Paris Olympics 2024 : ಪದಕದ ಸ್ಪರ್ಧೆಗೆ ಅರ್ಹತೆ ಗಿಟ್ಟಿಸಿದ ಭಾರತದ ಶೂಟಿಂಗ್​ ಸ್ಕೀಟ್ ಮಿಶ್ರ ತಂಡ - Vistara News

ಪ್ರಮುಖ ಸುದ್ದಿ

Paris Olympics 2024 : ಪದಕದ ಸ್ಪರ್ಧೆಗೆ ಅರ್ಹತೆ ಗಿಟ್ಟಿಸಿದ ಭಾರತದ ಶೂಟಿಂಗ್​ ಸ್ಕೀಟ್ ಮಿಶ್ರ ತಂಡ

Paris Olympics 2024 : ಈ ಸ್ಪರ್ಧೆಯಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆದ ನಂತರ ಇಟಲಿ ಮತ್ತು ಅಮೆರಿಕೆ ಚಿನ್ನದ ಪದಕಕ್ಕಾಗಿ ಸ್ಪರ್ಧಿಸಲಿವೆ. ಇಟಲಿ 149 ಅಂಕ ಪಡೆದು ಅಗ್ರಸ್ಥಾನ ಗಿಟ್ಟಿಸಿದರೆ ಅಮೆರಿಕ ಒಂದು ಅಂಕ ಹಿಂದಕ್ಕೆ ಉಳಿಯಿತು. ಭಾರತದ ಪರ ಮಹೇಶ್ವರಿ ಮತ್ತು ಅನಂತ್​ಜೀತ್​​ ಉತ್ತಮ ಫಾರ್ಮ್​ನಲ್ಲಿದ್ದು ಅವರು ಕಂಚಿನ ಪದಕದ ಹಣಾಹಣಿಗೆ ಅರ್ಹತೆ ಪಡೆದುಕೊಂಡರು.

VISTARANEWS.COM


on

Paris Olympics 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ (Paris Olympics 2024) ಭಾರತದ ಶೂಟಿಂಗ್​ (Olympics Shooting) ಸ್ಕೀಟ್ ಮಿಶ್ರ ತಂಡದ ಸದಸ್ಯರಾದ ಮಹೇಶ್ವರಿ ಚೌಹಾಣ್ ಮತ್ತು ಅನಂತಜೀತ್ ಸಿಂಗ್ ಕಂಚಿನ ಪದಕದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಸೋಮವಾರ ನಡೆದ ಅರ್ಹತಾ ಸುತ್ತಿನಲ್ಲಿ ಭಾರತದ ಜೋಡಿ 4 ನೇ ಸ್ಥಾನ ಪಡೆಯಿತು. ಚೀನಾದೊಂದಿಗೆ ಅಂಕಗಳ ಸಮಬಲ ಸಾಧಿಸಿದ ಭಾರತ ಅರ್ಹತೆ ಪಡೆದುಕೊಂಡಿತು. ಎರಡೂ ತಂಡಗಳು 146 ಅಂಕಗಳನ್ನು ಗಳಿಸಿದ್ದವು.

ಈ ಸ್ಪರ್ಧೆಯಲ್ಲಿ ಮೊದಲ ಮತ್ತು ಎರಡನೇ ಸ್ಥಾನ ಪಡೆದ ನಂತರ ಇಟಲಿ ಮತ್ತು ಅಮೆರಿಕೆ ಚಿನ್ನದ ಪದಕಕ್ಕಾಗಿ ಸ್ಪರ್ಧಿಸಲಿವೆ. ಇಟಲಿ 149 ಅಂಕ ಪಡೆದು ಅಗ್ರಸ್ಥಾನ ಗಿಟ್ಟಿಸಿದರೆ ಅಮೆರಿಕ ಒಂದು ಅಂಕ ಹಿಂದಕ್ಕೆ ಉಳಿಯಿತು. ಭಾರತದ ಪರ ಮಹೇಶ್ವರಿ ಮತ್ತು ಅನಂತ್​ಜೀತ್​​ ಉತ್ತಮ ಫಾರ್ಮ್​ನಲ್ಲಿದ್ದು ಅವರು ಕಂಚಿನ ಪದಕದ ಹಣಾಹಣಿಗೆ ಅರ್ಹತೆ ಪಡೆದುಕೊಂಡರು.

ಮಹೇಶ್ವರಿ ಮತ್ತು ಅನಂತಜೀತ್ ತಮ್ಮ ಮೊದಲ ಸುತ್ತುಗಳಲ್ಲಿ ಮೊದಲ 4 ಸರಣಿಗಳಲ್ಲಿ ತಪ್ಪುಗಲೇ ಇಲ್ಲದೆ ಪ್ರದರ್ಶನ ನೀಡಿದರು. ಮೊದಲ ಸುತ್ತಿನ ಅಂತಿಮ ಸರಣಿಯಲ್ಲಿ ಮಹೇಶ್ವರಿ ಒಂದು ಶಾಟ್ ತಪ್ಪಿಸಿಕೊಂಡರು. ಆದರೆ ಅನಂತ್ಜೀತ್ ಆವೇಗವನ್ನು ಕಾಯ್ದುಕೊಂಡರು. ಅವರು ಪೂರ್ಣ 29 ಅಂಕಗಳನ್ನು ಗಳಿಸುವ ಮೂಲಕ ತಂಡಕ್ಕೆ 49 ಅಂಕಗಳನ್ನು ತಂದುಕೊಟ್ಟರು.

ಎರಡನೇ ಸುತ್ತಿನಲ್ಲಿ ಮಹೇಶ್ವರಿ ಪರಿಪೂರ್ಣ 25 ಅಂಕಗಳನ್ನು ಗಳಿಸಿದರು. ಅನಂತ್​ಜಿತ್​ ತಮ್ಮ 25 ಶಾಟ್​ಗಳಿಂದ ಕೇವಲ 23 ಅಂಕಗಳನ್ನು ಮಾತ್ರ ಗಳಿಸಲು ಸಾಧ್ಯವಾಯಿತು. ಈ ಸಮಯದಲ್ಲಿ, ಅವರು ಅಗ್ರ ತಂಡಗಳೊಂದಿಗೆ ಸ್ಪರ್ಧಿಸುತ್ತಿದ್ದರು. ಎರಡನೇ ಇಟಾಲಿಯನ್ ತಂಡವಾದ ಮಾರ್ಟಿನಾ ಬಾರ್ಟೊಲೊಮಿ ಮತ್ತು ತಮ್ಮರೊ ಕಸ್ಸಾಂಡ್ರೊ ಅವರ ಸವಾಲು ಎದುರಿಸಿದ್ದರು.

