Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ಗೆ ತೆರೆ; ಅದ್ಧೂರಿ ಸಮಾರೋಪದಲ್ಲಿ ಮನು ಭಾಕರ್​, ಶ್ರೀಜೇಶ್​ ಭಾಗಿ - Vistara News

ಪ್ರಮುಖ ಸುದ್ದಿ

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ಗೆ ತೆರೆ; ಅದ್ಧೂರಿ ಸಮಾರೋಪದಲ್ಲಿ ಮನು ಭಾಕರ್​, ಶ್ರೀಜೇಶ್​ ಭಾಗಿ

Paris Olympics 2024 :ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತದ ಅಭಿಯಾನವು 6 ಪದಕಗಳನ್ನು ಗೆಲ್ಲುವ ಮೂಲಕ ಕೊನೆಗೊಂಡಿತು. ಮನು ಭಾಕರ್ ಎರಡು ಕಂಚಿನ ಪದಕಗಳನ್ನು ಗೆದ್ದರೆ, ಸರಬ್ಜೋತ್ ಸಿಂಗ್, ಸ್ವಪ್ನಿಲ್ ಕುಸಲೆ, ಅಮನ್ ಸೆಹ್ರಾವತ್ ಮತ್ತು ಭಾರತೀಯ ಹಾಕಿ ತಂಡವು ತಲಾ ಒಂದು ಕಂಚಿನ ಪದಕವನ್ನು ಗೆದ್ದುಕೊಂಡಿತು. ಜಾವೆಲಿನ್ ಸ್ಟಾರ್​ ನೀರಜ್ ಚೋಪ್ರಾ ಪ್ಯಾರಿಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಪ್ಯಾರಿಸ್​ ಒಲಿಂಪಿಕ್ಸ್​​ನ ಕ್ರೀಡಾಕೂಟ (Paris Olympics 2024) ಭಾನುವಾರ ಮುಕ್ತಾಯಗೊಂಡಿತು. ಅಮೆರಿಕ ಮತ್ತು ಫ್ರಾನ್ಸ್​ನಡುವಿನ ಮಹಿಳೆಯರ ತಂಡಗಳ ಬಾಸ್ಕೆಟ್​ಬಾಲ್​ ಚಿನ್ನದ ಪದಕದ ಪಂದ್ಯ ಕೂಟದ ಕೊನೇ ಹಣಾಹಣಿಯಾಗಿತ್ತು. ಆ ಬಳಿಕ ಅದ್ಧೂರಿ ಸಮಾರಂಭ ನಡೆಯಿತು. ಭಾರತದ ಕಂಚಿನ ಪದಕಗಳ ಹೀರೋಗಳಾದ ಮನು ಭಾಕರ್ ಹಾಗೂ ಹಾಕಿ ಆಟಗಾರ ಶ್ರೀಜೇಶ್ ತ್ರಿವರ್ಣ ಧ್ವಜಧಾರಿಗಳಾಗಿ ಸಮಾರೋಪ ಸಮಾರಂಭದ ಪರೇಡ್​ನಲ್ಲಿ ಪಾಲ್ಗೊಂಡರು. ಬೃಹತ್ ಸಂಖ್ಯೆಯ ಕ್ರೀಡಾಭಿಮಾನಿಗಳು ಹಾಗೂ ಪ್ರೇಕ್ಷಕರ ಸಮ್ಮುಖದಲ್ಲಿ ನಡೆದ ಪರೇಡ್​ನಲ್ಲಿ ಭಾರತೀಯ ತಾರೆಗಳು ಪಾಲ್ಗೊಂಡರು. ಆ ಬಳಿಕ ವರ್ಣರಂಜಿತ ಕಾರ್ಯಕ್ರಮಗಳು ನಡೆದವು.

ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತದ ಅಭಿಯಾನವು 6 ಪದಕಗಳನ್ನು ಗೆಲ್ಲುವ ಮೂಲಕ ಕೊನೆಗೊಂಡಿತು. ಮನು ಭಾಕರ್ ಎರಡು ಕಂಚಿನ ಪದಕಗಳನ್ನು ಗೆದ್ದರೆ, ಸರಬ್ಜೋತ್ ಸಿಂಗ್, ಸ್ವಪ್ನಿಲ್ ಕುಸಲೆ, ಅಮನ್ ಸೆಹ್ರಾವತ್ ಮತ್ತು ಭಾರತೀಯ ಹಾಕಿ ತಂಡವು ತಲಾ ಒಂದು ಕಂಚಿನ ಪದಕವನ್ನು ಗೆದ್ದುಕೊಂಡಿತು. ಜಾವೆಲಿನ್ ಸ್ಟಾರ್​ ನೀರಜ್ ಚೋಪ್ರಾ ಪ್ಯಾರಿಸ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ.

ಅಮೆರಿಕ ಅಮೆರಿಕ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸಾಂಪ್ರದಾಯಿಕ ಎದುರಾಳಿ ಚೀನಾವನ್ನು ಕೂದಲೆಳೆಯ ಅಂತರದಿಂದ ಹಿಂದಿಕ್ಕಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಫ್ರಾನ್ಸ್ ನಡುವಿನ ಮಹಿಳಾ ಬ್ಯಾಸ್ಕೆಟ್​​ಬಾಲ್​ ಒಲಿಂಪಿಕ್ಸ್​ನ ಕೊನೇ ಸ್ಪರ್ಧೆಯಾಗಿತ್ತು. ಅಲ್ಲಿ ಅಮೆರಿಕ ಚಿನ್ನ ಗೆದ್ದುಕೊಂಡಿತ್ತು. ಅಲ್ಲಿ ತನಕ ಚೀನಾ 40 ಚಿನ್ನದೊಂದಿಗೆ ಮೊದಲ ಸ್ಥಾನದಲ್ಲಿತ್ತು.. ಅಮೆರಿಕ ಬಾಸ್ಕೆಟ್​ಬಾಲ್​ ಗೆಲ್ಲುವುದರೊಂದಿಗೆ ಅಮೆರಿಕ 40 ಚಿನ್ನ ಗೆದ್ದುಕೊಂಡಿತು. ಜತೆಗೆ ಪದಕ ಪಟ್ಟಿಯಲ್ಲಿ ಬೆಳ್ಳಿ ಹಾಗೂ ಕಂಚಿನ ಸಹಾಯದಿಂದ ಅಗ್ರಸ್ಥಾನಕ್ಕೆ ಏರಿತು. ಈ ಮೂಲಕ ಅಮೆರಿಕನ್ನರು ಸತತ ನಾಲ್ಕನೇ ಬಾರಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಉಳಿಸಿಕೊಂಡಿತು.

ಫ್ರಾನ್ಸ್ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಅಮೆರಿಕ 67-66 ಅಂಕಗಳಿಂದ ಫ್ರಾನ್ಸ್ ತಂಡವನ್ನು ಮಣಿಸಿತು. ಅಮೆರಿಕ 40 ಚಿನ್ನ, 44 ಬೆಳ್ಳಿ ಮತ್ತು 42 ಕಂಚಿನ ಪದಕಗಳು ಸೇರಿದಂತೆ 126 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ, ಚೀನಾ 40 ಚಿನ್ನದ ಪದಕಗಳು ಸೇರಿದಂತೆ 91 ಪದಕಗಳೊಂದಿಗೆ ಕ್ರೀಡಾಕೂಟವನ್ನು ಕೊನೆಗೊಳಿಸಿತು. 2008ರಲ್ಲಿ ಬೀಜಿಂಗ್​​ನಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಚೀನಾ 48 ಚಿನ್ನದ ಪದಕಗಳೊಂದಿಗೆ ಅಗ್ರಸ್ಥಾನ ಪಡೆದುಕೊಂಡಿತ್ತು.

