Site icon Vistara News

Bomb Blast: ಹೊಸಕೋಟೆಯಲ್ಲಿ ನಾಡಬಾಂಬ್ ಸ್ಫೋಟ; ಮಗ ಸಾವು, ತಂದೆಗೆ ಗಂಭೀರ ಗಾಯ

Bomb Blast

ಬೆಂಗಳೂರು: ಮನೆಯಲ್ಲಿ ನಾಡಬಾಂಬ್ ಸ್ಫೋಟಗೊಂಡು (Bomb Blast) ಮಗ ಮೃತಪಟ್ಟಿದ್ದು, ತಂದೆಗೆ ಗಂಭೀರ ಗಾಯಗಳಾಗಿರುವ ಘಟನೆಯು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡನಲ್ಲಾಳ ಗ್ರಾಮದಲ್ಲಿ ಜರುಗಿದೆ.

ಇದನ್ನೂ ಓದಿ: Passport Seva Portal: ಐದು ದಿನಗಳ ಕಾಲ ಪಾಸ್ ಪೋರ್ಟಲ್ ಸೇವಾ ಕಾರ್ಯ ಸ್ಥಗಿತ

ದೊಡ್ಡನಲ್ಲಾಳ ಗ್ರಾಮದ ಪವನ್ ( 19 ) ಮೃತ ಯುವಕ. ಮನೆಯಲ್ಲಿ ನಾಡಬಾಂಬ್ ಸುತ್ತುವಾಗ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಸ್ಟೋಟದ ರಭಸಕ್ಕೆ ಮನೆಯ ಮೇಲ್ಚಾವಣಿ ಛಿದ್ರ ಛಿದ್ರವಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Road Accident : ದುಬೈ ಪ್ರವಾಸಕ್ಕೆ ಹೋದ ಗೋಕಾಕ್‌ ಮೂಲದ ನಾಲ್ವರು ಸಜೀವ ದಹನ

ಕಾಡು ಪ್ರಾಣಿಗಳ ಬೇಟೆಗಾಗಿ ನಾಡಬಾಂಬ್ ತಯಾರಿಸುತ್ತಿದ್ದ ವೇಳೆ ಸ್ಟೋಟವಾಗಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Exit mobile version