Opportunity to write CAPF exam in Kannada is welcome ವಿಸ್ತಾರ ಸಂಪಾದಕೀಯ: ಸಿಎಪಿಎಫ್‌ ಪರೀಕ್ಷೆ ಬರೆಯಲು ಕನ್ನಡದಲ್ಲಿ ಅವಕಾಶ ಸ್ವಾಗತಾರ್ಹ - Vistara News

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಸಿಎಪಿಎಫ್‌ ಪರೀಕ್ಷೆ ಬರೆಯಲು ಕನ್ನಡದಲ್ಲಿ ಅವಕಾಶ ಸ್ವಾಗತಾರ್ಹ

ಇತ್ತೀಚೆಗೆ ಸಿ ಆರ್ ಪಿ ಎಫ್ ಹುದ್ದೆಗಳ ಪರೀಕ್ಷೆ ಬರೆಯಲು ಹಿಂದಿ, ಇಂಗ್ಲಿಷ್ ನಲ್ಲಿ ಮಾತ್ರ ಅವಕಾಶ ನೀಡಲಾಗಿತ್ತು. ಕುರಿತು ʼವಿಸ್ತಾರ ನ್ಯೂಸ್‌ʼ ಕೂಡ ಧ್ವನಿ ಎತ್ತಿತ್ತು. ಇದೀಗ ಸಕಾಲಿಕ ನಿರ್ಧಾರ ತೆಗೆದುಕೊಂಡಿರುವ ಕೇಂದ್ರದ ಕ್ರಮವನ್ನು ವಿಸ್ತಾರ ನ್ಯೂಸ್‌ ಶ್ಲಾಘಿಸುತ್ತದೆ.

VISTARANEWS.COM


on

opportunity-to-write-capf-exam-in-kannada-is-welcome
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕನ್ನಡದಲ್ಲಿಯೂ ಕೇಂದ್ರೀಯ ಮೀಸಲು ಪೊಲೀಸ್‌ ಪಡೆ (ಸಿಆರ್‌ಪಿಎಫ್‌)ಯ ಪರೀಕ್ಷೆ ಬರೆಯಲು ಕರ್ನಾಟಕ ಸೇರಿ ದಕ್ಷಿಣ ಭಾರತದಾದ್ಯಂತ ಆಗ್ರಹ ಕೇಳಿಬರುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರವು ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದೆ. ಕನ್ನಡ ಸೇರಿ 15 ಸ್ಥಳೀಯ ಭಾಷೆಗಳಲ್ಲಿ ಕೇಂದ್ರೀಯ ಸಶಸ್ತ್ರ ಪೊಲೀಸ್‌ ಪಡೆ (CAPF Exam In Kannada)ಯ ಪರೀಕ್ಷೆ ಬರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದರಿಂದಾಗಿ ಇನ್ನು ಮುಂದೆ ಸಿಎಪಿಎಫ್‌ ವ್ಯಾಪ್ತಿಗೆ ಬರುವ ಸಿಆರ್‌ಪಿಎಫ್‌, ಗಡಿ ಭದ್ರತಾ ಪಡೆ (BSF), ಸಶಸ್ತ್ರ ಸೀಮಾ ದಳ, ಇಂಡೋ-ಟಿಬೆಟಿಯನ್‌ ಗಡಿ ಪೊಲೀಸ್‌ (ITBP) ಸೇರಿ ಎಲ್ಲ ಪರೀಕ್ಷೆಗಳನ್ನು ಕನ್ನಡದಲ್ಲಿಯೇ ಬರೆಯಬಹುದಾಗಿದೆ. ಇದರಿಂದ ದಕ್ಷಿಣ ಭಾರತದ ಎಲ್ಲ ರಾಜ್ಯಗಳಿಗೂ ಅನುಕೂಲವಾಗಲಿದ್ದು, ಕನ್ನಡ ಸೇರಿ 15 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆಗಳನ್ನು ಬರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಕೇಂದ್ರ ಸರ್ಕಾರದ ವಿರುದ್ಧ ಹಿಂದಿ ಹೇರಿಕೆಯ ಆರೋಪಗಳು ಕೇಳಿಬರುತ್ತಿರುವ ಹೊತ್ತಿನಲ್ಲಿಯೇ ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅದು ಅನುಮತಿ ನೀಡಿರುವುದು ಮಹತ್ವದ ವಿಷಯ. ಇತ್ತೀಚೆಗೆ ಸೇನೆಯು ಸಿಆರ್‌ಪಿಎಫ್‌ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, 9,212 ಹುದ್ದೆಗಳಲ್ಲಿ ರಾಜ್ಯದಲ್ಲಿನ 466 ಹುದ್ದೆಗಳು ಸೇರಿದ್ದವು. ಆದರೆ ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ಮಾತ್ರ ಬರೆಯಲು ಅವಕಾಶ ನೀಡಲಾಗಿದ್ದುದಕ್ಕೆ ಕರ್ನಾಟಕ, ತಮಿಳುನಾಡು, ತೆಲಂಗಾಣ, ಆಂಧ್ರಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಕುರಿತು ʼವಿಸ್ತಾರ ನ್ಯೂಸ್‌ʼ ಕೂಡ ಧ್ವನಿ ಎತ್ತಿತ್ತು. ಇದೀಗ ಸಕಾಲಿಕ ನಿರ್ಧಾರ ತೆಗೆದುಕೊಂಡಿರುವ ಕೇಂದ್ರದ ಕ್ರಮವನ್ನು ವಿಸ್ತಾರ ನ್ಯೂಸ್‌ ಶ್ಲಾಘಿಸುತ್ತದೆ.

