KEA Exams Time Table: ಪಿಎಸ್‌ಐ ಸೇರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ - Vistara News

ಪ್ರಮುಖ ಸುದ್ದಿ

KEA Exams Time Table: ಪಿಎಸ್‌ಐ ಸೇರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

KEA Exams Time Table: ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Exams Time Table) ಪ್ರಕಟಿಸಿದೆ. ಆ ಪ್ರಕಾರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಕೋರಲಾಗಿದೆ.

VISTARANEWS.COM


on

KEA exams time table
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪಿಎಸ್‌ಐ (PSI posts) ಹುದ್ದೆಗಳು ಸೇರಿದಂತೆ ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಿರುವ ಪರೀಕ್ಷೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Exams Time Table) ಪ್ರಕಟಿಸಿದೆ. ಆ ಪ್ರಕಾರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲು ಕೋರಲಾಗಿದೆ.

ಪೊಲೀಸ್‌ ಇಲಾಖೆಯಲ್ಲಿ ಪಿಎಸ್‌ಐ ಹುದ್ದೆಗಳಿಗೆ ಸೆ.22ರಂದು, ಬಿಎಂಟಿಸಿಯಲ್ಲಿ ಕಂಡಕ್ಟರ್‌ ಹುದ್ದೆಗಳಿಗೆ ಸೆ.1ರಂದು, ಕೆಯುಡಬ್ಲ್ಯುಎಸ್‌ಡಿಬಿಯಲ್ಲಿ ಅಸಿಸ್ಟೆಂಟ್‌ ಇಂಜಿನಿಯರ್‌ ಹುದ್ದೆಗಳಿಗೆ ಆಗಸ್ಟ್‌ 11ರಂದು, ಕಂದಾಯ ಇಲಾಖೆಯಲ್ಲಿ ವಿಲೇಜ್‌ ಅಡ್ಮಿನಿಸ್ಟ್ರೇಟಿವ್‌ ಆಫೀಸರ್‌ ಹುದ್ದೆಗಳಿಗೆ ಸೆ.29ರಂದು, ಜಿಟಿಟಿಸಿಯಲ್ಲಿ ಲೆಕ್ಟರರ್‌ ಮತ್ತಿತರ ಹುದ್ದೆಗಳಿಗೆ ಸೆ.29ರಂದು, ಕಂದಾಯ ಇಲಾಖೆಯಲ್ಲಿ ವಿಎ ಹುದ್ದೆಗಳಿಗೆ ಅಕ್ಟೋಬರ್‌ 27ರಂದು ಪರೀಕ್ಷೆಗಳು ನಡೆಯಲಿವೆ.

ಇಂದಿನಿಂದ SSLC ಪರೀಕ್ಷೆ-3 ಆರಂಭ; ಎಕ್ಸಾಮ್‌ ತೆಗೆದುಕೊಳ್ಳಲಿರುವ 97,933 ವಿದ್ಯಾರ್ಥಿಗಳು

ಬೆಂಗಳೂರುಎಸ್ಎಸ್ಎಲ್‌ಸಿ ಪರೀಕ್ಷೆ-3 (SSLC Exam- 3) ಇಂದು (ಆಗಸ್ಟ್ 2) ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾದ್ಯಂತ 97,933 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ದಿನಾಂಕ 02-08-2024ರಿಂದ ದಿನಾಂಕ:09-08-2024 ರವರೆಗೆ ನಡೆಯಲಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 97,933 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 67,716 ಬಾಲಕರು ಮತ್ತು 30,217 ಬಾಲಕಿಯರು ಸೇರಿದ್ದಾರೆ.

ಒಟ್ಟು ನೋಂದಣಿಯಲ್ಲಿ 459 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ. ರಾಜ್ಯದ 410 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದೆ.

ಜಿಲ್ಲಾ ಮತ್ತು ತಾಲ್ಲೂಕು ಹಂತಗಳ ವಿಚಕ್ಷಣ ದಳಗಳು ಪರೀಕ್ಷಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತವೆ. ಜಿಲ್ಲಾಧಿಕಾರಿಗಳಿಂದ ನಿಯೋಜಿತ ಇತರೆ ಇಲಾಖೆಗಳ ಜಾಗೃತ ದಳಗಳು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿವೆ. ಪ್ರತಿ ಕೇಂದ್ರದಲ್ಲಿಯೂ ಸಿ.ಸಿ.ಟಿ.ವಿ. ಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುವುದು ಎಂದು ಹೇಳಿದೆ.

ಯಾರ್ಯಾರಿಗೆ ಪರೀಕ್ಷೆ?

ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗದವರು, ಪ್ರಸಕ್ತ ಸಾಲಿನ ಮೊದಲ ಹಾಗೂ ಎರಡನೇ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳಲು ಬಯಸಿದವರಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು (KSEEB) ಮೂರನೇ ಅವಕಾಶ ನೀಡಿದ್ದು, ಅದರಂತೆ ಆಗಸ್ಟ್‌ 2ರಿಂದ 9ರವರೆಗೆ ಪರೀಕ್ಷೆ ನಡೆಯಲಿದೆ. ಇದೀಗ ಅಭ್ಯರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಶಾಲಾ ಮುಖ್ಯೋಪಾಧ್ಯಾಯರು ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್‌ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ವಿತರಿಸಬೇಕು. ಒಂದು ವೇಳೆ ಏನಾದರೂ ಸಮಸ್ಯೆ ಕಂಡುಬಂದಲ್ಲಿ ಕೂಡಲೇ ಸಂಬಂಧಿಸಿದ ಪರಿಶೀಲನಾ ಶಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರಗಳ ಸಂಖ್ಯೆ ಸರಿ ಹೊಂದುತ್ತಿವೆಯೇ ಎಂದು ತಪ್ಪದೇ ಪರಿಶೀಲಿಸಬೇಕು. ಒಂದು ವೇಳೆ ಯಾವುದಾದರು ವಿದ್ಯಾರ್ಥಿಯ ಪ್ರವೇಶ ಪತ್ರ ಬಂದಿಲ್ಲದಿದ್ದರೆ ಆ ವಿವರವನ್ನು ದಾಖಲೆಗಳೊಂದಿಗೆ ಮಂಡಳಿಗೆ ಕೂಡಲೇ ಕಳುಹಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ: Puja Khedkar: ನಕಲಿ ದಾಖಲೆ ಸೃಷ್ಟಿ; ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕ ರದ್ದು, ಪರೀಕ್ಷೆಯಿಂದಲೇ ಯುಪಿಎಸ್‌ಸಿ ಬ್ಯಾನ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

14 Hours Work: ಒಂದೆಡೆ ಐಟಿ ಉದ್ಯೋಗಿಗಳಿಂದ ಬೃಹತ್ ಪ್ರತಿಭಟನೆ, ಇನ್ನೊಂದೆಡೆ ಐಟಿ ಕಂಪನಿಗಳ ಮುಂದೆ ಕೆಲಸಕ್ಕಾಗಿ ಮೈಲುಗಟ್ಟಲೆ ಕ್ಯೂ!

14 Hours Work: ಇನ್ನೊಂದೆಡೆ, ನಗರದ ಐಟಿ ಪಾರ್ಕ್‌ ಮುಂತಾದ ಐಟಿ ಕಂಪನಿ ಕಟ್ಟಡಗಳ ಮುಂದೆ ನಿನ್ನೆ ಹಾಗೂ ಇಂದು ಸಾವಿರಾರು ಉದ್ಯೋಗಾರ್ಥಿಗಳು ಕ್ಯೂ ನಿಂತಿರುವುದು ಕಂಡುಬಂದಿದೆ. ಮಾನ್ಯತಾ ಟೆಕ್‌ ಪಾರ್ಕ್‌ ಕಚೇರಿ ಮುಂದೆ ಮೈಲುದ್ದದ ಕ್ಯೂ ಕಂಡುಬಂತು.

