Lok Sabha Election: ಸೌಮ್ಯಾರೆಡ್ಡಿ ಪರ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಭರ್ಜರಿ ಪ್ರಚಾರ; ತೆಲುಗು ಭಾಷಿಕರನ್ನು ಸೆಳೆಯಲು ಕ್ಯಾಂಪೇನ್ - Vistara News

ಪ್ರಮುಖ ಸುದ್ದಿ

Lok Sabha Election: ಸೌಮ್ಯಾರೆಡ್ಡಿ ಪರ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಭರ್ಜರಿ ಪ್ರಚಾರ; ತೆಲುಗು ಭಾಷಿಕರನ್ನು ಸೆಳೆಯಲು ಕ್ಯಾಂಪೇನ್

Lok Sabha Election: ಬೆಂಗಳೂರಿನಲ್ಲಿ ತೆಲುಗು ಭಾಷಿಕರು ಮತ್ತು ರೆಡ್ಡಿ ಮತ ಸೆಳೆಯಲು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅಖಾಡಕ್ಕೆ ಇಳಿದಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಪರ ಶನಿವಾರ ಪ್ರಚಾರ ನಡೆಸಿದರು.

VISTARANEWS.COM


on

Lok Sabha Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಗರದ ಹೊರವಲಯದ ಬೊಮ್ಮನಹಳ್ಳಿಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾರೆಡ್ಡಿ ಪರ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಭರ್ಜರಿ ಪ್ರಚಾರ ನಡೆಸಿದರು. ಹೊಂಗಸಂದ್ರ ವಾರ್ಡ್ ವ್ಯಾಪ್ತಿಯಲ್ಲಿ ಹೆಚ್ಚು ತೆಲುಗು ಭಾಷಿಕರು ವಾಸವಾಗಿರುವ ಹಿನ್ನೆಲೆಯಲ್ಲಿ ರೇವಂತ್ ರೆಡ್ಡಿ ಪ್ರಚಾರ ಮಾಡಿದರು.

ತೆಲುಗು ಭಾಷಿಕರು ಮತ್ತು ರೆಡ್ಡಿ ಮತ ಸೆಳೆಯಲು ರೇವಂತ್ ರೆಡ್ಡಿ ಅಖಾಡಕ್ಕೆ ಇಳಿದಿದ್ದು, ಅವರಿಗೆ ರೆಡ್ಡಿಗೆ ಸಚಿವ ರಾಮಲಿಂಗಾರೆಡ್ಡಿ, ಅಭ್ಯರ್ಥಿ ಸೌಮ್ಯಾರೆಡ್ಡಿ, ಶಿವಾಜಿನಗರ ಶಾಸಕ ರಿಜ್ವಾನ್ ಹರ್ಷದ್, ಕಾಂಗ್ರೆಸ್ ಮುಖಂಡ ಉಮಾಪತಿ ಶ್ರೀನಿವಾಸ್ ಗೌಡ ಸಾಥ್ ನೀಡಿದರು.

ಪ್ರಚಾರದ ವೇಳೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮಾತನಾಡಿ, ಬೆಂಗಳೂರು ದಕ್ಷಿಣದಲ್ಲಿ ಸೌಮ್ಯಾರೆಡ್ಡಿ ಗೆಲ್ಲಿಸಲು ಕಾಂಗ್ರೆಸ್ ಹೈಕಮಾಂಡ್ ನನ್ನನ್ನು ಕಳುಹಿಸಿದೆ. ಇಲ್ಲಿ ಇಷ್ಟೊಂದು ತೆಲುಗು ಭಾಷಿಕರು ಇದ್ದಾರೆ ಎಂದು ನನಗೆ ಗೊತ್ತಿಲ್ಲ. ಆಂಧ್ರಪ್ರದೇಶದದಿಂದ ಬಂದು ಇಲ್ಲಿ ಜೀವನ ನಡೆಸುತ್ತಿರುವ ನಿಮಗೆ ಅಭಿನಂದನೆ. ಬೆಂಗಳೂರು ಮಹಾನಗರದಲ್ಲಿ ನೀವು ಲಕ್ಷಾಂತರ ಮಂದಿ ನೆಮ್ಮದಿಯಾಗಿ ಜೀವಿಸಲು, ರಾಜೀವ್ ಗಾಂಧಿ ಅವರು ಮಾಡಿದ ಕಂಪ್ಯೂಟರ್ ಕ್ರಾಂತಿ ಕಾರಣ. ಹಾಗಾಗಿ ಇಲ್ಲಿಗೆ ಬಂದು ಉದ್ಯೋಗ ಮಾಡುತ್ತಿದ್ದೀರಾ ಎಂದರು.

ನನ್ನನ್ನು ಜೈಲಿಗೆ ಕಳುಹಿಸಿದರು, ಆದ್ರೆ ತೆಲಂಗಾಣ ಜನ ನನ್ನ ಸಿಎಂ ಮಾಡಿದ್ರು. ಕರ್ನಾಟಕದಲ್ಲಿ ಕೂಡ ಡಿಕೆಶಿಯನ್ನು ಜೈಲಿಗೆ ಕಳುಹಿಸಿದ್ರು, ಕರ್ನಾಟಕ ಜನರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ರು. ಲೋಕಸಭಾ ಚುನಾವಣೆಯಲ್ಲಿ 400 ಸೀಟ್ ಗೆಲುತ್ತೇನೆ ಅಂತ ಮೋದಿ ಹೇಳ್ತಾರೆ. ಆದ್ರೆ ಕರ್ನಾಟಕದಲ್ಲಿ ದೇವೇಗೌಡ, ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು, ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಕಾಲು ಹಿಡಿಯೋದು ಯಾಕೆ? ಕರ್ನಾಟಕ ಮತ್ತು ತೆಲಂಗಾಣದಲ್ಲಿ 70 ಮಂದಿ ಗೆಲ್ಲಿಸಿ ಕಳುಹಿಸಿದರೆ ಕೇವಲ ಇಬ್ಬರಿಗೆ ಮಾತ್ರ ಸಚಿವ ಸ್ಥಾನ. ಗುಜರಾತ್‌ನಲ್ಲಿ ಏಳು, ಉತ್ತರಪ್ರದೇಶಕ್ಕೆ ಹನ್ನೆರಡು ಮಂತ್ರಿ ಸ್ಥಾನ ನೀಡಿದ್ದಾರೆ. ದಕ್ಷಿಣ ರಾಜ್ಯಗಳ ಸಮಸ್ಯೆ ಬಗ್ಗೆ ಮೋದಿ ಸರ್ಕಾರಕ್ಕೆ ತಾತ್ಸಾರ ಮನೋಭಾವ ಇದೆ ಎಂದು ಕಿಡಿಕಾರಿದರು.

