ಗುರು ಸಕಲಮಾ ಆತ್ಮಕಥನ ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳುʼ ಮುಖಪುಟ ಅನಾವರಣ - Vistara News

ಪ್ರಮುಖ ಸುದ್ದಿ

ಗುರು ಸಕಲಮಾ ಆತ್ಮಕಥನ ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳುʼ ಮುಖಪುಟ ಅನಾವರಣ

ಅಧ್ಯಾತ್ಮದ ಹಾದಿ ಕಷ್ಟದ್ದು, ನಮಗಲ್ಲ ಎಂದು ಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಇದೆ. ಗೃಹಸ್ಥ ಆಶ್ರಮದಲ್ಲಿದ್ದುಕೊಂಡೇ ಅಧ್ಯಾತ್ಮದ ಹಾದಿಯಲ್ಲಿ ಪಯಣಿಸಬಹುದು. ತಂತ್ರಮಾರ್ಗದ ಬಗೆಗೆ ಇಂದು ಸಮಾಜದಲ್ಲಿ ಗೊಂದಲಗಳಿವೆ, ತಪ್ಪು ತಿಳುವಳಿಕೆಗಳೂ ಇವೆ ಎಂದು ಗುರು ಸಕಲಮಾ ನುಡಿದರು. ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಸಕಾಲಿಕ ಮತ್ತು ಕಾಲಾತೀತʼ ಕೃತಿಯ ಮುಖಪುಟವನ್ನು ಸಾಹಿತಿ ಜೋಗಿ ಅನಾವರಣಗೊಳಿಸಿದರು.

VISTARANEWS.COM


on

ಹಿಮಾಲಯ book cover page launch 2
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಿಮಾಲಯದ ಗುರು ಪರಂಪರೆ ಅವಿನಾಶಿ: ಗುರು ಸಕಲಮಾ

ಬೆಂಗಳೂರು: ಅಧ್ಯಾತ್ಮದ (Spirituality) ಬಗ್ಗೆ ಸಮಾಜದಲ್ಲಿ ಇರುವ ತಪ್ಪು ತಿಳುವಳಿಕೆಗಳು, ಭಯಗಳಿಂದಾಗಿ ಮೊದಲಿನಷ್ಟು ಮೌಲ್ಯಯುತವಾಗಿ ಅದನ್ನು ನಮಗೆ ಉಳಿಸಿಕೊಳ್ಳಲಾಗಿಲ್ಲ. ಆದರೆ, ನಾವು ಅದನ್ನು ಕಳೆದುಕೊಂಡಿಲ್ಲ. ಯಾರು ಏನೇ ಪ್ರಯತ್ನ ಮಾಡಿದರೂ ಇದನ್ನು ನಾಶ ಮಾಡಲು ಸಾಧ್ಯವಿಲ್ಲ. ಈ ನಮ್ಮ ಸಂಸ್ಕೃತಿ ಅವಿನಾಶಿ ಎಂದು ಹಿಮಾಲಯ ಯೋಗಿ ಸ್ವಾಮಿ ರಾಮ (Swami Rama) ಹಾಗೂ ಬಹುಶ್ರುತ ವಿದ್ವಾಂಸ ಡಾ. ಆರ್‌ ಸತ್ಯನಾರಾಯಣ (Dr. R Satyanarayana) ಅವರ ನೇರ ಶಿಷ್ಯೆ, ಶ್ರೀವಿದ್ಯಾ ಗುರು ಸಕಲಮಾ (Guru Sakalamaa) ಅವರು ಹೇಳಿದ್ದಾರೆ.

ಅವರು ತಮ್ಮ, ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಸಕಾಲಿಕ ಮತ್ತು ಕಾಲಾತೀತʼ ಪುಸ್ತಕದ ಇಂಗ್ಲೀಷ್‌ ಹಾಗೂ ಕನ್ನಡ ಆತ್ಮಚರಿತ್ರೆಯ ಮುಖಪುಟ ಅನಾವರಣ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಅಧ್ಯಾತ್ಮದ ಹಾದಿ ಕಷ್ಟದ್ದು, ನಮಗಲ್ಲ ಎಂದು ಸಾಮಾನ್ಯರಲ್ಲಿ ತಪ್ಪು ತಿಳುವಳಿಕೆ ಇದೆ. ಆದರೆ ಇದಕ್ಕೆ ಇನ್ನೊಂದು ಮುಖವಿದೆ ಅದು ತಂತ್ರಶಾಸ್ತ್ರ. ತಂತ್ರ ನಿಮ್ಮನ್ನು ನೀವು ಹೇಗಿದ್ದೇವೋ ಹಾಗೆಯ ಸ್ವೀಕರಿಸುತ್ತದೆ. ಗೃಹಸ್ಥ ಆಶ್ರಮದಲ್ಲಿದ್ದುಕೊಂಡೇ ನೀವು ಅಧ್ಯಾತ್ಮ ದ ಹಾದಿಯಲ್ಲಿ ಪಯಣಿಸಬಹುದು. ಈ ತಂತ್ರದ ಬಗೆಗೆ ಇಂದು ಸಮಾಜದಲ್ಲಿ ಗೊಂದಲಗಳಿವೆ, ತಪ್ಪು ತಿಳುವಳಿಕೆಗಳೂ ಇವೆ. ಇದು ಇವತ್ತಿನ ಸಮಸ್ಯೆಯಲ್ಲ. ಶಂಕರಾಚಾರ್ಯರ ಕಾಲದಿಂದಲೂ ಇತ್ತು. ಅವರು ಇದಕ್ಕೆ ಅಂಟಿದ ಜಾಡ್ಯಗಳನ್ನು ಕಿತ್ತೆಸೆದು ಅದನ್ನು ಪ್ರವರ್ಧಮಾನಕ್ಕೆ ತರಲು ಶ್ರಮಿಸಿದರು ಎಂದರು.

