Fact Check | 150 ರೈಲು ನಿಲ್ದಾಣಗಳನ್ನು ಖಾಸಗೀಕರಣ ಮಾಡಿತೇ ಕೇಂದ್ರ ಸರ್ಕಾರ? ರಾಹುಲ್‌ ಗಾಂಧಿ ಪ್ರಸ್ತಾಪ ನಿಜವೇ? - Vistara News

ಪ್ರಮುಖ ಸುದ್ದಿ

Fact Check | 150 ರೈಲು ನಿಲ್ದಾಣಗಳನ್ನು ಖಾಸಗೀಕರಣ ಮಾಡಿತೇ ಕೇಂದ್ರ ಸರ್ಕಾರ? ರಾಹುಲ್‌ ಗಾಂಧಿ ಪ್ರಸ್ತಾಪ ನಿಜವೇ?

ದೇಶದಲ್ಲಿ ಕೇಂದ್ರ ಸರ್ಕಾರವು 150 ರೈಲು ನಿಲ್ದಾಣಗಳನ್ನು ಖಾಸಗೀಕರಣ ಮಾಡಿದೆ ಎಂದು ರಾಹುಲ್‌ ಗಾಂಧಿ (Rahul Gandhi) ಆರೋಪಿಸಿದ್ದಾರೆ. ಹಾಗಾದರೆ ಇದು ನಿಜವೇ? ಇಲ್ಲಿದೆ Fact Check.

VISTARANEWS.COM


on

Bomb Threat for Rahul Gandhi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕೇಂದ್ರ ಸರ್ಕಾರವು ರೈಲ್ವೆ ಕ್ಷೇತ್ರವನ್ನೂ ಖಾಸಗೀಕರಣ ಮಾಡುತ್ತದೆ ಎಂಬ ಮಾತುಗಳು ಕೇಳಿಬರುತ್ತವೆ. ಇದರ ಬೆನ್ನಲ್ಲೇ “ಕೇಂದ್ರ ಸರ್ಕಾರವು ದೇಶದ 150 ರೈಲು ನಿಲ್ದಾಣಗಳನ್ನು ಖಾಸಗೀಕರಣಗೊಳಿಸಿದ್ದಾರೆ” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಟ್ವೀಟ್‌ ಮಾಡಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಆದರೆ, ರಾಹುಲ್‌ ಗಾಂಧಿ ಪ್ರಸ್ತಾಪಿಸಿದ ಅಂಶವು ಎಷ್ಟರಮಟ್ಟಿಗೆ ನಿಜ ಎಂಬ ಪ್ರಶ್ನೆ ಮೂಡಿದೆ. ಈ ಕುರಿತು ಪ್ರೆಸ್‌ ಇನ್ಫಾರ್ಮೇಷನ್‌ ಬ್ಯೂರೋ (PIB) ಫ್ಯಾಕ್ಟ್‌ಚೆಕ್‌ ಮಾಡಿದೆ.

ರಾಹುಲ್‌ ಗಾಂಧಿ ಹೇಳಿದ್ದೇನು?

ಭಾರತ್‌ ಜೋಡೋ ಯಾತ್ರೆ ಮಧ್ಯೆಯೇ ರಾಹುಲ್‌ ಗಾಂಧಿ ಅವರು ನವೆಂಬರ್‌ 12ರಂದು ಟ್ವೀಟ್‌ ಮಾಡಿದ್ದರು. “ದೇಶದ 150 ರೈಲು ನಿಲ್ದಾಣ, ರೈಲುಗಳು, ರೈಲು ಆಸ್ತಿಗಳನ್ನು ಖಾಸಗೀಕರಣಗೊಳಿಸಲಾಗಿದೆ. ಆದರೆ, ದೇಶದ ರೈಲ್ವೆ ಇಲಾಖೆಯು ನಿತ್ಯ 2.5 ಕೋಟಿ ಜನರ ಸಂಚಾರಕ್ಕೆ ನೆರವಾಗಿದೆ. ಸುಮಾರು 12 ಲಕ್ಷ ಮಂದಿಗೆ ಉದ್ಯೋಗ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ, ರೈಲ್ವೆಯು ದೇಶದ ಜನರ ಆಸ್ತಿಯಾಗಿದೆ. ದಯವಿಟ್ಟು ಇದನ್ನು ಖಾಸಗೀಕರಣಗೊಳಿಸಬೇಡಿ, ಮಾರಾಟ ಮಾಡಬೇಡಿ” ಎಂದು ಆಗ್ರಹಿಸಿದ್ದರು.

ಫ್ಯಾಕ್ಟ್‌ಚೆಕ್‌ ವರದಿ ಹೇಳುವುದೇನು?

ಪಿಐಬಿ ಫ್ಯಾಕ್ಟ್‌ಚೆಕ್‌ ಮಾಡಿದ್ದು, ಇದು ಸುಳ್ಳು ಸುದ್ದಿ ಎಂದು ಹೇಳಿದೆ. “ರೈಲ್ವೆ ಸಚಿವಾಲಯವು ರೈಲ್ವೆ ಇಲಾಖೆಯ ಯಾವುದೇ ಆಸ್ತಿಯನ್ನು ಖಾಸಗೀಕರಣಗೊಳಿಸಿಲ್ಲ. ಹಾಗಾಗಿ, ದೇಶದ 151 ರೈಲು ನಿಲ್ದಾಣ, ರೈಲು ಸೇರಿ ಹಲವು ಆಸ್ತಿಯನ್ನು ಖಾಸಗೀಕರಣ ಮಾಡಲಾಗಿದೆ ಎಂಬ ಆರೋಪವು ನಿರಾಧಾರವಾಗಿದೆ” ಎಂದು ತಿಳಿಸಿದೆ.

ಇದನ್ನೂ ಓದಿ | Fact Check | ಈರುಳ್ಳಿ ತಿನ್ನದ ನಿರ್ಮಲಾ ಸೀತಾರಾಮನ್‌ ಅವುಗಳನ್ನು ಖರೀದಿಸಿದರೇ? ಕಾಂಗ್ರೆಸ್‌ ಟ್ವೀಟ್‌ನ ಮರ್ಮವೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Jan Aushadhi: ಪ್ರಯಾಣಿಕರಿಗೆ ಗುಡ್‌ ನ್ಯೂಸ್; ರೈಲು ನಿಲ್ದಾಣಗಳಲ್ಲೂ ಸಿಗಲಿವೆ ಕಡಿಮೆ ಬೆಲೆಗೆ ಔಷಧ!

