Let's reject the lure of candidates, let's save democracy ವಿಸ್ತಾರ ಸಂಪಾದಕೀಯ: ಅಭ್ಯರ್ಥಿಗಳ ಆಮಿಷ ತಿರಸ್ಕರಿಸೋಣ, ಪ್ರಜಾಪ್ರಭುತ್ವ ಉಳಿಸೋಣ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಅಭ್ಯರ್ಥಿಗಳ ಆಮಿಷ ತಿರಸ್ಕರಿಸೋಣ, ಪ್ರಜಾಪ್ರಭುತ್ವ ಉಳಿಸೋಣ

ಒಂದು ಮತದ ಮೌಲ್ಯ ಇರುವುದು ಐನೂರು ರೂಪಾಯಿ ಹಣದಲ್ಲಾಗಲೀ ಹೆಂಡದಲ್ಲಾಗಲೀ ಅಲ್ಲ. ಅದಕ್ಕೆ ಐದು ವರ್ಷಗಳ ಕಾಲಾವಧಿಯ ಮೌಲ್ಯವಿದೆ. ಅಭ್ಯರ್ಥಿಗಳು ಒಡ್ಡುವ ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸೋಣ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರ್ನಾಟಕ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ. ಇಂದಿನಿಂದ ಮನೆಮನೆ ಪ್ರಚಾರ ಶುರುವಾಗಲಿದೆ. ಬಹಿರಂಗ ಪ್ರಚಾರದ ನಂತರ ಮತದಾನದ ದಿನದವರೆಗಿನ ಎರಡು ದಿನಗಳ ಅವಧಿ ಅಭ್ಯರ್ಥಿಗಳ ಪಾಲಿಗೆ ಮಹತ್ವದ್ದು. ಈ ಅವಧಿಯಲ್ಲಿ ಕೋಟ್ಯಂತರ ರೂಪಾಯಿ ಕೈ ಬದಲಾಯಿಸುತ್ತದೆ. ಮನೆಮನೆ ಪ್ರಚಾರದ ನೆಪದಲ್ಲಿ ಅವ್ಯಾಹತವಾಗಿ ಅಭ್ಯರ್ಥಿಗಳ ಪ್ರತಿನಿಧಿಗಳಿಂದ ಹಣ ಹಂಚಿಕೆ ಆಗುವುದು ರಹಸ್ಯ ಸಂಗತಿ ಏನಲ್ಲ. ವಿವೇಚನೆಯನ್ನು ಬಳಸಬೇಕಾದ ಸಮಯ ಇದು.

ಕೆಲವು ಕಡೆಗಳಲ್ಲಿ ಮನೆಮನೆ ಪ್ರಚಾರದ ನೆಪದಲ್ಲಿ 500 ರೂ.ಯಿಂದ 10 ಸಾವಿರ ರೂ.ವರೆಗೆ ಪ್ರತಿ ಮತಕ್ಕೆ ಹಂಚಿಕೆ ಮಾಡಲು ಸಿದ್ಧತೆ ನಡೆಯುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಚುನಾವಣೆ ಆಯೋಗ ಈವರೆಗೆ ನಡೆಸಿದ ದಾಳಿಯಲ್ಲಿ 300 ಕೋಟಿಗೂ ಹೆಚ್ಚು ಹಣ ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಚುನಾವಣೆಯಲ್ಲಿ ನಡೆಯುತ್ತಿರುವ ಅಗಾಧ ಅಕ್ರಮಕ್ಕೆ ಇದು ಸಾಕ್ಷಿಯಾಗಿದೆ. ಹಿಂದೆಂದೂ ಈ ಪ್ರಮಾಣದ ಅಕ್ರಮ ಹಣ ವಶವಾಗಿರಲಿಲ್ಲ. ಚುನಾವಣಾ ಆಯೋಗ ಪ್ರತಿ ವಿಧಾನಸಭಾ ಚುನಾವಣೆ ಅಭ್ಯರ್ಥಿಯ ವೆಚ್ಚದ ಮೇಲ್ಮಿತಿಯನ್ನು 40 ಲಕ್ಷಕ್ಕೆ ನಿಗದಿಪಡಿಸಿದೆ. ಆದರೆ ಈ 40 ಲಕ್ಷದಲ್ಲಿ ಇಂದು ಯಾವ ಅಭ್ಯರ್ಥಿಯೂ ಚುನಾವಣೆ ಮುಗಿಸುವುದಿಲ್ಲ. ಹೀಗಾಗಿಯೇ ಅರ್ಹತಾವಂತರಾಗಿದ್ದರೂ ಕುಬೇರರಲ್ಲದ ವ್ಯಕ್ತಿಗಳಿಗೆ ಪಕ್ಷಗಳು ಟಿಕೆಟ್ ನೀಡುವುದೇ ಇಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ.

ಹಣ ಹಂಚಿಕೆ ಎನ್ನುವುದು ಈಗ ಯಾವುದೇ ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ. ಎಲ್ಲ ಪಕ್ಷಗಳ ಅಭ್ಯರ್ಥಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಸೋಲು ಖಚಿತ ಎನ್ನುವುದು ಗೊತ್ತಿರುವ ಅಭ್ಯರ್ಥಿಯೂ ಇಂದು ಕನಿಷ್ಠ 500 ರೂ. ಆದರೂ ಕೊಡಬೇಕಾದ ಪರಿಸ್ಥಿತಿ ನೋಡಿದರೆ ಸೋಜಿಗವೆನಿಸುತ್ತದೆ. ಕೋಟ್ಯಂತರ ರೂ.ಯ ಬೆಂಬಲ ಇಲ್ಲದ ವ್ಯಕ್ತಿ ಈಗ ಚುನಾವಣೆಗೆ ಸ್ಪರ್ಧಿಸಲು ಅರ್ಹರೇ ಅಲ್ಲ ಎಂಬ ವಾತಾವರಣ ನಿರ್ಮಾಣವಾಗಿದೆ. ಕೆಲವು ಕ್ಷೇತ್ರಗಳ ಕೊಳೆಗೇರಿ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿದ್ದ ಹಣ ಹಂಚಿಕೆ ಈಗ ಸಾರ್ವತ್ರಿಕವಾಗಿದೆ. ಈ ಸನ್ನಿವೇಶ ಪ್ರಜಾಪ್ರಭುತ್ವದ ಅಣಕವಾಗಿದೆ.

