ವಿಸ್ತಾರ ಸಂಪಾದಕೀಯ: ಮತ ಪ್ರಮಾಣ ಹೆಚ್ಚಿಸುವ ಆಯೋಗದ ಕ್ರಮವನ್ನು ಬೆಂಬಲಿಸೋಣ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಮತ ಪ್ರಮಾಣ ಹೆಚ್ಚಿಸುವ ಆಯೋಗದ ಕ್ರಮವನ್ನು ಬೆಂಬಲಿಸೋಣ

ಪ್ರತೀ ಪ್ರಜೆಗೂ ಮತದಾನ ಎಂಬುದು ಮೂಲಭೂತ ಹಕ್ಕು. ಚುನಾವಣೆ ಆಯೋಗದ ಸುಧಾರಣಾವಾದಿ ಕ್ರಮಗಳನ್ನು ಬೆಂಬಲಿಸುವುದು ತಮ್ಮ ಕರ್ತವ್ಯ ಎಂದು ನಾಗರಿಕರು ಪರಿಗಣಿಸಿದರೆ ಮಾತ್ರ ಮತ ಪ್ರಮಾಣ ಹೆಚ್ಚಲು ಸಾಧ್ಯ.

VISTARANEWS.COM


on

Karnataka Elections 2023
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೇಂದ್ರ ಚುನಾವಣೆ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಯ ದಿನವನ್ನು ಘೋಷಿಸಿದೆ. ಮೇ 10ರಂದು ಒಂದೇ ಹಂತದಲ್ಲಿ ಚುನಾವಣೆ ನಡೆದು, ಮೇ 13ರಂದು ಮತ ಎಣಿಕೆಯಾಗಿ ಫಲಿತಾಂಶ ಕೂಡ ಬರಲಿದೆ. ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವುದರ ಜತೆಗೆ, ಮತದಾನ ಪ್ರಮಾಣವನ್ನೂ ಹೆಚ್ಚಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುತ್ತಿರುವುದಾಗಿ ಆಯೋಗ ಘೋಷಿಸಿದೆ. ಮುಖ್ಯವಾಗಿ ನಗರ ಪ್ರದೇಶಗಳಲ್ಲಿ ಮತದಾನ ಪ್ರಮಾಣ ಕಡಿಮೆಯಿದೆ. ವಿದ್ಯಾವಂತರೇ ಮತದಾನ ಮಾಡುತ್ತಿಲ್ಲ ಎಂಬುದು ನಮ್ಮ ಪ್ರಜಾಪ್ರಭುತ್ವಕ್ಕೆ ಸವಾಲಾಗಿರುವ ಕೊರಗುಗಳಲ್ಲಿ ಒಂದು. ಹೀಗಾಗಿ ಮತದಾರರನ್ನು ಮತಗಟ್ಟೆಯತ್ತ ಸೆಳೆಯಲು ಆಯೋಗ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಇವುಗಳಿಗೆ ಪೂರಕವಾಗಿ ಎಲ್ಲರೂ ಸ್ಪಂದಿಸಬೇಕಿದೆ.

ಸಾಮಾನ್ಯವಾಗಿ ವಾರಾಂತ್ಯ ಅಥವಾ ವಾರದ ಆರಂಭದಲ್ಲಿ ಮತದಾನ ದಿನ ನಿಗದಿಪಡಿಸಿದರೆ ಒಂದಿಷ್ಟು ಸಂಖ್ಯೆಯ ಮತದಾರರು ಪ್ರವಾಸಕ್ಕೆ ಹೊರಡುವ ಪ್ರವೃತ್ತಿಯನ್ನು ನಾವು ಈ ಹಿಂದಿನ ಚುನಾವಣೆಗಳಲ್ಲಿ ಗಮನಿಸಿದ್ದೇವೆ. ಅದನ್ನು ತಪ್ಪಿಸಲು ಈ ಬಾರಿ ಆಯೋಗವು ವಾರದ ನಡುವೆ ಮತದಾನದ ದಿನ ನಿಗದಿಪಡಿಸಿದ್ದು ಕೂಡ ಯೋಜಿತ ಮತ್ತು ಪರಿಣಾಮಕಾರಿ ನಿರ್ಧಾರ ಎನ್ನಬಹುದಾಗಿದೆ. ಹಾಗೆಯೇ ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ ಮತದಾನ ಕೇಂದ್ರಕ್ಕೆ ಬರಲು ಆಗದ 80 ವರ್ಷಕ್ಕೂ ಮೇಲ್ಪಟ್ಟವರು, ಗಂಭೀರ ಅನಾರೋಗ್ಯ ಬಾಧಿತರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ನೀಡಲಾಗಿದೆ. ಜತೆಗೆ ಮತದಾನ ಕೇಂದ್ರದಲ್ಲೂ ಇವರಿಗೆ ವಿಶೇಷ ಸೌಲಭ್ಯ ಮಾಡಲಾಗಿದೆ. ಆದರೆ ಮೊದಲೇ ಈ ಬಗ್ಗೆ ನೋಂದಾಯಿಸಿಕೊಳ್ಳಬೇಕು. ಅಂಥ ಒಂದು ಮತದ ಸಂಗ್ರಹಕ್ಕೆ ಮೂರ್ನಾಲ್ಕು ಮಂದಿಯನ್ನು ನಿಯೋಜಿಸಲಾಗುತ್ತದೆ ಎಂದರೆ, ಒಂದೊಂದು ಮತವನ್ನೂ ಆಯೋಗ ಎಷ್ಟು ಗಂಭಿರವಾಗಿ ಪರಿಗಣಿಸಿದೆ ಎಂಬುದನ್ನು ಗಮನಿಸಬಹುದು. ಕರ್ನಾಟಕದಲ್ಲಿ ಮೊದಲ ಬಾರಿಗೆ ಜಾರಿಯಾಗುತ್ತಿರುವ ಇದೊಂದು ಕ್ರಾಂತಿಕಾರಿ ಉಪಕ್ರಮವೇ ಸರಿ. ಅಗತ್ಯವಿದ್ದವರು ಇದರ ಸದ್ಬಳಕೆ ಮಾಡಿಕೊಳ್ಳಬೇಕಿದೆ.

