LPL 2024 : ಫ್ರಾಂಚೈಸಿ ಮಾಲೀಕನಿಂದಲೇ ಮ್ಯಾಚ್​ ಫಿಕ್ಸಿಂಗ್; ಬಂಧನ - Vistara News

ಪ್ರಮುಖ ಸುದ್ದಿ

LPL 2024 : ಫ್ರಾಂಚೈಸಿ ಮಾಲೀಕನಿಂದಲೇ ಮ್ಯಾಚ್​ ಫಿಕ್ಸಿಂಗ್; ಬಂಧನ

LPL 2024: ನ್ಯಾಯಾಲಯದ ಆದೇಶದ ನಂತರ ನಗರದ ಬಂಡಾರನಾಯಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೆಹಮಾನ್ ಅವರನ್ನು ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ. ಆದಾಗ್ಯೂ, ಅವರ ವಿರುದ್ಧದ ನಿಖರವಾದ ಆರೋಪಗಳು ಇನ್ನೂ ಸ್ಪಷ್ಟವಾಗಿಲ್ಲ. ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ನಡೆಸಲು ಪ್ರಯತ್ನಿಸಿದ್ದಕ್ಕೆ ಸಂಬಂಧಿಸಿದ ದೇಶದ ಕ್ರೀಡಾ ಕಾಯ್ದೆಯ ಎರಡು ನಿಬಂಧನೆಗಳ ಅಡಿಯಲ್ಲಿ ಅವರನ್ನು ತನಿಖೆ ನಡೆಸಲಾಗುತ್ತಿದೆ.

VISTARANEWS.COM


on

LPL 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಲಂಕಾ ಪ್ರೀಮಿಯರ್ ಲೀಗ್ (LPL 2024 ) ಫ್ರಾಂಚೈಸಿ ಡಂಬುಲ್ಲಾ ಥಂಡರ್ಸ್​​ನ ಮಾಲೀಕರಾಗಿರುವ ಬಾಂಗ್ಲಾದೇಶ ಮೂಲದ ಬ್ರಿಟಿಷ್ ಪ್ರಜೆ ತಮೀಮ್ ರೆಹಮಾನ್ ಅವರನ್ನು ಮ್ಯಾಚ್ ಫಿಕ್ಸಿಂಗ್ಸ್​​ನಲ್ಲಿ ತೊಡಗಿರುವ ಅನುಮಾನದ ಮೇಲೆ ಬುಧವಾರ ಬಂಧಿಸಲಾಗಿದೆ. ಕ್ರೀಡಾ ಸಚಿವಾಲಯದ ಕ್ರೀಡೆಗೆ ಸಂಬಂಧಿಸಿದ ಅಪರಾಧಗಳ ತಡೆಗಟ್ಟುವಿಕೆಯ ವಿಶೇಷ ತನಿಖಾ ಘಟಕದ ಅಧಿಕಾರಿಯೊಬ್ಬರು ಬ್ರಿಟಿಷ್ ಪೌರತ್ವವನ್ನು ಹೊಂದಿರುವ ವ್ಯಕ್ತಿಯ ಬಂಧನ ದೃಢಪಡಿಸಿದ್ದಾರೆ. ಕೊಲಂಬೊ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ರೆಹಮಾನ್ ಅವರನ್ನು ಮೇ 31 ರವರೆಗೆ ಕಸ್ಟಡಿಗೆ ಒಪ್ಪಿಸಿದೆ. ಡಂಬುಲ್ಲಾ ಫ್ರಾಂಚೈಸಿಯನ್ನು ಬಾಂಗ್ಲಾದೇಶದ ಉದ್ಯಮಿಗಳ ನೇತೃತ್ವದ ಇಂಪೀರಿಯಲ್ ಸ್ಪೋರ್ಟ್ಸ್ ಗ್ರೂಪ್ ಏಪ್ರಿಲ್​ನಲ್ಲಿ ಖರೀದಿಸಿತ್ತು

ನ್ಯಾಯಾಲಯದ ಆದೇಶದ ನಂತರ ನಗರದ ಬಂಡಾರನಾಯಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರೆಹಮಾನ್ ಅವರನ್ನು ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ. ಆದಾಗ್ಯೂ, ಅವರ ವಿರುದ್ಧದ ನಿಖರವಾದ ಆರೋಪಗಳು ಇನ್ನೂ ಸ್ಪಷ್ಟವಾಗಿಲ್ಲ. ಮ್ಯಾಚ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ನಡೆಸಲು ಪ್ರಯತ್ನಿಸಿದ್ದಕ್ಕೆ ಸಂಬಂಧಿಸಿದ ದೇಶದ ಕ್ರೀಡಾ ಕಾಯ್ದೆಯ ಎರಡು ನಿಬಂಧನೆಗಳ ಅಡಿಯಲ್ಲಿ ಅವರನ್ನು ತನಿಖೆ ನಡೆಸಲಾಗುತ್ತಿದೆ. ಎಲ್ಪಿಎಲ್ ಜುಲೈ 1 ರಿಂದ 21 ರವರೆಗೆ ನಡೆಯಲಿದೆ.

ಕೊಲಂಬೊದಲ್ಲಿ ನಡೆದ ಲೆಜೆಂಡ್ಸ್ ಕ್ರಿಕೆಟ್ ಲೀಗ್​ನಲ್ಲಿ ನಡೆದಿದೆ ಎನ್ನಲಾದ ಮ್ಯಾಚ್ ಫಿಕ್ಸಿಂಗ್ ಆರೋಪದ ಮೇಲೆ ಭಾರತೀಯ ಪ್ರಜೆಗಳಾದ ಯೋನಿ ಪಟೇಲ್ ಮತ್ತು ಪಿ ಆಕಾಶ್ ಅವರ ಪಾಸ್ಪೋರ್ಟ್​​ಗಳನ್ನು ಹಿಂದಿರುಗಿಸುವಂತೆ ಶ್ರೀಲಂಕಾದ ನ್ಯಾಯಾಲಯವು ಇತ್ತೀಚೆಗೆ ಆದೇಶಿಸಿದೆ. ಅನುಮತಿ ಪಡೆಯದೇ ಲೆಜೆಂಡ್ಸ್ ಲೀಗ್​ನಲ್ಲಿ ಪಟೇಲ್ ಒಂದು ತಂಡವನ್ನು ಹೊಂದಿದ್ದರು.