ಇದನ್ನೂ ಓದಿ: Manu Bhaker : ಪ್ಯಾರಿಸ್​ ಒಲಿಂಪಿಕ್ಸ್​​ ಸಮಾರೋಪದಲ್ಲಿ ಮನು ಭಾಕರ್​​ ತ್ರಿವರ್ಣ ಧ್ವಜಧಾರಿ

ಅಂತಿಮ ಸುತ್ತಿನಲ್ಲಿ ಮಹೇಶ್ವರಿ 25 ಅಂಕಗಳನ್ನು ಗಳಿಸಿ ಮೂರು ಸುತ್ತುಗಳನ್ನು ಮುಗಿಸಿದರು. ಅನಂತ್ಜೀತ್ ತಮ್ಮ ಒಂದು ಶಾಟ್ ತಪ್ಪಿಸಿಕೊಂಡರು. ಅವರು 24 ಅಂಕ ಗಳಿಸುವ ಮೂಲಕ ತಂಡ 49 ಅಂಕ ಗಳಿಸಿತು. ಬಾರ್ಟೊಲೊಮಿ ಮತ್ತು ಕಸ್ಸಾಂಡ್ರೊ 144 ಅಂಕಗಳನ್ನು ಗಳಿಸಿದರೆ ಭಾರತದ ಜೋಡಿ 146 ಅಂಕಗಳನ್ನು ಗಳಿಸಿತು.

ಕ್ವಾರ್ಟರ್​ ಫೈನಲ್​ಗೇರಿದ ಭಾರತ ಮಹಿಳೆಯರ ಟೇಬಲ್ ಟೆನಿಸ್​ ತಂಡ

ಪ್ಯಾರಿಸ್: ಭಾರತದ ಮಹಿಳೆಯರ ಟೇಬಲ್​ ಟೆನಿಸ್ ತಂಡ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ (Paris Olympics 2024) ಕ್ವಾರ್ಟರ್​ಫೈನಲ್​ಗೇರಿದೆ. ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ರೊಮೇನಿಯಾ ವಿರುದ್ಧ 3-2 ಅಂತರದಲ್ಲಿ ಜಯ ಸಾಧಿಸುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಮುನ್ನಡೆ ಸಾಧಿಸಿದೆ. ಅನುಭವಿ ಆಟಗಾರ್ತಿ ಮಣಿಕಾ ಭಾತ್ರಾ ಭಾರತದ ಗೆಲುವಿನಲ್ಲಿ ಪ್ರಧಾನ ಪಾತ್ರ ವಹಿಸಿದರು. ಶ್ರೀಜಾ ಅಕುಲಾ-ಅರ್ಚನಾ ಕಾಮತ್ ಮತ್ತು ಮಣಿಕಾ ಬಾತ್ರಾ ಅವರಿದ್ದ ತಂಡವು ಈ ಸಾಧನೆ ಮಾಡಿದೆ.

ಭಾರತ ತಂಡ ಎರಡು ಪಂದ್ಯಗಳನ್ನು ಗೆದ್ದು 2-0 ಮುನ್ನಡೆ ಸಾಧಿಸಿತು. ರೊಮೇನಿಯಾ ಮುಂದಿನ ಎರಡು ಪಂದ್ಯಗಳನ್ನು ಗೆದ್ದಿತು. ಐದನೇ ಪಂದ್ಯದಲ್ಲಿ ಬಾತ್ರಾ 11-5, 11-9, 11-9 ಸೆಟ್ ಗಳಿಂದ ಆದಿನಾ ಡಯಾಕೊನು ಅವರನ್ನು ಸೋಲಿಸಿದರು. ಮಹಿಳಾ ಟೇಬಲ್ ಟೆನಿಸ್ ಕ್ವಾರ್ಟರ್ ಫೈನಲ್​​ನಲ್ಲಿ ಭಾರತ ಯುಎಸ್ಎ ಅಥವಾ ಜರ್ಮನಿಯನ್ನು ಎದುರಿಸಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Martin Trailer: ಪ್ಯಾನ್‌ ವರ್ಲ್ಸ್‌ ಮಾರ್ಟಿನ್‌ ಸಿನಿಮಾ ಟ್ರೈಲರ್‌ ಔಟ್;‌ ಪಾಕ್‌ನಲ್ಲಿ ಧ್ರುವ ಸರ್ಜಾ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ!

Martin Trailer: ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಇದೀಗ ಹಲವು ಭಾಷೆಗಳಲ್ಲಿ, ಮಾರ್ಟಿನ್‌ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿದೆ. ಈ ಸಿನಿಮಾದಲ್ಲಿ ಧ್ರುವ ಸರ್ಜಾ ಅವರಿಗೆ ವೈಭವಿ ಶಾಂಡಿಲ್ಯ ನಾಯಕಿಯಾಗಿ ನಟಿಸಿದ್ದಾರೆ. ಇನ್ನು ಧ್ರುವ ಸರ್ಜಾ ಆ್ಯಕ್ಷನ್‌ ಕಂಡು ಅಭಿಮಾನಿಗಳು ಫಿದಾ ಆಗಿದ್ದಾರೆ.