ಯುವ ಮತದಾರರಿಗೆ, ಮೊದಲ ಬಾರಿಗೆ ಮತ ಹಾಕುತ್ತಿರುವವರಿಗೆ ಉತ್ತೇಜನ ನೀಡುವ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕರ್ನಾಟಕದಲ್ಲಿ ಕರ್ನಾಟಕದಲ್ಲಿ 5, 21, 73, 573 ಮತದಾರರಿದ್ದು, ಇದರಲ್ಲಿ ಮೊದಲ ಬಾರಿಯ ಮತದಾರರ ಸಂಖ್ಯೆ 9.17 ಲಕ್ಷದಷ್ಟು ಹೆಚ್ಚಳವಾಗಿದೆ. ಇವರನ್ನು ಮತಗಟ್ಟೆಗಳತ್ತ ತರಲು ಉತ್ಸಾಹ ತುಂಬಲು, ಪ್ರಜಾಪ್ರಭುತ್ವದಲ್ಲಿ ಅವರ ಹೊಣೆಯ ಕುರಿತು ಆಡುವ ನಾಲ್ಕು ಪ್ರೋತ್ಸಾಹದ ಮಾತುಗಳೂ ಸಾಕಾಗುತ್ತವೆ. ಇವರನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಜೇನು ಕುರುಬ ಹಾಗೂ ಕೊರಗ ಸಮುದಾಯಗಳನ್ನು ಬುಡಕಟ್ಟು ಸಮುದಾಯಗಳು ಎಂದು ಪರಿಗಣಿಸಲಾಗಿದ್ದು, ಈ ಸಮುದಾಯದವರ ಮತದಾನಕ್ಕೆ 40 ಮತಗಟ್ಟೆ ಮಾಡಲಾಗಿದೆ. ಮತಗಟ್ಟೆಗಳ ಸಂಖ್ಯೆ ಹೆಚ್ಚಿಸಲಾಗಿರುವುದರಿಂದ ಒತ್ತಡ ಕಡಿಮೆಯಾಗಲಿದೆ. ಬೆಂಗಳೂರು ನಗರದಲ್ಲಿ ಯುವಮತದಾರರ ಪಾಲ್ಗೊಳ್ಳುವಿಕೆ ಹೆಚ್ಚಿಸಲು ಐಐಎಸ್‌ಸಿ, ಐಐಟಿ ಹಾಗೂ ಸ್ಟಾರ್ಟಪ್‌ಗಳ ಸಹಯೋಗದೊಂದಿಗೆ ಎಲೆಕ್ಥಾನ್ ಹಾಗೂ ಇನ್ನಿತರ ಕ್ರಮಗಳನ್ನು ಆಯೋಗ ಕೈಗೊಳ್ಳುತ್ತಿದೆ. ಮತ ಪ್ರಮಾಣ ಹೆಚ್ಚಿಸುವ ಸಲಹೆ ನೀಡುವವರಿಗೆ ಬಹುಮಾನ ಇತ್ಯಾದಿ ಹಲವು ಕ್ರಮಗಳನ್ನು ಕೈಗೊಂಡಿರುವುದು ಕ್ರಾಂತಿಕಾರಕವಾಗಿದೆ.

ಪ್ರತಿ ಮತವೂ ಅಮೂಲ್ಯ ಎಂದು ನಾವು ಹೇಳುತ್ತೇವೆ. ಆದರೆ, ಮುಖ್ಯವಾಗಿ ನಗರ ಪ್ರದೇಶಗಳಲ್ಲೇ ಮತದಾನ ಪ್ರಮಾಣ ಶೇ.60ನ್ನು ದಾಟುವುದಿಲ್ಲ. ನಗರ ಪ್ರದೇಶದ ಮತದಾರರ ಆಲಸ್ಯ ಹಾಗೂ ಹಣದ ಪ್ರಾಬಲ್ಯವು ಕರ್ನಾಟಕದಲ್ಲಿ ಪ್ರಮುಖ ಸವಾಲಾಗಿದೆ ಎಂದು ಆಯೋಗವೇ ಹೇಳಿದೆ. ಸುಶಿಕ್ಷಿತರು ಮತದಾನ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಿದಾಗ ಮಾತ್ರ ಇದಕ್ಕೆ ಪರಿಹಾರ. ಪ್ರಜಾಪ್ರಭುತ್ವವೆಂಬುದು ಸುಮ್ಮನೇ ಯಾರೋ ನಮಗೆ ತಟ್ಟೆಯಲ್ಲಿಟ್ಟು ಕೊಟ್ಟ ಉಡುಗೊರೆಯಲ್ಲ. ಪ್ರತಿ ಪ್ರಜೆಯೂ ಪ್ರತಿ ಕಾಲದಲ್ಲೂ ತಮ್ಮ ಪ್ರಜಾಪ್ರಭುತ್ವವನ್ನು ಉತ್ತಮಗೊಳಿಸಿಕೊಳ್ಳಲು ಸದಾ ಶ್ರಮಿಸುತ್ತಿರಬೇಕು. ಸಂವಿಧಾನದ ಪ್ರಕಾರ ಪ್ರತೀ ಪ್ರಜೆಗೂ ಮತದಾನ ಎಂಬುದು ಮೂಲಭೂತ ಹಕ್ಕು. ಮತದಾನದ ಒಂದು ದಿನದಂದು ಮಾತ್ರವೇ ಪ್ರಜೆ ಪ್ರಭುವಾಗಿರುತ್ತಾನೆ. ಅಂದು ಸರಿಯಾಗಿ ತಮ್ಮ ಅಧಿಕಾರ ಚಲಾಯಿಸದೇ ಹೋದರೆ ಮುಂದಿನ ಐದು ವರ್ಷ ತಮಗಿಷ್ಟವಿಲ್ಲದ ವ್ಯಕ್ತಿಗಳ ಗುಲಾಮರಾಗಿರಬೇಕಾಗುತ್ತದೆ. ಚುನಾವಣೆ ಆಯೋಗದ ಸುಧಾರಣಾವಾದಿ ಕ್ರಮಗಳನ್ನು ಬೆಂಬಲಿಸುವುದು ತಮ್ಮ ಕರ್ತವ್ಯ ಎಂದು ನಾಗರಿಕರು ಪರಿಗಣಿಸಬೇಕು. ಆಗ ಮಾತ್ರ ಮತದಾನ ಪ್ರಮಾಣ ಹೆಚ್ಚಲು ಸಾಧ್ಯವಾಗುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

CJI Chandrachud: ಹೊಸ ಕಾನೂನುಗಳ ಜಾರಿ ಐತಿಹಾಸಿಕ; ಸಿಜೆಐ ಡಿ.ವೈ.ಚಂದ್ರಚೂಡ್‌ ಬಣ್ಣನೆ

CJI Chandrachud: ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಹೊಸ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿವೆ. ಈ ಕಾನೂನುಗಳ ಕುರಿತು ಸಿಜೆಐ ಡಿ.ವೈ.ಚಂದ್ರಚೂಡ್‌ ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