ಇಂಥ ವಿಕೇಂದ್ರೀಕೃತ ಕ್ರಮಗಳಿಂದಲೇ ಒಕ್ಕೂಟ ವ್ಯವಸ್ಥೆಯೊಂದು ಗಟ್ಟಿಯಾಗುತ್ತದೆ. ಹಿಂದಿ ಅಥವಾ ಇಂಗ್ಲಿಷ್‌ ಎಂಬ ಎರಡೇ ಭಾಷೆಗಳಲ್ಲಿ ಆಡಳಿತ ವ್ಯವಸ್ಥೆ ಅಥವಾ ನೇಮಕಾತಿ ಪರೀಕ್ಷಾ ವ್ಯವಸ್ಥೆಗಳನ್ನು ಕೇಂದ್ರೀಕರಿಸಿದಾಗ ಅದು ಕೆಲವೇ ಕೆಲವರಿಗೆ ಮಾತ್ರ ನೆರವಾಗುತ್ತದೆ. ಹೇಗೆ ಮೀಸಲಾತಿಯು ಸಮಾಜದ ತಳಮಟ್ಟದಲ್ಲಿ ಸಾಮಾಜಿಕ ನ್ಯಾಯವನ್ನು ಹಬ್ಬಿಸಲು ನೆರವಾಯಿತೋ, ಹಾಗೆಯೇ ಸ್ಥಳೀಯ ಭಾಷೆಗಳಲ್ಲಿ ನೇಮಕಾತಿ ಪರೀಕ್ಷೆ ಎಂಬುದು ಕೂಡ ನೆರವಾಗಲಿದೆ. ಇದನ್ನು ಮುಂದಿನ ದಿನಗಳಲ್ಲಿ ನಾವು ನೋಡಬಹುದು. ಸೇನಾ ಪರೀಕ್ಷೆಗಳಿಗೆ ದೈಹಿಕ ಪರೀಕ್ಷೆಯೇ ಪ್ರಧಾನ ಎಂಬುದು ನಿಜವಾದರೂ, ಇತ್ತೀಚೆಗೆ ಲಿಖಿತ ಪರೀಕ್ಷೆಗಳು ಕೂಡ ಅಭ್ಯರ್ಥಿಯ ಗುಣಮಟ್ಟವನ್ನು ಗ್ರಹಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಕೇಂದ್ರೀಯ ಸಶಸ್ತ್ರ ಹಾಗೂ ಮೀಸಲು ಪೊಲೀಸ್‌ ಪಡೆಗಳು ಹಿಂದಿ ಬಲ್ಲ ರಾಜ್ಯಗಳಲ್ಲಿ ಕಾರ್ಯಾಚರಿಸುತ್ತದೆ ಎಂದೇನೂ ಇಲ್ಲ. ದೇಶದ ಎಲ್ಲ ಭಾಗಗಳಲ್ಲಿಯೂ ಕಾರ್ಯಾಚರಿಸುತ್ತವೆ. ಸ್ಥಳೀಯ ಭಾಷೆಗಳನ್ನು ಎಲ್ಲರೂ ಕಲಿಯುವುದು ಅಗತ್ಯವಾಗುತ್ತದೆ. ಆದ್ದರಿಂದ ಹಿಂದಿ ವಲಯದ ರಾಜ್ಯಗಳ ಸೈನಿಕರು ಕೂಡ ದಕ್ಷಿಣ ರಾಜ್ಯಗಳಲ್ಲಿ ನೇಮಕವಾದರೆ ಅಲ್ಲಿನ ಭಾಷೆಗಳನ್ನು ಕಲಿಯುವುದು ಅನಿವಾರ್ಯ. ಮಲ್ಟಿನ್ಯಾಷನಲ್‌ ಕಂಪನಿಗಳು ಕೂಡ ಇಂದು ಸ್ಥಳೀಯ ಭಾಷಿಕರನ್ನು ಒಲಿಸಿಕೊಳ್ಳಲು ಆಯಾ ಭಾಷೆಯಲ್ಲಿ ಹೆಚ್ಚಿನ ಆದ್ಯತೆಯ ವಹಿವಾಟನ್ನು ನಡೆಸುತ್ತಿವೆ. ಹೀಗೆ ಪ್ರಾದೇಶಿಕ ಭಾಷೆಗಳು ಕೂಡ ಇಂದು ವಿಶ್ವಾತ್ಮಕವಾಗುತ್ತಿವೆ. ಇಂಥ ಹೊತ್ತಿನಲ್ಲಿ ಕೇಂದ್ರೀಯ ನೇಮಕಾತಿಯೇ ಆದರೂ ಪ್ರಾದೇಶಿಕ ಭಾಷೆಗಳಲ್ಲಿ ಸಿಗುವಂತಾಗಿರುವುದು ಸ್ವಾಗತಾರ್ಹ.

ಸಂಪಾದಕೀಯ: ವಿಸ್ತಾರ ಸಂಪಾದಕೀಯ: ಭಟಿಂಡಾ ಸೇನಾ ನೆಲೆ ಮೇಲೆ ದಾಳಿ, ಇದು ಅಪಾಯದ ಕರೆಗಂಟೆ

ಇದು ಬಹು ಸುಲಭವಾಗಿ ದಕ್ಕಿಲ್ಲ. ಇದಕ್ಕಾಗಿ ವರ್ಷಗಟ್ಟಲೆಯ ಬೇಡಿಕೆ, ಹೋರಾಟ ಎಲ್ಲ ನಡೆದಿದೆ. 2011ಕ್ಕಿಂತ ಮೊದಲು ರೈಲ್ವೆ ನೇಮಕಾತಿ ಪರೀಕ್ಷೆಗಳು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ನಡೆಯುತ್ತಿದ್ದವು. ಆಗ ರೈಲ್ವೆ ಇಲಾಖೆಯಲ್ಲಿ ಹಿಂದಿ ಭಾಷಿಕರೇ ತುಂಬಿ ತುಳುಕುತ್ತಿದ್ದರು. ಇತ್ತೀಚೆಗೆ ಭಾರಿ ಹೋರಾಟದ ಬಳಿಕ ಕನ್ನಡದಲ್ಲೂ ರೈಲ್ವೆ ನೇಮಕಾತಿ ಪರೀಕ್ಷೆ ಲಭ್ಯವಾಗುವಂತಾಗಿದೆ. ಆದರೆ ಬ್ಯಾಂಕಿಂಗ್‌ ಪರೀಕ್ಷೆಗಳು, ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ ಮುಂತಾದ ಕೇಂದ್ರ ಇಲಾಖೆಗಳು ನಡೆಸುವ ಪರೀಕ್ಷೆಗಳು ಕನ್ನಡದಲ್ಲಿ ಲಭ್ಯವಿಲ್ಲ. ಪರಿಣಾಮವಾಗಿ ಕರ್ನಾಟಕದ ಬ್ಯಾಂಕ್‌ಗಳಲ್ಲಿ ಉತ್ತರ ಭಾರತೀಯರೇ ತುಂಬಿ ಹೋಗಿದ್ದರೆ, ಉತ್ತರ ಭಾರತದಲ್ಲಿ ದಕ್ಷಿಣ ಭಾರತೀಯರು ಹುಡುಕಿದರೂ ಕಾಣಸಿಗುವುದಿಲ್ಲ. ಕನ್ನಡಿಗರ ಪಾಲಿನ ಹುದ್ದೆಗಳನ್ನು ಇತರರು ದೋಚಲು ಇದು ಕಾರಣವಾಗಿದೆ. ವರ್ಷಕ್ಕೆ ಒಂದು ಲಕ್ಷಕ್ಕೂ ಅಧಿಕ ಹುದ್ದೆಗಳನ್ನು ನೀಡುವ ಬ್ಯಾಂಕಿಂಗ್‌ ವಲಯದಲ್ಲಿ ಕನ್ನಡಿಗರ ನೇಮಕದ ಪ್ರಮಾಣ ತೀರಾ ಕಡಿಮೆ. ಇನ್ನು ಯು ಪಿ ಎಸ್ ಸಿ ಪರೀಕ್ಷೆಗಳಲ್ಲಿ ಕನ್ನಡದಲ್ಲಿ ಬರೆಯಬಹುದು ಎಂಬ ಅವಕಾಶ ನೀಡಲಾಗಿದೆ; ಆದರೆ ಇಲ್ಲೂ ಪೂರ್ವಭಾವಿ ಪರೀಕ್ಷೆಗಳನ್ನು ಹಿಂದಿ ಹಾಗೂ ಇಂಗ್ಲಿಷ್‌ಲ್ಲಿಯೇ ಬರೆಯಬೇಕು. ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಕೂಡ ಗಮನ ಹರಿಸಿ ಈ ತಾರತಮ್ಯವನ್ನು ಆದಷ್ಟು ಬೇಗ ಸರಿಪಡಿಸಬೇಕು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Varun Gandhi: ಸಂಸದ ಅಲ್ಲದಿದ್ದರೂ ನಿಮ್ಮ ಮಗ; ಜನಕ್ಕೆ ಟಿಕೆಟ್‌ ವಂಚಿತ ವರುಣ್‌ ಗಾಂಧಿ ಭಾವುಕ ಪತ್ರ!

