Site icon Vistara News

Lok Sabha Election : ಬಿಜೆಪಿಯ 3ನೇ ಪಟ್ಟಿ ಬಿಡುಗಡೆ, ಅಣ್ಣಾಮಲೈ ಚುನಾವಣಾ ಕಣಕ್ಕೆ ಎಂಟ್ರಿ

Lok Sabha Election, bjp 3rd list

ಬೆಂಗಳೂರು: ಲೋಕಸಭಾ ಚುನಾವಣೆಗೆ (Lok Sabha Election) ಬಿಜೆಪಿ (BJP) ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೊಯಮತ್ತೂರಿನಿಂದ ಕೆ.ಅಣ್ಣಾಮಲೈ (Annamalai), ಚೆನ್ನೈ ದಕ್ಷಿಣದಿಂದ ತಮಿಳಿಸೈ ಸೌಂದರರಾಜನ್ ಮತ್ತು ನೀಲಗಿರಿಯಿಂದ ಎಲ್.ಮುರುಗನ್ ಸ್ಪರ್ಧಿಸಲಿದ್ದಾರೆ. ಬಿಜೆಪಿಯ ಮೂರನೇ ಪಟ್ಟಿ ತಮಿಳುನಾಡಿನ (Tamil Nadu) ಕ್ಷೇತ್ರಗಳಿಗೆ ಮಾತ್ರ ಮೀಸಲಾಗಿದೆ ಹಾಗೂ 9 ಅಭ್ಯರ್ಥಿಗಳ ಹೆಸರನ್ನು ಮಾತ್ರ ಘೋಷಿಸಲಾಗಿದೆ.

ತೆಲಂಗಾಣ ರಾಜ್ಯಪಾಲ ಹುದ್ದೆಯಿಂದ ರಾಜೀನಾಮೆ ನೀಡಿದ್ದ ಅಮಿಲಿಸೈ ಸೌಂದರರಾಜನ್ ಚೆನ್ನೈ ದಕ್ಷಿಣದಿಂದ ಬಿಜೆಪಿ ಪರ ಕಣಕ್ಕೆ ಇಳಿದಿದ್ದಾರೆ. ವಿನೋಜ್ ಪಿ ಸೆಲ್ವನ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಚೆನ್ನೈ ಸೆಂಟ್ರಲ್ ನಿಂದ ಸ್ಪರ್ಧಿಸಲಿದ್ದಾರೆ. ಕನ್ಯಾಕುಮಾರಿಯಿಂದ ಪೊನ್ನು ರಾಧಾಕೃಷ್ಣನ್ ಸ್ಪರ್ಧೆ ಮಾಡಲಿದ್ದಾರೆ. ವೆಲ್ಲೂರಿನಿಂದ ಎ ಸಿ ಷಣ್ಮುಗಂ, ಕೃಷ್ಣಗಿರಿಯಿಂದ ಸಿ ನರಸಿಂಹನ್​, ಪೆರಂಬಲೂರಿನಿಂದ ಟಿ. ಆರ್​ ಪಾರಿವೆಂದಾರ್​, ತೂತುಕುಡಿಯಿಂದ ನೈನಾರ್ ನಾಗೇಂದ್ರನ್​ ಅವರ ಹೆಸರನ್ನು ಬಿಜೆಪಿ ಹೈಕಮಾಂಡ್​ ಅಂತಿಮಗೊಳಿಸಿದೆ.

  1. ಚೆನ್ನೈ ದಕ್ಷಿಣ – ತಮಿಳಿಸೈ ಸೌಂದರರಾಜನ್
  2. ಚೆನ್ನೈ ಸೆಂಟ್ರಲ್ – ವಿನೋಜ್ ಪಿ ಸೆಲ್ವಂ
  3. ವೆಲ್ಲೂರು – ಎ.ಕೆ.ಷಣ್ಮುಗಂ
  4. ಕೃಷ್ಣಗಿರಿ – ಕೆ ನರಸಿಂಹನ್
  5. ನೀಲಗಿರಿ (ಎಸ್ಜಿ) – ಎಲ್ ಮುರುಗನ್
  6. ಕೊಯಮತ್ತೂರು – ಕೆ ಅಣ್ಣಾಮಲೈ
  7. ಪೆರಂಬಲೂರು – ಟಿ.ಆರ್.ಪಾರಿವೇಂದರ್
  8. ತೂತುಕುಡಿ : ನೈನಾರ್ ನಾಗೇಂದ್ರನ್
  9. ಕನ್ಯಾಕುಮಾರಿ- ರಾಧಾಕೃಷ್ಣನ್

ಮೂರನೇ ಪಟ್ಟಿಯ ಮಾಹಿತಿ ಇಲ್ಲಿದೆ

ವ್ಯಾಟ್ಸ್‌ ಆ್ಯಪ್‌ಗೆ ವಿಕಸಿತ ಭಾರತ ಸಂದೇಶ ಕಳುಹಿಸುವುದನ್ನು ನಿಲ್ಲಿಸಿ; ಕೇಂದ್ರಕ್ಕೆ ಚುನಾವಣಾ ಆಯೋಗ