VISTARANEWS.COM


on

Martin Trailer
Koo

ಮುಂಬೈ: ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ (Dhruva Sarja) ನಟನೆಯ ಬಹುನಿರೀಕ್ಷಿತ, ಪ್ಯಾನ್‌ ವರ್ಲ್ಡ್‌ ಸಿನಿಮಾ ಎಂದೇ ಖ್ಯಾತಿಯಾಗಿರುವ ಮಾರ್ಟಿನ್‌ ಸಿನಿಮಾದ ಟ್ರೈಲರ್‌ (Martin Trailer) ಮುಂಬೈನಲ್ಲಿ ಅದ್ಧೂರಿಯಾಗಿ ಬಿಡುಗಡೆಗೊಂಡಿದೆ. ಮುಂಬೈನಲ್ಲಿ ನಡೆದ ಅಂತಾರಾಷ್ಟ್ರೀಯ ಸುದ್ದಿಗೋಷ್ಠಿಯಲ್ಲಿ, ದೇಶ-ವಿದೇಶಗಳ ಪತ್ರಕರ್ತರ ಸಮ್ಮುಖದಲ್ಲಿ ಮಾರ್ಟಿನ್‌ ಟ್ರೈಲರ್‌ ಔಟ್‌ ಆಗಿದೆ. ಪಾಕಿಸ್ತಾನದ ನೆಲದಲ್ಲಿ ಧ್ರುವ ಸರ್ಜಾ ಪ್ರದರ್ಶಿಸುವ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ ಆಗಿದ್ದಾರೆ.

ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಕೇರಳ ಸೇರಿ ಭಾರತದ ಹಲವು ರಾಜ್ಯಗಳು ಹಾಗೂ ಜಗತ್ತಿನ 22 ದೇಶಗಳ ಪತ್ರಕರ್ತರು, ಗಣ್ಯರ ಸಮ್ಮುಖದಲ್ಲಿ ಟ್ರೈಲರ್‌ಅನ್ನು ಲಾಂಚ್‌ ಮಾಡಲಾಗಿದೆ. ನಿರ್ದೇಶಕ ಎ.ಪಿ.ಅರ್ಜುನ್‌, ನಟ ಅರ್ಜುನ್‌ ಸರ್ಜಾ, ನಿರ್ಮಾಪಕ ಉದಯ್‌ ಮೆಹ್ತಾ ಸೇರಿ ಚಿತ್ರತಂಡದ ಹಲವರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಕನ್ನಡ, ಹಿಂದಿ, ಮಲಯಾಳಂ, ತಮಿಳು ಸೇರಿ ಒಟ್ಟು 13 ಭಾಷೆಗಳಲ್ಲಿ ಮಾರ್ಟಿನ್‌ ಟ್ರೈಲರ್‌ ರಿಲೀಸ್‌ ಆಗಿದೆ. ಟ್ರೈಲರ್‌ ವೀಕ್ಷಿಸಿದ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಭರಪೂರ ಆ್ಯಕ್ಷನ್‌ ದೃಶ್ಯಗಳು, ಭರ್ಜರಿ ಡೈಲಾಗ್‌, ಅಬ್ಬರದ ಫೈಟಿಂಗ್‌ಅನ್ನು ಸಿನಿಮಾ ಹೊಂದಿದೆ ಎಂಬ ದೊಡ್ಡ ಸಂದೇಶವನ್ನು ಸಿನಿಮಾ ತಂಡವು ಟ್ರೈಲರ್‌ ಮೂಲಕ ರವಾನಿಸಿದೆ. ಅಭಿಮಾನಿಗಳ ಆಸೆಯಂತೆ ಪೋಲಿಂಗ್ ಮೂಲಕ ಟ್ರೈಲರ್ ಆಯ್ಕೆ ಮಾಡಲಾಯಿತು. ಮುಂಬೈನ ಅಂಧೇರಿಯ ಪಿವಿಆರ್ ಸಿಟಿ‌ ಮಾಲ್‌ನಲ್ಲಿ ಮಾರ್ಟಿನ್ ಇಂಟರ್ ನ್ಯಾಷನಲ್ ಪ್ರೆಸ್‌ ಮೀಟ್‌ ನಡೆಯಿತು. ಜಪಾನ್‌, ಚೀನಾ, ಅಮೆರಿಕ, ದುಬೈ, ರಷ್ಯಾ, ಬ್ರಿಟನ್‌ ಸೇರಿ ಹಲವು ದೇಶಗಳ ಪತ್ರಕರ್ತರು ಭಾಗವಹಿಸಿದ್ದರು. ಅಕ್ಟೋಬರ್‌ 11ರಂದು ಸಿನಿಮಾ ಬಿಡುಗಡೆಯಾಗಲಿದೆ.

ಮಾರ್ಟಿನ್ ಚಿತ್ರಕ್ಕೆ ಮಣಿ ಶರ್ಮಾ ಅವರ ಸಂಗೀತ ಮತ್ತು ಸತ್ಯ ಹೆಗಡೆ ಅವರ ಛಾಯಾಗ್ರಹಣವಿದೆ. ಈಗ ಹಲವು ಭಾಷೆಗಳಲ್ಲಿ, ಮಾರ್ಟಿನ್‌ ಸಿನಿಮಾದ ಟ್ರೈಲರ್ ಬಿಡುಗಡೆಗೊಂಡಿದೆ. ಮಾರ್ಟಿನ್‌ ಸಿನಿಮಾದಲ್ಲಿ ಕನ್ನಡದ ಕಲಾವಿದರ ಜತೆಗೆ ಹಿಂದಿ, ತೆಲುಗು, ತಮಿಳು ಚಿತ್ರರಂಗದ ಕಲಾವಿದರು ನಟಿಸಿದ್ದಾರೆ. ಅಚ್ಯುತ್‌ ಕುಮಾರ್‌, ನಿಕಿತನ್‌ ಧೀರ್‌, ನವಾಬ್‌ ಶಾ ಸೇರಿ ಹಲವರು ಪ್ರಮುಖ ಪಾತ್ರಗಳಲ್ಲಿದ್ದಾರೆ. ‘ಧೀರನ್‌ ಅಧಿಕಾರಂ ಒಂಡ್ರು’ತಮಿಳು ಚಿತ್ರದ ಮೂಲಕ ಗಮನ ಸೆಳೆದಿದ್ದ ನಟ ರೋಹಿತ್‌ ಪಾಠಕ್‌ ಸಹ ‘ಮಾರ್ಟಿನ್‌’ನಲ್ಲಿ ಬಹು ಮುಖ್ಯ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Dhruva Sarja:  ಧ್ರುವ ಸರ್ಜಾ ಕಂಡು ʻಡಿ ಬಾಸ್’ ಎಂದು ಕೂಗಿದ ದರ್ಶನ್ ಫ್ಯಾನ್ಸ್; ಭರದಿಂದ ಸಾಗಿದೆ ‘ಮಾರ್ಟಿನ್’ ಪ್ರಚಾರ!