Varun Gandhi: ಉತ್ತರ ಪ್ರದೇಶದ ಪಿಲಿಭಿಟ್‌ ಕ್ಷೇತ್ರದಿಂದ ವರುಣ್‌ ಗಾಂಧಿ ಅವರಿಗೆ ಬಿಜೆಪಿಯು ಟಿಕೆಟ್‌ ನಿರಾಕರಿಸಿದೆ. ಹಾಗಾಗಿ ಅವರು ಕ್ಷೇತ್ರದ ಜನರಿಗೆ ಭಾವುಕರಾಗಿ ಪತ್ರ ಬರೆದಿದ್ದಾರೆ.

VISTARANEWS.COM


on

Varun Gandhi
Koo

ನವದೆಹಲಿ: ಒಂದು ಕಾಲದಲ್ಲಿ ಬಿಜೆಪಿಯ ಫೈರ್‌ಬ್ರ್ಯಾಂಡ್‌ ನಾಯಕರಾಗಿದ್ದ ವರುಣ್‌ ಗಾಂಧಿ (Varun Gandhi) ಅವರಿಗೆ ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಪಕ್ಷವು ಟಿಕೆಟ್‌ ನಿರಾಕರಿಸಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಕಡು ಟೀಕೆ ಮಾಡುತ್ತಿದ್ದ ವರುಣ್‌ ಗಾಂಧಿ ಅವರಿಗೆ ಪಕ್ಷವು ಟಿಕೆಟ್‌ ನೀಡಿಲ್ಲ. ಇದರ ಬೆನ್ನಲ್ಲೇ ಅವರು, ತಮ್ಮ ಪಿಲಿಭಿಟ್‌ ಕ್ಷೇತ್ರದ ಜನರಿಗೆ ಭಾವನಾತ್ಮಕವಾಗಿ ಪತ್ರ ಬರೆದಿದ್ದಾರೆ. “ಸಂಸದನಾಗಿ ಅಲ್ಲದಿದ್ದರೂ ನಾನು ನಿಮ್ಮ ಮಗನಾಗಿ ಇರುತ್ತೇನೆ” ಎಂದು ವರುಣ್‌ ಗಾಂಧಿ ಪತ್ರ ಬರೆದಿದ್ದಾರೆ.

“ಪಿಲಿಭಿಟ್‌ ಲೋಕಸಭೆ ಕ್ಷೇತ್ರದ ಸದಸ್ಯನಾಗಿ ನನ್ನ ಅವಧಿಯು ಮುಗಿಯುತ್ತ ಬಂದಿದೆ. ಆದರೇನಂತೆ, ಮುಂದಿನ ದಿನಗಳಲ್ಲಿ ನಾನು ನಿಮಗೆ ಸಂಸದನಾಗಿ ಇರದಿದ್ದರೂ, ಮಗನಾಗಿ ಇರುತ್ತೇನೆ. ಸಂಸದನಾಗಿ ಪಿಲಿಭಿಟ್‌ ಜನರೊಂದಿಗಿನ ಸಂಪರ್ಕ ಮುಕ್ತಾಯವಾಗಬಹುದು. ಆದರೆ, ಒಬ್ಬ ವ್ಯಕ್ತಿಯಾಗಿ ನನ್ನ ಕೊನೆಯ ಉಸಿರಿರುವವರೆಗೆ ಪಿಲಿಭಿಟ್‌ ಜನರೊಂದಿಗೆ ನಾನು ಇರುತ್ತೇನೆ” ಎಂಬುದಾಗಿ ವರುಣ್‌ ಗಾಂಧಿ ಪತ್ರ ಬರೆದಿದ್ದಾರೆ.

ಸೇವೆ ಮಾಡಿದ ಖುಷಿ ಇದೆ

“ಪಿಲಿಭಿಟ್‌ ಜನರು ಅದ್ಭುತ. ಅವರ ವರ್ತನೆ, ಸರಳ ಜೀವನ, ಉದಾತ್ತ ಚಿಂತನೆಗಳೇ ನನ್ನನ್ನು ಒರೆಗೆ ಹಚ್ಚಿಸುತ್ತವೆ. ಅದರಲ್ಲೂ, ಪಿಲಿಭಿಟ್‌ ಸಂಸದನಾಗಿ ನಾನು ಅವರ ಸೇವೆ ಮಾಡಿರುವ ತೃಪ್ತಿ ಇದೆ. ನನ್ನ ಅವಧಿಯಲ್ಲಿ ಪಿಲಿಭಿಟ್‌ ಕ್ಷೇತ್ರದ ಅಭಿವೃದ್ಧಿಗೆ ಇನ್ನಿಲ್ಲದಂತೆ ಶ್ರಮಿಸಿದ್ದೇನೆ. ನಿಮ್ಮನ್ನೆಲ್ಲ ನಾನು ಪ್ರತಿನಿಧಿಸಿದೆ ಎಂಬ ಸಂಗತಿಯೇ ನನಗೆ ಹೆಚ್ಚು ಖುಷಿ ಕೊಡುತ್ತದೆ. ನನಗೆ ಇದಕ್ಕಿಂತ ಸೌಭಾಗ್ಯ ಇನ್ನೊಂದಿಲ್ಲ” ಎಂದು ಪತ್ರದಲ್ಲಿ ವರುಣ್‌ ಗಾಂಧಿ ಉಲ್ಲೇಖಿಸಿದ್ದಾರೆ.

