್‌ಫ್ಯೂಶನ್ ಆಗುತ್ತೆ. ನಮ್ಮ ಪೊಲೀಸರೇನೂ ತಪ್ಪು ಮಾಡಿಲ್ಲ” ಎಂದು ಹೇಳಿದ್ದಾರೆ.

ಆದರೆ ದೂರು ದಾಖಲಾಗಿರುವ ಹೈಗ್ರೌಂಡ್ಸ್ ಠಾಣೆ ಪೊಲೀಸರು, ಅಜೀತ್‌ ಭಾರ್ತಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌‍ ನೀಡಿದ್ದೇವೆಯೇ ಹೊರತು ಬಂಧಿಸಲು ಹೋಗಿಲ್ಲ ಎಂದು ಹೇಳಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ.ವಿಜಯೇಂದ್ರ ಅವರು ವಾಗ್ದಾಳಿ ನಡೆಸಿದ್ದಾರೆ. “ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌‍ ಸರ್ಕಾರ ವಿಲಕ್ಷಣ ಕಾರಣಗಳಿಗಾಗಿ ಅಜೀತ್‌ ಭಾರ್ತಿ ಅವರನ್ನು ಬಂಧಿಸುವ ಪ್ರಯತ್ನವು ಸಂಪೂರ್ಣವಾಗಿ ಸರ್ವಾಧಿಕಾರಿಯಾದದ್ದು. ಬಿಜೆಪಿ ಅಜೀತ್‌ ಭಾರ್ತಿ ಅವರೊಂದಿಗೆ ದೃಢವಾಗಿ ನಿಲ್ಲುತ್ತದೆ ಮತ್ತು ಈ ಪ್ರಕರಣದ ವಿರುದ್ಧ ಹೋರಾಡಲು ಅಗತ್ಯವಿರುವ ಎಲ್ಲಾ ಬೆಂಬಲವನ್ನು ನೀಡುತ್ತದೆ” ಎಂದು ಹೇಳಿದ್ದಾರೆ.

“ಈ ಘಟನೆಯು ಪ್ರಸ್ತುತ ಆಡಳಿತದ ಆಡಳಿತ ವೈಫಲ್ಯಕ್ಕೆ ಉದಾಹರಣೆಯಾಗಿದೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ರಾಜ್ಯದಲ್ಲಿ ಹೈ-ಪ್ರೊಫೈಲ್‌ ಕೊಲೆಗಳು, ಮಹಿಳೆಯರಿಗೆ ಕಿರುಕುಳ ಸೇರಿದಂತೆ ಅಪರಾಧ ಚಟುವಟಿಕೆಗಳಲ್ಲಿ ಗಣನೀಯ ಏರಿಕೆ ಕಂಡಿದೆ. ಆದರೆ, ಇದನ್ನು ಸರ್ಕಾರ ನಿರ್ಲಕ್ಷಿಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದರೂ ಪೊಲೀಸ್‌‍ ಪಡೆಯ ಅಮೂಲ್ಯ ಸಮಯ ಮತ್ತು ಸಂಪನೂಲಗಳನ್ನು ಸಾರ್ವಜನಿಕರ ಸುರಕ್ಷತೆಯ ಬದಲಿಗೆ ರಾಜಕೀಯ ಸೇಡಿಗೆ ಬಳಸಿಕೊಳ್ಳಲಾಗುತ್ತಿದೆ. ಸಿದ್ದರಾಮಯ್ಯ ಸರ್ಕಾರ ತನ್ನ ನಾಗರಿಕರ ಕಲ್ಯಾಣ ಮತ್ತು ಭದ್ರತೆಯನ್ನು ಖಾತ್ರಿಪಡಿಸುವುದಕ್ಕಿಂತ ತನ್ನ ಟೀಕಾಕಾರರನ್ನು ಹತ್ತಿಕ್ಕುವತ್ತ ಹೆಚ್ಚು ಗಮನಹರಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.ಬಿಜೆಪಿಯು ಭಾರ್ತಿ ಅವರನ್ನು ರಕ್ಷಿಸಲು ಪಣ ತೊಟ್ಟಿದೆ. ರಾಜ್ಯದ ಸರ್ವಾಧಿಕಾರಿ ಆಡಳಿತದ ವಿರುದ್ಧ ಹೋರಾಟವನ್ನು ಮುಂದುವರೆಸಲಿದೆ” ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

