MS Dhoni: ಆ ಒಂದು ರನ್​​ ಔಟ್ ನನ್ನ ​​ ಕ್ರಿಕೆಟ್​ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ; ವಿಶ್ವ ಕಪ್​ ಆಘಾತವನ್ನು ವಿವರಿಸಿದ ಧೋನಿ - Vistara News

ಪ್ರಮುಖ ಸುದ್ದಿ

MS Dhoni: ಆ ಒಂದು ರನ್​​ ಔಟ್ ನನ್ನ ​​ ಕ್ರಿಕೆಟ್​ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ; ವಿಶ್ವ ಕಪ್​ ಆಘಾತವನ್ನು ವಿವರಿಸಿದ ಧೋನಿ

MS Dhoni: 2019ರ ವಿಶ್ವ ಕಪ್​ನಲ್ಲಿ ಪ್ರಬಲ ಪ್ರದರ್ಶನದೊಂದಿಗೆ ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಭಾರತವು ಹೆಚ್ಚಿನ ಭರವಸೆ ಹೊಂದಿತ್ತು. ಆದಾಗ್ಯೂ, ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್​ನಲ್ಲಿ ನಡೆದ ಸೆಮಿಫೈನಲ್ ಭಾರತ ಸೋತಿತು. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಗೆ 240 ರನ್ ಗಳ ಟಾರ್ಗೆಟ್ ಭಾರತಕ್ಕೆ ನೀಡಿತ್ತು. ಮಳೆಯಿಂದಾಗಿ ಪಂದ್ಯವನ್ನು ಮೀಸಲು ದಿನಕ್ಕೆ ವಿಸ್ತರಿಸಲಾಗಿತ್ತು. ಭಾರತ ಗೆಲುವಿನ ನೆಚ್ಚಿನ ತಂಡವಾಗಿತ್ತು.

VISTARANEWS.COM


on

MS Dhoni
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: 2019ರ ಏಕ ದಿನ ವಿಶ್ವ ಕಪ್​ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಸೋತಿರುವುದು ತಮ್ಮ ವೃತ್ತಿ ಜೀವನದ ಅತ್ಯಂತ ‘ಹೃದಯ ವಿದ್ರಾವಕ ಕ್ಷಣ’ ಎಂಬುದಾಗಿ ಧೋನಿ (MS Dhoni) ಹೇಳಿದ್ದಾರೆ. 2019 ರಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ವಿಶ್ವಕಪ್ ಸೆಮಿಫೈನಲ್ ಪಂದ್ಯವು ಶತಕೋಟಿ ಭಾರತೀಯ ಕ್ರಿಕೆಟ್ ಅಭಿಮಾನಿಗಳನ್ನು ಬೇಸರಕ್ಕೆ ನೂಕಿತ್ತು. ಜುಲೈ ರಂದು ನಡೆದ ಈ ಪಂದ್ಯವು ಭಾರತೀಯ ಕ್ರಿಕೆಟ್ ಅಭಿಮಾನಿಗಳ ಭಾವನೆಗಳನ್ನು ಕೆರಳಿಸಿತ್ತು. ಭಾರತಕ್ಕೆ ನಾಟಕೀಯ ಸೋಲಾಗಿತ್ತು. ಇದು ಕೇವಲ ನಷ್ಟವಲ್ಲ, ಇದು ಶತಕೋಟಿ ಕನಸುಗಳ ಅಂತ್ಯವಾಗಿತ್ತು. ಯಾಕೆಂದರೆ ಅದು ಧೋನಿ ಆ ಪಂದ್ಯದಲ್ಲಿ ರನ್​ ಔಟ್ ಆಗಿದ್ದು ಸೋಲಿಗೆ ಕಾರಣವಾಗಿತ್ತು.

2004 ರಲ್ಲಿ ಚೊಚ್ಚಲ ಪಂದ್ಯದಲ್ಲೇ ರನ್ ಔಟ್ ಮಾಡುವ ಮೂಲಕ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ವಿಕೆಟ್ ಕೀಪರ್-ಬ್ಯಾಟರ್​ ತಮ್ಮ ಏಕದಿನ ವೃತ್ತಿಜೀವನವನ್ನು ರನ್​ಔಟ್​ ಆಗುವ ಮೂಲಕ ಕೊನೆಗೊಳಿಸಿದ್ದರು. ಆ ವಿಶ್ವ ಕಪ್​ ಬಳಿಕ ಧೋನಿ ವಿದಾಯ ಹೇಳಿದ್ದರು.

2019ರ ವಿಶ್ವ ಕಪ್​ನಲ್ಲಿ ಪ್ರಬಲ ಪ್ರದರ್ಶನದೊಂದಿಗೆ ಲೀಗ್ ಹಂತದಲ್ಲಿ ಅಗ್ರಸ್ಥಾನದಲ್ಲಿದ್ದ ಭಾರತವು ಹೆಚ್ಚಿನ ಭರವಸೆ ಹೊಂದಿತ್ತು. ಆದಾಗ್ಯೂ, ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್​ನಲ್ಲಿ ನಡೆದ ಸೆಮಿಫೈನಲ್ ಭಾರತ ಸೋತಿತು. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಗೆ 240 ರನ್ ಗಳ ಟಾರ್ಗೆಟ್ ಭಾರತಕ್ಕೆ ನೀಡಿತ್ತು. ಮಳೆಯಿಂದಾಗಿ ಪಂದ್ಯವನ್ನು ಮೀಸಲು ದಿನಕ್ಕೆ ವಿಸ್ತರಿಸಲಾಗಿತ್ತು. ಭಾರತ ಗೆಲುವಿನ ನೆಚ್ಚಿನ ತಂಡವಾಗಿತ್ತು.

ಇದನ್ನೂ ಓದಿ: SL vs IND : ಲಂಕಾಗೆ ಗಾಯದ ಸಂಕಟ; ಏಕದಿನ ಸರಣಿಯಿಂದ ದಿಲ್ಶಾನ್ ಮಧುಶಂಕಾ, ಮತೀಶಾ ಪಥಿರಾನಾ ಔಟ್

ಭಾರತದ ಚೇಸಿಂಗ್​ ಕೆಟ್ಟದಾಗಿ ಪ್ರಾರಂಭವಾಯಿತು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಸೇರಿದಂತೆ ಅಗ್ರ ಕ್ರಮಾಂಕದ ಬ್ಯಾಟರ್​ಗಳು ವಿಫಲಗೊಂಡರು. ಈ ವೇಳೆ ಅಭಿಮಾನಿಗಳಲ್ಲಿ ಅಪನಂಬಿಕೆಯ ಭಾವನೆ ಹರಡಿತು. ನಂತರ ರವೀಂದ್ರ ಜಡೇಜಾ ಮತ್ತು ಎಂಎಸ್ ಧೋನಿ ಇನ್ನಿಂಗ್ಸ್ ಕಟ್ಟುವ ಕೆಲಸ ಆರಂಭಿಸಿದರು. ಇದು ತಂಡದಲ್ಲಿ ಹಾಗೂ ಅಭಿಮಾನಿಗಳಿಗೆ ಭರವಸೆ ಮೂಡಿಸಿತು.

