T20 World Cup :​ ವಿಜಯೋತ್ಸವದ ಕ್ಷಣಗಳನ್ನು ಉಲ್ಲೇಖಿಸಿ ಬಿಸಿಸಿಐಗೆ ಕುಟುಕಿದ ಆದಿತ್ಯ ಠಾಕ್ರೆ - Vistara News

ಪ್ರಮುಖ ಸುದ್ದಿ

T20 World Cup :​ ವಿಜಯೋತ್ಸವದ ಕ್ಷಣಗಳನ್ನು ಉಲ್ಲೇಖಿಸಿ ಬಿಸಿಸಿಐಗೆ ಕುಟುಕಿದ ಆದಿತ್ಯ ಠಾಕ್ರೆ

T20 World Cup : ಟಿ20 ವಿಶ್ವ ಕಪ್​ ಗೆದ್ದುಕೊಂಡು ವೆಸ್ಟ್​ ಇಂಡೀಸ್​ನಿಂದ ಬಂದ ಭಾರತ ತಂಡದ ಆಟಗಾರರಿಗೆ ಅಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. ಮುಂಬೈನಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮ ಸ್ಟೇಡಿಯಮ್​ನ ಹೊರಗೂ ಹಾಗೂ ಒಳಗೂ ಲಕ್ಷಾಂತರ ಮಂದಿಯ ಕೂಡುವಿಕೆಗೆ ಸಾಕ್ಷಿಯಾಗಿತ್ತು. ಇದನ್ನು ಉಲ್ಲೇಖಿಸಿ ಬಿಸಿಸಿಐಗೆ ಪರೋಕ್ಷವಾಗಿ ಕುಟುಕಿದ್ದಾರೆ ಆದಿತ್ಯ ಠಾಕ್ರೆ.

VISTARANEWS.COM


on

T20 World Cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಐಸಿಸಿ ಏಕದಿನ ವಿಶ್ವಕಪ್ 2023 ರ ಫೈನಲ್ ಪಂದ್ಯವನ್ನು ಮುಂಬೈನಲ್ಲಿ ಆಯೋಜಿಸದೆ ಗುಜರಾತ್​​ನ ಅಹಮದಾಬಾದ್​ನಲ್ಲಿರುವ ವಿಶ್ವ ವಿಖ್ಯಾತ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಡಿಸಿರುವ ಬಗ್ಗೆ ಕ್ರಿಕೆಟ್ ಮುಂಬೈ ಅಭಿಮಾನಿಗಳಿಗೆ ಬೇಸರವಿತ್ತು. ಕ್ರಿಕೆಟ್​​ ಕಾಶಿಯಾಗಿರುವ ವಾಂಖೆಡೆ ಸ್ಟೇಡಿಯಮ್​ನಲ್ಲೇ ಪಂದ್ಯ ನಡೆಸಬೇಕು ಎಂಬುದು ಬಹುತೇಕ ಭಾರತೀಯರ ಒತ್ತಾಸೆಯಾಗಿತ್ತು. ಆದರೆ, ದೊಡ್ಡ ಸ್ಟೇಡಿಯಮ್​ (1.30 ಲಕ್ಷ ಮಂದಿ ಪ್ರೇಕ್ಷಕರನ್ನು ತುಂಬಿಕೊಳ್ಳುವ ಸಾಮರ್ಥ್ಯ) ಎಂಬ ಕಾರಣಕ್ಕೆ ನರೇಂದ್ರ ಮೋದಿ ಸ್ಟೇಡಿಯಮ್​ಗೆ ಫೈನಲ್ ಪಂದ್ಯವನ್ನು ವರ್ಗಾಯಿಸಲಾಯಿತ್ತು. ಫೈನಲ್​ನಲ್ಲಿ ಭಾರತ ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತಿತ್ತು. ಇದೀಗ ಆ ನೋವನ್ನು ಶಿವಸೇನೆ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಆದಿತ್ಯ ಠಾಕ್ರೆ ಹೊರ ಹಾಕಿದ್ದಾರೆ. ಅದಕ್ಕೆ ಕಾರಣವೂ ಇದೆ. ಟಿ20 ವಿಶ್ವ ಕಪ್​ ಗೆದ್ದುಕೊಂಡು (T20 World Cup ) ವೆಸ್ಟ್​ ಇಂಡೀಸ್​ನಿಂದ ಬಂದ ಭಾರತ ತಂಡದ ಆಟಗಾರರಿಗೆ ಅಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಲಕ್ಷಾಂತರ ಮಂದಿ ಸೇರಿದ್ದರು. ಮುಂಬೈನಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮ ಸ್ಟೇಡಿಯಮ್​ನ ಹೊರಗೂ ಹಾಗೂ ಒಳಗೂ ಲಕ್ಷಾಂತರ ಮಂದಿಯ ಕೂಡುವಿಕೆಗೆ ಸಾಕ್ಷಿಯಾಗಿತ್ತು. ಇದನ್ನು ಉಲ್ಲೇಖಿಸಿ ಬಿಸಿಸಿಐಗೆ ಪರೋಕ್ಷವಾಗಿ ಕುಟುಕಿದ್ದಾರೆ ಆದಿತ್ಯ ಠಾಕ್ರೆ.

ಮುಂಬೈನಲ್ಲಿ ನಿನ್ನೆ ನಡೆದ ವಿಶ್ವ ಕಪ್​ ಟ್ರೋಫಿಯ ಸಂಭ್ರಮಾಚರಣೆ ಬಿಸಿಸಿಐಗೆ ನೇರ ಸಂದೇಶವಾಗಿದೆ. ವಿಶ್ವಕಪ್ ಫೈನಲ್ ಪಂದ್ಯವನ್ನು ಮುಂಬೈನಿಂದ ಎಂದಿಗೂ ಕಸಿದುಕೊಳ್ಳಬೇಡಿ” ಎಂದು ಆದಿತ್ಯ ಠಾಕ್ರೆ ಎಕ್ಸ್​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಐಸಿಸಿ ಕ್ರಿಕೆಟ್ ವಿಶ್ವಕಪ್ 2024 ರ ಚಾಂಪಿಯನ್ ಆಗಿರುವ ಭಾರತೀಯ ಕ್ರಿಕೆಟ್ ತಂಡವನ್ನು ಮುಂಬೈನಲ್ಲಿ ಗುರುವಾರ ವಿಜಯೋತ್ಸವದ ಮೆರವಣಿಗೆಯಲ್ಲಿ ಭಾರಿ ಜನಸಮೂಹ ಸ್ವಾಗತಿಸಿದ್ದರು. ಅದಾದ ಒಂದು ದಿನದ ನಂತರ ಆದಿತ್ಯ ಬಿಸಿಸಿಐ ವಿರುದ್ಧ ಟೀಕೆ ಮಾಡಿದ್ದಾರೆ.