“ನಾನು ಚುನಾವಣೆ ರಾಜಕೀಯ ಪ್ರವೇಶಿಸಿದ ಬಳಿಕ ಸಾಮಾನ್ಯ ಜನರ ಧ್ವನಿಯಾಗಿ ಕಾರ್ಯನಿರ್ವಹಿಸಿದೆ. ಇಡೀ ಕ್ಷೇತ್ರದ ಏಳಿಗೆಗೆ ಶ್ರಮ ವಹಿಸಿದೆ. ಹತ್ತಾರು ಯೋಜನೆಗಳನ್ನು ಜಾರಿಗೆ ತಂದೆ. ಆದರೆ, ಇನ್ನು ಮುಂದೆ ನಿಮ್ಮ ಜತೆ ನಾನು ಎಂಪಿಯಾಗಿ ಇರುವುದಿಲ್ಲ. ಆದರೆ, ಕೊನೆಯವರೆಗೂ ನಿಮ್ಮ ಮಗನಾಗಿ ಇರುತ್ತೇನೆ. ನಿಮಗಾಗಿ ನನ್ನ ಮನೆಯ ಬಾಗಿಲುಗಳು ಎಂದಿಗೂ ತೆರೆದಿರುತ್ತವೆ. ಈಗ ನಿಮ್ಮ ಆಶೀರ್ವಾದವನ್ನಷ್ಟೇ ನಾನು ಬೇಡುತ್ತಿದ್ದೇನೆ” ಎಂದಿದ್ದಾರೆ.

ಇದನ್ನೂ ಓದಿ: Narendra Modi : ಸಂದೇಶ್​ಖಾಲಿ ಸಂತ್ರಸ್ತೆಯನ್ನು ‘ಶಕ್ತಿ ಸ್ವರೂಪ’ ಎಂದು ಕರೆದ ಪ್ರಧಾನಿ ಮೋದಿ

ವರುಣ್‌ ಗಾಂಧಿ ಅವರು ಪಿಲಿಭಿಟ್‌ ಕ್ಷೇತ್ರದಿಂದ 2009 ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಇವರು 2014ರಲ್ಲಿ ಸುಲ್ತಾನ್‌ಪುರದಿಂದಲೂ ಸ್ಪರ್ಧಿಸಿ ಜಯ ಕಂಡಿದ್ದರು. 2019ರಲ್ಲಿ ಸುಲ್ತಾನ್‌ಪುರದಲ್ಲಿ ವರುಣ್‌ ಗಾಂಧಿ ಅವರ ತಾಯಿ ಮನೇಕಾ ಗಾಂಧಿ ಸ್ಪರ್ಧಿಸಿ ಗೆಲುವು ಕಂಡಿದ್ದರು. ಈಗ ಪಿಲಿಭಿಟ್‌ ಕ್ಷೇತ್ರದಲ್ಲಿ ಬಿಜೆಪಿಯು ವರುಣ್‌ ಗಾಂಧಿ ಅವರ ಬದಲು ಜಿತಿನ್‌ ಪ್ರಸಾದ ಅವರಿಗೆ ಟಿಕೆಟ್‌ ನೀಡಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

CJI DY Chandrachud: 600 ವಕೀಲರಿಂದ ಮುಖ್ಯ ನ್ಯಾಯಮೂರ್ತಿಗೆ ಪತ್ರ; ನ್ಯಾಯಾಂಗದ ಸಮಗ್ರತೆಗೆ ಧಕ್ಕೆ ಬಗೆಗೆ ಕಳವಳ

ಹಿರಿಯ ವಕೀಲ ಹರೀಶ್ ಸಾಳ್ವೆ ಮತ್ತು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಸೇರಿದಂತೆ 600 ಮಂದಿ ವಕೀಲರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ.

VISTARANEWS.COM


on

supreme court CJI DY chandrachud
Koo

ಹೊಸದಿಲ್ಲಿ: ದೇಶದ 600ಕ್ಕೂ ಹೆಚ್ಚು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ (Chief Justice of India) ಡಿ.ವೈ ಚಂದ್ರಚೂಡ್ (CJI DY Chandrachud) ಅವರಿಗೆ ಪತ್ರ ಬರೆದಿದ್ದು, “ನ್ಯಾಯಾಂಗದ (Judiciary) ಸಮಗ್ರತೆಗೆ ಧಕ್ಕೆ ತರುತ್ತಿರುವ ಬೆಳವಣಿಗೆಗಳ” ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. “ಪಟ್ಟಭದ್ರ ಹಿತಾಸಕ್ತ ಗುಂಪು ನ್ಯಾಯಾಲಯದ (Supreme court) ತೀರ್ಪುಗಳ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿದೆ” ಎಂದು ದೂರಿದ್ದಾರೆ.

ಹಿರಿಯ ವಕೀಲ ಹರೀಶ್ ಸಾಳ್ವೆ (Harish Salve) ಮತ್ತು ಬಾರ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಸೇರಿದಂತೆ 600 ಮಂದಿ ವಕೀಲರು ಈ ಪತ್ರಕ್ಕೆ ಸಹಿ ಹಾಕಿದ್ದಾರೆ. “ಪಟ್ಟಭದ್ರ ಹಿತಾಸಕ್ತಿಯ ಗುಂಪುಗಳು ನ್ಯಾಯಾಂಗ ಪ್ರಕ್ರಿಯೆಗಳನ್ನು ನಾಜೂಕಾಗಿ ನಿರ್ವಹಿಸಲು, ನ್ಯಾಯಾಲಯದ ತೀರ್ಪುಗಳ ಮೇಲೆ ಪ್ರಭಾವ ಬೀರಲು ಯತ್ನಿಸುತ್ತಿರುವುದು; ಆಧಾರರಹಿತ ಆರೋಪಗಳು ಮತ್ತು ರಾಜಕೀಯ ಅಜೆಂಡಾಗಳನ್ನು ಮುಂದಿಟ್ಟು ನ್ಯಾಯಾಂಗದ ಖ್ಯಾತಿಯನ್ನು ಹಾಳುಮಾಡಲು ಪ್ರಯತ್ನಿಸುತ್ತಿರುವುದನ್ನು” ವಕೀಲರು ಖಂಡಿಸಿದ್ದಾರೆ.