‌ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ವಿಡಿಯೋ ಹಾಕಿದ ಕುರಿತು ಕೆಪಿಸಿಸಿ ಕಾನೂನು ಘಟಕದ ಕಾರ್ಯದರ್ಶಿ, ವಕೀಲ ಬಿ.ಕೆ ಬೋಪಣ್ಣ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಾಬರಿ ಮಸೀದಿ ವಿಚಾರವಾಗಿ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್‌ ರಾಮಮಂದಿರ ಬದಲಿಗೆ ಬಾಬ್ರಿ ಮಸೀದಿ ಮರಳಿ ತರಲು ಉದ್ದೇಶಿಸಿದ್ದಾರೆ ಎಂದು ಪೋಸ್ಟ್ ಹಾಕಿದ್ದಾರೆ. ಆದರೆ ರಾಹುಲ್ ಗಾಂಧಿ ಯಾವುದೇ ಭಾಷಣದಲ್ಲಿ ಹಾಗೆ ಹೇಳಿಲ್ಲ. ಜನರಲ್ಲಿ ವಿಭಜನೆಯ ಭಾವ ಉಂಟು ಮಾಡಲು ಹಾಗು ಕೋಮು ದ್ವೇಷ ಹರಡಲು ಈ ಕೃತ್ಯ, ಧಾರ್ಮಿಕ ದ್ವೇಷ ಉಂಟುಮಾಡುವ ಉದ್ದೇಶದಿಂದ ಅಜಿತ್ ಭಾರತಿ ಪೋಸ್ಟ್ ಹಾಕಿದ್ದಾನೆ ಎಂದು ದೂರು ನೀಡಲಾಗಿತ್ತು.

ಇದನ್ನೂ ಓದಿ: Actor Darshan: ದರ್ಶನ್‌ ಪ್ರಕರಣ; ಶಿವಣ್ಣನ ವಿರುದ್ಧ ಪ್ರಶಾಂತ್‌ ಸಂಬರಗಿ ಆಕ್ರೋಶ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

ಕರ್ನಾಟಕದಲ್ಲಿ ನಂದಿನಿ ಹಾಲಿನ ಬೆಲೆಯನ್ನು 2 ರೂ., ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿರುವ ಯುವ ಕಾಂಗ್ರೆಸ್‌ ನಾಯಕರು ದೆಹಲಿಗೆ ವಿಮಾನದಲ್ಲಿ ತೆರಳಿ ಪ್ರತಿಭಟನೆ ನಡೆಸಲು ಹಣವನ್ನು ಎಲ್ಲಿಂದ ತಂದಿದೆ ಎಂಬುದಾಗಿ ಬಿಜೆಪಿ ಪ್ರಶ್ನಿಸಿದೆ. ಕಾಂಗ್ರೆಸ್‌ ನಾಯಕರು ದೆಹಲಿಗೆ ಹೊರಟ ವಿಡಿಯೊವನ್ನು ಕೂಡ ಹಂಚಿಕೊಂಡಿದೆ.

VISTARANEWS.COM


on

Congress Protest
Koo

ಬೆಂಗಳೂರು/ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG) ಅಕ್ರಮ ನಡೆದಿರುವುದು ಹಾಗೂ ಸೇನೆಗೆ ಕಿರು ಅವಧಿಗೆ ನೇಮಕ ಮಾಡಿಕೊಳ್ಳುವ ಅಗ್ನಿಪಥ ಯೋಜನೆ ವಿರುದ್ಧ ದೆಹಲಿಯ ಜಂತರ್‌ ಮಂತರ್‌ನಲ್ಲಿ ಭಾರತೀಯ ಯುವ ಕಾಂಗ್ರೆಸ್‌ (IYC) ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಇನ್ನು, ಕರ್ನಾಟಕದಿಂದ (Karnataka) ಐಷಾರಾಮಿ ವಿಮಾನದಲ್ಲಿ ಯುವ ಕಾಂಗ್ರೆಸ್‌ (Congress) ನಾಯಕರು ದೆಹಲಿಗೆ ಹೋಗಿರುವುದನ್ನು ಬಿಜೆಪಿ (BJP) ಖಂಡಿಸಿದೆ. ಅಲ್ಲದೆ, ಹಣದ ಮೂಲಕ ಯಾವುದು ಎಂಬುದಾಗಿ ಪ್ರಶ್ನಿಸಿದೆ.

