Modi in Bengaluru | ನಾಡಪ್ರಭು ಕೆಂಪೇಗೌಡ ಪ್ರತಿಮೆ, ರಾಜ್ಯ, ದೇಶದ ಅಭಿವೃದ್ಧಿಗೆ ಸ್ಫೂರ್ತಿದಾಯಕ: ಪ್ರಧಾನಿ ನರೇಂದ್ರ ಮೋದಿ - Vistara News

ಪ್ರಮುಖ ಸುದ್ದಿ

Modi in Bengaluru | ನಾಡಪ್ರಭು ಕೆಂಪೇಗೌಡ ಪ್ರತಿಮೆ, ರಾಜ್ಯ, ದೇಶದ ಅಭಿವೃದ್ಧಿಗೆ ಸ್ಫೂರ್ತಿದಾಯಕ: ಪ್ರಧಾನಿ ನರೇಂದ್ರ ಮೋದಿ

ದೇಶಾದ್ಯಂತ 400ಕ್ಕೂ ಹೆಚ್ಚು ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ ಆರಂಭವಾಗಲಿದೆ ಎಂದ ಪ್ರಧಾನಿ ಮೋದಿ, (Modi in Bengaluru) ಸ್ಟಾರ್ಟಪ್‌ ವಲಯದಲ್ಲಿ ಬೆಂಗಳೂರಿನ ಸಾಧನೆಯನ್ನು ಪ್ರಶಂಸಿಸಿದರು.

VISTARANEWS.COM


on

modi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ‌ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಭವ್ಯ ಪ್ರತಿಮೆಯು ಕರ್ನಾಟಕ ಮತ್ತು ಭಾರತದ ಭವಿಷ್ಯದ ಪ್ರಗತಿಗೆ ಪ್ರೇರಣೆ ನೀಡಲಿದೆ (Modi in Bengaluru) ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಭಾರತದಲ್ಲಿ ತಂತ್ರಜ್ಞಾನ ಮತ್ತು ಸ್ಟಾರ್ಟಪ್‌ಗಳ ಆವಿಷ್ಕಾರಕ್ಕೆ ಬೆಂಗಳೂರು ಅಮೋಘ ಕೊಡುಗೆ ನೀಡಿದೆ. ಸ್ಟಾರ್ಟಪ್‌ ಎಂದರೆ ಹೊಸ ವಿಶ್ವಾಸ, ಹೊಸ ಸಂಶೋಧನೆಗೆ ಹಾದಿ ಮಾಡಿಕೊಡುತ್ತದೆ. ಈವತ್ತು ಜಾಗತಿಕ ಸ್ಟಾರ್ಟಪ್‌ ನಕಾಶೆಯಲ್ಲಿ ಬೆಂಗಳೂರು ತನ್ನ ಛಾಪು ಮೂಡಿಸಿದೆ.

ಇಂದು ಆರಂಭವಾಗಿರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಒಂದೇ ಅಲ್ಲ, ಇದು ಅಭಿವೃದ್ಧಿಯ ನವ ಯುಗದ ಒಂದು ಝಲಕ್‌ ಮಾತ್ರ. ಭಾರತ ತನ್ನ ಮಂದಗತಿಯ, ಪ್ರಯಾಸದ ದಿನಗಳ ಬದಲಿಗೆ ವೇಗದ ಪ್ರಗತಿಯತ್ತ ಮುನ್ನಡೆಯಲಿದೆ. ಮುಂಬರುವ ದಿನಗಳಲ್ಲಿ ದೇಶಾದ್ಯಂತ 400ಕ್ಕೂ ಹೆಚ್ಚು ವಂದೇ ಭಾರತ್‌ ಹೈಸ್ಪೀಡ್‌ ರೈಲುಗಳು ಸಂಚಾರ ನಡೆಸಲಿವೆ.

ಬೆಂಗಳೂರು ನಗರ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದ ಬಳಿಕ ನಡೆದ ಸಾರ್ವಜನಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, ಕರ್ನಾಟಕಕ್ಕೆ ಮೊದಲ ಬಾರಿಗೆ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಿಕ್ಕಿದೆ. ಕರ್ನಾಟಕದ ಜನತೆಗೆ ಅಯೋಧ್ಯೆ, ಪ್ರಯಾಗ್‌ರಾಜ್‌ ದರ್ಶನಕ್ಕಾಗಿ ವಿಶೇಷ ರೈಲಿನ ವ್ಯವಸ್ಥೆಯಾಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎರಡನೇ ಟರ್ಮಿನಲ್‌ ಲೋಕಾರ್ಪಣೆಯಾಗಿದೆ. ಈ ಟರ್ಮಿನಲ್‌ ಚಿತ್ರದಲ್ಲಿ ಕಾಣುವುದಕ್ಕಿಂತಲೂ ಅದ್ಭುತವಾಗಿದೆ. ಬೆಂಗಳೂರಿನ ಜನತೆಯ ಬೇಡಿಕೆಯಾಗಿತ್ತು ಎಂದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

Hassan Pen Drive Case: ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಬುಧವಾರ – ಮೇ 1) ವಿಚಾರಣೆಗೆ ಹಾಜರಾಗಬೇಕು. ಕಾರಣ, ಸಿಆರ್‌ಪಿಸಿ 41ಎ ಅಡಿಯಲ್ಲಿ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗದೆ ಹೋದಲ್ಲಿ ಮತ್ತೊಂದು ನೋಟಿಸ್‌ ಅನ್ನು ಎಸ್‌ಐಟಿ ನೀಡಲಿದೆ. ಇಲ್ಲವೇ ನೋಟಿಸ್‌ ನೀಡದೆಯೂ ಬಂಧಿಸುವ ಅಧಿಕಾರವಿದೆ. ಸದ್ಯ ಆರೋಪಿಗಳು ವಿಚಾರಣೆಗೆ ಬರುವ ನಿರೀಕ್ಷೆಯಲ್ಲಿ ಎಸ್ಐಟಿ ಇದೆ. ಇನ್ನು ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವ ಕಾರಣ ನೋಟಿಸ್‌ನಲ್ಲಿ ಸಮಯ ನಿಗದಿ ಮಾಡಲಾಗಿಲ್ಲ.

VISTARANEWS.COM


on

Hassan Pen Drive case Prajwal and Revanna arrested if they fail to appear before SIT
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಈಗಾಗಲೇ 24 ಗಂಟೆಯೊಳಗೆ ವಿಚಾರಣೆಗೆ ಹಾಜಾರಾಗುವಂತೆ ಎಸ್‌ಐಟಿ ನೋಟಿಸ್‌ ನೀಡಿದೆ. ಒಂದು ವೇಳೆ ಗಡುವಿನೊಳಗೆ ವಿಚಾರಣೆಗೆ ಹಾಜರಾಗದೇ ಇದ್ದರೆ ಬಂಧಿಸುವ ಅಧಿಕಾರ ಎಸ್‌ಐಟಿಗೆ ಇದೆ. ಇಲ್ಲವೇ ಇನ್ನೂ ಎರಡು ಬಾರಿ ನೋಟಿಸ್‌ ನೀಡಿ ಕಾಯಬಹುದಾಗಿದೆ. ಈ ಎಲ್ಲವೂ ತನಿಖಾಧಿಕಾರಿಯ ವಿವೇಚನೆಗೆ ಬಿಟ್ಟ ವಿಷಯವಾಗಿದೆ.

ಪ್ರಜ್ವಲ್ ರೇವಣ್ಣ ಹಾಗೂ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು (ಬುಧವಾರ – ಮೇ 1) ವಿಚಾರಣೆಗೆ ಹಾಜರಾಗಬೇಕು. ಕಾರಣ, ಸಿಆರ್‌ಪಿಸಿ 41ಎ ಅಡಿಯಲ್ಲಿ ಎಸ್‌ಐಟಿ ನೋಟಿಸ್ ಜಾರಿ ಮಾಡಿದೆ. ಇದೇ ವೇಳೆ 24 ಗಂಟೆ ಒಳಗೆ ವಿಚಾರಣೆಗೆ ಹಾಜರಾಗದೆ ಹೋದಲ್ಲಿ ಮತ್ತೊಂದು ನೋಟಿಸ್‌ ಅನ್ನು ಎಸ್‌ಐಟಿ ನೀಡಲಿದೆ. ಇಲ್ಲವೇ ನೋಟಿಸ್‌ ನೀಡದೆಯೂ ಬಂಧಿಸುವ ಅಧಿಕಾರವಿದೆ.

ಸದ್ಯ ಆರೋಪಿಗಳು ವಿಚಾರಣೆಗೆ ಬರುವ ನಿರೀಕ್ಷೆಯಲ್ಲಿ ಎಸ್ಐಟಿ ಇದೆ. ಇನ್ನು ಪ್ರಜ್ವಲ್ ರೇವಣ್ಣ ವಿದೇಶದಲ್ಲಿರುವ ಕಾರಣ ನೋಟಿಸ್‌ನಲ್ಲಿ ಸಮಯ ನಿಗದಿ ಮಾಡಲಾಗಿಲ್ಲ.