ಪ್ರಸ್ತುತ ಜಾಮೀನಿನ ಮೇಲೆ ಹೊರಗಿರುವ ಇವರಿಬ್ಬರು ಮಾರ್ಚ್ 8 ಮತ್ತು 19 ರ ನಡುವೆ ಕ್ಯಾಂಡಿಯ ಪಲ್ಲೆಕೆಲೆ ಕ್ರೀಡಾಂಗಣದಲ್ಲಿ ನಡೆದ ಲೀಗ್​ನ ಪಂದ್ಯಗಳನ್ನು ಫಿಕ್ಸ್ ಮಾಡಲು ಪ್ರಯತ್ನಿಸಿದ ಆರೋಪ ಎದುರಿಸುತ್ತಿದ್ದಾರೆ.

2019 ರಲ್ಲಿ ಕ್ರೀಡೆಯಲ್ಲಿ ಮ್ಯಾಚ್ ಫಿಕ್ಸಿಂಗ್ ಮತ್ತು ಭ್ರಷ್ಟಾಚಾರವನ್ನು ಅಪರಾಧವೆಂದು ಪರಿಗಣಿಸಿದ ದಕ್ಷಿಣ ಏಷ್ಯಾದ ಮೊದಲ ದೇಶ ಎಂಬ ಹೆಗ್ಗಳಿಕೆಗೆ ಶ್ರೀಲಂಕಾ ಪಾತ್ರವಾಗಿತ್ತು. ತಪ್ಪಿತಸ್ಥರೆಂದು ಸಾಬೀತಾದ ಯಾರಿಗಾದರೂ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡವನ್ನು ಪಾವತಿಸಬೇಕಾಗುತ್ತದೆ.

ಹರಾಜಿನಲ್ಲಿ ಭರ್ಜರಿ ಬಿಡ್ಡಿಂಗ್​

500 ಸ್ಥಳೀಯ ಮತ್ತು ಅಂತರರಾಷ್ಟ್ರೀಯ ಆಟಗಾರರು ಭಾಗವಹಿಸುವ ಎಲ್​​ಪಿಎಲ್​ನ ಐದನೇ ಆವೃತ್ತಿಯ ಹರಾಜು ಮಂಗಳವಾರ ನಡೆದಿದೆ. ಕೋವಿಡ್ -19 ಸಾಂಕ್ರಾಮಿಕ ರೋಗದ ಬಳಿಕ ನಾಲ್ಕು ವರ್ಷಗಳ ನಂತರ ಟೂರ್ನಿ ಆರಂಭಗೊಂಡಿದೆ. ಮಥೀಶಾ ಪಥಿರಾನಾ ಮಂಗಳವಾರ ಲಂಕಾ ಪ್ರೀಮಿಯರ್ ಲೀಗ್​ನ ಅತ್ಯಂತ ದುಬಾರಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು, ಪಂದ್ಯಾವಳಿಯ 2024 ರ ಆವೃತ್ತಿಗಾಗಿ ತಮ್ಮ ಹಳೆಯ ತಂಡವಾದ ಕೊಲಂಬೊ ಸ್ಟ್ರೈಕರ್​​ನಿಂದ ಅವರು 1 ಕೋಟಿ ರೂಪಾಯಿ ಪಡೆದುಕೊಂಡರು.

ಇದನ್ನೂ ಓದಿ: IPL 2024 : ಅಮ್ಮನನ್ನು ಆಸ್ಪತ್ರೆಯಲ್ಲಿ ಮಲಗಿಸಿ ಕೆಕೆಆರ್​ ಪರ ಕ್ವಾಲಿಫೈಯರ್ ಆಡಿದ ಆಫ್ಘನ್​ ಕ್ರಿಕೆಟಿಗ

ಪಥಿರಾನಾ ಇತ್ತೀಚೆಗೆ ಐಪಿಎಲ್​​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡಿದ್ದರು. ಲೀಗ್ 2018 ರಲ್ಲಿ ಪ್ರಾರಂಭವಾಗಬೇಕಿತ್ತು. ಶ್ರೀಲಂಕಾ ಕ್ರಿಕೆಟ್ (ಎಸ್ಎಲ್ಸಿ) ಯೊಳಗಿನ ಆಡಳಿತಾತ್ಮಕ ಸಮಸ್ಯೆಗಳಿಂದಾಗಿ ಅನೇಕ ಬಾರಿ ಮುಂದೂಡಿಕೆಯಾಗಿತ್ತು. ಬಿ-ಲವ್ ಕ್ಯಾಂಡಿ ತಂಡವು ಫೈನಲ್​ನಲ್ಲಿ ಡಂಬುಲ್ಲಾ ಔರಾ ತಂಡವನ್ನು ಸೋಲಿಸುವ ಮೂಲಕ 2023 ರ ಆವೃತ್ತಿಯನ್ನು ಗೆದ್ದುಕೊಂಡಿತ್ತು. ಪಂದ್ಯಾವಳಿಯು ಐದು ಫ್ರಾಂಚೈಸಿಗಳ ನಡುವೆ ನಡೆಯುತ್ತದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್;‌ ಮೊಬೈಲ್‌ ಪಾಸ್‌ವರ್ಡ್‌ ನೀಡಲು ದರ್ಶನ್‌ & ಗ್ಯಾಂಗ್‌ ತಕರಾರು!