VISTARANEWS.COM


on

CJI Chandrachud
Koo

ನವದೆಹಲಿ: ದೇಶದಲ್ಲಿ ವಸಾಹತು ಕಾಲದ ಕ್ರಿಮಿನಲ್‌ ಕಾನೂನುಗಳ (Criminal Laws) ಸಂಪೂರ್ಣ ತಿದ್ದುಪಡಿ ದಿಸೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದ್ದು, ಭಾರತೀಯ ದಂಡ ಸಂಹಿತೆ (IPC-1860), ಭಾರತೀಯ ಅಪರಾಧ ಪ್ರಕ್ರಿಯಾ ಸಂಹಿತೆ (CrPC-1973) ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳನ್ನು (Indian Evidence Act-1872) ತಿದ್ದುಪಡಿಗೊಳಿಸಲಾಗಿದೆ. ಇವುಗಳ ಬದಲಾಗಿ ಮೂರು ಹೊಸ ಕಾನೂನುಗಳು (New Laws) ಜುಲೈ 1ರಿಂದಲೇ ದೇಶಾದ್ಯಂತ ಜಾರಿಗೆ ಬರಲಿವೆ. ಇದರ ಬೆನ್ನಲ್ಲೇ, ಹೊಸ ಕಾನೂನುಗಳ ಜಾರಿಯ ಕುರಿತು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸಿಜೆಐ ಡಿ.ವೈ.ಚಂದ್ರಚೂಡ್‌ (CJI Chandrachud) ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಭಾರತವು ಬದಲಾಗುತ್ತಿದೆ ಎಂಬುದಕ್ಕೆ ಹೊಸ ಕಾನೂನುಗಳ ಜಾರಿಯೇ ಸಾಕ್ಷಿಯಾಗಿದೆ. ಭಾರತ ಹೊಸ ಹಾದಿಯತ್ತ ಸಾಗುತ್ತಿದೆ. ಆಧುನಿಕ ಭಾರತದ ಸವಾಲುಗಳನ್ನು ಎದುರಿಸಲು ಹಾಗೂ ಭವಿಷ್ಯದ ದೃಷ್ಟಿಯಿಂದ ಕಾನೂನುಗಳ ಬದಲಾವಣೆಯು ಪ್ರಮುಖವಾಗಿದೆ. ಇದರಿಂದ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ಆಗುತ್ತದೆ. ಹಾಗಾಗಿ, ಹೊಸ ಕಾನೂನುಗಳ ಜಾರಿಯು ಭಾರತವು ಬದಲಾಗುತ್ತಿದೆ ಎಂಬುದಕ್ಕೆ ಕುರುಹು” ಎಂದು ಹೊಸ ಕಾನೂನುಗಳನ್ನು ಶ್ಲಾಘಿಸಿದರು.

“ದೇಶದ ಕಾನೂನು ವ್ಯವಸ್ಥೆ, ಕ್ರಿಮಿನಲ್‌ ಕಾನೂನುಗಳ ಬದಲಾವಣೆಯು ಅತ್ಯಗತ್ಯವಾಗಿತ್ತು. ಇದರ ದಿಸೆಯಲ್ಲಿ ಹೊಸ ಕಾನೂನುಗಳನ್ನು ಜಾರಿಗೊಳಿಸುತ್ತಿರುವುದು, ಮಹತ್ವದ ಬದಲಾವಣೆ ಮಾಡುತ್ತಿರುವುದು ಸಂತಸವಾಗಿದೆ. ಅದರಲ್ಲೂ, ಸಂತ್ರಸ್ತರನ್ನು ರಕ್ಷಿಸಿ, ಅಪರಾಧ ಎಸಗುವವರ ವಿರುದ್ಧ ಕೂಲಂಕಷ ತನಿಖೆಗೆ ಹೊಸ ಕಾನೂನುಗಳು ಸಹಕಾರಿಯಾಗಿವೆ” ಎಂದು ಬಣ್ಣಿಸಿದರು.

ಐಪಿಸಿಯನ್ನು ಭಾರತೀಯ ನ್ಯಾಯ ಸಂಹಿತೆ-2023, ಸಿಆರ್‌ಪಿಸಿಯನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023 ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯನ್ನು ಭಾರತೀಯ ಸಾಕ್ಷ್ಯ ವಿಧೇಯಕ-2023 ಎಂಬುದಾಗಿ ಮಾರ್ಪಡಿಸಲಾಗಿದೆ. ಹೊಸ ಕಾನೂನುಗಳು ಜುಲೈ 1ರಿಂದ ಜಾರಿಗೆ ಬರಲಿವೆ.

ಈಗಿರುವ ಭಾರತೀಯ ದಂಡ ಸಂಹಿತೆಯಲ್ಲಿ 420 ಸೆಕ್ಷನ್ ಅನ್ನು ವಂಚನೆ ಅಪರಾಧಕ್ಕೆ ಅನ್ವಯಿಸಲಾಗುತ್ತದೆ. ಆದರೆ, ಭಾರತೀಯ ನ್ಯಾಯ ಸಂಹಿತೆಯ ಈ ಅಪರಾಧಕ್ಕೆ 316(2), (3) ಮತ್ತು (4) ಸೆಕ್ಷನ್‌ಗಳು ಇರಲಿವೆ. ವಂಚನೆ ಅಪರಾಧಕ್ಕಾಗಿ ಈ ಸೆಕ್ಷನ್‌ಗಳಡಿ ಅಪರಾಧಿಗೆ ಮೂರು ವರ್ಷ, ಐದು ವರ್ಷ ಅಥವಾ ಏಳು ವರ್ಷಗಳವರೆಗೆ ದಂಡ ಸಹಿತ ಜೈಲು ಶಿಕ್ಷೆಯನ್ನು ವಿಸ್ತರಿಸಬಹುದಾಗಿದೆ.

ದೇಶದ್ರೋಹ ಕಾನೂನು ಬದಲು

ಬ್ರಿಟಿಷರ ಕಾಲದಲ್ಲಿ ಜಾರಿಗೆ ತಂದ ದೇಶದ್ರೋಹದ ಕಾನೂನು ನೂತನ ಕ್ರಿಮಿನಲ್‌ ಕಾನೂನಿನಲ್ಲಿ ಇರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಾಹಿತಿ ನೀಡಿದ್ದಾರೆ. ದೇಶದ್ರೋಹ ಕಾನೂನಿನಲ್ಲಿ ಬಂಧಿತರಾದವರಿಗೆ ಮೂರು ವರ್ಷದಿಂದ ಜೀವಾವಧಿ ಶಿಕ್ಷೆ ನೀಡಬಹುದಾಗಿದ್ದು, ಈ ಕಾನೂನು ರದ್ದುಗೊಳಿಸಲಾಗುತ್ತದೆ ಎಂದು ಹೇಳಿದರು. ಇದರ ಬದಲಾಗಿ ಹೊಸ ನಿಯಮಗಳು ಜಾರಿಗೆ ಬರಲಿವೆ ಎಂದು ಕೂಡ ತಿಳಿಸಿದರು.