ನನ್ನಮ್ಮ ನನಗೆ ಋಷಿಮುನಿಗಳ ಕತೆಗಳನ್ನೆಲ್ಲ ಹೇಳುವಾಗ ಈ ಕತೆಗಳ ಋಷಿಮುನಿಗಳಿಗೂ ನಮಗೂ ಸಂಬಂಧವಿಲ್ಲ, ಅವರು ಯಾವುದೋ ಲೋಕದಲ್ಲಿ ಕೂತಿರುವವರು. ನನಗೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದೇ ನಾನಂದುಕೊಂಡಿದ್ದೆ. ಆದರೆ, ಶ್ರದ್ಧೆಯಿಂದ ನೀವು ಈ ಲೋಕಕ್ಕೆ ಬಂದರೆ, ಇವು ಕತೆಗಳಲ್ಲ, ಅಧ್ಯಾತ್ಮಿಕ ಸತ್ಯಗಳು ಎಂಬುದು ನಿಮಗೆ ಗೋಚರವಾಗಬಹುದು. ನೀವು ಬಯಸಿದಲ್ಲಿ, ಈ ಪುಸ್ತಕದಲ್ಲಿ ಬಂದಿರುವ ಋಷಿಮುನಿಗಳನ್ನೆಲ್ಲ ನೀವು ಭೇಟಿ ಮಾಡಬಹುದು. ನಿಮ್ಮ ಕನಸಿನಲ್ಲೂ ಅವರು ಬಂದು ನಿಮ್ಮ ಜೊತೆ ಮಾತನಾಡಬಹುದು. ಪಕ್ಕದಲ್ಲೇ ಗೆಳೆಯನ ರೀತಿಯಲ್ಲಿ ಬಂದು ನಿಮಗೆ ಅರಿವು ಮೂಡಿಸಿ ಹೋಗಬಹುದು. ಅವರೆಲ್ಲ ಬೇರೊಂದು ಲೋಕದಲ್ಲಿ ಕುಳಿತು, ಈ ಲೋಕಕಲ್ಯಾಣಕ್ಕಾಗಿ ಕಂಕಣ ಬದ್ಧರಾಗಿ ನಿಂತಿದ್ದಾರೆ, ಸದಾ ನಮ್ಮನ್ನು ಪೊರೆಯುತ್ತಿದ್ದಾರೆ ಎಂದು ಅವರು ಹೇಳಿದರು.

ಬದುಕಿನ ಪಯಣದಲ್ಲಿ ಗುರುವಿನ ಸ್ಥಾನ ದೊಡ್ಡದು. ನಾನು, ನನ್ನದು ಎಂಬುದನ್ನು ಬಿಟ್ಟಾಗ ಗುರು ಸಿಕ್ಕುತ್ತಾನೆ. ಗುರುವಿನ ಅನ್ವೇಷಣೆಯಲ್ಲಿ ನಾವಿದ್ದೇವೆ ಎಂಬುದು ಅನೇಕ ಸಾರಿ ನಮಗೆ ಅರಿವೇ ಇರುವುದಿಲ್ಲ. ಅದಕ್ಕಾಗಿಯೇ, ಅರಿವೇ ಗುರುವು ಗುರುವೇ ಅರಿವು. ಗುರು ಸಿಕ್ಕ ಮೇಲೆ ಕೆಲವರಿಗೆ ಅರಿವು ಸಿಕ್ಕರೆ, ಇನ್ನು ಕೆಲವರಿಗೆ ಅರಿವಾಗಿ ಗುರು ಬೇಕು ಅನಿಸುತ್ತದೆ ಎಂದು ಹೇಳಿದರು.

ಹಿಮಾಲಯ book cover page launch 2

ಕನ್ನಡಪ್ರಭದ ಪುರವಣಿ ಸಂಪಾದಕ, ಸಾಹಿತಿ ಜೋಗಿ (Writer Jogi) ಮಾತನಾಡಿ, ಒಂದು ಪುಸ್ತಕವನ್ನು ಗೆಲ್ಲಿಸುವ ಅಂಶಗಳೆಂದರೆ ಮುಗ್ದತೆ ಹಾಗೂ ಪ್ರಾಮಾಣಿಕತೆ. ಇಂದು ಎಷ್ಟೋ ಪುಸ್ತಕಗಳು ಅಪ್ರಾಮಾಣಿಕವಾಗಿ ಇರುತ್ತದೆ, ಪುಸ್ತಕದ ಕೆಲವು ಪುಟಗಳನ್ನು ತೆರೆದು ನೋಡಿದ ತಕ್ಷಣ ಇದು ಪ್ರಾಮಾಣಿಕವೋ, ಅಪ್ರಾಮಾಣಿಕವೋ ಎಂಬುದು ಅರ್ಥವಾಗುತ್ತದೆ. ಈ ಪುಸ್ತಕ ಕೆಲವು ಪುಟಗಳನ್ನು ಮುಂಚಿತವಾಗಿ ಓದಿದ್ದರಿಂದ ನನಗೆ ಇದರಲ್ಲಿ ಮುಗ್ಧತೆ ಹಾಗೂ ಪ್ರಾಮಾಣಿಕತೆ ಎದ್ದು ಕಾಣುತ್ತಿವೆ. ಹಾಗಾಗಿ ಇದು ಸಾಕಷ್ಟು ಕುತೂಹಲವನ್ನು ಹುಟ್ಟುಹಾಕಿದೆ ಎಂದರು.

ಇಂದು ಪಾರಲೌಕಿಕ ಅಂದ ತಕ್ಷಣ ನಮಗೊಂದು ತಪ್ಪು ಕಲ್ಪನೆಯಿದೆ. ನಮಗೆ ಆ ವೇಷವನ್ನು ತೊಟ್ಟುಕೊಳ್ಳುವ ಧೈರ್ಯ ಇದೆಯೇ? ನಾವು ಆ ಜಗತ್ತಿಗೆ ಹೋಗಬಲ್ಲೆವಾ? ಇತ್ಯಾದಿ ಪ್ರಶ್ನೆಗಳು ನಮ್ಮನ್ನು ಕಾಡಿ ನಾವು ಅದರ ಗೊಡವೆಗೇ ಹೋಗುವುದಿಲ್ಲ. ಪುರಂದರ ದಾಸರೇ ʻಇಷ್ಟು ದಿನ ಈ ವೈಕುಂಠ ಎಷ್ಟು ದೂರ ಎನ್ನುತಲಿದ್ದೆʼ ಎಂದು ಬರೆಯುವ ಮೂಲಕ ವೈಕುಂಠ ಇಲ್ಲೇ ಇದ್ದರೂ, ಅಲ್ಲಿದೆ ಎಂದು ತಿಳಿದಿದ್ದೆ ಎನ್ನುವ ಸತ್ಯವನ್ನು ಹೇಳಿದ್ದಾರೆ. ಈ ಪುಸ್ತಕ ಈ ರೀತಿಯಲ್ಲಿ ಅಂಜಿಕೆಗಳನ್ನು ದೂರ ಮಾಡಿ ಸಂಕೋಚದ ತೆರೆಯನ್ನು ಸರಿಸಲು ದಾರಿದೀಪವಾಗಬಹುದು ಎಂದರು.

