MUDA Scam: ಮುಡಾ ಜಮೀನಿನ ಸಂಪೂರ್ಣ ದಾಖಲೆಗಳನ್ನು ತೆರೆದಿಟ್ಟ ಸಿಎಂ ಸಿದ್ದರಾಮಯ್ಯ; ಇಲ್ಲಿದೆ ವಿವರ - Vistara News

ಪ್ರಮುಖ ಸುದ್ದಿ

MUDA Scam: ಮುಡಾ ಜಮೀನಿನ ಸಂಪೂರ್ಣ ದಾಖಲೆಗಳನ್ನು ತೆರೆದಿಟ್ಟ ಸಿಎಂ ಸಿದ್ದರಾಮಯ್ಯ; ಇಲ್ಲಿದೆ ವಿವರ

MUDA Scam: ತಗಾದೆಯಲ್ಲಿರುವ ಸರ್ವೆ ನಂಬರ್ 464ರ 3‌ ಎಕರೆ 16 ಗುಂಟೆ ಜಮೀನಿನ 1935ನೇ ಇಸವಿಯ ಬಳಿಕದ ಸಂಪೂರ್ಣ ದಾಖಲಾತಿಗಳನ್ನು (Documents) ಸಿಎಂ ಸಿದ್ದರಾಮಯ್ಯ ಮುಂದಿಟ್ಟಿದ್ದಾರೆ. ಅವ್ಯವಹಾರವೇ ನಡೆದಿಲ್ಲದ ಕಡೆಯಲ್ಲಿ ನಿರಾಧಾರ ಆರೋಪ ಮಾಡುವ ಮೂಲಕ ವಿಪಕ್ಷಗಳು ನನ್ನ ತೇಜೋವಧೆ ಮಾಡಲು ಯತ್ನಿಸುತ್ತಿವೆ ಎಂದಿದ್ದಾರೆ.

VISTARANEWS.COM


on

CM Siddaramaiah muda scam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಮುಡಾ ಜಮೀನು ಅವ್ಯವಹಾರ (MUDA Scam) ನಡೆಸಲಾಗಿದೆ ಎಂಬ ಬಿಜೆಪಿ- ಜೆಡಿಎಸ್‌ (BJP JDS) ಆರೋಪಗಳಿಗೆ ಪತ್ರಿಕಾಗೋಷ್ಠಿ (Pressmeet) ಮೂಲಕ ಸಿಎಂ ಸಿದ್ದರಾಮಯ್ಯ (CM Siddaramaiah) ಇಂದು ಪ್ರತ್ಯುತ್ತರ ನೀಡಿದ್ದಾರೆ. ತಗಾದೆಯಲ್ಲಿರುವ ಸರ್ವೆ ನಂಬರ್ 464ರ 3‌ ಎಕರೆ 16 ಗುಂಟೆ ಜಮೀನಿನ 1935ನೇ ಇಸವಿಯ ಬಳಿಕದ ಸಂಪೂರ್ಣ ದಾಖಲಾತಿಗಳನ್ನು (Documents) ಮುಂದಿಟ್ಟಿದ್ದಾರೆ. ಅವ್ಯವಹಾರವೇ ನಡೆದಿಲ್ಲದ ಕಡೆಯಲ್ಲಿ ನಿರಾಧಾರ ಆರೋಪ ಮಾಡುವ ಮೂಲಕ ವಿಪಕ್ಷಗಳು ನನ್ನ ತೇಜೋವಧೆ ಮಾಡಲು ಯತ್ನಿಸುತ್ತಿವೆ ಎಂದಿದ್ದಾರೆ.

ಸಿಎಂ ಮುಂದಿಟ್ಟ ಸಮಗ್ರ ವಿವರಗಳು ಹೀಗಿವೆ:

1) ಶ್ರೀ ನಿಂಗ ಬಿನ್ ಜವರ ಇವರ ವಾರಸುದಾರ ಪುತ್ರರಲ್ಲೊಬ್ಬರಿಂದ ಶ್ರೀ ಬಿ.ಎಂ ಮಲ್ಲಿಕಾರ್ಜುನ್ ರವರು ಭೂಮಿ ಖರೀದಿ ಮಾಡಿದ್ದು, ಈ ಕ್ರಯಕ್ಕೆ ಪಿ.ಟಿ.ಸಿ.ಎಲ್. ಕಾಯ್ದೆ ಅನ್ವಯಿಸುವುದಿಲ್ಲವೆ?

ಪ್ರತಿಕ್ರಿಯೆ:

2-8-1935 ರಲ್ಲಿ ಜವರನ ಮಗ ನಿಂಗ ಎನ್ನುವವರು ಮೈಸೂರು ತಾಲ್ಲೂಕು ಕಛೇರಿಗೆ ಜಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಆಗಿನ ಕೆಳ ಹಂತದ ಅಧಿಕಾರಿಗಳು 15-8-1935 ರಂದು ನಿಂಗ ಅವರು ಕೇಳಿರುವ ಜಮೀನುಗಳನ್ನು ಹರಾಜಿನ ಮೂಲಕ ವಿಲೇಪಡಿಸಬೇಕೆಂದು ವರದಿ ಸಲ್ಲಿಸಿದ್ದಾರೆ. ಅದರ ಪ್ರಕಾರ ಹರಾಜು ನಡೆಸಲು ಕ್ರಮವಹಿಸಿದ್ದಾರೆ. 26-9-1935 ರಂದು ಹರಾಜು ನೋಟೀಸು ಹೊರಡಿಸಿದ್ದಾರೆ. 3-10-1935 ರಂದು ಹರಾಜು ನಡೆಸಲಾಗುವುದೆಂದು ನೋಟೀಸಿನಲ್ಲಿ ತಿಳಿಸಿದ್ದಾರೆ. ಅದರ ಪ್ರಕಾರ ಹರಾಜು ನಡೆಸಲಾಗಿದೆ. ಹರಾಜು ನಡೆಸಿದ ಮೇಲೆ ಈ ರೀತಿ ದಾಖಲು ಮಾಡಿದ್ದಾರೆ. “ಕೆಸರೆ ಗ್ರಾಮದ ಸ. ನಂ 464 ರ 3.16 [ ಜಮೀನು] 3 ರೂಪಾಯಿ 8 ಆಣೆ ಉಳ್ಳ ಜಮೀನು ತಾಲ್ಕು —— ರಿಂದ 27-9-35 ನೇ —– ಎಡಿ 12 ನೇ ಮೈಸೂರು ಹುಕುಂ ಮೇರೆ ಬೀಳು —— ಹರಾಜು ಮಾಡಿಸಲಾಯ್ತು. 3 ರೂಪಾಯಿ ಹರಾಜು. 1 ರೂಪಾಯಿ ನಿಂಗ ಬಿನ್ ಜವರ, ಇದರ ಮೇಲೆ ಯಾರೂ ಸವಾಲು ಮಾಡಲಿಲ್ಲವಾಗಿ ಹರಾಜು ಅಖೈರು ಮಾಡಲಾಯ್ತು” ಎಂದು ದಾಖಲಿಸಲಾಗಿದೆ. 13-10-1935 ರಂದು ‘ Sale is confirmed” ಎಂದು ನಮೂದಿಸಿದ್ದಾರೆ. ಜಮೀನುಗಳನ್ನು ಹರಾಜಿನ ಮೂಲಕ ಪಡೆದಿರುವುದರಿಂದ ಸ್ವಯಾರ್ಜಿತ ಜಮೀನಾಗುತ್ತದೆಯೆ ಹೊರತು ಈ ಜಮೀನುಗಳ ಮೇಲೆ ಸರ್ಕಾರದ ಯಾವುದೇ ಹಿತಾಸಕ್ತಿ ಇರುವುದಿಲ್ಲ. ಹಾಗಾಗಿ ಈ ಜಮೀನುಗಳು ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ. ಈ ಕುರಿತು ಕಾಯ್ದೆಯು ಸ್ಪಷ್ಟವಾಗಿ ಹೇಳುತ್ತದೆ. ಅಸಂಖ್ಯಾತ ತೀರ್ಪುಗಳೂ ಇವೆ.

2) ಖರೀದಿ ಮಾಡಲು ಅವರು ಸರ್ಕಾರದಿಂದ ಅನುಮತಿ ಪಡೆದಿದ್ದರೆ?

ಪ್ರತಿಕ್ರಿಯೆ:

ಪಿಟಿಸಿಎಲ್ ಜಮೀನುಗಳು ಅಲ್ಲದ ಕಾರಣ ಸರ್ಕಾರದ ಅನುಮತಿ ಅಗತ್ಯವೂ ಇಲ್ಲ ಎಂಬುದು ಕಾನೂನಿನ ಜ್ಞಾನವಿರುವ ಪ್ರತಿಯೊಬ್ಬರಿಗೂ ತಿಳಿದಿರುತ್ತದೆ. ಆದರೆ ಬಿಜೆಪಿ, ಜೆಡಿಎಸ್ ನವರು ಮಾತ್ರ ಇದನ್ನು ರಾಜಕಾರಣಕ್ಕೆ ಬಳಸುತ್ತಿದ್ದಾರೆ.

3) ಈ ಜಮೀನುಗಳನ್ನು ಖರೀದಿ ಮಾಡುವಾಗ ವಾರಸುದಾರರನ್ನು ಈ ಭೂ ಕ್ರಯದಿಂದ ಏಕೆ ಹೊರಗಿಡಲಾಗಿತ್ತು? ಈ ಕ್ರಯವನ್ನು ಕಾನೂನಿನ ಪ್ರಕಾರ ಮಾಡಲಾಗಿದೆಯೇ? ಎಂಬ ಪ್ರಶ್ನೆಯನ್ನು ಬಿಜೆಪಿಯವರು ಎತ್ತಿದ್ದಾರೆ.

ಪ್ರತಿಕ್ರಿಯೆ:

— 10-4-1993 ರಲ್ಲಿ ಒಂದು ವಂಶವೃಕ್ಷ ಮಾಡಿಸಿದ್ದಾರೆ. ಅದರ ಪ್ರಕಾರ ನಿಂಗ ಬಿನ್ ಜವರ ಇವರಿಗೆ ಮೂರು ಜನ ಮಕ್ಕಳು. ಮೊದಲನೆ ಮಲ್ಲಯ್ಯ, ಎರಡನೆ ಮೈಲಾರಯ್ಯ ಮತ್ತು ಮೂರನೆ ಜೆ. ದೇವರಾಜು. ವಂಶವೃಕ್ಷದ ಪ್ರಕಾರ ಮಲ್ಲಯ್ಯ ಎನ್ನುವವರಿಗೆ ವಾರಸುದಾರರನ್ನು ತೋರಿಸಿಲ್ಲ. ಎರಡನೆ ಮೈಲಾರಯ್ಯ ಇವರಿಗೆ ಮಂಜುನಾಥ್‌ಸ್ವಾಮಿ ಎಂ ಎನ್ನುವವರಿದ್ದಾರೆ. ಆಗ ಅವರಿಗೆ 29 ವರ್ಷ ಎಂದು ನಮೂದಿಸಲಾಗಿದೆ. 3 ನೆಯವರು ದೇವರಾಜು ಎನ್ನುವವರು. [ಈ ದೇವರಾಜು ಎನ್ನುವವರೆ ಮಲ್ಲಿಕಾರ್ಜುನಸ್ವಾಮಿಯವರಿಗೆ ಜಮೀನು ಮಾರಾಟ ಮಾಡಿರುವುದು]. ಈ ವಂಶವೃಕ್ಷದಲ್ಲಿ ಮಲ್ಲಯ್ಯ, ದೇವರಾಜು, ಮೈಲಾರಯ್ಯನವರ ಪತ್ನಿ ಪುಟ್ಟಗೌರಮ್ಮ, ಎಂ ಮಂಜುನಾಥಸ್ವಾಮಿ ಇವರುಗಳು ಸಹಿ ಮಾಡಿದ್ದಾರೆ.

