Lok Sabha Election 2024: ಕರ್ನಾಟಕದ ಗೃಹಲಕ್ಷ್ಮಿ, ಯುವನಿಧಿ ಲೋಕಸಭೆ ಚುನಾವಣೆಗೂ ವಿಸ್ತರಿಸಲಿರುವ ಕಾಂಗ್ರೆಸ್‌ - Vistara News

ಪ್ರಮುಖ ಸುದ್ದಿ

Lok Sabha Election 2024: ಕರ್ನಾಟಕದ ಗೃಹಲಕ್ಷ್ಮಿ, ಯುವನಿಧಿ ಲೋಕಸಭೆ ಚುನಾವಣೆಗೂ ವಿಸ್ತರಿಸಲಿರುವ ಕಾಂಗ್ರೆಸ್‌

Lok Sabha Election 2024: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ನೀಡಿದ ಉಚಿತ ಯೋಜನೆಗಳ ಭರವಸೆಯನ್ನು ಲೋಕಸಭೆ ಚುನಾವಣೆಗೂ ಕಾಂಗ್ರೆಸ್‌ ವಿಸ್ತರಿಸಲಿದೆ.

VISTARANEWS.COM


on

Congress Guarantee
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸದಿಲ್ಲಿ: ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election) ನೀಡಿದ ಗೃಹಲಕ್ಷ್ಮಿ (Gruha Lakshmi scheme), ಯುವನಿಧಿ (Yuva Nidhi Scheme) ಮತ್ತಿತರ ಯೋಜನೆಗಳ ಆಮಿಷವನ್ನೇ ಲೋಕಸಭೆ ಚುನಾವಣೆಯ (Lok Sabha Election 2024) ಪ್ರಣಾಳಿಕೆಯಲ್ಲೂ (Manifesto) ಕಾಂಗ್ರೆಸ್ (Congress) ನೀಡಲಿದೆ ಎಂದು ತಿಳಿದುಬಂದಿದೆ.

ಬಡ ಮಹಿಳೆಯರಿಗೆ ಕರ್ನಾಟಕದ ಗೃಹ ಲಕ್ಷ್ಮಿ ಯೋಜನೆಯಂಥ ಕಾರ್ಯಕ್ರಮ, ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಫಲಾನುಭವಿಗಳಿಗೆ ನಿರುದ್ಯೋಗ ಭತ್ಯೆ‌ (ಯುವನಿಧಿ), ಭಾರಿ ಸಬ್ಸಿಡಿಯೊಂದಿಗೆ ಅಡುಗೆ ಅನಿಲ ಸಿಲಿಂಡರ್‌ನಂಥ ಉಚಿತಗಳು, ಸಶಸ್ತ್ರ ಪಡೆಗಳ ನೇಮಕಾತಿಗೆ ಬಿಜೆಪಿ ತಂದಿರುವ ಅಗ್ನಿಪಥ್ ಯೋಜನೆಯನ್ನು ತೆಗೆದುಹಾಕುವುದು- ಇವು ಕಾಂಗ್ರೆಸ್‌ನ ಪ್ರಣಾಳಿಕೆಯ ಆದ್ಯತೆಯ ಪಟ್ಟಿಯಲ್ಲಿರುವ ಕೆಲವು ಸಂಗತಿಗಳಾಗಿವೆ.

ಪಕ್ಷದ ಪ್ರಣಾಳಿಕೆಯು ಯುವಕರು, ಮಹಿಳೆಯರು, ರೈತರು ಮತ್ತು ಕಾರ್ಮಿಕರಂತಹ ವಿಶಾಲ ವರ್ಗಗಳನ್ನು ಒಳಗೊಳ್ಳಲಿದೆ. “ಎಲ್ಲರಿಂದ ಬಂದ ಸಲಹೆಗಳನ್ನು ಒಟ್ಟುಗೂಡಿಸಿ, ಯುವಜನರ ನೇಮಕಾತಿ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸಲು ಕಾಂಗ್ರೆಸ್ ವಿಸ್ತಾರ ಯೋಜನೆಯನ್ನು ಸಿದ್ಧಪಡಿಸುತ್ತಿದೆ. ಶೀಘ್ರದಲ್ಲೇ ಅದನ್ನು ನಿಮ್ಮ ಮುಂದೆ ಪ್ರಸ್ತುತಪಡಿಸುತ್ತೇವೆ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಹೆಚ್ಚಿದ ನಿರುದ್ಯೋಗ ಬಗ್ಗೆ ಕಾಂಗ್ರೆಸ್‌ ಮಾತಾಡುತ್ತಿದೆ. ಆರ್ಥಿಕ ಥಿಂಕ್-ಟ್ಯಾಂಕ್ CMIEಯ ಇತ್ತೀಚಿನ ಅಂಕಿಅಂಶಗಳು ಕಳೆದ ವರ್ಷ ಡಿಸೆಂಬರ್‌ನಲ್ಲಿ 8.7%ರಷ್ಟಿದ್ದ ನಿರುದ್ಯೋಗ ದರವು ಜನವರಿ 2024ರಲ್ಲಿ 6.8%ಕ್ಕೆ ತೀವ್ರವಾಗಿ ಕಡಿಮೆಯಾಗಿದೆ ಎಂದು ತೋರಿಸಿದರೂ, ಕಾಂಗ್ರೆಸ್ ಈ ಅಂಕಿಅಂಶ ಸ್ವೀಕಾರಾರ್ಹವಲ್ಲ ಎಂದಿದೆ. ಮತ್ತು ಹೆಚ್ಚಿನ ನಿರುದ್ಯೋಗ ಭತ್ಯೆಯ ಆಮಿಷ ನೀಡುವ ಮೂಲಕ ಯುವ ಮತದಾರರನ್ನು ಸೆಳೆಯಲು ಯೋಚಿಸಿದೆ.

