Lok Sabha Election: ಸೌಮ್ಯಾರೆಡ್ಡಿ ಪರ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಭರ್ಜರಿ ಪ್ರಚಾರ; ತೆಲುಗು ಭಾಷಿಕರನ್ನು ಸೆಳೆಯಲು ಕ್ಯಾಂಪೇನ್ - Vistara News

ಪ್ರಮುಖ ಸುದ್ದಿ

Lok Sabha Election: ಸೌಮ್ಯಾರೆಡ್ಡಿ ಪರ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಭರ್ಜರಿ ಪ್ರಚಾರ; ತೆಲುಗು ಭಾಷಿಕರನ್ನು ಸೆಳೆಯಲು ಕ್ಯಾಂಪೇನ್

Lok Sabha Election: ಬೆಂಗಳೂರಿನಲ್ಲಿ ತೆಲುಗು ಭಾಷಿಕರು ಮತ್ತು ರೆಡ್ಡಿ ಮತ ಸೆಳೆಯಲು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಖಾಡಕ್ಕೆ ಇಳಿದಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಪರ ಶನಿವಾರ ಪ್ರಚಾರ ನಡೆಸಿದರು.

VISTARANEWS.COM


on

Lok Sabha Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಹೊರವಲಯದ ಬೊಮ್ಮನಹಳ್ಳಿಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಪರ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಭರ್ಜರಿ ಪ್ರಚಾರ ನಡೆಸಿದರು. ಹೊಂಗಸಂದ್ರ ವಾರ್ಡ್ ವ್ಯಾಪ್ತಿಯಲ್ಲಿ ಹೆಚ್ಚು ತೆಲುಗು ಭಾಷಿಕರು ವಾಸವಾಗಿರುವ ಹಿನ್ನೆಲೆಯಲ್ಲಿ ರೇವಂತ್ ರೆಡ್ಡಿ ಪ್ರಚಾರ ಮಾಡಿದರು.

ತೆಲುಗು ಭಾಷಿಕರು ಮತ್ತು ರೆಡ್ಡಿ ಮತ ಸೆಳೆಯಲು ರೇವಂತ್ ರೆಡ್ಡಿ ಅಖಾಡಕ್ಕೆ ಇಳಿದಿದ್ದು, ಅವರಿಗೆ ರೆಡ್ಡಿಗೆ ಸಚಿವ ರಾಮಲಿಂಗಾರೆಡ್ಡಿ, ಅಭ್ಯರ್ಥಿ ಸೌಮ್ಯಾರೆಡ್ಡಿ, ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್, ಕಾಂಗ್ರೆಸ್ ಮುಖಂಡ ಉಮಾಪತಿ ಶ್ರೀನಿವಾಸ್ ಗೌಡ ಸಾಥ್ ನೀಡಿದರು.

ಪ್ರಚಾರದ ವೇಳೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮಾತನಾಡಿ, ಬೆಂಗಳೂರು ದಕ್ಷಿಣದಲ್ಲಿ ಸೌಮ್ಯಾರೆಡ್ಡಿ ಗೆಲ್ಲಿಸಲು ಕಾಂಗ್ರೆಸ್ ಹೈಕಮಾಂಡ್ ನನ್ನನ್ನು ಕಳುಹಿಸಿದೆ. ಇಲ್ಲಿ ಇಷ್ಟೊಂದು ತೆಲುಗು ಭಾಷಿಕರು ಇದ್ದಾರೆ ಎಂದು ನನಗೆ ಗೊತ್ತಿಲ್ಲ. ಆಂಧ್ರಪ್ರದೇಶದದಿಂದ ಬಂದು ಇಲ್ಲಿ ಜೀವನ ನಡೆಸುತ್ತಿರುವ ನಿಮಗೆ ಅಭಿನಂದನೆ. ಬೆಂಗಳೂರು ಮಹಾನಗರದಲ್ಲಿ ನೀವು ಲಕ್ಷಾಂತರ ಮಂದಿ ನೆಮ್ಮದಿಯಾಗಿ ಜೀವಿಸಲು, ರಾಜೀವ್ ಗಾಂಧಿ ಅವರು ಮಾಡಿದ ಕಂಪ್ಯೂಟರ್ ಕ್ರಾಂತಿ ಕಾರಣ. ಹಾಗಾಗಿ ಇಲ್ಲಿಗೆ ಬಂದು ಉದ್ಯೋಗ ಮಾಡುತ್ತಿದ್ದೀರಾ ಎಂದರು.

ನನ್ನನ್ನು ಜೈಲಿಗೆ ಕಳುಹಿಸಿದರು, ಆದ್ರೆ ತೆಲಂಗಾಣ ಜನ ನನ್ನ ಸಿಎಂ ಮಾಡಿದ್ರು. ಕರ್ನಾಟಕದಲ್ಲಿ ಕೂಡ ಡಿಕೆಶಿಯನ್ನು ಜೈಲಿಗೆ ಕಳುಹಿಸಿದ್ರು, ಕರ್ನಾಟಕ ಜನರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ರು. ಲೋಕಸಭಾ ಚುನಾವಣೆಯಲ್ಲಿ 400 ಸೀಟ್ ಗೆಲುತ್ತೇನೆ ಅಂತ ಮೋದಿ ಹೇಳ್ತಾರೆ. ಆದ್ರೆ ಕರ್ನಾಟಕದಲ್ಲಿ ದೇವೇಗೌಡ, ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು, ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಕಾಲು ಹಿಡಿಯೋದು ಯಾಕೆ? ಕರ್ನಾಟಕ ಮತ್ತು ತೆಲಂಗಾಣದಲ್ಲಿ 70 ಮಂದಿ ಗೆಲ್ಲಿಸಿ ಕಳುಹಿಸಿದರೆ ಕೇವಲ ಇಬ್ಬರಿಗೆ ಮಾತ್ರ ಸಚಿವ ಸ್ಥಾನ. ಗುಜರಾತ್‌ನಲ್ಲಿ ಏಳು, ಉತ್ತರಪ್ರದೇಶಕ್ಕೆ ಹನ್ನೆರಡು ಮಂತ್ರಿ ಸ್ಥಾನ ನೀಡಿದ್ದಾರೆ. ದಕ್ಷಿಣ ರಾಜ್ಯಗಳ ಸಮಸ್ಯೆ ಬಗ್ಗೆ ಮೋದಿ ಸರ್ಕಾರಕ್ಕೆ ತಾತ್ಸಾರ ಮನೋಭಾವ ಇದೆ ಎಂದು ಕಿಡಿಕಾರಿದರು.

