Midday meal workers: ಅಕ್ಷರ ದಾಸೋಹ ನೌಕರರ ಅನಿರ್ದಿಷ್ಟಾವಧಿ ಹೋರಾಟ ಆರಂಭ; ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆ - Vistara News

ಪ್ರಮುಖ ಸುದ್ದಿ

Midday meal workers: ಅಕ್ಷರ ದಾಸೋಹ ನೌಕರರ ಅನಿರ್ದಿಷ್ಟಾವಧಿ ಹೋರಾಟ ಆರಂಭ; ಗೌರವಧನ ಹೆಚ್ಚಳ ಸೇರಿ ವಿವಿಧ ಬೇಡಿಕೆ

Midday meal workers: ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೌಕರರಾಗಿ ಕೆಲಸ ಮಾಡಿ ನಿವೃತ್ತಿ ಹೊಂದುವ ಪ್ರತಿಯೊಬ್ಬರಿಗೂ 1 ಲಕ್ಷ ರೂ. ಇಡಿಗಂಟು ನೀಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರವನ್ನು ಬಿಸಿಯೂಟ ನೌಕರರು ಆಗ್ರಹಿಸಿದ್ದಾರೆ.

VISTARANEWS.COM


on

Midday meal workers
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಸಾಲು ಸಾಲು ಪ್ರತಿಭಟನೆಗಳ (Protest) ಬಿಸಿ ತಟ್ಟಿದೆ. ಒಂದೆಡೆ ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣ ಖಂಡಿಸಿ ವಿಧಾನ ಮಂಡಲ ಅಧಿವೇಶನ ಆರಂಭದ ದಿನದಂದೇ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದರೆ, ಮತ್ತೊಂದೆಡೆ ಗೌರವ ಧನ ಹೆಚ್ಚಳ ಸೇರಿ ಇನ್ನಿತರ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಅಕ್ಷರ ದಾಸೋಹ ನೌಕರರು (Midday meal workers) ಸೋಮವಾರ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಿದ್ದಾರೆ.

ಸರ್ಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ನೌಕರರಾಗಿ ಕೆಲಸ ಮಾಡಿ ನಿವೃತ್ತಿ ಹೊಂದುವ ಪ್ರತಿಯೊಬ್ಬರಿಗೂ 1 ಲಕ್ಷ ರೂ. ಇಡಿಗಂಟು ನೀಡಬೇಕು. ಅಲ್ಲದೇ ಗೌರವ ಧನ ಹೆಚ್ಚಳ ಹಾಗೂ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಕ್ಷರ ದಾಸೋಹ ನೌಕರರ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ನಾನಾ ಮೂಲೆಗಳಿಂದ ಪ್ರತಿಭಟನೆಯಲ್ಲಿ ಭಾಗವಹಿಸಲು ನೌಕರರು ಆಗಮಿಸಿದ್ದಾರೆ.

ಮುಡಾ ಹಗರಣ ಸಿಬಿಐ ತನಿಖೆಗೆ ನೀಡಿ; ವಿಜಯೇಂದ್ರ ಆಗ್ರಹ

ಬೆಂಗಳೂರು: ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣಗಳನ್ನು ಖಂಡಿಸಿ ಬಿಜೆಪಿ ಶಾಸಕರಿಂದ ವಿಧಾನಸೌಧದ ಪಶ್ಚಿಮ ಬಾಗಿಲ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಶಾಸಕರ ಭವನದಿಂದ ವಿಧಾನಸೌಧಕ್ಕೆ ಪ್ರತಿಭಟನಾ ಮೆರವಣಿಗೆಯಲ್ಲಿ ಹೊರಟ ಬಿಜೆಪಿ ಶಾಸಕರು, ಹಗರಣಗಳ ತನಿಖೆಯನ್ನು ಸಿಬಿಐಗೆ ನೀಡುವಂತೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಮಾತನಾಡಿ, ಸಿಎಂಗೆ ತಾಕತ್‌ ಇದ್ದರೆ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಕೋಡಬೇಕು. ನ್ಯಾಯಾಂಗ ತನಿಖೆ ಅಂತ ನಾಟಕ‌ಮಾಡುತ್ತಿದ್ದಾರೆ. ಇದೊಂದು ದೊಡ್ಡ ಹಗರಣ. ಸದನದ ಒಳಗೆ ಹಾಗೂ ಹೊರಗೆ ನಾವು ಹೋರಾಟ ಮಾಡುತ್ತೇವೆ ಎಂದರು.

ಸಿಎಂ ರಾಜೀನಾಮೆ ಕೋಡಬೇಕು. ದಲಿತರ ಹೆಸರಲ್ಲಿ ಅಧಿಕಾರಕ್ಕೆ ಬಂದು ದಲಿತರ ಹಣ ದೊಚಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಂಡವಾಳ ಬಯಲಾಗಿದೆ. ಸಿಎಂ ನೈತಿಕತೆ ‌ಕಳೆದುಕೊಂಡಿದ್ದಾರೆ. ನಾಗೇಂದ್ರ ಈಗಾಗಲೇ ಇಡಿ‌ ಕಸ್ಟಡಿಯಲ್ಲಿದ್ದಾರೆ, ದದ್ದಲ್ ಕಾಣೆಯಾಗಿದ್ದಾರೆ. ಸಿಎಂ ಇದಕ್ಕೆ ಉತ್ತರ ಕೋಡಬೇಕು. ಡಿಸಿಎಂ ಆರೋಪಿಗಳಿಗೆ ಕ್ಲೀನ್ ಚಿಟ್ ಕೊಡುತ್ತಿದ್ದಾರೆ. ಹೀಗಾಗಿ ಮುಡಾ ಹಗರಣ ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ | KP Sharma Oli: ನೇಪಾಳದ ನೂತನ ಪ್ರಧಾನಿ ಕೆ.ಪಿ.ಶರ್ಮ ಒಲಿಗೆ ಮೋದಿ ಅಭಿನಂದನೆ