VISTARANEWS.COM


on

14 hours work it jobs
Koo

ಬೆಂಗಳೂರು: ದಿನಕ್ಕೆ 14 ಗಂಟೆ ಕೆಲಸದ (14 Hours Work) ಅವಧಿ ವಿಸ್ತರಣೆ ಪ್ರಸ್ತಾವ ವಿರೋಧಿಸಿ ಒಂದೆಡೆ ಐಟಿ ಉದ್ಯೋಗಿಗಳು (IT Employees) ಬೃಹತ್‌ ಪ್ರತಿಭಟನೆಗೆ (IT workers protest) ತಯಾರಿ ಮಾಡಿಕೊಳ್ಳುತ್ತಿದ್ದರೆ, ಇನ್ನೊಂದು ಕಡೆ ಐಟಿ ಕಂಪನಿಗಳ (IT Companies) ಮುಂದೆ ಸಾವಿರಾರು ಮಂದಿ ಉದ್ಯೋಗಗಳಿಗಾಗಿ (ಕ್ಯೂ ನಿಂತಿರುವ ದೃಶ್ಯ ಕಂಡುಬರುತ್ತಿದೆ.

ದಿನಕ್ಕೆ 14 ಗಂಟೆ ಕೆಲಸದ ಅವಧಿ ವಿಸ್ತರಣೆ ಪ್ರಸ್ತಾವ ವಿರೋಧಿಸಿ ನಾಳೆ ಸರ್ಕಾರದ ವಿರುದ್ಧ ಹಾಗೂ ಐಟಿ ಕಂಪನಿಗಳ ವಿರುದ್ಧ ಬೃಹತ್ ಪ್ರತಿಭಟನೆಗೆ ಐಟಿ ಉದ್ಯೋಗಿಗಳು ಸಜ್ಜು ಮಾಡಿಕೊಳ್ಳುತ್ತಿದ್ದಾರೆ. ಐಟಿ ಉದ್ಯೋಗಿಗಳ ಸಂಘಟನೆಗಳು ಹಾಗೂ ಕಾರ್ಮಿಕ ಸಂಘಟನೆಗಳು ಒಟ್ಟಾಗಿ ಈ ಪ್ರತಿಭಟನೆಗೆ ತಯಾರು ಮಾಡಿಕೊಂಡಿವೆ. ಫ್ರೀಡಂ ಪಾರ್ಕ್‌ನಲ್ಲಿ ಈ ಪ್ರತಿಭಟನೆ ನಡೆಯಲಿದೆ.

ಮುಷ್ಕರದಲ್ಲಿ ಸಾವಿರಾರು ಐಟಿ ಎಂಪ್ಲಾಯಿಗಳು ಭಾಗವಹಿಸಲಿದ್ದಾರೆ. ಐತಿಹಾಸಿಕವಾಗಿ, ಇದೇ ಮೊದಲ‌ ಬಾರಿಗೆ ಐಟಿ ಉದ್ಯೋಗಿಗಳು ಪ್ರತಿಭಟನೆಗಾಗಿ ರಸ್ತೆಗಿಳಿಯುತ್ತಿದ್ದಾರೆ. ಉದ್ಯೋಗಗಳನ್ನು ಹೆಚ್ಚಿಸಬೇಕು. ಅದರ ಬದಲು ಸಮಯ ವಿಸ್ತರಣೆ ಮಾಡುವುದಲ್ಲ. ಹೀಗೆ ಮಾಡುವುದರಿಂದ ಒತ್ತಡ ಹೆಚ್ಚಾಗಿ ಉದ್ಯೋಗಿಗಳ ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದೆ ಎಂದು ಆಕ್ರೋಶಿಸಿದ್ದಾರೆ.

ಇನ್ನೊಂದೆಡೆ, ನಗರದ ಐಟಿ ಪಾರ್ಕ್‌ ಮುಂತಾದ ಐಟಿ ಕಂಪನಿ ಕಟ್ಟಡಗಳ ಮುಂದೆ ನಿನ್ನೆ ಹಾಗೂ ಇಂದು ಸಾವಿರಾರು ಉದ್ಯೋಗಾರ್ಥಿಗಳು ಕ್ಯೂ ನಿಂತಿರುವುದು ಕಂಡುಬಂದಿದೆ. ಮಾನ್ಯತಾ ಟೆಕ್‌ ಪಾರ್ಕ್‌ ಕಚೇರಿ ಮುಂದೆ ಮೈಲುದ್ದದ ಕ್ಯೂ ಕಂಡುಬಂತು. ಐಟಿ ಕಂಪನಿಯೊಂದು ಇಂಟರ್‌ವ್ಯೂಗೆ ಕಾಲ್‌ ಮಾಡಿದ್ದು, ಅದಕ್ಕಾಗಿ ಉದ್ಯೋಗಾರ್ಥಿಗಳು ಜಮಾಯಿಸಿದ್ದಾರೆ. ಸುಮಾರು 2 ಸಾವಿರ ಜನ ಕ್ಯೂ ನಿಂತಿದ್ದುದು ಕಂಡುಬಂತು. ಆದರೆ ಖಾಲಿ ಇದ್ದ ಹುದ್ದೆಗಳು 40 ಮಾತ್ರ!

ಐಟಿ ಕಂಪನಿಗಳು ಹೆಚ್ಚಾಗಿ ಇರುವ ಇಲೆಕ್ಟ್ರಾನಿಕ್‌ ಸಿಟಿ, ಬನ್ನೇರುಘಟ್ಟ ರಸ್ತೆ ಮುಂತಾದ ಕಡೆ ಕಂಪನಿಗಳ ಮುಂದೆ ಇಂಥ ಸರತಿ ಸಾಲುಗಳು ಕಂಡುಬಂದಿವೆ. ಉದ್ಯೋಗಾರ್ಥಿಗಳ ಸಂಖ್ಯೆ ಹೆಚ್ಚಾದಂತೆ ಐಟಿ ಕಂಪನಿಗಳು ಸಂಬಳ ಇತ್ಯಾದಿ ಪರ್ಕ್‌ಗಳ ಪ್ರಮಾಣವನ್ನು ಕಡಿಮೆ ಮಾಡಿವೆ. ಹೊಸ ನೇಮಕಾತಿಗಳು ಕಡಿಮೆಯಾಗಿವೆ. ಇದೇ ವೇಳೆಗೆ, ಇರುವ ಉದ್ಯೋಗಿಗಳ ಕೆಲಸದ ಅವಧಿ ವಿಸ್ತರಣೆಗೆ ಸರ್ಕಾರವನ್ನು ಪ್ರೇರೇಪಿಸುತ್ತಿವೆ ಎಂದು ಈ ಕಂಪನಿಗಳ ಕಾರೈವೈಖರಿಯನ್ನು ಅರಿತಿರುವ ಕ್ಷೇತ್ರ ತಜ್ಞರು ವಿಶ್ಲೇಷಿಸಿದ್ದಾರೆ.

ಸರಕಾರದ ಮೇಲೆ ಯಾರ ಒತ್ತಡ?

ಕೆಲಸದ ಅವಧಿಯ ಹೆಚ್ಚಳ ಮೂಲತಃ ಸರ್ಕಾರದ ಚಿಂತನೆಯಲ್ಲ. ಆದರೆ ಐಟಿ-ಬಿಟಿ ಉದ್ಯೋಗಿಗಳಿಗೆ 14 ಗಂಟೆ ಕೆಲಸದ ಸಮಯ ನಿಗದಿಗೆ ಸರ್ಕಾರದ ಮೇಲೆ ಕೆಲವು ಉದ್ಯಮಿಗಳು ತೀವ್ರ ಒತ್ತಡ ಹೇರುತ್ತಿದ್ದಾರೆ. ಕಾರ್ಮಿಕ ಸಚಿವರ ವಿರೋಧದ ನಡುವೆಯೂ ಮುಖ್ಯಕಾರ್ಯದರ್ಶಿ ಮೂಲಕ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಸಲ್ಲಿಸಲು ಉದ್ಯಮಿಗಳು ಕಸರತ್ತು ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯಗೂ ಉದ್ಯಮಿಗಳು ಒತ್ತಡ ಹೇರುತ್ತಿದ್ದಾರೆ ಎಂದು ಐಟಿ ಉದ್ಯೋಗಿಗಳು ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದ ಸಚಿವ ಸಂತೋಷ್ ಲಾಡ್, ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ಉದ್ಯಮಿಗಳು ವಿರೋಧಿಸಿದ್ದಾರೆ. ಆದರೆ 14 ಗಂಟೆ ಕೆಲಸದ ಸಮಯ ನಿಗದಿ ವಿಚಾರದಲ್ಲಿ ಯಾಕೆ ಮೌನ ಎಂದು ಕೆಲ ಪ್ರಭಾವಿ ಉದ್ಯಮಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಉದ್ಯಮಿಗಳ ಪರ ನಿಂತ ಕೆಲ ಸಚಿವರ ವಿರುದ್ಧವೂ ಸಂತೋಷ್ ಲಾಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಪುಟ ಸಹೋದ್ಯೋಗಿಗಳ ವಿರುದ್ಧವೂ ಸಚಿವ ಲಾಡ್​ ಕಿಡಿಕಾರಿದ್ದರು.