ಇಷ್ಟೆಲ್ಲದರ ನಡುವೆಯೂ ಈ ಬಾರಿಯ ಚುನಾವಣೆ ಕಣದಲ್ಲಿ ಬೆರಳೆಣಿಕೆಯಷ್ಟು ಪ್ರಾಮಾಣಿಕರಿದ್ದಾರೆ. ನಿಜವಾಗಿಯೂ ಜನ ಸೇವೆ ಮಾಡಲು ಬಯಸಿದವರಿದ್ದಾರೆ. ಹಣವಂತ ಅಭ್ಯರ್ಥಿಗಳ ಆಮಿಷದ ಅಬ್ಬರದಲ್ಲಿ ಇಂಥವರು ಸೋತು ಹೋಗಬಾರದು. ಅಭ್ಯರ್ಥಿಗಳು ಮತದಾರರಿಗೆ ನೀಡುವ ಹಣ, ಅವರು ಗೆದ್ದ ಮೇಲೆ ಮಾಡುವ ಭ್ರಷ್ಟಾಚಾರಕ್ಕೆ ಹೂಡುವ ಬಂಡವಾಳ ಅಷ್ಟೆ. ಈಗ ಚುನಾವಣೆಯಲ್ಲಿ 50 ಕೋಟಿ ಖರ್ಚು ಮಾಡುವವರು ಅಧಿಕಾರ ಹಿಡಿದಾಗ 500 ಕೋಟಿ ಲೂಟಿ ಹೊಡೆಯುತ್ತಾರೆ. ಅಂತಿಮವಾಗಿ ಇದು ನಮ್ಮದೇ ಖಜಾನೆಯ ಹಣ, ನಮ್ಮದೇ ಹಣದ ಲೂಟಿಯಾಗಿರುತ್ತದೆ. ಅಭ್ಯರ್ಥಿಗಳಿಂದ ಹಣ ಪಡೆಯುವುದೆಂದರೆ ನಮ್ಮದೇ ಹಣದ ಲೂಟಿಗೆ ಖಜಾನೆಯ ಕೀಲಿಕೈ ಕೊಟ್ಟಂತೆ. ಮತಕ್ಕಾಗಿ ಹಣ ಪಡೆದ ಮತದಾರನಿಗೆ ಶಾಸಕನಿಂದ ಕೆಲಸ ಮಾಡಿಸಿಕೊಳ್ಳಲು ಏನು ಹಕ್ಕಿರುತ್ತದೆ? ಶಾಸಕ ಮಾಡಿಸುವ ಕೆಲಸದಲ್ಲಿ ಭ್ರಷ್ಟಾಚಾರ ಎದ್ದು ಕಂಡರೂ ಅದನ್ನು ಹೇಳಲಾಗದ ಸ್ಥಿತಿಯಲ್ಲಿ ಮತದಾರರು ಇರುತ್ತಾರೆ. ಕೆಲವೊಮ್ಮೆ ಶಾಸಕರೇ, ಹಣ ಕೊಟ್ಟಿದ್ದೇವೆ, ಇನ್ನೇನೂ ಕೇಳಬೇಡಿ ಎಂದು ನೇರವಾಗಿಯೇ ಅಹವಾಲು ತರುವ ಕ್ಷೇತ್ರದ ಜನತೆಗೆ ಹೇಳುವುದುಂಟು.

ಇದನ್ನೂ ಓದಿ : ವಿಸ್ತಾರ ಸಂಪಾದಕೀಯ: ಕೊಹಿನೂರ್ ವಜ್ರ ಇನ್ನಾದರೂ ಭಾರತಕ್ಕೆ ಮರಳಲಿ

ಇಂಥ ಪರಿಸ್ಥಿತಿ ಬರಬಾರದು ಎಂದಿದ್ದರೆ, ಮತದಾರರು ಇಂಥ ಕ್ಷಣಿಕ ಆಮಿಷವನ್ನು ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಿ, ಪ್ರಾಮಾಣಿಕವಾಗಿ ಮತ ಚಲಾಯಿಸಬೇಕು. ಮತದಾರರಲ್ಲೇ ಇಲ್ಲದ ಪ್ರಾಮಾಣಿಕತೆಯನ್ನು ರಾಜಕಾರಣಿಗಳಲ್ಲಿ ನಿರೀಕ್ಷಿಸಲಾದೀತೆ? ಒಂದು ಮತದ ಮೌಲ್ಯ ಇರುವುದು ಆ ಕ್ಷಣದಲ್ಲಾಗಲೀ ಐನೂರು ರೂಪಾಯಿ ಹಣದಲ್ಲಾಗಲೀ ಹೆಂಡದಲ್ಲಾಗಲೀ ಅಲ್ಲ. ಅದಕ್ಕೆ ಐದು ವರ್ಷಗಳ ಕಾಲಾವಧಿಯ ಮೌಲ್ಯವಿದೆ. ಉತ್ತಮ ಸರ್ಕಾರ ಸೃಷ್ಟಿಯಾಗುವುದು ಯೋಚಿಸಬಲ್ಲ ವಿವೇಕಿ ಪ್ರಜೆಗಳಿಂದ. ಅಭ್ಯರ್ಥಿಗಳು ಒಡ್ಡುವ ಯಾವುದೇ ಆಮಿಷಕ್ಕೆ ಒಳಗಾಗದೆ ಮತ ಚಲಾಯಿಸೋಣ, ಪ್ರಜಾಪ್ರಭುತ್ವವನ್ನು ರಕ್ಷಿಸೋಣ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Fathers Day: ʼಅಪ್ಪʼನೆಂದರೆ ಆಕಾಶ… ಎನ್ನುವವರು ಈ ಭಾನುವಾರ ತಪ್ಪದೇ ವಿಶ್‌ ಮಾಡಿ

Fathers Day ತಂದೆ-ತಾಯಿ ಇವರಿಬ್ಬರೂ ಪ್ರತಿಯೊಬ್ಬರ ಬದುಕಿಗೆ ಎರಡು ಕಣ್ಣುಗಳಿದ್ದಂತೆ. ಮಕ್ಕಳ ಏಳಿಗೆಗಾಗಿ, ಖುಷಿಗಾಗಿ ಯಾವುದೇ ಸ್ವಾರ್ಥವಿಲ್ಲದೇ ಸದಾ ಮಿಡಿಯುವ ಜೀವಗಳು. ಅಮ್ಮನ ಹಾಗೇ ಅಪ್ಪ ಪ್ರೀತಿ ತೋರಿಸುವುದರಲ್ಲಿ ಧಾರಾಳಿಯಲ್ಲ. ಆದರೆ ಅಪ್ಪನಿಗೆ ಪ್ರೀತಿಸುವುದಕ್ಕೆ ಬರುವುದಿಲ್ಲವೆಂದಲ್ಲ. ಅಪ್ಪನ ಹೆಗಲ ಮೇಲೆ ಜವಬ್ದಾರಿಯ ಮೂಟೆ ಯಾವಾಗಲೂ ಇರುತ್ತದೆ. ಮೀಸೆಯಡಿಯಲ್ಲಿಯೇ ನಗುವ ಅಪ್ಪನ ಪ್ರೀತಿಗೆ ಸಮಾನಾದ್ದು ಯಾವುದೂ ಇಲ್ಲ. ಅಂದ ಹಾಗೇ ಜೂನ್ 16ರಂದು ಅಪ್ಪಂದಿರ ದಿನ. ನಿಮ್ಮ ಅಪ್ಪನಿಗೂ ನಿಮ್ಮ ಪ್ರೀತಿ ತುಂಬಿದ ಶುಭಾಶಯ ತಿಳಿಸಿಬಿಡಿ.