ವಾಲ್ಮೀಕಿ ನಿಗಮದ ಹಗರಣಕ್ಕೆ ಸದನದಲ್ಲಿ ಸಿಎಂ ಉತ್ತರ ಕೋಡಬೇಕು. ವಾಲ್ಮೀಕಿ ನಿಗಮದ ಬಗ್ಗೆ ನಿಳುವಳಿ‌ ಸೂಚನೆ ಕೊಟ್ಟಿದ್ದೇವೆ. ಇವತ್ತು ಚರ್ಚೆಗೆ ಅವಕಾಶ ಕೋಡುತ್ತೇವೆ. ಮುಡಾ ಹಗರದಲ್ಲಿ ಯಾರ ಮೇಲೆಯಾದರೂ ಆರೋಪ ಇರಲಿ, ಸಿಬಿಐ ತನಿಖೆಗೆ ನೀಡಿ ಎಂದು ಆಗ್ರಹಿಸಿದರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Viral Video : ವೃದ್ಧನೊಬ್ಬ ಬೀದಿಯಲ್ಲಿ ಮಲಗಿದ್ದ ಗಂಡು ನಾಯಿಯ ಖಾಸಗಿ ಭಾಗಗಳನ್ನು ಪದೇ ಪದೇ ಸ್ಪರ್ಶಿಸುವ ಮೂಲಕ ಕಿರುಕುಳ ನೀಡಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಮುಂಬೈನ ಸ್ಟ್ರೀಟ್ ಅನಿಮಲ್ಸ್ ಎಂಬ ಇನ್ಸ್ಟಾಗ್ರಾಮ್ ಪುಟದಲ್ಲಿ ಪೋಸ್ಟ್ ಮಾಡಲಾಗಿದೆ. ವಿಡಿಯೊದಲ್ಲಿ ಕೆಲವು ಅಸಹ್ಯವಾದ ತುಣುಕುಗಳನ್ನು ಸೆನ್ಸಾರ್ ಮಾಡಲಾಗಿದ್ದು, ಅಲ್ಲಿ ವೃದ್ಧ ವ್ಯಕ್ತಿ ಬೀದಿ ನಾಯಿಯನ್ನು ತನ್ನ ಕಡೆಗೆ ಸೆಳೆಯುವುದು ಮತ್ತು ಅನುಚಿತವಾಗಿ ಸ್ಪರ್ಶಿಸುವುದು ಕಂಡುಬಂದಿದೆ. ನಾಗರಿಕ ಸಮಾಜ ತಲೆತಗ್ಗಿಸುವ ವಿಡಿಯೊ ಈಗ ಬಹಿರಂಗವಾಗಿದೆ.

VISTARANEWS.COM


on

Viral Video
Koo


ಮುಂಬೈ : ಕಾಮುಕರು ತಮ್ಮ ಕಾಮದಾಟಕ್ಕೆ ಮನುಷ್ಯರನ್ನು ಮಾತ್ರವಲ್ಲ ಪ್ರಾಣಿಗಳನ್ನು ಕೂಡ ಬಳಸಿಕೊಳ್ಳುತ್ತಿದ್ದಾರೆ. ತಮ್ಮ ಲೈಂಗಿಕ ಬಯಕೆಯನ್ನು ತೀರಿಸಿಕೊಳ್ಳಲು ಮೂಕ ಪ್ರಾಣಿಗಳ ಮೇಲೂ ದೌರ್ಜನ್ಯ ಎಸಗುತ್ತಿದ್ದಾರೆ. ಇದೀಗ ಅಂತಹದೊಂದು ಘಟನೆ ಬೆಳಕಿಗೆ ಬಂದಿದ್ದು, ವಿಕೃತ ಕಾಮುಕನೊಬ್ಬ ಬೀದಿ ನಾಯಿಗೆ ಪದೇ ಪದೇ ಲೈಂಗಿಕ ಕಿರುಕುಳ ನೀಡಿದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದೆ.

ಗುರ್ಗಾಂವ್‍ನ ಸೆಕ್ಟರ್ 48ರಲ್ಲಿ ವೃದ್ಧನೊಬ್ಬ ಬೀದಿಯಲ್ಲಿ ಮಲಗಿದ್ದ ಗಂಡು ನಾಯಿಯ ಖಾಸಗಿ ಭಾಗಗಳನ್ನು ಪದೇ ಪದೇ ಸ್ಪರ್ಶಿಸುವ ಮೂಲಕ ಬಹಿರಂಗವಾಗಿ ಕಿರುಕುಳ ನೀಡಿದ್ದಾನೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಮುಂಬೈನ ಸ್ಟ್ರೀಟ್ ಅನಿಮಲ್ಸ್ ಎಂಬ ಇನ್ಸ್ಟಾಗ್ರಾಮ್ ಪುಟದಲ್ಲಿ ಪೋಸ್ಟ್ ಮಾಡಲಾಗಿದೆ. ವಿಡಿಯೊದಲ್ಲಿ ಕೆಲವು ಅಸಹ್ಯವಾದ ತುಣುಕುಗಳನ್ನು ಸೆನ್ಸಾರ್ ಮಾಡಲಾಗಿದ್ದು, ಅಲ್ಲಿ ವೃದ್ಧ ವ್ಯಕ್ತಿ ಬೀದಿ ನಾಯಿಯನ್ನು ತನ್ನ ಕಡೆಗೆ ಸೆಳೆಯುವುದು ಮತ್ತು ಅನುಚಿತವಾಗಿ ಸ್ಪರ್ಶಿಸುವುದು ಕಂಡುಬಂದಿದೆ.