ಜೀವನದಲ್ಲಿ ನಾವು ಕಳೆದುಕೊಳ್ಳುವುದು ಅಪನಂಬಿಕೆಯಿಂದ. ನಮ್ಮಲ್ಲಿ ಅಪನಂಬಿಕೆಯಿದೆ ಎಂದರೆ ಅದು ನಮ್ಮ ವ್ಯಕ್ತಿತ್ವದ ದೋಷವೇ ಹೊರತು ಗುರುವಿನ ದೋಷವಲ್ಲ. ಒಂದು ಕತೆಯ ಒಳಗೆ ನನಗೆ ಹೋಗಲಾಗದಿದ್ದರೆ, ಅದು ಆ ಕಥನದ ದೋಷವಲ್ಲ, ಆ ಕಥನವನ್ನು ಸ್ವೀಕರಿಸುವ ಅನುಭವದ ಕೊರತೆಯೇ ಕಾರಣ. ಮನುಷ್ಯ ಎಲ್ಲ ದುಃಖಗಳನ್ನೂ, ಸುಖವನ್ನು ಬದುಕಿನಲ್ಲಿ ಅನುಭವಿಸಿದ ಮೇಲೆ ಒಂದು ಹುಡುಕಾಟ ಹಾದಿಯತ್ತ ಹೊರಳುತ್ತಾನೆ. ಈ ಹಾದಿಯಲ್ಲಿ ಸಿಗುವ ಗುರು ಯಾವುದೇ ರೂಪದಲ್ಲಿರಬಹುದು. ಇಂಥ ಸಂದರ್ಭ ನಂಬಿಕೆ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಅವರು ಹೇಳಿದರು. ಪುಸ್ತಕ ಜಗತ್ತಿಗೆ ಇಂಥದ್ದೊಂದು ಸಮಾರಂಭ ಬೇಕಿದೆ. ಮುಖಪುಟ ಅನಾವರಣವನ್ನೂ ಸಂಭ್ರಮಿಸುವ ಈ ನಡೆ ಪುಸ್ತಕ ಜಗತ್ತಿನಲ್ಲಿ ಸ್ವಾಗತಾರ್ಹ ಎಂದೂ ಅವರು ಹೇಳಿದರು.

ಸಕಲಮಾ ಅವರ ಯುಟ್ಯೂಬ್ ಅನಾವರಣಗೊಳಿಸಿದ ಕಾಂತಾರ (Kantara Movie) ಖ್ಯಾತಿಯ ನಟಿ ಸಪ್ತಮಿ ಗೌಡ (Saptami Gowda) ಮಾತನಾಡಿ, ಮುಖಪುಟವನ್ನು ನೋಡಿ ಪುಸ್ತಕವನ್ನು ಅಳೆಯಬೇಡಿ ಎಂಬ ಇಂಗ್ಲೀಷ್‌ ನುಡಿಗಟ್ಟಿದೆ. ಆದರೆ, ಸಾಮಾನ್ಯವಾಗಿ ನಾವು ಮುಖಪುಟವನ್ನು, ಟ್ರೈಲರ್‌ಗಳನ್ನು ನೋಡಿ ಅಳೆಯುವ ಪರಿಸ್ಥಿತಿ ಈಗ ಎಲ್ಲೆಡೆ ಇದೆ. ಒಳ ಹೂರಣ ಇದ್ದರೆ ಸಿನಿಮಾವಿರಲಿ, ಪುಸ್ತಕವಿರಲಿ ಗೆದ್ದೇ ಗೆಲ್ಲುತ್ತದೆ ಎಂಬುದು ನಾನು ಕಾಂತಾರದಿಂದ ಕಲಿತ ಪಾಠ ಎಂದರು.

ಒಂದು ಸಿನಿಮಾ ಮಾಡುವಂತೆ, ಪುಸ್ತಕ ಬರೆಯುವುದೂ ಕೂಡಾ ಸಾಕಷ್ಟು ಶ್ರಮ ಬೇಡುವ ಕೆಲಸ. ಅದರ ಹಿಂದೆ ಅಪಾರ ಶ್ರದ್ಧೆಯಿದೆ. ಸಿನಿಮಾ ಮಂದಿ ತಮ್ಮ ಸಿನಿಮಾದ ಕುತೂಹಲ ಮೊದಲೇ ಹೆಚ್ಚಿಸಲು ಟ್ರೈಲರ್, ಟೀಸರ್‌ ಬಿಡುಗಡೆಯನ್ನು ಇಟ್ಟುಕೊಳ್ಳುತ್ತಾರೆ. ಹಾಗಾಗಿ, ಪುಸ್ತಕವನ್ನೂ ಹೆಚ್ಚು ಮಂದಿಗೆ ತಲುಪಿಸಲು, ಕುತೂಹಲ ಹುಟ್ಟು ಹಾಕಿಲು ಇಂಥ ಮುಖಪುಟ ಅನಾವರಣದಂತಹ ಕಾರ್ಯಕ್ರಮಗಳು ನಡೆಯಬೇಕು. ಜನರು ಸೇರಬೇಕು. ಓದುವ ಪರಂಪರೆ ಹೆಚ್ಚಬೇಕು ಎಂದರು.

ಗುರು ಯಾರೇ ಇರಲಿ, ಅವರ ಮೇಲೆ ನಮಗೆ ನಂಬಿಕೆ ಇರಬೇಕು. ಜೀವನದಲ್ಲಿ ಕಲಿಯುವ ಹಾದಿ ದೊಡ್ಡದಿದೆ. ಆ ಸಂದರ್ಭ ಗುರು ತಿದ್ದಿದ್ದನ್ನು ನಾವು ಕಲಿತುಕೊಳ್ಳುವ ಆಸಕ್ತಿ ಇರಬೇಕು. ಅದಕ್ಕಾಗಿ ಗುರು ತೋರಿದ ಹಾದಿಯಲ್ಲಿ ನಾವು ನಡೆಯಬೇಕು ಎಂದೂ ಹೇಳಿದರು.

ಜುಲೈ 21ರಂದು ಚಂಡೀಗಢದಲ್ಲಿ ಆಂಗ್ಲ ಭಾಷೆಯ `Messages from the Himalayan Sages- Timely and Timeless’ ಹಾಗೂ ಸೆಪ್ಟೆಂಬರ್22ರಂದು ಬೆಂಗಳೂರಿನ ಗಾಯನ ಸಮಾಜದಲ್ಲಿ ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಸಕಾಲಿಕ ಮತ್ತು ಕಾಲಾತೀತʼ ಕನ್ನಡ ಪುಸ್ತಕ ಲೋಕಾರ್ಪಣೆಗೊಳ್ಳಲಿದೆ. ಗುರು ಸಕಲಮಾ ಅವರ ಯುಟ್ಯೂಬ್‌ ಲಿಂಕ್- https://youtube.com/@gurusakalamaa?feature=shared