ಇದನ್ನೂ ಓದಿ: Virat Kohli’s Phone Wallpaper: ಕೊಹ್ಲಿಯ ಮೊಬೈಲ್​ ​ವಾಲ್​ ಪೇಪರ್​ನಲ್ಲಿರುವ ವ್ಯಕ್ತಿ ಯಾರು? ಇವರ ಹಿನ್ನಲೆ ಏನು?

ಟಿ 20 ಭಾರತೀಯ ಕ್ರಿಕೆಟ್ ತಂಡವನ್ನು ಸ್ವಾಗತಿಸಲು ಅಭಿಮಾನಿಗಳು ವಾಂಖೆಡೆ ಕ್ರೀಡಾಂಗಣದಲ್ಲಿ ಗಂಟೆಗಳ ಕಾಲ ಕಾದಿದ್ದರು. ಎಂಎಸ್ ಧೋನಿ ನಾಯಕತ್ವದಲ್ಲಿ 2007 ರಲ್ಲಿ ಭಾರತದ ಮೊದಲ ಟಿ 20 ವಿಶ್ವಕಪ್ ಗೆಲುವು, 2011 ರ ಕ್ರಿಕೆಟ್ ವಿಶ್ವಕಪ್ ಗೆಲುವು ಮತ್ತು 2013 ರಲ್ಲಿ ಸಚಿನ್ ತೆಂಡೂಲ್ಕರ್ ಅವರ ಭಾವನಾತ್ಮಕ ವಿದಾಯ ಸೇರಿದಂತೆ ಅನೇಕ ಐತಿಹಾಸಿಕ ಕ್ರಿಕೆಟ್ ಘಟನೆಗಳಿಗೆ ವಾಂಖೆಡೆ ಆತಿಥ್ಯ ವಹಿಸಿದೆ.

ಅವಕಾಶಗಳು ಮತ್ತು ಕಾರ್ಯಕ್ರಮಗಳನ್ನು ಮುಂಬೈನಿಂದ ಅಹಮದಾಬಾದ್​​ಗೆ ಸ್ಥಳಾಂತರಿಸಿದ್ದಕ್ಕಾಗಿ ಠಾಕ್ರೆ ಈ ಹಿಂದೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮೇ ತಿಂಗಳ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಹಿಂದೂಸ್ತಾನ್ ಟೈಮ್ಸ್​ಗೆ ನೀಡಿದ ಸಂದರ್ಶನದಲ್ಲಿ, ಕೈಗಾರಿಕೆಗಳು ಮತ್ತು ಯೋಜನೆಗಳನ್ನು ಗುಜರಾತ್​ಗೆ ಸ್ಥಳಾಂತರಿಸಿದ್ದರಿಂದ ಮಹಾರಾಷ್ಟ್ರವು ಗಮನಾರ್ಹ ನಷ್ಟ ಎದುರಿಸಿದೆ ಎಂದು ಆದಿತ್ಯ ಉಲ್ಲೇಖಿಸಿದ್ದರು.

ಇಂಟರ್​​ನ್ಯಾಷನಲ್​ ಫೈನಾನ್ಸ್ ಸೆಂಟರ್, ವೇದಾಂತ ಫಾಕ್ಸ್​ಕಾನ್​, ಬೃಹತ್ ಡ್ರಗ್​ (ಔಷಧ) ಪಾರ್ಕ್ ಮತ್ತು ವೈದ್ಯಕೀಯ ಸಾಧನಗಳ ಪಾರ್ಕ್ ಸೇರಿಕೊಂಡಿವೆ. ಮುಂಬೈನಲ್ಲಿ ನಡೆಯಬೇಕಿದ್ದ ವಿಶ್ವಕಪ್ ಫೈನಲ್ ಪಂದ್ಯವನ್ನು ಅಹಮದಾಬಾದ್​ಗೆ ಸ್ಥಳಾಂತರಿಸಲಾಗಿದೆ ಎಂಬುದಾಗಿಯೂ ಅವರು ಗಮನ ಸೆಳೆದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

France Election: ಫ್ರಾನ್ಸ್ ಚುನಾವಣೆ: ಎಡ ಪಕ್ಷಗಳ ಒಕ್ಕೂಟದ ಮೇಲುಗೈ; ಅತಂತ್ರ ಫಲಿತಾಂಶ

France Election: ಇಮ್ಯಾನುಯೆಲ್‌ ಮ್ಯಾಕ್ರನ್‌ ನೇತೃತ್ವದ ಒಕ್ಕೂಟವು 160 ಕ್ಷೇತ್ರಗಳನ್ನು ಗೆದ್ದರೂ ಬಹುಮತ ಸಾಧಿಸಲು ಹಲವು ಪಕ್ಷಗಳ ಬೆಂಬಲ ಪಡೆಯಬೇಕಾಗುತ್ತದೆ. ನ್ಯಾಷನಲ್‌ ಪಾಪುಲರ್‌ ಫ್ರಂಟ್‌ ತೀವ್ರತರವಾದ ಎಡಪಂಥೀಯವಾದದಲ್ಲಿ ನಂಬಿಕೆ ಇರಿಸುವ ಪಕ್ಷವಾಗಿದ್ದು, ಇಮ್ಯಾನುಯೆಲ್‌ ಮ್ಯಾಕ್ರನ್‌ ಅವರಿಗೆ ಸೋಷಿಯಲಿಸ್ಟ್‌ ಪಕ್ಷದ ಬೆಂಬಲವು ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ.

VISTARANEWS.COM


on

France Election
Photo Courtesy- AP
Koo

ಪ್ಯಾರಿಸ್:‌ ಐರೋಪ್ಯ ಒಕ್ಕೂಟದ ದ್ವಿತೀಯ ಬೃಹತ್‌ ಆರ್ಥಿಕತೆ ಹೊಂದಿರುವ ರಾಷ್ಟ್ರವಾದ, ಕೆಲವೇ ದಿನಗಳಲ್ಲಿ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಸಾಕ್ಷಿಯಾಗುವ ಫ್ರಾನ್ಸ್‌ ಸಾರ್ವತ್ರಿಕ ಚುನಾವಣೆ ಫಲಿತಾಂಶ (France Election) ಪ್ರಕಟವಾಗಿದ್ದು, ಎಡಪಕ್ಷಗಳ ಒಕ್ಕೂಟವೇ ಪಾರಮ್ಯ ಸಾಧಿಸಿದೆ. ಇದರೊಂದಿಗೆ ಆಡಳಿತಾರೂಢ ಇಮ್ಯಾನುಯೆಲ್‌ ಮ್ಯಾಕ್ರನ್‌ (Emmanuel Macron) ನೇತೃತ್ವದ ಒಕ್ಕೂಟಕ್ಕೆ ಭಾರಿ ಹಿನ್ನಡೆಯಾಗಿದೆ. ಆದರೆ, ಯಾವುದೇ ಒಕ್ಕೂಟಕ್ಕೆ ಬಹುಮತ ಸಿಕ್ಕಿಲ್ಲ ಎಂಬುದು ಗಮನಾರ್ಹವಾಗಿದೆ. ಇಷ್ಟಾದರೂ ಎಡಪಕ್ಷಗಳು ಒಗ್ಗೂಡಿ ಸರ್ಕಾರ ರಚಿಸಲು ಮುಂದಾಗಿವೆ.