Continue Reading

ಪ್ರಮುಖ ಸುದ್ದಿ

A R Rahman : ಒಲಿಂಪಿಕ್ಸ್ ನಡುವೆಯೇ ವೈರಲ್ ಆಯ್ತು ಎಆರ್​ ರೆಹಮಾನ್ ಸಂಗೀತದ’ ತಾಲ್​ ಸೆ ತಾಲ್​’ ಹಾಡು; ಪ್ರತಿಕ್ರಿಯೆ ನೀಡಿದ ಚಿತ್ರ ನಿರ್ದೇಶಕ

A R Rahman: ತಾಲ್​​ನಂಥ ಹಿಂದಿ ಚಲನಚಿತ್ರ ಥೀಮ್ ಮ್ಯೂಸಿಕ್ ಅಪ್ರತಿಮ ಹಾಗೂ ಇದು ಅಪರೂಪ ಎಂದು ಸುಭಾಷ್ ಸೋಮವಾರ ಟ್ವೀಟ್ ಮಾಡಿದ್ದಾರೆ. ಐಶ್ವರ್ಯಾ ರೈ, ಅಕ್ಷಯ್ ಖನ್ನಾ ಮತ್ತು ಅನಿಲ್ ಕಪೂರ್ ನಟಿಸಿದ 1999ರ ಚಿತ್ರದ ನಿರ್ದೇಶಕ ಸುಭಾಷ್ ಘಾಯ್​​, “ಇದನ್ನು ವರ್ಲ್ಡ್ ಅಕ್ವಾಟಿಕ್ಸ್ ದೋಹಾ 2024ರಲ್ಲಿ ಬಳಸಲಾಗಿದೆ. ಇದು ಯುಎಸ್ಎ ಆರ್ಟಿಸ್ಟಿಕ್ ಈಜು ತಂಡಕ್ಕೆ ಈ ಹಾಡು ಸ್ಫೂರ್ತಿ ನೀಡಿತ್ತು. ಹೀಗಾಗಿ ನಾನು ಧನ್ಯ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಒಂಡಿದ್ದಾರೆ.

VISTARANEWS.COM


on

A R Rahman
Koo

ಬೆಂಗಳೂರು: ಎ. ಆರ್​ ರೆಹಮಾನ್ (A R Rahman) ಸಂಗೀತದ ‘ತಾಲ್​ ಸೆ ತಾಲ್​’ ಹಾಡಿಗೆ ಅಮೆರಿಕದ ಈಜುಪಟುಗಳು ಆರ್ಟಿಸ್ಟಿಕ್ ಸ್ವಿಮ್ಮಿಂಗ್​ ಸ್ಪರ್ಧೆಯಲ್ಲಿ ಬಳಸಿರುವ ವಿಡಿಯೊ ಈಗ ವೈರಲ್​ ಆಗಿದೆ. ಆದರೆ ಅದು ಹಳೆಯ ವಿಡಿಯೊ ಎಂಬುದು ಈಗ ಗೊತ್ತಾಗಿದೆ. ಈ ಬಗ್ಗೆ ಸಿನಿಮಾದ ನಿರ್ದೇಶಕ ಸುಭಾಷ್ ಘಾಯ್ ಈ ಬಗ್ಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ. 2024ರ ವರ್ಲ್ಡ್ ಅಕ್ವಾಟಿಕ್ಸ್ ದೋಹಾ 2024ರಲ್ಲಿ ಸಿನಿಮಾದ ತಾಲ್ ಸೆ ತಾಲ್​ ಹಾಡನ್ನು ಬಳಸಲಾಗಿದೆ. ಮೂಲ ತಾಲ್ ಹಾಡಿನಲ್ಲಿ ಐಶ್ವರ್ಯಾ ರೈ ನೃತ್ಯ ಮಾಡಿದ್ದರೆ ಅಲ್ಕಾ ಯಾಗ್ನಿಕ್ ಮತ್ತು ಉದಿತ್ ನಾರಾಯಣ್ ಹಾಡಿದ್ದರು.

ತಾಲ್​​ನಂಥ ಹಿಂದಿ ಚಲನಚಿತ್ರ ಥೀಮ್ ಮ್ಯೂಸಿಕ್ ಅಪ್ರತಿಮ ಹಾಗೂ ಇದು ಅಪರೂಪ ಎಂದು ಸುಭಾಷ್ ಸೋಮವಾರ ಟ್ವೀಟ್ ಮಾಡಿದ್ದಾರೆ. ಐಶ್ವರ್ಯಾ ರೈ, ಅಕ್ಷಯ್ ಖನ್ನಾ ಮತ್ತು ಅನಿಲ್ ಕಪೂರ್ ನಟಿಸಿದ 1999ರ ಚಿತ್ರದ ನಿರ್ದೇಶಕ ಸುಭಾಷ್ ಘಾಯ್​​, “ಇದನ್ನು ವರ್ಲ್ಡ್ ಅಕ್ವಾಟಿಕ್ಸ್ ದೋಹಾ 2024ರಲ್ಲಿ ಬಳಸಲಾಗಿದೆ. ಇದು ಯುಎಸ್ಎ ಆರ್ಟಿಸ್ಟಿಕ್ ಈಜು ತಂಡಕ್ಕೆ ಈ ಹಾಡು ಸ್ಫೂರ್ತಿ ನೀಡಿತ್ತು. ಹೀಗಾಗಿ ನಾನು ಧನ್ಯ ಎಲ್ಲರಿಗೂ ಧನ್ಯವಾದಗಳು ಎಂದು ಬರೆದುಒಂಡಿದ್ದಾರೆ.

ವಿಶ್ವ ಅಕ್ವಾಟಿಕ್ಸ್ ಚಾಂಪಿಯನ್ಶಿಪ್ 2024 ಫೆಬ್ರವರಿ 2-18 ರ ನಡುವೆ ದೋಹಾದಲ್ಲಿ ನಡೆಯಿತು, ಹಲವಾರು ಕ್ರೀಡಾಪಟುಗಳು ಪ್ಯಾರಿಸ್ 2024 ಒಲಿಂಪಿಕ್ ಕೋಟಾ ಸ್ಥಾನಗಳನ್ನು ಇಲ್ಲಿ ಪಡೆದುಕೊಂಡಿದ್ದಾರೆ.