ಅತ್ಯಾಚಾರಿಗಳಿಗೆ 20 ವರ್ಷ ಜೈಲು

ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವುದು ನೂತನ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. “ಹೊಸ ಕಾನೂನುಗಳ ಅಡಿಯಲ್ಲಿ ಅತ್ಯಾಚಾರಿಗಳಿಗೆ ಗರಿಷ್ಠ 20 ವರ್ಷ ಅಥವಾ ಅವರು ಜೀವಿತಾವಧಿವರೆಗೆ ಜೈಲಿನಲ್ಲಿ ಕಾಲ ಕಳೆಯುವ ರೀತಿ ಶಿಕ್ಷೆ ವಿಧಿಸಲಾಗುತ್ತದೆ. ಹಾಗೆಯೇ, ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದವರಿಗೆ ಗಲ್ಲು ಶಿಕ್ಷೆ ವಿಧಿಸುವ, ಅತ್ಯಾಚಾರ ಸಂತ್ರಸ್ತೆಯರ ಮಾಹಿತಿ ಬಹಿರಂಗಪಡಿಸಿದವರಿಗೂ ಶಿಕ್ಷೆ ವಿಧಿಸುವ ಕಾನೂನು ಇರಲಿದೆ” ಎಂದು ಅಮಿತ್‌ ಶಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Parliament Session: ಅಪರಾಧ ಎಸಗಿ ದೇಶ ಬಿಟ್ಟು ಹೋದವರಿಗೆ ಇನ್ನಿಲ್ಲ ನೆಮ್ಮದಿ; ಬರ್ತಿದೆ ಹೊಸ ಕಾನೂನು!

Continue Reading

Lok Sabha Election 2024

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka: ಸಿಎಂ ಸಿದ್ದರಾಮಯ್ಯ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ರಾಜ್ಯವನ್ನು ಲೂಟಿ ಮಾಡಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2014ರಲ್ಲಿ ಬರಿ ಚೆಂಬನ್ನು ಕೊಡುತ್ತಾರೆ. ಆ ಖಾಲಿ ಚೆಂಬನ್ನು ಪಡೆದ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷದಿಂದ ಅಕ್ಷಯ ಪಾತ್ರೆಯನ್ನು ಮಾಡಿದರು. ಈ ದೇಶದ ಬಡವರು, ಹಿಂದುಳಿದ ವರ್ಗದವರು, ಮಹಿಳೆಯರು ಹಾಗೂ ಸಣ್ಣ ಸಣ್ಣ ಸಮಾಜದವರನ್ನು ಮೇಲಕ್ಕೆ ಎತ್ತುವ ಕೆಲಸವನ್ನು ಮಾಡಿದ ಮಹಾನ್‌ ಭಾವ ಯಾರೆಂದರೆ ಅದು ನರೇಂದ್ರ ಮೋದಿ ಎಂದು ಎಚ್.ಡಿ. ದೇವೇಗೌಡ ಹೇಳಿದ್ದಾರೆ.

VISTARANEWS.COM


on

Modi in Karnataka HD Deve Gowda attack on Congess
Koo

ಚಿಕ್ಕಬಳ್ಳಾಪುರ: ಈ ದೇಶದಲ್ಲಿ 60 ವರ್ಷಗಳ ಕಾಲ ಆಡಳಿತವನ್ನು ನಡೆಸಿ ಸಂಪತ್ತನ್ನು ಲೂಟಿ ಮಾಡಿ 2014ರಲ್ಲಿ ಖಾಲಿ ಚೆಂಬನ್ನು ನರೇಂದ್ರ ಮೋದಿ ಅವರಿಗೆ ಕೊಟ್ಟಿದ್ದು ಇದೇ ಕಾಂಗ್ರೆಸ್‌ ಆಗಿದೆ. ಆದರೆ, ಆ ಖಾಲಿ ಚೆಂಬನ್ನು ಅಕ್ಷಯ ಪಾತ್ರೆ ಮಾಡಿದವರು ಪ್ರಧಾನಿ ಮೋದಿ (PM Narendra Modi) ಎಂದು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ (HD Devegowda) ಗುಡುಗಿದರು. ಪ್ರಧಾನಿ ನರೇಂದ್ರ ಮೋದಿ (Modi in Karnataka) ಅವರ ಚಿಕ್ಕಬಳ್ಳಾಪುರ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಚಿಕ್ಕಬಳ್ಳಾಪುರದಲ್ಲಿ ಶನಿವಾರ (ಏಪ್ರಿಲ್‌ 20) ಏರ್ಪಡಿಸಲಾಗಿದ್ದ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಜತೆ ವೇದಿಕೆ ಹಂಚಿಕೊಂಡು ಮಾತನಾಡಿದ ಎಚ್.ಡಿ. ದೇವೇಗೌಡ, ಈ ಹಿಂದೆ ಯುಪಿಎ ಸರ್ಕಾರ ಇದ್ದಾಗ ಕೋಲ್, 2ಜಿ ಸ್ಪೆಕ್ಟ್ರಂ ಸೇರಿದಂತೆ ಎಷ್ಟು ಭ್ರಷ್ಟಾಚಾರ ಮಾಡಿದ್ದಾರೆ. ಈ ನಾಡಿನ ಸಂಪತ್ತನ್ನು ಲೂಟಿ ಹೊಡೆದಿದ್ದಾರೆ. ಆ ಬರಿಯ ಚೆಂಬನ್ನು ಯಾರ ಕೈಗೆ ಕೊಟ್ಟಿದ್ದಾರೆ? ಈ ಕಾಂಗ್ರೆಸ್‌ನವರು ಯಾರಿಗೆ ಕೊಟ್ಟರು? ಸಿಎಂ ಸಿದ್ದರಾಮಯ್ಯ, ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ರಾಜ್ಯವನ್ನು ಲೂಟಿ ಮಾಡಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ 2014ರಲ್ಲಿ ಬರಿ ಚೆಂಬನ್ನು ಕೊಡುತ್ತಾರೆ. ಆ ಖಾಲಿ ಚೆಂಬನ್ನು ಪಡೆದ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ 10 ವರ್ಷದಿಂದ ಅಕ್ಷಯ ಪಾತ್ರೆಯನ್ನು ಮಾಡಿದರು. ಈ ದೇಶದ ಬಡವರು, ಹಿಂದುಳಿದ ವರ್ಗದವರು, ಮಹಿಳೆಯರು ಹಾಗೂ ಸಣ್ಣ ಸಣ್ಣ ಸಮಾಜದವರನ್ನು ಮೇಲಕ್ಕೆ ಎತ್ತುವ ಕೆಲಸವನ್ನು ಮಾಡಿದ ಮಹಾನ್‌ ಭಾವ ಯಾರೆಂದರೆ ಅದು ನರೇಂದ್ರ ಮೋದಿ ಎಂದು ಎಚ್.ಡಿ. ದೇವೇಗೌಡ ಹೇಳಿದರು.