ಹೊಳೆನರಸೀಪುರದ ಮನೆಯಲ್ಲಿ ಹೋಮ ಮಾಡಿಸಿದ ರೇವಣ್ಣ

ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರು ಹೊಳೆನರಸೀಪುರದ ನಿವಾಸಲ್ಲಿ ಹೋಮ ಮಾಡಿಸಿದ್ದಾರೆ ಎನ್ನಲಾಗಿದೆ. ಯಾವ ಹೋಮವನ್ನು ನಡೆಸಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲ. ಬುಧವಾರ ಹೋಮ ಪೂರ್ಣಗೊಂಡ ಬಳಿಕ ಅಲ್ಲಿಂದ ಬೆಂಗಳೂರಿನತ್ತ ವಾಪಸ್‌ ಆಗಿದ್ದಾರೆ.

ಮೊದಲ ನೋಟಿಸ್‌ಗೆ ಪ್ರಜ್ವಲ್‌ ಗೈರು ಪಕ್ಕಾ

ಎಸ್‌ಐಟಿ ನೀಡಿರುವ ಮೊದಲ ನೋಟಿಸ್‌ಗೆ ಪ್ರಜ್ವಲ್‌ ರೇವಣ್ಣ ಗೈರಾಗುವುದು ಪಕ್ಕಾ ಆಗಿದೆ. ಏಕೆಂದರೆ, ಜರ್ಮನಿಯಿಂದ ಬೆಂಗಳೂರು ತಲುಪಬೇಕಾದರೆ ಕನಿಷ್ಠ 9ರಿಂದ 10 ಗಂಟೆ ಪ್ರಯಾಣ ಮಾಡಬೇಕು. 10 ಗಂಟೆ ಪ್ರಯಾಣ ಮಾಡಿದರೂ ನೋಟಿಸ್ ನೀಡಿದ 24 ಗಂಟೆಗಳ‌ ಒಳಗೆ ತಲುಪಲು ಅಸಾಧ್ಯ. ಮೊದಲ ನೋಟಿಸ್‌ಗೆ ಗೈರಾದರೆ ಎರಡನೇ ನೋಟಿಸ್ ನೀಡುವ ಸಾಧ್ಯತೆ ಇದೆ. ಹೀಗೆ ಮೂರು ಬಾರಿ ಆರೋಪಿ ಸ್ಥಾನದಲ್ಲಿರುವವರಿಗೆ ನೋಟಿಸ್‌ ನೀಡಲಾಗುವುದು.

ಮೂರು ನೋಟಿಸ್‌ಗೂ ಸ್ಪಂದಿಸದೇ ಇದ್ದರೆ?

ಎಸ್‌ಐಟಿ ಮೂರು ಬಾರಿ ನೋಟಿಸ್‌ ನೀಡಿದರೂ ಆರೋಪಿಗಳು ಸ್ಪಂದಿಸದೇ ಇದ್ದಿದ್ದರೆ ಕೋರ್ಟ್‌ ಮುಖಾಂತರ ವಾರೆಂಟ್‌ ತಂದು ಬಂಧಿಸುವ ಅವಕಾಶವೂ ಇದೆ. ಇನ್ನು ಎರಡನೇ ನೋಟಿಸ್‌ಗೆ ಸ್ಪಂದಿಸಿ ವಿಚಾರಣೆಗೆ ಹಾಜರಾದರೆ, ತನಿಖಾಧಿಕಾರಿಗಳ ಮುಂದೆ ಸೂಕ್ತ ಕಾರಣ ನೀಡಬೇಕಾಗುತ್ತದೆ. ಈ ಪ್ರಕರಣದಲ್ಲಿ ದಾಖಲಾಗಿರುವ ಸೆಕ್ಷನ್‌ನಲ್ಲಿ ಜಾಮೀನು ಮಂಜೂರು ಆಗುವ ಸಾಧ್ಯತೆ ಇದೆ. ಇಂದು (ಬುಧವಾರ) ರಜೆಯಾಗಿರುವುದರಿಂದ ಗುರುವಾರ (ಮೇ 2) ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಗಾಗಿಯೇ ವಿಚಾರಣೆಗೆ ಹಾಜರಾಗದೆ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ತಪ್ಪಿಸಿಕೊಂಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌; ಬಾಲಕಿ ಉಲ್ಟಾ ಹೊಡೆದರೆ?

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುವ ಸಾಧ್ಯತೆ ಹೆಚ್ಚಿದೆ.

ಈ ಸಂಬಂಧ ಮಕ್ಕಳ ಹಕ್ಕು ಆಯೋಗದಿಂದ ಪತ್ರ ಬರೆಯಲಾಗಿದೆ. ದೂರುದಾರೆಯ ಮಗಳ ಹೇಳಿಕೆಯನ್ನು ಪಡೆಯಲು ತಯಾರಿ ನಡೆಸಲಾಗುತ್ತಿದೆ. ಮಕ್ಕಳ ಹಕ್ಕು ಆಯೋಗದ ಕೌನ್ಸಿಲರ್‌ಗಳ ಸಮ್ಮುಖದಲ್ಲಿ ಹೇಳಿಕೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಇಂದು ಸಂಜೆ ಅಥವಾ ನಾಳೆ (ಮೇ 1 – 2) ಸಂತ್ರಸ್ತೆಯ ಮಗಳ ಹೇಳಿಕೆ ಪಡೆಯಲು ಮುಂದಾಗಲಾಗುತ್ತಿದೆ ಎನ್ನಲಾಗಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೆ ಈ ಸಂಬಂಧ ಹೇಳಿಕೆಯನ್ನು ಪಡೆಯುವಾಗ ಕಡ್ಡಾಯವಾಗಿ ಮಕ್ಕಳ ಹಕ್ಕು ಆಯೋಗದ ಸದಸ್ಯರು ಇರಬೇಕು. ನೇರವಾಗಿ ಪೊಲೀಸರು ಹೇಳಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಇಂದು ಅಥವಾ ನಾಳೆ ಸಂಜೆಯೊಳಗೆ ಅಧಿಕಾರಿಗಳು ಹೇಳಿಕೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ, ಈ ವೇಳೆ ಏನಾದರೂ ಸಂತ್ರಸ್ತೆಯ ಮಗಳು ವ್ಯತಿರಿಕ್ತ ಹೇಳಿಕೆ ನೀಡಿದಲ್ಲಿ ಇಡಿ ಪ್ರಕರಣವೇ ಉಲ್ಟಾ ಆಗಲಿದೆ.

SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿಗೆ ಮಾಹಿತಿ ನೀಡಲು ಸಂತ್ರಸ್ತೆಯರು ಹಿಂದೇಟು ಹಾಕುತ್ತಿದ್ದಾರೆ. “ನನಗೆ ತೊಂದರೆ ಕೊಟ್ಟರೆ ಸೂಸೈಡ್ ಮಾಡಿಕೊಳ್ಳುತ್ತೇವೆ” ಎಂದು ಬೆದರಿಕೆ ಒಡ್ಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಪ್ರಜ್ವಲ್‌ ರೇವಣ್ಣ ಒಬ್ಬ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ವಂಶದ ಕುಡಿ. ಈ ಹಿನ್ನೆಲೆಯಲ್ಲಿ ಇದೊಂದು ಹೈ ಪ್ರೊಫೈಲ್‌ ಕೇಸ್‌ ಆಗಿದೆ. ಇದರ ಜತೆಗೆ ವಿಡಿಯೊ ಲೀಕ್‌ ವೇಳೆ ಸಂತ್ರಸ್ತೆಯರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳು ಹೊರಗಡೆ ತಲೆ ಎತ್ತಿ ತಿರುಗುವಂತೆ ಆಗುತ್ತಿಲ್ಲ. ಈ ಮಧ್ಯೆ ಎಸ್‌ಐಟಿ ಅಧಿಕಾರಿಗಳು ತನಿಖೆಗಾಗಿ ಅವರನ್ನು ಭೇಟಿ ಮಾಡಿ ಹೇಳಿಕೆ ಪಡೆಯಲು ಹೋದರೆ ಮೊದಲೇ ನೊಂದಿರುವ ನಮ್ಮನ್ನು ಮತ್ತಷ್ಟು ನೋಯಿಸಬೇಡಿ. ಈ ಬಗ್ಗೆ ನಮ್ಮ ಬಳಿ ಏನನ್ನೂ ಕೇಳಬೇಡಿ. ಇದು ನಮ್ಮ ಜೀವನದ ಪ್ರಶ್ನೆಯಾಗಿದೆ. ಅಷ್ಟಕ್ಕೂ ನೀವು ಒತ್ತಾಯ ಮಾಡಿದ್ದೇ ಆದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದೀತು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ದೂರುದಾರೆ ಹೊರತುಪಡಿಸಿ ಉಳಿದವರು ನೋ ರೆಸ್ಪಾನ್ಸ್!

