ವಿಸ್ತಾರ ಮೀಡಿಯಾ: ಏನು, ಎತ್ತ? | ಸಿಇಒ, ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಮುಕ್ತ ಮಾತು - Vistara News

ಪ್ರಮುಖ ಸುದ್ದಿ

ವಿಸ್ತಾರ ಮೀಡಿಯಾ: ಏನು, ಎತ್ತ? | ಸಿಇಒ, ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಮುಕ್ತ ಮಾತು

ವಿಸ್ತಾರ ಮೀಡಿಯಾ ಪ್ರೈ. ಲಿ. ಸಂಸ್ಥೆಯ ಟಿವಿ ಚಾನೆಲ್‌ನ ಲೋಗೊ ಮತ್ತು ವಿಸ್ತಾರ ಡಿಜಿಟಲ್ ನ್ಯೂಸ್ ವೆಬ್‌ಸೈಟ್ ಅನಾವರಣಗೊಂಡಿದೆ. ಈ ಮಾಧ್ಯಮ ಸಂಸ್ಥೆ ಆರಂಭಿಸಿರುವ ಉದ್ದೇಶ ಏನು? ಇದರ ಗುರಿ ಏನು? ಧ್ಯೇಯ ಧೋರಣೆಗಳೇನು ಎಂಬ ಬಗ್ಗೆ ಸಂಸ್ಥೆಯ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಅವರು ಇಲ್ಲಿ ಮುಕ್ತವಾಗಿ ವಿವರಿಸಿದ್ದಾರೆ.

VISTARANEWS.COM


on

Hariprakash Konemane
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನಮಸ್ಕಾರ..
ನಾನು ಮಾಧ್ಯಮ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಬರೊಬ್ಬರಿ ಇಪ್ಪತ್ತು ವರ್ಷಗಳಾದವು. ಇದುವರೆಗೆ ಹೆಚ್ಚು ಕಾಲ ಮುದ್ರಣ ಮಾಧ್ಯಮದಲ್ಲಿ, ಅಲ್ಪಕಾಲ ಟಿವಿ ಮಾಧ್ಯಮದಲ್ಲಿ ಕೆಲಸ ಮಾಡಿ ಇದೀಗ ಸಂಪೂರ್ಣವಾಗಿ ಡಿಜಿಟಲ್ ಮತ್ತು ಟಿವಿ ಮಾಧ್ಯಮದ ಕಡೆಗೆ ಮುಖ ಮಾಡಿದ್ದೇನೆ.

ಈ ಬದಲಾವಣೆ ಪರ್ವದಲ್ಲಿ ಅನೇಕರು ಅನೇಕ ತೆರನಾದ ಪ್ರಶ್ನೆಗಳನ್ನು ಕೇಳಿದ್ದಾರೆ, ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ, ಸಲಹೆ-ಸೂಚನೆಗಳನ್ನು ನೀಡಿದ್ದಾರೆ. ಆ ಎಲ್ಲ ಸಂಗತಿಗಳನ್ನು ಒಂದೆಡೆ ಕ್ರೋಡೀಕರಿಸಿ, ಹಲವು ವಿಚಾರಗಳಿಗೆ ಸಂಬಂಧಿಸಿದ ಅಭಿಪ್ರಾಯ / ನಿಲುವನ್ನು ಹಂಚಿಕೊಳ್ಳುವ ಪುಟ್ಟ ಯತ್ನ ನನ್ನದು. ಇದನ್ನು ನನ್ನೆಲ್ಲ ಓದುಗರು ಹಾಗೂ ವೀಕ್ಷಕರೊಂದಿಗಿನ ಮುಕ್ತ ಮಾತು ಎಂದರೆ ಚೆನ್ನ.

ಪ್ರಶ್ನೆ: ಮುದ್ರಣ ಮಾಧ್ಯಮ ಕ್ಷೇತ್ರದಲ್ಲೇ ಬಹುಕಾಲ ಇದ್ದವರು ನೀವು. ಈ ಹಿಂದೆ ವಿಜಯವಾಣಿ ಸಂಪಾದಕರಾಗಿದ್ದಿರಿ, ಇದೀಗ ವಿಜಯಕರ್ನಾಟಕ ಪತ್ರಿಕೆ ಸಂಪಾದಕ ಸ್ಥಾನ ತೊರೆದು ಡಿಜಿಟಲ್ ಮಾಧ್ಯಮ ಮತ್ತು ಟಿವಿಯತ್ತ ಬಂದಿದ್ದೀರಿ. ಈ ಮಹತ್ವದ ನಿರ್ಧಾರಕ್ಕೆ ಮುಖ್ಯ ಕಾರಣ ಏನು?

ಉತ್ತರ: ಒಟ್ಟಾರೆ ಮಾಧ್ಯಮ ಕ್ಷೇತ್ರವೇ ವೇಗವಾಗಿ ಬದಲಾಗುತ್ತಿದೆ. ಬದಲಾಗುತ್ತಿದೆ ಎಂದರೆ ತಪ್ಪಾಗಬಹುದು. ಅದಕ್ಕಿಂತ ಹೆಚ್ಚಾಗಿ Evolve ಆಗುತ್ತಿದೆ / ವಿಕಾಸವಾಗುತ್ತಿದೆ ಎಂಬುದು ಸರಿಯಾದ ಹೇಳಿಕೆ. ಸಂಘಜೀವಿಯಾದ ಮಾನವ ತನ್ನದೇ ಸ್ಥಳೀಯ ಜಗತ್ತಿನಲ್ಲಿ ಏನಾಗುತ್ತಿದೆ ಎಂಬುದನ್ನು ತಿಳಿಯಬೇಕೆಂಬುದರ ಜತೆಗೆ ಪ್ರಪಂಚದ ಬೇರೆಡೆಗಳಲ್ಲೂ ಏನಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳಲು ಹಿಂದೆಂದಿಗಿಂತಲೂ ಇಂದು ಹೆಚ್ಚು ಕುತೂಹಲಿಯಾಗಿದ್ದಾನೆ. ಆ ಹಂಬಲದ ಜತೆಗೆ, ಇಂದು, ಆತನಿಗೆ ಅದರ ಅನಿವಾರ್ಯತೆಯೂ ಬಂದೊದಗಿದೆ.

ಕಾಲಾನುಕ್ರಮದಲ್ಲಿ, ತಂತ್ರಜ್ಞಾನ ವಿಕಾಸಗೊಂಡಂತೆ ಮಾಹಿತಿಯನ್ನು ಪಡೆಯುವ ಅಥವಾ ಆ ಮಾಹಿತಿಯನ್ನು Consumption ಮಾಡುವ ವಿಧಾನದಲ್ಲಿ ತೀವ್ರತರವಾದ ಬದಲಾವಣೆ ಆಗುತ್ತಿದೆ. ಜನರು ತಮ್ಮ ಕೈಲಿರುವ ಮೊಬೈಲ್ ಫೋನ್‌, ಲ್ಯಾಪ್ ಟಾಪ್, ಡೆಸ್ಕ್ ಟಾಪ್, ಟ್ಯಾಬ್‌ಗಳ ಮೂಲಕವೇ ಇಡೀ ಜಗತ್ತನ್ನು ನೋಡಲು, ತಿಳಿಯಲು ಬಯಸುತ್ತಿದ್ದಾರೆ. ಈ ಹಿಂದೆಲ್ಲ ಓದಲು ಪುಸ್ತಕಗಳು, ಪತ್ರಿಕೆಗಳು ಇತ್ಯಾದಿ; ಆಡಿಯೊ ಕೇಳಲು ರೇಡಿಯೊ; ವಿಡಿಯೊ ವೀಕ್ಷಿಸಲು ಟಿವಿ, ಸಿಡಿಗಳ ಮೊರೆ ಹೋಗಬೇಕಿತ್ತು. ಕೇವಲ ಸಂವಹನ, ಸಂಭಾಷಣೆಯ ಮಾಧ್ಯಮವಾಗಿ ಎಂಟ್ರಿ ಪಡೆದ ಮೊಬೈಲ್ ಲೆಕ್ಕ (Compute) ಮಾಡಲೆಂದು ಬಂದ ಕಂಪ್ಯೂಟರ್‌ಗಳು ಈಗ ಆ ಮೂರೂ ಅಂಶಗಳನ್ನು ಒಳಗೊಂಡಿವೆ. ಅಂದರೆ ಅಕ್ಷರ, ಆಡಿಯೊ, ವಿಡಿಯೊಗಳನ್ನು ಒಟ್ಟಿಗೇ ಒದಗಿಸುತ್ತಿದೆ. ಈ ಕ್ಷೇತ್ರದಲ್ಲಿ ಭವಿಷ್ಯದಲ್ಲೂ ಕೂಡ ಕ್ಷಿಪ್ರಗತಿಯ ಬದಲಾವಣೆ ಆಗುವುದಿದೆ. ಈ ವಾಸ್ತವದ ತಳಹದಿಯಲ್ಲಿ ಮಾಧ್ಯಮ ಸಂಸ್ಥೆ ಕಟ್ಟುವ ಬಯಕೆಯನ್ನು ನಾವು ಹೊಂದಿದ್ದೇವೆ.

ಪ್ರಶ್ನೆ: ಹಾಗಾದರೆ ಪ್ರಿಂಟ್ ಮಾಧ್ಯಮಕ್ಕೆ ಭವಿಷ್ಯವೇ ಇಲ್ಲವೇ?
ಉತ್ತರ: ಪ್ರಿಂಟ್ ಮಾಧ್ಯಮಕ್ಕೆ ಭವಿಷ್ಯ ಇದೆ ಅಥವಾ ಇಲ್ಲ ಎಂಬ ಎರಡೂ ವಾದಗಳು ಸತ್ಯ. ಹೌದು, ಈಗಿರುವ ಫಾರ್ಮೇಟ್‌ನಲ್ಲಿ ಮುಂದುವರಿದರೆ ಪ್ರಿಂಟ್ ಮಾಧ್ಯಮಕ್ಕೆ ಭವಿಷ್ಯ ಇಲ್ಲ. ಫಾರ್ಮೇಟ್ ಬದಲಿಸಿಕೊಂಡರೆ ಪ್ರಿಂಟ್ ಮಾಧ್ಯಮಕ್ಕೆ ಭವಿಷ್ಯ ಇದೆ. ನಿನ್ನೆ ಮೊನ್ನೆ ನಡೆದ ಹಳೆಯ ಘಟನೆಗಳನ್ನು ವರದಿ ಮಾಡುವುದಕ್ಕಷ್ಟೇ ಪತ್ರಿಕೆಗಳನ್ನು ಪ್ರಿಂಟ್ ಮಾಡುವುದು It is a national waste in my opinion! ಇದನ್ನು ಯಾರೂ ಅನ್ಯಥಾ ಭಾವಿಸಬಾರದು.

ಪ್ರಶ್ನೆ: ಈಗಾಗಲೇ ಡಿಜಿಟಲ್ ಮಾಧ್ಯಮದಲ್ಲಿ ಸಾಕಷ್ಟು ಪ್ಲೇಯರ್‌ಗಳಿದ್ದಾರೆ. ಡಿಜಿಟಲ್ ಮಾಧ್ಯಮ ಸಂಸ್ಥೆಗಳಿವೆ. ಟಿವಿ ಚಾನೆಲ್‌ಗಳೂ ಇವೆ. ಇಷ್ಟೆಲ್ಲದರ ನಡುವೆ ಹೊಸ ಮಾಧ್ಯಮಕ್ಕೆ ಸ್ಥಳಾವಕಾಶ (Space) ಇದೆಯೇ?