ಇದನ್ನೂ ಓದಿ | Modi in Karnataka: ಪ್ರಧಾನಿ ಮೋದಿ ತೆರಳುವಾಗ ಚೆಂಬು ಪ್ರದರ್ಶನ; ನಲಪಾಡ್‌ ಸೇರಿ ಹಲವರು ವಶಕ್ಕೆ

ದಾರಿ ತಪ್ಪಿದ್ದಾರೆ ಎಂದ ಕುಮಾರಸ್ವಾಮಿಗೆ ಹೆಣ್ಣು ಮಕ್ಕಳು ತಕ್ಕ ಉತ್ತರ ಕೊಡಬೇಕು: ಡಿಕೆಶಿ

Lok Sabha Election 2024

ಮೈಸೂರು: ಕುಮಾರಸ್ವಾಮಿ ಗ್ಯಾರಂಟಿ ಯೋಜನೆಯಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಅಂತ ಹೇಳಿದ್ದಾರೆ. ಏನ್ರವ್ವ ನೀವು ದಾರಿ ತಪ್ಪಿದ್ದೀರಾ? ಹೆಣ್ಣು ಮಕ್ಕಳು ದೇವಸ್ಥಾನಕ್ಕೆ ಹೋಗಲಿ, ನೆಂಟರ ಮನೆಗೆ ಹೋಗಲಿ ಅಂತ ಬಸ್ ಫ್ರೀ ಮಾಡಿದ್ದೀವಿ. ದಾರಿ ತಪ್ಪಿದ್ದಾರೆ ಅಂದ ಕುಮಾರಸ್ವಾಮಿಗೆ ಹೆಣ್ಣು ಮಕ್ಕಳು ತಕ್ಕ ಉತ್ತರ ಕೊಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕರೆ ನೀಡಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್. ನಗರದ ರೇಡಿಯೋ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಸಮಾವೇಶದಲ್ಲಿ ಮಾತನಾಡಿದ ಅವರು, ನನಗೆ ಗಂಡಸರ ಮೇಲೆ ನಂಬಿಕೆ ಇಲ್ಲ. ಆದ್ದರಿಂದಲೇ ಹೆಣ್ಣು ಮಕ್ಕಳಿಗೆ ಗ್ಯಾರಂಟಿ ಕೊಟ್ಟಿದ್ದೇವೆ.‌ ಬೇರು ಇಲ್ಲ ಅಂದ್ರೆ ಮರ ಉಳಿಯಲ್ಲ. ನಂಬಿಕೆ ಇಲ್ಲ ಅಂದ್ರೆ ಸಂಬಂಧ ಇರೋದಿಲ್ಲ. ಆದ್ದರಿಂದಲೇ ನಾನು, ಸಿಎಂ ಸಿದ್ದರಾಮಯ್ಯ ಬಂದಿದ್ದೇವೆ. ನಮ್ಮ ನಿಮ್ಮ ವಿಶ್ವಾಸ ಮುಖ್ಯ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಜಾತಿ, ಧರ್ಮದ ಮೇಲೆ ನಮ್ಮ ಪಕ್ಷ ನಿಂತಿಲ್ಲ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್, ದೇವರಾಜ ಅರಸು, ಸಿದ್ದರಾಮಯ್ಯ ಹೀಗೆ ಯಾವುದೇ ಅವಧಿ ತೆಗೆದುಕೊಳ್ಳಿ. ಜನರ ಪರವಾಗಿ ಕಾಂಗ್ರೆಸ್ (Lok Sabha Election 2024) ಕೆಲಸ ಮಾಡಿದೆ. ಬಿಜೆಪಿ – ಜೆಡಿಎಸ್ ಭಾವನೆ ಮೇಲೆ ಹೊರಟಿದ್ದಾರೆ. ನಾವು ಬದುಕಿನ ಮೇಲೆ ಹೊರಟಿದ್ದೇವೆ ಎಂದು ಹೇಳಿದರು.

ಸಾ‌.ರಾ. ಮಹೇಶ್, ಪುಟ್ಟರಾಜು, ಡಿ.ಸಿ. ತಮ್ಮಣ್ಣಗೊಂದು ಚಾಕ್ಲೆಟು ಎಂದು ವ್ಯಂಗ್ಯವಾಡಿದ ಅವರು, ಕುಮಾರಸ್ವಾಮಿ ಮಂಡ್ಯಕ್ಕೆ ಬಂದು ಅಭ್ಯರ್ಥಿ ಆಗಿದ್ದಾರೆ. ಯಾಕ್ ಸ್ವಾಮಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಇರಲಿಲ್ವೇ? ನೀವು ಗೆದ್ದಿರುವ ರಾಮನಗರ ವ್ಯಾಪ್ತಿಯಲ್ಲೇ ಯಾಕೆ ನಿಲ್ಲಲಿಲ್ಲ. ನಿಮ್ಮ ತಂದೆ ಎಲ್ಲಿಂದ ಪ್ರಧಾನಿಯಾದರು. ನಿಮ್ಮ ಧರ್ಮಪತ್ನಿ ಗೆದ್ದಿದ್ರು ಆ ಕ್ಷೇತ್ರ ಬಿಟ್ಟು ಇಲ್ಲಿಗೆ ಯಾಕೆ ಬಂದಿದ್ದೀರಿ. ಇದು ಸ್ವಾಭಿಮಾನದ ಪ್ರಶ್ನೆ ಎಂದರು.

