MS Dhoni : ಧೋನಿ ಮುಟ್ಟಿದ್ದೆಲ್ಲ ದಾಖಲೆ, ಲಕ್ನೊ ವಿರುದ್ಧವೂ ಮತ್ತೊಂದು ರೆಕಾರ್ಡ್​​ - Vistara News

ಪ್ರಮುಖ ಸುದ್ದಿ

MS Dhoni : ಧೋನಿ ಮುಟ್ಟಿದ್ದೆಲ್ಲ ದಾಖಲೆ, ಲಕ್ನೊ ವಿರುದ್ಧವೂ ಮತ್ತೊಂದು ರೆಕಾರ್ಡ್​​

MS Dhoni: ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 257ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ ಮೊದಲ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿದ್ದಾರೆ. ಒಟ್ಟಾರೆಯಾಗಿ, 42 ವರ್ಷದ ಧೋನಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಸುಮಾರು 40 ರ ಅದ್ಭುತ ಸರಾಸರಿಯಲ್ಲಿ 5,169 ರನ್ ಗಳಿಸಿದ್ದಾರೆ.

VISTARANEWS.COM


on

MS Dhoni
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ಐಪಿಎಲ್ 2024 ರ 34 ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ವಿರುದ್ಧ ಸಿಎಸ್​ಕೆ ತಂಡ ಮಾಜಿ ನಾಯಕ ಎಂಎಸ್ ಧೋನಿ (MS Dhoni) ಕೇವಲ ಒಂಬತ್ತು ಎಸೆತಗಳಲ್ಲಿ ಅಜೇಯ 28 ರನ್ ಗಳಿಸಿದ್ದರು. ಮೊಹ್ಸಿನ್ ಖಾನ್ ಮತ್ತು ಯಶ್ ಠಾಕೂರ್ ಅವರ ಎರಡು ದೊಡ್ಡ ಓವರ್​ಗಳಲ್ಲಿ ಅವರು ಅಬ್ಬರಿಸಿದ್ದರು. ಹೀಗಗಿ ಸಿಎಸ್​ಕೆ 176 ರನ್​ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿತ್ತು. ವಿಶೇಷವೆಂದರೆ, ಎಂಎಸ್ ಧೋನಿ ಲಕ್ನೋದ ಏಕನಾ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ತಮ್ಮ ಇನಿಂಗ್ಸ್​ ಫಿನಿಶ್ ಮಾಡುವ ಸಮಯದಲ್ಲಿ ಗಮನಾರ್ಹ ಐಪಿಎಲ್ ಬ್ಯಾಟಿಂಗ್ ದಾಖಲೆ ನಿರ್ಮಿಸಿದ್ದರು.

2008 ರಲ್ಲಿ ಐಪಿಎಲ್​​ಗೆ ಪಾದಾರ್ಪಣೆ ಮಾಡಿದ ಎಂಎಸ್ ಧೋನಿ, 2024 ರಲ್ಲಿ ಎಲ್ಎಸ್​ಜಿ ವಿರುದ್ಧ ಒಂಬತ್ತು ಎಸೆತಗಳಲ್ಲಿ 28* ರನ್ ಗಳಿಸುವ ಮೂಲಕ ವಿಕೆಟ್ ಕೀಪರ್-ಬ್ಯಾಟರ್​​ ಆಗಿ ತಮ್ಮ ಪಂದ್ಯಾವಳಿಯ ವೃತ್ತಿಜೀವನದ 5,000 ನೇ ರನ್ ಗಳಿಸಿದರು.

ಈ ಮೂಲಕ ಐಪಿಎಲ್ ಇತಿಹಾಸದಲ್ಲಿ 257ನೇ ಪಂದ್ಯದಲ್ಲಿ ಈ ಸಾಧನೆ ಮಾಡಿದ ಮೊದಲ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿದ್ದಾರೆ. ಒಟ್ಟಾರೆಯಾಗಿ, 42 ವರ್ಷದ ಧೋನಿ ತಮ್ಮ ಐಪಿಎಲ್ ವೃತ್ತಿಜೀವನದಲ್ಲಿ ಸುಮಾರು 40 ರ ಅದ್ಭುತ ಸರಾಸರಿಯಲ್ಲಿ 5,169 ರನ್ ಗಳಿಸಿದ್ದಾರೆ.

ಇದಕ್ಕೂ ಮುನ್ನ ಸಿಎಸ್​ಕೆ ಆರಂಭಿಕ ಬ್ಯಾಟರ್​ ಅಜಿಂಕ್ಯ ರಹಾನೆ 36 ರನ್ ಗಳಿಸಿದರು. ಆದರೆ ರಚಿನ್ ರವೀಂದ್ರ, ನಾಯಕ ಋತುರಾಜ್ ಗಾಯಕ್ವಾಡ್ ಮತ್ತು ಶಿವಂ ದುಬೆ ಬೇಗ ಔಟಾದರು. ರವೀಂದ್ರ ಜಡೇಜಾ ಅರ್ಧಶತಕ ಬಾರಿಸಿ ರನ್​ ಗಳಿಸುವ ಜವಾಬ್ದಾರಿ ವಹಿಸಿಕೊಂಡರು. ಸಹ ಆಲ್ರೌಂಡರ್ ಮೊಯಿನ್ ಅಲಿ ಅವರಿಂದ ಹೆಚ್ಚಿನ ಸಹಾಯ ಸಿಕ್ಕಿತು.

ಇದನ್ನೂ ಓದಿ: MS Dhoni : ಸಿಎಸ್​ಕೆ ವಾರ್ಷಿಕೋತ್ಸವದಂದೇ 101 ಮೀಟರ್ ಸಿಕ್ಸರ್ ಬಾರಿಸಿದ ಧೋನಿ!

ಇನ್ನಿಂಗ್ಸ್ ನಲ್ಲಿ ಕೇವಲ ಎರಡು ಓವರ್ ಗಳು ಬಾಕಿ ಇರುವಾಗ ಮೊಯೀನ್ ಅವರನ್ನು ಆಯುಷ್ ಬದೋನಿ ಕ್ಯಾಚ್ ಹಿಡಿದು ಔಟ್ ಮಾಡಿದರು. ಎಂಎಸ್ ಧೋನಿ ಸಿಎಸ್ ಕೆ ತಂಡವನ್ನು 141-6 ರಿಂದ 176 ರನ್ ಗಳಿಗೆ ಮುನ್ನುಗ್ಗಿಸಿದರು.

