IPL 2024 : ಇರಾನ್​- ಇಸ್ರೇಲ್ ಯುದ್ಧದ ನಡುವೆ ವಿಮಾನ ಪ್ರಯಾಣದ ಭಯಾನಕ ಅನುಭವ ವಿವರಿಸಿದ ಪೀಟರ್ಸನ್​ - Vistara News

ಪ್ರಮುಖ ಸುದ್ದಿ

IPL 2024 : ಇರಾನ್​- ಇಸ್ರೇಲ್ ಯುದ್ಧದ ನಡುವೆ ವಿಮಾನ ಪ್ರಯಾಣದ ಭಯಾನಕ ಅನುಭವ ವಿವರಿಸಿದ ಪೀಟರ್ಸನ್​

ಶನಿವಾರ ತಡರಾತ್ರಿ ನಡೆದ ಭೀಕರ ದಾಳಿಯಲ್ಲಿ ಇರಾನ್ ಇಸ್ರೇಲ್ ಮೇಲೆ 300 ಕ್ಕೂ ಹೆಚ್ಚು ಡ್ರೋನ್​​ಗಳು ಮತ್ತು ಕ್ಷಿಪಣಿಗಳನ್ನು ಉಡಾಯಿಸಿದೆ.. ಇಸ್ರೇಲ್ ತಲುಪುವ ಮೊದಲು 170 ಡ್ರೋನ್​ಗಳು ಮತ್ತು 30 ಕ್ರೂಸ್ ಕ್ಷಿಪಣಿಗಳನ್ನು ಇಸ್ರೇಲ್​ ಹೊಡೆದು ಉರುಳಿಸಿದೆ. 110 ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ ಕೆಲವು ಇಸ್ರೇಲ್ ನೆಲದ ಮೇಲೆ ಬಿದ್ದಿದ್ದು, 12 ಜನರು ಗಾಯಗೊಂಡಿದ್ದಾರೆ ಎಂದು ಇಸ್ರೇಲ್ ಸೇನೆ ತಿಳಿಸಿದೆ.

VISTARANEWS.COM


on

Kevin peterson
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಇಂಗ್ಲೆಂಡ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಅವರು ಐಪಿಎಲ್ 2024 (IPL 2024) ಪಂದ್ಯಾವಳಿಗಾಗಿ ಭಾರತಕ್ಕೆ ಬಂದಿದ್ದಾರೆ. ಈ ವೇಳೆ ಅವರು ಇಸ್ರೇಲ್​- ಇರಾನ್ ಯುದ್ಧದ ನಡುವೆ ತಮ್ಮ ವಿಮಾನ ಪ್ರಯಾಣದ ಕರಾಳ ಅನುಭವವನ್ನು ಹಂಚಿಕೊಂಡಿದ್ದಾರೆ. ಮುಂಬೈಗೆ ಬಂದಿಳಿಯುವ ಮೊದಲು ಎದುರಿಸಿದ ಆತಂಕವನ್ನು ಬಣ್ಣಿಸಿದ್ದಾರೆ.

ಶನಿವಾರ ತಡರಾತ್ರಿ ನಡೆದ ಭೀಕರ ದಾಳಿಯಲ್ಲಿ ಇರಾನ್ ಇಸ್ರೇಲ್ ಮೇಲೆ 300 ಕ್ಕೂ ಹೆಚ್ಚು ಡ್ರೋನ್​​ಗಳು ಮತ್ತು ಕ್ಷಿಪಣಿಗಳನ್ನು ಉಡಾಯಿಸಿದೆ.. ಇಸ್ರೇಲ್ ತಲುಪುವ ಮೊದಲು 170 ಡ್ರೋನ್​ಗಳು ಮತ್ತು 30 ಕ್ರೂಸ್ ಕ್ಷಿಪಣಿಗಳನ್ನು ಇಸ್ರೇಲ್​ ಹೊಡೆದು ಉರುಳಿಸಿದೆ. 110 ಬ್ಯಾಲಿಸ್ಟಿಕ್ ಕ್ಷಿಪಣಿಗಳಲ್ಲಿ ಕೆಲವು ಇಸ್ರೇಲ್ ನೆಲದ ಮೇಲೆ ಬಿದ್ದಿದ್ದು, 12 ಜನರು ಗಾಯಗೊಂಡಿದ್ದಾರೆ ಎಂದು ಇಸ್ರೇಲ್ ಸೇನೆ ತಿಳಿಸಿದೆ.

ಡಮಾಸ್ಕಸ್​ನಲ್ಲಿರುವ ತನ್ನ ರಾಯಭಾರ ಕಚೇರಿ ಕಟ್ಟಡದ ಮೇಲೆ ಏಪ್ರಿಲ್ 1 ರಂದು ನಡೆದ ವಾಯು ದಾಳಿ ನಡೆಸಿದ ಇಸ್ರೇಲ್ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಪದೇ ಪದೇ ಬೆದರಿಕೆ ಹಾಕಿತ್ತು. ಈ ಹಿನ್ನೆಲೆಯಲ್ಲಿ ಯುದ್ಧ ಆರಂಭಗೊಂಡಿದೆ. ಯುದ್ಧದ ಹಿನ್ನೆಲೆಯಲ್ಲಿ ಇಸ್ರೇಲ್​ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಭಾರತೀಯ ನಾಗರಿಕರಿಗೆ ಸುರಕ್ಷಿತವಾಗಿರಲು ಹೇಳಿದೆ. ಅಲ್ಲದೆ ಸ್ಥಳೀಯ ಅಧಿಕಾರಿಗಳ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಸಲಹೆ ನೀಡಿದೆ.

IPL 2024 : ಗೆಲುವಿನ ಹಾದಿಗೆ ಮರಳಿದ ರಾಜಸ್ಥಾನ್​, ಪಂಜಾಬ್​ಗೆ ಮತ್ತೊಂದು ಸೋಲು

ಭಾರತೀಯ ಜನರ ಸುರಕ್ಷತೆ ಖಚಿತಪಡಿಸಿಕೊಳ್ಳಲು ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದೇವೆ ಮತ್ತು ಇಸ್ರೇಲ್ ಅಧಿಕಾರಿಗಳೊಂದಿಗೆ ಸಂವಹನ ನಡೆಸುತ್ತಿದ್ದೇವೆ ಎಂದು ಭಾರತದ ರಾಯಭಾರ ಕಚೇರಿ ಹೇಳಿದೆ.