16 ತಿಂಗಳುಗಳಲ್ಲಿ ನಿರುದ್ಯೋಗದ ಅಂಕಿಅಂಶಗಳು ಅತ್ಯಂತ ಕಡಿಮೆಯಿದ್ದರೂ ಸಹ, ಭಾರತದ ನಿರುದ್ಯೋಗ ಪ್ರಮಾಣ ನೆರೆಹೊರೆಯ ದೇಶಗಳಿಗಿಂತ ಹೆಚ್ಚಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. “ಕಳೆದ 40 ವರ್ಷಗಳಲ್ಲಿ ಇಂದು ದೇಶದಲ್ಲಿ ಗರಿಷ್ಠ ನಿರುದ್ಯೋಗವಿದೆ. ಪಾಕಿಸ್ತಾನಕ್ಕೆ ಹೋಲಿಸಿದರೆ ಭಾರತದಲ್ಲಿ ದುಪ್ಪಟ್ಟು ನಿರುದ್ಯೋಗವಿದೆ. ನಮ್ಮಲ್ಲಿ ಬಾಂಗ್ಲಾದೇಶ ಮತ್ತು ಭೂತಾನ್‌ಗಿಂತ ಹೆಚ್ಚು ನಿರುದ್ಯೋಗಿ ಯುವಕರಿದ್ದಾರೆ. ನರೇಂದ್ರ ಮೋದಿ ಅವರು ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿಯನ್ನು ಜಾರಿಗೊಳಿಸುವ ಮೂಲಕ ಸಣ್ಣ ಉದ್ಯಮಗಳನ್ನು ಮುಗಿಸಿದ್ದಾರೆ” ಎಂದು ರಾಹುಲ್‌ ಭಾನುವಾರ ಗ್ವಾಲಿಯರ್‌ನಲ್ಲಿ ಹೇಳಿದರು. ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಪ್ರಸ್ತುತ ಮಧ್ಯಪ್ರದೇಶದಲ್ಲಿದೆ.

ಅದೇ ರೀತಿ, ಮನೆವೆಚ್ಚದ ಹೊರೆಯನ್ನು ಕಡಿಮೆ ಮಾಡುವ ಪ್ರಯತ್ನ ನಡೆಸಲಿರುವ ಕಾಂಗ್ರೆಸ್, ಭಾರೀ ಸಬ್ಸಿಡಿ ಮತ್ತು ₹450-500ಗೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ನೀಡುವ ಭರವಸೆ ನೀಡಬಹುದು. ಕಳೆದ ವರ್ಷ ನವೆಂಬರ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಯಲ್ಲಿ ಪಕ್ಷ ಇದೇ ರೀತಿಯ ಕೊಡುಗೆ ನೀಡಿತ್ತು. ಛತ್ತೀಸ್‌ಗಢದಲ್ಲಿ ₹494ಕ್ಕೆ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಭರವಸೆ ನೀಡಿದರೆ, ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ತಲಾ ₹500ಕ್ಕೆ ಅಡುಗೆ ಅನಿಲವನ್ನು ನೀಡುತ್ತಿದೆ. ರಾಜ್ಯ ಚುನಾವಣೆಗೆ ಮುನ್ನ ಕೇಂದ್ರ ಅಡುಗೆ ಅನಿಲದ ಬೆಲೆಯನ್ನು ₹200 ಕಡಿತಗೊಳಿಸಿತ್ತು. ಇದರಲ್ಲಿ ಕಾಂಗ್ರೆಸ್ ತೆಲಂಗಾಣದಲ್ಲಿ ಮಾತ್ರ ಗೆದ್ದಿದೆ, ಮೂರು ಪ್ರಮುಖ ಹಿಂದಿ ಹೃದಯ ರಾಜ್ಯಗಳಲ್ಲಿ ಸೋತಿದೆ.

ಸಶಸ್ತ್ರ ಪಡೆಗಳಲ್ಲಿ ನಾಲ್ಕು ವರ್ಷಗಳ ಉದ್ಯೋಗವನ್ನು ನೀಡುವ ಅಗ್ನಿವೀರ್ ಯೋಜನೆಯನ್ನು ರದ್ದುಗೊಳಿಸಲು ಸಹ ಕಾಂಗ್ರೆಸ್ ಪ್ರಸ್ತಾಪಿಸಬಹುದು. ಶಾಶ್ವತ ನೇಮಕಾತಿಯ ಹಳೆಯ ವಿಧಾನವನ್ನು ಮರುಸ್ಥಾಪಿಸಬಹುದು. ಈ ವಾರ ಪಾಟ್ನಾದಲ್ಲಿ ನಡೆದ ʼಜನವಿಶ್ವಾಸ್ ರ್ಯಾಲಿʼಯಲ್ಲಿ, ಈ ಯೋಜನೆಯಡಿಯಲ್ಲಿ ಮಾಜಿ ಅಗ್ನಿವೀರ ಸೈನಿಕರಿಗೆ ಯಾವುದೇ ಪಿಂಚಣಿ ಸಿಗುವುದಿಲ್ಲ ಎಂದು ಗಾಂಧಿ ಸೂಚಿಸಿದರು. “ಸಶಸ್ತ್ರ ಪಡೆಗಳಲ್ಲಿ ಅಧಿಕಾರಿಯ ಶ್ರೇಣಿಗಿಂತ ಕೆಳಗಿನ ಕಾಯಂ ಉದ್ಯೋಗಗಳು ಸಿಗದಿರುವ ಬಗ್ಗೆ ಜನರಲ್ಲಿ ಹತಾಶೆ ಇದೆ” ಎಂದು ಹೇಳಿದರು.

