MLCs Health Expenditure: ಆರೋಗ್ಯಕ್ಕಾಗಿ ಲಕ್ಷ ಲಕ್ಷ ಕ್ಲೇಮ್; ಅತಿ ಹೆಚ್ಚು ಸರ್ಕಾರದ ಹಣ ಪಡೆದ ಎಂಎಲ್‌ಸಿಗಳು ಇವರೇ ನೋಡಿ! - Vistara News

ಪ್ರಮುಖ ಸುದ್ದಿ

MLCs Health Expenditure: ಆರೋಗ್ಯಕ್ಕಾಗಿ ಲಕ್ಷ ಲಕ್ಷ ಕ್ಲೇಮ್; ಅತಿ ಹೆಚ್ಚು ಸರ್ಕಾರದ ಹಣ ಪಡೆದ ಎಂಎಲ್‌ಸಿಗಳು ಇವರೇ ನೋಡಿ!

MLCs Health Expenditure: ಆರೋಗ್ಯಕ್ಕಾಗಿ ಸರ್ಕಾರದಿಂದ ಹಣ ಕ್ಲೇಮ್ ಮಾಡಲು ಎಂಎಲ್‌ಸಿಗಳಿಗೆ ಅವಕಾಶವಿದೆ. ಸಾಮಾಜಿಕ ಹೋರಾಟಗಾರರೊಬ್ಬರು ಆರ್‌ಟಿಐ ಸಲ್ಲಿಸಿದ ಹಿನ್ನೆಲೆಯಲ್ಲಿ 2023ರ ಮೇ 1 ರಿಂದ 2024ರ ಜುಲೈ ತಿಂಗಳವರೆಗೆ ಯಾರು ಎಷ್ಟು ಹಣ ಪಡೆದಿದ್ದಾರೆ ಎಂಬ ಮಾಹಿತಿಯನ್ನು ವಿಧಾನ ಪರಿಷತ್‌ ಸಚಿವಾಲಯ ಮಾಹಿತಿ ನೀಡಿದೆ.

VISTARANEWS.COM


on

Health Expenditure
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಲು ರಾಜ್ಯದ ವಿಧಾನ ಪರಿಷತ್ ಸದಸ್ಯರು ಲಕ್ಷ ಲಕ್ಷ ಹಣ ಕ್ಲೇಮ್ ಮಾಡಿರುವುದು ಕಂಡುಬಂದಿದೆ. ಕೇವಲ ಒಂದು ವರ್ಷದಲ್ಲಿ ಲಕ್ಷಾಂತರ ರೂ.ಗಳನ್ನು ಸರ್ಕಾರದಿಂದ ಎಂಎಲ್‌ಸಿಗಳು ಪಡೆದಿರುವ ಮಾಹಿತಿ ಬಹಿರಂಗವಾಗಿದೆ. ಸಾಮಾಜಿಕ ಹೋರಾಟಗಾರ ಎಚ್‌.ಎಂ.ವೆಂಕಟೇಶ್‌ ಅವರು ಮಾಹಿತಿ ಹಕ್ಕು ಕಾಯ್ದೆ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಎಂಎಲ್‌ಸಿಗಳು ಆರೋಗ್ಯಕ್ಕಾಗಿ (MLCs Health Expenditure) ಪಡೆದಿರುವ ಹಣದ ಕುರಿತ ಮಾಹಿತಿಯನ್ನು ಸಚಿವಾಲಯವು ನೀಡಿದೆ.

ಆರೋಗ್ಯಕ್ಕಾಗಿ ಸರ್ಕಾರದಿಂದ ಹಣ ಕ್ಲೇಮ್ ಮಾಡಲು ಎಂಎಲ್‌ಸಿಗಳಿಗೆ ಅವಕಾಶವಿದೆ. ಹೀಗಾಗಿ 2023ರ ಮೇ 1 ರಿಂದ 2024ರ ಜುಲೈ ತಿಂಗಳವರೆಗೆ ಯಾರು ಎಷ್ಟು ಹಣ ಪಡೆದಿದ್ದಾರೆ ಎಂಬ ಮಾಹಿತಿಯನ್ನು ವಿಧಾನ ಪರಿಷತ್‌ ಸಚಿವಾಲಯ ಮಾಹಿತಿ ನೀಡಿದೆ.

ಎಂಎಲ್‌ಸಿಗಳ ಪೈಕಿ ಯಾರು ಎಷ್ಟು ಪಡೆದಿದ್ದಾರೆ ಎಂದು ನೋಡುವುದಾದರೆ, ಎಂಎಲ್‌ಸಿ ಭಾರತಿ ಶೆಟ್ಟಿ ಅವರು ಒಂದು ವರ್ಷದಲ್ಲಿ 48.70 ಲಕ್ಷ ರೂಪಾಯಿ ಕ್ಲೇಮ್ ಮಾಡುವ ಮೂಲಕ ಅತಿ ಹೆಚ್ಚು ಹಣ ಕ್ಲೇಮ್ ಮಾಡಿರುವ ವಿಧಾನ ಪರಿಷತ್ ಸದಸ್ಯೆಯಾಗಿದ್ದಾರೆ. ಎರಡನೇ ಸ್ಥಾನದಲ್ಲಿದ್ದಾರೆ ಕೊಟ್ಯಧೀಶ್ವರ ಸಿ.ಪಿ.ಯೋಗೇಶ್ವರ್ ಇದ್ದಾರೆ. ಇವರು 39.64 ಲಕ್ಷ ರೂ.ಗಳನ್ನು ಸರ್ಕಾರದಿಂದ ಆರೋಗ್ಯಕ್ಕಾಗಿ ಖರ್ಚು ಮಾಡಿದ್ದಾರೆ. ಮೂರನೇ ಸ್ಥಾನದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಚನ್ನರಾಜ್ ಹಟ್ಟಿಹೊಳಿ ಇದ್ದು, ಅಕ್ಕ ಸಚಿವರಾಗಿದ್ದರೂ ಕೂಡ ಆರೋಗ್ಯಕ್ಕಾಗಿ 17.03 ಲಕ್ಷ ರೂ.ಗಳನ್ನು ಪಡೆದಿದ್ದಾರೆ.