ವಿಮಾನದ ಮಾರ್ಗ ಬದಲಾವಣೆ

ಇಸ್ರೇಲ್ ಕಡೆಗೆ ಇರಾನ್​​ನ ಕ್ಷಿಪಣಿ ಉಡಾವಣೆಯಿಂದಾಗಿ ತಮ್ಮ ವಿಮಾನವನ್ನು ಮಾರ್ಗ ಬದಲಾವಣೆ ಮಾಡಬೇಕಾಯಿತು ಎಂದು ಕೆವಿನ್ ಪೀಟರ್ಸನ್ ಬಹಿರಂಗಪಡಿಸಿದರು. ಅವರು ಸಾಮಾಜಿಕ ಮಾಧ್ಯಮಗಳಲ್ಲಿ ಆತಂಕಕಾರಿ ಅನುಭವವನ್ನು ವಿವರಿಸಿದ್ದಾರೆ. ಅವರ ಪೋಸ್ಟ್ ಪರಿಸ್ಥಿತಿಯ ಆತಂಕ-ಪ್ರಚೋದಕ ಸ್ವರೂಪ ಬಹಿರಂಗಪಡಿಸಿದೆ,

ಇರಾನ್ ಕ್ಷಿಪಣಿಗಳನ್ನು ತಪ್ಪಿಸಲು ನಾವು ಮಾರ್ಗ ಬದಲಾವಣೆ ಮಾಡಬೇಕಾಯಿತು ಕಳೆದ ರಾತ್ರಿ ನಮ್ಮ ವಿಮಾನವು ಹಿಂತಿರುಗಿ ಮತ್ತೊಂದು ದೊಡ್ಡ ಲೋಡ್ ಇಂಧನವನ್ನು ತುಂಬಿಸಬೇಕಾಯಿತು. ಹುಚ್ಚುತನ. ಹೇಗಾದರೂ, ನಂತರ ಮುಂಬೈನಲ್ಲಿ ಇಳಿದೆ. ವಾಖೆಂಡೆ ನನ್ನ ನೆಚ್ಚಿನ ಕ್ರಿಕೆಟ್ ಮೈದಾನಗಳಲ್ಲಿ ಒಂದಾಗಿದೆ!” ಎಂದು ಅವರು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

Prajwal Revanna Case: ಏಳು ದಿನಗಳ ಕಾಲ ಸಮಯ ಕೇಳಿ ನೀಡಿರುವ ಅರ್ಜಿಗೆ ಮಾನ್ಯತೆ ಕೊಡಲಾಗುವುದಿಲ್ಲ. ಸಮಯ ಕೊಡಲು ಸಾಧ್ಯವಿಲ್ಲ. ಕೂಡಲೇ ಹಾಜರಾಗಿ ಎಂದು ಇಂದು (ಗುರುವಾರ – ಮೇ 2) ಮತ್ತೊಂದು ನೋಟಿಸ್ ನೀಡುವ ಸಾಧ್ಯತೆ ಇದೆ. ಈಗಾಗಲೇ ಕರ್ನಾಟಕ ಸರ್ಕಾರದಿಂದ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ತನಿಖೆಗೆ ಕೂಡಲೇ ಹಾಜರಾಗಿ ಎಂದು ಮತ್ತೊಂದು ನೋಟಿಸ್‌ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಾಗುತ್ತಿದೆ.

VISTARANEWS.COM


on

Prajwal Revanna Case Application seeking exemption from appearing before SIT rejected
Koo

ಬೆಂಗಳೂರು: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಲು 7 ದಿನಗಳ ವಿನಾಯಿತಿ ಕೋರಿ ಸಲ್ಲಿಸಿರುವ ಅರ್ಜಿ ತಿರಸ್ಕಾರ ಆಗಿದೆ ಎಂದು ಹೇಳಲಾಗುತ್ತಿದೆ.

ಏಳು ದಿನಗಳ ಕಾಲ ಸಮಯ ಕೇಳಿ ನೀಡಿರುವ ಅರ್ಜಿಗೆ ಮಾನ್ಯತೆ ಕೊಡಲಾಗುವುದಿಲ್ಲ. ಸಮಯ ಕೊಡಲು ಸಾಧ್ಯವಿಲ್ಲ. ಕೂಡಲೇ ಹಾಜರಾಗಿ ಎಂದು ಇಂದು (ಗುರುವಾರ – ಮೇ 2) ಮತ್ತೊಂದು ನೋಟಿಸ್ ನೀಡುವ ಸಾಧ್ಯತೆ ಇದೆ. ಈಗಾಗಲೇ ಕರ್ನಾಟಕ ಸರ್ಕಾರದಿಂದ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ. ಇದರ ಬೆನ್ನಲ್ಲೇ ತನಿಖೆಗೆ ಕೂಡಲೇ ಹಾಜರಾಗಿ ಎಂದು ಮತ್ತೊಂದು ನೋಟಿಸ್‌ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಾಗುತ್ತಿದೆ.

ವಕೀಲರಿಗೂ ನೋಟಿಸ್‌?

ಇನ್ನು ಪ್ರಜ್ವಲ್ ರೇವಣ್ಣ ಪರ ವಕೀಲರಿಗೂ ನೋಟಿಸ್ ಜಾರಿ ಮಾಡುವ ಸಾಧ್ಯತೆ ಇದೆ. ನಿಮ್ಮ ಕಕ್ಷಿದಾರನಿಗೆ ಬಂದು ವಿಚಾರಣೆಗೆ ಹಾಜರಾಗಲು ತಿಳಿಸಿ ಎಂದು ನೋಟಿಸ್‌ ಮೂಲಕ ಸೂಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ನೋಟಿಸ್‌ ಅನ್ನು ಪ್ರಜ್ವಲ್ ಮನೆ ಮತ್ತು ಕಚೇರಿಗೆ ತೆರಳಿ ಅಂಟಿಸುವ ಬಗ್ಗೆ ಚಿಂತನೆ ನಡೆದಿದೆ. ಎನ್ನಲಾಗಿದೆ. ಪ್ರಜ್ವಲ್ ಎಸ್ಕೇಪ್ ಆಟಕ್ಕೆ ಎಸ್ಐಟಿ ಅಧಿಕಾರಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಇದು ಹೈಪ್ರೊಫೈಲ್‌ ಕೇಸ್‌ ಆಗಿರುವ ಕಾರಣ ತನಿಖೆಯನ್ನು ಮತ್ತಷ್ಟು ಚುರುಕು ಮಾಡಲು ಸಿದ್ಧತೆ ನಡೆಸಲಾಗಿದೆ.

ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಪಕ್ಕಾ?

ಎಸ್‌ಐಟಿ ತನಿಖೆಯನ್ನು ಚುರುಕುಗೊಳಿಸಿದ್ದಲ್ಲದೆ, ಖುದ್ದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಿರುವ ಹಿನ್ನೆಲೆಯಲ್ಲಿ ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಪಕ್ಕಾ ಎನ್ನಲಾಗಿದೆ. ಈ ನಡುವೆ ಎಸ್ಐಟಿ ಅಧಿಕಾರಿಗಳು ಸಹ ಅವರ ವಿಚಾರಣೆಗೆ ಆತುರ ತೋರುತ್ತಿದ್ದಾರೆ. ಕಾರಣ, ಪ್ರಜ್ವಲ್‌ ಒಬ್ಬರು ಸಂಸದರು ಹಾಗೂ ಪ್ರಭಾವಿ ವ್ಯಕ್ತಿಯಾಗಿದ್ದಾರೆ. ಇನ್ನು ಅವರ ಕುಟುಂಬದಲ್ಲಿ ಮಾಜಿ ಪ್ರಧಾನಿ, ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಸಚಿವರು, ಹಾಲಿ ವಿಧಾನ ಪರಿಷತ್‌ ಸದಸ್ಯರು ಇದ್ದಾರೆ. ಹೀಗಿರುವಾಗ ಆರೋಪಿಗೆ ಸಮಯ ಕೊಟ್ಟರೆ ಪ್ರಭಾವ ಬಳಸಿ ಸಾಕ್ಷಿ ನಾಶ ಮಾಡಬಹುದು ಎಂಬ ಹಿನ್ನೆಲೆಯಲ್ಲಿ ಪ್ರಜ್ವಲ್‌ ಬಂಧನಕ್ಕೆ ಮತ್ತಷ್ಟು ಕಸರತ್ತು ನಡೆಸಲಾಗತ್ತಿದೆ.

