Lokayukta Raid: ಕ್ಯಾಸಿನೋ ಗೀಳು ಹಚ್ಚಿಕೊಂಡಿದ್ದ ಬಸವರಾಜ್‌ ಮಗ್ಗಿ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಏನೇನ್‌ ಸಿಗ್ತು? - Vistara News

ಪ್ರಮುಖ ಸುದ್ದಿ

Lokayukta Raid: ಕ್ಯಾಸಿನೋ ಗೀಳು ಹಚ್ಚಿಕೊಂಡಿದ್ದ ಬಸವರಾಜ್‌ ಮಗ್ಗಿ ನಿವಾಸದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಏನೇನ್‌ ಸಿಗ್ತು?

Lokayukta Raid: ಬಸವರಾಜ್ ಮಗ್ಗಿಗೆ ವಿಪರೀತ ಕ್ಯಾಸಿನೊ‌ ಹುಚ್ಚು ಇದೆ ಎನ್ನಲಾಗಿದ್ದು, ಕಲಬುರಗಿ ನಿವಾಸದಲ್ಲಿ ನೂರಾರು ಕ್ಯಾಸಿನೋ‌ ಕಾಯಿನ್‌ಗಳು ಪತ್ತೆಯಾಗಿವೆ. ಆಗಾಗ ಕ್ಯಾಸಿನೋಗಳಿಗೆ ತೆರಳುತ್ತಿದ್ದ ಈತನ ಬಳಿ ಬರೋಬ್ಬರಿ 12 ಲಕ್ಷ ರೂ. ಮೌಲ್ಯದ ಕಾಯಿನ್‌ಗಳು ಕಂಡುಬಂದಿವೆ.

VISTARANEWS.COM


on

basavaraj maggi lokayukta raid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಕಲಬುರಗಿ: ಲೋಕಾಯುಕ್ತ ಅಧಿಕಾರಿಗಳು (Lokayukta Officers) ಇಂದು ಬಿಬಿಎಂಪಿ (BBMP) ಕಂದಾಯ ಅಧಿಕಾರಿ (Revenue Officer) ಬಸವರಾಜ ಮಗ್ಗಿ ಅವರ ಕಲಬುರಗಿಯಲ್ಲಿರುವ ಮನೆ ಸೇರಿದಂತೆ ಇವರಿಗೆ ಸಂಬಂಧಿಸಿದ ಹತ್ತಾರು ಕಡೆಗಳಲ್ಲಿ ದಾಳಿ (Lokayukta Raid) ನಡೆಸಿದ್ದು, ಕೋಟ್ಯಂತರ ಮೌಲ್ಯದ ಅನಧಿಕೃತ ಆಸ್ತಿಪಾಸ್ತಿ (Disproportionate assets) ಪತ್ತೆ ಮಾಡಿದ್ದಾರೆ. ದಾಳಿಯ ಸಂದರ್ಭದಲ್ಲಿ, ನೂರಾರು ಕ್ಯಾಸಿನೋ (Casino) ಕಾಯಿನ್‌ಗಳನ್ನು (Coins) ಪತ್ತೆ ಹಚ್ಚಿದ್ದು, ಈತ ಜೂಜಾಡಲು ಕ್ಯಾಸಿನೋಗಳಿಗೆ ಪದೇ ಪದೆ ಹೋಗುತ್ತಿದ್ದ ಎಂಬುದು ತಿಳಿದುಬಂದಿದೆ.

ಬಸವರಾಜ್ ಮಗ್ಗಿಯ ಕಲಬುರಗಿಯಲ್ಲಿರುವ ಮನೆ, ಬೆಂಗಳೂರಿನ ಮನೆ ಸೇರಿದಂತೆ 9 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ರೈಡ್‌ ಮಾಡಿದ್ದಾರೆ. ಮೋಟಿ ಅಪಾರ್ಟ್‌ಮೆಂಟ್ ಕುಮಾರ ಪಾರ್ಕ್,‌ ಬಿಬಿಎಂಪಿ ‌ಕಚೇರಿ ಮಹದೇವಪುರ, ರಾಯಲ್ ವಿಸ್ತಾರ ಅಪಾರ್ಟ್ಮೆಂಟ್ ‌ಅಮೃತಹಳ್ಳಿ, ರಾಮ್ಕಿ ಒನ್ ಅಪಾರ್ಟ್ಮೆಂಟ್ ಯಲಹಂಕ, ದಿ ಟ್ರಿ ಪ್ರಾವಿಡೆಂಟ್ ಅಪಾರ್ಟ್ಮೆಂಟ್ ಬಿದರಹಳ್ಳಿಗಳಲ್ಲಿ ರೈಡ್‌ ಮಾಡಲಾಗಿದೆ.

ಕಲಬುರಗಿಯ ವೀರೇಂದ್ರ ಪಾಟೀಲ್ ಬಡಾವಣೆಯಲ್ಲಿ ಬಸವರಾಜ್‌ ಐದು ಅಂತಸ್ತಿನ‌ ಭವ್ಯ ಭಂಗಲೆ ಹೊಂದಿದ್ದು, ಇಲ್ಲಿಗೆ ದಾಳಿ ನಡೆಸಿ ದಾಖಲೆ‌ಪತ್ರಗಳ ಪರಿಶೀಲನೆ ಮಾಡಲಾಗಿದೆ. ನಾಲ್ಕನೆ ಅಂತಸ್ತಿನಲ್ಲಿ ಬಸವರಾಜ್ ಮಗ್ಗಿ ಕುಟುಂಬ ವಾಸವಾಗಿದ್ದು, ಕೆಳಗಿನ ಮೂರು ಅಂತಸ್ತು ಬಾಡಿಗೆ ನೀಡಲಾಗಿದೆ. ಮನೆಯಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ವಸ್ತುಗಳಿಂದ ಅಲಂಕಾರ ಮಾಡಲಾಗಿದೆ.