ಇಂಥ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾತನಾಡುತ್ತೀರಾ? ಇದು ಕ್ಷುಲ್ಲಕ ರಾಜಕಾರಣ ಅಲ್ಲವೇ? ನಾಚಿಕೆಯಾಗಬೇಕು ನಿಮಗೆ. ಈ ದೇಶಕ್ಕೆ ಸುಮಾರು 34 ಪ್ರೋಗ್ರಾಂಗಳನ್ನು ಕೊಟ್ಟಿದ್ದಾರೆ. ಬಡವರಿಗೋಸ್ಕರ, ನಿರೋದ್ಯೋಗವನ್ನು ಬಗೆಹರಿಸಲು ಸೇರಿದಂತೆ ಎಷ್ಟು ಕಾರ್ಯಕ್ರಮಗಳು ಇವೆ? ಸಿಎಂ ಸಿದ್ದರಾಮಯ್ಯ ಮತ್ತು ಅವರ ಭಾಷಣದಲ್ಲಿ ಏನು ಹೇಳುತ್ತಾರೆ? ಅವರ ಬಗ್ಗೆ, ಅವರ ಭಾಷಣದ ಬಗ್ಗೆ ವ್ಯಾಖ್ಯಾನ ಮಾಡಲು ನಾನು ಹೋಗುವುದಿಲ್ಲ ಎಚ್.ಡಿ. ದೇವೇಗೌಡ ಹೇಳಿದರು.

ಮೋದಿ ಕಾರ್ಯಕ್ರಮದ ಲೈವ್‌ ಅಪ್ಡೇಟ್‌ ಇಲ್ಲಿದೆ

ಚಿಕ್ಕಬಳ್ಳಾಪುರದಲ್ಲಿ ನನ್ನ ನಿಜವಾದ ಕಾರ್ಯಕರ್ತರು ಇದ್ದರೆ ನಿಮ್ಮ ವೋಟನ್ನು ಚಿಕ್ಕಬಳ್ಳಾಪುರ ಲೋಕಸಭಾ ಅಭ್ಯರ್ಥಿ ಡಾ. ಕೆ. ಸುಧಾಕರ್‌ ಅವರಿಗೆ ನೀಡಿ. ನಾವು ನಮ್ಮ ಗುರಿಯನ್ನು ಮುಟ್ಟಲು, ದೇಶದಲ್ಲಿ 400ಕ್ಕೂ ಹೆಚ್ಚು ಸ್ಥಾನವನ್ನು ಪಡೆಯಲು, ರಾಜ್ಯದಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲಲು ನಮ್ಮ ಕಾಣಿಕೆ ಇದಾಗಬೇಕು ಎಂದು ಎಚ್.ಡಿ. ದೇವೇಗೌಡ ಮನವಿ ಮಾಡಿದರು.

ಇದನ್ನೂ ಓದಿ: ‌CM Siddaramaiah: ಸಿಎಂ ಸಿದ್ದರಾಮಯ್ಯ ಬಳಿ ಗನ್‌ ತಂದಿದ್ದ ಕೇಸ್;‌ ನಾಲ್ವರು ಪೊಲೀಸರು ಸಸ್ಪೆಂಡ್

ಈಗ 25 ಗ್ಯಾರಂಟಿಯನ್ನು ಕೊಡುತ್ತೇನೆ ಎಂದು ಹೇಳುತ್ತಿದ್ದಾರೆ.

ಈ ದೇಶದಲ್ಲಿ 60 ವರ್ಷ ಆಡಳಿತ ನಡೆಸಿ, ಈ ಹತ್ತು ವರ್ಷದಲ್ಲಿ ವಿರೋಧಿ ಪಕ್ಷದ ಸ್ಥಾನವನ್ನು ಪಡೆಯಲು ಯೋಗ್ಯತೆ ಇಲ್ಲದ ಈ ಕಾಂಗ್ರೆಸ್‌ ಪಕ್ಷವು 400 ಸೀಟುಗಳನ್ನು ಗೆಲ್ಲುತ್ತದೆಯಾ? ಈಗ ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಈ ಇಬ್ಬರು (ಡಾ. ಕೆ. ಸುಧಾಕರ್‌ ಮತ್ತು ಮಲ್ಲೇಶ್‌ ಬಾಬು) ಅಭ್ಯರ್ಥಿಗಳನ್ನು ಗೆಲ್ಲಿಸಿ. 28 ಕ್ಷೇತ್ರಗಳನ್ನು ಗೆದ್ದುಕೊಂಡು ನಾವೆಲ್ಲರೂ ಹೋಗಿ ಕಾವೇರಿ ನೀರು ಸೇರಿದಂತೆ ರಾಜ್ಯದ ಇನ್ನಿತರ ಸಮಸ್ಯೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮುಂದೆ ಹೋಗಿ ಕೇಳಲು ಅನುವು ಮಾಡಿಕೊಡಬೇಕು ಎಂದು ಎಚ್.ಡಿ. ದೇವೇಗೌಡ ಮನವಿ ಮಾಡಿದರು.

Continue Reading

ಉದ್ಯೋಗ

Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job Alert: ಬೆಂಗಳೂರಿನಲ್ಲೇ ಕೆಲಸ ಹುಡುಕುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಖಾಲಿ ಇರುವ ಬರೋಬ್ಬರಿ 11,307 ಡಿ ಗ್ರೂಪ್‌ನ ಪೌರ ಕಾರ್ಮಿಕರ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದೆ. ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 15. ಈ ಹುದ್ದೆಗೆ ಯಾವುದೇ ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಕನ್ನಡ ಮಾತನಾಡಲು ತಿಳಿದಿರುವವರು ಅರ್ಜಿ ಸಲ್ಲಿಸಬಹುದು.

