Site icon Vistara News

KRS | ಮಂಡ್ಯದ ಕೆಆರ್‌ಎಸ್‌ ಬೃಂದಾವನದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ

krs brindavan garden Leopard not found

ಮಂಡ್ಯ: ಮಂಡ್ಯ ಜಿಲ್ಲೆಯ ಪ್ರಸಿದ್ಧ ಕೆ ಆರ್ ಎಸ್ ಬೃಂದಾವನದಲ್ಲಿ ಭಾನುವಾರ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ.
ಚಿರತೆ ಪ್ರತ್ಯಕ್ಷವಾದ ಸುದ್ದಿ ತಿಳಿದೊಡನೆ, ಕೆಆರ್‌ಎಸ್ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರನ್ನು ಹೊರಗೆ ಕಳುಹಿಸಲಾಯಿತು.
ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮುಂಜಾಗರೂಕತಾ ಕ್ರಮಗಳನ್ನು ಕೈಗೊಂಡರು.

ಬೃಂದಾವನದಲ್ಲಿ ಚಿರತೆ ಬಂದಿರುವ ಸುದ್ದಿ ತಿಳಿದು ಆತಂಕದಿಂದಲೇ ಪ್ರವಾಸಿಗರು ಹೊರ ನಡೆದರು.
ಸತತ ಮೂರನೇ ಬಾರಿಗೆ ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಿದೆ. ಬೃಂದಾವನದಲ್ಲಿ ಚಿರತೆ ಸೆರೆಗೆ ಬೋನ್ ಇಟ್ಟಿದ್ದರು. ಆದರೆ ಚಿರತೆ ಇದುವರೆಗೆ ಇದಕ್ಕೆ ಬಿದ್ದಿಲ್ಲ.

Exit mobile version