ಬಸವರಾಜ್ ಮಗ್ಗಿಗೆ ವಿಪರೀತ ಕ್ಯಾಸಿನೊ‌ ಹುಚ್ಚು ಇದೆ ಎನ್ನಲಾಗಿದ್ದು, ಕಲಬುರಗಿ ನಿವಾಸದಲ್ಲಿ ನೂರಾರು ಕ್ಯಾಸಿನೋ‌ ಕಾಯಿನ್‌ಗಳು ಪತ್ತೆಯಾಗಿವೆ. ಆಗಾಗ ಕ್ಯಾಸಿನೋಗಳಿಗೆ ತೆರಳುತ್ತಿದ್ದ ಈತನ ಬಳಿ ಬರೋಬ್ಬರಿ 12 ಲಕ್ಷ ರೂ. ಮೌಲ್ಯದ ಕಾಯಿನ್‌ಗಳು ಕಂಡುಬಂದಿವೆ. ಬಸವರಾಜ್ ಮಗ್ಗಿ ‌ಸಹೋದರಿ‌ ಹೇಮಾ ರವಿ ಪ್ರಕಾಶ್ ಅವರಿಗೆ ಸೇರಿದ ಮನೆಯಲ್ಲೂ 50, 100, 1000, 10000 ಮುಖಬೆಲೆಯ ಮಾದರಿಯಲ್ಲಿನ ಕಾಯಿನ್‌ಗಳು ಕಂಡುಬಂದಿವೆ.

ಕಲಬುರಗಿಯ KHB ಕಾಲೋನಿ, ಪಾಳಾ ಗ್ರಾಮದಲ್ಲಿನ‌ ಮನೆ ಹಾಗೂ ಫಾರಂ ಹೌಸ್, ಈತನ ಸಹೋದರಿ‌ ಹೇಮಾ ರವಿಪ್ರಕಾಶ್ ಮನೆಗಳಿಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೋಟಿ ಕೋಟಿ ಮೌಲ್ಯದ ಬೇನಾಮಿ ಆಸ್ತಿ ಮಾಡಿರುವ ಬಿಬಿಎಂಪಿ ಕಂದಾಯ ಅಧಿಕಾರಿ ಬಸವರಾಜ ಮಗ್ಗಿ, ಬೆಲೆಬಾಳುವ ಸುಮಾರು 10 ಎಕರೆಗೂ ಅಧಿಕ ಜಮೀನು ತಾಯಿ ಹೆಸರಲ್ಲಿ ಖರೀದಿ ಮಾಡಿದ್ದಾನೆ. ಪಾಳಾ ಗ್ರಾಮದಲ್ಲಿ ಜಮೀನು ಖರೀದಿ ಮಾಡಿ ಫಾರ್ಮ್ ಹೌಸ್ ನಿರ್ಮಿಸಿದ್ದಾನೆ.

9 ಅಧಿಕಾರಿಗಳ 56 ಸ್ಥಳಗಳಲ್ಲಿ ಮೆಗಾ ರೇಡ್

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ (‌Corrupt Officers) ಲೋಕಾಯುಕ್ತ ಶಾಕ್‌ ಮುಟ್ಟಿಸಿದೆ. ರಾಜ್ಯದ ನಾನಾ ಕಡೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳ ತಂಡಗಳು ದಾಳಿ (Lokayukta Raid) ನಡೆಸಿ, ಭ್ರಷ್ಟಾಚಾರ ಆರೋಪಿತ ಅಧಿಕಾರಿಗಳ ಮನೆಗಳು ಹಾಗೂ ಕಚೇರಿಗಳಲ್ಲಿ ಪರಿಶೀಲನೆ ಆರಂಭಿಸಿವೆ.

9 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದೆ. 11 ಪ್ರಕರಣಗಳಿಗೆ ಸಂಬಂಧಿಸಿ ಸುಮಾರು 100 ಅಧಿಕಾರಿಗಳು 56 ಕಡೆ ನಡೆದ ದಾಳಿಗಳಲ್ಲಿ ಪಾಲ್ಗೊಂಡಿದ್ದಾರೆ. ಮಂಡ್ಯ, ಕಲಬುರಗಿ, ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಕೋಲಾರ, ಮೈಸೂರು, ಹಾಸನ, ಬೆಂಗಳೂರು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು, ಬೆಳಗಾಗುವ ಮುನ್ನವೇ ತಂಡ ಕಟ್ಟಿಕೊಂಡು ದಾಳಿ ನಡೆಸಿದರು. ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಇವರ ತಪಾಸಣೆ ನಡೆದಿದೆ.