“ಭ್ರಷ್ಟಾಚಾರದ ಆರೋಪ ಹೊತ್ತಿರುವ ರಾಜಕೀಯ ವ್ಯಕ್ತಿಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಇದು ಸ್ಪಷ್ಟವಾಗಿ ಕಂಡುಬರುತ್ತಿದೆ. ಅಲ್ಲಿ ನ್ಯಾಯಾಲಯದ ನಿರ್ಧಾರಗಳನ್ನು ತಮಗೆ ಬೇಕಾದ ಹಾಗೆ ತಿರುಚುವ, ನ್ಯಾಯಾಂಗಕ್ಕೆ ಕಳಂಕ ಉಂಟುಮಾಡುವ ಪ್ರಯತ್ನಗಳು ಹೆಚ್ಚು ಸ್ಪಷ್ಟವಾಗಿ ಕಂಡುಬರುತ್ತಿವೆ” ಎಂದು ಪತ್ರದಲ್ಲಿದೆ.

“ಒಂದು ಆತಂಕಕಾರಿ ತಂತ್ರವೆಂದರೆ‌, ನ್ಯಾಯಾಲಯಗಳ ಈಗಿನ ಕಾರ್ಯವೈಖರಿಯನ್ನು ಉದ್ದೇಶಪೂರ್ವಕ ʼಕಲ್ಪಿತ ಸುವರ್ಣಯುಗ’ಕ್ಕೆ ಹೋಲಿಸುವುದು, ಸುಳ್ಳು ನಿರೂಪಣೆಯೊಂದಿಗೆ ನ್ಯಾಯಾಂಗದ ಕಾರ್ಯನಿರ್ವಹಣೆಯ ಕುರಿತು ಅಪಕಲ್ಪನೆ ಮೂಡಿಸುವುದು. ಇಂತಹ ಸುಳ್ಳು ನಿರೂಪಣೆಗಳು ನ್ಯಾಯಾಂಗದ ಫಲಿತಾಂಶಗಳ ಮೇಲೆ ದುಷ್ಪ್ರಭಾವ ಬೀರುವ ಮತ್ತು ನ್ಯಾಯಾಂಗದ ಮೇಲಿನ ಸಾರ್ವಜನಿಕ ನಂಬಿಕೆಯನ್ನು ಕುಗ್ಗಿಸುವ ಉದ್ದೇಶವನ್ನು ಹೊಂದಿವೆ” ಎಂದು ವಕೀಲರು ಆಪಾದಿಸಿದ್ದಾರೆ.

ಈ ಪತ್ರವು “ಬೆಂಚ್ ಫಿಕ್ಸಿಂಗ್‌” ಬಗ್ಗೆ ಕಳವಳ ವ್ಯಕ್ತಪಡಿಸಿದೆ. “ನ್ಯಾಯಾಂಗ ಪೀಠಗಳ ಸಂಯೋಜನೆಯ ಮೇಲೆ ಪ್ರಭಾವ ಬೀರಲು ಮತ್ತು ನ್ಯಾಯಾಧೀಶರ ಸಮಗ್ರತೆಯ ಮೇಲೆ ಹಾನಿಯೆಸಗಲು ಪ್ರಯತ್ನಗಳನ್ನು ಮಾಡಲಾಗಿದೆ. ಈ ಕ್ರಮಗಳು ನ್ಯಾಯಾಂಗಕ್ಕೆ ಅಗೌರವ ಮಾತ್ರವಲ್ಲದೆ ಕಾನೂನು ಮತ್ತು ನ್ಯಾಯದ ತತ್ವಗಳಿಗೆ ಹಾನಿಯುಂಟುಮಾಡುತ್ತವೆ” ಎಂದಿದೆ. “ಅವರು ನಮ್ಮ ನ್ಯಾಯಾಲಯಗಳನ್ನು ಕಾನೂನಿನ ಆಡಳಿತವಿಲ್ಲದ ದೇಶಗಳಿಗೆ ಹೋಲಿಸುವ ಮಟ್ಟಕ್ಕೆ ಇಳಿದಿದ್ದಾರೆ” ಎಂದು ಆರೋಪಿಸಿದೆ.

“ಅವು ಕೇವಲ ಟೀಕೆಗಳಲ್ಲ. ಅವು ನಮ್ಮ ನ್ಯಾಯಾಂಗದಲ್ಲಿ ಸಾರ್ವಜನಿಕರ ನಂಬಿಕೆಯನ್ನು ಹಾಳುಮಾಡುವ, ನಮ್ಮ ಕಾನೂನುಗಳ ನ್ಯಾಯೋಚಿತ ಅನ್ವಯಕ್ಕೆ ಬೆದರಿಕೆ ಉಂಟುಮಾಡುವ ನೇರ ದಾಳಿಗಳಾಗಿವೆ” ಎಂದಿರುವ ಪತ್ರ, ರಾಜಕಾರಣಿಗಳು ತಮ್ಮ ಹಿತಾಸಕ್ತಿಗಳಿಗೆ ಅನುಗುಣವಾಗಿ ಕಾನೂನು ವಿಷಯಗಳ ಮೇಲೆ ನಿಲುವುಗಳನ್ನು ಬದಲಾಯಿಸುವ, ಆ ಮೂಲಕ ಕಾನೂನು ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಹಾಳು ಮಾಡುವ ವಿದ್ಯಮಾನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

“ರಾಜಕಾರಣಿಗಳು ಭ್ರಷ್ಟಾಚಾರದ ಆರೋಪ ಮಾಡಿ ನಂತರ ನ್ಯಾಯಾಲಯದಲ್ಲಿ ಅವರನ್ನು ಸಮರ್ಥಿಸಿಕೊಳ್ಳುವುದನ್ನು ವಿಲಕ್ಷಣ ವಿದ್ಯಮಾನ. ನ್ಯಾಯಾಲಯದ ತೀರ್ಮಾನ ಅವರಿಗೆ ಬೇಕಾದಂತೆ ಬರದಿದ್ದರೆ ಅವರು ನ್ಯಾಯಾಲಯದ ಒಳಗೆ ಮತ್ತು ಮಾಧ್ಯಮಗಳಲ್ಲಿ ನ್ಯಾಯಾಲಯಗಳನ್ನು ಟೀಕಿಸುತ್ತಾರೆ. ಈ ಎರಡು ಮುಖದ ನಡವಳಿಕೆಯು ನಮ್ಮ ಕಾನೂನು ವ್ಯವಸ್ಥೆಯ ಬಗ್ಗೆ ಸಾಮಾನ್ಯ ವ್ಯಕ್ತಿಯಲ್ಲಿರುವ ಗೌರವಕ್ಕೆ ಹಾನಿಯೆಸಗುತ್ತದೆ,” ಎಂದು ವಕೀಲರು ಆರೋಪಿಸಿದ್ದಾರೆ.