ಇದನ್ನೂ ಓದಿ: PR Sreejesh : ಮಲ್ಲು ಸ್ಟೈಲಲ್ಲಿ ಮುಂಡು ಉಟ್ಟು ಐಫೆಲ್ ಟವರ್ ಮುಂದೆ ಫೋಟೋ ತೆಗಿಸಿಕೊಂಡ ಪಿ.ಆರ್​ ಶ್ರೀಜೇಶ್​​

ಡೈವಿಂಗ್, ಕಲಾತ್ಮಕ ಈಜು ಮತ್ತು ಟೇಬಲ್ ಟೆನಿಸ್ ಮತ್ತು ವೇಟ್ ಲಿಫ್ಟಿಂಗ್ ಸೇರಿದಂತೆ ಪೂಲ್ ಸ್ಪರ್ಧೆಗಳಲ್ಲಿ ಚೀನಾ ಪ್ರಾಬಲ್ಯ ಸಾಧಿಸಿದರೆ, ಯುಎಸ್ಎ ಟ್ರ್ಯಾಕ್ ಮತ್ತು ಫೀಲ್ಡ್ ಸ್ಪರ್ಧೆಗಳಲ್ಲಿ 14 ಚಿನ್ನದ ಪದಕಗಳು, 11 ಬೆಳ್ಳಿ ಪದಕಗಳು ಮತ್ತು 9 ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ತನ್ನ ಶಕ್ತಿ ಪ್ರದರ್ಶಿಸಿತು. ಇಲ್ಲಿ ಅಮೆರಿಕನ್ನರು ಎಂಟು ಚಿನ್ನದ ಪದಕಗಳು ಸೇರಿದಂತೆ ಒಟ್ಟು 28 ಪದಕಗಳನ್ನು ಗೆದ್ದರು.

ಭಾರತಕ್ಕೆ 71ನೇ ಸ್ಥಾನ

ಭಾರತ 5 ಕಂಚು, 1 ಬೆಳ್ಳಿ ಸೇರಿದಂತೆ ಒಟ್ಟು 6 ಪದಕಗಳೊಂದಿಗೆ 71ನೇ ಸ್ಥಾನದಲ್ಲಿದೆ. ಮಹಿಳೆಯರ 50 ಕೆ.ಜಿ ಕುಸ್ತಿಯ ಫೈನಲ್ ತಲುಪಿದ ವಿನೇಶ್ ಫೋಗಟ್ ತನ್ನ ಅನರ್ಹತೆಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ (ಸಿಎಎಸ್) ಪ್ರಶ್ನಿಸಿದ್ದರಿಂದ ಭಾರತಕ್ಕೆ ನಿರ್ಧಾರ ಪೂರಕವಾಗಿ ಬಂದರೆ ತನ್ನ ಪಟ್ಟಿಗೆ ಇನ್ನೂ ಒಂದು ಪದಕ ಸೇರಿಸಬಹುದು. ಫೈನಲ್ ಪಂದ್ಯದ ವೇಳೆ 100 ಗ್ರಾಂ ತೂಕ ಹೊಂದಿದ್ದಕ್ಕಾಗಿ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಪಾಕಿಸ್ತಾನ 44 ವರ್ಷಗಳ ಬಳಿಕ ಮೊದಲ ಬಾರಿಗೆ ಚಿನ್ನದ ಪದಕ ಗೆದ್ದರು.

ಜಪಾನ್ 20 ಚಿನ್ನ ಸೇರಿದಂತೆ 45 ಪದಕಗಳೊಂದಿಗೆ ಮೂರನೇ ಸ್ಥಾನ ಪಡೆಯಿತು. ಟೋಕಿಯೊ ಒಲಿಂಪಿಕ್ಸ್​ನಲ್ಲಿ ಜಪಾನ್ 27 ಚಿನ್ನದ ಪದಕಗಳೊಂದಿಗೆ ಮೂರನೇ ಸ್ಥಾನ ಪಡೆದಿತ್ತು.

ವಿಶ್ವದಾದ್ಯಂತದ ಕ್ರೀಡಾ ಲೀಗ್​ಗಳಲ್ಲಿ ಅಂಕಿ ಅಂಶ ವಿಶ್ಲೇಷಣೆ ಮಾಡುವ ಪೋರ್ಟಲ್ ನೀಲ್ಸನ್​ನ ಗ್ರೇಸ್ನೋಟ್ ಸ್ಪೋರ್ಟ್ಸ್, ಗ್ರೇಟ್ ಬ್ರಿಟನ್ ಅಗ್ರ ಮೂರರಲ್ಲಿ ಸ್ಥಾನ ಪಡೆಯುತ್ತದೆ ಮತ್ತು ಜಪಾನ್ ಮೂರು ವರ್ಷಗಳ ಹಿಂದೆ ಸ್ವದೇಶದಲ್ಲಿ ಗೆದ್ದ ಚಿನ್ನದ ಪದಕಗಳಲ್ಲಿ ಅರ್ಧದಷ್ಟು ಮಾತ್ರ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿತ್ತು. ಅದು ಸುಳ್ಳಾಗಿದೆ.

ಗ್ರೇಟ್ ಬ್ರಿಟನ್ 14 ಚಿನ್ನದ ಪದಕಗಳೊಂದಿಗೆ ಏಳನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ 18 ಚಿನ್ನದ ಪದಕಗಳನ್ನು ಗೆದ್ದು ಅಗ್ರ ನಾಲ್ಕು ಸ್ಥಾನಗಳನ್ನು ಗಳಿಸಿದೆ. ಆತಿಥೇಯ ಫ್ರಾನ್ಸ್ 16 ಚಿನ್ನದ ಪದಕಗಳೊಂದಿಗೆ ಅಗ್ರ 5ನೇ ಸ್ಥಾನ ಪಡೆದಿದೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ ಮುಕ್ತಾಯ; ಅಮೆರಿಕಕ್ಕೆ ಅಗ್ರಸ್ಥಾನ; ಚೀನಾಕ್ಕೆ ಎರಡನೇ ಸ್ಥಾನ

Paris Olympic 2024 : ಫ್ರಾನ್ಸ್ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಅಮೆರಿಕ 67-66 ಅಂಕಗಳಿಂದ ಫ್ರಾನ್ಸ್ ತಂಡವನ್ನು ಮಣಿಸಿತು. ಅಮೆರಿಕ 40 ಚಿನ್ನ, 44 ಬೆಳ್ಳಿ ಮತ್ತು 42 ಕಂಚಿನ ಪದಕಗಳು ಸೇರಿದಂತೆ 126 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ, ಚೀನಾ 40 ಚಿನ್ನದ ಪದಕಗಳು ಸೇರಿದಂತೆ 91 ಪದಕಗಳೊಂದಿಗೆ ಕ್ರೀಡಾಕೂಟವನ್ನು ಕೊನೆಗೊಳಿಸಿತು. 2008ರಲ್ಲಿ ಬೀಜಿಂಗ್​​ನಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಚೀನಾ 48 ಚಿನ್ನದ ಪದಕಗಳೊಂದಿಗೆ ಅಗ್ರಸ್ಥಾನ ಪಡೆದುಕೊಂಡಿತ್ತು.