ಉತ್ತರ: ನೋಡಿ, ಯಾವುದಕ್ಕೂ, ಯಾರೊಬ್ಬರಿಗೂ ಎಲ್ಲೂ ಸ್ಪೇಸ್ ರಿಸರ್ವ್ ಆಗಿರುವುದಿಲ್ಲ. ಭಾರತದಂತಹ ಜನದಟ್ಟಣೆಯ ದೇಶದಲ್ಲಂತೂ ಸ್ಪೇಸ್ ರಿಸರ್ವ್ ಆಗಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಆದರೆ ಅದನ್ನೇ ಪಾಸಿಟಿವ್ ಆಗಿ ನೋಡಿದರೆ, ಭಾರತದಂತಹ ದೇಶದಲ್ಲಿ ಅಗಾಧ ಜನಸಂಖ್ಯೆಯ ಅವಶ್ಯಕತೆಗಳನ್ನು ಪೂರೈಸಲು ಅದೆಷ್ಟೇ ಸೇವಾಕರ್ತರು ಬಂದರೂ ಎಲ್ಲ ಕ್ಷೇತ್ರಗಳಲ್ಲಿ ಸ್ಪೇಸ್ ಸಿಕ್ಕೇ ಸಿಗುತ್ತದೆ. ಅಂದರೆ ಎಷ್ಟೇ ಹೊಸ ಹೊಸ ಸಂಸ್ಥೆಗಳು ಬಂದರೂ ಎಲ್ಲರನ್ನೂ ತಲುಪಲಾಗದಷ್ಟು ದೊಡ್ಡ, ಸಂಕೀರ್ಣ, ವೈವಿಧ್ಯಮಯ ದೇಶ ನಮ್ಮದು. ನಾವು ಹೇಗೆ ವಿಚಾರಗಳನ್ನು ಗ್ರಹಿಸುತ್ತೇವೆ ಮತ್ತು ಪ್ರಸ್ತುತಪಡಿಸುತ್ತೇವೆ ಎಂಬುದರ ಮೇಲೆ ಸ್ಪೇಸ್ ಇದೆಯೇ ಇಲ್ಲವೇ ಎಂಬುದು ನಿರ್ಧರಿತವಾಗುತ್ತದೆ. ಉದಾ: ಕನ್ನಡ ಮಾಧ್ಯಮ ಲೋಕದಲ್ಲಿ ವಿಜಯ ಕರ್ನಾಟಕ ಪತ್ರಿಕೆ ಬರುವ ಮುನ್ನ ʼಮುದ್ರಣ ಮಾಧ್ಯಮದಲ್ಲಿ ಈಗಾಗಲೇ ದಿಗ್ಗಜರಿದ್ದಾರೆ ಎಲ್ಲಿ ಸ್ಪೇಸ್ ಇದೆ?ʼ ಎಂಬ ಪ್ರಶ್ನೆ ಇತ್ತು. ಅದರ ಬೆನ್ನಲ್ಲೇ ವಿಜಯವಾಣಿ ಪತ್ರಿಕೆ ಬಂದಾಗಲಂತೂ ಇದೇ ಪ್ರಶ್ನೆಯನ್ನು ಹೋದಲ್ಲಿ ಬಂದಲ್ಲಿ ಕೇಳುತ್ತಿದ್ದರು. ವಿಜಯ ಕರ್ನಾಟಕವನ್ನು ನಂಬರ್ ಒನ್ ಪತ್ರಿಕೆ ಮಾಡಲು ಆರೇಳು ವರ್ಷ ಹಿಡಿಯಿತು. ಆದರೆ ವಿಜಯವಾಣಿ ಪತ್ರಿಕೆ ಕೇವಲ 24 ತಿಂಗಳಲ್ಲಿ ನಂಬರ್ ಒನ್ ಪತ್ರಿಕೆಯಾಗಿ ದೇಶದ ಮಾಧ್ಯಮ ಇತಿಹಾಸದಲ್ಲಿ ಹೊಸ ದಾಖಲೆ ಬರೆಯಿತು. ಹೊಸ ಪತ್ರಿಕೆ ಆಗಮನದಿಂದ ಕನ್ನಡದ ಪತ್ರಕರ್ತರಿಗೆ, ಓದುಗರಿಗೆ, ವಿತರಕರಿಗೆ, ಜಾಹೀರಾತುದಾರರಿಗೆ ದೊಡ್ಡ ಲಾಭ ಆಯಿತು. ಕನ್ನಡ ಮಾಧ್ಯಮ ಅಗಾಧವಾಗಿ ವಿಸ್ತಾರವಾಯಿತು. ಆ ವಿಷಯದಲ್ಲಿ ಡಾ. ವಿಜಯ ಸಂಕೇಶ್ವರರಿಗೆ ನನ್ನದೊಂದು ದೊಡ್ಡ ಸಲಾಮು ಸದಾ ಇರುತ್ತದೆ. ಇನ್ನೂ ಒಂದು ವಿಚಾರ ಏನೆಂದರೆ ವಿಜಯ ಕರ್ನಾಟಕ, ವಿಜಯವಾಣಿ ಪತ್ರಿಕೆಗಳು ಬರುವ ಪೂರ್ವದಲ್ಲಿ ಹಾಗೂ ಆನಂತರ ಅನೇಕ ಪತ್ರಿಕೆಗಳು ಬಂದಿದ್ದವು. ಅವೆಲ್ಲವೂ ಬದುಕಲಿಲ್ಲ, ಬಾಳಲಿಲ್ಲ. ವೆರಿ ಸಿಂಪಲ್ ಆಗಿ ಹೇಳಬೇಕೆಂದರೆ ಹುಟ್ಟುವ ಪ್ರತಿ ಮಗು ನನಗೆಲ್ಲಿ ಸ್ಪೇಸ್ ಎಂದು ಕೇಳಿದ್ದರೆ ಜಗತ್ತು ಏನಾಗುತ್ತಿತ್ತು? ಹುಟ್ಟಿದ ಮಕ್ಕಳೆಲ್ಲ ಬಾಳುತ್ತಾರಾ? ಈ ವಿಷಯದಲ್ಲಿ ಡಾರ್ವಿನ್ನನ ಥಿಯರಿ ಹೆಚ್ಚು ಪ್ರಸ್ತುತ. ಫಿಟ್ ಆ್ಯಂಡ್ ಫೈನ್ ಆಗಿರಬೇಕೆನ್ನುವವರಿಗೆ ಸ್ಪೇಸ್ ಸದಾ ಇದ್ದೇ ಇರುತ್ತದೆ.

ಪ್ರಶ್ನೆ: ಹಾಗಾದರೆ ಕರ್ನಾಟಕದ ಡಿಜಿಟಲ್ ಹಾಗೂ ಟಿವಿ ಕ್ಷೇತ್ರದಲ್ಲಿ ಓದುಗರು ಮತ್ತು ವೀಕ್ಷಕರನ್ನು ಪಡೆಯಲು ದೊಡ್ಡ ಹಗ್ಗ ಜಗ್ಗಾಟ ಶುರುವಾಗುತ್ತದೆಯೇ?

ಉತ್ತರ: ಖಂಡಿತ ಇಲ್ಲ, ಇದು ಒಬ್ಬರ ಗ್ರಾಹಕರನ್ನು ಇನ್ನೊಬ್ಬರು ಸೆಳೆಯುವ ಮಾತಲ್ಲ.

ನಾವು ಸ್ಪೇಸ್ ಪಡೆದುಕೊಳ್ಳಲು ಇನ್ನೊಬ್ಬರು ಕಳೆದುಕೊಳ್ಳಬೇಕೆಂದಿಲ್ಲ. ಒಬ್ಬರ ಬೆಳೆವಣಿಗೆಗೆ ಮತ್ತು ಇನ್ನೊಬ್ಬರ ಅವನತಿಗೆ ಅದರದ್ದೇ ಆದ ಕಾರ್ಯಕಾರಣಗಳಿರುತ್ತವೆ.

ಉದಾಹರಣೆಗೆ ನಾನು ಪ್ರಧಾನ ಸಂಪಾದಕನಾಗಿ ಕೆಲಸ ಮಾಡಿದ ವಿಜಯವಾಣಿ ಹಾಗೂ ವಿಜಯ ಕರ್ನಾಟಕ ಪತ್ರಿಕೆಗಳ ಸಫಲತೆಯಲ್ಲಿ ಒಬ್ಬರ ಗ್ರಾಹಕರನ್ನು ಇನ್ನೊಬ್ಬರು ಕಿತ್ತುಕೊಳ್ಳುವ ಆಟ ನಡೆಯಲೇ ಇಲ್ಲ. ಬದಲಾಗಿ ಸ್ಪರ್ಧಾತ್ಮಕತೆಯಲ್ಲಿ ಎಲ್ಲರೂ ಒಂದಿಷ್ಟು ಹೊಸತನ ಮತ್ತು ಹೊಸ ಗ್ರಾಹಕರನ್ನು ಪಡೆದರು. ಆ ಎರಡೂ ಸಂದರ್ಭಗಳಲ್ಲಿ ಕನ್ನಡ ಪತ್ರಿಕೆಗಳ ಓದುಗರ ಸಂಖ್ಯೆ ಹಿಗ್ಗಿತು. ಹೊಸ ಓದುಗರನ್ನು ಸೆಳೆಯುವ ಯತ್ನದಲ್ಲಿ ಯಶಸ್ಸು ಸಿಕ್ಕಿತು.

ಒಟ್ಟಿನಲ್ಲಿ, ಹೊಸತನ ತರಬಲ್ಲ ಮಾಧ್ಯಮಗಳು ಬಂದರೆ, ಮಾರುಕಟ್ಟೆ ತನ್ನಿಂತಾನೆ ವಿಸ್ತರಿಸುತ್ತದೆ ಎನ್ನುವುದು ಸ್ಥಾಪಿತವಾಗಿದೆ. ಇದರಿಂದ ಇಡೀ ಮಾಧ್ಯಮ ಲೋಕಕ್ಕೆ ಲಾಭವಾಗಿದೆ. ವಿಸ್ತಾರ, ಹೆಸರಿಗೆ ತಕ್ಕಂತೆ ಮಾಧ್ಯಮ ಜಗತ್ತನ್ನೂ, ಜನರ ಮನಸ್ಸನ್ನೂ ವಿಸ್ತರಿಸುವ ಪ್ರಯತ್ನ ಮಾಡಲಿದೆ.  ಇದುವರೆಗೆ ಯಾರೂ ತಲುಪದ ಗಮ್ಯವನ್ನು ತಲುಪಬೇಕೆಂಬ ಹಂಬಲ ಇದೆ, ಗುರಿ ಇದೆ. ಆ ನಿಟ್ಟಿನಲ್ಲಿ ಸ್ಪಷ್ಟವಾದ ಕಾರ್ಯಸೂಚಿಯನ್ನು ಸಿದ್ಧಪಡಿಸಿಕೊಂಡು ಹೆಜ್ಜೆ ಮುಂದಿಡುತ್ತಿದ್ದೇವೆ.