“ಕೆಲವರು ತಮ್ಮ ಪ್ರಕರಣಗಳಲ್ಲಿ ನ್ಯಾಯಾಧೀಶರು ಯಾರೆಂಬುದರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ. ನಿರ್ದಿಷ್ಟ ರೀತಿಯಲ್ಲಿ ತೀರ್ಪು ನೀಡಲು ನ್ಯಾಯಾಧೀಶರ ಮೇಲೆ ಒತ್ತಡ ಹೇರಲು, ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುಗಳನ್ನು ಹರಡಲು ಪ್ರಯತ್ನಿಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಅವರ ವಿಧಾನದ ಕಾರ್ಯನಿರ್ವಹಣೆಯ ಸಮಯವು ನಿಕಟ ಪರಿಶೀಲನೆಗೆ ಅರ್ಹವಾಗಿದೆ. ರಾಷ್ಟ್ರವು ಚುನಾವಣೆಗೆ ಹೋಗಲು ಸಿದ್ಧವಾಗಿರುವ ಸಂದರ್ಭದಲ್ಲಿ ಇದು ಕಾಣುತ್ತಿದೆ. 2018-2019ರಲ್ಲಿ ಕೂಡ ಇಂಥ ʼಹಿಟ್ ಅಂಡ್ ರನ್’ ವರ್ತನೆಗಳನ್ನು ನೆನಪಿಸಿಕೊಳ್ಳಬಹುದು. ಮೌನವಾಗಿರುವುದು ಅಥವಾ ಏನನ್ನೂ ಮಾಡದೆ ಇರುವುದು ಹಾನಿ ಮಾಡುವವರಿಗೆ ಹೆಚ್ಚಿನ ಶಕ್ತಿಯನ್ನು ನೀಡುತ್ತದೆ. ಇಂತಹ ಪ್ರಯತ್ನಗಳು ಕೆಲವು ವರ್ಷಗಳಿಂದ ಮತ್ತು ಪದೇ ಪದೆ ನಡೆಯುತ್ತಿರುವುದರಿಂದ ಮೌನವನ್ನು ಕಾಪಾಡಿಕೊಳ್ಳುವ ಸಮಯ ಇದಲ್ಲ,” ಎಂದಿರುವ ವಕೀಲರು, ಬಾಹ್ಯ ಒತ್ತಡಗಳಿಂದ ನ್ಯಾಯಾಂಗವನ್ನು ರಕ್ಷಿಸಲು ಮತ್ತು ಕಾನೂನು ಸುವ್ಯವಸ್ಥೆಯನ್ನು ಎತ್ತಿಹಿಡಿಯಲು ದೃಢವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್‌ಗೆ ಕರೆ ನೀಡಿದ್ದಾರೆ.

ಇದನ್ನೂ ಓದಿ: Fact Check: ಸುಳ್ಳು ಸುದ್ದಿ ತಡೆಯುವ ಕೇಂದ್ರ ಸರ್ಕಾರದ ಫ್ಯಾಕ್ಟ್‌ಚೆಕ್‌ ಘಟಕಕ್ಕೆ ಸುಪ್ರೀಂ ಕೋರ್ಟ್‌ ತಡೆ

Continue Reading

ರಾಜಕೀಯ

40 percent commission: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು; ಸಿಎಂ, ಡಿಸಿಎಂಗೆ ಸಮನ್ಸ್‌

40 percent commission: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಾಚಾರದ ರೇಟ್ ಕಾರ್ಡ್‌ ಜಾಹೀರಾತು ನೀಡಿದ್ದಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ವಿಚಾರಣೆಗೆ ಹಾಜರಾಗಲು ಜನಪ್ರತಿನಿಧಿಗಳ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿದೆ. ಏಪ್ರಿಲ್ 29ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಕೋರ್ಟ್‌ ಸೂಚಿಸಿದೆ.

VISTARANEWS.COM


on

40 per cent commission advertisement against BJP and Summons to CM Siddaramaiah and DCM DK Shivakumar
Koo

ಬೆಂಗಳೂರು: ಕಳೆದ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆ ಚುನಾವಣೆ (Karnataka Assembly Elections 2023) ವೇಳೆ 40 ಪರ್ಸೆಂಟ್‌ ಕಮಿಷನ್ (40 percent commission) ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯವು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಮತ್ತೊಮ್ಮೆ ಸಮನ್ಸ್​ ಜಾರಿ ಮಾಡಿದೆ.

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಾಚಾರದ ರೇಟ್ ಕಾರ್ಡ್‌ ಜಾಹೀರಾತು ನೀಡಿದ್ದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಮತ್ತೊಮ್ಮೆ ಸಮನ್ಸ್ ನೀಡಿದೆ. ಏಪ್ರಿಲ್ 29ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕೋರ್ಟ್‌ ಪೊಲೀಸರಿಗೆ ಸೂಚನೆ ನೀಡಿದೆ. ಡಿಸಿಎಂಗೆ ಸಮನ್ಸ್ ಜಾರಿ ಮಾಡಲು ಸದಾಶಿವನಗರ ಪೊಲೀಸರಿಗೆ ಸೂಚನೆ ನೀಡಿದರೆ, ಸಿಎಂಗೆ ಸಮನ್ಸ್ ಜಾರಿ ಮಾಡಲು ಹೈಗ್ರೌಂಡ್ಸ್ ಪೊಲೀಸರಿಗೆ ನಿರ್ದೇಶನ ನೀಡಿದೆ.

ಜೂ. 1ಕ್ಕೆ ಹಾಜರಾಗಲು ರಾಹುಲ್‌ಗೆ ಸೂಚನೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ನಿಮಿತ್ತ ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸಮಯ ವಿನಾಯಿತಿ ನೀಡಬೇಕು ಎಂದು ಕೋರ್ಟ್‌ಗೆ ಪರ ವಕೀಲರು ಅರ್ಜಿ ಸಲ್ಲಿಸಿದರು. ಹೀಗಾಗಿ ರಾಹುಲ್ ಗಾಂಧಿ ಅವರು ಜೂನ್ 1ರಂದು ಕೋರ್ಟ್‌ಗೆ ಹಾಜರಾಗುವಂತೆ ನ್ಯಾ.ಜೆ. ಪ್ರೀತ್ ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

ಜಾಹೀರಾತು ವಿರುದ್ಧ ದೂರು ನೀಡಿದ್ದ ಬಿಜೆಪಿ

ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಭ್ರಷ್ಟಾಚಾರ ಮಾಡಿದೆ ಎಂದು ಕಾಂಗ್ರೆಸ್‌ ಜಾಹೀರಾತು ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನ್ಯಾಯಾಲಯದಲ್ಲಿ ದೂರು ದಾಖಲು ಮಾಡಿತ್ತು. ಕೆಪಿಸಿಸಿ ಹಾಗೂ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ರಾಜ್ಯ ಕಾರ್ಯದರ್ಶಿ ಎಸ್‌. ಶಿವಪ್ರಸಾದ್‌ ಖಾಸಗಿ ದೂರು ಸಲ್ಲಿಸಿದ್ದರು. ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ರಾಹುಲ್‌ ಗಾಂಧಿ, ಕೆಪಿಸಿಸಿ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು. ಈಗ ಈ ಅರ್ಜಿಯ ವಿಚಾರಣೆ ನಡೆಯುತ್ತಿದೆ.