ಐಟಿ ಸಂಸ್ಥೆಗಳು ಉದ್ಯಮಿಗಳಿಂದ ಹೆಚ್ಚಿನ ಕೆಲಸ ತೆಗೆಸಲು ಹಾಗೂ ಉದ್ಯೋಗ ಕಡಿತ ಮಾಡುವ ಉದ್ದೇಶದಿಂದ ಈ ನಿಟ್ಟಿನಲ್ಲಿ ಸರಕಾರದ ಮೇಲೆ ಒತ್ತಡ ತಂದು ಇದನ್ನು ಮಾಡಿಸಿಕೊಳ್ಳುತ್ತಿವೆ ಎಂದು ಉದ್ಯೋಗಿಗಳು ಕಿಡಿ ಕಾರಿದ್ದಾರೆ. ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961ಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಕೆಲ ದಿನಗಳ ಹಿಂದೆ ಚಿಂತನೆ ನಡೆಸಿತ್ತು. ಜತೆಗೆ, ಬಿಪಿಓಗಳಲ್ಲಿ 12 ಗಂಟೆಗೂ ಅಧಿಕ ಕೆಲಸ ಮಾಡಲು ಅವಕಾಶ ನೀಡಬೇಕು. ಅಲ್ಲದೇ ನಿಯಮಿತವಾಗಿ ಮೂರು ತಿಂಗಳು 125 ಗಂಟೆ ಮೀರದಂತೆ ಕೆಲಸ ಇರಬೇಕು. ಐಟಿ ಉದ್ಯೋಗಿಗಳಿಗೆ 14 ಗಂಟೆ ಕೆಲಸದ ಅವಧಿ ನಿಗದಿಪಡಿಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: 14 Hour Workday Bill: 14 ಗಂಟೆ ಕೆಲಸ ಮಾಡಿದರೆ ಹಾರ್ಟ್‌ ಅಟ್ಯಾಕ್‌ ಗ್ಯಾರಂಟಿ? ವೈದ್ಯರು ಹೇಳೋದೇನು?

Continue Reading

ಅಂಕಣ

ರಾಜಮಾರ್ಗ ಅಂಕಣ: ಬಾಲ್ಯದಲ್ಲಿ ಎರಡೂ ಕಾಲು ಪೋಲಿಯೋ ಪೀಡಿತಳಾದ ಹುಡುಗಿ ಮಹೋನ್ನತ ಕ್ರೀಡಾಪಟು ಆದ ಕಥೆ!

ರಾಜಮಾರ್ಗ ಅಂಕಣ: ತನ್ನ ಬಾಲ್ಯದಲ್ಲಿ ಪೋಲಿಯೋ ಎಂಬ ಮಹಾಮಾರಿಗೆ ಸಂತ್ರಸ್ತಳಾದ, ಕಪ್ಪು ಚರ್ಮ ಎಂಬ ಕಾರಣಕ್ಕೆ ಅಪಮಾನ ಮತ್ತು ತಿರಸ್ಕಾರಕ್ಕೆ ಒಳಗಾದ ವಿಲ್ಮಾ ತನ್ನ ಕ್ರೀಡಾಸಾಧನೆಗಳ ಮೂಲಕ ಇತಿಹಾಸವನ್ನೇ ಬರೆದಳು! ಮುಂದೆ ಅವಳನ್ನು ‘ಶತಮಾನದ ಕ್ರೀಡಾಪಟು’ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯು ಗೌರವಿಸಿತು.

VISTARANEWS.COM


on

wilma rudolph ರಾಜಮಾರ್ಗ ಅಂಕಣ
Koo

ʼಕಪ್ಪು ಜಿಂಕೆ’ ಎಂದು ಕೀರ್ತಿ ಪಡೆದ ವಿಲ್ಮಾ ರುಡಾಲ್ಫ್

Rajendra-Bhat-Raja-Marga-Main-logo

:: ರಾಜೇಂದ್ರ ಭಟ್‌ ಕೆ.

ರಾಜಮಾರ್ಗ ಅಂಕಣ: ಪ್ಯಾರಿಸ್ ನಗರದಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ (Olympics) ಸುದ್ದಿಗಳು ಸಮುದ್ರದ ಅಲೆಗಳಂತೆ ತೇಲಿ ಬರುತ್ತಿರುವ ಈ ಹೊತ್ತಲ್ಲಿ ಇನ್ನೋರ್ವ ಮಹಾನ್ ಕ್ರೀಡಾ ಸಾಧಕಿಯ ಪರಿಚಯವು ನಿಮ್ಮ ಮುಂದೆ. ಹಾಗೆಯೇ ಜಗತ್ತಿನ ವರ್ಣ ದ್ವೇಷದ ಬೆಂಕಿಯ ಕುಲುಮೆಯಲ್ಲಿ ಚಂದವಾಗಿ ಅರಳಿದ ಒಂದು ಅದ್ಭುತ ಕ್ರೀಡಾ ಪ್ರತಿಭೆಯನ್ನು ತಮಗೆ ಪರಿಚಯಿಸಲು ಹೆಮ್ಮೆ ಪಡುತ್ತಿರುವೆ.

ಆಕೆಯನ್ನು ಜಗತ್ತು ‘ಕಪ್ಪು ಜಿಂಕೆ’ ಎಂದು ಕರೆಯಿತು

ಆಕೆಯ ಸಾಧನೆಯು ಮುಂದೆ ಸಾವಿರ ಸಾವಿರ ಕಪ್ಪು ವರ್ಣದ ಸಾಧಕರಿಗೆ ಪ್ರೇರಣೆ ನೀಡಿತು. ಆಕೆ ವಿಲ್ಮಾ ರುಡಾಲ್ಫ್ (Wilma Rudolph).

ಆಕೆ ಹುಟ್ಟಿದ್ದು ಅಮೆರಿಕಾದ ಸೈಂಟ್ ಬೆಥ್ಲೆಹೆಮ್ ಎಂಬ ಪುಟ್ಟ ನಗರದಲ್ಲಿ. ಅವಳು Premature Baby ಆಗಿ ಹುಟ್ಟಿದವಳು. ಹುಟ್ಟುವಾಗ ಅವಳ ತೂಕ ನಾಲ್ಕೂವರೆ ಪೌಂಡ್ ಮಾತ್ರ ಆಗಿತ್ತು. ಮಗು ಬದುಕುವ ಭರವಸೆ ವೈದ್ಯರಿಗೇ ಇರಲಿಲ್ಲ! ಅವಳ ಅಪ್ಪ ರೈಲ್ವೆ ನಿಲ್ದಾಣದಲ್ಲಿ ಪೋರ್ಟರ್ ಆಗಿದ್ದರು. ತೀವ್ರ ಬಡತನ. ಜೊತೆಗೆ ಅಪ್ಪನಿಗೆ ಎರಡು ಮದುವೆಯಾಗಿದ್ದು ಹುಟ್ಟಿದ್ದು ಒಟ್ಟು 22 ಮಕ್ಕಳು! ಅದರಲ್ಲಿ ವಿಲ್ಮಾ 20ನೆಯ ಮಗು! ಆದ್ದರಿಂದ ಅವಳು ಅಪ್ಪನಿಗೆ ಬೇಡವಾದ ಮಗಳು. ಅಮ್ಮನ ಮುದ್ದಿನ ಮಗಳು.

ಬಾಲ್ಯದಲ್ಲಿಯೇ ಆಕೆಗೆ ಕಾಡಿತ್ತು ಪೋಲಿಯೋ!