ಕರ್ನಾಟಕದಲ್ಲಿ ಆರಂಭಿಸಿರುವ ಗೃಹಲಕ್ಷ್ಮಿ ಯೋಜನೆಯನ್ನು ಸಹ ಪ್ಯಾನ್-ಇಂಡಿಯಾ ಮಾಡಲು ಕಾಂಗ್ರೆಸ್‌ ಪರಿಗಣಿಸುತ್ತಿದೆ. ಇದರಡಿಯಲ್ಲಿ ಕರ್ನಾಟಕ ಸರ್ಕಾರ ಬಿಪಿಎಲ್ ಕುಟುಂಬದ ಮಹಿಳೆಗೆ ಮಾಸಿಕ ₹2,000 ಸಹಾಯವನ್ನು ನೀಡುತ್ತದೆ. ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ಅರಿವು ಹೊಂದಿರುವ ಇಬ್ಬರು ನಾಯಕರ ಪ್ರಕಾರ, ಪಕ್ಷವು ಈ ಸಲ ಶಿಕ್ಷಣ ಸಾಲದ ಮೇಲಿನ ಬಡ್ಡಿದರದಲ್ಲಿ ರಿಯಾಯಿತಿ ನೀಡಬಹುದು, ಮಹಿಳೆಯರಿಗೆ ಬಸ್ ಪ್ರಯಾಣವನ್ನು ಮುಕ್ತಗೊಳಿಸಬಹುದು, ಜಿಎಸ್‌ಟಿ ದರಗಳನ್ನು ಮರುರೂಪಿಸಬಹುದು ಮತ್ತು ಕೆಲವು ಕೃಷಿ ಉಪಕರಣಗಳ ಮೇಲಿನ ಜಿಎಸ್‌ಟಿಯನ್ನು ಕಡಿತಗೊಳಿಸಬಹುದು.

ಪ್ರಣಾಳಿಕೆ ಸಮಿತಿಯ ಸಭೆಯ ನಂತರ ಅದರ ಅಧ್ಯಕ್ಷ ಪಿ ಚಿದಂಬರಂ, “ನಾವು ಕರಡು ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದೇವೆ. ಅದು CWC ಮುಂದೆ ಹೋಗಲಿದ್ದು, ಅವರು ಪ್ರಣಾಳಿಕೆಯನ್ನು ಅಂತಿಮಗೊಳಿಸುತ್ತಾರೆ. ನಾಳೆ ನಾವು ಈ ಕರಡನ್ನು ಕಾಂಗ್ರೆಸ್ ಅಧ್ಯಕ್ಷರಿಗೆ ಹಸ್ತಾಂತರಿಸುತ್ತೇವೆ” ಎಂದಿದ್ದಾರೆ.

ಇದನ್ನೂ ಓದಿ: Lok Sabha Election: ಕಾಂಗ್ರೆಸ್‌ಗೆ ಈ ಸಲ ಸಿಗೋದು ಬರೀ 37 ಸೀಟು; ಏನಿದು ಸಮೀಕ್ಷೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kavya Maran : ಎಸ್​ಆರ್​ಎಚ್​​​ ತಂಡದ ಫೀಲ್ಡಿಂಗ್ ನೋಡಿ ಮಗುವಿನಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾ ಮಾರನ್​

Kavya Maran : 19ನೇ ಓವರ್​ನ ನಾಲ್ಕನೇ ಎಸೆತದಲ್ಲಿ ಇದು ನಡೆದಿದೆ. ಗಾಯಕ್ವಾಡ್ ಕಟ್ ಶಾಟ್ ಆಡಿದರು, ಅಲ್ಲಿ ಪ್ಯಾಟ್ ಕಮಿನ್ಸ್ ಚೆಂಡನ್ನು ಫೀಲ್ಡ್ ಮಾಡಿ ಬೌಲರ್​ ಇರುವ ತುದಿಗೆ ಎಸೆದರು. ಆ ಥ್ರೋ ಸರಿಯಾಗಿ ವಿಕೆಟ್​ಗೆ ಬಡಿಯಲಿಲ್ಲ ಮತ್ತು ಗಾಯಕ್ವಾಡ್ ತನ್ನ ಸಿಂಗಲ್ ಅನ್ನು ಪೂರ್ಣಗೊಳಿಸಿದರು ಹಾಗೂ ಅವರ ವಿಕೆಟ್​ ಉಳಿಯಿತು.

VISTARANEWS.COM


on

Kavya Maran
Koo

ಹೈದರಾಬಾದ್​​: ಸನ್ರೈಸರ್ಸ್ ಹೈದರಾಬಾದ್ ತಂಡದ ಮಾಲೀಕರಾದ ಕಾವ್ಯಾ ಮಾರನ್ (Kavya Maran) ಅವರು ಐಪಿಎಲ್​ 2024 (IPL 2024) ಪಂದ್ಯದ ವೇಳೆ ತಮ್ಮ ತಂಡದ ಆಟಗಾರರು ತಪ್ಪು ಮಾಡಿದಾಗ ಮಾಡುವ ವಿಭಿನ್ನ ಹಾವಭಾವಗಳು ಹೆಚ್ಚು ವೈರಲ್​ ಆಗುತ್ತವೆ. ಅವುಗಳಿಂದ ಭಿನ್ನವಾದ ಮೀಮ್ಸ್​ಗಳನ್ನು ರಚಿಸಿ ಸೋಶಿಯಲ್​ ಮೀಡಿಯಾಗಳಲ್ಲಿ ಹರಿಬಿಡುತ್ತಾರೆ. ಅಂತೆಯೇ 31 ವರ್ಷದ ಉದ್ಯಮಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ 2024 ರ 46 ನೇ ಪಂದ್ಯದಲ್ಲಿ ಮಗು ಅಳುವಂತೆ ಮುಖ ಮಾಡಿ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ. ಋತುರಾಜ್ ಗಾಯಕ್ವಾಡ್ ಅವರ ರನ್ ಔಟ್ ಚಾನ್ಸ್​ ಎಸ್ಆರ್​ಎಚ್​​​ ಕಳೆದುಕೊಂಡಾಗ ಕಾವ್ಯಾ ಮತ್ತೊಮ್ಮೆ ಗಮನ ಸೆಳೆದರು.