ಜೆಡಿಎಸ್ ನಾಯಕರ ವಿರುದ್ಧ ನಾಲಿಗೆ ಹರಿಬಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್, ಟೀಕೆ ಭರದಲ್ಲಿ ಅಶ್ಲೀಲ ಪದಗಳ ಬಳಕೆ ಮಾಡಿದರು. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ರು. ಜನರಿಗೆ ಏನ್ ಮಾಡಿದ್ರು? ಮಿಸ್ಟರ್ ಕುಮಾರಸ್ವಾಮಿ ಏನಾಗಿತ್ತು ನಿಂಗೆ? ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ ಅವರು, ಸಾ.ರಾ.ಮಹೇಶ್ ಸೋತಿದ್ದಾನೆ. ಸೋತಿರೋದಕ್ಕೆ ಏನೇನೋ ಮಾತಾಡ್ತಾನೆ. ಅದಕ್ಕೆಲ್ಲ ನೀನು ತಲೆ ಕೆಡಿಸಿಕೊಳ್ಳಬೇಡ. ಇಂಥವು ಹುಟ್ಟೋವು ಎಷ್ಟೋ ಉದುರೋವು ಎಷ್ಟೋ… ಎಂದು ಶಾಸಕ ಡಿ.ರವಿಶಂಕರ್ ಉದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ | Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ

ನನ್ನ ವಿರುದ್ಧ ಕೇಂದ್ರದವರೂ ತನಿಖೆ ಮಾಡುತ್ತಿದ್ದಾರೆ. ನೀನೂ ತನಿಖೆ ಮಾಡಿಸುತ್ತಿದ್ದೀಯ, ಮಾಡ್ಸು ಎಂದು ಏಕವನಚದಲ್ಲೇ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮೊದ್ಲು ಬಿಜೆಪಿ ಜೆಡಿಎಸ್ ಎ ಟೀಂ, ಬಿ ಟೀಂ ಅಂತ ಇತ್ತು. ಇವಾಗ ಇಬ್ಬರದ್ದು ಪಾರ್ಟನರ್‌ಶಿಪ್. ಬಿಜೆಪಿ ಪಕ್ಷದಿಂದ ದೂರ ಇರಲಿ ಅಂತ 38 ಸ್ಥಾನ ಪಡೆದಿದ್ದ ನಿಮಗೆ 80 ಸ್ಥಾನ ಇದ್ದ ನಾವು ಅಧಿಕಾರ ಕೊಟ್ಟೆವು. ನಾವೇನು ನಿಮ್ಮ ಬೆನ್ನಿಗೆ ಚಾಕು ಹಾಕಲು ಬಂದಿದ್ವಾ? ಅಸೆಂಬ್ಲಿಗೆ ಬನ್ನಿ ಮಾತಾಡೊಣ ಅಂತ ಹೇಳಿದ್ದೀನಿ. ನಮ್ಮ ಭೂಮಿಯಲ್ಲಿ ನಾವು ಕೆಲಸ ಮಾಡಿದ್ರೆ ನಿಮಗೇನು ಉರಿ? ಕಲ್ ಹೊಡೆದಿದ್ದು, ಮಣ್ಣು ಹೊಡೆದಿದ್ದು ಎಲ್ಲಾ ತನಿಖೆ ಮಾಡಿಸ್ದಲ್ಲಪ್ಪ. ನೀನೂ ತನಿಖೆ ಮಾಡಿಸ್ದೆ, ಡೆಲ್ಲಿಲೂ ಮಾಡ್ತಿದ್ದಾರಲ್ಲ.. ಈಗೆ ಜೆಡಿಎಸ್ ಜತೆಗೆ ಬಿಜೆಪಿಯವರೂ ಸೇರಿಕೊಂಡಿದ್ದಾರೆ. ಇವರು ಸೇರಿ ಜನರಿಗೆ ಕೊಟ್ಟಿದ್ದು ಏನು ಅಂತ ಜನರ ಮುಂದೆ ಹೇಳಲಿ ಎಂದು ಕಿಡಿಕಾರಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

VISTARANEWS.COM


on

Virat kohli
Koo

ಬೆಂಗಳೂರು: ವಿರಾಟ್ ಕೊಹ್ಲಿ (Virat kohli ) ಪಂದ್ಯವೊಂದರಲ್ಲಿ ಅತ್ಯುತ್ತಮ ಶಾಟ್ ಆಡಿದಾಗ ಕ್ರಿಕೆಟ್ ಅಭಿಮಾನಿಗಳು ಅದನ್ನು ಮತ್ತೆ ಮತ್ತೆ ನೋಡಲು ಬಯಸುತ್ತಾರೆ. ಅಂತೆಯೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಆರ್​ಸಿಬಿಯ ಐಪಿಎಲ್ 2024 ರ ಪಂದ್ಯದಲ್ಲಿ ಮೋಹಿತ್ ಶರ್ಮಾ ವಿರುದ್ಧ ಅವರು ಇದೇ ರೀತಿಯ ಶಾಟ್ ಆಡಿದರು. ಅಲ್ಲದೆ, ಸಿಕ್ಸರ್​ ಬಾರಿಸಿದ ಅವರು ಕಿಂಗ್ ರೀತಿಯಲ್ಲಿ ಪೋಸ್ ಕೊಟ್ಟರು. ಅವರ ಸಿಕ್ಸರ್ ಪೋಸ್​ ಸಿಕ್ಕಾಪಟ್ಟೆ ವೈರಲ್ ಆಯಿತು.