ಕಲಬುರಗಿಯಲ್ಲಿ ಬಿಬಿಎಂಪಿ ರೆವಿನ್ಯೂ ಅಧಿಕಾರಿ ಬಸವರಾಜ ಮಾಗಿ, ಮಂಡ್ಯದಲ್ಲಿ ಗ್ರಾಮೀಣ ನೀರು ಸರಬರಾಜು ನಿವೃತ್ತ ಎಕ್ಷಿಕ್ಯೂಟಿವ್‌ ಇಂಜಿನಿಯರ್‌ ಶಿವರಾಜು ಎಸ್.‌, ಚಿತ್ರದುರ್ಗದಲ್ಲಿ ಸಣ್ಣ ನೀರಾವರಿ ಇಲಾಖೆ ನಿವೃತ್ತ ಚೀಫ್‌ ಇಂಜಿನಿಯರ್‌ ಎಂ. ರವೀಂದ್ರ, ಧಾರವಾಡದಲ್ಲಿ ಪ್ರಾಜೆಕ್ಟ್‌ ಡೈರೆಕ್ಟರ್‌ ಶೇಖರ ಗೌಡ, ಬೆಳಗಾವಿಯಲ್ಲಿ ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಮಹಾದೇವ ಬನ್ನೂರ್‌, ದಾವಣೆಗೆರೆಯಲ್ಲಿ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಡಿ.ಎಚ್‌ ಉಮೇಶ್‌, ಅಸಿಸ್ಟೆಂಟ್‌ ಎಕ್ಸಿಕ್ಯೂಟಿವ್‌ ಇಂಜಿನಿಯರ್‌ ಎಂ.ಎಸ್‌ ಪ್ರಭಾಕರ್‌, ಮೈಸೂರಿನಲ್ಲಿ ಸೂಪರಿಂಟೆಂಡೆಂಟ್‌ ಇಂಜಿಯರ್ ಮಹೇಶ್‌ ಕೆ., ಹಾಸನದಲ್ಲಿ ಸೆಕ್ರೆಟರಿ ಎನ್.ಎಂ ಜಗದೀಶ್‌, ಚಿತ್ರದುರ್ಗದಲ್ಲಿ ಸೂಪರಿಂಟೆಂಡೆಂಟ್‌ ಇಂಜಿಯರ್ ಕೆ.ಜಿ ಜಗದೀಶ್‌ ಇವರುಗಳ ಮನೆಗಳು, ಕಚೇರಿಗಳು ಹಾಗೂ ಇತರ ಆಸ್ತಿಪಾಸ್ತಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.‌

ಇದನ್ನೂ ಓದಿ | ED Raid: ಇಡಿ- ಸಿಬಿಐ ಮೆಗಾ ದಾಳಿ; 80 ಅಧಿಕಾರಿಗಳಿಂದ ರೇಡ್‌, ಬ್ಯಾಂಕ್‌ ಸಿಬ್ಬಂದಿ ಮನೆ ಸೀಜ್‌! ಬೆಳಗ್ಗೆಯಿಂದ ಏನೇನಾಯ್ತು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಶ್ರೀ ಶ್ರೀ ಡಾ. ಪ್ರಕಾಶನಾಥ ಸ್ವಾಮೀಜಿ ಅವರಿಂದ PNS ವಿಸ್ತಾರ ನ್ಯೂಸ್ ಕಚೇರಿ ಉದ್ಘಾಟನೆ

VISTARANEWS.COM


on

ಬೆಂಗಳೂರು: ಕನ್ನಡ ಭಾಷೆಗೆ ಶುದ್ಧ ಸುದ್ದಿವಾಹಿನಿ ʻಪಿಎನ್‌ಎಸ್‌ ವಿಸ್ತಾರʼ ಚಾನೆಲ್‌ ಶುಭಾರಂಭಗೊಂಡಿದೆ. ಬಿಜಿಎಸ್‌ ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ಶ್ರೀ ಡಾ.ಪ್ರಕಾಶನಾಥ ಸ್ವಾಮೀಜಿ ಅವರು ಇಂದು ʻಪಿಎನ್‌ಎಸ್‌ ವಿಸ್ತಾರʼ ಚಾನೆಲ್‌ ಕಚೇರಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ʻಪಿಎನ್‌ಎಸ್‌ ವಿಸ್ತಾರʼ ಚಾನೆಲ್‌ ಜನರ ಕಷ್ಟಕಾರ್ಪಣ್ಯಗಳಿಗೆ ಧ್ವನಿಯಾಗಲಿ ಮತ್ತು ನ್ಯಾಯಪರವಾಗಲಿ ಎಂದು ಹೇಳಿದರು.

ಯಾವುದೇ ಸಂಸ್ಥೆಯನ್ನು ಕಟ್ಟಿಬೆಳೆಸುವುದು ಸುಲಭವಲ್ಲ. ಶ್ರೀ ಧರ್ಮೇಶ್‌ ಅವರು ಪಿಎನ್‌ ಎಸ್‌ ವಿಸ್ತಾರ ಚಾನೆಲ್‌ ಗೆ ಬಂಡವಾಳ ಹೂಡಿದ್ದಾರೆ. ಅವರ ಸಾಹಸವನ್ನು ಮೆಚ್ಚಲೇಬೇಕು. ಹೊಸ ಚಾನೆಲ್‌ ನಲ್ಲಿ ಕೆಲಸ ನಿರ್ವಹಿಸುವ ಎಲ್ಲ ಸಿಬ್ಬಂದಿ ಸಂಸ್ಥೆಯ ಗೌರವಕ್ಕೆ ಚ್ಯುತಿ ಬಾರದಂತೆ ಧರ್ಮೇಶ್‌ ಅವರ ಆಶಯಗಳಿಗೆ ತಕ್ಕಂತೆ ಕೆಲಸ ಮಾಡುವುಂತೆ ಕರೆ ನೀಡಿದರು.


ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ (ಸಿಇಓ) ಎಚ್.ಜಿ. ಪವಿತ್ರಾಗೌಡ ಅವರು ಜವಬ್ದಾರಿ ವಹಿಸಿಕೊಂಡಿದ್ದಾರೆ. ವೃತ್ತಿಯಿಂದ ಉದ್ಯಮಿ ಮತ್ತು ಪ್ರವೃತ್ತಿಯಲ್ಲಿ ಸಾಮಾಜಿಕ ಕಾರ್ಯಕರ್ತೆಯಾಗಿರುವ ಅವರು ಸಂಸ್ಥೆಯನ್ನು ಕಟ್ಟಿ ಬೆಳೆಸಿ ಶ್ರೀಸಾಮಾನ್ಯನ ಧ್ವನಿಯಾಗಲು ಪಣ ತೊಟ್ಟಿದ್ದಾರೆ. ಅವರ ನಿರೀಕ್ಷೆಗಳಿಗೆ ತಕ್ಕಂತೆ ಸಿಬ್ಬಂದಿ ಕೆಲಸ ಮಾಡಬೇಕು ಎಂದು ತಿಳಿಸಿದರು.

ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ನಲ್ಲಿ ಅನುಭವಿ ಪತ್ರಕರ್ತರ ತಂಡ ಇರುವುದು ಕಂಡು ಬರುತ್ತಿದೆ. ಸಂಸ್ಥೆಗೆ ಕೆಟ್ಟ ಹೆಸರು ಬಾರದಂತೆ ಮನಸ್ಸು ಮೆಚ್ಚುವಂತಹ ಕೆಲಸ ಮಾಡುತ್ತೀರಿ ಎಂದು ಭಾವಿಸುವುದಾಗಿಯೂ ಪರಮ ಪೂಜ್ಯ ಶ್ರೀ ಶ್ರೀ ಡಾ.ಪ್ರಕಾಶನಾಥ ಸ್ವಾಮೀಜಿ ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಚುಟುಕಾಗಿ ತಮ್ಮ ಅನಿಸಿಗಳನ್ನು ಹಂಚಿಕೊಂಡ ಸಿಇಓ ಪವಿತ್ರಾ ಗೌಡ ಅವರು, ಎಲ್ಲರೂ ಹೊಣೆಗಾರಿಕೆಯಿಂದ ಕರ್ತವ್ಯ ನಿರ್ಹಿಸುತ್ತಾ ಬೆಂಬಲ ನೀಡುವಂತೆ ಕೋರಿದರು.
ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ವ್ಯವಸ್ಥಾಪಕ ನಿರ್ದಶಕರಾದ ಧರ್ಮೇಶ್‌ ಸೇರಿದಂತೆ ಬಿಜೆಪಿ ಹಿರಿಯ ನಾಯಕ ಎನ್‌.ಆರ್‌.ರಮೇಶ್‌, ಇಂಡಿಯನ್‌ ಎಕ್ಸ್‌ಪ್ರೆಕ್ಸ್‌ನ ಜನರಲ್‌ ಮ್ಯಾನೇಜರ್‌ ಸುರೇಶ್‌ ಅವರು ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.

Continue Reading

ಸುವಚನ

ಕರುನಾಡಿನ ಜನಧ್ವನಿಯಾಗಿ ಶುಭಾರಂಭಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ -ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ

VISTARANEWS.COM


on

ಜೈ ಶ್ರೀ ಗುರುದೇವ್
ಜಗತ್ತಿನಲ್ಲಿ ತಂತ್ರಜ್ಞಾನದ ನೆರೆವಿನಿಂದ ಎಲ್ಲವೂ ಕೈಗೆಟಕುತ್ತಿದೆ. ಇದೇ ತಂತ್ರಜ್ಞಾನವನ್ನು ಬಳಸಿ ಆರೋಗ್ಯಕರ ಸಮಾಜದ ಸ್ಥಾಪನೆಗೆ ಪಿಎನ್‌ಎಸ್‌ ವಿಸ್ತಾರ ಚಾನಲ್‌ ಮುಂದಾಗಿರುವುದು ಶ್ಲಾಘನೀಯ. ಸಮಾಜದ ಈ ಸುಧಾರಣೆಯ ದಾರಿಯಲ್ಲಿ ಮಾಧ್ಯಮಗಳ ಪಾತ್ರ ಹೆಚ್ಚಿದೆ. ಅನ್ಯಾಯಗಳನ್ನು ವಿರೋಧಿಸಿ ನ್ಯಾಯ ಒದಗಿಸುವುದು ಸಾಮಾಜಿಕ ನ್ಯಾಯ ದೊರಕಿಸುವುದು ಹಾಗೂ ಬಡವರು, ದೀನ-ದಲಿತರು, ರೈತರು ಹಾಗೂ ಶೋಷಿತರ ದನಿಯಾಗಬೇಕಿದೆ. ಪಿಎನ್‌ಎಸ್‌ ವಿಸ್ತಾರ ಚಾನೆಲ್‌ ಇದೇ ಧ್ಯೇಯದೊಂದಿಗೆ ನಿಮ್ಮ ಮುಂದೆ ಬರುತ್ತಿದೆ.
ವಿದ್ಯುನ್ಮಾನ ಕ್ಷೇತ್ರದಲ್ಲಿ ಈವರೆಗೆ ನಡೆದುಕೊಂಡು ಬಂದ ಸಂಪ್ರದಾಯ ಕೊಡವಿ ಧನಾತ್ಮಕ ಪ್ರಯೋಗಗಳ ಮೂಲಕ ಸಮಾಜವನ್ನು ಸರಿಪಡಿಸುವ ಕೆಲಸ ಆಗಬೇಕಿದೆ. ಈ ನಿಟ್ಟಿನಲ್ಲಿ ಪಿಎನ್‌ಎಸ್‌ ವಿಸ್ತಾರ ನ್ಯೂಸ್‌ ಹೆಜ್ಜೆ ಇಟ್ಟಿರುವುದು ಅಭಿನಂದನೀಯ. ರಾಜ್ಯದ ಮೂಲೆ ಮೂಲೆಗಳ ಸಮಸ್ಯೆ, ಕುಂದುಕೊರತೆಗಳನ್ನು ಪ್ರಸಾರ ಮಾಡಿ ಪರಿಹಾರ ಒದಗಿಸುವ ಜವಾಬ್ದಾರಿ ನಮ್ಮ ಪಿಎನ್‌ಎಸ್‌ ವಿಸ್ತಾರ ಚಾನೆಲ್‌ನ ಆದ್ಯತೆಯಾಗಿದೆ. ಪಕ್ಷ, ಪಂಥ, ಪಂಗಡಗಳಿಂದ ಪ್ರತ್ಯೇಕವಾಗಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣ ಹಾಗೂ ಸಾಮಾಜಿಕ ನ್ಯಾಯ ಒದಗಿಸಲು ನಮ್ಮ ನುರಿತ ತಂಡ ಸೈನಿಕರಂತೆ ಕಾರ್ಯನಿರ್ವಹಿಸಲಿದ್ದಾರೆ.
ನಮ್ಮ ಚಾನೆಲ್‌ ವಿಶ್ಲೇಷಣೆ, ಮನರಂಜನೆ ಹಾಗೂ ಮಾಹಿತಿ ನೀಡುವ ಮುಖೇನ ನಾಡಿನ ಮೂಲೆ ಮೂಲೆ ತಲುಪಲು ಕಾರ್ಯೋನ್ಮುಖವಾಗಲಿದೆ. ಯಾವುದೇ ವಿಚಾರದಲ್ಲಿ ರಾಜಿಯಾಗದೇ ಜನಪರವಾಗಿ ಕೆಲಸ ಮಾಡಿ ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಶ್ರಮಿಸುವುದು ನಮ್ಮ ಧ್ಯೇಯವಾಗಿದೆ. ಪಿಎನ್‌ಎಸ್‌ ವಿಸ್ತಾರ ಚಾನೆಲ್‌ನ  ಈ ಧ್ಯೇಯವನ್ನು ಸಮಸ್ತ ಕನ್ನಡನಾಡಿನ ನಾಗರಿಕರು ಪ್ರೋತ್ಸಾಹಿಸುತ್ತಾರೆ ಎಂದು ಭಾವಿಸುತ್ತೇವೆ. ನಾಡಿನ ಸಮಸ್ತ ಜನರಿಗೆ ಪಿಎನ್‌ಎಸ್‌ ವಿಸ್ತಾರ ಬಳಗದಿಂದ ಅನಂತಾನಂತ ಧನ್ಯವಾದಗಳು.
ಶುಭ ಆಶೀರ್ವಾದಗಳೊಂದಿಗೆ
ಶ್ರೀ ಶ್ರೀ ಡಾ. ಪ್ರಕಾಶನಾಥ ಗುರೂಜಿ
ವ್ಯವಸ್ಥಾಪಕ ನಿರ್ದೇಶಕರು, ಬಿಜಿಎಸ್‌ & ಎಸ್‌ಜೆಬಿ ಗ್ರೂಪ್‌ ಆಫ್‌ ಇನ್ಸ್‌ಟಿಟ್ಯೂಷನ್‌ ಮತ್ತು ಆಸ್ಪತ್ರೆಗಳು