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೊದಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ಎಸ್‌ಐಟಿ ತಂಡವು ಸಾಕಷ್ಟು ಪ್ರಯತ್ನಪಟ್ಟಿದೆ. ಎಷ್ಟೇ ಪ್ರಯತ್ನ ಪಟ್ಟರೂ ಸಂತ್ರಸ್ತೆಯರು ಮಾತ್ರ ಇವರಿಗೆ ಸ್ಪಂದಿಸುತ್ತಿಲ್ಲ. ನಾವು ಏನೂ ಹೇಳಲ್ಲ, ಏನನ್ನೂ ಕೇಳಬೇಡಿ ಎಂದು ಸಂತ್ರಸ್ತೆಯರು ಹೇಳುತ್ತಿದ್ದಾರೆ.

ನಾವೇನು ದೂರು ಕೊಟ್ಟಿಲ್ಲ, ನಮ್ಮನ್ನು ಯಾಕೆ ಎಳೆದು ತರುತ್ತೀರಿ? ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ ಎಂದು ಹೇಳುತ್ತಿರುವುದರಿಂದ ಎಸ್‌ಐಟಿ ತನಿಖೆಗೆ ಸ್ವಲ್ಪ ಹಿನ್ನಡೆಯಾಗಿದೆ. ಹೀಗಾಗಿ ಸದ್ಯಕ್ಕೆ ದೂರುದಾರೆ ಸಂತ್ರಸ್ತೆಯ ಮಾಹಿತಿ ಆಧರಿಸಿ ತನಿಖೆಯನ್ನು ಮುನ್ನಡೆಸುವ ತೀರ್ಮಾನಕ್ಕೆ ಬರಲಾಗಿದೆ.

ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

ಅಶ್ಲೀಲ ವಿಡಿಯೋದಲ್ಲಿರುವ (Obscene video) ಪ್ರಧಾನ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna) ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಅವರು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದಾರೆ.

ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್‌ ಅವರು ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್‌ ವೀಸಾವನ್ನು ಅವರು ಹೊಂದಿದ್ದಾರೆ. ಟೂರಿಸ್ಟ್‌ ವೀಸಾದಲ್ಲಿ ಅವರು ಜರ್ಮನಿಗೆ ತೆರಳಿದ್ದು, ಇದರ ಅವಧಿ 90 ದಿನಗಳ ಕಾಲ ಚಾಲೂ ಇರುತ್ತದೆ. CRPC41A ಸೆಕ್ಷನ್‌ ಪ್ರಕಾರ, ಅವರು ನೋಟಿಸ್‌ಗೆ ಸ್ಪಂದಿಸಿ ಹಾಜರಾಗದೆ ಇದ್ದರೆ ಅವರನ್ನು ಬಂಧಿಸಬಹುದಾಗಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಆದರೆ ಹಾಗೆ ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಇಂದು ಬೆಳಗ್ಗೆ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೋಟಿಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

ಪ್ರಜ್ವಲ್‌ ತನಿಖೆ ಮುಖ್ಯ

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗೂ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ಇಂದು ನೊಟೀಸ್ (Notice) ಅನ್ನು ಎಸ್‌ಐಟಿ (SIT) ಟೀಂ ಅಂಟಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಎಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಆದರೆ ಈಗಾಗಲೇ ಎಸ್‌ಐಟಿ ವಿಚಾರಣೆ ನೋಟಿಸ್‌ ಜಾರಿ ಮಾಡಿದೆ. ಇದಕ್ಕೆ ಉತ್ತರಿಸದೆ ತಲೆ ಮರೆಸಿಕೊಂಡರೆ ಆರೋಪಿಗೆ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೋಟಿಸ್ ಜಾರಿ ಮಾಡುವ ಸಾಧ್ಯತೆಯೂ ಎಸ್‌ಐಟಿ ಮುಂದಿದೆ.

ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವಾ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ. ವಿಚಾರಣೆ ಬಳಿಕ ಕಾರ್ತಿಕ್ ಮೊಬೈಲ್ ಸೀಜ್ ಮಾಡಿ ಎಫ್ಎಸ್ಎಲ್‌ಗೆ ವಿಧಿವಿಜ್ಞಾನ ಪರಿಶೀಲನೆಗಾಗಿ ಕಳಿಸಲಾಗಿದೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೋಟಿಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

ಹೋಮ ಮಾಡಿಸುತ್ತಿರುವ ರೇವಣ್ಣ

ತಮ್ಮ ವಿರುದ್ಧ ಎಸ್ಐಟಿ ತನಿಖೆ ಚುರುಕುಗೊಂಡಿರುವ ನಡುವೆ ರೇವಣ್ಣ ದೇವರು ದಿಂಡಿರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ಅವರ ಮನೆಯಲ್ಲಿ ಹೋಮ ಹವನ ಮಾಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎದುರಾದ ಸಂಕಷ್ಟ ನಿವಾರಣೆಗಾಗಿ ಮನೆಯೊಳಗೇ ಹೋಮ ಕುಂಡ ನಿರ್ಮಿಸಿ ಬೆಳಗ್ಗೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

Continue Reading

ದೇಶ

GST Collection: ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಜಿಎಸ್‌ಟಿ ಸಂಗ್ರಹ; ಏಪ್ರಿಲ್‌ನ ಕಲೆಕ್ಷನ್‌ ಎಷ್ಟು?

GST Collection: ಏಪ್ರಿಲ್‌ನ ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. 2024ರ ಏಪ್ರಿಲ್‌ನ ಒಟ್ಟು ಜಿಎಸ್‌ಟಿ ಸಂಗ್ರಹವು 2.10 ಲಕ್ಷ ಕೋಟಿ ರೂ.ಗೆ ತಲುಪಿದೆ. ಒಟ್ಟಾರೆಯಾಗಿ ಪರೋಕ್ಷ ತೆರಿಗೆ ಆದಾಯವು ಶೇ. 12.4ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ದೇಶೀಯ ವಹಿವಾಟು ಮತ್ತು ಆಮದುಗಳಲ್ಲಿನ ಹೆಚ್ಚಳ ಇದಕ್ಕೆ ಕಾರಣ ಎನ್ನಲಾಗಿದೆ. ಮಹಾರಾಷ್ಟ್ರವು 37,671 ಕೋಟಿ ರೂ. ಸಂಗ್ರಹಿಸುವ ಮೂಲಕ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಕರ್ನಾಟಕ ಇದೆ. ಇಲ್ಲಿ 15,978 ಕೋಟಿ ರೂ. ಸಂಗ್ರಹವಾಗಿದೆ. ಗುಜರಾತ್ 13,301 ಕೋಟಿ ರೂ., ಉತ್ತರ ಪ್ರದೇಶ 12,290 ಕೋಟಿ ರೂ. ಮತ್ತು ತಮಿಳುನಾಡು 12,210 ಕೋಟಿ ರೂ. ಮೂಲಕ ನಂತರದ ಸ್ಥಾನಗಳಲ್ಲಿದೆ.

VISTARANEWS.COM


on

GST Collection
Koo

ನವದೆಹಲಿ: ಏಪ್ರಿಲ್‌ನ ಜಿಎಸ್‌ಟಿ ಸಂಗ್ರಹ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ (GST Collection). ಬುಧವಾರ ಬಿಡುಗಡೆಯಾದ ಅಧಿಕೃತ ಅಂಕಿ-ಅಂಶಗಳ ಪ್ರಕಾರ, 2024ರ ಏಪ್ರಿಲ್‌ನ ಒಟ್ಟು ಜಿಎಸ್‌ಟಿ ಸಂಗ್ರಹವು 2.10 ಲಕ್ಷ ಕೋಟಿ ರೂ.ಗೆ ತಲುಪಿದೆ. ಒಟ್ಟಾರೆಯಾಗಿ ಪರೋಕ್ಷ ತೆರಿಗೆ ಆದಾಯವು ಶೇ. 12.4ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ. ದೇಶೀಯ ವಹಿವಾಟು ಮತ್ತು ಆಮದುಗಳಲ್ಲಿನ ಹೆಚ್ಚಳ ಇದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ.

ನಿವ್ವಳ ಜಿಎಸ್‌ಟಿ ಆದಾಯ (ಮರುಪಾವತಿಯ ನಂತರ) 1.92 ಲಕ್ಷ ಕೋಟಿ ರೂ.ಗಳಾಗಿದ್ದು, ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇಕಡಾ 17.1ರಷ್ಟು ಬೆಳವಣಿಗೆ ದಾಖಲಿಸಿದೆ.