ಜಡೇಜಾ 59 ಎಸೆತಗಳಲ್ಲಿ 77 ರನ್ ಗಳಿಸಿದರು. ಅವರು ಔಟಾದ ನಂತರ ಭಾರತಕ್ಕೆ ಕೊನೆಯ 12 ಎಸೆತಗಳಲ್ಲಿ 31 ರನ್​ಗಳ ಅವಶ್ಯಕತೆಯಿತ್ತು. ಕೂಲ್ ಆಟಗಾರ ಧೋನಿ ರಾಷ್ಟ್ರದ ಭರವಸೆಗಳ ಭಾರವನ್ನು ಹೊತ್ತಿದ್ದರು. ಗೆಲುವಿಗೆ 10 ಎಸೆತಗಳಲ್ಲಿ 25 ರನ್​ಗಳ ಅವಶ್ಯಕತೆಯಿತ್ತು. ಅದು ಕಷ್ಟವಾಗಿರಲಿಲ್ಲ.

ಧೋನಿ ರನೌಟ್

ಮಾರ್ಟಿನ್ ಗಪ್ಟಿಲ್ ಅವರ ಫೀಲ್ಡಿಂಗ್​ ಧೋನಿಯನ್ನು ಕ್ರೀಸ್ ನಿಂದ ಹೊರಗಿಡಿತು. ಧೋನಿಯ ರನೌಟ್ ಭಾರತದ ವಿಶ್ವಕಪ್ ಕನಸನ್ನು ಭಗ್ನಗೊಳಿಸಿತು. ಅವರು ಪೆವಿಲಿಯನ್ ಗೆ ಹಿಂತಿರುಗುತ್ತಿದ್ದಂತೆ ಸ್ಟೇಡಿಯಮ್​ ಮೌನವಾಯಿತು. ಪ್ರಪಂಚದಾದ್ಯಂತದ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದರು.

ಈ ಸೋಲು ಹೃದಯ ವಿದ್ರಾವಕ ಘಟನೆ ಎಂದು ಧೋನಿ ಒಪ್ಪಿಕೊಂಡಿದ್ದಾರೆ. “ಇದು ಕಷ್ಟಕರವಾಗಿತ್ತು ಏಕೆಂದರೆ ಇದು ನನ್ನ ಕೊನೆಯ ವಿಶ್ವಕಪ್ ಎಂದು ನನಗೆ ತಿಳಿದಿತ್ತು. ಆದ್ದರಿಂದ ಗೆಲುವು ನನಗ ಅನಿವಾರ್ಯವಾಗಿತ್ತು. ಆದರೆ ರನ್​ಔಟ್​​ ಹೃದಯ ವಿದ್ರಾವಕ ಕ್ಷಣವಾಗಿತ್ತು, “ಎಂದು ಧೋನಿ ಕಾರ್ಯಕ್ರಮವೊಂದರಲ್ಲಿ ಹೇಳಿದರು.

ವಿಶ್ವ ಕಪ್​ ಅತ್ಯುತ್ತಮ ಸಮಯವಾಗಿತ್ತು. ಆದರೆ, ರನ್​ಔಟ್ ಬಳಿಕ ಆದ ಸೋಲು ಬೇಸರ ಮೂಡಿತು. ಅದರಿಂದ ಸುಧಾರಿಸಿಕೊಳ್ಳುವುದಕ್ಕೆ ಸ್ವಲ್ಪ ಸಮಯ ತೆಗೆದುಕೊಂಡೆ. ಅದರ ನಂತರ ನಾನು ಅಂತರರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ, ಆದ್ದರಿಂದ ನನಗೆ ಸಾಕಷ್ಟು ಸಮಯ ಸಿಕ್ಕಿತು ಎಂದು ಧೋನಿ ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Diksha Dagar : ಗಾಲ್ಫರ್​ ದೀಕ್ಷಾ ದಾಗರ್​ ಪ್ರಯಾಣಿಸುತ್ತಿದ್ದ ಕಾರು ಪ್ಯಾರಿಸ್​​ನಲ್ಲಿ ಅಪಘಾತ

Diksha Dagar : ಮಂಗಳವಾರ ಸಂಜೆ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ ಆಕೆಯ ಪೋಷಕರು ಮತ್ತು ಸಹೋದರ ಕಾರಿನಲ್ಲಿದ್ದರು. ದೀಕ್ಷಾ ಮತ್ತು ಆಕೆಯ ತಂದೆ ಸ್ವಲ್ಪವೂ ಗಾಯಗಳು ಇಲ್ಲದೇ ಪಾರಾಗಿದ್ದಾರೆ. ಆದರೆ ತಾಯಿ ಬೆನ್ನುನೋವಿಗೆ ಒಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ಸಮಯದಲ್ಲಿ ದೀಕ್ಷಾ ಅವರ ಸಹೋದರನಿಗೆ ತರಚು ಗಾಯಗಳಾಗಿವೆ.

VISTARANEWS.COM


on

Diksha Daga
Koo

ಬೆಂಗಳೂರು: ಒಲಿಂಪಿಕ್ಸ್​ಗಾಗಿ (Paris Olympics 2024) ಫ್ರಾನ್ಸ್​ಗೆ ತೆರಳಿದ್ದ ಭಾರತೀಯ ಗಾಲ್ಫ್ ಆಟಗಾರ್ತಿ ದೀಕ್ಷಾ ದಾಗರ್ (Diksha Dagar) ಜುಲೈ 30 ರಂದು ರಾParis Olympics: ಕ್ವಾರ್ಟರ್‌ ಫೈನಲ್‌ನಲ್ಲಿ ಸಾತ್ವಿಕ್​-ಚಿರಾಗ್​ ಜೋಡಿಗೆ ಆಘಾತಕಾರಿ ಸೋಲುಜಧಾನಿ ಪ್ಯಾರಿಸ್​​ನಲ್ಲಿ ಕಾರು ಅಪಘಡಕ್ಕೆ ಒಳಗಾಗಿದ್ದಾರೆ. ಅದೃಷ್ಟವಶಾತ್​ 23 ವರ್ಷದ ಗಾಲ್ಫ್ ಆಟಗಾರ್ತಿ ಗಾಯಗಳಿಂದ ಪಾರಾಗಿದ್ದಾರೆ. ಅಲ್ಲದೆ, ಪ್ಯಾರಿಸ್ ಒಲಿಂಪಿಕ್ಸ್​​ನ ಮಹಿಳಾ ವೈಯಕ್ತಿಕ ಗಾಲ್ಫ್ ಸ್ಪರ್ಧೆಗೆ ಇಳಿಯುವುದಾಗಿ ಹೇಳಿದ್ದಾರೆ. ದೀಕ್ಷಾ ಅವರ ಸ್ಪರ್ಧೆಯು ಆಗಸ್ಟ್ 7ರಂದು ಪ್ರಾರಂಭವಾಗಲಿದೆ.

ಮಂಗಳವಾರ ಸಂಜೆ ಅವಘಡ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಈ ವೇಳೆ ಆಕೆಯ ಪೋಷಕರು ಮತ್ತು ಸಹೋದರ ಕಾರಿನಲ್ಲಿದ್ದರು. ದೀಕ್ಷಾ ಮತ್ತು ಆಕೆಯ ತಂದೆ ಸ್ವಲ್ಪವೂ ಗಾಯಗಳು ಇಲ್ಲದೇ ಪಾರಾಗಿದ್ದಾರೆ. ಆದರೆ ತಾಯಿ ಬೆನ್ನುನೋವಿಗೆ ಒಳಗಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ಸಮಯದಲ್ಲಿ ದೀಕ್ಷಾ ಅವರ ಸಹೋದರನಿಗೆ ತರಚು ಗಾಯಗಳಾಗಿವೆ.