“ಐಷಾರಾಮಿ ಎಸಿ ಬಸ್‌ ಹಾಗೂ ಪ್ಲೈಟ್‌ ಮುಖಾಂತರ ಪ್ರಯಾಣ ಮಾಡಿ ಪ್ರತಿಭಟನೆ ಮಾಡುವ ಕರ್ನಾಟಕ ಕಾಂಗ್ರೆಸ್‌ನ ಯುವ ನಾಯಕರಿಗೆ ಹಣ ಎಲ್ಲಿಂದ ಬಂದಿದೆ? ಇದರ ಹಣದ ಮೂಲ ಎಲ್ಲಿ? ನಂದಿನಿ ಹಾಲಿನ ಹೆಚ್ಚುವರಿ 2 ರೂಪಾಯಿ, ಪೆಟ್ರೋಲ್‌ ಬೆಲೆಯ ಹೆಚ್ಚುವರಿ 4 ರೂಪಾಯಿಯನ್ನು ಸಿದ್ದರಾಮಯ್ಯ ಸರ್ಕಾರ ಸಂಗ್ರಹಿಸಿ ಕೊಟ್ಟಿದೆ ಎಂದು ದೆಹಲಿಗೆ ಹೋದ ನಲಪಾಡ್‌ ಗ್ಯಾಂಗ್‌ ಹೇಳುತ್ತಿದೆ. ಹೌದಾ ಸಿದ್ದರಾಮಯ್ಯನವರೇ?” ಎಂಬುದಾಗಿ ಬಿಜೆಪಿ ಪೋಸ್ಟ್‌ ಮಾಡಿದೆ. ಹಾಗೆಯೇ, ಯುವ ಕಾಂಗ್ರೆಸ್‌ ನಾಯಕರು ವಿಮಾನದಲ್ಲಿ ಹೊರಟ ವಿಡಿಯೊವನ್ನು ಕೂಡ ಹಂಚಿಕೊಂಡಿದೆ.

ರಾಜ್ಯದಲ್ಲಿ ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ 3 ಸಾವಿರ ಕೋಟಿ ರೂ. ಹೆಚ್ಚುವರಿ ಆದಾಯ ಬರಲಿದೆ ಎಂದು ತಿಳಿದುಬಂದಿದೆ. ಇದಾದ ಕೆಲವೇ ದಿನಗಳಲ್ಲಿ ನಂದಿನಿ ಹಾಲಿನ ಬೆಲೆಯನ್ನೂ 2 ರೂಪಾಯಿ ಏರಿಕೆ ಮಾಡಿದ್ದು, ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಬಿಜೆಪಿ ನಾಯಕರು ಕೂಡ ರಾಜ್ಯ ಸರ್ಕಾರದ ತೀರ್ಮಾನವನ್ನು ಖಂಡಿಸಿದ ಪ್ರತಿಭಟನೆ ನಡೆಸಿದ್ದಾರೆ. ಇದರ ಬೆನ್ನಲ್ಲೇ, ರಾಜ್ಯ ಯುವ ಕಾಂಗ್ರೆಸ್‌ ನಾಯಕರು ವಿಮಾನದಲ್ಲಿ ತೆರಳಿ, ದೆಹಲಿಯಲ್ಲಿ ಎ.ಸಿ ಬಸ್‌ನಲ್ಲಿ ಜಂತರ್‌ ಮಂತರ್‌ಗೆ ಹೋಗಿ ಪ್ರತಿಭಟನೆ ನಡೆಸಿದ್ದನ್ನು ಬಿಜೆಪಿ ಪ್ರಶ್ನಿಸಿದೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಿಸಿದೆ. ಇದರಿಂದ ಒಂದು ಲೀಟರ್‌ ಡೀಸೆಲ್‌ಗೆ ರಾಜ್ಯದ ಜನ 89.20 ರೂ. ನೀಡಿದರೆ, ಲೀಟರ್‌ ಪೆಟ್ರೋಲ್‌ಗೆ 103 ಆಗಿದೆ. ಪೆಟ್ರೋಲ್‌ಗೆ ರಾಜ್ಯ ಸರ್ಕಾರವು ಇದುವರೆಗೆ ಶೇ.25.92ರಷ್ಟು ಮಾರಾಟ ತೆರಿಗೆ ವಿಧಿಸುತ್ತಿತ್ತು. ಈಗ ಶೇ.3.9ರಷ್ಟು ಹೆಚ್ಚಳ ಮಾಡಿದ್ದು, ಇನ್ನು ಮುಂದೆ ಒಟ್ಟು ಶೇ.29.84ರಷ್ಟು ತೆರಿಗೆ ವಸೂಲಿ ಮಾಡುತ್ತಿದೆ. ಇನ್ನು ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಶೇ.4.1ರಷ್ಟು ಏರಿಕೆ ಮಾಡಲಾಗಿದ್ದು, ರಾಜ್ಯ ಸರ್ಕಾರ ಶೇ.18.44ರಷ್ಟು ತೆರಿಗೆ ವಸೂಲಿ ಮಾಡುತ್ತಿದೆ.

ಇದನ್ನೂ ಓದಿ: Milk Price: ನಂದಿನಿ ಹಾಲಿನ ಹೊಸ ದರ ಹೇಗಿದೆ; ಯಾವುದಕ್ಕೆ ಎಷ್ಟು ಹೆಚ್ಚಳ?