ಇದನ್ನೂ ಓದಿ: ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

Narendra Modi: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್‌ ಸುಲಿವನ್‌ ಅವರನ್ನು ಭೇಟಿಯಾಗಿ ಹಲವು ವಿಷಯಗಳ ಕುರಿತು ಚರ್ಚಿಸಿದರು. ಜೇಕ್‌ ಸುಲಿವನ್‌ ಅವರ ಜತೆಗಿನ ಭೇಟಿಯ ಕುರಿತು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಅವರೇ ಮಾಹಿತಿ ನೀಡಿದ್ದಾರೆ. ಇಬ್ಬರೂ ರಕ್ಷಣೆ, ಭದ್ರತೆ ಸೇರಿ ಹಲವು ವಿಷಯಗಳ ಕುರಿತು ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ದೆಹಲಿಯಲ್ಲಿ ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ (US NSA) ಜೇಕ್‌ ಸುಲಿವನ್‌ (Jake Sullivan) ಅವರನ್ನು ಭೇಟಿಯಾಗಿದ್ದಾರೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಎರಡು ದಿನಗಳ ಭೇಟಿಗಾಗಿ ಭಾರತ ಪ್ರವಾಸ ಕೈಗೊಂಡಿರುವ ಜೇಕ್‌ ಸುಲಿವನ್‌ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿ, ರಕ್ಷಣೆ, ಭದ್ರತೆ, ದ್ವಿಪಕ್ಷೀಯ ಸಂಬಂಧ ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಜೇಕ್‌ ಸುಲಿವನ್‌ ಅವರನ್ನು ಭೇಟಿಯಾದ ಬಳಿಕ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ನರೇಂದ್ರ ಮೋದಿ ಅವರು ಪೋಸ್ಟ್‌ ಮಾಡಿದ್ದಾರೆ. “ಅಮೆರಿಕ ಎನ್‌ಎಸ್‌ಎ ಜೇಕ್‌ ಸುಲಿವನ್‌ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದೆ. ಜಾಗತಿಕ ಸ್ಥಿರತೆ ಹಾಗೂ ಅಭಿವೃದ್ಧಿಗಾಗಿ ಅಮೆರಿಕದ ಜತೆ ಭಾರತವು ವ್ಯೂಹಾತ್ಮಕ ಪಾಲುದಾರಿಕೆಯನ್ನು ಮುಂದುವರಿಸಲು ಬದ್ಧವಾಗಿದೆ” ಎಂಬುದಾಗಿ ಬರೆದುಕೊಂಡಿದ್ದಾರೆ. ಜೂನ್‌ 18ರಂದು ಕೂಡ ಜೇಕ್‌ ಸುಲಿವನ್‌ ಅವರು ಭಾರತದಲ್ಲಿಯೇ ಇರಲಿದ್ದಾರೆ.

ಇಟಲಿಯಲ್ಲಿ ಕೆಲ ದಿನಗಳ ಹಿಂದಷ್ಟೇ ನಡೆದ ಜಿ-7 ಶೃಂಗಸಭೆಯಲ್ಲಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡೆನ್‌ ಅವರನ್ನು ಭೇಟಿಯಾಗಿ, ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಭಾರತ ಹಾಗೂ ಅಮೆರಿಕ ಸಂಬಂಧ, ಪರಸ್ಪರ ಸಹಕಾರ, ನೆರವು, ಒಪ್ಪಂದ, ರಕ್ಷಣೆ ಸೇರಿ ಹಲವು ವಿಷಯಗಳ ಕುರಿತು ನರೇಂದ್ರ ಮೋದಿ ಅವರು ಜೋ ಬೈಡೆನ್‌ ಅವರೊಂದಿಗೆ ಚರ್ಚಿಸಿದ್ದರು. ಇದಾದ ಕೆಲವೇ ದಿನಗಳಲ್ಲಿ ಜೇಕ್‌ ಸುಲಿವನ್‌ ಅವರು ಭಾರತಕ್ಕೆ ಆಗಮಿಸಿರುವುದು ಮಹತ್ವದ ಸಂಗತಿ ಎಂದೇ ಹೇಳಲಾಗುತ್ತಿದೆ.

ದೋವಲ್-ಜೇಕ್‌ ಭೇಟಿ

ಜೇಕ್‌ ಸುಲಿವನ್‌ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗುವ ಮೊದಲು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರನ್ನು ಭೇಟಿಯಾದರು. ರಕ್ಷಣಾ ಒಪ್ಪಂದಗಳು ಹಾಗೂ ಪ್ರಾದೇಶಿಕ ಭದ್ರತಾ ವ್ಯವಸ್ಥೆಯನ್ನು ಖಚಿತಪಡಿಸುವ ಭಾರತ-ಅಮೆರಿಕ ನಡುವಿನ ಇನಿಶಿಯೇಟಿವ್‌ ಆನ್‌ ಕ್ರಿಟಿಕಲ್‌ ಆ್ಯಂಡ್‌ ಎಮರ್ಜಿಂಗ್‌ ಟೆಕ್ನಾಲಜೀಸ್‌ (iCET) ಯೋಜನೆ ಜಾರಿ ಕುರಿತು ಇಬ್ಬರೂ ಎನ್‌ಎಸ್‌ಗಳು ಚರ್ಚಿಸಿದರು ಎಂಬುದಾಗಿ ಮೂಲಗಳು ತಿಳಿಸಿವೆ. ಇಂಡಿಯಾ-ಮಿಡಲ್‌ ಈಸ್ಟ್-ಯುರೋಪ್‌ ಎಕನಾಮಿಕ್‌ ಕಾರಿಡಾರ್‌ (IMEC) ಕುರಿತು ಕೂಡ ಚರ್ಚೆ ನಡೆಸಿದರು ಎನ್ನಲಾಗಿದೆ.

ಇದನ್ನೂ ಓದಿ: Amit Shah: ಕಾಶ್ಮೀರದಲ್ಲಿ ಒಬ್ಬನೇ ಒಬ್ಬ ಉಗ್ರ ಉಳಿಯಬಾರದು; ಖಡಕ್‌ ಆದೇಶ ಕೊಟ್ಟ ಅಮಿತ್‌ ಶಾ

Continue Reading

ಕರ್ನಾಟಕ

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Actor Chikkanna: Actor Chikkanna: ರೇಣುಕಾಸ್ವಾಮಿ ಕೊಲೆಯಾದ ದಿನವೇ ಅಂದರೆ, ಜೂನ್‌ 8ರಂದು ನಟ ದರ್ಶನ್‌ ಜತೆ ಪಾರ್ಟಿ ಮಾಡಿರುವುದು ನಿಜ ಎಂಬುದಾಗಿ ನಟ ಚಿಕ್ಕಣ್ಣ ಒಪ್ಪಿಕೊಂಡಿದ್ದಾರೆ. ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಮಹಜರು ಮಾಡುವ ವೇಳೆ ಪಬ್‌ಗೆ ತೆರಳಿದ ಚಿಕ್ಕಣ್ಣ, ಪಾರ್ಟಿಯ ಕುರಿತು ಮಾಹಿತಿ ನೀಡಿದ್ದಾರೆ. ಇದಾದ ಬಳಿಕ ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೂ ತೆರಳಿ, ಸುಮಾರು ಮೂರು ತಾಸು ವಿಚಾರಣೆ ಎದುರಿಸಿದ್ದಾರೆ.