ರಾಜ್ಯವಾರು ಸಂಗ್ರಹ

ಮಹಾರಾಷ್ಟ್ರವು 37,671 ಕೋಟಿ ರೂ. ಸಂಗ್ರಹಿಸುವ ಮೂಲಕ ಮೊದಲ ಸ್ಥಾನದಲ್ಲಿದೆ. ಎರಡನೇ ಸ್ಥಾನದಲ್ಲಿ ಕರ್ನಾಟಕ ಇದೆ. ಇಲ್ಲಿ 15,978 ಕೋಟಿ ರೂ. ಸಂಗ್ರಹವಾಗಿದೆ. ಗುಜರಾತ್ 13,301 ಕೋಟಿ ರೂ., ಉತ್ತರ ಪ್ರದೇಶ 12,290 ಕೋಟಿ ರೂ. ಮತ್ತು ತಮಿಳುನಾಡು 12,210 ಕೋಟಿ ರೂ. ಮೂಲಕ ನಂತರದ ಸ್ಥಾನಗಳಲ್ಲಿದೆ.

“ಜಿಎಸ್‌ಟಿ (Goods and Services Tax) 2024ರ ಏಪ್ರಿಲ್‌ನಲ್ಲಿ ದಾಖಲೆಯ ಗರಿಷ್ಠ 2.10 ಲಕ್ಷ ಕೋಟಿ ರೂ. ಸಂಗ್ರಹವಾಗಿದೆ. ಮರುಪಾವತಿಯನ್ನು ಲೆಕ್ಕ ಹಾಕಿದ ನಂತರ ನಿವ್ವಳ ಜಿಎಸ್‌ಟಿ ಆದಾಯವು 1.92 ಲಕ್ಷ ಕೋಟಿ ರೂ.ಗಳಷ್ಟಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇಕಡಾ 17.1ರಷ್ಟು ಬೆಳವಣಿಗೆಯನ್ನು ದಾಖಲಿಸಿದೆʼʼ ಎಂದು ಹಣಕಾಸು ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ವಿವಿಧ ತೆರಿಗೆಗಳ ಅಂಕಿ ಅಂಶ

  • ಕೇಂದ್ರ ಸರಕು ಮತ್ತು ಸೇವಾ ತೆರಿಗೆ (CGST): 43,846 ಕೋಟಿ ರೂ.
  • ರಾಜ್ಯ ಸರಕು ಮತ್ತು ಸೇವಾ ತೆರಿಗೆ (SGST): 53,538 ಕೋಟಿ ರೂ.
  • ಸಮಗ್ರ ಸರಕು ಮತ್ತು ಸೇವಾ ತೆರಿಗೆ (IGST): ಆಮದು ಸರಕುಗಳ ಮೇಲೆ ಸಂಗ್ರಹಿಸಿದ 37,826 ಕೋಟಿ ರೂ. ಸೇರಿದಂತೆ ಒಟ್ಟು 99,623 ಕೋಟಿ ರೂ.
  • ಸೆಸ್: ಆಮದು ಮಾಡಿದ ಸರಕುಗಳ ಮೇಲೆ ಸಂಗ್ರಹಿಸಿದ 1,008 ಕೋಟಿ ರೂ. ಸೇರಿದಂತೆ ಒಟ್ಟು 13,260 ಕೋಟಿ ರೂ.

“ಭಾರತೀಯ ಆರ್ಥಿಕತೆಯು ವೇಗದ ಹಾದಿಯಲ್ಲಿದೆ ಮತ್ತು ವ್ಯವಹಾರಗಳು ವೇಗವಾಗಿ ಸಂಘಟಿತವಾಗುತ್ತಿವೆ” ಎಂದು ಟ್ಯಾಕ್ಸ್ ಕನೆಕ್ಟ್ ಅಡ್ವೈಸರಿ ಸರ್ವೀಸಸ್ ಎಲ್‌ಎಲ್‌ಪಿಯ ಪಾಲುದಾರ ವಿವೇಕ್ ಜಲನ್ ಹೇಳಿದ್ದಾರೆ. ಜಿಎಸ್‌ಟಿ ಸಂಗ್ರಹದ ಬಗ್ಗೆ ಮಾತನಾಡಿದ ಅವರು, ʼʼ2017ರ ಜುಲೈಯಲ್ಲಿ ಈ ನಿಯಮ ಜಾರಿಗೆ ಬಂದಾಗಿನಿಂದ 2024ರ ಏಪ್ರಿಲ್‌ವರೆಗೆ ಜಿಎಸ್‌ಟಿ ಸಂಗ್ರಹವು ಸರಾಸರಿ ಮಾಸಿಕ ಆದಾಯವನ್ನು ಸುಮಾರು 0.9 ಲಕ್ಷ ಕೋಟಿ ರೂ.ಗೆ ಹೆಚ್ಚಿಸಿದೆʼʼ ಎಂದು ತಿಳಿಸಿದ್ದಾರೆ. ʼʼ2017ರ ಜುಲೈ ಮತ್ತು 2024ರ ಏಪ್ರಿಲ್ ನಡುವೆ ಜಿಎಸ್‌ಟಿ ಆದಾಯವು ವರ್ಷಕ್ಕೆ ಸರಾಸರಿ ಶೇ. 13ರಷ್ಟು ಬೆಳವಣಿಗೆಯನ್ನು ದಾಖಲಿಸಿದೆʼʼ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: GST Collection : ಜನವರಿಯಲ್ಲಿ ಜಿಎಸ್ಟಿ ಸಂಗ್ರಹ 1.72 ಲಕ್ಷ ಕೋಟಿ ರೂ. ಇದುವರೆಗಿನ ಗರಿಷ್ಠ ಸಾಧನೆ

ಹಳೆಯ ಆದಾಯ ತೆರಿಗೆ ಕಾಯ್ದೆಯನ್ನು ಬದಲಿಸಿ ನೇರ ತೆರಿಗೆ ಸಂಹಿತೆಯನ್ನು ಜಾರಿಗೆ ತರುವುದರ ಜತೆಗೆ ಆಲ್ಕೋಹಾಲ್, ಪೆಟ್ರೋಲ್, ಡೀಸೆಲ್ ಮತ್ತು ರಿಯಲ್ ಎಸ್ಟೇಟ್ ಅನ್ನು ಜಿಎಸ್‌ಟಿ ಅಡಿಯಲ್ಲಿ ತರಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

Continue Reading

ಪ್ರಮುಖ ಸುದ್ದಿ

Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Covishield Vaccine: ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಎಂದು ತಜ್ಞರು ಹೇಳಿದ್ದಾರೆ.

VISTARANEWS.COM


on

Covishield vaccine india
Koo

ಹೊಸದಿಲ್ಲಿ: ಭಾರತದಲ್ಲಿ ಕೊರೊನಾ ವೈರಸ್‌ (Corona Virus) ಎದುರಿಸಲು ಕೋವಿಶೀಲ್ಡ್‌ ಲಸಿಕೆ (Covishield vaccine) ತೆಗೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವ (blood clotting) ಅಡ್ಡ ಪರಿಣಾಮದ (Side effects) ಅಪಾಯದ ಸಾಧ್ಯತೆಗಳು ತೀರಾ ಕಡಿಮೆ ಎಂದು ಭಾರತದ ಹಿರಿಯ ಸಾಂಕ್ರಾಮಿಕ ರೋಗಶಾಸ್ತ್ರಜ್ಞ, ಮಾಜಿ ICMR ವಿಜ್ಞಾನಿ ಡಾ. ರಾಮನ್ ಗಂಗಾಖೇಡ್ಕರ್ ಹೇಳಿದ್ದಾರೆ.

ಕೋವಿಶೀಲ್ಡ್ ಅನ್ನು ಸ್ವೀಕರಿಸುವ 10 ಲಕ್ಷ ಜನರಲ್ಲಿ ಏಳರಿಂದ ಎಂಟು ವ್ಯಕ್ತಿಗಳು ಮಾತ್ರ ಥ್ರಂಬೋಸಿಸ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂದು ಕರೆಯಲ್ಪಡುವ ಅಪರೂಪದ ಅಡ್ಡ ಪರಿಣಾಮವನ್ನು ಅನುಭವಿಸುತ್ತಾರೆ. ಭಾರತದಲ್ಲಿ ಇದರ ಪ್ರಮಾಣ ಇನ್ನೂ ಕಡಿಮೆ ಎಂದವರು ತಿಳಿಸಿದ್ದಾರೆ. ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ ಅಡ್ಡ ಪರಿಣಾಮ ಕಾಣಿಸಿಕೊಳ್ಳಬಹುದು ಎಂದು ಮೊನ್ನೆ ಅದರ ತಯಾರಿಕಾ ಕಂಪನಿ ಅಸ್ಟ್ರಾಜೆನೆಕಾ ಯುಕೆ ನ್ಯಾಯಾಲಯದಲ್ಲಿ ಒಪ್ಪಿಕೊಂಡ ಬಳಿಕ ಈ ಬಗ್ಗೆ ಆತಂಕ ಮೂಡಿತ್ತು.