ಎಂಎಲ್‌ಸಿ ಭಾರತಿ ಶೆಟ್ಟಿ ಮತ್ತು ಸಿ.ಪಿ.ಯೋಗೇಶ್ವರ್

ಇನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಕೂಡ ಅತಿ ಹೆಚ್ಚು ಸರ್ಕಾರದ ಹಣ ಖರ್ಚು ಮಾಡಿರುವುದು ಕಂಡುಬಂದಿದೆ. ಒಂದೇ ವರ್ಷದಲ್ಲಿ ಇವರು ಆರೋಗ್ಯಕ್ಕಾಗಿ 7.26 ಲಕ್ಷ ರೂಪಾಯಿ ಸರ್ಕಾರದ ಹಣ ಖರ್ಚು ಮಾಡಿದ್ದಾರೆ. ಹಿರಿಯ ಶಾಸಕ ಲಕ್ಷ್ಮಣ್ ಸವದಿಯಿಂದ ಕೂಡ ಸರ್ಕಾರದ ಹಣ ಖರ್ಚಾಗಿದೆ. ಇವರು 2,41,574 ರೂ.ಗಳನ್ನು ಪಡೆದಿದ್ದು, ಟಿ.ಎ. ಶರವಣ ಅವರು 2,14,770 ರೂಪಾಯಿ ಖರ್ಚು ಮಾಡಿದ್ದಾರೆ.

ಸರ್ಕಾರದ ಹಣ ಪಡೆದ ಎಂಎಲ್‌ಸಿಗಳ ಪಟ್ಟಿ

  • ಹರೀಶ್ ಕುಮಾರ್- 2 ಲಕ್ಷ ರೂ.
  • ಮರಿತಿಬ್ಬೇಗೌಡ- 1,54,995 ರೂ.
  • ವೈ.ಎ. ನಾರಾಯಣಸ್ವಾಮಿ- 3 ಲಕ್ಷ
  • ಅಬ್ದುಲ್ ಜಬ್ಬಾರ್- 1,1,345 ರೂ.
  • ಸುಧಾಮ್ ದಾಸ್- 2,04,542 ರೂ.
  • ಸುನೀಲ್ ವಲ್ಯಾಪುರೆ- 2,75,000 ರೂ.
  • ಛಲವಾದಿ ನಾರಾಯಣಸ್ವಾಮಿ- 1,18,828 ರೂ.
  • ವೈ.ಎಂ. ಸತೀಶ್- 2,77,559 ರೂ.
  • ಮಧು ಮಾದೇಗೌಡ- 2,46,233 ರೂ.
  • ರಘುನಾಥ್ ಮಲ್ಕಾಪುರೆ- 1,34,823 ರೂ.
  • ಎಂ.ಜಿ.ಮುಳೆ- 2,24,282 ರೂಪಾಯಿ
  • ಅಡಗೂರು ವಿಶ್ವನಾಥ್-‌ 52, 127 ರೂ.
  • ರಘುನಾಥ್‌ ರಾವ್‌ ಮಲ್ಕಾಪೂರೆ- 1,34,823
  • ಸುಜಾ ಕುಶಾಲಪ್ಪ- 85,000 ರೂ.
  • ಸಲೀಂ ಅಹ್ಮದ್‌-66,402 ರೂ.

ಇದನ್ನೂ ಓದಿ | Industrial City: ಹೊಸೂರಿನಲ್ಲಿ ಟಾಟಾ ಗ್ರೂಪ್‌ನಿಂದ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣಕ್ಕೆ ಸಿದ್ಧತೆ; ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Price Support Scheme: ರೈತರಿಗೆ ಕೇಂದ್ರದಿಂದ ಗುಡ್‌ ನ್ಯೂಸ್; ಬೆಂಬಲ ಬೆಲೆಯಲ್ಲಿ ಹೆಸರು, ಸೂರ್ಯಕಾಂತಿ ಖರೀದಿಸಲು ರಾಜ್ಯಕ್ಕೆ ಸೂಚನೆ

Price Support Scheme: ರಾಜ್ಯದ ಮಾರುಕಟ್ಟೆಗಳಲ್ಲಿ ಹೆಸರಿನ ಬೆಲೆ ಕುಸಿದು ರೈತರು ಬೆಳೆದ ಬೆಳೆಗೆ ಸರಿಯಾದ ಮೌಲ್ಯ ದೊರೆಯದೇ ತೊಂದರೆ ಸಿಲುಕಿದ್ದು, ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರ ಸಹಾಯಕ್ಕೆ ನಿಂತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

VISTARANEWS.COM


on

Koo

ಹುಬ್ಬಳ್ಳಿ: ಕೇಂದ್ರ ಸರ್ಕಾರ ರಾಜ್ಯದ ರೈತರ ನೆರವಿಗೆ ಧಾವಿಸಿದ್ದು, ಬೆಂಬಲ ಬೆಲೆಯಲ್ಲಿ (Price Support Scheme) ಹೆಸರು ಕಾಳು ಹಾಗೂ ಸೂರ್ಯಕಾಂತಿ ಬೆಳೆ ಖರೀದಿಗೆ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ರಾಜ್ಯದಲ್ಲಿ ಹೆಸರು ಕಾಳು ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗೆ ಮುಂದಾಗಿರುವ ಕೇಂದ್ರ ಸರ್ಕಾರ, ಬೆಂಬಲ ಬೆಲೆ ಯೋಜನೆ ಅಡಿ ಪ್ರತಿ ಕ್ವಿಂಟಾಲ್‌ಗೆ 8,682 ರೂ. (MSP) ದರದಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ಜೋಶಿ ಟ್ವೀಟ್ ಮಾಡಿದ್ದಾರೆ.