19ನೇ ಓವರ್​ನ ನಾಲ್ಕನೇ ಎಸೆತದಲ್ಲಿ ಇದು ನಡೆದಿದೆ. ಗಾಯಕ್ವಾಡ್ ಕಟ್ ಶಾಟ್ ಆಡಿದರು, ಅಲ್ಲಿ ಪ್ಯಾಟ್ ಕಮಿನ್ಸ್ ಚೆಂಡನ್ನು ಫೀಲ್ಡ್ ಮಾಡಿ ಬೌಲರ್​ ಇರುವ ತುದಿಗೆ ಎಸೆದರು. ಆ ಥ್ರೋ ಸರಿಯಾಗಿ ವಿಕೆಟ್​ಗೆ ಬಡಿಯಲಿಲ್ಲ ಮತ್ತು ಗಾಯಕ್ವಾಡ್ ತನ್ನ ಸಿಂಗಲ್ ಅನ್ನು ಪೂರ್ಣಗೊಳಿಸಿದರು ಹಾಗೂ ಅವರ ವಿಕೆಟ್​ ಉಳಿಯಿತು.

ನಂತರ ಚೆಂಡು ಲೆಗ್ ಸೈಡ್ ಕಡೆಗೆ ಹೋಯಿತು ಮತ್ತು ಸ್ಟ್ಯಾಂಡ್ ನಿಂದ ಪಂದ್ಯ ವೀಕ್ಷಿಸುತ್ತಿದ್ದ ಕಾವ್ಯಾ ಮಾರನ್ ಈ ವೇಳೆ ಅಳುವಂತೆ ಮುಖ ಮಾಡಿದರು. ಈ ರನ್​ ಔಟ್​ ಮಿಸ್​ನಿಂದಾಗಿ ಚೆನ್ನೈ ಇನ್ನೊಂದು ರನ್​ ಹೆಚ್ಚುವರಿಯಾಗಿ ಓಡಿತು.

ಗಾಯಕ್ವಾಡ್ ಅಂತಿಮವಾಗಿ ಅಂತಿಮ ಓವರ್​​ನಲ್ಲಿ ಔಟಾಗಿ ಕೇವಲ ಎರಡು ರನ್​ಗಳ ಕೊರತೆಯಿಂದ ಶತಕ ಕಳೆದುಕೊಂಡರು. ಅವರ ರನ್​ಗಳಿಂದ ಸಿಎಸ್ಕೆ 212 ರನ್ಗಳ ದೊಡ್ಡ ಸ್ಕೋರ್ ಬಾರಿಸಿತು. ಗಾಯಕ್ವಾಡ್ ಅವರೊಂದಿಗೆ ಡ್ಯಾರಿಲ್ ಮಿಚೆಲ್ ಮತ್ತು ಶಿವಂ ದುಬೆ ಕೂಡ ಕ್ರಮವಾಗಿ 52 ಮತ್ತು 39 ರನ್ ಗಳಿಸಿದರು. ಆರ್​ಸಿಬಿ ವಿರುದ್ಧದ ಈ ಹಿಂದಿನ ಪಂದ್ಯದಲ್ಲಿ ಸೋತ ಎಸ್​ಎಚ್​​ಆರ್​ ಮತ್ತೊಂದು ಪರಾಜಯಕ್ಕೆ ಒಳಗಾಯಿತು.

Continue Reading

ಪ್ರಮುಖ ಸುದ್ದಿ

Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

Viral Video: ಹಿಂದೂಗಳ ವಿರುದ್ಧ ಕಾಂಗ್ರೆಸ್‌ ಪಕ್ಷ ಪೂರ್ವಗ್ರಹ ಪೀಡಿತ ಮನೋಭಾವ ಹೊಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಆರೋಪ ಮಾಡಿರುವ ಬೆನ್ನಲ್ಲೇ, 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹಿಂದೂ ಮತಗಳ ಅಗತ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ತುಮ್ಮಲ ನಾಗೇಶ್ವರರಾವ್ ಹೇಳಿಕೆ ನೀಡಿರುವ ವಿಡಿಯೋ ಹೊರಬಿದ್ದಿದೆ.

VISTARANEWS.COM


on

viral video tn rao
Koo

ಹೈದರಾಬಾದ್:‌ ತಮ್ಮ ಪಕ್ಷದ ಚುನಾವಣಾ ಗೆಲುವಿಗೆ ಹಿಂದೂಗಳ ಮತಗಳು ಅಗತ್ಯವಿಲ್ಲ ಎಂದು ತೆಲಂಗಾಣ ಕಾಂಗ್ರೆಸ್ (Telangana Congress) ನಾಯಕ ಟಿಎನ್ ರಾವ್ ಭಾಷಣದಲ್ಲಿ ಹೇಳಿದ್ದಾರೆ. ಅವರ ಈ ಮಾತಿನ ವಿಡಿಯೋ ವೈರಲ್ (viral video) ಆಗಿದೆ.