Continue Reading

ಪ್ರಮುಖ ಸುದ್ದಿ

ವಿಭಿನ್ನ ಕಾರ್ಯಯೋಜನೆಯೊಂದಿಗೆ ಸಮಾಜದ ಪ್ರತಿನಿಧಿ ರೂಪದಲ್ಲಿ ಸಿದ್ಧಗೊಳ್ಳುತ್ತಿದೆ ಪಿಎನ್‌ಎಸ್‌ ವಿಸ್ತಾರ ನ್ಯೂಸ್-ಹೆಚ್.ಜಿ ಪವಿತ್ರ ಗೌಡ

VISTARANEWS.COM


on


ಜೈ ಶ್ರೀ ಗುರುದೇವ್‌,
ನಾಡಿನ ಎಲ್ಲಾ ಕನ್ನಡದ ಸೃಜನಶೀಲ ಮನಸುಗಳಿಗೆ ನಮಸ್ಕಾರ.
ಭಾಷೆ ನಮ್ಮ ಬದುಕು, ಭಾಷೆಯೊಂದಿಗೆ ಅನುಸಂಧಾನ ಮಾಡಿಕೊಂಡು ಕೆಲಸ ಮಾಡುವ ಮಾಧ್ಯಮವೇ ಪತ್ರಿಕೋದ್ಯಮ. ಪತ್ರಿಕಾ ಮಾಧ್ಯಮದಲ್ಲಿ ಸೇವೆ ಸಲ್ಲಿಸಬೇಕು ಎನ್ನುವುದು ನನ್ನ ಹಲವು ಕಾಲದ ಅಭಿಲಾಷೆಯಾಗಿತ್ತು. ಪರಮಾತ್ಮನ ದಯೆಯಿಂದ ಹಾಗೂ ಗುರುಗಳ ಕೃಪೆಯಿಂದ ಆ ಸದವಕಾಶ ಈಗ ಒದಗಿ ಬಂದಿದೆ. ಕನ್ನಡಿಗರ ಧ್ವನಿಯಾಗಿ ಮುಖ್ಯವಾಹಿನಿ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಲು ನಾವು ʻಪಿಎನ್‌ಎಸ್‌ ವಿಸ್ತಾರʼ ಸುದ್ದಿವಾಹಿನಿಯನ್ನು ಪುನರಾರಂಭಿಸುತ್ತಿದ್ದೇವೆ. ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ಕನ್ನಡ ಟಿವಿ ಮಾಧ್ಯಮ ಕ್ಷೇತ್ರದಲ್ಲಿ ಈಗಾಗಲೆ ತನ್ನದೇ ಆದ ಒಂದು ಬ್ರಾಂಡ್‌ ಸೃಷ್ಟಿಸಿಕೊಂಡಿದ್ದ ಸುದ್ದಿ ವಾಹಿನಿ, ಕಾರಣಾಂತರಗಳಿಂದ ಕಾರ್ಯಾಚರಣೆ ಸ್ಥಗಿತಗೊಳಿಸಿತ್ತು. ಒಂದು ವಿಶೇಷ ಹಾಗೂ ವಿಭಿನ್ನ ಕಾರ್ಯಯೋಜನೆಯೊಂದಿಗೆ ನಾವು ಮರಳಿ ಬರುತ್ತಿದ್ದೇವೆ. ಕನ್ನಡ ನಾಡಿನ ಬಂಧುಗಳ ಕಷ್ಟ-ನಷ್ಟಗಳ ಕುರಿತು ವಸ್ತುನಿಷ್ಟ ವರದಿ ಮಾಡಲು, ಕನ್ನಡ ನಾಡಿನ ಸಂಸ್ಕೃತಿ ಸಾರಗಳನ್ನು ಜಗತ್ತಿನಾದ್ಯಂತ ಪಸರಿಸಲು, ಕನ್ನಡದ ನುಡಿಸಿರಿಯ ವೈವಿಧ್ಯತೆಯನ್ನು ವರ್ಣಿಸಲು ಸರ್ವಸಿದ್ಧತೆಗಳನ್ನು ಮಾಡಿಕೊಂಡಿದ್ದೇವೆ. ಸುದ್ದಿ ಜಗತ್ತಿನ ನಿಖರ ವರ್ತಮಾನಗಳನ್ನು ನಿರ್ಭೀತಿಯಿಂದ ನಿಮ್ಮ ಮುಂದಿಡಲು ನಾವು ಸಿದ್ಧರಾಗಿದ್ದೇವೆ. ಜನಸಾಮಾನ್ಯರ ಪ್ರತಿನಿಧಿಯಾಗಿ ಆಳುವ ಪ್ರಭುತ್ವವನ್ನು ಧೈರ್ಯದಿಂದ ಪ್ರಶ್ನಿಸಲು ನಾವು