VISTARANEWS.COM


on

Paris Olympics 2024
Koo

ಬೆಂಗಳೂರು : ಪ್ಯಾರಿಸ್ ಒಲಿಂಪಿಕ್ಸ್​​ 2024ರ (Paris Olympics 2024) ಸ್ಪರ್ಧೆಗಳು ಭಾನುವಾರ ಸಂಜೆಯ ವೇಳೆಗೆ ಮುಕ್ತಾಯಗೊಂಡಿದ್ದು ಅಮೆರಿಕ ಅಮೆರಿಕ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಸಾಂಪ್ರದಾಯಿಕ ಎದುರಾಳಿ ಚೀನಾವನ್ನು ಕೂದಲೆಳೆಯ ಅಂತರದಿಂದ ಹಿಂದಿಕ್ಕಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಫ್ರಾನ್ಸ್ ನಡುವಿನ ಮಹಿಳಾ ಬ್ಯಾಸ್ಕೆಟ್​​ಬಾಲ್​ ಒಲಿಂಪಿಕ್ಸ್​ನ ಕೊನೇ ಸ್ಪರ್ಧೆಯಾಗಿತ್ತು. ಅಲ್ಲಿ ಅಮೆರಿಕ ಚಿನ್ನ ಗೆದ್ದುಕೊಂಡಿತ್ತು. ಅಲ್ಲಿ ತನಕ ಚೀನಾ 40 ಚಿನ್ನದೊಂದಿಗೆ ಮೊದಲ ಸ್ಥಾನದಲ್ಲಿತ್ತು.. ಅಮೆರಿಕ ಬಾಸ್ಕೆಟ್​ಬಾಲ್​ ಗೆಲ್ಲುವುದರೊಂದಿಗೆ ಅಮೆರಿಕ 40 ಚಿನ್ನ ಗೆದ್ದುಕೊಂಡಿತು. ಜತೆಗೆ ಪದಕ ಪಟ್ಟಿಯಲ್ಲಿ ಬೆಳ್ಳಿ ಹಾಗೂ ಕಂಚಿನ ಸಹಾಯದಿಂದ ಅಗ್ರಸ್ಥಾನಕ್ಕೆ ಏರಿತು. ಈ ಮೂಲಕ ಅಮೆರಿಕನ್ನರು ಸತತ ನಾಲ್ಕನೇ ಬಾರಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಉಳಿಸಿಕೊಂಡಿತು.

ಫ್ರಾನ್ಸ್ ವಿರುದ್ಧ ನಡೆದ ರೋಚಕ ಪಂದ್ಯದಲ್ಲಿ ಅಮೆರಿಕ 67-66 ಅಂಕಗಳಿಂದ ಫ್ರಾನ್ಸ್ ತಂಡವನ್ನು ಮಣಿಸಿತು. ಅಮೆರಿಕ 40 ಚಿನ್ನ, 44 ಬೆಳ್ಳಿ ಮತ್ತು 42 ಕಂಚಿನ ಪದಕಗಳು ಸೇರಿದಂತೆ 126 ಪದಕಗಳೊಂದಿಗೆ ಪದಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಮತ್ತೊಂದೆಡೆ, ಚೀನಾ 40 ಚಿನ್ನದ ಪದಕಗಳು ಸೇರಿದಂತೆ 91 ಪದಕಗಳೊಂದಿಗೆ ಕ್ರೀಡಾಕೂಟವನ್ನು ಕೊನೆಗೊಳಿಸಿತು. 2008ರಲ್ಲಿ ಬೀಜಿಂಗ್​​ನಲ್ಲಿ ನಡೆದಿದ್ದ ಒಲಿಂಪಿಕ್ಸ್​ನಲ್ಲಿ ಚೀನಾ 48 ಚಿನ್ನದ ಪದಕಗಳೊಂದಿಗೆ ಅಗ್ರಸ್ಥಾನ ಪಡೆದುಕೊಂಡಿತ್ತು.

ಡೈವಿಂಗ್, ಕಲಾತ್ಮಕ ಈಜು ಮತ್ತು ಟೇಬಲ್ ಟೆನಿಸ್ ಮತ್ತು ವೇಟ್ ಲಿಫ್ಟಿಂಗ್ ಸೇರಿದಂತೆ ಪೂಲ್ ಸ್ಪರ್ಧೆಗಳಲ್ಲಿ ಚೀನಾ ಪ್ರಾಬಲ್ಯ ಸಾಧಿಸಿದರೆ, ಯುಎಸ್ಎ ಟ್ರ್ಯಾಕ್ ಮತ್ತು ಫೀಲ್ಡ್ ಸ್ಪರ್ಧೆಗಳಲ್ಲಿ 14 ಚಿನ್ನದ ಪದಕಗಳು, 11 ಬೆಳ್ಳಿ ಪದಕಗಳು ಮತ್ತು 9 ಕಂಚಿನ ಪದಕಗಳನ್ನು ಗೆಲ್ಲುವ ಮೂಲಕ ತನ್ನ ಶಕ್ತಿ ಪ್ರದರ್ಶಿಸಿತು. ಇಲ್ಲಿ ಅಮೆರಿಕನ್ನರು ಎಂಟು ಚಿನ್ನದ ಪದಕಗಳು ಸೇರಿದಂತೆ ಒಟ್ಟು 28 ಪದಕಗಳನ್ನು ಗೆದ್ದರು.

ಭಾರತಕ್ಕೆ 71ನೇ ಸ್ಥಾನ

ಭಾರತ 5 ಕಂಚು, 1 ಬೆಳ್ಳಿ ಸೇರಿದಂತೆ ಒಟ್ಟು 6 ಪದಕಗಳೊಂದಿಗೆ 71ನೇ ಸ್ಥಾನದಲ್ಲಿದೆ. ಮಹಿಳೆಯರ 50 ಕೆ.ಜಿ ಕುಸ್ತಿಯ ಫೈನಲ್ ತಲುಪಿದ ವಿನೇಶ್ ಫೋಗಟ್ ತನ್ನ ಅನರ್ಹತೆಯನ್ನು ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯದಲ್ಲಿ (ಸಿಎಎಸ್) ಪ್ರಶ್ನಿಸಿದ್ದರಿಂದ ಭಾರತಕ್ಕೆ ನಿರ್ಧಾರ ಪೂರಕವಾಗಿ ಬಂದರೆ ತನ್ನ ಪಟ್ಟಿಗೆ ಇನ್ನೂ ಒಂದು ಪದಕ ಸೇರಿಸಬಹುದು. ಫೈನಲ್ ಪಂದ್ಯದ ವೇಳೆ 100 ಗ್ರಾಂ ತೂಕ ಹೊಂದಿದ್ದಕ್ಕಾಗಿ ವಿನೇಶ್ ಅವರನ್ನು ಅನರ್ಹಗೊಳಿಸಲಾಗಿತ್ತು. ಪಾಕಿಸ್ತಾನ 44 ವರ್ಷಗಳ ಬಳಿಕ ಮೊದಲ ಬಾರಿಗೆ ಚಿನ್ನದ ಪದಕ ಗೆದ್ದು 62ನೇ ಸ್ಥಾನದಲ್ಲಿದೆ. ಪುರುಷರ ಜಾವೆಲಿನ್ ಫೈನಲ್​​ನಲ್ಲಿ ಅರ್ಷದ್ ನದೀಮ್ ಮೊದಲ ಸ್ಥಾನ ಪಡೆದರು.