VISTARANEWS.COM


on

Fathers Day 2024
Koo

ಬೆಂಗಳೂರು: ತಂದೆ ತಾಯಿ ಪ್ರತಿಯೊಬ್ಬರ ಜೀವನದಲ್ಲಿ ಬಹಳ ಅಮೂಲ್ಯವಾದವರು. ಅವರಲ್ಲಿ ನಾವು ಯಾರನ್ನೇ ಕಳೆದುಕೊಂಡರು ತಮ್ಮ ಮೇಲೆ ಕಷ್ಟದ ಸಿಡಿಲು ಬಡಿಯುವುದಂತು ಖಂಡಿತ. ಹಾಗಾಗಿ ತಂದೆ ತಾಯಿಯ ಋಣ, ಪ್ರೀತಿ, ಮಮತೆ ಯಾವತ್ತೂ ಮರೆಯಲಾಗದು. ಈಗೀಗ ಎಲ್ಲದಕ್ಕೂ ಒಂದೊಂದು ದಿನವಿಟ್ಟು ಅದನ್ನು ಆಚರಿಸುವ ಹುಕಿಗೆ ಬಿದ್ದಿದ್ದೇವೆ. ಫಾದರ್ಸ್‌ ಡೇ (Fathers Day), ಒಡಹುಟ್ಟಿದವರ ದಿನ, ಸ್ನೇಹಿತರ ದಿನ, ತಾಯಂದಿರ ದಿನವೆಂದು ಆಚರಿಸುತ್ತೇವೆ. ಮದರ್ಸ್ ಡೇ(Mothers Day) ಯನ್ನು ಪ್ರತಿವರ್ಷ ಮೇ ತಿಂಗಳ 2ನೇ ಭಾನುವಾರದಂದು ಆಚರಿಸಲಾಗುತ್ತದೆ. ಆ ದಿನ ಎಲ್ಲರೂ ತಮ್ಮ ತಾಯಿಗೆ ವಿಶ್ ಮಾಡಿ ಉಡುಗೊರೆಯನ್ನು ನೀಡುತ್ತಾರೆ. ಅದೇ ರೀತಿ ತಂದೆಯ ದಿನವನ್ನು ಆಚರಿಸಲು ಒಂದು ದಿನವನ್ನು ಮೀಸಲಿಡಲಾಗಿದೆ. ಅದು ಯಾವಾಗ ಎಂಬುದರ ಮಾಹಿತಿ ಇಲ್ಲಿದೆ.

ಅಪ್ಪ…ಈ ಹೆಸರೇ ಚೆಂದ. ಅಪ್ಪನೆಂದರೆ ಗೌರವ, ಭಯಮಿಶ್ರಿತ ಪ್ರೀತಿ ಎಲ್ಲರಿಗೂ ಇರುತ್ತದೆ. ಆದರೆ ಈಗ ಅಪ್ಪ ಕೂಡ ಮೊದಲಿನ ಹಾಗೇ ಇಲ್ಲ. ಹಿಂದಿನ ಕಾಲದಲ್ಲಿ ಅಪ್ಪನ ಜೊತೆ ಮಕ್ಕಳಿಗೆ ಅಷ್ಟು ಸಲುಗೆ ಇರಲಿಲ್ಲ. ಅಮ್ಮನ ಹತ್ತಿರ ಹೇಳಿದ ಹಾಗೇ ಅಪ್ಪನ ಬಳಿ ಎಲ್ಲಾ ವಿಷಯವನ್ನೂ ಹೇಳಿಕೊಳ್ಳುವುದಕ್ಕೆ ಆಗುತ್ತಿರಲಿಲ್ಲ. ಆದರೆ ಈಗ ಹಾಗಲ್ಲ. ಹೆಣ್ಣುಮಕ್ಕಳಿಗೆ ಅಮ್ಮನಿಗಿಂತ ಅಪ್ಪನೇ ಈ ಬೆಸ್ಟ್‌ ಫ್ರೆಂಡ್‌ ಎನ್ನಬಹುದು. ನೋವನ್ನು ತೋಡಿಕೊಳ್ಳಲು ಒಂದು ಭುಜ ಸಿಗುತ್ತೆಂದರೆ ಅದು ಅಪ್ಪನದಾಗಿರುತ್ತದೆ. ಸಂಸಾರದ ಜವಬ್ದಾರಿಯನ್ನು ಹೊರುತ್ತಾ, ನೊಂದ ಮನಸ್ಸಿಗೆ ಸಾಂತ್ವನ ಮಕ್ಕಳನ್ನು ಮುದ್ದಿಸುವ ಒಂದು ಜೀವವೆಂದರೆ ಅದು ಅಪ್ಪ. ಮುದ್ದಿನ ಅಪ್ಪನಿಗೆ ವಿಶ್ ಮಾಡಲು ಜೂನ್ ಮೂರನೇ ಭಾನುವಾರವನ್ನು ಆಯ್ಕೆ ಮಾಡಲಾಗಿದೆ. ಈ ದಿನ ಎಲ್ಲರೂ ನಿಮ್ಮ ಪ್ರೀತಿಯ ಅಪ್ಪನಿಗೆ ವಿಶ್‌ ಮಾಡಿದರೆ ಅದಕ್ಕಿಂತ ದೊಡ್ಡ ಉಡುಗೊರೆ ಅವರಿಗೆ ಇನ್ನೊಂದಿರಲಿಕ್ಕಿಲ್ಲ!

ಈ ವರ್ಷ ಫಾದರ್ಸ್ ಡೇ ಜೂನ್ 16ರ ಭಾನುವಾರದಂದು ಬಂದಿದೆ. ಹಾಗಾಗಿ ಈ ದಿನ ನಿಮಗೆ ರಜಾ ಇರುವ ಕಾರಣ ನಿಮ್ಮ ತಂದೆಯನ್ನು ಖುಷಿ ಪಡಿಸಲು ಅವರ ಜೊತೆ ಸಣ್ಣದೊಂದು ವಾಕಿಂಗ್ ಹೋಗಿ, ಅಥವಾ ಅವರ ಕೆಲಸದಲ್ಲಿ ಸಹಾಯ ಮಾಡಿ, ಅವರಿಗೆ ಇಷ್ಟವಾದುದನ್ನು ಕೊಡಿಸಿ. ಇದರಿಂದ ಆ ತಂದೆಯ ಮನಸ್ಸು ತುಂಬಾ ಖುಷಿ ಪಡುತ್ತದೆ.. ಕಳೆದ ವರ್ಷ ಫಾದರ್ಸ್ ಡೇಯನ್ನು ಜೂನ್ 18ರಂದು ಆಚರಿಸಲಾಗಿತ್ತು.