ಈಜು ತಂಡ ಪ್ರದರ್ಶನ ವೀಕ್ಷಿಸಿ

ಭಾನುವಾರ ಫ್ಯಾನ್ ಪೇಜ್ ಹಂಚಿಕೊಂಡ ವೀಡಿಯೊದಲ್ಲಿ, ಯುಎಸ್ ಮಹಿಳಾ ಈಜುಗಾರ್ತಿಯರ ಗುಂಪು ತಾಲ್ ಸೆ ತಾಲ್​​​ನ ವಾದ್ಯ ಆವೃತ್ತಿಯನ್ನು ನುಡಿಸುತ್ತಿದ್ದಂತೆ ನೀರೊಳಗಿನ ಅದ್ಭುತ ಸಿಂಕ್ರೊನೈಸೇಶನ್ ಅನ್ನು ಪ್ರದರ್ಶಿಸಿತು. “ತಾಲ್ ಸೆ ತಾಲ್ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸೂಕ್ತ. ಎ.ಆರ್.ರೆಹಮಾನ್ ನಿಜವಾಗಿಯೂ ಭಾರತೀಯ ಸಂಗೀತದ ಮುಖ” ಎಂದು ಎಕ್ಸ್ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

Paris Olympics 2024 : ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಅವ್ಯವಸ್ಥೆ; ಬೀದಿ ಬದಿ ಮಲಗಿ ನಿದ್ದೆ ಮಾಡಿದ ಚಿನ್ನದ ಪದಕ ವಿಜೇತ ಈಜುಪಟು

ಇದು ಎಲ್ಲಾ ಭಾರತೀಯರಿಗೆ ಮತ್ತು ಖಂಡಿತವಾಗಿಯೂ ಭಾರತೀಯ ಸಂಗೀತಕ್ಕೆ ಹೆಮ್ಮೆಯ ಕ್ಷಣ ಎಂದು ಇನ್ನೊಬ್ಬರು ಹೇಳಿದರು. “ಇದು ಹಳೆಯ ವೀಡಿಯೊ, ಆದರೆ ಸುಂದರವಾಗಿದೆ” ಎಂದು ವ್ಯಕ್ತಿಯೊಬ್ಬರು ಹೇಳಿದರು. ಕೆಲವರು ವೀಡಿಯೊದ ಸತ್ಯಾಸತ್ಯತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ಇದು ನಕಲಿ ವೀಡಿಯೊ, ಇದಕ್ಕೆ ಭಾರತೀಯ ಸಂಗೀತವನ್ನು ಸೇರಿಸಲಾಗಿದೆ. ಅದನ್ನು ಸಂಪಾದಿಸಲಾಗಿದೆಯೇ ಹೊರತು ಮೂಲವಲ್ಲ.”

ನಾಟಕ ತಾಲ್ ನಲ್ಲಿ ಐಶ್ವರ್ಯಾ, ಅನಿಲ್, ಅಕ್ಷಯ್ ಮುಖ್ಯ ಪಾತ್ರಗಳಲ್ಲಿ ಮತ್ತು ಅಮರೀಶ್ ಪುರಿ ಮತ್ತು ಅಲೋಕ್ ನಾಥ್ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರವನ್ನು ನಂತರ ತಮಿಳಿಗೆ ಡಬ್ ಮಾಡಲಾಯಿತು ಮತ್ತು ಅದಕ್ಕೆ ಥಾಲಂ ಎಂದು ಹೆಸರಿಸಲಾಯಿತು. ತಾಲ್ ಚಿತ್ರಕ್ಕಾಗಿ ಅನಿಲ್, ಎ.ಆರ್.ರೆಹಮಾನ್, ಅಲ್ಕಾ ಯಾಗ್ನಿಕ್ ಮತ್ತು ಆನಂದ್ ಬಕ್ಷಿ ತಲಾ 2000 ರಲ್ಲಿ ಫಿಲ್ಮ್​ಫೇರ್​ ಪ್ರಶಸ್ತಿಯನ್ನು ಪಡೆದರು.

Continue Reading

ಕರ್ನಾಟಕ

KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ

KAS Prelims Exam: ಲೋಕಸಭಾ ಚುನಾವಣೆ ಸೇರಿ ವಿವಿಧ ಕಾರಣಗಳಿಂದ ಹಲವು ಬಾರಿ ಮುಂದೂಡಿಕೆಯಾಗಿದ್ದ ಕೆಎಎಸ್‌ ಪೂರ್ವ ಭಾವಿ ಪರೀಕ್ಷೆಯನ್ನು(KAS Recruitment 2024) ಆ.25ಕ್ಕೆ ನಿಗದಿಪಡಿಸಲಾಗಿತ್ತು. ಆದರೆ, ಇದೀಗ ಮತ್ತೆ ಎರಡು ದಿನಗಳ ಕಾಲ ಪರೀಕ್ಷೆಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮುಂದೂಡಿದೆ.

VISTARANEWS.COM


on

KAS prelims exam
Koo

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್‌ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಆ.25ರಂದು ನಿಗದಿಯಾಗಿದ್ದ ಪೂರ್ವಭಾವಿ ಪರೀಕ್ಷೆ (KAS Prelims Exam) ಮತ್ತೆ ಮುಂದೂಡಿಕೆಯಾಗಿದೆ. ಒಂದೇ ದಿನ ಬ್ಯಾಂಕಿಂಗ್‌ ಪರೀಕ್ಷೆ ಹಾಗೂ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿದ್ದರಿಂದ ಅಭ್ಯರ್ಥಿಗಳಿಗೆ ಸಮಸ್ಯೆಯಾಗಿತ್ತು. ಹೀಗಾಗಿ ಪರೀಕ್ಷಾ ದಿನಾಂಕ ಮುಂದೂಡುವಂತೆ ಅಭ್ಯರ್ಥಿಗಳು ಮನವಿ ಮಾಡಿದ್ದರು. ಇದರಿಂದ ಎರಡು ದಿನಗಳ ಕಾಲ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಕೆಪಿಎಸ್‌ಸಿ ಮುಂದೂಡಿದೆ.