Continue Reading

ದೇಶ

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

NEET Aspirant: 17 ವರ್ಷದ ಬಾಲಕನು ಕೋಟಾದಲ್ಲಿ ನೀಟ್‌ಗೆ ತಯಾರಿ ನಡೆಸುತ್ತಿದ್ದ. ಆತನು ಇತ್ತೀಚೆಗೆ ಒತ್ತಡಕ್ಕೆ ಸಿಲುಕಿದ್ದು, ತನ್ನ ಕೋಣೆಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತನನ್ನು ಹರ್ಷಿತ್‌ ಕುಮಾರ್‌ ಅಗರ್ವಾಲ್‌ ಎಂಬುದಾಗಿ ಗುರುತಿಸಲಾಗಿದೆ. ಈತನು ಬಿಹಾರದವನಾಗಿದ್ದು, 12ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ.

VISTARANEWS.COM


on

NEET Aspirant
Koo

ಜೈಪುರ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ಕಳೆದ ಮೇ ತಿಂಗಳಲ್ಲಿ ನಡೆದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಅಕ್ರಮ ನಡೆದಿರುವ, ಪ್ರಶ್ನೆ ಪತ್ರಿಕೆ ಸೋರಿಕೆಯಾದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಪ್ರಕರಣದ ಕುರಿತು ತನಿಖೆ ನಡೆಸಲು ಸಿಬಿಐಗೆ ಹೊಣೆ ನೀಡಿದರೂ ಕೆಲ ರಾಜ್ಯಗಳು ನೀಟ್‌ ಪರೀಕ್ಷೆಯೇ ಬೇಡ ಎಂದು ಹೇಳುತ್ತಿವೆ. ಇದರ ಮಧ್ಯೆಯೇ, ರಾಜಸ್ಥಾನದ ಕೋಟಾದಲ್ಲಿ (Kota) ನೀಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 17 ವರ್ಷದ ಅಭ್ಯರ್ಥಿಯೊಬ್ಬ (NEET Aspirant) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

17 ವರ್ಷದ ಬಾಲಕನು ಕೋಟಾದಲ್ಲಿ ನೀಟ್‌ಗೆ ತಯಾರಿ ನಡೆಸುತ್ತಿದ್ದ. ಆತನು ಇತ್ತೀಚೆಗೆ ಒತ್ತಡಕ್ಕೆ ಸಿಲುಕಿದ್ದು, ತನ್ನ ಕೋಣೆಯಲ್ಲಿರುವ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತನನ್ನು ಹರ್ಷಿತ್‌ ಕುಮಾರ್‌ ಅಗರ್ವಾಲ್‌ ಎಂಬುದಾಗಿ ಗುರುತಿಸಲಾಗಿದೆ. ಈತನು ಬಿಹಾರದವನಾಗಿದ್ದು, 12ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಛೋಟಾ ಚೌರಾಹಿನ್‌ ಡಬಾಬರಿ ಪ್ರದೇಶದಲ್ಲಿ ಈತನು ವಾಸಿಸುತ್ತಿದ್ದ. ಗುರುವಾರ (ಜೂನ್‌ 27) ಮಧ್ಯಾಹ್ನ 1 ಗಂಟೆ ಸುಮಾರಿಗೆ ಹಲವು ಸಹಪಾಠಿಗಳು ಬಾಗಿಲು ಬಡಿದಿದ್ದಾರೆ. ತುಂಬ ಹೊತ್ತಾದರೂ ಬಾಗಿಲು ತೆಗೆಯದ ಕಾರಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Kota Coaching Centre Room

ಪೊಲೀಸರು ಬಂದು ಬಾಗಿಲು ಮುರಿದು ಒಳಗೆ ತೆರಳಿದಾಗ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಆದಾಗ್ಯೂ, ಯಾವುದೇ ಡೆತ್‌ನೋಟ್‌ ಪತ್ತೆಯಾಗಿಲ್ಲ. ಕೋಟಾದ ಕೋಚಿಂಗ್‌ ಸೆಂಟರ್‌ಗಳಲ್ಲಿ ಅಧ್ಯಯನ ಮಾಡುತ್ತಿರುವ, ಜೆಇಇ, ನೀಟ್‌ಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಪ್ರಕರಣಗಳು ಪ್ರತಿ ವರ್ಷ ಸುದ್ದಿಯಾಗುತ್ತಲೇ ಇರುತ್ತವೆ. ಪ್ರಸಕ್ತ ವರ್ಷದಲ್ಲಿಯೇ 12 ಅಭ್ಯರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2023ರಲ್ಲಿ 26 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದರಲ್ಲೂ, ಈಗ ನೀಟ್‌ ಅಕ್ರಮದ ಬಳಿಕ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಕುರಿತ ವರದಿಗಳು ಪೋಷಕರು, ರಾಜ್ಯ ಸರ್ಕಾರಗಳನ್ನು ಆತಂಕಕ್ಕೆ ದೂಡಿವೆ.