Father’s Day

ಫಾದರ್ಸ್ ಡೇ ಆಚರಣೆ ಹಿಂದಿರುವ ಕಾರಣವೇನು?

ಫಾದರ್ಸ್ ಡೇಯನ್ನು 1900ರ ದಶಕದಲ್ಲಿ ಆಚರಿಸಲು ಆರಂಭವಾಯಿತಂತೆ. ಸೋನೋರಾ ಸ್ಮಾರ್ಟ್ ಡಾಡ್ ಎಂಬ ಮಹಿಳೆಯು ಹುಟ್ಟಿದಾಕ್ಷಣ ತನ್ನ ತಾಯಿಯನ್ನು ಕಳೆದುಕೊಂಡಳಂತೆ. ಆಕೆ ಮತ್ತು ಆಕೆಯ ಒಡಹುಟ್ಟಿದವರು ತಂದೆಯ ಆರೈಕೆಯಲ್ಲಿ ಬೆಳೆದರಂತೆ. ಮಕ್ಕಳ ಜೀವನಕ್ಕಾಗಿ ಎಲ್ಲವನ್ನು ತ್ಯಾಗ ಮಾಡಿ ಮಕ್ಕಳಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟ ತನ್ನ ತಂದೆಗೆ ಕೃತಜ್ಞತೆ ಹೇಳಲು ಅವಳು ಒಂದು ದಿನವನ್ನು ಗೊತ್ತುಪಡಿಸಿದಳು. ಅದರಂತೆ ಆ ವರ್ಷ ಅವಳು ಜೂನ್ 19ರಂದು ಮೊದಲ ಬಾರಿಗೆ ಫಾದರ್ಸ್ ಡೇಯನ್ನು ಆಚರಿಸಿದಳಂತೆ. ಯಾಕೆಂದರೆ ಅದು ಆಕೆಯ ತಂದೆ ಹುಟ್ಟಿದ ತಿಂಗಳಾಗಿತ್ತಂತೆ. ಹಾಗಾಗಿ ಆ ತಿಂಗಳಿನಂದು ನಾವು ಈಗಲೂ ಫಾದರ್ಸ್ ಡೇಯನ್ನು ಆಚರಿಸುತ್ತೇವೆ.

ಅಮೆರಿಕದಲ್ಲಿ ಫಾದರ್ಸ್ ಡೇಯನ್ನು ಆಚರಿಸಲು ಗುಲಾಬಿ ಹೂವನ್ನು ಸಂಕೇತವಾಗಿಟ್ಟುಕೊಳ್ಳುತ್ತಾರಂತೆ. ಅದರಂತೆ ಬಣ್ಣಬಣ್ಣದ ಗುಲಾಬಿ ಹೂ ಜೀವಂತ ತಂದೆಯನ್ನು ಪ್ರತಿನಿಧಿಸಿದರೆ ಬಿಳಿ ಬಣ್ಣದ ಗುಲಾಬಿ ಮರಣ ಹೊಂದಿದ ತಂದೆಯ ಸಂಕೇತವಂತೆ. ಅಲ್ಲದೇ 1914ರಲ್ಲಿ ಮದರ್ಸ್ ಡೇಯನ್ನು ರಜಾದಿನವೆಂದು ಫೋಷಿಸಿದ ನಂತರ ಅಧ್ಯಕ್ಷ ರಿಚರ್ಡ್ ನಿಕ್ಸನ್ ಅವರು 1972ರಲ್ಲಿ ತಂದೆಯ ದಿನವನ್ನು ರಜಾದಿನವೆಂದು ಅಧಿಕೃತವಾಗಿ ಘೋಷಣೆ ಮಾಡಿದ್ದರಂತೆ.

ಇದನ್ನೂ ಓದಿ:Viral News: 80ರ ಅಜ್ಜನನ್ನು ಪ್ರೀತಿಸಿ ಮದುವೆಯಾದ 23ರ ಸುಂದರಿ! ಆಕೆ ಕೊಟ್ಟ ಕಾರಣ ಮಜವಾಗಿದೆ!

ಅಮೆರಿಕನ್ ಅವರು ಕಳೆದ ವರ್ಷ 2023ರಲ್ಲಿ 22.9 ಶತಕೋಟಿ ಡಾಲರ್ ಹಣವನ್ನು ಫಾದರ್ಸ್ ಡೇಗಾಗಿ ಖರ್ಚು ಮಾಡಲು ಯೋಜಿಸಿದ್ದರಂತೆ. ಆದರೆ ಈ ವರ್ಷ 2024ರಲ್ಲಿ 196 ಡಾಲರ್ ಅನ್ನು ಖರ್ಚು ಮಾಡುವ ನಿರೀಕ್ಷೆ ಇದೆ ಎನ್ನಲಾಗಿದೆ.

Continue Reading

ವೈರಲ್ ನ್ಯೂಸ್

Narendra Modi: ನಗು ನಗುತ್ತಾ ಸೆಲ್ಫಿಗೆ ಪೋಸ್‌ ಕೊಟ್ಟ ಮೋದಿ, ಮೆಲೋನಿ; ಸೋಷಿಯಲ್‌ ಮೀಡಿಯಾದಲ್ಲಿ ʼಮೆಲೋಡಿʼಯದ್ದೇ ಸದ್ದು

Narendra Modi: ಇಟಲಿಯಲ್ಲಿ ನಡೆದ 50ನೇ ಆವೃತ್ತಿಯ ಜಿ 7 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಿದ್ದು, ಈ ವೇಳೆ ಇಟಲಿ ಪ್ರಧಾನಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಸೆಲ್ಫಿಗೆ ಪೋಸ್‌ ನೀಡಿದ್ದಾರೆ. ಸದ್ಯ ಈ ವಿಡಿಯೊ, ಫೋಟೊ ಭಾರಿ ಸದ್ದು ಮಾಡುತ್ತಿದೆ. ನರೇಂದ್ರ ಮೋದಿ ಅವರೊಂದಿಗೆ ನಿಂತಿರುವ ವಿಡಿಯೊವನ್ನು ಮಲೋನಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ʼHello from the Melodi teamʼ ಎಂದು ಬರೆದುಕೊಂಡಿದ್ದಾರೆ. ಇದರಲ್ಲಿ ನಗು ನಗುತ್ತಾ ಮೋದಿ ಪೋಸ್‌ ನೀಡುತ್ತಿರುವುದು ಕಂಡು ಬಂದಿದ್ದು, ನೆಟ್ಟಿಗರ ಗಮನ ಸೆಳೆದಿದೆ.