ಕೆಎಎಸ್‌ ಪೂರ್ವಭಾವಿ ಪರೀಕ್ಷೆಗೆ ಈಗಾಗಲೇ ಎಲ್ಲಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿರುವ ಕಾರಣದಿಂದ ಹಾಗೂ ಮುಖ್ಯ ಮಂತ್ರಿಗಳು ಕರ್ನಾಟಕ ಲೋಕಸೇವಾ ಆಯೋಗದೊಂದಿಗೆ ಸಮಾಲೋಚಿಸಿ ಅಲ್ಪಕಾಲ ಗೆಜೆಟೆಡ್ ಪ್ರೊಬೇಷನರ್ಸ್‌ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಲು ಸೂಚಿಸಿರುವುದರಿಂದ ಆ. 27ರ ಮಂಗಳವಾರದಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.

ಆ.25ರಂದು ಕೆಎಎಸ್‌ ಪೂರ್ವಭಾವಿ ಪರೀಕ್ಷೆ ನಡೆಸಲು ಈಗಾಗಲೇ ಒಟ್ಟು 564 ಪರೀಕ್ಷಾ ಉಪಕೇಂದ್ರಗಳಿಂದ ಒಪ್ಪಿಗೆ ಪತ್ರಗಳನ್ನು ಪಡೆದು ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾಗಿತ್ತು. ಆದರೆ, ಅಂದು ಐ.ಬಿ.ಪಿ.ಎಸ್. ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಸಿಎಂ ಅವರೊಂದಿಗೆ ಚರ್ಚಿಸಿ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ಆ.27ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.

ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಲು ಪತ್ರ

ಆ.27 ಕಾರ್ಯ ನಿರ್ವಹಣಾ (working day) ದಿನವಾಗಿರುವುದರಿಂದ ಈಗಾಗಲೇ ಅಭ್ಯರ್ಥಿಗಳನ್ನು ಹಂಚಿಕೆ ಮಾಡಲಾದ 564 ಪರೀಕ್ಷಾ ಉಪಕೇಂದ್ರಗಳಿಗೆ ಒಂದು ದಿವಸದ ವಿಶೇಷ/ಸಾರ್ವತ್ರಿಕ ರಜೆಯನ್ನು ಘೋಷಿಸಿ, ಕೆಎಎಸ್‌ ಪೂರ್ವಭಾವಿ ಪರೀಕ್ಷೆಯನ್ನು ನಡೆಸುವಂತೆ ಅನುವು ಮಾಡಿಕೊಡಬೇಕು ಹಾಗೂ ಹುದ್ದೆಗೆ ಅರ್ಜಿ ಸಲ್ಲಿಸಿರುವ ರಾಜ್ಯ ಸರ್ಕಾರದ ಸೇವಾನಿರತ ಅಭ್ಯರ್ಥಿಗಳಿಗೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಬೇಕು ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ರಾಕೇಶ್‌ ಕುಮಾರ್‌ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆಯ ಸರ್ಕಾರದ ಕಾರ್ಯದರ್ಶಿ ರಣದೀಪ್‌ ಡಿ. ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನೂ ಓದಿ | Government Job: ಅಂತಾರಾಷ್ಟ್ರೀಯ ಕ್ರೀಡಾಕೂಟ ಪದಕ ಗೆದ್ದ 12 ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗ

Jobs Alert: ಪ್ರೌಢಶಾಲೆ, ಪಿಯು ಕಾಲೇಜುಗಳ ಬೋಧಕ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

teacher jobs alert
teacher jobs alert

ಬೆಂಗಳೂರು: ಖಾಸಗಿ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ (Teacher) ಹುದ್ದೆಗಳನ್ನು ಭರ್ತಿ ಮಾಡಲು (Jobs Alert) ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ. ಶಿಕ್ಷಕ, ಉಪನ್ಯಾಸಕ ಹುದ್ದೆಗಳ ಶೋಧದಲ್ಲಿರುವವರಿಗೆ ಇದು ಗುಡ್ ನ್ಯೂಸ್ (Good news) ಆಗಿದೆ.

ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. 1987ರಿಂದ 1994-95ರ ಶೈಕ್ಷಣಿಕ ಅವಧಿಯಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು ಹಾಗೂ ಪದವಿ ಕಾಲೇಜುಗಳಲ್ಲಿ ದಿನಾಂಕ:01-01-2016ರಿಂದ ದಿನಾಂಕ:31-12-2020ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಭರ್ತಿಮಾಡಿಕೊಳ್ಳಲು ಆರ್ಥಿಕ ಇಲಾಖೆಯು ಸಹಮತಿಸಿದೆ.

ಷರತ್ತುಗಳು:

ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 384 ವೆಚ್ಚ-8/2013, ದಿನಾಂಕ:09-04- 2013ರಲ್ಲಿನ ಚೆಕ್‌ಲಿಸ್ಟ್ ಅನುಬಂಧ-3ರನ್ವಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವುದು. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳುವುದು.

ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು. 2016-2017 ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಖಚಿತಪಡಿಸಿಕೊಳ್ಳುವುದು. ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಛಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು.

ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ಮೂಲಕ ವಿವರಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು. ಈ ತಂತ್ರಾಂಶದ ಮೂಲಕ ಪ್ರಸ್ತಾವನೆಗಳನ್ನು ವ್ಯವಹರಿಸುವುದು. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅನುಮೋದಿಸಲು ಪ್ರತ್ಯಾಯೋಜಿಸಲಾದ ಆದೇಶ ಸಂಖ್ಯೆ: ಇಡಿ 16 ಟಿಪಿಯು 2011. ದಿನಾಂಕ:30-09-2011 ಅನ್ನು ಹಿಂಪಡೆದು, ಹುದ್ದೆಗಳ ಅನುಮೋದನೆಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.

Continue Reading

ದೇಶ

Sheikh Hasina: ಬಾಂಗ್ಲಾದಿಂದ ದೆಹಲಿಗೆ ಬಂದಿಳಿದ ಶೇಖ್‌ ಹಸೀನಾ; ಶೀಘ್ರದಲ್ಲೇ ಲಂಡನ್‌ಗೆ ಹಾರಾಟ?