Jan Aushadhi: ರೈಲು ನಿಲ್ದಾಣಗಳನ್ನು ಮತ್ತಷ್ಟು ಪ್ರಯಾಣಿಕರ ಸ್ನೇಹಿಯಾಗಿ ರೂಪಿಸಲು ರೈಲ್ವೆ ಇಲಾಖೆಯು ಚಿಂತನೆ ನಡೆಸಿದೆ. ಅದರಲ್ಲೂ, ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ದೇಶಾದ್ಯಂತ ನಿರ್ಮಿಸಲಾಗಿದ್ದು, ಕಡಿಮೆ ಬೆಲೆಗೆ ಔಷಧಗಳನ್ನು ಮಾರಾಟ ಮಾಡಲಾಗುತ್ತಿದೆ. ಈಗ ರೈಲು ನಿಲ್ದಾಣಗಳಲ್ಲೂ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ರೈಲ್ವೆ ಇಲಾಖೆಯು ಚಿಂತನೆ ನಡೆಸಿದೆ.

VISTARANEWS.COM


on

Jan Aushadhi
Koo

ನವದೆಹಲಿ: ರೈಲುಗಳಲ್ಲಿ ಪ್ರಯಾಣ ಮಾಡುವಾಗ ಊಟ, ತಿಂಡಿ, ಪಾನೀಯಗಳ ಪೂರೈಕೆಯಾಗುತ್ತದೆ. ಆದರೆ, ತುರ್ತು ಸಂದರ್ಭಗಳಲ್ಲಿ ರೈಲು ನಿಲ್ದಾಣಗಳಲ್ಲಿ ಮೆಡಿಕಲ್‌ ಶಾಪ್‌ಗಳು ಸಿಗದೆ, ಔಷಧ ಸಿಗದೆ ರೈಲು ಪ್ರಯಾಣಿಕರು ತೊಂದರೆ ಅನುಭವಿಸುತ್ತಾರೆ. ದಿಢೀರನೆ ಜ್ವರ, ತಲೆನೋವು ಕಾಣಿಸಿಕೊಂಡರೆ ಔಷಧಗಳಿಗಾಗಿ ಪರದಾಡಬೇಕಾಗುತ್ತದೆ. ಇದನ್ನು ಮನಗಂಡಿರುವ ಕೇಂದ್ರ ಸರ್ಕಾರವು, ದೇಶಾದ್ಯಂತ ರೈಲು ನಿಲ್ದಾಣಗಳಲ್ಲಿ (Railway Stations) 100 ಜನೌಷಧಿ ಕೇಂದ್ರಗಳನ್ನು (Jan Aushadhi Kendra) ಸ್ಥಾಪಿಸಲು ತೀರ್ಮಾನಿಸಿದೆ. ಇದರಿಂದ ರೈಲ್ವೆ ಪ್ರಯಾಣಿಕರಿಗೆ ಭಾರಿ ಅನುಕೂಲವಾಗಲಿದೆ.

ಹೌದು, ರೈಲು ನಿಲ್ದಾಣಗಳನ್ನು ಮತ್ತಷ್ಟು ಪ್ರಯಾಣಿಕರ ಸ್ನೇಹಿಯಾಗಿ ರೂಪಿಸಲು ರೈಲ್ವೆ ಇಲಾಖೆಯು ಚಿಂತನೆ ನಡೆಸಿದೆ. ಅದರಲ್ಲೂ, ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ದೇಶಾದ್ಯಂತ ನಿರ್ಮಿಸಲಾಗಿದ್ದು, ಕಡಿಮೆ ಬೆಲೆಗೆ ಔಷಧಗಳನ್ನು ಮಾರಾಟ ಮಾಡಲಾಗುತ್ತಿದೆ. ರೈಲು ನಿಲ್ದಾಣಗಳಲ್ಲೂ ಜನೌಷಧಿ ಕೇಂದ್ರಗಳನ್ನು ನಿರ್ಮಿಸುವುದರಿಂದ ಪ್ರಯಾಣಿಕರಿಗೆ ಸುಲಭವಾಗಿ ರೈಲು ನಿಲ್ದಾಣಗಳಲ್ಲಿ ಔಷಧ ಸಿಗುವ ಜತೆಗೆ ಹಣವೂ ಉಳಿತಾಯವಾಗಲಿದೆ.

50 ರೈಲು ನಿಲ್ದಾಣಗಳ ನಿಗದಿ

“ಆರಂಭಿಕ ಹಂತದಲ್ಲಿ ದೇಶಾದ್ಯಂತ 100ಕ್ಕೂ ಅಧಿಕ ರೈಲು ನಿಲ್ದಾಣಗಳಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವ ಗುರಿ ಹೊಂದಿರುವ ರೈಲ್ವೆ ಇಲಾಖೆಯು ಈಗಾಗಲೇ 50 ರೈಲು ನಿಲ್ದಾಣಗಳನ್ನು ಗುರುತಿಸಿದೆ. ರೈಲು ನಿಲ್ದಾಣದಲ್ಲಿ ಒಂದು ಜನೌಷಧಿ ಕೇಂದ್ರವನ್ನು ಸ್ಥಾಪಿಸಲು ಸುಮಾರು 12.53 ಲಕ್ಷ ರೂ. ಬೇಕಾಗುತ್ತದೆ. ಇನ್ನೂ 61 ರೈಲು ನಿಲ್ದಾಣಗಳನ್ನು ನಿಗದಿಪಡಿಸಬೇಕಿದೆ. ಮೊದಲು ರೈಲು ನಿಲ್ದಾಣಗಳನ್ನು ಗುರುತಿಸಿ, ಬಳಿಕ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವವರಿಗೆ ಪರವಾನಗಿ ನೀಡಲಾಗುತ್ತದೆ” ಎಂದು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