ಇದನ್ನೂ ಓದಿ | Modi in Karnataka: ಪ್ರಧಾನಿ ಮೋದಿ ತೆರಳುವಾಗ ಚೆಂಬು ಪ್ರದರ್ಶನ; ನಲಪಾಡ್‌ ಸೇರಿ ಹಲವರು ವಶಕ್ಕೆ

ದಾರಿ ತಪ್ಪಿದ್ದಾರೆ ಎಂದ ಕುಮಾರಸ್ವಾಮಿಗೆ ಹೆಣ್ಣು ಮಕ್ಕಳು ತಕ್ಕ ಉತ್ತರ ಕೊಡಬೇಕು: ಡಿಕೆಶಿ

Lok Sabha Election 2024

ಮೈಸೂರು: ಕುಮಾರಸ್ವಾಮಿ ಗ್ಯಾರಂಟಿ ಯೋಜನೆಯಿಂದ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಅಂತ ಹೇಳಿದ್ದಾರೆ. ಏನ್ರವ್ವ ನೀವು ದಾರಿ ತಪ್ಪಿದ್ದೀರಾ? ಹೆಣ್ಣು ಮಕ್ಕಳು ದೇವಸ್ಥಾನಕ್ಕೆ ಹೋಗಲಿ, ನೆಂಟರ ಮನೆಗೆ ಹೋಗಲಿ ಅಂತ ಬಸ್ ಫ್ರೀ ಮಾಡಿದ್ದೀವಿ. ದಾರಿ ತಪ್ಪಿದ್ದಾರೆ ಅಂದ ಕುಮಾರಸ್ವಾಮಿಗೆ ಹೆಣ್ಣು ಮಕ್ಕಳು ತಕ್ಕ ಉತ್ತರ ಕೊಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕರೆ ನೀಡಿದರು.

ಮಂಡ್ಯ ಲೋಕಸಭಾ ಕ್ಷೇತ್ರದ ಕೆ.ಆರ್. ನಗರದ ರೇಡಿಯೋ ಮೈದಾನದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಸಮಾವೇಶದಲ್ಲಿ ಮಾತನಾಡಿದ ಅವರು, ನನಗೆ ಗಂಡಸರ ಮೇಲೆ ನಂಬಿಕೆ ಇಲ್ಲ. ಆದ್ದರಿಂದಲೇ ಹೆಣ್ಣು ಮಕ್ಕಳಿಗೆ ಗ್ಯಾರಂಟಿ ಕೊಟ್ಟಿದ್ದೇವೆ.‌ ಬೇರು ಇಲ್ಲ ಅಂದ್ರೆ ಮರ ಉಳಿಯಲ್ಲ. ನಂಬಿಕೆ ಇಲ್ಲ ಅಂದ್ರೆ ಸಂಬಂಧ ಇರೋದಿಲ್ಲ. ಆದ್ದರಿಂದಲೇ ನಾನು, ಸಿಎಂ ಸಿದ್ದರಾಮಯ್ಯ ಬಂದಿದ್ದೇವೆ. ನಮ್ಮ ನಿಮ್ಮ ವಿಶ್ವಾಸ ಮುಖ್ಯ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಜಾತಿ, ಧರ್ಮದ ಮೇಲೆ ನಮ್ಮ ಪಕ್ಷ ನಿಂತಿಲ್ಲ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್, ದೇವರಾಜ ಅರಸು, ಸಿದ್ದರಾಮಯ್ಯ ಹೀಗೆ ಯಾವುದೇ ಅವಧಿ ತೆಗೆದುಕೊಳ್ಳಿ. ಜನರ ಪರವಾಗಿ ಕಾಂಗ್ರೆಸ್ (Lok Sabha Election 2024) ಕೆಲಸ ಮಾಡಿದೆ. ಬಿಜೆಪಿ – ಜೆಡಿಎಸ್ ಭಾವನೆ ಮೇಲೆ ಹೊರಟಿದ್ದಾರೆ. ನಾವು ಬದುಕಿನ ಮೇಲೆ ಹೊರಟಿದ್ದೇವೆ ಎಂದು ಹೇಳಿದರು.

ಸಾ‌.ರಾ. ಮಹೇಶ್, ಪುಟ್ಟರಾಜು, ಡಿ.ಸಿ. ತಮ್ಮಣ್ಣಗೊಂದು ಚಾಕ್ಲೆಟು ಎಂದು ವ್ಯಂಗ್ಯವಾಡಿದ ಅವರು, ಕುಮಾರಸ್ವಾಮಿ ಮಂಡ್ಯಕ್ಕೆ ಬಂದು ಅಭ್ಯರ್ಥಿ ಆಗಿದ್ದಾರೆ. ಯಾಕ್ ಸ್ವಾಮಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಇರಲಿಲ್ವೇ? ನೀವು ಗೆದ್ದಿರುವ ರಾಮನಗರ ವ್ಯಾಪ್ತಿಯಲ್ಲೇ ಯಾಕೆ ನಿಲ್ಲಲಿಲ್ಲ. ನಿಮ್ಮ ತಂದೆ ಎಲ್ಲಿಂದ ಪ್ರಧಾನಿಯಾದರು. ನಿಮ್ಮ ಧರ್ಮಪತ್ನಿ ಗೆದ್ದಿದ್ರು ಆ ಕ್ಷೇತ್ರ ಬಿಟ್ಟು ಇಲ್ಲಿಗೆ ಯಾಕೆ ಬಂದಿದ್ದೀರಿ. ಇದು ಸ್ವಾಭಿಮಾನದ ಪ್ರಶ್ನೆ ಎಂದರು.