ಇನ್ನು ಆರೋಪಿ ಪ್ರಜ್ವಲ್‌ ಬಳಿ ಒರಿಜಿನಲ್ ವಿಡಿಯೊಗಳು ಇವೆ. ಹೀಗಾಗಿ ಅವರು ಸಾಕ್ಷಿದಾರರು ಮತ್ತು ಸಂತ್ರಸ್ತರಿಗೆ ಬೆದರಿಸಬಹುದು, ಸಮಯ ಕೊಟ್ಟರೆ ಎಲ್ಲವನ್ನೂ ನಾಶ ಮಾಡಿ ಕೇಸ್ ತಮಗೆ ಅನುಕೂಲ ಆಗುವಂತೆ ಮಾಡಿಕೊಳ್ಳಬಹುದು ಎಂದು ಎಸ್‌ಐಟಿ ಚಿಂತಿಸಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ (Diplomatic Passport) ಅನ್ನು ರದ್ದು ಮಾಡಲು ಈಗಾಗಲೇ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಈ ಪಾಸ್‌ಪೋರ್ಟ್‌ ರದ್ದು ಮಾಡದೇ ಇದ್ದರೆ ಪ್ರಜ್ವಲ್‌ ಬಂಧನ ಅಸಾಧ್ಯವಾಗಿದ್ದು, ಅವರು ದೇಶದಿಂದ ದೇಶಕ್ಕೆ ಆರಾಮವಾಗಿ ಸಂಚಾರ ಮಾಡಬಹುದಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನ‌ು ಸಂಕಷ್ಟಕ್ಕೆ ದೂಡಲು ಸಿದ್ದರಾಮಯ್ಯ ಪ್ಲ್ಯಾನ್‌ ಮಾಡಿದ್ದು, ಚೆಂಡನ್ನು ಕೇಂದ್ರ ಸರ್ಕಾರದ ಅಂಗಳಕ್ಕೆ ಹಾಕಿದ್ದಾರೆ.

ಒಂದು ವೇಳೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ ಏನಾಗುತ್ತದೆ? ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಇದನ್ನು ಯಾರು ಯಾರು ಪಡೆದುಕೊಳ್ಳಬಹುದು? ಇದರ ಅವಧಿ ಎಷ್ಟು ವರ್ಷ ಇರುತ್ತದೆ? ಇದನ್ನು ಹೇಗೆ ಪಡೆದುಕೊಳ್ಳಬಹುದು? ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಏನು ಎಂಬ ವಿವರವನ್ನು ಇಲ್ಲಿ ನೀಡಲಾಗಿದೆ.

ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್?‌ (diplomatic passport)

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಟೈಪ್‌ ಡಿ (Type D) ಪಾಸ್‌ ಪೋರ್ಟ್‌ ಎಂದೂ ಕರೆಯುತ್ತಾರೆ. ಭಾರತೀಯ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು ಹಾಗೂ ಭಾರತ ಸರ್ಕಾರದ ಪರ ಪ್ರತಿನಿಧಿಸುವ ವ್ಯಕ್ತಿಗಳಿಗೆ ಇದನ್ನು ನೀಡಲಾಗುತ್ತದೆ. ಭಾರತ ಸರ್ಕಾರದ ಪರ ಅಧಿಕೃತ ವಿದೇಶ ಪ್ರಯಾಣದ ಸಂದರ್ಭ ಬಳಸುತ್ತಾರೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 28 ಪುಟಗಳನ್ನು ಒಳಗೊಂಡಿರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ಕಡು ನೀಲಿ ಕವರ್‌ ಅನ್ನು ಹೊಂದಿದ್ದರೆ, ಇದು ಮರೂನ್‌ ಬಣ್ಣದಲ್ಲಿ ಇರುತ್ತದೆ. ಸಾಮಾನ್ಯ ಪಾಸ್‌ಪೋರ್ಟ್‌ ವಯಸ್ಕರಿಗೆ 10 ವರ್ಷ ಹಾಗೂ ಅಪ್ರಾಪ್ತರಿಗೆ 5 ವರ್ಷ ವ್ಯಾಲಿಡಿಟಿಯನ್ನು ಹೊಂದಿರುತ್ತದೆ. ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ 5 ಅಥವಾ ಕಡಿಮೆ ಅವಧಿಗೆ ಬಿಡುಗಡೆಯಾಗುತ್ತದೆ.

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅರ್ಜಿ ಸಲ್ಲಿಸುವುದು ಹೇಗೆ?

ದಿಲ್ಲಿಯಲ್ಲಿ ವಿದೇಶಾಂಗ ಇಲಾಖೆಯ ಪಾಸ್‌ಪೋರ್ಟ್‌ ಸೇವಾ ಪ್ರೋಗ್ರಾಮ್‌ ವಿಭಾಗದಲ್ಲಿ ಮಾತ್ರ ಡಿಪ್ಲೊಮ್ಯಾಟಿಕ್‌ ಪಾಸ್‌ ಪೋರ್ಟ್‌ ಬಗ್ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ.

ಪ್ರಯೋಜನವೇನು?

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಭಾರತ ಸರ್ಕಾರವನ್ನು ರಾಜತಾಂತ್ರಿಕ ಉದ್ದೇಶಗಳಿಗೆ ವಿದೇಶಗಳಲ್ಲಿ ಪ್ರತಿನಿಧಿಸುವವರಿಗೆ ಅಧಿಕೃತ ಗುರುತಿನ ದೃಢೀಕರಣವಾಗಿ ಬಳಕೆಯಾಗುತ್ತದೆ. ಇದು ಅವರಿಗೆ ಗುರುತು ಮತ್ತು ಅಧಿಕೃತ ಸ್ಥಾನಮಾನವನ್ನು ಒದಗಿಸುತ್ತದೆ.

ಇದನ್ನೂ ಓದಿ: Hassan Pen Drive Case: SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಅರೆಸ್ಟ್‌ ಮಾಡುವುದು ಸಾಧ್ಯವೇ ಇಲ್ಲ

ಈ ಪಾಸ್‌ಪೋರ್ಟ್‌ ಇರುವವರಿಗೆ ಅಂತಾರಾಷ್ಟ್ರೀಯ ಕಾನೂನು ಅಡಿಯಲ್ಲಿ ಕೆಲವು ವಿಶೇಷ ಸೌಲಭ್ಯಗಳು, ಮಾನ್ಯತೆಗಳು ಸಿಗುತ್ತದೆ. ಆತಿಥೇಯ ರಾಷ್ಟ್ರದಲ್ಲಿ ಅರೆಸ್ಟ್‌, ವಶಕ್ಕೆ ತೆಗೆದುಕೊಳ್ಳುವುದು ಸಾಧ್ಯವಾಗುವುದಿಲ್ಲ.

ವೀಸಾ ಸೌಲಭ್ಯ

ಈ ಪಾಸ್‌ಪೋರ್ಟ್‌ ಇರುವವರಿಗೆ ಹಲವು ದೇಶಗಳು ವೀಸಾ ವಿಸ್ತರಿಸುತ್ತವೆ. ವೀಸಾ ಮನ್ನಾ ಸೌಲಭ್ಯವೂ ಸಿಗಬಹುದು. ಅಧಿಕೃತ ಪ್ರವಾಸ ಕಾರ್ಯಕ್ರಮಗಳು ಸುಗಮವಾಗುತ್ತದೆ. ಭಾರತೀಯ ರಾಯಭಾರ ಕಚೇರಿಯ ಸಂಪರ್ಕ ಸೌಲಭ್ಯಗಳು ಸಿಗುತ್ತವೆ.