“ರೈಲು ನಿಲ್ದಾಣಗಳಲ್ಲಿ ಜನೌಷಧಿ ಕೇಂದ್ರಗಳನ್ನು ಸ್ಥಾಪಿಸುವುದರಿಂದ ಲಕ್ಷಾಂತರ ಪ್ರಯಾಣಿಕರಿಗೆ ಹಾಗೂ ರೈಲು ನಿಲ್ದಾಣಕ್ಕೆ ಭೇಟಿ ನೀಡುವವರಿಗೆ ಕಡಿಮೆ ಬೆಲೆಗೆ ಔಷಧಗಳು ಸಿಗುತ್ತವೆ. ಹಾಗೆಯೇ, ಜನರಿಗೆ ಗುಣಮಟ್ಟದ ಔಷಧಗಳು ದೊರೆಯುವ ಜತೆಗೆ ಉದ್ಯೋಗ ಸೃಷ್ಟಿಯಾಗುತ್ತದೆ. ಉದ್ಯಮಿಗಳು ಜನೌಷಧಿ ಕೇಂದ್ರಗಳನ್ನು ಸ್ಥಾಪಿಸಲು ಸಾಧ್ಯವಾಗುತ್ತದೆ” ಎಂದು ಅಧಿಕಾರಿಯು ತಿಳಿಸಿದ್ದಾರೆ. ಇತ್ತೀಚಿನ ವರದಿಗಳ ಪ್ರಕಾರ, ದೇಶದಲ್ಲಿ 10 ಸಾವಿರಕ್ಕೂ ಅಧಿಕ ಜನೌಷಧಿ ಕೇಂದ್ರಗಳಿದ್ದು, ಸಾವಿರಾರು ಔಷಧಿಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ.

ಇದನ್ನೂ ಓದಿ: Gratuity: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್;‌ ಗ್ರಾಚ್ಯುಟಿ, ಶಿಕ್ಷಣ ಭತ್ಯೆ ಶೀಘ್ರವೇ 25% ಹೆಚ್ಚಳ!

Continue Reading

ಚಿಕ್ಕಮಗಳೂರು

Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

Prajwal Revanna Case: ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ ಎಂದು ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ. ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case HD Kumaraswamy King of Blackmail and DK Shivakumar is back
Koo

ಚಿಕ್ಕಮಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣವು (Hassan Pen Drive Case) ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ನಡುವೆ ಭಾರಿ ವಾಕ್ಸಮರಕ್ಕೆ ಕಾರಣವಾಗಿದೆ. ಆರೋಪ – ಪ್ರತ್ಯಾರೋಪಗಳು ತಾರಕಕ್ಕೇರಿವೆ. ಮಂಗಳವಾರವಷ್ಟೇ ಸುದ್ದಿಗೋಷ್ಠಿ ನಡೆಸಿದ್ದ ಎಚ್‌ಡಿಕೆ, ಸಂಪುಟದಿಂದ ಡಿಕೆಶಿ ವಜಾಕ್ಕೆ ಆಗ್ರಹಿಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಡಿ.ಕೆ. ಶಿವಕುಮಾರ್‌, ಕುಮಾರಸ್ವಾಮಿ ಅವರು “ಕಿಂಗ್ ಆಫ್ ಬ್ಲ್ಯಾಕ್‌ಮೇಲ್” ಎಂದು ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌, ಎಚ್.ಡಿ. ಕುಮಾರಸ್ವಾಮಿ ಅವರ ಕೆಲಸ ಮುಗಿಸೋದೇ ಅಲ್ವಾ? ಅವರು ಕಿಂಗ್ ಆಫ್ ಬ್ಲ್ಯಾಕ್‌ಮೇಲ್. ‌ಅಧಿಕಾರಿಗಳು, ರಾಜಕಾರಣಿಗಳನ್ನು ಹೆದರಿಸುತ್ತಿದ್ದಾರೆ. ಅವರದು ಇದೇ ಕೆಲಸವಾಗಿದೆ. ಈ ಎಲ್ಲ ವಿಷಯಗಳ ಬಗ್ಗೆ ಚರ್ಚೆ ಮಾಡಲು ಟೈಮ್ ಇದೆ. ಅಸೆಂಬ್ಲಿಯೂ ಇದೆ. ಎಲ್ಲವನ್ನೂ ತಗೊಂಡ್ ಬರ್ಲಿ ಚರ್ಚೆ ಮಾಡೋಣ ಎಂದು ಸವಾಲು ಹಾಕಿದರು.

ಮೊದಲು ಅವರ ಹೆಸರು ಸ್ಟ್ಯಾಂಡ್ ಆಗಲಿ, ದೇವೇಗೌಡರು ನನ್ನ ಹೆಸರು ತೆಗೆದುಕೊಳ್ಳುವುದು ಬೇಡ ಅಂದರು. ಅವರದ್ದೇ ಬೇರೆ ಫ್ಯಾಮಿಲಿ, ನಮ್ಮದೇ ಬೇರೆ ಫ್ಯಾಮಿಲಿ ಎಂದಿದ್ದಾರೆ. ಉಪ್ಪು ತಿಂದವನು ನೀರು ಕುಡಿಯಬೇಕು ಎಂದವರು ಈಗ ಯಾಕೆ ಉರಿ ಮಾಡಿಕೊಳ್ಳುತ್ತಿದ್ದಾರೆ? ಎಂದು ಡಿ.ಕೆ. ಶಿವಕುಮಾರ್‌ ಪ್ರಶ್ನೆ ಮಾಡಿದರು.

ರೆಸ್ಟ್‌ ಮಾಡಲು ಬಂದಿದ್ದೇನೆ

ಚುನಾವಣೆ ಮುಗಿಯಿತು. ನಾನೀಗ ಸಿದ್ದಾರ್ಥ್ ಮನೆಗೆ ರೆಸ್ಟ್ ಮಾಡಲು ಬಂದಿದ್ದೇನೆ. ಪೆನ್‌ಡ್ರೈವ್ ವಿಚಾರ ಎಲ್ಲವೂ ಕುಮಾರಸ್ವಾಮಿಗೆ ಗೊತ್ತು. ಕುಮಾರಣ್ಣನಿಗೆ ನನ್ನ ರಾಜೀನಾಮೆ ಬೇಕಂತೆ. ಒಕ್ಕಲಿಗ ನಾಯಕರ ಪೈಪೋಟಿಯಂತೆ, ರಾಜೀನಾಮೆ ಬೇಕಂತೆ ಕೊಡೋಣ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಹೋಗಿ ವಾದ ಮಾಡಲಿ