VISTARANEWS.COM


on

Job Alert
Koo

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಬರೋಬ್ಬರಿ 11,307 ಡಿ ಗ್ರೂಪ್‌ನ ಪೌರ ಕಾರ್ಮಿಕರ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದೆ (BBMP Recruitment 2024). ಘನತ್ಯಾಜ್ಯ ನಿರ್ವಹಣೆ ವಿಭಾಗದಡಿ ನೇಮಕಾತಿ ನಡೆಯಲಿದೆ. ಕನ್ನಡ ಬಲ್ಲವರು ಅರ್ಜಿ ಸಲ್ಲಿಸಬಹುದು. ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಮೇ 15 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸ್ಥಳೀಯ ವೃಂದದ-ಹುದ್ದೆಗಳು, ಕಲ್ಯಾಣ ಕರ್ನಾಟಕ (KK)-905 ಮತ್ತು ಉಳಿಕೆ ಮೂಲ ವೃಂದ (RPC)-10,402 ಹುದ್ದೆಗಳಿವೆ. ಈ ಹುದ್ದೆಗೆ ಯಾವುದೇ ಶೈಕ್ಷಣಿಕ ವಿದ್ಯಾರ್ಹತೆ ಅಗತ್ಯವಿಲ್ಲ. ಕನ್ನಡ ಮಾತನಾಡಲು ತಿಳಿದಿರುವವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಅಭ್ಯರ್ಥಿಗಳ ಗರಿಷ್ಠ ವಯಸ್ಸು 55 ವರ್ಷ. ಅಭ್ಯರ್ಥಿಗಳು ಭಾರತೀಯ ನಾಗರೀಕರಾಗಿರಬೇಕು. ಬಿಬಿಎಂಪಿಯಲ್ಲಿ ನೇರ ಪಾವತಿ / ಕ್ಷೇಮಾಭಿವೃದ್ಧಿ / ದಿನಗೂಲಿ ಆಧಾರದಲ್ಲಿ ಎರಡು ವರ್ಷ ಕಡಿಮೆ ಇಲ್ಲದಂತೆ, ನಿರಂತರವಾಗಿ ಕೆಲಸ ನಿರ್ವಹಿಸಿರುವ ಮತ್ತು ಎರಡು ವರ್ಷಗಳಿಗೂ ಮೇಲ್ಪಟ್ಟು ಪಾಲಿಕೆಯಿಂದ ವೇತನ ಪಡೆಯುವವರಿಗೆ ಆದ್ಯತೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಆಯ್ಕೆಯಾದವರಿಗೆ 17,000 ರೂ. – 28,950 ರೂ. ಮಾಸಿಕ ವೇತನ ದೊರೆಯಲಿದೆ.

BBMP Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಬಿಬಿಎಂಪಿಯ ಅಧಿಕೃತ ವೆಬ್‌ಸೈಟ್‌ bbmp.gov.in.ಗೆ ಭೇಡಿ ನೀಡಿ.
  • ಈಗ ತೆರೆದುಕೊಳ್ಳುವ ಹೋಮ್‌ಪೇಜ್‌ನಲ್ಲಿ ಕಂಡು ಬರುವ ಪೌರಕಾರ್ಮಿಕರ ಹುದ್ದೆಗಳ ಅರ್ಜಿ ನಮೂನೆ Click here to View ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಈಗ ಕಂಡು ಬರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್‌ ಮಾಡಿ.
  • ಪ್ರಿಂಟ್‌ಔಟ್‌ ತೆಗೆದು ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅದರಲ್ಲಿ ಕೇಳಿರುವ ದಾಖಲೆಗಳನ್ನು ಲಗತ್ತಿಸಿ.
  • ಭರ್ತಿ ಮಾಡಿದ ಅರ್ಜಿಯನ್ನು N.R. Square, Bengaluru -560002, Karnataka ಇಲ್ಲಿಗೆ ಸಲ್ಲಿಸಿ.

ಇದನ್ನೂ ಗಮನಿಸಿ

  • ಈ ಹುದ್ದೆಗಳಿಗೆ ಯಾವುದೇ ಸಂದರ್ಶನ ನಿಗದಿಪಡಿಸಿಲ್ಲ.
  • ಅಪೂರ್ಣ ಅರ್ಜಿಗಳನ್ನು ಕಡ್ಡಾಯವಾಗಿ ಸ್ವೀಕರಿಸುವುದಿಲ್ಲ.
  • ಅರ್ಜಿಯೊಂದಿಗೆ ಕಡ್ಡಾಯವಾಗಿ ದಾಖಲೆಗಳನ್ನು ಲಗತ್ತಿಸಬೇಕು.
  • ಒಂದಕ್ಕಿಂತ ಹೆಚ್ಚು ಪತ್ನಿಯರನ್ನು ಹೊಂದಿರುವ ಪುರುಷ ಅಭ್ಯರ್ಥಿ ಮತ್ತು ಈಗಾಗಲೇ ಇನ್ನೊಬ್ಬ ಪತ್ನಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುವುದಿಲ್ಲ.
  • ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್‌ ಹಿನ್ನೆಲೆ ಹೊಂದಿರಬಾರದು.
  • ಈಗಾಗಲೇ ಗಂಭೀರ ಪ್ರಕರಣದ ಕಾರಣದಿಂದ ಕರ್ತವ್ಯದಿಂದ ತೆಗೆದು ಹಾಕಿರಬಾರದು.

ಇದನ್ನೂ ಓದಿ: Job Alert: ರೈಲ್ವೆ ಪ್ರೊಟೆಕ್ಷನ್ ಫೋರ್ಸ್‌ನಲ್ಲಿದೆ 4,660 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ವೈರಲ್ ನ್ಯೂಸ್

Viral Video: ಎಸಿ ಕೋಚ್ ಸಿಗದಕ್ಕೆ ಸಿಟ್ಟಿಗೆದ್ದು ರೈಲಿನ ಬಾಗಿಲಿನ ಗಾಜನ್ನೇ ಪುಡಿ ಪುಡಿ ಮಾಡಿದ!

Viral Video ಸೆಕೆಯ ಕಿರಿಕಿರಿಗೆ ಕೋಪ ಕೂಡ ಹೆಚ್ಚಾಗುತ್ತದೆ ಎಂಬುದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ. ಪ್ರಯಾಣಿಕನೊಬ್ಬ ರೈಲಿನಲ್ಲಿ ತಾನು ಕಾಯ್ದಿರಿಸಿದ ಎಸಿ ಕೋಚ್ ಹತ್ತಲು ಸಾಧ್ಯವಾಗದೇ ಕೋಪಗೊಂಡು ರೈಲಿನ ಬಾಗಿಲಿನ ಗಾಜನ್ನೆ ಒಡೆದು ಹಾಕಿದ ಘಟನೆ ಕೈಫಿಯಾತ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ.