Actor Darshan: ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ಕೆಲವು ಮೊಬೈಲ್‌ಗಳಲ್ಲಿದ್ದ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಇನ್ನೂ ಕೆಲವು ಮೊಬೈಲ್‌ಗಳ ಪಾಸ್‌ವರ್ಡ್‌ ನೀಡುತ್ತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ (Renukaswamy Murder Case) ಜೈಲುಪಾಲಾಗಿರುವ ನಟ ದರ್ಶನ್‌ (Actor Darshan) ಹಾಗೂ ಆತನ ಗ್ಯಾಂಗ್‌ನ ಹಲವು ಆರೋಪಿಗಳನ್ನು ನ್ಯಾಯಾಲಯವು ಮತ್ತೆ ಐದು ದಿನಗಳವರೆಗೆ ಪೊಲೀಸ್‌ ಕಸ್ಟಡಿಗೆ (Police Custody) ನೀಡಿದೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಆದರೆ, ವಿಚಾರಣೆ ವೇಳೆ ಮೊಬೈಲ್‌ ಪಾಸ್‌ವರ್ಡ್‌ (Mobile Password) ನೀಡಲು ದರ್ಶನ್‌ ಮತ್ತು ಆತನ ಗ್ಯಾಂಗ್‌ ನಿರಾಕರಿಸುತ್ತಿದೆ. ಇದರಿಂದ ಪೊಲೀಸರ ತನಿಖೆಗೆ ಅಡಚಣೆಯಾಗುತ್ತಿದೆ ಎಂದು ತಿಳಿದುಬಂದಿದೆ.

ದರ್ಶನ್‌ & ಗ್ಯಾಂಗ್‌ನಿಂದ ಪೊಲೀಸರು ಇದುವರೆಗೆ 10 ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಡೇಟಾ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಇನ್ನು ಕೆಲವು ಮೊಬೈಲ್‌ಗಳಲ್ಲಿದ್ದ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳು ಇನ್ನೂ ಕೆಲವು ಮೊಬೈಲ್‌ಗಳ ಪಾಸ್‌ವರ್ಡ್‌ ನೀಡುತ್ತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇಷ್ಟಾದರೂ ಪಟ್ಟು ಬಿಡದ ಪೊಲೀಸ್‌ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Actor Darshan

ಪ್ರಶ್ನೆಗಳ ಸುರಿಮಳೆ

ಶರಣಾಗಿರುವ ಆರೋಪಿಗಳನ್ನು ಡ್ರಿಲ್‌ ಮಾಡುತ್ತಿರುವ ಪೊಲೀಸರು, ಪ್ರಶ್ನೆಗಳ ಸುರಿಮಳೆಗೈಯುತ್ತಿದ್ದಾರೆ. ಪ್ರಕರಣದ ಸಂಬಂಧ ನೀವೇನಾದರೂ ಹಣ ಪಡೆದಿದ್ರಾ? ನಿಮ್ಮನ್ನು ಸಂಪರ್ಕಿಸಿದವರು ಯಾರು? ಯಾರ ಮಾತನ್ನು ನೀವು ಕೇಳಿ ನೀವು ಪ್ರಕರಣದಲ್ಲಿ ಭಾಗಿಯಾದಿರಿ? ದರ್ಶನ ಜತೆ ನೀವೇನಾದರೂ ನೇರವಾಗಿ ಸಂಪರ್ಕದಲ್ಲಿ ಇದ್ರಾ? ಆರೋಪಿ ರಘು ನಿಮ್ಮನ್ನು ಭೇಟಿಯಾಗಿ ಹೇಳಿದ್ದೇನು? ಶೆಡ್‌ ಒಳಗೆ ಯಾರೆಲ್ಲ ಹೋದರು? ನೀವೂ ಹೋಗಿದ್ರಾ ಎಂಬುದು ಸೇರಿ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ ಎಂದು ತಿಳಿದುಬಂದಿದೆ.

ತನಿಖೆಯ ಟೀಮ್‌ಗೆ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಸೇರ್ಪಡೆ

ಆರೋಪಿ ದರ್ಶನ್‌ನನ್ನು ಮೈಸೂರಿನಲ್ಲಿ ವಶಕ್ಕೆ ಪಡೆದುಕೊಂಡು, ಬೆಂಗಳೂರಿಗೆ ಕರೆತಂದಿದ್ದ ಇನ್ಸ್‌ಪೆಕ್ಟರ್‌ ಗಿರೀಶ್‌ ನಾಯ್ಕ್‌ ಅವರು ಮತ್ತೆ ತನಿಖಾ ತಂಡವನ್ನು ಸೇರಿಕೊಂಡಿದ್ದು, ತನಿಖೆಗೆ ಬಲ ಬಂದಂತಾಗಿದೆ. ಎಸಿಪಿ ಚಂದನ್‌ ಹಾಗೂ ಗಿರೀಶ್‌ ನಾಯ್ಕ್‌ ಅವರು ದರ್ಶನ್‌ನನ್ನು ಮೈಸೂರಿನಿಂದ ಕರೆತಂದಿದ್ದರು. ಆರಂಭದಲ್ಲಿ ಗಿರೀಶ್‌ ನಾಯ್ಕ್‌ ಅವರೇ ಕೊಲೆ ಪ್ರಕರಣದ ತನಿಖಾಧಿಕಾರಿಯಾಗಿದ್ದರು. ಚುನಾವಣೆ ನಿಮಿತ್ತ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು. ಬಳಿಕ ಮತ್ತೆ ಸಿ.ಕೆ.ಅಚ್ಚುಕಟ್ಟು ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದರು.

ಗಿರೀಶ್‌ ನಾಯ್ಕ್‌ ಅವರ ವರ್ಗಾವಣೆ ಹಿನ್ನೆಲೆಯಲ್ಲಿ ಎಸಿಪಿ ಚಂದನ್‌ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಆರೋಪಿಗಳ ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ ಈಗ ಗಿರೀಶ್‌ ನಾಯ್ಕ್‌ ಅವರನ್ನು ಮತ್ತೆ ಸಹಾಯಕ ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿದೆ.

ಇದನ್ನೂ ಓದಿ: Actor Darshan: ದರ್ಶನ್‌ ಗ್ಯಾಂಗ್‌ಗೆ ಮತ್ತೆ 5 ದಿನ ಪೊಲೀಸ್‌ ಕಸ್ಟಡಿ; ಜಡ್ಜ್‌ ಮುಂದೆ ಪವಿತ್ರಾ ಗೌಡ ಕಣ್ಣೀರು!

Continue Reading

Latest

Viral News: ಮುಖಕ್ಕೆ ಎಂಜಲು ಉಗಿದು ಫೇಸ್ ಮಸಾಜ್ ಮಾಡಿದ ಅಮ್ಜದ್ ಅರೆಸ್ಟ್!