ನೀಟ್‌ ಅಕ್ರಮ; ಇಬ್ಬರ ಬಂಧನ

ಕಳೆದ ಮೇ ತಿಂಗಳಲ್ಲಿ ನಡೆದ ನೀಟ್‌ ಯುಜಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಬಿಹಾರದ ಪಟನಾದವರಾದ ಮನೀಶ್‌ ಕುಮಾರ್‌ ಹಾಗೂ ಆಶುತೋಷ್‌ ಎಂಬುವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಮೊದಲು ಇಬ್ಬರೂ ಆರೋಪಿಗಳನ್ನು ವಿಚಾರಣೆಗೆ ಕರೆದ ಅಧಿಕಾರಿಗಳು, ನಂತರ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಮನೀಶ್‌ ಕುಮಾರ್‌ ಹಾಗೂ ಆಶುತೋಷ್‌ ಅವರು ವಿದ್ಯಾರ್ಥಿಗಳಿಗೆ ಖಾಲಿ ಇರುವ ಶಾಲೆಯೊಂದಕ್ಕೆ ತೆರಳಲು ವಾಹನದ ವ್ಯವಸ್ಥೆ ಮಾಡಿದ್ದರು. ಖಾಲಿ ಇರುವ ಶಾಲೆಯಲ್ಲಿ ಹಲವು ವಿದ್ಯಾರ್ಥಿಗಳಿಗೆ ಇವರು ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು ಹಂಚಿದ್ದರು ಎಂದು ತಿಳಿದುಬಂದಿದೆ. ಕೆಲ ವಿದ್ಯಾರ್ಥಿಗಳಿಗೆ ಇವರೇ ತಮ್ಮ ಮನೆಯಲ್ಲಿ ಆಶ್ರಯ ಕೂಡ ನೀಡಿದ್ದರು ಎನ್ನಲಾಗಿದೆ.

ಇಬ್ಬರೂ ದುರುಳರು ಪಟನಾದಲ್ಲಿರುವ ಬಾಯ್ಸ್‌ ಹಾಸ್ಟೆಲ್‌ನಲ್ಲಿ ನೀಟ್‌ ಬರೆಯುವ ಅಭ್ಯರ್ಥಿಗಳು ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದರು. ಮೇ 5ರಂದು ನೀಟ್‌ ಪರೀಕ್ಷೆ ನಡೆದಿದ್ದು, ಮೇ 4ರಂದು ಅಭ್ಯರ್ಥಿಗಳು ಹಾಸ್ಟೆಲ್‌ನಲ್ಲಿದ್ದು ಸೋರಿಕೆಯಾಗಿದ್ದ ಪ್ರಶ್ನೆಗಳನ್ನು ಓದಿಕೊಂಡು, ಉತ್ತರ ಬರೆದು, ಅದನ್ನು ನೆನಪಿನಲ್ಲಿಟ್ಟುಕೊಳ್ಳಲು ಇವರು ಅನುಕೂಲ ಮಾಡಿಕೊಟ್ಟಿದ್ದರು ಎಂದು ತಿಳಿದುಬಂದಿದೆ. ಹಾಗಾಗಿ, ಇಬ್ಬರನ್ನೂ ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ: NEET UG Retest: ನೀಟ್‌ ಮರುಪರೀಕ್ಷೆಗೆ ಅರ್ಧದಷ್ಟು ಅಭ್ಯರ್ಥಿಗಳು ಗೈರು; ಇವರ ಭವಿಷ್ಯದ ಗತಿ ಏನು?

Continue Reading

ಕ್ರೀಡೆ

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

Rohit Sharma:ಇಂಗ್ಲೆಂಡ್​(IND vs ENG semifinal) ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿ ರೋಹಿತ್​ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು.

VISTARANEWS.COM


on

Rohit Sharma
Koo

ಪ್ರೊವಿಡೆನ್ಸ್‌: ಟೀಮ್​ ಇಂಡಿಯಾದ ನಾಯಕ, ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ ಶರ್ಮ(Rohit Sharma) ಅವರು ಟಿ20 ವಿಶ್ವಕಪ್​ ಟೂರ್ನಿಯಲ್ಲಿ(T20 World Cup) ವಿಶ್ವ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಈ ಮೂಲಕ ಶ್ರೀಲಂಕಾದ ಮಾಜಿ ನಾಯಕ ಹಾಗೂ ಆಟಗಾರ ಮಹೇಲ ಜಯವರ್ಧನೆ(Mahela Jayawardene) ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದಿದ್ದಾರೆ.