ರಾಜ್ಯದ ಮಾರುಕಟ್ಟೆಗಳಲ್ಲಿ ಹೆಸರಿನ ಬೆಲೆ ಕುಸಿದು ರೈತರು ಬೆಳೆದ ಬೆಳೆಗೆ ಸರಿಯಾದ ಮೌಲ್ಯ ದೊರೆಯದೇ ತೊಂದರೆ ಸಿಲುಕಿದ್ದು, ಸಂಕಷ್ಟದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ರೈತರ ಸಹಾಯಕ್ಕೆ ನಿಂತಿದೆ. ಕೇಂದ್ರ ಸರ್ಕಾರ, ಎಂಎಸ್‌ಪಿ ಅಡಿ ಹೆಸರು ಕಾಳು ಖರೀದಿಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದು, ರಾಜ್ಯದ ರೈತರ ಹೆಸರುಕಾಳು ಬೆಳೆಯನ್ನು ಬೆಲೆ ಬೆಂಬಲ ಯೋಜನೆ (Price Support Scheme (PSS)) ಅಡಿ ಖರೀದಿಗೆ ಅನುಮತಿ ನೀಡಿದೆ. 2215 ಮೆಟ್ರಿಕ್‌ ಟನ್ ಹೆಸರುಕಾಳನ್ನು ಪ್ರತಿ ಕ್ವಿಂಟಾಲ್‌ಗೆ 8,682‌ ರೂ.ನಂತೆ ಖರೀದಿ ಮಾಡಲಾಗುವುದು ಎಂದು ಸಚಿವ ಜೋಶಿ ಮಾಹಿತಿ ನೀಡಿದ್ದಾರೆ.

ಸೂರ್ಯಕಾಂತಿ ಖರೀದಿಗೂ ಅನುಮೋದನೆ

ಸೂರ್ಯಕಾಂತಿ ಬೆಳೆಯನ್ನು ಕೂಡ ಬೆಲೆ ಬೆಂಬಲ ಯೋಜನೆ ಅಡಿಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. 13210 ಎಂ.ಟಿ. ಸೂರ್ಯಕಾಂತಿಯನ್ನು ಕೇಂದ್ರ ಸರ್ಕಾರ ಬೆಂಬಲ ಬೆಲೆ ಯೋಜನೆ ಅಡಿ ಖರೀದಿಸಲಿದೆ ಎಂದು ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ರಾಜ್ಯ ಸರ್ಕಾರ, ಕೇಂದ್ರಕ್ಕೆ ಆಗಸ್ಟ್ 21ರಂದು ಪತ್ರ ಬರೆದು ವಿನಂತಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜಸಿಂಗ್ ಚವ್ಹಾಣವರನ್ನು ಭೇಟಿ ಮಾಡಿ ಚರ್ಚಿಸಿ, ರಾಜ್ಯದ ಹೆಸರಕಾಳು ಮತ್ತು ಸೂರ್ಯಕಾಂತಿ ಬೆಳೆಗಾರರ ಬೆಂಬಲಕ್ಕೆ ನಿಲ್ಲುವಂತೆ ಮನವಿ ಮಾಡಿದ್ದೆ. ಇದಕ್ಕೆ ತಕ್ಷಣವೇ ಸ್ಪಂದಿಸಿದ ಸಚಿವರು ಅಧಿಕಾರಿಗಳೊಂದಿಗೆ ಚರ್ಚಿಸಿ ತಕ್ಷಣವೇ ಬೆಂಬಲ ಬೆಲೆಯಲ್ಲಿ ಹೆಸರು ಮತ್ತು ಸೂರ್ಯಕಾಂತಿ ಖರೀದಿಗೆ ಅನುಮತಿ ನೀಡುವಂತೆ ಸೂಚಿಸಿದರು. ಕೇಂದ್ರ ಸರ್ಕಾರ ಆಗಸ್ಟ್ 22ರಂದೇ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ ಎಂದು ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ಇದನ್ನೂ ಓದಿ | Industrial City: ಹೊಸೂರಿನಲ್ಲಿ ಟಾಟಾ ಗ್ರೂಪ್‌ನಿಂದ ಇಂಡಸ್ಟ್ರಿಯಲ್‌ ಸಿಟಿ ನಿರ್ಮಾಣಕ್ಕೆ ಸಿದ್ಧತೆ; ಬೆಂಗಳೂರಿನ ಐಟಿ ಸಿಟಿ ಪಟ್ಟಕ್ಕೆ ಕುತ್ತು?

ತ್ವರಿತವಾಗಿ ಖರೀದಿ ಕೇಂದ್ರ ತೆರೆಯಲು ಒತ್ತಾಯ: ರಾಜ್ಯ ಸರ್ಕಾರ ತ್ವರಿತವಾಗಿ ರಾಜ್ಯದೆಲ್ಲೆಡೆ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಿ, ಬೆಂಬಲ ಬೆಲೆಯಲ್ಲಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಒತ್ತಾಯಿಸಿದ್ದಾರೆ.

