Site icon Vistara News

Lok Sabha Election 2024: ರಾಜವಂಶಸ್ಥ ಯದುವೀರ್‌ಗೆ ಮೈಸೂರು ಟಿಕೆಟ್‌; ಸಂಸದ ಪ್ರತಾಪ್‌ ಸಿಂಹ ಅಭಿನಂದನೆ

MP Pratap Simha congratulates Yaduveer

ಬೆಂಗಳೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ (Lok Sabha Election 2024) ಹಾಲಿ ಸಂಸದ ಪ್ರತಾಪ್‌ ಸಿಂಹ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್‌ ಕೈತಪ್ಪಿದ್ದು, ಅವರ ಬದಲಿಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಭ್ಯರ್ಥಿಯಾಗಿದ್ದಾರೆ. ಹೀಗಾಗಿ ಯದುವೀರ್ ಒಡೆಯರ್‌ ಅವರಿಗೆ ಸಂಸದ ಪ್ರತಾಪ್‌ ಸಿಂಹ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್‌ ಸಿಂಹ ಅವರು, ಮಹಾರಾಜ ಶ್ರೀ ಯದುವೀರ್ ಅವರಿಗೆ ಅಭಿನಂದನೆಗಳು. ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. ದೇಶಕ್ಕಾಗಿ, ಮೋದಿಗಾಗಿ ಎಂದು ತಿಳಿಸಿದ್ದಾರೆ.

ಎರಡು ಬಾರಿಯ ಸಂಸದ ಪ್ರತಾಪ್‌ ಸಿಂಹ (Pratap Simha) ಅವರಿಗೆ ಈ ಬಾರಿ ಟಿಕೆಟ್‌ ಕೈತಪ್ಪಲಿದೆ ಎಂದು ವಿಸ್ತಾರ ನ್ಯೂಸ್‌ ವರದಿ ಮಾಡಿತ್ತು. ಅದರಂತೆ ಯದುವೀರ್‌ (Yaduveer Krishnadatta Chamaraja Wadiyar) ಅವರಿಗೆ ಟಿಕೆಟ್‌ ಸಿಕ್ಕಿದೆ. ಪ್ರತಾಪ್‌ ಸಿಂಹ ಅವರು ಸೇರಿ 8 ಹಾಲಿ ಸಂಸದರಿಗೆ ಈ ಬಾರಿ ಟಿಕೆಟ್‌ ಮಿಸ್‌ ಆಗಿದೆ.

ಇದನ್ನೂ ಓದಿ | Lok Sabha Election 2024: ಬಿಜೆಪಿ ಪಟ್ಟಿ ರಿಲೀಸ್‌; ಮೈಸೂರಿಗೆ ಯದುವೀರ್‌, ಬೆಂ. ಉತ್ತರಕ್ಕೆ ಶೋಭಾ ಶಿಫ್ಟ್, ಉಡುಪಿಗೆ ಕೋಟ!

ದಕ್ಷಿಣ ಕನ್ನಡ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟಗೆ ಕಟೀಲ್‌ ಅಭಿನಂದನೆ

ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯಾಗಿ ಕ್ಯಾ. ಬ್ರಿಜೇಶ್ ಚೌಟ ಅವರು ಆಯ್ಕೆಯಾಗಿದ್ದುಮ ಅವರಿಗೆ ಹಾಲಿ ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಟೀಲ್‌ ಅವರು, ಭಾರತೀಯ ಜನತಾ ಪಾರ್ಟಿಯಿಂದ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅತ್ಯಧಿಕ ಮತಗಳ‌ ಅಂತರದಿಂದ ನೀವು ವಿಜಯಪತಾಕೆ ಹಾರಿಸುವಂತಾಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ಪ್ರತಾಪ್‌ಸಿಂಹ, ಕಟೀಲ್‌ ಸಹಿತ 8 ಹಾಲಿ ಸಂಸದರಿಗೆ ಟಿಕೆಟ್‌ ಮಿಸ್‌

ಬೆಂಗಳೂರು: ಲೋಕಸಭಾ ಚುನಾವಣೆಗಾಗಿ (Lok Sabha Election 2024) ಬಿಜೆಪಿ ರಾಜ್ಯದ 20 ಸ್ಥಾನಗಳಿಗಾಗಿ (20 Candidates list) ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಇದರಲ್ಲಿ ಒಟ್ಟು ಎಂಟು ಮಂದಿ ಹಾಲಿ ಸಂಸದರಿಗೆ ಟಿಕೆಟ್‌ ಮಿಸ್‌ ಆಗಿದೆ. ಟಿಕೆಟ್‌ ಮಿಸ್‌ ಆಗಿರುವ ಪ್ರಮುಖರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ (Nalin kumar Kateel), ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಮತ್ತು ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ. ಸದಾನಂದ ಗೌಡ (DV Sadananda Gowda) ಸೇರಿದ್ದಾರೆ.

ಬೆಂಗಳೂರು: ಲೋಕಸಭಾ ಚುನಾವಣೆಗಾಗಿ (Lok Sabha Election 2024) ಬಿಜೆಪಿ ರಾಜ್ಯದ 20 ಸ್ಥಾನಗಳಿಗಾಗಿ (20 Candidates list) ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಇದರಲ್ಲಿ ಒಟ್ಟು ಎಂಟು ಮಂದಿ ಹಾಲಿ ಸಂಸದರಿಗೆ ಟಿಕೆಟ್‌ ಮಿಸ್‌ ಆಗಿದೆ. ಟಿಕೆಟ್‌ ಮಿಸ್‌ ಆಗಿರುವ ಪ್ರಮುಖರಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್‌ ಕಟೀಲ್‌ (Nalin kumar Kateel), ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹ ಮತ್ತು ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ. ಸದಾನಂದ ಗೌಡ (DV Sadananda Gowda) ಸೇರಿದ್ದಾರೆ.