VISTARANEWS.COM


on

Actor Chikkanna
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ (Renukaswamy Murder Case) ಸಂಬಂಧಿಸಿದಂತೆ ನಟ ಚಿಕ್ಕಣ್ಣ (Actor Chikkanna) ಅವರನ್ನೂ ಕಾಮಾಕ್ಷಿಪಾಳ್ಯ ಪೊಲೀಸರು ವಿಚಾರಣೆ ನಡೆಸಿದ್ದಾರೆ. ರೇಣುಕಾಸ್ವಾಮಿ ಕೊಲೆಯಾದ ದಿನವಾದ ಜೂನ್‌ 8ರಂದೇ ಕೊಲೆ ಆರೋಪಿ ನಟ ದರ್ಶನ್‌ (Actor Darshan) ಜತೆಗೆ ಚಿಕ್ಕಣ್ಣ ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದು, ಅದರಂತೆ ಚಿಕ್ಕಣ್ಣ ಅವರು ವಿಚಾರಣೆಗೆ ಹಾಜರಾದರು. ಸುಮಾರು ಮೂರು ತಾಸಿನ ವಿಚಾರಣೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಚಿಕ್ಕಣ್ಣ, “ದರ್ಶನ್‌ ಅವರು ಜೂನ್‌ 8ರಂದು ಊಟಕ್ಕೆ ಕರೆದಿದ್ರು, ಹೋಗಿದ್ದೆ” ಎಂದಷ್ಟೇ ತಿಳಿಸಿದ್ದಾರೆ.

“ಸಾಮಾನ್ಯವಾಗಿ ದರ್ಶನ್‌ ಅವರು ನನ್ನನ್ನು ಊಟಕ್ಕೆ ಕರೆಯುತ್ತಾರೆ. ಅದರಂತೆ, ಜೂನ್‌ 8ರಂದು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಊಟಕ್ಕೆ ಹೋಗಿದ್ದೆ. ಊಟ ಮುಗಿಸಿಕೊಂಡು ನಾನು ಅಲ್ಲಿಂದ ತೆರಳಿದೆ. ಅದಕ್ಕೆ ಸಂಬಂಧಿಸಿದಂತೆ ಪೊಲೀಸರು ಕರೆದಿದ್ದರು” ಎಂಬುದಾಗಿ ಚಿಕ್ಕಣ್ಣ ಮೊದಲ ಪ್ರತಿಕ್ರಿಯೆ ನೀಡಿದರು. “ದರ್ಶನ್‌ ಜತೆ ಊಟಕ್ಕೆ ಹೋದಾಗ ಯಾರ‍್ಯಾರು ಇದ್ದರು” ಎಂದು ಮಾಧ್ಯಮದವರು ಕೇಳಿದ್ದಕ್ಕೆ, “ಪ್ರಕರಣವು ವಿಚಾರಣೆ ಹಂತದಲ್ಲಿದೆ. ನಾನು ಇದುವರೆಗೆ ವಿಚಾರಣೆಗೆ ಸಹಕರಿಸಿದ್ದೇನೆ. ಇದಕ್ಕಿಂತ ಹೆಚ್ಚೇನೂ ಹೇಳಲು ಆಗುವುದಿಲ್ಲ” ಎಂಬುದಾಗಿ ಪ್ರತಿಕ್ರಿಯಿಸಿದರು.

ರೇಣುಕಾಸ್ವಾಮಿ ಕೊಲೆಗೀಡಾದ ದಿನವೇ ಸ್ಟೋನಿ ಬ್ರೂಕ್‌ನಲ್ಲಿ ದರ್ಶನ್‌ ಸೇರಿ ಹಲವರು ಪಾರ್ಟಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡು ಹೋಗಿ ಸ್ಥಳ ಮಹಜರು ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಣ್ಣ ಅವರೂ ಸ್ಥಳ ಮಹಜರಿನ ವೇಳೆ ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಭೇಟಿ ನೀಡಿದ್ದಾರೆ. ಅಲ್ಲಿಯೇ, ದರ್ಶನ್‌ ಜತೆ ಪಾರ್ಟಿ ಮಾಡಿರುವುದನ್ನು ಚಿಕ್ಕಣ್ಣ ಪೊಲೀಸರ ಎದುರು ಒಪ್ಪಿಕೊಂಡಿದ್ದಾರೆ.

“ಜೂನ್‌ 8ರಂದು ಆರ್‌ ಆರ್‌ ನಗರದ ಸ್ಟೋನಿ ಬ್ರೂಕ್‌ ಪಬ್‌ಗೆ ಹೋಗಿದ್ದೆ. ಮಧ್ಯಾಹ್ನ 1.30ರ ಸುಮಾರಿಗೆ ಪಬ್‌ಗೆ ಹೋಗಿದ್ದೆ. ದರ್ಶನ್‌ ಹಾಗೂ ನಾನು ಒಂದೇ ಟೇಬಲ್‌ನಲ್ಲಿ ಪಾರ್ಟಿ ಮಾಡಿದ್ವಿ. ಸಂಜೆ 4.30ರ ಸುಮಾರಿಗೆ ದರ್ಶನ್‌ ಅವರು ಪಬ್‌ನಿಂದ ಹೊರಟರು. ಅವರ ಜತೆ ನಾನೂ ಅಲ್ಲಿಂದ ಹೊರಟೆ. ನಾನು ನಮ್ಮ ಮನೆಗೆ ಹೋದೆ, ದರ್ಶನ್‌ ಅವರು ಎಲ್ಲಿಗೆ ಹೋದರೋ ಗೊತ್ತಿಲ್ಲ. ನಾವು ಸಿನಿಮಾ ವಿಚಾರಕ್ಕಾಗಿ ಭೇಟಿ ಮಾಡಿದ್ವಿ. ಅದಷ್ಟೇ ಮಾತನಾಡಿ ನಾವು ಹೊರಟು ಹೋದೆವು” ಎಂಬುದಾಗಿ ಪೊಲೀಸರಿಗೆ ಚಿಕ್ಕಣ್ಣ ಮಾಹಿತಿ ನೀಡಿದ್ದಾರೆ.