ಇದರಲ್ಲಿ ಮೊದಲು ವ್ಯಕ್ತಿಯು ನಾಯಿಯನ್ನು ನೆಲದ ಮೇಲೆ ಮಲಗುವಂತೆ ಒತ್ತಾಯಿಸುವುದನ್ನು ತೋರಿಸುತ್ತದೆ. ಆತ ತನ್ನ ಕೈಗಳಿಂದ ನಾಯಿಯ ಮೈಯನ್ನು ಸವರುತ್ತಿದ್ದಾನೆ. ನಾಯಿ ಎಚ್ಚರಗೊಂಡು ನೇರವಾಗಿ ನಿಲ್ಲಲು ಪ್ರಯತ್ನಿಸಿದಾಗ, ಆತ ಪದೇ ಪದೇ ಪ್ರಾಣಿಯನ್ನು ವಿಶ್ರಾಂತಿ ಪಡೆಯುವಂತೆ ಮಾಡಿದ. ನಂತರ ಅವನು ಅದರ ಖಾಸಗಿ ಭಾಗಗಳನ್ನು ಸ್ಪರ್ಶಿಸುವುದನ್ನು ಮುಂದುವರಿಸಿದ.

ಮತ್ತೊಂದು ಘಟನೆಯಲ್ಲಿ, ಅದೇ ವ್ಯಕ್ತಿ ಮತ್ತೊಮ್ಮೆ ತಮ್ಮ ನಿವಾಸದ ಹೊರಗೆ ಬೀದಿ ನಾಯಿಗೆ ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ. ಅವನು ನಾಯಿಯ ಜನನಾಂಗಗಳನ್ನು ಕಂಡುಹಿಡಿಯಲು ಮತ್ತು ಅವುಗಳನ್ನು ಮಟ್ಟಲು ಪ್ರಯತ್ನಿಸುತ್ತಿದ್ದ. ಇದಲ್ಲದೆ, ವ್ಯಕ್ತಿಯು ಕುರ್ಚಿಯ ಮೇಲೆ ಕುಳಿತು ತನ್ನ ಬರಿಗೈಯಿಂದ ನಾಯಿಯನ್ನು ಅನುಚಿತವಾಗಿ ಸ್ಪರ್ಶಿಸುವುದನ್ನು ವೀಡಿಯೊ ತೋರಿಸುತ್ತದೆ. ಆದರೆ ವ್ಯಕ್ತಿಯ ಈ ಅನುಚಿತ ವರ್ತನೆಯ ಬಗ್ಗೆ ಕ್ರಮ ಕೈಗೊಳ್ಳಲು ಸ್ಥಳೀಯ ಯುವತಿಯೊಬ್ಬಳು ಪೊಲೀಸರನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಆತನ ವಿರುದ್ಧ ಯಾವುದೇ ಪೊಲೀಸ್ ಕ್ರಮ ದಾಖಲಾಗಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: ಮೊಬೈಲ್‌ನಲ್ಲಿ ಮಾತನಾಡುತ್ತ ರಸ್ತೆ ದಾಟಿದರೆ ಏನಾಗುತ್ತದೆ ನೋಡಿ; ಬೆಚ್ಚಿ ಬೀಳಿಸುವ ವಿಡಿಯೊ

Viral Video

ಪ್ರಾಣಿಗಳ ಮೇಲಿನ ಲೈಂಗಿಕ ದೌರ್ಜನ್ಯ ಭಾರತದಲ್ಲಿ ಮಾತ್ರವಲ್ಲ ಎಲ್ಲಾ ಕಡೆ ನಡೆಯುತ್ತಿದೆ. ಇದೀಗ ಬರೋಬ್ಬರಿ 60ಕ್ಕೂ ಹೆಚ್ಚು ನಾಯಿಗಳನ್ನು ಅತ್ಯಾಚಾರ ಮಾಡಿ, ಕೊಂದ ಪ್ರಕರಣದಲ್ಲಿ ಖ್ಯಾತ ಪ್ರಾಣಿಶಾಸ್ತ್ರಜ್ಞ ಆಡಂ ಬ್ರಿಟನ್‌ಗೆ 249 ವರ್ಷಗಳ ಜೈಲು ಶಿಕ್ಷೆಯಾಗಿದೆ. ಆತ ನಾಯಿಗಳನ್ನು ಕೋಣೆಗಳಲ್ಲಿ ಕೂಡಿ ಹಾಕಿ ವಿಚಿತ್ರವಾಗಿ ಹಿಂಸಿಸುತ್ತಿದ್ದನು. ಅತ್ಯಾಚಾರವೆಸಗಿ ಬರ್ಬರವಾಗಿ ಕೊಂದಿದ್ದನು ಎನ್ನಲಾಗಿತ್ತು. ವಿಚಾರಣೆಯ ವೇಳೆ ಈತನೂ ತನ್ನ ತಪ್ಪನ್ನು ಒಪ್ಪಿದ್ದನು. ಹೀಗಾಗಿ ಆತನಿಗೆ ಕೋರ್ಟ್ ಈಗ ಶಿಕ್ಷೆ ವಿಧಿಸಿದೆ.