ಸಂಸ್ಥೆಯ ಚೇರ್ಮನ್‌ ಮತ್ತು ಎಂ.ಡಿ. ಎಚ್. ವಿ. ಧರ್ಮೇಶ್, ಸಂಸ್ಥೆಯ ನಿರ್ದೇಶಕರಾದ ಶ್ರೀನಿವಾಸ ಹೆಬ್ಬಾರ್ ಅವರ ಜತೆ ಸಿಇಒ ಮತ್ತು ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ

ಪ್ರಶ್ನೆ: ಮಾಧ್ಯಮ ಸಂಸ್ಥೆ ಆರಂಭಕ್ಕೆ ದೊಡ್ಡ ಮಟ್ಟದ ಹೂಡಿಕೆ ಬೇಕಾಗುತ್ತದಲ್ಲವೇ? ಬರೀ ಪತ್ರಕರ್ತರಾಗಿದ್ದ ನೀವು ಮಾಧ್ಯಮ ಸಂಸ್ಥೆ ಆರಂಭಿಸುವುದರ ಹಿಂದಿನ ಹೂಡಿಕೆದಾರರು ಯಾರು? ರಾಜಕೀಯದವರೇನಾದರೂ…

ಉತ್ತರ: ಪ್ರಸಕ್ತ ಸನ್ನಿವೇಶದಲ್ಲಿ ಇದು ಎಲ್ಲರೂ ಕೇಳುವ ಮತ್ತು ಉತ್ತರಿಸಲೇಬೇಕಾದ ಮುಖ್ಯ ವಿಚಾರ. ಮಾಧ್ಯಮವೂ ಸೇರಿದಂತೆ ಯಾವುದೇ ಸಂಸ್ಥೆಯನ್ನು ಆರಂಭಿಸಲು ಈಗ ಬಂಡವಾಳ ಅಥವಾ ಹೂಡಿಕೆ ಸಮಸ್ಯೆಯೇ ಅಲ್ಲ. ಶ್ರೀಮಂತರು ಮಾತ್ರ ಸಂಸ್ಥೆ ಕಟ್ಟಬಹುದು ಎಂಬ ಹಳೆಯ ಸೂತ್ರ ಈಗ ಬದಲಾಗಿದೆ. ಕೈಯಲ್ಲಿ ಒಂದು ರೂ. ಇಲ್ಲದಿದ್ದರೂ ಪ್ರತಿಭೆ, ಐಡಿಯಾ ಮತ್ತು ಕೌಶಲ ಇದ್ದರೆ ಈಗ ಯಾರು ಬೇಕಾದರು ಹೊಸ ಸಂಸ್ಥೆಯನ್ನು ಕಟ್ಟಿ ಬೆಳೆಸಬಹುದು. ಇಂಥ ಕಡೆ ಹಣ ಹೂಡಲು ದೇಶದಿಂದ ಮಾತ್ರವಲ್ಲ, ವಿದೇಶಗಳಿಂದಲೂ ಸಾಕಷ್ಟು ಉತ್ಸಾಹಿಗಳು ಮುಂದೆ ಬರುತ್ತಾರೆ. ವೃತ್ತಿಪರತೆ, ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆ ಈ ವ್ಯವಸ್ಥೆಯಲ್ಲಿನ ಮತ್ತೊಂದು ಹೆಚ್ಚುಗಾರಿಕೆ. ನಮ್ಮ ದೇಶದಲ್ಲಿ ಹಲವಾರು ಪ್ರತಿಭಾವಂತರು ಯಾವುದೇ ಸ್ವಂತ ಬಂಡವಾಳದ ಬಲ ಇಲ್ಲದೆ ಸ್ಟಾರ್ಟ್ಅಪ್ ಆರಂಭಿಸಿ ಸಾವಿರ ಕೋಟಿ ರೂ. ವಹಿವಾಟು ದಾಟಿರುವ ಸಾಧನೆ ನಮ್ಮ ಕಣ್ಣ ಮುಂದೆಯೇ ಇದೆ.

ಖಡಾಖಂಡಿತವಾಗಿ ಹೇಳಬೇಕಾದ ಸಂಗತಿಯೆಂದರೆ ನಮ್ಮ ಸಂಸ್ಥೆ ರಾಜಕೀಯದವರ ಹಣವನ್ನು ಇಲ್ಲಿಯವರೆಗೆ ಪಡೆದಿಲ್ಲ ಮತ್ತು ಮುಂದೆಯೂ ಪಡೆಯುವುದಿಲ್ಲ. ವಿಸ್ತಾರ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ಕೇಂದ್ರ ಸರ್ಕಾರದ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯದಲ್ಲಿ ನೋಂದಾಯಿತ ಸಂಸ್ಥೆ. ಹೀಗಾಗಿ ನಮ್ಮ ಸಂಸ್ಥೆಯ ಪ್ರಮೋಟರ್, ಡೈರೆಕ್ಟರ್ ಮಂಡಳಿ, ಹೂಡಿಕೆ, ನೆಟ್‌ವರ್ತ್ , ಆಡಿಟ್ ರಿಪೋರ್ಟ್ ಎಲ್ಲವೂ ಆಸಕ್ತರ ವೀಕ್ಷಣೆಗೆ ಲಭ್ಯವಿದೆ. ಮುಖ್ಯವಾಗಿ ನಮ್ಮ ಸಂಸ್ಥೆಯ ಎಂ.ಡಿ. ಶ್ರೀ ಎಚ್. ವಿ. ಧರ್ಮೇಶ್ ಮೊದಲ ತಲೆಮಾರಿನ ಯಶಸ್ವೀ ಉದ್ಯಮಿ. ನಮ್ಮೊಂದಿಗೆ ಸೇರಿ ಈಗ ಮಾಧ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡಿದ್ದಾರೆ. ಅವರಿಗೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ರಾಜಕೀಯದ ಸಂಬಂಧ ಇಲ್ಲವೇ ಇಲ್ಲ. ನಮ್ಮ ಸಂಸ್ಥೆಯ ನಿರ್ದೇಶಕರಾದ ಶ್ರೀ ಶ್ರೀನಿವಾಸ ಹೆಬ್ಬಾರ್​ ಅವರು ಟ್ರಾನ್ಸ್​ಪೋರ್ಟ್​ ಉದ್ಯಮದ ಜತೆಗೆ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವವರು. ಪರಿಸರ ಸಂರಕ್ಷಣೆ, ಆರೋಗ್ಯ, ಶಿಕ್ಷಣ, ಗೋ ಸಂರಕ್ಷಣೆ, ಸ್ವಚ್ಛತೆ ಮೊದಲಾದ ಕ್ಷೇತ್ರಗಳಲ್ಲಿ ಕೊಡುಗೆ ಸಲ್ಲಿಸುತ್ತಿರುವವರು. ಇದೀಗ ನಾವು ಹೊಸ ಮಾಧ್ಯಮ ಸಂಸ್ಥೆ ಆರಂಭಿಸಿದ್ದೇವೆ. ಈ ಡಿಜಿಟಲ್ ಮಾಧ್ಯಮ ಕ್ಷೇತ್ರ ಅತ್ಯಂತ ಪಾರದರ್ಶಕತೆ ಬಯಸುತ್ತದೆ ಮತ್ತು ರಾಜಕೀಯ ಸತ್ಯನಿಷ್ಠುರತೆ ನಿರೀಕ್ಷಿಸುತ್ತದೆ ಎಂಬ ಅರಿವು ನಮಗಿದೆ.

ಪ್ರಶ್ನೆ: ನೀವು ಆರಂಭಿಸಿರುವ ಪತ್ರಿಕೋದ್ಯಮದ ಸ್ವರೂಪ ಹೇಗಿರುತ್ತದೆ? ನಿಮ್ಮ ವೈಚಾರಿಕ ನಿಲುವು ಯಾವುದು?

ಉತ್ತರ: ಕೆಲ ವರ್ಷಗಳಿಂದೀಚೆಗೆ ಮಾಧ್ಯಮ ಸಂಸ್ಥೆಗಳ ಸುತ್ತ ಅನುಮಾನದ ಹುತ್ತ ಆವರಿಸಿಕೊಳ್ಳುತ್ತಿರುವುದು ನಿಜ. ಕೆಲ ಮಾಧ್ಯಮ ಸಂಸ್ಥೆಗಳು ಪಕ್ಷಗಳ, ರಾಜಕಾರಣಿಗಳ ಪರ ಇದ್ದಾರೆ ಎಂಬ ಭಾವನೆ ಇದೆ. ಕೆಲ ಸಂದರ್ಭಗಳಲ್ಲಿ ಕೆಲವು ಪತ್ರಕರ್ತರೇ ಭ್ರಷ್ಟಾಚಾರದಂತಹ ಪ್ರಕರಣಗಳಲ್ಲಿ ಭಾಗಿಯಾದ ಆರೋಪಗಳೂ ಬಂದಿವೆ. ಆಗಲೇ ಪ್ರಸ್ತಾಪಿಸಿದಂತೆ, ನಾವು ಪ್ರಾರಂಭಿಸಿರುವ ಡಿಜಿಟಲ್ ಮಾಧ್ಯಮ ಕ್ಷೇತ್ರದ ಅತಿ ದೊಡ್ಡ ಗ್ರಾಹಕರು ಸಾಮಾಜಿಕ ಜಾಲತಾಣದ ಸಕ್ರಿಯ ಬಳಕೆದಾರರು. ಈ ಬಳಕೆದಾರರು ಜಗತ್ತಿನ ಎಲ್ಲರನ್ನೂ ಪ್ರಶ್ನಿಸಬಲ್ಲರು. ಅವರು ಮಾಧ್ಯಮ ಕ್ಷೇತ್ರವನ್ನೂ ಪ್ರಶ್ನಿಸುತ್ತಿದ್ದಾರೆ. ಅನೇಕ ಸಂದರ್ಭಗಳಲ್ಲಿ ಪ್ರಮಾದ, ಲೋಪಗಳನ್ನು ಬಯಲಿಗೆಳೆಯುತ್ತಿದ್ದಾರೆ. ಇದನ್ನು ನಾನು ಮುಕ್ತಮನಸ್ಸಿನಿಂದ ಸ್ವಾಗತಿಸುತ್ತೇನೆ. ಅಂತಹ ನಾಗರಿಕರ ಕಣ್ಣಲ್ಲಿ ಮಾಧ್ಯಮ ಘನತೆ ಕಳೆದುಕೊಳ್ಳುವಂತಾಗಿದೆ. ಅದಕ್ಕೆ ನಾನಾ ಕಾರಣಗಳಿವೆ. ಅದರ ಗೋಜಿಗೆ ನಾನು ಹೋಗುವುದಿಲ್ಲ. ಆದರೆ ನಮ್ಮ ಮುಖ್ಯ ಗಮನ ಮಾಧ್ಯಮಕ್ಕೆ ಘನತೆ ತಂದುಕೊಡುವುದರ ಕಡೆಗೆ ಮಾತ್ರ.

ಬಾಲಗಂಗಾಧರ ತಿಲಕರು, ಮಹಾತ್ಮಾ ಗಾಂಧೀಜಿ, ಡಾ. ಬಿ. ಆರ್. ಅಂಬೇಡ್ಕರ್, ಡಿ. ವಿ. ಗುಂಡಪ್ಪನವರೆಲ್ಲ ಪತ್ರಕರ್ತರಾಗಿದ್ದವರು. ಆ ನಂತರವೂ ಪತ್ರಿಕೋದ್ಯಮದ ಘನತೆಯ ತೇರನ್ನು ಅನೇಕ ಮಹನೀಯರು ಮುಂದಕ್ಕೆ ಎಳೆದಿದ್ದಾರೆ. ಅವರು ಹಾಕಿದ ಮಾರ್ಗದಲ್ಲಿ ಮುಂದೆ ಸಾಗಿ ಈ ಕ್ಷೇತ್ರದ ಘನತೆ, ಗೌರವ ಹಾಗೂ ಹೊಣೆಗಾರಿಕೆಯನ್ನು ಮೆರೆಯುವುದು ನಮ್ಮ ಪರಮ ಧ್ಯೇಯ.