ನಟ ದರ್ಶನ್‌ ಸೇರಿ ಹಲವು ಆರೋಪಿಗಳನ್ನು ಸ್ಟೋನಿ ಬ್ರೂಕ್‌ ರೆಸ್ಟೋರೆಂಟ್‌ಗೆ ಕರೆದುಕೊಂಡ ಹೋದ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಇದಾದ ನಂತರ ಚಿಕ್ಕಣ್ಣ ಅವರು ಕೂಡ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ತೆರಳಿ ಹೇಳಿಕೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಚಿಕ್ಕಣ್ಣ ಅವರು ಪೊಲೀಸ್‌ ಠಾಣೆಗೆ ಹೋದ ವಿಡಿಯೊ ಕೂಡ ಲಭ್ಯವಾಗಿದೆ. ಪಾರ್ಟಿ ಹಿನ್ನೆಲೆಯಲ್ಲಿ ನಟ ಚಿಕ್ಕಣ್ಣ ಅವರಿಗೆ ಇದಕ್ಕೂ ಮೊದಲು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ನೋಟಿಸ್‌ ನೀಡಿದ್ದರು. ಇದು ಚಿಕ್ಕಣ್ಣ ಅವರಿಗೂ ಆತಂಕ ತಂದಿತ್ತು ಎನ್ನಲಾಗಿದೆ.

ಇದನ್ನೂ ಓದಿ: Actor Darshan: ಅಂದು `ತಗಡು’ ಅಂದಿದ್ದ ದರ್ಶನ್‌ಗೆ ಇಂದು ಉಮಾಪತಿ ಕೌಂಟರ್!

Continue Reading

ಸಿನಿಮಾ

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

Pushpa 2: Pushpa 2: 2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡಿದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಇದರ ಬೆನ್ನಲ್ಲೇ ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ.

VISTARANEWS.COM


on

Pushpa 2
Koo

ಹೈದರಾಬಾದ್:‌ ಟಾಲಿವುಡ್‌ ಐಕಾನ್‌ ಸ್ಟಾರ್‌ ಅಲ್ಲು ಅರ್ಜುನ್‌ (Allu Arjun) ನಟನೆಯ ಬಹುನಿರೀಕ್ಷಿತ ಪುಷ್ಪ 2 (Pushpa 2) ಸಿನಿಮಾದ ಬಿಡುಗಡೆಯನ್ನು ಐದು ತಿಂಗಳು ಮುಂದೂಡಲಾಗಿದೆ. ಪುಷ್ಪ 2 ಸಿನಿಮಾವನ್ನು ಆಗಸ್ಟ್‌ 5ರ ಬದಲಾಗಿ ಇದೇ ವರ್ಷದ ಡಿಸೆಂಬರ್‌ 6ರಂದು ಬಿಡುಗಡೆ ಮಾಡಲು ಚಿತ್ರತಂಡವು ತೀರ್ಮಾನಿಸಿದೆ. ಈ ಕುರಿತು ಅಲ್ಲು ಅರ್ಜುನ್‌ ಅವರೇ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟನೆ ನೀಡಿದ್ದಾರೆ. ಇದರಿಂದಾಗಿ ಅಲ್ಲು ಅರ್ಜುನ್‌ ಅಭಿಮಾನಿಗಳಿಗೆ ತುಸು ಬೇಸರ ಉಂಟಾದಂತಾಗಿದೆ.

ಸಿನಿಮಾ ಮುಂದೂಡಿಕೆ ಏಕೆ?

ಅಲ್ಲು ಅರ್ಜುನ್‌ ವಿಧಾನಸಭೆ ಚುನಾವಣೆ ವೇಳೆ ನಂದಿಯಾಲ ವಿಧಾನಸಭೆ ಕ್ಷೇತ್ರದಲ್ಲಿ ವೈಎಸ್‌ಆರ್‌ಸಿಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದರು. ಇದರಿಂದಾಗಿ ಮೆಗಾ ಸ್ಟಾರ್‌ ಕುಟುಂಬದ ಪವನ್‌ ಕಲ್ಯಾಣ್‌ ಅವರ ಅಭಿಮಾನಿಗಳ ಆಕ್ರೋಶಕ್ಕೆ ಅಲ್ಲು ಅರ್ಜುನ್‌ ಗುರಿಯಾಗಿದ್ದಾರೆ. ಅಲ್ಲದೆ, ಪುಷ್ಟ 2 ಸಿನಿಮಾವನ್ನು ನಾವು ವೀಕ್ಷಿಸುವುದಿಲ್ಲ, ಬಾಯ್ಕಾಟ್‌ ಮಾಡುತ್ತೇವೆ ಎಂಬುದಾಗಿ ಪವರ್‌ ಸ್ಟಾರ್‌ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗಾಗಿಯೇ, ಸಿನಿಮಾ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಮತ್ತೊಂದಿಷ್ಟು ಮೂಲಗಳ ಪ್ರಕಾರ, ನಿರ್ದೇಶಕ ಸುಕುಮಾರ್ ಇನ್ನೂ ಚಿತ್ರದ ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಹಂತದ ಕೆಲಸಗಳಲ್ಲಿ ನಿರತರಾಗಿರುವುದರಿಂದ ಸಿನಿಮಾ ಬಿಡುಗಡೆಯ ದಿನಾಂಕವನ್ನು ಮುಂದೂಡಲಾಗಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಒಂದು ತಿಂಗಳ ಶೂಟಿಂಗ್ ಬಾಕಿಯಿದ್ದು ಜುಲೈ ವೇಳೆಗೆ ಚಿತ್ರೀಕರಣ ಪೂರ್ಣಗೊಳಿಸುವ ಗುರಿಯನ್ನು ಸುಕುಮಾರ್ ಹೊಂದಿದ್ದಾರೆ ಎನ್ನಲಾಗಿದೆ. ಅಗಸ್ಟ್ 15 ರಂದು ಅಕ್ಷಯ್ ಕುಮಾರ್ ಅವರ ‘ಖೇಲ್ ಖೇಲ್ ಮೇ’ ಕೂಡ ಬಿಡುಗಡೆಗೊಳ್ಳುತ್ತಿದೆ. ಈ ಮೊದಲು, ‘ಖೇಲ್ ಖೇಲ್ ಮೇ’ ಸೆಪ್ಟೆಂಬರ್ 6 ರಂದು ಅದ್ಧೂರಿಯಾಗಿ ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು.