Viral News: ಕ್ರೀಂ, ಲೋಷನ್ ಹಚ್ಚಿ ಫೇಸ್ ಮಸಾಜ್ ಮಾಡುವುದರ ಬಗ್ಗೆ ಕೇಳಿರುತ್ತೀರಿ. ಆದರೆ ಉತ್ತರಪ್ರದೇಶದ ಈ ಮುಸ್ಲಿಂ ಕ್ಷೌರಿಕ ತನ್ನ ಬಳಿ ಫೇಸ್ ಮಸಾಜ್ ಮಾಡಿಸಿಕೊಳ್ಳಲು ಬಂದ ಯುವಕನ ಮುಖಕ್ಕೆ ಎಂಜಲು ಹಚ್ಚಿ ಮಸಾಜ್ ಮಾಡಿದ್ದಾನೆ, ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈತನ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಆರೋಪಿ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿ ಆತನನ್ನು ಬಂಧಿಸಿದ್ದಾರೆ.

VISTARANEWS.COM


on

Viral News
Koo

ಹುಡುಗಿಯರ ಹಾಗೇ ಹುಡುಗರಿಗೂ ಸುಂದರವಾಗಿ ಕಾಣಬೇಕೆಂಬ ಆಸೆ ಇರುತ್ತದೆ. ಹಾಗಾಗಿ ಹುಡುಗಿಯರು ಬ್ಯೂಟಿ ಪಾರ್ಲರ್ ನಲ್ಲಿ ಫೇಸ್ ಮಸಾಜ್, ಫೇಶಿಯಲ್ ಮಾಡಿಸಿಕೊಂಡ ಹಾಗೆ ಹುಡುಗರು ಕ್ಷೌರದ ಅಂಗಡಿಯಲ್ಲಿ ಫೇಸ್ ಮಸಾಜ್, ಫೇಶಿಯಲ್ ಮಾಡಿಸಿಕೊಳ್ಳುತ್ತಾರೆ. ಆದರೆ ಇತ್ತೀಚೆಗೆ ವ್ಯಕ್ತಿಯೊಬ್ಬ ಕ್ಷೌರದಂಗಡಿಯಲ್ಲಿ ಫೇಸ್ ಮಸಾಜ್ ಮಾಡಿಕೊಳ್ಳಲು ಹೋಗಿ ಅವಾಂತರ ಮಾಡಿಕೊಂಡ ವಿಡಿಯೊವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ (Viral News) ಆಗಿದೆ.

ಫೇಸ್‌ ಮಸಾಜ್‌ ಮಾಡಿಕೊಂಡರೆ ಮುಖದಲ್ಲಿ ರಕ್ತಸಂಚಲನ ಚೆನ್ನಾಗಿ ಆಗುತ್ತದೆ. ದಣಿದ ಮುಖಕ್ಕೆ ರಿಲೀಫ್‌ ಆಗುತ್ತೆ ಎಂದು ಕೆಲವರು ದುಡ್ಡು ಸುರಿದು ಮಸಾಜ್‌ ಮಾಡಿಕೊಳ್ಳುತ್ತಾರೆ. ಹೀಗೆ ಉತ್ತರ ಪ್ರದೇಶದ ಶಾಮ್ಲಿ ಎಂಬಲ್ಲಿನ ಕ್ಷೌರದಂಗಡಿಗೆ ವ್ಯಕ್ತಿಯೊಬ್ಬ ಫೇಸ್ ಮಸಾಜ್ ಮಾಡಿಕೊಳ್ಳಲು ಹೋಗಿದ್ದಾನೆ. ಆದರೆ ಕ್ಷೌರದಂಗಡಿಯವನು ಕ್ರೀಂ, ಲೋಷನ್‌ಗಳನ್ನು ಹಚ್ಚಿ ಮುಖಕ್ಕೆ ಮಸಾಜ್‌ ಮಾಡುವುದರ ಬದಲು ಎಂಜಲು ಉಗಿದು ಮಸಾಜ್‌ ಮಾಡಿದ್ದಾನಂತೆ. . ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಆರೋಪಿ ಅಮ್ಜದ್ ಎಂಬುದಾಗಿ ತಿಳಿದುಬಂದಿದೆ. @TruestoryUP ಎಂಬ ಹೆಸರಿನ ಖಾತೆಯಲ್ಲಿ ಈ ವಿಡಿಯೊ ಹಂಚಿಕೊಳ್ಳಲಾಗಿದೆ. ಈತನ ಘೋರ ಕೃತ್ಯದ ದೃಶ್ಯ ವೈರಲ್ ಆಗಿದ್ದು, ಈತನ ಕೃತ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಆರೋಪಿ ವಿರುದ್ಧ ಪೊಲೀಸರು ಎಫ್ ಐಆರ್ ದಾಖಲಿಸಿ ಆತನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:James Wan: ಜೇಮ್ಸ್‌ ವಾನ್‌ ನಿರ್ದೇಶನದ ಈ 6 ಥ್ರಿಲ್ಲರ್‌ ಚಿತ್ರಗಳನ್ನು ತಪ್ಪದೇ ನೋಡಿ!

ಜೂನ್ 8ರಂದು ಈ ವಿಡಿಯೊ ಹಂಚಿಕೊಂಡಿದ್ದು, ಇದನ್ನು16 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ ಮತ್ತು ಈತನ ಕೃತ್ಯದ ವಿರುದ್ಧ ವೀಕ್ಷಕರು ಪ್ರತಿಕ್ರಿಯೆ ನೀಡಿದ್ದಾರೆ.