Continue Reading

ಕರ್ನಾಟಕ

Ziyu Homes Scam: ಝಿಯೂ ಹೋಮ್ಸ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಅಹ್ಮದ್ ಅಲಿ ಬೇಗ್ ದಂಪತಿ ಅರೆಸ್ಟ್‌!

Ziyu Homes Scam: ಬೆಂಗಳೂರಿನಲ್ಲಿ ನೂರಾರು ಮನೆ ಮಾಲೀಕರು ಹಾಗೂ ಬಾಡಿಗೆದಾರರಿಗೆ ವಂಚನೆ ಮಾಡಿದ ಪ್ರಕರಣದಲ್ಲಿ ಝಿಯೂ ಹೋಮ್ಸ್ ಕಂಪನಿ ಮಾಲೀಕ ಅಹ್ಮದ್‌ ಅಲಿ ಬೇಗ್ ಮತ್ತು ಮುಯಿನಾ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Ziyu Homes Scam
Koo

ಬೆಂಗಳೂರು: ಝಿಯೂ ಹೋಮ್ಸ್ (Ziyu Homes Scam) ಹೆಸರಲ್ಲಿ ಮನೆ ಮಾಲೀಕರು ಮತ್ತು ಭೋಗ್ಯಕ್ಕೆ ಇರುವವರನ್ನು ಏಕಕಾಲಕ್ಕೆ ವಂಚನೆ ಮಾಡುತ್ತಿದ್ದ ಝಿಯೂ ಹೋಮ್ಸ್ ಕಂಪನಿ ಮಾಲೀಕ ಅಹ್ಮದ್‌ ಅಲಿ ಬೇಗ್ ಮತ್ತು ಮುಯಿನಾ ದಂಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮನೆ ಮತ್ತು ಫ್ಲ್ಯಾಟ್‌ಗಳನ್ನು ಝಿಯೂ ಸಂಸ್ಥೆ ಬಾಡಿಗೆಗೆ ಪಡೆದು ಅಗ್ರಿಮೆಂಟ್ ಮಾಡಿಕೊಳ್ಳುತ್ತಿತ್ತು. ಆದರೆ, ಆ ಮನೆಗಳನ್ನು ಬೇರೊಬ್ಬರಿಗೆ ಭೋಗ್ಯಕ್ಕೆ ನೀಡಿ ಕೋಟ್ಯಂತರ ರೂ. ವಂಚನೆ ಮಾಡಿದ್ದರಿಂದ ಕಂಪನಿ ಮಾಲೀಕ ಹಾಗೂ ಆತನ ಪತ್ನಿಯನ್ನು ಬಂಧಿಸಲಾಗಿದೆ.

ಪೂರ್ವ ವಿಭಾಗದಲ್ಲಿ ಬರುವ ನೂರಾರು ಮನೆ ಮಾಲೀಕರಿಗೆ ದಂಪತಿ ವಂಚನೆ ಮಾಡಿದ್ದಾರೆ. 15-20 ಸಾವಿರ ರೂ.ಗಳಿಗೆ ಮನೆ ಬಾಡಿಗೆಗೆ ಪಡೆಯುತ್ತಿದ್ದ ಝಿಯೂ ಹೋಮ್ಸ್‌, ಬೇರೊಬ್ಬರಿಗೆ 15-20 ಲಕ್ಷಕ್ಕೆ ಭೋಗ್ಯಕ್ಕೆ ಹಾಕಿ ವಂಚನೆ ಮಾಡುತ್ತಿತ್ತು. ಮನೆ ಮಾಲೀಕರು ಬಾಡಿಗೆಗೆ ಕೊಟ್ಟಿದ್ದೇವೆ ಎಂದು ಸುಮ್ಮನೆ ಇರುತ್ತಿದ್ದರು. ಅದರೆ, ಒಂದೆರಡು ತಿಂಗಳು ಬಾಡಿಗೆ ಕೊಟ್ಟು ನಂತರ ಬಾಡಿಗೆ ಕೊಡುತ್ತಿರಲಿಲ್ಲ. ಮಾಲೀಕರು ಮನೆ ಬಳಿ ಹೋಗಿ ನೋಡಿದಾಗ ಅವರಿಗೆ ಶಾಕ್ ಆಗುತ್ತಿತ್ತು. ಯಾಕೆಂದರೆ ಮನೆಯಲ್ಲಿ ಬೇರೆ ಯಾರೋ ವ್ಯಕ್ತಿಗಳು ವಾಸವಿರುತ್ತಿರುವುದು ಕಂಡುಬರುತ್ತಿತ್ತು.

ಈ ಬಗ್ಗೆ ಹೆಣ್ಣೂರು, ಬಾಣಸವಾಡಿ ಸೇರಿ ಹಲವು ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದವು. ಸುಮಾರು ನಲವತ್ತಕ್ಕೂ ಹೆಚ್ಚು ಮನೆ ಮಾಲೀಕರಿಂದ ದೂರು‌‌ ದಾಖಲಿಸಿದ್ದರಿಂದ ಪ್ರಕರಣವನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಸದ್ಯ ಸಿಸಿಬಿ ಅಧಿಕಾರಿಗಳಿಂದ ಹೈದರಾಬಾದ್‌ನಲ್ಲಿ ಅಹ್ಮದ್‌ ಅಲಿ ಬೇಗ್ ಮತ್ತು ಪತ್ನಿ ಮುಯಿನಾಳನ್ನು ಬಂಧಿಸಿದ್ದಾರೆ. ಇನ್ನೂ ಕೆಲ ಆರೋಪಿಗಳು ತಲೆ ಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.