2021ರಲ್ಲಿ ತೆರೆಕಂಡು ಬಾಕ್ಸ್‌ ಆಫೀಸ್‌ನಲ್ಲಿ ಮ್ಯಾಜಿಕ್‌ ಮಾಡುದ್ದ ಪ್ಯಾನ್‌ ಇಂಡಿಯಾ ಸಿನಿಮಾ ʼಪುಷ್ಪʼದ ಮುಂದುವರಿದ ಭಾಗ ಇದು. ಸುಕುಮಾರ್ ನಿರ್ದೇಶನದ ‘ಪುಷ್ಪ 2’ ಚಿತ್ರದ ಮೊದಲ ಹಾಡು ಈಗಾಗಲೇ ರಿಲೀಸ್‌ ಆಗಿ ಧೂಳೆಬ್ಬಿಸುತ್ತಿದೆ. ಅದರಲ್ಲಿಯೂ ಯೂಟ್ಯೂಬ್‌ನಲ್ಲಿ ದಾಖಲೆಯ ವೀಕ್ಷಣೆ ಕಂಡಿದೆ. ʻಪುಷ್ಪ ಪುಷ್ಪʼ ಎಂದು ಶುರುವಾಗುವ ಹಾಡಿಗೆ ರಾಕ್ ಸ್ಟಾರ್ ದೇವಿಶ್ರೀ ಪ್ರಸಾದ್ ಸಂಗೀತ ನೀಡಿದ್ದು, ಇದರಲ್ಲಿನ ಹುಕ್ ಸ್ಟೆಪ್ ವೈರಲ್‌ ಆಗಿದೆ. ಎರಡನೇ ಹಾಡು ಕೂಡ ಔಟ್‌ ಆಗಿದ್ದು, ಅಲ್ಲು ಅರ್ಜುನ್‌ ಜತೆ ರಶ್ಮಿಕಾ ಹೆಜ್ಜೆ ಹಾಕಿದ್ದಾರೆ. ಹಾಡು ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ವೀಕ್ಷಣೆ ಪಡೆದುಕೊಂಡಿದೆ.

ಇದನ್ನೂ ಓದಿ: Pushpa 2: ʼಪುಷ್ಪ 2ʼ ಸಿನಿಮಾ ತಂಡದಿಂದ ಅಲ್ಲು ಅರ್ಜುನ್‌ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌; ಎರಡನೇ ಹಾಡು ರಿಲೀಸ್‌ಗೆ ಮುಹೂರ್ತ ಫಿಕ್ಸ್‌

Continue Reading

ದೇಶ

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Narendra Modi: ನರೇಂದ್ರ ಮೋದಿ ಅವರು ಕೆಲ ದಿನಗಳ ಹಿಂದಷ್ಟೇ ಇಟಲಿಯಲ್ಲಿ ಪೋಪ್‌ ಫ್ರಾನ್ಸಿಸ್‌ ಅವರನ್ನು ಭೇಟಿಯಾಗಿದ್ದರು. ಇದೇ ಫೋಟೊವನ್ನು ಇಟ್ಟುಕೊಂಡು ಮೋದಿ ಅವರನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ ಈಗ ಸೆಲ್ಫ್‌ಗೋಲ್‌ ಹೊಡೆದುಕೊಂಡಿದೆ. ಮೋದಿ ಕುರಿತ ಲೇವಡಿ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಲೇ ಪೋಸ್ಟ್‌ಅನ್ನು ಕೇರಳ ಕಾಂಗ್ರೆಸ್‌ ಡಿಲೀಟ್‌ ಮಾಡಿದೆ.

VISTARANEWS.COM


on

Narendra Modi
Koo

ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಲೇವಡಿ ಮಾಡುವ ಭರದಲ್ಲಿ ಕೇರಳ ಕಾಂಗ್ರೆಸ್‌ (Kerala Congress) ಘಟಕವು ಪ್ರಮಾಣದ ಎಸಗಿದ್ದು, ತಪ್ಪಿನ ಅರಿವಾಗಿ ಬಳಿಕ ಕ್ಷಮೆಯಾಚಿಸಿದೆ. ಇತ್ತೀಚೆಗೆ ಇಟಲಿಯಲ್ಲಿ ನಡೆದ ಜಿ-7 ಶೃಂಗಸಭೆಯ ವೇಳೆ ನರೇಂದ್ರ ಮೋದಿ (Narendra Modi) ಅವರು ಪೋಪ್‌ ಫ್ರಾನ್ಸಿಸ್‌ (Pope Francis) ಅವರನ್ನು ಭೇಟಿಯಾಗಿದ್ದರು. ಇದರ ಕುರಿತು ಲೇವಡಿ ಮಾಡಿದ ಕೇರಳ ಕಾಂಗ್ರೆಸ್‌, “ಕೊನೆಗೂ ಪೋಪ್‌ ಫ್ರಾನ್ಸಿಸ್‌ ಅವರಿಗೆ ದೇವರನ್ನು ಭೇಟಿಯಾಗುವ ಅವಕಾಶ ಸಿಕ್ಕಿತು” ಎಂಬುದಾಗಿ ಪೋಸ್ಟ್‌ ಮಾಡಿದೆ. ಇದಾದ ನಂತರ ಜನಾಕ್ರೋಶ ವ್ಯಕ್ತವಾಗಿದ್ದು, ಬಳಿಕ ಪೋಸ್ಟ್‌ಅನ್ನು ಡಿಲೀಟ್‌ ಮಾಡಿದೆ.

ಇಟಲಿಯಲ್ಲಿ ನರೇಂದ್ರ ಮೋದಿ ಹಾಗೂ ಪೋಪ್‌ ಫ್ರಾನ್ಸಿಸ್‌ ಅವರು ಭೇಟಿಯಾಗಿರುವ ಫೋಟೊವನ್ನು ಕೇರಳ ಕಾಂಗ್ರೆಸ್‌ ಘಟಕದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಲಾಗಿತ್ತು. ಆ ಮೂಲಕ ನರೇಂದ್ರ ಮೋದಿ ಅವರೇ ದೇವರಾಗಿದ್ದು, ಅವರನ್ನು ಭೇಟಿಯಾಗುವ ಅವಕಾಶವು ಪೋಪ್‌ ಅವರದ್ದಾಗಿದೆ ಎಂಬಂತೆ ಕಾಂಗ್ರೆಸ್‌ ಲೇವಡಿ ಮಾಡಿತ್ತು. ಚುನಾವಣೆ ಪ್ರಚಾರದ ವೇಳೆ, “ನಿಮ್ಮ ಸೇವೆ ಮಾಡಲಿ ಎಂಬುದಾಗಿ ದೇವರೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ” ಎಂಬುದಾಗಿ ಮೋದಿ ಹೇಳಿಕೆಯನ್ನು ಇಟ್ಟುಕೊಂಡು ಕಾಂಗ್ರೆಸ್‌ ಲೇವಡಿ ಮಾಡಿತ್ತು.