Continue Reading

ದೇಶ

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

Jitan Sahani: ರಾಜಕೀಯ ಕಾರಣದಿಂದಾಗಿ ಮುಕೇಶ್‌ ಸಹಾನಿ ಅವರ ತಂದೆಯನ್ನು ಮನೆಯಲ್ಲಿಯೇ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜಿತನ್‌ ಸಹಾನಿ ಅವರು ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

VISTARANEWS.COM


on

Jitan Sahani
Koo

ಬಿಹಾರ: ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಅವರನ್ನು ಹತ್ಯೆ ಮಾಡಿದ ಕೆಲವೇ ದಿನಗಳಲ್ಲಿ ಬಿಹಾರದಲ್ಲೂ (Bihar) ರಾಜಕೀಯ ಪ್ರೇರಿತ ಹಿಂಸಾಚಾರ ನಡೆದಿದೆ. ವಿಕಾಸಶೀಲ ಇನ್ಸಾನ್‌ ಪಕ್ಷದ (VHP) ಮುಖ್ಯಸ್ಥ ಮುಕೇಶ್‌ ಸಹಾನಿ (Mukesh Sahani) ಅವರ ತಂದೆ ಜಿತನ್‌ ಸಹಾನಿ (Jitan Sahani) ಅವರನ್ನು ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿದೆ. ದರ್ಭಾಂಗದಲ್ಲಿರುವ ಜಿತನ್‌ ಸಹಾನಿ ಅವರ ಮನೆಗೆ ಸೋಮವಾರ (ಜುಲೈ 15) ರಾತ್ರಿ ನುಗ್ಗಿದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಮನಸೋ ಇಚ್ಛೆ ಕೊಚ್ಚಿ ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮುಕೇಶ್‌ ಸಹಾನಿ ಅವರು ವಿಐಪಿ ಪಕ್ಷದ ಮುಖ್ಯಸ್ಥರಾಗಿದ್ದು, ಮಲ್ಲಾಹ್‌ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇವರು ಇದಕ್ಕೂ ಮೊದಲು ಬಿಹಾರದ ಪಶುಸಂಗೋಪನೆ ಮತ್ತು ಮೀನುಗಾರಿಕೆ ಖಾತೆ ಸಚಿವರಾಗಿದ್ದರು. ಮಲ್ಲಾಹ್‌ ಸಮುದಾಯದವರ ಬೆಂಬಲವು ಮುಕೇಶ್‌ ಸಹಾನಿ ಅವರಿಗಿದೆ. ಇದೇ ರಾಜಕೀಯ ಕಾರಣದಿಂದಾಗಿ ಮುಕೇಶ್‌ ಸಹಾನಿ ಅವರ ತಂದೆಯನ್ನು ಮನೆಯಲ್ಲಿಯೇ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಜಿತನ್‌ ಸಹಾನಿ ಅವರು ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

ಕೆಲ ದಿನಗಳ ಹಿಂದಷ್ಟೇ ತಮಿಳುನಾಡಿನಲ್ಲಿ ಬಿಎಸ್‌ಪಿ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು. ಚೆನ್ನೈನ ಪೆರಂಬೂರ್‌ನಲ್ಲಿರುವ ಸದಯಪ್ಪನ್‌ ಸ್ಟ್ರೀಟ್‌ನಲ್ಲಿರುವ ಅವರ ನಿವಾಸದ ಬಳಿ ಜುಲೈ 5ರಂದು ಸಂಜೆ 7.30ರ ವೇಳೆಗೆ ಸುಮಾರು 6 ಜನರ ಗ್ಯಾಂಗ್‌ ದಾಳಿ ಮಾಡಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಆರ್ಮ್‌ಸ್ಟ್ರಾಂಗ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಯಾವುದೇ ಉಪಯೋಗ ಆಗಲಿಲ್ಲ. ದಾಳಿಯಲ್ಲಿ ಇನ್ನಿಬ್ಬರು ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿತ್ತು.

ತಮಿಳುನಾಡು ಬಿಎಸ್‌ಪಿ ಘಟಕದ ಅಧ್ಯಕ್ಷರಾಗಿದ್ದ ಆರ್ಮ್‌ಸ್ಟ್ರಾಂಗ್‌ ಅವರು ಇದಕ್ಕೂ ಮೊದಲು ಗ್ರೇಟರ್‌ ಚೆನ್ನೈ ಕಾರ್ಪೊರೇಷನ್‌ನ ಕೌನ್ಸಿಲರ್‌ ಆಗಿದ್ದರು. ಚುನಾವಣಾ ರಾಜಕೀಯದಲ್ಲಿ ಹೆಚ್ಚು ತೊಡಗಿಸಿಕೊಳ್ಳದ ಆರ್ಮ್‌ಸ್ಟ್ರಾಂಗ್‌ ಅವರು ರಾಜ್ಯದಲ್ಲಿ ದಲಿತರ ಪರ ಚಿಂತಕ, ಅಂಬೇಡ್ಕರ್‌ವಾದಿ ಎಂಬುದಾಗಿಯೇ ಹೆಚ್ಚು ಗುರುತಿಸಿಕೊಂಡಿದ್ದರು. ಹಾಗಾಗಿ, ಆರ್ಮ್‌ಸ್ಟ್ರಾಂಗ್‌ ಅವರು ರಾಜಕೀಯದಲ್ಲಿ ಹೆಚ್ಚಿನ ಶತ್ರುಗಳನ್ನು ಹೊಂದಿರಲಿಲ್ಲ. ಪ್ರಕರಣದ ಕುರಿತು ಈಗಲೂ ತನಿಖೆ ನಡೆಯುತ್ತಿದ್ದು, ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇದನ್ನೂ ಓದಿ: Arvind Kejriwal: “ಜೈಲಿನಲ್ಲಿ ಕೇಜ್ರಿವಾಲ್‌ ಹತ್ಯೆಗೆ ಸಂಚು”- ಸಂಚಲನ ಮೂಡಿಸ್ತಿದೆ ಆಪ್‌ ಆರೋಪ