Continue Reading

Latest

Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

Viral Video: ವಾಕಿಂಗ್ ಮಾಡಿದರೆ ದೇಹದ ಆರೋಗ್ಯಕ್ಕೆ ಒಳ್ಳೆಯದು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಷಯ.ನಗರದ ಮಂದಿ ವಾಕಿಂಗ್‌ಗೆ ತಾವು ಪ್ರೀತಿಯಿಂದ ಸಾಕಿದ ನಾಯಿಯನ್ನು ಕೂಡ ಕರೆದುಕೊಂಡು ಹೋಗುವುದು ನಾವು ಕಂಡಿರುತ್ತೇವೆ. ಇಂತಹ ಸಾಕು ಪ್ರಾಣಿಯ ಜೊತೆ ಎಲ್ಲರೂ ವಾಕಿಂಗ್ ಹೋಗುತ್ತಾರೆ. ಆದರೆ ದುಬೈನ ಈ ಬೆಡಗಿ ಮಾತ್ರ ಮನುಷ್ಯರು ಬೆಚ್ಚಿಬೀಳುವ ಹುಲಿಯ ಜೊತೆ ಪಾರ್ಕ್‌ನಲ್ಲಿ ವಾಕಿಂಗ್ ಮಾಡಿದರೆ ನೋಡಿದವರ ಎದೆ ಝಲ್ ಎನ್ನದೆ ಇರುತ್ತಾ ಹೇಳಿ!

VISTARANEWS.COM


on

Viral Video
Koo

ಹುಲಿ ಎಂದರೆ ಎಲ್ಲರೂ ಭಯಭೀತರಾಗುತ್ತಾರೆ. ಯಾಕೆಂದರೆ ಹುಲಿ ತನ್ನ ಆಹಾರಕ್ಕಾಗಿ ಪ್ರಾಣಿಗಳು ಮಾತ್ರವಲ್ಲ ಮನುಷ್ಯರನ್ನೂ ಕೊಂದು ತಿನ್ನುತ್ತದೆ. ಹಾಗಾಗಿ ಹುಲಿಯನ್ನು ಎದುರು ನೋಡುವುದು ಬೇಡ ದೂರದಲ್ಲಿ ಅದರ ಗರ್ಜನೆ ಕೇಳಿದರೂ ಸಾಕು ಎಲ್ಲರೂ ದಿಕ್ಕಾಪಾಲಾಗಿ ಓಡುತ್ತಾರೆ. ಅಂತಹದರಲ್ಲಿ ದುಬೈನಲ್ಲಿ ಮಹಿಳೆಯೊಬ್ಬಳು ವಾಕಿಂಗ್‌ಗಾಗಿ ಹುಲಿಯೊಂದಿಗೆ ನಡೆದುಕೊಂಡು ಬಂದರೆ ಅಲ್ಲಿದ್ದವರ ಪರಿಸ್ಥಿತಿ ಹೇಗಿರಬೇಡ ಹೇಳಿ. ಈ ಮಹಿಳೆ ಹುಲಿ ಜೊತೆ ನಡೆದುಕೊಂಡು ಬರುವ ದೃಶ್ಯ ಎಲ್ಲರಲ್ಲೂ ಭಯವನ್ನು ಹುಟ್ಟಿಸಿದೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಖತ್‌ ವೈರಲ್ (Viral Video) ಆಗಿದೆ.

ನಾಯಿ ಕುತ್ತಿಗೆಗೆ ಚೈನ್‌ ಕಟ್ಟಿಕೊಂಡು ವಾಕಿಂಗ್‌ಗೆ ಹೋಗುವವರು ನಿಮಗೆ ರಸ್ತೆಯಲ್ಲಿ ನೂರಾರು ಜನರು ಸಿಗುತ್ತಾರೆ. ಆದರೆ ದುಬೈಯಲ್ಲಿ ಮಹಿಳೆಯೊಬ್ಬಳು ವಾಕಿಂಗ್‌ಗೆ ಬರುವಾಗ ಕಾಡಿನಲ್ಲಿರಬೇಕಾದ ಹುಲಿಯನ್ನು ತನ್ನ ಜೊತೆ ಕರೆದುಕೊಂಡು ಬಂದರೆ ಹೇಗಿರಬೇಡ ಹೇಳಿ. ಹುಲಿಯ ಕುತ್ತಿಗೆಗೆ ಸರಪಳಿಯನ್ನು ಕಟ್ಟಿ ನಾಯಿಯಂತೆ ಕರೆದುಕೊಂಡು ಬರುತ್ತಿರುವ ಈಕೆಯ ಧೈರ್ಯ ನೋಡಿ ಎಲ್ಲರೂ ಬೆಕ್ಕಸ ಬೆರಗಾಗಿದ್ದಾರೆ. ಹುಲಿಯ ಜೊತೆ ವಾಕಿಂಗ್‌ಗೆ ಹೋಗುವುದನ್ನು ವಿಡಿಯೊ ಮಾಡಿ “ ನನ್ನ ಮುದ್ದಿನ ಹುಲಿಯನ್ನು ವಾಕಿಂಗ್‌ಗೆ ಕರೆದುಕೊಂಡು ಹೋಗುತ್ತಿದ್ದೇನೆ “ ಎಂದು ಶೀರ್ಷಿಕೆ ಬರೆದು ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾಳೆ.

ಇವಳ್ಯಾರು ಎಂಬ ಕುತೂಹಲ ನಿಮಗೂ ಆಗಿರಬಹುದು ಅಲ್ವಾ…?ಈಕೆ ಇನ್ ಸ್ಟಾಗ್ರಾಂ, ಟಿಕ್ ಟಾಕ್ ಮತ್ತು ಯೂಟ್ಯೂಬ್ ನಲ್ಲಿ ಜಪ್ರಿಯರಾಗಿದ್ದ ನಾಡಿಯಾ ಖಾರ್ ಎನ್ನಲಾಗಿದೆ. ಈಕೆ ಫ್ಯಾಷನ್ ವಿಷಯಕ್ಕೆ ಹೆಸರುವಾಸಿಯಾಗಿದ್ದಾಳೆ. ಆಗಾಗ ಐಷರಾಮಿ ಕಾರುಗಳು, ವ್ಲಾಗ್ ಗಳು ಮತ್ತು ಕಿರು ವಿಡಿಯೊಗಳನ್ನು ಪ್ರದರ್ಶಿಸುತ್ತಿರುತ್ತಾಳೆ. ಇದೀಗ ಅವಳು ದುಬೈನಲ್ಲಿ ಹುಲಿಯ ಜೊತೆಗೆ ನಡೆದುಕೊಂಡು ಬರುತ್ತಿರುವ ವಿಡಿಯೊ ಪೋಸ್ಟ್ ಮಾಡಿದ್ದಾಳೆ. ವಿಡಿಯೊದಲ್ಲಿ ಅವಳು ಮೃಗಾಲಯದ ಒಳಗೆ ಮತ್ತು ದುಬೈನ ಸಾರ್ವಜನಿಕ ಉದ್ಯಾನವನದಲ್ಲಿ ಹುಲಿಯೊಂದಿಗೆ ನಡೆಯುತ್ತಿರುವ ವಿಡಿಯೊ ವೈರಲ್ ಆಗಿದೆ. ಇದಕ್ಕೆ 6 ಮಿಲಿಯನ್ ವೀಕ್ಷಣೆ ಮತ್ತು 100000ಕ್ಕೂ ಹೆಚ್ಚು ಲೈಕ್ಸ್ ಬಂದಿದೆ.