ಅದೃಷ್ಟದ ಅವಕಾಶ

ಕುತೂಹಲಕಾರಿ ಸಂಗತಿಯೆಂದರೆ, ದಕ್ಷಿಣ ಆಫ್ರಿಕಾದ ಗಾಲ್ಫ್ ಆಟಗಾರ್ತಿ ಪೌಲಾ ರೆಟೊ ಹಿಂದೆ ಸರಿದ ಕಾರಣ ಅವರಿಗೆ ಟೋಕಿಯೊ 2020ರಲ್ಲಿ ಸ್ಪರ್ಧಿಸಲು ಅವಕಾಶ ಸಿಕ್ಕಿತ್ತು. ಅಲ್ಲಿ ದೀಕ್ಷಾ ಟಿ -50 ಅನ್ನು ಪೂರ್ಣಗೊಳಿಸಿದ್ದರು. ಇದೀಗ ಪ್ಯಾರಿಸ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ಗುರಿಯನ್ನು ಹೊಂದಿದ್ದಾರೆ. ಕಿವುಡರ ಒಲಿಂಪಿಕ್ಸ್ ಎರಡರ ಭಾಗವಾಗಿದ್ದ ಏಕೈಕ ಗಾಲ್ಫ್ ಆಟಗಾರ್ತಿ ದೀಕ್ಷಾ. ಅವರು 2017 ರಲ್ಲಿ ಬೆಳ್ಳಿ ಮತ್ತು 2022 ರಲ್ಲಿ ಕಿವುಡರ ವಿಭಾಗದಲ್ಲಿ ಚಿನ್ನ ಗೆದ್ದಿದ್ದರು.

ಇದನ್ನೂ ಓದಿ: Rohit Sharma : ಟಿ20 ನಿವೃತ್ತಿಯಲ್ಲ, ಅದು ವಿಶ್ರಾಂತಿ; ಕೌತುಕ ಮೂಡಿಸಿದ ರೋಹಿತ್ ಶರ್ಮಾ ಹೇಳಿಕೆ

ಇದೇ ವೇಳೆ ಶುಭಂಕರ್ ಶರ್ಮಾ ಮತ್ತು ಗಗನ್ಜೀತ್ ಭುಲ್ಲರ್ ಪುರುಷರ ವೈಯಕ್ತಿಕ ಸ್ಪರ್ಧೆಗೆ ಇಳಿಯಲಿದ್ದಾರೆ. ಭಾರತವು ಆಗಸ್ಟ್ 7 ರ ಗುರುವಾರ ಗಾಲ್ಫನ್​ನಲ್ಲಿ ತನ್ನ ಅಭಿಯಾನ ಪ್ರಾರಂಭಿಸಲಿದೆ. ಈ ಸವಾಲಿನ ಸಮಯದಲ್ಲಿ ದೀಕ್ಷಾ ಮತ್ತು ಅವರ ಕುಟುಂಬಕ್ಕೆ ಬೆಂಬಲವಾಗಿ ಭಾರತೀಯ ಕ್ರೀಡಾ ಸಮುದಾಯವು ಒಗ್ಗಟ್ಟಿನಿಂದ ನಿಂತಿದೆ.

Continue Reading

ದೇಶ

Puja Khedkar: ಮಾಜಿ ಟ್ರೈನಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ಗೆ ಮತ್ತೊಂದು ಸಂಕಷ್ಟ; ಜಾಮೀನು ಅರ್ಜಿ ವಜಾ

Puja Khedkar: ನಕಲಿ ದಾಖಲೆ ಸೃಷ್ಟಿ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಕೇಡರ್‌ನ ಟ್ರೈನಿ ಐಎಎಸ್‌ ಅಧಿಕಾರಿಯಾಗಿದ್ದ ಪೂಜಾ ಖೇಡ್ಕರ್‌ ಅವರನ್ನು ಹುದ್ದೆಯಿಂದ ವಜಾಗೊಳಿಸಿದೆ. ಹಾಗೆಯೇ, ಭವಿಷ್ಯದಲ್ಲಿ ಯಾವುದೇ ಪರೀಕ್ಷೆಯನ್ನು ಬರೆಯುವುದರಿಂದ ಅವರನ್ನು ನಿಷೇಧಿಸಿ ಕೇಂದ್ರ ಲೋಕಸೇವಾ ಆಯೋಗವು ಆದೇಶ ಹೊರಡಿಸಿದೆ. ಇದರ ಬೆನ್ನಲ್ಲೇ, ಅವರು ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯನ್ನೂ ಕೋರ್ಟ್‌ ವಜಾಗೊಳಿಸಿದೆ.

VISTARANEWS.COM


on

Puja Khedkar
Koo

ನವದೆಹಲಿ: ನಕಲಿ ಅಂಗವಿಕಲ ಪ್ರಮಾಣಪತ್ರ, ನಕಲಿ ಗುರುತಿನ ದಾಖಲೆ, ತಂದೆ-ತಾಯಿ ಹೆಸರು ಬದಲಾಯಿಸಿ ನಕಲಿ ಸರ್ಟಿಫಿಕೇಟ್‌ ಸೃಷ್ಟಿ, ಒಬಿಸಿ ಎಂದು ಕೂಡ ಸುಳ್ಳು ದಾಖಲೆ (Fake Documents) ಸಲ್ಲಿಸಿ, ಐಎಎಸ್‌ ಪಾಸಾಗಿ, ಟ್ರೈನಿ ಅಧಿಕಾರಿಯಾಗಿದ್ದಾಗಲೇ ದರ್ಪ ತೋರಿಸಿದ ಮಹರಾಷ್ಟ್ರ ಕೇಡರ್‌ನ ಐಎಎಸ್‌ ಅಧಿಕಾರಿಯಾಗಿದ್ದ ಪೂಜಾ ಖೇಡ್ಕರ್‌ (Puja Khedkar) ಅವರ ನೇಮಕವನ್ನು ಯುಪಿಎಸ್‌ಸಿಯು ಅನೂರ್ಜಿತಗೊಳಿಸಿದೆ. ಇದರ ಬೆನ್ನಲ್ಲೇ, ದೆಹಲಿ ನ್ಯಾಯಾಲಯ ಪೂಜಾ ಖೇಡ್ಕರ್‌ ಸಲ್ಲಿಸಿದ ನಿರೀಕ್ಷಣಾ ಜಾಮೀನು (Anticipatory Bail) ಅರ್ಜಿಯನ್ನು ನಿರಾಕರಿಸಿದೆ. ಇದು ಮಾಜಿ ಟ್ರೈನಿ ಅಧಿಕಾರಿಗೆ ಮತ್ತೊಂದು ಸಂಕಷ್ಟ ತಂದಿದೆ.

ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶ ದೇವೇಂದರ್‌ ಕುಮಾರ್‌ ಜಂಗಾಲ ಅವರು ನಿರೀಕ್ಷಣಾ ಅರ್ಜಿಯನ್ನು ವಜಾಗೊಳಿಸಿದರು. ಹಾಗೆಯೇ, “ಬೇರೆ ಅಭ್ಯರ್ಥಿಗಳು ಕೂಡ ಇದೇ ರೀತಿ ಮೀಸಲಾತಿಯ ಕುರಿತು ನಕಲಿ ದಾಖಲೆ ಸೃಷ್ಟಿಸಿದ್ದಾರೆಯೇ ಎಂಬುದನ್ನು ಪತ್ತೆಹಚ್ಚಬೇಕು. ವಯಸ್ಸು, ಜಾತಿ, ವಿಶೇಷ ಚೇತನ ಎಂಬುದಾಗಿ ನಕಲಿ ದಾಖಲೆ ಸೃಷ್ಟಿ ಸೇರಿ ಹಲವು ರೀತಿಯ ತಪಾಸಣೆ ಮಾಡಬೇಕು” ಎಂಬುದಾಗಿ ಪೊಲೀಸರಿಗೆ ಸೂಚನೆ ನೀಡಿದರು.

ನಕಲಿ ದಾಖಲೆ ಸೃಷ್ಟಿ ಸೇರಿ ಪೂಜಾ ಖೇಡ್ಕರ್‌ ವಿರುದ್ಧ ಹಲವು ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆಗಾಗಿ ಯುಪಿಎಸ್‌ಸಿಯು ಆಯೋಗ ಒಂದನ್ನು ರಚಿಸಿತ್ತು. ಆಯೋಗದ ವರದಿಯಲ್ಲಿ ಪೂಜಾ ಖೇಡ್ಕರ್‌ ತಪ್ಪೆಸಗಿದ್ದು, ನಕಲಿ ದಾಖಲೆ ಸೃಷ್ಟಿಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಅವರ ವಿರುದ್ಧ ಯುಪಿಎಸ್‌ಸಿ ಕಠಿಣ ಕ್ರಮ ತೆಗೆದುಕೊಂಡಿದೆ. ಇವರನ್ನು ಸೇವೆಯಿಂದ ವಜಾಗೊಳಿಸುವ ಜತೆಗೆ ಯುಪಿಎಸ್‌ಸಿ ಕೈಗೊಳ್ಳುವ ಯಾವುದೇ ಪರೀಕ್ಷೆಯಲ್ಲಿ ಪಾಲ್ಗೊಳ್ಳದಂತೆ ನಿಷೇಧ ಹೇರಿದೆ.

ತಮ್ಮ ಖಾಸಗಿ ಕಾರಿಗೆ ‘ಕೆಂಪು ಗೂಟ’ ಅಳವಡಿಸಿದ್ದು ಸೇರಿ ಹಲವು ರೀತಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು, ವರ್ಗಾವಣೆಯ ಶಿಕ್ಷೆ ಅನುಭವಿಸುತ್ತಿರುವ ಪೂಜಾ ಖೇಡ್ಕರ್‌ ಅವರು ನಕಲಿ ಜಾತಿ ಪ್ರಮಾಣಪತ್ರ, ವಿಶೇಷ ಚೇತನ ಎಂದು ಸುಳ್ಳು ದಾಖಲೆ ಸೃಷ್ಟಿ, ವಯಸ್ಸಿನ ಕುರಿತು ಕೂಡ ಫೇಕ್‌ ಡಾಕ್ಯುಮೆಂಟ್‌ ತಯಾರಿಸಿದ ಆರೋಪಗಳನ್ನೂ ಎದುರಿಸಿದ್ದರು. ಈಗ ಅವರ ವಿರುದ್ಧದ ಆರೋಪಗಲು ಸಾಬೀತಾದ ಹಿನ್ನೆಲೆಯಲ್ಲಿ ಯುಪಿಎಸ್‌ಸಿಯು ಮಹತ್ವದ ಕ್ರಮ ತೆಗೆದುಕೊಂಡಿದೆ.

Pooja Khedkar
Pooja Khedkar

ನಿಯಮಿತ ಅಧಿಕಾರವನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಪುಣೆಯಿಂದ (ಅಸಿಸ್ಟಂಟ್‌ ಕಲೆಕ್ಟರ್)‌ ವಾಶಿಂಗೆ ವರ್ಗಾವಣೆಗೊಂಡಿದ್ದ 34 ವರ್ಷದ ಅಧಿಕಾರಿಯು, ಒಬಿಸಿ ಜಾತಿ ಪ್ರಮಾಣಪತ್ರ ಲಗತ್ತಿಸಿ ಯುಪಿಎಸ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದರು. ಆದರೆ, ಅವರು ಒಬಿಸಿ ಜಾತಿ ಪ್ರಮಾಣಪತ್ರದ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಇನ್ನು ವಿಶೇಷ ಚೇತನ ಎಂಬುದಾಗಿಯೂ ಫೇಕ್‌ ಡಾಕ್ಯುಮೆಂಟ್‌ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಮೆಡಿಕಲ್‌ ಟೆಸ್ಟ್‌ ಪ್ರಕಾರ ಪೂಜಾ ಖೇಡ್ಕರ್‌ ಅವರು ಫಿಟ್‌ ಇದ್ದಾರೆ ಎಂದು ಹೇಳಲಾಗುತ್ತಿದೆ.‌ 2007ರಲ್ಲಿ ಅವರು ಎಂಬಿಬಿಎಸ್‌ಗೆ ಅರ್ಜಿ ಸಲ್ಲಿಸಿದಾಗ ದೈಹಿಕವಾಗಿ ಫಿಟ್‌ ಇರುವುದಾಗಿ ದಾಖಲೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.

ವಯಸ್ಸಿನ ಕುರಿತೂ ಸುಳ್ಳು ದಾಖಲೆ

ಜಾತಿ, ವಿಶೇಷ ಚೇತನ ಪ್ರಮಾಣಪತ್ರದ ಜತೆಗೆ ಪೂಜಾ ಖೇಡ್ಕರ್‌ ಅವರು ವಯಸ್ಸಿನ ಕುರಿತು ಕೂಡ ಸುಳ್ಳು ದಾಖಲೆ ಸಲ್ಲಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 2020ರಿಂದ 2023ರ ಅವಧಿಯಲ್ಲಿ ಅವರು ಸಲ್ಲಿಸಿದ ದಾಖಲೆಗಳ ಪ್ರಕಾರ, ಮೂರು ವರ್ಷದಲ್ಲಿ ಅವರ ವಯಸ್ಸು ದಾಖಲೆಯಲ್ಲಿ ಒಂದೇ ವರ್ಷ ಹೆಚ್ಚಾಗಿದೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ವಯಸ್ಸಿನ ಮಿತಿ ಇರುವ ಕಾರಣ ಅವರು ವಯಸ್ಸಿನ ಕುರಿತು ಕೂಡ ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂದು ತಿಳಿದುಬಂದಿತ್ತು. ಇದು ಈಗ ಭಾರಿ ಚರ್ಚೆಗೂ ಗ್ರಾಸವಾಗಿತ್ತು.

ಇದನ್ನೂ ಓದಿ: Puja Khedkar: ನಕಲಿ ದಾಖಲೆ ಸೃಷ್ಟಿ; ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕ ರದ್ದು, ಪರೀಕ್ಷೆಯಿಂದಲೇ ಯುಪಿಎಸ್‌ಸಿ ಬ್ಯಾನ್!