ಇಲ್ಲಿನ ಪ್ರೊವಿಡೆನ್ಸ್‌ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್​(IND vs ENG semifinal) ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿ ರೋಹಿತ್​ 4 ಬೌಂಡರಿ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್​ ಕ್ರಿಕೆಟ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಆಟಗಾರ ಎನಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಶ್ರೀಲಂಕಾದ ಮಾಜಿ ನಾಯಕ ಮಹೇಲ ಜಯವರ್ಧನೆ ಹೆಸರಿನಲ್ಲಿತ್ತು. ಜಯವರ್ಧನೆ 111 ಬೌಂಡರಿ ಬಾರಿಸಿದ್ದರು. ಈ ದಾಖಲೆಯನ್ನು ರೋಹಿತ್​ ಹಿಂದಿಕ್ಕಿದ್ದಾರೆ. ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ರೋಹಿತ್​ ಅವರ ಬೌಂಡರಿಗಳ ಸಂಖ್ಯೆ 91 ಇತ್ತು. ಸದ್ಯ ರೋಹಿತ್​ 26 ಎಸೆತಗಳಿಂದ 37 ರನ್​ ಗಳಿಸಿ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ. ಮಳೆಯಿಂದಾಗಿ ಪಂದ್ಯ ಸದ್ಯಕ್ಕೆ ಸ್ಥಗಿತಗೊಂಡಿದೆ.

ಟಿ20 ವಿಶ್ವಕಪ್​ನಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಬ್ಯಾಟರ್​ಗಳು

ಆಟಗಾರದೇಶಇನಿಂಗ್ಸ್​ಬೌಂಡರಿ
ರೋಹಿತ್​ ಶರ್ಮಭಾರತ46113*
ಮಹೇಲಾ ಜಯವರ್ಧನೆಶ್ರೀಲಂಕಾ31111
ವಿರಾಟ್​​ ಕೊಹ್ಲಿಭಾರತ33105
ಡೇವಿಡ್​ ವಾರ್ನರ್​ಆಸ್ಟ್ರೇಲಿಯಾ41101
ತಿಲಕರತ್ನೆ ದಿಲ್ಶನ್ಶ್ರೀಲಂಕಾ35101
ಜಾಸ್​ ಬಟ್ಲರ್​ಇಂಗ್ಲೆಂಡ್3487*
ಕ್ರಿಸ್​ ಗೇಲ್​​ವೆಸ್ಟ್​ ಇಂಡೀಸ್​3178
ಶಕೀಬ್​ ಅಲ್​ ಹಸನ್​ಬಾಂಗ್ಲಾದೇಶ​4374*
ಕೇನ್​ ವಿಲಿಯಮ್ಸನ್​ನ್ಯೂಜಿಲ್ಯಾಂಡ್2971*
ಬ್ರೆಂಡನ್​ ಮೆಕಲಮ್​ನ್ಯೂಜಿಲ್ಯಾಂಡ್2567

ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಭಾರತ ಸದ್ಯ 8 ಓವರ್​ಗೆ 2 ವಿಕೆಟ್​ ಕಳೆದುಕೊಂಡು 65 ರನ್​ ಗಳಿಸಿದೆ. ರೋಹಿತ್​ ಮತ್ತು ಸೂರ್ಯಕುಮಾರ್​ ಬ್ಯಾಟಿಂಗ್​ ಕಾಯ್ದುಕೊಂಡಿದ್ದಾರೆ. ವಿರಾಟ್​ ಕೊಹ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡು ಈ ಪಂದ್ಯದಲ್ಲಿಯೂ ಘೋರ ಬ್ಯಾಟಿಂಗ್​ ವೈಫಲ್ಯ ಎದುರಿಸಿದರು. ಪಂತ್​ ಆಟ 4 ರನ್​ಗೆ ಕೊನೆಗೊಂಡಿತು.

ಇದನ್ನೂ ಓದಿ IND vs ENG: ಸೆಮಿ ಪಂದ್ಯಕ್ಕೂ ಮುನ್ನ ಬಿಸಿಸಿಐ ವಿರುದ್ಧ ಗಂಭೀರ ಆರೋಪ ಮಾಡಿದ ಮಾಜಿ ನಾಯಕ

2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು. ಜತೆಗೆ ಈ ಬಾರಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಂತಾಯಿತು. ಇಂಗ್ಲೆಂಡ್​ ವಿರುದ್ಧ 9 ಎಸೆತಗಳಲ್ಲಿ 9 ರನ್​ ಬಾರಿಸಿ ಟಾಪ್ಲಿ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ವಿಕೆಟ್​ ಕಳೆದುಕೊಂಡು ಡಗೌಟ್​ನಲ್ಲಿ​ ಹತಾಶರಾಗಿ ಕುಳಿತಿದ್ದ ವಿರಾಟ್​ ಕೊಹ್ಲಿಯನ್ನು ಕೋಚ್​ ರಾಹುಲ್​ ದ್ರಾವಿಡ್​ ಬಂದು ಸಮಾಧಾನ ಪಡಿಸಿದರು. ಈ ವಿಡಿಯೊವೊಂದು ವೈರಲ್​ ಆಗಿದೆ.