ಸಿದ್ಧರಾಗಿದ್ದೇವೆ. ಕರ್ನಾಟಕದ ನಾಡು-ನುಡಿ, ನೆಲ, ಜಲ, ಸಂಸ್ಕೃತಿಗಳ ಹಿತರಕ್ಷಣೆಗಾಗಿ ಸಂಕಲ್ಪಿಸಿಕೊಂಡಿದ್ದೇವೆ. ನಾವು ಕೇವಲ ಸುದ್ದಿಗಳನ್ನು ಪ್ರಾಮಾಣಿಕವಾಗಿ ವರದಿ ಮಾಡುತ್ತೇವೆ. ಮಾಹಿತಿಯೊಂದಿಗೆ ಮನೋರಂಜನೆ ಎಂಬ ವಿಶೇಷ ಆಯಾಮವನ್ನು ನಮ್ಮ ಮಾಧ್ಯಮದಲ್ಲಿ ಪ್ರಸ್ತುತ ಪಡಿಸಲಿದ್ದೇವೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಾಕಷ್ಟು ವರ್ಷಗಳ ಅನುಭವ ಹೊಂದಿರುವ ಹಿರಿಯ, ಅನುಭವಿ, ಪ್ರಾವೀಣ್ಯತೆ ಹೊಂದಿರುವ ತಂಡ ನಮ್ಮೊಂದಿಗೆ ಕೆಲಸ ಮಾಡುತ್ತಿದೆ. ಪ್ರಸ್ತುತ ವಿದ್ಯಮಾನ, ರಾಜಕೀಯ, ಸಿನಿಮಾ-ಕಲೆ, ಕ್ರೀಡೆ, ಸಂಸ್ಕೃತಿ-ಸಂಪ್ರದಾಯ, ಆಚಾರ-ವಿಚಾರ, ಜೀವನಶೈಲಿ, ಇತಿಹಾಸ-ಪುರಾಣ, ಪದ್ಧತಿ-ಪರಂಪರೆ, ಭಾಷೆಯ ಸೊಗಡು ಮತ್ತು ಆಹಾರ ಕ್ರಮಗಳು, ನದಿ- ಪರಿಸರ ಅರಣ್ಯ- ಜೀವವೈವಿಧ್ಯ ಸೇರಿದಂತೆ ಹತ್ತಾರು ವಿಷಯಗಳ ಬಗ್ಗೆ ನಾವು ನಮ್ಮ ವಾಹಿನಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ನಿಮ್ಮ ಮುಂದೆ ತರಲಿದ್ದೇವೆ. ನಮ್ಮ ನಾಡಿನ ಕ್ರಿಯಾಶೀಲ, ಸೃಜನಶೀಲ ಮನಸುಗಳಿಗೆ ಅತ್ಯಂತ ಆಹ್ಲಾದಕಾರಿ ಸುದ್ದಿ ಸಂಗತಿಗಳನ್ನು ಉಣಬಡಿಸಬೇಕು ಅನ್ನುವುದಷ್ಟೆ ನಮ್ಮ ಕಳಕಳಿ. ಈ ನಿಟ್ಟಿನಲ್ಲಿ ನಮ್ಮ ʻಪಿಎನ್‌ಎಸ್‌ ವಿಸ್ತಾರʼ ನ್ಯೂಸ್‌ ತಂಡ ಕಳೆದ ಕೆಲವು ತಿಂಗಳಿನಿಂದ ಕಠಿಣ ಪರಿಶ್ರಮ ನಡೆಸುತ್ತಿದೆ. ಎಲ್ಲಾ ವಯೋಮಾನದವರ, ಎಲ್ಲಾ ವರ್ಗದವರ ಮತ್ತು ಎಲ್ಲಾ ರೀತಿಯ ಮನಸ್ಥಿತಿಯ ಜನಸಮುದಾಯವನ್ನು ತಲುಪಬೇಕು ಅನ್ನುವುದು ನಮ್ಮ ಹಿರಿಯಾಸೆ. ಕನ್ನಡಿಗರ ಆದ್ಯತೆಯ ವಿಷಯಗಳನ್ನು ಆಯ್ದು ನಮ್ಮ ಮಾಧ್ಯಮದಲ್ಲಿ ಪ್ರಸಾರ ಮಾಡಲು ಕಾರ್ಯಯೋಜನೆ ರೂಪಿಸಿಕೊಂಡಿದ್ದೇವೆ. ಈಗ ಬೇಕಿರುವುದು ನಿಮ್ಮ ಶುಭ ಹಾರೈಕೆ ಮಾತ್ರ. ನೀವು ನಮ್ಮೊಂದಿಗಿರಿ ಸಾಕು, ನಾವು ನಿಮಗಾಗಿ ದಿನದ ೨೪ ಗಂಟೆ, ವಾರದ ೭ ದಿನ, ವರ್ಷದ ೩೬೫ ದಿನಗಳು ಸೇವೆ ಸಲ್ಲಿಸಲು ಶತಸಿದ್ಧ.

