Site icon Vistara News

Mohammed Siraj : ಮನೆ ಕಟ್ಟಲು ಸೈಟ್​, ಸರ್ಕಾರಿ ನೌಕರಿ; ಸಿರಾಜ್​ಗೆ ತೆಲಂಗಾಣ ಸರ್ಕಾರದಿಂದ ಭರ್ಜರಿ ಬಹುಮಾನ

Mohammed Siraj

ಬೆಂಗಳೂರು: ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮಂಗಳವಾರ ಆಲ್‌ರೌಂಟರ್‌ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರಿಗೆ ಭಾರತೀಯ ಕ್ರಿಕೆಟ್​ಗೆ ನೀಡಿದ ಅತ್ಯುತ್ತಮ ಕೊಡುಗೆಗಾಗಿ ಹಲವಾರು ಬಹುಮಾನಗಳನ್ನು ಘೋಷಿಸಿದ್ದಾರೆ. ವಿಶೇಷವಾಗಿ ಭಾರತ ಕ್ರಿಕೆಟ್ ತಂಡ ಐಸಿಸಿ ಪುರುಷರ ಟಿ 20 ವಿಶ್ವಕಪ್ ಗೆಲ್ಲುವಲ್ಲಿ ಅವರ ಪಾತ್ರಕ್ಕಾಗಿ ಬಹುಮಾನ ನೀಡಿದ್ದಾರೆ. ಭಾರತದ ಟಿ 20 ವಿಶ್ವಕಪ್ ಗೆಲುವಿನ ನಂತರ ಕಳೆದ ವಾರ ತಮ್ಮ ತವರು ಹೈದರಾಬಾದ್​ಗೆ ಮರಳಿದ ಸಿರಾಜ್, ಮುಖ್ಯಮಂತ್ರಿಯನ್ನು ಅವರ ನಿವಾಸದಲ್ಲಿ ಸೌಜನ್ಯದಿಂದ ಭೇಟಿಯಾದರು.

ಸಭೆಯಲ್ಲಿ, ಸಿಎಂ ರೇವಂತ್ ರೆಡ್ಡಿ ಅವರು ಸಿರಾಜ್ ಅವರನ್ನು ಸನ್ಮಾನಿಸಿದರು, ಅವರ ಅಸಾಧಾರಣ ಪ್ರತಿಭೆಯನ್ನು ಶ್ಲಾಘಿಸಿದರು ಮತ್ತು ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಸಿರಾಜ್ ಮೂಡಿಸಿರುವ ಛಾಪನ್ನು ಕೊಂಡಾಡಿದರು. “ಮೊಹಮ್ಮದ್ ಸಿರಾಜ್ ನಮ್ಮ ದೇಶಕ್ಕೆ ಅಪಾರ ಹೆಮ್ಮೆ ಮತ್ತು ತೆಲಂಗಾಣ ರಾಜ್ಯಕ್ಕೆ ಹೆಚ್ಚಿನ ಗೌರವವನ್ನು ತಂದಿದ್ದಾರೆ” ಎಂದು ಮುಖ್ಯಮಂತ್ರಿ ಹೇಳಿದರು. “ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತಕ್ಕೆ ಮತ್ತು ನಮ್ಮ ರಾಜ್ಯಕ್ಕೆ ಹೆಚ್ಚಿನ ಖ್ಯಾತಿಯನ್ನು ತಂದುಕೊಟ್ಟ ಆಲ್ರೌಂಡ್ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ ಅವರನ್ನು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅಭಿನಂದಿಸಿದ್ದಾರೆ. ಟಿ 20 ವಿಶ್ವಕಪ್ ಗೆದ್ದ ನಂತರ ಹೈದರಾಬಾದ್​ಗೆ ಬಂದ ಸಿರಾಜ್, ಮುಖ್ಯಮಂತ್ರಿಯನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ಸಂದರ್ಭದಲ್ಲಿ ಸಿರಾಜ್ ಅವರನ್ನು ಗೌರವಿಸಲಾಯಿತು” ಎಂದು ಎಕ್ಸ್​ನಲ್ಲಿ ಪೋಸ್ಟ್​​ ಹಾಕಲಾಗಿದೆ.