ಕೇರಳ ಕಾಂಗ್ರೆಸ್‌ ಪೋಸ್ಟ್‌ಗೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. “ಇಸ್ಲಾಮಿಕ್‌ ಮೂಲಭೂತವಾದಿಗಳು ಹಾಗೂ ನಗರ ನಕ್ಸಲರು ಕೇರಳ ಕಾಂಗ್ರೆಸ್‌ನ ಎಕ್ಸ್‌ ಖಾತೆಯನ್ನು ನಿರ್ವಹಿಸುತ್ತಿದ್ದಾರೆ. ದೇಶದ ನಾಯಕರ ಕುರಿತು ಅವಹೇಳನಕಾರಿಯಾಗಿ ಪೋಸ್ಟ್‌ ಮಾಡುವುದು ಇವರ ಕೆಲಸವೇ ಆಗಿದೆ. ಈಗ ಗೌರವಾನ್ವಿತ ಪೋಪ್‌ ಹಾಗೂ ಕ್ರೈಸ್ತ ಸಮುದಾಯದ ಕುರಿತು ಕೂಡ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡುವುದನ್ನು ಇವರು ಬಿಟ್ಟಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಕ್ರೈಸ್ತರಿಗೆ ಕಾಂಗ್ರೆಸ್‌ ಅವಮಾನ ಮಾಡಲಾಗಿದೆ ಎಂದೇ ಬಿಜೆಪಿ ನಾಯಕರು ಚಾಟಿ ಬೀಸಿದರು.

ಕೇರಳ ಕಾಂಗ್ರೆಸ್‌ನ ಪೋಸ್ಟ್‌ ವೈರಲ್‌ ಆಗಿ, ಜನರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಲೇ ಪೋಸ್ಟ್‌ಅನ್ನು ಡಿಲೀಟ್‌ ಮಾಡಲಾಗಿದೆ. ಅಷ್ಟೇ ಅಲ್ಲ, “ಯಾರ ಭಾವನೆಗಳಿಗೂ ಧಕ್ಕೆ ತರುವುದು ನಮ್ಮ ಉದ್ದೇಶವಾಗಿರಲಿಲ್ಲ. ಪೋಸ್ಟ್‌ನಿಂದ ಬೇಸರ ಆಗಿದ್ದರೆ ಕ್ಷಮೆಯಾಚಿಸುತ್ತೇವೆ” ಎಂಬುದಾಗಿ ಕೇರಳ ಕಾಂಗ್ರೆಸ್‌ ಪ್ರಕಟಣೆ ಹೊರಡಿಸಿದೆ. ಕೇರಳದಲ್ಲಿ ಕ್ರೈಸ್ತ ಸಮುದಾಯದವರು ಜನಸಂಖ್ಯೆಯಲ್ಲಿ ಮೂರನೇ ಅತಿದೊಡ್ಡ ಸಮುದಾಯ ಎನಿಸಿದೆ. ಕೆಲವು ಕ್ರೈಸ್ತ ಸಮುದಾಯದ ಮುಖಂಡರು ಕೂಡ ಕಾಂಗ್ರೆಸ್‌ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Mallikarjun Kharge: ಶೀಘ್ರವೇ ಮೋದಿ ಸರ್ಕಾರ ಪತನ; ಭವಿಷ್ಯ ನುಡಿದ ಮಲ್ಲಿಕಾರ್ಜುನ ಖರ್ಗೆ

Continue Reading
Advertisement
Narendra Modi
ಪ್ರಮುಖ ಸುದ್ದಿ19 mins ago

Narendra Modi: ಅಮೆರಿಕ ಭದ್ರತಾ ಸಲಹೆಗಾರ-ನರೇಂದ್ರ ಮೋದಿ ಭೇಟಿ; ಯಾವೆಲ್ಲ ವಿಷಯ ಚರ್ಚೆ?

Actor Chikkanna
ಕರ್ನಾಟಕ1 hour ago

Actor Chikkanna: ದರ್ಶನ್‌ ಊಟಕ್ಕೆ ಕರೆದಿದ್ರು, ಹೋಗಿದ್ದೆ; ಪೊಲೀಸ್‌ ವಿಚಾರಣೆ ಬಳಿಕ ಚಿಕ್ಕಣ್ಣ ಫಸ್ಟ್‌ ರಿಯಾಕ್ಷನ್!

Kalki 2898 AD Movie Bhairava Anthem Released
ಕರ್ನಾಟಕ2 hours ago

Kalki 2898 AD: ʼಕಲ್ಕಿ 2898 ADʼ ಚಿತ್ರದ ಭೈರವ ಆಂಥಮ್‌ ರಿಲೀಸ್‌!

Union Minister HD Kumaraswamy visit Shira
ತುಮಕೂರು2 hours ago

Shira News: ಶಿರಾಕ್ಕೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಭೇಟಿ

Maharashtra government appoints Marathi teachers to Kannada schools; Ashoka Chandragi wrote a letter to CM Siddaramaiah
ಬೆಳಗಾವಿ2 hours ago

Belagavi News: ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರು! ಮುಖ್ಯಮಂತ್ರಿಗಳೇ ಗಮನ ಹರಿಸಿ

District administration failed to prevent illegal activities in the district MLA Janardhana Reddy alleges
ಕರ್ನಾಟಕ2 hours ago

Koppala News: ಜಿಲ್ಲೆಯಲ್ಲಿ ಕಾನೂನುಬಾಹಿರ ಚಟುವಟಿಕೆ ತಡೆಯುವಲ್ಲಿ ಜಿಲ್ಲಾಡಳಿತ ವಿಫಲ; ಶಾಸಕ ಜನಾರ್ದನ ರೆಡ್ಡಿ ಆರೋಪ

Pushpa 2
ಸಿನಿಮಾ2 hours ago

Pushpa 2: ಪುಷ್ಪ 2 ಸಿನಿಮಾ ಬಿಡುಗಡೆ 5 ತಿಂಗಳು ಮುಂದೂಡಿಕೆ; ಇಲ್ಲಿದೆ ಹೊಸ ಡೇಟ್

HD Kumaraswamy
ಕರ್ನಾಟಕ2 hours ago

HD Kumaraswamy: ಕೊಬ್ಬರಿಗೆ 16-18 ಸಾವಿರ ಬೆಂಬಲ ಬೆಲೆ ಕೊಡಿಸುವೆ: ರೈತರಿಗೆ ಎಚ್‌ಡಿಕೆ ಭರವಸೆ

Narendra Modi
ದೇಶ3 hours ago

ಪೋಪ್‌-ಮೋದಿ ಭೇಟಿಯನ್ನು ಲೇವಡಿ ಮಾಡಲು ಹೋದ ಕಾಂಗ್ರೆಸ್‌ಗೆ ಮುಖಭಂಗ; ಕ್ರೈಸ್ತರ ಕ್ಷಮೆ ಕೇಳಿದ್ದೇಕೆ?

Health Tips Kannada
Latest3 hours ago

Health Tips Kannada: ನೆನಪಿಡಿ, ನಾಲಿಗೆ ಬಯಸುವ ಆಹಾರಗಳನ್ನೆಲ್ಲ ನಿಮ್ಮ ಮಿದುಳು ಬಯಸದು!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು10 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು11 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