ಇವರಲ್ಲಿ ಚಾಮರಾಜನಗರದ ಸಂಸದ ಶ್ರೀನಿವಾಸ್‌ ಪ್ರಸಾದ್‌, ತುಮಕೂರಿನ ಜಿ.ಎಸ್.‌ ಬಸವರಾಜು, ಹಾವೇರಿಯ ಶಿವಕುಮಾರ್‌ ಉದಾಸಿ ಮೊದಲೇ ಚುನಾವಣಾ ನಿವೃತ್ತಿಯನ್ನು ಘೋಷಣೆ ಮಾಡಿದ್ದರು.

ಬೆಂಗಳೂರು ಉತ್ತರದಲ್ಲಿ ಡಿ.ವಿ. ಸದಾನಂದ ಅವರ ಬದಲಿಗೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್‌ ನೀಡಲಾಗಿದೆ.
ದಕ್ಷಿಣ ಕನ್ನಡದಲ್ಲಿ ನಳಿನ್‌ ಕುಮಾರ್‌ ಕಟೀಲ್‌ ಅವರ ಬದಲು ಬ್ರಿಗೇಡಿಯರ್‌ ಬ್ರಿಜೇಶ್‌ ಚೌಟ ಆಯ್ಕೆಯಾಗಿದ್ದಾರೆ.
ಮೈಸೂರು-ಕೊಡಗಿನಲ್ಲಿ ಪ್ರತಾಪ್‌ಸಿಂಹ ಅವರ ಬದಲು ಯದುವೀರ್‌ ಒಡೆಯರ್‌ ಅವರಿಗೆ ಟಿಕೆಟ್‌ ನೀಡಲಾಗಿದೆ.
ಹಾವೇರಿಯಲ್ಲಿ ಶಿವಕುಮಾರ್‌ ಉದಾಸಿ ಅವರ ಬದಲಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಿಕೆಟ್‌ ಪಡೆದಿದ್ದಾರೆ.
ಬಳ್ಳಾರಿ ಕ್ಷೇತ್ರದಲ್ಲಿ ಹಾಲಿ ಸಂಸದ ದೇವೇಂದ್ರಪ್ಪ ಅವರ ಬದಲು ಶ್ರೀರಾಮುಲು ಟಿಕೆಟ್‌ ಪಡೆದಿದ್ದಾರೆ.
ತುಮಕೂರಿನಲ್ಲಿ ಹಾಲಿ ಸಂಸದರಾದ ಜಿ.ಎಸ್.‌ ಬಸವರಾಜ ಅವರ ಬದಲಿಗೆ ವಿ ಸೋಮಣ್ಣ ಅವರಿಗೆ ಟಿಕೆಟ್‌ ಸಿಕ್ಕಿದೆ.
ದಾವಣಗೆರೆ ಕ್ಷೇತ್ರದಲ್ಲಿ ಜಿ.ಎಂ. ಸಿದ್ದೇಶ್ವರ್‌ ಅವರಿಗೆ ಟಿಕೆಟ್‌ ಮಿಸ್‌ ಆಗಿದ್ದರೂ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಟಿಕೆಟ್‌ ಸಿಕ್ಕಿದೆ.
ಚಾಮರಾಜನಗರದಲ್ಲಿ ಶ್ರೀನಿವಾಸ ಪ್ರಸಾದ್‌ ಅವರ ಬದಲಿಗೆ ಮಾಜಿ ಶಾಸಕ ಬಾಲರಾಜು ಟಿಕೆಟ್‌ ಪಡೆದಿದ್ದಾರೆ.

ಇದನ್ನೂ ಓದಿ | DV Sadananda Gowda : ಮತದಾರರಿಗೆ ಧನ್ಯವಾದ ಸಮರ್ಪಿಸಿದ ಡಿವಿಎಸ್‌; ಟಿಕೆಟ್‌ ಮಿಸ್‌ ಗ್ಯಾರಂಟಿ!

ಅಭ್ಯರ್ಥಿ ಘೋಷಣೆಯಾಗದ ಕ್ಷೇತ್ರಗಳು:

  1. ಉತ್ತರ ಕನ್ನಡ
  2. ಬೆಳಗಾವಿ
  3. ಚಿಕ್ಕಬಳ್ಳಾಪುರ
  4. ಚಿತ್ರದುರ್ಗ
  5. ರಾಯಚೂರು

ಇದುವರೆಗೂ ಚುನಾವಣೆಯಲ್ಲಿ ಸ್ಪರ್ಧಿಸದ ಅಭ್ಯರ್ಥಿಗಳು

ಕ್ಯಾಪ್ಟನ್‌ ಬೃಜೇಶ್‌ ಚೌಟ: ದಕ್ಷಿಣ ಕನ್ನಡ

ಡಾ. ಸಿಎನ್‌. ಮಂಜುನಾಥ್‌: ಬೆಂಗಳೂರು ಗ್ರಾಮಾಂತರ

ಬಸವರಾಜ ಕ್ಯಾವಟೂರ್‌: ಕೊಪ್ಪಳ

ಗಾಯತ್ರಿ ಸಿದ್ದೇಶ್ವರ್‌: ದಾವಣಗೆರೆ

ಯದುವೀರ್‌ ಒಡೆಯರ್‌: ಮೈಸೂರು

Exit mobile version