ಅಂತಹ ಹುಡುಗಿಗೆ ಬಾಲ್ಯದಲ್ಲಿ ಸಾಲು ಸಾಲು ಕಾಯಿಲೆಗಳ ಸರಮಾಲೆಯೇ ಎದುರಾಯಿತು. ಎರಡು ವರ್ಷದಲ್ಲಿ ಪುಟ್ಟ ಮಗುವಿಗೆ ನ್ಯೂಮೋನಿಯಾ ಬಂದು ಅವಳ ಅರ್ಧ ಶಕ್ತಿಯನ್ನು ತಿಂದು ಹಾಕಿತ್ತು. ಚೇತರಿಸಲು ಅವಕಾಶ ಕೊಡದೆ ನಂತರ ಬಂದದ್ದು ಸ್ಕಾರ್ಲೆಟ್ ಜ್ವರ. ಮೈ ಮೇಲೆ ರಕ್ತ ವರ್ಣದ ಗುಳ್ಳೆಗಳು ಬಂದು ಕೀವು ತುಂಬುವ ಖಾಯಿಲೆ ಅದು. ಅಮ್ಮ ಮಗಳ ಆರೈಕೆ ಮಾಡಿ ಹೈರಾಣಾಗಿ ಬಿಟ್ಟರು! ಸರಿಯಾಗಿ ಐದನೇ ವರ್ಷ ತುಂಬುವ ಹೊತ್ತಿಗೆ ಮಗುವಿಗೆ ಮತ್ತೆ ತೀವ್ರ ಜ್ವರ ಬಂತು. ಪರೀಕ್ಷೆ ಮಾಡಿದಾಗ ವೈದ್ಯರು ಪತ್ತೆ ಹಚ್ಚಿದ್ದು ಪೋಲಿಯೋ ಎಂಬ ಮಹಾ ಕಾಯಿಲೆ! ಆಗಿನ ಕಾಲದಲ್ಲಿ ಭಯ ಹುಟ್ಟಿಸುವ ಕಾಯಿಲೆ ಅದು!

ಅವಳ ವಯಸ್ಸಿನ ಬೇರೆ ಮಕ್ಕಳು ಶಾಲೆಗೆ ಹೋಗಲು ಆರಂಭ ಮಾಡಿದ್ದರು. ಆದರೆ ವಿಲ್ಮಾ ನೆಲದಲ್ಲಿ ತೆವಳುತಿದ್ದಳು. ವಾಶ್ ರೂಮಿಗೆ ಅವಳನ್ನು ಅಮ್ಮ ಹೊತ್ತುಕೊಂಡು ಹೋಗಬೇಕಾದ ಅನಿವಾರ್ಯತೆ ಇತ್ತು. ಅವರಿದ್ದ ನಗರದಲ್ಲಿ ಆಗ ಕಪ್ಪು ವರ್ಣದವರಿಗೆ ಆಸ್ಪತ್ರೆಗಳಿಗೆ ಪ್ರವೇಶ ಇರಲಿಲ್ಲ. ಎಲ್ಲವೂ ಬಿಳಿ ಚರ್ಮದವರಿಗೆ ಮೀಸಲು. ಆದ್ದರಿಂದ ಅವಳ ಚಿಕಿತ್ಸೆಗೆ ಅಮ್ಮ ಅವಳನ್ನು 50 ಮೈಲು ದೂರದ ನಗರಕ್ಕೆ ಹೋಗಿ ಬರಬೇಕಾಯಿತು. ಅದೂ ಸತತ ಎರಡು ವರ್ಷ! ಏಳು ವರ್ಷದ ಮಗಳನ್ನು ಆ ಮಹಾತಾಯಿಯು ಸೊಂಟದ ಮೇಲೆ ಕೂರಿಸಿ ಆಸ್ಪತ್ರೆಯ ವಾರ್ಡಗಳಿಗೆ ಎಡತಾಕುವುದನ್ನು ನೋಡಿದವರಿಗೆ ‘ಅಯ್ಯೋ ಪಾಪ’ ಅನ್ನಿಸುತಿತ್ತು.

ʼಅಮ್ಮಾ, ನನ್ನ ಮಂಚವನ್ನು ಕಿಟಕಿಯ ಪಕ್ಕ ಸರಿಸು’

‘ಹೊರಗೆ ಮಕ್ಕಳು ಆಡುವುದನ್ನು ನಾನು ನೋಡಬೇಕು ಅಮ್ಮಾ ‘ ಎಂದು ಹೇಳಿದಾಗ ಪ್ರೀತಿಯ ಅಮ್ಮ ಹಾಗೆ ಮಾಡಿದ್ದರು. ಈ ಹುಡುಗಿ ಕಿಟಕಿಯಿಂದ ಹೊರಗೆ ಮೈದಾನದಲ್ಲಿ ಮಕ್ಕಳು ಆಡುವುದನ್ನು, ಓಡುವುದನ್ನು ನೋಡುತ್ತಾ ಸಂಭ್ರಮಿಸುವುದು, ಖುಷಿ ಪಡುವುದನ್ನು ನೋಡುತ್ತಾ ಅಮ್ಮನ ಮುಖದಲ್ಲಿ ಅಪರೂಪದ ನಗುವಿನ ಗೆರೆಯು ಚಿಮ್ಮುತ್ತಿತ್ತು! ಮನೆಯ ಒಳಗೆ ಗೋಡೆ ಹಿಡಿದುಕೊಂಡು ನಡೆಯಲು ಮೊದಲು ಪ್ರಯತ್ನ ನಡೆಯಿತು. ಅದರೊಂದಿಗೆ ಹಲವು ತಿಂಗಳು ಆರ್ಥೋಪೆಡಿಕ್ ಚಿಕಿತ್ಸೆಗಳು ನಡೆದವು. ಮುಂದೆ ದೀರ್ಘ ಕಾಲ ಫಿಸಿಯೋ ತೆರೆಪಿ ನಡೆದು ಬಲಗಾಲಿನ ಶಕ್ತಿಯು ಮರಳಿತು. ಆದರೆ ಎಡಗಾಲಿನ ಶಕ್ತಿ ಇನ್ನೂ ಕುಂಠಿತವಾಗಿತ್ತು. ಇನ್ನೊಂದು ದೊಡ್ಡ ಸಮಸ್ಯೆ ಎಂದರೆ ಅವಳ ಪಾದಗಳು ಅಸಮ ಆಗಿದ್ದವು. ಅವಳ ಸೈಜಿನ ಶೂಗಳು ಎಲ್ಲಿಯೂ ಸಿಗುತ್ತಿರಲಿಲ್ಲ.

ಈ ಸಮಸ್ಯೆಗಳ ನಡುವೆ ಅಮ್ಮನಿಗೆ ಮಗಳ ಶಾಲೆಯ ಚಿಂತೆ. ಅವಳು ಏಳು ವರ್ಷ ಪ್ರಾಯದಲ್ಲಿ ನೇರವಾಗಿ ಎರಡನೇ ತರಗತಿಗೆ ಸೇರ್ಪಡೆ ಆದವಳು. ಎಡಗಾಲನ್ನು ಕೊಂಚ ಎಳೆದುಕೊಂಡು ನಡೆಯುವ ರೀತಿಯನ್ನು ನೋಡಿ ಅವಳ ಓರಗೆಯ ಮಕ್ಕಳಿಗೆ ಒಂಥರಾ ತಮಾಷೆ ಅನ್ನಿಸುತ್ತಿತ್ತು. ಅವರು ಅಣಕು, ಕೀಟಲೆ ಮಾಡಿ ಅವಳ ಕಣ್ಣಲ್ಲಿ ನೀರು ತರಿಸುತ್ತಿದ್ದರು.

ಇದರಿಂದ ನೊಂದುಕೊಂಡ ವಿಲ್ಮಾ ತರಗತಿಗಳಿಗೆ ಚಕ್ಕರ್ ಹೊಡೆದು ಮೈದಾನದಲ್ಲಿ ಹೆಚ್ಚು ಹೊತ್ತನ್ನು ಕಳೆಯುವುದನ್ನು ಅಭ್ಯಾಸ ಮಾಡಿದಳು.ಅದೇ ರೀತಿ ಎಡಗಾಲಿಗೆ ಆಧಾರವನ್ನು ಕೊಡುವ ‘ಲೆಗ್ ಬ್ರೇಸ್’ ಹಾಕಿ ವೇಗವಾಗಿ ನಡೆಯಲು ಆರಂಭ ಮಾಡಿದಳು. ಅವಳ ಒಳಗೆ ಅದಮ್ಯವಾದ ಒಂದು ಚೈತನ್ಯ ಇರುವುದನ್ನು ಒಬ್ಬ ಕೋಚ್ ದಿನವೂ ನೋಡುತ್ತಿದ್ದರು. ಅವರ ಹೆಸರು ಎಡ್ ಟೆಂಪಲ್.