VISTARANEWS.COM


on

Narendra Modi
Koo

ರೋಮ್:‌ ಇಟಲಿಯಲ್ಲಿ ನಡೆದ 50ನೇ ಆವೃತ್ತಿಯ ಜಿ 7 ಶೃಂಗಸಭೆಯಲ್ಲಿ (G 7 Summit) ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಗವಹಿಸಿದ್ದಾರೆ. ಈ ವೇಳೆ ಮೋದಿ ಮತ್ತು ಇಟಲಿ ಪ್ರಧಾನಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರು ಜತೆಯಾಗಿ ಸೆಲ್ಫಿಗೆ ಪೋಸ್‌ ನೀಡಿದ್ದು, ಸದ್ಯ ಈ ವಿಡಿಯೊ, ಫೋಟೊ ಭಾರಿ ಸದ್ದು ಮಾಡುತ್ತಿದೆ (Viral News). ಮೋದಿ ಹಾಗೂ ಮೆಲೋನಿ ಅವರು ಹಿಂದಿನಿಂದಲೂ ಆತ್ಮೀಯ ಸ್ನೇಹಿತರಾಗಿದ್ದು, ಇಬ್ಬರ ಹೆಸರನ್ನು ಸೇರಿಸಿ ಮೆಲೋಡಿ (Melodi) ಎಂದೇ ನೆಟ್ಟಿಗರು ಸಂಬೋಧಿಸುತ್ತಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಮೆಲೋಡಿ ಎಂಬ ಹ್ಯಾಶ್‌ಟ್ಯಾಗ್‌ ಟ್ರೆಂಡ್‌ ಆಗಿದೆ.

ನರೇಂದ್ರ ಮೋದಿ ಅವರೊಂದಿಗೆ ನಿಂತಿರುವ ವಿಡಿಯೊವನ್ನು ಮಲೋನಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ʼHello from the Melodi teamʼ ಎಂದು ಬರೆದುಕೊಂಡಿದ್ದಾರೆ. ಇದರಲ್ಲಿ ನಗು ನಗುತ್ತಾ ಮೋದಿ ಪೋಸ್‌ ನೀಡುತ್ತಿರುವುದು ಕಂಡು ಬಂದಿದ್ದು, ನೆಟ್ಟಿಗರ ಗಮನ ಸೆಳೆದಿದೆ.

ಇದಕ್ಕೂ ಮುನ್ನ ಇಟಲಿಯ ಅಪುಲಿಯಾದಲ್ಲಿ ನಡೆದ ಜಿ 7 ಶೃಂಗಸಭೆಯಲ್ಲಿ ಇಬ್ಬರೂ ಸೆಲ್ಫಿ ಕ್ಲಿಕ್ಕಿಸುತ್ತಿರುವ ಫೋಟೊ ಕೂಡ ವೈರಲ್ ಆಗಿತ್ತು. ಮೆಲೋನಿ ಫೋಟೊ ಕ್ಲಿಕ್ಕಿಸುತ್ತಿದ್ದಂತೆ ಇಬ್ಬರು ನಾಯಕರು ನಗುತ್ತ ಕ್ಯಾಮೆರಾದತ್ತ ಮುಖ ಮಾಡುತ್ತಿರುವುದು ಕಂಡು ಬಂದಿತ್ತು.

ಭಾರತ ಜಿ 7ಯ ಸದಸ್ಯ ರಾಷ್ಟ್ರವಲ್ಲದಿದ್ದರೂ ಮೆಲೋನಿ ಅವರ ವಿಶೇಷ ಆಹ್ವಾನದ ಮೇರೆಗೆ ಮೋದಿ ಇಟಲಿಗೆ ತೆರಳಿದ್ದರು. ಸತತ ಮೂರನೇ ಬಾರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೋದಿ ಅವರ ಮೊದಲ ವಿದೇಶ ಪ್ರವಾಸ ಇದಾಗಿತ್ತು. ಶೃಂಗಸಭೆ ನಡೆಯುವ ಸ್ಥಳಕ್ಕೆ ತೆರಳಿದ ನರೇಂದ್ರ ಮೋದಿ ಅವರಿಗೆ ಮೆಲೋನಿ ಅವರು ನಮಸ್ತೆ ಎಂದು ಕೈಮುಗಿದು ಭಾರತದ ಸಂಪ್ರದಾಯದಂತೆ ಸ್ವಾಗತ ಕೋರಿದ್ದರು.

ಮಹತ್ವದ ಮಾತುಕತೆ

ಈ ವೇಳೆ ಮೋದಿ ಮತ್ತು ಮೆಲೋನಿ ಅವರು ರಕ್ಷಣಾ ಮತ್ತು ಭದ್ರತಾ ಸಹಕಾರದ ಬಗ್ಗೆ ಚರ್ಚೆ ನಡೆಸಿದರು. ಇಟಲಿಯ ಮಾಂಟೋನ್‌ನಲ್ಲಿರುವ ಯಶವಂತ್ ಘಡ್ಗೆ ಸ್ಮಾರಕವನ್ನು ಮೇಲ್ದರ್ಜೆಗೇರಿಸುವ ಯೋಜನೆಯನ್ನು ಪ್ರಧಾನಿ ಮೋದಿ ಘೋಷಿಸಿದರು. ಎರಡೂ ದೇಶಗಳ ನಡುವೆ ಬೆಳೆಯುತ್ತಿರುವ ವ್ಯಾಪಾರ ಮತ್ತು ಆರ್ಥಿಕ ಸಹಯೋಗದ ಬಗ್ಗೆ ಸಂತೋಷ ವ್ಯಕ್ತಪಡಿಸಿದ ಉಭಯ ನಾಯಕರು, ಇಂಧನ, ಉತ್ಪಾದನೆ, ಬಾಹ್ಯಾಕಾಶ, ಟೆಲಿಕಾಂ, ಎಐ ಮುಂತಾದ ಕ್ಷೇತ್ರಗಳಲ್ಲಿ ವಾಣಿಜ್ಯ ಸಂಬಂಧಗಳನ್ನು ವಿಸ್ತರಿಸಯವ ಬಗ್ಗೆ ಮಾತುಕತೆ ನಡೆಸಿದರು.