Continue Reading

ಪ್ರಮುಖ ಸುದ್ದಿ

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

Karnataka Assembly Live: ಇಂದು ಸಹ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಈ ಚರ್ಚೆ ಮುಂದುವರಿಯಲಿದೆ. ಬಿಜೆಪಿಯ ಸಿಟಿ ರವಿ, ಸುನೀಲ್‌ ಕುಮಾರ್‌, ಯತ್ನಾಳ್ ಮುಂತಾದವರು ಈ ಚರ್ಚೆಯನ್ನು ಮುನ್ನಡೆಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡುವ ನಿರೀಕ್ಷೆ ಇದೆ. ನಿನ್ನೆ ಆಶೋಕ್ ಮಾತನಾಡುವಾಗಲೇ ಈ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು.

VISTARANEWS.COM


on

karnataka assembly live
Koo

ಬೆಂಗಳೂರು: ವಿಧಾನ ಮಂಡಲ ಮಳೆಗಾಲದ ಅಧಿವೇಶನ (Karnataka Assembly Live, Karnataka Assembly monsoon session) ಇಂದು ಇನ್ನಷ್ಟು ರಂಗೇರಲಿದೆ. ವಾಲ್ಮೀಕಿ ನಿಗಮದ ಅವ್ಯವಹಾರ (Valmiki corporation Scam) ಪ್ರಕರಣದ ಕುರಿತು ನಿನ್ನೆ ವಿಧಾನಸಭೆ ಕಲಾಪದಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ವಿಪಕ್ಷ ನಾಯಕ ಆರ್. ಆಶೋಕ್ (R Ashok) ಅವರು ಈ ಚರ್ಚೆಯನ್ನು ಮುನ್ನಡೆಸಿದ್ದರು. ಇಂದು ಅದು ಮುಂದುವರಿಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಕೂಡ ಇದಕ್ಕೆ ಉತ್ತರ ನೀಡಲಿದ್ದಾರೆ.

ನಿನ್ನೆ ಮಾತನಾಡಿದ ಆರ್.‌ ಅಶೋಕ್‌, ಸರ್ಕಾರದ ತಪ್ಪು ನಡೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ಹೈಕಮಾಂಡ್‌ಗೆ ಕಪ್ಪಕಾಣಿಕೆ ಸಲ್ಲಿಸಲು ನಿಗಮದ ಹಣವನ್ನು ದುರುಪಯೋಗ ಮಾಡಲಾಗಿದೆ ಎಂದಿದ್ದ ಅಶೋಕ್‌, 187 ಕೋಟಿ ರೂಪಾಯಿ ಅವ್ಯವಹಾರದ ಬಗ್ಗೆ ಮಾಹಿತಿ ಬಿಚ್ಚಿಟ್ಟಿದ್ದರು. ಈ ಹಣ ಹಿಂದುಳಿದ ವರ್ಗಗಳ ಕಲ್ಯಾಣಕ್ಕೆ ಹೇಗೆ ವಿನಿಯೋಗವಾಗಬೇಕಿತ್ತು, ಹೇಗೆ ಅಕ್ರಮವಾಗಿದೆ ಎಂಬುದನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದರು. ಆ ಮೂಲಕ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದರು.

ಇಂದು ಸಹ ಬಿಜೆಪಿ ಹಾಗೂ ಜೆಡಿಎಸ್ ಶಾಸಕರಿಂದ ಈ ಚರ್ಚೆ ಮುಂದುವರಿಯಲಿದೆ. ಬಿಜೆಪಿಯ ಸಿಟಿ ರವಿ, ಸುನೀಲ್‌ ಕುಮಾರ್‌, ಯತ್ನಾಳ್ ಮುಂತಾದವರು ಈ ಚರ್ಚೆಯನ್ನು ಮುನ್ನಡೆಸಲಿದ್ದಾರೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರು ಉತ್ತರ ನೀಡುವ ನಿರೀಕ್ಷೆ ಇದೆ. ನಿನ್ನೆ ಆಶೋಕ್ ಮಾತನಾಡುವಾಗಲೇ ಈ ಬಗ್ಗೆ ಸಿದ್ದರಾಮಯ್ಯ ಸುಳಿವು ನೀಡಿದ್ದರು. ʼನಿಮ್ಮ ವಾದವನ್ನ ಸಮಾಧಾನವಾಗಿ ಕೇಳ್ತೀನಿ. ನಾನು ಉತ್ತರ ಕೊಡುವಾಗಲೂ ಅಷ್ಟೇ ಸಮಾಧಾನದಿಂದ ಕೇಳಬೇಕುʼ ಎಂದಿದ್ದರು.

ʼ187 ಕೋಟಿ ಅಲ್ಲ ಅದು ಬರೀ 87 ಕೋಟಿ ಮಾತ್ರ ವರ್ಗಾವಣೆ ಆಗಿರುವುದು. ಹಣ ಎಲ್ಲಿಯವರೆಗೂ ಸರ್ಕಾರದ ಸುಪರ್ದಿಯಲ್ಲಿರುತ್ತೆ, ಬಳಿಕ ಆ ಹಣ ಯಾರಿಗೆ ಹೋಗುತ್ತೆ ಈ ಬಗ್ಗೆ ಸಂಪೂರ್ಣ ಮಾಹಿತಿ ಕೊಡ್ತೀನಿ. ಇದರಲ್ಲಿ ಯಾರ ಪಾತ್ರ ಎಷ್ಟಿದೆ. ಈ ಹಿಂದೆ ಹೇಗೆ ವ್ಯವಹಾರ ನಡೆದಿದೆ ಅದೆಲ್ಲವನ್ನ ಸಂಪೂರ್ಣವಾಗಿ ಕೊಡ್ತೀನಿʼ ಎಂದು ಹೇಳಿದ್ದರು. ಎಂದರೆ ಬಿಜೆಪಿ ಸರಕಾರದ ಅವಧಿಯಲ್ಲಿ ನಡೆದ ಪ್ರಕರಣಗಳನ್ನೂ ಸಿಎಂ ಪ್ರಸ್ತಾವಿಸುವುದು ಖಚಿತವಾಗಿದೆ.