ಹಿಂದೂಗಳ ವಿರುದ್ಧ ಕಾಂಗ್ರೆಸ್‌ ಪಕ್ಷ ಪೂರ್ವಗ್ರಹ ಪೀಡಿತ ಮನೋಭಾವ ಹೊಂದಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಆರೋಪ ಮಾಡಿರುವ ಬೆನ್ನಲ್ಲೇ, 2024ರ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹಿಂದೂ ಮತಗಳ ಅಗತ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ತುಮ್ಮಲ ನಾಗೇಶ್ವರರಾವ್ ಹೇಳಿಕೆ ನೀಡಿರುವ ವಿಡಿಯೋ ಹೊರಬಿದ್ದಿದೆ.

ತಮ್ಮ ಮತ ಬ್ಯಾಂಕ್‌ಗಾಗಿ ಕಾಂಗ್ರೆಸ್ ಪಕ್ಷವು ಭಾರತದ ಹಿಂದೂಗಳ ವಿರುದ್ಧ ಪಕ್ಷಪಾತ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು. ಹಿಂದೂಗಳ ಆಸ್ತಿಯನ್ನು ಮುಸ್ಲಿಮರಿಗೆ ಹಂಚಿಕೆ ಮಾಡುವುದು ಕಾಂಗ್ರೆಸ್‌ನ ಆದ್ಯತೆಯಾಗಿದೆ ಎಂದ ಆರೋಪಿಸಿದ್ದರು. ಇದಾಗಿ ಕೆಲವೇ ದಿನಗಳಲ್ಲಿ, ತೆಲಂಗಾಣ ಕಾಂಗ್ರೆಸ್ ನಾಯಕ ತುಮ್ಮಲ ನಾಗೇಶ್ವರ ರಾವ್ ಅವರು ಹೀಗೆಂದಿದ್ದಾರೆ. ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ರಾವ್, 2024ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಹಿಂದೂ ಮತಗಳ ಅಗತ್ಯವಿಲ್ಲ ಎಂದಿದ್ದಾರೆ.

ಕಾಂಗ್ರೆಸ್ ಪ್ರಣಾಳಿಕೆಯನ್ನು ಮುಸ್ಲಿಂ ಲೀಗ್‌ನ ಸಿದ್ಧಾಂತಕ್ಕೆ ಪ್ರಧಾನಿ ಹೋಲಿಸಿ ಟೀಕಿಸಿದ್ದರು. ದೇಶದ ಸಂಪನ್ಮೂಲಗಳು ಮೊದಲು ಬಡವರಿಗೆ ಸಲ್ಲಬೇಕು ಎಂಬ ತತ್ವವನ್ನು ಒತ್ತಿ ಹೇಳಿದರು. ರಾಜಕೀಯ ಲಾಭಕ್ಕಾಗಿ ನಿರ್ದಿಷ್ಟವಾಗಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ಕೆಲವು ಧಾರ್ಮಿಕ ಗುಂಪುಗಳಿಗೆ ಕಾಂಗ್ರೆಸ್ ಒಲವು ತೋರುತ್ತಿದೆ ಎಂದು ಮೋದಿ ಆರೋಪಿಸಿದ್ದರು. ಕಾಂಗ್ರೆಸ್ ಪ್ರಣಾಳಿಕೆಯು ಮುಸ್ಲಿಂ ಲೀಗ್‌ನ ಧೋರಣೆಯ ಪ್ರಭಾವವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ್ದರು.

ಇದನ್ನೂ ಓದಿ: PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

Continue Reading

Lok Sabha Election 2024

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

PM Narendra Modi Live: ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಹೊಸಪೇಟೆಯಲ್ಲಿಯೇ ನಿನ್ನೆ ವಾಸ್ತವ್ಯ ಹೂಡಿದ್ದರು. ಪ್ರಚಾರದುದ್ದಕ್ಕೂ ಕೇಂದ್ರ ಸರ್ಕಾರದ ಸಾಧನೆ ಜತೆಗೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇಂದು ಯಾವ ವಿಷಯವನ್ನು ಪ್ರಸ್ತಾಪ ಮಾಡಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

VISTARANEWS.COM


on

PM Narendra modi in Bagalakote for Election Campaign and here is Live telecast
Koo

ಬಾಗಲಕೋಟೆ: ಲೋಕಸಭೆ ಚುನಾವಣೆ (Lok Sabha Election) ಹಿನ್ನೆಲೆಯಲ್ಲಿ ಭಾನುವಾರ (ಏಪ್ರಿಲ್‌ 28) ಕರ್ನಾಟಕದ (Karnataka) ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸೋಮವಾರವೂ (ಏಪ್ರಿಲ್‌ 29) ಬಾಗಲಕೋಟೆಯಲ್ಲಿ ಪ್ರಚಾರ ನಡೆಸಲಿದ್ದಾರೆ. ಮೋದಿ ಸಮಾವೇಶದ ಹಿನ್ನೆಲೆಯಲ್ಲಿ ಬಾಗಲಕೋಟೆಯ ನವನಗರದಲ್ಲಿ 100 ಎಕರೆ ಪ್ರದೇಶದಲ್ಲಿ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಮೋದಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಸೋಮವಾರ ಮಧ್ಯಾಹ್ನ 12 ಗಂಟೆಗೆ ನರೇಂದ್ರ ಮೋದಿ ಅವರು ಬಾಗಲಕೋಟೆಗೆ ಆಗಮಿಸಲಿದ್ದಾರೆ. ಮೋದಿ ಭಾಷಣಕ್ಕಾಗಿ 90/100 ಅಡಿ ಮುಖ್ಯ ವೇದಿಕೆ ಪೆಂಡಾಲು ಹಾಕಲಾಗಿದೆ. 60/40 ಅಡಿಯ ಮುಖ್ಯ ವೇದಿಕೆಯಲ್ಲಿ, 32 ಜನರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ. ಬಿಸಿಲು ಹೆಚ್ಚಾದ ಕಾರಣ ವೇದಿಕೆ ಹವಾನಿಯಂತ್ರಿತವಾಗಿ ಇರಲಿದೆ. ಇನ್ನು ಸಾರ್ವಜನಿಕರಿಗೆ 400 ಅಡಿ ಅಗಲ, 600 ಅಡಿ ಉದ್ದದ ಬೃಹತ್ ಪೆಂಡಾಲ್ ವೇದಿಕೆ ನಿರ್ಮಿಸಲಾಗಿದೆ. ಜರ್ಮನ್ ಮಾದರಿಯಲ್ಲಿ ವೇದಿಕೆ ನಿರ್ಮಿಸಲಾಗಿದೆ.