ಕ್ರೀಡಾ ತರಬೇತಿ ಆರಂಭವಾಯಿತು

ಅವಳಿಗೆ ದೇವರು ಅದ್ಭುತ ಎತ್ತರವನ್ನು ಕೊಟ್ಟಿದ್ದರು (5 ಅಡಿ 11 ಇಂಚು). ಪ್ರೌಢಶಾಲೆಯ ಹಂತಕ್ಕೆ ಬಂದಾಗ ಎಡಗಾಲಿನ ಶಕ್ತಿ ಮರಳಿತ್ತು. ನಡೆಯುವಾಗ ಒಂದು ಸಣ್ಣ ಜರ್ಕ್ ಬಿಟ್ಟರೆ ಬೇರೆ ಯಾವುದೇ ವ್ಯತ್ಯಾಸವು ಕಾಣುತ್ತಿರಲಿಲ್ಲ. ಮೊದಲ ಬಾರಿಗೆ ಪ್ರತಿಷ್ಠಿತ ಕಾಲೇಜಿನ ಬಾಸ್ಕೆಟ್ಬಾಲ್ ಟೀಮಿಗೆ ಅವಳು ಆಯ್ಕೆಯಾದಾಗ ಕುಣಿದು ಸಂಭ್ರಮ ಪಟ್ಟಿದ್ದಳು. ಬಾಸ್ಕೆಟ್ಬಾಲ್ ಕೋರ್ಟಲ್ಲಿ ಅವಳು ಮಿಂಚಿನಂತೆ ಓಡುವುದನ್ನು ನೋಡಿದ ಕೋಚ್ ಅವಳನ್ನು ಅಥ್ಲೆಟಿಕ್ಸ್ ತಂಡಕ್ಕೆ ಸೇರಿಸಿ ಕೋಚಿಂಗ್ ಆರಂಭಿಸಿದರು. ಎಡ್ ಟೆಂಪಲ್ ಎಂಬ ಆ ಕೋಚ್ ಅವಳಲ್ಲಿ ಇದ್ದ ಅದ್ಭುತವಾದ ಕ್ರೀಡಾಪ್ರತಿಭೆಯನ್ನು ಪುಟವಿಟ್ಟ ಚಿನ್ನದಂತೆ ಹೊರತಂದರು. ಅವಳು ಮೊದಲ ಬಾರಿಗೆ ಭಾಗವಹಿಸಿದ ಓಪನ್ ಕ್ರೀಡಾಕೂಟದಲ್ಲಿ ಎಲ್ಲಾ ಒಂಬತ್ತು ಸ್ಪರ್ದೆಗಳಲ್ಲಿ ಕೂಡ ಚಿನ್ನದ ಪದಕವನ್ನು ಗೆದ್ದಿದ್ದಳು. ಅವಳ ಒಳಗೆ ಎಂದಿಗೂ ದಣಿಯದ, ಸೋಲನ್ನು ಸುಲಭವಾಗಿ ಒಪ್ಪಿಕೊಳ್ಳದ, ಬಿದ್ದಲ್ಲಿಂದ ಪುಟಿದು ಮತ್ತೆ ಎದ್ದುಬರುವ ಚೈತನ್ಯ ಶಕ್ತಿ ಇತ್ತು!

1956ರ ಮೆಲ್ಬೋರ್ನ್ ಒಲಿಂಪಿಕ್ಸ್ ಕಣದಲ್ಲಿ ಅವಳು!

ಅಲ್ಲಿ ವಿಲ್ಮಾ ರುಡಾಲ್ಫ್ ಅಮೇರಿಕಾವನ್ನು ಪ್ರತಿನಿಧಿಸಿ ರಿಲೇ ಓಟದಲ್ಲಿ ಒಂದು ಕಂಚಿನ ಪದಕ ಮಾತ್ರ ಗೆದ್ದಳು. ಆಗ ಅವಳಿಗೆ ಕೇವಲ 16 ವರ್ಷ! ಮತ್ತೆ ಸ್ಪಷ್ಟ ಗುರಿಯೊಂದಿಗೆ ನಾಲ್ಕು ವರ್ಷ ಪ್ರಾಕ್ಟೀಸ್ ಮಾಡಿ ಮುಂದಿನ ಒಲಿಂಪಿಕ್ಸ್ ಸ್ಪರ್ಧೆಗೆ ಪ್ರವೇಶ ಪಡೆದಳು. ಅವಳು ಎಲ್ಲ ನೋವುಗಳನ್ನೂ ಮರೆತು, ಬಾಲ್ಯದ ಕಹಿ ನೆನಪುಗಳನ್ನು ಮರೆತು ಟ್ರಾಕನಲ್ಲಿ ಓಡುವಾಗ ಯಾರಿಗಾದರೂ ರೋಮಾಂಚನ ಆಗುತ್ತಿತ್ತು.

1960ರ ರೋಮ್ ಒಲಿಂಪಿಕ್ಸ್ – ವಿಲ್ಮಾ ವಿಶ್ವದಾಖಲೆ ಬರೆದಳು!

ಜಗತ್ತಿನಾದ್ಯಂತ ಟಿವಿಯ ಕವರೇಜ್ ಆಗ ತಾನೆ ಆರಂಭ ಆಗಿತ್ತು. ಆದ್ದರಿಂದ ಸಹಜವಾಗಿ ಒಲಿಂಪಿಕ್ಸ್ ಕ್ರೇಜ್ ಹೆಚ್ಚಿತ್ತು. ಮೈದಾನದಲ್ಲಿ ಕೂಡ 43 ಡಿಗ್ರಿ ಉಷ್ಣತೆ ಇತ್ತು! ಆ ಒಲಿಂಪಿಕ್ಸ್ ಕಣದಲ್ಲಿ ವಿಲ್ಮಾ ರುಡಾಲ್ಫ್ ಬಿರುಗಾಳಿಯ ಹಾಗೆ ಓಡಿದಳು. 100 ಮೀಟರ್ ಚಿನ್ನದ ಪದಕ, ಜಗತ್ತಿನ ಅತ್ಯಂತ ವೇಗದ ಮಹಿಳೆ ಎಂಬ ಕೀರ್ತಿ ಆಕೆಗೆ ಒಲಿಯಿತು! ಟೈಮಿಂಗ್ 11.2 ಸೆಕೆಂಡ್ಸ್! ಅದು ಕೂಡ ವಿಶ್ವದಾಖಲೆಯ ಓಟ! 200 ಮೀಟರ್ ಓಟದಲ್ಲಿ ಮತ್ತೆ ವಿಶ್ವ ದಾಖಲೆಯ ಜೊತೆಗೆ ಚಿನ್ನದ ಪದಕ! ಟೈಮಿಂಗ್ 22.9 ಸೆಕೆಂಡ್ಸ್! ಮತ್ತೆ 4X100 ಮೀಟರ್ ರಿಲೇ ಓಟದಲ್ಲಿ ಚಿನ್ನದ ಪದಕ! ಹೀಗೆ ಮೂರು ಚಿನ್ನದ ಪದಕ ಒಂದೇ ಕೂಟದಲ್ಲಿ ಪಡೆದ ವಿಶ್ವದ ಮೊದಲ ಮಹಿಳಾ ಅತ್ಲೇಟ್ ಎಂಬ ಕೀರ್ತಿಯು ಅವಳಿಗೆ ದೊರೆಯಿತು!