ಜೆಡಿಎಸ್ ನಾಯಕರ ವಿರುದ್ಧ ನಾಲಿಗೆ ಹರಿಬಿಟ್ಟ ಡಿಸಿಎಂ ಡಿ.ಕೆ.ಶಿವಕುಮಾರ್, ಟೀಕೆ ಭರದಲ್ಲಿ ಅಶ್ಲೀಲ ಪದಗಳ ಬಳಕೆ ಮಾಡಿದರು. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ರು. ಜನರಿಗೆ ಏನ್ ಮಾಡಿದ್ರು? ಮಿಸ್ಟರ್ ಕುಮಾರಸ್ವಾಮಿ ಏನಾಗಿತ್ತು ನಿಂಗೆ? ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ ಅವರು, ಸಾ.ರಾ.ಮಹೇಶ್ ಸೋತಿದ್ದಾನೆ. ಸೋತಿರೋದಕ್ಕೆ ಏನೇನೋ ಮಾತಾಡ್ತಾನೆ. ಅದಕ್ಕೆಲ್ಲ ನೀನು ತಲೆ ಕೆಡಿಸಿಕೊಳ್ಳಬೇಡ. ಇಂಥವು ಹುಟ್ಟೋವು ಎಷ್ಟೋ ಉದುರೋವು ಎಷ್ಟೋ… ಎಂದು ಶಾಸಕ ಡಿ.ರವಿಶಂಕರ್ ಉದ್ದೇಶಿಸಿ ಮಾತನಾಡಿದರು.

ಇದನ್ನೂ ಓದಿ | Neha Murder Case: ನೇಹಾ ಕೊಲೆ ಪ್ರಕರಣ ರಾಜಕೀಯಕ್ಕೆ ಬಳಕೆ; ಕೊಲೆಗಾರನಿಗೆ ಉಗ್ರ ಶಿಕ್ಷೆ ಎಂದ ಸಿದ್ದರಾಮಯ್ಯ

ನನ್ನ ವಿರುದ್ಧ ಕೇಂದ್ರದವರೂ ತನಿಖೆ ಮಾಡುತ್ತಿದ್ದಾರೆ. ನೀನೂ ತನಿಖೆ ಮಾಡಿಸುತ್ತಿದ್ದೀಯ, ಮಾಡ್ಸು ಎಂದು ಏಕವನಚದಲ್ಲೇ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮೊದ್ಲು ಬಿಜೆಪಿ ಜೆಡಿಎಸ್ ಎ ಟೀಂ, ಬಿ ಟೀಂ ಅಂತ ಇತ್ತು. ಇವಾಗ ಇಬ್ಬರದ್ದು ಪಾರ್ಟನರ್‌ಶಿಪ್. ಬಿಜೆಪಿ ಪಕ್ಷದಿಂದ ದೂರ ಇರಲಿ ಅಂತ 38 ಸ್ಥಾನ ಪಡೆದಿದ್ದ ನಿಮಗೆ 80 ಸ್ಥಾನ ಇದ್ದ ನಾವು ಅಧಿಕಾರ ಕೊಟ್ಟೆವು. ನಾವೇನು ನಿಮ್ಮ ಬೆನ್ನಿಗೆ ಚಾಕು ಹಾಕಲು ಬಂದಿದ್ವಾ? ಅಸೆಂಬ್ಲಿಗೆ ಬನ್ನಿ ಮಾತಾಡೊಣ ಅಂತ ಹೇಳಿದ್ದೀನಿ. ನಮ್ಮ ಭೂಮಿಯಲ್ಲಿ ನಾವು ಕೆಲಸ ಮಾಡಿದ್ರೆ ನಿಮಗೇನು ಉರಿ? ಕಲ್ ಹೊಡೆದಿದ್ದು, ಮಣ್ಣು ಹೊಡೆದಿದ್ದು ಎಲ್ಲಾ ತನಿಖೆ ಮಾಡಿಸ್ದಲ್ಲಪ್ಪ. ನೀನೂ ತನಿಖೆ ಮಾಡಿಸ್ದೆ, ಡೆಲ್ಲಿಲೂ ಮಾಡ್ತಿದ್ದಾರಲ್ಲ.. ಈಗೆ ಜೆಡಿಎಸ್ ಜತೆಗೆ ಬಿಜೆಪಿಯವರೂ ಸೇರಿಕೊಂಡಿದ್ದಾರೆ. ಇವರು ಸೇರಿ ಜನರಿಗೆ ಕೊಟ್ಟಿದ್ದು ಏನು ಅಂತ ಜನರ ಮುಂದೆ ಹೇಳಲಿ ಎಂದು ಕಿಡಿಕಾರಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

MLC Election: ವಿಧಾನ ಪರಿಷತ್‌ ಚುನಾವಣೆ; ಸಿ.ಟಿ.ರವಿ, ಎನ್.ರವಿಕುಮಾರ್‌ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

MLC Election: ವಿಧಾನಪರಿಷತ್‌ ಚುನಾವಣೆಗೆ ಮಾಜಿ ಸಚಿವ ಸಿ.ಟಿ.ರವಿ, ಎಂಎಲ್‌ಸಿ ಎನ್‌.ರವಿಕುಮಾರ್‌ ಹಾಗೂ ಮಾಜಿ ಶಾಸಕ ಎಂ.ಜಿ.ಮುಳೆ ಅವರನ್ನು ಬಿಜೆಪಿ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.