KL Rahul : ಐಪಿಎಲ್​ನಲ್ಲಿ ಧೋನಿಯ ದಾಖಲೆಯೊಂದನ್ನು ಮುರಿದ ಕೆ. ಎಲ್ ರಾಹುಲ್​

ಲಕ್ನೋ: ಇಲ್ಲಿನ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಖನೌ ಸೂಪರ್ ಜೈಂಟ್ಸ್ ತಂಡ 8 ವಿಕೆಟ್​ಗಳ ಭರ್ಜರಿ ಗೆಲುವು ಸಾಧಿಸಿದೆ. 176 ರನ್​ಗಳ ಗುರಿ ಬೆನ್ನತ್ತಿದ ಕೆ. ಎಲ್​ ರಾಹುಲ್ (KL Rahul) 53 ಎಸೆತಗಳಲ್ಲಿ 82 ರನ್ ಸಿಡಿಸಿ ಔಟಾದರು. ಈ ಮೂಲಕ ಐಪಿಎಲ್​ನಲ್ಲಿ ಹೊಸ ದಾಖಲೆ ಮಾಡಿದರು. ಅವರು ಅತಿ ಹೆಚ್ಚು 50+ ರನ್ ಗಳಿಸಿದ ವಿಕೆಟ್ ಕೀಪರ್ ಆಗಿ ಎಂಎಸ್ ಧೋನಿಯ (MS Dhoni) ದಾಖಲೆಯನ್ನು ಮುರಿದಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಶುಕ್ರವಾರ ನಡೆದ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ತಂಡ ಗೆಲುವಿನ ನಗೆ ಬೀರಿತು. ಎಲ್ಎಸ್​ಜಿ ನಾಯಕ ಆಕ್ರಮಣಕಾರಿ ಇನ್ನಿಂಗ್ಸ್ ಪ್ರಾರಂಭಿಸಿದರು. ಅವರ 82 ರನ್ ಗಳು ಎಲ್​​ಎಸ್​​ಜಿ ಗೆಲುವಿನಲ್ಲಿ ಪ್ರಮುಖ ಅಂಶವಾಗಿದೆ. ರವೀಂದ್ರ ಜಡೇಜಾ ಅವರ ಅದ್ಭುತ ಕ್ಯಾಚ್​ನಿಂದಾಗಿ ಔಟ್ ಆಗುವ ಮೊದಲು ಅವರು 9 ಬೌಂಡರಿಗಳು ಮತ್ತು 3 ಸಿಕ್ಸರ್​ಗಳನ್ನು ಬಾರಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rohith Vemula: ರೋಹಿತ್‌ ವೇಮುಲ ದಲಿತನೇ ಅಲ್ಲ ಎಂದ ಪೊಲೀಸರು; ಕೇಸ್‌ ಕ್ಲೋಸ್‌, ಸ್ಮೃತಿ ಇರಾನಿ ಸೇರಿ ಹಲವರಿಗೆ ಕ್ಲೀನ್‌ ಚಿಟ್

Rohith Vemula: ಹೈದರಾಬಾದ್‌ನಲ್ಲಿರುವ ಸೆಂಟ್ರಲ್‌ ಯುನಿವರ್ಸಿಟಿಯ ಹಾಸ್ಟೆಲ್‌ ಕೋಣೆಯಲ್ಲಿ ರೋಹಿತ್‌ ವೇಮುಲ 2016ರ ಜನವರಿ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದ. ಈತ ದಲಿತ ವಿದ್ಯಾರ್ಥಿ ಎಂಬುದಾಗಿ, ವಿವಿಯಲ್ಲಿ ರಾಜಕೀಯ ನಡೆಯುತ್ತಿದೆ, ದಲಿತರ ಮೇಲೆ ಶೋಷಣೆ ನಡೆಯುತ್ತಿದೆ ಎಂದು ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ಕೇಂದ್ರ ಸರ್ಕಾರದ ವಿರುದ್ಧವೂ ಆರೋಪಗಳು ಕೇಳಿಬಂದಿದ್ದವು. ಈಗ ತೆಲಂಗಾಣದ ಪೊಲೀಸರು, ಈತನು ದಲಿತನೇ ಅಲ್ಲ ಎಂಬುದಾಗಿ ವರದಿ ಸಲ್ಲಿಸಿದ್ದಾರೆ. ಅಲ್ಲದೆ, ಪ್ರಕರಣವನ್ನು ಕ್ಲೋಸ್‌ ಮಾಡಿದ್ದಾರೆ.

VISTARANEWS.COM


on

Rohith Vemula
Koo

ಹೈದರಾಬಾದ್: ತೆಲಂಗಾಣದ ಹೈದರಾಬಾದ್‌ ವಿಶ್ವವಿದ್ಯಾಲಯದ ಪಿಎಚ್‌.ಡಿ ವಿದ್ಯಾರ್ಥಿ ರೋಹಿತ್‌ ವೇಮುಲ (Rohith Vemula) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರೋಹಿತ್‌ ವೇಮುಲ ದಲಿತನಲ್ಲ, ಆತನ ದಾಖಲೆಗಳು, ಪ್ರಮಾಣಪತ್ರಗಳು ನಕಲಿಯಾಗಿವೆ ಎಂದು ತೆಲಂಗಾಣ ಪೊಲೀಸರು (Telangana Police) ವರದಿ ಸಲ್ಲಿಸಿದ್ದಲ್ಲದೆ, ಪ್ರಕರಣವನ್ನು ಕ್ಲೋಸ್‌ ಮಾಡಿದ್ದಾರೆ. ಅಷ್ಟೇ ಅಲ್ಲ, ಪ್ರಕರಣದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಸೇರಿ ಹಲವರಿಗೆ ಪೊಲೀಸರು ಕ್ಲೀನ್‌ ಚಿಟ್‌ ನೀಡಿದ್ದಾರೆ.

2016ರ ಜನವರಿಯಲ್ಲಿ ರೋಹಿತ್‌ ವೇಮುಲ ಆತ್ಮಹತ್ಯೆ ಮಾಡಿಕೊಂಡ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು. ಆದರೆ, ಈ ಪ್ರಕರಣವನ್ನು ತೆಲಂಗಾಣ ಪೊಲೀಸರು ಈಗ ಕ್ಲೋಸ್‌ ಮಾಡಿದ್ದಾರೆ. ಈ ಕುರಿತು ಹೈಕೋರ್ಟ್‌ಗೆ ವರದಿಯನ್ನು ಸಲ್ಲಿಸಿದ್ದಾರೆ. ಆಗ ಸಿಕಂದರಾಬಾದ್‌ ಸಂಸದರಾಗಿದ್ದ ಬಂಡಾರು ದತ್ತಾತ್ರೇಯ, ವಿಧಾನ ಪರಿಷತ್‌ ಸದಸ್ಯ ಎನ್‌. ರಾಮಚಂದರ್‌ ರಾವ್‌, ವಿವಿ ಕುಲಪತಿ ಅಪ್ಪಾ ರಾವ್‌, ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಹಲವು ಎಬಿವಿಪಿ ನಾಯಕರಿಗೂ ತೆಲಂಗಾಣ ಪೊಲೀಸರು ಕ್ಲೀನ್‌ಚಿಟ್‌ ನೀಡಿದ್ದಾರೆ.