148 ರನ್​ಗಳ ಗುರಿ ಬೆನ್ನಟ್ಟಿದ್ದ ಆರ್​ಸಿಬಿಗೆ ಕೊಹ್ಲಿ ಹಾಗೂ ಫಾಫ್ ಡು ಪ್ಲೆಸಿಸ್ ಕೇವಲ 3.1 ಓವರ್​ಗಳ 50 ರನ್​ ಬಾರಿಸಿದರು. ಮೋಹಿತ್ ಆಫ್ ಸ್ಟಂಪ್ ಹೊರಗೆ ಫುಲ್ ಲೆಂತ್​ ಎಸೆತ ಎಸೆದಾಗ ಕೊಹ್ಲಿ ಸಿಕ್ಸರ್ ಬಾರಿಸಿದರು. ಪಂದ್ಯದಲ್ಲಿ ವಿರಾಟ್​ ಕೊಹ್ಲಿ 42 ರನ್ ಬಾರಿಸಿ ಮಿಂಚಿದರು.

ಪುತ್ರ ಅಕಾಯ್​ ಹುಟ್ಟಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ

ವಿರಾಟ್​ ಕೊಹ್ಲಿಯ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ತಮ್ಮ ಮಗ ಅಕಾಯ್ ಕೊಹ್ಲಿ (AkaI kohli) ಜನಿಸಿದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್​ (IPL 2024) ಪಂದ್ಯದ ವೇಳೆ ಗ್ಯಾಲರಿಯಲ್ಲಿದ್ದ ಅನುಷ್ಕಾ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯ ನಡೆದಿದ್ದು, ಆರ್​ಸಿಬಿ ಗುಜರಾತ್​ ತಂಡವನ್ನು ಎದುರಿಸಿತು.

ನಟಿ ಸ್ಟ್ಯಾಂಡ್ ಗಳಲ್ಲಿ ಕುಳಿತಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ತನ್ನ ಪತಿ ಆಡುವುದನ್ನು ನೀಡಿ ಅವರು ನಗುತ್ತಿರುವುದನ್ನು ಕಾಣಬಹುದು.

ಇದನ್ನೂ ಓದಿ: IPL 2024 : ಭಾರೀ ಭದ್ರತಾ ಲೋಪ; ಎಸ್​ಆರ್​​ಎಚ್​ ವಿದೇಶಿ ಆಟಗಾರನ ಮೇಲೆ ಮುಗಿಬಿದ್ದ ಸಾರ್ವಜನಿಕರು!

ನಟಿ ಇತ್ತೀಚೆಗೆ ತನ್ನ ಹುಟ್ಟುಹಬ್ಬವನ್ನು ವಿರಾಟ್ ಮತ್ತು ಅವರ ಸಹ ಆರ್​​ಸಿಬಿ ಆಟಗಾರರೊಂದಿಗೆ ಆಚರಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಫಾಫ್ ಡು ಪ್ಲೆಸಿಸ್ ಹಂಚಿಕೊಂಡಿರುವ ಫೋಟೋದಲ್ಲಿ ಅನುಷ್ಕಾ ಶರ್ಮಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ನಟಿ ಮೇ 1ರಂದು ಬುಧವಾರ ತನ್ನ 36 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಅನುಷ್ಕಾ ತನ್ನ ಹುಟ್ಟುಹಬ್ಬದಂದು ಬೆಂಗಳೂರಿನಲ್ಲಿದ್ದರು ಮತ್ತು ಆತ್ಮೀಯ ಪಾರ್ಟಿ ಆಯೋಜಿಸಿದ್ದರು ಎಂದು ಕ್ರಿಕೆಟಿಗರು ಬಹಿರಂಗಪಡಿಸಿದ್ದರು.

ಅನುಷ್ಕಾ ಅವರ ಹುಟ್ಟುಹಬ್ಬದಂದು, ವಿರಾಟ್ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್​ನಲ್ಲಿ ತಮ್ಮ ಹೆಂಡತಿಯ ಮುದ್ದಾದ ಫೋಟೋಗಳನ್ನು ಹಂಚಿಕೊಂಡಿದ್ದರು. ಅವರ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಟಿಪ್ಪಣಿಯನ್ನು ಬರೆದಿದ್ದರು. “ನಿನು ನನಗೆ ಸಿಗದಿದ್ದರೆ ನಾನು ಸಂಪೂರ್ಣವಾಗಿ ಕಳೆದುಹೋಗುತ್ತಿದ್ದೆ. ಹುಟ್ಟುಹಬ್ಬದ ಶುಭಾಶಯಗಳು” ಎಂದು ಬರೆದು ಕೆಂಪು ಹೃದಯದ ಎಮೋಜಿಗಳನ್ನು ಹಾಕಿದ್ದರು.