VISTARANEWS.COM


on

MLC Election
Koo

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್‌ಗೆ (MLC Election) ನಡೆಯವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್‌ 3 ಕೊನೆಯ ದಿನವಾಗಿದೆ. ಹೀಗಾಗಿ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಮಾಜಿ ಸಚಿವ ಸಿ.ಟಿ.ರವಿ, ಎಂಎಲ್‌ಸಿ ಎನ್‌.ರವಿಕುಮಾರ್‌ ಹಾಗೂ ಮಾಜಿ ಶಾಸಕ ಎಂ.ಜಿ.ಮುಳೆ ಅವರನ್ನು ಬಿಜೆಪಿ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ.

ಒಟ್ಟು 11 ಕ್ಷೇತ್ರಗಳ ಪೈಕಿ ಬಿಜೆಪಿ ಸಂಖ್ಯಾಬಲದ ಆಧಾರದ ಮೇಲೆ ಮೂರು ಸ್ಥಾನಗಳಲ್ಲಿ ಮಾತ್ರ ಗೆಲ್ಲಲು ಸಾಧ್ಯವಿದೆ. ಹೀಗಾಗಿ ಮೂರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಎನ್​. ರವಿ ಕುಮಾರ್ ಅವರಿಗೆ ಮತ್ತೊಮ್ಮೆ ಅವಕಾಶ ಸಿಕ್ಕಿದೆ. ಇನ್ನು ಲೋಕಸಭೆ ಚುನಾವಣೆಯಲ್ಲಿ ಚಿಕ್ಕಮಗಳೂರು ಟಿಕೆಟ್ ಆಕಾಂಕ್ಷಿಯಾಗಿದ್ದ ಸಿ.ಟಿ. ರವಿ ಅವರಿಗೆ ಪರಿಷತ್‌ ಟಿಕೆಟ್‌ ಒಲಿದಿದೆ. ಆದರೆ, ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಮಂಡ್ಯ ಲೋಕಸಭಾ ಟಿಕೆಟ್‌ ತ್ಯಾಗ ಮಾಡಿದ್ದ ಸುಮಲತಾ ಅಂಬರೀಶ್​ಗೆ ಅವಕಾಶ ಸಿಕ್ಕಿಲ್ಲ.

ಇನ್ನು ಮಾಜಿ ಶಾಸಕ ಎಂ.ಜಿ ಮುಳೆ ಅವರು ಮರಾಠ ಸಮುದಾಯದ ಪ್ರಭಾವಿ ನಾಯಕರಾಗಿದ್ದು, ಈ ಮೊದಲು ಜೆಡಿಎಸ್‌ನಲ್ಲಿ ಶಾಸಕರಾಗಿದ್ದರು. ಕಳೆದ ಬಾರಿ ಬಸವಕಲ್ಯಾಣ ಉಪಚುನಾವಣೆ ವೇಳೆ ಬಿಜೆಪಿ ಸೇರ್ಪಡೆಗೊಂಡಿದ್ದರು. ಇದೀಗ ಅವರಿಗೆ ಬಿಜೆಪಿ ಪರಿಷತ್ ಟಿಕೆಟ್‌ ಸಿಕ್ಕಿದೆ.

ಹೈಕಮಾಂಡ್‌ ನಾಯಕರಿಗೆ ಸಿ.ಟಿ.ರವಿ ಧನ್ಯವಾದ

ಇದನ್ನೂ ಓದಿ | Exit poll 2024: ಮೂರು ಎಕ್ಸಿಟ್ ಪೋಲ್ ಪ್ರಕಾರ ಬಿಜೆಪಿ ಸೀಟು 400 ದಾಟಲಿದೆ!

ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ಮಾಜಿ ಸಚಿವ ಸಿ.ಟಿ.ರವಿ ಅವರು ಹೈಕಮಾಂಡ್‌ ನಾಯಕರಿಗೆ ಧನ್ಯವಾದ ತಿಳಿಸಿದ್ದಾರೆ. ಕರ್ನಾಟಕ ವಿಧಾನಪರಿಷತ್ತಿನ ದೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಕ್ಕೆ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಗಳಾದ ಬಿ.ಎಲ್‌.ಸತೋಷ್, ,ಕೇಂದ್ರ ಗೃಹ ಸಚಿವರಾದ ಅಮಿತ್‌ ಶಾ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್‌.ಯಡಿಯೂರಪ್ಪ, ರಾಜ್ಯ ಕೋರ್ ಕಮಿಟಿಯ ಎಲ್ಲಾ ನನ್ನ ಸಹೋದ್ಯೋಗಿ ಬಂಧುಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ಹಾಗೆಯೇ ವಿಧಾನಪರಿಷತ್ತಿಗೆ ಅಭ್ಯರ್ಥಿಗಳಾಗಿ ಆಯ್ಕೆಯಾದ‌ ಎನ್‌. ರವಿಕುಮಾರ್ ಹಾಗೂ ಎಂ.ಜಿ. ಮೂಳೆಯವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Udupi Pocso case: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಕೇಸ್‌; 8-9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!

Udupi Pocso case: ವಿದ್ಯಾರ್ಥಿನಿಯರ ಮೇಲೆ ಯುವ ಉದ್ಯಮಿ ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೊ ಮಾಡಿಕೊಳ್ಳುತ್ತಿದ್ದ. ಈ ಬಗ್ಗೆ ಪೋಕ್ಸೊ ಪ್ರಕರಣ ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ.