ಪ್ರಜ್ವಲ್‌ಗೆ ಮತ್ತಷ್ಟು ಸಂಕಷ್ಟ ಶುರು

ಪ್ರಜ್ವಲ್‌ ರೇವಣ್ಣ ವಿಚಾರದಲ್ಲಿ ಪ್ರಕರಣವು ರಾಜಕೀಯವಾಗಿ ಭಾರಿ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೊಂದು ದಾಳ ಉರುಳಿಸಿದ್ದಾರೆ. ಪ್ರಜ್ವಲ್‌ ವಿದೇಶದಲ್ಲಿ ಇರುವುದರಿಂದ ಅವರನ್ನು ಬಂಧಿಸಿ ಎಸ್ಐಟಿ ತನಿಖೆಗೆ ಒಪ್ಪಿಸಬೇಕಿದೆ. ಹೀಗಾಗಿ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ಕೇಂದ್ರ ರದ್ದು ಮಾಡಬೇಕು ಎಂದು ಕೋರುವ ಮೂಲಕ ಹೊಸ ದಾಳ ಉರುಳಿಸಿದ್ದಾರೆ. ಈಗ ಕೇಂದ್ರ ಸರ್ಕಾರ ಮುಂದಿನ ಕ್ರಮವನ್ನು ಕೈಗೊಳ್ಳದೇ ಇದ್ದಲ್ಲಿ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ಅಸ್ತ್ರವನ್ನಾಗಿ ಮಾಡಿಕೊಳ್ಳಲು ತೀರ್ಮಾನಿಸಿದೆ. ಹೀಗಾಗಿ ಕಾಂಗ್ರೆಸ್‌ಗೆ ಅಸ್ತ್ರ ಕೊಡದಿರಲು ಕೇಂದ್ರ ಸರ್ಕಾರವು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವ ಸಂಭವ ಜಾಸ್ತಿ ಇದೆ ಎನ್ನಲಾಗಿದೆ.

ಇದನ್ನೂ ಓದಿ: Hassan Pen Drive Case: ವಿಚಾರಣೆಗೆ ಹಾಜರಾಗಲು 7 ದಿನ ಸಮಯ ಕೇಳಿದ ಪ್ರಜ್ವಲ್‌; ಶೀಘ್ರ ಸತ್ಯ ಹೊರಬರಲಿದೆ ಎಂದು ಟ್ವೀಟ್‌!

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ರದ್ದಾದರೆ ಕೂಡಲೇ ಬಂಧನ!

ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಅಂತಾರಾಷ್ಟ್ರೀಯ ಕಾನೂನಿನ ಮಾನ್ಯತೆ ಇರುತ್ತದೆ. ಇದನ್ನು ಹೊಂದಿರುವವರು ಗಣ್ಯ ವ್ಯಕ್ತಿಗಳಾಗಿರುತ್ತಾರೆ. ಹೀಗಾಗಿ ಅವರು ಯಾವ ದೇಶದಲ್ಲಿದ್ದರೂ ಆತಿಥೇಯ ರಾಷ್ಟ್ರಗಳಲ್ಲಿ ಬಂಧನ ಮಾಡುವುದು, ವಶಕ್ಕೆ ತೆಗೆದುಕೊಳ್ಳುವಂತಹ ಕ್ರಮಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಒಂದು ವೇಳೆ ಕೇಂದ್ರ ಸರ್ಕಾರವು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ಅಂತಹ ವ್ಯಕ್ತಿಯ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ, ಕ್ರಮಕ್ಕೆ ಆ ರಾಷ್ಟ್ರಗಳಿಗೆ ಮನವಿ ಮಾಡಿದಲ್ಲಿ ಬಂಧನ ಸಾಧ್ಯವಿದೆ. ಹೀಗಾಗಿ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಪ್ರಜ್ವಲ್‌ ಭವಿಷ್ಯ ನಿಂತಿದೆ.

Continue Reading

ಪ್ರಮುಖ ಸುದ್ದಿ

Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

Prajwal Revanna case: ಲೈಂಗಿಕ ದೌರ್ಜನ್ಯ (Physical abuse) ಹಗರಣದಲ್ಲಿ ಎಸ್‌ಐಟಿ (SIT) A2 ಆಗಿರುವ ಪ್ರಜ್ವಲ್‌ ರೇವಣ್ಣ ಅವರನ್ನು ತನಿಖೆಗೊಳಪಡಿಸುವುದು ಅಗತ್ಯವಾಗಿದ್ದು, ಅವರನ್ನು ಜರ್ಮನಿಯಿಂದ ಕರೆತರಬೇಕಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್‌ ವಿಭಾಗಕ್ಕೆ ಲುಕೌಟ್‌ ನೋಟೀಸ್‌ ಸರ್ವ್‌ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣಗಳ ಇಮಿಗ್ರೇಷನ್‍ಗೆ ಎಸ್‍ಐಟಿ ಅಧಿಕಾರಿಗಳು ಲುಕೌಟ್‌ ನೋಟಿಸ್ ನೀಡಿದ್ದಾರೆ .

VISTARANEWS.COM


on

prajwal revanna case look out notice
Koo

ಬೆಂಗಳೂರು: ಹಾಸನದ ಅಶ್ಲೀಲ ವೀಡಿಯೋ (Obscene video) ಪ್ರಕರಣ ಸಂಬಂಧ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna case) ಅವರಿಗೆ ಕರ್ನಾಟಕ ಸರ್ಕಾರದಿಂದ ಲುಕ್ಔಟ್‌ ನೋಟಿಸ್ (Lookout notice) ಜಾರಿ ಮಾಡಲಾಗಿದೆ.

ಲೈಂಗಿಕ ದೌರ್ಜನ್ಯ (Physical abuse) ಹಗರಣದಲ್ಲಿ ಎಸ್‌ಐಟಿ (SIT) A2 ಆಗಿರುವ ಪ್ರಜ್ವಲ್‌ ರೇವಣ್ಣ ಅವರನ್ನು ತನಿಖೆಗೊಳಪಡಿಸುವುದು ಅಗತ್ಯವಾಗಿದ್ದು, ಅವರನ್ನು ಜರ್ಮನಿಯಿಂದ ಕರೆತರಬೇಕಿದೆ. ವಿಮಾನ ನಿಲ್ದಾಣದ ಇಮಿಗ್ರೇಷನ್‌ ವಿಭಾಗಕ್ಕೆ ಲುಕೌಟ್‌ ನೋಟೀಸ್‌ ಸರ್ವ್‌ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣಗಳ ಇಮಿಗ್ರೇಷನ್‍ಗೆ ಎಸ್‍ಐಟಿ ಅಧಿಕಾರಿಗಳು ಲುಕೌಟ್‌ ನೋಟಿಸ್ ನೀಡಿದ್ದಾರೆ ಎನ್ನಲಾಗಿದ್ದು, ಆ ಮೂಲಕ ಪ್ರಜ್ವಲ್‌ ರೇವಣ್ಣ ಕಾಣಿಸಿಕೊಂಡ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಈ ನಡುವೆ ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ವಿಶೇಷ ತನಿಖಾ ತಂಡಕ್ಕೆ ಮನವಿ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ. ಅವರು ಎಸ್‍ಐಟಿ ಮುಖ್ಯಸ್ಥ ರಿಗೆ ಪತ್ರ ಬರೆದು ಮನವಿ ಸಲ್ಲಿಸಿದ್ದಾರೆ. ಇದರಲ್ಲಿ ಪ್ರಜ್ವಲ್ ಅವರು ಮೇ 15ರಂದು ಭಾರತಕ್ಕೆ ವಾಪಸ್ಸು ಬರುವ ಬಗ್ಗೆ ಮಾಹಿತಿ ದೊರಕಿದೆ. ಆದರೆ ಲುಫ್ತಾನ್ಸಾ ಏರ್ಲೈನ್ಸ್‌ನಲ್ಲಿ ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ಬೆಂಗಳೂರಿಗೆ ಪ್ರಜ್ವಲ್‌ ಬುಕ್‌ ಮಾಡಿದ ಟಿಕೆಟ್‌ನ ಪ್ರತಿ ಲಭ್ಯವಾಗಿದ್ದು, ಮೇ 15ರಂದು ಬುಕ್‌ ಮಾಡಿದ್ದಾರೆ.