— ಜೆ ದೇವರಾಜು ಎನ್ನುವವರ ಹೆಸರಿಗೆ ಖಾತೆ ಮಾಡಿಕೊಡಲು ಈ ಮೇಲಿನ ಎಲ್ಲರೂ ಸಹಿ ಮಾಡಿ ಹೇಳಿಕೆ ಕೊಟ್ಟಿದ್ದಾರೆ. ಹೆಳಿಕೆಯಲ್ಲಿ ಹೀಗೆ ಬರೆಯಲಾಗಿದೆ. “ ಮೈಸೂರು ತಾಲ್ಲೂಕು ಕಸಬಾ ಹೋಬಳಿ ರಾಜಸ್ವ ನಿರೀಕ್ಷಕರ ರೂಬು ರೂಬು. ಡಿಟೊ ಮೈಸೂರು ಸಿಟಿ ಗಾಂಧಿನಗರ 8 ನೇ ಕ್ರಾಸ್ , ಮನೆ ನಂ 4038 ರ ನಿವಾಸಿಗಳಾದ ಲೇಟ್ ನಿಂಗಯ್ಯ ಬಿನ್ ಜವರ ರವರ ಮೊದಲನೆ ಮಗ ಮಲ್ಲಯ್ಯ ಮತ್ತು ಲೇಟ್ ಮೈಲಾರಯ್ಯನವರ ಹೆಂಡತಿ ಪುಟ್ಟಗೌರಮ್ಮ ಹಾಗೂ ಮಗ ಎಂ. ಮಂಜುನಾಥಸ್ವಾಮಿ ಆದ ನಾವುಗಳು ಹೆಳಿ ಬರೆಸಿದ ಹೇಳಿಕೆ.

— ಅದಾಗಿ ಮೈಸೂರು ತಾಲ್ಲೂಕು ಕಸಬಾ ಹೋಬಳಿ ಕೆಸರೆ ಗ್ರಾಮದ ಸರ್ವೆ ನಂ. 464 ರ 3-16 ಈ ಜಮೀನುಗಳಿಗೆ ಖಾತೆ ಮಾಡಿಕೊಡಲು ಲೇಟ್ ನಿಂಗ ಬಿನ್ ಜವರ ರವರ ಮೂರನೆ ಮಗ ಜೆ.ದೇವರಾಜು ನಮೂನೆ 19 ರ ಮೂಲಕ ಅರ್ಜಿ ಸಲ್ಲಿಸಿರುವುದು ಸರಿಯಷ್ಟೆ . ಸದರಿ ಜಮೀನು ನಿಂಗ ಬಿನ್ ಜವರರವರಿಗೆ ಸೇರಿದ್ದು ಅವರು ಫವತಿಯಾಗಿ ನಮ್ಮಗಳಿಗೆ ಸದರಿ ಜಮೀನಿನಲ್ಲಿ ಭಾಗ ಬರಬೇಕಾಗಿರುವುದಿಲ್ಲ. ಈಗಾಗಲೆ ನಾವು 462 ರಲ್ಲಿ 4 ಎಕರೆ ಜಮೀನನ್ನು ಪುಟ್ಟಮ್ಮ ಎನ್ನುವವರಿಗೆ ಮಾರಿರುತ್ತೇವೆ. ಆದ್ದರಿಂದ ಅರ್ಜಿದಾರರಾದ ಜೆ. ದೇವರಾಜುರವರಿಗೆ ಸದರಿ ಜಮೀನುಗಳನ್ನು ಖಾತೆ ಮಾಡುವುದರಲ್ಲಿ ನಮ್ಮಗಳ ತಕರಾರು ಏನೂ ಇರುವುದಿಲ್ಲವೆಂದು ಹೇಳಿ ಬರೆಯಿಸಿದ ಹೇಳಿಕೆ. ಓದಿಸಿ ಕೇಳಿ ಸರಿ ಎಂದು ಒಪ್ಪಿ ರುಜು ಮಾಡಿರುತ್ತೇವೆ. ಮಲ್ಲಯ್ಯ, ಪುಟ್ಟಗೌರಮ್ಮ ಇಬ್ಬರೂ ಕನ್ನಡದಲ್ಲಿ ಸಹಿ ಮಾಡಿರುತ್ತಾರೆ. ಎಂ.ಮಂಜುನಾಥಸ್ವಾಮಿ ಇಂಗ್ಲಿಷಿನಲ್ಲಿ ಸಹಿ ಮಾಡಿರುತ್ತಾರೆ. ಇದರ ಆಧಾರದ ಮೇಲೆ ಜೆ.ದೇವರಾಜು ಅವರ ಹೆಸರಿಗೆ ಈ ಜಮೀನುಗಳು ವರ್ಗಾವಣೆಯಾಗಿವೆ.

— ಹಾಗಾಗಿ ಕ್ರಯದಾರರ ವಾಸರಸುದಾರರ ಒಪ್ಪಿಗೆ ಇಲ್ಲದೆ ಖರೀದಿ ನಡೆದಿದೆ ಎಂಬ ಬಿ.ಜೆ.ಪಿ. ಯವರ ಆರೋಪವು ಸುಳ್ಳು. ಈ ಎಲ್ಲ ವ್ಯವಹಾರಗಳು 2010 ಕ್ಕಿಂತ ಮುಂಚೆ ನಡೆದಿವೆ. ಇವು ನನಗೆ ಸಂಬಧಪಟ್ಟಿದ್ದಲ್ಲ. ಆದರೂ ಸಹ ಬಿಜೆಪಿಯವರು ಈ ಸಣ್ಣ ವಿಚಾರವನ್ನು ರಾಜಕಾರಣಕ್ಕೆ ಬಳಸುತ್ತಿರುವ ಕಾರಣ ಈ ವಿಚಾರಗಳನ್ನು ಪ್ರಸ್ತಾಪಿಸಬೇಕಾಗಿದೆ.

4) ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡ ಮುಡಾದಿಂದ ಅಭಿವೃದ್ಧಿ ಹೊಂದಿದ ಜಾಗಗಳು ಎಷ್ಟು ಇವೆ? ಅಂತಹ ಡಿ-ನೋಟಿಫಿಕೇಶನ್ ಪ್ರಸ್ತಾವನೆಗಳಿಗೆ ಸರ್ಕಾರದ ಅನುಮತಿ ಪಡೆಯಲಾಗಿತ್ತೆ?

ಪ್ರತಿಕ್ರಿಯೆ

ಅದಕ್ಕೂ ಮೊದಲು ಪ್ಯಾರಾ ನಂ.6 ರಲ್ಲಿ ಬಿ.ಜೆಪಿ ಯವರು ಗೌರವಾನ್ವಿತ ರಾಜ್ಯಪಾಲರಿಗೆ ನೀಡಿರುವ ಮನವಿ/ ದೂರಿನಲ್ಲಿ ಸದರಿ ಜಮೀನುಗಳನ್ನು ಡಿ-ನೋಟಿಫಿಕೇಶನ್ ಮಾಡಲು ಮುಡಾದಿಂದ ಪ್ರಸ್ತಾವನೆ ಬಂದಿರಲಿಲ್ಲ, ಅರ್ಜಿದಾರರು ಅರ್ಜಿಯೂ ಕೊಟ್ಟಿರಲಿಲ್ಲ, ಆದರೂ ಡಿ.ನೋಟಿಫಿಕೇಶನ್ ನಡೆದಿದೆ ಎಂದು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ.

ದಾಖಲೆಗಳನ್ನು ಪರಿಶೀಲಿಸಿದಾಗ ಕಂಡು ಬಂದ ಸತ್ಯಾಂಶಗಳು:

ಬಿಜೆಪಿಯವರು ಸಂಪೂರ್ಣವಾಗಿ ತಪ್ಪು ಮಾಹಿತಿಯನ್ನು ಗೌರವಾನ್ವಿತ ರಾಜ್ಯಪಾಲರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

— ಸದರಿ ಜಮೀನುಗಳನ್ನು ಭೂಸ್ವಾಧೀನ ಮಾಡಲು 18-09-1992 ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ, ಅದು ಬಹಳ ವರ್ಷಗಳಾದರೂ ಇತ್ಯರ್ಥವಾಗಿರುವುದು ಕಂಡುಬರುವುದಿಲ್ಲ. ಆಗ, ಜಿ.ದೇವರಾಜು, ರೋಡ್ ನಂ.3406, 4ನೇ ಮುಖ್ಯ ರಸ್ತೆ, ಲಷ್ಕರ್ ಮೊಹಲ್ಲಾ ಉರ್ದು ನಗರ, ಮೈಸೂರು ರಸ್ತೆ ಇವರು 13-08-1996 ರಂದು ತಮ್ಮ ಜಮೀನುಗಳನ್ನು ಭೂಸ್ವಾಧೀನದಿಂದ ಕೈಬಿಡುವಂತೆ ಅರ್ಜಿ ಬರೆದಿದ್ದಾರೆ.

— ಈ ಜಮೀನುಗಳ ಅಂತಿಮ ಅಧಿಸೂಚನೆಯಾಗಿದ್ದು 20-08-1997 ರಂದು. ಅದಕ್ಕೂ ಮೊದಲೇ ಈ ಅರ್ಜಿ ಬರೆದಿದ್ದಾರೆ. ಅರ್ಜಿಯ ಮೇಲೆ ಅಂದಿನ ನಗರಾಭಿವೃದ್ಧಿ ಸಚಿವರಾಗಿದ್ದ ಶ್ರೀ ಬಿ.ಎನ್. ಬಚ್ಚೇಗೌಡ ಇವರು ಮನವಿ ಪರಿಶೀಲಿಸಿ ಸ್ಥಳೀಯ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಅಭಿಪ್ರಾಯದೊಂದಿಗೆ ಮಂಡಿಸಿ ಎಂದು ಕಾರ್ಯದರ್ಶಿಯವರಿಗೆ ಟಿಪ್ಪಣಿ ಬರೆದಿದ್ದಾರೆ. ಅದನ್ನು ಆಧರಿಸಿ, ಒಂದು ತಿಂಗಳಾದ ಮೇಲೆ ಪತ್ರ ಮುಡಾ ಆಯುಕ್ತರಿಗೆ ಹೋಗಿದೆ.