ಕರುನಾಡಿನ ಸಮಸ್ತ ಕನ್ನಡಿಗರಿಗೆ ನನ್ನ ಧನ್ಯವಾದಗಳು

ಸದಾ ನಿಮ್ಮ ಸೇವೆಯಲ್ಲಿ.
-ಹೆಚ್.ಜಿ ಪವಿತ್ರ ಗೌಡ, ‌ಸಿಇಒ, ಪಿಎನ್‌ಎಸ್‌ ವಿಸ್ತಾರ ನ್ಯೂಸ್

Continue Reading

ಭವಿಷ್ಯ

Dina Bhavishya : ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಶುಭ ಸುದ್ದಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ತದಿಗೆ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for november 4 2024

ಚಂದ್ರನು ಸೋಮವಾರವೂ ವೃಶ್ಚಿಕ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ವೃಷಭ, ಸಿಂಹ, ತುಲಾ, ಧನಸ್ಸು, ಮಕರ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Dina Bhavishya) ನೋಡುವುದಾದರೆ, ಮೀನ ರಾಶಿಯವರಿಗೆ ಒತ್ತಡದ ಕೆಲಸದಿಂದ ಮುಕ್ತಿ.ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು.ಹಣಕಾಸು ವ್ಯವಹಾರದಲ್ಲಿ ಪ್ರಗತಿ.ಆರೋಗ್ಯ ಪರಿಪೂರ್ಣ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (4-11-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ.
ತಿಥಿ: ತದಿಗೆ 23:23 ವಾರ: ಸೋಮವಾರ
ನಕ್ಷತ್ರ: ಅನುರಾಧ 08:03 ಯೋಗ: ಶೋಭನ 11:42
ಕರಣ: ತೈತುಲ 10:47 ಅಮೃತಕಾಲ: ಮಧ್ಯರಾತ್ರಿ 12:20 ರಿಂದ 02:03

ಸೂರ್ಯೋದಯ : 06:12   ಸೂರ್ಯಾಸ್ತ : 05:54

ರಾಹುಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ
1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಆರ್ಥಿಕವಾಗಿ ಬಲಿಷ್ಠತೆ.ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ.ಆರೋಗ್ಯ ಪರಿಪೂರ್ಣ.ಉದ್ಯೋಗಿಗಳಿಗೆ ಒತ್ತಡ.ಹಳೆಯ ಸ್ನೇಹಿತರ ಜತೆ ಕಾಲ ಕಳೆಯುವ ಸಾಧ್ಯತೆ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಷಭ: ಪ್ರಯಾಣ ಮಾಡುವ ಸಾಧ್ಯತೆ.ಅನಿರೀಕ್ಷಿತ ಲಾಭಗಳನ್ನು ಪಡೆಯುವಿರಿ.ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ.ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ.ಸಾಮಜಿಕ ಕಾರ್ಯಗಳಲ್ಲಿ ತೊಡಗುವ ಸಾಧ್ಯತೆ.ಉದ್ಯೋಗಿಗಳಿಗೆ ಒತ್ತಡ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 2

Horoscope Today

ಮಿಥುನ: ಬಲವಂತವಾಗಿ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಪ್ರಸಂಗ.ಇಂದಿನ ದಿವಸ ಗಾಬರಿಯಿಂದ ಇರುವ ಸಾಧ್ಯತೆ.ಅವಘಡ ಸಂಭವ ನಿಧಾನವಾಗಿ ವಾಹನ ಚಾಲನೆ ಮಾಡಿ.ಕುಟುಂಬದ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುವಿರಿ.ಉದ್ಯೋಗಿಗಳಿಗೆ ಶುಭ ಫಲ.ಆರೋಗ್ಯದ ಕುರಿತು ಕಾಳಜಿ ವಹಿಸಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಒತ್ತಡದ ಜೀವನಕ್ಕೆ ವಿಶ್ರಾಂತಿ ಸಿಗಲಿದೆ.ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ.ಅಗತ್ಯ ವಸ್ತುಗಳ ಖರೀದಿ.ಸಹದ್ಯೋಗಿಗಳ ಬೆಂಬಲ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಸಿಂಹ: ಹಣಕಾಸು ವ್ಯವಹಾರದಲ್ಲಿ ಪ್ರಗತಿ.ಮಾನಸಿಕ ಆರೋಗ್ಯ ಸದೃಢ.ಅತಿ ಅವಶ್ಯಕ ಕೆಲಸದ ಕಾರಣ ದೈಹಿಕ ಶ್ರಮ.ಉದ್ಯೋಗಿಗಳಿಗೆ ಸಹಕಾರ.ಆರೋಗ್ಯ ಉತ್ತಮ.ಕೌಟುಂಬಿಕ ಕಲಹಗಳಿಗೆ ದ್ವನಿ ಆಗುವುದು ಬೇಡ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕನ್ಯಾ: ಅನಿರೀಕ್ಷಿತ ಲಾಭಗಳನ್ನು ನಿರೀಕ್ಷಿಸಬಹುದು. ದೀರ್ಘಕಾಲದ ಪ್ರಯಾಣ.ನಿರೀಕ್ಷೆಗೆ ತಕ್ಕಂತೆ ಫಲ ಸಿಗಲಿದೆ.ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಅವಕಾಶ.ಆರೋಗ್ಯದ ಕುರಿತು ಕಾಳಜಿ ಇರಲಿ.ಉದ್ಯೋಗಿಗಳಿಗೆ ಯಶಸ್ಸು.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ.ಕುಟುಂಬದಲ್ಲಿನ ಹಿರಿಯರೊಂದಿಗೆ ವಾದಕ್ಕೆ ಇಳಿಯುವುದು ಬೇಡ.ಆರ್ಥಿಕ ಪ್ರಗತಿ ಸಾಧಾರಣ.ಹರಟೆಯಿಂದ ಕಾಲ ಹರಣ ಮಾಡುವುದು ಬೇಡ.ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 3