ವರದಿಯಲ್ಲಿ ಏನಿದೆ?

“ರೋಹಿತ್‌ ವೇಮುಲ ಆತ್ಮಹತ್ಯೆ ಮಾಡಿಕೊಳ್ಳಲು ಹಲವು ಕಾರಣಗಳಿವೆ. ವಿವಿ ಕ್ಯಾಂಪಸ್‌ನಲ್ಲಿ ಆತನ ರಾಜಕೀಯ ಚಟುವಟಿಕೆಗಳು, ಅಧ್ಯಯನದಲ್ಲಿ ಹಿನ್ನಡೆ ಸೇರಿ ಹಲವು ಕಾರಣಗಳಿಂದಾಗಿ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಒಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದರೆ ಆತ ಓದಿನಲ್ಲಿ ಹಿಂದಿರುತ್ತಾನೆ. ಇಲ್ಲವೇ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ರಾಜಕೀಯ ಚಟುವಟಿಕೆಗಳು ಕಾರಣವಾಗಿರುತ್ತವೆ. ಇನ್ನು ರೋಹಿತ್‌ ವೇಮುಲ ಪಿಎಚ್‌.ಡಿಯನ್ನು ಅರ್ಧಕ್ಕೇ ಮೊಟಕುಗೊಳಿಸಿ, ಎರಡು ವರ್ಷದ ಬಳಿಕ ಮತ್ತೊಂದು ಪಿಎಚ್‌.ಡಿ ಮಾಡಲು ಮುಂದಾಗಿದ್ದ. ಏಕೆಂದರೆ, ಆತ ಶಿಕ್ಷಣಕ್ಕಿಂತ ಬೇರೆ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ” ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಆತ ದಲಿತನಲ್ಲ

“ರೋಹಿತ್‌ ವೇಮುಲ ದಲಿತನಲ್ಲ” ಎಂಬುದಾಗಿ ವರದಿಯಲ್ಲಿ ಉಲ್ಲೇಖಿಸಲಾಗಿದೆ. “ರೋಹಿತ್‌ ವೇಮುಲ ಪ್ರಮಾಣಪತ್ರಗಳು ನಕಲಿ ಆಗಿವೆ. ಆತನಿಗೆ ತಾಯಿಯು ನಕಲಿ ಪರಿಶಿಷ್ಟ ಜಾತಿ (SC) ಪ್ರಮಾಣಪತ್ರ ತಯಾರಿಸಿ ಕೊಟ್ಟಿದ್ದಾರೆ ಎಂಬುದು ಗೊತಿತ್ತು. ಇದಾದ ಬಳಿಕ ಆತನು ತನ್ನ ಘನತೆಗೆ ಧಕ್ಕೆ ಬರುತ್ತದೆ ಎಂಬುದರ ಚಿಂತೆಯಲ್ಲಿದ್ದ. ನಕಲಿ ಪ್ರಮಾಣಪತ್ರದ ಭೀತಿಯಲ್ಲಿದ್ದ ಆತನು, ಇದುವರೆಗೆ ತಾನು ಗಳಿಸಿದ ಪದವಿಗಳೆಲ್ಲ ಹಾಳಾಗುತ್ತವೆ ಎಂಬ ಚಿಂತೆ ಕಾಡುತ್ತಿತ್ತು. ಇದರಿಂದಾಗಿ ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು” ಎಂಬುದಾಗಿ ವರದಿಯಲ್ಲಿ ಪೊಲೀಸರು ಉಲ್ಲೇಖಿಸಿದ್ದಾರೆ.

ಏನಿದು ಪ್ರಕರಣ?

ಹೈದರಾಬಾದ್‌ನಲ್ಲಿರುವ ಸೆಂಟ್ರಲ್‌ ಯುನಿವರ್ಸಿಟಿಯ ಹಾಸ್ಟೆಲ್‌ ಕೋಣೆಯಲ್ಲಿ ರೋಹಿತ್‌ ವೇಮುಲ 2016ರ ಜನವರಿ 17ರಂದು ಆತ್ಮಹತ್ಯೆ ಮಾಡಿಕೊಂಡಿದ್ದ. ಈತನು ದಲಿತನೆಂದು, ವಿಶ್ವವಿದ್ಯಾಲಯದಲ್ಲಿ ದಲಿತ ವಿರೋಧಿ ನೀತಿಗಳು ಇವೆ ಎಂದು, ಕೇಂದ್ರದ ಮೋದಿ ಸರ್ಕಾರವು ದಲಿತ ವಿರೋಧಿ ಎಂದೂ ಪ್ರತಿಭಟನೆ ನಡೆಸಲಾಗಿತ್ತು. ದೆಹಲಿ ಸೇರಿ ದೇಶಾದ್ಯಂತ ಪ್ರತಿಭಟನೆಗಳು ನಡೆದಿದ್ದವು. ರೋಹಿತ್‌ ವೇಮುಲ ಆತ್ಮಹತ್ಯೆಗೂ ಮುನ್ನ ಆತನ ಮೇಲೆ ಎಬಿವಿಪಿ ಸದಸ್ಯರು ದಾಳಿ ಮಾಡಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು. ದೇಶದಲ್ಲಿ ಅಸಹಿಷ್ಣುತೆ ಇದೆ, ಬಿಜೆಪಿ ಸರ್ಕಾರದ ಬಂದ ಬಳಿಕ ಹೀಗೆಲ್ಲ ಆಗುತ್ತಿದೆ, ದಲಿತ ವಿರೋಧಿ ನೀತಿಗಳನ್ನು ಅನುಸರಿಸಲಾಗುತ್ತಿದೆ ಎಂದೆಲ್ಲ ಹೇಳಲಾಗುತ್ತಿತ್ತು.

ಇದನ್ನೂ ಓದಿ: ಕನ್ಹಯ್ಯ ಲಾಲ್‌ ಹತ್ಯೆಯನ್ನು ಮುಸ್ಲಿಮರು ಸ್ಪಷ್ಟವಾಗಿ ಖಂಡಿಸಬೇಕು: ಆರ್‌ಎಸ್‌ಎಸ್‌

Continue Reading

Latest

IPL 2024 : ನನ್ನ ನಿದ್ದೆಗೆಡಿಸಿದ್ದ ರೋಹಿತ್​ ಶರ್ಮಾ; ಗಂಭೀರ್​ ಹೀಗೆ ಹೇಳಲು ಕಾರಣವೇನು?