— ಮುಡಾದಲ್ಲಿ 24-07-1997 ರಂದು ಈ ಜಾಗ ಭೂಸ್ವಾಧೀನದಿಂದ ಕೈಬಿಡಲು ನಿರ್ಣಯ ಪಾಸ್ ಮಾಡಿದ್ದಾರೆ. 30-08-1997ರಂದು ಸದರಿ ಜಾಗಗಳನ್ನು ಭೂಸ್ವಾಧೀನದಿಂದ ಕೈಬಿಡಲು ಮುಡಾ ಆಯುಕ್ತರು ಸರ್ಕಾರದ ಕಾರ್ಯದರ್ಶಿಗಳಿಗೆ ಶಿಫಾರಸ್ಸು ಮಾಡಿದ್ದಾರೆ.

— ಸದರಿ ಶಿಫಾರಸ್ಸನ್ನು ಆಧರಿಸಿ, ಭೂ ಸ್ವಾಧೀನ ಮಾಡಿದ ಜಮೀನುಗಳನ್ನು ಡಿ-ನೋಟಿಫೈ ಮಾಡಲು ಆಗ ರೆವಿನ್ಯೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ. ವಿ ಬಾಲಸುಬ್ರಮಣ್ಯನ್ ಅವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿ ಇರುವುದು ದಾಖಲೆಗಳಿಂದ ತಿಳಿದು ಬರುತ್ತದೆ. ವಿ.ಗೋವಿಂದರಾಜು ಸೆಕ್ರೆಟರಿ-2, ನಗರಾಭಿವೃದ್ಧಿ ಇಲಾಖೆ ಮತ್ತು ಕೆ. ಎಂ. ತಿಮ್ಮಯ್ಯ, ಕಾನೂನು ಇಲಾಖೆಯ ಅಡಿಶನಲ್ ಸೆಕ್ರೆಟರಿ ಒಳಗೊಂಡ ತ್ರಿಸದಸ್ಯ ಸಮಿತಿಯು ಪರಿಶೀಲಿಸಿ ಡಿ ನೋಟಿಫೈ ಮಾಡಿದೆ.

— ಈ 3 ಜನರ ಸಮಿತಿಯು ಬೆಂಗಳೂರಿನಲ್ಲಿ ಬಿಡಿಎಯ ಯಡಿಯೂರು- ನಾಗಸಂದ್ರ, ಮೈಸೂರಿನ ಮುಡಾದ ಕೆಸರೆ ಸೇರಿದಂತೆ ಸುಮಾರು 19 ಕಡೆ ಡಿನೋಟಿಫೈ ಮಾಡಲು ಅನುಮೋದನೆ ಮಾಡಿರುವಂತೆ ಕಾಣುತ್ತಿದೆ. ಈ ಸಮಿತಿಯು “ The Committee noted that the Mysore UDA in its meeting held on 24-7-97 has resolved to recommend to government to drop the acquisition proceedings in respect of land mentioned above since this land is situated at one end of the scheme. Further it noted that in this land, the Karnataka urban water supply and drainage Board has not prepared any major plan for their scheme. No plans have been prepared for Melapura water supply scheme also.

— The final notification was issued during April — and August 1997 for acquisition of the land by MUDA for its scheme. No award has been passed yet. In view of the fact that if the land is denotified the scheme will not get affected and no award has been passed and also the KUWS and dB has not prepared any major plan in the land, the committee accepted the resolution of the MUDA and recommended for denotification”. ಎಂದು ದಾಖಲಿಸಿದ್ದಾರೆ. ಈ ಪ್ಯಾರಾದಲ್ಲಿ ಅರ್ಥವಾಗುವ ಅಂಶಗಳೆAದರೆ ಈ ಭೂಮಿ ಬಡಾವಣೆಯ ಕೊನೆಯಲ್ಲಿದೆ ಎಂಬುದು ಕಂಡು ಬರುತ್ತದೆ. ಇಲ್ಲಿ ಯಾವ ಅಭಿವೃದ್ಧಿಯೂ ಆಗಿಲ್ಲ. ನಗರ ಕುಡಿಯುವ ನೀರು ಮತ್ತು ಒಳಚರಂಡಿ ಮಂಡಳಿಯವರು ಈ ಜಮೀನನಲ್ಲಿ ಯಾವುದೇ ಪ್ಲಾನ್ ಸಿದ್ಧಪಡಿಸಿಲ್ಲ. ಈ ಜಮೀನುಗಳನ್ನು ಡಿ ನೋಟಿಫೈ ಮಾಡುವುದರಿಂದ ಯಾವುದೇ ಸಮಸ್ಯೆಗಳಾಗುವುದಿಲ್ಲ. ಈ ಕುರಿತು ಮುಡಾದಲ್ಲೂ ನಿರ್ಣಯವಾಗಿದೆ ಎಂದು ಹೇಳಿ ಡಿನೋಟಿಫೈ ಮಾಡಲು ತೀರ್ಮಾನಿಸಿದ್ದಾರೆ. ಇದರ ಅಧಾರದ ಮೇಲೆ ಈ ಭೂಮಿಯನ್ನು ಡಿನೋಟಿಫೈ ಮಾಡಿರುವುದು ಕಂಡುಬರುತ್ತದೆ.

— ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 1984 ರಿಂದ ಒಟ್ಟು 13 ಬಡಾವಣೆಗಳಲ್ಲಿ 235- 30 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈ ಬಿಡಲಾಗಿದೆ.

— ಇಲ್ಲಿ ಕಾಮನ್ ಸೆನ್ಸಿನ ಪ್ರಶ್ನೆಯೊಂದಿದೆ. ದೇವರಾಜು ಎನ್ನುವವರು 13-8-1996 ರಲ್ಲಿ ಅರ್ಜಿ ಕೊಡುತ್ತಾರೆ. ನಗರಾಭಿವೃದ್ಧಿ ಇಲಾಖೆಯವರು 3-9-1996 ರಂದು ಮೂಡಾ ಆಯುಕ್ತರಿಗೆ ಪತ್ರ ಬರೆದು ವರದಿ ಕೇಳುತ್ತಾರೆ. ಅದಾಗಿ 30-8-1997 ಕ್ಕೆ ಮೂಡಾದವರು ಸರ್ಕಾರಕ್ಕೆ ವರದಿ ನೀಡಿದ್ದಾರೆ. ಕೇವಲ ವರದಿ ನೀಡುವುದಕ್ಕೆ ಒಂದು ವರ್ಷ ತೆಗೆದುಕೊಂಡಿದ್ದಾರೆ. ಅದಾದ ಮೇಲೆ ವಿ.ಬಾಲಸುಬ್ರಮಣ್ಯನ್ ಎಂಬ ಟಫ್ ಅಧಿಕಾರಿಯವರ ಅಧ್ಯಕ್ಷತೆಯಲ್ಲಿ ಈ ಜಮೀನುಗಳೂ ಸೇರಿದಂತೆ ರಾಜ್ಯದ ಸುಮಾರು 19 ಕಡೆ ಭೂ ಸ್ವಾಧೀನದಿಂದ ಕೈ ಬಿಡಲು ತೀರ್ಮಾನಿಸಿದ್ದಾರೆ. ಅಂತಿಮವಾಗಿ 18-5-1998 ರಂದು ಭೂ ಸ್ವಾಧೀನದಿಂದ ಕೈ ಬಿಟ್ಟಿದ್ದಾರೆ. ಈಗ ನಿಮ್ಮನ್ನು ಕೇಳಬಯಸುತ್ತೇನೆ. ಮುಖ್ಯಮಂತ್ರಿಯೊ, ಉಪಮುಖ್ಯಮಂತ್ರಿಯೊ ಅಥವಾ ಮಂತ್ರಿಯೊ, ಎಮ್.ಎಲ್.ಎ ಯೊ ಇದ್ದರೆ ಈ ಪ್ರಕ್ರಿಯೆ ಮುಗಿಸಲು ಎರಡು ವರ್ಷ ತೆಗೆದುಕೊಳ್ಳುತ್ತಿದ್ದರೆ?

5) ಭೂಮಿಯನ್ನು ಸಂಪೂರ್ಣವಾಗಿ ಸರ್ಕಾರ ಸ್ವಾಧೀನಪಡಿಸಿಕೊಂಡಾಗ ಡಿ-ನೋಟಿಫಿಕೇಶನ್ ಮಾಡಬಹುದೇ?

6) ಅಂತಹ ಅಭಿವೃದ್ಧಿ ಹೊಂದಿದ ಅಥವಾ ಭಾಗಶಃ ಅಭಿವೃದ್ಧಿ ಪಡಿಸಿದ ಭೂಮಿಯನ್ನು ಮಾರಾಟ ಮಾಡಬಹುದೇ? ಅದನ್ನು ಡಿ-ನೋಟಿಫೈ ಮಾಡಿದಾಗ ಭೂಮಿಯನ್ನು ಯಾರು ಹೊಂದಿದ್ದರು?

ಪ್ರತಿಕ್ರಿಯೆ:

  1. ಯಾವುದೇ ಜಾಗವನ್ನು ಭೂಸ್ವಾಧೀನ ಮಾಡಿ ಭೂಮಿಯ ಪರಿಹಾರ ಪಾವತಿಸಿ ಆ ಭೂಮಿಯ ಸಂಪೂರ್ಣ ಸ್ವಾಧೀನವನ್ನು ತೆಗೆದುಕೊಳ್ಳದ ಹೊರತು ಭೂಸ್ವಾಧೀನ ಪ್ರಕ್ರಿಯೆಯು ಪೂರ್ಣವಾಗುವುದಿಲ್ಲ ಎಂಬುದೆ ಕುರಿತು ಅನೇಕ ತೀರ್ಪುಗಳು ಇವೆ ಮತ್ತು ಸರ್ಕಾರದ ಕ್ರಮವೂ ಆಗಿದೆ. ಇಷ್ಟಕ್ಕೂ ಈ ಜಮೀನುಗಳನ್ನು 18-05-1998 ರಲ್ಲಿ ಕೈಬಿಡಲಾಗಿದೆ.
  2. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 1984 ರಿಂದ ಒಟ್ಟು 13 ಬಡಾವಣೆಗಳಲ್ಲಿ 235- 30 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈ ಬಿಡಲಾಗಿದೆ.
  3. ಹಾಗಾಗಿ ಭುಸ್ವಾಧೀನದಿಂದ ಭೂಮಿಗಳನ್ನು ಕೈಬಿಟ್ಟಾಗ ಈ ಜಮೀನುಗಳನ್ನು ಮುಡಾ ಪೊಸೆಷನ್ ತೆಗೆದುಕೊಳ್ಳದಿರುವುದು ಕಂಡುಬರುತ್ತದೆ.
  4. ಹಾಗಾಗಿ ಬಿಜೆಪಿಯವರು ಎತ್ತಿರುವ ಈ ಪ್ರಶ್ನೆ ಕೂಡ ಅಸಂಗತ ಪ್ರಶ್ನೆಯಾಗಿದೆ.