ಏನಿದು ಲುಕ್ಔಟ್‌ ನೋಟಿಸ್?

ತಲೆಮರೆಸಿಕೊಂಡಿರುವ ಅಥವಾ ಕಾನೂನು ಜಾರಿ ಸಂಸ್ಥೆಗಳಿಗೆ ಬೇಕಾಗಿರುವ ವ್ಯಕ್ತಿಯು ದೇಶವನ್ನು ತೊರೆಯಲು ಸಾಧ್ಯವಾಗಂತೆ ಖಚಿತಪಡಿಸಿಕೊಳ್ಳಲು ಎಲ್ಒಸಿ ನೀಡಲಾಗುತ್ತದೆ. ಇದನ್ನು ಹೆಚ್ಚಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳು ಮತ್ತು ಬಂದರುಗಳಲ್ಲಿನ ವಲಸೆ ತಪಾಸಣಾ ಕೇಂದ್ರಗಳಲ್ಲಿ ತಪಾಸಣೆಗೆ ಬಳಸಲಾಗುತ್ತದೆ. ಆದರೆ ಪ್ರಜ್ವಲ್‌ ಈಗಾಗಲೇ ಜರ್ಮನಿಯಲ್ಲಿದ್ದು, ವಿಮಾನ ನಿಲ್ದಾಣದಲ್ಲಿ ಮರಳುವ ಹೊತ್ತಿಗೆ ಬಂಧಿಸಲು ಚಿಂತಿಸಲಾಗಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ. ಈ ಮೂಲಕ ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ಸೃಷ್ಟಿಸುವ ತಂತ್ರ ಇದೆಂದು ಹೇಳಲಾಗುತ್ತಿದೆ.

ಪ್ರಜ್ವಲ್ ರೇವಣ್ಣ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಬಳಸಿ ಏಪ್ರಿಲ್ 27-28ರಂದು ರಾತ್ರೋರಾತ್ರಿ ಬೆಂಗಳೂರಿನಿಂದ ಜರ್ಮನಿಗೆ ತೆರಳಿದ್ದಾರೆ. ಆಪಾದಿತ ಲೈಂಗಿಕ ಹಗರಣದ ತನಿಖೆಗೆ ಎಸ್‌ಐಟಿಯನ್ನು ಸ್ಥಾಪಿಸುವ ಕೆಲವೇ ಗಂಟೆಗಳ ಮೊದಲು ಅವರು ಪರಾರಿಯಾಗಿದ್ದಾರೆ. ಮೇ 1ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಮಧ್ಯಪ್ರವೇಶಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಕೇಂದ್ರ ಸರ್ಕಾರದ ಕಚೇರಿಗಳನ್ನು ಬಳಸಿಕೊಂಡು ಪರಾರಿಯಾದ ಸಂಸದರನ್ನು ಭಾರತಕ್ಕೆ ಕರೆತರಲು ಖಚಿತಪಡಿಸಿಕೊಳ್ಳುವಂತೆ ಕೋರಿದ್ದರು.

ತನಿಖೆಗೆ ಅಗತ್ಯವಾದಾಗ ಪ್ರಜ್ವಲ್‌ ಭಾರತಕ್ಕೆ ಮರಳಲಿದ್ದಾನೆ ಎಂದು ಎಚ್‌ ಡಿ ರೇವಣ್ಣ ಹೇಳಿದ್ದಾರೆ. A1 ಆಗಿರುವ ರೇವಣ್ಣ ಅವರೂ ಎಸ್‌ಐಟಿ ಮುಂದೆ ತನಿಖೆಗೆ ಒಳಗಾಗಬೇಕಿದೆ. ಅವರಿಗೂ ನೋಟೀಸ್‌ ಜಾರಿ ಮಾಡಲಾಗಿದೆ. ಇಂದು ಅಥವಾ ನಾಳೆ ಅವರು ತನಿಖೆಗೆ ಹಾಜರಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Hassan Pen Drive Case: ಮೋದಿಯ ʼರಾಜಕೀಯ ಕುಟುಂಬʼದ ಅಪರಾಧಿಗಳಿಗೆ ರಕ್ಷಣೆ ಖಾತ್ರಿಯಾ? ರಾಹುಲ್‌ ಗಾಂಧಿ ಕಿಡಿ

Continue Reading

ಕ್ರೈಂ

Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಡ್ರೈವರ್‌ ಮೊಬೈಲ್‌ಗೆ ಲೀಕ್‌ ಆಗಿದ್ದು ಹೀಗೆ!

Prajwal Revanna Case: ಪ್ರಜ್ವಲ್‌ ರೇವಣ್ಣ ನಡೆಸಿದ ಪ್ರತಿಯೊಂದು ಲೈಂಗಿಕ ಸಾಹಸವನ್ನೂ ಮೊಬೈಲ್‌ನಲ್ಲಿ ಸೆಲ್ಫ್‌ ವಿಡಿಯೋ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಆದರೆ ಎಲ್ಲೂ ಹಂಚಿಕೊಂಡಿರಲಿಲ್ಲ. ಇವು ಪ್ರಜ್ವಲ್ ಮೊಬೈಲ್‌ನಿಂದ ಲೀಕ್ ಆಗಿದ್ದೇ ರೋಚಕ ಎಪಿಸೋಡ್.‌ ಪ್ರಜ್ವಲ್‌ಗೂ ಗೊತ್ತಾಗದಂತೆ ಅವರ ಮೊಬೈಲ್‌ನಿಂದ ವಿಡಿಯೋಗಳನ್ನು ಕಾರ್ತಿಕ್ ಎಗರಿಸಿದ್ದ.