Continue Reading

ಕರ್ನಾಟಕ

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Prajwal Revanna Case: ಅಪಹರಣಕ್ಕೀಡಾದ ಸಂತ್ರಸ್ತೆಯು ಪ್ರಾಣಭಯದಿಂದ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸದಂತಹ ಸ್ಥಿತಿಗೆ ತಲುಪಿದ್ದಾರೆ. ಎಸ್‌ಐಟಿ ಅಧಿಕಾರಿಗಳ ಭದ್ರತೆ ಇದ್ದರೂ, ಅವರನ್ನು ಬೆಂಗಳೂರಿಗೆ ಕರೆಸಿಕೊಂಡರೂ, ರೇವಣ್ಣ ಕುಟುಂಬಸ್ಥರ ದೌರ್ಜನ್ಯದ ಕುರಿತು ಅವರು ಯಾವುದೇ ಮಾಹಿತಿ ನೀಡಲು ಹಿಂಜರಿಯುತ್ತಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿವೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯಕ್ಕೀಡಾದ ಸಂತ್ರಸ್ತೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಎಚ್‌.ಡಿ.ರೇವಣ್ಣ (HD Revanna) ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಚ್‌.ಡಿ.ರೇವಣ್ಣ ಪುತ್ರ ಪ್ರಜ್ವಲ್‌ ರೇವಣ್ಣ (Prajwal Revanna) ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇಡೀ ಪ್ರಕರಣವು ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ತಂದಿದೆ. ಇದರ ಬೆನ್ನಲ್ಲೇ, ಅಪಹರಣಕ್ಕೀಡಾದ ಸಂತ್ರಸ್ತೆಯು ಪ್ರಾಣಭಯದಿಂದ ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸದಂತಹ ಸ್ಥಿತಿಗೆ ತಲುಪಿದ್ದಾರೆ.

ಹೌದು, ಎಚ್‌.ಡಿ.ರೇವಣ್ಣ ಸಂಬಂಧಿಯಾದ ಸತೀಶ್‌ ಬಾಬಣ್ಣ ಎಂಬಾತನು ಲೈಂಗಿಕ ದೌರ್ಜನ್ಯಕೀಡಾದ ಸಂತ್ರಸ್ತೆಯನ್ನು ಅಪಹರಿಸಿ, ಹುಣಸೂರಿನ ಕಾಳೇನಹಳ್ಳಿಯ ತೋಟದ ಮನೆಯಲ್ಲಿ ಇರಿಸಿದ್ದು, ಮಹಿಳೆಯನ್ನು ಎಸ್‌ಐಟಿ ಅಧಿಕಾರಿಗಳು ರಕ್ಷಿಸಿದ್ದಾರೆ. ಭದ್ರತೆ ದೃಷ್ಟಿಯಿಂದ ಮಹಿಳೆಯನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅವರು ತನಿಖಾಧಿಕಾರಿಗಳ ಎದುರು ಎಲ್ಲವನ್ನೂ ಹೇಳಲು ಆಗುತ್ತಿಲ್ಲ. ಇದರಿಂದಾಗಿ ಪ್ರಕರಣದಲ್ಲಿ ಮಹತ್ವದ ಪ್ರಗತಿ ಸಾಧಿಸಲು ಎಸ್‌ಐಟಿ ಅಧಿಕಾರಿಗಲು ಹೆಣಗಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸಂತ್ರಸ್ತೆಯನ್ನು ಅಪಹರಿಸಿ ಇರಿಸಲಾಗಿದ್ದ ಹುಣಸೂರಿನ ತೋಟದ ಮನೆ.

“ನಮ್ಮನ್ನೆಲ್ಲ ಅವರು ಸಾಯಿಸಿಬಿಡ್ತಾರೆ. ನನಗೆ ಭಯವಾಗುತ್ತಿದೆ” ಎಂದಷ್ಟೇ ಮಹಿಳೆಯು ಹೇಳುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಭದ್ರತೆ ಕುರಿತು ಎಷ್ಟು ಹೇಳಿದರೂ ಮಹಿಳೆಯು ಮಾನಸಿಕವಾಗಿ ಕುಗ್ಗಿದ್ದಾರೆ. ಅವರಿಗೆ ಎಚ್‌.ಡಿ.ರೇವಣ್ಣ ಕುಟುಂಬಸ್ಥರು ಏನಾದರೂ ಮಾಡಿಬಿಡುತ್ತಾರೆ ಎಂಬ ಭಯ ಕಾಡುತ್ತಿದೆ. ಇದರ ಬೆನ್ನಲ್ಲೇ, ಕೆ.ಆರ್‌.ನಗರ ಪೊಲೀಸ್‌ ಠಾಣೆಯಲ್ಲಿ ಅಪಹರಣದ ಕುರಿತು ಕೇಸ್‌ ದಾಖಲಿಸಿದ ಪುತ್ರನಿಗೂ ಜೀವ ಭಯ ಕಾಡುತ್ತಿದೆ ಎಂದು ಹೇಳಲಾಗುತ್ತಿದೆ. ಪ್ರಕರಣದಲ್ಲಿ ಮಹತ್ತರ ಮುನ್ನಡೆ ಸಾಧಿಸಲು ಎಸ್‌ಐಟಿ ಅಧಿಕಾರಿಗಳು ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ, ಸೂಕ್ತ ಭದ್ರತೆ ಒದಗಿಸುವ ಕುರಿತು ಭರವಸೆ ನೀಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜ್ವಲ್‌ ಶರಣಾಗತಿ?

“ಎಸ್‌ಐಟಿ ಅಧಿಕಾರಿಗಳು ಎಚ್‌.ಡಿ.ರೇವಣ್ಣ ಅವರನ್ನು ವಶಕ್ಕೆ ಪಡೆದಿದ್ದಾರೆ. ಕಾನೂನು ಪ್ರಕಾರ ಯಾವ ಪ್ರಕ್ರಿಯೆ ಅನುಸರಿಸಬೇಕೋ, ಅದೆಲ್ಲವನ್ನೂ ಅನುಸರಿಸಲಾಗುತ್ತದೆ. ಕಾನೂನು ಪ್ರಕಾರ ಅವರು ನಡೆದುಕೊಳ್ಳುತ್ತಾರೆ. ಇನ್ನು, ಪ್ರಜ್ವಲ್‌ ರೇವಣ್ಣ ಕೂಡ ಆಗಮಿಸಲಿದ್ದಾರೆ. ಅವರು ಪೊಲೀಸರಿಗೆ ಶರಣಾಗಲಿದ್ದಾರೆ” ಎಂಬುದಾಗಿ ಜೆಡಿಎಸ್‌ ನಾಯಕ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ಮಾಹಿತಿ ನೀಡಿದ್ದಾರೆ. ಆದರೆ, ಪ್ರಜ್ವಲ್‌ ರೇವಣ್ಣ ಯಾವಾಗ ಭಾರತಕ್ಕೆ ವಾಪಸಾಗಲಿದ್ದಾರೆ ಎಂಬುದರ ಕುರಿತು ಅವರು ಮಾಹಿತಿ ನೀಡಿಲ್ಲ.