ಈ ಕಾರಣಕ್ಕಾಗಿ ಮೊದಲಿಗೆ ನಾವು ಯಾವುದೇ ಪಕ್ಷ ಮತ್ತು ರಾಜಕಾರಣಿಗಳ ಪರ ವಹಿಸುವುದಿಲ್ಲ. ಯಾವುದೇ ಸಮುದಾಯದ ಪಕ್ಷಪಾತಿಗಳಾಗುವುದಿಲ್ಲ. ಸತ್ಯ ಹಾಗೂ ರಾಷ್ಟ್ರಹಿತದ ಪ್ರಶ್ನೆ ಬಂದಾದ ಯಾವುದೇ ಮುಲಾಜಿಗೆ ಒಳಗಾಗುವುದಿಲ್ಲ. ನಮಗೆ ದೇಶ ಮೊದಲೇ ಹೊರತು ಬೇರೇನೂ ಅಲ್ಲ. ಜನಪರ ಮತ್ತು ಜನಪ್ರಿಯತೆ ಈ ಎರಡರಲ್ಲಿ ಆಯ್ಕೆ ಪ್ರಶ್ನೆ ಬಂದಾಗ ಜನಪರವೇ ಮಿಗಿಲಾಗುತ್ತದೆ. ಮುಖ್ಯವಾಗಿ ನಾವು ಕಿರುಚಾಡುವುದಿಲ್ಲ. ನಮ್ಮ ಮಾಧ್ಯಮ ಸಂಸ್ಥೆಯ ಸುದ್ದಿಯಲ್ಲಿ ಸತ್ಯದ ಶಕ್ತಿ ಮತ್ತು ನಿಖರತೆ ಇರುತ್ತದೆ. ಸುದ್ದಿಯೇ ಮಾತನಾಡಿ, ಪತ್ರಕರ್ತ ಕಡಿಮೆ ಮಾತನಾಡುವಂತೆ ನೋಡಿಕೊಳ್ಳುತ್ತೇವೆ. ಹೀಗಾಗಿಯೇ, ನಿಖರ. ಜನಪರ. – ಇವೇ ಮೌಲ್ಯಗಳನ್ನು ನಮ್ಮ ಮಾಧ್ಯಮಸಂಸ್ಥೆಯ ಧ್ಯೇಯವಾಕ್ಯವಾಗಿಯೂ ನಮ್ಮ ವಿಸ್ತಾರ ಬ್ರ್ಯಾಂಡ್‌ನ ಟ್ಯಾಗ್‌ಲೈನ್‌ ಆಗಿಯೂ ಇಟ್ಟುಕೊಂಡಿದ್ದೇವೆ.

ಪ್ರಶ್ನೆ: ಕನ್ನಡ‌‌ ಭಾಷೆ, ನೆಲ, ಜಲ, ಸಂಸ್ಕೃತಿಯ ಹಿತರಕ್ಷಣೆಯ ವಿಚಾರದಲ್ಲಿ ನಮ್ಮ ನಿಲುವೇನು?
ಉತ್ತರ: ಈ‌ ವಿಷಯದಲ್ಲಿ ನಾವು ಅಪ್ಪಟ ಕನ್ನಡಿಗರು ಮತ್ತು ಕನ್ನಡಪರರು. ಭಾಷೆ, ನೆಲ, ಜಲ, ಸಂಸ್ಕೃತಿ ಹಿತದ ವಿಚಾರದಲ್ಲಿ ರಾಜಿಯೇ ಇಲ್ಲದ ಕಠಿಣ ನಿಲುವು ನಮ್ಮದು. ಈ ವಿಷಯದಲ್ಲಿ ನಾವೇ ಮುಂಚೂಣಿಯಲ್ಲಿ ನಿಲ್ಲುತ್ತೇವೆ. ಇನ್ನೂ ಸ್ಪಷ್ಟಪಡಿಸಬೇಕೆಂದರೆ ಕನ್ನಡ – ಕರ್ನಾಟಕದ ವಿಷಯದಲ್ಲಿ ರಾಷ್ಟ್ರಕವಿ ಕುವೆಂಪು ಅವರ ನಿಲುವೇ ನಮ್ಮ ನಿಲುವು. ಜೈ ಭಾರತ ಜನನಿಯ ತನುಜಾತೇ, ಜಯ ಹೇ ಕರ್ನಾಟಕ ಮಾತೆ. ಕರ್ನಾಟಕ ಮಾತೆ, ಆ ಮೂಲಕ ಭಾರತ ಮಾತೆ…

ಕರ್ನಾಟಕ ಇಲ್ಲದೇ ಭಾರತ ಇಲ್ಲ. ಭಾರತ ಇರದೇ ಕರ್ನಾಟಕ ಇರಲಾರದು. ರಾಜ್ಯ‌ ಮತ್ತು ರಾಷ್ಟ್ರದ ಸಂಬಂಧ ಎಂದೆಂದಿಗೂ ಅವಿನಾಭಾವ, ಅವಿಚ್ಛಿನ್ನ.  ಭಾಷೆಯ ವಿಚಾರದಲ್ಲೂ ನಮ್ಮ ನಿಲುವು ಅದೇ. ಕನ್ನಡದ‌ ಪರ ಸದಾ ಕೈ ಎತ್ತುತ್ತೇವೆ. ಧ್ವನಿ ಎತ್ತುತ್ತೇವೆ. ಕನ್ನಡಕ್ಕಾಗಿ ಬೇರೆ ಭಾಷೆಯನ್ನು ದ್ವೇಷಿಸುವುದಿಲ್ಲ. ಭಾಷೆ ಎಂದರೆ ಕೇವಲ ಸಂವಹನ ಸಾಧನ ಅಲ್ಲ, ಅದು ಸಂಸ್ಕೃತಿಯ ವಾಹಕ. ಅದು ಸಣ್ಣದೇ ಇರಲಿ, ದೊಡ್ಡದೇ ಇರಲಿ. ಭಾರತದ ಎಲ್ಲ ಭಾಷೆಗಳೂ ಸಮಾನ ಮತ್ತು ಸರ್ವಶಕ್ತ. ನಾವು ಮೊದಲು ಕನ್ನಡಪರರು.

ಪ್ರಶ್ನೆ: ಸಂಸ್ಥೆಯನ್ನು ಯಶಸ್ವಿಯಾಗಿ ಕಟ್ಟಿ ಬೆಳೆಸಲು ಉತ್ತಮ ತಂಡ ಬೇಕು. ‌ನಿಮ್ಮ ಜತೆ ಅಂತಹ ತಂಡ ಇದೆಯೆ?

ಉತ್ತರ: ನಮ್ಮ ಆಲೋಚನೆಗಳು ಎಷ್ಟೇ ಉದಾತ್ತವಾಗಿದ್ದರೂ, ಕಾರ್ಯಸಾಧುವಾಗಿದ್ದರೂ, ಅದನ್ನು ಕಾರ್ಯರೂಪಕ್ಕೆ ತರಲು ಉತ್ತಮ ಮಾನವ ಸಂಪನ್ಮೂಲ, ಅಂದರೆ ಪಕ್ವಗೊಂಡ ಮೆದುಳುಗಳು ಬೇಕು ಎಂಬುದು ನಮಗೆ ಚೆನ್ನಾಗಿ ತಿಳಿದಿದೆ. ಅತ್ಯಂತ ಸಂತೋಷದ ಸಂಗತಿ ಎಂದರೆ ನಾವು ನವ ಮಾಧ್ಯಮ ಸಂಸ್ಥೆ ಕಟ್ಟಲು ಮುಂದಾದಾಗ ಕನ್ನಡ ಪತ್ರಿಕೋದ್ಯಮದಲ್ಲಿ ಪಳಗಿದ, ಶುದ್ಧ ಮನಸ್ಸಿನ ಅತ್ಯುತ್ತಮ ಪತ್ರಕರ್ತರು ನಮ್ಮ ಜತೆಯಾದದ್ದು. ಹಿರಿಯರು, ಮಧ್ಯಮ ಅನುಭವಿಗಳು ಮತ್ತು ಯುವಕರು ಹೀಗೆ ಮೂರು ಜನರೇಶನ್ನಿಗೆ ಈ ಕಂಪನಿಯನ್ನು ಸದೃಢವಾಗಿ ಮುನ್ನಡೆಸಬಲ್ಲ ಬ್ಲೆಂಡೆಡ್ ಪತ್ರಕರ್ತರ ತಂಡ ನಮ್ಮ ಸಂಸ್ಥೆಯ ಭವಿಷ್ಯದ ಸೂಚನೆ. ಇಲ್ಲಿ ನಾವು ಡಿಜಿಟಲ್, ಪ್ರಿಂಟ್ ಹಾಗೂ ಟಿವಿ ಮಾಧ್ಯಮದಿಂದ ಆಯ್ದ ಪತ್ರಕರ್ತರ ಸಮತೋಲಿತ ತಂಡವನ್ನು ಕಟ್ಟಿದ್ದೇವೆ.

ಪ್ರಶ್ನೆ: ಎಲ್ಲ ಸುದ್ದಿ ಸಂಸ್ಥೆಗಳೂ ತಾವು ಜನಪರ, ಪಕ್ಷಪಾತ ರಹಿತ ಎಂದೇ ಕಾರ್ಯ ಆರಂಭಿಸುತ್ತವೆ. ಆದರೆ ಕಳೆದ ಕೆಲವು ವರ್ಷಗಳಲ್ಲಿ ಯಾವ ರೀತಿ ಬೆಳವಣಿಗೆಗಳಾಗಿವೆ ಎಂಬುದನ್ನು ನಾವು ನೋಡಿದ್ದೇವೆ. ನಿಮ್ಮ ಮೇಲೆ ಹೇಗೆ ನಂಬಿಕೆ ಇಡುವುದು?

ಉತ್ತರ: ಈಗಾಗಲೇ ಹೇಳಿದಂತೆ, ಕನ್ನಡದ ಅತ್ಯುತ್ತಮ, ಅನುಭವಿ ಹಾಗೂ ಗೌರವಯುತ ಪತ್ರಕರ್ತರ ತಂಡ ನಮ್ಮ ಜತೆಗಿದೆ. ಹೀಗಾಗಿ ಉತ್ತಮ ವಿಷಯ (Content) ನಮ್ಮಿಂದ ನಿಮಗೆ ದೊರಕುತ್ತದೆ ಎಂಬುದರಲ್ಲಿ ಯಾವುದೇ ಅನುಮಾನವಿಲ್ಲ. ಇದೇ ವಿಷಯ ವಸ್ತುವನ್ನು ಈಗಿನ ಕಾಲಕ್ಕೆ, ಜನರ ಅನುಕೂಲಕ್ಕೆ ತಕ್ಕಂತೆ ಪ್ರಸ್ತುತಪಡಿಸುವಲ್ಲೂ ನಾವು ಸಫಲರಾಗುತ್ತೇವೆ ಎಂಬ ನಂಬಿಕೆ ಮತ್ತು ಸ್ಪಷ್ಟತೆ ನಮಗಿದೆ. ಇನ್ನು ವಿಶ್ವಾಸ ಗಳಿಸುವುದು ಕಾಲಕ್ಕೆ ಬಿಟ್ಟ ವಿಚಾರ. ಯಾವುದೇ ವ್ಯಕ್ತಿ, ವಿಚಾರದ ಮೇಲೆ ನಂಬಿಕೆ, ವಿಶ್ವಾಸ ಮೂಡಲು ಅದರದ್ದೇ ಆದ ಸಮಯ ಬೇಕು. ಈ ಸಮಯದಲ್ಲಿ ನಮ್ಮ ನಡವಳಿಕೆಯನ್ನು ಸಮಾಜ ಅಳೆಯುತ್ತದೆ. ನಡೆ ಹಾಗೂ ನುಡಿಯಲ್ಲಿನ ವ್ಯತ್ಯಾಸವನ್ನು ಅದೇ ಸಮಾಜ ಅಳೆದು ನೋಡುತ್ತದೆ. ನಡೆ ಹಾಗೂ ನುಡಿಯಲ್ಲಿ ವ್ಯತ್ಯಾಸ ಇಲ್ಲದೇ ಇದ್ದಲ್ಲಿ ಮಾತ್ರ ಸಮಾಜ ನಮ್ಮನ್ನು ನಂಬುತ್ತದೆ. ಆ ವಿಶ್ವಾಸ ಗಳಿಸಲು ನಾವು ಪ್ರತಿ ಕ್ಷಣವೂ ಶ್ರಮಿಸುತ್ತೇವೆ. ಇಂದು ವಿಸ್ತಾರ ಡಿಜಿಟಲ್ ಆವೃತ್ತಿಯನ್ನು ಲೋಕಾರ್ಪಣೆ ಮಾಡಿದ್ದೇವೆ. ಇಷ್ಟರಲ್ಲೇ ಟಿವಿ ಮೂಲಕವೂ ನಿಮ್ಮ ಮನೆ ಹಾಗೂ ಮನವನ್ನು ತಲುಪುತ್ತೇವೆ.