ಇದನ್ನೂ ಓದಿ | Road Accident : ಪ್ರತ್ಯೇಕ ಕಡೆಗಳಲ್ಲಿ ಅಪಘಾತ; ಓವರ್‌ ಸ್ಪೀಡ್‌ ಯಡವಟ್ಟು, ಪ್ರಾಣಕ್ಕೆ ತಂತು ಕುತ್ತು

ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಕಾಮುಕನನ್ನು ಥಳಿಸಿದ ಸಾರ್ವಜನಿಕರು

Physical abuse attempted rape of school girl The public who beat up the man
Physical abuse attempted rape of school girl The public who beat up the man

ಚಿಕ್ಕೋಡಿ: ಶಾಲಾ ಬಾಲಕಿ ಮೇಲೆ ಅತ್ಯಾಚಾರಕ್ಕೆ (Physical Abuse) ಯತ್ನಿಸಿದ ಕಾಮುಕನನ್ನು ಹಿಡಿದು ಸಾರ್ವಜನಿಕರು ಧರ್ಮದೇಟು ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಾಯಬಾಗ ಪಟ್ಟಣದ ಕೈರಕೋಡಿ ನಿವಾಸಿ ಸುನೀಲ್ ದೀಪಾಳೆ ಎಂಬಾತನಿಂದ ಕೃತ್ಯ ನಡೆದಿದೆ.

ಸುನೀಲ್ 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿ ಪಟ್ಟಣದ ಕಂಚರವಾಡಿ ರೋಡ್ ಕಡೆಯಿಂದ ತೆರಳುತ್ತಿದ್ದಳು. ಈ ವೇಳೆ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಬೈಕ್ ಮೇಲೆ ಕೂರಿಸಿಕೊಂಡಿದ್ದಾನೆ. ನಂತರ ನಿರ್ಜನ ಪ್ರದೇಶದ ಕಡೆಗೆ ಕರೆದ್ಯೊಯಲು ಯತ್ನಿಸಿದ್ದಾನೆ. ಇದರಿಂದ ಗಾಬರಿಗೊಂಡ ಬಾಲಕಿ ಗಾಡಿ ನಿಲ್ಲಿಸಲು ಹೇಳಿದ್ದಾಳೆ. ಆದರೆ ನಿಲ್ಲಸದೇ ಇದ್ದಾಗ ಬಾಲಕಿ ಕಿರುಚಾಡಿದ್ದಾಳೆ. ಆಕೆಯ ಕಿರುಚಾಟ ಕೇಳಿ ಸ್ಥಳಕ್ಕೆ ಸ್ಥಳೀಯರು ದೌಡಾಯಿಸಿದ್ದಾರೆ.

ಕೂಡಲೇ ಸುನೀಲ್‌ನನ್ನು ಹಿಡಿದುಕೊಂಡ ಸ್ಥಳೀಯರು ಅತ್ಯಾಚಾರಕ್ಕೆ ಯತ್ನಿಸಿದ್ದು ತಿಳಿಯುತ್ತಿದ್ದಂತೆ ಧರ್ಮದೇಟು ನೀಡಿ ರಾಯಬಾಗ ಪೊಲೀಸ್‌ರಿಗೆ ಒಪ್ಪಿಸಿದ್ದಾರೆ. ಆರೋಪಿಗೆ ರಾಯಬಾಗ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Love Case : ಪ್ರೀತಿಗೆ ಪೋಷಕರ ವಿರೋಧ; ಒಬ್ಬರಿಗೊಬ್ಬರು ತಬ್ಬಿಕೊಂಡು ನೇಣಿಗೆ ಶರಣಾದ ಪ್ರೇಮಿಗಳು

ಹೊಸಕೋಟೆಯಲ್ಲಿ ಬಾಲ್ಯ ವಿವಾಹಕ್ಕೆ ಯತ್ನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಕನಕ‌ ಭವನದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಪ್ಪಿಸಿದ್ದಾರೆ. 15 ವರ್ಷದ ಬಾಲಕಿಗೆ ಮದುವೆ ಮಾಡಲು ಪೋಷಕರು ಮುಂದಾಗಿದ್ದರು. ಆರತಕ್ಷತೆ ಮುಗಿಸಿ ಮದುವೆಗೆ ಅರಿಶಿನ ಶಾಸ್ತ್ರ ಮಾಡುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಅಧಿಕಾರಿಗಳು ಮದುವೆ ನಿಲ್ಲಿಸಿದ್ದಾರೆ.

ಹೊಸಕೋಟೆ ನಗರದ ಕನಕ ಭವನದಲ್ಲಿ ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ್ದಾರೆ. ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ‌ ಇಲಾಖೆಯ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನಿತಾ ಲಕ್ಷ್ಮೀ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿ ಮದುವೆ ನಿಲ್ಲಿಸಿ, ಬಾಲಕಿಯನ್ನು ವಶಕ್ಕೆ ಪಡೆದು ಮಹಿಳಾ ಕೇಂದ್ರಕ್ಕೆ ಕರೆತಂದಿದ್ದಾರೆ. ಪೋಷಕರ ವಿರುದ್ಧ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Western Ghats: ಭೂ ಕುಸಿತ ಹಿನ್ನೆಲೆ; ಪಶ್ಚಿಮ ಘಟ್ಟಗಳಲ್ಲಿನ ರೆಸಾರ್ಟ್, ಹೋಮ್ ಸ್ಟೇ, ತೋಟ, ಬಡಾವಣೆ ತೆರವಿಗೆ ಸರ್ಕಾರದ ಆದೇಶ

Western Ghats: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಭೂಕುಸಿತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ. ಇದೀಗ ಎಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ / ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಭೂ ದಾಖಲೆ) ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸುವಂತೆ ಸೂಚಿಸಿದ್ದಾರೆ.