ಫ್ರಾನ್ಸ್‌ ನ್ಯಾಷನಲ್‌ ಅಸೆಂಬ್ಲಿಯ ಒಟ್ಟು 577 ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆ ಫಲಿತಾಂಶದ ನಿಖರ ಮಾಹಿತಿಯು ಸೋಮವಾರ (ಜುಲೈ 8) ಲಭ್ಯವಾಗಿದೆ. ನ್ಯೂ ಪಾಪುಲರ್‌ ಫ್ರಂಟ್‌ ನೇತೃತ್ವದ, ಎಡಪಕ್ಷಗಳ ಒಕ್ಕೂಟವು 180 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಹಾಲಿ ಅಧ್ಯಕ್ಷ ಇಮ್ಯಾನುಯೆಲ್‌ ಮ್ಯಾಕ್ರನ್‌ ನೇತೃತ್ವದ ಒಕ್ಕೂಟವು 160 ಕ್ಷೇತ್ರ ಹಾಗೂ ಮರೀನ್‌ ಲೆ ಪೆನ್‌ ನೇತೃತ್ವದ ನ್ಯಾಷನಲ್‌ ರ‍್ಯಾಲಿ ಪಕ್ಷದ ಮುಂಚೂಣಿಯ ಒಕ್ಕೂಟವು 140 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇದರೊಂದಿಗೆ, ಯಾವೊಂದು ಒಕ್ಕೂಟವೂ 289ರ ಮ್ಯಾಜಿಕ್‌ ನಂಬರ್‌ ದಾಟುವಲ್ಲಿ ವಿಫಲವಾಗಿವೆ. ಆದರೆ, ಸರ್ಕಾರ ರಚಿಸಲು ಎಡಪಕ್ಷಗಳಿಗೆ ಹೆಚ್ಚು ಅವಕಾಶಗಳಿವೆ ಎಂದು ಹೇಳಲಾಗುತ್ತಿದೆ.

ಎಡಪಂಥೀಯ ಪಕ್ಷಗಳ ಸಂಭ್ರಮಾಚರಣೆ

ಪ್ರಧಾನಿ ಆಯ್ಕೆಗೆ ಎಡಪಕ್ಷಗಳ ಕಸರತ್ತು

ಫ್ರಾನ್ಸ್‌ ನೂತನ ಪ್ರಧಾನಿಯನ್ನು ಆಯ್ಕೆ ಮಾಡಲು ಎಡಪಕ್ಷಗಳ ಒಕ್ಕೂಟವು ಕಸರತ್ತು ನಡೆಸುತ್ತಿವೆ. “ಶೀಘ್ರದಲ್ಲೇ ನ್ಯಾಷನಲ್‌ ಪಾಪುಲರ್‌ ಫ್ರಂಟ್‌ ನೇತೃತ್ವದ ಒಕ್ಕೂಟದ ಸಭೆ ನಡೆಸಿ, ನೂತನ ಪ್ರಧಾನಿಯನ್ನು ಒಮ್ಮತದಿಂದ ಆಯ್ಕೆ ಮಾಡುತ್ತೇವೆ” ಎಂದು ಒಕ್ಕೂಟದ ಭಾಗವಾಗಿರುವ ಸೋಷಿಯಲಿಸ್ಟ್‌ ಪಕ್ಷದ ನಾಯಕ ಒಲಿವರ್‌ ಫಾರ್‌ ಅವರು ಮಾಹಿತಿ ನೀಡಿದ್ದಾರೆ. ಇದಕ್ಕಾಗಿ ಬೇರೆ ಪಕ್ಷಗಳೊಂದಿಗೆ ಒಕ್ಕೂಟದ ನಾಯಕರು ಸಂಪರ್ಕ ಸಾಧಿಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಎಡಪಕ್ಷಗಳದ್ದೇ ಸರ್ಕಾರ?

ಇಮ್ಯಾನುಯೆಲ್‌ ಮ್ಯಾಕ್ರನ್‌ ನೇತೃತ್ವದ ಒಕ್ಕೂಟವು 160 ಕ್ಷೇತ್ರಗಳನ್ನು ಗೆದ್ದರೂ ಬಹುಮತ ಸಾಧಿಸಲು ಹಲವು ಪಕ್ಷಗಳ ಬೆಂಬಲ ಪಡೆಯಬೇಕಾಗುತ್ತದೆ. ನ್ಯಾಷನಲ್‌ ಪಾಪುಲರ್‌ ಫ್ರಂಟ್‌ ತೀವ್ರತರವಾದ ಎಡಪಂಥೀಯವಾದದಲ್ಲಿ ನಂಬಿಕೆ ಇರಿಸುವ ಪಕ್ಷವಾಗಿದ್ದು, ಇಮ್ಯಾನುಯೆಲ್‌ ಮ್ಯಾಕ್ರನ್‌ ಅವರಿಗೆ ಸೋಷಿಯಲಿಸ್ಟ್‌ ಪಕ್ಷದ ಬೆಂಬಲವು ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ. ಹಾಗಾಗಿ, ಎಡಪಕ್ಷಗಳ ನೇತೃತ್ವದ ಸರ್ಕಾರವೇ ಅಸ್ತಿತ್ವಕ್ಕೆ ಬರುವುದು ನಿಶ್ಚಿತ ಎಂದು ಹೇಳಲಾಗುತ್ತಿದೆ. ಇದರೊಂದಿಗೆ ಬ್ರಿಟನ್‌ನಲ್ಲಿ ಬಲಪಂಥೀಯ ಸರ್ಕಾರ ಪತನಗೊಂಡು, ಎಡಪಕ್ಷ ಅಧಿಕಾರಕ್ಕೆ ಬಂದಿರುವ ಬೆನ್ನಲ್ಲೇ, ಫ್ರಾನ್ಸ್‌ನಲ್ಲೂ ಎಡಪಕ್ಷಗಳೇ ಪಾರಮ್ಯ ಸಾಧಿಸುವ ಲಕ್ಷಣಗಳು ದಟ್ಟವಾಗಿವೆ.

ಇದನ್ನೂ ಓದಿ: Kamala Harris: ಅಮೆರಿಕ ಚುನಾವಣೆ; ಟ್ರಂಪ್‌ಗೆ ಪೈಪೋಟಿ ನೀಡಲು ಬೈಡನ್‌ಗಿಂತ ಕಮಲಾ ಹ್ಯಾರಿಸ್‌ ಸಮರ್ಥ ಎನ್ನುತ್ತವೆ ಸಮೀಕ್ಷೆ!