ಪ್ರಶ್ನೆ: ಈಗಿನ ʼಸೋಷಿಯಲ್ ಮೀಡಿಯಾ ಜಮಾನಾʼದಲ್ಲಿ ಸಾಂಸ್ಥಿಕ ಡಿಜಿಟಲ್ ಮೀಡಿಯಾದ ಪ್ರಸ್ತುತತೆ ಏನು?
ಉತ್ತರ: ನಾವು ಡೆಮಾಕ್ರಟಿಕ್ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ. ಇಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ  ಸಂವಿಧಾನಬದ್ಧ ಮಾನ್ಯತೆ ಇದೆ. ಅದೇ ಸಂದರ್ಭದಲ್ಲಿ ಸಾಂಸ್ಥಿಕ ವ್ಯವಸ್ಥೆಗೂ ಅದೇ ಸಂವಿಧಾನ ಅವಕಾಶ ನೀಡಿದೆ. ಸಾಮಾಜಿಕ ಮಾಧ್ಯಮದ ವಿಚಾರಕ್ಕೆ ಬರುವುದಾದರೆ, ವ್ಯಕ್ತಿ ತನ್ನ ಅನಿಸಿಕೆಯನ್ನು ಇತಿಮಿತಿಯಲ್ಲಿ ವ್ಯಕ್ತಪಡಿಸಬಹುದು. ಆದರೆ ಮಾಧ್ಯಮ ಸಂಸ್ಥೆಯಲ್ಲಿ ಅನಿಸಿಕೆ ಎನ್ನುವುದು ವಿವಿಧ ಹಂತಗಳಲ್ಲಿ ಪರಿಷ್ಕರಣೆಗೆ ಒಳಪಡುತ್ತದೆ.

ಅದಕ್ಕಿಂತ ಮುಖ್ಯವಾಗಿ ಸಾಂಸ್ಥಿಕ ವ್ಯವಸ್ಥೆಯಲ್ಲಿ ಒಡಮೂಡುವ ಸುದ್ದಿ ಹೊಣೆಗಾರಿಕೆಯಿಂದ ಕೂಡಿರುತ್ತದೆ. ಅಭಿಪ್ರಾಯ-ಕೇಂದ್ರಿತ ಸಾಮಾಜಿಕ ಮಾಧ್ಯಮಗಳ ಸಂಖ್ಯೆ ಹೆಚ್ಚಾದಷ್ಟೂ ಸಾಂಸ್ಥಿಕ ಮಾದ್ಯಮಗಳ ಈ ಹೊಣೆಗಾರಿಕೆ ಪ್ರಜ್ಞೆಯೂ‌ ಹೆಚ್ಚಾಗುತ್ತಲೇ ಹೋಗುತ್ತದೆ. ಎಲ್ಲರೂ ವಿಶ್ವಾಸಾರ್ಹ ಮಾಹಿತಿ / ಸುದ್ದಿ ಬಯಸುವ ಕಾಲಮಾನದಲ್ಲಿ, ಸಾಂಸ್ಥಿಕ ಮೀಡಿಯಾದ ಮಹತ್ವ ಮುಂಬರುವ ದಿನಗಳಲ್ಲಿ‌ ಇನ್ನಷ್ಟು ಹೆಚ್ಚಾಗುವುದರಲ್ಲಿ ಯಾವುದೇ ಅನುಮಾನ ಬೇಡ.

ವಿಶ್ವಾಸವಿರಲಿ
ವಿಸ್ತಾರ ವೆಬ್‌ಸೈಟ್  : www.vistaranews.com
ಸೋಷಿಯಲ್ ಮೀಡಿಯಾ ವಿವರಗಳು:
Face book: www.facebook.com/vistaranews
Instagram: www.instagram.com/vistaranews/
Twitter: twitter.com/VistaraNews
Koo : www.kooapp.com/profile/vistaranews

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಭವಿಷ್ಯ

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷದ ನವಮಿ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಶುಕ್ರವಾರವು ಕನ್ಯಾರಾಶಿಯಲ್ಲಿಯೇ ನೆಲೆಸಿರುತ್ತಾನೆ. ಇದರಿಂದಾಗಿ ಮಿಥುನ, ಸಿಂಹ, ತುಲಾ, ವೃಶ್ಚಿಕ, ಕುಂಭ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕಟಕ ರಾಶಿಯವರು ಗಾಳಿಯಲ್ಲಿ ಮನೆ ಕಟ್ಟುವಲ್ಲಿ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಬದಲಿಗೆ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ನಿಮ್ಮ ಶಕ್ತಿ ವ್ಯಯಿಸಿ. ಇಂದು ನಿಮಗೆ ಹಣದ ಲಾಭವಾಗುವ ಪೂರ್ತಿ ಸಾಧ್ಯತೆ ಇದೆ. ಆದರೆ ಇದರೊಂದಿಗೆ ನೀವು ದಾನವನ್ನು ಸಹ ಮಾಡಬೇಕು ಏಕೆಂದರೆ ಇದರಿಂದ ನಿಮಗೆ ಮಾನಸಿಕ ಶಾಂತಿ ಸಿಗುತ್ತದೆ. ಸಿಂಹ ರಾಶಿಯವರು ಸಂಶಯಾಸ್ಪದ ಹಣಕಾಸು ವ್ಯವಹಾರಗಳಲ್ಲಿ ಸಿಲುಕಿಕೊಳ್ಳದಂತೆ ಎಚ್ಚರಿಕೆ ವಹಿಸಿ. ನೀವು ಯಾವುದೇ ಬದ್ಧತೆಯನ್ನು ಮಾಡುವ ಮೊದಲು ಎಲ್ಲಾ ಸತ್ಯಾಸತ್ಯತೆಗಳನ್ನು ಅರಿತುಕೊಳ್ಳುವುದು ಅಗತ್ಯ ಇದೆ. ಕುಟುಂಬದಲ್ಲಿ ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (17-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ
ತಿಥಿ: ನವಮಿ 08:48 ವಾರ: ಶುಕ್ರವಾರ
ನಕ್ಷತ್ರ: ಪೂರ್ವ ಪಾಲ್ಗುಣಿ 21:17 ಯೋಗ: ವ್ಯಾಘಾತ 09:19
ಕರಣ: ಕೌಲವ 08:48 ಅಮೃತ ಕಾಲ: ಮಧ್ಯಾಹ್ನ 02:05ರಿಂದ 03:53
ದಿನದ ವಿಶೇಷ: ವಿಶ್ವ ಮಾಹಿತಿ ದಿನ

ಸೂರ್ಯೋದಯ : 05:54   ಸೂರ್ಯಾಸ್ತ : 06:38

ರಾಹುಕಾಲ :ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರೋಗ್ಯ ಸುಧಾರಣೆಗಾಗಿ ಮಾಡುವ ಪ್ರಯತ್ನಗಳು ಸಹಕಾರಿಯಾಗಲಿವೆ. ಆರ್ಥಿಕ ಭಾಗವು ಬಲಗೊಳ್ಳುವ ಪೂರ್ಣ ಸಾಧ್ಯತೆ ಇದೆ. ಸಾಲದ ಮರುಪಾವತಿ ಆಗಲಿದೆ. ಇತರರ ದೋಷಗಳನ್ನು ಹುಡುಕುತ್ತಾ ಸಮಯ ವ್ಯರ್ಥ ಮಾಡುವುದು ಬೇಡ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಇರಲಿದೆ. ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಅನಿವಾರ್ಯ ಕಾರಣಗಳಿಂದ ನೀವು ಯಾವುದಾದರೂ ಸಹಾಯ ಕೋರುವ ಸಾಧ್ಯತೆ ಇದೆ. ನಿಮ್ಮ ಪ್ರಯತ್ನಗಳು ಖಂಡಿತವಾಗಿಯೂ ಸಕಾರಾತ್ಮಕ ಫಲಿತಾಂಶ ತರುತ್ತವೆ. ಆರೋಗ್ಯ ಪರಿಪೂರ್ಣ ಇರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿ ಕಿರಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಮನೆಯ ಸದಸ್ಯರು ಇಂದು ನಿಮ್ಮೊಂದಿಗೆ ಅನೇಕ ಸಮಸ್ಯೆಗಳನ್ನು ಹಂಚಿಕೊಳ್ಳುತ್ತಾರೆ. ಹಿರಿಯರ ಸತತ ಮಾರ್ಗದರ್ಶನ ಸಿಗಲಿದೆ. ಅವಸರದಲ್ಲಿ ಮಾತನಾಡಿದ ಕಾರಣಕ್ಕೆ ಪಶ್ಚಾತ್ತಾಪ ಮೂಡಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಆರೋಗ್ಯ ಪರಿಪೂರ್ಣವಾಗಿ ಇರಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ಸಾಮರಸ್ಯ ಇರಲಿದೆ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಗಾಳಿಯಲ್ಲಿ ಮನೆ ಕಟ್ಟುವಲ್ಲಿ ನಿಮ್ಮ ಸಮಯ ವ್ಯರ್ಥ ಮಾಡಬೇಡಿ. ಬದಲಿಗೆ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ನಿಮ್ಮ ಶಕ್ತಿ ವ್ಯಯಿಸಿ. ಇಂದು ನಿಮಗೆ ಹಣದ ಲಾಭವಾಗುವ ಪೂರ್ತಿ ಸಾಧ್ಯತೆ ಇದೆ. ಆದರೆ ಇದರೊಂದಿಗೆ ನೀವು ದಾನವನ್ನು ಸಹ ಮಾಡಬೇಕು ಏಕೆಂದರೆ ಇದರಿಂದ ನಿಮಗೆ ಮಾನಸಿಕ ಶಾಂತಿ ಸಿಗುತ್ತದೆ. ಆರೋಗ್ಯ ಕುರಿತಾಗಿ ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ಸಂಶಯಾಸ್ಪದ ಹಣಕಾಸು ವ್ಯವಹಾರಗಳಲ್ಲಿ ಸಿಲುಕಿಕೊಳ್ಳದಂತೆ ಎಚ್ಚರಿಕೆ ವಹಿಸಿ. ನೀವು ಯಾವುದೇ ಬದ್ಧತೆಯನ್ನು ಮಾಡುವ ಮೊದಲು ಎಲ್ಲಾ ಸತ್ಯಾಸತ್ಯತೆಗಳನ್ನು ಅರಿತುಕೊಳ್ಳುವುದು ಅಗತ್ಯ ಇದೆ. ಕುಟುಂಬದಲ್ಲಿ ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸಬೇಡಿ. ಮಾನಸಿಕ ಹಾಗೂ ದೈಹಿಕವಾಗಿ ಜರ್ಜರಿತರಾಗುವ ಬದಲು ಯೋಗ ಧ್ಯಾನ ಮಾಡಿ ಮನಸ್ಸಿನ ಮೂಲೆಯಲ್ಲಿ ಸಂತಸ ಚಿಗರಲಿದೆ. ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿ ಕಿರಿ ಇರಲಿದೆ. ಕೌಟುಂಬಿಕವಾಗಿ ಸಾಧರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆಕ್ರಮಿಸಿಕೊಳ್ಳಲು ಬಿಡಬೇಡಿ. ಶಾಂತವಾಗಿ ಮತ್ತು ಒತ್ತಡ ಮುಕ್ತವಾಗಿ ಉಳಿಯಲು ಪ್ರಯತ್ನಿಸಿ ಹಾಗೂ ಅದು ನಿಮ್ಮ ಮಾನಸಿಕ ದೃಢತೆಯನ್ನು ಹೆಚ್ಚಿಸುತ್ತದೆ. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತವಾಗಿರಲಿದೆ. ಸಂಬಂಧಿಗಳ ಆಗಮನ ಸಂತಸ ತರಲಿದೆ. ಸಂಗಾತಿಯ ಹಸ್ತಕ್ಷೇಪ ಮುಜುಗರ ಉಂಟು ಮಾಡಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಸಂತಸದ ಪ್ರಯಾಣ ಮತ್ತು ಸಾಮಾಜಿಕ ಕಾರ್ಯಕ್ರಮಗಳು ನಿಮಗೆ ಆರಾಮ ಮತ್ತು ಸಂತೋಷ ತರುತ್ತದೆ. ಈ ರಾಶಿಚಕ್ರದ ದೊಡ್ಡ ಉದ್ಯಮಿಗಳು ಇಂದು ತುಂಬಾ ಯೋಚಿಸಿ ಅರ್ಥಮಾಡಿಕೊಂಡು ಹಣದ ಹೂಡಿಕೆ ಮಾಡುವ ಅಗತ್ಯವಿದೆ. ನಿಮ್ಮ ಸ್ಪರ್ಧಾತ್ಮಕ ಸ್ವಭಾವ ನೀವು ಪ್ರವೇಶಿಸುವ ಯಾವುದೇ ಸ್ಪರ್ಧೆಯಲ್ಲೂ ನಿಮ್ಮನ್ನು ಗೆಲ್ಲಿಸುತ್ತದೆ. ಪ್ರೇಮಿಗಳಿಗೆ ಮನೆಯಿಂದ ಹಸಿರು ನಿಶಾನೆ ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ. ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು.ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ.ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಹಿರಿಯ ಅಧಿಕಾರಿಗಳಿಂದ ಕಿರಿಕಿರಿಯಾಗಲಿದೆ. ಕುಟುಂಬದಲ್ಲಿ ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ನೀವು ದೀರ್ಘಕಾಲೀನ ಅನಾರೋಗ್ಯದಿಂದ ಬಳಲಬಹುದು. ಸಣ್ಣ ಉದ್ಯೋಗವನ್ನು ಮಾಡುವ ಜನರು, ಇಂದು ತಮ್ಮ ಆಪ್ತರಿಂದ ಯಾವುದೇ ಸಲಹೆಯನ್ನು ಪಡೆಯಬಹುದು. ಇದರಿಂದ ಅವರಿಗೆ ಆರ್ಥಿಕವಾಗಿ ಲಾಭ ಪಡೆಯುವ ಸಾಧ್ಯತೆ ಇದೆ. ಇಂದು ಹಣದ ಬಗ್ಗೆ ಕುಟುಂಬ ಸದಸ್ಯರಲ್ಲಿ ಗೊಂದಲ ಉಂಟಾಗಬಹುದು.ಆದಷ್ಟು ಸಾಲ ಮಾಡದಂತೆ ಎಚ್ಚರಿಕೆ ವಹಿಸಿ.ಆರೋಗ್ಯ ಪರಿಪೂರ್ಣ.ಮೇಲಾಧಿಕರಿಗಳು ನಿಮ್ಮ ಸಹನೆ ಪರೀಕ್ಷಿಸುವ ಸಾಧ್ಯತೆ, ಆದಷ್ಟು ಮೌನದಿಂದ ಕೆಲಸ ಸಾಧಿಸಿಕೊಳ್ಳಿ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.ಅದೃಷ್ಟ ಸಂಖ್ಯೆ: 9