VISTARANEWS.COM


on

Western Ghats
Koo

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ನಡೆದ ಭೂಕುಸಿತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ. ಈ ಸಂಬಂಧ ಕೆಲವು ದಿನಗಳ ಹಿಂದೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ (Eshwar Khandre) ಅವರು ಸುತ್ತೋಲೆ ಹೊರಡಿಸಿದ್ದು, ಪಶ್ಚಿಮ ಘಟ್ಟದಲ್ಲಿ (Western Ghats) 2015ರಿಂದ ಈಚೆಗೆ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಸೂಚನೆ ನೀಡಿದ್ದರು. ಇದೀಗ ಎಲ್ಲ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ / ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಪತ್ರ ಬರೆದಿರುವ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಭೂ ದಾಖಲೆ) ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸುವಂತೆ ಸೂಚಿಸಿದ್ದಾರೆ.

2015ರ ನಂತರದಲ್ಲಿ ರಾಜ್ಯದ ಪಶ್ಚಿಮ ಘಟ್ಟ ಮತ್ತು ಇತರ ಘಟ್ಟ ಪ್ರದೇಶದಲ್ಲಿ ಅರಣ್ಯ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್‌, ಹೋಂ ಸ್ಟೇ, ತೋಟ, ಬಡಾವಣೆ ಹಾಗೂ ಇನ್ನಿತರ ಅರಣ್ಯ ಒತ್ತುವರಿ ಪ್ರಕರಣಗಳಿಗೆ ಸಂಬಂಧಿಸಿದಂತೆ ವೈಯಕ್ತಿಕ ಗಮನ ಹರಿಸಿ ಪರಿಶೀಲಿಸಿ ವಸ್ತು ನಿಷ್ಠ ಮಾಹಿತಿಯನ್ನು ಕೂಡಲೇ ಸಲ್ಲಿಸಲು ನೀಡಿರುವ ನಿರ್ದೇಶನಗಳನ್ನು ಪುನರುಚ್ಚರಿಸಲಾಗಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತವಾಗಿ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.

ಸಚಿವರು ಹೇಳಿದ್ದೇನು?

ಈ ಬಗ್ಗೆ ಮಾತನಾಡಿದ್ದ ಸಚಿವ ಈಶ್ವರ್‌ ಖಂಡ್ರೆ, ʼʼರಾಜ್ಯದ ಪಶ್ಚಿಮ ಘಟ್ಟಗಳಲ್ಲಿ 2015ರ ನಂತರ ಅರಣ್ಯ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ನಿರ್ಮಿಸಿರುವ ಹೋಮ್ ಸ್ಟೇ , ರೆಸಾರ್ಟ್ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಕೃತಿ ವಿಕೋಪದಿಂದ ಆಗುತ್ತಿರುವ ಅನಾಹುತಗಳನ್ನು ನೋಡುತ್ತಿದ್ದೇವೆ. ಕೇರಳದಲ್ಲಿ ಆದ ಘಟನೆಯಿಂದ ನಾಲ್ಕೈದು ಹಳ್ಳಿ ನಾಪತ್ತೆಯಾಗಿ ನೂರಾರು ಜನರು ಸಾವಿಗೀಡಾಗಿದ್ದಾರೆ. ವಿಶೇಷವಾಗಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ರಸ್ತೆ ಮಾಡುತ್ತಾರೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸುತ್ತಾರೆ. ಇವುಗಳಿಂದ ಅನಾಹುತ ಆಗುತ್ತದೆ. ಮೊದಲು ಕೃಷಿ ಚಟುವಟಿಕೆಗಳನ್ನು ಶುರುಮಾಡಿ ನಂತರ ರೆಸಾರ್ಟ್ ಮಾಡುತ್ತಾರೆ. ಹೀಗಾಗಿ ಅನಧಿಕೃತ ಹೋಂ ಸ್ಟೇ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆʼʼ ಎಂದು ತಿಳಿಸಿದ್ದರು.

ಇದನ್ನೂ ಓದಿ: Tiger Nail : ಹುಲಿ ಉಗುರು ಧರಿಸಿದ ಅರಣ್ಯಾಧಿಕಾರಿಗಳ ಸಸ್ಪೆಂಡ್; ಸಚಿವ ಈಶ್ವರ್‌ ಖಂಡ್ರೆ ಸೂಚನೆ

Continue Reading

ಪ್ರಮುಖ ಸುದ್ದಿ

Unified pension scheme: ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ಸಂಘಗಳ ವಿರೋಧ

Unified pension scheme: ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ಯುಪಿಎಸ್ ಪಿಂಚಣಿ ಯೋಜನೆ ಜಾರಿಗೆ ಶೇಕಡ 50ರಷ್ಟು ಪಿಂಚಣಿ ನೀಡಲು ತೆಗೆದುಕೊಂಡಿರುವ ತೀರ್ಮಾನ ತೃಪ್ತಿ ತಂದಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ. ನಮ್ಮ ಬೇಡಿಕೆ ಹಳೆ ಪಿಂಚಣಿಯ ಮರು ಸ್ಥಾಪನೆ ಮಾತ್ರ ಎಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಹೇಳಿದ್ದಾರೆ.