“2024 ರ ಟಿ 20 ವಿಶ್ವಕಪ್​​ನಲ್ಲಿ ಸಿರಾಜ್ ಅವರ ಅತ್ಯುತ್ತಮ ಪ್ರದರ್ಶನವನ್ನು ಮುಖ್ಯಮಂತ್ರಿ ಶ್ಲಾಘಿಸಿದ್ದಾರೆ. ರಾಜ್ಯ ಸರ್ಕಾರದ ಪರವಾಗಿ ಸಿರಾಜ್ ಗೆ ಮನೆ ಕಟ್ಟುವ ನಿವೇಶನ ಮತ್ತು ಉದ್ಯೋಗವನ್ನು ಮಂಜೂರು ಮಾಡಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಹೈದರಾಬಾದ್ ಅಥವಾ ಹತ್ತಿರದ ಪ್ರದೇಶಗಳಲ್ಲಿ ಸೂಕ್ತ ಸ್ಥಳವನ್ನು ಹುಡುಕಲು ಮತ್ತು ಸರ್ಕಾರಿ ಉದ್ಯೋಗಗಳನ್ನು ಒದಗಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲು ಮುಖ್ಯಮಂತ್ರಿ ಅಧಿಕಾರಿಗಳಿಗೆ ಆದೇಶಿಸಿದ್ದಾರೆ” ಎಂದು ತಿಳಿಸಲಾಗಿದೆ.

ಇದನ್ನೂ ಓದಿ: Gautam Gambhir : ಆರ್​ಸಿಬಿಯ ಮಾಜಿ ಬ್ಯಾಟರ್​ ಬ್ಯಾಟಿಂಗ್​ ಕೋಚ್​ ಆಗಲಿ ಎಂದು ಬೇಡಿಕೆ ಇಟ್ಟ ಗಂಭೀರ್​

ಸಿರಾಜ್ ಅವರ ಸಾಧನೆಗೆ ಮೆಚ್ಚುಗೆಯ ಸಂಕೇತವಾಗಿ, ರಾಜ್ಯ ಸರ್ಕಾರವು ಸಿರಾಜ್​ಗೆ ವಸತಿ ನಿವೇಶನ ಮತ್ತು ಸರ್ಕಾರಿ ಉದ್ಯೋಗವನ್ನು ಬಹುಮಾನವಾಗಿ ನೀಡಲಿದೆ ಎಂದು ಮುಖ್ಯಮಂತ್ರಿ ಘೋಷಿಸಿದರು. ಹೈದರಾಬಾದ್ ಅಥವಾ ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸೂಕ್ತವಾದ ಭೂಮಿಯನ್ನು ಗುರುತಿಸಲು ಮತ್ತು ವೇಗದ ಬೌಲರ್​ಗೆ ಸರ್ಕಾರಿ ಸ್ಥಾನವನ್ನು ಒದಗಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ತೆಲಂಗಾಣ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಂಬೈನಲ್ಲಿ ಟೀಮ್ ಇಂಡಿಯಾದ ವಿಜಯೋತ್ಸವದ ಮೆರವಣಿಗೆಯ ನಂತರ ಹೈದರಾಬಾದ್ನಲ್ಲಿ ವಿಜಯೋತ್ಸವದಲ್ಲಿ ಭಾಗವಹಿಸಿದ ಸಿರಾಜ್, ಸಿಎಂ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದ್ದರು. ಅಲ್ಲಿ ಭಾರತದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಮತ್ತು ಅವರ ಮಗ ಉಪಸ್ಥಿತರಿದ್ದರು

Exit mobile version