Continue Reading

ಸಿನಿಮಾ

Movies on Israel: ಪ್ಯಾಲೇಸ್ತಿನ್‌ ಉಗ್ರರ ವಿರುದ್ಧ ಇಸ್ರೇಲ್ ಸೇಡು! ಮೈನವಿರೇಳಿಸುವ ಈ ಸಿನೆಮಾಗಳನ್ನು ನೋಡಲೇಬೇಕು!

Movies on Israel: ಯುದ್ಧದ ಸನ್ನಿವೇಶವನ್ನು ಹಲವಾರು ಚಲನಚಿತ್ರಗಳು ಸೆರೆ ಹಿಡಿದಿದ್ದರೂ ಅದು ಜನಸಾಮಾನ್ಯರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವುದು ಕಡಿಮೆ. ಆದರೆ ಈ ಐದು ಚಲನಚಿತ್ರಗಳು ಮಾತ್ರ ಇಸ್ರೇಲ್- ಪ್ಯಾಲೆಸ್ತೀನ್ ಸಂಘರ್ಷದಿಂದ (Israel-Palestine Conflict) ಆಗುತ್ತಿರುವ ಪ್ರಮುಖ ಸಮಸ್ಯೆಗಳು ಮತ್ತು ಸಂಘರ್ಷದ ಮಧ್ಯೆ ವಾಸಿಸುವ ಜನರ ಬದುಕನ್ನು ತೆರೆದಿಟ್ಟಿದೆ. ತಮ್ಮ ದೇಶದ ಮೇಲೆ, ತಮ್ಮ ಜನರ ಮೇಲೆ ದಾಳಿ ಮಾಡುವ ಪ್ಯಾಲೇಸ್ತಿನ್‌ ಉಗ್ರರ ಮೇಲೆ ಇಸ್ರೇಲ್‌ ಬೇಹುಗಾರಿಕೆ ಪಡೆ ಪ್ರತಿದಾಳಿ ನಡೆಸುವ, ಅವರನ್ನು ಹುಡುಕಿ ಹುಡುಕಿ ನಾಶಪಡಿಸುವ ದೃಶ್ಯಗಳು ರೋಚಕವಾಗಿವೆ.

VISTARANEWS.COM


on

By

Movies on Israel
Koo

ಇಸ್ರೇಲ್-ಪ್ಯಾಲೇಸ್ತಿನ್‌ ಸಂಘರ್ಷ (Israel-Palestine Conflict) ಕೆಲವು ತಿಂಗಳುಗಳಿಂದ (Movies on Israel) ಉಲ್ಬಣಗೊಂಡಿದೆ. ಇದರಲ್ಲಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಲಕ್ಷಾಂತರ ಮಂದಿ ವಸತಿ ಕಳೆದುಕೊಂಡು ಬೇರೆ ಸ್ಥಳಗಳಿಗೆ ವಲಸೆ ಹೋಗಿದ್ದಾರೆ. ಯುದ್ಧದ (war) ಸನ್ನಿವೇಶವನ್ನು ಹಲವಾರು ಚಲನಚಿತ್ರಗಳು (film) ಸೆರೆ ಹಿಡಿದಿದ್ದರೂ ಅದು ಜನಸಾಮಾನ್ಯರ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವುದು ಕಡಿಮೆ. ಆದರೆ ಈ ಐದು ಚಲನಚಿತ್ರಗಳು ಮಾತ್ರ ಯುದ್ಧದ ಚಿತ್ರಣವನ್ನು ಮನಮುಟ್ಟುವಂತೆ ಕಟ್ಟಿ ಕೊಟ್ಟಿದೆ.

ಮ್ಯೂನಿಚ್

2005ರ ಈ ಚಲನಚಿತ್ರವು ಪಶ್ಚಿಮ ಜರ್ಮನಿಯ ಮ್ಯೂನಿಚ್‌ನಲ್ಲಿ 1972ರ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದ 11 ಇಸ್ರೇಲ್ ಕ್ರೀಡಾಪಟುಗಳು ಮತ್ತು ಅಧಿಕಾರಿಗಳ ಅಪಹರಣ-ಹತ್ಯೆಯನ್ನು ಆಧರಿಸಿದೆ.


ಹೆಸರಾಂತ ನಿರ್ದೇಶಕ ಸ್ಟೀವನ್ ಸ್ಪೀಲ್ಬರ್ಗ್ ನಿರ್ದೇಶನದ ಈ ಚಲನಚಿತ್ರವು ‘ಬ್ಲ್ಯಾಕ್ ಸೆಪ್ಟೆಂಬರ್’ ಎಂಬ ಪ್ಯಾಲೆಸ್ತೀನಿಯನ್ ಭಯೋತ್ಪಾದಕ ಸಂಘಟನೆ ನಡೆಸಿದ ಭೀಕರ ಹತ್ಯೆಯ ಅನಂತರದ ಪರಿಣಾಮಗಳನ್ನು ಬಿಂಬಿಸಿದೆ. ಸೇಡಿನ ಕಥೆಯನ್ನು ಆಧರಿಸಿರುವ ಈ ಚಿತ್ರವು ಮುಯ್ಯಿಗೆ ಮುಯ್ಯಿ ಎಂಬಂತೆ ‘ಕಣ್ಣಿಗೆ ಕಣ್ಣು’ ಎಂಬುದನ್ನು ಉಲ್ಲೇಖಿಸುತ್ತದೆ. ತನ್ನ ದೇಶದ ಕ್ರೀಡಾಪಟುಗಳ ಬರ್ಬರ ಹತ್ಯೆ ನಡೆಸಿದ ಉಗ್ರರನ್ನು ಇಸ್ರೇಲ್‌ ಬೇಹುಗಾರಿಕೆ ಪಡೆ ಹುಡುಕಿ ಹುಡುಕಿ ಕೊಲ್ಲುವ ಸನ್ನಿವೇಶಗಳು ರೋಮಾಂಚನಗೊಳಿಸುತ್ತವೆ.

ರೈಡ್ ಆನ್ ಎಂಟೆಬ್ಬೆ

1977ರ ಈ ಚಲನಚಿತ್ರವು ʼಆಪರೇಷನ್ ಎಂಟೆಬ್ಬೆʼ ಮೇಲೆ ಆಧರಿತವಾಗಿದೆ. ನಾಲ್ವರು ಪ್ಯಾಲೇಸ್ತಿನಿಯನ್‌ ಭಯೋತ್ಪಾದಕರು ಹಲವಾರು ಇಸ್ರೇಲಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಫ್ರಾನ್ಸ್ ಏರ್‌ಬಸ್ ಎ300 ಅನ್ನು ಹೈಜಾಕ್ ಮಾಡಿದ ಅನಂತರ ಇಸ್ರೇಲ್ ಸರ್ಕಾರವು ಯೋಜಿಸಿದ ರಕ್ಷಣಾ ಕಾರ್ಯಾಚರಣೆ ಇದಾಗಿದೆ.