Sheikh Hasina: ಬಾಂಗ್ಲಾದೇಶದ ಢಾಕಾದಲ್ಲಿರುವ ಶೇಖ್‌ ಹಸೀನಾ ನಿವಾಸದ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ ಬಳಿಕ ಪಲಾಯನಗೈದ ಶೇಖ್‌ ಹಸೀನಾ ಅವರು ಭಾರತಕ್ಕೆ ಆಗಮಿಸಿದ್ದಾರೆ. ಪ್ರಾಣ ಭಯದ ಹಿನ್ನೆಲೆಯಲ್ಲಿ ಅವರು ಭಾರತಕ್ಕೆ ಬಂದಿದ್ದಾರೆ. ಶೀಘ್ರದಲ್ಲೇ ಅವರು ಲಂಡನ್‌ಗೆ ಹಾರಾಟ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

VISTARANEWS.COM


on

Sheikh Hasina
Koo

ನವದೆಹಲಿ: ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆಯು (Bangladesh Protest) ನಾಗರಿಕ ದಂಗೆಯಾಗಿ ಬದಲಾದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ ಶೇಖ್‌ ಹಸೀನಾ (Sheikh Hasina), ಭಾರತಕ್ಕೆ ಬಂದಿಳಿದಿದ್ದಾರೆ. ದೆಹಲಿಯಲ್ಲಿರುವ ಹಿಂಡನ್‌ ಏರ್‌ಫೋರ್ಸ್‌ ವಾಯುನೆಲೆಗೆ (Hindon Air Force Base) ಬಂದಿಳಿದಿದ್ದು, ವಾಯುಪಡೆ ಅಧಿಕಾರಿಗಳು ಶೇಖ್‌ ಹಸೀನಾ ಅವರನ್ನು ಸ್ವಾಗತಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಗಿ ಭದ್ರತೆಯಲ್ಲಿ ಶೇಖ್‌ ಹಸೀನಾ ಅವರು ದೆಹಲಿಗೆ ಬಂದಿಳಿದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಾಣಭಯದ ಹಿನ್ನೆಲೆಯಲ್ಲಿ ಭಾರತಕ್ಕೆ ಬಂದಿರುವ ಶೇಖ್‌ ಹಸೀನಾ, ಶೀಘ್ರದಲ್ಲಿಯೇ ಲಂಡನ್‌ಗೆ ಹಾರಲಿದ್ದಾರೆ ಎಂದು ತಿಳಿದುಬಂದಿದೆ. ತಾತ್ಕಾಲಿಕವಾಗಿ ಭಾರತದಲ್ಲಿ ಆಶ್ರಯ ಪಡೆಯುವ ಅವರು ಬಳಿಕ ಲಂಡನ್‌ಗೆ ತೆರಳಿ, ಅಲ್ಲಿಯೇ ಕೆಲ ಕಾಲ ನೆಲೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಾಕಿಸ್ತಾನ, ಶ್ರೀಲಂಕಾದಲ್ಲೂ ನಾಗರಿಕ ದಂಗೆಗಳು ಉಂಟಾದಾಗ, ಆ ದೇಶಗಳ ನಾಯಕರು ವಿದೇಶದಲ್ಲಿ ಆಶ್ರಯ ಪಡೆದಿದ್ದರು. ಈಗಲೂ ಕೆಲ ನಾಯಕರು ವಿದೇಶಗಳಲ್ಲಿಯೇ ನೆಲೆಸಿದ್ದಾರೆ.

ಬಾಂಗ್ಲಾ ರೈಲುಗಳ ಸೇವೆ ರದ್ದು

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದ ಕಾರಣ ಬಾಂಗ್ಲಾ ಜತೆಗಿನ ಎಲ್ಲ ರೈಲು ಸೇವೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಹಾಗೆಯೇ, ಮುಂದಿನ ಸೂಚನೆವರೆಗೆ ಭಾರತೀಯರು ಬಾಂಗ್ಲಾದೇಶಕ್ಕೆ ಪ್ರಯಾಣ ಬೆಳೆಸಬಾರದು ಎಂದು ಕೂಡ ಸೂಚನೆ ನೀಡಲಾಗಿದೆ. ಬಾಂಗ್ಲಾದೇಶದಲ್ಲಿರುವ ಭಾರತೀಯರು, ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.

ಬಾಂಗ್ಲಾದೇಶದಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಪಾಕಿಸ್ತಾನ ಕಾರಣ ಎಂದು ತಿಳಿದುಬಂದಿದೆ. ಬಾಂಗ್ಲಾದೇಶದಲ್ಲಿ ಜಮಾತ್‌-ಎ-ಇಸ್ಲಾಮಿ ಎಂಬ ನಿಷೇಧಿತ ಸಂಘಟನೆಯ ವಿದ್ಯಾರ್ಥಿ ಘಟಕವಾಗಿರುವ ಛತ್ರಾ ಶಿಬಿರ್‌ ಎಂಬ ಸಂಘಟನೆಗೆ ಪಾಕಿಸ್ತಾನದ ಐಎಸ್‌ಐ ಬೆಂಬಲ ಇದೆ ಎಂದು ತಿಳಿದುಬಂದಿದೆ. ಬಾಂಗ್ಲಾದೇಶ ವಿಮೋಚನೆ ಹೋರಾಟದ ವೇಳೆ ಭಾಗಿಯಾದವರ ಕುಟುಂಬಸ್ಥರಿಗೆ ನೀಡುವ ಮೀಸಲಾತಿಯನ್ನು ಶೇ.5ಕ್ಕೆ ಇಳಿಸಿದರೂ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆಯ ಹಿಂದಿರುವ ಪ್ರಮುಖ ವಿದ್ಯಾರ್ಥಿ ಸಂಘಟನೆಗಳಲ್ಲಿ ಛತ್ರಾ ಶಿಬಿರ್‌ ಎಂಬ ಸಂಘಟನೆಯ ಪಾತ್ರ ಪ್ರಮುಖವಾಗಿದೆ. ಇದಕ್ಕೆ ಪಾಕಿಸ್ತಾನವು ಹಣಕಾಸು ನೆರವು ಕೂಡ ನೀಡುತ್ತಿದೆ ಎಂದು ತಿಳಿದುಬಂದಿದೆ.