ಹಾಗೇ ಈ ವಿಡಿಯೊಗೆ ಹೆಚ್ಚಿನ ಪ್ರತಿಕ್ರಿಯೆ ಬಂದಿದ್ದು, ಕೆಲವರು ಹುಲಿಯನ್ನು ನಾಯಿಯಂತೆ ಸಾಕಿಕೊಂಡಿರುವುದಕ್ಕೆ ಆಕೆಯ ಕೃತ್ಯವನ್ನು ಟೀಕಿಸಿದರೆ, ಕೆಲವರು ಅದನ್ನು ಕಂಡು ಆಶ್ಚರ್ಯಚಕಿತರಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇನ್ನೊಬ್ಬರು “ಪ್ರಾಣಿಗಳ ಕ್ರೌರ್ಯವನ್ನು ಕ್ಷಮಿಸುವುದು ಸರಿಯಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Viral News: 80ರ ಅಜ್ಜನನ್ನು ಪ್ರೀತಿಸಿ ಮದುವೆಯಾದ 23ರ ಸುಂದರಿ! ಆಕೆ ಕೊಟ್ಟ ಕಾರಣ ಮಜವಾಗಿದೆ!

ದುಬೈಯಲ್ಲಿ ಕ್ರೂರ ಪ್ರಾಣಿಗಳನ್ನು ಸಾಕು ಪ್ರಾಣಿಗಳಂತೆ ಸಾಕುತ್ತಾರೆ. ಇಲ್ಲಿ ಹುಲಿ, ಸಿಂಹ, ಕರಡಿಗಳಂತಹ ನರಭಕ್ಷಕ ಪ್ರಾಣಿಗಳನ್ನು ಪಳಗಿಸಿ ಖಾಸಗಿ ಮೃಗಾಲಯದಲ್ಲಿ ಸಾಕುತ್ತಾರೆ. ಅದರ ಜೊತೆಗೆ ಕೋತಿ ಮತ್ತು ಜಿರಾಫೆಗಳಂತಹ ಪ್ರಾಣಿಗಳಿಗೂ ವಸತಿ ನೀಡುತ್ತಾರೆ. ಇದು ಅವರಿಗೆ ಪ್ರಾಣಿಗಳ ಮೇಲಿದ್ದ ಕಾಳಜಿಯನ್ನು ತೋರಿಸುತ್ತದೆ.

ಈಗ ಸೋಷಿಯಲ್‌ ಮೀಡಿಯಾದ್ದೇ ಹವಾ. ತಿಂದಿದ್ದು, ಕುಡಿದಿದ್ದು, ಹೆತ್ತಿದ್ದು ಎಲ್ಲವನ್ನೂ ಇದರಲ್ಲಿ ಹಾಕುತ್ತಾರೆ. ಆ ದೇಶದಲ್ಲಿ ಬೆಡಗಿಯೊಬ್ಬಳು ಹಸಿ ಹಾವನ್ನೇ ತಟ್ಟೆಯಲ್ಲಿಟ್ಟುಕೊಂಡು ತಿಂದರೆ, ಮತ್ತೊಬ್ಬಳು ಹರೆಯದ ಹುಡುಗಿ ಅಜ್ಜನನ್ನೇ ಪ್ರೀತಿಸಿ ಮದುವೆಯಾದಳು. ಈಗ ಲೈಕ್ಸ್‌, ಕಾಮೆಂಟ್‌ಗಳಿಗಾಗಿ ಏನು ಬೇಕಾದರೂ ಮಾಡುವುದಕ್ಕೆ ಸೈ ಅನ್ನುವ ಹಂತದಲ್ಲಿ ನಾವಿದ್ದೇವೆ.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಬೆಲೆ ಏರಿಕೆ ಮಾಡುವುದೇ ರಾಜ್ಯ ಸರ್ಕಾರದ 6ನೇ ‘ಗ್ಯಾರಂಟಿ’ ಆಗದಿರಲಿ!

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬೆಲೆಯೇರಿಕೆಯನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿದ್ದ, ಬೆಲೆಯೇರಿಕೆ ವಿರುದ್ಧ ಆಕ್ರೋಶ, ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್‌ ಈಗ ರಾಜ್ಯ ಸರ್ಕಾರದಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಿದೆ. ಮೊದಲೇ, ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಬಳಲುತ್ತಿರುವ ರಾಜ್ಯದ ಜನರಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವು ಗಾಯದ ಮೇಲೆ ಬರೆ ಎಳೆದಂತಾಗಿದೆ.