VISTARANEWS.COM


on

prajawal revanna case driver karthik phone
Koo

ಹಾಸನ: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ (Prajwal Revanna Case) ಅಶ್ಲೀಲ ವೀಡಿಯೋ (Obscene video) ಹೊಂದಿದ ಪೆನ್‌ಡ್ರೈವ್ (pendrive) ವೈರಲ್ (viral video) ಆಗಿರುವ ಪ್ರಕರಣದಲ್ಲಿ, ಖತರ್‌ನಾಕ್‌ ಡ್ರೈವರ್‌ ಕಾರ್ತಿಕ್‌ ಬಗ್ಗೆ ಇನ್ನಷ್ಟು ವಿವರಗಳು ಹೊರಬೀಳುತ್ತಿವೆ. ಪ್ರಜ್ವಲ್‌ ರೇವಣ್ಣ ಮಾಡಿಕೊಂಡಿದ್ದ ಅಶ್ಲೀಲ ವಿಡಿಯೋಗಳು ಡ್ರೈವರ್‌ ಕಾರ್ತಿಕ್‌ ಮೊಬೈಲ್‌ಗೆ ದಾಟಿಕೊಂಡದ್ದು ಹೇಗೆ ಅನ್ನುವುದೇ ರೋಚಕವಾದ ಸಂಗತಿಯಾಗಿದೆ.

ಪ್ರಜ್ವಲ್‌ ರೇವಣ್ಣ ನಡೆಸಿದ ಪ್ರತಿಯೊಂದು ಲೈಂಗಿಕ ಸಾಹಸವನ್ನೂ ಮೊಬೈಲ್‌ನಲ್ಲಿ ಸೆಲ್ಫ್‌ ವಿಡಿಯೋ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಆದರೆ ಎಲ್ಲೂ ಹಂಚಿಕೊಂಡಿರಲಿಲ್ಲ. ಇವು ಪ್ರಜ್ವಲ್ ಮೊಬೈಲ್‌ನಿಂದ ಲೀಕ್ ಆಗಿದ್ದೇ ರೋಚಕ ಎಪಿಸೋಡ್.‌ ಪ್ರಜ್ವಲ್‌ಗೂ ಗೊತ್ತಾಗದಂತೆ ಅವರ ಮೊಬೈಲ್‌ನಿಂದ ವಿಡಿಯೋಗಳನ್ನು ಕಾರ್ತಿಕ್ ಎಗರಿಸಿದ್ದ.

ಕಾರ್ತಿಕ್ ಮತ್ತು ಪ್ರಜ್ವಲ್ ಸ್ನೇಹಿತರ ರೀತಿ ಇದ್ದರು. ಪ್ರಜ್ವಲ್ ಮೊಬೈಲ್‌ನಲ್ಲಿ ಈ ಅಶ್ಲೀಲ ವಿಡಿಯೋಗಳು ಇರುವುದು ಕಾರ್ತಿಕ್‌ಗೆ ಗೊತ್ತಿತ್ತು. ಇವನ್ನು ಕದಿಯಲು ಕಾರ್ತಿಕ್‌ ಖತರ್‌ನಾಕ್‌ ಪ್ಲಾನ್‌ ಮಾಡಿಕೊಂಡಿದ್ದ. ಅದಕ್ಕಾಗಿಯೇ ಹೊಸ ಮೊಬೈಲ್ ಖರೀದಿ ಮಾಡಿದ್ದ. 1.45 ಲಕ್ಷ ರೂ. ಕೊಟ್ಟು ಆಪಲ್ ಮೊಬೈಲ್ ಖರೀದಿಸಿ ಏರ್ ಡ್ರಾಪ್ ಮೂಲಕ ಸೆಂಡ್ ಮಾಡಿಕೊಂಡಿದ್ದ.

ನಂತರ ಪ್ರಜ್ವಲ್ ಮೊಬೈಲ್ ಪಾಸ್‌ವರ್ಡ್ ತಿಳಿದುಕೊಂಡಿದ್ದ. ʼBOSS’ ಎಂಬುದನ್ನು ಹೋಲುವ 8055 ಕೊನೆಯ ನಂಬರ್ ಇಟ್ಟುಕೊಂಡಿದ್ದ ಪ್ರಜ್ವಲ್ ರೇವಣ್ಣ ತಮ್ಮ ಮೊಬೈಲ್‌ ಜೊತೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ, ಕಾರಿನಲ್ಲಿಯೇ ನಿದ್ರೆಗೆ ಜಾರಿದಾಗ ಅದರಿಂದ ವಿಡಿಯೋಗಳನ್ನು ತನ್ನ ಹೊಸ ಮೊಬೈಲ್‌ಗೆ ಕಾರ್ತಿಕ್‌ ಬ್ಲೂಟೂತ್‌ ಮೂಲಕ ಸೆಂಡ್ ಮಾಡಿಕೊಂಡಿದ್ದ ಎಂದು ಗೊತ್ತಾಗಿದೆ.

ಎಲ್ಲಿದ್ದಾನೆ ಕಾರ್ತಿಕ್?‌

ಈ ನಡುವೆ ವೈರಲ್ ವೀಡಿಯೋದ ಮೂಲ ವ್ಯಕ್ತಿ, ಡ್ರೈವರ್ ಕಾರ್ತಿಕ್ ನಾಪತ್ತೆಯಾಗಿದ್ದಾನೆ. ಪ್ರಜ್ವಲ್ ರೇವಣ್ಣ ಸಂಸದ ಆಗುವ ಮೊದಲಿನಿಂದಲೂ ಸುಮಾರು 13 ವರ್ಷ ಈತ ಅವರ ಕಾರು ಚಾಲಕನಾಗಿದ್ದ. ಹೊಳೆನರಸೀಪುರ ತಾಲ್ಲೂಕಿನ ಕಡುವಿನಕೋಟೆ‌ ಗ್ರಾಮದ ಕಾರ್ತಿಕ್, ಎರಡು ದಿನಗಳ ಹಿಂದೆಯೇ ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿರುವ ವೀಡಿಯೋ ಬಿಡುಗಡೆ ಮಾಡಿದ್ದ. ಹೀಗಾಗಿ ಎಸ್‌ಐಟಿ ಕೂಡ ಆತನನ್ನು ಟ್ರೇಸ್‌ ಮಾಡಲು ಮುಂದಾಗಿರಲಿಲ್ಲ.

ತಾನೇ ಖುದ್ದು ಎಸ್ಐಟಿ ಮುಂದೆ ಹಾಜರಾಗುವ ಹೇಳಿಕೆ ನೀಡಿದ ಬಳಿಕ ಕಾರ್ತಿಕ್‌ ನಾಪತ್ತೆಯಾಗಿದ್ದಾನೆ. ವೀಡಿಯೋ ಇದ್ದ ಪೆನ್ ಡ್ರೈವ್ ವಕೀಲ ದೇವರಾಜೇ ಗೌಡಗೆ ಕೊಟ್ಟಿದ್ದು ನಾನೇ ಎಂದಿದ್ದ ಕಾರ್ತಿಕ್. ವೀಡಿಯೋಗಳ ಮೂಲ ವ್ಯಕ್ತಿ ನಾನೇ ಅಂದರೂ ಇನ್ನು ಆತನನ್ನು ವಿಚಾರಣೆಗೆ ಒಳಪಡಿಸಿಲ್ಲ. ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್‌ಗೆ ನೊಟೀಸ್ ಅನ್ನೂ ಎಸ್ಐಟಿ ನೀಡಿರಲಿಲ್ಲ.