“ವಾಣಿಜ್ಯ, ಇಂಧನ, ರಕ್ಷಣೆ, ಟೆಲಿಕಾಂ ಮತ್ತಿತರ ಕ್ಷೇತ್ರಗಳಲ್ಲಿ ಭಾರತ-ಇಟಲಿ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಮಾರ್ಗಗಳ ಬಗ್ಗೆ ನಾವು ಚರ್ಚಿಸಿದ್ದೇವೆ. ಜೈವಿಕ ಇಂಧನಗಳು, ಆಹಾರ ಸಂಸ್ಕರಣೆ ಮತ್ತು ನಿರ್ಣಾಯಕ ಖನಿಜಗಳಂತಹ ಭವಿಷ್ಯದ ಕ್ಷೇತ್ರಗಳಲ್ಲಿ ನಾವು ಒಟ್ಟಾಗಿ ಕೆಲಸ ಮಾಡಲಿದ್ದೇವೆʼʼ ಎಂದು ಮೋದಿ ತಿಳಿಸಿದ್ದಾರೆ.

ಈ ಬಾರಿಯ ಜಿ 7 ಶೃಂಗಸಭೆಯಲ್ಲಿ ಯುರೋಪಿಯನ್ ಯೂನಿಯನ್ ಜತೆಗೆ ಅಮೆರಿಕ, ಇಂಗ್ಲೆಂಡ್‌, ಕೆನಡಾ, ಜರ್ಮನಿ, ಇಟಲಿ, ಜಪಾನ್ ಮತ್ತು ಫ್ರಾನ್ಸ್‌ನ ನಾಯಕರು ಭಾಗವಹಿಸಿದ್ದರು. ಇದು ಜಿ 7 ಶೃಂಗಸಭೆಯಲ್ಲಿ ಭಾರತದ 11ನೇ ಮತ್ತು ಪ್ರಧಾನಿ ಮೋದಿ ಅವರ ಸತತ ಐದನೇ ಭಾಗವಹಿಸುವಿಕೆ ಎನಿಸಿಕೊಂಡಿದೆ.

2023ರ ಡಿಸೆಂಬರ್‌ 2ರಂದು ಯುಎಇ ದೇಶದ ರಾಜಧಾನಿ ದುಬೈನಲ್ಲಿ ನಡೆದ 28ನೇ ಕಾನ್ಫರೆನ್ಸ್‌ ಆಫ್‌ ದಿ ಪಾರ್ಟೀಸ್‌ (COP28) ಶೃಂಗಸಭೆಯಲ್ಲಿ ನರೇಂದ್ರ ಮೋದಿ ಹಾಗೂ ಜಾರ್ಜಿಯಾ ಮೆಲೋನಿ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಇದೇ ವೇಳೆ ಜಾರ್ಜಿಯಾ ಮೆಲೋನಿ ಅವರು ನರೇಂದ್ರ ಮೋದಿ ಅವರ ಜತೆ ಸೆಲ್ಫಿ ತೆಗೆಸಿಕೊಂಡಿದ್ದರು. “ಸಿಒಪಿ28 ಸಭೆಯಲ್ಲಿ ಆತ್ಮೀಯ ಸ್ನೇಹಿತರು” ಎಂದು ಒಕ್ಕಣೆ ಬರೆದಿದ್ದರು. ಅಷ್ಟೇ ಅಲ್ಲ, ಮೆಲೋನಿ+ಮೋದಿ= ಮೆಲೋಡಿ ಎಂಬ ಅರ್ಥ ಬರುವ ಕಾರಣ ಮೆಲೋಡಿ ಎಂಬ ಹ್ಯಾಶ್‌ ಟ್ಯಾಗ್‌ ಬಳಸಿದ್ದರು. ಈ ಫೋಟೊ ಭಾರಿ ವೈರಲ್‌ ಆಗಿದ್ದು, ಸಾವಿರಾರು ಜನ ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: Narendra Modi: ಸ್ನೇಹಿತ ಮೋದಿಯನ್ನು ಕೈಮುಗಿದು ಆತ್ಮೀಯವಾಗಿ ಸ್ವಾಗತಿಸಿದ ಇಟಲಿ ಪ್ರಧಾನಿ ಮೆಲೋನಿ; Video ಇದೆ

Continue Reading

ಪ್ರಮುಖ ಸುದ್ದಿ

Karnataka Politics: ಶಾಸಕ ಸ್ಥಾನಕ್ಕೆ ಎಚ್‌.ಡಿ. ಕುಮಾರಸ್ವಾಮಿ, ಬೊಮ್ಮಾಯಿ ರಾಜೀನಾಮೆ

Karnataka Politics: ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

VISTARANEWS.COM


on

Koo

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Karnataka Politics) ಗೆದ್ದು ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ಮಾಜಿ ಸಿಎಂಗಳಾದ ಎಚ್‌.ಡಿ.ಕುಮಾರಸ್ವಾಮಿ ಮತ್ತು ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸೌಧದಲ್ಲಿ ಸ್ಪೀಕರ್‌ ಯು.ಟಿ.ಖಾದರ್‌ ಅವರನ್ನು ಇಬ್ಬರು ನಾಯಕರು ಪ್ರತ್ಯೇಕವಾಗಿ ಭೇಟಿಯಾಗಿ, ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ಸಲ್ಲಿಕೆ ವೇಳೆ ಸ್ಪೀಕರ್ ಜತೆಗೆ ಕುಮಾರಸ್ವಾಮಿ ಉಭಯ ಕುಶಲೋಪರಿ ನಡೆಸಿದರು. ಇದೇ ವೇಳೆ ಸ್ಪೀಕರ್ ಅವರು ಕುದುರೆಮುಖ ವಿಚಾರ ಕೇಳಿದ್ದು, ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಒಂದಷ್ಟು ವಿವರಣೆ ನೀಡಿದರು. ಅಲ್ಲದೇ ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (VISL) ಪುನಶ್ಚೇತನದ ಬಗ್ಗೆಯೂ ಮಾತುಕತೆ ನಡೆಸಿದರು.

ರಾಜೀನಾಮೆ ಬಳಿಕ ಎಚ್‌.ಡಿ. ಕುಮಾರಸ್ವಾಮಿ ಅವರು ಮಾತನಾಡಿ, ಸಂಸತ್‌ಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಎರಡರಲ್ಲಿ ‌ಒಂದು ಸ್ಥಾನ ಉಳಿಸಿಕೊಳ್ಳಬೇಕು. ಹೀಗಾಗಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಚನ್ನಪಟ್ಟಣ ಅಭ್ಯರ್ಥಿ ಬಗ್ಗೆ ಮುಂದೆ ಮಾತನಾಡೋಣ ಎಂದರು.