ಇದರಿಂದ ಸದನದಲ್ಲಿ ಇಂದು ಏಟು ಎದಿರೇಟು ಖಚಿತವಾಗಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಆಡಳಿತ ಪಕ್ಷ ಸದದ್ಯರು ಸಾಥ್‌ ನೀಡಲಿದ್ದು, ವಿಪಕ್ಷ ಶಾಸಕರು ಕೆರಳಿ ಪ್ರತಿಭಟನೆ ನಡೆಸುವುದೂ ಬಹುತೇಕ ಖಚಿತವಾಗಿದೆ. ಸ್ಪೀಕರ್‌ ಯು.ಟಿ ಖಾದರ್‌ ಅವರು ಶಾಂತಚಿತ್ತರಾಗಿಯೇ ಸದನದ ಕಲಾಪವನ್ನು ನಿರ್ವಹಿಸುತ್ತಿದ್ದರೂ, ಹಲವು ಬಾರಿ ಶಾಸಕರ ವರ್ತನೆ ಅವರಿಗೂ ಸವಾಲಾಗುತ್ತಿದೆ.

ನಿನ್ನೆ ಅಧಿವೇಶನ ಆರಂಭಕ್ಕೂ ಮುನ್ನ ವಿಧಾನಸೌಧದ ನೂತನ ದ್ವಾರವನ್ನು ಸಿಎಂ ಉದ್ಘಾಟಿಸಿದ್ದರು. ವಿಧಾನಸಭೆಯ ಸಭಾಂಗಣವನ್ನು ಇನ್ನಷ್ಟು ಸುಂದರವಾಗಿ ವಿನ್ಯಾಸಗೊಳಿಸಲಾಗಿದ್ದು, ಇದಕ್ಕೆ ಸದಸ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಕಲಾಪ ಆರಂಭದಲ್ಲಿ ಸಂವಿಧಾನದ ಪೀಠಿಕೆಯನ್ನು ಓದಲಾಯಿತು. ನಂತರ ಅಗಲಿದ ಗಣ್ಯರಿಗೆ ಸಂತಾಪ ಸೂಚನೆ ಮಂಡಿಸಲಾಯಿತು.

ಇದನ್ನೂ ಓದಿ: Assembly Session: ಅಧಿವೇಶನದಲ್ಲಿ ಹಗರಣಗಳ ಸದ್ದು; ಮೊದಲ ದಿನವೇ ಮುಗಿಬಿದ್ದ ವಿಪಕ್ಷ ನಾಯಕರು, ಹೆದರಲ್ಲ ಎಂದ ಸಿಎಂ!

Continue Reading

ಕರ್ನಾಟಕ

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

Kannada In Madrasa: ವಾರದಲ್ಲಿ ಕನಿಷ್ಠ 2-3 ಗಂಟೆ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿಯೇ ಬೋಧನೆ ಮಾಡಬೇಕು. ಆ ಮೂಲಕ ಮಕ್ಕಳು ಕನ್ನಡ ಕಲಿಯುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಯೋಜನೆ ರೂಪಿಸಿದೆ. ಹಾಗೊಂದು ವೇಳೆ, ಪ್ರಾಧಿಕಾರವು ಆದೇಶ ಹೊರಡಿಸಿದರೆ, ಮುಸ್ಲಿಂ ಮಕ್ಕಳು ಮದರಸಾಗಳಲ್ಲಿ ಕನ್ನಡ ಕಲಿಯಲಿದ್ದಾರೆ.

VISTARANEWS.COM


on

Kannada In Madrasa
Koo

ಬೆಂಗಳೂರು: ಕರ್ನಾಟಕದ ಮದರಸಾಗಳಲ್ಲಿ ಉರ್ದುವಿನಲ್ಲೇ ಬೋಧನೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಕನ್ನಡ ಕಲಿಕೆಗೂ (Kannada In Madrasa) ರಾಜ್ಯ ಸರ್ಕಾರವು (Karnataka Government) ಪ್ರಾಮುಖ್ಯತೆ ನೀಡಲು ಮುಂದಾಗಿದೆ. ಇನ್ನುಮುಂದೆ ರಾಜ್ಯದ ಮದರಸಾಗಳಲ್ಲಿ (Madrasas In Karnataka) ಕಡ್ಡಾಯವಾಗಿ ಕನ್ನಡದಲ್ಲೇ ಬೋಧನೆ ಮಾಡಬೇಕು ಎಂಬ ದಿಸೆಯಲ್ಲಿ ಆದೇಶ ಹೊರಡಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹೊಸ ಯೋಜನೆ ರೂಪಿಸಿದೆ. ಈ ಕುರಿತಂತೆ ಕನ್ನಡ ಕಡ್ಡಾಯಗೊಳಿಸಿ ಶೀಘ್ರದಲ್ಲೇ ಆದೇಶ ಹೊರಡಿಸಲಾಗುತ್ತದೆ ಎಂದು ತಿಳಿದುಬಂದಿದೆ.