ಬಿಜೆಪಿಗೆ ಡ್ಯಾಮೇಜ್‌ ಮಾಡಿದ್ದ 40 ಪರ್ಸೆಂಟ್‌ ಅಭಿಯಾನ

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್‌ 40 ಪರ್ಸೆಂಟ್‌ ಅಭಿಯಾನ ಮಾಡಿದ್ದರಿಂದ ಬಿಜೆಪಿಗೆ ಭಾರಿ ಡ್ಯಾಮೇಜ್‌ ಆಗಿತ್ತು. ಈ ಸಂಬಂಧ ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟರ್‌ಗಳನ್ನು ಹರಿಬಿಡಲಾಗಿತ್ತು. ಅಲ್ಲದೆ, ಬೀದಿಗಳಲ್ಲಿ ಪೋಸ್ಟರ್‌ ಅಂಟಿಸಲಾಗಿತ್ತು. ಈ ಸಂಬಂಧ ಮೊಬೈಲ್‌ಗಳಲ್ಲಿ ಆಡಿಯೊ ಜಾಹೀರಾತು ಸೇರಿದಂತೆ ಟಿವಿ, ಪೇಪರ್‌ಗಳಲ್ಲಿ ಜಾಹೀರಾತುಗಳನ್ನು ನೀಡಲಾಗಿತ್ತು. ಈ ಸಂಬಂಧ ಬಿಜೆಪಿ ಕೋರ್ಟ್‌ ಮೆಟ್ಟಿಲೇರಿದ್ದರಿಂದ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈಗ ಖುದ್ದು ಹಾಜರಾಗುವಂತೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್​​​ಗೆ ಸಮನ್ಸ್‌ ಜಾರಿ ಮಾಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಈಗ ಪ್ರತಿಕ್ರಿಯೆ ನೀಡಿದ್ದು, ವಕೀಲರು ಸೂಕ್ತ ಉತ್ತರ ನೀಡಲಿದ್ದಾರೆ. ಪ್ರತಿಭಟನೆ ನಡೆಸುವುದು ನಮ್ಮ ಹಕ್ಕು ಎಂದು ಹೇಳಿದ್ದಾರೆ.

Continue Reading

ದೇಶ

Bhagwant Mann: 50ನೇ ವಯಸ್ಸಲ್ಲಿ ತಂದೆಯಾದ ಪಂಜಾಬ್‌ ಸಿಎಂ ಭಗವಂತ್ ಮಾನ್;!

Bhagwant Mann: ಪಂಜಾಬ್ ಮುಖ್ಯಮಂತ್ರಿ ಭಗವಂತ್‌ ಮಾನ್‌ ಅವರು 2022ರಲ್ಲಿ ಡಾ. ಗುರುಪ್ರೀತ್‌ ಕೌರ್‌ ಅವರನ್ನು ಮದುವೆಯಾಗಿದ್ದರು. ಈಗ ಈ ದಂಪತಿಗೆ ಮೊದಲ ಮಗು ಜನಿಸಿದೆ.

VISTARANEWS.COM


on

Bhagwant Mann
Koo

ಚಂಡೀಗಢ: ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ (Bhagwant Mann) ಅವರು 50ನೇ ವಯಸ್ಸಿನಲ್ಲಿ ಮತ್ತೊಮ್ಮೆ ತಂದೆಯಾಗಿದ್ದಾರೆ. ಭಗವಂತ್‌ ಮಾನ್‌ ಹಾಗೂ ಡಾ.ಗುರುಪ್ರೀತ್‌ ಕೌರ್‌ (Dr. Gurpreet Kaur) ದಂಪತಿಗೆ ಹೆಣ್ಣು ಮಗು ಜನಿಸಿದ್ದು, ಭಗವಂತ್‌ ಮಾನ್‌ ಅವರು ಈ ಸಂತಸವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ನನಗೆ ಹೆಣ್ಣುಮಗು ಜನಿಸಿದೆ” ಎಂಬುದಾಗಿ ಅವರು ಪೋಸ್ಟ್‌ ಮಾಡಿದ್ದು, ಸಾವಿರಾರು ಜನ ಪಂಜಾಬ್‌ ಮುಖ್ಯಮಂತ್ರಿಗೆ (Punjab CM) ಅಭಿನಂದನೆ ಸಲ್ಲಿಸಿದ್ದಾರೆ.

“ದೇವರು ನನಗೆ ಮಗಳನ್ನು ಉಡುಗೊರೆಯಾಗಿ ನೀಡಿದ್ದಾನೆ. ತಾಯಿ ಹಾಗೂ ಮಗಳು ಆರೋಗ್ಯದಿಂದ ಇದ್ದಾರೆ” ಎಂಬುದಾಗಿ ಭಗವಂತ್‌ ಮಾನ್‌ ಪೋಸ್ಟ್‌ ಮಾಡಿದ್ದಾರೆ. ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದೆ ಎಂದು ತಿಳಿದುಬಂದಿದೆ. ಗುರುಪ್ರೀತ್‌ ಕೌರ್‌ ಅವರನ್ನು ಬುಧವಾರ (ಮಾರ್ಚ್‌ 27) ಮೊಹಾಲಿಯ ಫೋರ್ಟಿಸ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗುರುವಾರ (ಮಾರ್ಚ್‌ 28) ಬೆಳಗ್ಗೆ ಹೆರಿಗೆಯಾಗಿದೆ.