ಕುಮಾರಸ್ವಾಮಿ ಚನ್ನಪಟ್ಟಣ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ಎಂಬ ಡಿ.ಕೆ. ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿ, ಪಾಪ ದೊಡ್ಡವರು ಅವರೇನೋ ಮಾತನಾಡಿಕೊಳ್ಳಲಿ. ಅವರು ಏನು ಬೇಕಾದರೂ ಮಾತನಾಡಲಿ ಬಿಡಿ ಎಂದು ಡಿಕೆಸುಗೆ ತಿರುಗೇಟು ನೀಡಿದರು.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ಹಾವೇರಿ ಲೋಕಸಭೆ ಕ್ಷೇತ್ರದಿಂದ ಸಂಸದನಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ. ನಿರಂತರವಾಗಿ 4 ಬಾರಿ ಶಾಸಕನಾಗಿ ಆಯ್ಕೆ ಮಾಡಿ ಅಭಿವೃದ್ಧಿ ಮಾಡಲು ಅವಕಾಶ ಮಾಡಿಕೊಟ್ಟ ಶಿಗ್ಗಾಂವಿ ಕ್ಷೇತ್ರದ ಜನತೆಗೆ ಕೃತಜ್ಞತೆ ಹೇಳುವೆ ಎಂದರು.

ಇದನ್ನೂ ಓದಿ | Actor Darshan: ಕೃಷಿ ಇಲಾಖೆ ರಾಯಭಾರಿ ಹುದ್ದೆಯಿಂದ ಕೊಲೆ ಆರೋಪಿ ದರ್ಶನ್‌ ವಜಾ!

ಶಿಗ್ಗಾಂವಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಮಾಡಿದ್ದೇನೆ. ಇನ್ನಷ್ಟು ಅಭಿವೃದ್ಧಿಗೆ ಈಗಾಗಲೇ ಸಿಎಂ ಅವರ ಜೊತೆ ಮಾತನಾಡಿದ್ದೇನೆ. ಸಿಎಂ ಬೆಂಗಳೂರಿಗೆ ಬಂದ ತಕ್ಷಣ ಅವರ ಬಳಿ ಚರ್ಚಿಸಿ ಅಭಿವೃದ್ಧಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಚರ್ಚಿಸುತ್ತೇನೆ. ಹಾವೇರಿ ಲೋಕಸಭೆ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಕೆಲಸ ಮಾಡುವೆ. ಸಂಸತ್ತಿನಲ್ಲಿ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಹೆಚ್ಚಿನ ಚರ್ಚೆ ಮಾಡಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡುವೆ ಎಂದರು.

Continue Reading

ಕರ್ನಾಟಕ

NEET UG 2024: ವಿದ್ಯಾರ್ಥಿಗಳಿಗೆ ಅನ್ಯಾಯ; ನೀಟ್ ಮರು ಪರೀಕ್ಷೆ, ತನಿಖೆಗೆ ಸಿಎಂ ಆಗ್ರಹ

NEET UG 2024: ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ. ಎನ್‌ಟಿಎ ಪರೀಕ್ಷೆಯನ್ನು ಸರಿಯಾಗಿ ನಡೆಸದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅಸಮಾಧಾನ ಹೊರಹಾಕಿದ್ದಾರೆ.

VISTARANEWS.COM


on

NEET UG 2024
Koo

ಮೈಸೂರು: ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್ ನೀಡುವುದರಲ್ಲಿ ಹಾಗೂ ನಿರಂತರ ಅಭ್ಯಾಸ ಮಾಡಿ ಬರೆದ ವಿದ್ಯಾರ್ಥಿಗಳಿಗೆ ದೊಡ್ಡ ಅನ್ಯಾಯವಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಹಾಗೂ ಮರು ಪರೀಕ್ಷೆ (NEET UG 2024) ನಡೆಸಲು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಪಾಂಕ ಕೊಟ್ಟು ಉತ್ತೀರ್ಣ ಮಾಡುವುದು ಕೆಟ್ಟ ಅಭ್ಯಾಸ. ಎನ್‌ಟಿಎ ಪರೀಕ್ಷೆಯನ್ನು ಸರಿಯಾಗಿ ನಡೆಸದೇ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ ಎಂದು ತಿಳಿಸಿದರು.

ಬರ ಪರಿಹಾರದ ಬಗ್ಗೆ ಪ್ರತಿಕ್ರಿಯಿಸಿ, ಬರ ಪರಿಹಾರದ ಬಾಕಿ ಮೊತ್ತವನ್ನು ರೈತರಿಗೆ ವಿತರಿಸಲಾಗುತ್ತಿದೆ ಎಂದು ಉತ್ತರಿಸಿದರು.

ದಕ್ಷಿಣ ಭಾರತದಲ್ಲಿ ಜನ ಬಿಜೆಪಿಯನ್ನು ಬೆಂಬಲಿಸುವುದಿಲ್ಲ

ದಕ್ಷಿಣ ಭಾರತದ ಏಳು ಜನರು ಕೇಂದ್ರದಲ್ಲಿ ಸಚಿವರಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಏನು ಮಾಡಿದರೂ ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಜನ ಬೆಂಬಲಿಸುವುದಿಲ್ಲ. ಏಕೆಂದರೆ ಬಿಜೆಪಿಯು ಆರ್‌ಎಸ್‌ಎಸ್‌ನ ರಾಜಕೀಯ ಮುಖವಾಡ. ಹಾಗಾಗಿ ಉತ್ತರ ಭಾರತದಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆರ್‌ಎಸ್‌ಎಸ್‌ನ ಮುಖ್ಯಸ್ಥರು ಅಹಂಕಾರಕ್ಕೆ ಜನ ಸರಿಯಾದ ಪಾಠ ಕಲಿಸಿದ್ದಾರೆ ಎಂದು ಹೇಳಿದ್ದಾರೆ ಎಂದರು.

ಅರುಂಧತಿ ರಾಯ್ ವಿರುದ್ಧ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿ, ಬಿಜೆಪಿಯದ್ದು ದ್ವೇಷದ ರಾಜಕಾರಣ. ಹೆದರಿಸುವುದು ಬೆದರಿಸುವುದು, ಇಡಿ, ಸಿಬಿಐ ಬಳಕೆ ಮಾಡುವುದನ್ನು ಮೊದಲಿನಿಂದಲೂ ಮಾಡಿಕೊಂಡು ಬರುತ್ತಿದ್ದಾರೆ. ಅದಕ್ಕಾಗಿ ಜನ ಈ ಬಾರಿ ಅವರಿಗೆ ಬಹುಮತ ಕೊಡಲಿಲ್ಲ ಎಂದರು.