ವಿಲ್ಮಾ ರುಡಾಲ್ಫ್ ಸ್ಥಾಪಿಸಿದ ಎರಡು ವಿಶ್ವ ಮಟ್ಟದ ದಾಖಲೆಗಳು ಮುಂದೆ ಹಲವು ವರ್ಷಗಳ ಕಾಲ ಅಬಾಧಿತವಾಗಿ ಉಳಿದವು. ಆ ಎತ್ತರದ ಸಾಧನೆಯ ನಂತರ ವಿಲ್ಮಾ ವಿಶ್ವಮಟ್ಟದ ಹಲವು ಕೂಟಗಳಲ್ಲಿ ನಿರಂತರವಾಗಿ ಓಡಿದಳು ಮತ್ತು ಓಡಿದ್ದಲ್ಲೆಲ್ಲ ಪದಕಗಳನ್ನು ಸೂರೆ ಮಾಡಿದಳು.

22ನೆಯ ವರ್ಷಕ್ಕೆ ಕ್ರೀಡಾ ನಿವೃತ್ತಿ

ತನ್ನ 22ನೆಯ ವರ್ಷದಲ್ಲಿ ಕೀರ್ತಿಯ ಶಿಖರದಲ್ಲಿ ಇರುವಾಗಲೇ ವಿಲ್ಮಾ ಕ್ರೀಡೆಗೆ ವಿದಾಯ ಕೋರಿದಳು ! 1964ರ ಟೋಕಿಯೋ ಒಲಿಂಪಿಕ್ಸನಲ್ಲಿ ಭಾಗವಹಿಸುವ ಅವಕಾಶ ಇದ್ದರೂ ಕೂಡ ಸ್ಪರ್ಧೆ ಮಾಡಲೇ ಇಲ್ಲ.

ಭರತ ವಾಕ್ಯ

ತನ್ನ ಬಾಲ್ಯದಲ್ಲಿ ಪೋಲಿಯೋ ಎಂಬ ಮಹಾಮಾರಿಗೆ ಸಂತ್ರಸ್ತಳಾದ, ಕಪ್ಪು ಚರ್ಮ ಎಂಬ ಕಾರಣಕ್ಕೆ ಅಪಮಾನ ಮತ್ತು ತಿರಸ್ಕಾರಕ್ಕೆ ಒಳಗಾದ ವಿಲ್ಮಾ ತನ್ನ ಕ್ರೀಡಾಸಾಧನೆಗಳ ಮೂಲಕ ಇತಿಹಾಸವನ್ನೇ ಬರೆದಳು! ಮುಂದೆ ಅವಳನ್ನು ‘ಶತಮಾನದ ಕ್ರೀಡಾಪಟು’ ಎಂದು ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯು ಗೌರವಿಸಿತು. ಅವಳ ಆತ್ಮಚರಿತ್ರೆಯಾದ ‘ Wilma – The Story of Wilma Rudolph’ ಲಕ್ಷಾಂತರ ಮಂದಿಗೆ ಪ್ರೇರಣೆಯನ್ನು ಕೊಟ್ಟಿತು. ಅವಳ ಸಾಧನೆಗಳ ಬಗ್ಗೆ 21 ಪ್ರಸಿದ್ಧ ಲೇಖಕರು ಪುಸ್ತಕಗಳನ್ನು ಬರೆದಿದ್ದಾರೆ. ಅವಳ ಬದುಕಿನ ಕಥೆ ಅಮೆರಿಕ ಮತ್ತು ಇತರ ದೇಶಗಳ ಕಾಲೇಜಿನ ಪಠ್ಯಪುಸ್ತಕಗಳಲ್ಲಿ ಸ್ಥಾನ ಪಡೆಯಿತು!

ಈಗ ಹೇಳಿ ವಿಲ್ಮಾ ಗ್ರೇಟ್ ಹೌದಾ?

ಇದನ್ನೂ ಓದಿ: ರಾಜಮಾರ್ಗ ಅಂಕಣ: ಜಗತ್ತಿನ ಯಾರ ಪ್ರೀತಿಯೂ ಇವರ ಪ್ರೀತಿಗೆ ಸಮನಲ್ಲ!

Continue Reading

ಪ್ರಮುಖ ಸುದ್ದಿ

Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಕಣಕ್ಕೆ ಇಳಿಯಲಿರುವ ಭಾರತದ ಸ್ಪರ್ಧಿಗಳು ಯಾರ್ಯಾರು? ಇಲ್ಲಿದೆ ಎಲ್ಲ ವಿವರ

Paris Olympics 2024 : ಸ್ವಪ್ನಿಲ್ ಕುಸಾಲೆ 2024 ರ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೂರನೇ ಪದಕ ಗೆಲ್ಲುವ ಮೂಲಕ ದಿನದ ಅತ್ಯುತ್ತಮ ಆರಂಭ ನೀಡಿದರು. ಪುರುಷರ 50 ಮೀಟರ್ ರೈಫಲ್ 3 ಪೊಸಿಷನ್​ ಸ್ಪರ್ಧೆಯಲ್ಲಿ ಅವರು ಕಂಚಿನ ಪದಕ ಗೆದ್ದರು. ಅಥ್ಲೆಟಿಕ್ಸ್, ಶೂಟಿಂಗ್ ಮತ್ತು ಬಿಲ್ಲುಗಾರಿಕೆಯಲ್ಲಿ ಇನ್ನೂ ಹೆಚ್ಚಿನ ರೋಮಾಂಚಕಾರಿ ಆಟ ಉಳಿದಿರುವುದರಿಂದ ಭಾರತೀಯ ತಂಡವು ನಿರಾಶೆಯನ್ನು ಮರೆಯಬಹುದು.

VISTARANEWS.COM


on

Paris Olympics 2024
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ (Paris Olympics 2024 ) ಗುರುವಾರ ಭಾರತಕ್ಕೆ ನಿರಾಶಾದಾಯಕ ದಿನವಾಗಿತ್ತು. ರಾತ್ರಿ ನಡೆದ ಬ್ಯಾಡ್ಮಿಂಟನ್​ ಮಹಿಳೆಯರ ಸಿಂಗಲ್ಸ್​ನಲ್ಲಿ ಪಿವಿ ಸಿಂಧೂ ಸೋಲುವ ಮೂಲಕ ದೊಡ್ಡ ಆಘಾತವಾಗಿದ್ದರೆ, ಪದಕ ಗೆಲ್ಲಬಹುದು ಎಂದು ನಿರೀಕ್ಷೆ ಮಾಡಿದ್ದ ಹಲವು ಸ್ಪರ್ಧಿಗಳು ಆರಂಭಿಕ ಹಂತದಲ್ಲೇ ಸೋಲನ್ನು ಅನುಭವಿಸಿದರು. ಶೂಟಿಂಗ್​ನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ತಂದುಕೊಟ್ಟರು. ಬಾಕ್ಸಿಂಗ್ಸ್​​ನಲ್ಲಿ ನಿಖತ್ ಝರೀನ್ ಮತ್ತು ಶೂಟಿಂಗ್​​ನಲ್ಲಿ ಸಿಫ್ಟ್ ಕೌರ್ ಸಮ್ರಾ ಬರಿಗೈಯಲ್ಲಿ ಬಂದಿರುವುದು ಬೇಸರದ ವಿಷಯವಾಗಿದೆ. ಬ್ಯಾಡ್ಮಿಂಟನ್​ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕ್ವಾರ್ಟರ್​ ಫೈನಲ್ಸ್​​ನಿಂದ ಅಚ್ಚರಿಯ ನಿರ್ಗಮನ ಕಂಡರು.

ಸ್ವಪ್ನಿಲ್ ಕುಸಾಲೆ 2024 ರ ಒಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮೂರನೇ ಪದಕ ಗೆಲ್ಲುವ ಮೂಲಕ ದಿನದ ಅತ್ಯುತ್ತಮ ಆರಂಭ ನೀಡಿದರು. ಪುರುಷರ 50 ಮೀಟರ್ ರೈಫಲ್ 3 ಪೊಸಿಷನ್​ ಸ್ಪರ್ಧೆಯಲ್ಲಿ ಅವರು ಕಂಚಿನ ಪದಕ ಗೆದ್ದರು. ಅಥ್ಲೆಟಿಕ್ಸ್, ಶೂಟಿಂಗ್ ಮತ್ತು ಬಿಲ್ಲುಗಾರಿಕೆಯಲ್ಲಿ ಇನ್ನೂ ಹೆಚ್ಚಿನ ರೋಮಾಂಚಕಾರಿ ಆಟ ಉಳಿದಿರುವುದರಿಂದ ಭಾರತೀಯ ತಂಡವು ನಿರಾಶೆಯನ್ನು ಮರೆಯಬಹುದು. ಏಷ್ಯನ್ ಪದಕ ವಿಜೇತರಾದ ತಜಿಂದರ್ ಪಾಲ್ ಸಿಂಗ್ ತೂರ್ ಮತ್ತು ಪಾರುಲ್ ಚೌಧರಿ ನಾಳೆ ತಮ್ಮ ಅಭಿಯಾನ ಪ್ರಾರಂಭಿಸಲಿದ್ದಾರೆ. ಹೀಗೆ ಆಗಸ್ಟ್ 2ರಂದು ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಭಾರತದ ಸ್ಪರ್ಧೆಗಳ ವಿವರ ಇಲ್ಲಿದೆ.