“ಮೊದಲ ಡೋಸ್ ಅನ್ನು ಪಡೆದಾಗ ಅಡ್ಡ ಪರಿಣಾಮದ ರಿಸ್ಕ್‌ ಅತ್ಯಧಿಕವಾಗಿರುತ್ತದೆ. ಆದರೆ ಎರಡನೇ ಡೋಸ್‌ನೊಂದಿಗೆ ಕಡಿಮೆಯಾಗುತ್ತದೆ; ಮೂರನೆಯದರೊಂದಿಗೆ ಮತ್ತೂ ಕಡಿಮೆಯಾಗುತ್ತದೆ. ಅಡ್ಡ ಪರಿಣಾಮ ಸಂಭವಿಸುವುದಾದಲ್ಲಿ, ಲಸಿಕೆ ಪಡೆದ ಎರಡು ಮೂರು ತಿಂಗಳೊಳಗೆ ಕಾಣಿಸಿಕೊಳ್ಳುತ್ತದೆ” ಎಂದು ಗಂಗಾಖೇಡ್ಕರ್ ತಿಳಿಸಿದ್ದಾರೆ. ಆದರೆ, ಭಾರತದಲ್ಲಿ ಮೂರು ಹಂತಗಳ ಲಸಿಕೆ ಅಭಿಯಾನ ವರ್ಷಗಳ ಹಿಂದೆಯೇ ಮುಗಿದಿದ್ದು, ಅಡ್ಡ ಪರಿಣಾಮಗಳ ಪ್ರಕರಣಗಳು ಅತ್ಯಂತ ವಿರಳವಾಗಿ ವರದಿಯಾಗಿವೆ.

ಬ್ರಿಟನ್‌ನ ಮಾಧ್ಯಮ ವರದಿಗಳು ಉಲ್ಲೇಖಿಸಿರುವ ನ್ಯಾಯಾಲಯದ ದಾಖಲೆಗಳ ಪ್ರಕಾರ, ತನ್ನ ಕೋವಿಡ್ ಲಸಿಕೆ ಅಪರೂಪವಾಗಿ ರಕ್ತ ಹೆಪ್ಪುಗಟ್ಟುವಿಕೆಯನ್ನು ಒಳಗೊಂಡ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದು ಎಂದು ಒಪ್ಪಿಕೊಂಡಿದೆ. ಈ ಲಸಿಕೆಯನ್ನು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಸಹ ಉತ್ಪಾದಿಸಿದೆ. ಇದನ್ನು ಕೋವಿಶೀಲ್ಡ್ ಎಂದು ಕರೆಯಲಾಗುತ್ತದೆ. ಭಾರತೀಯ ಜನಸಂಖ್ಯೆಯ ಕನಿಷ್ಠ 90 ಪ್ರತಿಶತದಷ್ಟು ಜನರು ಈ ಲಸಿಕೆಯನ್ನು ಪಡೆದಿದ್ದಾರೆ. ಭಾರತದಲ್ಲಿ ಸುಮಾರು 175 ಕೋಟಿ ಕೋವಿಶೀಲ್ಡ್‌ ಲಸಿಕೆ ಡೋಸ್‌ ನೀಡಲಾಗಿದೆ.

ಕಂಪನಿಯು ನ್ಯಾಯಾಲಯದಲ್ಲಿ ಒಪ್ಪಿಕೊಂಡಂತೆ, ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ (ಟಿಟಿಎಸ್) ಎಂಬ ಅಪರೂಪದ ಅಡ್ಡ ಪರಿಣಾಮದ ಸಾಧ್ಯತೆ ಲಸಿಕೆಗೆ ಇದೆ. ಯುರೋಪ್‌ನಲ್ಲಿ ವ್ಯಾಕ್ಸಿನೇಷನ್ ಅಭಿಯಾನ ಪ್ರಾರಂಭವಾದ ತಿಂಗಳೊಳಗೆ ಕೆಲವು ಇಂಥ ಪ್ರಕರಣಗಳು ಬೆಳಕಿಗೆ ಬಂದವು. ಕೆಲವು ದೇಶಗಳು ಅಸ್ಟ್ರಾಜೆನೆಕಾ ಲಸಿಕೆಯ ಬಳಕೆಯನ್ನು ಸ್ವಲ್ಪ ಸಮಯದವರೆಗೆ ನಿಲ್ಲಿಸಿದವು.

ʼವ್ಯಾಕ್ಸಿನೇಶನ್‌ ಬಳಿಕದ ಪ್ರತಿಕೂಲ ಘಟನೆಗಳ ಕುರಿತು ಸರ್ಕಾರಿ ಸಮಿತಿʼಯು (AEFI) ದೇಶದಲ್ಲಿ TTSನ ಕನಿಷ್ಠ 36 ಪ್ರಕರಣಗಳನ್ನು ಪರಿಶೀಲಿಸಿದೆ. 2021ರಲ್ಲಿ ದೇಶದಲ್ಲಿ ಕೋವಿಡ್-19 ಲಸಿಕೆ ಹಾಕಿದ ಮೊದಲ ವರ್ಷ 18 ಸಾವುಗಳನ್ನು ದೃಢಪಡಿಸಿದೆ. ಆದರೆ ಇದು ಭಾರತೀಯ ಕಾನೂನಿನ ವ್ಯಾಪ್ತಿಯಲ್ಲಿ ಬರುತ್ತಿದ್ದು, ಬ್ರಿಟನ್‌ನ ನ್ಯಾಯಾಲಯದಲ್ಲಿ ಆಗಿರುವ ವಾದವನ್ನು ಮಂಡಿಸಿ ನ್ಯಾಯ ಪಡೆಯಲು ಸಾಧ್ಯವಿಲ್ಲ.

ಐರೋಪ್ಯ ರಾಷ್ಟ್ರಗಳಲ್ಲಿ ಸಾಂಕ್ರಾಮಿಕ ರೋಗದ ವಿರುದ್ಧ ಲಸಿಕೆ ಹಾಕಲು ಆರಂಭಿಸಿದ ಅವಧಿಯಲ್ಲಿ TTS ವರದಿಯಾಗಿದೆ. ಆದರೆ ಭಾರತದಲ್ಲಿ ಇದು ಬಹಳ ಅಪರೂಪ ಎಂದು ತಜ್ಞರು ಹೇಳುತ್ತಾರೆ. “ಟಿಟಿಎಸ್ ಬಹಳ ಅಪರೂಪದ ಅಡ್ಡ ಪರಿಣಾಮ. ಯುರೋಪಿಯನ್ನರಿಗೆ ಹೋಲಿಸಿದರೆ ಭಾರತೀಯರು ಮತ್ತು ದಕ್ಷಿಣ ಏಷ್ಯಾದವರಲ್ಲಿ ಇನ್ನೂ ಅಪರೂಪ. ವ್ಯಾಕ್ಸಿನೇಷನ್ ಜೀವಗಳನ್ನು ಉಳಿಸಿದೆ. ಅದರ ಪ್ರಯೋಜನಕ್ಕೆ ಹೋಲಿಸಿದರೆ ಅಪಾಯಗಳನ್ನು ಕ್ಷುಲ್ಲಕ” ಎಂದು ತಜ್ಞರು ವಿವರಿಸಿದ್ದಾರೆ.

ಅಡ್ಡ ಪರಿಣಾಮದ ರಿಸ್ಕ್‌ ಮೊದಲ ವ್ಯಾಕ್ಸಿನೇಷನ್ ನಂತರದ ಮೊದಲ ಕೆಲವು ವಾರಗಳಲ್ಲಿ ಮಾತ್ರ ಹೆಚ್ಚು. ಹೆಚ್ಚಿನ ಭಾರತೀಯರು ಈಗಾಗಲೇ ಮೂರು ಡೋಸ್‌ ಪಡೆದಿದ್ದಾರೆ. ಇದಾಗಿ ಬಹಳ ಸಮಯ ಸಂದಿದೆ. “ನಾವೆಲ್ಲರೂ ಲಸಿಕೆಯನ್ನು ಬಹಳ ಹಿಂದೆಯೇ ಯಶಸ್ವಿಯಾಗಿ ಪಡೆದಿದ್ದೇವೆ” ಎಂದು ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್‌ನ ಗ್ಲೋಬಲ್ ಹೆಲ್ತ್‌ನ ನಿರ್ದೇಶಕ ಡಾ ಗಗನ್‌ದೀಪ್ ಕಾಂಗ್ ಹೇಳಿದ್ದಾರೆ.