Horoscope Today

ಮಕರ: ಮನಸ್ಸಿನ ಭಾವನೆಗಳನ್ನ ಹತೋಟಿಯಲ್ಲಿ ಇಟ್ಟುಕೊಳ್ಳಿ ಆ ಸಿಟ್ಟನ್ನು ಇತರರ ಮೇಲೆ ಹಾಕಿ ಪಶ್ಚಾತ್ತಾಪ ಪಡುವುದು ಬೇಡ. ಹಳೆಯ ಪ್ರೀತಿಯ ನೆನಪು ಮರುಕಳಿಸಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಸಿಗಲಿದೆ. ಆರೋಗ್ಯದ ಕುರಿತು ಕೊಂಚ ಕಾಳಜಿ ವಹಿಸಿ.ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಒಂದು ಲಾಭಕರವಾದ ದಿನವಾಗಲಿದೆ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ಮೂರನೇ ವ್ಯಕ್ತಿಯ ಹಸ್ತಕ್ಷೇಪ ನೀವು ಮತ್ತು ನಿಮ್ಮ ಪ್ರೀತಿಪಾತ್ರರಲ್ಲಿ ಕಂದಕ ತರಬಹುದು ಆದಷ್ಟು ಅಂತವರಿಂದ ಎಚ್ಚರಿಕೆ ವಹಿಸಿ. ಆರೋಗ್ಯ ಪರಿಪೂರ್ಣ ಇರಲಿದೆ.ಉದ್ಯೋಗಿಗಳಿಗೆ ಕಿರಿ ಕಿರಿ.ಕೌಟುಂಬಿಕವಾಗಿ ಸಾಧಾರಣ ಫಲ.ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅಧ್ಯಾತ್ಮದ ಒಲವು ಹೆಚ್ಚಾಗಲಿದೆ. ನಿಮ್ಮ ಕನಸು ನನಸಾಗುವ ಕಾಲವಿದು. ಆರೋಗ್ಯ ಪರಿಪೂರ್ಣವಾಗಿರಲಿದೆ. ನೀವು ಹಣಕಾಸಿನ ಲಾಭ ತರುವ ಅದ್ಭುತವಾದ ಹೊಸ ಕಲ್ಪನೆಗಳನ್ನು ಪ್ರಸ್ತುತಪಡಿಸುತ್ತೀರಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

ಭಾರತವನ್ನು ದ್ವೇಷಿಸುತ್ತ ಪಾಕ್‌ ಹುಟ್ಟುಹಾಕಿದ ಮತಾಂಧ ಭಯೋತ್ಪಾದನೆ ಇಂದು ಅದನ್ನೇ ತಿನ್ನುತ್ತಿದೆ. ಇನ್ನಾದರೂ ಪಾಕ್ ಆಡಳಿತಗಾರರಿಗೆ, ಸೇನಾಧಿಕಾರಿಗಳಿಗೆ ಬುದ್ಧಿ ಬರಲಿ. ಕಾಶ್ಮೀರ ಮತ್ತಿತರ ವಿಚಾರಗಳನ್ನು ಪ್ರಸ್ತಾಪಿಸುತ್ತ ಭಾರತಕ್ಕೆ ಮುಜುಗರ ಸೃಷ್ಟಿಸಲು ವಿಫಲ ಪ್ರಯತ್ನ ಮಾಡುತ್ತಿರುವ ಪಾಕ್‌ ತನ್ನ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಮೊದಲು ಗಮನಿಸಲಿ.

VISTARANEWS.COM


on

Pakistan
Koo

ಕೆಲವು ದಿನಗಳ ಹಿಂದೆ ಪಾಕ್‌(Pakistan) ಸಂಸತ್‌ನಲ್ಲೇ ಅಲ್ಲಿನ ವಿಪಕ್ಷ ನಾಯಕನೇ ಭಾರತವನ್ನು ಹಾಡಿ ಹೊಗಳಿರುವ ವಿಡಿಯೋವೊಂದು ವೈರಲ್‌(Viral Video) ಆಗಿತ್ತು. ಇದೀಗ ಮತ್ತೊಬ್ಬ ಸಂಸದ ಭಾರತದ ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದಾರೆ. ಸಂಸತ್‌ನಲ್ಲಿ ಮಾತನಾಡಿದ ಸಂಸದ ಸಯ್ಯದ್‌ ಮುಸ್ತಾಫಾ ಕಮಲ್‌ ಭಾರತ ಮತ್ತು ಪಾಕಿಸ್ತಾನವನ್ನು ಹೋಲಿಕೆ ಮಾಡಿ ಮಾತನಾಡಿದ್ದು, ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ. ಆದರೆ ಪಾಕಿಸ್ತಾನದ ಸ್ಥಿತಿ ಹೇಗಿದೆ ನೋಡಿ ಎಂದು ಹೇಳಿದ್ದಾರೆ. ಇದೀಗ ಇವರ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ. ಆದರೆ ಪಾಕಿಸ್ತಾನ ಮಾತ್ರ ಮಕ್ಕಳು ಚರಂಡಿ ಬೀಳುತ್ತಿರುವ ಬಗ್ಗೆ ವರದಿ ಮಾಡುತ್ತಿದ್ದೇವೆ. ಕರಾಚಿಯಲ್ಲಿ ಜನ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ದೇಶದಲ್ಲಿ 2.6 ಕೋಟಿ ಮಕ್ಕಳಿದ್ದು, ಅವರಿಗೆ ಶಿಕ್ಷಣ ಸೌಲಭ್ಯವೂ ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

ಕೆಲವು ದಿನಗಳ ಹಿಂದೆ ಇಡೀ ಪ್ರಪಂಚದಲ್ಲೇ ಭಾರತ ಬಲಿಷ್ಠ ರಾಷ್ಟ್ರವಾಗಿ ಬೆಳೆಯುತ್ತಿದೆ. ನಾವು ಮಾತ್ರ ಹಣಕಾಸಿನ ಸಹಾಯಕ್ಕಾಗಿ ಭಿಕ್ಷೆ ಬೇಡುತ್ತಿದ್ದೇವೆ ಎಂದು ಪಾಕಿಸ್ತಾನದ ವಿಪಕ್ಷ ನಾಯಕ ಮೌಲಾನ ಫಜ್ಲೂರ್‌ ರೆಹಮಾನ್‌ ಹೇಳಿದ್ದರು. ಅವರು ಪಾಕಿಸ್ತಾನ ಸಂಸತ್‌ನಲ್ಲಿ ಸರ್ಕಾರ ವೈಫಲ್ಯದ ವಿರುದ್ಧ ವಾಗ್ದಾಳಿ ನಡೆಸುತ್ತಾ, ಭಾರತ ಜಾಗತಿಕ ಮಟ್ಟದಲ್ಲಿ ಸೂಪರ್‌ ಪವರ್‌ಫುಲ್‌ ರಾಷ್ಟ್ರವಾಗಿ ಬೆಳೆಯುತ್ತಿದೆ ಪಾಕಿಸ್ತಾನ ಮಾತ್ರ ದಿವಾಳಿತನದತ್ತ ಸಾಗುತ್ತಿದೆ. 1947ರಲ್ಲಿ ಭಾರತ ಮತ್ತು ಪಾಕಿಸ್ತಾನ ಸ್ವಾತಂತ್ರ್ಯ ಪಡೆದುಕೊಂಡಿತ್ತು. ಇಂದು ಭಾರತದ ಸ್ಥಿತಿ ಎಲ್ಲಿದೆ ಹಾಗೂ ನಮ್ಮ ಸ್ಥಿತಿ ಎಲ್ಲಿದೆ? ಇಷ್ಟಕ್ಕೆಲ್ಲಾ ಯಾರು ಹೊಣೆ ಎಂದು ಕಟುವಾಗಿ ಪ್ರಶ್ನಿಸಿದ್ದರು.