ಇದನ್ನೂ ಓದಿ: Paris Olympics 2024 : ಸಮಾರೋಪ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಐಫೆಲ್​ ಟವರ್​ ಏರಿ ಕುಳಿತ ಆಗಂತುಕ!

ಜಪಾನ್ 20 ಚಿನ್ನ ಸೇರಿದಂತೆ 45 ಪದಕಗಳೊಂದಿಗೆ ಮೂರನೇ ಸ್ಥಾನ ಪಡೆಯಿತು. ಟೋಕಿಯೊ ಒಲಿಂಪಿಕ್ಸ್​ನಲ್ಲಿ ಜಪಾನ್ 27 ಚಿನ್ನದ ಪದಕಗಳೊಂದಿಗೆ ಮೂರನೇ ಸ್ಥಾನ ಪಡೆದಿತ್ತು.

ವಿಶ್ವದಾದ್ಯಂತದ ಕ್ರೀಡಾ ಲೀಗ್​ಗಳಲ್ಲಿ ಅಂಕಿ ಅಂಶ ವಿಶ್ಲೇಷಣೆ ಮಾಡುವ ಪೋರ್ಟಲ್ ನೀಲ್ಸನ್​ನ ಗ್ರೇಸ್ನೋಟ್ ಸ್ಪೋರ್ಟ್ಸ್, ಗ್ರೇಟ್ ಬ್ರಿಟನ್ ಅಗ್ರ ಮೂರರಲ್ಲಿ ಸ್ಥಾನ ಪಡೆಯುತ್ತದೆ ಮತ್ತು ಜಪಾನ್ ಮೂರು ವರ್ಷಗಳ ಹಿಂದೆ ಸ್ವದೇಶದಲ್ಲಿ ಗೆದ್ದ ಚಿನ್ನದ ಪದಕಗಳಲ್ಲಿ ಅರ್ಧದಷ್ಟು ಮಾತ್ರ ಗೆಲ್ಲುತ್ತದೆ ಎಂದು ಭವಿಷ್ಯ ನುಡಿದಿತ್ತು. ಅದು ಸುಳ್ಳಾಗಿದೆ.

ಗ್ರೇಟ್ ಬ್ರಿಟನ್ 14 ಚಿನ್ನದ ಪದಕಗಳೊಂದಿಗೆ ಏಳನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ 18 ಚಿನ್ನದ ಪದಕಗಳನ್ನು ಗೆದ್ದು ಅಗ್ರ ನಾಲ್ಕು ಸ್ಥಾನಗಳನ್ನು ಗಳಿಸಿದೆ. ಆತಿಥೇಯ ಫ್ರಾನ್ಸ್ 16 ಚಿನ್ನದ ಪದಕಗಳೊಂದಿಗೆ ಅಗ್ರ 5ನೇ ಸ್ಥಾನ ಪಡೆದಿದೆ.

Continue Reading

ಪ್ರಮುಖ ಸುದ್ದಿ

Farooq Abdullah : ಗಡಿಯಲ್ಲಿನ ಭಯೋತ್ಪಾದನಾ ಕೃತ್ಯಗಳಲ್ಲಿ ಉಗ್ರರು, ಸೇನೆ ಶಾಮೀಲು; ವಿವಾದದ ಕಿಡಿ ಹೊತ್ತಿಸಿದ ಫಾರೂಕ್ ಅಬ್ದುಲ್ಲಾ

Farooq Abdullah:

VISTARANEWS.COM


on

Farooq Abdullah
Koo

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ಗಡಿ ಹಾಗೂ ಜಮ್ಮಿ ಕಾಶ್ಮೀರ ನೆಲದಲ್ಲಿ ಭಯೋತ್ಪಾದನಾ ಕೃತ್ಯಗಳು ಹೆಚ್ಚಲು ಉಗ್ರರೊಂದಿಗೆ ಸೇನೆ ಶಾಮೀಲಾಗಿರುವುದೇ ಕಾರಣ ಎಂದು ನ್ಯಾಷನಲ್ ಕಾನ್ಫರೆನ್ಸ್ (NC) ಮುಖ್ಯಸ್ಥ ಮತ್ತು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ (Farooq Abdullah) ಭಾನುವಾರ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಗಡಿಯಲ್ಲಿ ನುಸುಳುವ ಭಯೋತ್ಪಾದಕರೊಂದಿಗೆ ಸೇನೆಯು ಕೈ ಜೋಡಿಸಿದೆ ಎಂದು ಅವರು ನೇರವಾಗಿ ಆರೋಪಿಸಿದ್ದಾರೆ.

ಸೇನಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಒಳ ಒಪ್ಪಂದ ಇದೆ. ಹೀಗಾಗಿಯೇ ಗಡಿಯಲ್ಲಿ ಭಾರಿ ಸಂಖ್ಯೆಯ ಸಿಬ್ಬಂದಿಯ ನಿಯೋಜನೆಯ ಹೊರತಾಗಿಯೂ ಅವರು ಉಗ್ರರು ಭಾರತವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾಗುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ನಮ್ಮ ಗಡಿಗಳಲ್ಲಿ ಬೃಹತ್ ಸೈನ್ಯ ನಿಯೋಜನೆ ಇದೆ. ಇದು ವಿಶ್ವದಲ್ಲೇ ಅತಿದೊಡ್ಡದು. ಆದರೂ ಭಯೋತ್ಪಾದಕರು ಭಾರತೀಯ ಭೂಪ್ರದೇಶಕ್ಕೆ ನುಸುಳುತ್ತಲೇ ಇದ್ದಾರೆ. ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡಲಾಗುತ್ತಿದೆ. ಗಡಿಯಲ್ಲಿ ಸೇನೆಯನ್ನು ದೊಡ್ಡ ಪ್ರಮಾಣದಲ್ಲಿ ನಿಯೋಜಿಸಿದರೂ ಇದು ಹೇಗೆ ಸಾಧ್ಯ? ಅವರ ನಡುವೆ ಒಳಸಂಚು ಇದೆ ಎಂದು ಅಬ್ದುಲ್ಲಾ ಹೇಳಿದರು.

ಅಬ್ದುಲ್ಲಾ ಅವರು ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್​​ ಜಿಲ್ಲೆಯಲ್ಲಿ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ಈ ಗಂಭೀರ ಆರೋಪ ಮಾಡಿದ್ದಾರೆ. ಭಾರೀ ಪ್ರಮಾಣದ ಮಾದಕವಸ್ತುಗಳು ಮತ್ತು ಭಯೋತ್ಪಾದಕರು ದೇಶವನ್ನು ಹೇಗೆ ಪ್ರವೇಶಿಸುತ್ತಿದ್ದಾರೆ ಎಂಬುದರ ಬಗ್ಗೆ ಉತ್ತರ ಮಾತ್ರ ಬಯಸುತ್ತೇನೆ ಎಂದು ಅಬ್ದುಲ್ಲಾ ಕೇಳಿದ್ದಾರೆ.

ಇದನ್ನೂ ಓದಿ: Hindenburg Report : ಮೋದಿ ಹೆದರುತ್ತಿದ್ದಾರೆ; ಹಿಂಡೆನ್​ಬರ್ಗ್​ ವರದಿ ಉಲ್ಲೇಖಿಸಿ ಸೆಬಿ, ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

ಗಡಿ ರಕ್ಷಣೆ ಕೇಂದ್ರ ಸರ್ಕಾರದ ವಿಷಯವಾಗಿದೆ. ನಮ್ಮ ಗೃಹ ಸಚಿವರು ಮತ್ತು ರಕ್ಷಣಾ ಸಚಿವರು ಈ ಬಗ್ಗೆ ಮಾತನಾಡಬೇಕು” ಎಂದು ಅವರು ಹೇಳಿದ್ದಾರೆ.