Continue Reading

ಪ್ರಮುಖ ಸುದ್ದಿ

Chennai Police commissioner : ಬಿಎಸ್‌‌ಪಿ ರಾಜ್ಯಾಧ್ಯಕ್ಷನ ಹತ್ಯೆ ಎಫೆಕ್ಟ್; ಚೆನ್ನೈ ಪೊಲೀಸ್ ಕಮಿಷನರ್ ಎತ್ತಂಗಡಿ

Chennai Police commissioner

VISTARANEWS.COM


on

Chennai Police commissioner
Koo

ಚೆನ್ನೈ: ತಮಿಳುನಾಡಿನ ಬಿಎಸ್​ಪಿ ಪಕ್ಷದ ಮುಖ್ಯಸ್ಥ ಕೆ. ಆರ್ಮ್​ಸ್ಟ್ರಾಂಗ್ ಅವರನ್ನು ಬರ್ಬರ ಕೊನೆಯಾದ ಕೆಲವೇ ದಿನಗಳ ಬಳಿಕ ತಮಿಳುನಾಡು ಸರ್ಕಾರ, ಗ್ರೇಟರ್ ಚೆನ್ನೈ ಪೊಲೀಸ್ ಆಯುಕ್ತ (Chennai Police commissioner) ಸಂದೀಪ್ ರಾಯ್ ರಾಥೋಡ್ ಅವರನ್ನು ವರ್ಗಾವಣೆ ಮಾಡಿದೆ. ಸಂದೀಪ್ ರಾಯ್ ರಾಥೋಡ್ ಅವರ ಸ್ಥಾನಕ್ಕೆ ಹಿರಿಯ ಐಪಿಎಸ್ ಅಧಿಕಾರಿ ಎ.ಅರುಣ್ ಅವರನ್ನು ಸೋಮವಾರ ನೇಮಿಸಲಾಗಿದೆ.

ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿ ಪಿ.ಅಮುದಾ ಹೊರಡಿಸಿದ ಆದೇಶದ ಪ್ರಕಾರ, ಐಪಿಎಸ್ ಸಂದೀಪ್ ರೈ ರಾಥೋಡ್ ಅವರನ್ನು ಹುದ್ದೆಯಿಂದ ಇಳಿಸುವ ಮೂಲಕ ಎ.ಅರುಣ್ ಅವರನ್ನು ಗ್ರೇಟರ್ ಚೆನ್ನೈನ ಎಡಿಜಿಪಿ / ಪೊಲೀಸ್ ಆಯುಕ್ತರನ್ನಾಗಿ ನೇಮಿಸಲಾಗಿದೆ. ಪ್ರಸ್ತುತ ಐಪಿಎಸ್ ರಾಜೀವ್ ಕುಮಾರ್ ನೇತೃತ್ವದ ಚೆನ್ನೈನ ಪೊಲೀಸ್ ತರಬೇತಿ ಕಾಲೇಜಿನ ಡಿಜಿಪಿಯಾಗಿ ಅವರನ್ನು ನೇಮಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಹಿರಿಯ ಐಪಿಎಸ್ ಅಧಿಕಾರಿ, ಎಡಿಜಿಪಿ ಡೇವಿಡ್ಸನ್ ದೇವಸಿರ್ವಥ ಅವರನ್ನು ಈಗ ಅರುಣ್ ಅವರ ಬದಲಿಗೆ ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿಯಾಗಿ ನೇಮಿಸಲಾಗಿದೆ. ಗೃಹ ಇಲಾಖೆಯ ನೇತೃತ್ವವನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಹಿಸಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಚೆನ್ನೈನಲ್ಲಿ ಕೊಲೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂಬ ರಾಥೋಡ್ ಅವರ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು/

ಆರ್ಮ್​ಸ್ಟ್ರಾಂಗ್​ ಅವರನ್ನು ಅವರ ಬೆಂಬಲಿಗರಂತೆ ಸೋಗು ಹಾಕಿಕೊಂಡು ಬಂದ ಆರು ದುಷ್ಕರ್ಮಿಗಳು ಶುಕ್ರವಾರ ಕೊಚ್ಚಿ ಕೊಲೆ ಮಾಡಿದ್ದರು. ಅಪರಾಧ ಮಾಡಿದ ನಂತರ ದಾಳಿಕೋರರು ಬೈಕ್ ಗಳಲ್ಲಿ ಸ್ಥಳದಿಂದ ಪರಾರಿಯಾಗಿದ್ದರು. ಕೊಲೆಯ ತನಿಖೆ ನಡೆಸುತ್ತಿರುವ ಪೊಲೀಸರು ಅಪರಾಧಕ್ಕೆ ಸಂಬಂಧಿಸಿದಂತೆ ಈವರೆಗೆ ಹನ್ನೊಂದು ಜನರನ್ನು ಬಂಧಿಸಿದ್ದಾರೆ. ಆರ್ಮ್​​ಸ್ಟ್ರಾಂಗ್ ಸೂಚನೆಯ ಮೇರೆಗೆ ಒಂದು ವರ್ಷದ ಹಿಂದೆ ಹತ್ಯೆಗೀಡಾದ ದರೋಡೆಕೋರ ಆರ್ಕಾಟ್ ಸುರೇಶ್ ಹತ್ಯೆಗೆ ಸಂಬಂಧಿಸಿದ ಸೇಡಿನ ಕೊಲೆಯಾಗಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Indecent Behaviour: ಕಾಲೇಜು ಯುವತಿಯವರಿಗೆ ಮರ್ಮಾಂಗ ತೋರಿಸಿ ಎಸ್ಕೇಪ್‌ ಆಗಿದ್ದವ ಪೊಲೀಸ್‌ ವಶಕ್ಕೆ

ಹತ್ಯೆಗೀಡಾದ ಬಿಎಸ್ಪಿ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ಚೆನ್ನೈಗೆ ಭೇಟಿ ನೀಡಿದ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಹತ್ಯೆಯ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ. ಅಪರಾಧದ ಹಿಂದಿನ ನಿಜವಾದ ಅಪರಾಧಿಗಳನ್ನು ತಮಿಳುನಾಡು ಪೊಲೀಸರು ಬಂಧಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.

“ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಬಲಪಡಿಸಲು ನಾನು ರಾಜ್ಯ ಸರ್ಕಾರವನ್ನು, ವಿಶೇಷವಾಗಿ ಮುಖ್ಯಮಂತ್ರಿಯನ್ನು ಒತ್ತಾಯಿಸುತ್ತೇನೆ. ದುರ್ಬಲ ವರ್ಗಗಳು ಸುರಕ್ಷಿತವಾಗಿರಬೇಕು. ಸರ್ಕಾರ ಗಂಭೀರವಾಗಿದ್ದರೆ ಆರೋಪಿಗಳನ್ನು ಬಂಧಿಸಬಹುದಿತ್ತು. ಹಾಗೆ ಆಗದ ಕಾರಣ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ನಾವು ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

Continue Reading

ಪ್ರಮುಖ ಸುದ್ದಿ

CM Siddaramaiah: ಆಗಸ್ಟ್‌ನಲ್ಲಿ ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ

CM Siddaramaiah: ಜನಸ್ಪಂದನ ಕಾರ್ಯಕ್ರಮವನ್ನು ಎಲ್ಲಾ ಜಿಲ್ಲೆಗಳಲ್ಲಿ ಆರಂಭಿಸಬೇಕು. ವಿಧಾನಸಭೆಯ ಅಧಿವೇಶನ ಮುಗಿದ ಬಳಿಕ ಜಿಲ್ಲಾ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಬೇಕು. ಪ್ರತೀ ಜಿಲ್ಲಾ ಉಸ್ತುವಾರಿ ಸಚಿವರೂ ತಪ್ಪದೇ ಜನಸ್ಪಂದನಾ ಸಭೆಗಳನ್ನು ಮಾಡಬೇಕು. ಸ್ವೀಕರಿಸುವ ಅರ್ಜಿಗಳನ್ನು ಆದಷ್ಟು ಬೇಗನೆ ಜಿಲ್ಲಾಧಿಕಾರಿಗಳು ವಿಲೇವಾರಿ ಮಾಡಬೇಕು ಎಂದು ಸಿಎಂ ಸೂಚನೆ ನೀಡಿದರು.

VISTARANEWS.COM


on

Cm Siddaramaiah in Janatha Darshan
Koo

ಬೆಂಗಳೂರು: ಆಗಸ್ಟ್ (August) ತಿಂಗಳಲ್ಲಿ ಕಲಬುರಗಿಯಲ್ಲಿ (Kalaburagi) ಜನಸ್ಪಂದನ (Janaspandana) ನಡೆಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚನೆ ನೀಡಿದ್ದಾರೆ. ಕಳೆದ ಬಾರಿ ಬೆಂಗಳೂರಿನಲ್ಲಿ (Bangalore) ಮುಖ್ಯಮಂತ್ರಿಗಳ ಬೃಹತ್‌ ಜನತಾ ದರ್ಶನ (Janatha Darshana) ಕಾರ್ಯಕ್ರಮ ನಡೆದಿತ್ತು. ಅದರಂತೆ ಈ ಬಾರಿ ಕಲ್ಯಾಣ ಕರ್ನಾಟಕದಲ್ಲಿ (Kalyana Karnataka) ಜನಸ್ಪಂದನೆ ನಡೆಸಲು ಸಿಎಂ ಮುಂದಾಗಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿದರು.

ಜನಸ್ಪಂದನ ಕಾರ್ಯಕ್ರಮವನ್ನು ಎಲ್ಲಾ ಜಿಲ್ಲೆಗಳಲ್ಲಿ ಆರಂಭಿಸಬೇಕು. ವಿಧಾನಸಭೆಯ ಅಧಿವೇಶನ ಮುಗಿದ ಬಳಿಕ ಜಿಲ್ಲಾ ಜನಸ್ಪಂದನ ಕಾರ್ಯಕ್ರಮವನ್ನು ನಡೆಸಬೇಕು. ಪ್ರತೀ ಜಿಲ್ಲಾ ಉಸ್ತುವಾರಿ ಸಚಿವರೂ ತಪ್ಪದೇ ಜನಸ್ಪಂದನಾ ಸಭೆಗಳನ್ನು ಮಾಡಬೇಕು. ಸ್ವೀಕರಿಸುವ ಅರ್ಜಿಗಳನ್ನು ಆದಷ್ಟು ಬೇಗನೆ ಜಿಲ್ಲಾಧಿಕಾರಿಗಳು ವಿಲೇವಾರಿ ಮಾಡಬೇಕು ಎಂದು ಸಿಎಂ ಸೂಚನೆ ನೀಡಿದರು.

ಜನತಾ ದರ್ಶನದಲ್ಲಿ ಬಂದ ಅರ್ಜಿಗಳಲ್ಲಿ ಈಗಾಗಲೇ 40702 ಅರ್ಜಿಗಳನ್ನು ವಿಲೇವಾರಿ ಮಾಡಿದ್ದು, ಇನ್ನೂ 8 ಸಾವಿರ ಅರ್ಜಿಗಳು ವಿಲೇವಾರಿಗೆ ಬಾಕಿಯಿವೆ. ತಕ್ಷಣ ವಿಲೇವಾರಿ ಮಾಡುವಂತೆ ಸಿಎಂ ಸೂಚನೆ ನೀಡಿದರು.

ರಾಜ್ಯದಲ್ಲಿ ಶೇ.80 ಬಿಪಿಎಲ್‌ ಕಾರ್ಡ್‌! ಕಡಿತ ಮಾಡಲು ಸಿಎಂ ಸೂಚನೆ

ರಾಜ್ಯದಲ್ಲಿ ಬಿಪಿಎಲ್‌ ಕಾರ್ಡುದಾರರ (BPL Card holders) ಸಂಖ್ಯೆ ಮಿತಿ ಮೀರಿದೆ. ಅನರ್ಹರ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿ ಅರ್ಹರಿಗೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಸೂಚಿಸಿದ್ದಾರೆ.

ರಾಜ್ಯದಲ್ಲಿ ಶೇ. 80ರಷ್ಟು ಬಿಪಿಎಲ್‌ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸೂಚಿಸಿದರು.

ಜನರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ, ಅವರ ದೂರುಗಳನ್ನು ಆಲಿಸಿ, ಅಗತ್ಯ ಪರಿಹಾರ ಒದಗಿಸಬೇಕು. ರಾಜ್ಯದಲ್ಲಿ ಈ ಬಾರಿ ಬರ ನಿರ್ವಹಣೆಯನ್ನು ಉತ್ತಮವಾಗಿ ಮಾಡಿದ್ದೇವೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಮೊದಲೇ ಗುರುತಿಸಿ. ಪರ್ಯಾಯ ವ್ಯವಸ್ಥೆ ಮಾಡಿದ ಕಾರಣ ಎಲ್ಲೂ ಹೆಚ್ಚು ತೊಂದರೆಯಾಗಿಲ್ಲ. ಬರ ನಿರ್ವಹಣೆಗೆ 85 ಕೋಟಿ ವೆಚ್ಚವಾಗಿದ್ದು ಪಾರದರ್ಶಕವಾಗಿ ಮಾಡಲಾಗಿದೆ. 783 ಕೋಟಿ ಜಿಲ್ಲಾಧಿಕಾರಿ ಖಾತೆಯಲ್ಲಿ ಲಭ್ಯವಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಅವಧಿಯಲ್ಲಿ ಇದುವರೆಗೆ ಶೇ.7ರಷ್ಟು ಹೆಚ್ಚು ಮಳೆಯಾಗಿದೆ. ಈ ವರ್ಷ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅತಿವೃಷ್ಟಿಯಿಂದ ಸಮಸ್ಯೆಯಾಗುವ ಗ್ರಾಮಗಳನ್ನು ಗುರುತಿಸಲಾಗಿದೆ. 225 ಅಂತಹ ಜಲಾಗ್ರಾಮಗಳನ್ನು 1247ಗ್ರಾಮ ಪಂಚಾಯತ್‌ ಗುರುತಿಸಲಾಗಿದೆ. ಪ್ರತಿಯೊಂದು ಗ್ರಾಂ ಪಂಚಾಯತ್‌ನಲ್ಲಿ ಟಾಸ್ಕ್‌ ಪೋಸ್ಟ್‌ ರಚನೆ ಮಾಡಿ ಕಂದಾಯ ಇಲಾಖೆ, ಪಂಚಾಯತ್‌, ಪೋಲಿಸ್‌, ಅಗ್ನಿಶಾಮಕ, ಆರೋಗ್ಯ ಸೇರಿದಂತೆ ತಾಲೂಕು ಒಬ್ಬರಂತೆ ನೋಡಲ್‌ ಅಧಿಕಾರಿ ನೇಮಕಕ್ಕೆ ಸೂಚನೆ ನೀಡಲಾಗಿದೆ. ಎಲ್ಲಾ ಕಡೆ ಅಣಕುಪ್ರದರ್ಶನ ಮಾಡಲಾಗುತ್ತಿದೆ. ಬೆಳೆ ಹಾನಿ, ಮನೆ ಹಾನಿ ಎಸ್‌ಡಿಆರ್‌ಎಫ್‌ ಪ್ರಕಾರ ನೀಡಲು, ಜಿಲ್ಲಾಡಳಿತ ಮುಂಜಾಗರೂಕತೆ ವಹಿಸಲು ಸೂಚನೆ ನೀಡಲಾಗಿದೆ ಎಂದರು.