“ಜನರು ಈಗ ಪ್ರತಿಕ್ರಿಯಿಸುತ್ತಿರುವುದು ಆಶ್ಚರ್ಯಕರವಾಗಿದೆ. ವ್ಯಾಕ್ಸಿನೇಷನ್ ಅಭಿಯಾನ ನಡೆಯುತ್ತಿದ್ದಾಗಲೂ ಸೈಡ್‌ ಎಫೆಕ್ಟ್‌ಗಳನ್ನು ಉತ್ತಮವಾಗಿ ದಾಖಲಿಸಲಾಗಿದೆ ಮತ್ತು ವೈಜ್ಞಾನಿಕವಾಗಿ ಸ್ವೀಕರಿಸಲಾಗಿದೆ. ಸಾಂಕ್ರಾಮಿಕ ರೋಗ ಉತ್ತುಂಗದಲ್ಲಿದ್ದಾಗ ಲಸಿಕೆಯ ಪ್ರಯೋಜನವು ಅಪಾಯವನ್ನು ಮೀರಿಸಿತ್ತು” ಎಂದು ಅಶೋಕ ವಿಶ್ವವಿದ್ಯಾಲಯದ ತ್ರಿವೇದಿ ಸ್ಕೂಲ್ ಆಫ್ ಬಯೋಸೈನ್ಸ್‌ನ ಬಯೋಸೈನ್ಸ್ ಮತ್ತು ಆರೋಗ್ಯ ಸಂಶೋಧನೆಯ ಡೀನ್ ಡಾ. ಅನುರಾಗ್ ಅಗರ್ವಾಲ್ ಹೇಳುತ್ತಾರೆ.

ಲ್ಯಾನ್ಸೆಟ್ ಗ್ಲೋಬಲ್ ಹೆಲ್ತ್‌ನಲ್ಲಿನ 2022ರ ಅಧ್ಯಯನದ ಪ್ರಕಾರ ಅಸ್ಟ್ರಾಜೆನೆಕಾ ಮೊದಲ ಡೋಸ್ ಸ್ವೀಕರಿಸಿದ ಪ್ರತಿ ಹತ್ತು ಲಕ್ಷ ಜನರಲ್ಲಿ 8.1 ಟಿಟಿಎಸ್ ಪ್ರಕರಣಗಳು ಕಂಡುಬಂದಿವೆ. ಎರಡನೇ ಡೋಸ್ ಸ್ವೀಕರಿಸಿದ ಪ್ರತಿ ಹತ್ತು ಲಕ್ಷ ಮಂದಿಯಲ್ಲಿ 2.3 ಟಿಟಿಎಸ್ ಪ್ರಕರಣಗಳು ವರದಿಯಾಗಿವೆ. ಇದರಲ್ಲಿ ಭೌಗೋಳಿಕ ವ್ಯತ್ಯಾಸವಿದೆ. ಹೆಚ್ಚಿನ ಪ್ರಕರಣಗಳು ನಾರ್ಡಿಕ್ ದೇಶಗಳಿಂದ (ನಾರ್ವೆ ಇತ್ಯಾದಿ- ಹತ್ತು ಲಕ್ಷಕ್ಕೆ 17.6) ವರದಿಯಾಗಿವೆ. ಏಷ್ಯಾದ ದೇಶಗಳಲ್ಲಿ ಅತಿ ಕಡಿಮೆ (ಪ್ರತಿ ಹತ್ತು ಲಕ್ಷಕ್ಕೆ 0.2).

ಈಗ ಲಸಿಕೆ ತೆಗೆದುಕೊಳ್ಳಬೇಕೇ?

ಈಗ ಹೆಚ್ಚಿನ ಜನರಲ್ಲಿ ಕೊರೊನಾ ರೋಗನಿರೋಧಕ ಶಕ್ತಿಯಿದ್ದು, ಲಸಿಕೆಯ ಅಗತ್ಯವಿಲ್ಲ ಎಂದು ಡಾ. ಅಗರ್ವಾಲ್ ಹೇಳುತ್ತಾರೆ. “ವೈರಸ್ ಸಂಚರಿಸುತ್ತಿದ್ದರೂ ಈಗ ಭಾರತೀಯರಲ್ಲಿ ಪ್ರತಿಕಾಯ ಮಟ್ಟ ತುಂಬಾ ಹೆಚ್ಚಿವೆ. ಒಮಿಕ್ರಾನ್‌ನಂತಹ ರೂಪಾಂತರಿಗಳಿಂದ ರಕ್ಷಿಸಬಹುದಾದ ಹೊಸ ಲಸಿಕೆಗಳನ್ನು ತೆಗೆದುಕೊಳ್ಳಬೇಕು” ಎಂದು ಅವರು ಹೇಳುತ್ತಾರೆ.

ಇದನ್ನೂ ಓದಿ: Covishield Vaccine: ಕೋವಿಡ್‌ ಲಸಿಕೆಯಿಂದ ಬರುತ್ತೆ ರಕ್ತ ಹೆಪ್ಪುಗಟ್ಟೋ ಕಾಯಿಲೆ! ವಿವರ ನಿಮಗೆ ತಿಳಿದಿರಲಿ

Continue Reading

ಕ್ರೈಂ

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌; ಬಾಲಕಿ ಉಲ್ಟಾ ಹೊಡೆದರೆ?

Hassan Pen Drive Case: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೆ ಈ ಸಂಬಂಧ ಹೇಳಿಕೆಯನ್ನು ಪಡೆಯುವಾಗ ಕಡ್ಡಾಯವಾಗಿ ಮಕ್ಕಳ ಹಕ್ಕು ಆಯೋಗದ ಸದಸ್ಯರು ಇರಬೇಕು. ನೇರವಾಗಿ ಪೊಲೀಸರು ಹೇಳಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಇಂದು ಅಥವಾ ನಾಳೆ ಸಂಜೆಯೊಳಗೆ ಅಧಿಕಾರಿಗಳು ಹೇಳಿಕೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ, ಈ ವೇಳೆ ಏನಾದರೂ ಸಂತ್ರಸ್ತೆಯ ಮಗಳು ವ್ಯತಿರಿಕ್ತ ಹೇಳಿಕೆ ನೀಡಿದಲ್ಲಿ ಇಡಿ ಪ್ರಕರಣವೇ ಉಲ್ಟಾ ಆಗಲಿದೆ.

VISTARANEWS.COM


on

Hassan Pen Drive Case POCSO case registered against Prajwal Revanna
Koo

ಬೆಂಗಳೂರು: ಹಾಸನ ಸಂಸದ (Hassan MP), ಜೆಡಿಎಸ್‌ ಮುಖಂಡ (JDS Leader), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna) ಅವರ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುವ ಸಾಧ್ಯತೆ ಹೆಚ್ಚಿದೆ.

ಈ ಸಂಬಂಧ ಮಕ್ಕಳ ಹಕ್ಕು ಆಯೋಗದಿಂದ ಪತ್ರ ಬರೆಯಲಾಗಿದೆ. ದೂರುದಾರೆಯ ಮಗಳ ಹೇಳಿಕೆಯನ್ನು ಪಡೆಯಲು ತಯಾರಿ ನಡೆಸಲಾಗುತ್ತಿದೆ. ಮಕ್ಕಳ ಹಕ್ಕು ಆಯೋಗದ ಕೌನ್ಸಿಲರ್‌ಗಳ ಸಮ್ಮುಖದಲ್ಲಿ ಹೇಳಿಕೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಇಂದು ಸಂಜೆ ಅಥವಾ ನಾಳೆ (ಮೇ 1 – 2) ಸಂತ್ರಸ್ತೆಯ ಮಗಳ ಹೇಳಿಕೆ ಪಡೆಯಲು ಮುಂದಾಗಲಾಗುತ್ತಿದೆ ಎನ್ನಲಾಗಿದೆ.

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆಗಿದ್ದರೆ ಈ ಸಂಬಂಧ ಹೇಳಿಕೆಯನ್ನು ಪಡೆಯುವಾಗ ಕಡ್ಡಾಯವಾಗಿ ಮಕ್ಕಳ ಹಕ್ಕು ಆಯೋಗದ ಸದಸ್ಯರು ಇರಬೇಕು. ನೇರವಾಗಿ ಪೊಲೀಸರು ಹೇಳಿಕೆ ಪಡೆಯಲು ಸಾಧ್ಯವಿಲ್ಲ. ಹೀಗಾಗಿ ಇಂದು ಅಥವಾ ನಾಳೆ ಸಂಜೆಯೊಳಗೆ ಅಧಿಕಾರಿಗಳು ಹೇಳಿಕೆ ಪಡೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಆದರೆ, ಈ ವೇಳೆ ಏನಾದರೂ ಸಂತ್ರಸ್ತೆಯ ಮಗಳು ವ್ಯತಿರಿಕ್ತ ಹೇಳಿಕೆ ನೀಡಿದಲ್ಲಿ ಇಡಿ ಪ್ರಕರಣವೇ ಉಲ್ಟಾ ಆಗಲಿದೆ.

SIT ತನಿಖೆಗೆ ಸಂತ್ರಸ್ತೆಯರ ಹಿಂದೇಟು; ವಿಚಾರಣೆ ಅಂತ ತೊಂದರೆ ಕೊಟ್ಟರೆ ಸೂಸೈಡ್‌ ಬೆದರಿಕೆ!

ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿಗೆ ಮಾಹಿತಿ ನೀಡಲು ಸಂತ್ರಸ್ತೆಯರು ಹಿಂದೇಟು ಹಾಕುತ್ತಿದ್ದಾರೆ. “ನನಗೆ ತೊಂದರೆ ಕೊಟ್ಟರೆ ಸೂಸೈಡ್ ಮಾಡಿಕೊಳ್ಳುತ್ತೇವೆ” ಎಂದು ಬೆದರಿಕೆ ಒಡ್ಡುತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ.

ಪ್ರಜ್ವಲ್‌ ರೇವಣ್ಣ ಒಬ್ಬ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ವಂಶದ ಕುಡಿ. ಈ ಹಿನ್ನೆಲೆಯಲ್ಲಿ ಇದೊಂದು ಹೈ ಪ್ರೊಫೈಲ್‌ ಕೇಸ್‌ ಆಗಿದೆ. ಇದರ ಜತೆಗೆ ವಿಡಿಯೊ ಲೀಕ್‌ ವೇಳೆ ಸಂತ್ರಸ್ತೆಯರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಇದರಿಂದ ಅದೆಷ್ಟೋ ಹೆಣ್ಣು ಮಕ್ಕಳು ಹೊರಗಡೆ ತಲೆ ಎತ್ತಿ ತಿರುಗುವಂತೆ ಆಗುತ್ತಿಲ್ಲ. ಈ ಮಧ್ಯೆ ಎಸ್‌ಐಟಿ ಅಧಿಕಾರಿಗಳು ತನಿಖೆಗಾಗಿ ಅವರನ್ನು ಭೇಟಿ ಮಾಡಿ ಹೇಳಿಕೆ ಪಡೆಯಲು ಹೋದರೆ ಮೊದಲೇ ನೊಂದಿರುವ ನಮ್ಮನ್ನು ಮತ್ತಷ್ಟು ನೋಯಿಸಬೇಡಿ. ಈ ಬಗ್ಗೆ ನಮ್ಮ ಬಳಿ ಏನನ್ನೂ ಕೇಳಬೇಡಿ. ಇದು ನಮ್ಮ ಜೀವನದ ಪ್ರಶ್ನೆಯಾಗಿದೆ. ಅಷ್ಟಕ್ಕೂ ನೀವು ಒತ್ತಾಯ ಮಾಡಿದ್ದೇ ಆದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದೀತು ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ ಎಂದು ತಿಳಿದುಬಂದಿದೆ.

ದೂರುದಾರೆ ಹೊರತುಪಡಿಸಿ ಉಳಿದವರು ನೋ ರೆಸ್ಪಾನ್ಸ್!

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೊದಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ಎಸ್‌ಐಟಿ ತಂಡವು ಸಾಕಷ್ಟು ಪ್ರಯತ್ನಪಟ್ಟಿದೆ. ಎಷ್ಟೇ ಪ್ರಯತ್ನ ಪಟ್ಟರೂ ಸಂತ್ರಸ್ತೆಯರು ಮಾತ್ರ ಇವರಿಗೆ ಸ್ಪಂದಿಸುತ್ತಿಲ್ಲ. ನಾವು ಏನೂ ಹೇಳಲ್ಲ, ಏನನ್ನೂ ಕೇಳಬೇಡಿ ಎಂದು ಸಂತ್ರಸ್ತೆಯರು ಹೇಳುತ್ತಿದ್ದಾರೆ.

ನಾವೇನು ದೂರು ಕೊಟ್ಟಿಲ್ಲ, ನಮ್ಮನ್ನು ಯಾಕೆ ಎಳೆದು ತರುತ್ತೀರಿ? ನಮ್ಮನ್ನು ನಮ್ಮ ಪಾಡಿಗೆ ಬಿಟ್ಟುಬಿಡಿ ಎಂದು ಹೇಳುತ್ತಿರುವುದರಿಂದ ಎಸ್‌ಐಟಿ ತನಿಖೆಗೆ ಸ್ವಲ್ಪ ಹಿನ್ನಡೆಯಾಗಿದೆ. ಹೀಗಾಗಿ ಸದ್ಯಕ್ಕೆ ದೂರುದಾರೆ ಸಂತ್ರಸ್ತೆಯ ಮಾಹಿತಿ ಆಧರಿಸಿ ತನಿಖೆಯನ್ನು ಮುನ್ನಡೆಸುವ ತೀರ್ಮಾನಕ್ಕೆ ಬರಲಾಗಿದೆ.

ಮೇ 3ರಂದು ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ, ಬಂದ ತಕ್ಷಣ ಎಸ್‌ಐಟಿ ವಶಕ್ಕೆ?

ಅಶ್ಲೀಲ ವಿಡಿಯೋದಲ್ಲಿರುವ (Obscene video) ಪ್ರಧಾನ ಆರೋಪಿ, ಹಾಸನ ಸಂಸದ (Hassan MP) ಪ್ರಜ್ವಲ್‌ ರೇವಣ್ಣ (Prajwal Revanna) ಮೇ 3ರಂದು ತಡರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಗೊತ್ತಾಗಿದೆ. ಸದ್ಯ ಅವರು ಜರ್ಮನಿಯ ಫ್ರಾಂಕ್‌ಫರ್ಟ್‌ನಲ್ಲಿದ್ದಾರೆ.

ಲುಪ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಮೇ 3ರ ಪ್ರಯಾಣಕ್ಕೆ ಪ್ರಜ್ವಲ್‌ ಟಿಕೆಟ್ ಬುಕ್ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಮೇ 3 ಮಧ್ಯರಾತ್ರಿ ಕೆಂಪೇಗೌಡ ಏರ್‌ಪೋರ್ಟ್‌ಗೆ ಅವರು ಆಗಮಿಸಬಹುದು. ಮೇ 4ರಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಅಥವಾ ಅವರು ವಿಮಾನದಿಂದ ಇಳಿದ ಕೂಡಲೇ ಅವರನ್ನು ವಿಶೇಷ ತನಿಖಾ ತಂಡ (SIT) ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮೊದಲ ಹಂತದ ಮತದಾನದ ದಿನವೇ ಪ್ರಜ್ವಲ್‌ ಅವರು ದೇಶ ಬಿಟ್ಟು ತೆರಳಿದ್ದರು. ಬ್ಯುಸಿನೆಸ್‌ ವೀಸಾವನ್ನು ಅವರು ಹೊಂದಿದ್ದಾರೆ. ಟೂರಿಸ್ಟ್‌ ವೀಸಾದಲ್ಲಿ ಅವರು ಜರ್ಮನಿಗೆ ತೆರಳಿದ್ದು, ಇದರ ಅವಧಿ 90 ದಿನಗಳ ಕಾಲ ಚಾಲೂ ಇರುತ್ತದೆ. CRPC41A ಸೆಕ್ಷನ್‌ ಪ್ರಕಾರ, ಅವರು ನೋಟಿಸ್‌ಗೆ ಸ್ಪಂದಿಸಿ ಹಾಜರಾಗದೆ ಇದ್ದರೆ ಅವರನ್ನು ಬಂಧಿಸಬಹುದಾಗಿದೆ.

ಏಕಾಏಕಿ ಬಂಧನವಿಲ್ಲ: ಪರಮೇಶ್ವರ್‌

ಆದರೆ ಹಾಗೆ ಏಕಾಏಕಿ ಯಾರನ್ನೂ ಬಂಧಿಸಲು ಮುಂದಾಗುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಇಂದು ಬೆಳಗ್ಗೆ ಹೇಳಿದ್ದಾರೆ. “ಅದಕ್ಕೆ ಪುರಾವೆಗಳು, ದೂರು, ದೂರಿನಲ್ಲಿ ಏನು ಹೇಳಿರುತ್ತಾರೆ ಅನ್ನೋದು ಮುಖ್ಯ. ಯಾವ ಸೆಕ್ಷನ್ ಬರುತ್ತೆ, ಅದರಲ್ಲಿ ‌ಅರೆಸ್ಟ್ ಮಾಡಬಹುದಾ, ಬೇಲ್ ಕೇಸಾ, ನಾನ್ ಬೇಲ್ ಕೇಸಾ ಅಂತ ನೋಡಬೇಕು. ಅದಕ್ಕೆ 41A CRPC ಸೆಕ್ಷನ್ ಅಡಿ‌ ನೋಟಿಸ್ ಕೊಟ್ಟಿದ್ದಾರೆ. ಅವರು 24 ಗಂಟೆ ಒಳಗೆ ಒಂದು ಹಾಜರಾಗಬೇಕು. ಹಾಜರಾಗದೇ ಹೋದರೆ SITಯವರು ಮುಂದಿನ ಪ್ರಕ್ರಿಯೆ ಮಾಡ್ತಾರೆ” ಎಂದಿದ್ದಾರೆ.