ಪಾಕಿಸ್ತಾನದ ವೈಫಲ್ಯಗಳ ಪಟ್ಟಿ ಮಾಡಹೊರಟರೆ ಮುಗಿಯುವುದೇ ಇಲ್ಲ. ಶುದ್ಧ ಕುಡಿಯುವ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಸರಿಯಾದ ಆಧುನಿಕ ಶಿಕ್ಷಣ ಕಲಿಸುವ ಶಾಲೆಗಳಿಲ್ಲ. ಸಿಂಧ್‌ ಪ್ರಾಂತ್ಯದಲ್ಲಿ 70 ಲಕ್ಷ ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಅಲ್ಲಿ ಒಟ್ಟು 2.62 ಕೋಟಿ ಮಕ್ಕಳು ಶಾಲೆಗೆ ಹೋಗುತ್ತಿಲ್ಲ. ಮತಾಂಧತೆ ಕಲಿಸುವ ಮದ್ರಸ ಶಿಕ್ಷಣ ಮಾತ್ರ ವ್ಯಾಪಕವಾಗಿದೆ. ಹಣದುಬ್ಬರದ ಏರಿಕೆಯಿಂದಾಗಿ ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆಯು ದಿನೇದಿನೆ ಜಾಸ್ತಿಯಾಗುತ್ತಿದ್ದು, ಜನ ಹೈರಾಣಾಗುತ್ತಿದ್ದಾರೆ. ಒಂದು ಲೀಟರ್‌ ಪೆಟ್ರೋಲ್‌ಗೆ 290 ರೂ. (ಪಾಕಿಸ್ತಾನದ ರೂಪಾಯಿ) ಆದರೆ, ಒಂದು ಕೆ.ಜಿ ಗೋಧಿ ಹಿಟ್ಟಿಗೆ 800 ರೂ. ಕೊಡಬೇಕಾಗಿದೆ. ಒಂದು ರೊಟ್ಟಿಗೆ 25 ರೂ. ನೀಡಬೇಕಾಗಿದೆ. ಇದರಿಂದಾಗಿ ಸಾಮಾನ್ಯ ಜನ ಮೂರು ಹೊತ್ತು ಊಟ ಮಾಡಲು ಕೂಡ ತೊಂದರೆಯಾಗುತ್ತಿದೆ. ಹಣಕಾಸಿನ ಕೊರತೆಯಿಂದ ಬಳಲುತ್ತಿರುವ ಪಾಕ್‌ನ ವಿದೇಶಿ ವಿನಿಮಯ ಮೀಸಲು ನಿಧಿ ಆಮದನ್ನು ಪೂರೈಸಲು ಸಾಕಾಗುತ್ತಿಲ್ಲ.

ಉಗ್ರರ ಪೋಷಣೆ, ಅವರಿಗೆ ಹಣಕಾಸು ನೆರವು, ಅಸಮರ್ಥ ನಾಯಕತ್ವ, ಕೊರೊನಾ ಬಿಕ್ಕಟ್ಟು ಸೇರಿ ಹಲವು ಕಾರಣಗಳಿಂದ ಪಾಕಿಸ್ತಾನ ದಿವಾಳಿಯಾಗಿದೆ. ಇದೇ ಕಾರಣಕ್ಕಾಗಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ (IMF) ಎದುರು ಹಣಕ್ಕಾಗಿ ಭಿಕ್ಷಾಪಾತ್ರೆ ಹಿಡಿದು ನಿಂತಿದೆ. ಈಗಾಗಲೇ ಐಎಂಎಫ್‌ 3 ಶತಕೋಟಿ ಡಾಲರ್‌ ಸಾಲ ನೀಡಲು ಒಪ್ಪಿಗೆ ಸೂಚಿಸಿದೆ. ಆದರೆ, ಮುಂದಿನ ಮೂರು ವರ್ಷಗಳವರೆಗೆ 6 ಶತಕೋಟಿ ಡಾಲರ್‌ ಸಾಲ ನೀಡಿ ಎಂದು ಪಾಕಿಸ್ತಾನ ಮನವಿ ಮಾಡುತ್ತಿದೆ. ಆದರೆ, ಪಾಕ್‌ನಲ್ಲಿ ದಿನೇದಿನೆ ಹಣದುಬ್ಬರದ ಏರಿಕೆಯಾಗುತ್ತಿರುವ ಕಾರಣ ಸಾಲ ನೀಡಲು ಐಎಂಎಫ್‌ ಹಿಂದೇಟು ಹಾಕುತ್ತಿದೆ. ಇದಕ್ಕಾಗಿಯೇ, ಆಡಳಿತ ಕಾರ್ಯತಂತ್ರದ ಘಟಕಗಳನ್ನು ಹೊರತುಪಡಿಸಿ ಎಲ್ಲ ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿದೆ. ಐಎಂಎಫ್‌ ಪಾಕಿಸ್ತಾನಕ್ಕೆ ಸೂಚಿದ ಶಿಫಾರಸ್ಸಿನ ಪಟ್ಟಿಯಲ್ಲಿ ನಷ್ಟದಲ್ಲಿರುವ ಸರ್ಕಾರಿ ಉದ್ಯಮಗಳ ಖಾಸಗೀಕರಣವೂ ಸೇರಿದೆ.

ಭಾರತವನ್ನು ದ್ವೇಷಿಸುತ್ತ ಪಾಕ್‌ ಹುಟ್ಟುಹಾಕಿದ ಮತಾಂಧ ಭಯೋತ್ಪಾದನೆ ಇಂದು ಅದನ್ನೇ ತಿನ್ನುತ್ತಿದೆ. ಇನ್ನಾದರೂ ಪಾಕ್ ಆಡಳಿತಗಾರರಿಗೆ, ಸೇನಾಧಿಕಾರಿಗಳಿಗೆ ಬುದ್ಧಿ ಬರಲಿ. ಕಾಶ್ಮೀರ ಮತ್ತಿತರ ವಿಚಾರಗಳನ್ನು ಪ್ರಸ್ತಾಪಿಸುತ್ತ ಭಾರತಕ್ಕೆ ಮುಜುಗರ ಸೃಷ್ಟಿಸಲು ವಿಫಲ ಪ್ರಯತ್ನ ಮಾಡುತ್ತಿರುವ ಪಾಕ್‌ ತನ್ನ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ಮೊದಲು ಗಮನಿಸಲಿ. ಅಲ್ಲಿನ ರಾಜಕೀಯ ನಾಯಕರೇ ತಮ್ಮ ಸ್ಥಿತಿಯನ್ನು ಪ್ರಾಮಾಣಿಕವಾಗಿ ಒಪ್ಪಿಕೊಂಡಾಗ, ತಿದ್ದಿಕೊಳ್ಳಲು ಸರಿಯಾದ ಕಾಲ ಬಂದಿದೆ ಎಂದರ್ಥ.

ಇದನ್ನೂ ಓದಿ: CAA: ಪಾಕಿಸ್ತಾನದಿಂದ ಬಂದ ಹಿಂದುಗಳಿಗೆ ಸಿಎಎ ಅನ್ವಯ ಭಾರತದ ಪೌರತ್ವ; ದೆಹಲಿಯಲ್ಲಿ ಸಂಭ್ರಮ, Video ಇಲ್ಲಿದೆ

Continue Reading

ದೇಶ

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

Kapil Sibal: ಕಪಿಲ್‌ ಸಿಬಲ್‌ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಅವರು ಆಯ್ಕೆಯಾಗಿದ್ದಾರೆ. ಇದು ಉದಾರವಾದಿಗಳು, ಜಾತ್ಯತೀತವಾದಿಗಳು, ಪ್ರಜಾಪ್ರಭುತ್ವವಾದಿಗಳು ಹಾಗೂ ಪ್ರಗತಿಪರರಿಗೆ ಸಿಕ್ಕ ದೊಡ್ಡ ಗೆಲುವಾಗಿದೆ” ಎಂದು ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

Kapil Sibal
Koo

ನವದೆಹಲಿ: ಸುಪ್ರೀಂ ಕೋರ್ಟ್‌ ಹಿರಿಯ ವಕೀಲ, ಕೇಂದ್ರದ ಮಾಜಿ ಸಚಿವರೂ ಆದ ಕಪಿಲ್‌ ಸಿಬಲ್‌ (Kapil Sibal) ಅವರು ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ (Supreme Court Bar Association) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ಗೆ ಗುರುವಾರ (ಮೇ 16) ಚುನಾವಣೆ ನಡೆದಿದ್ದು, ಕಪಿಲ್‌ ಸಿಬಲ್‌ ಅವರು ಪ್ರದೀಪ್‌ ರೈ ವಿರುದ್ಧ ಗೆಲುವು ಸಾಧಿಸುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಮೇ 8ರಂದು ಚುನಾವಣೆಗೆ ಸ್ಪರ್ಧಿಸುವುದಾಗಿ ಕಪಿಲ್‌ ಸಿಬಲ್‌ ಘೋಷಣೆ ಮಾಡಿದ್ದರು.

ಕಪಿಲ್‌ ಸಿಬಲ್‌ ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಅವರು ಅಭಿನಂದನೆ ಸಲ್ಲಿಸಿದ್ದಾರೆ. “ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಅವರು ಆಯ್ಕೆಯಾಗಿದ್ದಾರೆ. ಇದು ಉದಾರವಾದಿಗಳು, ಜಾತ್ಯತೀತವಾದಿಗಳು, ಪ್ರಜಾಪ್ರಭುತ್ವವಾದಿಗಳು ಹಾಗೂ ಪ್ರಗತಿಪರರಿಗೆ ಸಿಕ್ಕ ದೊಡ್ಡ ಗೆಲುವಾಗಿದೆ. ದೇಶದಲ್ಲಿ ಬದಲಾವಣೆಯಾಗುತ್ತಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ. ಮುಂದಿನ ದಿನಗಳಲ್ಲಿ ದೇಶದ ಪ್ರಧಾನಿಯೂ ಬದಲಾಗಲಿದ್ದಾರೆ” ಎಂದು ನರೇಂದ್ರ ಮೋದಿ ಅವರಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ.

ಕಪಿಲ್‌ ಸಿಬಲ್‌ ಹಿನ್ನೆಲೆ ಏನು?

ದೇಶದ ಪ್ರಮುಖ ವಕೀಲರಲ್ಲಿ ಕಪಿಲ್‌ ಸಿಬಲ್‌ ಅವರು ಒಬ್ಬರಾಗಿದ್ದಾರೆ. ಪಂಜಾಬ್‌ನ ಜಲಂಧರ್‌ನವರಾದ ಕಪಿಲ್‌ ಸಿಬಲ್‌ ಅವರು ಹಾರ್ವರ್ಡ್‌ ಲಾ ಸ್ಕೂಲ್‌ನಲ್ಲಿ ಪದವಿ ಪಡೆದು, ವಕೀಲಿಕೆ ಆರಂಭಿಸಿದರು. 1983ರಲ್ಲಿ ಇವರು ಹಿರಿಯ ವಕೀಲ ಎಂಬ ಖ್ಯಾತಿ ಗಳಿಸಿದರು. ಇವರು 1989ರಿಂದ 1990ರವರೆಗೆ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಆಗಿದ್ದರು. ಇವರು 1995ರಿಂದ 2002ರ ಅವಧಿಯಲ್ಲಿ ಮೂರು ಬಾರಿ ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.

ಕಾಂಗ್ರೆಸ್ ನಾಯಕರೂ ಆಗಿರುವ ಕಪಿಲ್‌ ಸಿಬಲ್‌ ಅವರು ಮನಮೋಹನ್‌ ಸಿಂಗ್‌ ಅವರು ಪ್ರಧಾನಿಯಾಗಿದ್ದಾಗ ಸಚಿವರೂ ಆಗಿದ್ದರು. ರಾಜ್ಯಸಭೆ ಸದಸ್ಯರಾಗಿ, 2004ರಲ್ಲಿ ಚಾಂದಿನಿ ಚೌಕ್‌ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸ್ಮೃತಿ ಇರಾನಿ ಅವರನ್ನು ಸೋಲಿಸಿದ್ದರು. ಇದುವರೆಗೆ ಹಿರಿಯ ವಕೀಲ ಆದಿಶ್‌ ಅಗರ್ವಾಲ ಅವರು ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿದ್ದರು. ಈಗ ಕಪಿಲ್‌ ಸಿಬಲ್‌ ಅವರು ಮತ್ತೆ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ: Ujjivan Small Finance Bank : ಉಜ್ಜೀವನ್ ಸ್ಮಾಲ್ ಫೈನಾನ್ಸ್ ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ

Continue Reading

ಕ್ರೀಡೆ

MS Dhoni : ಆರ್​​ಸಿಬಿ ವಿರುದ್ಧ ಬೌಲಿಂಗ್ ಮಾಡಲು ಅಭ್ಯಾಸ ನಡೆಸಿದ ಎಂ ಎಸ್​ ಧೋನಿ

MS Dhoni : ಧೋನಿ ಕಡಿಮೆ ವೇಗದ ಆಫ್-ಸ್ಪಿನ್ ಬೌಲಿಂಗ್ ಮಾಡುತ್ತಿರುವುದು ಕಂಡುಬಂದಿದೆ. ನೆಟ್ಸ್​ನಲ್ಲಿ ತಮ್ಮ ಕೈಚಳಕ ತೋರಿದ್ದಾರೆ. ಐಪಿಎಲ್ 2023 ರ ಸಮಯದಲ್ಲಿಯೂ ಧೋನಿ ಸಿಎಸ್​ಕೆ ಬ್ಯಾಟರ್​ಗಳಿಗೆ ನೆಟ್ಸ್​ನಲ್ಲಿ ಬೌಲಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಸಿಎಸ್​ಕೆ ಸ್ಟಾರ್ ಬೌಲಿಂಗ್​ನ ಇತ್ತೀಚಿನ ವೀಡಿಯೊ ಈಗಾಗಲೇ ವೈರಲ್ ಆಗಿದೆ.