ಇವರು ವಕೀಲರಾ? ನ್ಯಾಯಾಧೀಶರಾ? ಹೋಗಿ ವಾದ ಮಾಡಲಿ. ಶಿವಕುಮಾರ್, ಸಿದ್ದರಾಮಯ್ಯ, ಸುರ್ಜೆವಾಲ ಇನ್ವೆಸ್ಟಿಗೇಷನ್ ಟೀಮ್ ಎಂದು ಹೇಳುತ್ತಾರೆ. ಆದರೆ, ಈ ಪ್ರಕರಣದ ಕಥಾ ನಾಯಕ, ಡೈರೆಕ್ಟರ್, ಪ್ರೊಡ್ಯೂಸರ್ ಎಲ್ಲವೂ ಇವರೇ ಆಗಿದ್ದಾರೆ. ಎಲ್ಲವೂ ಗೊತ್ತಿದೆ. ಅವರ ಕಾರ್ಯಕರ್ತರು ಅಂತೆ, ಮರ್ಯಾದೆ ಇದ್ದರೆ ಹೋಗಿ ಧೈರ್ಯ ತುಂಬಲಿ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಇದನ್ನೂ ಓದಿ: Prajwal Revanna Case: ವಿಡಿಯೋ ಕಿಂಗ್‌ಪಿನ್‌ ಕಾರ್ತಿಕ್‌ ಕಾಂಗ್ರೆಸ್‌ ಅಭ್ಯರ್ಥಿ ಜೊತೆ ಕ್ಲೋಸ್;‌ ʼಕೈʼವಾಡಕ್ಕೆ ಸಾಕ್ಷಿ ಫೋಟೋಗಳು ಇಲ್ಲಿವೆ!

ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ

ನನ್ನ ಮೇಲೆ ಆರೋಪ ಮಾಡದಿದ್ದರೆ ಎಚ್.ಡಿ. ಕುಮಾರಸ್ವಾಮಿಗೆ ಮಾರ್ಕೆಟ್‌ ಓಡಲ್ಲ. ನನ್ನ ಹೆಸರು ಇರದಿದ್ದರೆ ನೀವು ಮಾಧ್ಯಮದಲ್ಲಿ ತೋರಿಸಲಲ್ಲ. ನನ್ನ ಹೆಸರು ಇಲ್ಲದಿದ್ರೆ ಪಾಪ ಅವರಿಗೆ ನಿದ್ದೆಯೇ ಬರಲ್ಲ. ಮೋರ್‌ ಸ್ಟ್ರಾಂಗ್‌ ಮೋರ್‌ ಎನಿಮಿ, ಲೆಸ್‌ ಸ್ಟ್ರಾಂಗ್‌ ಲೆಸ್‌ ಎನಿಮಿ ಎಂದು ಡಿ.ಕೆ. ಶಿವಕುಮಾರ್‌ ಮಾರ್ಮಿಕವಾಗಿ ನುಡಿದರು.

Continue Reading

ದೇಶ

Narendra Modi: ಅಂಬಾನಿ, ಅದಾನಿಯಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ; ಮೋದಿ ತಿರುಗುಬಾಣ!

Narendra Modi: ಕಾಂಗ್ರೆಸ್‌ ಮಹಾರಾಜ (ರಾಹುಲ್‌ ಗಾಂಧಿ) ಈಗ ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಅವರ ಬಗ್ಗೆ ಮಾತನಾಡುತ್ತಿಲ್ಲ. ಏಕೆಂದರೆ, ಚುನಾವಣೆಗಾಗಿ ಉದ್ಯಮಿಗಳಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಕಾಳಧನವನ್ನು ಕಾಂಗ್ರೆಸ್‌ಗೆ ನೀಡಲಾಗಿದೆ ಎಂದು ರಾಹುಲ್‌ ಗಾಂಧಿ ವಿರುದ್ಧ ನರೇಂದ್ರ ಮೋದಿ ಅವರು ತೆಲಂಗಾಣದ ರ‍್ಯಾಲಿಯಲ್ಲಿ ವಾಗ್ದಾಳಿ ನಡೆಸಿದರು.

VISTARANEWS.COM


on

Narendra Modi
Koo

ಹೈದರಾಬಾದ್:‌ ಲೋಕಸಭೆ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿ ಹಲವು ನಾಯಕರ ಭಾಷಣಗಳು, ಆರೋಪಗಳು, ವಾಗ್ದಾಳಿಗಳು ತೀಕ್ಷ್ಣ ಸ್ವರೂಪ ಪಡೆದಿವೆ. ಇನ್ನು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಂತೂ ಮುಕೇಶ್‌ ಅಂಬಾನಿ (Mukesh Ambani), ಗೌತಮ್‌ ಅದಾನಿ (Gautam Adani) ಹೆಸರು ಪ್ರಸ್ತಾಪಿಸಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಆದರೆ, ಮೋದಿ ಈಗ ಅಂಬಾನಿ, ಅದಾನಿ ಹೆಸರು ಹೇಳಿಕೊಂಡೇ ಕಾಂಗ್ರೆಸ್‌ಗೆ ತಿರುಗೇಟು ನೀಡಿದ್ದಾರೆ. “ಚುನಾವಣೆಗಾಗಿ ಕಾಂಗ್ರೆಸ್‌ಗೆ ಅಂಬಾನಿ ಹಾಗೂ ಅದಾನಿಯಿಂದ ಟೆಂಪೋಗಟ್ಟಲೆ ಹಣ ಸಂದಾಯವಾಗಿದೆ” ಎಂದು ತಿರುಗುಬಾಣ ಬಿಟ್ಟಿದ್ದಾರೆ.

ತೆಲಂಗಾಣದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ರಾಹುಲ್‌ ಗಾಂಧಿ ಅವರಿಗೆ ತಿರುಗೇಟು ನೀಡಿದರು. “ಕಾಂಗ್ರೆಸ್‌ ಮಹಾರಾಜ (ರಾಹುಲ್‌ ಗಾಂಧಿ) ಈಗ ಮುಕೇಶ್‌ ಅಂಬಾನಿ ಹಾಗೂ ಗೌತಮ್‌ ಅದಾನಿ ಅವರ ಬಗ್ಗೆ ಮಾತನಾಡುತ್ತಿಲ್ಲ. ಏಕೆಂದರೆ, ಚುನಾವಣೆಗಾಗಿ ಉದ್ಯಮಿಗಳಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಕಾಳಧನವನ್ನು ಕಾಂಗ್ರೆಸ್‌ಗೆ ನೀಡಲಾಗಿದೆ. ಇದೇ ಕಾರಣಕ್ಕಾಗಿ ರಾಹುಲ್‌ ಗಾಂಧಿ ಅವರು ಅಂಬಾನಿ, ಅದಾನಿ ಬಗ್ಗೆ ಈಗ ಮಾತನಾಡುತ್ತಿಲ್ಲ” ಎಂದು ಟೀಕಿಸಿದರು.

“ಕಳೆದ ಐದು ವರ್ಷಗಳಿಂದ ರಾಹುಲ್‌ ಗಾಂಧಿ ಅವರು ನಮ್ಮ ವಿರುದ್ಧ ಆರೋಪಗಳನ್ನು ಮಾಡುತ್ತಲೇ ಇದ್ದರು. ರಾಫೆಲ್‌ ವಿಚಾರವಾಗಿ ಮಾಡಿದ ಆರೋಪವು ನೆಲಕಚ್ಚಿತು. ಅದಾದ ಬಳಿಕ ಐವರು ಉದ್ಯಮಿಗಳು, ಐವರು ಉದ್ಯಮಿಗಳು ಎಂದು ಪರೋಕ್ಷ ಆರೋಪ ಶುರುವಿಟ್ಟುಕೊಂಡರು. ಅದಾದ ಬಳಿಕ ಅಂಬಾನಿ-ಅದಾನಿ ಎಂದು ನೇರವಾಗಿ ಆರೋಪ ಮಾಡಿದರು. ಆದರೆ, ಚುನಾವಣೆ ಘೋಷಣೆಯಾಗುತ್ತಲೇ ರಾಹುಲ್‌ ಗಾಂಧಿ ಅವರು ಅಂಬಾನಿ ಹಾಗೂ ಅದಾನಿ ಹೆಸರೇ ಎತ್ತುತ್ತಿಲ್ಲ. ರಾಹುಲ್‌ ಗಾಂಧಿ ಏಕೆ ಈಗ ರಾತ್ರೋರಾತ್ರಿ ಬದಲಾದರು? ಏಕೆ ಅವರು ಅಂಬಾನಿ-ಅದಾನಿ ಹೆಸರು ಹೇಳುತ್ತಿಲ್ಲ” ಎಂದು ಪ್ರಶ್ನಿಸಿದರು.

ಅಂಬಾನಿ-ಅದಾನಿ ಹೆಸರಿಟ್ಟುಕೊಂಡು ಟೀಕೆ ಮಾಡುತ್ತಿದ್ದ ರಾಹುಲ್‌ ಗಾಂಧಿ ಅವರಿಗೆ ಈಗ ಮೋದಿ ಅವರು ಉದ್ಯಮಿಗಳ ಹೆಸರು ಪ್ರಸ್ತಾಪಿಸಿಯೇ ಟೀಕಿಸಿದ್ದಾರೆ. “ನರೇಂದ್ರ ಮೋದಿ ಅವರು ಕೆಲವು ಉದ್ಯಮಿಗಳಿಗೆ ಮಾತ್ರ ನೆರವು ನೀಡುತ್ತಾರೆ. ಅವರಿಗಾಗಿಯೇ ಅವರು ಆಡಳಿತ ಮಾಡುತ್ತಾರೆ. ಕೇಂದ್ರ ಸರ್ಕಾರದ ಹಣವು ಅಂಬಾನಿ-ಅದಾನಿಗೆ ಮಾತ್ರ ಹೋಗುತ್ತದೆ. ಬಡವರಿಗೆ ಮೋದಿ ಸರ್ಕಾರದಿಂದ ಯಾವುದೇ ಉಪಯೋಗವಿಲ್ಲ” ಎಂದು ರಾಹುಲ್‌ ಗಾಂಧಿ ಆರೋಪಿಸುತ್ತಿದ್ದರು.

ಇದನ್ನೂ ಓದಿ: PM Modi: ರಾಮಮಂದಿರಕ್ಕೆ ಕಾಂಗ್ರೆಸ್‌ ಬೀಗ ಹಾಕಬಾರದು ಎಂದರೆ ನಮಗೆ 400 ಸೀಟು ಕೊಡಿ ಎಂದ ಮೋದಿ

Continue Reading

ಕರ್ನಾಟಕ

State Education Policy: 3 ವರ್ಷದ ಪದವಿಗೆ ರಾಜ್ಯ ಸರ್ಕಾರ ಅಸ್ತು; ಎಸ್‌ಇಪಿ ಆಯೋಗದ ಶಿಫಾರುಸುಗಳ ಅನ್ವಯ ಆದೇಶ

State Education Policy: 2024-25ನೇ ಶೈಕ್ಷಣಿಕ ಸಾಲಿನಿಂದ ಪದವಿ ಕಾರ್ಯಕ್ರಮಗಳಿಗೆ ಸಂಬಂಧಪಟ್ಟಂತೆ ರಾಜ್ಯ ಶಿಕ್ಷಣ ನೀತಿ ಆಯೋಗವು ನೀಡಿರುವ ಮಧ್ಯಂತರ ವರದಿಗಳ ಶಿಫಾರಸುಗಳ ಅನ್ವಯ ಪದವಿ ಅವಧಿ ಹಾಗೂ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