VISTARANEWS.COM


on

unified pension scheme
Koo


ಬೆಂಗಳೂರು: ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಹೊಸ ಯುಪಿಎಸ್ ಪಿಂಚಣಿ ಯೋಜನೆ(Unified pension scheme)ಗೆ ರಾಜ್ಯ ಸರ್ಕಾರಿ ನೌಕರರ ಸಂಘ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘ(Karnataka government employees) ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ಈ ನಿರ್ಧಾರ ತೃಪ್ತಿಕರವಲ್ಲ ಎಂದು ಈ ಸಂಘಗಳು ಅಭಿಪ್ರಾಯಪಟ್ಟಿವೆ

ಕೇಂದ್ರ ಸರ್ಕಾರ ಸಚಿವ ಸಂಪುಟದಲ್ಲಿ ಯುಪಿಎಸ್ ಪಿಂಚಣಿ ಯೋಜನೆ ಜಾರಿಗೆ ಶೇಕಡ 50ರಷ್ಟು ಪಿಂಚಣಿ ನೀಡಲು ತೆಗೆದುಕೊಂಡಿರುವ ತೀರ್ಮಾನ ತೃಪ್ತಿ ತಂದಿರುವುದಿಲ್ಲ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಹೇಳಿದ್ದಾರೆ. ಕೇಂದ್ರ ಸರ್ಕಾರ ಮತ್ತೊಮ್ಮೆ ಪುನರ್ ಪರಿಶೀಲಿಸಿ ಶೇಕಡ 100ರಷ್ಟು ಪಿಂಚಣಿ ನೀಡಲು ಆಗ್ರಹಿಸುತ್ತೇವೆ ಎಂದು ಷಡಾಕ್ಷರಿ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ಏಕೀಕೃತ ಪಿಂಚಣಿ ವ್ಯವಸ್ಥೆಯನ್ನು ಪೂರ್ಣವಾಗಿ ವಿರೋಧಿಸುತ್ತದೆ ಎಂದು ಈ ಸಂಘದ ಅಧ್ಯಕ್ಷ ಶಾಂತಾರಾಮ್ ಅವರು ಹೇಳಿಕೆ ನೀಡಿದ್ದಾರೆ. ನಮ್ಮ ಬೇಡಿಕೆ ಹಳೆ ಪಿಂಚಣಿಯ ಮರು ಸ್ಥಾಪನೆ ಮಾತ್ರ ಎಂದು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ಅಧ್ಯಕ್ಷ ಶಾಂತಾರಾಮ್ ಹೇಳಿದ್ದಾರೆ.

ಏನಿದು ಕೇಂದ್ರ ಸರ್ಕಾರದ ಯುಪಿಎಸ್ ಪಿಂಚಣಿ ಯೋಜನೆ?:

ಇದು ಸರ್ಕಾರಿ ನೌಕರರಿಗೆ ಇತ್ತೀಚಿನ ಪಿಂಚಣಿ ಯೋಜನೆಯಾಗಿದೆ. ಸರ್ಕಾರಿ ನೌಕರರಿಗೆ ನಿಶ್ಚಿತ ಪಿಂಚಣಿ ಮೊತ್ತದ ಭರವಸೆ ನೀಡುವ ಯೋಜನೆ ಇದಾಗಿದೆ. UPS ಅಡಿಯಲ್ಲಿ, ನಿಗದಿತ ಪಿಂಚಣಿಯು ಕಳೆದ 12 ತಿಂಗಳುಗಳ ಅವಧಿಯಲ್ಲಿ ಪಡೆದ ಸರಾಸರಿ ಮೂಲ ವೇತನದ 50 ಪ್ರತಿಶತದಷ್ಟಿರುತ್ತದೆ.ಇದು ಖಚಿತವಾದ ಕುಟುಂಬ ಪಿಂಚಣಿಯನ್ನು ಸಹ ಹೊಂದಿರುತ್ತದೆ, ಇದು ಉದ್ಯೋಗಿಯ ಮೂಲ ವೇತನದ 60 ಪ್ರತಿಶತವಾಗಿದೆ. ನೌಕರನ ಮರಣದ ಸಂದರ್ಭದಲ್ಲಿ ಅದನ್ನು ತಕ್ಷಣವೇ ನೀಡಲಾಗುವುದು. ಕನಿಷ್ಠ 10 ವರ್ಷಗಳ ಸೇವೆಯ ನಂತರ ನಿವೃತ್ತಿಯ ಸಂದರ್ಭದಲ್ಲಿ, UPS ತಿಂಗಳಿಗೆ 10,000 ರೂ.ಗಳ ಖಚಿತವಾದ ಕನಿಷ್ಠ ಪಿಂಚಣಿಯನ್ನು ಒದಗಿಸುತ್ತದೆ.

ಯುಪಿಎಸ್‌ಗೆ ಯಾರು ಸೇರಬಹುದು?

“ಕೇಂದ್ರ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆಯಲ್ಲಿ (ಎನ್‌ಪಿಎಸ್) ಉಳಿಯಲು ಅಥವಾ ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಸೇರಲು ನಿರ್ಧರಿಸುವ ಹಕ್ಕನ್ನು ಹೊಂದಿರುತ್ತಾರೆ” ಎಂದು ವೈಷ್ಣವ್ ಹೇಳಿದರು. ಶನಿವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿ ನಿಯೋಜಿತ ಟಿ ವಿ ಸೋಮನಾಥನ್ ಅವರು, “ಇದು ಈಗಾಗಲೇ ಎನ್‌ಪಿಎಸ್ ಅಡಿಯಲ್ಲಿ 2004 ರಿಂದ ನಿವೃತ್ತರಾದ ಎಲ್ಲರಿಗೂ ಅನ್ವಯಿಸುತ್ತದೆ. ಹೊಸ ಯೋಜನೆಯು ಏಪ್ರಿಲ್ 1, 2025 ರಿಂದ ಜಾರಿಗೆ ಬರಲಿದೆಯಾದರೂ, NPS ಪ್ರಾರಂಭವಾದ ಸಮಯದಿಂದ ನಿವೃತ್ತರಾದ ಪ್ರತಿಯೊಬ್ಬರೂ ಮತ್ತು ಮಾರ್ಚ್ 31, 2025 ರವರೆಗೆ ನಿವೃತ್ತರಾದವರು ಸೇರಿದಂತೆ, UPS ನ ಈ ಎಲ್ಲಾ ಐದು ಪ್ರಯೋಜನಗಳಿಗೆ ಅರ್ಹರಾಗಿರುತ್ತಾರೆ” ಎಂದಿದ್ದಾರೆ.