ಲೋಕಸಭಾ ಚುನಾವಣೆ (Lok Sabha Election 2024)ಗೆ ದಿನಾಂಕ ಘೋಷಣೆಯಾಗಿದೆ. ಜತೆಗೆ ಮಾದರಿ ನೀತಿ ಸಂಹಿತೆಯೂ ಜಾರಿಯಾಗಿದೆ. ಈ ಮಧ್ಯೆ ವ್ಯಾಟ್ಸ್‌ ಆ್ಯಪ್‌ಗೆ ವಿಕಸಿತ ಭಾರತ ಅಭಿಯಾನ (Viksit Bharat Abhiyan)ದ ಸಂದೇಶ ಕಳುಹಿಸುವುದನ್ನು ನಿಲ್ಲಿಸಲು ಸರ್ಕಾರಕ್ಕೆ ಕೇಂದ್ರ ಚುನಾವಣಾ ಆಯೋಗ (Election Commission of India) ಸೂಚನೆ ನೀಡಿದೆ. ಕೆಲವು ದಿನಗಳಿಂದ ದೇಶಾದ್ಯಂತದ ಜನರಿಗೆ ವ್ಯಾಟ್ಸ್‌ ಆ್ಯಪ್‌ನಲ್ಲಿ ವಿಕಸಿತ ಭಾರತಕ್ಕೆ ಸಂಬಂಧಿಸಿದ ಸಂದೇಶ ರವಾನೆಯಾಗುತ್ತಿದೆ.

ಈ ಬಗ್ಗೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (Ministry of Electronics and Information Technology)ಕ್ಕೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ. ಜತೆಗೆ ವರದಿಯನ್ನು ತಕ್ಷಣ ಸಲ್ಲಿಸುವಂತೆ ಚುನಾವಣಾ ಆಯೋಗವು ಸಚಿವಾಲಯವನ್ನು ಕೇಳಿದೆ. ನೀತಿ ಸಂಹಿತೆ ಜಾರಿಯಲ್ಲಿದ್ದರೂ ದೇಶದ ನಾಗರಿಕರ ಮೊಬೈಲ್ ಫೋನ್‌ಗಳಿಗೆ ಇಂತಹ ಸಂದೇಶಗಳು ರವಾನೆಯಾಗುತ್ತಿರುವುದು ತಿಳಿದು ಬಂದಿದೆ ಎಂದು ಚುನಾವಣಾ ಆಯೋಗ ಅಸಮಾಧಾನ ವ್ಯಕ್ತಪಡಿಸಿದೆ.

ಇದನ್ನೂ ಓದಿ : Electoral Bonds: ಚುನಾವಣಾ ಬಾಂಡ್‌ನ ಎಲ್ಲ ವಿವರಗಳನ್ನು ಆಯೋಗಕ್ಕೆ ಸಲ್ಲಿಸಿದ ಎಸ್‌ಬಿಐ; ಯಾವೆಲ್ಲ ಮಾಹಿತಿ ಒಳಗೊಂಡಿದೆ?

ದೂರುಗಳು ಬಂದಿದ್ದವು

ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದರೂ ಸರ್ಕಾರದ ಉಪಕ್ರಮಗಳನ್ನು ಎತ್ತಿ ತೋರಿಸುವ ಇಂತಹ ಸಂದೇಶಗಳನ್ನು ನಾಗರಿಕರ ಫೋನ್‌ಗಳಿಗೆ ತಲುಪಿಸಲಾಗುತ್ತಿದೆ ಎಂದು ಹಲವು ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಆಯೋಗವು ಈ ಕ್ರಮ ಕೈಗೊಂಡಿದೆ.

ಸಚಿವಾಲಯ ಹೇಳಿದ್ದೇನು?

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಈ ಬಗ್ಗೆ ಉತ್ತರಿಸಿ, ಮಾದರಿ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಈ ಸಂದೇಶಗಳನ್ನು ಕಳುಹಿಸಲಾಗಿತ್ತು. ನೆಟ್‌ವರ್ಕ್ ಸಮಸ್ಯೆಯಿಂದಾಗಿ ಅವರಿಗೆ ತಲುಪುವುದು ವಿಳಂಬವಾಗಿರಬಹುದು ಎಂದು ಆಯೋಗಕ್ಕೆ ಮಾಹಿತಿ ನೀಡಿದೆ.

ಚುನಾವಣೆ ದಿನಾಂಕ

ದೇಶದ ಜನರು ಕುತೂಹಲದಿಂದ ಕಾಯುತ್ತಿರುವ ಲೋಕಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು ಮಾರ್ಚ್‌ 16ರಂದು ಘೋಷಿಸಿದೆ. ಈ ಬಾರಿಯೂ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ದಿನಾಂಕವನ್ನು ಘೋಷಿಸಿದರು. ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಮೊದಲ ಹಂತದ ಮತದಾನವು ಏಪ್ರಿಲ್‌ 19ರಿಂದ ಆರಂಭವಾಗಲಿದೆ. ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ (ಏಪ್ರಿಲ್‌ 26 ಮತ್ತು ಮೇ 7) ಮತದಾನ ನಡೆಯಲಿದೆ. ಜೂನ್ 1ರಂದು ಚುನಾವಣೆ ಮುಗಿಯಲಿದೆ.

Exit mobile version