ಇದನ್ನೂ ಓದಿ: HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

Continue Reading

Latest

IPL 2024 : ಪುತ್ರ ಅಕಾಯ್​ ಹುಟ್ಟಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ

IPL 2024: ನಟಿ ಇತ್ತೀಚೆಗೆ ತನ್ನ ಹುಟ್ಟುಹಬ್ಬವನ್ನು ವಿರಾಟ್ ಮತ್ತು ಅವರ ಸಹ ಆರ್​​ಸಿಬಿ ಆಟಗಾರರೊಂದಿಗೆ ಆಚರಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಫಾಫ್ ಡು ಪ್ಲೆಸಿಸ್ ಹಂಚಿಕೊಂಡಿರುವ ಫೋಟೋದಲ್ಲಿ ಅನುಷ್ಕಾ ಶರ್ಮಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.

VISTARANEWS.COM


on

IPL 2024
Koo

ಬೆಂಗಳೂರು: ವಿರಾಟ್​ ಕೊಹ್ಲಿಯ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ತಮ್ಮ ಮಗ ಅಕಾಯ್ ಕೊಹ್ಲಿ (AkaI kohli) ಜನಿಸಿದ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ನಡುವಿನ ಐಪಿಎಲ್​ (IPL 2024) ಪಂದ್ಯದ ವೇಳೆ ಗ್ಯಾಲರಿಯಲ್ಲಿದ್ದ ಅನುಷ್ಕಾ ತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯ ನಡೆದಿದ್ದು, ಆರ್​ಸಿಬಿ ಗುಜರಾತ್​ ತಂಡವನ್ನು ಎದುರಿಸುತ್ತಿದೆ.

ನಟಿ ಸ್ಟ್ಯಾಂಡ್ ಗಳಲ್ಲಿ ಕುಳಿತಿರುವ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ತನ್ನ ಪತಿ ಆಡುವುದನ್ನು ನೀಡಿ ಅವರು ನಗುತ್ತಿರುವುದನ್ನು ಕಾಣಬಹುದು.

ನಟಿ ಇತ್ತೀಚೆಗೆ ತನ್ನ ಹುಟ್ಟುಹಬ್ಬವನ್ನು ವಿರಾಟ್ ಮತ್ತು ಅವರ ಸಹ ಆರ್​​ಸಿಬಿ ಆಟಗಾರರೊಂದಿಗೆ ಆಚರಿಸಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಟಾರ್ ಫಾಫ್ ಡು ಪ್ಲೆಸಿಸ್ ಹಂಚಿಕೊಂಡಿರುವ ಫೋಟೋದಲ್ಲಿ ಅನುಷ್ಕಾ ಶರ್ಮಾ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ನಟಿ ಮೇ 1ರಂದು ಬುಧವಾರ ತನ್ನ 36 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಅನುಷ್ಕಾ ತನ್ನ ಹುಟ್ಟುಹಬ್ಬದಂದು ಬೆಂಗಳೂರಿನಲ್ಲಿದ್ದರು ಮತ್ತು ಆತ್ಮೀಯ ಪಾರ್ಟಿ ಆಯೋಜಿಸಿದ್ದರು ಎಂದು ಕ್ರಿಕೆಟಿಗರು ಬಹಿರಂಗಪಡಿಸಿದ್ದರು.

ಅನುಷ್ಕಾ ಅವರ ಹುಟ್ಟುಹಬ್ಬದಂದು, ವಿರಾಟ್ ತಮ್ಮ ಇನ್ಸ್ಟಾಗ್ರಾಮ್ ಹ್ಯಾಂಡಲ್​ನಲ್ಲಿ ತಮ್ಮ ಹೆಂಡತಿಯ ಮುದ್ದಾದ ಫೋಟೋಗಳನ್ನು ಹಂಚಿಕೊಂಡಿದ್ದರು. ಅವರ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಟಿಪ್ಪಣಿಯನ್ನು ಬರೆದಿದ್ದರು. “ನಿನು ನನಗೆ ಸಿಗದಿದ್ದರೆ ನಾನು ಸಂಪೂರ್ಣವಾಗಿ ಕಳೆದುಹೋಗುತ್ತಿದ್ದೆ. ಹುಟ್ಟುಹಬ್ಬದ ಶುಭಾಶಯಗಳು” ಎಂದು ಬರೆದು ಕೆಂಪು ಹೃದಯದ ಎಮೋಜಿಗಳನ್ನು ಹಾಕಿದ್ದರು.

ಇದನ್ನೂ ಓದಿ: IPL 2024 : ಭಾರೀ ಭದ್ರತಾ ಲೋಪ; ಎಸ್​ಆರ್​​ಎಚ್​ ವಿದೇಶಿ ಆಟಗಾರನ ಮೇಲೆ ಮುಗಿಬಿದ್ದ ಸಾರ್ವಜನಿಕರು!

