Vistara mews launch | ವಿಸ್ತಾರ ನ್ಯೂಸ್‌ ಕರ್ನಾಟಕದ ಗಡಿ ದಾಟಲಿ : ವಿಸ್ತಾರ ನ್ಯೂಸ್‌ ಚಾನೆಲ್‌ಗೆ ಮುಖ್ಯಮಂತ್ರಿ ಶುಭ ಹಾರೈಕೆ - Vistara News

ಪ್ರಮುಖ ಸುದ್ದಿ

Vistara mews launch | ವಿಸ್ತಾರ ನ್ಯೂಸ್‌ ಕರ್ನಾಟಕದ ಗಡಿ ದಾಟಲಿ : ವಿಸ್ತಾರ ನ್ಯೂಸ್‌ ಚಾನೆಲ್‌ಗೆ ಮುಖ್ಯಮಂತ್ರಿ ಶುಭ ಹಾರೈಕೆ

ವಿಸ್ತಾರ ನ್ಯೂಸ್‌ ಚಾನೆಲ್‌ ಕರ್ನಾಟಕದ ಗಡಿಯನ್ನು ದಾಟಿ ವಿಸ್ತಾರವಾಗಿ ಅಪಾರ ಜನಮನ್ನಣೆ ಗಳಿಸಲಿ, ಪ್ರಜಾಪ್ರಭುತ್ವದ ಸಂರಕ್ಷಣೆಗೆ ಕೊಡುಗೆ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು (Vistara mews launch) ಶುಭ ಹಾರೈಸಿದ್ದಾರೆ.

VISTARANEWS.COM


on

bommai
ವಿಸ್ತಾರ ನ್ಯೂಸ್‌ ಚಾನೆಲ್‌ಗೆ ಚಾಲನೆ ನೀಡಿದ ಬಳಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಸ್ತಾರ ಡಿಜಿಟಲ್‌ ನ್ಯೂಸ್ ಈಗಾಗಲೇ ಕ್ಷಿಪ್ರ ಅವಧಿಯಲ್ಲಿ ತನ್ನ ಗುಣಮಟ್ಟದಿಂದಾಗಿ ಜನಮನ್ನಣೆ ಗಳಿಸಿದೆ. ಇದೇ ರೀತಿ ವಿಸ್ತಾರ ನ್ಯೂಸ್‌ ಚಾನೆಲ್‌ ಕೂಡ ಕರ್ನಾಟಕದ ಗಡಿ ದಾಟಿ ಜನಪ್ರಿಯವಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Vistara mews launch) ಅವರು ಶುಭಾಶಯ ಕೋರಿದರು.

ಕನ್ನಡ ಮಾಧ್ಯಮ ಲೋಕದ ಬಹು ನಿರೀಕ್ಷಿತ ವಿಸ್ತಾರ ನ್ಯೂಸ್‌ ಚಾನೆಲ್‌ಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಮಾಧ್ಯಮ ಮತ್ತು ಜನರ ಮನದಾಳಕ್ಕೂ ಅವಿನಾಭಾವ ಸಂಬಂಧ ಇದೆ. ಸಿನಿಮಾ ನೋಡುವಾಗ ಜನರ ಮನದಾಳದ ಡೈಲಾಗ್‌ ಅನ್ನು ಹೀರೊ ಹೇಳಿದಾಗ ಜನ ಚಪ್ಪಾಳೆ ತಟ್ಟಿ ಮೆಚ್ಚುತ್ತಾರೆ. ಅದೇ ರೀತಿ ಮಾಧ್ಯಮ ಜನರ ದನಿಯಾಗಬೇಕು. ಇಂದು ತಂತ್ರಜ್ಞಾನ ಇಡೀ ಬದುಕನ್ನು ಆವರಿಸಿದೆ. ನಮ್ಮ ಚಿಂತನಾಶಕ್ತಿ ಕಡಿಮೆಯಾಗುತ್ತಿದೆ. ನಾವು ಒಂದು ಬಟನ್‌ ಒತ್ತಿದರೆ ಎಲ್ಲವೂ ಸಿಗುವಂಥ ತಂತ್ರಜ್ಞಾನ ಬೆಳೆದಿದೆ. ಆದರೆ ಇಂಥ ಸಂದರ್ಭದಲ್ಲಿ ಅಂತಃಕರಣವನ್ನು, ಮಾನವೀಯತೆ, ಪ್ರೀತಿ, ವಿಶ್ವಾಸವನ್ನು ಯಾರೂ ಮರೆಯಬಾರದು. ಅದನ್ನು ಕಂಪ್ಯೂಟರ್‌ ಹೇಳಿಕೊಡುವುದಿಲ್ಲ. ಯಾವುದೇ ರಾಜಕಾರಣಿಗೆ ತಲೆ ತಣ್ಣಗಿರಬೇಕು, ಹೃದಯ ಬೆಚ್ಚಗಿರಬೇಕು ಎಂದು ಹಿರಿಯರು ಹೇಳುತ್ತಾರೆ. ಯಾರು ಏನೇ ಮಾತನಾಡಿದರೂ ತಲೆ ಕೆಡಿಸಿಕೊಳ್ಳಬಾರದು. ನಮ್ಮ ಗುರಿ, ಸಂಕಲ್ಪ ಸರಿಯಾಗಿದ್ದಾಗ ಎಲ್ಲವೂ ಸಾಧ್ಯವಾಗುತ್ತದೆ. ನಮ್ಮ ಕರ್ತವ್ಯಪರತೆ ನಮ್ಮ ಕೈಯಲ್ಲಿದೆ. ಯಾವುದೂ ಶಾಶ್ವತವಲ್ಲ, ಪ್ರೀತಿ ಮತ್ತು ವಿಶ್ವಾಸ ದೊಡ್ಡದು. ಜನರಿಗೆ ಪ್ರಜಾಪ್ರಭುತ್ವದ ಮೇಲೆ ಅಪಾರ ವಿಶ್ವಾಸ ಇದೆ. ಅದನ್ನು ಸಂರಕ್ಷಿಸಲು ಮಾಧ್ಯಮಗಳು, ರಾಜಕಾರಣಿಗಳು ಕಾರ್ಯಪ್ರವೃತ್ತವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜನರ ಮನದಾಳದ ಕನ್ನಡಿ ಮಾಧ್ಯಮ:

ಮಾಧ್ಯಮ ಮತ್ತು ಸಾರ್ವಜನಿಕ ವಲಯದ್ದು ಅವಿನಾಭಾವ ಸಂಬಂಧ. ಓದುಗರಿಲ್ಲದೆ ಪತ್ರಿಕೆಗಳು ಇಲ್ಲ, ನೋಡುಗರಿಲ್ಲದೆ ಚಾನೆಲ್‌ಗಳಿಲ್ಲ. ಹೀಗೆ ಇವೆರೆಡರ ಸಂಬಂಧವನ್ನು ಚೆನ್ನಾಗಿ ಅರಿತವರು ಯಶಸ್ವಿಯಾಗುತ್ತಾರೆ. ಜನರ ಮನದಾಳದಲ್ಲಿ ಏನಿದೆ ಎಂಬುದನ್ನು ಅರಿತುಕೊಳ್ಳುವುದು ಮುಖ್ಯ. ಹರಿಪ್ರಕಾಶ್‌ ಕೋಣೆಮನೆಯವರ ಅಪಾರ ಅನುಭವ, ಕ್ರಿಯಾಶೀಲತೆ, ಜನಮಾನಸದ ಜತೆ ಗುರುತಿಸಿಕೊಂಡಿರುವ ರೀತಿ, ಸ್ಥಿತಪ್ರಜ್ಞತೆಯಿಂದ, ಅವರ ನೇತೃತ್ವದಲ್ಲಿ ವಿಸ್ತಾರ ಸುವಿಸ್ತಾರವಾಗಿ ಬೆಳೆಯುವ ವಿಶ್ವಾಸ ಇದೆ ಎಂದು ಶುಭ ಹಾರೈಸಿದರು.

ಮಾಧ್ಯಮ-ರಾಜಕಾರಣಿಗಳ ಸಂಬಂಧ:

ಮಾಧ್ಯಮಗಳು ಮತ್ತು ರಾಜಕಾರಣಿಗಳ ನಂಟನ್ನು ವಿವರಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಷ್ಟೇ ಜಗಳವಾಡಿದರೂ, ಭಿನ್ನಾಭಿಪ್ರಾಯವಿದ್ದರೂ, ಮಾಧ್ಯಮಗಳು ಮತ್ತು ರಾಜಕಾರಣಿಗಳ ಪರಸ್ಪರ ನಂಟು ಅವಿನಾಭಾವವಾಗಿರುವಂಥದ್ದು, ಗಂಡ-ಹೆಂಡತಿಯ ಸಂಬಂಧವದು ಎಂದು ಲಘು ಹಾಸ್ಯದ ಚಟಾಕಿಯೊಂದಿಗೆ ಬಣ್ಣಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಭವಿಷ್ಯ

Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಪಿತೂರಿ ಮಾಡುವ ಜನರ ಬಗ್ಗೆ ಇರಲಿ ಎಚ್ಚರ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷದ ಪಾಡ್ಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina bhavishya
Koo

ಚಂದ್ರನು ಶುಕ್ರವಾರವೂ ವೃಷಭ ರಾಶಿಯಲ್ಲೇ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಕಟಕ ರಾಶಿಯವರು ಬಿಡುವಿಲ್ಲದ ಕೆಲಸದಿಂದ ಆಯಾಸ ಇರಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ ಮಾಡುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸ್ವಲ್ಪ ಖರ್ಚಿನ ದಿನವಿದು. ಬಹುದಿನಗಳ ಕನಸು ನನಸಾಗುವ ಸಮಯವಿದು. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (18-10-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಆಶ್ವಿನ ಮಾಸ, ಕೃಷ್ಣ ಪಕ್ಷ.
ತಿಥಿ: ಪಾಡ್ಯ 13:14 ವಾರ: ಶುಕ್ರವಾರ
ನಕ್ಷತ್ರ: ಅಶ್ವಿನಿ 13:25 ಯೋಗ: ವಜ್ರ 21:33
ಕರಣ: ಕೌಲವ 13:14 ಅಮೃತಕಾಲ: ಬೆಳಗ್ಗೆ 07:06 ರಿಂದ 08:31
ದಿನದ ವಿಶೇಷ: ಸಿಂಧಗೀ ಭೀಮಾಶಂಕರ ಆರಾಧನೆ