ಪ್ರಜ್ವಲ್‌ ತನಿಖೆ ಮುಖ್ಯ

ಸದ್ಯ ಪ್ರಜ್ವಲ್ ತನಿಖೆ ಎಸ್‌ಐಟಿಗೆ ತುಂಬಾ ಮುಖ್ಯವಾಗಿದೆ. ಎ1 ರೇವಣ್ಣ ಆಗಿದ್ದರೂ ಪ್ರಕರಣಗಳು ಹೊರಬಂದಿದ್ದು ಪ್ರಜ್ವಲ್ ರೇವಣ್ಣ ವಿಡೀಯೋಗಳಿಂದ ಆಗಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸ್ಟೇಟ್‌ಮೆಂಟ್ ಇಲ್ಲಿ ಅಗತ್ಯವಿದೆ. ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna) ಹಾಗೂ ಪ್ರಜ್ವಲ್ ರೇವಣ್ಣ (Hassan MP Prajwal Revanna) ಇವರಿಬ್ಬರ ಹೊಳೆನರಸೀಪುರ ಮನೆಯ ಬಾಗಿಲಿಗೆ ಇಂದು ನೊಟೀಸ್ (Notice) ಅನ್ನು ಎಸ್‌ಐಟಿ (SIT) ಟೀಂ ಅಂಟಿಸಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೊಟೀಸ್ ಅಂಟಿಸಿದ್ದು, ಎಸ್‌ಐಟಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ತನಿಖೆಗೆ ಬೇಕು ಎಂದರೆ ಪ್ರಜ್ವಲ್ ಹಾಜರಾಗ್ತಾನೆ ಎಂದು ಎಚ್.ಡಿ ರೇವಣ್ಣ ಹೇಳಿದ್ದಾರೆ. ಪ್ರಜ್ವಲ್ ಬಾರದಿದ್ದಲ್ಲಿ ತನಿಖೆ ನಿಧಾನಗತಿಯಲ್ಲಿ ಸಾಗಬಹುದು. ಆದರೆ ಈಗಾಗಲೇ ಎಸ್‌ಐಟಿ ವಿಚಾರಣೆ ನೋಟಿಸ್‌ ಜಾರಿ ಮಾಡಿದೆ. ಇದಕ್ಕೆ ಉತ್ತರಿಸದೆ ತಲೆ ಮರೆಸಿಕೊಂಡರೆ ಆರೋಪಿಗೆ ಇಂಟರ್‌ಪೋಲ್ ಮುಖಾಂತರ ರೆಡ್ ಕಾರ್ನರ್ ಅಥವಾ ಲುಕ್ ಔಟ್ ನೋಟಿಸ್ ಜಾರಿ ಮಾಡುವ ಸಾಧ್ಯತೆಯೂ ಎಸ್‌ಐಟಿ ಮುಂದಿದೆ.

ಈಗಾಗಲೇ ಡ್ರೈವರ್ ಕಾರ್ತಿಕ್‌ನನ್ನು ಎಸ್‌ಐಟಿ ವಿಚಾರಣೆಗೊಳಪಡಿಸಿದೆ. ಸಂತ್ರಸ್ತೆಯ ಹೇಳಿಕೆಯನ್ನೂ ದಾಖಲಿಸಿದೆ. ನಾಳೆ ಅಥವಾ ನಾಡಿದ್ದು CRPC 164 ಅಡಿಯಲ್ಲಿ ಸ್ಟೆಟ್ಮೆಂಟ್ ಪಡೆಯಲಿದೆ. ವಿಚಾರಣೆ ಬಳಿಕ ಕಾರ್ತಿಕ್ ಮೊಬೈಲ್ ಸೀಜ್ ಮಾಡಿ ಎಫ್ಎಸ್ಎಲ್‌ಗೆ ವಿಧಿವಿಜ್ಞಾನ ಪರಿಶೀಲನೆಗಾಗಿ ಕಳಿಸಲಾಗಿದೆ.

ಇದನ್ನೂ ಓದಿ: Hassan Pen Drive Case: ಹೊಳೆನರಸೀಪುರದ ಮನೆ ಬಾಗಿಲಿಗೆ ನೋಟಿಸ್‌ ಅಂಟಿಸಿ ಎಸ್‌ಐಟಿ ವಾಪಸ್!‌

ಹೋಮ ಮಾಡಿಸುತ್ತಿರುವ ರೇವಣ್ಣ

ತಮ್ಮ ವಿರುದ್ಧ ಎಸ್ಐಟಿ ತನಿಖೆ ಚುರುಕುಗೊಂಡಿರುವ ನಡುವೆ ರೇವಣ್ಣ ದೇವರು ದಿಂಡಿರ ಮೊರೆ ಹೋಗಿದ್ದಾರೆ. ಹೊಳೆನರಸೀಪುರದ ಅವರ ಮನೆಯಲ್ಲಿ ಹೋಮ ಹವನ ಮಾಡಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಎದುರಾದ ಸಂಕಷ್ಟ ನಿವಾರಣೆಗಾಗಿ ಮನೆಯೊಳಗೇ ಹೋಮ ಕುಂಡ ನಿರ್ಮಿಸಿ ಬೆಳಗ್ಗೆಯಿಂದ ಪೂಜೆ ಸಲ್ಲಿಸಲಾಗುತ್ತಿದೆ.

Continue Reading
Advertisement
E-Pass Mandatory
ಪ್ರವಾಸ13 mins ago

E-Pass Mandatory: ಊಟಿ, ಕೊಡೈಕೆನಾಲ್‌ ಪ್ರವಾಸ ಹೊರಟಿದ್ದೀರಾ? ಹಾಗಿದ್ದರೆ ಗಮನಿಸಿ

Davanagere lok sabha constituency bjp candidate gayatri siddeshwar election campaign in mayakonda
ದಾವಣಗೆರೆ17 mins ago

Lok Sabha Election 2024: ಮಾಯಕೊಂಡ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಮತಯಾಚನೆ

Hassan Pen Drive case Prajwal and Revanna arrested if they fail to appear before SIT
ಕ್ರೈಂ25 mins ago

Hassan Pen Drive Case: ಎಸ್‌ಐಟಿ ಎದುರು 24 ಗಂಟೆಯೊಳಗೆ ಹಾಜರಾಗದೇ ಇದ್ದರೆ ಪ್ರಜ್ವಲ್‌, ರೇವಣ್ಣ ಅರೆಸ್ಟ್?

Medical Negligence
ಕೊಪ್ಪಳ27 mins ago

Medical Negligence : ಸಕಾಲಕ್ಕೆ ಸಿಗದ ಚಿಕಿತ್ಸೆ; ಹೆರಿಗೆಗೂ ಮೊದಲೇ ತಾಯಿ-ಮಗು ಸಾವು

Maria alam Khan
ರಾಜಕೀಯ32 mins ago

Maria Alam Khan: “ಜಿಹಾದ್‌ಗಾಗಿ ಮತ ನೀಡಿ..”ಮಾಜಿ ಕೇಂದ್ರ ಸಚಿವರ ಸೊಸೆಯಿಂದ ಭಾರೀ ಎಡವಟ್ಟು

GST Collection
ದೇಶ33 mins ago

GST Collection: ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಜಿಎಸ್‌ಟಿ ಸಂಗ್ರಹ; ಏಪ್ರಿಲ್‌ನ ಕಲೆಕ್ಷನ್‌ ಎಷ್ಟು?

Covishield vaccine india
ಪ್ರಮುಖ ಸುದ್ದಿ37 mins ago

Covishield Vaccine: ಭಾರತದಲ್ಲಿ ಕೋವಿಶೀಲ್ಡ್‌ ಅಡ್ಡ ಪರಿಣಾಮದ ಅಪಾಯವಿಲ್ಲ: ಯಾಕೆ ಗೊತ್ತೆ?

Rupali Ganguly Of Anupamaa Fame Joins BJP
ಕಿರುತೆರೆ45 mins ago

Rupali Ganguly: ನಾನು ಮೋದಿಯ ʻಡೈ ಹಾರ್ಡ್‌ ಫ್ಯಾನ್‌ʼ ಎಂದು ಬಿಜೆಪಿ ಸೇರಿದ ಖ್ಯಾತ ಕಿರುತೆರೆ ನಟಿ!

Movie Release
ಒಟಿಟಿ49 mins ago

Movie Release: ಈ ವಾರ ಒಟಿಟಿಯಲ್ಲಿ ನೀವು ನೋಡಬಹುದಾದ ಸಿನಿಮಾ, ವೆಬ್‌ ಸಿರೀಸ್‌ಗಳಿವು; ಟ್ರೈಲರ್‌ಗಳನ್ನು ಇಲ್ಲಿ ನೋಡಿ

Hassan Pen Drive Case POCSO case registered against Prajwal Revanna
ಕ್ರೈಂ1 hour ago

Hassan Pen Drive Case: ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗುತ್ತಾ ಪೋಕ್ಸೋ ಕೇಸ್‌; ಬಾಲಕಿ ಉಲ್ಟಾ ಹೊಡೆದರೆ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ1 day ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20242 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20242 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20243 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20243 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest3 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