IPL 2024: ಗಂಭೀರ್, ರೋಹಿತ್ ತಾವು ಹೆಚ್ಚು ಹೆದರುವ ಬ್ಯಾ ಟರ್​ ಎಂದು ಹೇಳಿದರು. ರೋಹಿತ್ ಒಂದು ಹೆಜ್ಜೆ ಮುಂದೆ ಇಟ್ಟರೆ ಅವರನ್ನು ತಡೆಯಲು ಸಾಧ್ಯವಿಲ್ಲ ಎಂದು ಗಂಭೀರ್ ಹೇಳಿದರು. ಆದ್ದರಿಂದ ಅವರ ದಾಳಿ ತಡೆಯಲು ತಂಡವು ಅನೇಕ ಬ್ಯಾಕಪ್ ಯೋಜನೆಗಳನ್ನು ತರುತ್ತಿದ್ದೆವು . ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರಂತಹ ಅನೇಕ ಸ್ಫೋಟಕ ಬ್ಯಾಟರ್​ಗಳ ಹೊರತಾಗಿಯೂ ಗಂಭೀರ್ ನೆಮ್ಮದಿ ಕೆಡಿಸಿದ್ದ ರೋಹಿತ್​ ಎಂಬುದು ವಿಶೇಷ.

VISTARANEWS.COM


on

IPL 2024
Koo

ಮುಂಬಯಿ: ಗೌತಮ್ ಗಂಭೀರ್ (Gautam Gambhir) ಐಪಿಎಲ್​ನಲ್ಲಿ ಕೋಲ್ಕೊತಾ ನೈಟ್​​ ರೈಡರ್ಸ್​​ ತಂಡ ನಾಯಕರಾಗಿದ್ದ ಸಮಯವನ್ನು ಇತ್ತೀಚೆಗೆ ಸ್ಮರಿಸಿಕೊಂಡಿದ್ದಾರೆ. ಈ ವೇಳೆ ಅವರು ರೋಹಿತ್ ಶರ್ಮಾ (Rohit Sharma) ತಮ್ಮ ನಿದ್ದೆಗೆಡಿಸಿದ್ದ ವಿಷಯವನ್ನು ಬಹಿರಂಗಪಡಿಸಿದ್ದಾರೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Stadium) ಶುಕ್ರವಾರ ಐಪಿಎಲ್​17ನೇ ಆವೃತ್ತಿಯ (IPL 2024) ಮುಂಬೈ ಇಂಡಿಯನ್ಸ್ ವಿರುದ್ಧದ ಕೆಕೆಆರ್ ಪಂದ್ಯಕ್ಕೆ ಮುಂಚಿತವಾಗಿ ಮಾತನಾಡಿದ ಗಂಭೀರ್​ ಬೌಲರ್​ಗಳ ಮೇಲೆ ಪ್ರಾಬಲ್ಯ ಸಾಧಿಸಿರುವ ಸ್ಫೋಟಕ ಆರಂಭಿಕ ಆಟಗಾರ ರೋಹಿತ್​ ಶರ್ಮಾ ಅವರನ್ನು ಶ್ಲಾಘಿಸಿದರು.

ಸ್ಟಾರ್ ಸ್ಪೋರ್ಟ್ಸ್​ ಚಾನೆಲ್​ನಲ್ಲಿ ಮಾತನಾಡಿದ ಗಂಭೀರ್, ರೋಹಿತ್ ತಾವು ಹೆಚ್ಚು ಹೆದರುವ ಬ್ಯಾ ಟರ್​ ಎಂದು ಹೇಳಿದರು. ರೋಹಿತ್ ಒಂದು ಹೆಜ್ಜೆ ಮುಂದೆ ಇಟ್ಟರೆ ಅವರನ್ನು ತಡೆಯಲು ಸಾಧ್ಯವಿಲ್ಲ ಎಂದು ಗಂಭೀರ್ ಹೇಳಿದರು. ಆದ್ದರಿಂದ ಅವರ ದಾಳಿ ತಡೆಯಲು ತಂಡವು ಅನೇಕ ಬ್ಯಾಕಪ್ ಯೋಜನೆಗಳನ್ನು ತರುತ್ತಿದ್ದೆವು . ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್ ಅವರಂತಹ ಅನೇಕ ಸ್ಫೋಟಕ ಬ್ಯಾಟರ್​ಗಳ ಹೊರತಾಗಿಯೂ ಗಂಭೀರ್ ನೆಮ್ಮದಿ ಕೆಡಿಸಿದ್ದ ರೋಹಿತ್​ ಎಂಬುದು ವಿಶೇಷ.

“ನಾಯಕನಾಗಿ ನನ್ನ ಇಡೀ ಐಪಿಎಲ್ ವೃತ್ತಿಜೀವನದಲ್ಲಿ, ನನಗೆ ನಿದ್ರೆಯಿಲ್ಲದ ರಾತ್ರಿಗಳನ್ನು ನೀಡಿದ ಏಕೈಕ ಆಟಗಾರ ಇದ್ದರೆ ಅದು ರೋಹಿತ್ ಶರ್ಮಾ. ಐಪಿಎಲ್​ನಲ್ಲಿ ನಾನು ಹೆದರಿದ ಏಕೈಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ, ನನಗೆ ನಿದ್ರೆಯಿಲ್ಲದ ರಾತ್ರಿಗಳನ್ನು ಕೊಟ್ಟ ಏಕೈಕ ಆಟಗಾರ ಅವರು. ಕ್ರಿಸ್ ಗೇಲ್ ಅಲ್ಲ, ಎಬಿ ಡಿವಿಲಿಯರ್ಸ್ ಅಲ್ಲ , ಮತ್ಯಾರೂ ಇಲ್ಲ , ರೋಹಿತ್ ಶರ್ಮಾ ಮಾತ್ರ. ಏಕೆಂದರೆ ಅವರಿಗಾಗಿ ನಾನು ಪ್ಲಾನ್ ಎ ಅಥವಾ ಪ್ಲಾನ್ ಬಿ ಹೊಂದಿರಬೇಕಿತ್ತು, ಬಹುಶಃ ಪ್ಲಾನ್ ಸಿ ಕೂಡ. ಏಕೆಂದರೆ ರೋಹಿತ್ ಅವರನ್ನು ನಿಯಂತ್ರಿಸುವುದು ಕಷ್ಟ, “ಎಂದು ಗಂಭೀರ್ ಹೇಳಿದರು.