ಸೂರ್ಯೋದಯ : 06:10   ಸೂರ್ಯಾಸ್ತ : 05:59

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ
7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಹಣಕಾಸು ಪ್ರಗತಿಯಲ್ಲಿ ಸಾಧಾರಣವಾಗಿರಲಿದೆ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷ ಇರಲಿದೆ. ಆರೋಗ್ಯದಲ್ಲಿ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಶಾಂತ ಮನಸ್ಥಿತಿ ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚು. ಪ್ರೀತಿ- ಪಾತ್ರರಿಂದ ಕಿರಿಕಿರಿ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಜೀವನದಲ್ಲಿ ಅಭದ್ರತೆ ಮಾನಸಿಕ ಒತ್ತಡ ಉಂಟು ಮಾಡುವ ಸಾಧ್ಯತೆ ಇದೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕಛೇರಿ ಕೆಲಸಗಳು ನಿಧಾನವಾಗಿ ಸಾಗುವುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ ಇರಲಿದೆ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ ಮಾಡುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಸ್ವಲ್ಪ ಖರ್ಚಿನ ದಿನವಿದು. ಬಹುದಿನಗಳ ಕನಸು ನನಸಾಗುವ ಸಮಯವಿದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರೀಕ್ಷಿಸುವವರು. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ, ರಾಜಿಯಾಗದ ಗುಣ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಇರಲಿದೆ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮನೋ ಒತ್ತಡ ಇರಲಿದೆ. ಉದ್ಯೋಗ ಹಾಗೂ ಆರೋಗ್ಯದಲ್ಲಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ಉತ್ತಮವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ ಇದೆ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇದೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ, ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ಆಪ್ತರೊಂದಿಗೆ ಪ್ರಯಾಣ ಮಾಡುವ ವಿಚಾರವಾಗಿ ಚರ್ಚಿಸುವಿರಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಕರ: ನಿಸ್ಪೃಹ ಮನೋಭಾವದ ಕಾರ್ಯ ಸಿದ್ಧಿ ಮಾಡುವುದು. ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಬೇಕು. ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗೆಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 9

Horoscope Today

ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ.ಅತಿಥಿಗಳ ಆಗಮನ ಹರ್ಷ ತರುವುದು. ಉದ್ಯೋಗದ ಬಗ್ಗೆ ಸಾಧಾರಣವಾಗಿರಲಿದೆ . ಕೌಟುಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ ಇದೆ. ಕೌಟಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಗದಗ

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

Lakshmeshwara Town : ನ್ಯಾಯ ಕೇಳಲು ಹೋದ ಗೋಸಾವಿ ಸಮುದಾಯದ ಜನರಿಗೆ ಲಕ್ಷ್ಮೇಶ್ವರ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಲಕ್ಷ್ಮೇಶ್ವರ ಪಿಎಸ್ಐ ಈರಣ್ಣ ರಿತ್ತಿ ಅವರು ಏಕಪಕ್ಷಿಯಗಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಲಾಠಿ ಚಾರ್ಜ್ ಪ್ರಕರಣ ಖಂಡಿಸಿ, ಶ್ರೀರಾಮಸೇನೆ ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿದ್ದು, ಅಕ್ಟೋಬರ್ 19 ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಮತ್ತಷ್ಟು ಬಿಸಿ‌ ಮುಟ್ಟಿಸಲು ಸಜ್ಜಾಗಿದೆ.

VISTARANEWS.COM


on

By

Gosavi samaj lathicharged Sri Ram Sene calls for bandh in Lakshmeshwara town on October 19
Koo

ಗದಗ: ಲಕ್ಷ್ಮೇಶ್ವರ ಪಟ್ಟಣವನ್ನು (Lakshmeshwara Town) ಬಂದ್‌ ಮಾಡುವುದು ಖಚಿತ ಎಂದು ಶ್ರೀರಾಮ ಸೇನೆ ಪಣ ತೊಟ್ಟಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್ ಪ್ರಕರಣ ಖಂಡಿಸಿ, ಶ್ರೀರಾಮಸೇನೆ ಲಕ್ಷ್ಮೇಶ್ವರ ಬಂದ್‌ಗೆ ಕರೆ ನೀಡಿದ್ದು, ಅಕ್ಟೋಬರ್ 19 ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್ ಮಾಡುವ ಮೂಲಕ ಪ್ರತಿಭಟನೆಗೆ ಮತ್ತಷ್ಟು ಬಿಸಿ‌ ಮುಟ್ಟಿಸಲು ಸಜ್ಜಾಗಿದೆ.