2 ವರ್ಷದ ಹಿಂದೆ ಮದುವೆ

ಪಂಜಾಬ್‌ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೆಲವೇ ತಿಂಗಳಲ್ಲಿ ಭಗವಂತ್‌ ಮಾನ್‌ ಅವರು ಎರಡನೇ ಮದುವೆಯಾಗಿದ್ದರು. ಡಾ.ಗುರುಪ್ರೀತ್‌ ಕೌರ್‌ ಹಾಗೂ ಭಗವಂತ್‌ ಮಾನ್‌ ಅವರ ಮದುವೆಯು 2022ರ ಜುಲೈ 7ರಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಅತ್ಯಂತ ಆತ್ಮೀಯರ ಉಪಸ್ಥಿತಿಯಲ್ಲಿ ಸರಳವಾಗಿ ನೆರವೇರಿತ್ತು. ಗುರುಪ್ರೀತ್‌ ಕೌರ್‌ ಅವರು ಮೂಲತಃ ಹರಿಯಾಣದ ಕುರುಕ್ಷೇತ್ರದ ಪಿಹೋವಾ ಗ್ರಾಮದವರು. ಪ್ರಸಕ್ತ ಪಂಜಾಬ್‌ನ ರಾಜಪುರದಲ್ಲಿ ನೆಲೆಸಿದ್ದಾರೆ. ಕೃಷಿ ಹಿನ್ನೆಲೆಯ ಕುಟುಂಬದ ಮೂರನೇ ಮಗಳು ಈಕೆ. ಇಡೀ ಕುಟುಂಬವೇ ಈ ಹರಿಯಾಣದಿಂದ ರಾಜಪುರಕ್ಕೆ ಶಿಫ್ಟ್‌ ಆಗಿದೆ.

ಇದನ್ನೂ ಓದಿ: 51ನೇ ವಯಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಖ್ಯಾತ ನಟಿ!

ಭಗವಂತ್ ಮಾನ್​ ಮೊದಲನೇ ಪತ್ನಿ ಇಂದ್ರಪ್ರೀತ್‌ ಕೌರ್‌ ಅಮೆರಿಕದಲ್ಲಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಈ ಇಬ್ಬರು ಮಕ್ಕಳು ಭಗವಂತ್ ಮಾನ್ ಪಂಜಾಬ್‌ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಿದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 23 ವರ್ಷ ಮಗಳು ಸೀರತ್‌ ಕೌರ್‌ ಮಾನ್‌ ಮತ್ತು 17 ವರ್ಷದ ಮಗ ದಿಲ್ಶಾನ್‌ ಸಿಂಗ್‌ ಮಾನ್‌. ಇಬ್ಬರೂ ಅಮೆರಿಕದಲ್ಲಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಭಗವಂತ್‌ ಮಾನ್‌ ಅವರ ಮೊದಲ ಪುತ್ರಿಯು ತಂದೆಯ ವಿರುದ್ಧವೇ ಹಲವು ಆರೋಪಗಳನ್ನು ಮಾಡಿದ್ದರು. ಆ ವಿಡಿಯೊ ಭಾರಿ ವೈರಲ್‌ ಆಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Varun Gandhi
ಪ್ರಮುಖ ಸುದ್ದಿ21 mins ago

Varun Gandhi: ಸಂಸದ ಅಲ್ಲದಿದ್ದರೂ ನಿಮ್ಮ ಮಗ; ಜನಕ್ಕೆ ಟಿಕೆಟ್‌ ವಂಚಿತ ವರುಣ್‌ ಗಾಂಧಿ ಭಾವುಕ ಪತ್ರ!

supreme court CJI DY chandrachud
ಪ್ರಮುಖ ಸುದ್ದಿ29 mins ago

CJI DY Chandrachud: 600 ವಕೀಲರಿಂದ ಮುಖ್ಯ ನ್ಯಾಯಮೂರ್ತಿಗೆ ಪತ್ರ; ನ್ಯಾಯಾಂಗದ ಸಮಗ್ರತೆಗೆ ಧಕ್ಕೆ ಬಗೆಗೆ ಕಳವಳ

40 per cent commission advertisement against BJP and Summons to CM Siddaramaiah and DCM DK Shivakumar
ರಾಜಕೀಯ33 mins ago

40 percent commission: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು; ಸಿಎಂ, ಡಿಸಿಎಂಗೆ ಸಮನ್ಸ್‌

Murder case Family Dispute
ಬೆಂಗಳೂರು ಗ್ರಾಮಾಂತರ36 mins ago

Murder Case : ಮಚ್ಚಿನಿಂದ ಪತ್ನಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪಾಪಿ ಪತಿ

Bengaluru News air pressure pipe
ಬೆಂಗಳೂರು2 hours ago

Bengaluru News : ಗುದದ್ವಾರಕ್ಕೆ ಗಾಳಿ ಬಿಟ್ಟ ಸ್ನೇಹಿತ; ಕರುಳು ಬ್ಲಾಸ್ಟ್‌ ಆಗಿ ಯುವಕ ಸಾವು

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20242 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Actor Darshan at Matinee Movie Team
ಸ್ಯಾಂಡಲ್ ವುಡ್2 hours ago

Actor Darshan: ಸತೀಶ್ ನೀನಾಸಂ-ರಚಿತಾ `ಮ್ಯಾಟ್ನಿ’ ಸಿನಿಮಾಗೆ ಡಿ ಬಾಸ್ ದರ್ಶನ್ ಸಾಥ್!

Drone Prathap prayag
ಸ್ಯಾಂಡಲ್ ವುಡ್2 hours ago

Drone Prathap: ಬಿಗ್ ಬಾಸ್ ಸ್ಪರ್ಧಿ ಪ್ರತಾಪನ ʻಡ್ರೋನ್‌ʼ ಇನ್ಮುಂದೆ ಹಾರಲ್ಲ! ಕಳ್ಳಾಟ ಬಯಲು!

Bhagwant Mann
ದೇಶ2 hours ago

Bhagwant Mann: 50ನೇ ವಯಸ್ಸಲ್ಲಿ ತಂದೆಯಾದ ಪಂಜಾಬ್‌ ಸಿಎಂ ಭಗವಂತ್ ಮಾನ್;!

kuwj awards
ಕರ್ನಾಟಕ2 hours ago

KUWJ Awards: ಕಾರ್ಯನಿರತ ಪತ್ರಕರ್ತರ ಸಂಘದ 2024ರ ಸಾಲಿನ ದತ್ತಿನಿಧಿ ಪ್ರಶಸ್ತಿಗಳು ಪ್ರಕಟ: ಪುರಸ್ಕೃತರ ಪಟ್ಟಿ ಇಲ್ಲಿದೆ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20242 hours ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20243 hours ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ11 hours ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20241 day ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20241 day ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20241 day ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ1 day ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು2 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ2 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

Lok Sabha Election 2024 Sanganna Karadi rebels quell and assure to support koppala BJP Candidate
Lok Sabha Election 20243 days ago

Lok Sabha Election 2024: ರಾಜ್ಯಸಭೆ ಇಲ್ಲವೇ ಪರಿಷತ್‌ ಸ್ಥಾನದ ಭರವಸೆ; ತಣ್ಣಗಾದ ಕರಡಿ! ಅಭ್ಯರ್ಥಿ ಪರ ಪ್ರಚಾರಕ್ಕೆ ಜೈ

ಟ್ರೆಂಡಿಂಗ್‌