Horoscope Today

ವೃಶ್ಚಿಕ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವವು.ಸಕರಾತ್ಮಕ ಆಲೋಚನೆ.ವ್ಯಾಪರ ವ್ಯವಹಾರದಲ್ಲಿ ಪ್ರಗತಿ.ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ.ಆರೋಗ್ಯ ಉತ್ತಮಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ಧನಸ್ಸು: ಉತ್ತಮ ಫಲಿತಾಂಶ ದೊರೆಯಲಿದೆ. ಆತ್ಮವಿಶ್ವಾಸ ಹೆಚ್ಚಲಿದೆ. ಕುಟುಂಬದ ಸದಸ್ಯರ ಮೇಲೆ ಕೋಪಗೊಳ್ಳುವುದು ಬೇಡ.ಆರೋಗ್ಯ ಮಧ್ಯಮ.ಆರ್ಥಿಕ ಪ್ರಗತಿ ಸಾಧಾರಣ..ಉದ್ಯೋಗಿಗಳಿಗೆ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮಕರ: ಸಾಮಾಜಿಕ ಕಾರ್ಯಗಳಲ್ಲಿ ಬಾಗಿ, ಪ್ರಯಾಣ ಮಾಡುವ ಸಾಧ್ಯತೆ.ಆರ್ಥಿಕ ಪ್ರಗತಿ ಉತ್ತಮ.ಪ್ರಮುಖ ಯೋಜನೆ ಕೈಗೊಳ್ಳುವ ಸಾಧ್ಯತೆ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕುಂಭ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ.ಯಾರೊಂದಿಗೂ ಅತಿಯಾದ ಸಲುಗೆ ಬೇಡ.ಆತುರದ ಮಾತುಗಳು ಅಪಾಯ ತರುವ ಸಾಧ್ಯತೆ.ಆರೋಗ್ಯದ ಕುರಿತು ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ಒತ್ತಡದ ಕೆಲಸದಿಂದ ಮುಕ್ತಿ.ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ.ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವುದು.ಹಣಕಾಸು ವ್ಯವಹಾರದಲ್ಲಿ ಪ್ರಗತಿ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 6

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading
Advertisement
Latest12 hours ago

ಫರ್ಮಾನ್ ಖಾನ್ ಜೊತೆ ಮದುವೆಯಾದ ಒಂದೇ ತಿಂಗಳಲ್ಲಿ ಮೊನಾಲಿಸಾ ಭೋಸ್ಲೆ ಗರ್ಭಿಣಿ!

Latest13 hours ago

ಎಸ್ಎಸ್ಎಲ್‌ಸಿ: ಹಿಂದಿಗೆ ಈ ಬಾರಿ ಗ್ರೇಡ್‌ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Latest13 hours ago

ಇರಾನ್‌ ಸರಕು ಸಾಗಣೆ ಹಡಗಿನ ಮೇಲೆ ಗುಂಡಿನ ದಾಳಿ: ಅಮೆರಿಕ ವಿರುದ್ಧ ಆಕ್ರೋಶ

Latest13 hours ago

ಹೋಮ್‌ಸ್ಟೇನಲ್ಲಿ ಅತ್ಯಾಚಾರ: ಸುತ್ತೋಲೆ ಹೊರಡಿಸಲಾಗಿದೆ ಎಂದ ಸಚಿವ ಪರಮೇಶ್ವರ್‌

Latest14 hours ago

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

Latest14 hours ago

ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ; “ಧಾರವಾಡ ಆಕಾಶವಾಣಿ ಕೇಂದ್ರ” ಸ್ಥಳಾಂತರಿಸದಿರಲು ನಿರ್ಧಾರ

Latest14 hours ago

ಚಿನ್ನ ಕಳ್ಳ ಸಾಗಣೆ: ನಟಿ ರನ್ಯಾರಾವ್‌ ಗೆ ಸಿಕ್ತು ಜಾಮೀನು

Latest15 hours ago

ತಮಿಳುನಾಡು: ಯಾರು ಹಿತವರು ಈ ಮೂವರೊಳಗೆ?:dmk; aiadmk; tvk

Latest16 hours ago

ಗೋಲ್ಡ್ ಸ್ಮಗ್ಲಿಂಗ್ ಹಗರಣ: ನಟಿ ರನ್ಯಾ ರಾವ್​​ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ!

ಅವಿಭಾಗೀಕೃತ16 hours ago

“ನಿಮ್ಮಿಂದಲೇ ಟ್ರಾಫಿಕ್‌ ಜಾಮ್!‌ ಗೆಟ್‌ ಔಟ್‌” ಎಂದು ಸಚಿವರನ್ನು ನಿಂದಿಸಿದ ಮಹಿಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