ವಿರಾಟ್ ಮತ್ತು ಅನುಷ್ಕಾ 2013 ರಲ್ಲಿ ಶಾಂಪೂ ಬ್ರಾಂಡ್​ನ ಜಾಹೀರಾತಿನ ಚಿತ್ರೀಕರಣಕ್ಕಾಗಿ ಮೊದಲ ಬಾರಿಗೆ ಭೇಟಿಯಾಗಿದ್ದರು. ಅವರು 2017 ರಲ್ಲಿ ಇಟಲಿಯ ಟಸ್ಕನಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮದುವೆಯಾಗಿದ್ದರು. 2021 ರಲ್ಲಿ, ಅವರು ತಮ್ಮ ಮೊದಲ ಮಗು ವಮಿಕಾಳನ್ನು ಸ್ವಾಗತಿಸಿದ್ದರು. ಈ ವರ್ಷದ ಆರಂಭದಲ್ಲಿ ಅನುಷ್ಕಾ ಮತ್ತು ವಿರಾಟ್ ತಮ್ಮ ಎರಡನೇ ಮಗು ಅಕಾಯ್​​ ಕೊಹ್ಲಿಯ ಆಗಮನವನ್ನು ಘೋಷಿಸಿದ್ದರು.

ಅನುಷ್ಕಾ ಶರ್ಮಾ ಮುಂದಿನ ಚಿತ್ರ ಚಕ್ಡಾ ಎಕ್ಸ್​ಪ್ರೆಸ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಕ್ಡಾ ಎಕ್ಸ್​​ಪ್ರೆಸ್​ ಕ್ರಿಕೆಟಿಗ ಜೂಲನ್ ಗೋಸ್ವಾಮಿ ಅವರ ಜೀವನಾಧಾರಿತ ಚಿತ್ರ. ಈ ಚಿತ್ರವು ಸುಮಾರು ೪ ವರ್ಷಗಳ ನಂತರ ಅವರು ಚಲನಚಿತ್ರಕ್ಕೆ ಮರಳಿದ್ದಾರೆ. ಅವರು ಕೊನೆಯ ಬಾರಿಗೆ ಶಾರುಖ್ ಖಾನ್ ಮತ್ತು ಕತ್ರಿನಾ ಕೈಫ್ ಅವರೊಂದಿಗೆ ಝೀರೋ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು.

Continue Reading

ಪ್ರಮುಖ ಸುದ್ದಿ

Paytm : ಪೇಟಿಎಂ ಸಿಒಒ ಭವೇಶ್ ಗುಪ್ತಾ ಏಕಾಏಕಿ ರಾಜೀನಾಮೆ

Paytm: ಪೇಟಿಎಂ ಮನಿ ಮುಖ್ಯಸ್ಥರಾಗಿದ್ದ ವರುಣ್ ಶ್ರೀಧರ್ ಅವರನ್ನು ಮ್ಯೂಚುವಲ್ ಫಂಡ್ ಮತ್ತು ಇತರ ಸಂಪತ್ತು ನಿರ್ವಹಣಾ ಉತ್ಪನ್ನಗಳ ವಿತರಣೆಯಲ್ಲಿ ವ್ಯವಹರಿಸುವ ಪೇಟಿಎಂ ಸರ್ವೀಸಸ್ ನ ಸಿಇಒ ಆಗಿ ಕಂಪನಿಯು ವರ್ಗಾಯಿಸಿದೆ.

VISTARANEWS.COM


on

Paytm
Koo

ನವದೆಹಲಿ: ಪೇಟಿಎಂನ (Paytm) ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ಕಂಪನಿಗೆ ರಾಜೀನಾಮೆ ನೀಡಿದ್ದಾರೆ ಎಂದು ಕಂಪನಿಯ ಅಧಿಕೃತ ಹೇಳಿಕೆ ಶನಿವಾರ ತಿಳಿಸಿದೆ. ನಾಯಕತ್ವ ಬದಲಾವಣೆಯ ಭಾಗವಾಗಿ, ಫಿನ್ಟೆಕ್ ಸಂಸ್ಥೆ ಪೇಟಿಎಂ ರಾಕೇಶ್ ಸಿಂಗ್ ಅವರನ್ನು ಪೇಟಿಎಂ ಮನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿದೆ.

ಪೇಟಿಎಂ ಮನಿ ಮುಖ್ಯಸ್ಥರಾಗಿದ್ದ ವರುಣ್ ಶ್ರೀಧರ್ ಅವರನ್ನು ಮ್ಯೂಚುವಲ್ ಫಂಡ್ ಮತ್ತು ಇತರ ಸಂಪತ್ತು ನಿರ್ವಹಣಾ ಉತ್ಪನ್ನಗಳ ವಿತರಣೆಯಲ್ಲಿ ವ್ಯವಹರಿಸುವ ಪೇಟಿಎಂ ಸರ್ವೀಸಸ್ ನ ಸಿಇಒ ಆಗಿ ವರ್ಗಾಯಿಸಲಾಗಿದೆ.

ಪಾವತಿ ಮತ್ತು ಸಾಲ ನೀಡುವ ವ್ಯವಹಾರಗಳ ಮೇಲ್ವಿಚಾರಣೆ ನಡೆಸುತ್ತಿದ್ದ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ವೈಯಕ್ತಿಕ ಕಾರಣಗಳಿಂದಾಗಿ ವೃತ್ತಿ ವಿರಾಮ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ. ಅವರು ಸಲಹಾ ಪಾತ್ರಕ್ಕೆ ಪರಿವರ್ತನೆಗೊಳ್ಳಲಿದ್ದು ವರ್ಷದ ಅಂತ್ಯದವರೆಗೆ ಪೇಟಿಎಂನ ಬೆಳವಣಿಗೆಯ ಉಪಕ್ರಮಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Lok Sabha Election : ಚುನಾವಣೆ ಖರ್ಚಿಗೆ ಹಣ ಕೊಡದ್ದಕ್ಕೆ ಟಿಕೆಟ್​ ವಾಪಸ್​ ಕೊಟ್ಟ ಕಾಂಗ್ರೆಸ್​ ಅಭ್ಯರ್ಥಿ!