“ಸುಮಾರು 200ರಿಂದ300 ಉಗ್ರರು ಹೇಗೆ ಭಾರತಕ್ಕೆ ಬಂದಿದ್ದಾರೆ. ಅವರು ಎಲ್ಲಿಂದ ಬಂದರು? ಇದಕ್ಕೆ ಯಾರು ಜವಾಬ್ದಾರರು. ಕೇಂದ್ರ ಸರ್ಕಾರವು ಇಡೀ ದೇಶಕ್ಕೆ ಉತ್ತರಿಸಬೇಕು” ಎಂದು ಅವರು ಪ್ರಶ್ನಿಸಿದ್ದಾರೆ.

ಗುಲಾಂ ನಬಿ ಆಜಾದ್ ನೇತೃತ್ವದ ಡೆಮಾಕ್ರಟಿಕ್ ಪ್ರೊಗ್ರೆಸ್ಸಿವ್ ಆಜಾದ್ ಪಾರ್ಟಿ (ಡಿಪಿಎಪಿ) ಫಾರೂಕ್ ಅಬ್ದುಲ್ಲಾ ಅವರ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದೆ ಆರೋಪಗಳು “ದುರದೃಷ್ಟಕರ” ಎಂದು ಹೇಳಿದೆ.

ಸೇನೆಯ ಶೌರ್ಯ ಪ್ರಶ್ನಾತೀತ

ಫಾರೂಕ್ ಅಬ್ದುಲ್ಲಾ ಹಿರಿಯ ರಾಜಕಾರಣಿ ಮತ್ತು ಅವರು ಭಾರತೀಯ ಸೇನೆಯ ಶೌರ್ಯವನ್ನು ಪ್ರಶ್ನಿಸಿರುವುದು ತುಂಬಾ ದುರದೃಷ್ಟಕರ. ಇದು ದೇಶಕ್ಕಾಗಿ ಅಂತಿಮ ತ್ಯಾಗ ಮಾಡುವ ಭಾರತೀಯ ಸೇನೆಯ ಧೈರ್ಯಶಾಲಿ ಸೈನಿಕರ ತ್ಯಾಗವನ್ನು ಪ್ರಶ್ನಿಸುವಂತಿದೆ” ಎಂದು ಹೇಳಿದ್ದಾರೆ.

ಅನಂತ್​ನಾಗ್​​ ಜಿಲ್ಲೆಯ ಅಹ್ಲಾನ್ ಗಗರ್ಮಾಂಡು ಅರಣ್ಯ ಪ್ರದೇಶದಲ್ಲಿ ಶನಿವಾರ 10,000 ಅಡಿ ಎತ್ತರದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಸಾವನ್ನಪ್ಪಿದ ಒಂದು ದಿನದ ನಂತರ ಫಾರೂಕ್ ಅಬ್ದುಲ್ಲಾ ಈ ಹೇಳಿಕೆ ನೀಡಿದ್ದಾರೆ.

ಕೊಕರ್ನಾಗ್ ಬೆಲ್ಟ್​​​ನ ದೂರದ ಅಹ್ಲಾನ್ ಗಗರ್ಮಾಂಡು ಅರಣ್ಯದಲ್ಲಿ ಭಯೋತ್ಪಾದಕರ ಉಪಸ್ಥಿತಿಯನ್ನು ಸೂಚಿಸುವ ಗುಪ್ತಚರ ವರದಿಗಳ ಆಧಾರದ ಮೇಲೆ ಭದ್ರತಾ ಪಡೆಗಳು ಪ್ರಾರಂಭಿಸಿದ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ಸಮಯದಲ್ಲಿ ಶನಿವಾರ ಸಂಜೆ ಗುಂಡಿನ ಚಕಮಕಿ ಪ್ರಾರಂಭವಾಯಿತು.

Continue Reading

ಪ್ರಮುಖ ಸುದ್ದಿ

Hindenburg Report : ಹುರುಳಿಲ್ಲದ ಆರೋಪ; ಹಿಂಡೆನ್​ಬರ್ಗ್​ ವರದಿ ಬಗ್ಗೆ ಸೆಬಿ ಸ್ಪಷ್ಟನೆ

Hindenburg report : ಆರ್​ಇಐಟಿ ನಿಯಮಗಳು, 2014 ಅನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾಗಿದೆ ಎಂದು ಸೆಬಿ, ಹೇಳಿದೆ. “ಅಸ್ತಿತ್ವದಲ್ಲಿರುವ ನಿಯಂತ್ರಣಕ್ಕೆ ಹೊಸ ನಿಯಂತ್ರಣ ಅಥವಾ ತಿದ್ದುಪಡಿ ಪರಿಚಯಿಸುವ ಎಲ್ಲಾ ಪ್ರಕರಣಗಳಂತೆ ಇಲ್ಲೂ ಸಮಾಲೋಚನೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಸೆಬಿ ಹೇಳಿಕೆಯಲ್ಲಿ ತಿಳಿಸಿದೆ.

VISTARANEWS.COM


on

Hindenburg report
Koo

ಬೆಂಗಳೂರು: ಸೆಕ್ಯುರಿಟೀಸ್ ಆ್ಯಂಡ್​ ಎಕ್ಸ್​ಚೇಂಜ್​ ಬೋರ್ಡ್ ಆಫ್ ಇಂಡಿಯಾ (SEBI) ಅಧ್ಯಕ್ಷೆ ಅಧ್ಯಕ್ಷೆ ಮಾಧಾಬಿ ಬುಚ್ ಅವರ ಪತಿ ಧವಳ್ ಬುಚ್ ಕೆಲಸ ಮಾಡುತ್ತಿದ್ದ ಬಹುರಾಷ್ಟ್ರೀಯ ಕಂಪನಿಗೆ ನೆರವಾಗುವ ಉದ್ದೇಶದಿಂದ ರಿಯಲ್ ಎಸ್ಟೇಟ್ ಇನ್ವೆಸ್ಟ್​​ಮೆಂಟ್​ ಟ್ರಸ್ಟ್ (ಆರ್​ಇಐಟಿ) ನಿಯಮಗಳಲ್ಲಿ ಮಾರ್ಪಾಟು ಮಾಡಲಾಗಿದೆ ಎಂದು ಅಮೆರಿಕದ ಮೂಲಕ ಹಿಂಡೆನ್​ಬರ್ಗ್ ರಿಸರ್ಚ್ (Hindenburg Report) ಮಾಡಿರುವ ಆರೋಪಗಳನ್ನು ತಿರಸ್ಕರಿಸಿದೆ. ಸೆಬಿ ಭಾನುವಾರ ಈ ಕುರಿತು ವಿಸ್ತೃತ ಹೇಳಿಕೆ ನೀಡಿದೆ.

ಭಾರತದಲ್ಲಿ ಸೆಬಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವುದಕ್ಕೆ ಸಮಗ್ರ ಸಮಾಲೋಚನೆಯ ಬಳಿಕವೇ ಆರ್​ಇಐಟಿ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ. ಹೀಗಾಗಿ ಹಿಂಡೆನ್​ಬರ್ಗ್​​ ಆರೋಪಗಳು “ಸೂಕ್ತವಲ್ಲ” ಎಂದು ಹೇಳಿದೆ.