VISTARANEWS.COM


on

Siddaramaiah
Koo

ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಉಚಿತ ಟಿಕೆಟ್‌, ಮನೆಗಳಲ್ಲಿ 200 ಯೂನಿಟ್‌ಗಳವರೆಗೆ ವಿದ್ಯುತ್‌ ಫ್ರೀ, ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ. ಸಹಾಯಧನ ಸೇರಿ ಐದು ಉಚಿತ ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ (Siddaramaiah) ನೇತೃತ್ವದ ರಾಜ್ಯ ಸರ್ಕಾರವು (Karnataka Government), ಅವುಗಳನ್ನು ಯಶಸ್ವಿಯಾಗಿಯೂ ಜಾರಿಗೆ ತಂದಿದೆ. ಯಶಸ್ವಿ ಜಾರಿಯಿಂದ ದೇಶಾದ್ಯಂತ ಖ್ಯಾತಿಯನ್ನೂ ಗಳಿಸಿದೆ. ಆದರೆ, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ನೇರವಾಗಿ ಜನರ ಜೇಬಿಗೆ ಕೈ ಹಾಕಿದೆ. ಒಂದು ಲೀಟರ್‌ ಪೆಟ್ರೋಲ್‌ಗೆ 3 ರೂ. ಹಾಗೂ ಡೀಸೆಲ್‌ಗೆ 3.5 ರೂ. ಏರಿಕೆ (Petrol, Diesel Price Hike) ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಈಗ ತೀವ್ರ ಚರ್ಚೆ, ಟೀಕೆ, ಆಕ್ರೋಶಕ್ಕೆ ಕಾರಣವಾಗಿದೆ.

ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ, ಅವುಗಳನ್ನು ಸಮರ್ಪಕವಾಗಿ ಜಾರಿಗೂ ತಂದ, ಬಡವರಿಗೆ ಅನುಕೂಲ ಮಾಡಿಕೊಟ್ಟ ಸಿದ್ದರಾಮಯ್ಯ ಅವರ ಸರ್ಕಾರವು ಮೊದಲಿಗೆ ಮದ್ಯದ ಬೆಲೆಯನ್ನು ಏರಿಕೆ ಮಾಡಿತು. ಮದ್ಯ ಪ್ರಿಯರ ಜೇಬಿಗೆ ಕತ್ತರಿ ಹಾಕಿ ಸಂಪನ್ಮೂಲವನ್ನು ಕ್ರೋಡೀಕರಣ ಮಾಡಿತು. ಒಂದೇ ವರ್ಷದಲ್ಲಿ ಎರಡೆರಡು ಬಾರಿ ಮದ್ಯದ ಬೆಲೆಯೇರಿಕೆ ಮಾಡಿತು. ಅಷ್ಟೇ ಅಲ್ಲ, ರಾಜ್ಯ ಸರ್ಕಾರವು ಈಗಾಗಲೇ ಮುದ್ರಾಂಕ ಶುಲ್ಕಗಳನ್ನು ಏರಿಸಿದೆ. ದತ್ತು ಸ್ವೀಕಾರ ಪ್ರಮಾಣಪತ್ರ, ಅಫಿಡವಿಟ್‌, ಆಸ್ತಿ ಪರಭಾರೆ, ಪವರ್‌ ಆಫ್‌ ಅಟಾರ್ನಿ ಸೇರಿ ಯಾವುದೇ ದಾಖಲೆಯನ್ನು ಪಡೆಯಲು ನಿಗದಿಪಡಿಸಿದ್ದ ಶುಲ್ಕವನ್ನು ಎರಡು ಅಥವಾ ಅದಕ್ಕಿಂತ ಹೆಚ್ಚು ಪಟ್ಟು ಹೆಚ್ಚಿಸಲಾಗಿದೆ. ಇದು ಕೂಡ ಸಂಪನ್ಮೂಲ ಕ್ರೋಡೀಕರಣದ ಭಾಗವೇ ಆಗಿದೆ. ಮದ್ಯಪಾನ ಆರೋಗ್ಯಕ್ಕೆ ಹಾನಿಕರ, ಅದರ ಬೆಲೆ ಹೆಚ್ಚಿಸಿದರೂ ತೊಂದರೆ ಇಲ್ಲ ಎಂದು ಜನ ಸುಮ್ಮನಾದರು. ಮುದ್ರಾಂಕ ಶುಲ್ಕವು ದಿನನಿತ್ಯದ ಖರ್ಚು-ವೆಚ್ಚ ಅಲ್ಲದ ಕಾರಣ, ಅದರ ಬೆಲೆಯೇರಿಕೆಯನ್ನೂ ಜನ ಮನ್ನಿಸಿದರು. ಆದರೆ, ಈಗ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿರುವುದು ಅಕ್ಷಮ್ಯವಾಗಿದೆ.