ರಾಜ್ಯದಲ್ಲಿ ಸಾವಿರಾರು ಮದರಸಾಗಳಿದ್ದು, ಮುಸ್ಲಿಂ ವಿದ್ಯಾರ್ಥಿಗಳಿಗೆ ಬೋಧಕರು ಕನ್ನಡದಲ್ಲಿ ಪಾಠ ಮಾಡಲು, ಕನ್ನಡ ಕಲಿಸಲು ಹಿಂದೇಟು ಹಾಕುತ್ತಿದ್ದಾರೆ. ಇದಕ್ಕಾಗಿಯೇ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಹೊಸ ಯೋಜನೆ ರೂಪಿಸಿದೆ. ಕನ್ನಡದಲ್ಲೇ ಪಾಠ ಮಾಡಬೇಕು. ವಾರದಲ್ಲಿ ಕನಿಷ್ಠ 2-3 ಗಂಟೆ ವಿದ್ಯಾರ್ಥಿಗಳಿಗೆ ಕನ್ನಡದಲ್ಲಿಯೇ ಬೋಧನೆ ಮಾಡಬೇಕು. ಆ ಮೂಲಕ ಮಕ್ಕಳು ಕನ್ನಡ ಕಲಿಯುವಂತಾಗಬೇಕು ಎಂಬ ದೃಷ್ಟಿಯಿಂದ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಯೋಜನೆ ರೂಪಿಸಿದೆ. ಹಾಗೊಂದು ವೇಳೆ, ಪ್ರಾಧಿಕಾರವು ಆದೇಶ ಹೊರಡಿಸಿದರೆ, ಮುಸ್ಲಿಂ ಮಕ್ಕಳು ಮದರಸಾಗಳಲ್ಲಿ ಕನ್ನಡ ಕಲಿಯಲಿದ್ದಾರೆ.

ಮದರಸಾಗಳಲ್ಲಿ ರಾಮನ ಕುರಿತು ಅಧ್ಯಯನ

ಉತ್ತರಾಖಂಡದ ಮದರಸಾಗಳಲ್ಲೂ ಶ್ರೀರಾಮನ ಕುರಿತು ಅಧ್ಯಯನ ನಡೆಯಬೇಕು ಎಂದು ಹೊಸ ಪಠ್ಯವನ್ನು ಅಳವಡಿಸಿಕೊಳ್ಳಲಾಗುತ್ತಿದೆ. ಆ ಮೂಲಕ ಇನ್ನು ಮುಸ್ಲಿಂ ವಿದ್ಯಾರ್ಥಿಗಳು ಕೂಡ ರಾಮನ ಕುರಿತು ಅಧ್ಯಯನ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಇದು ಧಾರ್ಮಿಕ ಸೌಹಾರ್ದತೆಯ ಸಂಕೇತವೂ ಆಗಿದೆ ಎನ್ನಲಾಗುತ್ತಿದೆ.

ಹೌದು, ಈ ಕುರಿತು ಉತ್ತರಾಖಂಡ ವಕ್ಫ್‌ ಬೋರ್ಡ್‌ ಚೇರ್ಮನ್‌ ಆಗಿರುವ ಶಾದಾಬ್‌ ಶಾಮ್ಸ್‌ ಅವರೇ ಕೆಲ ತಿಂಗಳ ಹಿಂದೆ ಮಾಹಿತಿ ನೀಡಿದ್ದರು. “ಮದರಸಾ ಆಧುನೀಕರಣ ಯೋಜನೆಯ ಭಾಗವಾಗಿ ಇನ್ನು ಮುಂದೆ ಉತ್ತರಾಖಂಡದ ಮದರಸಾಗಳಲ್ಲೂ ಶ್ರೀರಾಮನ ಕುರಿತ ಪಠ್ಯಗಳನ್ನು ಅಳವಡಿಸಿಕೊಳ್ಳಲಾಗುತ್ತದೆ. ಮುಸ್ಲಿಂ ವಿದ್ಯಾರ್ಥಿಗಳು ಪ್ರವಾದಿ ಮೊಹಮ್ಮದರ ಜತೆಗೆ ಶ್ರೀರಾಮನ ಕುರಿತು ಕೂಡ ಅಧ್ಯಯನ ಮಾಡಲಿದ್ದಾರೆ” ಎಂದು ತಿಳಿಸಿದ್ದರು.

ಶಾದಾಬ್‌ ಶಾಮ್ಸ್‌ ಅವರು ಬಿಜೆಪಿ ಮುಖಂಡರೂ ಆಗಿದ್ದು, ಅವರು ಮದರಸಾಗಳಲ್ಲಿ ಬೋಧನೆ ಮಾಡುವ ಮೌಲ್ವಿಗಳನ್ನೂ ಒಪ್ಪಿಸಿದ್ದಾರೆ. ಧರ್ಮ, ಜಾತಿಯ ಸಂಕೋಲೆಗಳು ಇಲ್ಲದೆಯೇ ರಾಮನನ್ನು ಆರಾಧಿಸಬಹುದು. ಆತನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬಹುದು ಎಂಬ ಮನೋಭಾವದಿಂದ ಶಾದಾಬ್‌ ಶಾಮ್ಸ್‌ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಉತ್ತರಾಖಂಡದ ವಕ್ಫ್‌ ಬೋರ್ಡ್‌ ವ್ಯಾಪ್ತಿಗೆ ಸುಮಾರು 117 ಮದರಸಾಗಳು ಬರುತ್ತವೆ. ಡೆಹ್ರಾಡೂನ್, ಹರಿದ್ವಾರ, ಉಧಾಮ್‌ ಸಿಂಗ್‌ ನಗರ ಹಾಗೂ ನೈನಿತಾಲ್‌ ಜಿಲ್ಲೆ ಸೇರಿ ಹಲವೆಡೆ ವಕ್ಫ್‌ ಬೋರ್ಡ್‌ ವ್ಯಾಪ್ತಿಯ ಮದರಸಾಗಳಲ್ಲಿ ರಾಮನ ಕುರಿತ ಅಧ್ಯಾಯಗಳನ್ನು ಸೇರಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Madrasa: ಉತ್ತರ ಪ್ರದೇಶದಲ್ಲಿ ಮದರಸಾ ಶಿಕ್ಷಣ ರದ್ದುಪಡಿಸುವ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