ವಾಂಖೆಡೆ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಕೆಕೆಆರ್ 12 ವರ್ಷಗಳ ಸುದೀರ್ಘ ದಾಖಲೆಯನ್ನು ಮುರಿಯಲು ಎದುರು ನೋಡುತ್ತಿದೆ. ಕೆಕೆಆರ್ ಕೇವಲ 9 ಪಂದ್ಯಗಳನ್ನು ಗೆದ್ದಿದ್ದರೆ, ಮುಂಬೈ ಇಂಡಿಯನ್ಸ್ 23 ಪಂದ್ಯಗಳನ್ನು ಗೆದ್ದಿದೆ.

ಇದನ್ನೂ ಓದಿ: IPL 2024 : ಐಪಿಎಲ್​ಗೆ ಅರ್ಧದಲ್ಲೇ ವಿದಾಯ ಹೇಳಿದ ಮುಸ್ತಾಫಿಜುರ್​ಗೆ ಸಹಿ ಹಾಕಿದ ಜೆರ್ಸಿ ನೀಡಿದ ಧೋನಿ

ರೋಹಿತ್ ಗಾಗಿ ಸಾಕಷ್ಟು ಯೋಜನೆಗಳು ನಡೆಯುತ್ತಿದ್ದವು ಎಂದು ಗಂಭೀರ್ ಬಹಿರಂಗಪಡಿಸಿದರು. ರೋಹಿತ್ ಒಂದು ಓವರ್​​ನಲ್ಲಿ 30 ಕ್ಕೂ ಹೆಚ್ಚು ರನ್ ಗಳಿಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಹೇಳಿದರು.

ಅವರಿಗಾಗಿ ಯೋಜನೆ ರೂಪಿಸಬೇಕಿತ್ತು

“ಐಪಿಎಲ್​​ನಲ್ಲಿ ರೋಹಿತ್ ಶರ್ಮಾ ಹೊರತುಪಡಿಸಿ ಬೇರೆ ಯಾವುದೇ ಬ್ಯಾಟರ್​ಗಾಗಿ ಹೆಚ್ಚ ಯೋಜನೆ ಹಾಕಿಕೊಂಡಿಲ್ಲ. ಪಂದ್ಯದಕ್ಕೆ ಮೊದಲ ದಿನ ರಾತ್ರಿ ನಾನು ಅವರು ಆಡುವ ದೃಶ್ಯಗಳನ್ನು ನೋಡುತ್ತಿದ್ದೆ. ಪ್ಲಾನ್ ಎ ಉತ್ತಮವಾರಿ ಸಿದ್ದಪಡಿಸುತ್ತಿದ್ದೆ. ಅದು ಕೆಲಸ ಮಾಡದಿದ್ದರೆ, ನಾನು ಮತ್ತೊಂದು ಯೋಜನೆ ಮಾಡಬೇಕಿತ್ತು. ಸುನಿಲ್ ನರೈನ್​ ತನ್ನ ನಾಲ್ಕು ಓವರ್​ಗಳನ್ನು ಎಸೆದರೆ, ಮುಂದಿನ 16 ಓವರ್​ಗಳನ್ನು ಯಾರು ಎಸೆಯುತ್ತಾರೆ? ನಾನು ಸುನಿಲ್ ಸ್ಪೆಲ್​ ಬೇಗ ಮುಗಿಸಿದರೆ ಮತ್ತು ರೋಹಿತ್ ಇದ್ದರೆ, ಅವರು ಒಂದೇ ಓವರ್​ನಲ್ಲಿ 30 ರನ್ ಗಳಿಸಬಹುದು. ಬಹುಶಃ ನಾಯಕನಾಗಿ ನಾನು ಹೆದರುತ್ತಿದ್ದ ಏಕೈಕ ಬ್ಯಾಟ್ಸ್ಮನ್,” ಎಂದು ಗಂಭೀರ್ ಹೇಳಿದರು.

ಕೆಕೆಆರ್​​ 26 ಪಂದ್ಯಗಳನ್ನಾಡಿರುವ ರೋಹಿತ್ 130.32ರ ಸ್ಟ್ರೈಕ್ ರೇಟ್​ನಲ್ಲಿ ಅಜೇಯ ಶತಕ ಸೇರಿದಂತೆ 924 ರನ್ ಗಳಿಸಿದ್ದಾರೆ.

Continue Reading

ಕ್ರೀಡೆ

IPL 2024 : ಐಪಿಎಲ್​ಗೆ ಅರ್ಧದಲ್ಲೇ ವಿದಾಯ ಹೇಳಿದ ಮುಸ್ತಾಫಿಜುರ್​ಗೆ ಸಹಿ ಹಾಕಿದ ಜೆರ್ಸಿ ನೀಡಿದ ಧೋನಿ

IPL 2024: ಮುಸ್ತಾಫಿಜುರ್ ತಮ್ಮ ಸಹಿ ಮಾಡಿದ ಜೆರ್ಸಿಯನ್ನು ಹಿಡಿದುಕೊಂಡಿರುವ ಚಿತ್ರವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಒಂದೇ ಡ್ರೆಸ್ಸಿಂಗ್ ಕೊಠಡಿಯನ್ನು ಹಂಚಿಕೊಂಡಿದ್ದಕ್ಕಾಗಿ ಮತ್ತು ಎಲ್ಲಾ ಕಲಿಕೆಗಾಗಿ ಬಾಂಗ್ಲಾದೇಶದ ವೇಗಿ ಧೋನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಧೋನಿಯನ್ನು ಭೇಟಿಯಾಗಿ ಅವರೊಂದಿಗೆ ಮತ್ತೆ ಆಡುವ ಬಯಕೆ ಅವರು ವ್ಯಕ್ತಪಡಿಸಿದ್ದಾರೆ.

VISTARANEWS.COM


on

IPL 2024
Koo

ಚೆನ್ನೈ: ರಾಷ್ಟ್ರೀಯ ಬದ್ಧತೆಯ ಕಾರಣಕ್ಕೆ ಬಾಂಗ್ಲಾದೇಶದ ಬೌಲರ್​ ಮುಸ್ತಾಫಿಜುರ್ ರೆಹಮಾನ್ ಐಪಿಎಲ್ ತೊರೆದಿದ್ದಾರೆ. ಅವರು ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡದ ಶಿಬಿರ ಬಿಟ್ಟಿದ್ದಾರೆ. ಹೀಗೆ ಐಪಿಎಲ್ 2024 ಗೆ (IPL 2024 ) ವಿದಾಯ ಹೇಳುವ ಮೊದಲು ಮುಸ್ತಾಫಿಜುರ್ ರೆಹಮಾನ್ (Mustafizur Rahman) ಲೆಜೆಂಡ್​ ಕ್ರಿಕೆಟಿಗ ಎಂಎಸ್ ಧೋನಿಯಿಂದ ಸಹಿ ಮಾಡಿದ ಜೆರ್ಸಿ ಸ್ವೀಕರಿಸಿದರು. ಬಾಂಗ್ಲಾದೇಶ (Bangladesh Cricket Team) ಮತ್ತು ಜಿಂಬಾಬ್ವೆ ನಡುವಿನ 5 ಪಂದ್ಯಗಳ ಟಿ 20 ಐ ಸರಣಿಯಲ್ಲಿ ಕಾಣಿಸಿಕೊಳ್ಳಬೇಕಾಗಿರುವ ಕಾರಣ ವೇಗಿ ಮೇ 1, 2024 ರ ನಂತರ ಸಿಎಸ್ಕೆಗೆ ಲಭ್ಯವಿರುವುದಿಲ್ಲ ಎಂದು ಈ ಹಿಂದೆ ತಿಳಿಸಲಾಗಿತ್ತು.