VISTARANEWS.COM


on

Udupi Pocso case
Koo

ಉಡುಪಿ: ಜಿಲ್ಲೆಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣವೊಂದು (Physical Abuse) ಬೆಳಕಿಗೆ ಬಂದಿದೆ. ಯುವ ಉದ್ಯಮಿಯೊಬ್ಬ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಲೈಂಗಿಕ ದೌರ್ಜನ್ಯದ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ. ಜಿಲ್ಲೆಯ ಕುಂದಾಪುರ ತಾಲೂಕಿನ ಅಮಾವಾಸ್ಯೆಬೈಲು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ಪೋಕ್ಸೊ ಪ್ರಕರಣ (Udupi Pocso case) ದಾಖಲಾಗುತ್ತಲೇ ಆರೋಪಿ ಪರಾರಿಯಾಗಿದ್ದಾನೆ.

ಉದ್ಯಮಿ ಶ್ರೇಯಸ್ ನಾಯ್ಕ (25) ಆರೋಪಿ. ಬಾಲಕಿಯೊಬ್ಬಳ ಮೇಲೆ ಒಂದು ವರ್ಷದಿಂದ ಆರೋಪಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದ. ಹಾಲಾಡಿ ರಸ್ತೆ ಹೆಗ್ಗೋಡ್ಲುವಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದು, ಆ ದೃಶ್ಯಗಳನ್ನು ಸೆರೆಹಿಡಿದುಕೊಂಡಿದ್ದಾನೆ. ಬಾಲಕಿ ಗರ್ಭಿಣಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮೇ 18 ರಂದು ಪೋಕ್ಸೊ ಪ್ರಕರಣ ದಾಖಲಾಗಿದ್ದು, ಸದ್ಯ ತಲೆಮರೆಸಿಕೊಂಡಿರುವ ಶ್ರೇಯಸ್‌ಗಾಗಿ ಬಂಧನಕ್ಕಾಗಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ.

ಶಾಲೆ, ಕಾಲೇಜು ವಿದ್ಯಾರ್ಥಿನಿಯರೇ ಈತನ ಟಾರ್ಗೆಟ್

ಶಾಲೆ, ಕಾಲೇಜು ವಿದ್ಯಾರ್ಥಿನಿಯರೇ ಆರೋಪಿ ಶ್ರೇಯಸ್‌ ಟಾರ್ಗೆಟ್ ಆಗಿದ್ದು, 8-9 ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಮಾಡಿರಬಹುದು ಎಂಬ ಶಂಕೆ ವ್ಯಕ್ಯವಾಗಿದೆ. ಸುಮಾರು 50ಕ್ಕೂ ಅಧಿಕ ಅಶ್ಲೀಲ ವಿಡಿಯೊಗಳನ್ನು ಆರೋಪಿ ಸೆರೆಹಿಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿನಿಯರು, ಯುವತಿಯರ ಜತೆಗಿನ ವಿಡಿಯೊಗಳನ್ನು ಸೆರೆಹಿಡಿದು ತನ್ನ ಲ್ಯಾಪ್‌ಟಾಪ್‌ನಲ್ಲಿ ಆಸಾಮಿ ಇರಿಸಿಕೊಳ್ಳುತ್ತಿದ್ದ.

ಶಾಲೆ, ಕಾಲೇಜು ವಿದ್ಯಾರ್ಥಿನಿಯನ್ನು ಕಾರಿನಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಥೇಟ್ ಪ್ರಜ್ವಲ್ ರೇವಣ್ಣ ಮಾದರಿಯಲ್ಲೇ ಈ ವಿಕೃತ ಕಾಮಿ ವಿಡಿಯೊ ಮಾಡಿಕೊಳ್ಳುತ್ತಿದ್ದ. ನಂತರ ಯುವತಿಯರನ್ನು ಬ್ಲ್ಯಾಕ್‌ಮೇಲ್‌ ಮಾಡಿ ಲೈಂಗಿಕವಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ.

ಇದನ್ನೂ ಓದಿ | Drowned in Water : ನೀರಿನಲ್ಲಿ ಮುಳುಗಿ ಮುಂಬೈ ಮೂಲದ ಇಬ್ಬರು ಬಾಲಕಿಯರು ಸಾವು

ಆರೋಪಿಯ ಲ್ಯಾಪ್‌ಟಾಪ್‌ ವಶಕ್ಕೆ ಪಡೆದ ಸೈಬರ್ ಪೊಲೀಸ್

ಆರೋಪಿ ಶ್ರೇಯಸ್‌ ಲ್ಯಾಪ್‌ಟಾಪ್‌ ಅನ್ನು ಸೈಬರ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲ್ಯಾಪ್‌ಟಾಪ್‌ಗೆ ಆರೋಪಿ ಪಾಸ್ ವರ್ಡ್ ಇಟ್ಟಿದ್ದು, ಸುಮಾರು 50ಕ್ಕೂ ಅಧಿಕ ವಿಡಿಯೊಗಳು ಇರುವ ಶಂಕೆ ವ್ಯಕ್ತವಾಗಿದೆ. ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿ ಮನೆಯಿಂದ ಲ್ಯಾಪ್‌ಟಾಪ್‌ ವಶಕ್ಕೆ ಪಡೆಯಲಾಗಿದೆ. ಸ್ಥಳೀಯ ಶಾಲಾ, ಕಾಲೇಜಿನ 8-9 ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯ ಶಂಕೆ ವ್ಯಕ್ತವಾಗಿದ್ದು, ಯಾರಾದರೂ ಸಂತ್ರಸ್ತೆಯರಿದ್ದಲ್ಲಿ ದೂರು ನೀಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಶ್ರೇಯಸ್ ನಾಯ್ಕ ಬಂಧನಕ್ಕೆ ದಲಿತ ಸಂಘಟನೆಗಳ ಒತ್ತಾಯ

ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಪ್ರಕರಣ ಬೆಳಿಕಿಗೆ ಬಂದ ಹಿನ್ನೆಲೆಯಲ್ಲಿ ಆರೋಪಿ ಶ್ರೇಯಸ್ ನಾಯ್ಕ (25) ಬಂಧನಕ್ಕೆ ದಲಿತ ಸಂಘಟನೆಗಳು ಒತ್ತಾಯ ಮಾಡಿವೆ. ಆರೋಪಿ ಪ್ರಭಾವಿ ಕುಟುಂಬದಿಂದ ಬಂದಿದ್ದು, ಪೊಲೀಸರ ತನಿಖೆ ಬಗ್ಗೆ ದಲಿತ ಸಂಘಟನೆಗಳು ಅಸಮಾಧಾನ ಹೊರಹಾಕಿವೆ.