7) ಸರ್ಕಾರದ ಅನುಮತಿಯಿಲ್ಲದೆ 50:50 ಯೋಜನೆಯನ್ನು ಹೇಗೆ ಜಾರಿಗೆ ಬಂತು?

ಪ್ರತಿಕ್ರಿಯೆ:

— ನಮ್ಮ ಕುಟುಂಬಕ್ಕೆ ಈ ಜಮೀನುಗಳು ಬರುವ ವೇಳೆಗಾಗಲೆ ದಿನಾಂಕ: 15-7-2005 ರಲ್ಲಿ ಭೂಪರಿವರ್ತನೆಯಾಗಿವೆ. ಕೃಷಿ ಉದ್ದೇಶದಿಂದ ವಸತಿ ಉದ್ದೇಶಕ್ಕೆ ಭೂ ಪರಿವರ್ತನೆಯಾಗಿವೆ.

— ಇದಾದ ಮೇಲೆ ದಿನಾಂಕ: 23-6-2014 ರಲ್ಲಿ ಮತ್ತು 25-10-2021 ರಲ್ಲಿ ಭೂ ಪರಿಹಾರಕ್ಕೆ ಬದಲಾಗಿ ಪರ್ಯಾಯ ಜಾಗವನ್ನು ಕೊಡಬೇಕೆಂದು ಅರ್ಜಿ ಹಾಕಲಾಗಿದೆ.

— ನನ್ನ ಪತ್ನಿ ತನ್ನ ನಿವೇಶನ/ ಜಾಗ ಕೊಡಿ ಎಂದು ನನ್ನ ಜಾಗವನ್ನು ಮುಡಾ ಬಳಸಿಕೊಂಡಿದೆ. ಅದಕ್ಕೆ ಪರ್ಯಾಯ ಜಾಗ ಕೊಡಿ ಎಂದು ಕೇಳಿದ್ದಾರೆ. ಮುಡಾದವರು ಕೊಟ್ಟಿದ್ದಾರೆ.

— ಭೂ ಸ್ವಾಧೀನ ಪಡಿಸದೆ ಭೂಮಿಯನ್ನು ಉಪಯೋಗಿಸಿಕೊಂಡ ಪ್ರಕರಣಗಳಲ್ಲಿ ಹಾಗೆ ಉಪಯೋಗಿಸಲಾದ ಭೂಮಿಗೆ ಪರ್ಯಾಯವಾಗಿ ಶೇ. 50:50 ರ ಅನುಪಾತದಲ್ಲಿ ಜಾಗವನ್ನು ಕೊಡಬೇಕೆಂದು 14-9-2020 ರಲ್ಲಿ ನಿರ್ಣಯ ಮಾಡಿದ್ದಾರೆ. ಈ ನಿರ್ಣಯವನ್ನು ಸರ್ಕಾರ ರದ್ದು ಮಾಡಿದೆ.

— ಅಷ್ಟಕ್ಕೆ ಸುಮ್ಮನಿರದೆ 7-12-2020 ರಂದು ಮತ್ತೆ ಚರ್ಚೆ ಮಾಡಿ ಇನ್ನೊಂದು ನಿರ್ಣಯ ಮಾಡಿದ್ದಾರೆ. ಆ ಸಭೆಯಲ್ಲಿ ಜಿ. ಟಿ. ದೇವೇಗೌಡ ಅವರು “ ಶೇ. 50:50ರ ಅನುಪಾತದಲ್ಲಿ ಒಪ್ಪಿಕೊಳ್ಳುವ ರೈತರಿಗೆ ಅದೇ ರೀತಿ ಸೂಕ್ತ ನಿರ್ಣಯಗಳನ್ನು ಕೈಗೊಳ್ಳಲು ಶೇ.50;50 ರ ಅನುಪಾತಕ್ಕೆ ಒಪ್ಪಿಕೊಳ್ಳದ ಹಾಗೂ ಸಹಮತಿ ಸೂಚಿಸದ ಪ್ರಕರಣಗಳಲ್ಲಿ ಪ್ರತ್ಯೇಕ ಸಭೆ ಕರೆಯಲು ಸೂಚಿಸಿದರು”. ಎಂದು ದಾಖಲಾಗಿದೆ.

— ಮರಿತಿಬ್ಬೇಗೌಡ ಅವರು, “ಶೇ.50:50 ಅನುಪಾತದಲ್ಲಿ ರೈತರನ್ನು ಬಲವಂತಪಡಿಸಲು ಬರುವುದಿಲ್ಲವೆಂದು ಈ ಕಾರಣ ರೈತರ ಕೋರಿಕೆಯನ್ನು ಪರಿಗಣಿಸಬೇಕು, ಭೂ ಸ್ವಾಧೀನಪಡಿಸದೇ ಉಪಯೋಗಿಸಿಕೊಂಡಿರುವ ಸ್ವತ್ತುಗಳಿಗೆ ಅಷ್ಟೇ ವಿಸ್ತೀರ್ಣದ ಸ್ವತ್ತುಗಳನ್ನು ನೀಡುವುದು ಸೂಕ್ತವೆಂದು” ಹೇಳಿದ್ದಾರೆ. ಸಭೆಯಲ್ಲಿ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಸಂದೇಶ್ ನಾಗರಾಜ್ ಮುಂತಾದವರು ಮಾತನಾಡಿದ್ದಾರೆ.

— ಅಂತಿಮವಾಗಿ ಈ ರೀತಿ ನಿರ್ಣಯಿಸಿದ್ದಾರೆ, “ಅಂತಿಮ ಚರ್ಚೆ ನಡೆದು, ಇನ್ನು ಮುಂದೆ ಪ್ರಾಧಿಕಾರ ಭೂ ಸ್ವಧೀನಪಡಿಸದೇ ಉಪಯೋಗಿಸಿಕೊಂಡಿರುವಂತಹ ಪ್ರಕರಣಗಳಲ್ಲಿ ಭೂ ಪರಿಹಾರ ರೂಪದಲ್ಲಿ ಪರಿಹಾರವಾಗಿ ಅಭಿವೃದ್ಧಿ ಪಡಿಸಿದ ಒಟ್ಟು ವಿಸ್ತೀರ್ಣದ ಪೈಕಿ ಶೇ.50 ವಿಸ್ತೀರ್ಣದ ಅಭಿವೃದ್ಧಿ ಪಡಿಸಿದ ಜಾಗವನ್ನು ಒಪ್ಪುವ ಪ್ರಕರಣಗಳಲ್ಲಿ ನೀಡಬಹುದೆಂದು” ನಿರ್ಣಯಿಸಲಾಗಿದೆ.

— ಇದೆಲ್ಲ ಆದ ಮೇಲೆ ನನ್ನ ಪತ್ನಿ ದಿನಾಂಕ; 23-10-2021 ರಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ, “ನನ್ನ ಜಮೀನನ್ನು ಪ್ರಾಧಿಕಾರವು ಉಪಯೋಗಿಸಿಕೊಂಡಿರುವ ಬಾಬ್ತು ಇದುವರೆವಿಗೂ ಯಾವುದೇ ಪರಿಹಾರವನ್ನು ನೀಡಿರುವುದಿಲ್ಲ. ಆದ್ದರಿಂದ ನನಗೆ ಮೇಲಿನ ಜಮೀನಿಗೆ ಪರಿಹಾರವಾಗಿ ಪ್ರಸ್ತುತ ಶೇ. 50:50ರ ಅನುಪಾತದಲ್ಲಿ ಕೊಡಿ ಎಂದು ಕೇಳಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದವರು ಇದನ್ನೆಲ್ಲ ಪರಿಶೀಲಿಸಿ ನನ್ನ ಪತ್ನಿಯಿಂದ ಪರಿತ್ಯಾಜನ ಪತ್ರ ಬರೆಸಿಕೊಂಡು 3-16 ಗುಂಟೆ ಜಮೀನುಗಳ ಹಕ್ಕುಗಳನ್ನು ಪ್ರಾಧಿಕಾರದ ಹೆಸರಿಗೆ ವರ್ಗಾಯಿಸಿಕೊಂಡು ದಿನಾಂಕ 30-12-2021 ರಂದು ಕೆಸರೆ ಗ್ರಾಮದ ಸ.ನಂ. 464 ರ 3-16 ಎಕರೆ ಜಮೀನಿಗೆ ಬದಲಿ ಜಾಗ ನೀಡುವ ಬಗ್ಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಆಯುಕ್ತರು ಅಧಿಕೃತ ಜ್ಞಾಪನ ಆದೇಶ ಹೊರಡಿಸಿ 38,284 ಚದರ ಅಡಿ ಅಳತೆಗೆ ನಿವೇಶನಗಳನ್ನು ಪರಿಹಾರ ರೂಪದಲ್ಲಿ ಮಂಜೂರು ಮಾಡಿರುತ್ತಾರೆ.

— ಇದರಲ್ಲಿ ಕಾನೂನು ವಿದ್ಯಾರ್ಥಿಯಾದ ನನಗೆ ಹಾಗೂ 40 ವರ್ಷಗಳಿಂದ ಸುಧೀರ್ಘ ರಾಜಕಾರಣದಲ್ಲಿ ಇರುವ ನನಗೆ ಒಂದು ನಯಾಪೈಸೆಯಷ್ಟು ತಪ್ಪುಗಳೂ ಕಂಡುಬರುತ್ತಿಲ್ಲ. ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಕೂಡ ಮಾಧ್ಯಮದ ಮೂಲಕ ಈ ನಾಡಿನ ಜನರ ಮುಂದೆ ಇಡುತ್ತಿದ್ದೇನೆ.

— ಈ ವಿಚಾರಗಳನ್ನೆಲ್ಲಾ ಪರಿಶೀಲಿಸಲು ಜಸ್ಟೀಸ್ ಪಿ.ಎನ್. ದೇಸಾಯಿ ಯವರ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ವಿಚಾರಣಾ ಆಯೋಗವು ಈ ಕುರಿತು ತನಿಖೆ ಪ್ರಾರಂಭಿಸಿದೆ.