VISTARANEWS.COM


on

Viral Video
Koo

ಬೆಂಗಳೂರು: ಬೇಸಿಗೆಯಲ್ಲಿ ಬಿಸಿಲಿನ ತಾಪವನ್ನು ಸಹಿಸಲಾಗದೇ ಜನರು ಕಂಗಾಲಾಗಿದ್ದಾರೆ. ಫ್ಯಾನ್, ಕೂಲರ್ ಗಾಳಿ ಮೈಗೆ ತಟ್ಟದ ಕಾರಣ ಸಾಲವಾದರೂ ಪರ್ವಾಗಿಲ್ಲ ಎಸಿ ಹಾಕೋಣ ಅನ್ನುವ ಮಟ್ಟಿಗೆ ಈ ವರ್ಷದ ಬಿಸಿಲು ಚುರುಕು ಮುಟ್ಟಿಸಿದೆ. ಬಸ್, ರೈಲು, ಹೋಟೆಲ್, ರೆಸ್ಟೋರೆಂಟ್ ಸೇರಿದಂತೆ ಇತರ ಯಾವುದೇ ಸ್ಥಳಕ್ಕೆ ಹೋಗುವಾಗ ಜನರು ಎಸಿ ಇದೆಯಾ ಎಂದು ಮೊದಲು ಪರೀಕ್ಷಿಸಿಕೊಳ್ಳುತ್ತಿದ್ದಾರೆ. ಮೊದಲೇ ಬಿಸಿಲಿನ ತಾಪ ತಾಳಲಾರದೇ ಮಂಡೇ ಬಿಸಿಯಾಗಿರುತ್ತದೆ. ಇದರ ಮಧ್ಯೆ ತಾನು ಆಯ್ಕೆ ಮಾಡಿದ ಎಸಿ ರೂಂಗಳು ಸಿಗದೇ ಹೋದರೆ ವ್ಯಕ್ತಿಯ ಪರಿಸ್ಥಿತಿ ಹೇಗಾಗಿರಬಹುದು ಹೇಳಿ? ಇಷ್ಟೆಲ್ಲಾ ಪೀಠಿಕೆ ಯಾಕೆಂದರೆ ತಾನು ಆಯ್ಕೆ ಮಾಡಿದ ಎಸಿ ಕೋಚ್ ಸಿಗದ ಕಾರಣ ವ್ಯಕ್ತಿಯೊಬ್ಬ ಮಾಡಿದ ಅವಾಂತರದ ವಿಡಿಯೋ ಈಗ ಎಲ್ಲೆಡೆ ವೈರಲ್ (Viral Video) ಆಗಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿ ಮಾಡಿದೆ.

ಸೆಕೆಯ ಹೊಡೆತಕ್ಕೆ ಸಿಕ್ಕ ವ್ಯಕ್ತಿಯೊಬ್ಬ ರೈಲಿನಲ್ಲಿ ತಾನು ಕಾಯ್ದಿರಿಸಿದ ಎಸಿ ಕೋಚ್ ಹತ್ತಲು ಸಾಧ್ಯವಾಗದೇ ಕೋಪಗೊಂಡು ರೈಲಿನ ಬಾಗಿಲಿನ ಗಾಜನ್ನೆ ಒಡೆದು ಹಾಕಿದ ಘಟನೆ ಕೈಫಿಯಾತ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ನಲ್ಲಿ ನಡೆದಿದೆ.

ವ್ಯಕ್ತಿ ಕೈಫಿಯಾತ್ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ನಲ್ಲಿ ಎಸಿ 3 ಕೋಚ್ ನಲ್ಲಿ ಸೀಟ್ ಬುಕ್ ಮಾಡಿದ್ದ. ಆದರೆ ಟಿಕೆಟ್ ಇಲ್ಲದ ಪ್ರಯಾಣಿಕರು ಅವರನ್ನು ಒಳಗೆ ಪ್ರವೇಶಿಸಲು ನಿರಾಕರಿಸಿದರು, ಇದರಿಂದ ಕೋಪಗೊಂಡ ವ್ಯಕ್ತಿ ರೈಲಿನ ಬಾಗಿಲಿನ ಗಾಜನ್ನು ಒಡೆದು ಪುಡಿ ಮಾಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 32 ಸೆಕೆಂಡುಗಳ ಈ ವಿಡಿಯೊ ಕ್ಲಿಪ್ ಗೆ 2 ಮಿಲಿಯನ್ ವೀವ್ಸ್ ಸಿಕ್ಕಿದೆ.

ವಿಡಿಯೊದಲ್ಲಿ ಕಂಡುಬಂದಂತೆ ಕೋಚ್ ಬಾಗಿಲಿನ ಮುಂಭಾಗದಲ್ಲಿ ನೆಲದ ಮೇಲೆ ಕುಳಿತಿರುವ ಜನರಿಂದ ತುಂಬಿತ್ತು. ಆ ವೇಳೆ ಒಬ್ಬ ಪ್ರಯಾಣಿಕ ಬಾಗಿಲನ್ನು ತೆರೆಯಲು ಜನರನ್ನು ಕೇಳಿದಾಗ ಅಲ್ಲಿದ್ದ ವ್ಯಕ್ತಿಯೊಬ್ಬ “ಅಲ್ಲಿ ಜಾಗವಿಲ್ಲ” ಎಂದು ಹೇಳಿದ್ದಾನೆ. ಇದರಿಂದ ಕೋಪಗೊಂಡ ಪ್ರಯಾಣಿಕ ರೈಲಿನ ಬಾಗಿಲಿನ ಗಾಜನ್ನು ಒಡೆದುಹಾಕಿದ್ದಾನೆ.

ಸೋಷಿಯಲ್ ಮೀಡಿಯಾದಲ್ಲಿ ಆಗಾಗ ರೈಲಿನ ಪ್ರಯಾಣದ ಕುರಿತಾದ ವಿಡಿಯೋಗಳು ಹರಿದಾಡುತ್ತಿದ್ದು, ಈ ಹಿಂದೆ ಕಾಶಿ ಎಕ್ಸ್ ಪ್ರೆಸ್ ನಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಭೀಕರ ಸ್ಥಿತಿಯನ್ನು ತೋರಿಸಿದೆ. ಕೋಚ್ ನಲ್ಲಿ ಎಸಿ ಕಾರ್ಯ ನಿರ್ವಹಿಸುತ್ತಿಲ್ಲ ಮತ್ತು ಆಹಾರ ಮತ್ತು ನೀರು ನೀಡಲಾಗಿಲ್ಲ ಎಂದು ಪ್ರಯಾಣಿಕರು ಬೇಸರ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Viral Video: 7 ಮಕ್ಕಳನ್ನು ದೇವರು ಕೊಟ್ಟಿದ್ದಾದರೆ ಬಡತನಕ್ಕೆ ಮೋದಿ ಹೇಗೆ ಕಾರಣ? ಮುಸ್ಲಿಂ ಮಹಿಳೆಗೆ ತರಾಟೆ!

ಹಾಗೇ ಭಾರತೀಯ ರೈಲ್ವೆಗೆ ಸಂಬಂಧಿಸಿದ ಮತ್ತೊಂದು ವಿಡಿಯೊದಲ್ಲಿ ಮಹಿಳೆಯೊಬ್ಬಳು ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದು, ಈ ಬಗ್ಗೆ ತನ್ನ ಸಹ ಪ್ರಯಾಣಿಕರೊಂದಿಗೆ ಜಗಳವಾಡುತ್ತಿರುವ ಘಟನೆ ನಡೆದಿದೆ.