ಶ್ರೇಯಸ್ ಕುಟುಂಬಸ್ಥರು ಇಲಾಖೆಯಲ್ಲಿದ್ದಾರೆ, ಈ ಕಾರಣದಿಂದ ಆತನ ರಕ್ಷಣೆ ನಡೆಯುತ್ತಿದೆ ಎಂದು ಆರೋಪಿಸಿರುವ ದಲಿತ ಸಂಘಟನೆಗಳು, ಶ್ರೇಯಸ್ ನಾಯ್ಕ ಬಗ್ಗೆ‌ ಸ್ಥಳೀಯವಾಗಿ ಹಲವು ಆರೋಪಗಳು ಇತ್ತು. ಹೀಗಾಗಿ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿವೆ.

Continue Reading

ಕ್ರಿಕೆಟ್

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Aaron Jones: 4ನೇ ಕ್ರಮಾಂಕದಲ್ಲಿ ಆಡಲಿಳಿದ ಆರೋನ್ ಜೋನ್ಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ ನಡೆಸಿ ಕೆನಡಾ ಬೌಲರ್​ಗಳ ಬೆವರಿಳಿಸಿದರು. ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಬಡಿದಟ್ಟಿ ನೆರದಿದ್ದ ಸ್ಥಳೀಯ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು.

VISTARANEWS.COM


on

Aaron Jones
Koo

ನ್ಯೂಯಾರ್ಕ್​: ಕೆನಡಾ(CAN vs USA) ವಿರುದ್ಧ ವಿಸ್ಫೋಟಕ ಬ್ಯಾಟಿಂಗ್​ ಮೂಲಕ ಸಿಕ್ಸರ್​ಗಳ ಸುರಿಮಳೆ ಸುರಿಸಿದ ಅಮೆರಿಕ ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್​ ಆರೋನ್ ಜೋನ್ಸ್(Aaron Jones) ಟಿ20 ವಿಶ್ವಕಪ್(T20 World Cup)​ ಟೂರ್ನಿಯಲ್ಲಿ ದಾಖಲೆಯೊಂದನ್ನು ಬರೆದಿದ್ದಾರೆ. ಟಿ20 ವಿಶ್ವಕಪ್​ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ 2ನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ.

ಡಲ್ಲಾಸ್​ನಲ್ಲಿ ನಡೆದ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಆಡಲಿಳಿದ ಆರೋನ್ ಜೋನ್ಸ್ ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ ನಡೆಸಿ ಕೆನಡಾ ಬೌಲರ್​ಗಳ ಬೆವರಿಳಿಸಿದರು. ಸಿಕ್ಸರ್​ ಮತ್ತು ಬೌಂಡರಿಗಳ ಮೂಲಕ ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಬಡಿದಟ್ಟಿ ನೆರದಿದ್ದ ಸ್ಥಳೀಯ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು.

ಒಟ್ಟು 40 ಎಸೆತ ಎದುರಿಸಿದ ಆರೋನ್ ಜೋನ್ಸ್ ಅಜೇಯ 94 ರನ್​ ಬಾರಿಸಿದರು. ಇದರಲ್ಲಿ 60 ರನ್​ ಕೇವಲ ಸಿಕ್ಸರ್​ ಮೂಲಕವೇ ದಾಖಲಾಯಿತು. ಒಟ್ಟು 10 ಸಿಕ್ಸರ್​ ಮತ್ತು 4 ಬೌಂಡರಿ ಬಾರಿಸಿದರು. 10 ಸಿಕ್ಸರ್​ ಬಾರಿಸುವ ಮೂಲಕ ವೆಸ್ಟ್​ ಇಂಡೀಸ್​ನ ಮಾಜಿ ಬ್ಯಾಟರ್​ ಕ್ರಿಸ್​ ಗೇಲ್​ ದಾಖಲೆಯನ್ನು ಸರಿಗಟ್ಟಿದರು. ಕ್ರಿಸ್​ ಗೇಲ್​ 2007ರಲ್ಲಿ ಉದ್ಘಾಟನ ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ದಕ್ಷಿಣ ಆಫ್ರಿಕಾ​ ವಿರುದ್ಧ 10 ಸಿಕ್ಸರ್​ ಬಾರಿಸಿದ್ದರು. ಈ ದಾಖಲೆಯನ್ನು 17ವರ್ಷಗಳ ಬಳಿಕ ಜೋನ್ಸ್ ಸರಿಗಟ್ಟಿದ್ದಾರೆ. ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸರ್​ ದಾಖಲೆ ಇನ್ನೂ ಕೂಡ ಕ್ರಿಸ್​ ಗೇಲ್​ ಹೆಸರಿನಲ್ಲಿದೆ. 2016ರಲ್ಲಿ ಭಾರತದಲ್ಲಿ ನಡೆದಿದ್ದ ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ ಗೇಲ್​ 11 ಸಿಕ್ಸರ್​ ಬಾರಿಸಿದ್ದರು.