ಇದೀಗ ಕಾರ್ತಿಕ್ ಮಲೇಷ್ಯಾಗೆ ತೆರಳಿದ್ದಾನೆ; ಈತನ ನಾಪತ್ತೆ ಹಿಂದೆ ಪ್ರಭಾವಿಗಳ ಕೈವಾಡ ಇದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ. ಅವರು ʼರಾಮನಗರ ಬ್ರದರ್ಸ್‌ʼ ಕಡೆ ಕೈತೋರಿಸಿದ್ದಾರೆ. ಎರಡನೇ ಹಂತದ ಚುನಾವಣೆ ಮುಗಿಯುವವರೆಗೂ ಪ್ರಕರಣದ ಬಿಸಿಯನ್ನು ಚಾಲ್ತಿಯಲ್ಲಿಡಲು ಪ್ರಯತ್ನಿಸಲಾಗುತ್ತಿದೆ ಎನ್ನಲಾಗುತ್ತಿದೆ. ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿಕೆ ನೀಡಿ ಎಸ್ಕೇಪ್ ಆಗಿರುವ ಬಗ್ಗೆ ಹಲವು ಅನುಮಾನ ಮೂಡಿದ್ದು, ಕಾರ್ತಿಕ್‌ ಇವರೆಲ್ಲರ ದಾರಿ ತಪ್ಪಿಸಿದನೇ ಅಥವಾ ಇದರ ಹಿಂದಿನ ಮಾಸ್ಟರ್‌ ಮೈಂಡ್‌ಗಳು ಬೇರೆ ಯಾರಾದರೂ ಇದ್ದಾರಾ ಎಂದು ಅನುಮಾನ ಮೂಡಿದೆ.

ಈ ನಡುವೆ ಎಸ್ಐಟಿ ತನಿಖೆ ಚುರುಕುಗೊಳಿಸಿದೆ ಎಂದು ಹೇಳಲಾಗಿದ್ದು, ದೂರುದಾರ ಸಂತ್ರಸ್ತ ಮಹಿಳೆಯರು ಹಾಗೂ ವಿಡಿಯೋಗಳಲ್ಲಿ ಇರುವ ಸಂತ್ರಸ್ತ ಮಹಿಳೆಯರ ವಿಚಾರಣೆ ಮುಂದುವರಿದಿದೆ. ಆದರೆ ದೂರುದಾರೆ ಹೊರತುಪಡಿಸಿ ಇತರ ಮಹಿಳೆಯರು, ತಮ್ಮನ್ನು ತನಿಖೆಗೆ ಬಲವಂತಪಡಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಗುರುತು ಪರಿಚಯ ಬಹಿರಂಗಪಡಿಸಿದರೆ ತಮ್ಮ ಕುಟುಂಬಕ್ಕೆ ಸಮಸ್ಯೆಯಾಗಲಿದ್ದು, ಹೀಗಾಗಿ ತನಿಖೆಗೆ ಬರುವುದಿಲ್ಲ ಎಂದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ವಿಡಿಯೋ ಬಿಟ್ಟ ಕಾರ್ತಿಕ್‌ನನ್ನು ಮಲೇಷ್ಯಾಕ್ಕೆ ಕಳಿಸಿದವರು ಯಾರು?

Continue Reading

ಪ್ರಮುಖ ಸುದ್ದಿ

New Food Rules: ಆಹಾರ ಪದಾರ್ಥಗಳ ಬೆಲೆ ಏರಿಕೆಗೆ ಪಾಕ್‌ ಹೈರಾಣ-ಹೊಸ ಭಕ್ಷ್ಯ ನೀತಿ ಜಾರಿ

New Food Rules: ಪಾಕಿಸ್ತಾನದಲ್ಲಂತೂ ಹಣದುಬ್ಬರ ಸಮಸ್ಯೆ ಹೆಚ್ಚಾಗಿದೆ. ಅದರಲ್ಲೂ 1 ಕೆಜಿ ಗೋಧಿ ಹಿಟ್ಟಿನ ಬೆಲೆ 800 PKR ಆಗಿದೆ. ಹೀಗಾಗಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ಪಾಕಿಸ್ತಾನದ ಸರ್ಕಾರ ಹೊಸ ನಿಯಮವನ್ನು ಜಾರಿಗೆ ತಂದಿದೆ.

VISTARANEWS.COM


on

New Food Rules
Koo

ಪಾಕಿಸ್ತಾನ: ಮದುವೆ ಎಂದ ತಕ್ಷಣ ತಲೆಯಲ್ಲಿ ಒಳ್ಳೆಯ ಊಟದ ಕಲ್ಪನೆ ಬರುವುದು ಸಹಜ. ವಿವಿಧ ರೀತಿಯ ಭಕ್ಷ್ಯ ಭೋಜನಗಳನ್ನು ತಯಾರಿಸುತ್ತಾರೆ. ಆ ವೇಳೆ ಜನರು ತಮಗೆ ಬೇಕಾದಷ್ಟು ಆಹಾರವನ್ನು ಬಡಿಸಿಕೊಂಡು ನಂತರ ಅದನ್ನು ತಿನ್ನದೇ ವ್ಯರ್ಥ ಮಾಡುತ್ತಿರುವುದು ನಾವು ಹಲವು ಮದುವೆ, ಸಮಾರಂಭಗಳಲ್ಲಿ ನೋಡುತ್ತಿರುತ್ತೇವೆ. ಇನ್ನು ಪಾಕಿಸ್ತಾನ(Pakistan)ದಲ್ಲಂತೂ ಹಣದುಬ್ಬರ(Bankruptcy) ಸಮಸ್ಯೆ ಹೆಚ್ಚಾಗಿದೆ. ಅದರಲ್ಲೂ 1 ಕೆಜಿ ಗೋಧಿ ಹಿಟ್ಟಿನ ಬೆಲೆ 800 PKR ಆಗಿದೆ. ಹೀಗಾಗಿ ಆಹಾರ ವ್ಯರ್ಥವಾಗುವುದನ್ನು ತಡೆಯಲು ಪಾಕಿಸ್ತಾನದ ಸರ್ಕಾರ ಹೊಸ ನಿಯಮವನ್ನು ಜಾರಿಗೆ(New Food Rules)ತಂದಿದೆ.

ಪಾಕಿಸ್ತಾನ ಭಾರತದ ನೆರೆಯ ರಾಷ್ಟ್ರ. ಆಗಾಗ ಇತರ ದೇಶಗಳ ಮೇಲೆ ದಂಡೆತ್ತಿ ಬರುವ
ಈ ದೇಶ ಈಗ ಆಹಾರದ ಮುಗ್ಗಟ್ಟು ಮತ್ತು ಹಣದುಬ್ಬರ ಸಮಸ್ಯೆಯಿಂದ ಒದ್ದಾಡುತ್ತಿದೆ. ಹಾಗಾಗಿ ತಮ್ಮ ಈ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಹಲವಾರು ಮಾರ್ಗಗಳನ್ನು ಹುಡುಕುತ್ತಿದೆ. ಅದರಂತೆ ಇದೀಗ ಆಹಾರ ಮುಗ್ಗಟ್ಟನ್ನು ನಿವಾರಿಸಲು ಮದುವೆ ಮತ್ತು ಸಮಾರಂಭಗಳಲ್ಲಿ ನೀಡುವ ಊಟದ ಮೇಲೆ ತನ್ನ ಕಣ್ಣಿಟ್ಟಿದೆ. ಆಹಾರ ವ್ಯರ್ಥವಾಗುವುದನ್ನು ತಡೆಯಲು ಹೊಸ ಮಾರ್ಗವನ್ನು ಕಂಡುಕೊಂಡಿದೆಯಂತೆ.