ಪ್ರಾಣ ಹಾನಿ ತಪ್ಪಿಸುವುದು ಆದ್ಯತೆಯಾಗಬೇಕು. 27 ಜಿಲ್ಲೆ 177 ತಾಲೂಕುಗಳು, 1247 ಗ್ರಾಮ ಪಂಚಾಯತ್‌ಗಳಲ್ಲಿ ಅತಿವೃಷ್ಟಿಗೆ ತುತ್ತಾಗುವುದನ್ನು ಗುರುತಿಸಲಾಗಿದ್ದು, ಪ್ರತಿ ಕಡೆ ಟಾಸ್ಕ್‌ಪೋರ್ಸ್‌ ರಚಿಸಬೇಕು. 20,38,334 ಜನರು ಪದೇ ಪದೇ ಪ್ರವಾಹಕ್ಕೆ ತುತ್ತಾಗುವುದನ್ನು ಗುರುತಿಸಲಾಗಿದೆ. ಅಂತಹ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಿ ಮನೆ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. 2225 ಗ್ರಾಮಗಳಲ್ಲಿ 2242 ಕಾಳಜಿ ಕೇಂದ್ರಗಳನ್ನು ಗುರುತಿಸಲಾಗಿದೆ. ಉತ್ತಮವಾಗಿ ಮಳೆಯಾಗಿದೆ. ಜಲಾಶಯಗಳಲ್ಲಿ ಒಟ್ಟು 293 ಟಿಎಂಸಿ ನೀರು ಸಂಗ್ರಹವಿದೆ. ಈ ಬಾರಿ ಪೂರ್ವ ಮುಂಗಾರಿನಲ್ಲಿ 3714 ಮನೆಗಳಿಗೆ ಹಾನಿ ಉಂಟಾಗಿದ್ದು, ಎಸ್‌ಡಿಆರ್‌ಎಫ್‌ ಮಾನದಂಡ ಪ್ರಕಾರ ಪರಿಹಾರವನ್ನು ತಕ್ಷಣ ಒದಗಿಸಬೇಕು. ಹವಾಮಾನ ಇಲಾಖೆಯೊಂದಿಗೆ ನಿಕಟ ಸಂಪರ್ಕದಲ್ಲಿದ್ದು, ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಸೂಚಿಸಲಾಯಿತು.

ಇದನ್ನೂ ಓದಿ: CM Siddaramaiah: ಡಿಸಿಗಳು ಮಹಾರಾಜರಲ್ಲ; ಬೀದಿಗಿಳಿದು ಡೆಂಗ್ಯು ನಿಯಂತ್ರಿಸದಿದ್ದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

Continue Reading

ಪ್ರಮುಖ ಸುದ್ದಿ

Menstrual Leave: ಋತುಸ್ರಾವದ ರಜೆ ಬಗ್ಗೆ ಮಾದರಿ ನೀತಿ ರೂಪಿಸಲು ಸರ್ಕಾರಕ್ಕೆ ಸುಪ್ರೀಂ ಕೋರ್ಟ್​​​ ನಿರ್ದೇಶನ

Menstrual Leave: ವೇತನ ಸಹಿ ಋತುಸ್ರಾವದ ರಜೆ ನೀಡಲು ನಿರ್ದೇಶಿಸುವಂತೆ ಕೋರ್ಟ್​ಗೆ ಮನವಿ ಸಲ್ಲಿಸಿದ ಅರ್ಜಿದಾರರು ಮತ್ತು ವಕೀಲ ಶೈಲೇಂದ್ರ ತ್ರಿಪಾಠಿ ಅವರ ಪರವಾಗಿ ಹಾಜರಾದ ವಕೀಲ ರಾಕೇಶ್ ಖನ್ನಾ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರನ್ನು ಸಂಪರ್ಕಿಸಲು ನ್ಯಾಯಪೀಠ ಸಲಹೆ ನೀಡಿತು.

VISTARANEWS.COM


on

Koo

ನವದೆಹಲಿ: ರಾಜ್ಯ ಸರ್ಕಾರ ಮತ್ತು ಇತರ ಪಾಲುದಾರರ ಜತೆ ಮಾಲೋಚನೆ ನಡೆಸಿ ಉದ್ಯೋಗಸ್ಥ ಮಹಿಳೆಯರಿಗೆ ಮುಟ್ಟಿನ ರಜೆ ನೀಡುವ (Menstrual Leave) ಕುರಿತು ಮಾದರಿ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠವು ಈ ನಿರ್ದೇಶನ ಕೊಟ್ಟಿದೆ. ಇದು ಸರ್ಕಾರದ ನೀತಿಗೆ ಸಂಬಂಧಿಸಿದ್ದು ಹಾಗೂ ನ್ಯಾಯಾಲಯಗಳು ಪರಿಶೀಲಿಸಬೇಕಾದ ವಿಷಯವಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ವೇತನ ಸಹಿ ಋತುಸ್ರಾವದ ರಜೆ ನೀಡಲು ನಿರ್ದೇಶಿಸುವಂತೆ ಕೋರ್ಟ್​ಗೆ ಮನವಿ ಸಲ್ಲಿಸಿದ ಅರ್ಜಿದಾರರು ಮತ್ತು ವಕೀಲ ಶೈಲೇಂದ್ರ ತ್ರಿಪಾಠಿ ಅವರ ಪರವಾಗಿ ಹಾಜರಾದ ವಕೀಲ ರಾಕೇಶ್ ಖನ್ನಾ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಮತ್ತು ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಾಟಿ ಅವರನ್ನು ಸಂಪರ್ಕಿಸಲು ನ್ಯಾಯಪೀಠ ಸಲಹೆ ನೀಡಿತು.