ಗುರುವಾರ ಗದಗನ ಪತ್ರಿಕಾ ಭವನದಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ಏರ್ಪಡಿಸಿ ಮಾತನಾಡಿದ ಶ್ರೀರಾಮಸೇನೆ ರಾಜ್ಯ‌ ಕಾರ್ಯದರ್ಶಿ ರಾಜು ಖಾನಪ್ಪನವರ, ದಸರಾ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಗೋಸಾವಿ ಸಮಾಜದ ಯುವಕರ ಮೇಲೆ ಹಲ್ಲೆಯಾಗಿದೆ. ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್ ಆಗಿದೆ. ಇದೆಲ್ಲದಕ್ಕೂ‌ ಕಾರಣ, ಠಾಣೆಯ ಪಿಎಸ್ಐ ಈರಣ್ಣ ರಿತ್ತಿ ಆಗಿದ್ದು, ಅವರನ್ನು ಕೂಡಲೇ‌ ಅಮಾನತು ಮಾಡುವಂತೆ ಒತ್ತಾಯಿಸಿದರು.

ಇನ್ನು ಈ ಬಂದ್ ಕರೆ ವಿರೋಧಿಸಿ ಮುಸ್ಲಿಂ ಹಾಗೂ ಹಿಂದೂ ಸಮಾಜದ ಮುಖಂಡರು ಸುದ್ದಿಗೋಷ್ಠಿ ನಡೆಸಿ ವಿರೋಧ ಮಾಡಿದ್ದಾರೆ. ಆದರೆ ಅ.19 ರಂದು ಲಕ್ಷ್ಮೇಶ್ವರ ಬಂದ್ ಮಾಡೋದಕ್ಕೆ ಸ್ಥಳಿಯರೇ ನಮಗೆಲ್ಲ ಬೆಂಬಲ ನೀಡುತ್ತಿದ್ದಾರೆ. ಬಂದ್‌ಗೆ ವಿರೋಧಿಸುತ್ತಿರುವವರು ಯಾರೂ ಸಹ ಸ್ಥಳೀಯ ನಾಯಕರಲ್ಲ. ಅವರೆಲ್ಲ ಗ್ಯಾಂಬ್ಲರ್ ಗಳು. ಇವರು ಮಾಡುವ ದಂಧೆಗೆಲ್ಲ ಪಿಎಸ್ಐ ಈರಣ್ಣ ರಿತ್ತಿ ಬೆಂಬಲ ಇದೆ.‌ ಹೀಗಾಗಿ ಪಿಎಸ್‌ಐ ಪರವಾಗಿ ಇವರೆಲ್ಲ ನಿಂತಿದ್ದಾರೆ.‌ ಅದೇನೆ ಇರಲಿ,‌ ನಾವು ಮಾತ್ರ ಬಂದ್ ಮಾಡುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಹೇಳಿದ್ದರು.

ಏನಿದು ಘಟನೆ?

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ದಸರಾ ಅಂಗವಾಗಿ ದುರ್ಗಾದೇವಿ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯುತ್ತಿತ್ತು. ಗೋಸಾವಿ ಸಮುದಾಯ ಸಂಭ್ರಮ ಸಡಗರದಿಂದ ಭಾಗಿಯಾಗಿದ್ದರು. ಈ ವೇಳೆ ಲಕ್ಷ್ಮೇಶ್ವರ ಪಟ್ಟಣದ ಮಾರ್ಕೆಟ್ ಪ್ರದೇಶದಲ್ಲಿ ಮೆರವಣಿಗೆ ಸಾಗುವ ವೇಳೆ,‌ ಅನ್ಯಕೋಮಿನ ಯುವಕರು ಬಂದು ಮೆರವಣಿಗೆಯಲ್ಲಿ ಭಾಗಿಯಾದ ಗೋಸಾವಿ ಯುವಕರ ನಡುವೆ ಗಲಾಟೆಯಾಗಿದೆ. ಆಗ ಗೋಸಾವಿ ಯುವಕರು ಕೇಸರಿ ಶಾಲನ್ನು ಹಿಡಿದು ಹಲ್ಲೆ ಮಾಡಿದ್ದಾರಂತೆ.

ಹೀಗಾಗಿ ಶನಿವಾರ ತಡವಾಗಿದ್ದಕ್ಕೆ ಮರುದಿನ ರವಿವಾರ, ಹಲ್ಲೆಗೊಳಗಾದ ಯುವಕರು ಹಾಗೂ ಗೋಸಾವಿ ಸಮುದಾಯದ ಜನರು ಲಕ್ಷ್ಮೇಶ್ವರ ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಲು ಹೋಗಿದ್ದರು. ಆಗ ಲಕ್ಷ್ಮೇಶ್ವರ ಪೊಲೀಸರು ದೂರು ದಾಖಲು ಮಾಡಿಕೊಳ್ಳದೆ,‌ ಗೋಸಾವಿ ಸಮುದಾಯದ ಮೇಲೆ ಲಾಠಿ ಚಾರ್ಜ್ ಮಾಡಿದ್ದರಂತೆ. ಹೀಗಾಗಿ ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ರಾಸ್ ಬಳಿ, ಗೋಸಾವಿ ಸಮುದಾಯದವರು ಲಕ್ಷ್ಮೇಶ್ವರ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದರು.