VISTARANEWS.COM


on

State Education Policy
Koo

ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗದ (State Education Policy) ಮಧ್ಯಂತರ ವರದಿ ಅನ್ವಯ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ವರದಿಯ ಶಿಫಾರಸುಗಳ ಆಧಾರದ ಮೇಲೆ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ಕೆಲ ಮಾರ್ಪಾಡು ಮಾಡಲಾಗಿದೆ. ಇದರಲ್ಲಿ ಪ್ರಮುಖವಾಗಿ 4 ವರ್ಷಗಳ ಪದವಿಯನ್ನು ಕೈಬಿಟ್ಟು, ಈ ಹಿಂದೆ ಇದ್ದ ಮೂರು ವರ್ಷಗಳ ಪದವಿಯನ್ನೇ ಮುಂದುವರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದ ಉನ್ನತ ಶಿಕ್ಷಣ ಇಲಾಖೆಯಡಿ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ವರ್ಷದಿಂದ ಅಗತ್ಯ ಮಾರ್ಗಸೂಚಿಗಳನುಸಾರ ಅನುಷ್ಠಾನಗೊಳಿಸಲಾಗಿತ್ತು. ಚುನಾವಣಾ ಪೂರ್ವದಲ್ಲಿ ಎನ್‌ಇಪಿ ರದ್ದು ಪಡಿಸುವುದಾಗಿ ಘೋಷಿಸಿದ್ದ ಕಾಂಗ್ರೆಸ್‌, ಅಧಿಕಾರಕ್ಕೆ ಬಂದ ಆರಂಭದಲ್ಲಿ ಪ್ರೊ. ಸುಖ್‌ದೇವ್‌ ಥೋರಟ್‌ ನೇತೃತ್ವದಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗ ರಚಿಸಿತ್ತು. ಆಯೋಗವು ಇತ್ತೀಚೆಗೆ ಸಲ್ಲಿಸಿದ ಮಧ್ಯಂತರ ವರದಿಯ ಶಿಫಾರಸುಗಳ ಅನ್ವಯ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ರಾಜ್ಯ ಸರ್ಕಾರ ಕೆಲ ಮಾರ್ಪಾಡುಗಳನ್ನು ಮಾಡಿದೆ.

ಆದೇಶದಲ್ಲಿ ಏನಿದೆ?

ರಾಜ್ಯದ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣವನ್ನು ಸೂಕ್ಷ್ಮವಾಗಿ ಪರಾಮರ್ಶಿಸಿ ಶಿಕ್ಷಣ ನೀತಿಯನ್ನು ರೂಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರವು ಪ್ರೊ.ಸುಖದೇವ್ ಥೋರಟ್ ರವರ ಅಧ್ಯಕ್ಷತೆಯಲ್ಲಿ ಆಯೋಗ ರಚಿಸಿರುತ್ತದೆ. ಈ ನೀತಿಯು ರಾಜ್ಯದ ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ನೋಂದಣಿಯನ್ನು ವೃದ್ಧಿಸಲು, ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಲು, ಪ್ರತಿಯೊಬ್ಬರಿಗೂ ಗುಣಾತ್ಮಕ ಶಿಕ್ಷಣದಲ್ಲಿ ಸಮಾನ ಅವಕಾಶ ಕಲ್ಪಿಸಲು, ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಜ್ಞಾನವನ್ನು ಸದೃಢಗೊಳಿಸಲು, ಶಾಲಾ ಹಾಗೂ ಉನ್ನತ ಶಿಕ್ಷಣವನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಉದ್ಯೋಗವಕಾಶವನ್ನು ಕಲ್ಪಿಸಲು ಮತ್ತು ಪ್ರಜಾಸತ್ತಾತ್ಮಕ ಮತ್ತು ನಾಗರೀಕ/ನೈತಿಕ ಮೌಲ್ಯಗಳನ್ನು ಬೆಳೆಸುವ ಗುರಿ ಹೊಂದಿದೆ.

ಇದನ್ನೂ ಓದಿ | Press Freedom: ಚೀನಾ ಸೇರಿದಂತೆ ಈ ದೇಶಗಳು ಪತ್ರಕರ್ತರಿಗೆ ಸುರಕ್ಷಿತವಲ್ಲ

ಆಯೋಗವು ಆಗಸ್ಟ್ 2024ರಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಿದ್ದು, ಪ್ರಸ್ತುತ ಕೆಲವು ಶಿಫಾರಸುಗಳೊಂದಿಗೆ ಮಧ್ಯಂತರ ವರದಿ ಸಲ್ಲಿಸಿದೆ. ಸರ್ಕಾರವು ಆಗಸ್ಟ್ 2021ರಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕಾಗಿ ಆದೇಶವನ್ನು ಹೊರಡಿಸಿತ್ತು. ರಾಜ್ಯ ಶಿಕ್ಷಣ ನೀತಿ ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳ ಆಧಾರದ ಮೇಲೆ ಪದವಿ ಅವಧಿ ಮತ್ತು ಪಠ್ಯಕ್ರಮ ರಚನೆಯಲ್ಲಿ ಕೆಲವೊಂದು ಮಾರ್ಪಾಡುಗಳನ್ನು ಸೂಚಿಸಿದೆ.

ರಾಜ್ಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪದವಿ ಕೋರ್ಸ್‌ಗಳಿಗೆ ಸಂಯೋಜನೆ ಹಾಗೂ ಪ್ರವೇಶಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ಉದ್ದೇಶಿಸಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಯಾವುದೇ ವಿಳಂಬವಿಲ್ಲದೆ ಈ ಪ್ರಕ್ರಿಯೆಯನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಲಾಗುವುದು. 2024-25ರ ಶೈಕ್ಷಣಿಕ ಸಾಲಿಗೆ ಸಂಬಂಧಿಸಿದಂತೆ ಕೆಳಕಂಡಂತೆ ಕೆಲವು ಬದಲಾವಣೆಗಳನ್ನು ಪ್ರಸ್ತಾಪಿಸಲಾಗಿದೆ.

2024-25ನೇ ಶೈಕ್ಷಣಿಕ ವರ್ಷಕ್ಕೆ ಕಾಲಾವಧಿ ಮತ್ತು ಪಠ್ಯಕ್ರಮದಲ್ಲಿ ಪ್ರಸ್ತಾಪಿಸಲಾಗಿರುವ ಬದಲಾವಣೆಗಳು:

ಆಯೋಗದ ಮಧ್ಯಂತರ ವರದಿಯ ಶಿಫಾರಸುಗಳನ್ನು ಆಧರಿಸಿ, ಸರ್ಕಾರವು ಉನ್ನತ ಶಿಕ್ಷಣದ ಪದವಿ ಕಾರ್ಯಕ್ರಮದಲ್ಲಿ ಮತ್ತು ಎಲ್ಲ ಸಾರ್ವಜನಿಕ ವಿಶ್ವವಿದ್ಯಾಲಯಗಳ ಹಾಗೂ ಸಂಯೋಜಿತ ಕಾಲೇಜುಗಳ ಪಠ್ಯಕ್ರಮದಲ್ಲಿ ಕೆಳಕಂಡ ಬದಲಾವಣೆಗಳನ್ನು ತರಲು ಉದ್ದೇಶಿಸಿದೆ.