ಮಾಧಾಬಿ ಬುಚ್ ಸೆಬಿಯಲ್ಲಿ ಪೂರ್ಣಾವಧಿ ಸದಸ್ಯರಾಗಿದ್ದ ಅವಧಿಯಲ್ಲಿ, ರಿಯಲ್ ಎಸ್ಟೇಟ್ ಅಥವಾ ಬಂಡವಾಳ ಮಾರುಕಟ್ಟೆಗಳಲ್ಲಿ ಅವರು ಅನುಭವ ಹೊಂದಿರದ ಅವರ ಪತಿ ಧವಳ್ ಬುಚ್ ಅವರನ್ನು ಬಹುರಾಷ್ಟ್ರೀಯ ಹಣಕಾಸು ಸಂಸ್ಥೆಯಾದ ಬ್ಲ್ಯಾಕ್​ಸ್ಟೋನ್​ಗೆ ಹಿರಿಯ ಸಲಹೆಗಾರರಾಗಿ ನೇಮಿಸಲಾಗಿದೆ ಎಂದು ಅಮೆರಿಕದ ಕಿರು ಮಾರಾಟ ಸಂಸ್ಥೆ ಹಿಂಡೆನ್​ಬರ್ಗ್​​ ರಿಸರ್ಚ್ ಶನಿವಾರ ಆರೋಪಿಸಿತ್ತು. ಆದರೆ ಸೆಬಿ ತನ್ನ ಹೇಳಿಕೆಯಲ್ಲಿ ವರದಿಯ ಹೇಳಿಕೆಯನ್ನು ವಿರೋಧಿಸಿದ್ದು, ಧವಳ್​ ಬ್ಲ್ಯಾಕ್​ಸ್ಟೋನ್​ ರಿಯಲ್ ಎಸ್ಟೇಟ್​ನೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಹೇಳಿದೆ.

ಆರ್​ಇಐಟಿ ನಿಯಮಗಳು, 2014 ಅನ್ನು ಕಾಲಕಾಲಕ್ಕೆ ತಿದ್ದುಪಡಿ ಮಾಡಲಾಗಿದೆ ಎಂದು ಸೆಬಿ, ಹೇಳಿದೆ. “ಅಸ್ತಿತ್ವದಲ್ಲಿರುವ ನಿಯಂತ್ರಣಕ್ಕೆ ಹೊಸ ನಿಯಂತ್ರಣ ಅಥವಾ ತಿದ್ದುಪಡಿ ಪರಿಚಯಿಸುವ ಎಲ್ಲಾ ಪ್ರಕರಣಗಳಂತೆ ಇಲ್ಲೂ ಸಮಾಲೋಚನೆ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಸೆಬಿ ಹೇಳಿಕೆಯಲ್ಲಿ ತಿಳಿಸಿದೆ.

ಸಮಾಲೋಚನೆಯ ನಂತರವೇ, ಹೊಸ ನಿಯಂತ್ರಣ ಪರಿಚಯಿಸುವ ಅಥವಾ ಅಸ್ತಿತ್ವದಲ್ಲಿರುವ ನಿಯಂತ್ರಣದಲ್ಲಿ ಬದಲಾವಣೆ ಪರಿಚಯಿಸುವ ಪ್ರಸ್ತಾಪ ಸೆಬಿ ಮಂಡಳಿಯ ಪರಿಗಣನೆ ಮತ್ತು ಚರ್ಚೆಗಾಗಿ ಇಡಲಾಗುತ್ತದೆ ಎಂದು ಸೆಬಿ ಹೇಳಿದೆ.

ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ ಮಂಡಳಿಯ ಸಭೆಗಳ ಕಾರ್ಯಸೂಚಿಗಳು ಮತ್ತು ಚರ್ಚೆಗಳ ಫಲಿತಾಂಶಗಳನ್ನು ಸೆಬಿ ವೆಬ್​ಸೈಟ್​ನಲ್ಲಿ ಪ್ರಕಟಿಸಲಾಗಿದೆ. ಆರ್​ಇಐಟಿಗಳಿಗೆ ಸಂಬಂಧಿಸಿದಂತೆ ಹೊರಡಿಸಲಾದ ನಿಯಮಗಳ ಬದಲಾವಣೆಗಳು ಅಥವಾ ಸುತ್ತೋಲೆಗಳು ಒಂದು ದೊಡ್ಡ ಬಹುರಾಷ್ಟ್ರೀಯ ಹಣಕಾಸು ಸಂಸ್ಥೆಗೆ ಅನುಕೂಲಕರವಾಗಿವೆ ಎಂಬ ಹೇಳಿಕೆಗಳು ಸೂಕ್ತವಲ್ಲ” ಎಂದು ಅದು ಹೇಳಿದೆ.

ಇದನ್ನೂ ಓದಿ: Paris Olympics 2024 : ಸಮಾರೋಪ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಐಫೆಲ್​ ಟವರ್​ ಏರಿ ಕುಳಿತ ಆಗಂತುಕ!

“ಆದ್ದರಿಂದ, ಆರ್​ಇಐಟಿಗಳು ಮತ್ತು [ಸಣ್ಣ ಮತ್ತು ಮಧ್ಯಮ] ಎಸ್ಎಂ ಆರ್​ಇಐಟಿಗಳನ್ನು ಸೆಬಿಯು ಇತರ ಆಸ್ತಿ ವರ್ಗಗಳಲ್ಲಿ ಉತ್ತೇಜಿಸುವುದು ಒಂದು ದೊಡ್ಡ ಬಹುರಾಷ್ಟ್ರೀಯ ಹಣಕಾಸು ಸಂಸ್ಥೆಗೆ ಲಾಭ ಪಡೆಯಲು ಮಾತ್ರ ಎಂಬ ಹೇಳಿಕೆಯು ಸೂಕ್ತವಲ್ಲ” ಎಂದು ಹೇಳಿಕೆಯಲ್ಲಿ ಪ್ರತಿಪಾದಿಸಲಾಗಿದೆ.

ಹಿತಾಸಕ್ತಿ ಸಂಘರ್ಷಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಸಾಕಷ್ಟು ಆಂತರಿಕ ಕಾರ್ಯವಿಧಾನಗಳನ್ನು ಹೊಂದಿದೆ ಎಂದು ಮಾರುಕಟ್ಟೆ ನಿಯಂತ್ರಕ ಸಂಸ್ಥೆ ಒತ್ತಿಹೇಳಿದೆ.