ಶೇಖ್‌ ಹಸೀನಾ ಅವರು ಕಳೆದ 15 ವರ್ಷಗಳಿಂದ ಬಾಂಗ್ಲಾದೇಶದಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅವರು ರಾಷ್ಟ್ರೀಯವಾದದಲ್ಲಿ ನಂಬಿಕೆ ಇರಿಸಿರುವುದರ ಜತೆಗೆ ಜನರ ಬೆಂಬಲ ಗಳಿಸಿದ್ದಾರೆ. ಬಡತನ ಪ್ರಮಾಣವನ್ನು ಶೇ.5ಕ್ಕೆ ಇಳಿಸಿದ್ದಾರೆ. ಇದರ ಜತೆಗೆ ಭಾರತದ ಜತೆ ಉತ್ತಮ ದ್ವಿಪಕ್ಷೀಯ ಸಂಬಂಧ ಹೊಂದಿದ್ದಾರೆ. ಮೇಲಾಗಿ, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇದನ್ನು ಸಹಿಸದ ಪಾಕಿಸ್ತಾನವು, ಬಾಂಗ್ಲಾದೇಶದಲ್ಲಿ ಭಾರತ ವಿರೋಧಿ ಬಾಂಗ್ಲಾದೇಶ ನ್ಯಾಷನಲಿಸ್ಟ್‌ ಪಾರ್ಟಿಯು ಅಧಿಕಾರಕ್ಕೆ ಬರಬೇಕು ಎಂಬುದು ಪಾಕಿಸ್ತಾನದ ಕುತಂತ್ರವಾಗಿದೆ. ಇದಕ್ಕಾಗಿ ಹಿಂಸೆಗೆ ಪ್ರಚೋದನೆ ನೀಡುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: Bangladesh Protests: ಬಾಂಗ್ಲಾ ಹಿಂಸಾಚಾರದ ಹಿಂದೆ ಪಾಕ್‌ ಕೈವಾಡ; ಭಾರತದ ಜತೆ ಹಸೀನಾ ಸ್ನೇಹ ಕಾರಣ?

Continue Reading
Advertisement
Martin Trailer
ಸಿನಿಮಾ2 mins ago

Martin Trailer: ಪ್ಯಾನ್‌ ವರ್ಲ್ಸ್‌ ಮಾರ್ಟಿನ್‌ ಸಿನಿಮಾ ಟ್ರೈಲರ್‌ ಔಟ್;‌ ಪಾಕ್‌ನಲ್ಲಿ ಧ್ರುವ ಸರ್ಜಾ ಆ್ಯಕ್ಷನ್‌ಗೆ ಫ್ಯಾನ್ಸ್‌ ಫಿದಾ!

A R Rahman
ಪ್ರಮುಖ ಸುದ್ದಿ3 mins ago

A R Rahman : ಒಲಿಂಪಿಕ್ಸ್ ನಡುವೆಯೇ ವೈರಲ್ ಆಯ್ತು ಎಆರ್​ ರೆಹಮಾನ್ ಸಂಗೀತದ’ ತಾಲ್​ ಸೆ ತಾಲ್​’ ಹಾಡು; ಪ್ರತಿಕ್ರಿಯೆ ನೀಡಿದ ಚಿತ್ರ ನಿರ್ದೇಶಕ

Rescue the injured national bird Peacock at gangavathi
ಕೊಪ್ಪಳ13 mins ago

Koppala News: ವಿದ್ಯುತ್‌ ತಂತಿಗೆ ತಗುಲಿ ಗಾಯಗೊಂಡಿದ್ದ ನವಿಲಿನ ರಕ್ಷಣೆ

Free eye checkup and surgery camp at Hagaribommanahalli
ವಿಜಯನಗರ15 mins ago

Vijayanagara News: ಹಗರಿಬೊಮ್ಮನಹಳ್ಳಿಯಲ್ಲಿ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರ

KAS prelims exam
ಕರ್ನಾಟಕ18 mins ago

KAS Prelims Exam: ಕೆಎಎಸ್‌ ಪೂರ್ವಭಾವಿ ಪರೀಕ್ಷೆ ಮತ್ತೆ ಮುಂದೂಡಿಕೆ; ಆಗಸ್ಟ್‌ 27ಕ್ಕೆ ನಿಗದಿ

Golden Star Ganesh starring Krishnam Pranaya Sakhi movie release on August 15
ಕರ್ನಾಟಕ22 mins ago

Kannada New Movie: ಸೂಪರ್‌ ಹಿಟ್‌ ಹಾಡುಗಳ ʼಕೃಷ್ಣಂ ಪ್ರಣಯ ಸಖಿʼ ಬಿಡುಗಡೆ ಯಾವಾಗ?

Paris Olympics saree fashion
ಫ್ಯಾಷನ್27 mins ago

Paris Olympics Saree Fashion: ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ವೈವಿಧ್ಯಮಯ ಇಂಡೋ-ವೆಸ್ಟರ್ನ್‌ ಸೀರೆಗಳಲ್ಲಿ ಕಾಣಿಸಿಕೊಂಡ ತಾಪ್ಸಿ ಪನ್ನು!

Beetroot
ಆರೋಗ್ಯ46 mins ago

Beetroot Side Effects: ಬೀಟ್‌ರೂಟ್‌ ಎಲ್ಲರಿಗೂ ಒಳ್ಳೆಯದಲ್ಲ! ಯಾರು ಇದನ್ನು ತಿನ್ನಬಾರದು ಗೊತ್ತೇ?

Woman Harassed
ಕರ್ನಾಟಕ1 hour ago

Woman Harassed: ರಸ್ತೆಯಲ್ಲಿ ಮಹಿಳೆಯನ್ನು ಹಗ್ ಮಾಡಿ ಕಿಸ್ ಕೊಟ್ಟಿದ್ದ ಕಾಮುಕ ಅರೆಸ್ಟ್

Sexual Abuse
Latest1 hour ago

Sexual Abuse: ತನ್ನ ಸ್ನೇಹಿತನ ಜತೆ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಗೆ ಒತ್ತಡ; ಇವನೆಂಥ ಗಂಡ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

assault case
ಬೆಳಗಾವಿ1 day ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 days ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ4 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ4 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ4 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ6 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ6 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 week ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 week ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

ಟ್ರೆಂಡಿಂಗ್‌