Continue Reading
Advertisement
CJI Chandrachud
ದೇಶ11 mins ago

CJI Chandrachud: ಹೊಸ ಕಾನೂನುಗಳ ಜಾರಿ ಐತಿಹಾಸಿಕ; ಸಿಜೆಐ ಡಿ.ವೈ.ಚಂದ್ರಚೂಡ್‌ ಬಣ್ಣನೆ

Forest bathing activity begins at Cubbon Park
ಬೆಂಗಳೂರು13 mins ago

Forest Bathing: ಬೆಂಗಳೂರಲ್ಲೂ ಶುರು ಫಾರೆಸ್ಟ್‌ ಬಾಥಿಂಗ್‌; ಕಬ್ಬನ್ ಪಾರ್ಕ್‌ನಲ್ಲಿ ಮರ ಅಪ್ಪಲು ಕೊಡಬೇಕು 1500 ರೂ.!

Modi in Karnataka HD Deve Gowda attack on Congess
Lok Sabha Election 202413 mins ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Lok Sabha Election 2024
ಕರ್ನಾಟಕ16 mins ago

Lok Sabha Election 2024: ದಾರಿ ತಪ್ಪಿದ್ದಾರೆ ಎಂದ ಕುಮಾರಸ್ವಾಮಿಗೆ ಹೆಣ್ಣು ಮಕ್ಕಳು ತಕ್ಕ ಉತ್ತರ ಕೊಡಬೇಕು: ಡಿಕೆಶಿ

Job Alert
ಉದ್ಯೋಗ18 mins ago

Job Alert: ಉದ್ಯೋಗ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌; ಬಿಬಿಎಂಪಿಯಿಂದ ಬರೋಬ್ಬರಿ 11,307 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Viral Video
ವೈರಲ್ ನ್ಯೂಸ್23 mins ago

Viral Video: ಎಸಿ ಕೋಚ್ ಸಿಗದಕ್ಕೆ ಸಿಟ್ಟಿಗೆದ್ದು ರೈಲಿನ ಬಾಗಿಲಿನ ಗಾಜನ್ನೇ ಪುಡಿ ಪುಡಿ ಮಾಡಿದ!

Vinay Gowda Lunch With Kichcha Sudeep
ಸಿನಿಮಾ26 mins ago

Vinay Gowda: ಕಿಚ್ಚ ಸುದೀಪ್‌ ಜತೆ ವಿನಯ್‌ ಗೌಡ ಭರ್ಜರಿ ಭೋಜನ!

Viral Video
ವೈರಲ್ ನ್ಯೂಸ್29 mins ago

Viral Video: ಅಂಗಡಿಯಲ್ಲಿ ಮೊಟ್ಟೆ ಕದ್ದು ಸಿಕ್ಕಿಬಿದ್ದ ಕಳ್ಳಿ, ವೈರಲ್ ಆದ ವಿಡಿಯೊ

Case of bringing gun to CM Siddaramaiah Four policemen suspended
Lok Sabha Election 202436 mins ago

‌CM Siddaramaiah: ಸಿಎಂ ಸಿದ್ದರಾಮಯ್ಯ ಬಳಿ ಗನ್‌ ತಂದಿದ್ದ ಕೇಸ್;‌ ನಾಲ್ವರು ಪೊಲೀಸರು ಸಸ್ಪೆಂಡ್

Elon Musk
ವಿದೇಶ43 mins ago

Elon Musk: ಮೋದಿ ಭೇಟಿಗಾಗಿ ಈ ತಿಂಗಳು ಭಾರತಕ್ಕೆ ಬರಲ್ಲ ಎಲಾನ್‌ ಮಸ್ಕ್;‌ ಕೊಟ್ಟ ಕಾರಣ ಇದು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Modi in Karnataka HD Deve Gowda attack on Congess
Lok Sabha Election 202413 mins ago

Modi in Karnataka: ಲೂಟಿ ಮಾಡಿ ಖಾಲಿ ಚೆಂಬು ಕೊಟ್ಟಿದ್ದು ಕಾಂಗ್ರೆಸ್‌; ಆ ಚೆಂಬನ್ನು ಅಕ್ಷಯ ಪಾತ್ರ ಮಾಡಿದ್ದು ಮೋದಿ: ಎಚ್‌.ಡಿ. ದೇವೇಗೌಡ ಗುಡುಗು

Modi in Karnataka Here live video of Modi rally in Chikkaballapur
Lok Sabha Election 20242 hours ago

Modi in Karnataka: ಚಿಕ್ಕಬಳ್ಳಾಪುರದಲ್ಲಿ ಮೋದಿ ಮೇನಿಯಾ; ಇಲ್ಲಿದೆ LIVE ವಿಡಿಯೊ

Rain News
ಮಳೆ4 hours ago

Rain News : ಸಿಡಿಲಿಗೆ ವ್ಯಕ್ತಿ ಸೇರಿ ಜಾನುವಾರುಗಳು ಮೃತ್ಯು; ವ್ಯಾಪಕ ಮಳೆಗೆ ಜನರು ಕಂಗಾಲು

Neha Murder Case
ಹುಬ್ಬಳ್ಳಿ5 hours ago

Neha Murder Case : ನನ್ನ ಮಗನಿಗೆ ಶಿಕ್ಷೆ ಆಗಲಿ; ಇಬ್ಬರೂ ಲವ್‌ ಮಾಡ್ತಿದ್ದರು ಅನ್ನೋದು ಸತ್ಯ ಎಂದ ಫಯಾಜ್‌ ತಾಯಿ

Dina Bhavishya
ಭವಿಷ್ಯ11 hours ago

Dina Bhavishya : ಈ ರಾಶಿಯ ವಿವಾಹ ಆಕಾಂಕ್ಷಿಗಳಿಗೆ ಕೂಡಿಬರಲಿದೆ ಶುಭ ಘಳಿಗೆ

Neha Murder Case
ಹುಬ್ಬಳ್ಳಿ1 day ago

Neha Murder Case : ನೇಹಾ ಕೊಂದವನ ಎನ್‌ಕೌಂಟರ್ ಮಾಡಿ ಬಿಸಾಕಿ; ಮುದ್ದು ಮಗಳಿಗೆ ಪೋಷಕರ ಕಣ್ಣೀರ ವಿದಾಯ

Dina bhavishya
ಭವಿಷ್ಯ1 day ago

Dina Bhavishya: ರಹಸ್ಯ ಕಾರ್ಯಗಳಿಂದ ಈ ರಾಶಿಯವರಿಗೆ ಇಂದು ಯಶಸ್ಸು ಗ್ಯಾರಂಟಿ

Dina Bhavishya
ಭವಿಷ್ಯ3 days ago

Dina Bhavishya : ಈ ಎರಡು ರಾಶಿಯವರು ಇಂದು ಹೂಡಿಕೆ ವ್ಯವಹಾರಕ್ಕೆ ತಲೆ ಹಾಕಲೇಬೇಡಿ

dina bhavishya
ಭವಿಷ್ಯ4 days ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 20245 days ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

ಟ್ರೆಂಡಿಂಗ್‌