— ಬಿಜೆಪಿ, ಜೆಡಿಎಸ್ ನವರು ಮುಡಾದ ವಿಚಾರದಲ್ಲೂ, ವಾಲ್ಮೀಕಿ ಹಗರಣದಲ್ಲೂ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: MUDA Scam: ಬಿಜೆಪಿಯವರದು ಮನೆಮುರುಕ ರಾಜಕೀಯ; ಮುಡಾ ಜಮೀನಿನಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ: ಸಿಎಂ ಸಿದ್ದರಾಮಯ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Shalini Rajneesh: ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ನೇಮಕ; ಪತಿ ಜಾಗಕ್ಕೆ ಪತ್ನಿಯ ಆಯ್ಕೆ

Shalini Rajneesh: ರಜನೀಶ್‌ ಗೋಯಲ್‌ ಅವರು ಸೇವಾ ನಿವೃತ್ತಿ ಹೊಂದುತ್ತಿದ್ದಾರೆ. ಜುಲೈ 31ಕ್ಕೆ ಅವರ ಅಧಿಕಾರದ ಅವಧಿ ಮುಗಿಯಲಿದೆ. ಇನ್ನು, ಶಾಲಿನಿ ರಜನೀಶ್‌ ಅವರು ಈಗ ಅಭಿವೃದ್ಧಿ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ ಜ್ಯೇಷ್ಠತೆಯ ಆಧಾರದ ಮೇಲೆ ಮುಂಬಡ್ತಿ ನೀಡಲಾಗಿದೆ.

VISTARANEWS.COM


on

shalini rajneesh
Koo

ಬೆಂಗಳೂರು: ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್‌ ಅಧಿಕಾರಿ ಶಾಲಿನಿ ರಜನೀಶ್‌ (Shalini Rajneesh) ಅವರನ್ನು ಕರ್ನಾಟಕ ಸರ್ಕಾರ (Chief Secretary Of Karnataka) ನೇಮಕ ಮಾಡಿದೆ. ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯಲ್‌ (Rajneesh Goel) ಅವರ ಅಧಿಕಾರದ ಅವಧಿಯು ಜುಲೈ 31ಕ್ಕೆ ಮುಗಿಯುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಿಸಿದೆ. ಶಾಲಿನಿ ರಜನೀಶ್‌ ಅವರು ರಜನೀಶ್‌ ಗೋಯಲ್‌ ಅವರ ಪತ್ನಿ ಎಂಬುದು ಗಮನಾರ್ಹ ಸಂಗತಿಯಾಗಿದೆ.

ರಜನೀಶ್‌ ಗೋಯಲ್‌ ಅವರು ಸೇವಾ ನಿವೃತ್ತಿ ಹೊಂದುತ್ತಿದ್ದಾರೆ. ಜುಲೈ 31ಕ್ಕೆ ಅವರ ಅಧಿಕಾರದ ಅವಧಿ ಮುಗಿಯಲಿದೆ. ಇನ್ನು, ಶಾಲಿನಿ ರಜನೀಶ್‌ ಅವರು ಈಗ ಅಭಿವೃದ್ಧಿ ಆಯುಕ್ತೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಅವರಿಗೆ ಜ್ಯೇಷ್ಠತೆಯ ಆಧಾರದ ಮೇಲೆ ಮುಂಬಡ್ತಿ ನೀಡಲಾಗಿದೆ. ರಜನೀಶ್‌ ಗೋಯಲ್‌ ಅವರ ನಂತರ ಜ್ಯೇಷ್ಠತೆಯ ಆಧಾರದ ಮೇಲೆ ರೇಸ್‌ನಲ್ಲಿ ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ಅಜಯ್‌ ಸೇಠ್‌ ಹಾಗೂ ಶಾಲಿನಿ ರಜನೀಶ್‌ ಅವರಿದ್ದರು. ಈಗ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರಿಗೇ ಮಣೆ ಹಾಕಿದೆ. 2027ರ ಜೂನ್‌ಗೆ ಇವರು ನಿವೃತ್ತಿ ಹೊಂದಲಿದ್ದಾರೆ.

Rajneesh Goel
Rajneesh Goel

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸಚಿವ ಎಚ್‌.ಕೆ. ಪಾಟೀಲ್‌ ಅವರು ಶಾಲಿನಿ ರಜನೀಶ್‌ ಅವರ ನೇಮಕದ ಕುರಿತು ಮಾಹಿತಿ ನೀಡಿದರು. “ರಜನೀಶ್‌ ಗೋಯಲ್‌ ಅವರ ಅಧಿಕಾರದ ಅವಧಿ ಮುಗಿದ ಕಾರಣ ಅವರನ್ನು ಬೀಳ್ಕೊಡಲಾಗುತ್ತದೆ. ಇನ್ನು, ರಾಜ್ಯದ ಮುಖ್ಯ ಕಾರ್ಯದರ್ಶಿಯನ್ನಾಗಿ ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಲಾಗಿದೆ” ಎಂಬುದಾಗಿ ಅವರು ತಿಳಿಸಿದರು.

ಅಜಯ್‌ ಸೇಠ್‌ ಅವರು ಇನ್ನು 11 ತಿಂಗಳು ಮಾತ್ರ ಅಧಿಕಾರದಲ್ಲಿ ಇರುವುದರಿಂದ ರಾಜ್ಯ ಸರ್ಕಾರವು ಶಾಲಿನಿ ರಜನೀಶ್‌ ಅವರನ್ನು ನೇಮಕ ಮಾಡಿದೆ ಎಂದು ತಿಳಿದುಬಂದಿದೆ. ಅಭಿವೃದ್ಧಿ ಆಯುಕ್ತರಾಗಿ ಶಾಲಿನಿ ರಜನೀಶ್‌ ಅವರ ಕಾರ್ಯವೈಖರಿಯು ರಾಜ್ಯ ಸರ್ಕಾರಕ್ಕೆ ಇಷ್ಟವಾಗಿದೆ. ಇದೇ ಕಾರಣಕ್ಕಾಗಿ ನೇಮಕ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಂಡ ದ್ವಿತೀಯ ದಂಪತಿ ಎಂಬ ಖ್ಯಾತಿಗೆ ಶಾಲಿನಿ ರಜನೀಶ್‌ ಹಾಗೂ ರಜನೀಶ್‌ ಗೋಯಲ್‌ ಪಾತ್ರರಾದರು. ಇದಕ್ಕೂ ಮೊದಲು ಬಿ.ಕೆ.ಭಟ್ಟಾಚಾರ್ಯ ಹಾಗೂ ತೆರೇಸಾ ಭಟ್ಟಾಚಾರ್ಯ ದಂಪತಿಯು ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿದ್ದರು.

ಇದನ್ನೂ ಓದಿ: Lokayukta: ಲೋಕಾಯುಕ್ತ ಎಡಿಜಿಪಿಯಾಗಿ ಮನೀಶ್‌ ಕರ್ಬೀಕರ್‌, ಅಗ್ನಿಶಾಮಕ ದಳ ಡಿಜಿಪಿಯಾಗಿ ಪ್ರಶಾಂತ್ ಕುಮಾರ್ ಥಾಕೂರ್‌ ನೇಮಕ

Continue Reading

ದೇಶ

Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

Kargil Vijay Diwas 2024: 1999 ರ ಯುದ್ಧದ ಸಮಯದಲ್ಲಿ, ಆಗ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮೋದಿ ಅವರು ಸೈನಿಕರಿಗೆ ಅಗತ್ಯ ವಸ್ತುಗಳನ್ನು ಸಾಗಿಸುತ್ತಿದ್ದರು. ಒಮ್ಮೆ, ಅವರು ಅಗತ್ಯ ಸಾಮಗ್ರಿಗಳೊಂದಿಗೆ Mi-17 ಹೆಲಿಕಾಪ್ಟರ್ ಅನ್ನು ಹತ್ತಿ ಯುದ್ಧಭೂಮಿಯನ್ನು ತಲುಪಿದ್ದರು.

VISTARANEWS.COM


on

Kargil Vijay Diwas 2024
Koo

ಲಡಾಖ್‌: ಕಾರ್ಗಿಲ್‌ ವಿಜಯ ದಿವಸ(Kargil Vijay Diwas 2024)ಕ್ಕೆ ಇಂದಿಗೆ 25ವರ್ಷ ಸಂದಿದೆ. ಈ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಡ್ರಾಸ್‌ನಲ್ಲಿರುವ ಕಾರ್ಗಿಲ್‌ ಯುದ್ಧ ಸ್ಮಾರಕ(Kargil War Memorial)ಕ್ಕೆ ಭೇಟಿ ಕೊಟ್ಟು ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಪ್ರಧಾನಿ ಮೋದಿಯ ಹಳೆಯ ಫೊಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮೋದಿ ಆರ್ಕೈವ್‌ ಎಂಬ ಎಕ್ಸ್‌ ಖಾತೆ ʼಎ ಪಿಲಿಗ್ರಿಮೇಜ್‌ ಲೈಫ್‌ಟೈಂʼ ಎಂಬ ಶೀರ್ಷಿಕೆಯಲ್ಲಿ ಕಾರ್ಗಿಲ್‌ ಯುದ್ಧದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯ ಫೋಟೋ, ವಿಡಿಯೋ ಮತ್ತು ಆಡಿಯೋ ರೆಕಾರ್ಡಿಂಗ್‌ಗಳನ್ನು ಹಂಚಿಕೊಳ್ಳಲಾಗಿದೆ. 1999 ರ ಯುದ್ಧದ ಸಮಯದಲ್ಲಿ, ಆಗ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಮೋದಿ ಅವರು ಸೈನಿಕರಿಗೆ ಅಗತ್ಯ ವಸ್ತುಗಳನ್ನು ಸಾಗಿಸುತ್ತಿದ್ದರು. ಒಮ್ಮೆ, ಅವರು ಅಗತ್ಯ ಸಾಮಗ್ರಿಗಳೊಂದಿಗೆ Mi-17 ಹೆಲಿಕಾಪ್ಟರ್ ಅನ್ನು ಹತ್ತಿ ಯುದ್ಧಭೂಮಿಯನ್ನು ತಲುಪಿದ್ದರು.

ಸೈನಿಕರನ್ನುದ್ದೇಶಿಸಿ ಮಾತನಾಡುವಾಗ ಸೈನಿಕರು ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಬಲಿಷ್ಠ ನಾಯಕತ್ವದ ಮನ್ನಣೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಅವರಿಗೆ, ಇದು ಎಷ್ಟು ಪ್ರಬಲವಾದ ರಾಜಕೀಯ ಇಚ್ಛಾಶಕ್ತಿ ಮತ್ತು ನಾಯಕತ್ವವು ಸೈನಿಕರನ್ನು ಧೈರ್ಯಶಾಲಿಗಳಾಗಿರಲು ಮತ್ತು ದೊಡ್ಡ ತ್ಯಾಗಗಳನ್ನು ಮಾಡಲು ಪ್ರೇರೇಪಿಸುತ್ತದೆ ಎಂಬುದನ್ನು ತೋರಿಸಿದೆ. ನಂತರ ಅವರು ಯುದ್ಧದಲ್ಲಿ ಗಾಯಗೊಂಡ ಸೈನಿಕರನ್ನು ಭೇಟಿಯಾದರು, ಅದು ಸೈನಿಕರ ಆತ್ಮವಿಶ್ವಾಸ ಕುಗ್ಗದಂತೆ ಕಾಪಾಡಿತು. ಅದರ ಪರಿಣಾಮವಾಗಿ ಟೈಗರ್ ಹಿಲ್ ವಿಜಯೋತ್ಸವವನ್ನು ಆಚರಿಸಿತು.