Continue Reading

ಕರ್ನಾಟಕ

Tungabhadra Dam: ತುಂಗಭದ್ರಾ ಡ್ಯಾಂ ಗೇಟು ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿ.ಕೆ. ಶಿವಕುಮಾರ್

Tungabhadra Dam: ಸದ್ಯ ತುಂಗಭದ್ರಾ ಜಲಾಶಯದಿಂದ 98 ಸಾವಿರ ಕ್ಯೂಸೆಕ್ ನೀರು ಹೊರಗಡೆ ಬಿಡಲಾಗುತ್ತಿದೆ. 19ನೇ ಗೇಟ್ ಒಂದರಲ್ಲಿಯೇ 35 ಸಾವಿರ ಕ್ಯೂಸೆಕ್ ನೀರು ಹೊರಹೋಗುತ್ತಿದೆ. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

VISTARANEWS.COM


on

Tungabhadra Dam
Koo

ವಿಜಯನಗರ: ತುಂಗಭದ್ರಾ ಅಣೆಕಟ್ಟಿನ (Tungabhadra Dam) ಹಾನಿಗೊಳಗಾದ 19ನೇ ಗೇಟನ್ನು ದುರಸ್ತಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ನಮ್ಮ ತುಂಗಭದ್ರಾ ನೀರಾವರಿ ನಿಗಮದಲ್ಲಿಯೂ ಉತ್ತಮ ತಂತ್ರಜ್ಞರಿದ್ದಾರೆ. ಅಲ್ಲದೇ ಗುತ್ತಿಗೆದಾರ ಸಂಸ್ಥೆಗಳಾದ ಕೃಷ್ಣಯ್ಯ, ನಾರಾಯಣ ಹಾಗೂ ಹಿಂದುಸ್ಥಾನ್ ಸಂಸ್ಥೆಯ ತಂಡಗಳು ಈಗಾಗಲೇ ದುರಸ್ತಿ ಕಾರ್ಯಕ್ಕೆ ಚಾಲನೆ ನೀಡಿದ್ದಾರೆ. ತಂತ್ರಜ್ಞರಿಗೆ ಈಗಾಗಲೇ ಅಣೆಕಟ್ಟಿನ ವಿನ್ಯಾಸ ನಕ್ಷೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಭಾನುವಾರ ಮಧ್ಯಾಹ್ನ ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಘಟನೆ ಅತ್ಯಂತ ದುಃಖಕರ. ಶನಿವಾರ ರಾತ್ರಿ ಜಲಾಶಯದ 10 ಗೇಟ್‌ಗಳನ್ನು ತೆರೆಯಲಾಗಿತ್ತು. ಏಕಾಏಕಿ ಜಲಾಶಯದ 19ನೇ ಗೇಟಿನ ಚೈನ್ ಲಿಂಕ್ ತುಂಡಾದ ಹಿನ್ನೆಲೆ ಎಲ್ಲಾ ಗೇಟ್ ತೆರೆದು ಅಣೆಕಟ್ಟಿನ ಮೇಲಿನ ಒತ್ತಡ ಕಡಿಮೆ ಮಾಡಲಾಗಿದೆ ಎಂದರು.

ಸದ್ಯ ಜಲಾಶಯದಿಂದ 98 ಸಾವಿರ ಕ್ಯೂಸೆಕ್ ನೀರು ಹೊರಗಡೆ ಬಿಡಲಾಗುತ್ತಿದೆ. 19ನೇ ಗೇಟ್ ಒಂದರಲ್ಲಿಯೇ 35 ಸಾವಿರ ಕ್ಯೂಸೆಕ್ ನೀರು ಹೊರಹೋಗುತ್ತಿದೆ. ಅಚ್ಚುಕಟ್ಟು ಪ್ರದೇಶದ ರೈತರು ಭಯಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಇದನ್ನೂ ಓದಿ| Tungabhadra Dam: ಒಂದು ವಾರದಲ್ಲಿ ತುಂಗಭದ್ರಾ ಡ್ಯಾಂ ಗೇಟ್ ದುರಸ್ತಿಯಾಗಲಿದೆ ಎಂದ ಡಿ.ಕೆ.ಶಿವಕುಮಾರ್‌

ರೈತರ ಒಂದು ಬೆಳೆಗಾದರೂ ನೀರನ್ನು ಉಳಿಸುತ್ತೇವೆ

ಜಲಾಶಯದಿಂದ 60 ಟಿಎಂಸಿ ನೀರು ಖಾಲಿ ಮಾಡಬೇಕಿದೆ. ಗೇಟನ್ನು ಮತ್ತೆ ಹಾಕಬೇಕೆಂದರೆ ಒತ್ತಡ ಕಡಿಮೆ ಮಾಡಬೇಕಿದೆ. ಜಲಾಶಯದಲ್ಲಿ 150 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು. ಜಲಾಶಯಕ್ಕೆ ಒಳಹರಿವು 28,000 ಕ್ಯೂಸೆಕ್ ಇದೇ. ಕನಿಷ್ಠ ನಮ್ಮ ರೈತರಿಗೆ ಒಂದು ಬೆಳಗಾದರೂ ಒದಗಿಸುವಷ್ಟು ನೀರನ್ನು ಉಳಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.

ಅಣೆಕಟ್ಟಿನ ಪ್ರಮುಖ ಮೂರು ಕಾಲುವೆಗಳಿಗೆ ನೀರನ್ನು ಹರಿಸಲು 115 ಟಿಎಂಸಿ ನೀರಿನ ಅವಶ್ಯಕತೆ ಇದೆ. ಇದೆಲ್ಲವನ್ನು ಲೆಕ್ಕಾಚಾರ ಹಾಕಿ ರೈತರನ್ನು ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇವೆ. ಪಕ್ಕದ ರಾಜ್ಯಗಳಿಗೆ ಈಗಾಗಲೇ 25 ಟಿಎಂಸಿ ನೀರನ್ನು ಕೊಡಲಾಗಿದೆ. ಇನ್ನೂ 90 ಟಿಎಂಸಿ ನೀರನ್ನು ಕೊಡಬೇಕಾಗಿದೆ. ಮೂರು ರಾಜ್ಯಗಳು ಒಟ್ಟಿಗೆ ಸೇರಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ. ರೈತರು ಆತಂಕಕ್ಕೆ ಒಳಗಾಗಬೇಡಿ ಎಂದರು.

ಆಂಧ್ರಪ್ರದೇಶ, ತೆಲಂಗಾಣ ಮತ್ತು ಕರ್ನಾಟಕ ಈ ಮೂರು ರಾಜ್ಯಗಳ ರೈತರಿಗೆ ಬಹುಮುಖ್ಯವಾದ ಜಲಾಶಯ ಇದಾಗಿದೆ. ನಮ್ಮ ಕರ್ನಾಟಕದ 12 ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವನ್ನು ಇದು ಹೊಂದಿದೆ. ಕೊಪ್ಪಳ, ರಾಯಚೂರು, ಬಳ್ಳಾರಿ ಸೇರಿದಂತೆ ಅನೇಕ ಜಿಲ್ಲೆಗಳು ಇದರಿಂದ ಲಾಭ ಪಡೆಯುತ್ತಿವೆ. ನಮ್ಮ ರೈತರು ಆತಂಕ ಪಡಬೇಕಾಗಿಲ್ಲ ಸರ್ಕಾರ ನಿಮ್ಮ ಜೊತೆಗಿದೆ” ಎಂದು ತಿಳಿಸಿದರು.

ಇದು 60 ರಿಂದ 70 ವರ್ಷ ಹಳೆಯ ಜಲಾಶಯವಾಗಿದ್ದು, ಘಟನೆಗೆ ಸಂಬಂಧಿಸಿದಂತೆ ನಾನು ಯಾವ ಅಧಿಕಾರಿಗಳನ್ನೂ ದೂರುವುದಿಲ್ಲ. ದೇಶದ ಸಂಪತ್ತನ್ನು ಕಾಪಾಡಬೇಕಿದೆ. ಅಣೆಕಟ್ಟಿನ ಎರಡು ಕಿಲೋಮೀಟರ್ ಸುತ್ತಳತೆಯಲ್ಲಿ ತಂತ್ರಜ್ಞರು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಹೊರತುಪಡಿಸಿ ಜನಪ್ರತಿನಿಧಿಗಳಿಗೂ ಸಹ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದರು.