ಕಂಪನಿಯ ನಿರ್ದೇಶಕರ ಮಂಡಳಿಯು ಮೇ 04, 2024 ರಂದು ನಡೆದ ಸಭೆಯಲ್ಲಿ ಕಂಪನಿಯ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ಮೇ 04, 2024 ರ ಪತ್ರದ ಮೂಲಕ ಸಲ್ಲಿಸಿದ ರಾಜೀನಾಮೆಯನ್ನು ಪುರಸ್ಕರಿಸಿದೆ. ಮೇ 31, 2024 ರಂದು ವ್ಯವಹಾರದ ಸಮಯ ಮುಗಿಯುವುದರಿಂದ ಅವರನ್ನು ಕಂಪನಿಯ ಸೇವೆಗಳಿಂದ ಮುಕ್ತಗೊಳಿಸಲಾಗುವುದು ಎಂದು ಪೇಟಿಎಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಪೇಟಿಎಂ ಸ್ಥಾಪಕ ಮತ್ತು ಸಿಇಒ ವಿಜಯ್ ಶೇಖರ್ ಶರ್ಮಾ ಈ ಕುರತು ಪ್ರತಿಕ್ರಿಯಿಸಿ, ಭವೇಶ್ ಅವರ ಕೊಡುಗೆಗಳಿಗಾಗಿ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಪಾವತಿಗಳು ಮತ್ತು ಸಾಲ ನೀಡುವಿಕೆಯ ಮೇಲೆ ನಮ್ಮ ಗಮನವು ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಮತ್ತು ನಮ್ಮ ಯೋಜನೆಗಳನ್ನು ಕಾರ್ಯಗತಗೊಳಿಸಲು ನಮ್ಮ ಪ್ರತಿಯೊಂದು ವ್ಯವಹಾರಗಳಲ್ಲಿ ನಾವು ಹೊಂದಿರುವ ಅನುಭವಿ ನಾಯಕರೊಂದಿಗೆ ನಾನು ಕೆಲಸ ಮುಂದುವರಿಸಲಿದ್ದೇವೆ ಎಂದು ಹೇಳಿದರು.

Continue Reading
Advertisement
Virat kohli
ಕ್ರೀಡೆ10 mins ago

Virat kohli : ಸಿಕ್ಸರ್ ಹೊಡೆದು ಕಿಂಗ್​ ಥರ ಪೋಸ್​​ ಕೊಟ್ಟ ಕೊಹ್ಲಿ, ಇಲ್ಲಿದೆ ವಿಡಿಯೊ

Prajwal Revanna Case
ಕರ್ನಾಟಕ32 mins ago

Prajwal Revanna Case: ನನ್ನ ಸಾಯಿಸ್ತಾರೆ; ಪ್ರಜ್ವಲ್‌ ವಿದೇಶದಲ್ಲಿದ್ದರೂ ಸಂತ್ರಸ್ತೆಗೆ ಭಯ, ಪೊಲೀಸರಿಗೂ ಮಾಹಿತಿ ನೀಡಲು ಹಿಂಜರಿಕೆ!

Bangalore To Belagavi Train
ಕರ್ನಾಟಕ36 mins ago

Bangalore To Belagavi Train: ಮೇ 6ರಂದು ಬೆಂಗಳೂರು-ಬೆಳಗಾವಿ ವಿಶೇಷ ರೈಲು ಸಂಚಾರ

IPL 2024
Latest40 mins ago

IPL 2024 : ಪುತ್ರ ಅಕಾಯ್​ ಹುಟ್ಟಿದ ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ

Jai Shri Ram Slogan
ಕರ್ನಾಟಕ2 hours ago

Jai Shri Ram Slogan: ಜೈ ಶ್ರೀರಾಮ್ ಘೋಷಣೆ ಕೂಗಿದ್ರೆ ಬೂಟುಗಾಲಲ್ಲಿ ಒದೆಯಿರಿ ಎಂದಿದ್ದ ಕೈ ಮುಖಂಡ ಅಮಾನತು

Paytm
ಪ್ರಮುಖ ಸುದ್ದಿ2 hours ago

Paytm : ಪೇಟಿಎಂ ಸಿಒಒ ಭವೇಶ್ ಗುಪ್ತಾ ಏಕಾಏಕಿ ರಾಜೀನಾಮೆ

Ballari DC Prashanth kumar Mishra pressmeet about MLC election
ಬಳ್ಳಾರಿ2 hours ago

MLC Election: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ; ಮೇ 9ಕ್ಕೆ ಅಧಿಸೂಚನೆ ಪ್ರಕಟ

HD Revanna
ಕರ್ನಾಟಕ2 hours ago

HD Revanna: ಫಲಿಸಲಿಲ್ಲ ಜ್ಯೋತಿಷಿ ಭವಿಷ್ಯ, ಹೋಮ; ರೇವಣ್ಣರನ್ನು ‘ನಿಂಬೆಹಣ್ಣೂ’ ಕಾಪಾಡಲಿಲ್ಲ!

IPL 2024
Latest2 hours ago

IPL 2024 : ಭಾರೀ ಭದ್ರತಾ ಲೋಪ; ಎಸ್​ಆರ್​​ಎಚ್​ ವಿದೇಶಿ ಆಟಗಾರನ ಮೇಲೆ ಮುಗಿಬಿದ್ದ ಸಾರ್ವಜನಿಕರು!

Ballari DC Prashanth kumar Mishra pressmeet about lok sabha election
ಬಳ್ಳಾರಿ2 hours ago

Lok Sabha Election 2024: ಪಾರದರ್ಶಕ ಚುನಾವಣೆಗೆ ಬಳ್ಳಾರಿ ಜಿಲ್ಲಾಡಳಿತ ಸಜ್ಜು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ18 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ1 day ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ2 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ3 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ5 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ6 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