ಮುಸ್ತಾಫಿಜುರ್ ತಮ್ಮ ಸಹಿ ಮಾಡಿದ ಜೆರ್ಸಿಯನ್ನು ಹಿಡಿದುಕೊಂಡಿರುವ ಚಿತ್ರವನ್ನು ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಒಂದೇ ಡ್ರೆಸ್ಸಿಂಗ್ ಕೊಠಡಿಯನ್ನು ಹಂಚಿಕೊಂಡಿದ್ದಕ್ಕಾಗಿ ಮತ್ತು ಎಲ್ಲಾ ಕಲಿಕೆಗಾಗಿ ಬಾಂಗ್ಲಾದೇಶದ ವೇಗಿ ಧೋನಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಧೋನಿಯನ್ನು ಭೇಟಿಯಾಗಿ ಅವರೊಂದಿಗೆ ಮತ್ತೆ ಆಡುವ ಬಯಕೆ ಅವರು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Rohit Sharma : ರೋಹಿತ್ ಶರ್ಮಾ ದೌರ್ಬಲ್ಯವನ್ನು ಬೊಟ್ಟು ಮಾಡಿ ತೋರಿಸಿದ ವಾಸಿಮ್​ ಜಾಫರ್​

“ಎಲ್ಲದಕ್ಕೂ ಧನ್ಯವಾದಗಳು ಮಹಿ ಭಾಯ್. ನಿಮ್ಮಂತಹ ದಂತಕಥೆಯೊಂದಿಗೆ ಡ್ರೆಸ್ಸಿಂಗ್ ಕೋಣೆ ಹಂಚಿಕೊಳ್ಳುವುದು ವಿಶೇಷ ಭಾವನೆ. ಪ್ರತಿ ಬಾರಿಯೂ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಧನ್ಯವಾದಗಳು. ನಿಮ್ಮ ಅಮೂಲ್ಯ ಸಲಹೆಗಳನ್ನು ಸ್ಮರಿಸುತ್ತೇನೆ. ನಾನು ಹೇಳಿದ ವಿಷಯಗಳನ್ನು ನೆನಪಿಸಿಕೊಳ್ಳುತ್ತೇನೆ. ಶೀಘ್ರದಲ್ಲೇ ನಿಮ್ಮನ್ನು ಮತ್ತೆ ಭೇಟಿಯಾಗಲು ಮತ್ತು ಆಡಲು ಎದುರು ನೋಡುತ್ತಿದ್ದೇನೆ, “ಎಂದು ಮುಸ್ತಾಫಿಜುರ್ ಬರೆದುಕೊಂಡಿದ್ದಾರೆ.

ಟಿ 20 ಐ ಸರಣಿಗಾಗಿ ಮುಸ್ತಾಫಿಜುರ್ ತಮ್ಮ ದೇಶಕ್ಕೆ ಮರಳಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಏಪ್ರಿಲ್ 30 ರ ಗಡುವು ನಿಗದಿಪಡಿಸಿತ್ತು. ಆದರೆ, ಮೇ 1 ರಂದು ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಪಿಬಿಕೆಎಸ್ ವಿರುದ್ಧ ಸಿಎಸ್ಕೆ ಪಂದ್ಯದ ಕಾರಣ ಗಡುವನ್ನು ವಿಸ್ತರಿಸಲಾಯಿತು. ಚೆನ್ನೈ ತಂಡ ಮತ್ತು ಬಿಸಿಸಿಐನಿಂದ ವಿನಂತಿಯನ್ನು ಸ್ವೀಕರಿಸಿದ ನಂತರ ಮಂಡಳಿಯು ಗಡುವನ್ನು ವಿಸ್ತರಿಸಿತು.

“ನಾವು ಮುಸ್ತಾಫಿಜುರ್​ಗೆ ಏಪ್ರಿಲ್ 30 ರವರೆಗೆ ಐಪಿಎಲ್​ನಲ್ಲಿ ಆಡಲು ರಜೆ ನೀಡಿದ್ದೆವು, ಆದರೆ ಮೇ 1 ರಂದು ಚೆನ್ನೈನಲ್ಲಿ ಪಂದ್ಯ ಇರುವುದರಿಂದ, ಚೆನ್ನೈ ಮತ್ತು ಬಿಸಿಸಿಐನಿಂದ ವಿನಂತಿಯನ್ನು ಸ್ವೀಕರಿಸಿದ ನಂತರ ನಾವು ಅವರ ರಜೆಯನ್ನು ಒಂದು ದಿನ ವಿಸ್ತರಿಸಿದ್ದೇವೆ” ಎಂದು ಬಾಂಗ್ಲಾದೇಶ ಕ್ರಿಕೆಟ್​ ಸಂಸ್ಥೇಯ ಕ್ರಿಕೆಟ್ ಕಾರ್ಯಾಚರಣೆಗಳ ಉಪ ವ್ಯವಸ್ಥಾಪಕ ಶಹರಿಯಾರ್ ನಫೀಸ್ ಇಎಸ್ಪಿಎನ್ ಕ್ರಿಕ್ಇನ್ಫೋಗೆ ತಿಳಿಸಿದ್ದಾರೆ.

ಪರ್ಪಲ್ ಕ್ಯಾಪ್ ಗೆಲ್ಲುವ ಸ್ಪರ್ಧೆಯಲ್ಲಿದ್ದ ಮುಸ್ತಾಫಿಜುರ್ ಐಪಿಎಲ್ 2024 ರಲ್ಲಿ ಅದ್ಭುತ ಫಾರ್ಮ್​ನಲ್ಲಿದ್ದರು. ಪಂದ್ಯಾವಳಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಅವರು ಮೂರನೇ ಸ್ಥಾನ ಪಡೆದರು. 9 ಪಂದ್ಯಗಳನ್ನಾಡಿರುವ ವೇಗಿ 9.26ರ ಸರಾಸರಿಯಲ್ಲಿ 14 ವಿಕೆಟ್ ಕಬಳಿಸಿದ್ದಾರೆ.

ಪಿಬಿಕೆಎಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ 7 ವಿಕೆಟ್​ಗಳಿಂದ ಸೋತಿದ್ದ ಸಿಎಸ್ಕೆಗೆ ರೆಹಮಾನ್ ಅಲಭ್ಯತೆ ಕಾಡಲಿದೆ. ಯಾಕೆಂದರೆ ಸ್ಟ್ರೈಕ್ ಬೌಲರ್​ , ದೀಪಕ್ ಚಹರ್ ಗಾಯಗೊಂಡ ನಂತರ ಮೈದಾನ ತೊರೆದಿದ್ದರು.

Continue Reading

ವೈರಲ್ ನ್ಯೂಸ್

Viral Video: ಪ್ರಿನ್ಸಿಪಾಲ್ ಆದರೇನು, ಟೀಚರ್ ಆದರೇನು? ಹೆಂಗಸರ ಬಡಿದಾಟ ಇರೋದೇ ಹೀಗೆ! ವಿಡಿಯೊ ನೋಡಿ

Viral Video: ಉತ್ತರ ಪ್ರದೇಶದ ಆಗ್ರಾದಲ್ಲಿರುವ ಶಾಲೆಯೊಂದರಲ್ಲಿ, “ನನ್ನ ನೀನು ಗೆಲ್ಲಲಾರೆ” ಎಂಬ ಧೋರಣೆಯಲ್ಲಿ ನುಗ್ಗಿದ ಪ್ರಾಂಶುಪಾಲೆಯು, ಶಿಕ್ಷಕಿಯ ಕೆನ್ನೆಗೆ ತಿವಿದಿದ್ದಾರೆ. ಇದಕ್ಕೆ ಶಿಕ್ಷಕಿಯೂ, “ನಾ ನಿನ್ನ ಬಿಡಲಾರೆ” ಎಂಬಂತೆ ಅವರ ಬಟ್ಟೆ ಎಳೆದು ಸೇಡು ತೀರಿಸಿಕೊಂಡಿದ್ದಾರೆ. ಶಾಲೆಯಲ್ಲಿಯೇ ಶಿಕ್ಷಕಿಯರು ಹೀಗೆ ಬಡಿದಾಡಿಕೊಂಡಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

VISTARANEWS.COM


on

Viral Video
Koo

ಲಖನೌ: ”ಎರಡು ಜಡೆಗಳು ಒಟ್ಟಿಗೆ ಸೇರಲ್ಲ” ಎಂಬ ಮಾತಿದೆ. ಇನ್ನು ಸರ್ಕಾರಿ ಬಸ್‌ಗಳು, ಅಕ್ಕಪಕ್ಕದ ಮನೆಗಳಲ್ಲಿ ಹೆಣ್ಣುಮಕ್ಕಳು ಬಡಿದಾಡಿಕೊಳ್ಳುವ, ಹಿಗ್ಗಾಮುಗ್ಗ ಬೈದು ಜಗಳವಾಡುವ ಪ್ರಸಂಗಗಳು ನಡೆಯುತ್ತಲೇ ಇರುತ್ತವೆ. ವೈಷಮ್ಯ, ಜಗಳ, ಸುತ್ತಮುತ್ತಲಿನವರ ಬಗ್ಗೆ ಗಾಸಿಪ್‌ ಮಾಡುವ ಕಾರಣಕ್ಕಾಗಿಯೇ ಹೆಣ್ಣಿಗೆ ಹೆಣ್ಣೇ ಶತ್ರು ಎಂಬ ಮಾತು ಚಾಲ್ತಿಗೆ ಬಂದಿರಬೇಕು. ಇದಕ್ಕೆ ನಿದರ್ಶನ ಎಂಬಂತೆ, ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿರುವ (Agra) ಶಾಲೆಯೊಂದರಲ್ಲಿ ಪ್ರಾಂಶುಪಾಲೆ ಹಾಗೂ ಸಹ ಶಿಕ್ಷಕಿ ಮಧ್ಯೆ ಶಾಲೆಯಲ್ಲಿಯೇ ಮಾರಾಮಾರಿ ನಡೆದಿದೆ. ಈ ವಿಡಿಯೊ (Viral Video) ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್‌ ಆಗಿದೆ.

ಹೌದು, ಉತ್ತರ ಪ್ರದೇಶದ ಆಗ್ರಾದಲ್ಲಿರುವ ಶಾಲೆಯೊಂದರಲ್ಲಿ ಪ್ರಾಂಶುಪಾಲೆ ಹಾಗೂ ಸಹ ಶಿಕ್ಷಕಿಯು ಬಡಿದಾಡಿಕೊಂಡಿದ್ದಾರೆ. ಇಬ್ಬರೂ ಅವಾಚ್ಯ ಶಬ್ದಗಳಿಂದ ಪರಸ್ಪರ ಬೈದಿದ್ದಾರೆ. ಅಷ್ಟೇ ಅಲ್ಲ, ಪ್ರಾಂಶುಪಾಲೆಯು, ನಾನು ಯಾವುದಕ್ಕೂ ಏನು ಕಡಿಮೆ ಇಲ್ಲ ಎಂಬಂತೆ, ಶಿಕ್ಷಕಿಯ ಕೆನ್ನೆಗೆ ತಿವಿದಿದ್ದಾರೆ. ಶಿಕ್ಷಕಿಯೂ ರೊಚ್ಚಿಗೆದ್ದು, ಪ್ರಾಂಶುಪಾಲೆಯ ಬಟ್ಟೆ ಹಿಡಿದು ಎಳೆದಿದ್ದಾರೆ. ಇಬ್ಬರ ನಡುವಿನ ಈ ಜಂಗಿಕುಸ್ತಿಯು ಜಾಲತಾಣಗಳಲ್ಲಿ ಜನರ ಆಕ್ರೋಶಕ್ಕೆ ಕಾರಣವಾಗಿದೆ.