ಬಾಗಿನ ಅರ್ಪಣೆ ಮುಂದೂಡಿಕೆ

ಆ.13 ರಂದು ಅಣೆಕಟ್ಟು ತುಂಬಿದ ಹಿನ್ನೆಲೆಯಲ್ಲಿ ನಾನು, ಸಿಎಂ ಬಾಗಿನ ಅರ್ಪಿಸುವ ಕಾರ್ಯಕ್ರಮವಿತ್ತು. ಈಗ ಅದನ್ನು ಮುಂದೂಡಲಾಗಿದೆ. ಮೊದಲು ಅಣೆಕಟ್ಟಿನ ಸುರಕ್ಷತೆ ನಮಗೆ ಮುಖ್ಯವಾಗಿದೆ ಎಂದರು.

ದುರಸ್ತಿಗೆ ಎಷ್ಟು ಸಮಯ ತೆಗೆದುಕೊಳ್ಳುತ್ತದೆ ಎಂದು ಪ್ರಶ್ನೆ ಕೇಳಿದಾಗ, ನಮ್ಮ ಅಧಿಕಾರಿಗಳು ಪ್ರತಿಕ್ಷಣವೂ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ. ಈ ಘಟನೆ ಆದ ಕ್ಷಣದಿಂದ ತ್ವರಿತವಾಗಿ ಕೆಲಸ ಮಾಡುತ್ತಿದ್ದಾರೆ. ಯಾರ ನಿರ್ಲಕ್ಷ್ಯತೆಯಿಂದಲೂ ಈ ಅವಘಡ ನಡೆದಿಲ್ಲ. ಆಕಸ್ಮಿಕವಾಗಿ ಈ ಘಟನೆ ನಡೆದಿದೆ ಎಂದು ಹೇಳಿದರು.

ಇದನ್ನೂ ಓದಿ | Tungabhadra Dam: ತುಂಗಭದ್ರಾ ಜಲಾಶಯಕ್ಕೆ ಡಿಸಿಎಂ ಡಿಕೆಶಿ ಭೇಟಿ; ಅಧಿಕಾರಿಗಳ ಜತೆ ಸಭೆ

ಇತರೆ ಜಲಾಶಯಗಳನ್ನು ಪರಿಶೀಲಿಸಲಾಗುತ್ತದೆಯೇ ಎಂದು ಕೇಳಿದಾಗ, ಬೇರೆ ಜಲಾಶಯಗಳಲ್ಲಿ ರೋಪ್ ಹಾಗೂ ಚೈನ್ ಎರಡು ವ್ಯವಸ್ಥೆ ಮಾಡಲಾಗಿರುತ್ತದೆ. ಈ ಜಲಾಶಯವನ್ನು ವಿನ್ಯಾಸ ಮಾಡುವಾಗ ಚೈನ್ ವ್ಯವಸ್ಥೆ ಮಾಡಿದ್ದಾರೆ. ಮೊದಲು ಇಲ್ಲಿನ ಸಮಸ್ಯೆ ಪರಿಹರಿಸಿ ಆನಂತರ ಇತರೆಡೆ ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದರು.

Continue Reading
Advertisement
ಪ್ರಮುಖ ಸುದ್ದಿ2 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ಗೆ ತೆರೆ; ಅದ್ಧೂರಿ ಸಮಾರೋಪದಲ್ಲಿ ಮನು ಭಾಕರ್​, ಶ್ರೀಜೇಶ್​ ಭಾಗಿ

Paris Olympics 2024
ಕ್ರೀಡೆ3 hours ago

Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ ಮುಕ್ತಾಯ; ಅಮೆರಿಕಕ್ಕೆ ಅಗ್ರಸ್ಥಾನ; ಚೀನಾಕ್ಕೆ ಎರಡನೇ ಸ್ಥಾನ

Farooq Abdullah
ಪ್ರಮುಖ ಸುದ್ದಿ4 hours ago

Farooq Abdullah : ಗಡಿಯಲ್ಲಿನ ಭಯೋತ್ಪಾದನಾ ಕೃತ್ಯಗಳಲ್ಲಿ ಉಗ್ರರು, ಸೇನೆ ಶಾಮೀಲು; ವಿವಾದದ ಕಿಡಿ ಹೊತ್ತಿಸಿದ ಫಾರೂಕ್ ಅಬ್ದುಲ್ಲಾ

Hindenburg Report
ದೇಶ4 hours ago

Hindenburg Report : ಮೋದಿ ಹೆದರುತ್ತಿದ್ದಾರೆ; ಹಿಂಡೆನ್​ಬರ್ಗ್​ ವರದಿ ಉಲ್ಲೇಖಿಸಿ ಸೆಬಿ, ಪ್ರಧಾನಿಯನ್ನು ಟೀಕಿಸಿದ ರಾಹುಲ್ ಗಾಂಧಿ

Hindenburg report
ಪ್ರಮುಖ ಸುದ್ದಿ5 hours ago

Hindenburg Report : ಹುರುಳಿಲ್ಲದ ಆರೋಪ; ಹಿಂಡೆನ್​ಬರ್ಗ್​ ವರದಿ ಬಗ್ಗೆ ಸೆಬಿ ಸ್ಪಷ್ಟನೆ

Paris Olympics 2024
ಕ್ರೀಡೆ5 hours ago

Paris Olympics 2024 : ಸಮಾರೋಪ ಸಮಾರಂಭಕ್ಕೆ ಕೆಲವೇ ಗಂಟೆಗಳ ಮೊದಲು ಐಫೆಲ್​ ಟವರ್​ ಏರಿ ಕುಳಿತ ಆಗಂತುಕ!

Self Harming
ಕರ್ನಾಟಕ6 hours ago

Self Harming: ಡೆತ್‌ ನೋಟ್‌ ಬರೆದಿಟ್ಟು ಜಮ್ಮು-ಕಾಶ್ಮೀರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

PR Sreejesh
ಕ್ರೀಡೆ6 hours ago

PR Sreejesh : ಮಲ್ಲು ಸ್ಟೈಲಲ್ಲಿ ಮುಂಡು ಉಟ್ಟು ಐಫೆಲ್ ಟವರ್ ಮುಂದೆ ಫೋಟೋ ತೆಗಿಸಿಕೊಂಡ ಪಿ.ಆರ್​ ಶ್ರೀಜೇಶ್​​

Vinesh Phogat
ಕ್ರೀಡೆ6 hours ago

Vinesh Phogat : ವಿನೇಶ್​ಗೆ ಬೆಳ್ಳಿಯ ಪದಕ ನೀಡಬೇಕು; ಸೌರವ್​ ಗಂಗೂಲಿ ಆಗ್ರಹ

Tungabhadra Dam
ಕರ್ನಾಟಕ7 hours ago

Tungabhadra Dam: ತುಂಗಭದ್ರಾ ಡ್ಯಾಂ ಗೇಟು ದುರಸ್ತಿಗೆ ಉನ್ನತ ಮಟ್ಟದ ತಂತ್ರಜ್ಞರ ತಂಡ: ಡಿ.ಕೆ. ಶಿವಕುಮಾರ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka Weather Forecast
ಮಳೆ3 days ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 days ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 days ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು5 days ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ5 days ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 week ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 week ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 weeks ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 weeks ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 weeks ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

ಟ್ರೆಂಡಿಂಗ್‌