ಲಕ್ಷ್ಮೇಶ್ವರ ಪೊಲೀಸರಿಂದ ನಮಗೆ ಅನ್ಯಾಯವಾಗಿದೆ, ನ್ಯಾಯ ಕೊಡಿಸಿ ಎಂದು ಒತ್ತಾಯ ಮಾಡಿದ್ದರು. ಇನ್ನು ನ್ಯಾಯ ಕೇಳಲು ಹೋದ ಗೋಸಾವಿ ಸಮುದಾಯದ ಜನರಿಗೆ ಲಕ್ಷ್ಮೇಶ್ವರ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ. ಲಕ್ಷ್ಮೇಶ್ವರ ಪಿಎಸ್ಐ ಈರಣ್ಣ ರಿತ್ತಿ ಅವರು ಏಕಪಕ್ಷಿಯಗಾಗಿ ನಡೆದುಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಲಕ್ಷ್ಮೇಶ್ವರ ಪೊಲೀಸರಿಂದ ನಮಗೆ ಅನ್ಯಾಯವಾಗಿದೆ ಎಂದು ಗದಗ ಎಸ್ಪಿ ಕಚೇರಿಗೆ ಗೋಸಾವಿ ಸಮುದಾಯದ, ಯುವಕರು, ಮಹಿಳೆಯರು, ಹಿರಿಯರು ಆಗಮಿಸಿದ್ದರು.

ನಾವು ಬಡ ಜನರು, ಉದ್ಯೋಗ ಮಾಡಿಕೊಂಡು ಜೀವನ ನಡೆಸುತ್ತೇವೆ. ನಾವು ಹಿಂದೂಗಳು ಹೀಗಾಗಿ ಎಲ್ಲ ಹಬ್ಬಗಳನ್ನು ಆಚರಣೆ ಮಾಡುತ್ತೇವೆ. ಆದರೆ, ಅನ್ಯಕೋಮಿನ ಯುವಕರು ನಮ್ಮ ಯುವಕರು ಹಾಕಿದ ಕೇಸರಿ ಶಾಲ್ ಹಿಡಿದು ಎಳೆದಾಡಿ ಹಲ್ಲೆ ಮಾಡಿದ್ದಾರೆ. ಆದರೆ ಹಲ್ಲೆ‌ಗೊಳಗಾದವರು ನ್ಯಾಯ ಕೇಳಲು ಹೋದರೆ ಅವರ ಮೇಲೆಯೇ ಲಾಠಿ ಚಾರ್ಜ್ ಮಾಡಿದ್ದಾರೆ. ಯುವಕರು, ಮಹಿಳೆಯರಿಗೆ ಏಟು ಬಿದ್ದಿವೆ. ನಮಗೆ ನ್ಯಾಯ ಕೊಡಿಸಿ ಎಂದು ಗದಗ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ನೀಡಿ ಒತ್ತಾಯ ಮಾಡಿದ್ದರು.

ಆದರೆ ಪೊಲೀಸರ ಹೇಳಿಕೆ‌ ಪ್ರಕಾರ, ಠಾಣೆ ಎದುರು ಗುಂಪು ಚದುರಿಸುವ ಸಲುವಾಗಿ, ಲಾಠಿ ಚಾರ್ಜ್ ಮಾಡಲಾಗಿದೆ ಎಂದು ವಾದಿಸಿದ್ದಾರೆ. ಸದ್ಯ ಎರಡು ಕಡೆ ದೂರು- ಪ್ರತಿದೂರು ದಾಖಲಿಸಿಕೊಂಡು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದೀಗ ಮುಂದುವರೆದ ಭಾಗವಾಗಿ, ಅ.19 ರಂದು ಶ್ರೀರಾಮಸೇನೆ ಸಂಘಟನೆ, ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಕರೆ ನೀಡಿದೆ.

Continue Reading

ಬೆಂಗಳೂರು

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Murder Case: ಮಹಿಳೆಯೊಬ್ಬಳು ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತಿಗೆ ಸಿಕ್ಕಿಬಿದ್ದಿದ್ದಾಳೆ. ಪತ್ನಿಯ ಕಳ್ಳಾಟಕ್ಕೆ ಸಿಟ್ಟಾದ ಪತಿ ಇಬ್ಬರನ್ನು ಕೊಂದು ಬಳಿಕ ತಾನೂ ನೇಣಿಗೆ ಶರಣಾಗಿದ್ದಾನೆ.