VISTARANEWS.COM


on

MS Dhoni
Koo

ಬೆಂಗಳೂರು: ಮೇ 18 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಪಂದ್ಯದ ಮೇಲೆ ಎಂಎಸ್ ಧೋನಿ (MS Dhoni) ಸಂಪೂರ್ಣ ಗಮನ ಹರಿಸಿದ್ದಾರೆ. ಸ್ಟಾರ್ ವಿಕೆಟ್ ಕೀಪರ್ ನೆಟ್ ಸೆಷನ್ ಸಮಯದಲ್ಲಿ ತಮ್ಮ ವಿಕೆಟ್​ಕೀಪಿಂಗ್​ ಗ್ಲೌಸ್ ಗಳೊಂದಿಗೆ ಸತತವಾಗಿ ಅಭ್ಯಾಸ ನಡೆಸುತ್ತಿದ್ದಾರೆ. ಏತನ್ಮಧ್ಯೆ ಅವರು ಸ್ವಲ್ಪ ಬೌಲಿಂಗ್ ಕೂಡ ಮಾಡುತ್ತಿದ್ದಾರೆ. ಧೋನಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಎಂದಿಗೂ ಬೌಲಿಂಗ್ ಮಾಡಿಲ್ಲ. ಆದರೆ ಆರ್​ಸಿಬಿ ವಿರುದ್ಧ ಬೌಲಿಂಗ್ ಮಾಡಬಲ್ಲರು ಎಂದು ಹೇಳಲಾಗುತ್ತಿದೆ!

ಧೋನಿ ಕಡಿಮೆ ವೇಗದ ಆಫ್-ಸ್ಪಿನ್ ಬೌಲಿಂಗ್ ಮಾಡುತ್ತಿರುವುದು ಕಂಡುಬಂದಿದೆ. ನೆಟ್ಸ್​ನಲ್ಲಿ ತಮ್ಮ ಕೈಚಳಕ ತೋರಿದ್ದಾರೆ. ಐಪಿಎಲ್ 2023 ರ ಸಮಯದಲ್ಲಿಯೂ ಧೋನಿ ಸಿಎಸ್​ಕೆ ಬ್ಯಾಟರ್​ಗಳಿಗೆ ನೆಟ್ಸ್​ನಲ್ಲಿ ಬೌಲಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಸಿಎಸ್​ಕೆ ಸ್ಟಾರ್ ಬೌಲಿಂಗ್​ನ ಇತ್ತೀಚಿನ ವೀಡಿಯೊ ಈಗಾಗಲೇ ವೈರಲ್ ಆಗಿದೆ.

ನೆಟ್ಸ್​ನಲ್ಲಿ ತಾವು ಎದುರಿಸಿದ ಕಠಿಣ ಬೌಲರ್ ಧೋನಿ ಎಂದು ರೈನಾ ಒಮ್ಮೆ ಹೇಳಿದ್ದರು. ಅಭ್ಯಾಸದ ವೇಲೆ ಧೋನಿ ಎಸೆತಕ್ಕೆ ಔಟಾದರೆ ಅವರು ನಿಮ್ಮನ್ನು ಪದೇ ಪದೇ ಕಾಡುತ್ತಾರೆ. ಹೇಗೆ ಔಟ್ ಮಾಡಿದೆ ಎಂಬುದನ್ನು ನೆನಪಿಸುತ್ತಾರೆ ಎಂದು ಸಿಎಸ್​ಕೆ ಮಾಜಿ ಬ್ಯಾಟ್ಸ್ಮನ್ ಹೇಳಿದ್ದರು.

“ನಾನು ಎದುರಿಸಿದ ಕಠಿಣ ಬೌಲರ್​​ ಮುರಳೀಧರನ್ ಮತ್ತು ಮಾಲಿಂಗ ಎಂದು ಭಾವಿಸುತ್ತೇನೆ. ಆದರೆ ನೆಟ್ಸ್​ನಲ್ಲಿ ಅದು ಎಂಎಸ್ ಧೋನಿ. ಅವರಯ ನಿಮ್ಮನ್ನು ಔಟ್ ಮಾಡಿದರೆ ನೀವು ಒಂದೂವರೆ ತಿಂಗಳವರೆಗೆ ಅವರ ಬಳಿಗೆ ಹೋಗಲು ಸಾಧ್ಯವಾಗುವುದಿಲ್ಲ ಏಕೆಂದರೆ ಅವರು ಔಟಾದ ರೀತಿಯನ್ನು ಸನ್ನೆ ಮಾಡುತ್ತಲೇ ಇರುತ್ತಾರೆ. ಅವರು ನಿಮ್ಮನ್ನು ಹೇಗೆ ಔಟ್ ಮಾಡಿದನೆಂದು ನೆನಪಿಸುತ್ತಾರೆ . ಅವರು ಆಫ್-ಸ್ಪಿನ್, ಮಧ್ಯಮ ವೇಗ, ಲೆಗ್ ಸ್ಪಿನ್, ಎಲ್ಲವನ್ನೂ ಬೌಲಿಂಗ್ ಮಾಡುತ್ತಿದ್ದರು. ನೆಟ್ಸ್​ಬಲ್ಲಿ ಅವರು ತಮ್ಮ ಮುಂಭಾಗದ ಪಾದದ ನೋ-ಬಾಲ್​ಗಳನ್ನು ಸಹ ಸಮರ್ಥಿಸುತ್ತಿದ್ದರು. ಟೆಸ್ಟ್ ನೆಟ್ಸ್​ನಲ್ಲಿ ಅವರು ಬೌಲಿಂಗ್ ಚೆನ್ನಾಗಿ ಮಾಡುತ್ತಿದ್ದರು. ಇಂಗ್ಲೆಂಡ್​​ನಲ್ಲಿ ಅವರು ಅದನ್ನು ವೇಗದಲ್ಲಿ ಸ್ವಿಂಗ್ ಮಾಡುತ್ತಿದ್ದರು, “ಎಂದು ರೈನಾ ಹೇಳಿದ್ದರು.

ಇದನ್ನೂ ಓದಿ: MS Dhoni : ಆರ್​ಸಿಬಿಯವರು ಕೊಟ್ಟ ಬೆಂಗಳೂರಿನ ಸ್ಪೆಷಲ್​ ಚಹಾ ಕುಡಿದ ಧೋನಿ; ಇಲ್ಲಿದೆ ವಿಡಿಯೊ

ಧೋನಿ ಗುರುವಾರ ನೆಟ್ಸ್​ನಲ್ಲಿ ಬೌಲಿಂಗ್ ಮಾಡಿದ್ದರೂ, ಶನಿವಾರದ ಪಂದ್ಯದ ಸಮಯದಲ್ಲಿ ಸಿಎಸ್ಕೆ ಸ್ಟಾರ್ ಅದೇ ರೀತಿ ಮಾಡುವುದಿಲ್ಲ ಎಂದು ಅಭಿಮಾನಿಗಳು ಸಂಪೂರ್ಣವಾಗಿ ನಿರೀಕ್ಷಿಸಬಹುದು. ಧೋನಿ ಈ ಋತುವಿನಲ್ಲಿ ಕೆಲವು ಗಾಯದ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಚೆನ್ನೈನ ಮಾಜಿ ನಾಯಕ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ತಡವಾಗಿ ಬರಲು ಇದು ಕಾರಣವಾಗಿದೆ.

ಧೋನಿ ಟೆಸ್ಟ್ ಮತ್ತು ಏಕದಿನ ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದಾರೆ. 50 ಓವರ್​ಗಳ ಸ್ವರೂಪದಲ್ಲಿ ಒಂದು ವಿಕೆಟ್ ಪಡೆದಿದ್ದಾರೆ. ಧೋನಿ ಆರ್​ಸಿಬಿ ಶಿಬಿರದೊಂದಿಗೆ ಸ್ವಲ್ಪ ಮೋಜಿನ ಸಮಯವನ್ನು ಕಳೆಯುತ್ತಿದ್ದರು. ಅವರೊಂದಿಗೆ ಚಹಾ ಕೂಡ ಸೇವಿಸಿದ್ದರು.

Continue Reading
Advertisement
These foods are really what our body needs in summer
ಆರೋಗ್ಯ14 mins ago

Health Tips in Kannada: ಬೇಸಿಗೆಯಲ್ಲಿ ನಿಜಕ್ಕೂ ನಮ್ಮ ದೇಹಕ್ಕೆ ಬೇಕಾಗಿರುವುದು ಈ ಆಹಾರಗಳು

Lok Sabha Election 2024
ದೇಶ24 mins ago

Lok Sabha Election 2024: ಬಿಜೆಪಿಯ 400+ ಲೆಕ್ಕಾಚಾರ ಉಲ್ಟಾ? ಚುನಾವಣೆ ಹೊತ್ತಲ್ಲೇ ಪಕ್ಷಕ್ಕೆ ಬಿಗ್‌ ಶಾಕ್‌!

Medical Negligence
ದೇಶ26 mins ago

ವೈದ್ಯರ ಸಲಹೆಯಂತೆ 5 ದಿನದ ಹಸುಳೆಯನ್ನು ಬಿಸಿಲಿನಲ್ಲಿ ಮಲಗಿಸಿದರು; ಬೆಂದು ಕರಟಿಹೋಯ್ತು ಕಂದಮ್ಮನ ಜೀವ

anjali murder case girish
ಕ್ರೈಂ38 mins ago

Anjali Murder Case: ಅಂಜಲಿ ಹಂತಕನಿಗೆ ಸಾರ್ವಜನಿಕರಿಂದ ಗೂಸಾ, ಬಂಧನ

techie wife udr case
ಕ್ರೈಂ1 hour ago

UDR Case: ಟೆಕ್ಕಿ ಪತ್ನಿಯ ಅನುಮಾನಾಸ್ಪದ ಸಾವು

Karnataka weather Forecast
ಮಳೆ2 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

World Hypertension Day Today is Global Blood Pressure Day
ಆರೋಗ್ಯ3 hours ago

World Hypertension Day: ಇಂದು ಜಾಗತಿಕ ರಕ್ತದೊತ್ತಡ ದಿನ; ಈ ಸಮಸ್ಯೆಯ ಅರಿವು ನಿಮಗೆಷ್ಟಿದೆ?

Pakistan
ಸಂಪಾದಕೀಯ8 hours ago

ವಿಸ್ತಾರ ಸಂಪಾದಕೀಯ: ಒಪ್ಪಿಕೊಂಡರೆ ಸಾಲದು, ಪಾಕ್‌ ತನ್ನನ್ನು ಸರಿಪಡಿಸಿಕೊಳ್ಳಲಿ

Kapil Sibal
ದೇಶ8 hours ago

Kapil Sibal: ಸುಪ್ರೀಂ ಕೋರ್ಟ್‌ ಬಾರ್‌ ಅಸೋಸಿಯೇಷನ್‌ ಅಧ್ಯಕ್ಷರಾಗಿ ಕಪಿಲ್‌ ಸಿಬಲ್‌ ಆಯ್ಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ16 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ18 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು22 hours ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