ಇದನ್ನೂ ಓದಿ CAN vs USA: ಕೆನಡಾ ಪರ ಟಿ20 ವಿಶ್ವಕಪ್​ ಪಂದ್ಯವಾಡಿದ ದಾವಣಗೆರೆಯ ಶ್ರೇಯಸ್

ಟಿ20 ವಿಶ್ವಕಪ್​ ಪಂದ್ಯವೊಂದರಲ್ಲಿ ಅತ್ಯಧಿಕ ಸಿಕ್ಸರ್​ ಬಾರಿಸಿದ ಆಟಗಾರರು

ಆಟಗಾರಸಿಕ್ಸರ್​ವಿರುದ್ಧವರ್ಷ
ಕ್ರಿಸ್​ ಗೇಲ್​11ಇಂಗ್ಲೆಂಡ್​2016
ಕ್ರಿಸ್​ ಗೇಲ್​10ದಕ್ಷಿಣ ಆಫ್ರಿಕಾ2007
ಆರೋನ್ ಜೋನ್ಸ್10ಕೆನಡಾ2024
ರೀಲಿ ರೊಸೊ8ಬಾಂಗ್ಲಾದೇಶ2022

ಭರ್ಜರಿ ಗೆಲುವು ಸಾಧಿಸಿದ ಅಮೆರಿಕ


ಇಲ್ಲಿನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂ, ಡಲ್ಲಾಸ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಕೆನಡಾ ತಂಡ ನವನೀತ್ ಧಲಿವಾಲ್(61) ಮತ್ತು ನಿಕೋಲಸ್ ಕಿರ್ಟನ್(51) ಅರ್ಧಶತಕದ ಬ್ಯಾಟಿಂಗ್​ ನೆರವಿನಿಂದ 5 ವಿಕೆಟ್​ಗೆ 194 ರನ್​ ಬಾರಿಸಿತು. ಜವಾಬಿತ್ತ ಅಮೆರಿಕ ಈ ಬೃಹತ್​ ಮೊತ್ತವನ್ನು 17.4 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 197 ರನ್​ ಬಾರಿಸಿ ಅಮೋಘ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ ಯುಎಸ್​ಎ ಗರಿಷ್ಠ ಮೊತ್ತ ಚೇಸ್​ ಮಾಡಿದ ದಾಖಲೆ ಬರೆಯಿತು. ಇದಕ್ಕೂ ಮುನ್ನ 168 ರನ್​ಗಳನ್ನು ಚೇಸ್ ಮಾಡಿದ್ದು ತಂಡದ ಅತ್ಯುತ್ತಮ ಸಾಧನೆಯಾಗಿತ್ತು. ಇದೀಗ ಟಿ20 ವಿಶ್ವಕಪ್​ನ ಚೊಚ್ಚಲ ಪಂದ್ಯದಲ್ಲೇ ಐತಿಹಾಸಿಕ ಗೆಲುವು ದಾಖಲಿಸಿದೆ.

Continue Reading

ಬೆಂಗಳೂರು

Education News : ನೀಟ್ ಪರೀಕ್ಷೆ ಬಳಿಕ ಎಂಜಿನಿಯರ್ ಸೀಟು ಹಂಚಿಕೆ; 1.24 ಲಕ್ಷ ಸೀಟುಗಳು ಲಭ್ಯ, ಆನ್ ಲೈನ್ ಪ್ರಕ್ರಿಯೆ

Education News : ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದ್ದು, ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಆದರೆ ನೀಟ್ ಪರೀಕ್ಷೆ ಬಳಿಕವೇ ಎಂಜಿನಿಯರ್ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

VISTARANEWS.COM


on

By

education News
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೀಟ್‌ ಪರೀಕ್ಷೆ ಬಳಿಕವೇ ಎಂಜಿನಿಯರ್‌ ಸೀಟು ಹಂಚಿಕೆ ಮಾಡಲಾಗುವುದು ಎಂದು ಕೆಇಎ ಕಾರ್ಯ ನಿವಾರ್ಹಕ ನಿರ್ದೇಶಕ ಪ್ರಸನ್ನ (Education News) ತಿಳಿಸಿದ್ದಾರೆ. ನೀಟ್ ಫಲಿತಾಂಶಕ್ಕೂ ಮುನ್ನವೇ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಿದರೆ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಮೊದಲು ಮೆಡಿಕಲ್ ಸೀಟ್ ಹಂಚಿಕೆ ಮಾಡಿ ನಂತರ ಎಂಜಿನಿಯರಿಂಗ್ ಸೀಟ್ ಹಂಚಿಕೆ ಮಾಡಲಾಗುವುದು ಎಂದರು.

ಬೇರೆ ಬೇರೆ ಕಾಲೇಜಿನಲ್ಲಿ ಈಗಾಗಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಿದೆ ಎಂಬ ದೂರಿನ ಕುರಿತು ಪ್ರತಿಕ್ರಿಯಿಸಿದ ಅವರು, ಸಿಇಟಿ ಪರೀಕ್ಷೆಯಲ್ಲಿ ಒಳ್ಳೆಯ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಸೀಟ್ ಸಿಗುತ್ತದೆ. ಸೀಟ್ ಸಿಗುವುದಿಲ್ಲ ಎಂಬ ಆತಂಕದಲ್ಲಿ ಡೋನೇಷನ್ ಕೊಟ್ಟು ಅಡ್ಮಿಶನ್ ಮಾಡಿಸಬೇಡಿ. ಒಳ್ಳೆಯ ರ‍್ಯಾಂಕ್‌ ಪಡೆದವರಿಗೆ ಒಳ್ಳೆಯ ಕಾಲೇಜು ಸಿಗುತ್ತದೆ ಎಂದರು.