VISTARANEWS.COM


on

By

A man killed his wife and her lover then committed suicide
Koo

ಬೆಂಗಳೂರು: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಪ್ರಿಯಕರನನ್ನು ಕೊಲೆ (Murder case) ಮಾಡಿದ್ದಾನೆ. ಪೈತಮ್ಮ (40), ಗಣೇಶ್ ಕುಮಾರ್ ಕೊಲೆಯಾದವರು. ಗೊಲ್ಲಬಾಬು ಕೊಲೆಗೈದು ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇವರೆಲ್ಲರೂ ಮೂಲತಃ ಆಂಧ್ರ ಪ್ರದೇಶದವರು ಎಂದು ತಿಳಿದು ಬಂದಿದೆ.

ಪೈತಮ್ಮ (40), ಗೊಲ್ಲಬಾಬು (45) ದಂಪತಿ ಕೆಲಸ ಅರಸಿ ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಬಂದಿದ್ದರು. ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದರು. ಪತ್ನಿ ಪೈತಮ್ಮ ಮೇಲೆ ಆಗಾಗ ಗೊಲ್ಲಬಾಬು ಅನುಮಾನ ವ್ಯಕ್ತ ಪಡಿಸಿದ್ದ. ನಿನ್ನೆ ತಡರಾತ್ರಿಯಲ್ಲಿ ಗಣೇಶ್ ಕುಮಾರ್ ಜತೆಗಿದ್ದಾಗಲೇ ಪೈತಮ್ಮ ಪತಿಗೆ ಸಿಕ್ಕಿಬಿದ್ದಿದ್ದಳು.

ಮತ್ತೊಬ್ಬನೊಟ್ಟಿಗೆ ಪತ್ನಿಯನ್ನು ಕಂಡೊಡನೆ ಸಿಟ್ಟಾದ ಗೊಲ್ಲಬಾಬು ಅಲ್ಲೇ ಇದ್ದ ಮರದ ರಿಪೀಸ್‌ನಿಂದ ಹಲ್ಲೆ ನಡೆಸಿ, ಇಬ್ಬರನ್ನು ಕೊಲೆ ಮಾಡಿದ್ದಾನೆ. ನಂತರ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರ್ ಬಿ ಐ ಲೇಔಟ್ ಸಮೀಪದ ಸೋಮೇಶ್ವರ ಬಡಾವಣೆಯ ನಿರ್ಮಾಣ ಹಂತದ ‌ಕಟ್ಟಡದಲ್ಲಿ ಈ ಕೃತ್ಯ ನಡೆದಿದೆ.

ಕೋಣನಕುಂಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

Continue Reading

ಸಿನಿಮಾ

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

Parvati Nair: ಐರ್ಲೆಂಡ್‌ನ ಇಂಡಿಯನ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ತಮಿಳು ಥ್ರಿಲ್ಲರ್ “ಊಣ್ ಪರವೈಲ್ ” ಹೆಸರು ಬಿಡುಗಡೆಯಾಗಿದೆ. ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

VISTARANEWS.COM


on

By

Parvati Nair to play dual role in suspense thriller un Paravail Tamil film
Koo

ಬೆಂಗಳೂರು: ಇತ್ತೀಚೆಗೆ ಐರ್ಲೆಂಡ್, ಡಬ್ಲಿನ್‌ನಲ್ಲಿ ನಡೆದ ಭಾರತೀಯ ಚಲನಚಿತ್ರೋತ್ಸವದಲ್ಲಿ ಬಹುನಿರೀಕ್ಷಿತ ತಮಿಳು ಥ್ರಿಲ್ಲರ್ ಮೂವಿ ” ಊಣ್ ಪರವೈಲ್ ” ಅಧಿಕೃತವಾಗಿ ಬಿಡುಗಡೆಯಾಯಿತು. ತಾಲ್ ಮತ್ತು ಕಹೋ ನಾ ಪ್ಯಾರ್ ಹೈ ಖ್ಯಾತಿಯ ಪ್ರಸಿದ್ಧ ಬಾಲಿವುಡ್ ಛಾಯಾಗ್ರಾಹಕ ಕಬೀರ್ ಲಾಲ್ ನಿರ್ದೇಶಿಸಿದ ಈ ಚಿತ್ರದಲ್ಲಿ ಪಾರ್ವತಿ ನಾಯರ್ (Parvati Nair) ದ್ವಿಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಅಸಾಧಾರಣ ನಟನಾ ಕೌಶಲ್ಯವನ್ನು ಪ್ರದ‌ರ್ಶಿಸಿದ್ದಾರೆ. ಊಣ್ ಪರವೈಲ್ ಚಿತ್ರವು ಸಸ್ಪೆನ್ಸ್, ರಹಸ್ಯ ಮತ್ತು ಭಾವನಾತ್ಮಕ ನಾಟಕದ ವಿಶಿಷ್ಟ ಮಿಶ್ರಣವಾಗಿದೆ ಎಂದು ಪಾರ್ವತಿ ನಾಯರ್ ಹೇಳಿದರು.