ಬಾಗಲಕೋಟೆಯಲ್ಲಿ ಮೋದಿ ಸಮಾವೇಶದ ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

ಬಾಗಲಕೋಟೆ ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್‌ ಹಾಗೂ ವಿಜಯಪುರ ಅಭ್ಯರ್ಥಿ ರಮೇಶ್‌ ಜಿಗಜಿಣಗಿ ಪರವಾಗಿ ಪ್ರಧಾನಿ ಮತಯಾಚನೆ ಮಾಡಲಿದ್ದಾರೆ. ಒಟ್ಟು 70 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗೆ 1,100ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಮೂವರು ಎಸ್‌ಪಿ, ನಾಲ್ವರು ಎಎಸ್‌ಪಿ, 12 ಡಿಎಸ್‌ಪಿ, 32 ಸಿಪಿಐ, 88 ಪಿಎಸ್‌ಐ, 1,049 ಪೊಲೀಸ್‌ ಪೇದೆಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ವೇದಿಕೆ ಬಲಭಾಗ ಮೂರು ಹೆಲಿಪ್ಯಾಡ್‌ಗಳನ್ನು ನಿರ್ಮಿಸಲಾಗಿದೆ.

ಇದನ್ನೂ ಓದಿ: PM Narendra Modi: ಪುಕ್ಕಲ ನಾಯಕ ದೇಶ ಆಳಬಲ್ಲನೇ? ರಾಹುಲ್‌ ಗಾಂಧಿಗೆ ಮೋದಿ ಟಾಂಗ್!

ಪ್ರಧಾನಿ ನರೇಂದ್ರ ಮೋದಿ ಅವರ ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎರಡೂ ಕ್ಷೇತ್ರಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಸೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಭಾನುವಾರ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಅಬ್ಬರದ ಪ್ರಚಾರ ಮಾಡಿದ ನರೇಂದ್ರ ಮೋದಿ ಅವರು ಹೊಸಪೇಟೆಯಲ್ಲಿಯೇ ನಿನ್ನೆ ವಾಸ್ತವ್ಯ ಹೂಡಿದ್ದರು. ಪ್ರಚಾರದುದ್ದಕ್ಕೂ ಕೇಂದ್ರ ಸರ್ಕಾರದ ಸಾಧನೆ ಜತೆಗೆ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು.

Continue Reading

ಪ್ರಮುಖ ಸುದ್ದಿ

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

Fact Check: ಅಧಿಕಾರಿಗಳ ಪ್ರಕಾರ, ಗೃಹ ಸಚಿವಾಲಯ (ಎಂಎಚ್ಎ) ಈ ಸಂಬಂಧ ದೂರು ದಾಖಲಿಸಿದೆ. ಅದರ ಆಧಾರದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ.

VISTARANEWS.COM


on

Amith Shah
Koo

ನವ ದೆಹಲಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ (Fact Check) ನೀಡಲಾಗುತ್ತಿರುವ ಮಿಸಲಾತಿಯನ್ನು ತೆಗೆದು ಹಾಕಲಾಗುವುದು ಎಂದು ಅಮಿತ್ ಶಾ (Amit Shah) ಹೇಳಿದ್ದಾರೆ ಎಂದು ತಿರುಚಿದ ವಿಡಿಯೊ ಹರಿಬಿಟ್ಟ ಪ್ರಕರಣದಲ್ಲಿ ಡೆಲ್ಲಿ ಪೊಲೀಸರು (Delhi Police) ಎಫ್​ಐಆರ್​ ದಾಖಲಿಸಿದ್ದಾರೆ. ಇದೇ ವೇಳೆ ಪೊಲೀಸರು ವಿಡಿಯೊದ ಕುರಿತು ಮಾಹಿತಿ ನೀಡುವಂತೆ ಸೋಶಿಯಲ್ ಮೀಡಿಯಾ ಫ್ಲ್ಯಾಟ್​ಫಾರ್ಮ್​ ಎಕ್ಸ್​​ಗೆ (X) ಮನವಿ ಮಾಡಿದೆ. ಅದರ ಪ್ರಕಾರ ತನಿಖೆ ನಡೆಸುವುದಾಗಿ ಪೊಲೀಸರು ಹೇಳಿದ್ದಾರೆ. ಇದು ನಕಲಿ ಸೃಷ್ಟಿ ಎಂದು ಅಮಿತ್‌ ಶಾ ಸ್ಪಷ್ಪಪಡಿಸಿದ್ದಾರೆ.

ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮ ಪ್ಲಾಟ್​​ಫಾರ್ಮ್​ಗಳಲ್ಲಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಭಾನುವಾರ ಎಫ್ಐಆರ್ ದಾಖಲಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಗೃಹ ಸಚಿವಾಲಯ (ಎಂಎಚ್ಎ) ಈ ಸಂಬಂಧ ದೂರು ದಾಖಲಿಸಿದೆ. ಅದರ ಆಧಾರದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ವಿಭಾಗಗಳು ಮತ್ತು ಐಟಿ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಿದೆ.

ಮೂಲಗಳನ್ನು ಉಲ್ಲೇಖಿಸಿ, ಈ ಪ್ರಕರಣದಲ್ಲಿ ಬಂಧನಗಳು ದೇಶಾದ್ಯಂತ ನಡೆಯುವ ಸಾಧ್ಯತೆಯಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಭಾರತೀಯ ಸೈಬರ್ ಕ್ರೈಮ್ ಸಮನ್ವಯ ಕೇಂದ್ರದ (ಐ 4 ಸಿ) ಡಿಸಿ ಸಿಂಕು ಶರಣ್ ಸಿಂಗ್ ಅವರು ಸಲ್ಲಿಸಿದ ದೂರಿನ ಪ್ರಕಾರ, “ಸಮುದಾಯಗಳ ನಡುವೆ ಸಾಮರಸ್ಯ ಹಾಳು ಮಾಡುವ ಉದ್ದೇಶದಿಂದ ಕೆಲವು ನಕಲಿ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುತ್ತಿದೆ, ಇದು ಸಾರ್ವಜನಿಕ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಲಿಂಕ್​​ಗಳ ಸಂಗ್ರಹ

ಮುಂದಿನ ಕ್ರಮಕ್ಕಾಗಿ ವೀಡಿಯೊಗಳನ್ನು ಹಂಚಿಕೊಂಡ ಲಿಂಕ್​​ಗಳನ್ನು ಸಂಗ್ರಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮೂಲಗಳ ಪ್ರಕಾರ, ದೆಹಲಿ ಪೊಲೀಸರು ಎಕ್ಸ್ ಮತ್ತು ಫೇಸ್ಬುಕ್​​ಗೆ ಪತ್ರ ಬರೆದಿದ್ದು, ಅಮಿತ್ ಶಾ ಅವರ ನಕಲಿ ಕ್ಲಿಪ್​ನ ಮೂಲ ಮತ್ತು ವೀಡಿಯೊವನ್ನು ಮೊದಲು ಹಂಚಿಕೊಂಡ ಖಾತೆಯ ಬಗ್ಗೆ ಸಾಮಾಜಿಕ ಮಾಧ್ಯಮ ಖಾತೆಗಳ ಬಗ್ಗೆ ಮಾಹಿತಿ ಕೋರಿದ್ದಾರೆ.

ಹಿಂಸಾಚಾರಕ್ಕೆ ಕಾರಣವಾಗಬಹುದು

ಗೃಹ ಸಚಿವರ ನಕಲಿ ವೀಡಿಯೊಗಳನ್ನು ಕಾಂಗ್ರೆಸ್ ಹರಡಿಸಿದೆ ಎಂಬುದಾಗಿ ಬಿಜೆಪಿ ಹೇಳಿದೆ. ಎಡಿಟ್ ಮಾಡಿದ ತುಣುಕುಗಳನ್ನು ಪ್ರಸಾರ ಮಾಡುವ ಮತ್ತು ಹಂಚಿಕೊಳ್ಳುವ ಮೂಲಕ ವಿರೋಧ ಪಕ್ಷವು ದೇಶದಲ್ಲಿ ಕೋಮು ಸಾಮರಸ್ಯವನ್ನು ಹರಡುತ್ತಿದೆ ಎಂದು ಆರೋಪಿಸಿದೆ.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಅವರು ಕಾಂಗ್ರೆಸ್ ತೆಲಂಗಾಣ ಘಟಕವು ಅಮಿತ್ ಶಾ ಅವರ ನಕಲಿ ವೀಡಿಯೊವನ್ನು ಪ್ರಸಾರ ಮಾಡುತ್ತಿದೆ, ಇದು “ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕಾರಣವಾಗಬಹುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hasan Pen Drive Case: ಎಲ್ಲೂ ಕಾಣದ ಪ್ರಜ್ವಲ್‌, ಇಂದು ಎಚ್‌ಡಿ ರೇವಣ್ಣ ಹೈಕೋರ್ಟ್‌ ಮೊರೆ

ತೆಲಂಗಾಣ ಕಾಂಗ್ರೆಸ್ ಎಡಿಟ್ ಮಾಡಿದ ವೀಡಿಯೊವನ್ನು ಹರಡುತ್ತಿದೆ, ಇದು ಸಂಪೂರ್ಣವಾಗಿ ನಕಲಿ ಮತ್ತು ದೊಡ್ಡ ಪ್ರಮಾಣದ ಹಿಂಸಾಚಾರಕ್ಕೆ ಕಾರಣವಾಗುವ ಸಾಮರ್ಥ್ಯವನ್ನು ಹೊಂದಿದೆ” ಎಂದು ಮಾಳವೀಯ ಬರೆದಿದ್ದಾರೆ.

ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ನೀಡಲಾಗುವ “ಅಸಂವಿಧಾನಿಕ ಮೀಸಲಾತಿ” ಪ್ರಯೋಜನಗಳನ್ನು ತೆಗೆದುಹಾಕುವ ಬಗ್ಗೆ ಮಾತ್ರ ಶಾ ಮಾತನಾಡುತ್ತಿದ್ದಾರೆ ಎಂದು ಅವರು ಗಮನಸೆಳೆದರು.