ಇದನ್ನೂ ಓದಿ: NPS v/s UPS: ಏಕೀಕೃತ ಪಿಂಚಣಿ ಯೋಜನೆ ಅಂದ್ರೆ ಏನು? ಇದು NPSಗಿಂತ ಹೇಗೆ ಭಿನ್ನ? ಇಲ್ಲಿದೆ ಕಂಪ್ಲೀಟ್‌ ಡಿಟೇಲ್ಸ್‌

Continue Reading
Advertisement
ಕರ್ನಾಟಕ4 mins ago

Price Support Scheme: ರೈತರಿಗೆ ಕೇಂದ್ರದಿಂದ ಗುಡ್‌ ನ್ಯೂಸ್; ಬೆಂಬಲ ಬೆಲೆಯಲ್ಲಿ ಹೆಸರು, ಸೂರ್ಯಕಾಂತಿ ಖರೀದಿಸಲು ರಾಜ್ಯಕ್ಕೆ ಸೂಚನೆ

Physical Abuse
ಕಲಬುರಗಿ9 mins ago

Physical Abuse : ಮದುವೆಯಾಗುವುದಾಗಿ ನಂಬಿಸಿ ಅಬಾಷನ್‌ ಮಾಡಿಸಿ ಪ್ರಿಯಕರ ಎಸ್ಕೇಪ್; ಆತ್ಮಹತ್ಯೆಗೆ ಯತ್ನಿಸಿದ ಯುವತಿ

Viral News
ವೈರಲ್ ನ್ಯೂಸ್18 mins ago

ಸೋಷಿಯಲ್‌ ಮೀಡಿಯಾದಲ್ಲಿ ಕಿಚ್ಚು ಹಚ್ಚಿದ ಬೆಂಗಳೂರು ಮೂಲದ ಯುವತಿಯ ಬೈಸೆಪ್ಸ್ ಫೋಟೊ; ಜಾತೀಯತೆಯ ಚರ್ಚೆಗೆ ಕಾರಣವೇನು?

Shakib Al Hasan
ಕ್ರೀಡೆ26 mins ago

Shakib Al Hasan: ಚೆಂಡೆಸೆದು ಪಾಕ್​ ಆಟಗಾರ ರಿಜ್ವಾನ್​ ಕೆಣಕಿದ ಶಕಿಬ್​ ಅಲ್​ ಹಸನ್; ವಿಡಿಯೊ ವೈರಲ್​

Ziyu Homes Scam
ಕರ್ನಾಟಕ37 mins ago

Ziyu Homes Scam: ಝಿಯೂ ಹೋಮ್ಸ್ ಹೆಸರಲ್ಲಿ ಕೋಟ್ಯಂತರ ರೂ. ವಂಚನೆ; ಅಹ್ಮದ್ ಅಲಿ ಬೇಗ್ ದಂಪತಿ ಅರೆಸ್ಟ್‌!

Skydeck Project
ಬೆಂಗಳೂರು1 hour ago

Skydeck Project: ಬೆಂಗಳೂರಿನಲ್ಲಿ ʼಸ್ಕೈಡೆಕ್‌ʼಗೆ ಗ್ರೀನ್‌ ಸಿಗ್ನಲ್‌; ಇದರ ಎತ್ತರ ಕುತುಬ್‌ ಮಿನಾರ್‌ಗಿಂತ 3 ಪಟ್ಟು ಹೆಚ್ಚು!

Samantha Ruth Prabhu
ಸಿನಿಮಾ1 hour ago

Samantha Ruth Prabhu: ಪ್ರೀತಿ ಒಂದು ತ್ಯಾಗ! ಮಾರ್ಮಿಕ ಸಂದೇಶ ಪೋಸ್ಟ್‌ ಮಾಡಿದ ಸಮಂತಾ ರುತ್ ಪ್ರಭು ಪೋಸ್ಟ್

road Accident
ಮಂಡ್ಯ2 hours ago

Road Accident : ಪ್ರತ್ಯೇಕ ಕಡೆಗಳಲ್ಲಿ ಅಪಘಾತ; ಓವರ್‌ ಸ್ಪೀಡ್‌ ಯಡವಟ್ಟು, ಪ್ರಾಣಕ್ಕೆ ತಂತು ಕುತ್ತು

IPL 2025
ಕ್ರಿಕೆಟ್2 hours ago

IPL 2025: ಮುಂಬೈ ಇಂಡಿಯನ್ಸ್​ಗೆ ಶ್ರೇಯಸ್​ ಅಯ್ಯರ್​, ಕೆಕೆಆರ್​ಗೆ ಸೂರ್ಯಕುಮಾರ್​ ನಾಯಕ!​

Mann Ki Baat
ದೇಶ2 hours ago

Mann Ki Baat: ಚಂದ್ರಯಾನ-3ರ ಯಶಸ್ಸನ್ನು ದೇಶ ಮರೆಯಲು ಸಾಧ್ಯವೇ ಇಲ್ಲ: ʼಮನ್​ ಕಿ ಬಾತ್​ʼನಲ್ಲಿ ಮೋದಿ ಬಣ್ಣನೆ

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

ಮಳೆ1 day ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 weeks ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 weeks ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 weeks ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ3 weeks ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ3 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

ಟ್ರೆಂಡಿಂಗ್‌