ಇದನ್ನೂ ಓದಿ: Rain Affected areas: ಮಳೆ ಸಂತ್ರಸ್ತ ಪ್ರದೇಶಗಳಲ್ಲಿ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಿ: ಡಿಸಿಗಳಿಗೆ ಸಿಎಂ ಸೂಚನೆ

ನೀತಿ ನಿರೂಪಣೆ ಮಟ್ಟದಲ್ಲಿ ಈ ವಿಷಯವನ್ನು ಪರಿಶೀಲಿಸಬೇಕಾಗಿದೆ. ಸಂಬಂಧಪಟ್ಟ ಎಲ್ಲರ ಜತೆ ಸಮಾಲೋಚಿಸಿದ ನಂತರ ನಿರ್ಧಾರ ತೆಗೆದುಕೊಳ್ಳಬೇಕು ಮತ್ತು ಮಾದರಿ ನೀತಿಯನ್ನು ರೂಪಿಸಬಹುದೇ ಎಂದು ಪರಿಶೀಲಿಸಲು ಕೇಂದ್ರ ಸರ್ಕಾರದ ಕಾರ್ಯದರ್ಶಿಯನ್ನು ವಿನಂತಿಸುತ್ತೇವೆ ಎಂದು ಕೋರ್ಟ್​ ಹೇಳಿದೆ. ಇದೇ ವೇಳೆ ಕೋರ್ಟ್​​ ಈ ನಿಟ್ಟಿನಲ್ಲಿ ರಾಜ್ಯಗಳು ಯಾವುದೇ ಕ್ರಮಗಳನ್ನು ತೆಗೆದುಕೊಂಡರೆ ಕೇಂದ್ರದ ಸಮಾಲೋಚನಾ ಪ್ರಕ್ರಿಯೆಯು ಅಡ್ಡಿಯಾಗುವುದಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಈಗಾಗಲೇ ಮುಟ್ಟಿನ ರಜೆ ನೀಡುವ ಕಂಪನಿಗಳ ಪಟ್ಟಿ ಇಲ್ಲಿದೆ

ಭಾರತದಲ್ಲಿ ಹಲವಾರು ಕಂಪನಿಗಳು ತಮ್ಮ ಮಹಿಳಾ ಉದ್ಯೋಗಿಗಳನ್ನು ಬೆಂಬಲಿಸಲು ಮುಟ್ಟಿನ ರಜೆ ನೀತಿಗಳನ್ನು ಜಾರಿಗೆ ತಂದಿವೆ. ಕೆಲವು ಜನಪ್ರಿಯ ಕಂಪನಿಗಳ ಹೆಸರನ್ನು ಇಲ್ಲಿ ನೀಡಲಾಗಿದೆ.

ಜೊಮ್ಯಾಟೊ: ಋತುಚಕ್ರದ ಸಮಸ್ಯೆಯನ್ನು ಕಡಿಮೆ ಮಹಿಳಾ ಮತ್ತು ತೃತೀಯ ಲಿಂಗಿ ಉದ್ಯೋಗಿಗಳಿಗೆ ವಾರ್ಷಿಕವಾಗಿ 10 ದಿನಗಳವರೆಗೆ ವೇತನ ಸಹಿತ ಅವಧಿಯ ರಜೆಯನ್ನು ನೀಡುತ್ತದೆ.

ಬೈಜೂಸ್: ಮಹಿಳಾ ಉದ್ಯೋಗಿಗಳನ್ನು ಬೆಂಬಲಿಸಲು ಮುಟ್ಟಿನ ರಜೆಯನ್ನು ಒದಗಿಸುತ್ತದೆ.

ಸ್ವಿಗ್ಗಿ: ಉತ್ತಮ ಕೆಲಸದ ವಾತಾವರಣವನ್ನು ಖಚಿತಪಡಿಸಿಕೊಳ್ಳಲು ಇತ್ತೀಚೆಗೆ ಇದೇ ರೀತಿಯ ನೀತಿಯನ್ನು ಪರಿಚಯಿಸಿತ್ತು.

ಮ್ಯಾ್ಗ್​ಸ್ಟರ್​:ಈ ಡಿಜಿಟಲ್ ನಿಯತಕಾಲಿಕ ವೇದಿಕೆ ವೇತನ ಸಹಿತ ರಜೆ ನೀಡುತ್ತದೆ.

ಓರಿಯಂಟ್ ಎಲೆಕ್ಟ್ರಿಕ್: ಈ ಕಂಪನಿಯೂ ಇತ್ತೀಚೆಗೆ ಸಂಬಳ ಸಮೇತ ಮುಟ್ಟಿನ ರಜೆ ಕೊಟ್ಟಿದೆ.

ಕಲ್ಚರ್ ಮೆಷಿನ್: ಮಹಿಳಾ ಉದ್ಯೋಗಿಗಳಿಗೆ ತಮ್ಮ ಋತುಚಕ್ರದ ಮೊದಲ ದಿನದಂದು ಒಂದು ದಿನ ರಜೆ ತೆಗೆದುಕೊಳ್ಳಲು ಅನುವು ಮಾಡಿದೆ.

ಗೋಜೂಪ್ ಆನ್ಲೈನ್ ಪ್ರೈವೇಟ್ ಲಿಮಿಟೆಡ್: ಮುಟ್ಟಿನ ಮೊದಲ ದಿನದಂದು ವೇತನ ಸಹಿತ ರಜೆ ಮತ್ತು ಮನೆಯಿಂದ ಕೆಲಸ ಮಾಡುವ ಆಯ್ಕೆ ಡಿಜಿಟಲ್ ಮಾಧ್ಯಮ ಕಂಪನಿ ನೀಡಿದೆ.

ಐವಿಪನನ್: ವರ್ಷಕ್ಕೆ 12 ದಿನಗಳ ಅವಧಿಯ ಮುಟ್ಟಿನ ರಜೆಯನ್ನು ಒದಗಿಸುವ ಡಿಜಿಟಲ್ ಮಾರ್ಕೆಟಿಂಗ್ ಕಂಪನಿ ಇದಾಗಿದೆ.

ಇಂಡಸ್ಟ್ರಿಎಆರ್ ಸಿ: ಮಹಿಳೆಯರಿಗೆ ಒಂದು ಅಥವಾ ಎರಡು ದಿನ ರಜೆ ತೆಗೆದುಕೊಳ್ಳಲು ಅನುಮತಿ ನೀಡುತ್ತದೆ. ಆದರೆ ನಂತರ ರಜೆಯನ್ನು ಸರಿದೂಗಿಸಬೇಕು.