1.ಪದವಿ ಕಾರ್ಯಕ್ರಮದ ಕಾಲಾವಧಿ: ಸ್ನಾತಕ ಪದವಿ ಕಾರ್ಯಕ್ರಮದ ಕಾಲಾವಧಿ ಕೇವಲ 3 ವರ್ಷಗಳು ಮಾತ್ರ ಆಗಿದ್ದು, ನಾಲ್ಕು ವರ್ಷದ ಪದವಿ ಕಾರ್ಯಕ್ರಮವನ್ನು ಪ್ರಾರಂಭಿಸುವ ಆಯ್ಕೆ ಇರುವುದಿಲ್ಲ. ಈ ಮೊದಲು ನಾಲ್ಕು ವರ್ಷದ ಪದವಿಯು ಆಯ್ಕೆಯಾಗಿತ್ತು.
2. ಮೂರು ವರ್ಷಗಳ ಪದವಿ ಕಾರ್ಯಕ್ರಮಕ್ಕೆ ಪಠ್ಯಕ್ರಮದ ಸ್ವರೂಪ: ಮೂರು ಬೇರೆಬೇರೆ ಪದವಿ ಪಠ್ಯಕ್ರಮದ ಚೌಕಟ್ಟುಗಳನ್ನು (CFW) ಪ್ರಸ್ತಾಪಿಸಿ ಅಂಗೀಕರಿಸಲಾಗಿದ್ದು, ಅವು ಈ ಕೆಳಗಿನಂತಿವೆ:

a. ಎಲ್ಲ 6 ಸೆಮಿಸ್ಮರ್‌ಗಳಲ್ಲಿ 3 ಮೇಜರ್‌ಗಳೊಡನೆ ಸಾಮಾನ್ಯ ಪದವಿ, ಅಥವಾ
b. 4ನೇ ಸೆಮಿಸ್ಟರ್ ವರೆಗೆ 3 ಮೇಜರ್ ಗಳು ಮತ್ತು 5 ಹಾಗೂ 6ನೇ ಸೆಮಿಸ್ಟರ್ ಗಳಲ್ಲಿ 1 Subject ನಲ್ಲಿ ವಿಶೇಷಜ್ಞತೆ (Specialization).
c. ಮೊದಲನೇ ಸೆಮಿಸ್ಟರ್ ನಿಂದ ಮೈನರ್ Subject ಗಳ ಜೊತೆಗೆ 1 Subject ನಲ್ಲಿ ವಿಶೇಷತೆ (Specialization) (ಉದಾ: ಬಿ.ಕಾಂ, ಬಿಬಿಎ, ಬಿಸಿಎ, ಬಿಎ/ಬಿಎಸ್ಸಿ) ಪಠ್ಯಕ್ರಮದ ವಿವರಗಳನ್ನು ಲಗತ್ತಿಸಲಾಗಿದೆ.

3.ಬಹು ಆಗಮನ/ನಿರ್ಗಮನ ಮೊದಲನೇ ವರ್ಷದ ನಂತರ ಸರ್ಟಿಫಿಕೇಟ್ ನೀಡುವ ಹಾಗೂ ಎರಡನೇ ವರ್ಷದ ನಂತರ ಡಿಪ್ಲೊಮಾ ನೀಡುವ (ಬಹು ಆಗಮನ/ನಿರ್ಗಮನು ಕುರಿತು, ಅಂತಿಮ ವರದಿ ಸಲ್ಲಿಕೆಯಾದ ನಂತರ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ಆದರೆ ಈ ಹಂತದಲ್ಲಲ್ಲ.
4. ಪಠ್ಯಕ್ರಮ ರಚನೆಯಲ್ಲಿನ ಬದಲಾವಣೆಯ ಮೂಲಕ ಆಳವಾದ ಜ್ಞಾನ ಔದ್ಯಮಿಕ ಆಧಾರಿತ ಕೋರ್ಸ್‌ಗಳನ್ನು ಮತ್ತು ಪ್ರಾದೇಶಿಕ ನಿರ್ದಿಷ್ಟ ವಿಷಯಗಳನ್ನು ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಗೆ ಸ್ವಾಯತ್ತತೆಯನ್ನು ನೀಡುವುದನ್ನು 5. Apprenticeship-embedded degree courses ಸಹ ಪಠ್ಯಕ್ರಮದ ಭಾಗವಾಗಿ ಪರಿಗಣಿಸಲಾಗಿದೆ.

ಪ್ರಸ್ತುತ ಚಾಲ್ತಿಯಲ್ಲಿರುವ ತಂಡಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ

ಈ ಬದಲಾವಣೆಗಳು 2021-22, 2022-23, 2023-24 ನೇ ವರ್ಷಗಳಲ್ಲಿ ಪ್ರವೇಶಾತಿ ಪಡೆದ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಪದವಿ ಕಾರ್ಯಕ್ರಮಗಳಿಗೆ 2021-22, 2022-23 ಮತ್ತು 2023-24 ನೇ ಶೈಕ್ಷಣಿಕ ವರ್ಷಗಳಲ್ಲಿ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ಕಾಲಾವಧಿ ಹಾಗೂ ಪಠ್ಯಕ್ರಮದ ಕುರಿತು ಸದ್ಯಕ್ಕೆ ಜಾರಿಯಲ್ಲಿರುವ ಸರ್ಕಾರದ ಆದೇಶ ಸಂಖ್ಯೆ: ಇಡಿ 260 ಯುಎನ್‌ಇ 2019 (ಭಾಗ-1), ದಿನಾಂಕ: 07-08-2021ರ ಅನುಸಾರವಾಗಿಯೇ ವಿದ್ಯಾಭ್ಯಾಸ ಮಾಡುತ್ತಾರೆ.

ಘೋಷಣೆ ಮಾಡಲ್ಪಟ್ಟಿರುವ ಬದಲಾವಣೆಗಳು ಶೈಕ್ಷಣಿಕ ವರ್ಷ 2024-25ರಿಂದ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ.