ಪೆಟ್ರೋಲ್‌ ಬೆಲೆಯನ್ನು ಒಂದು ಲೀಟರ್‌ಗೆ 3 ರೂ. ಹಾಗೂ ಡೀಸೆಲ್‌ ಬೆಲೆಯನ್ನು ಲೀಟರ್‌ಗೆ 3.5 ರೂ. ಏರಿಕೆ ಮಾಡಿರುವುದು ಜನರ ಮೇಲೆ ನೇರವಾಗಿ, ನಿತ್ಯವೂ ಪರಿಣಾಮ ಬೀರುತ್ತದೆ. ಈಗಾಗಲೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯೇ ಜಾಸ್ತಿಯೇ ಇದ್ದ ಕಾರಣ ಮತ್ತೆ ಏರಿಕೆ ಮಾಡಿರುವುದು ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯೇರಿಕೆಯಿಂದ ಸಾಗಣೆ ವೆಚ್ಚ ಜಾಸ್ತಿಯಾಗುತ್ತದೆ. ಇದು ಅಗತ್ಯವಸ್ತುಗಳ ಬೆಲೆಯೇರಿಕೆಗೂ ಕಾರಣವಾಗುತ್ತದೆ. ಸಕಲ ರೀತಿಯಲ್ಲೂ ಜನರ ಜೇಬಿಗೆ ಭಾರವಾಗುತ್ತದೆ. ಪ್ರತಿದಿನವೂ ಬಡವರ ಹಣಕ್ಕೆ ಕತ್ತರಿ ಬೀಳುತ್ತದೆ. ಅಲ್ಲಿಗೆ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟು, ಮತ್ತೊಂದು ಕೈಯಿಂದ ಪಡೆದುಕೊಂಡಂತೆ ಆಗುತ್ತದೆ. ಆಗ ಗ್ಯಾರಂಟಿಗಳ ಆಶಯವೇ ಮಣ್ಣುಪಾಲಾದಂತಾಗುತ್ತದೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿದಾಗ, ಅಡುಗೆ ಅನಿಲ ಸಿಲಿಂಡರ್‌ ಬೆಲೆಯೂ ಜಾಸ್ತಿ ಮಾಡಿದಾಗ ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ. ಬೆಲೆಯೇರಿಕೆಯನ್ನು ಖಂಡಿಸಿ ಕಾಂಗ್ರೆಸ್‌ನಿಂದ ದೇಶಾದ್ಯಂತ ಪ್ರತಿಭಟನೆ ನಡೆಸಲಾಗಿದೆ. ಚುನಾವಣೆ ಸಂದರ್ಭದಲ್ಲಿಯೂ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ‘ಬೆಲೆಯೇರಿಕೆ’ ಅಸ್ತ್ರವನ್ನೇ ಬಳಸಿದೆ. ಹೀಗಿರುವಾಗ, ರಾಜ್ಯದಲ್ಲಿರುವ ಕಾಂಗ್ರೆಸ್‌ ಸರ್ಕಾರವೇ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಏರಿಕೆ ಮಾಡಿದರೆ ಹೇಗೆ? “ಗ್ಯಾರಂಟಿ ಯೋಜನೆಗಳಿಗೆ ಹಣ ಬೇಕಲ್ಲ, ಅದಕ್ಕಾಗಿ ಬೆಲೆಯೇರಿಕೆ ಮಾಡಿದ್ದೇವೆ” ಎಂದು ಸಚಿವ ಎಂ.ಬಿ.ಪಾಟೀಲ್‌ ಅವರು ಹೇಳಿರುವುದು ಯಾವ ರೀತಿಯಲ್ಲಿ ಸಮಂಜಸ? ಸಿದ್ದರಾಮಯ್ಯನವರೇ, ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲವಾಗಿದೆ. ಇದರಿಂದ ನಿಮ್ಮ ಸರ್ಕಾರಕ್ಕೆ ಹೆಸರೂ ಬಂದಿದೆ. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿ, ಕರ್ನಾಟಕದಲ್ಲಿ ನೀವು ನಿರೀಕ್ಷಿಸಿದಷ್ಟು ಸೀಟುಗಳು ಕಾಂಗ್ರೆಸ್‌ಗೆ ಬರದಿರುವ ಹೊತ್ತಿನಲ್ಲಿ ರಾಜ್ಯದ ಜನರ ಮೇಲೆ ಬೆಲೆಯೇರಿಕೆ ಅಸ್ತ್ರವನ್ನು ಬಳಸುತ್ತಿರುವುದು, ‘ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ’ ಎಂಬಂತಹ ವರ್ತನೆಯೇ? ಖಂಡಿತವಾಗಿಯೂ ಇದು ಜನ ವಿರೋಧಿ ಕ್ರಮ.

ಇದನ್ನೂ ಓದಿ: Pralhad Joshi: ತೈಲ ಬೆಲೆ ಏರಿಸಿ ಕರ್ನಾಟಕದವರ ಕೈಗೆ ಗ್ಯಾರಂಟಿ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್‌ ಜೋಶಿ

Continue Reading
Advertisement
Actor Darshan
ಕರ್ನಾಟಕ3 mins ago

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್;‌ ಮೊಬೈಲ್‌ ಪಾಸ್‌ವರ್ಡ್‌ ನೀಡಲು ದರ್ಶನ್‌ & ಗ್ಯಾಂಗ್‌ ತಕರಾರು!

Apple With sticker
Latest15 mins ago

Apple With sticker: ಸೇಬು ಹಣ್ಣುಗಳ ಮೇಲೆ ಸ್ಟಿಕ್ಕರ್; ಏನಿದರ ಹಿಂದಿರುವ ರಹಸ್ಯ?

Viral News
Latest15 mins ago

Viral News: ಮುಖಕ್ಕೆ ಎಂಜಲು ಉಗಿದು ಫೇಸ್ ಮಸಾಜ್ ಮಾಡಿದ ಅಮ್ಜದ್ ಅರೆಸ್ಟ್!

Viral Video
Latest27 mins ago

Viral Video: ನಾಯಿ ಜತೆ ವಾಕಿಂಗ್ ನೋಡಿರುತ್ತೀರಿ, ಹುಲಿ ಜತೆ? ಈ ವಿಡಿಯೊ ನೋಡಿ!

Health Tips
Latest31 mins ago

Health Tips: ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ

Temple Bell
ಧಾರ್ಮಿಕ36 mins ago

Temple Bell: ದೇವಾಲಯದಿಂದ ಹಿಂತಿರುಗುವಾಗ ಗಂಟೆ ಬಾರಿಸಲೇಬಾರದು ಯಾಕೆ ಗೊತ್ತೇ?

Morning Nutrition
ಆರೋಗ್ಯ38 mins ago

Morning Nutrition: ಆರೋಗ್ಯಕರ ಆಗಿರಬೇಕಿದ್ದರೆ ನಮ್ಮ ಬೆಳಗಿನ ತಿಂಡಿ ಹೇಗಿರಬೇಕು?

Karnataka Weather Forecast
ಮಳೆ1 hour ago

Karnataka Weather : ರಾಜ್ಯಾದ್ಯಂತ ಮುಂದಿನ ಒಂದು ವಾರ ಗುಡುಗು ಸಹಿತ ಮಳೆ; ಬಿರುಗಾಳಿ ಸಾಥ್‌

Siddaramaiah
ಸಂಪಾದಕೀಯ2 hours ago

ವಿಸ್ತಾರ ಸಂಪಾದಕೀಯ: ಬೆಲೆ ಏರಿಕೆ ಮಾಡುವುದೇ ರಾಜ್ಯ ಸರ್ಕಾರದ 6ನೇ ‘ಗ್ಯಾರಂಟಿ’ ಆಗದಿರಲಿ!

International Yoga Day 2024
ಆರೋಗ್ಯ2 hours ago

International Yoga Day 2024: ಗರ್ಭಿಣಿಯರೂ ಯೋಗ ಮಾಡಬಹುದೇ? ಯಾವ ಆಸನಗಳು ಸೂಕ್ತ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಯಾದಗಿರಿ18 hours ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ5 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ5 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

ಟ್ರೆಂಡಿಂಗ್‌