Continue Reading
Advertisement
France Election
ಪ್ರಮುಖ ಸುದ್ದಿ19 mins ago

France Election: ಫ್ರಾನ್ಸ್ ಚುನಾವಣೆ: ಎಡ ಪಕ್ಷಗಳ ಒಕ್ಕೂಟದ ಮೇಲುಗೈ; ಅತಂತ್ರ ಫಲಿತಾಂಶ

Chennai Police commissioner
ಪ್ರಮುಖ ಸುದ್ದಿ22 mins ago

Chennai Police commissioner : ಬಿಎಸ್‌‌ಪಿ ರಾಜ್ಯಾಧ್ಯಕ್ಷನ ಹತ್ಯೆ ಎಫೆಕ್ಟ್; ಚೆನ್ನೈ ಪೊಲೀಸ್ ಕಮಿಷನರ್ ಎತ್ತಂಗಡಿ

Rohit Sharma
ಕ್ರೀಡೆ23 mins ago

Rohit Sharma: ಟಿ20 ವಿಶ್ವಕಪ್ ಮುಗಿದ ಬೆನ್ನಲ್ಲೇ ಕುಟುಂಬದ ಜತೆ ವಿದೇಶ ಪ್ರವಾಸ ಕೈಗೊಂಡ ರೋಹಿತ್​

Karnataka Rain Effect
ಮಳೆ24 mins ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Kalki 2898 AD box office thrashes 'PK' record
ಟಾಲಿವುಡ್31 mins ago

Kalki 2898 AD: ‘ಪಿಕೆ’, ʻಗದರ್‌ʼ ಸಿನಿಮಾಗಳ ದಾಖಲೆ ಮುರಿದ ʻಕಲ್ಕಿ 2898 ಎಡಿʼ!

Cm Siddaramaiah in Janatha Darshan
ಪ್ರಮುಖ ಸುದ್ದಿ40 mins ago

CM Siddaramaiah: ಆಗಸ್ಟ್‌ನಲ್ಲಿ ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಜನಸ್ಪಂದನ

Indecent behaviour
ಕರ್ನಾಟಕ44 mins ago

Indecent Behaviour: ಕಾಲೇಜು ಯುವತಿಯವರಿಗೆ ಮರ್ಮಾಂಗ ತೋರಿಸಿ ಎಸ್ಕೇಪ್‌ ಆಗಿದ್ದವ ಪೊಲೀಸ್‌ ವಶಕ್ಕೆ

Hasin Jahan: Divorced wife who scolded Shami unnecessarily as 'pack of dogs'; The video is viral
ಕ್ರೀಡೆ50 mins ago

Hasin Jahan: ‘ನಾಯಿಗಳ ದಂಡು’… ಎಂದು ಶಮಿಯನ್ನು ಅನಗತ್ಯವಾಗಿ ಕೆಣಕಿದರೇ ವಿಚ್ಛೇದಿತ ಪತ್ನಿ?; ವಿಡಿಯೊ ವೈರಲ್​

Kamala Harris
ವಿದೇಶ52 mins ago

Kamala Harris: ಅಮೆರಿಕ ಚುನಾವಣೆ; ಟ್ರಂಪ್‌ಗೆ ಪೈಪೋಟಿ ನೀಡಲು ಬೈಡನ್‌ಗಿಂತ ಕಮಲಾ ಹ್ಯಾರಿಸ್‌ ಸಮರ್ಥ ಎನ್ನುತ್ತವೆ ಸಮೀಕ್ಷೆ!

ತುಮಕೂರು1 hour ago

Koratagere News: ವೀರಶೈವ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain Effect
ಮಳೆ24 mins ago

Karnataka Rain : ಮಳೆ ಅವಾಂತರ; ಮರ ಬಿದ್ದು ಕಾರು ಜಖಂ, ಕುಸಿದು ಬಿದ್ದ ಪಾವಂಜೆ ಮಹಾಗಣಪತಿ ದೇವಸ್ಥಾನದ ತಡೆಗೋಡೆ

Karnataka Rain
ಮಳೆ2 hours ago

Karnataka Rain : ಭಾರಿ ಮಳೆಗೆ ಉಕ್ಕಿ ಹರಿಯುತ್ತಿರುವ ಹಳ್ಳ; ಪ್ರಾಣದ ಹಂಗು ತೊರೆದು ಶಾಲೆಗೆ ಹೋಗಬೇಕು!

Karnataka weather Forecast
ಮಳೆ3 hours ago

Karnataka Rain : ರಕ್ಕಸ ಅಲೆಗಳ ಮಧ್ಯೆ ಈಜಲು ಹೋದ ಪ್ರವಾಸಿಗರಿಗೆ ಬಿತ್ತು ಬಿಸಿ ಬಿಸಿ ಕಜ್ಜಾಯ‌!

karnataka weather Forecast
ಮಳೆ20 hours ago

Karnataka weather : ನಾಳೆ ಭಾರಿ ಮಳೆ ಎಚ್ಚರಿಕೆ; ಕರಾವಳಿಯ ಈ ಶಾಲಾ-ಕಾಲೇಜುಗಳಿಗೆ ರಜೆ

Davanagere news
ಮಳೆ22 hours ago

Davanagere News : ಆ ಗ್ರಾಮಕ್ಕೆ ಕಾಲಿಡದ ವರುಣ! ಮಳೆಗಾಗಿ ಗ್ರಾಮಸ್ಥರಿಂದ ಕಂತೆ ಭಿಕ್ಷೆ

Karnataka Rain
ಮಳೆ23 hours ago

Karnataka Rain : ವೀಕೆಂಡ್‌ನಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಮಳೆ ಮೋಡಿ; ಮತ್ತೆ ಗುಡ್ಡ ಕುಸಿತ ಶುರು

karnataka weather Forecast
ಮಳೆ1 day ago

Karnataka Weather : ವೇಗವಾಗಿ ಬೀಸುವ ಗಾಳಿ ಜತೆಗೆ ಅಬ್ಬರಿಸಲಿದೆ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ

karnataka weather Forecast
ಮಳೆ2 days ago

Karnataka Weather : ಚಾರಣಪ್ರಿಯರಿಗೆ ಶಾಕ್‌; ಭಾರಿ ಮಳೆಯಿಂದಾಗಿ ಈ ಜಾಗಗಳಿಗೆ ಟ್ರೆಕ್ಕಿಂಗ್‌ ನಿಷೇಧ

Murder case
ಯಾದಗಿರಿ2 days ago

Murder case : ಯಾದಗಿರಿಯಲ್ಲಿ ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

karnataka Rain
ಮಳೆ2 days ago

Karnataka Rain : ಭಾರಿ ಗಾಳಿ- ಮಳೆಗೆ ಹಾರಿದ ಅಂಗಡಿಯ ತಗಡು; ಮಾಗುಂಡಿ-ಬಾಳೆಹೊನ್ನೂರು ಮಾರ್ಗ ಬಂದ್

ಟ್ರೆಂಡಿಂಗ್‌