ಆರ್ಚರಿ

ಆರ್ಚರಿ ಮಿಶ್ರ ತಂಡ ಆರ್ 16 : ಭಾರತ ವಿರುದ್ಧ ಇಂಡೋನೇಷ್ಯಾ – ಮಧ್ಯಾಹ್ನ 1:19ಕ್ಕೆ
ಮಿಶ್ರ ತಂಡ ಕ್ವಾರ್ಟರ್ ಫೈನಲ್ : ಸಂಜೆ 5:45ಕ್ಕೆ
ಮಿಶ್ರ ತಂಡ ಸೆಮಿಫೈನಲ್ – ಸಂಜೆ 7:00ಕ್ಕೆ
ಮಿಶ್ರ ತಂಡ ಪದಕ ಪಂದ್ಯಗಳು – 7:54ಕ್ಕೆ

ಅಥ್ಲೆಟಿಕ್ಸ್

ಮಹಿಳೆಯರ 5000 ಓಟ: ಮೀಟರ್ ರೌಂಡ್ -1 – ಪಾರುಲ್ ಚೌಧರಿ, ಅಂಕಿತಾ ಧ್ಯಾನಿ – ರಾತ್ರಿ 9:40
ಪುರುಷರ ಶಾಟ್ ಪುಟ್ ಅರ್ಹತಾ ಸುತ್ತು: ತಜಿಂದರ್ ಪಾಲ್ ಸಿಂಗ್ ತೂರ್ – 11:40 PM

ಬ್ಯಾಡ್ಮಿಂಟನ್

ಪುರುಷರ ಸಿಂಗಲ್ಸ್ : ಲಕ್ಷ್ಯ ಸೇನ್​, 11 :40ಕ್ಕೆ

ಗಾಲ್ಫ್​

ಗಾಲ್ಫ್ ಪುರುಷರ ವೈಯಕ್ತಿಕ ಸುತ್ತು 2 : ಮಧ್ಯಾಹ್ನ 12:30
ಹಾಕಿ
ಭಾರತೀಯ ಪುರುಷರ ತಂಡದ ವಿರುದ್ಧ ಆಸ್ಟ್ರೇಲಿಯಾ. ಸಂಜೆ 4:45

ಜೂಡೋ

ಮಹಿಳೆಯರ 78+ ಕೆ.ಜಿ ವಿಭಾಗದ 32ನೇ ಸುತ್ತು; ತುಲಿಕಾ ಮಾನ್ ವಿರುದ್ಧ ಇಡಾಲಿಸ್ ಒರ್ಟಿಜ್

ರೋಯಿಂಗ್

ಪುರುಷರ ಸಿಂಗಲ್ಸ್ ಸ್ಕಲ್ಸ್ ಫೈನಲ್ – ಮಧ್ಯಾಹ್ನ 1:48
ಸೇಲಿಂಗ್ ಮಹಿಳಾ ಡಿಂಗಿ ರೇಸ್ (3,4) – ಮಧ್ಯಾಹ್ನ 3:45ಕ್ಕೆ
ಮಧ್ಯಾಹ್ನ ಪುರುಷರ ಡಿಂಗಿ ರೇಸ್ (3,4) – 7:05 ಸಂಜೆ ಕ್ಕೆ

ಶೂಟಿಂಗ್

ಮಹಿಳೆಯರ 25 ಮೀಟರ್ ಪಿಸ್ತೂಲ್ ಮಹಿಳಾ ಅರ್ಹತಾ ಸುತ್ತು : ಮಧ್ಯಾಹ್ನ 12:30
ಪುರುಷರ ಸ್ಕೀಟ್ ಅರ್ಹತಾ ದಿನ 1 – ಮಧ್ಯಾಹ್ನ 1:00 ಗಂಟೆಗೆ
ಮಹಿಳೆಯರ 25 ಮೀಟರ್ ಪಿಸ್ತೂಲ್, ಅರ್ಹತಾ; ಮಧ್ಯಾಹ್ನ 3:30ಕ್ಕೆ

Continue Reading

ಭವಿಷ್ಯ

Dina Bhavishya : ಈ ರಾಶಿಯವರು ದಿನ ಕೊನೆಯಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವಿರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷದ ತ್ರಯೋದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶುಕ್ರವಾರವೂ ಕರ್ಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಸಿಂಹ, ಕನ್ಯಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೇಷ ರಾಶಿಯವರು ಕೆಲವು ನಿರ್ಧಾರಗಳು ಹತಾಶೆ ಮತ್ತು ಮಾನಸಿಕ ಪ್ರಕ್ಷುಬ್ಧತೆಗೆ ಕಾರಣವಾಗುತ್ತದೆ. ಆಪ್ತರಿಂದ ಸಹಾಯವನ್ನು ಕೋರುವಿರಿ. ಒತ್ತಡದ ಕೆಲಸದಿಂದಾಗಿ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ವೃಷಭ ರಾಶಿಯವರು ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡುವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ, ಆಗ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (02-08-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ.
ತಿಥಿ: ತ್ರಯೋದಶಿ 15:26 ವಾರ: ಶುಕ್ರವಾರ
ನಕ್ಷತ್ರ: ಆರಿದ್ರಾ 10:57 ಯೋಗ: ಹರ್ಷಣ 11:43
ಕರಣ: ವಣಿಜ 15:26 ದಿನದ ವಿಶೇಷ: ಆಡಿ ಶುಕ್ರವಾರ, ಮಾಸ ಶಿವರಾತ್ರಿ