ಪಾರ್ವತಿ ನಾಯರ್‌ ಈ ಚಿತ್ರದಲ್ಲಿ ದ್ವಿಪಾತ್ರದಲ್ಲಿ ನಟಿಸುತ್ತಿದ್ದಾರೆ. “ಭವ್ಯ ಮತ್ತು ದಿವ್ಯಾ ದ್ವಿಪಾತ್ರಗಳನ್ನು ನಿರ್ವಹಿಸುವುದು ಸವಾಲಾಗಿತ್ತು. ಥ್ರಿಲ್ಲರ್‌ ಸಿನಿಮಾದಲ್ಲಿ ನನ್ನ ಅಭಿಯಾನವನ್ನು ಪ್ರದರ್ಶಿಸಲು ರೋಮಾಂಚನಗೊಂಡಿದ್ದೇನೆ ಎಂದಿದ್ದಾರೆ. ಇನ್ನು “ಊಣ್ ಪರವೈಲ್” ನಲ್ಲಿ ಪಾರ್ವತಿ ನಾಯರ್ ಅದ್ಭುತವಾಗಿ ನಟಿಸಿದ್ದಾರೆ. ಎರಡು ವಿಭಿನ್ನ ಪಾತ್ರಗಳಲ್ಲಿ ದಿವ್ಯಾ, ದೃಢಸಂಕಲ್ಪವುಳ್ಳ ಮತ್ತು ರಕ್ಷಿಸುವ ಸಹೋದರಿ ಮತ್ತು ಭವ್ಯಾ, ನಿಗೂಢ ಸಂದರ್ಭಗಳಲ್ಲಿ ದುರಂತ ಅಂತ್ಯವನ್ನು ಎದುರಿಸುವ ದೃಷ್ಟಿಹೀನ ಹುಡುಗಿಯಾಗಿದ್ದಾಳೆ. 

Parvati Nair to play dual role in suspense thriller un Paravail Tamil film
Parvati Nair to play dual role in suspense thriller un Paravail Tamil film

ದಿವ್ಯಾ ತನ್ನ ಸಹೋದರಿ ಭವ್ಯಳ ಸಾವಿನ ಸುತ್ತಲಿನ ಸತ್ಯವನ್ನು ಆಳವಾಗಿ ಪರಿಶೀಲಿಸಿದಾಗ, ಆಕೆಯ ಹಿಂದಿನ ರಹಸ್ಯಗಳು ಮತ್ತು ಸುಳ್ಳಿನ ಸಂಕೀರ್ಣ ಜಾಲವನ್ನು ಬಹಿರಂಗಪಡಿಸುತ್ತಾರೆ. ಊಣ್ ಪರವೈಲ್ ಮಹಿಳಾ ಪ್ರಧಾನ ಚಿತ್ರವಾಗಿದ್ದು ಅದು ಮಹಿಳೆಯರ ಶಕ್ತಿ ಮತ್ತು ಸ್ಥಿತಿಸ್ಥಾಪಕತ್ವದ ಮೇಲೆ ಬೆಳಕು ಚೆಲ್ಲುತ್ತದೆ” ಎಂದು ನಿರ್ದೇಶಕ ಕಬೀರ್ ಲಾಲ್ ಹೇಳಿದರು. “ಪಾರ್ವತಿ ನಾಯರ್ ಅವರ ಗಮನಾರ್ಹ ಅಭಿನಯವು ನಿರೂಪಣೆಗೆ ಆಳ ಮತ್ತು ಸೂಕ್ಷ್ಮತೆಯನ್ನು ತರುತ್ತದೆ. ಪ್ರೇಕ್ಷಕರನ್ನು ಕೊನೆಯವರೆಗೂ ಹಿಡಿದುಇಟ್ಟುಕೊಳ್ಳಲಿದೆ. ಐರ್ಲೆಂಡ್‌ನ ಭಾರತೀಯ ಚಲನಚಿತ್ರೋತ್ಸವದಲ್ಲಿ ಚಲನಚಿತ್ರದ ಬಿಡುಗಡೆಯು ಮತ್ತಷ್ಟು ಉತ್ಸಾಹದಿಂದ ಕೂಡಿತ್ತು. ಉದ್ಯಮದ ತಜ್ಞರು ಮತ್ತು ಚಲನಚಿತ್ರ ಉತ್ಸಾಹಿಗಳು ಚಲನಚಿತ್ರದ ವಿಶಿಷ್ಟತೆಯನ್ನು ಶ್ಲಾಘಿಸಿದರು. 