Continue Reading

ಪ್ರಮುಖ ಸುದ್ದಿ

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

DK Shivakumar: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಉತ್ಸಾಹದಲ್ಲಿ ಕೆಲವರು ಹೀಗೆ ಮಾತನಾಡುತ್ತಾರೆ. ರಾಜಕಾರಣದಲ್ಲಿ ಅಭಿಮಾನಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ಮಧ್ಯೆ ಮಧ್ಯೆ ನೀಡುವುದು ಸಹಜ ಎಂದಿದ್ದಾರೆ.

VISTARANEWS.COM


on

DCM DK Shivakumar latest statement about CM change issue
Koo

ನವದೆಹಲಿ: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ದೆಹಲಿಯಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು ಎಂಬ ಚಂದ್ರಶೇಖರನಾಥ ಸ್ವಾಮೀಜಿಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಉತ್ಸಾಹದಲ್ಲಿ ಕೆಲವರು ಹೀಗೆ ಮಾತನಾಡುತ್ತಾರೆ. ರಾಜಕಾರಣದಲ್ಲಿ ಅಭಿಮಾನಪೂರ್ವಕವಾಗಿ ಇಂತಹ ಹೇಳಿಕೆಗಳನ್ನು ಮಧ್ಯೆ ಮಧ್ಯೆ ನೀಡುವುದು ಸಹಜ. ಅವರ ಮಾತಿಗೆ ಹೆಚ್ಚು ಗಮನ ಕೊಡಬಾರದು. ಪಕ್ಷದ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.

ಇದನ್ನೂ ಓದಿ: DK Shivakumar: ಹೆಚ್ಚುವರಿ ಡಿಸಿಎಂ ಹುದ್ದೆಗೆ ಹೈಕಮಾಂಡ್ ಬಳಿ ಹೋಗಲಿ; ಡಿ.ಕೆ. ಶಿವಕುಮಾರ್

ಸಚಿವ ಸ್ಥಾನ ಬಿಡಲು ಸಿದ್ಧ, ತಮ್ಮನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿ ಎಂಬ ರಾಜಣ್ಣ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಅದಕ್ಕೆ ಉತ್ತರ ಕೊಡುತ್ತೇವೆ ಎಂದರು.

ನೆಲ, ಜಲ, ಭಾಷೆ ಉಳಿವಿಗಾಗಿ ಸಂಸದರ ಜತೆ ಚರ್ಚೆ

ದೆಹಲಿ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ಕರ್ನಾಟಕ ರಾಜ್ಯದಿಂದ ನೂತನವಾಗಿ ಆಯ್ಕೆಯಾಗಿರುವ ಸಂಸದರು ಹಾಗೂ ರಾಜ್ಯಸಭಾ ಸದಸ್ಯರನ್ನು ಭೇಟಿ ಮಾಡಿ, ನಮ್ಮ ರಾಜ್ಯದಲ್ಲಿ ಬಾಕಿ ಉಳಿದಿರುವ ಕೇಂದ್ರದ ಯೋಜನೆಗಳು, ಅನುದಾನ ಬಾಕಿ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ರಾಜ್ಯದ ಹಿತಕ್ಕಾಗಿ ಸಂಸತ್ ಕಲಾಪದಲ್ಲಿ ಹೋರಾಟ ಮಾಡುವಂತೆ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಇದನ್ನೂ ಓದಿ: Lakshmi Hebbalkar: ಅಂಗನವಾಡಿಗಳಿಗೆ ಕಳಪೆ ಆಹಾರ ಪೂರೈಕೆಯಾದರೆ ಉಪನಿರ್ದೇಶಕರ ಮೇಲೆ ಕಠಿಣ ಕ್ರಮ: ಹೆಬ್ಬಾಳಕರ್

ಇಷ್ಟು ದಿನ ರಾಜಕಾರಣವಾಯಿತು. ಈಗ ರಾಜ್ಯದ ಅಭಿವೃದ್ಧಿಗಾಗಿ, ನೆಲ, ಜಲ, ಭಾಷೆ, ಸಂಸ್ಕೃತಿಯ ಉಳಿವಿಗಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು. ಈ ವಿಚಾರವನ್ನು ಸಂಸದರ ಗಮನಕ್ಕೆ ತರಲಾಗುವುದು. ಒಗ್ಗಟ್ಟಿನಿಂದ ರಾಜ್ಯದ ಹಿತಕ್ಕಾಗಿ ದುಡಿಯುತ್ತಾರೆ ಎನ್ನುವ ನಂಬಿಕೆಯಿದೆ ಎಂದು ಹೇಳಿದರು.