ಇದಲ್ಲದೆ, ಪಾಕಿಸ್ತಾನದ ಬಗ್ಗೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರ ಮೌನವನ್ನು ಮೋದಿ ಹೇಗೆ ವಿಶೇಷವಾಗಿ ಪ್ರಶ್ನಿಸಿದ್ದಾರೆ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ರಾಜಕೀಯಗೊಳಿಸಲು ಪ್ರತಿಪಕ್ಷಗಳು ಹೇಗೆ ಹಿಂಜರಿಯುವುದಿಲ್ಲ ಎಂಬುದನ್ನೂ ಎಕ್ಸ್‌ನ ಪೋಸ್ಟ್‌ನಲ್ಲಿ ವಿವರಿಸಲಾಗಿದೆ.

1999 ರಲ್ಲಿ ಸಾಧನಾ ಮ್ಯಾಗಜೀನ್‌ಗೆ ಪ್ರಧಾನಿ ಮೋದಿ ನೀಡಿದ ಸಂದರ್ಶನದಲ್ಲಿ, ಅಂತಹ ನಿರ್ಣಾಯಕ ಸಮಯದಲ್ಲಿ ರಾಜಕೀಯ ಹಿತಾಸಕ್ತಿಗಳನ್ನು ಅನುಸರಿಸುವುದು ಎಷ್ಟು ದುರದೃಷ್ಟಕರ ಎಂದು ಅವರು ಸೂಚಿಸಿದರು. 1971 ರ ಯುದ್ಧದ ಸಮಯದಲ್ಲಿ ಅಟಲ್ ಜಿ ಅವರು ವಿರೋಧ ಪಕ್ಷದಲ್ಲಿದ್ದರೂ, ಇಂದಿರಾ ಗಾಂಧಿಯನ್ನು ಹೇಗೆ ಸಂಪೂರ್ಣವಾಗಿ ಬೆಂಬಲಿಸಿದರು, ನಿಜವಾದ ರಾಷ್ಟ್ರೀಯ ಏಕತೆಯನ್ನು ತೋರಿಸಿದರು ಎಂಬುದನ್ನು ಅವರು ಎಲ್ಲರಿಗೂ ನೆನಪಿಸಿದರು.

ಇದನ್ನೂ ಓದಿ: Kargil Vijay Diwas 2024: “ಪಾಕಿಸ್ತಾನ ತಪ್ಪುಗಳಿಂದ ಪಾಠ ಕಲಿತಿಲ್ಲ”; ಪ್ರಧಾನಿ ಮೋದಿ ಟಾಂಗ್‌

Continue Reading

ಕರ್ನಾಟಕ

MUDA site scandal: ಕೈಗಾರಿಕೆಗಾಗಿ ಕುಮಾರಸ್ವಾಮಿ ಪಡೆದ ಸೈಟ್‌ ಏನಾಯ್ತು? ಮುಡಾ ನಿವೇಶನ ಪಡೆದ ವಿಪಕ್ಷದವರ ಪಟ್ಟಿ ಕೊಟ್ಟ ಸಿಎಂ

MUDA site scandal: ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ವಿಪಕ್ಷಗಳ ಹಲವು ನಾಯಕರು, ಮುಖಂಡರು ಮುಡಾ ಸೈಟ್‌ ಪಡೆದಿದ್ದಾರೆ. ನಾನು ಕುಮಾರಸ್ವಾಮಿ ಅವರ ಕುಟುಂಬದ ಆಸ್ತಿಪಾಸ್ತಿಗಳ ಬಗ್ಗೆ ಮಾತನಾಡಲ್ಲ. ಯಾಕೆಂದರೆ ಅವುಗಳ ಸಂಖ್ಯೆ ಎಷ್ಟೋ , ಆಳವೆಷ್ಟೋ, ಉದ್ದವೆಷ್ಟೋ ತಿಳಿಯದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

VISTARANEWS.COM


on

Koo

ಬೆಂಗಳೂರು: ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿಯವರು ಇತ್ತೀಚೆಗೆ ನನ್ನನ್ನು ಗುರಿಮಾಡಿಕೊಂಡಿದ್ದಾರೆ. ಯಾಕೆಂದರೆ ಸಿದ್ದರಾಮಯ್ಯನವರದು ಕಳಂಕರಹಿತವಾದ ವ್ಯಕ್ತಿತ್ವ ಎಂಬ ಮಾತು ಅವರ ನಿದ್ದೆಗೆಡಿಸುತ್ತಿದೆ. ಹಾಗಾಗಿ ಅವರು ಇಲ್ಲಸಲ್ಲದ ಕಿತಾಪತಿಗಳನ್ನು ಮಾಡಲು ಪ್ರಾರಂಭಿಸಿದ್ದಾರೆ. ಆದರೆ, ಕುಮಾರಸ್ವಾಮಿ ಸೇರಿ ವಿಪಕ್ಷಗಳ ಹಲವು ನಾಯಕರು, ಮುಖಂಡರು ಮುಡಾ ಸೈಟ್‌ (MUDA site scandal) ಪಡೆದಿದ್ದಾರೆ. ಕುಮಾರಸ್ವಾಮಿ ಕೈಗಾರಿಕೆ ನಿರ್ಮಿಸಲು ಸೈಟ್‌ ಪಡೆದಿದ್ದರು. ಆದರೆ, ಕೈಗಾರಿಕೆ ಆರಂಭಿಸದೆ ಸಂಪೂರ್ಣವಾಗಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ವಿವಾದ ಅಲ್ಲದ್ದನ್ನು ಕೃತಕವಾಗಿ ವಿವಾದವನ್ನಾಗಿಸಲು ಪ್ರಯತ್ನಿಸುತ್ತಿದ್ದಾರೆ. ರಾಜ್ಯದ ಏಳೂವರೆ ಕೋಟಿ ಜನರಿಗೆ ಆಗಿರುವ ಅನ್ಯಾಯದ ಬಗ್ಗೆ ನೆಪಕ್ಕೂ ಪಾರ್ಲಿಮೆಂಟಿನಲ್ಲಿ ಇವರು ಪ್ರಶ್ನೆ ಮಾಡಿಲ್ಲ. ಇಲ್ಲಿ ವಿಧಾನಸಭೆಯನ್ನು ಅವರ ರಾಜಕಾರಣಕ್ಕೆ ಬಳಸಿಕೊಂಡರು, ಈಗ ಪಾರ್ಲಿಮೆಂಟನ್ನೂ ಬಳಸಿಕೊಳ್ಳುತ್ತಿದ್ದಾರೆ ಎಂದು ಹೇಳಿ, ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಮುಡಾದಿಂದ ಪಡೆದಿರುವ ಸೈಟ್‌ಗಳ ವಿವರ ಮತ್ತು ಹೆಸರನ್ನು ಓದಿ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ, ಜಿ.ಟಿ.ದೇವೇಗೌಡ, ಎಚ್‌.ವಿಶ್ವನಾಥ್‌, ಸಾ.ರಾ.ಮಹೇಶ್‌, ಸಿ.ಎನ್‌.ಮಂಜೇಗೌಡ ಸೇರಿ ಹಲವು ವಿಪಕ್ಷ ನಾಯಕರು, ಮುಖಂಡರು ಸೈಟ್‌ ಪಡೆದಿರುವ ಪಟ್ಟಿಯನ್ನು ಸಿಎಂ ಬಿಡುಗಡೆ ಮಾಡಿದರು.

ಗೋಮಾಳ ಸೇರಿ 200 ಎಕರೆ ಗುಳುಂ

ನಾನು ಕುಮಾರಸ್ವಾಮಿ ಅವರ ಕುಟುಂಬದ ಆಸ್ತಿಪಾಸ್ತಿಗಳ ಬಗ್ಗೆ ಮಾತನಾಡಲ್ಲ. ನನಗೆ ಏನು ಇಲ್ಲಿರುವ ಯಾರಿಗೂ ಸಾಧ್ಯವಿಲ್ಲ. ಯಾಕೆಂದರೆ ಅವುಗಳ ಸಂಖ್ಯೆ ಎಷ್ಟೋ , ಆಳವೆಷ್ಟೋ, ಉದ್ದವೆಷ್ಟೋ ತಿಳಿಯದು ಎಂದ ಸಿಎಂ, ಹಿಟ್ಲರ್‌ವಾದಿಗಳ ಜತೆಗೆ ಫ್ಯೂಡಲ್‌ವಾದಿಗಳು ಸೇರಿಕೊಂಡಿದ್ದಾರೆ. ಇಬ್ಬರೂ ಸೇರಿ ಟಾರ್ಗೆಟ್ ಮಾಡಿಕೊಂಡು ಓಡಾಡುತ್ತಿದ್ದಾರೆ. ನನ್ನ ಜೀವಿತಾವಧಿಯಲ್ಲಿ ಇಂಥ ಹಲವಾರು ಪಿತೂರಿಗಳನ್ನು ಎದುರಿಸಿದ್ದೇನೆ ಎಂದು ತಿಳಿಸಿದರು.

ಬೆಂಗಳೂರಿಗೆ ಹೊಂದಿಕೊಂಡಂತೆ ಬಿಡದಿಯ ಬಳಿ ಇರುವ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16 ಮತ್ತು 17ರಲ್ಲಿ ಒಟ್ಟು 110.32 ಎಕರೆ ಸರ್ಕಾರಿ ಗೋಮಾಳ ಸೇರಿ 200 ಎಕರೆ ಜಮೀನನ್ನು ಎಚ್. ಡಿ ಕುಮಾರಸ್ವಾಮಿ ಮತ್ತವರ ಕುಟುಂಬದವರು ಹಾಗೂ ಮದ್ದೂರು ಶಾಸಕರಾದ ಡಿ.ಸಿ. ತಮ್ಮಣ್ಣ ಮತ್ತವರ ಕುಟುಂಬದವರು ನಿಯಮಗಳನ್ನು ಉಲ್ಲಂಘಿಸಿ ಭೂ ಕಬಳಿಸಿರುವುದಾಗಿ ಆರೋಪಿಸಿದ ಸಿಎಂ, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ 200 ಎಕರೆ ಸರ್ಕಾರಿ ಜಮೀನನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಪ್ರಸ್ತಾವನೆಯನ್ನು ಸಲ್ಲಿಸಲು ಕೋರಿ ದಿನಾಂಕ 20214ರ ಆ. 25ರಂದು ಜಿಲ್ಲಾಧಿಕಾರಿಗಳಿಗೆ ಅಂದಿನ ಎಸಿ ಸಿದ್ದಪ್ಪ ಪತ್ರ ಬರೆದಿದ್ದರು.