ಇದನ್ನೂ ಓದಿ: KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯ

ಇನ್ನೂ ರಾಜ್ಯದಲ್ಲಿ 1.24 ಲಕ್ಷ ಎಂಜಿನಿಯರಿಂಗ್‌ ಸೀಟುಗಳು ಲಭ್ಯವಿದೆ. ರ‍್ಯಾಂಕ್‌ ಆಧಾರದ ಮೇಲೆ ಸೀಟುಗಳನ್ನು ಹಂಚಿಕೆ ಮಾಡಲಾಗುತ್ತದೆ. ಇನ್ನೂ ಕಾಲೇಜು ಶುಲ್ಕವನ್ನು ನಿಗದಿ ಮಾಡಿಲ್ಲ. ಕಳೆದ ವರ್ಷ 40,110 ರೂಪಾಯಿ ಶುಲ್ಕ ಸರ್ಕಾರಿ ಕಾಲೇಜುಗಳಿಗೆ ಇತ್ತು. ಈ ಬಾರಿ ಎಷ್ಟೆಂದು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ಮಾಹಿತಿ ನೀಡಿದರು.

ಆನ್‌ಲೈನ್‌ನಲ್ಲೇ ವೆರಿಫಿಕೇಶನ್‌

ಎಲ್ಲ ಪ್ರಕ್ರಿಯೆಗಳು ಆನ್ ಲೈನ್‌ನಲ್ಲೆ ನಡೆಯಲಿದೆ. ಶೇ.100 ರಷ್ಟು ಡಾಕ್ಯುಮೆಂಟ್ ಪರಿಶೀಲನೆ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳು ಕೆಇಎ ಮುಂದೆ ಬಂದು ಕ್ಯೂ ನಿಲ್ಲುವ ಅವಶ್ಯಕತೆ ಇಲ್ಲ. ಎಲ್ಲಾ ದಾಖಲಾತಿಗಳನ್ನು ಆನ್‌ಲೈನ್‌ನಲ್ಲೇ ಪರಿಶೀಲನೆ ನಡೆಯಲಿದೆ ಎಂದರು. ನಿನ್ನೆ ಶನಿವಾರ (ಜೂ.1) ಸಂಜೆ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಹಠಾತ್ ಪ್ರಕಟಿಸಿದ ಬೆನ್ನಲ್ಲೇ ಭಾನುವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನ ಸುದ್ದಿಗೋಷ್ಠಿ ನಡೆಸಿ ಎಲ್ಲ ಮಾಹಿತಿಯನ್ನು ನೀಡಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
MLC Election
ಕರ್ನಾಟಕ22 mins ago

MLC Election: ವಿಧಾನ ಪರಿಷತ್‌ ಚುನಾವಣೆ; ಸಿ.ಟಿ.ರವಿ, ಎನ್.ರವಿಕುಮಾರ್‌ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

Actor Dhanush unveils new poster from Ilaiyaraaja biopic
ಕಾಲಿವುಡ್44 mins ago

Actor Dhanush: ಇಳಯರಾಜ ಬಯೋಪಿಕ್‌ ಹೊಸ ಪೋಸ್ಟರ್‌ ಔಟ್‌; ಸಹೋದರರು ಎಂದು ಕಮಲ್‌ ಹಾಸನ್‌ ಹೇಳಿದ್ಯಾರಿಗೆ?

Murder Case
ಚಾಮರಾಜನಗರ45 mins ago

Murder Case : ಚಾಮರಾಜನಗರದಲ್ಲಿ ಅತ್ತಿಗೆ ಮೇಲಿನ ಮೋಹಕ್ಕೆ ಅಣ್ಣನನ್ನೇ ಕೊಂದ ಕಾಮುಕ ತಮ್ಮ

Venkatesh Iyer Marriage
ಕ್ರೀಡೆ57 mins ago

Venkatesh Iyer Marriage: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕ್ರಿಕೆಟಿಗ ವೆಂಕಟೇಶ್​ ಅಯ್ಯರ್​

West Bengal
ದೇಶ59 mins ago

West Bengal: ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ; ಗುಂಡಿಕ್ಕಿ ಕೊಂದು, ರುಂಡ ಕಡಿದು ಒಯ್ದ ದುಷ್ಕರ್ಮಿಗಳು

Electric shock Electronic City
ಬೆಂಗಳೂರು ಗ್ರಾಮಾಂತರ1 hour ago

Electric Shock: ಪಲ್ಲಕ್ಕಿ ಹೊತ್ತಿದ್ದ ಟ್ರ್ಯಾಕ್ಟರ್‌ಗೆ ಪ್ರವಹಿಸಿದ ವಿದ್ಯುತ್‌; ಕ್ಷಣಾರ್ಧದಲ್ಲೇ ಇಬ್ಬರು ಸುಟ್ಟು ಕರಕಲು

Udupi Pocso case
ಪ್ರಮುಖ ಸುದ್ದಿ1 hour ago

Udupi Pocso case: ಉಡುಪಿಯಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಕೇಸ್‌; 8-9 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ!

Aaron Jones
ಕ್ರಿಕೆಟ್2 hours ago

Aaron Jones: 17 ವರ್ಷಗಳ ಹಿಂದಿನ ಟಿ20 ವಿಶ್ವಕಪ್​ ದಾಖಲೆ ಸರಿಗಟ್ಟಿದ ಯುಎಸ್​ಎ ಬ್ಯಾಟರ್​ ಆರೋನ್ ಜೋನ್ಸ್

Indian 2 Audio Launch Kamal Haasan Simbu Kajal Aggarwal
ಕಾಲಿವುಡ್2 hours ago

Indian 2 Audio Launch: ಅದ್ಧೂರಿಯಾಗಿ ನೆರವೇರಿತು ʼಇಂಡಿಯನ್‌ 2ʼ ಸಿನಿಮಾದ ಆಡಿಯೊ ಲಾಂಚ್‌!

Traffic Advisory
Lok Sabha Election 20242 hours ago

Traffic Advisory : ಲೋಕಸಭೆ ಎಲೆಕ್ಷನ್‌ ಕೌಂಟಿಂಗ್‌; ಬೆಂಗಳೂರಲ್ಲಿ ಎಲ್ಲೆಲ್ಲಿ ವಾಹನ ನಿರ್ಬಂಧ, ಮಾರ್ಗ ಬದಲು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ4 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು22 hours ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ3 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು5 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ6 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ7 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು7 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