ಚಿತ್ರವು ಉಗಾಂಡಾದ ಎಂಟೆಬ್ಬೆ ವಿಮಾನ ನಿಲ್ದಾಣದಿಂದ ಡೇರ್‌ಡೆವಿಲ್ ರಕ್ಷಣಾ ಕಾರ್ಯಾಚರಣೆಗಳ ಮೇಲೆ ಕೇಂದ್ರೀಕರಿಸುತ್ತದೆ. ‘ಆಪರೇಷನ್ ಥಂಡರ್ಬೋಲ್ಟ್’ ಶೀರ್ಷಿಕೆಯ ಕಾರ್ಯಾಚರಣೆಯು ಅತ್ಯಂತ ಕಷ್ಟಕರವಾಗಿತ್ತು. ಯಾಕೆಂದರೆ ಭಯೋತ್ಪಾದಕರು ಉಗಾಂಡಾದ ಅಧ್ಯಕ್ಷ ಇದಿ ಅಬಿನ್ ಅವರ ಬೆಂಬಲವನ್ನು ಹೊಂದಿದ್ದರು. ಆದರೂ ಇಸ್ರೇಲ್‌ ಯೋಧರು ಭಾರಿ ಸಾಹಸದಿಂದ ಮೇಲುಗೈ ಸಾಧಿಸಿದರು. ಈ ಚಿತ್ರವು ಗೋಲ್ಡನ್ ಗ್ಲೋಬ್ ಪ್ರಶಸ್ತಿಯನ್ನು ಪಡೆದಿದೆ.

ಅಜಾಮಿ

ಈ ಚಲನಚಿತ್ರದ ಕತೆಯನ್ನು ಪ್ಯಾಲೇಸ್ತಿನಿಯನ್ ಸ್ಕ್ಯಾಂಡರ್ ಕಾಪ್ಟಿ ಮತ್ತು ಇಸ್ರೇಲ್ ಯಹೂದಿ ಯಾರೋನ್ ಶಾನಿ ಬರೆದಿದ್ದಾರೆ. ಇದು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ಜೀವನದ ಸುತ್ತ ಸುತ್ತುತ್ತದೆ.


ಇಸ್ರೇಲ್‌ನ ಟೆಲ್ ಅವಿವ್‌ನಲ್ಲಿರುವ ಜಾಫಾ ಚಿತ್ರದ ಕೇಂದ್ರ ಬಿಂದು. ಇಲ್ಲಿ ಹಲವಾರು ಪಾತ್ರಗಳಿವೆ. ಅವರೆಲ್ಲರೂ ಬಡವರು ಮತ್ತು ಸಾಕಷ್ಟು ಸಂಘರ್ಷವನ್ನು ಎದುರಿಸುತ್ತಾರೆ. ಇಸ್ರೇಲ್ – ಅರಬ್ ಜಗತ್ತಿನಲ್ಲಿ ಜೀವನದ ಸಂಪೂರ್ಣ ವಾಸ್ತವ, ಹಿಂಸೆ, ಪ್ರೀತಿ ಮತ್ತು ಸಾಮಾಜಿಕ ಸಮಸ್ಯೆಗಳನ್ನು ಈ ಚಿತ್ರದಲ್ಲಿ ಚಿತ್ರಿಸಲಾಗಿದೆ.

ಪ್ಯಾರಡೈಸ್ ನೌ

ಈ ಚಿತ್ರವು ಟೆಲ್ ಅವೀವ್‌ನ ಮಿಲಿಟರಿ ಚೆಕ್‌ಪಾಯಿಂಟ್‌ನಲ್ಲಿ ಬಾಂಬ್‌ಗಳನ್ನು ಸ್ಫೋಟಿಸುವ ಕಾರ್ಯವನ್ನು ವಹಿಸಿಕೊಂಡಿರುವ ಇಬ್ಬರು ಪ್ಯಾಲೇಸ್ತಿನಿಯನ್ ಆತ್ಮಹತ್ಯಾ ಬಾಂಬರ್‌ಗಳನ್ನು ಆಧರಿಸಿದೆ. ಮದುವೆಯಲ್ಲಿ ಪಾಲ್ಗೊಳ್ಳುವ ನೆಪದಲ್ಲಿ ಇಬ್ಬರು ಇಸ್ರೇಲ್ ಪ್ರಜೆಗಳಂತೆ ವೇಷ ಧರಿಸಿ ಸ್ಫೋಟಕ್ಕೆ ಮುಂದಾಗಿದ್ದರು.


ಇಸ್ರೇಲ್ ಗಡಿ ದಾಟುವಾಗ ನಡೆಯುವ ಘಟನೆಗಳು, ಆತ್ಮಹತ್ಯಾ ಬಾಂಬರ್‌ಗಳಾಗಲು ಕಾರಣವಾಗುವ ಭಾವನಾತ್ಮಕ ಮತ್ತು ಮಾನಸಿಕ ಅಂಶಗಳನ್ನು ಸೂಕ್ಷ್ಮವಾಗಿ ಸಿನೆಮಾದಲ್ಲಿ ಮನೋಜ್ಞವಾಗಿ ಚಿತ್ರಿಸಲಾಗಿದೆ. ಇದು ಅತ್ಯುತ್ತಮ ವಿದೇಶಿ ಚಿತ್ರ ಎಂಬ ಗೋಲ್ಡನ್ ಗ್ಲೋಬ್ ಪ್ರಶಸ್ತಿ ಪಡೆದಿದೆ.

ಲೆಮನ್ ಟ್ರೀ

ಪ್ಯಾಲೇಸ್ತಿನಿಯನ್ ಮಹಿಳೆಯ ಹೋರಾಟದ ಕಟುವಾದ ಮತ್ತು ಸುಂದರವಾದ ಕಥೆಯನ್ನು ಈ ಚಿತ್ರ ಒಳಗೊಂಡಿದೆ. ಇಸ್ರೇಲ್ ಅಧಿಕಾರಿಗಳು ತನ್ನ ನಿಂಬೆ ತೋಟದಲ್ಲಿನ ಮರಗಳನ್ನು ಕಿತ್ತು ಹಾಕುವುದನ್ನು ತಡೆಯುವುದು ಈ ಚಿತ್ರದ ಸಾರ. ಪ್ರಪಂಚದಾದ್ಯಂತದ ವಿವಿಧ ಚಲನಚಿತ್ರೋತ್ಸವಗಳಲ್ಲಿ ಈ ಚಿತ್ರವನ್ನು ಪ್ರದರ್ಶಿಸಲಾಗಿದೆ. ಇಸ್ರೇಲಿ ರಕ್ಷಣಾ ಸಚಿವ ಇಸ್ರೇಲ್ ನವೊನ್ ಅವರು ಪ್ಯಾಲೇಸ್ತಿನಿಯನ್ ಮಹಿಳೆ ಸಲ್ಮಾ ಅವರ ಮನೆಯ ಪಕ್ಕದಲ್ಲಿ ವಾಸಿಸುತ್ತಿದ್ದರು.


ಇದನ್ನೂ ಓದಿ: Pushpa 2: ಪುಷ್ಪ 2 ಕ್ಲೈ ಮ್ಯಾಕ್ಸ್‌ ದೃಶ್ಯ ಲೀಕ್‌; ಕೋಪ ಹೊರ ಹಾಕಿದ ಅರ್ಜುನ್‌ ಫ್ಯಾನ್ಸ್‌!