ಇದನ್ನೂ ಓದಿ | MUDA Scam: ಮುಡಾ ಜಮೀನಿನ ಸಂಪೂರ್ಣ ದಾಖಲೆಗಳನ್ನು ತೆರೆದಿಟ್ಟ ಸಿಎಂ ಸಿದ್ದರಾಮಯ್ಯ; ಇಲ್ಲಿದೆ ವಿವರ

ಇದಕ್ಕೂ ಮೊದಲು ಎಸಿ ಸಿದ್ದಪ್ಪ ಅವರು 2011ರಲ್ಲಿ ಜಿ. ಮಾದೇಗೌಡ ಅವರು ಲೋಕಾಯುಕ್ತದಲ್ಲಿ ದಾಖಲಿಸಿದ್ದ ದೂರು ಪ್ರಕರಣದಲ್ಲಿ ವಿಚಾರಣೆ ನಡೆಸಿ ಲೋಕಾಯುಕ್ತಕ್ಕೆ ವರದಿ ಸಲ್ಲಿಸಿದ್ದರು. ಅವರ ಪ್ರಕಾರ, ಈ 200 ಎಕರೆ ಭೂಮಿಯಲ್ಲಿ ಕರ್ನಾಟಕ ಭೂ ಮಂಜೂರಾತಿ ನಿಯಮಗಳು, ಕರ್ನಾಟಕ ಭೂ ಸುಧಾರಣಾ ಕಾಯ್ದೆಯ 79 ಎ ಮತ್ತು ಬಿ ಹಾಗೂ 66, ಪಿಟಿಸಿಎಲ್ ಕಾಯ್ದೆ, ಮುದ್ರಾಂಕ ಪಾವತಿಸದೆ ಮೋಸ ಮಾಡಿರುವುದು, ಸರ್ಕಾರಿ ಜಮೀನುಗಳನ್ನು ಕಬಳಿಸಲಾಗಿದೆ ಹಾಗೂ ಕಂದಾಯ ಇಲಾಖೆಯ ಮಾಹಿತಿಗಳ ಪ್ರಕಾರ ಕೇತಗಾನಹಳ್ಳಿಯ ಸ. ನಂ 60 ಮತ್ತು 62 ರಲ್ಲಿ ವ್ಯಾಪಕವಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರಿಗೆ ದ್ರೋಹ ಮಾಡಿರುವುದು ಕಂಡುಬರುತ್ತಿದೆ ಎಂದು ತಿಳಿಸಿದ್ದರು.

ಇನ್ನು 2011ರ ಮಾರ್ಚ್‌ 17ರಂದು ಮೈಸೂರು ಮುಡಾದಲ್ಲಿ 60000 ಅಡಿ ಭೂಮಿ ಹಂಚಿಕೆಯ ಕುರಿತು ವಿಧಾನಪರಿಷತ್‌ನಲ್ಲಿ ಯಡಿಯೂರಪ್ಪನವರು ದಾಖಲೆಗಳನ್ನು ಅಂದಿನ ಸಭಾಪತಿಗಳಿಗೆ ನೀಡಿರುವುದು ದಾಖಲಾಗಿದೆ. ಯಡಿಯೂರಪ್ಪನವರು ನೇರವಾಗಿ ಎಚ್‌.ಡಿ. ದೇವೇಗೌಡರು ನಿಯಮಗಳನ್ನು ಗಾಳಿಗೆ ತೂರಿ 48 ನಿವೇಶನಗಳನ್ನು ತಮ್ಮ ಕುಟುಂಬಕ್ಕೆ ಹಂಚಿಕೆ ಮಾಡಿರುವ ದಾಖಲೆ ಒದಗಿಸಿದ್ದರು ಎಂದು ಸಿಎಂ ತಿಳಿಸಿದರು.

ಎಚ್. ಡಿ ಕುಮಾರಸ್ವಾಮಿಯವರಿಗೆ 1984 ನ.7ರಂದು 75*280 ಅಡಿ ಒಟ್ಟು 21,000 ಅಡಿಗಳ ಕೈಗಾರಿಕಾ ನಿವೇಶನ ಮೈಸೂರಿನ ಸಿಐಟಿಬಿಯಿಂದ ಮಂಜೂರಾಗಿದೆ. ಚದರ ಗಜಕ್ಕೆ 16 ರೂಪಾಯಿಯಂತೆ 37,334 ರೂಪಾಯಿಗಳಿಗೆ ಅಭಿವೃದ್ಧಿಪಡಿಸಿದ ಕೈಗಾರಿಕಾ ನಿವೇಶನವನ್ನು ಇಂಡಸ್ಟ್ರಿಯಲ್ ಸಬರ್ಬನ್ 3ನೇ ಹಂತದಲ್ಲಿ ಮಂಜೂರು ಮಾಡಿದ್ದರು. ಮಂಜೂರಾತಿ ಪತ್ರದಲ್ಲಿ ಎರಡು ವರ್ಷದೊಳಗೆ ಅಲ್ಲಿ ಕೈಗಾರಿಕೆ ಪ್ರಾರಂಭಿಸಬೇಕು ಎಂದು ಷರತ್ತು ವಿಧಿಸಿದ್ದರು. 1985 ರಲ್ಲಿ ಸ್ವಾಧೀನ ಪತ್ರ ಕೊಟ್ಟಿದ್ದಾರೆ. ಆದರೂ ಕುಮಾರಸ್ವಾಮಿ ಕೈಗಾರಿಕೆ ನಿರ್ಮಿಸಿಲ್ಲ. ಇಂಡಸ್ಟ್ರಿಯಲ್ ನಿವೇಶನ ಬೇರೆ ಯಾರಿಗಾದರೂ ಕೊಟ್ಟಿದ್ದರೆ ಅಲ್ಲಿ ಕೈಗಾರಿಕೆ ಸ್ಥಾಪನೆಯಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತಿದ್ದವು. ಸರ್ಕಾರಕ್ಕೆ ಆದಾಯವೂ ಬರುತ್ತಿತ್ತು. ಕುಮಾರಸ್ವಾಮಿ ಅದನ್ನು ಸಂಪೂರ್ಣ ಉಲ್ಲಂಘಿಸಿದ್ದಾರೆ.

ಇದನ್ನೂ ಓದಿ | BJP Protest: ಸಂಸತ್ ಬಳಿ ರಾಜ್ಯ ಬಿಜೆಪಿ ಸಂಸದರ ಪ್ರತಿಭಟನೆ; ವಾಲ್ಮೀಕಿ ನಿಗಮ ಅಕ್ರಮ, ಮುಡಾ ಹಗರಣ ಸಿಬಿಐ ತನಿಖೆಗೆ ನೀಡಲು ಆಗ್ರಹ

ದಿನಾಂಕ 18-2-2017 ರಲ್ಲಿ ಮುಡಾ ಆಯುಕ್ತರಿಗೆ ಬದಲಿ ನಿವೇಶನ ಕೊಡುವಂತೆ ಕುಮಾರಸ್ವಾಮಿ ಮನವಿ ಕೊಟ್ಟಿದ್ದಾರೆ. ಅವರಿಗೆ ಬದಲಿ ನಿವೇಶನ ಕೊಡಲು 7-1-2023 ರಂದು ಮುಡಾ ನಿರ್ಣಯ ಮಾಡಿದೆ. ಅದೇ ಜಾಗದಲ್ಲಿ ಅಕ್ರಮವಾಗಿದ್ದ ಇನ್ನೊಬ್ಬರು ವ್ಯಕ್ತಿ ಕೋರ್ಟಿಗೆ ಹೋಗಿ ತಡೆಯಾಜ್ಞೆ ತಂದಿರುವುದರಿಂದ ಇದು ನಿಂತಿದೆ. ಇಷ್ಟೆಲ್ಲ ಅಕ್ರಮ ಮಾಡಿ ಕುಮಾರಸ್ವಾಮಿ ವೇದಾಂತ ಮಾತಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Continue Reading

ದೇಶ

Sundar Pichai: ಗೂಗಲ್‌ ಸಿಇಒ ಸುಂದರ್‌ ಪಿಚೈಗೆ ಗೌರವ ಡಾಕ್ಟರೇಟ್‌ ಪ್ರದಾನ-ಫೋಟೋ ವೈರಲ್‌

Sundar Pichai:ಇನ್ನು ಈ ವಿಚಾರವನ್ನು ಸುಂದರ್‌ ಪಿಚೈ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. ಕಳೆದ ವಾರ ನನ್ನ ಅಲ್ಮಾ ಮೇಟರ್ ಐಐಟಿ ಖರಗ್‌ಪುರದಿಂದ ಗೌರವ ಡಾಕ್ಟರೇಟ್ ಸ್ವೀಕರಿಸಲು ನಾನು ಕೃತಜ್ಞನಾಗಿದ್ದೇನೆ. ನನ್ನ ಪೋಷಕರು ಯಾವಾಗಲೂ ನನ್ನ ಡಾಕ್ಟರೇಟ್ ಪಡೆಯಬೇಕೆಂದು ಆಶಿಸುತ್ತಿದ್ದರು, ಈ ಗೌರವ ಸ್ವೀಕರಿಸುತ್ತಿರುವುದಕ್ಕೆ ಬಹಳ ಸಂತಸವಾಗುತ್ತಿದೆ ಎಂದಿದ್ದಾರೆ.

VISTARANEWS.COM


on

Sundar Pichai
Koo

ಹೊಸದಿಲ್ಲಿ: ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ಗೂಗಲ್‌ ಸಿಇಒ(Google CEO) ಸುಂದರ್‌ ಪಿಚೈ(Sundar Pichai) ಮತ್ತು ಅವರ ಪತ್ನಿಗೆ ಅಂಜಲಿ ಪಿಚೈ ಅವರಿಗೆ ಗೌರವ ಡಾಕ್ಟರೇಟ್‌ ನೀಡಿ ಗೌರವಿಸಲಾಗಿದೆ. ಖರಗ್‌ಪುರ ಐಐಟಿ(IIT Kharagpur) ಈ ಗೌರವ ಡಾಕ್ಟರೇಟ್‌ ಪ್ರದಾನ ಮಾಡಿದೆ.

ಇನ್ನು ಈ ವಿಚಾರವನ್ನು ಸುಂದರ್‌ ಪಿಚೈ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. ಕಳೆದ ವಾರ ನನ್ನ ಅಲ್ಮಾ ಮೇಟರ್ ಐಐಟಿ ಖರಗ್‌ಪುರದಿಂದ ಗೌರವ ಡಾಕ್ಟರೇಟ್ ಸ್ವೀಕರಿಸಲು ನಾನು ಕೃತಜ್ಞನಾಗಿದ್ದೇನೆ. ನನ್ನ ಪೋಷಕರು ಯಾವಾಗಲೂ ನನ್ನ ಡಾಕ್ಟರೇಟ್ ಪಡೆಯಬೇಕೆಂದು ಆಶಿಸುತ್ತಿದ್ದರು, ಈ ಗೌರವ ಸ್ವೀಕರಿಸುತ್ತಿರುವುದಕ್ಕೆ ಬಹಳ ಸಂತಸವಾಗುತ್ತಿದೆ ಎಂದಿದ್ದಾರೆ.