ಸೂರ್ಯೋದಯ : 06:05   ಸೂರ್ಯಾಸ್ತ : 06:46

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಬೆಳಗ್ಗೆ 06:00 ರಿಂದ 07:30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ನಿರ್ಧಾರಗಳು ಹತಾಶೆ ಮತ್ತು ಮಾನಸಿಕ ಪ್ರಕ್ಷುಬ್ಧತೆಗೆ ಕಾರಣವಾಗುತ್ತದೆ. ಆಪ್ತರಿಂದ ಸಹಾಯವನ್ನು ಕೋರುವಿರಿ. ಒತ್ತಡದ ಕೆಲಸದಿಂದಾಗಿ ದೈಹಿಕವಾಗಿ ಬಳಲುವ ಸಾಧ್ಯತೆ ಇದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡುವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ, ಆಗ ನಿಮ್ಮ ಹಾಸ್ಯದ ಪ್ರಕೃತಿ ನಿಮ್ಮ ಸುತ್ತಮುತ್ತಲಿನ ಪರಿಸರವನ್ನು ಬೆಳಗಿಸುತ್ತದೆ. ದಿನ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ ಇದೆ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಬೇರೆಯವರ ಮಾತನ್ನು ಕೇಳಿಕೊಂಡು ನಿಮ್ಮನ್ನು ಪ್ರೀತಿಯಿಂದ ಕಾಣುವ ವ್ಯಕ್ತಿಗಳನ್ನು ದ್ವೇಷಿಸುವುದು ಬೇಡ. ಇತರರ ಸಮಸ್ಯೆಗಳನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವ ಸಾಧ್ಯತೆ ಇದೆ. ದಿಢೀರ್ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಾವಶ್ಯಕ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅನಿವಾರ್ಯ ಪ್ರಸಂಗಗಳು ನಿಮಗೆ ಕೋಪವನ್ನು ತರಿಸುವ ಸಾಧ್ಯತೆ ಇದ್ದು, ಭಾವನೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡರೆ ಉತ್ತಮವಾಗಿರಲಿದೆ. ಕಠಿಣ ಪರಿಶ್ರಮ ನಿಮಗೆ ಫಲ ನೀಡಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ. ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗದ ಸ್ಥಳದಲ್ಲಿ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಸಿಂಹ:ನಿಮ್ಮ ಸಭ್ಯ ನಡವಳಿಕೆ ಇತರರಿಂದ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ದಿನದ ಆರಂಭದಲ್ಲಿ ಇಂದು ನೀವು ಯಾವುದೇ ಆರ್ಥಿಕ ನಷ್ಟವನ್ನು ಹೊಂದಬಹುದು. ಇದರಿಂದ ನಿಮ್ಮ ಪೂರ್ತಿ ದಿನ ಹದಗೆಡಬಹುದು. ಇತರರಿಗೆ ಪ್ರತಿಫಲಗಳು ತರುವ ನಿಮ್ಮ ಸಾಮರ್ಥ್ಯ ಪ್ರತಿಫಲ ತರುತ್ತದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆ ಅವಕಾಶ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಒತ್ತಡದಿಂದ ವಿಮುಕ್ತಿ ಹೊಂದಿ, ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ದೀರ್ಘಕಾಲದ ದೃಷ್ಟಿಕೋನದಿಂದ ಮಾಡಿದ ಹೂಡಿಕೆಯಿಂದ ಲಾಭ ಇರಲಿದೆ.
ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸಂಪೂರ್ಣ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಅದೃಷ್ಟ ಖುಲಾಯಿಸಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದಿಢೀರ್ ಧನಾಗಮನದಿಂದ ಸಂತೋಷ ಇಮ್ಮಡಿಯಾಗಲಿದೆ. ಅನೇಕ ಸಮಸ್ಯೆಗಳು ಇಂದು ಪರಿಹಾರವಾಗುವುದು. ಆರೋಗ್ಯ ಪರಿಪೂರ್ಣವಾಗಲಿದೆ. ಬಹಳ ದಿನಗಳಿಂದ ಕಂಡ ಕನಸು ನನಸಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಇಂದು ಪ್ರಮುಖ ನಿರ್ಧಾರಗಳಿಂದಾಗಿ ಮಾನಸಿಕವಾಗಿ ನೀವು ಬಳಲುವ ಸಾಧ್ಯತೆ ಇದೆ. ಅನಾವಶ್ಯಕ ಖರ್ಚು ಮಾಡಿ ಕೊರಗುವ ಸಾಧ್ಯತೆ ಇದೆ. ಆದಷ್ಟು ನಿಯಂತ್ರಣದಲ್ಲಿರಿ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ, ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ಆರೋಗ್ಯದ ಆರೈಕೆ ಇಂದು ಅಗತ್ಯವಿದೆ. ಆಪ್ತರೊಂದಿಗೆ ಸೇರಿಕೊಂಡು ಮಾಡುವ ವ್ಯಾಪಾರ ನಷ್ಟ ತಂದಿತು, ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ನಿಮ್ಮ ಆಂತರಿಕ ಶಕ್ತಿ ದಿನದ ಕೆಲಸವನ್ನು ಉತ್ತಮಗೊಳಿಸುವಲ್ಲಿ ನಿಮ್ಮನ್ನು ಬೆಂಬಲಿಸುತ್ತದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಆಹಾರ ಕ್ರಮದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು ಸಾಧ್ಯತೆ ಇದೆ, ಆದಷ್ಟು ಆಹಾರ ಕ್ರಮದಲ್ಲಿ ನಿಯಂತ್ರಣ ಮಾಡಿ. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ದಿಢೀರ್‌ ಪ್ರಯಾಣ ಬೆಳಸಬೇಕಾಗಬಹುದು. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ನಿಮ್ಮ ಸಾಧನೆಗೆ ಇಂದು ಪ್ರೋತ್ಸಾಹ ಸಿಗಲಿದೆ. ಅನೇಕ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ವ್ಯಾಪಾರದ ಉದ್ದೇಶಕ್ಕಾಗಿ ಕೈಗೊಂಡ ಪ್ರಯಾಣ ಲಾಭವನ್ನು ತಂದುಕೊಡಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಆದಷ್ಟು ಸಕಾರಾತ್ಮಕವಾಗಿ ಆಲೋಚಿಸಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಇರಲಿದೆ. ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಟೀಕಿಸುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Stock Market
ದೇಶ9 mins ago

Stock Market: ಷೇರುಪೇಟೆಯಲ್ಲಿ ಭಾರೀ ಕುಸಿತ; ಸೆನ್ಸೆಕ್ಸ್‌ 700 ಅಂಕಗಳಷ್ಟು ಪತನ

Swapnil Kusale
ಕ್ರೀಡೆ25 mins ago

Swapnil Kusale: ಕಂಚು ಗೆದ್ದ ಸ್ವಪ್ನಿಲ್ ಕುಸಾಲೆಗೆ 1 ಕೋಟಿ ಬಹುಮಾನ ಪ್ರಕಟಿಸಿದ ಶಿಂಧೆ ಸರ್ಕಾರ

raichur food poisoning 1
ಕ್ರೈಂ32 mins ago

Food Poisoning: ವಿಷ ಬೆರೆತ ಮಟನ್‌ ಸೇವಿಸಿ ಒಂದೇ ಕುಟುಂಬದ ನಾಲ್ವರ ಘೋರ ಸಾವು; ಆತ್ಮಹತ್ಯೆ ಶಂಕೆ

Paris Olympics
ಕ್ರೀಡೆ1 hour ago

Paris Olympic: ಒಲಿಂಪಿಕ್ಸ್​ ಪದಕ ವಿಜೇತರಿಗೆ ಸಿಗಲಿದೆ ದುಬಾರಿ ಬೆಲೆಯ ಕಾರು

Wayanad Landslide
ದೇಶ1 hour ago

Wayanad Landslide: ವಯನಾಡಿನ ಭೀಕರ ದೃಶ್ಯ ಸೆರೆ ಹಿಡಿದ ಇಸ್ರೋ; ಭೂಕುಸಿತಕ್ಕೂ ಮುನ್ನ ಮತ್ತು ನಂತರ ಫೋಟೋ ರಿಲೀಸ್‌

14 hours work it jobs
ಪ್ರಮುಖ ಸುದ್ದಿ1 hour ago

14 Hours Work: ಒಂದೆಡೆ ಐಟಿ ಉದ್ಯೋಗಿಗಳಿಂದ ಬೃಹತ್ ಪ್ರತಿಭಟನೆ, ಇನ್ನೊಂದೆಡೆ ಐಟಿ ಕಂಪನಿಗಳ ಮುಂದೆ ಕೆಲಸಕ್ಕಾಗಿ ಮೈಲುಗಟ್ಟಲೆ ಕ್ಯೂ!

India vs Sri Lanka
ಕ್ರೀಡೆ2 hours ago

India vs Sri Lanka: ಲಂಕಾ ಸರಣಿಯಲ್ಲಿ ವಿಶೇಷ ದಾಖಲೆ ಮೇಲೆ ಕಣ್ಣಿಟ್ಟ ಕೊಹ್ಲಿ, ರೋಹಿತ್​

police firing hubli robber
ಕ್ರೈಂ2 hours ago

Police Firing: ದರೋಡೆ ಆರೋಪಿ ಕಾಲಿಗೆ ಪೊಲೀಸರ ಗುಂಡೇಟು

Phone Storage Issue
ಗ್ಯಾಜೆಟ್ಸ್2 hours ago

Phone Storage Issue: ನಿಮ್ಮ ಮೊಬೈಲ್ ಸ್ಟೋರೇಜ್ ಸಮಸ್ಯೆಗೆ ಇಲ್ಲಿದೆ ಸರಳ ಪರಿಹಾರ!

IND vs SL: When and where to watch ODI, squads, predicted XI, venues
ಕ್ರೀಡೆ2 hours ago

IND vs SL: ಇಂದು ಭಾರತ-ಲಂಕಾ ಮೊದಲ ಏಕದಿನ ಹಣಾಹಣಿ; ಎಷ್ಟು ಗಂಟೆಗೆ ಪಂದ್ಯ ಆರಂಭ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ21 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ22 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ22 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ3 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ3 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ4 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ4 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ4 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ5 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