ಸಲ್ಮಾ ಅವರ ನಿಂಬೆ ತೋಟ ಅವರಿಗೆ ರಹಸ್ಯವಾಗಿ ಕಾಣುತ್ತದೆ ಮತ್ತು ಬೆದರಿಕೆಯನ್ನು ಒಡ್ಡಿದಂತೆ ಭಾಸವಾಗುತ್ತದೆ. ಹೀಗಾಗಿ ಅಧಿಕಾರಿಗಳು ಎಲ್ಲಾ ಮರಗಳನ್ನು ಕಿತ್ತುಹಾಕಲು ಯೋಜಿಸುತ್ತಾರೆ. ಆದರೆ ಸಲ್ಮಾ ಮತ್ತು ಅವರ ವಕೀಲರು ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ತೆಗೆದುಕೊಳ್ಳಲು ನಿರ್ಧರಿಸುತ್ತಾರೆ. ಚಲನಚಿತ್ರವು ವಿವಿಧ ವಿಷಯಗಳ ಮೇಲೆ ನೆಲೆಸಿದೆ. ಮಾನವ ಸಹಾನುಭೂತಿ ಮತ್ತು ಭಾವನೆಯ ಮೇಲೂ ಬೆಳಕು ಚೆಲ್ಲಿದೆ.

Continue Reading

ಪ್ರಮುಖ ಸುದ್ದಿ

Rohit Sharma : ಟಿ20 ನಿವೃತ್ತಿಯಲ್ಲ, ಅದು ವಿಶ್ರಾಂತಿ; ಕೌತುಕ ಮೂಡಿಸಿದ ರೋಹಿತ್ ಶರ್ಮಾ ಹೇಳಿಕೆ

Rohit Sharma : ಫೈನಲ್ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್ಗಳಿಂದ ಸೋಲಿಸುವ ಮೂಲಕ ಮೆನ್ ಇನ್ ಬ್ಲೂ 11 ವರ್ಷಗಳ ಐಸಿಸಿ ಟ್ರೋಫಿ ಬರವನ್ನು ಕೊನೆಗೊಳಿಸಿತು ಮತ್ತು ಎರಡನೇ ಟಿ 20 ವಿಶ್ವಕಪ್ ಟ್ರೋಫಿಯನ್ನು ಗೆದ್ದುಕೊಂಡಿತು. ಭಾರತವನ್ನು ಐತಿಹಾಸಿಕ ಗೆಲುವಿನತ್ತ ಮುನ್ನಡೆಸಿದ ನಂತರ, ನಾಯಕ ರೋಹಿತ್ ಶರ್ಮಾ ಅವರು ಸ್ಟಾರ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಅವರೊಂದಿಗೆ ಟಿ 20 ಪಂದ್ಯಗಳಿಂದ ನಿವೃತ್ತಿ ಘೋಷಿಸಿದರು.

VISTARANEWS.COM


on

Rohit Sharma
Koo

ನವದೆಹಲಿ: ವಿಶ್ವ ಕಪ್ ಗೆಲುವಿನ ಬಳಿಕ ಟಿ20 ಮಾದರಿಗೆ ನಿವೃತ್ತಿ ಹೇಳಿರುವ ರೋಹಿತ್ ಶರ್ಮಾ (Rohit Sharma) ಇದೀಗ ಅದು ಕೇವಲ ವಿಶ್ರಾಂತಿ ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಅವರು ನಿವೃತ್ತಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂಬುದಾಗಿ ಹೇಳಿಕೊಂಡಿದ್ದಾರೆ. ವೆಸ್ಟ್ ಇಂಡೀಸ್ನಲ್ಲಿ ನಡೆದ 2024 ರ ಟಿ 20 ವಿಶ್ವಕಪ್ ಗೆಲುವಿನ ನಂತರ ರೋಹಿತ್ ಟಿ20 ಕ್ರಿಕೆಟ್​ನಿಂದ ನಿವೃತ್ತಿ ಹೇಳಿದ್ದರು. ಅದಕ್ಕೆ ಮೊದಲು ಕೊಹ್ಲಿ ನಿವೃತ್ತಿ ಘೋಷಿಸಿದ್ದರು. ಆದರೆ ರೋಹಿತ್​ ಆ ರೀತಿ ಮಾಡಿದ್ದು ಯಾಕೆ ಎಂಬುದು ಗೊತ್ತಿಲ್ಲ.

ವಿಶ್ವ ಕಪ್​ ಫೈನಲ್​ನಲ್ಲಿ ದಕ್ಷಿಣ ಆಫ್ರಿಕಾವನ್ನು ಏಳು ರನ್​ಗಳಿಂದ ಸೋಲಿಸುವ ಮೂಲಕ ಮೆನ್ ಇನ್ ಬ್ಲೂ 11 ವರ್ಷಗಳ ಐಸಿಸಿ ಟ್ರೋಫಿ ಬರ ಕೊನೆಗೊಳಿಸಿತ್ತು. ಎರಡನೇ ಟಿ 20 ವಿಶ್ವಕಪ್ ಟ್ರೋಫಿ ಗೆದ್ದುಕೊಂಡಿತು. ಭಾರತವನ್ನು ಐತಿಹಾಸಿಕ ಗೆಲುವಿನತ್ತ ಮುನ್ನಡೆಸಿದ್ದರು.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಮುಂಚಿತವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿತ್, ಅವರು ನಾನು ಇನ್ನೂ ನನ್ನು ನಿವೃತ್ತಿಗೆ ಹೊಂದಾಣಿಕೆಯಾಗಿಲ್ಲ. ದೊಡ್ಡ ಟಿ 20 ಅಂತಾರಾಷ್ಟ್ರೀಯ ಟೂರ್ನಿಗೆ ಮೊದಲು ತಂಡಕ್ಕೆ ಮತ್ತೆ ಸೇರಿಕೊಳ್ಳುತ್ತೇವೆ ಎಂದು ಅನಿಸುತ್ತದೆ ಎಂದು ಹೇಳಿದರು.

ಈ ಹಿಂದೆ ನಡೆದಂತೆ ನನಗೆ ಟಿ 20 ಯಿಂದ ವಿಶ್ರಾಂತಿ ನೀಡಲಾಗಿದೆ ಎಂದು ನಾನು ಭಾವಿಸುತ್ತೇನೆ. ದೊಡ್ಡ ಪಂದ್ಯಾವಳಿ ಮುಂದೆ ಬರಲಿದೆ ಮತ್ತು ನಾವು ಮತ್ತೆ ಟಿ 20 ಗಳಿಗೆ ಸಿದ್ಧರಾಗಬೇಕಾಗಿದೆ. ಆದ್ದರಿಂದ ನಾನು ಫಾರ್ಮಾಟ್​ನಿಂದ ಸಂಪೂರ್ಣವಾಗಿ ಹೊರಗುಳಿದಿದ್ದೇನೆ ಎಂದು ನಾನು ಭಾವಿಸುವುದಿಲ್ಲ”ಎಂದು ಶರ್ಮಾ ಪಂದ್ಯದ ಪೂರ್ವ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಟಿ20 ವಿಶ್ವ ಕಪ್​ನಲ್ಲಿ ರೋಹಿತ್ ಶರ್ಮಾ ಭರ್ಜರಿ ಆಟ