ಪಾರ್ವತಿ ನಾಯರ್ ಅವರ ಅದ್ವಿತೀಯ ಅಭಿನಯದ ಕಥಾಹಂದರ ಹೊಂದಿರುವ ಈ ಚಿತ್ರ ಭಾರತದಲ್ಲಿ ಡಿಸೆಂಬರ್ 2024 ರೊಳಗೆ ಬಿಡುಗಡೆಗೊಳ್ಳಲಿದೆ. ಊಣ್ ಪರವೈಲ್ ಬಗ್ಗೆ” ಊಣ್ ಪರವೈಲ್” ಅಜಯ್ ಕುಮಾರ್ ಸಿಂಗ್ ಮತ್ತು ರೇಖಾ ಸಿಂಗ್ ನಿರ್ಮಿಸಿದ ತಮಿಳು ಥ್ರಿಲ್ಲರ್ ಆಗಿದೆ. ಚಿತ್ರದ ಹಿಡಿತದ ನಿರೂಪಣೆ ಮತ್ತು ಪಾರ್ವತಿ ನಾಯರ್ ಅವರ ಅಸಾಧಾರಣ ಅಭಿನಯವು ಪ್ರೇಕ್ಷಕರನ್ನು ಅವರ ಆಸನಗಳ ತುದಿಯಲ್ಲಿ ಇರಿಸುವ ಭರವಸೆ ನೀಡುತ್ತದೆ.

Continue Reading
Advertisement
Dina bhavishya
ಭವಿಷ್ಯ5 ಗಂಟೆಗಳು ago

Dina Bhavishya : ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಪಿತೂರಿ ಮಾಡುವ ಜನರ ಬಗ್ಗೆ ಇರಲಿ ಎಚ್ಚರ

Gosavi samaj lathicharged Sri Ram Sene calls for bandh in Lakshmeshwara town on October 19
ಗದಗ19 ಗಂಟೆಗಳು ago

Lakshmeshwara Town: ಗೋಸಾವಿ ಸಮಾಜದ ಮೇಲೆ ಲಾಠಿ ಚಾರ್ಜ್; ಅ.19ರಂದು ಲಕ್ಷ್ಮೇಶ್ವರ ಪಟ್ಟಣ ಬಂದ್‌ಗೆ ಶ್ರೀರಾಮಸೇನೆ ಕರೆ

A man killed his wife and her lover then committed suicide
ಬೆಂಗಳೂರು22 ಗಂಟೆಗಳು ago

Murder Case: ಪ್ರಿಯಕರ ಜತೆ ಏಕಾಂತದಲ್ಲಿ ಇರುವಾಗಲೆ ಪತ್ನಿ ಲಾಕ್‌; ಇಬ್ಬರನ್ನು ಕೊಂದು ಪತಿ ಸೂಸೈಡ್‌

Parvati Nair to play dual role in suspense thriller un Paravail Tamil film
ಸಿನಿಮಾ22 ಗಂಟೆಗಳು ago

Parvati Nair : ಸಸ್ಪೆನ್ಸ್ ಥ್ರಿಲ್ಲರ್‌ ʻಊಣ್‌ ಪರವೈಲ್‌ʼ ತಮಿಳು ಚಿತ್ರದಲ್ಲಿ ಪಾರ್ವತಿ ನಾಯರ್‌ ದ್ವಿಪಾತ್ರದಲ್ಲಿ ಮಿಂಚಿಂಗ್‌

ಬೆಂಗಳೂರು1 ದಿನ ago

Bengaluru Airport : ಬೆಂಗಳೂರು ಏರ್‌ಪೋರ್ಟ್‌ನ 17.7 ಎಕರೆಗಳಲ್ಲಿ ತಲೆ ಎತ್ತಲಿದೆ ಬಿಸಿನೆಸ್‌ ಪಾರ್ಕ್‌

Jio Cloud PC to turn home TV into computer
ಹೊಸ ಸುದ್ದಿ1 ದಿನ ago

Jio Cloud PC : ಮನೆಯ ಟಿವಿಯನ್ನು ಕಂಪ್ಯೂಟರ್ ಆಗಿ ಪರಿವರ್ತಿಸಲಿದೆ ‘ಜಿಯೋ ಕ್ಲೌಡ್ ಪಿಸಿ’

Dina Bhavishya
ಭವಿಷ್ಯ1 ದಿನ ago

Dina Bhavishya : ಕುಟುಂಬದ ಸದಸ್ಯರಿಂದ ರಹಸ್ಯ ಸುದ್ದಿಯೊಂದು ಈ ರಾಶಿಯವರಿಗೆ ಅಚ್ಚರಿ ತರಲಿದೆ

dina bhavishya
ಭವಿಷ್ಯ2 ದಿನಗಳು ago

Dina Bhavishya : ಬಹುದಿನಗಳ ಕನಸು ನನಸಾಗುವ ಸಮಯವಿದು; ಹೊಸ ಅವಕಾಶಗಳು ಗರಿಗೆದರಲಿವೆ

karnataka Rain
ಮಳೆ3 ದಿನಗಳು ago

Karnataka Rain : ನಿರಂತರ ಮಳೆಗೆ ಬೆಂಗಳೂರಿಗರು ಕಂಗಾಲು; ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Actor Darshan
ಬೆಂಗಳೂರು3 ದಿನಗಳು ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇಲ್‌ ಕನಸು ನಚ್ಚು ನೂರು; ನಟ ದರ್ಶನ್‌ ಜಾಮೀನು ನಿರಾಕರಣೆಗೆ ಕೋರ್ಟ್‌ ಕೊಟ್ಟ 9 ಕಾರಣಗಳು

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