ದ್ವೇಷದ ರಾಜಕಾರಣ ಬಿಜೆಪಿ ಕೆಲಸ

ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಮ್ಮ ಮೇಲೆ, ಡಿ.ಕೆ. ಶಿವಕುಮಾರ್, ರಾಹುಲ್ ಗಾಂಧಿ ಅವರ ಮೇಲೆ ಕೇಸು ಹಾಕಿರುವುದನ್ನು ಏನೆಂದು ಕರೆಯಬೇಕು. ರಾಹುಲ್ ಗಾಂಧಿ ಅವರ ಸಂಸದ ಸ್ಥಾನವನ್ನೇ ರದ್ದುಗೊಳಿಸಿದ್ದನ್ನು ಏನೆಂದು ಕರೆಯುವುದು ಎಂದು ಪ್ರಶ್ನಿಸಿದರು.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿಗೆ ಕಲಿಸಿದ್ದನ್ನು ಏನೆಂದು ಕರೆಯಬೇಕು. ದ್ವೇಷದ ರಾಜಕಾರಣವೂ ಇಲ್ಲ, ಪ್ರೀತಿಯ ರಾಜಕಾರಣ ಎಂದು ಕರೆಯಬೇಕೋ. ಸೇಡಿನ ರಾಜಕಾರಣ ಮಾಡುವುದು ಅವರು, ನಾವು ಯಾವತ್ತೂ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದರು.

ದ್ವೇಷದ ರಾಜಕಾರಣವನ್ನು ಯಾರ ಮೇಲೂ ಮಾಡಿಲ್ಲ

ನಾನು ನಿನ್ನೆ ಮೊನ್ನೆ ರಾಜಕೀಯಕ್ಕೆ ಬಂದಿಲ್ಲ. ದ್ವೇಷದ ರಾಜಕಾರಣವನ್ನು ನಾನು ಇಂದಿನವರೆಗೆ ಯಾರ ಮೇಲೂ ಮಾಡಿಲ್ಲ. ಅದು ಬಿಜೆಪಿಯವರ ಕೆಲಸ ಎಂದರು.

ಎಸ್‌ಸಿ- ಎಸ್‌ಟಿ ವಿದ್ಯಾರ್ಥಿ ವೇತನದ ಸೀಲಿಂಗ್ ಬಗ್ಗೆ ಚರ್ಚೆ

ಎಸ್.ಸಿ.ಎಸ್.ಟಿ ಮೆರಿಟ್ ವಿದ್ಯಾರ್ಥಿ ವೇತನವನ್ನು ಶೇ. 60ರಿಂದ ಶೇ 75 ಕ್ಕೆ ಏರಿಸಿದ್ದು, 6 ಲಕ್ಷ ಸೀಲಿಂಗ್ ಲಿಮಿಟ್ ನಿಗದಿಪಡಿಸಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತದೆ ಎಂಬ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ಇದನ್ನೂ ಓದಿ | NEET UG 2024: ನೀಟ್ ಯುಜಿ ವಿವಾದದ ಬಗ್ಗೆ ಸಿಬಿಐ ತನಿಖೆಗೆ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್

ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನ ಶುಲ್ಕ ಶೇ.10%ರಷ್ಟು ಹೆಚ್ಚಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ನನಗೆ ಗೊತ್ತಿಲ್ಲ ವಿಚಾರ ಮಾಡುವುದಾಗಿ ತಿಳಿಸಿದರು.

ಶೀಘ್ರದಲ್ಲೇ ಜಿ.ಪಂ, ತಾ.ಪಂ ಚುನಾವಣೆ

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿ, ಚುನಾವಣೆಯನ್ನು ಆದಷ್ಟೂ ಶೀಘ್ರದಲ್ಲಿ ಮಾಡುತ್ತೇವೆ ಎಂದರು.

Continue Reading
Advertisement
Fathers Day 2024
ಪ್ರಮುಖ ಸುದ್ದಿ8 mins ago

Fathers Day: ʼಅಪ್ಪʼನೆಂದರೆ ಆಕಾಶ… ಎನ್ನುವವರು ಈ ಭಾನುವಾರ ತಪ್ಪದೇ ವಿಶ್‌ ಮಾಡಿ

Drown in Quarry
ಕರ್ನಾಟಕ25 mins ago

Drown in Quarry: ಕ್ವಾರಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು‌

Kannada New Movie hiranys song out
ಸ್ಯಾಂಡಲ್ ವುಡ್35 mins ago

Kannada New Movie: ರಾಜವರ್ಧನ್ ನಟನೆಯ ‘ಹಿರಣ್ಯ’ ಸಿನಿಮಾದ ಮೆಲೋಡಿ ಹಾಡು ರಿಲೀಸ್

Actor Darshan
ಯಾದಗಿರಿ45 mins ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Narendra Modi
ವೈರಲ್ ನ್ಯೂಸ್56 mins ago

Narendra Modi: ನಗು ನಗುತ್ತಾ ಸೆಲ್ಫಿಗೆ ಪೋಸ್‌ ಕೊಟ್ಟ ಮೋದಿ, ಮೆಲೋನಿ; ಸೋಷಿಯಲ್‌ ಮೀಡಿಯಾದಲ್ಲಿ ʼಮೆಲೋಡಿʼಯದ್ದೇ ಸದ್ದು

Viral Video
ಕ್ರಿಕೆಟ್1 hour ago

Viral Video: ಪಾಕ್​ ಕ್ರಿಕೆಟಿಗ ವಾಸಿಂ ಅಕ್ರಮ್ ಜತೆ​ ಬ್ರೇಕ್​ ಡ್ಯಾನ್ಸ್​ ಮಾಡಿದ ಸುನಿಲ್ ಗಾವಸ್ಕರ್

ಪ್ರಮುಖ ಸುದ್ದಿ1 hour ago

Karnataka Politics: ಶಾಸಕ ಸ್ಥಾನಕ್ಕೆ ಎಚ್‌.ಡಿ. ಕುಮಾರಸ್ವಾಮಿ, ಬೊಮ್ಮಾಯಿ ರಾಜೀನಾಮೆ

Kannappa Teaser Kannada Vishnu Manchu Mohan Babu
ಟಾಲಿವುಡ್1 hour ago

Kannapp Teaser : ವಿಷ್ಣು ಮಂಚು ನಾಯಕನಾಗಿ ನಟಿಸಿರುವ `ಕಣ್ಣಪ್ಪ’ ಚಿತ್ರದ ಟೀಸರ್‌ ಬಿಡುಗಡೆ

RSS V/S BJP
Lok Sabha Election 20241 hour ago

RSS V/S BJP: ಮೋಹನ್ ಭಾಗವತ್ ʼಅಹಂಕಾರʼದ ಹೇಳಿಕೆ ಮೋದಿ ವಿರುದ್ಧವೆ? ಆರ್‌ಎಸ್‌ಎಸ್ ಸ್ಪಷ್ಟನೆ ಇದು!

Electric shock
ಚಿಕ್ಕಮಗಳೂರು2 hours ago

Electric shock : ನೇರಳೆ ಮರವೇರಿದ ಬಾಲಕನಿಗೆ ಕರೆಂಟ್‌ ಶಾಕ್‌; ಕೆಳಗೆ ಬಿದ್ದೊಡನೆ ಹಾರಿಹೋಯ್ತು ಪ್ರಾಣಪಕ್ಷಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ45 mins ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ21 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು22 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು22 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ23 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ4 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ4 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ4 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ4 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