2024 ರ ಟಿ 20 ವಿಶ್ವಕಪ್​​ನಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಭಾರತದ ಆರಂಭಿಕ ಆಟಗಾರ ತಮ್ಮ ಟಿ 20 ಐ ವೃತ್ತಿಜೀವನಕ್ಕೆ ಪರಿಪೂರ್ಣ ವಿದಾಯ ಹೇಳಿದ್ದರು. ಬಲಗೈ ಬ್ಯಾಟ್ಸ್ಮನ್ ಎಂಟು ಇನ್ನಿಂಗ್ಸ್​ಗಳಿಂದ 36.71 ಸರಾಸರಿಯಲ್ಲಿ 257 ರನ್ ಗಳಿಸಿದ್ದಾರೆ. ಮೂರು ಅರ್ಧಶತಕಗಳೊಂದಿಗೆ 156.70 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ಇದನ್ನೂ ಓದಿ: MS Dhoni: ಆ ಒಂದು ರನ್​​ ಔಟ್ ನನ್ನ ​​ ಕ್ರಿಕೆಟ್​ ವೃತ್ತಿ ಜೀವನದ ಅತ್ಯಂತ ಕೆಟ್ಟ ಕ್ಷಣ; ವಿಶ್ವ ಕಪ್​ ಆಘಾತವನ್ನು ವಿವರಿಸಿದ ಧೋನಿ

151 ಇನ್ನಿಂಗ್ಸ್ಗಳಲ್ಲಿ 32.05ರ ಸರಾಸರಿಯಲ್ಲಿ 4231 ರನ್ ಗಳಿಸಿರುವ 37ರ ಹರೆಯದ ರೋಹಿತ್​​, ಜಂಟಿ ದಾಖಲೆಯ 5 ಶತಕ ಮತ್ತು 32 ಅರ್ಧಶತಕಗಳೊಂದಿಗೆ 140.89ರ ಸ್ಟ್ರೈಕ್ ರೇಟ್​​ನೊಂದಿಗೆ ಟಿ20ಐನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು.

ನಾಗ್ಪುರ ಮೂಲದ ಕ್ರಿಕೆಟಿಗ 2023 ರ ಏಕದಿನ ವಿಶ್ವಕಪ್ ನಂತರ ಮೊದಲ ಬಾರಿಗೆ ಏಕದಿನ ಕ್ರಿಕೆಟ್​​ಗೆ ಮರಳಲಿದ್ದಾರೆ. ಭಾರತದ ನಾಯಕ 11 ಇನ್ನಿಂಗ್ಸ್​ಗಳಿಂದ 54.27 ಸರಾಸರಿಯಲ್ಲಿ 597 ರನ್ ಗಳಿಸುವ ಮೂಲಕ ಮತ್ತು 125.94 ಸ್ಟ್ರೈಕ್ ರೇಟ್ ಮೂಲಕ ಮಿಂಚಿದ್ದರು ಆಗಸ್ಟ್ 1 ರಿಂದ ಪ್ರಾರಂಭವಾಗಲಿರುವ ಮುಂಬರುವ ಸರಣಿಯಲ್ಲಿ ರೋಹಿತ್ ತಮ್ಮ ಫಾರ್ಮ್ ಅನ್ನು ಮುಂದುವರಿಸಲು ಉತ್ಸುಕರಾಗಿದ್ದಾರೆ.

Continue Reading
Advertisement
ICW 2024
ಫ್ಯಾಷನ್35 mins ago

ICW 2024: ಟ್ರೆಂಡ್‌ ಲಿಸ್ಟ್‌ಗೆ ಸೇರಿದ ಇಂಡಿಯಾ ಕೌಚರ್‌ ವೀಕ್‌ನ ಡಿಸೈನರ್‌ ವೇರ್‌ಗಳಿವು!

Diksha Daga
ಕ್ರೀಡೆ40 mins ago

Diksha Dagar : ಗಾಲ್ಫರ್​ ದೀಕ್ಷಾ ದಾಗರ್​ ಪ್ರಯಾಣಿಸುತ್ತಿದ್ದ ಕಾರು ಪ್ಯಾರಿಸ್​​ನಲ್ಲಿ ಅಪಘಾತ

Puja Khedkar
ದೇಶ49 mins ago

Puja Khedkar: ಮಾಜಿ ಟ್ರೈನಿ ಐಎಎಸ್‌ ಅಧಿಕಾರಿ ಪೂಜಾ ಖೇಡ್ಕರ್‌ಗೆ ಮತ್ತೊಂದು ಸಂಕಷ್ಟ; ಜಾಮೀನು ಅರ್ಜಿ ವಜಾ

Road Accident
ಕರ್ನಾಟಕ56 mins ago

Road Accident : ತಿರುಪತಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಬ್ರೇಕ್‌ ಫೇಲ್‌; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Amazoan Fraud
Latest1 hour ago

Online Shopping Fraud: ಅಮೆಜಾನ್‌ನಲ್ಲಿ 55,000 ರೂ. ಮೊಬೈಲ್ ಫೋನ್ ಆರ್ಡರ್ ಮಾಡಿದವನಿಗೆ ಸಿಕ್ಕಿದ್ದು ಟೀ ಕಪ್!

Movies on Israel
ಸಿನಿಮಾ2 hours ago

Movies on Israel: ಪ್ಯಾಲೇಸ್ತಿನ್‌ ಉಗ್ರರ ವಿರುದ್ಧ ಇಸ್ರೇಲ್ ಸೇಡು! ಮೈನವಿರೇಳಿಸುವ ಈ ಸಿನೆಮಾಗಳನ್ನು ನೋಡಲೇಬೇಕು!

Rohit Sharma
ಪ್ರಮುಖ ಸುದ್ದಿ2 hours ago

Rohit Sharma : ಟಿ20 ನಿವೃತ್ತಿಯಲ್ಲ, ಅದು ವಿಶ್ರಾಂತಿ; ಕೌತುಕ ಮೂಡಿಸಿದ ರೋಹಿತ್ ಶರ್ಮಾ ಹೇಳಿಕೆ

BJP Padayatra
ಕರ್ನಾಟಕ2 hours ago

BJP Padayatra: ಬಿಜೆಪಿ ಪಾದಯಾತ್ರೆಗೆ ಎಚ್‌ಡಿಕೆ ಸಾಥ್;‌ ಪ್ರೀತಂ ಗೌಡ ಭಾಗಿ ಆಗ್ತಾರಾ? ವಿಜಯೇಂದ್ರ ಹೇಳಿದ್ದಿಷ್ಟು

karnataka Weather Forecast
ಮಳೆ2 hours ago

Karnataka Weather : ಫಲ್ಗುಣಿ ಅಬ್ಬರಕ್ಕೆ ಮುಳುಗಿದ ದೇಗುಲಗಳು; ಆಗಸ್ಟ್‌ 5ರವರೆಗೆ ಭಾರಿ ಮಳೆ ಸಾಧ್ಯತೆ

Paris Olympics
ಕ್ರೀಡೆ2 hours ago

Paris Olympics: ಕ್ವಾರ್ಟರ್‌ ಫೈನಲ್‌ನಲ್ಲಿ ಸಾತ್ವಿಕ್​-ಚಿರಾಗ್​ ಜೋಡಿಗೆ ಆಘಾತಕಾರಿ ಸೋಲು

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ7 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ7 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