ಪಂಜಾಬ್ ಪ್ರಾಂತ್ಯದ ಸಿಎಂ ಮರ್ಯಮ್ ನವಾಜ್ ಅವರು ‘ಒಂದು ಭಕ್ಷ್ಯ’ ನೀತಿಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ನಿರ್ಧರಿಸಿದ್ದಾರೆ. ಈ ನೀತಿಯ ಪ್ರಕಾರ ಮದುವೆಯ ಪಾರ್ಟಿಗಳಲ್ಲಿ ಒಂದಕ್ಕಿಂತ ಹೆಚ್ಚು ಭಕ್ಷ್ಯಗಳನ್ನು ಅನುಮತಿಸಲಾಗುವುದಿಲ್ಲ. ಅಂದರೆ ಊಟದ ಮೆನುವಿನಲ್ಲಿ ಕೇವಲ ಒಂದು ತರಕಾರಿ, ಅನ್ನ, ರೊಟ್ಟಿ, ದಾಲ್, ಸಲಾಡ್, ತಂಪು ಪಾನೀಯ ಮತ್ತು ಒಂದು ಸಿಹಿತಿಂಡಿ ನೀಡಲು ಅನುಮತಿಸಲಾಗಿದೆ.

ಬಹು ಖಾದ್ಯಗಳನ್ನು ತಯಾರಿಸುವುದರಿಂದ ಅದು ಅನಗತ್ಯ ವೆಚ್ಚಕ್ಕೆ ಕಾರಣವಾಗುತ್ತದೆ ಎಂದು ಸಿಎಂ ಹೇಳಿದ್ದಾರೆ. ಅಲ್ಲದೇ ಈ ನೀತಿಯನ್ನು 2016ರಲ್ಲಿ ಮೊದಲು ಜಾರಿಗೆ ತರಲಾಯಿತು. ಆದರೆ ಜನರು ಅದನ್ನು ಅನುಸರಿಸಲಿಲ್ಲ. ಇದೀಗ ಈ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. ಈ ಕ್ರಮವನ್ನು ಪಾಲಿಸದಿರುವವರಿಗೆ ದಂಡ ವಿಧಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಡಯಬಿಟಿಕ್‌ ಚಟ್ನಿ ನಿಮಗೆ ಗೊತ್ತೆ? ಇದು ಮಧುಮೇಹಿಗಳಿಗೆ ಉಪಯುಕ್ತ

ಪಾಕಿಸ್ತಾನವು ಪ್ರಸ್ತುತ ದಿನಗಳಲ್ಲಿ ಹಣಕಾಸಿನ ಸಮಸ್ಯೆಯನ್ನು ಹೆಚ್ಚಿನ ಮಟ್ಟದಲ್ಲಿ ಅನುಭವಿಸುತ್ತಿದೆ. ಹಾಗಾಗಿ ಇತ್ತೀಚೆಗೆ ಪ್ರಧಾನಿ ಮಂತ್ರಿ ಶೆಹಬಾಜ್ ಷರೀಫ್ ವಿತ್ತೀಯ ಸಹಾಯವನ್ನು ಪಡೆಯಲು ಸೌದಿ ಅರೇಬಿಯಾಕ್ಕೆ ಹೋದರು. ಆದರೆ ಆ ಕಾರ್ಯ ಯಶಸ್ವಿಯಾಗಲಿಲ್ಲ. ಪಾಕಿಸ್ತಾನದಲ್ಲಿ ಹಣದುಬ್ಬರ ಎಷ್ಟಿದೆಯೆಂದರೆ ಸಾಮಾನ್ಯ ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗಿದೆ. ಉದಾಹರಣೆಗೆ ಒಂದು ಕಿಲೋ ಗೋಧಿ ಹಿಟ್ಟಿನ ಬೆಲೆ ಈಗ 800 PKR (ಪಾಕಿಸ್ತಾನ ಕರೆನ್ಸಿ)ಆಗಿದೆ. ಒಂದು ರೊಟ್ಟಿ ಬೆಲೆ 25 PKRಆಗಿದೆ. ಬಾಳೆಹಣ್ಣಿನ ಬೆಲೆ 150-200 PKR ಆಗಿದೆಯಂತೆ.

Continue Reading
Advertisement
prajwal revanna case lookout notice
ಕ್ರೈಂ55 seconds ago

Prajwal Revanna Case: ಏನಿದು ಲುಕ್ ಔಟ್ ನೋಟಿಸ್? ಜಾರಿ ಅಧಿಕಾರ ಯಾರಿಗೆ? ಇದಕ್ಕೂ ತಡೆ ತರಬಹುದಾ?

School Jobs Scam
Lok Sabha Election 20249 mins ago

School Jobs Scam: ಶಾಲಾ ನೇಮಕಾತಿ ಹಗರಣದ ಬಗ್ಗೆ ಟಿಎಂಸಿಗೆ ತಿಳಿದಿತ್ತು; ಹಿರಿಯ ನಾಯಕ ಕುನಾಲ್ ಘೋಷ್ ಆರೋಪ

elephant attack
ಬೆಂಗಳೂರು ಗ್ರಾಮಾಂತರ9 mins ago

Elephant attack : ಜಮೀನಿಗೆ ತೆರಳಿದ್ದ ರೈತನ ಅಟ್ಟಾಡಿಸಿ ಕೊಂದ ಒಂಟಿ ಸಲಗ

Delhi Lieutenant Governor
ದೇಶ20 mins ago

Delhi Lieutenant Governor: ದೆಹಲಿಯ DCW ಗುತ್ತಿಗೆ ನೌಕರರಿಗೆ ಬಿಗ್‌ ಶಾಕ್‌; 220ಕ್ಕೂ ಹೆಚ್ಚು ನೌಕರರು ವಜಾ

Prajwal Revanna Case Application seeking exemption from appearing before SIT rejected
ಕ್ರೈಂ24 mins ago

Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

IPL 2024
ಕ್ರೀಡೆ24 mins ago

IPL 2024: ಕೊಹ್ಲಿಯನ್ನು ಹಿಂದಿಕ್ಕಿ ಆರೆಂಜ್​ ಕ್ಯಾಪ್​ ಪಡೆದ ಗಾಯಕ್ವಾಡ್​; ಪರ್ಪಲ್​ ಕ್ಯಾಪ್​ ಹೋಲ್ಡರ್​ ಯಾರು?

Temperature Warning
ರಾಯಚೂರು26 mins ago

Temperature Warning : ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

Swara Bhasker reveals big difference between Kangana Ranaut and herself
ಬಾಲಿವುಡ್27 mins ago

Swara Bhasker: ಕಂಗನಾ- ಸ್ವರಾ ಭಾಸ್ಕರ್ ನಡುವಿನ ದೊಡ್ಡ ವ್ಯತ್ಯಾಸವೇನು? ನಟಿಯ ಬಾಯಲ್ಲೇ ಕೇಳಿ!

Yakshagana Artist No more
ದಕ್ಷಿಣ ಕನ್ನಡ46 mins ago

Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

prajwal revanna case look out notice
ಪ್ರಮುಖ ಸುದ್ದಿ53 mins ago

Prajwal Revanna case: ತಲೆಮರೆಸಿಕೊಂಡ ಪ್ರಜ್ವಲ್‌ ರೇವಣ್ಣಗೆ ಲುಕೌಟ್‌ ನೋಟಿಸ್‌ ಜಾರಿ, ಬಂದ ಕೂಡಲೇ ಬಂಧನ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ8 hours ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20244 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20244 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಟ್ರೆಂಡಿಂಗ್‌