ನಾನು ಇವಳನ್ನು ಬಿಡಲ್ಲ ಎಂಬ ರೀತಿ ಪ್ರಾಂಶುಪಾಲೆ ಮುನ್ನುಗ್ಗಿದರೆ, ಕುರ್ಚಿ ಮೇಲೆಯೇ ಕುಳಿತ ಶಿಕ್ಷಕಿಯು ತಿರುಗೇಟು ನೀಡಿದ್ದಾರೆ. ಇವರ ಸಹೋದ್ಯೋಗಿಗಳು ಎಷ್ಟು ಜಗಳ ಬಿಡಿಸಿದರೂ ಇಬ್ಬರ ನಟುವಿನ ಜಟಾಪಟಿ ಮಾತ್ರ ನಿಂತಿಲ್ಲ. ನಿಮ್ಮಿಬ್ಬರದ್ದು ಇದೇ ಆಯಿತು, ವಿಡಿಯೊ ಮಾಡಿ ಅಪ್‌ಲೋಡ್‌ ಮಾಡುತ್ತೇನೆ, ನಿಮ್ಮ ಘನತೆಗೆ ತಕ್ಕಂತೆ ನೀವು ವರ್ತಿಸುತ್ತಿಲ್ಲ ಎಂಬುದಾಗಿ ವಿಡಿಯೊ ಮಾಡುವವರು ಹೇಳಿದರೂ, ಪ್ರಾಂಶುಪಾಲೆ ಹಾಗೂ ಶಿಕ್ಷಕಿಯು ಪಟ್ಟಿಗೆ ಬಿದ್ದು ಜಗಳವಾಡಿದ್ದಾರೆ.

“ಶಾಲೆಯಲ್ಲಿ ಹೇಗೆ ವರ್ತಿಸಬೇಕು ಎಂಬುದೇ ಗೊತ್ತಿರದ ಇವರು, ಮಕ್ಕಳಿಗೆ ಯಾವ ಶಿಕ್ಷಣ ನೀಡುತ್ತಾರೆ? ಇಬ್ಬರನ್ನೂ ವಜಾಗೊಳಿಸಬೇಕು” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಇನ್ನು, “ಇಂತಹ ಶಿಕ್ಷಕರ ಕೈಯಲ್ಲಿ ಕಲಿತ ಮಕ್ಕಳು ಕೂಡ ಹಾಳಾಗುತ್ತಾರೆ” ಎಂದು ಮತ್ತೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಈ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಭವಿಷ್ಯದ ಬಗ್ಗೆ ಮರುಕವಿದೆ” ಎಂದು ಇನ್ನೊಬ್ಬರು ಹೇಳಿದ್ದಾರೆ. ಹೀಗೆ, ನೂರಾರು ಜನ ಪ್ರತಿಕ್ರಿಯಿಸಿ, ಪ್ರಾಂಶುಪಾಲೆ ಹಾಗೂ ಶಿಕ್ಷಕಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ, ಇವರ ವಿರುದ್ಧ ಕ್ರಮ ತೆಗೆದುಕೊಂಡಿರುವ ಕುರಿತು, ನೋಟಿಸ್‌ ನೀಡಿರುವ ಕುರಿತು ಯಾವುದೇ ಮಾಹಿತಿ ಲಭ್ಯವಿಲ್ಲ.

ಇದನ್ನೂ ಓದಿ: Asaduddin Owaisi: ಅಸಾದುದ್ದೀನ್‌ ಓವೈಸಿಯ ಭರ್ಜರಿ ಬೈಕ್‌ ರೈಡ್‌;ವಿಡಿಯೋ ವೈರಲ್‌

Continue Reading
Advertisement
Rohith Vemula
ದೇಶ8 mins ago

Rohith Vemula: ರೋಹಿತ್‌ ವೇಮುಲ ದಲಿತನೇ ಅಲ್ಲ ಎಂದ ಪೊಲೀಸರು; ಕೇಸ್‌ ಕ್ಲೋಸ್‌, ಸ್ಮೃತಿ ಇರಾನಿ ಸೇರಿ ಹಲವರಿಗೆ ಕ್ಲೀನ್‌ ಚಿಟ್

IPL 2024
Latest13 mins ago

IPL 2024 : ನನ್ನ ನಿದ್ದೆಗೆಡಿಸಿದ್ದ ರೋಹಿತ್​ ಶರ್ಮಾ; ಗಂಭೀರ್​ ಹೀಗೆ ಹೇಳಲು ಕಾರಣವೇನು?

Vidyashree HS
ಬೆಂಗಳೂರು22 mins ago

Vidyashree HS: ಬೆಂಗಳೂರಿನಲ್ಲಿ ಮೇ 4ರಂದು ವಿದ್ಯಾಶ್ರೀ ಎಚ್.ಎಸ್. ಭರತನಾಟ್ಯ ರಂಗಪ್ರವೇಶ

Prajwal Revanna Case
ಕರ್ನಾಟಕ51 mins ago

Prajwal Revanna Case: ರೇವಣ್ಣ ಮನೆ ಕೆಲಸದ ಮಹಿಳೆ ಕಿಡ್ನ್ಯಾಪ್‌ ಕೇಸ್; 2ನೇ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Summer Fashion
ಫ್ಯಾಷನ್1 hour ago

Summer Fashion: ಬೇಸಿಗೆಯಲ್ಲಿ ಹುಡುಗಿಯರನ್ನು ಸವಾರಿ ಮಾಡುತ್ತಿರುವ 5 ಶೈಲಿಯ ಗ್ಲಾಮರಸ್‌ ಟಾಪ್‌ಗಳಿವು

Summer Tour
ಪ್ರವಾಸ1 hour ago

Summer Tour: ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್! ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

IPL 2024
ಕ್ರೀಡೆ1 hour ago

IPL 2024 : ಐಪಿಎಲ್​ಗೆ ಅರ್ಧದಲ್ಲೇ ವಿದಾಯ ಹೇಳಿದ ಮುಸ್ತಾಫಿಜುರ್​ಗೆ ಸಹಿ ಹಾಕಿದ ಜೆರ್ಸಿ ನೀಡಿದ ಧೋನಿ

Tips for bedroom corner
ಲೈಫ್‌ಸ್ಟೈಲ್2 hours ago

Tips for Bedroom Corner: ಮಲಗುವ ಕೋಣೆಯ ಮೂಲೆಗಳನ್ನು ಆಕರ್ಷಕವಾಗಿಸಲು ಕೆಲವು ಟಿಪ್ಸ್

Viral Video
ವೈರಲ್ ನ್ಯೂಸ್2 hours ago

Viral Video: ಪ್ರಿನ್ಸಿಪಾಲ್ ಆದರೇನು, ಟೀಚರ್ ಆದರೇನು? ಹೆಂಗಸರ ಬಡಿದಾಟ ಇರೋದೇ ಹೀಗೆ! ವಿಡಿಯೊ ನೋಡಿ

Rohit Sharma
ಪ್ರಮುಖ ಸುದ್ದಿ2 hours ago

Rohit Sharma : ರೋಹಿತ್ ಶರ್ಮಾ ದೌರ್ಬಲ್ಯವನ್ನು ಬೊಟ್ಟು ಮಾಡಿ ತೋರಿಸಿದ ವಾಸಿಮ್​ ಜಾಫರ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ3 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ14 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ1 day ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