ಇದನ್ನೂ ಓದಿ | Job Alert: ನವೋದಯ ವಿದ್ಯಾಲಯ ಸಮಿತಿಯಿಂದ 1,377 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮೇ 7ರೊಳಗೆ ಅಪ್ಲೈ ಮಾಡಿ

2024-25ನೇ ಸಾಲಿನ ಸಂಯೋಜನೆ ಮತ್ತು ಪ್ರವೇಶಾತಿ ಪ್ರಕ್ರಿಯೆಗಳು

ವಿಶ್ವವಿದ್ಯಾಲಯಗಳಿಗೆ ಸಂಯೋಜನಾ ಪ್ರಕ್ರಿಯೆ ಮತ್ತು ಪ್ರವೇಶಾತಿಗಳು ಈ ಕೂಡಲೇ ಪ್ರಾರಂಭಗೊಳ್ಳುತ್ತವೆ. ಸರ್ಕಾರದ ಆದೇಶದಂತೆ ಪ್ರವೇಶಾತಿ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಈ ಕುರಿತು ಈಗಾಗಲೇ ಎಲ್ಲ ವಿಶ್ವವಿದ್ಯಾಲಯಗಳಿಗೆ ಮಾಹಿತಿ ನೀಡಲಾಗಿದ್ದು, ಕಾಲೇಜುಗಳಿಗೆ ಸ್ಪಷ್ಟಿಕರಣ ಬೇಕಾದಲ್ಲಿ ತಮ್ಮ ಸಂಯೋಜಕ ವಿಶ್ವವಿದ್ಯಾಲಯಗಳನ್ನು ಕೇಳಬಹುದಾಗಿದೆ. 2024-25ನೇ ಶೈಕ್ಷಣಿಕ ಸಾಲಿನ ಸಂಯೋಜನಾ ಪ್ರಕ್ರಿಯೆಯು ಸಂಬಂಧಪಟ್ಟ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ ದಿನಾಂಕ 09.05.2024 ರಂದು UUCMS ತಂತ್ರಾಂಶದ ಮೂಲಕ ಪ್ರಾರಂಭವಾಗುತ್ತದೆ.

Continue Reading
Advertisement
T20 World Cup 2024
ಕ್ರೀಡೆ34 mins ago

T20 World Cup 2024: ಕ್ರಿಕೆಟ್​ ಪ್ರಿಯರಿಗೆ ಗುಡ್​ ನ್ಯೂಸ್​​; ಈ ಮೊಬೈಲ್‌ ಆ್ಯಪ್​ನಲ್ಲಿ ಟಿ20 ವಿಶ್ವಕಪ್ ಉಚಿತ ಪ್ರಸಾರ

Girls Pleats Skirts Fashion
ಫ್ಯಾಷನ್38 mins ago

Girls Pleats Skirts Fashion: ಹುಡುಗಿಯರ ಮೆಚ್ಚಿನ ಆಯ್ಕೆ ಕೊರಿಯನ್‌ ಪ್ಲೀಟ್ಸ್‌ ಸ್ಕರ್ಟ್ಸ್‌ಗಳು

Jan Aushadhi
ದೇಶ41 mins ago

Jan Aushadhi: ಪ್ರಯಾಣಿಕರಿಗೆ ಗುಡ್‌ ನ್ಯೂಸ್; ರೈಲು ನಿಲ್ದಾಣಗಳಲ್ಲೂ ಸಿಗಲಿವೆ ಕಡಿಮೆ ಬೆಲೆಗೆ ಔಷಧ!

Prajwal Revanna Case HD Kumaraswamy King of Blackmail and DK Shivakumar is back
ಚಿಕ್ಕಮಗಳೂರು42 mins ago

Prajwal Revanna Case: ಎಚ್‌ಡಿಕೆ ಕಿಂಗ್‌ ಆಫ್‌ ಬ್ಲ್ಯಾಕ್‌ಮೇಲ್‌; ತಿರುಗಿಬಿದ್ದ ಡಿ.ಕೆ. ಶಿವಕುಮಾರ್!

Hoskote News
ಕರ್ನಾಟಕ45 mins ago

Hoskote News: ಬ್ರಹ್ಮರಥೋತ್ಸವ ಸಮಿತಿಗೆ ಮುಸ್ಲಿಂ ವ್ಯಕ್ತಿ ಆಯ್ಕೆಗೆ ಬಿಜೆಪಿ ಆಕ್ರೋಶ; ಸಿಎಂ ಹೇಳಿದ್ದೇನು?

Heavy Rain
ತುಮಕೂರು49 mins ago

Heavy Rain: ಕಳುವರಹಳ್ಳಿಯಲ್ಲಿ ಭಾರೀ ಗಾಳಿ ಮಳೆಗೆ ಶಾಲಾ ಚಾವಣಿ ಕುಸಿತ

Fried Oil
ಆರೋಗ್ಯ1 hour ago

Fried Oil: ಒಮ್ಮೆ ಕರಿದ ಎಣ್ಣೆಯನ್ನು ಮತ್ತೊಮ್ಮೆ ಬಳಸಬಹುದೆ?

IPL 2024
ಕ್ರೀಡೆ1 hour ago

IPL 2024: ಐಪಿಎಲ್​ನಲ್ಲಿ ದಾಖಲೆ ಬರೆದ ಮ್ಯಾಕ್‌ಗುರ್ಕ್; ಜೈಸ್ವಾಲ್​ ದಾಖಲೆ ಪತನ

Akshaya Tritiya Jewellery
ಫ್ಯಾಷನ್2 hours ago

Akshaya Tritiya Jewellery: ಅಕ್ಷಯ ತೃತೀಯಕ್ಕೆ ಬಂದಿವೆ ವೈವಿಧ್ಯಮಯ ಫ್ಯಾಷನ್‌ ಜ್ಯುವೆಲರಿಗಳು!

Narendra Modi
ದೇಶ2 hours ago

Narendra Modi: ಅಂಬಾನಿ, ಅದಾನಿಯಿಂದ ಕಾಂಗ್ರೆಸ್‌ಗೆ ಟೆಂಪೋಗಟ್ಟಲೆ ಹಣ; ಮೋದಿ ತಿರುಗುಬಾಣ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ14 hours ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ22 hours ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ1 day ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ1 day ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