IIT ಯಲ್ಲಿನ ಶಿಕ್ಷಣ ಮತ್ತು ತಂತ್ರಜ್ಞಾನದ ಅಧ್ಯಯನ ನನ್ನನ್ನು Googleನಂತಹ ಅತಿದೊಡ್ಡ ಸಂಸ್ಥೆಯ ಅತಿ ದೊಡ್ಡ ಹುದ್ದೆಯನ್ನು ಅಲಂಕರಿಸುವಂತೆ ಮಾಡಿತು. ಹಾಗೂ ಹೆಚ್ಚಿನ ಜನರು ತಂತ್ರಜ್ಞಾನವನ್ನು ಪ್ರವೇಶಿಸಲು ಸಹಾಯ ಮಾಡಿತು. ತಂತ್ರಜ್ಞಾನದಲ್ಲಿ ಐಐಟಿಯ ಪಾತ್ರವು AI ಕ್ರಾಂತಿಯೊಂದಿಗೆ ಮಾತ್ರ ಪ್ರಾಮುಖ್ಯತೆಯನ್ನು ಹೆಚ್ಚಿಸುತ್ತದೆ ಮತ್ತು ನಾನಿ ಅಲ್ಲಿ ಕಳೆದ ಕೆಲವು ಸಮಯಕ್ಕಾಗಿ ನಾನು ಯಾವಾಗಲೂ ಕೃತಜ್ಞರಾಗಿರುತ್ತೇನೆ ಎಂದು ಅವರು ಹೇಳಿದರು.

ಅವರು ಗೌರವ ಪದವಿ ಸ್ವೀಕರಿಸುತ್ತಿರುವ ಎರಡು ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ. ಸುಂದರ್ ಪಿಚೈ ಅವರಿಗೆ ಡಾಕ್ಟರ್ ಆಫ್ ಸೈನ್ಸ್ (ಆನರಿಸ್ ಕಾಸಾ) ಪ್ರಶಸ್ತಿಯನ್ನು ನೀಡಲಾಯಿತು. ಅವರ ಪತ್ನಿ ಅಂಜಲಿ ಪಿಚೈ ಅವರಿಗೆ ಪ್ರತಿಷ್ಠಿತ ಹಳೆಯ ವಿದ್ಯಾರ್ಥಿ ಪ್ರಶಸ್ತಿಯನ್ನು ನೀಡಲಾಯಿತು. ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಸಮಾರಂಭದಲ್ಲಿ ಅವರು ತಮ್ಮ ಪ್ರಶಸ್ತಿಗಳನ್ನು ಸ್ವೀಕರಿಸಿದರು.

ಪಿಚೈ ಪೋಸ್ಟ್‌ಗೆ ನೆಟ್ಟಿಗರ ಪ್ರತಿಕ್ರಿಯೆ

ಇನ್ನು ಸುಂದರ್‌ ಪಿಚೈ ಅವರ ಪೋಸ್ಟ್‌ ಅನೇಕ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಅಭಿನಂದನೆ ಸಲ್ಲಿಸಿದ್ದಾರೆ. ಐಐಟಿಯ ವಿದ್ಯಾರ್ಥಿ ಎಂದಿಗೂ ಐಐಟಿಯ ವಿದ್ಯಾರ್ಥಿಯೇ ಆಗಿರುತ್ತಾನೆ. ಸುಂದರ್‌ ಪಿಚೈ ಬರೀ ಹೆಸರಲ್ಲ ಅದೊಂದು ಅದ್ಭುತ ಎಂದು ಒಬ್ಬ ಬರೆದುಕೊಂಡಿದ್ದಾನೆ. ಪಿಚೈ ಒಬ್ಬ ಅದ್ಬುತ ವ್ಯಕ್ತಿ ಅಭಿನಂದನೆಗಳು ಎಂದು ಮತ್ತೊಬ್ಬ ನೆಟ್ಟಿಗ ಬರೆದುಕೊಂಡಿದ್ದಾನೆ.

ಸುಂದರ್ ಪಿಚೈ ಅವರಿಗೆ ಗೌರವ ಪದವಿ ನೀಡಿದ್ದು ಏಕೆ?

ಡಿಜಿಟಲ್ ರೂಪಾಂತರ, ಕೈಗೆಟುಕುವ ತಂತ್ರಜ್ಞಾನ ಮತ್ತು ಹೊಸ ಆವಿಷ್ಕಾರಗಳಿಗೆ ಅವರ ಗಮನಾರ್ಹ ಕೊಡುಗೆಯನ್ನು ಗುರುತಿಸಿ ಸುಂದರ್‌ ಪಿಚೈ ಅವರಿಗೆ ಈ ಗೌರವ ಪ್ರದಾನ ಮಾಡಲಾಯಿತು. ಕಳೆದ ವರ್ಷ ಡಿಸೆಂಬರ್‌ನಲ್ಲಿ ಐಐಟಿ-ಖರಗ್‌ಪುರದ 69 ನೇ ಘಟಿಕೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿ ಪ್ರದಾನ ಮಾಡಿದರು. ಅಂದು ಪಿಚೈ ಅವರು ಗೈರು ಹಾಜರಾಗಿದ್ದ ಕಾರಣ ಜುಲೈ 23 ರಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಇದನ್ನೂ ಓದಿ: Kargil Vijay Diwas 2024: ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಲು ಕ್ಷಣವೂ ಯೋಚಿಸದ ಈ ವೀರ ಯೋಧರಿಗೊಂದು ಸಲಾಮ್

Continue Reading
Advertisement
shalini rajneesh
ಕರ್ನಾಟಕ19 mins ago

Shalini Rajneesh: ರಾಜ್ಯ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್‌ ನೇಮಕ; ಪತಿ ಜಾಗಕ್ಕೆ ಪತ್ನಿಯ ಆಯ್ಕೆ

Rohit Sharma
ಕ್ರೀಡೆ20 mins ago

Rohit Sharma: ವಿಮಾನ ನಿಲ್ದಾಣದಿಂದ ಲ್ಯಾಂಬೋರ್ಗಿನಿ ಕಾರು ಚಲಾಯಿಸಿಕೊಂಡು ಹೋದ ರೋಹಿತ್​; ವಿಡಿಯೊ ವೈರಲ್​

Karnataka rain
ಮಳೆ23 mins ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

Hamsalekha NadaBrahma' has no meaning, Shankar Shanubhag sparks against Hansalekha
ಸ್ಯಾಂಡಲ್ ವುಡ್28 mins ago

Hamsalekha: ʻನಾದಬ್ರಹ್ಮʼ ಎಂಬ ಪದಕ್ಕೆ ಅರ್ಥವೇ ಇಲ್ಲ,ಹಸಿ ಸುಳ್ಳು ಹೇಳುವ ವ್ಯಕ್ತಿ ಎಂದು ಹಂಸಲೇಖ ವಿರುದ್ಧ ಶಂಕರ್ ಶಾನುಭಾಗ್ ಕಿಡಿ!

Kargil Vijay Diwas 2024
ದೇಶ34 mins ago

Kargil Vijay Diwas 2024: ಕಾರ್ಗಿಲ್‌ ಯುದ್ಧಭೂಮಿಗೆ ಅಂದೇ ಕಾಲಿಟ್ಟಿದ್ರು ಮೋದಿ- ಹಳೆಯ ಫೊಟೋ ವೈರಲ್‌

ಕರ್ನಾಟಕ45 mins ago

MUDA site scandal: ಕೈಗಾರಿಕೆಗಾಗಿ ಕುಮಾರಸ್ವಾಮಿ ಪಡೆದ ಸೈಟ್‌ ಏನಾಯ್ತು? ಮುಡಾ ನಿವೇಶನ ಪಡೆದ ವಿಪಕ್ಷದವರ ಪಟ್ಟಿ ಕೊಟ್ಟ ಸಿಎಂ

Jio announced 30 Percent discount on Freedom Offer for Air Fiber new customers
ವಾಣಿಜ್ಯ50 mins ago

Jio Air Fiber: ಗ್ರಾಹಕರಿಗೆ ಭರ್ಜರಿ ರಿಯಾಯಿತಿ ಘೋಷಿಸಿದ ಜಿಯೊ! ಎಲ್ಲಿಯವರೆಗೆ ಈ ಆಫರ್‌?

Viral Video
Latest56 mins ago

Viral Video: ಸಿಂಧೂರ ಹಚ್ಚುವಾಗ ಕುಸಿದುಬಿದ್ದ ವಧು; ಎದ್ದೂಬಿದ್ದು ಓಡಿದ ವರ!

Ragging Case
Latest1 hour ago

Ragging Case: ಜೂನಿಯರ್ ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸಿದ ಸೀನಿಯರ್‌ಗಳು! ತಲ್ಲಣ ಮೂಡಿಸುವ ವಿಡಿಯೊ

Namratha Gowda new look photos got viral
ಸ್ಯಾಂಡಲ್ ವುಡ್1 hour ago

Namratha Gowda: ಕಪ್ಪು ಬಣ್ಣದ ಲಾಂಗ್ ಗೌನ್‌ನಲ್ಲಿ ಹಾಟ್‌ ಆಗಿ ಕಂಡ ನಮ್ರತಾ ಗೌಡ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka rain
ಮಳೆ23 mins ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ23 hours ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್1 day ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ1 day ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ1 day ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

karnataka Weather Forecast
ಮಳೆ2 days ago

Karnataka Weather : ರಭಸವಾಗಿ ಸುರಿಯುವ ಮಳೆ; 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ

karnataka weather Forecast
ಮಳೆ3 days ago

Karnataka Weather : ರಾಜ್ಯದಲ್ಲಿ ಮುಂದುವರಿದ ಮಳೆ ಅವಾಂತರ; ನಾಳೆಯೂ ಇರಲಿದೆ ಅಬ್ಬರ

Udupi News
ಉಡುಪಿ3 days ago

Udupi News : ಹಳೆ ಲಾರಿ ಚಾಸ್ಸಿಯಲ್ಲೇ ಕಿರು ಸೇತುವೆ ನಿರ್ಮಾಣ! ಬೈಂದೂರು ಶಾಸಕರ ಪರಿಕಲ್ಪನೆಗೆ ಜನರು ಫಿದಾ

murder case
ರಾಮನಗರ3 days ago

Murder Case : ರಾಮನಗರದಲ್ಲೊಂದು ಪೈಶಾಚಿಕ ಕೃತ್ಯ; ಅತ್ಯಾಚಾರವೆಸಗಿ 4 ವರ್ಷದ ಬಾಲಕಿಯನ್ನು ಕೊಂದ ದುಷ್ಟ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

ಟ್ರೆಂಡಿಂಗ್‌