Continue Reading
Advertisement
Congress Protest
ಕರ್ನಾಟಕ17 mins ago

ಹಾಲು, ಪೆಟ್ರೋಲ್‌ ಬೆಲೆ ಏರಿಸಿ, ಎಸಿ ಬಸ್‌ನಲ್ಲಿ ಪ್ರತಿಭಟನೆಗೆ ಹೊರಟ ಕಾಂಗ್ರೆಸ್‌ ಹಣದ ಮೂಲ ಏನು? ಬಿಜೆಪಿ ಪ್ರಶ್ನೆ

NEET Aspirant
ದೇಶ54 mins ago

NEET Aspirant: ನೀಟ್‌ ಅಕ್ರಮ ಬಯಲಾದ ಬೆನ್ನಲ್ಲೇ 17 ವರ್ಷದ NEET ಅಭ್ಯರ್ಥಿ ಆತ್ಮಹತ್ಯೆ; ಸಾವಿಗೆ ಯಾರು ಹೊಣೆ?

Tata Motors has taken the lead in the SUV market with Nexon Punch
ಕರ್ನಾಟಕ1 hour ago

Tata Motors: ನೆಕ್ಸಾನ್, ಪಂಚ್‌ ಮೂಲಕ ಎಸ್‌ಯುವಿ ಮಾರುಕಟ್ಟೆಯಲ್ಲಿ ಮುನ್ನಡೆ ಸಾಧಿಸಿದ ಟಾಟಾ ಮೋಟಾರ್ಸ್

Rohit Sharma
ಕ್ರೀಡೆ1 hour ago

Rohit Sharma: ಟಿ20 ವಿಶ್ವಕಪ್​ ಟೂರ್ನಿಯಲ್ಲಿ ವಿಶ್ವ ದಾಖಲೆ ಬರೆದ ಹಿಟ್​ಮ್ಯಾನ್ ರೋಹಿತ್

virat kohli
ಕ್ರೀಡೆ2 hours ago

Virat Kohli: ಮೊದಲ ಬಾರಿಗೆ ಸೆಮಿಫೈನಲ್​ನಲ್ಲಿ ಸಿಂಗಲ್​ ಡಿಜಿಟ್​ಗೆ ಔಟ್​ ಆದ​ ಕೊಹ್ಲಿ; ಸಮಾಧಾನಪಡಿಸಿದ ಕೋಚ್​

DCM DK Shivakumar latest statement about CM change issue
ಪ್ರಮುಖ ಸುದ್ದಿ2 hours ago

DK Shivakumar: ಸಿಎಂ ಬದಲಾವಣೆ; ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದ ಡಿ.ಕೆ. ಶಿವಕುಮಾರ್

roopantara Movie First Look Poster released
ಕರ್ನಾಟಕ2 hours ago

Kannada New Movie: ‘ರೂಪಾಂತರ’ಗೊಂಡ ರಾಜ್ ಬಿ. ಶೆಟ್ಟಿ! ಮತ್ತೊಂದು ವಿಭಿನ್ನ ಚಿತ್ರ

Hosur Airport
ಪ್ರಮುಖ ಸುದ್ದಿ2 hours ago

Hosur Airport: ಬೆಂಗಳೂರಿನಿಂದ ಕೇವಲ 40 ಕಿ.ಮೀ ದೂರದ ಹೊಸೂರಿನಲ್ಲಿ ಹೊಸ ಏರ್‌ಪೋರ್ಟ್‌!

Sudipa Chatterjee
ದೇಶ2 hours ago

Sudipa Chatterjee: ಗೋಮಾಂಸ ಸೇವನೆಗೆ ಪ್ರಚಾರ- TMC ನಾಯಕ ಬಬೂಲ್‌ ಸುಪ್ರಿಯೋ ಆಪ್ತೆ, ಬೆಂಗಾಳಿ ನಟಿಗೆ ಜೀವ ಬೆದರಿಕೆ

Kalki 2898AD
ಸಿನಿಮಾ3 hours ago

Kalki 2898AD: ಕಲಿಯುಗದಲ್ಲಿ ʼಕಲ್ಕಿʼಯ ಆಗಮನದ ಚರ್ಚೆ ಹುಟ್ಟು ಹಾಕಿದ ‘ಕಲ್ಕಿ 2898ಎಡಿ’ ಸಿನಿಮಾ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ5 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು8 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ12 hours ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ3 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ6 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ6 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

ಟ್ರೆಂಡಿಂಗ್‌