Continue Reading
Advertisement
Viral Video
Latest1 min ago

Viral Video: ಕಾಮುಕರ ಹಾವಳಿ ಮಿತಿ‌ ಮೀರಿದೆ; ಬೀದಿ ನಾಯಿಯನ್ನೂ ಇವರು ಬಿಡುತ್ತಿಲ್ಲ! ಆಘಾತಕಾರಿ ವಿಡಿಯೊ

Jitan Sahani
ದೇಶ10 mins ago

Jitan Sahani: ಬಿಹಾರದಲ್ಲಿ ವಿಕಾಸಶೀಲ ಇನ್ಸಾನ್‌ ಪಕ್ಷದ ಮುಖ್ಯಸ್ಥನ ತಂದೆಯ ಭೀಕರ ಹತ್ಯೆ; ಮನೆ ತುಂಬ ರಕ್ತ!

karnataka assembly live
ಪ್ರಮುಖ ಸುದ್ದಿ28 mins ago

Karnataka Assembly Live: ಸದನದಲ್ಲಿ ಇಂದು ಕಿಡಿಯೆಬ್ಬಿಸಲಿರುವ ವಾಲ್ಮೀಕಿ ಹಗರಣ; ಉತ್ತರ ನೀಡಲು ಸಿಎಂ ಸಜ್ಜು; ಇಲ್ಲಿದೆ ಕ್ಷಣಕ್ಷಣದ ಲೈವ್‌

David Warner
ಕ್ರೀಡೆ30 mins ago

David Warner: ​ಚಾಂಪಿಯನ್ಸ್ ಟ್ರೋಫಿಗೆ ವಾರ್ನರ್​ ಆಯ್ಕೆ ಇಲ್ಲ ಎಂದ ಜಾರ್ಜ್​ ಬೈಲಿ

Kannada New Movie
ಸ್ಯಾಂಡಲ್ ವುಡ್35 mins ago

Kannada New Movie: ಸೆಟ್ಟೇರಿತು ‘ಆಕಾಶ್’, ‘ಅರಸು’ ಚಿತ್ರಗಳ ಡೈರೆಕ್ಟರ್ ಹೊಸ ಸಿನಿಮಾ; ಕಿರುತೆರೆಯ ಈ ಪ್ರತಿಭೆ ನಾಯಕ

Kannada In Madrasa
ಕರ್ನಾಟಕ49 mins ago

Kannada In Madrasa: ರಾಜ್ಯದ ಮದರಸಾಗಳಲ್ಲಿ ಇನ್ನು ಕನ್ನಡ ಕಲಿಕೆ ಕಡ್ಡಾಯ; ಶೀಘ್ರವೇ ಆದೇಶ!

murder case set fire bagalakote
ಕ್ರೈಂ58 mins ago

Horrible Murder Case: ಶೆಡ್‌ ಹೊರಗಿನಿಂದ ಲಾಕ್‌ ಮಾಡಿ ಬೆಂಕಿ ಇಟ್ಟ ದುಷ್ಟರು; ಇಬ್ಬರು ಸಜೀವ ದಹನ

Iti Acharya
ಸಿನಿಮಾ1 hour ago

Iti Acharya: ಬಾಲಿವುಡ್‌ಗೆ ಕಾಲಿಟ್ಟ ಮತ್ತೊಬ್ಬ ಕನ್ನಡತಿ; ದಕ್ಷಿಣ ಭಾರತದ ಚಿತ್ರಗಳ ಬಳಿಕ ಹಿಂದಿಯಲ್ಲೂ ಅಭಿನಯ

Karnataka Assembly
ಕ್ರೀಡೆ1 hour ago

Karnataka Assembly: ಬಿಜೆಪಿಯಿಂದಲೇ ರಾಹುಲ್​ಗೆ ಶ್ಲಾಘನೆ; ಸದನದಲ್ಲಿ ಅಭಿನಂದನೆಗೆ ನಿರ್ಣಯ

Anant Radhika Wedding
ವಾಣಿಜ್ಯ1 hour ago

Anant Radhika Wedding: ನಮ್ಮಿಂದ ಏನಾದರು ತಪ್ಪಾಗಿದ್ದರೆ ದಯವಿಟ್ಟು ಕ್ಷಮಿಸಿ; ನೀತಾ ಅಂಬಾನಿ ವಿನಮ್ರ ಮನವಿ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ17 hours ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ23 hours ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ1 day ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ2 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ2 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ2 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ3 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಕಳಚಿ ಬಿದ್ದ ಚಾವಣೆ; ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್‌ ಮರ

Wild Animal Attack
ಹಾಸನ3 days ago

Wild Animal Attack : ಬೇಲೂರಿನಲ್ಲಿ ಒಂಟಿ ಸಲಗ ಡೆಡ್ಲಿ ಅಟ್ಯಾಕ್; ಮನೆ ಅಂಗಳದಲ್ಲಿ ಓಡಾಡಿದ ಚಿರತೆ

ಟ್ರೆಂಡಿಂಗ್‌