ಅನನುಕೂಲಕರ ಮೀಸಲಾತಿ

ಕಾಂಗ್ರೆಸ್ ಮತ್ತು ಅದರ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮೀಸಲಾತಿ ಬಗ್ಗೆ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಅಮಿತ್ ಶಾ ತಮ್ಮ ಹೇಳಿಕೆಯಲ್ಲಿ ಆರೋಪಿಸಿದ್ದಾರೆ. ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುತ್ತಿದೆ ಅಸಂವಿಧಾನಿಕ ಮೀಸಲಾತಿಯನ್ನು ಕೊನೆಗೊಳಿಸುತ್ತೇವೆ ಎಂದು ಅವರು ಹೇಳಿದ್ದಾರೆ.

“ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಮೀಸಲಾತಿ ಬಗ್ಗೆ ದೇಶದ ಜನರ ದಾರಿ ತಪ್ಪಿಸುತ್ತಿದ್ದಾರೆ. ತುಷ್ಟೀಕರಣಕ್ಕಾಗಿ, ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡುವ ಮೂಲಕ ಮತ್ತು ಜಾಮಿಯಾ ಮತ್ತು ಎಎಂಯುನಂತಹ ಸಂಸ್ಥೆಗಳಲ್ಲಿ ಎಸ್ಸಿ-ಎಸ್ಟಿ ಮತ್ತು ಒಬಿಸಿಯನ್ನು ವಂಚಿತಗೊಳಿಸಲಾಗುತ್ತಿದೆ ಎಂದು” ಎಂದು ಶಾ ಆರೋಪಿಸಿದರು.

Continue Reading
Advertisement
Kavya Maran
ಪ್ರಮುಖ ಸುದ್ದಿ14 mins ago

Kavya Maran : ಎಸ್​ಆರ್​ಎಚ್​​​ ತಂಡದ ಫೀಲ್ಡಿಂಗ್ ನೋಡಿ ಮಗುವಿನಂತೆ ಕಣ್ಣೀರು ಹಾಕಿದ ಮಾಲಕಿ ಕಾವ್ಯಾ ಮಾರನ್​

ವೈರಲ್ ನ್ಯೂಸ್16 mins ago

Viral Video: ರೈಲು ಹತ್ತುವಾಗ ಕೆಳಗೆ ಬಿದ್ದ ವ್ಯಕ್ತಿ; ಮಹಿಳಾ ಪೇದೆಯಿಂದ ರಕ್ಷಣೆ-ರೋಚಕ ವಿಡಿಯೋ ವೈರಲ್‌

viral video tn rao
ಪ್ರಮುಖ ಸುದ್ದಿ20 mins ago

Viral Video: ನಮಗೆ ಹಿಂದೂ ಮತಗಳ ಅಗತ್ಯವಿಲ್ಲ: ಕಾಂಗ್ರೆಸ್‌ ನಾಯಕನ ವಿಡಿಯೋ ವೈರಲ್‌

Ramana Avatara trailer out
ಸಿನಿಮಾ21 mins ago

Ramana Avatara Trailer: ರಿಷಿ ಅಭಿನಯದ ʻರಾಮನ ಅವತಾರʼ ಟ್ರೈಲರ್‌ ರಿಲೀಸ್

PM Narendra modi in Bagalakote for Election Campaign and here is Live telecast
Lok Sabha Election 202422 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

Amith Shah
ಪ್ರಮುಖ ಸುದ್ದಿ37 mins ago

Fact Check: ಅಮಿತ್‌ ಶಾ ಎಸ್​​ಸಿ, ಎಸ್​ಟಿ ಮೀಸಲು ರದ್ದು ಮಾಡ್ತೀವಿ ಎಂದಿದ್ದು ನಿಜವೆ?​​

Mahanati Show complaint against Gagana Contestant and Ramesh
ಕಿರುತೆರೆ47 mins ago

Mahanati Show: ಮೆಕ್ಯಾನಿಕಲ್‌ ಲೈಫ್‌ ಬಗ್ಗೆ ಕೆಟ್ಟ ಡೈಲಾಗ್‌ ಹೊಡೆದ ಗಗನಾ; ರಮೇಶ್‌ ಸೇರಿ ಹಲವರ ವಿರುದ್ಧ ದೂರು!

Physical Abuse
ಪ್ರಮುಖ ಸುದ್ದಿ1 hour ago

Physical Abuse: ಮದುವೆಗೊಪ್ಪದ ಬಾಲಕಿಯ ಅತ್ಯಾಚಾರ; ಕೆನ್ನೆಯ ಮೇಲೆ ಬಿಸಿ ಕಬ್ಬಿಣದಿಂದ ಪಾಗಲ್‌ ಪ್ರೇಮಿ ಹೆಸರು!

ದೇಶ1 hour ago

Pakistan Spy: ATS ಭರ್ಜರಿ ಕಾರ್ಯಾಚರಣೆ; ಪಾಕಿಸ್ತಾನ ಗೂಢಾಚಾರ ಅರೆಸ್ಟ್‌

srinivasa prasad sutturu sri
ಕರ್ನಾಟಕ2 hours ago

Srinivasa Prasada Passes Away: ಕೊನೇ ಬಾರಿಗೆ ʼCoffee’ ಎಂದು ಬರೆದಿದ್ದ ಶ್ರೀನಿವಾಸ ಪ್ರಸಾದ್;‌ ನಾಳೆ ಅಂತ್ಯಕ್ರಿಯೆ; ಗಣ್ಯರ ಸಂತಾಪ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote for Election Campaign and here is Live telecast
Lok Sabha Election 202422 mins ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 202419 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 202422 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202424 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ2 days ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

ಟ್ರೆಂಡಿಂಗ್‌